Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಇಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು… - Vistara News

ಪ್ರಮುಖ ಸುದ್ದಿ

Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಇಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

Olympics 2024: ಮಂಗಳವಾರ ಕುಸ್ತಿಪಟು ವಿನೇಶ್ ಫೋಗಟ್ ಕೂಡ ಕಣಕ್ಕಿಳಿಯಲಿದ್ದು, ಸತತ ಮೂರು ಒಲಿಂಪಿಕ್ ಅಭಿಯಾನಗಳಲ್ಲಿ ಸ್ಪರ್ಧಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 16ರ ಸುತ್ತಿನಲ್ಲಿ ತಮ್ಮ ಅಭಿಯಾನ ಪ್ರಾರಂಭಿಸುತ್ತಾರೆ.

VISTARANEWS.COM


on

Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಲಿ ಒಲಿಂಪಿಕ್ (Olympics 2024) ಚಾಂಪಿಯನ್ ಜಾವೆಲಿನ್​ ಎಸೆತಗಾಗ ನೀರಜ್ ಚೋಪ್ರಾ ಮಂಗಳವಾರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ತಮ್ಮ ಪ್ರಶಸ್ತಿ ಉಳಿಸಿಕೊಳ್ಳುವುದಕ್ಕೆ ಸ್ಪರ್ಧೆ ಪ್ರಾರಂಭಿಸಲಿದ್ದಾರೆ. ಚೋಪ್ರಾ ಮತ್ತು ಕಿಶೋರ್ ಕುಮಾರ್ ಜೆನಾ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿಯಲಿದ್ದಾರೆ. ಇದೇ ವೇಳೆ ಹಾಕಿಯಲ್ಲಿ ದೊಡ್ಡ ಪಂದ್ಯವೂ ಇದೆ. ಭಾರತೀಯ ಪುರುಷರ ತಂಡವು ಫೈನಲ್​ಗೆ ಪ್ರವೇಶಿಸುವ ಮೂಲಕ ಇತಿಹಾಸ ನಿರ್ಮಿಸಲು ಎದುರು ನೋಡುತ್ತಿದೆ. ಹರ್ಮನ್ ಪ್ರೀತ್ ಸಿಂಗ್ ಪಡೆ ಸೆಮಿಫೈನಲ್​ನಲ್ಲಿ ವಿಶ್ವ ಚಾಂಪಿಯನ್ ಜರ್ಮನಿಯನ್ನು ಎದುರಿಸಲಿದೆ. ಈ ಟಾಸ್ಕ್ ಸುಲಭವಲ್ಲ. ಆದರೆ ಪುರುಷರ ತಂಡವು ಆಸ್ಟ್ರೇಲಿಯಾ ಮತ್ತು ಗ್ರೇಟ್ ಬ್ರಿಟನ್ ವಿರುದ್ಧ ಎರಡು ಅದ್ಭುತ ಪ್ರದರ್ಶನಗಳನ್ನು ನೀಡಿ ಸೆಮಿಫೈನಲ್ ಗೆ ಪ್ರವೇಶಿಸಿದೆ.

ಮಂಗಳವಾರ ಕುಸ್ತಿಪಟು ವಿನೇಶ್ ಫೋಗಟ್ ಕೂಡ ಕಣಕ್ಕಿಳಿಯಲಿದ್ದು, ಸತತ ಮೂರು ಒಲಿಂಪಿಕ್ ಅಭಿಯಾನಗಳಲ್ಲಿ ಸ್ಪರ್ಧಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು 16ರ ಸುತ್ತಿನಲ್ಲಿ ತಮ್ಮ ಅಭಿಯಾನ ಪ್ರಾರಂಭಿಸುತ್ತಾರೆ.

ಆಗಸ್ಟ್ 6, ಭಾರತದ ವೇಳಾಪಟ್ಟಿಯ ನೋಟ ಇಲ್ಲಿದೆ

ಮಧ್ಯಾಹ್ನ 1:30: ಟೇಬಲ್ ಟೆನಿಸ್ – ಪುರುಷರ ತಂಡ ಸುತ್ತಿನ 16 ಪಂದ್ಯದಲ್ಲಿ ಭಾರತ ಮತ್ತು ಚೀನಾ.

ಭಾರತದ ಶರತ್ ಕಮಲ್, ಹರ್ಮೀತ್ ದೇಸಾಯಿ ಮತ್ತು ಮಾನವ್ ಠಕ್ಕರ್ ಕ್ವಾರ್ಟರ್ ಫೈನಲ್​​ನಲ್ಲಿ ಅಗ್ರ ಶ್ರೇಯಾಂಕಿತ ಮತ್ತು ಚಿನ್ನದ ಪದಕ ನೆಚ್ಚಿನ ತಂಡವಾಗಿರುವ ಚೀನಾವನ್ನು ಎದುರಿಸಲಿದ್ದಾರೆ. ಚೀನಾದ ತಂಡವನ್ನು ಫ್ಯಾನ್ ಝೆಂಡಾಂಗ್, ಮಾ ಲಾಂಗ್ ಮತ್ತು ವಾನ್ಫ್ಗ್ ಚುಕಿನ್ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: A R Rahman : ಒಲಿಂಪಿಕ್ಸ್ ನಡುವೆಯೇ ವೈರಲ್ ಆಯ್ತು ಎಆರ್​ ರೆಹಮಾನ್ ಸಂಗೀತದ’ ತಾಲ್​ ಸೆ ತಾಲ್​’ ಹಾಡು; ಪ್ರತಿಕ್ರಿಯೆ ನೀಡಿದ ಚಿತ್ರ ನಿರ್ದೇಶಕ

ಮಧ್ಯಾಹ್ನ 1:50: ಅಥ್ಲೆಟಿಕ್ಸ್ – ಪುರುಷರ ಜಾವೆಲಿನ್ ಥ್ರೋ ಅರ್ಹತೆ ಸುತ್ತಿನಲ್ಲಿ ನೀರಜ್ ಚೋಪ್ರಾ ಮತ್ತು ಕಿಶೋರ್ ಜೆನಾ. ಜೆನಾ ಎ ಗುಂಪಿನಲ್ಲಿದ್ದಾರೆ, ಅಂದರೆ ಅವರ ಅರ್ಹತೆ 1:50 ಕ್ಕೆ ಪ್ರಾರಂಭವಾಗುತ್ತದೆ. ನೀರಜ್ ‘ಬಿ’ ಗುಂಪಿನಲ್ಲಿದ್ದು, ಅರ್ಹತಾ ಸುತ್ತು ಮಧ್ಯಾಹ್ನ 3.20ಕ್ಕೆ ಆರಂಭವಾಗಲಿದೆ. 84 ಮೀಟರ್ ಅರ್ಹತಾ ಮಾನದಂಡವನ್ನು ಪೂರೈಸುವ ಕ್ರೀಡಾಪಟುಗಳು ಅಥವಾ ಅಗ್ರ 12 ಎಸೆತಗಾರರು ಫೈನಲ್​​ಗೆ ಪ್ರವೇಶಿಸುತ್ತಾರೆ.

ಮಧ್ಯಾಹ್ನ 2:50 : ಅಥ್ಲೆಟಿಕ್ಸ್ – ಕಿರಣ್ ಪಹಲ್ ಮಹಿಳೆಯರ 400 ಮೀಟರ್ ರೆಪೆಚೇಜ್ ಸುತ್ತಿನಲ್ಲಿ ಸ್ಪರ್ಧಿಸಲಿದ್ದಾರೆ. ಇಲ್ಲಿ, ಪ್ರತಿ ರಿಪೆಚೇಜ್ ಸುತ್ತಿನ ವಿಜೇತರು ಮತ್ತು ಮುಂದಿನ ಇಬ್ಬರು ವೇಗವಾಗಿ ಸೆಮಿಫೈನಲ್ ಗೆ ಅರ್ಹತೆ ಪಡೆಯುತ್ತಾರೆ.

ಮಧ್ಯಾಹ್ನ 3 ಗಂಟೆಯಿಂದ: ಕುಸ್ತಿ – ಮಹಿಳೆಯರ 50 ಕೆ.ಜಿ ಫ್ರೀಸ್ಟೈಲ್ ಪ್ರಿ ಕ್ವಾರ್ಟರ್ ಫೈನಲ್ಸ್​ನಲ್ಲಿ ವಿನೇಶ್ ಫೋಗಟ್ ಸ್ಪರ್ಧಿಸಲಿದ್ದಾರೆ. ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ ಪಂದ್ಯಗಳು ಒಂದೇ ದಿನ ನಡೆಯಲಿದ್ದು, ವಿನೇಶ್ ಪದಕ ಸುತ್ತಿಗೆ ಅರ್ಹತೆ ಪಡೆಯಬಹುದು.

ಸಂಜೆ 6:30: ಟೇಬಲ್ ಟೆನಿಸ್: ಮಹಿಳಾ ತಂಡ ಕ್ವಾರ್ಟರ್ ಫೈನಲ್​​ ಪಂದ್ಯ; ಭಾರತ ಮತ್ತು ಯುಎಸ್ಎ ಅಥವಾ ಜರ್ಮನಿ.

ರಾತ್ರಿ 10:30: ಪುರುಷರ ಹಾಕಿ ಸೆಮಿಫೈನಲ್​ನಲ್ಲಿ ಭಾರತ ಮತ್ತು ಜರ್ಮನಿ ಸ್ಪರ್ಧಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Sheikh Hasina : ಶೇಖ್ ಹಸೀನಾ ಸೀರೆಗಳ ಜತೆ ಬ್ರಾಗಳನ್ನೂ ಬಿಡದೆ ದೋಚಿದ ಬಾಂಗ್ಲಾ ಜನ!

Sheikh Hasina : ಪ್ರತಿಭಟನಾಕಾರರು ಸೀರೆಗಳು ಸೇರಿದಂತೆ ತಮ್ಮಿಂದ ಸಾಧ್ಯವಾದದ್ದನ್ನು ನಿರಂತರವಾಗಿ ಲೂಟಿ ಮಾಡಿದ್ದರು. ವೈರಲ್ ವೀಡಿಯೊಗಳು ಮತ್ತು ಚಿತ್ರಗಳು ಪ್ರತಿಭಟನಾಕಾರರೊಬ್ಬರು ನಾಚಿಕೆಯಿಲ್ಲದೆ ಕೈಯಲ್ಲಿ ಬ್ರಾಗಳನ್ನು ಹಿಡಿದುಕೊಂಡು ಮಾಜಿ ಪ್ರಧಾನಿಯ ಅಧಿಕೃತ ನಿವಾಸದಿಂದ ಲೂಟಿ ಮಾಡಿರುವುದನ್ನು ತೋರಿಸಿದೆ. ಇದು ಪ್ರತಿಭಟನೆಯಲ್ಲ ಕೇವಲ ದೊಂಬಿ ಎಂಬುದನ್ನು ಸಾಬೀತು ಮಾಡಿದೆ.

VISTARANEWS.COM


on

Sheikh Hasina
Koo

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರದ ವಿರುದ್ಧ ನಡೆಯುತ್ತಿದ್ದ (Bangladesh Unrest) ಪ್ರತಿಭಟನೆ ಸೋಮವಾರ ಪ್ರತಿಭಟನೆ ಸೇನಾ ದಂಗೆಯಾಗಿ ಮಾರ್ಪಟ್ಟಿತ್ತು. ತಕ್ಷಣವೇ ಶೇಖ್ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಹಸೀನಾ ಬಾಂಗ್ಲಾದೇಶದಿಂದ ಮಿಲಿಟರಿ ವಿಮಾನದಲ್ಲಿ ಪಲಾಯನ ಮಾಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಪ್ರತಿಭಟನಾಕಾರರು ಮಾಜಿ ಪ್ರಧಾನಿಯ ನಿವಾಸಕ್ಕೆ ನುಗ್ಗಿ ಮಾಜಿ ಅವರ ಬ್ರಾಗಳನ್ನೂ ಬಿಡಿದೇ ದೋಚಿದ್ದಾರೆ. ಇದರ ವಿಡಿಯೊ ಹಾಗೂ ಚಿತ್ರಗಳು ವೈರಲ್​ ಆಗಿವೆ. ಅಲ್ಲಿನ ಪ್ರತಿಭಟನಾಕಾರರ ಮನಸ್ಥಿತಿಯ ಬಗ್ಗೆ ಜಾಗತಿಕವಾಗಿ ಟೀಕೆಗಳು ಕೇಳಿ ಬಂದಿವೆ.

ಪ್ರತಿಭಟನಾಕಾರರು ಸೀರೆಗಳು ಸೇರಿದಂತೆ ತಮ್ಮಿಂದ ಸಾಧ್ಯವಾದದ್ದನ್ನು ನಿರಂತರವಾಗಿ ಲೂಟಿ ಮಾಡಿದ್ದರು. ವೈರಲ್ ವೀಡಿಯೊಗಳು ಮತ್ತು ಚಿತ್ರಗಳು ಪ್ರತಿಭಟನಾಕಾರರೊಬ್ಬರು ನಾಚಿಕೆಯಿಲ್ಲದೆ ಕೈಯಲ್ಲಿ ಬ್ರಾಗಳನ್ನು ಹಿಡಿದುಕೊಂಡು ಮಾಜಿ ಪ್ರಧಾನಿಯ ಅಧಿಕೃತ ನಿವಾಸದಿಂದ ಲೂಟಿ ಮಾಡಿರುವುದನ್ನು ತೋರಿಸಿದೆ. ಇದು ಪ್ರತಿಭಟನೆಯಲ್ಲ ಕೇವಲ ದೊಂಬಿ ಎಂಬುದನ್ನು ಸಾಬೀತು ಮಾಡಿದೆ.

ಹಸೀನಾ ಬಾಂಗ್ಲಾದೇಶವನ್ನು ತೊರೆದ ಸ್ವಲ್ಪ ಸಮಯದ ನಂತರ, ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಮಿಲಿಟರಿ “ಮಧ್ಯಂತರ ಸರ್ಕಾರವನ್ನು” ರಚಿಸುತ್ತದೆ ಎಂದು ಹೇಳಿದರು. ಪ್ರತಿಭಟನಾಕಾರರು ಕೆಳಗಿಳಿಯಬೇಕು ಎಂದು ಅವರು ಒತ್ತಾಯಿಸಿದರು.

ವೈರಲ್ ವೀಡಿಯೊಗಳು ಮತ್ತು ಚಿತ್ರಗಳು ಮಾಜಿ ಪ್ರಧಾನಿಯ ಅಧಿಕೃತ ನಿವಾಸದಿಂದ ಪ್ರತಿಭಟನಾಕಾರನೊಬ್ಬ ನಾಚಿಕೆಯಿಲ್ಲದೆ ಕೈಯಲ್ಲಿ ಬ್ರಾಗಳನ್ನು ಹಿಡಿದಿರುವುದನ್ನು ತೋರಿಸಿದೆ. ಬ್ರಾಗಳನ್ನು ಹಿಡಿದಿರುವ ಮತ್ತು ಪ್ರದರ್ಶಿಸುತ್ತಿರುವ ವ್ಯಕ್ತಿಯ ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಹಸೀನಾ ಅವರ ಅಧಿಕೃತ ನಿವಾಸದಿಂದ ಪ್ರತಿಭಟನಾಕಾರರು ಎಲ್ಲಾ ರೀತಿಯ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ವೀಡಿಯೊಗಳು ಮತ್ತು ದೃಶ್ಯಗಳು ತೋರಿಸಿವೆ. ಕೆಲವು ಪ್ರತಿಭಟನಾಕಾರರು ಶೇಖ್ ಹಸೀನಾ ಅವರಿಗೆ ಸೇರಿದ ಸೀರೆಗಳನ್ನು ಹೇಗೆ ದೋಚಿ ಹೆಮ್ಮೆ ಪಟ್ಟುಕೊಂಡಿದ್ದಾರೆ.

ಇದನ್ನೂ ಓದಿ: Bangladesh Protest: ರಫೇಲ್ ಯುದ್ಧ ವಿಮಾನಗಳ ಹಾರಾಟ, ರಾಡಾರ್‌ ಮೂಲಕ ಮೇಲ್ವಿಚಾರಣೆ; ಶೇಖ್‌ ಹಸೀನಾ ಸುರಕ್ಷತೆಗೆ ಭಾರತ ಕೈಗೊಂಡ ಕ್ರಮಗಳಿವು

ವ್ಯಕ್ತಿಯೊಬ್ಬ ತನ್ನ ತಲೆಯ ಮೇಲೆ ಟ್ರಾಲಿ ಬ್ಯಾಗ್ ಹೊತ್ತಿರುವ ವೀಡಿಯೊವನ್ನು ತೋರಿಸಲಾಗಿದೆ. ಟ್ರಾಲಿ ಚೀಲವು ಮಾಜಿ ಪ್ರಧಾನಿ ನಿವಾಸದಿಂದ ಲೂಟಿ ಮಾಡಿದ ಸೀರೆಗಳಿಂದ ತುಂಬಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಲಾಗಿದೆ. ಶೇಖ್ ಹಸೀನಾ ಅವರ ನಿವಾಸಕ್ಕೆ ನುಗ್ಗಿದ ಗುಂಪಿನ ಭಾಗವಾಗಿದ್ದ ಯುವಕನೊಬ್ಬ ಮಾಜಿ ಪ್ರಧಾನಿಯ ಸೀರೆಯನ್ನು ತೊಟ್ಟು ವಿಕೃತಿ ತೋರಿದ್ದ. ಹೀಗಾಗಿ ಮಾಜಿ ಪ್ರಧಾನಿಯ ವಸ್ತುಗಳನ್ನು ಕದಿಯುವುದೇ ಅವರ ಗುರಿಯಾಗಿತ್ತು ಎಂಬುದನ್ನು ಸಾಬೀತುಪಡಿಸಿದೆ.

ಶೇಖ್ ಹಸೀನಾ ಎಲ್ಲಿದ್ದಾರೆ?

ಆರಂಭಿಕ ಗೊಂದಲದ ಬಳಿಕ ಶೇಖ್ ಹಸೀನಾ ಭಾರತಕ್ಕೆ ಬಂದಿದ್ದಾರೆ. ಸಂಜೆ ದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದಾರೆ ಎಂಬುದು ಸ್ಪಷ್ಟವಾಯಿತು. ಅವರು ಶೀಘ್ರದಲ್ಲೇ ಲಂಡನ್ ಗೆ ಹಾರಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದಾಗ್ಯೂ, ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

CM Siddaramaiah: ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

VISTARANEWS.COM


on

thawar chand gehlot cm siddaramaiah Governor versus state
Koo

ಬೆಂಗಳೂರು: ಬಹುಕೋಟಿ ಮುಡಾ ಹಗರಣ (MUDA Scam) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮೂರನೇ ನೋಟೀಸ್ (Notice) ಅನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Governor Thawar Chand Gehlot) ಜಾರಿ ಮಾಡಿದ್ದಾರೆ.

ಮೊದಲ ನೋಟೀಸ್ ಅನ್ನು ಜುಲೈ ಮೂರನೇ ವಾರದಲ್ಲಿ ಜಾರಿ ಮಾಡಿದ್ದ ರಾಜ್ಯಪಾಲರು, ಬಂದು ಮಾಹಿತಿ ಕೊಡುವಂತೆ ಸೂಚಿಸಿದ್ದರು. ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆ ಆಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕೊಡುವಂತೆ ಸೂಚಿಸಿದ್ದರು.

ಜುಲೈ 26ನೇ ತಾರೀಕು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿದ ದೂರು ಆಧರಿಸಿ ಎರಡನೇ ನೋಟೀಸ್ ಕಳಿಸಲಾಗಿತ್ತು. ಅಬ್ರಹಾಂ ಸಲ್ಲಿಸಿದ್ದ ದೂರಿನಲ್ಲಿ, ಈ ಪ್ರಕರಣವನ್ನು ಪ್ರಾಸಿಕ್ಯೂಶನ್‌ಗೆ ಯಾಕೆ ಕೊಡಬಾರದು ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್ ಶೋಕಾಸ್ ನೋಟೀಸ್ ನೀಡಿದ್ದರು.

ಆಗಸ್ಟ್ 5ನೇ ತಾರೀಕು ರಾಜ್ಯಪಾಲರು ಮೂರನೇ ನೋಟೀಸ್ ಜಾರಿ ಮಾಡಿದ್ದಾರೆ. ಕಳೆದ ವಾರ ಕ್ಯಾಬಿನೆಟ್‌ ಸಭೆಯಲ್ಲಿ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದ ಸಂಪುಟ, ನೋಟೀಸ್‌ ಹಿಂಪಡೆಯುವಂತೆ ಹೇಳಿತ್ತು. ಹೀಗಾಗಿ ಮತ್ತೆ ಕೇಸ್‌ನಲ್ಲಿ ಕ್ಲಾರಿಫಿಕೇಷನ್ ಕೊಡುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ರಾಜ್ಯಪಾಲರು ಪದೇ ಪದೆ ನೋಟೀಸ್ ಕೊಡುತ್ತಿರುವುದೇಕೆ?

ಈ ಹಿಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪ್ರಕರಣದಲ್ಲಿ ಆದುದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು.

ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ಪೊಲಿಟಿಕಲ್ ಮೈಲೇಜ್ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್ ಹಾಗೂ ಮೂರು ಬಾರಿ ಲೀಗಲ್ ಓಪಿನಿಯನ್ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್ ಆದೇಶ ಮಾಡಿತ್ತು. ನಂತರ ಯಡಿಯೂರಪ್ಪ ಈ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು.

ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್ ನೀಡುತ್ತಿದ್ದಾರೆ. ನಿನ್ನೆ ದೆಹಲಿಯಿಂದ ರಾಜ್ಯಕ್ಕೆ ಮರಳಿರುವ ರಾಜ್ಯಪಾಲರು ಲೀಗಲ್‌ ಪ್ರಕ್ರಿಯೆ ಚುರುಕುಗೊಳಿಸಿದ್ದಾರೆ. ಇದಕ್ಕೆ ಕ್ಯಾಬಿನೆಟ್‌ ಹಾಗೂ ಮುಖ್ಯಮಂತ್ರಿಗಳ ಕಡೆಯಿಂದ ಪ್ರತಿಕ್ರಿಯೆ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ವಾರವಿಡೀ ಮುಖ್ಯಮಂತ್ರಿಗಳು ಕಾನೂನು ತಜ್ಞರು, ವಕೀಲರ ಜೊತೆಗೆ ಈ ವಿಚಾರವನ್ನು ಚರ್ಚಿಸಿದ್ದರು. ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್‌ಗೆ ತೆರಳುವ ಸಾಧ್ಯತೆ ಇದೆ.

ಇದನ್ನೂ ಓದಿ: CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

Continue Reading

ದೇಶ

Bangladesh Protest: ರಫೇಲ್ ಯುದ್ಧ ವಿಮಾನಗಳ ಹಾರಾಟ, ರಾಡಾರ್‌ ಮೂಲಕ ಮೇಲ್ವಿಚಾರಣೆ; ಶೇಖ್‌ ಹಸೀನಾ ಸುರಕ್ಷತೆಗೆ ಭಾರತ ಕೈಗೊಂಡ ಕ್ರಮಗಳಿವು

Bangladesh Protest: ಬಾಂಗ್ಲಾದೇಶದಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದ ಗದ್ದುಗೆ ಹಿಡಿದಿದ್ದ ಶೇಖ್‌ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದಾರೆ. ಹಸೀನಾ ಅವರು ವಾಯುಪಡೆಯ ಜೆಟ್‌ನಲ್ಲಿ ಭಾರತಕ್ಕೆ ಆಗಮಿಸಿದ್ದು, ಈ ವೇಳೆ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಹಸೀನಾ ಅವರು ಬಾಂಗ್ಲಾದಿಂದ ಹೊರಡುತ್ತಿದ್ದಂತೆ ಭಾರತೀಯ ವಾಯುಪಡೆಯ ರಾಡಾರ್‌ಗಳು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದವು. ಯಾವುದೇ ತುರ್ತು ಅಗತ್ಯಕ್ಕಾಗಿ ಭಾರತೀಯ ವಾಯುಪಡೆಯ ಸಿಬ್ಬಂದಿ ಎರಡು ರಫೇಲ್ ಯುದ್ಧ ವಿಮಾನಗಳನ್ನು ಸಜ್ಜುಗೊಳಿಸಿದ್ದರು.

VISTARANEWS.COM


on

Bangladesh Protest
Koo

ಢಾಕಾ: ಬಾಂಗ್ಲಾದೇಶದಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದ ಗದ್ದುಗೆ ಹಿಡಿದಿದ್ದ ಶೇಖ್‌ ಹಸೀನಾ (Sheik Hasina) ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೀಸಲಾತಿ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆಯು (Bangladesh Protest) ದೇಶಾದ್ಯಂತ ಹಿಂಸಾರೂಪ ತಾಳಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಅವರು ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದಾರೆ. ಹಸೀನಾ ಅವರು ವಾಯುಪಡೆಯ ಜೆಟ್‌ನಲ್ಲಿ ಭಾರತಕ್ಕೆ ಆಗಮಿಸಿದ್ದು, ಈ ವೇಳೆ ಅವರಿಗೆ ಬಿಗಿ ಭದ್ರತೆ ಒದಗಿಸಲಾಗಿತ್ತು.

ಹಸೀನಾ ಅವರು ಬಾಂಗ್ಲಾದಿಂದ ಹೊರಡುತ್ತಿದ್ದಂತೆ ಭಾರತೀಯ ವಾಯುಪಡೆ (Indian Air Force)ಯ ರಾಡಾರ್‌ಗಳು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದವು. ಸಂಜೆ 6ರ ಸುಮಾರಿಗೆ ಹಸೀನಾ ಮತ್ತು ಅವರ ಸಹೋದರಿಯನ್ನು ಹೊತ್ತ ಬಾಂಗ್ಲಾದೇಶ ವಾಯುಪಡೆಯ ಸಿ -130 ಸಾರಿಗೆ ವಿಮಾನ AJAX1413 ಗಾಜಿಯಾಬಾದ್‌ನ ಹಿಂಡನ್ ವಾಯುನೆಲೆಯನ್ನು ತಲುಪಿತು. ಈ ಸಂದರ್ಭದಲ್ಲಿ ಯಾವುದೇ ತುರ್ತು ಅಗತ್ಯಕ್ಕಾಗಿ ಭಾರತೀಯ ವಾಯುಪಡೆಯ ಸಿಬ್ಬಂದಿ ಎರಡು ರಫೇಲ್ ಯುದ್ಧ ವಿಮಾನಗಳನ್ನು ಸಜ್ಜುಗೊಳಿಸಿದ್ದರು.

ಹಸೀನಾ ಅವರ ಜೆಟ್ ವಿಮಾನಕ್ಕೆ ಸುರಕ್ಷತೆ ಒದಗಿಸಲು ಪಶ್ಚಿಮ ಬಂಗಾಳದ ಹಶಿಮಾರಾ ವಾಯುನೆಲೆಯಿಂದ 101 ಸ್ಕ್ವಾಡ್ರನ್‌ನ ಎರಡು ರಫೇಲ್ ಯುದ್ಧ ವಿಮಾನಗಳು ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಹಾರಾಟ ನಡೆಸಿದವು. ಐಎಎಫ್ ಮತ್ತು ಸೇನಾ ಮುಖ್ಯಸ್ಥರಾದ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಮತ್ತು ಜನರಲ್ ಉಪೇಂದ್ರ ದ್ವಿವೇದಿ ಅವರು ಇದರ ಮೇಲ್ವಿಚಾರಣೆ ನಡೆಸಿದರು. ಈಗಲೂ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ.

ಹಸೀನಾ ಅವರಿಗೆ ಭದ್ರತೆ ಒದಗಿಸುವ ಕುರಿತು ಇಂಟೆಲ್ ಏಜೆನ್ಸಿ ಮುಖ್ಯಸ್ಥ ಜನರಲ್ ದ್ವಿವೇದಿ ಮತ್ತು ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಜಾನ್ಸನ್ ಫಿಲಿಪ್ ಮ್ಯಾಥ್ಯೂ ಅವರೊಂದಿಗೆ ಉನ್ನತ ಭದ್ರತಾ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗಿತ್ತು.

ಹಸೀನಾ ಹಿಂಡನ್ ವಾಯುನೆಲೆಗೆ ತಲುಪುತ್ತಿದ್ದಂತೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಸ್ವಾಗತಿಸಿದರು. ಬಳಿಕ ಅವರು ಅವರೊಂದಿಗೆ ಒಂದು ಗಂಟೆ ಸಭೆ ನಡೆಸಿದರು. ಈ ವೇಳೆ ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿ ಮತ್ತು ಹಸೀನಾ ಅವರ ಭವಿಷ್ಯದ ಕ್ರಮದ ಬಗ್ಗೆಯೂ ಚರ್ಚಿಸಲಾಯಿತು.

ನಂತರ ನಡೆದ ಭದ್ರತಾ ಕ್ಯಾಬಿನೆಟ್ ಸಮಿತಿ ಸಭೆಗೆ ಅಜಿತ್‌ ದೋವಲ್ ಅವರು ಇಡೀ ಪ್ರಕರಣದ ಬಗ್ಗೆ ವಿವರ ನೀಡಿದರು. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಿದ್ದರು. ಬಾಂಗ್ಲಾದೇಶದ ಹಿಂಸಾಚಾರದಿಂದ ಭಾರತದ ಮೇಲಾಗುವ ಪರಿಣಾಮಗಳು ಏನು? ಗಡಿಯಲ್ಲಿ ಭದ್ರತೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು, ಒಳನುಸುಳುವಿಕೆ ನಿಯಂತ್ರಣ, ಬಾಂಗ್ಲಾದೇಶದ ಜತೆಗಿನ ವ್ಯಾಪಾರ-ಒಪ್ಪಂದ, ಹಿಂಸಾಚಾರ ಇನ್ನೂ ಜಾಸ್ತಿಯಾದರೆ ಏನಾಗಬಹುದು, ಭಾರತ ತೆಗೆದುಕೊಳ್ಳಬೇಕಾದ ಕ್ರಮಗಳು ಯಾವುವು ಎಂಬುದು ಸೇರಿ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು?

Continue Reading

Latest

Nagara Panchami : ಶ್ರಾವಣದ ಮೊದಲ ಹಬ್ಬ ನಾಗರ ಪಂಚಮಿ; ಏನಿದರ ಹಿನ್ನೆಲೆ, ವಿಶೇಷ?

Nagara Panchami: ಅಷಾಢ ಕಳೆದು ಶ್ರಾವಣ ಮಾಸ ಶುರುವಾಗುತ್ತಿದ್ದಂತೆ ಹಬ್ಬಗಳು ಸಾಲು ಸಾಲಾಗಿ ಬರುತ್ತವೆ. ಅದರಲ್ಲಿ ಮೊದಲ ಹಬ್ಬವೆಂದರೆ ನಾಗಪಂಚಮಿ. ಈ ಹಬ್ಬವನ್ನು ಒಂದೊಂದು ಕಡೆ ಒಂದೊಂದು ರೀತಿಯಾಗಿ ಆಚರಿಸುತ್ತಾರೆ. ಕೆಲವರು ನಾಗನಕಲ್ಲನ್ನು ಮುಟ್ಟಿ ಪೂಜಿಸಿದರೆ ಇನ್ನೊಂದು ಕಡೆ ಪುರೋಹಿತರ ಮೂಲಕ ಪೂಜೆ ಮಾಡಿಸುತ್ತಾರೆ. ನಾಗನಕಲ್ಲು ಹಾಗೂ ಹುತ್ತಕ್ಕೆ ಕೆಲವರು ತನಿ ಎರೆಯುವುದರ (ಹಾಲು, ಎಳನೀರು)ಮೂಲಕ ನಾಗಪಂಚಮಿಯನ್ನು ಆಚರಿಸುತ್ತಾರೆ. ಈ ಹಬ್ಬದ ಹಿನ್ನೆಲೆಯ ಮಾಹಿತಿ ಇಲ್ಲಿದೆ.

VISTARANEWS.COM


on

Nag Panchami
Koo

ಬೆಂಗಳೂರು: ಶ್ರಾವಣ ಮಾಸ ಶುರುವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಪ್ರತಿವರ್ಷ ಶ್ರಾವಣ ಮಾಸದ ಪ್ರಾರಂಭವಾದ ಐದನೇ ದಿನದಂದು ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ನಾಗರಪಂಚಮಿ(Nagara Panchami )ಯಂದು ನಾಗದೇವರನ್ನು(ಹಾವು)ಗಳನ್ನು ಪೂಜಿಸಲಾಗುತ್ತದೆ. ಅಂದು ನಾಗರ ದೇವರ ವಿಗ್ರಹಗಳಿಗೆ ಹಾಲೆರೆದು ಹೂಗಳಿಂದ ಅಲಂಕಾರ ಮಾಡಿ ಧೂಪ, ದೀಪ, ನೈವೇದ್ಯಗಳನ್ನು ಅರ್ಪಿಸಿ ಪೂಜೆ ಮಾಡುತ್ತಾರೆ. ಈ ಹಬ್ಬವನ್ನು ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮದ ಅನುಯಾಯಿಗಳು ಆಚರಿಸುತ್ತಾರೆ.

Nagara Panchami
Nag Panchami

ಅಷಾಢ ಕಳೆದು ಶ್ರಾವಣ ಮಾಸ ಶುರುವಾಗುತ್ತಿದ್ದಂತೆ ಹಬ್ಬಗಳು ಸಾಲು ಸಾಲಾಗಿ ಬರುತ್ತವೆ. ಅದರಲ್ಲಿ ಮೊದಲ ಹಬ್ಬವೆಂದರೆ ನಾಗಪಂಚಮಿ. ಈ ಹಬ್ಬವನ್ನು ಒಂದೊಂದು ಕಡೆ ಒಂದೊಂದು ರೀತಿಯಾಗಿ ಆಚರಿಸುತ್ತಾರೆ. ಕೆಲವರು ನಾಗನಕಲ್ಲನ್ನು ಮುಟ್ಟಿ ಪೂಜಿಸಿದರೆ ಇನ್ನೊಂದು ಕಡೆ ಪುರೋಹಿತರ ಮೂಲಕ ಪೂಜೆ ಮಾಡಿಸುತ್ತಾರೆ. ನಾಗನಕಲ್ಲು ಹಾಗೂ ಹುತ್ತಕ್ಕೆ ಕೆಲವರು ತನಿ ಎರೆಯುವುದರ (ಹಾಲು, ಎಳನೀರು)ಮೂಲಕ ನಾಗಪಂಚಮಿಯನ್ನು ಆಚರಿಸುತ್ತಾರೆ. ಉತ್ತರ ಕರ್ನಾಟಕದಲ್ಲಿ ಈ ನಾಗಪಂಚಮಿ ಬಹುದೊಡ್ಡ ಹಬ್ಬವಾಗಿದೆ. ಈ ಹಬ್ಬಕ್ಕೆ ಮದುವೆಯಾದ ಹೆಣ್ಣುಮಕ್ಕಳು ತವರಿಗೆ ಬರುವ ವಾಡಿಕೆ ಇನ್ನೂ ರೂಢಿಯಲ್ಲಿದೆ.

ನಾಗಪಂಚಮಿಗೆ ಕುರಿತಂತೆ ಸಾಕಷ್ಟು ಕತೆಗಳಿವೆ. ಜೋರಾಗಿ ಮಳೆ ಬರುವ ಕಾರಣ ಬೇಳೆಗಳಿಗೆ ಕೀಟ ಬಾಧೆ ಸಮಸ್ಯೆ ಕಾಡುತ್ತಿರುತ್ತದೆ. ಹಾಗೇ ರೈತ ಬೆಳೆದ ಫಸಲನ್ನು ಇಲಿಗಳು ಕೂಡ ಹಾಳು ಮಾಡುತ್ತವೆ. ಇವುಗಳನ್ನು ಹಾವುಗಳು ತಿಂದು ರೈತನ ಫಸಲನ್ನು ಕಾಪಾಡಿ ಅವನ ಬದುಕನ್ನು ಹಸನು ಮಾಡುತ್ತದೆ. ಹಾವಿನ ಈ ಸಹಾಯಕ್ಕೆ ಧನ್ಯವಾದ ಹೇಳಲು ರೈತನು ನಾಗನಕಲ್ಲಿಗೆ ಪೂಜೆ ಮಾಡುತ್ತಾನಂತೆ. ಇದನ್ನೇ ನಾಗಪಂಚಮಿ ಎಂದು ಕರೆಯಲಾಗುತ್ತದೆ ಎಂಬ ಕತೆಯಿದೆ. ಪುರಾಣದ ಪುಟಗಳನ್ನು ತಿರುಗಿಸಿದರೆ ನಾಗಪಂಚಮಿಗೆ ಸಂಬಂಧಿಸಿದಂತೆ ಸಾಕಷ್ಟು ಕತೆಗಳನ್ನು ನೋಡಬಹುದು.

Nag Panchami
Nag Panchami

ನಾಗರ ಪಂಚಮಿಯ ಶುಭ ಮಹೂರ್ತ:

ಈ ವರ್ಷ ನಾಗರ ಪಂಚಮಿ ಆಗಸ್ಟ್ 9ರಂದು ಬಂದಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿ ಆಗಸ್ಟ್ 9 ರಂದು ಬೆಳಿಗ್ಗೆ 12:36 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 10 ರಂದು ಬೆಳಿಗ್ಗೆ 03:14 ಕ್ಕೆ ಕೊನೆಗೊಳ್ಳುತ್ತದೆ. ಈ ಸಮಯದಲ್ಲಿ ನಾಗ ದೇವರ ಪೂಜೆ ಮಾಡಿದರೆ ನಿಮಗೆ ಶುಭ ಫಲ ಪ್ರಾಪ್ತಿಯಾಗುತ್ತದೆ.

ನಾಗರ ಪಂಚಮಿಯ ಮಹತ್ವ ಏನು?
ಈ ಹಬ್ಬವು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಈ ದಿನ ನಾಗಾದೇವರನ್ನು ಪೂಜಿಸುವವರನ್ನು ಮತ್ತು ಅವರ ಕುಟುಂಬಗಳನ್ನು ನಾಗದೇವರು ದುಷ್ಟರಿಂದ ರಕ್ಷಿಸುತ್ತದೆ. ಮತ್ತು ಆ ಕುಟುಂಬಕ್ಕೆ ಸಮೃದ್ಧಿಯನ್ನು ತರುತ್ತದೆ ಮತ್ತು ನಾಗನ ಪೂಜೆ ಮಾಡಿದ ಕುಟುಂಬದವರು ಒಗ್ಗಟ್ಟಿನಿಂದ ಇರುತ್ತಾರೆ ಎಂದು ನಂಬಲಾಗಿದೆ. ಈ ದಿನ ನಾಗದೇವರ ವಿಗ್ರಹಗಳಿಗೆ ಪೂಜೆ ಮಾಡುವುದರಿಂದ ನಾಗ ದೇವತೆಗಳನ್ನು ಸಮಾಧಾನಪಡಿಸಬಹುದು ಮತ್ತು ಅವರ ಶಾಪದಿಂದ ಮುಕ್ತರಾಗಿಸಿ ಆಶೀರ್ವಾದವನ್ನು ನೀಡುತ್ತಾರೆ ಎಂಬ ನಂಬಿಕೆ ಇದೆ. ಅಲ್ಲದೇ ಕಾಳಸರ್ಪ ದೋಷಗಳು ಹಾಗೂ ಇತರ ಸರ್ಪ ದೋಷಗಳು ನಿವಾರಣೆಯಾಗುತ್ತದೆ ಎನ್ನಲಾಗಿದೆ.

Nag Panchami
Nag Panchami

ನಾಗರ ಪಂಚಮಿಯ ಆಚರಣೆ
ಸಾಂಪ್ರದಾಯಿಕವಾಗಿ, ಭಕ್ತರು ನಾಗನನ್ನು ಪೂಜಿಸುವ ಆಲಯಗಳಿಗೆ ಹೋಗಿ ಅಲ್ಲಿ ನಾಗದೇವರ ವಿಗ್ರಹಗಳನ್ನು ಹಾಲು ಮತ್ತು ಎಳನೀರಿನಿಂದ ಅಭಿಷೇಕ ಮಾಡಿ ಅರಿಶಿನ, ಅಕ್ಕಿ ಮತ್ತು ಹೂವುಗಳನ್ನು ವಿಗ್ರಹಕ್ಕೆ ಅರ್ಪಿಸಿ. ನಾಗದೇವರ ಆಶೀರ್ವಾದ ಪಡೆಯಲು ಮಹಾನಾಗ ದೇವರು ಮತ್ತು ಮಹಾವಿಷ್ಣು ಮಂತ್ರಗಳನ್ನು ಪಠಿಸಿ ಪೂಜೆ, ಪ್ರಾರ್ಥನೆ ಸಲ್ಲಿಸುವ ಮೂಲಕ ಆಚರಣೆಗಳನ್ನು ಮಾಡುತ್ತಾರೆ. ಕೆಲವೊಂದು ಕಡೆ ಜೀವಂತ ಹಾವುಗಳಿಗೆ ಹಾಲನ್ನು ಅರ್ಪಿಸುವ ವಾಡಿಕೆ ಇದೆ. ಆದರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಬೆಳ್ಳಿ, ಮರ ಅಥವಾ ಹಸುವಿನ ಸಗಣಿಯಂತಹ ವಸ್ತುಗಳಿಂದ ನಾಗನ ವಿಗ್ರಹವನ್ನು ತಯಾರಿಸಿ ನಂತರ ಈ ವಿಗ್ರಹವನ್ನು ಅರಿಶಿನ, ಅಕ್ಕಿ, ಹಾಲು ಮತ್ತು ಹೂವುಗಳಿಂದ ಪೂಜಿಸಲಾಗುತ್ತದೆ. ಇದರಿಂದ ನಕಾರಾತ್ಮಕ ದೋಷಗಳು ಕಡಿಮೆಯಾಗಿ ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ ಎನ್ನಲಾಗಿದೆ.

ಅಲ್ಲದೇ ಕೆಲವರು ನಾಗರಪಂಚಮಿಯಂದು ನಾಗದೇವರ ಆಶೀರ್ವಾದ ಪಡೆಯಲು ನಾಗನಿಗೆ ಪ್ರಿಯವಾದ ಗಿಡಗಳನ್ನು ನೆಡುತ್ತಾರೆ. ಆದರೆ ಕೆಲವೊಂದು ಕಡೆ ಹಾವಿನ ವಾಸಸ್ಥಾನವನ್ನು ರಕ್ಷಿಸಲು ಮಣ್ಣನ್ನು ಅಗೆಯಬಾರದೆಂದು ಹೇಳುತ್ತಾರೆ. ಅಲ್ಲದೇ ಈ ದಿನ ಕಬ್ಬಿಣದ ಪಾತ್ರೆಗಳಲ್ಲಿ ಆಹಾರ ತಯಾರಿಸಬಾರದಂತೆ. ಹಾಗೇ ಈ ದಿನ ವಾಸುಕಿಯ ಆರಾಧ್ಯ ದೇವರಾದ ಶಿವನಿಗೆ ಕೆಂಪು ಗುಲಾಬಿಯನ್ನು ಅರ್ಪಿಸಿದರೆ ಬಹಳ ಶುಭವಂತೆ. ಹಾಗೇ ಬಹಳ ಹಿಂದಿನ ಕಾಲದಲ್ಲಿ ಈ ಶುಭ ದಿನ ಅಕ್ಕಿಯನ್ನು ದಾನ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

ಅದೇನೆಯಾದರೂ ನಿಮ್ಮ ಶಾಸ್ತ್ರ, ಸಂಪ್ರದಾಯದಂತೆ ನಿಮ್ಮ ಹಿರಿಯರು ಬಹಳ ಹಿಂದಿನಿಂದ ಮಾಡಿಕೊಂಡು ಬಂದ ವಾಡಿಕೆಯಂತೆ ನೀವು ನಾಗದೇವರ ಪೂಜೆ ಮಾಡಿ, ನಾಗದೇವರ ಕೃಪೆಗೆ ಪಾತ್ರರಾಗಿ. ನಿಮಗೂ ಹಾಗೂ ನಿಮ್ಮ ಕುಟುಂಬಕ್ಕೂ ವಿದ್ಯೆ-ಬುದ್ಧಿ, ಧನ-ಧಾನ್ಯ, ಆರೋಗ್ಯ-ಆಯಸ್ಸು ನೀಡಿ ಹರಸುವಂತೆ ನಾಗದೇವರಲ್ಲಿ ಪ್ರಾರ್ಥಿಸಿಕೊಳ್ಳಿ.

Continue Reading
Advertisement
Sheikh Hasina
ಪ್ರಮುಖ ಸುದ್ದಿ24 mins ago

Sheikh Hasina : ಶೇಖ್ ಹಸೀನಾ ಸೀರೆಗಳ ಜತೆ ಬ್ರಾಗಳನ್ನೂ ಬಿಡದೆ ದೋಚಿದ ಬಾಂಗ್ಲಾ ಜನ!

thawar chand gehlot cm siddaramaiah Governor versus state
ಪ್ರಮುಖ ಸುದ್ದಿ35 mins ago

CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Bangladesh Protest
ದೇಶ45 mins ago

Bangladesh Protest: ರಫೇಲ್ ಯುದ್ಧ ವಿಮಾನಗಳ ಹಾರಾಟ, ರಾಡಾರ್‌ ಮೂಲಕ ಮೇಲ್ವಿಚಾರಣೆ; ಶೇಖ್‌ ಹಸೀನಾ ಸುರಕ್ಷತೆಗೆ ಭಾರತ ಕೈಗೊಂಡ ಕ್ರಮಗಳಿವು

Smriti Mandhana,
ಕ್ರೀಡೆ54 mins ago

Smriti Mandhana : ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಸ್ಮೃತಿ ಮಂದಾನ, ಶಫಾಲಿ ವರ್ಮಾ ಆಯ್ಕೆ

student death road accident
ಮೈಸೂರು60 mins ago

Student Death: ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು; ಮನೆ ಬಿಟ್ಟು ಹೋದ ತಂದೆಗಾಗಿ ಕಾದಿಟ್ಟಿದ್ದಾರೆ ಶವ

Nag Panchami
Latest1 hour ago

Nagara Panchami : ಶ್ರಾವಣದ ಮೊದಲ ಹಬ್ಬ ನಾಗರ ಪಂಚಮಿ; ಏನಿದರ ಹಿನ್ನೆಲೆ, ವಿಶೇಷ?

Prakash Padukone
ಕ್ರೀಡೆ1 hour ago

Prakash Padukone : ಪದಕಗಳನ್ನು ತಪ್ಪಿಸಿಕೊಂಡ ಅಥ್ಲೀಟ್​ಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರಕಾಶ್​ ಪಡುಕೋಣೆ

pub physical abuse
ಕ್ರೈಂ1 hour ago

Physical Abuse: ಪಬ್‌ನಲ್ಲಿ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ ನಾಲ್ವರ ಬಂಧನ

Brain Eating Amoeba
ದೇಶ2 hours ago

Brain Eating Amoeba: ಕೇರಳದಲ್ಲಿ ಮತ್ತೆ ಮೆದುಳು ತಿನ್ನುವ ಅಮೀಬಾ ಹಾವಳಿ; ಮೂವರಲ್ಲಿ ಸೋಂಕು ಪತ್ತೆ

Sudha Murthy Thoughts
ಲೈಫ್‌ಸ್ಟೈಲ್2 hours ago

Sudha Murthy Thoughts: ಜಗಳವಾಡಿಲ್ಲ ಎಂದರೆ ನೀವು ಗಂಡ-ಹೆಂಡತಿಯೇ ಅಲ್ಲ!; ಸುಖ ದಾಂಪತ್ಯಕ್ಕೆ ಇಲ್ಲಿದೆ ಸುಧಾಮೂರ್ತಿ ಪಂಚ ಸೂತ್ರ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌