Wayanad Landslide: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 402: ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕ ಶವ ಸಂಸ್ಕಾರ - Vistara News

ದೇಶ

Wayanad Landslide: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 402: ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕ ಶವ ಸಂಸ್ಕಾರ

Wayanad Landslide: ವಯನಾಡು ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಇದಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಗುರುತು ಸಿಗದ ಮೃತದೇಹಗಳಿಗೆ ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕವಾಗಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ. ಪುತ್ತುಮಲ ಎಂಬಲ್ಲಿ ಸೋಮವಾರ 29 ಮೃತದೇಹ ಮತ್ತು 154 ದೇಹದ ಭಾಗಗಳ ಅಂತಿಮ ಕ್ರಿಯೆಯನ್ನು ಹಿಂದು, ಕ್ರಿಶ್ಚಿಯನ್‌ ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ಬಳಿಕ ನೆರವೇರಿಸಲಾಯಿತು.

VISTARANEWS.COM


on

Wayanad Landslide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಕೇರಳ ಮಾತ್ರವಲ್ಲ ದೇಶವನ್ನೇ ಬೆಚ್ಚಿಬೀಳಿಸಿದ್ದ ವಯನಾಡು ಭೂಕುಸಿತ (Wayanad Landslide) ಸಂಭವಿಸಿ ಇಂದಿಗೆ 1 ವಾರ. ಈಗಲೂ ಮೃತದೇಹ ಪತ್ತೆಯಾಗುತ್ತಲೇ ಇದೆ. ಸದ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ವಯನಾಡಿನ ಮೇಪ್ಪಾಡಿಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ ಮತ್ತು ಕಣ್ಣೀರಿನ ಕಥೆಗಳೇ ತುಂಬಿಕೊಂಡಿದೆ. ಕಂಡು ಕೇಳರಿಯದ ಈ ಭೀಕರ ದುರಂತದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಇದಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಗುರುತು ಸಿಗದ ಮೃತದೇಹಗಳಿಗೆ ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕವಾಗಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ.

ಪುತ್ತುಮಲ ಎಂಬಲ್ಲಿ ಸೋಮವಾರ 29 ಮೃತದೇಹ ಮತ್ತು 154 ದೇಹದ ಭಾಗಗಳ ಅಂತಿಮ ಕ್ರಿಯೆಯನ್ನು ಹಿಂದು, ಕ್ರಿಶ್ಚಿಯನ್‌ ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ಬಳಿಕ ನೆರವೇರಿಸಲಾಯಿತು. ಅಪರಾಹ್ನ ಆರಂಭವಾದ ಈ ಪ್ರಕ್ರಿಯೆ ಮಧ್ಯರಾತ್ರಿ ವೇಳೆ ಪೂರ್ತಿಯಾಯಿತು.

ಅವಶೇಷಗಳಡಿ ಸಿಕ್ಕ ಶರೀರದ ಭಾಗಗಳನ್ನೂ ಮೃತದೇಹವೆಂದು ಪರಿಗಣಿಸಿ ಅದಕ್ಕೆ ತಕ್ಕಂತೆ ವಿಧಿ ವಿಧಾನ ನಡೆಸಲಾಯಿತು. ಪ್ರತಿ ಮೃತದೇಹದ ಮುಂಭಾಗದಲ್ಲಿ ಮೊದಲಿಗೆ ಕ್ರಿಶ್ಚಿಯನ್‌ ಬಳಿಕ ಹಿಂದು ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ನಡೆಸಿ ನಂತರ ಅಂತ್ಯ ಸಂಸ್ಕಾರ ನಡೆಸಿ ಮಣ್ಣು ಮಾಡಲಾಯಿತು.

ʼʼಮೃತದೇಹದ ಭಾಗಗಳ ಫೋಟೊ, ರಕ್ತದ ಮಾದರಿ, ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಇಡಲಾಗುತ್ತಿದೆ. ಭವಿಷ್ಯದಲ್ಲಿ ವಾರಸುದಾರರಿಗೆ ಗುರುತು ಹಿಡಿಯಲು ಸಹಾಯವಾಗುವಂತೆ ಆಲ್ಬಂ ಮಾಡಿ ಇರಿಸಲಾಗುವುದುʼʼ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ʼʼಇದೊಂದು ಭಾವನಾತ್ಮಕ ಕ್ಷಣವಾಗಿತ್ತು. ಮೃತದೇಹದ ಕೆಲವೇ ಭಾಗಗಳು ದೊರೆತ ಹಿನ್ನಲೆಯಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಸಿ ಅವರ ಅಂತಿಮ ಸಂಸ್ಕಾರ ನಡೆಸಲಾಗಿದೆʼʼ ಎಂದು ಸ್ಥಳೀಯರು ತಿಳಿಸಿದ್ದಾರೆ. ಆ್ಯಂಬುಲೆನ್ಸ್‌ ಮೂಲಕ ಮೃತದೇಹ ಮತ್ತು ಮೃತದೇಹದ ಭಾಗಗಳನ್ನು ತಂದು ಇದಕ್ಕಾಗಿ ಸಜ್ಜುಗೊಳಿಸಿದ್ದ ಟೇಬಲ್‌ ಮೇಲಿರಿಸಿ ಪ್ರಾರ್ಥನೆ ಸಲ್ಲಿಸುವಾಗ ಸ್ಥಳದಲ್ಲಿದ್ದವರು ಭಾವುಕರಾದರು.

ಅವಘಡ ನಡೆದ ಸ್ಥಳಗಳ ಮಣ್ಣು, ಅವಶೇಷಗಳ ರಾಶಿ ಅಡಿಯಲ್ಲಿ ಸುಮಾರು 180 ಮೃತದೇಹದ ಭಾಗಗಳು ಕಂಡು ಬಂದಿವೆ. ಇನ್ನೂ ಸುಮಾರು 180 ಮಂದಿ ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ಮುಂದುವರಿದಿದೆ. ಗಾಯಗೊಂಡ 91 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 16 ಕಾಳಜಿ ಕೇಂದ್ರಗಳಲ್ಲಿ 2,514 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

ಇಂದು ಸೂಜಿಪಾರದಲ್ಲಿ ಹುಡುಕಾಟ ನಡೆಯಲಿದೆ. ಈ ಹಿಂದೆ ಕಾರ್ಯಾಚರಣೆ ನಡೆಸಲು ಸಾಧ್ಯವಾಗದ ಭಾಗಗಳಿಗೆ ತೆರಳಿ ಸ್ವಯಂಸೇವಕರು ಕಾರ್ಯಾಚರಣೆ ನಡೆಸಲಿದ್ದಾರೆ. ಹೆಲಿಕಾಫ್ಟರ್‌ ಮೂಲಕ ರಕ್ಷಣಾ ಸಿಬ್ಬಂದಿ ಇಲ್ಲಿಗೆ ತೆರಳಲಿದ್ದಾರೆ. ತರಬೇತಿ ಪಡೆದ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ, ನಾಲ್ಕು ಮಂದಿ ಎಸ್‌ಒಜಿ, ಆರು ಮಂದಿ ಸೇನಾ ಸಿಬ್ಬಂದಿಯನ್ನು ಒಳಗೊಂಡ 12 ಮಂದಿಯ ತಂಡ ಪ್ರಯಾಣ ಬೆಳೆಸಲಿದೆ. ಸನ್‌ರೈಸ್‌ ವ್ಯಾಲಿಯ ಸುತ್ತಮುತ್ತ ಶೋಧ ಕಾರ್ಯ ನಡೆಯಲಿದೆ. ಮೃತದೇಹ ಕಂಡು ಬಂದರೆ ಅದನ್ನು ಸಾಗಿಸಲು ವಿಶೇಷ ಹೆಲಿಕಾಫ್ಟರ್‌ ಅನ್ನೂ ಸಜ್ಜುಗೊಳಿದಲಾಗಿದೆ ಎಂದು ಸಚಿವ ಕೆ.ರಾಜನ್‌ ತಿಳಿಸಿದ್ದಾರೆ. ಇದೇ ವೇಳೆ ದುರಂತ ನಡೆದ ಸ್ಥಳದಲ್ಲಿ ಸೇನೆ ತಿಳಿಸುವವರೆಗೆ ಹುಡುಕಾಟ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

L K Advani: ಇಂದು ಮಧ್ಯಾಹ್ನದ ಹೊತ್ತಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

VISTARANEWS.COM


on

LK advani
Koo

ನವದೆಹಲಿ: ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ (L K Advani) ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ (Apollo Hospital) ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು ಎಲ್‌.ಕೆ.ಅಡ್ವಾಣಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ನಿಗಾ ವಹಿಸಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಮಾಜಿ ಉಪ ಪ್ರಧಾನಿಯ ಆರೋಗ್ಯವು ಸ್ಥಿರವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನದ ಹೊತ್ತಿಗೆ ಎಲ್‌.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜೂನ್‌ 27ರಂದು ಕೂಡ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಹಾಗಾಗಿ ಅವರನ್ನು ಅದೇ ರಾತ್ರಿ ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಡಿಸ್‌ಚಾರ್ಜ್‌ ಮಾಡಲಾಗಿತ್ತು.

ಜುಲೈನಲ್ಲೂ ಇದೇ ರೀತಿಯಾಗಿ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಗಲೂ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ವೈದ್ಯರ ನಿಗಾದಲ್ಲಿರಿಸಲಾಗಿತ್ತು.ಸದ್ಯ ಅವರಿಗೆ ನರವಿಜ್ಞಾನ ವಿಭಾಗದ ಡಾ.ವಿನೀತ್‌ ಸೂರಿ ಅವರು ಚಿಕಿತ್ಸೆ ನೀಡುತ್ತಿದ್ದಾರೆ.

ಜೂನ್‌ ಆರಂಭದಲ್ಲಿ, ಸರ್ಕಾರ ರಚನೆಗೆ ಹಕ್ಕು ಸಾಧಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಡ್ವಾಣಿಯವರನ್ನು ಭೇಟಿ ಮಾಡಿದ್ದರು. ಗಾಂಧಿನಗರದ ಮಾಜಿ ಸಂಸದರಾದ ಅಡ್ವಾಣಿ, ಮೋದಿಯವರ ರಾಜಕೀಯ ಮಾರ್ಗದರ್ಶಕರಾಗಿದ್ದಾರೆ.

ಅಡ್ವಾಣಿ ಅವರಿಗೆ ಈ ವರ್ಷದ ಮಾರ್ಚ್‌ನಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರ ನಿವಾಸದಲ್ಲಿಯೇ ಈ ಅತ್ಯುನ್ನತ ನಾಗರಿಕ ಗೌರವವನ್ನು ಸಲ್ಲಿಸಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಇದನ್ನು ಕೊಡಮಾಡಿದ್ದರು. ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್ ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಎಲ್‌ಕೆ ಅಡ್ವಾಣಿ ಅವರು ಜೂನ್ 2002ರಿಂದ ಮೇ 2004 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ, ಅಕ್ಟೋಬರ್ 1999 ರಿಂದ ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅವರು 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: LK Advani: ಬಿಜೆಪಿ ನಾಯಕ ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ; ಆಸ್ಪತ್ರೆಯಿಂದ ಡಿಸ್‌ಚಾರ್ಜ್

Continue Reading

ವಿದೇಶ

Sheikh Hasina: ತಂದೆ, ತಾಯಿ, ಮೂವರು ಸಹೋದರರ ಬರ್ಬರ ಹತ್ಯೆ; ಕಠಿಣ ಹಾದಿಯಲ್ಲಿ ಸಾಗಿ ಪ್ರಧಾನಿಯಾಗಿದ್ದ ಶೇಖ್‌ ಹಸೀನಾ

Sheikh Hasina: ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜಿಬುರ್ ರೆಹಮಾನ್ ಅವರ ಪುತ್ರಿಯಾಗಿರುವ ಶೇಖ್ ಹಸೀನಾ (Sheikh Hasina life) ಅವರು ಆ ದೇಶದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಪ್ರಧಾನಮಂತ್ರಿಯಾಗಿದ್ದರು. ಮೂರು ದಶಕಗಳವರೆಗೆ ಆಡಳಿತ ನಡೆಸಿರುವ ಅವರು ಇದೀಗ ರಾಜೀನಾಮೆ ನೀಡಿ ದೇಶದಿಂದ ನಿರ್ಗಮಿಸಿದ್ದಾರೆ. ಇವರ ರಾಜಕೀಯ ದಾರಿ ಸುಲಭವಾಗಿರಲಿಲ್ಲ. ಸಾಕಷ್ಟು ಸವಾಲುಗಳನ್ನು ಎದುರಿಸಿ ಪ್ರಧಾನಿಯಾದ ಅವರು ಅನಂತರವೂ ಹಲವು ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಯಿತು. ಈಗ ಅವರ ಜೀವನ ಮತ್ತು ರಾಜಕೀಯ ಭವಿಷ್ಯ ತೂಗುಯ್ಯಾಲೆಯಲ್ಲಿದೆ.

VISTARANEWS.COM


on

By

Sheikh Hasina
Koo

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ (violent protests) ಪರಿಣಾಮ ಪ್ರಧಾನಿ (Bangladesh PM) ಶೇಖ್ ಹಸೀನಾ (Sheikh Hasina ) ಸೋಮವಾರ ರಾಜೀನಾಮೆ ನೀಡಿ ರಾಜಧಾನಿ ಢಾಕಾ (Dhaka) ತೊರೆದು ಭಾರತದಲ್ಲಿ ಆಸರೆ ಪಡೆಯುತ್ತಿದ್ದಾರೆ. 76 ವರ್ಷದ ಹಸೀನಾ 1996ರ ಜೂನ್‌ನಿಂದ 2001ರ ಜುಲೈವರೆಗೆ ಮತ್ತು 2009ರ ಜನವರಿಯಿಂದ 2024ರ ಆಗಸ್ಟ್ ವರೆಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಾಂಗ್ಲಾದಲ್ಲಿ ಸುದೀರ್ಘ ಕಾಲ ಪ್ರಧಾನಿಯಾಗಿ ಅಧಿಕಾರ ಚಲಾಯಿಸಿದ ಖ್ಯಾತಿ ಇವರಿಗಿದೆ.

ಬಾಂಗ್ಲಾದೇಶದ ಸಂಸ್ಥಾಪಕ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರ ಪುತ್ರಿ ಹಸೀನಾ ಅವರು ದೇಶದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿದ್ದಾರೆ. ಒಟ್ಟಿಗೆ ಮೂರು ದಶಕಗಳವರೆಗೆ ಆಡಳಿತ ನಡೆಸಿರುವ ಅವರು, 1960ರ ದಶಕದದಲ್ಲಿ ಢಾಕಾ ವಿಶ್ವವಿದ್ಯಾನಿಲಯದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.

ತಂದೆಯ ರಾಜಕೀಯ ಸಂಪರ್ಕಾಧಿಕಾರಿ:

ಪಾಕಿಸ್ತಾನ ಸರ್ಕಾರವು ಇವರ ತಂದೆಯನ್ನು ಬಂಧಿಸಿದಾಗ ಇವರು ತಂದೆಯ ರಾಜಕೀಯ ಸಂಪರ್ಕಾಧಿಕಾರಿಯಾಗಿದ್ದರು. 1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕೆ ಕಾರಣವಾದ ವಿಮೋಚನಾ ಯುದ್ಧದ ಸಮಯದಲ್ಲಿ ದಂಗೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಹಸೀನಾ ಮತ್ತು ಅವರ ಕುಟುಂಬ ಸದಸ್ಯರನ್ನು ಬಂಧಿಸಲಾಗಿತ್ತು.

ಬಾಂಗ್ಲಾ ಸ್ವಾತಂತ್ರ್ಯ ಪಡೆದ ಬಳಿಕ ಶೇಖ್‌ ಹಸೀನಾ ಅವರ ತಂದೆ ಶೇಖ್ ಮುಜಿಬುರ್ ರೆಹಮಾನ್ ಬಾಂಗ್ಲಾ ದೇಶದ ಮೊದಲ ಅಧ್ಯಕ್ಷರಾದರು. 1975ರ ಆಗಸ್ಟ್ ನಲ್ಲಿ ಆಗ ಅಧ್ಯಕ್ಷರಾಗಿದ್ದ ಶೇಖ್ ಮುಜಿಬುರ್ ರೆಹಮಾನ್ ಮತ್ತು ಅವರ ಪತ್ನಿ, ಮೂವರು ಪುತ್ರರನ್ನು ಅವರ ಮನೆಯಲ್ಲಿ ಬಂಡುಕೋರ ಮಿಲಿಟರಿ ಅಧಿಕಾರಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ದಾಳಿಯ ಸಮಯದಲ್ಲಿ ಶೇಖ್‌ ಹಸೀನಾ ವಿದೇಶದಲ್ಲಿದ್ದರು. ಅನಂತರ ಆರು ವರ್ಷಗಳ ಕಾಲ ಅವರು ದೇಶಭ್ರಷ್ಟರಾಗಿದ್ದರು. ಆಗಲೂ ಅವರಿಗೆ ಆಸರೆ ನೀಡಿದ್ದು ಭಾರತ.

ಅವಾಮಿ ಲೀಗ್ ನಾಯಕಿ

ಬಳಿಕ ಅವರ ತಂದೆ ಸ್ಥಾಪಿಸಿದ್ದ ರಾಜಕೀಯ ಪಕ್ಷವಾದ ಅವಾಮಿ ಲೀಗ್ ಅನ್ನು ಮುನ್ನಡೆಸಲು ಹಸೀನಾ ಅವರನ್ನು ಆಯ್ಕೆ ಮಾಡಲಾಯಿತು. ಇದು ಬಾಂಗ್ಲಾದೇಶದ ಅತಿದೊಡ್ಡ ರಾಜಕೀಯ ಸಂಘಟನೆಯಾಗಿದೆ. 1981ರಲ್ಲಿ ಬಾಂಗ್ಲಾದೇಶಕ್ಕೆ ಮರಳಿದ ಹಸೀನಾ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಲಿಷ್ಠ ನಾಯಕಿಯಾಗಿ ಹೊರಹೊಮ್ಮಿದರು. ಗೃಹಬಂಧನ ಸೇರಿ ಅನೇಕ ಸವಾಲುಗಳನ್ನು ಎದುರಿಸಿದ ಅವರು ಬಾಂಗ್ಲಾದೇಶದ ವಿರೋಧ ಪಕ್ಷದ ನಾಯಕಿಯಾದರು ಮತ್ತು ಮಿಲಿಟರಿ ಆಡಳಿತದ ಹಿಂಸಾಚಾರವನ್ನು ಧೈರ್ಯದಿಂದ ಎದುರಿಸಿದರು.


1990ರ ಡಿಸೆಂಬರ್ ನಲ್ಲಿ ಹಸೀನಾ ಅವರು ವ್ಯಾಪಕವಾದ ಸಾರ್ವಜನಿಕ ಬೆಂಬಲವನ್ನು ಪಡೆದುದರಿಂದ ಬಾಂಗ್ಲಾದೇಶದ ಕೊನೆಯ ಮಿಲಿಟರಿ ನಾಯಕರಾದ ಲೆಫ್ಟಿನೆಂಟ್ ಜನರಲ್ ಹುಸೇನ್ ಮೊಹಮ್ಮದ್ ಇರ್ಷಾದ್ ರಾಜೀನಾಮೆ ನೀಡಬೇಕಾಯಿತು. ವಿರೋಧ ಪಕ್ಷದ ನಾಯಕಿಯಾಗಿ ಹಸೀನಾ ಅವರು ಖಲೀದಾ ಜಿಯಾ ಅವರ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿಯ (BNP) ಚುನಾವಣಾ ವಂಚನೆಯ ಬಗ್ಗೆ ಧ್ವನಿ ಎತ್ತಿದರು. ಸಂಸತ್ತನ್ನು ಬಹಿಷ್ಕರಿಸಲು ನಿರ್ಧರಿಸಿದರು. ಇದು ದೇಶದಲ್ಲಿ ವ್ಯಾಪಕ ಪ್ರತಿಭಟನೆಗೆ ನಾಂದಿ ಹಾಡಿತು.

ಪ್ರಧಾನಿಯಾಗಿ ಆಯ್ಕೆ

ಅಂತಿಮವಾಗಿ ಖಲೀದಾ ಜಿಯಾ ರಾಜೀನಾಮೆ ನೀಡಿದರು. 1996ರ ಜೂನ್‌ನಲ್ಲಿ ನಡೆದ ಚುನಾವಣೆಯ ಅನಂತರ ಹಸೀನಾ ಪ್ರಧಾನಿಯಾದರು. ಅವರ ಮೊದಲ ಅವಧಿಯಲ್ಲಿ ದೇಶವು ಆರ್ಥಿಕ ಬೆಳವಣಿಗೆ ಮತ್ತು ಬಡತನದಲ್ಲಿ ಇಳಿಕೆ ಕಂಡಿತು. ಆದರೆ ರಾಜಕೀಯ ಅಸ್ಥಿರತೆ ಮುಂದುವರಿಯಿತು. 2001ರ ಜುಲೈನಲ್ಲಿ ಹಸೀನಾ ಅವರ ಅಧಿಕಾರವಧಿಯು ಕೊನೆಗೊಂಡಿತು. ಬಾಂಗ್ಲಾದೇಶದ ಪ್ರಧಾನಿಯೊಬ್ಬರು ದೇಶದ ಸ್ವಾತಂತ್ರ್ಯದ ಅನಂತರ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದು ಇದೇ ಮೊದಲು.

2006-2008ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸುಲಿಗೆ ಆರೋಪದ ಮೇಲೆ ಶೇಖ್‌ ಹಸೀನಾ ಅವರನ್ನು ಬಂಧಿಸಲಾಯಿತು. ಆದರೆ ಅವರ ಬಿಡುಗಡೆಯ ಅನಂತರ 2008ರ ಚುನಾವಣೆಯಲ್ಲಿ ಗೆದ್ದರು. ಪ್ರಮುಖ ಪಕ್ಷಗಳು ಬಹಿಷ್ಕರಿಸಿದ ಮತ್ತು ಅಂತಾರಾಷ್ಟ್ರೀಯ ವೀಕ್ಷಕರಿಂದ ಟೀಕೆಗೊಳಗಾದ ವಿವಾದಾತ್ಮಕ ಚುನಾವಣೆಯಲ್ಲಿ ಅವರು ಮತ್ತೆ 2014ರಲ್ಲಿ ಮೂರನೇ ಅವಧಿಗೆ ಮರು ಆಯ್ಕೆಯಾದರು.

2017ರಲ್ಲಿ ಮ್ಯಾನ್ಮಾರ್‌ನಲ್ಲಿ ಹಿಂಸಾಚಾರದಿಂದ ಪಲಾಯನ ಮಾಡುತ್ತಿರುವ ಸುಮಾರು ಒಂದು ಮಿಲಿಯನ್ ರೋಹಿಂಗ್ಯಾ ನಿರಾಶ್ರಿತರಿಗೆ ಆಶ್ರಯ ಮತ್ತು ಸಹಾಯ ನೀಡಿದ್ದಕ್ಕಾಗಿ ಹಸೀನಾ ಪ್ರಶಂಸೆಯನ್ನು ಪಡೆದರು.

ಇದನ್ನೂ ಓದಿ: Bangladesh Protest: ರಫೇಲ್ ಯುದ್ಧ ವಿಮಾನಗಳ ಹಾರಾಟ, ರಾಡಾರ್‌ ಮೂಲಕ ಮೇಲ್ವಿಚಾರಣೆ; ಶೇಖ್‌ ಹಸೀನಾ ಸುರಕ್ಷತೆಗೆ ಭಾರತ ಕೈಗೊಂಡ ಕ್ರಮಗಳಿವು


ಮೀಸಲು ವಿರೋಧಿ ಚಳವಳಿಯ ಬಿಸಿ

2018ರ ನಾಲ್ಕನೇ ಅವಧಿಯ ಚುನಾವಣೆಯಲ್ಲೂ ಜಯ ಸಾಧಿಸಿದ ಹಸೀನಾ ಅವರಿಗೆ ಸಾಕಷ್ಟು ಸವಾಲುಗಳು ಮತ್ತೆ ಎದುರಾಯಿತು. ಸರ್ಕಾರಿ ಉದ್ಯೋಗ ಕೋಟಾ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ ಬಳಿಕ ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಅಶಾಂತಿ ಪ್ರಾರಂಭವಾಯಿತು. ಇದನ್ನು ನಿಯಂತ್ರಿಸುವುದು ಶೇಖ್ ಹಸೀನಾ ಮತ್ತು ಅವರ ಆಡಳಿತಾರೂಢ ಅವಾಮಿ ಲೀಗ್ ಪಕ್ಷಕ್ಕೆ ಸವಾಲಾಗಿ ಪರಿಣಮಿಸಿತು. ತಿಂಗಳುಗಳ ಕಾಲ ವಿದ್ಯಾರ್ಥಿಗಳ ನೇತೃತ್ವದಲ್ಲಿ ಪ್ರತಿಪಕ್ಷಗಳ ಬೆಂಬಲದೊಂದಿಗೆ ಬಾಂಗ್ಲಾದಾದ್ಯಂತ ವ್ಯಾಪಕ ಪ್ರತಿಭಟನೆ ನಡೆಯಿತು. ನೂರಾರು ಜನರು ದಂಗೆಯಲ್ಲಿ ಸಾವಿಗೀಡಾದರು. ಬಾಂಗ್ಲಾ ವಿಮೋಚನೆ ಹೋರಾಟಗಾರರ ಕುಟುಂಬಗಳಿಗೆ ಉದ್ಯೋಗದಲ್ಲಿ ಶೇ.30ರಷ್ಟು ಮೀಸಲಾತಿ ನೀಡಬಾರದು ಎನ್ನುವುದು ಹೋರಾಟಗಾರರ ಆಗ್ರಹವಾಗಿತ್ತು. ಇದಕ್ಕೆ ಬೇರೆ ಬೇರೆ ಆಯಾಮಗಳು ಸೇರಿಕೊಂಡವು. ಕೊನೆಗೂ ಸುಪ್ರೀಂ ಕೋರ್ಟ್‌ ಮೀಸಲನ್ನು ಶೇ.5ಕ್ಕೆ ಸೀಮಿತಗೊಳಿಸಿತು. ಆದರೂ ಪ್ರತಿಭಟನೆ ನಿಲ್ಲಲಿಲ್ಲ. ಇದಕ್ಕೆ ಕಾರಣ ಏನೆಂದರೆ, ಈ ಪ್ರತಿಭಟನೆಗೆ ಪಾಕಿಸ್ತಾನ ಮತ್ತು ಚೀನಾದ ಕುಮ್ಮಕ್ಕಿತ್ತು. ಶೇಖ್‌ ಹಸೀನಾ ಯಾವತ್ತೂ ಭಾರತ ಪರ ನಿಲುವು ಹೊಂದಿರುವವರು. ಹಾಗಾಗಿ ಸಹಜವಾಗಿಯೇ ಅವರ ವಿರುದ್ಧ ಚೀನಾ ಮತ್ತು ಪಾಕಿಸ್ತಾನ ಮಸಲತ್ತು ನಡೆಸಿವೆ. ಶೇಖ್‌ ಹಸೀನಾ ಈಗ ಅಧಿಕಾರ ಕಳೆದುಕೊಂಡು, ತಾಯ್ನಾಡನ್ನೇ ತೊರೆದು ಅತಂತ್ರರಾಗಿದ್ದಾರೆ. ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

Continue Reading

ಪ್ರಮುಖ ಸುದ್ದಿ

Shocker News : ಯುಪಿ ಸಿಎಂ ಯೋಗಿ ಅಧಿಕೃತ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

VISTARANEWS.COM


on

shocker news
Koo

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ (Shocker News ) ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ (CM Yogi Adityanath) ಅವರ ನಿವಾಸದ ಹೊರಗಡೆ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಅವರ ಆದಿತ್ಯನಾಥ್ ಅವರ ಜನತಾ ದರ್ಬಾರ್​ನಿಂದ ಹೊರಬಂದ ಕೂಡಲೇ ಮಹಿಳೆ ಗೌತಮಪಲ್ಲಿ ಪೊಲೀಸ್ ಠಾಣೆ ಪ್ರದೇಶದ ವಿಕ್ರಮಾದಿತ್ಯ ಮಾರ್ಗದ 19 ಬಿಡಿ ಜಂಕ್ಷನ್ ಬಳಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪೊಲೀಸ್ ಸಿಬ್ಬಂದಿ ಬೆಂಕಿಯನ್ನು ಕಂಬಳಿ ಬಳಸಿ ಬೆಂಕಿ ನಂದಿಸಿದ್ದಾರೆ. ಮಹಿಳೆಯನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಅಂಜಲಿ ಜಾತವ್​ ಎಂದು ಹೇಳಲಾಗಿದೆ.

ಕೌಟುಂಬಿಕ ಕಲಹದಿಂದಾಗಿ ಅಂಜಲಿ ಜಾತವ್ ಎಂಬ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದಾಗ, ಅವರು ಮಂಗಳವಾರ ಸಿಎಂ ಯೋಗಿ ಆದಿತ್ಯನಾಥ್ ಅವರ ಜನತಾ ದರ್ಬಾರ್​ಗೆ ತಮ್ಮ ಸಮಸ್ಯೆ ಹೇಳಲು ಬಂದಿದ್ದರು. ಅಲ್ಲಿ ಯಾವುದೇ ಪರಿಹಾರ ಕಂಡುಬಂದಿಲ್ಲ. ಇದರಿಂದ ಮನನೊಂದ ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಬಗ್ಗೆ ಸಮಾಜವಾದಿ ಪಕ್ಷ (ಎಸ್ಪಿ) ಯೋಗಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ಎಸ್ಪಿ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್​​ನಲ್ಲಿ ಘಟನೆಯ ವೀಡಿಯೊವನ್ನು ಹಂಚಿಕೊಂಡಿದೆ ಮತ್ತು ಯೋಗಿ ಸರ್ಕಾರವನ್ನು ಟೀಕಿಸಿದೆ, “ಸಂತ್ರಸ್ತೆ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಅವರ ಜನತಾ ದರ್ಬಾರ್​ ಬಳಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರಂಕುಶ ಪ್ರಭುತ್ವದಿಂದ ಮುಳುಗಿರುವ ಈ ಸರ್ಕಾರ ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ವಿಫಲವಾಗಿದೆ. ಮೇಲ್ನೋಟದ ಪ್ರಚಾರದ ಮೇಲೆ ಸರ್ಕಾರ ನಡೆಯಲು ಸಾಧ್ಯವಿಲ್ಲ. ಮಹಿಳೆಗೆ ಪರಿಹಾರ ಮತ್ತು ನ್ಯಾಯ ಸಿಗಬೇಕು ಎಂದು ಬರೆದುಕೊಂಡಿದೆ.

ಇದನ್ನೂ ಓದಿ: Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು…

ಪೊಲೀಸರು ಬೆಂಕಿ ನಂದಿಸುವ ಹೊತ್ತಿಗೆ, ಮಹಿಳೆಗೆ 80% ಸುಟ್ಟ ಗಾಯಗಳಾಗಿದ್ದವು. ಅವಳು ತನ್ನ ಮಕ್ಕಳಲ್ಲಿ ಒಬ್ಬಳೊಂದಿಗೆ ಲಕ್ನೋಗೆ ಬಂದಿದ್ದಳು ಎನ್ನಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ್ದು ಏಕೆ?

ಆತ್ಮಹತ್ಯೆಗೆ ಯತ್ನಿಸಿದ ಅಂಜಲಿ ಎಂಬ ಮಹಿಳೆ ಆಗಸ್ಟ್ 2 ರಂದು ಉನ್ನಾವೊ ಜಿಲ್ಲೆಯ ಪೂರ್ವಾ ಪೊಲೀಸ್ ಠಾಣೆಯಲ್ಲಿ ತನ್ನ ಪತಿ, ಸೋದರ ಮಾವ, ಅತ್ತೆ ಮತ್ತು ಅತ್ತಿಗೆ ವಿರುದ್ಧ ವರದಕ್ಷಿಣೆ ಕಿರುಕುಳಕ್ಕಾಗಿ ದೂರು ದಾಖಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ತಕ್ಷಣ ಎಫ್ಐಆರ್ ದಾಖಲಿಸಲಾಗಿದೆ. ಆಕೆಯ ಪತಿ ದೇಶ್ ರಾಜ್ ಮತ್ತು ಭಾವ ಬಬ್ಲು ಅವರನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಮಹಿಳೆ ತನ್ನ ಅತ್ತೆ, ಅತ್ತಿಗೆ ಮತ್ತು 15 ವರ್ಷದ ಸೋದರಳಿಯನನ್ನು ಸಹ ಜೈಲಿಗೆ ಹಾಕಬೇಕೆಂದು ಒತ್ತಾಯಿಸುತ್ತಿದ್ದಳು, ಇದಕ್ಕಾಗಿ ಪೊಲೀಸ್ ಠಾಣೆಯಲ್ಲಿ ತನಿಖೆಯ ನಂತರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಇದೀಗ ಅದೇ ಕಾರಣಕ್ಕೆ ಆತ್ಮಹತ್ಯಗೆ ಪ್ರಯತ್ನಿಸಿದ್ದಾರೆ.

Continue Reading

ದೇಶ

Bangladesh Protest: ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಹಿಂದೆ ಬೇರೆ ದೇಶಗಳ ಕೈವಾಡವಿದೆಯೇ?; ರಾಹುಲ್‌ ಗಾಂಧಿ ಪ್ರಶ್ನೆ

Bangladesh Protest: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯಲ್ಲಿ ಅವಲೋಕಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಿದರು.

VISTARANEWS.COM


on

Bangladesh Protest
Koo

ನವದೆಹಲಿ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು (Bangladesh Protest), ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖ್‌ ಹಸೀನಾ (Sheik Hasina) ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯಲ್ಲಿ ಅವಲೋಕಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಅವರು ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು, ʼʼಕಳೆದ ಕೆಲವು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ನಾಟಕೀಯ ಬೆಳವಣಿಗೆಗಳಲ್ಲಿ ವಿದೇಶಿ ಶಕ್ತಿಗಳು ವಿಶೇಷವಾಗಿ ಪಾಕಿಸ್ತಾನದ ಕೈವಾಡ ಇರಬಹುದೆ?ʼʼ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ ಈ ಕೋನದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಪ್ರತಿಬಿಂಬಿಸಲು ಪಾಕಿಸ್ತಾನದ ರಾಜತಾಂತ್ರಿಕರೊಬ್ಬರು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ನಿರಂತರವಾಗಿ ಫೋಟೊ ಹಂಚಿಕೊಳ್ಳುತ್ತಿದ್ದಾರೆ. ಇದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ಹೇಳಿದೆ.

ಸರ್ಕಾರದ ಕಾರ್ಯ ತಂತ್ರವೇನು?

ಢಾಕಾದಲ್ಲಿನ ಅಧಿಕಾರ ಹಸ್ತಾಂತರದ ರಾಜತಾಂತ್ರಿಕ ಪರಿಣಾಮಗಳನ್ನು ಎದುರಿಸುವಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಅಲ್ಪಾವಧಿ ಮತ್ತು ದೀರ್ಘಕಾಲೀನ ಕಾರ್ಯತಂತ್ರವೇನು ? ಎಂದೂ ರಾಹುಲ್ ಗಾಂಧಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಜೈಶಂಕರ್‌, ʼʼಸದ್ಯ ಬಾಂಗ್ಲಾದೇಶದಲ್ಲಿ ರಾಜಕೀಯ ಚಟುವಟಿಕೆ ನಡೆಯುತ್ತಿದ್ದು, ಈಗಲೇ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಅಲ್ಲಿನ ಬೆಳವಣಿಗೆಯನ್ನೂ ಸೂಕ್ಷ್ಮವಾಗಿ ಪರಿಶೀಲಿಸಿ ಮುಂದಿನ ನಡೆ ತೀರ್ಮಾನಿಸಲಾಗುವುದುʼʼ ಎಂದು ತಿಳಿಸಿದರು.

ಬಾಂಗ್ಲಾದೇಶದಲ್ಲಿ ನಡೆದ ನಾಟಕೀಯ ತಿರುವನ್ನು ಮೊದಲೇ ಊಹಿಸಲಾಗಿತ್ತೆ ? ಎಂಬ ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಶಂಕರ್‌, ʼʼಭಾರತವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿತ್ತುʼʼ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳ ನಾಯಕರು ನೆರೆ ದೇಶದ ಈ ಬಿಕ್ಕಟ್ಟನ್ನು ನಿಭಾಯಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಲಿದೆ ಎಂದು ಭರವಸೆ ನೀಡಿದರು.

ಸಭೆಯ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಮಾಹಿತಿ ನೀಡಿದ ವಿದೇಶಾಂಗ ಸಚಿವ ಜೈಶಂಕರ್‌ ಅವರು, ಪ್ರತಿಪಕ್ಷಗಳ ಸರ್ವಾನುಮತದ ಬೆಂಬಲವನ್ನು ಶ್ಲಾಘಿಸಿದರು. “ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಂದು ಸಂಸತ್ತಿನಲ್ಲಿ ಆಯೋಜಿಸಿದ್ದ ಸರ್ವಪಕ್ಷ ಸಭೆಯಲ್ಲಿ ವಿವರಿಸಿದ್ದೇನೆ. ಬಳಿಕ ಈ ವಿಚಾರದಲ್ಲಿ ಬೆಂಬಲ ನೀಡುವುದಾಗಿ ಎಲ್ಲ ಪಕ್ಷಗಳ ಮುಖಂಡರು ತಿಳಿಸಿದ್ದಾರೆʼʼ ಎಂದು ಬರೆದುಕೊಂಡಿದ್ದಾರೆ.

ಪರಿಸ್ಥಿತಿಯ ಅವಲೋಕನ

ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಜೈಶಂಕರ್‌, ʼʼಪ್ರಸ್ತುತ ದೆಹಲಿಯಲ್ಲಿರುವ ಶೇಖ್ ಹಸೀನಾ ಅವರು ಚೇತರಿಸಿಕೊಳ್ಳಲಿ. ಅವರಿಗಾಗಿ ಸ್ವಲ್ಪ ಸಮಯಾವಕಾಶ ನೀಡೋಣ. ಬಳಿಕ ಮುಂದಿನ ಕ್ರಮದ ಬಗ್ಗೆ ಕೇಂದ್ರ ಅವರೊಂದಿಗೆ ಸಮಾಲೋಚನೆ ನಡೆಸಲಿದೆ. ಸರ್ಕಾರ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಜತೆಗೆ ಬಾಂಗ್ಲಾದೇಶದ ಸೇನೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಶೇಖ್ ಹಸೀನಾ ಭಾರತಕ್ಕೆ ಬಂದ ನಂತರ ನಡೆಯುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆʼʼ ಎಂದು ತಿಳಿಸಿದರು.

ಇದನ್ನೂ ಓದಿ: Bangladesh Protest: ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ; ಮತ್ತೊಂದು ಕಿಡಿ ಹೊತ್ತಿಸಿದ ಕಂಗನಾ ರಣಾವತ್

Continue Reading
Advertisement
LK advani
ದೇಶ36 seconds ago

L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

women PG bangalore
ಪ್ರಮುಖ ಸುದ್ದಿ27 mins ago

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

IND vs SL
ಕ್ರೀಡೆ27 mins ago

IND vs SL: ಮೂರನೇ ಏಕದಿನ ಪಂದ್ಯಕ್ಕೆ ರಾಹುಲ್​ ಅನುಮಾನ​; ಪಂತ್​ಗೆ ಅವಕಾಶ?

Gadag News
ಗದಗ29 mins ago

Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!

Sheikh Hasina
ವಿದೇಶ34 mins ago

Sheikh Hasina: ತಂದೆ, ತಾಯಿ, ಮೂವರು ಸಹೋದರರ ಬರ್ಬರ ಹತ್ಯೆ; ಕಠಿಣ ಹಾದಿಯಲ್ಲಿ ಸಾಗಿ ಪ್ರಧಾನಿಯಾಗಿದ್ದ ಶೇಖ್‌ ಹಸೀನಾ

shocker news
ಪ್ರಮುಖ ಸುದ್ದಿ34 mins ago

Shocker News : ಯುಪಿ ಸಿಎಂ ಯೋಗಿ ಅಧಿಕೃತ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Hasin Jahan
ಕ್ರೀಡೆ1 hour ago

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Unique Village
Latest1 hour ago

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

C Kannada movie release on August 23
ಕರ್ನಾಟಕ2 hours ago

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Bangladesh Protest
ಪ್ರಮುಖ ಸುದ್ದಿ2 hours ago

Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು…

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌