Bangladesh Protest: ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ; ಮತ್ತೊಂದು ಕಿಡಿ ಹೊತ್ತಿಸಿದ ಕಂಗನಾ ರಣಾವತ್ - Vistara News

ದೇಶ

Bangladesh Protest: ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ; ಮತ್ತೊಂದು ಕಿಡಿ ಹೊತ್ತಿಸಿದ ಕಂಗನಾ ರಣಾವತ್

Bangladesh Protest: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಪ್ರಧಾನಿ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿ ಪ್ರಾಣಭಯದಿಂದ ಭಾರತಕ್ಕೆ ಆಗಮಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್​, “ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ, ಸ್ವತಃ ಮುಸ್ಲಿಮರು ಕೂಡ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಬ್ರಿಟನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆ ದುರದೃಷ್ಟಕರ. ರಾಮರಾಜ್ಯದಲ್ಲಿ ಬದುಕುತ್ತಿರುವುದು ನಮ್ಮ ಅದೃಷ್ಟ. ಜೈ ಶ್ರೀ ರಾಮ್ʼʼ ಎಂದು ಹೇಳಿದ್ದಾರೆ.

VISTARANEWS.COM


on

Bangladesh Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪ ತಾಳಿದ್ದು, ಪ್ರಧಾನಿ ಶೇಖ್‌ ಹಸೀನಾ (Sheik Hasina) ಅವರು ರಾಜೀನಾಮೆ ನೀಡಿ ಪ್ರಾಣಭಯದಿಂದ ಭಾರತಕ್ಕೆ ಆಗಮಿಸಿ ಆಶ್ರಯ ಪಡೆದಿದ್ದಾರೆ (Bangladesh Protest). ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್​ (Kangana Ranaut), ಯಾವ ಮುಸ್ಲಿಂ ರಾಷ್ಟ್ರವೂ ಸುರಕ್ಷಿತವಲ್ಲ ಎಂದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಂಗನಾ ಮತ್ತೊಂದು ಚರ್ಚೆಗೆ ನಾಂದಿ ಹಾಡಿದ್ದಾರೆ. “ಭಾರತವು ಸುತ್ತಲಿನ ಎಲ್ಲ ಇಸ್ಲಾಮಿಕ್ ಪ್ರಜಾಪ್ರಭುತ್ವ ದೇಶಗಳ ಮೂಲ ತಾಯ್ನಾಡು. ಬಾಂಗ್ಲಾದೇಶದ ಪ್ರಧಾನಿ ಭಾರತದಲ್ಲಿ ಸುರಕ್ಷಿತ ಎಂದು ಭಾವಿಸಿ ಇಲ್ಲಿಗೆ ಆಗಮಿಸಿದ್ದಾರೆ. ಆದರೆ ಭಾರತದಲ್ಲೇ ವಾಸಿಸುವವರು ಹಿಂದೂ ರಾಷ್ಟ್ರ ಯಾಕೆ? ಏಕೆ ರಾಮರಾಜ್ಯ? ಎಂದು ಕೇಳುತ್ತಲೇ ಇರುತ್ತಾರೆ. ಈ ಪ್ರಶ್ನೆಗೆ ಈಗ ಸೂಕ್ತ ಉತ್ತರ ಸಿಕ್ಕಿದೆʼʼ ಎಂದು ಅವರು ಹೇಳಿದ್ದಾರೆ.

ಮುಂದುವರಿದು, “ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ, ಸ್ವತಃ ಮುಸ್ಲಿಮರು ಕೂಡ. ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಬ್ರಿಟನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆ ದುರದೃಷ್ಟಕರ. ರಾಮರಾಜ್ಯದಲ್ಲಿ ಬದುಕುತ್ತಿರುವುದು ನಮ್ಮ ಅದೃಷ್ಟ. ಜೈ ಶ್ರೀ ರಾಮ್ʼʼ ಎಂದು ಕಂಗನಾ ಅಭಿಪ್ರಾಯ ಪಟ್ಟಿದ್ದಾರೆ. ಸದ್ಯ ಈ ಹೇಳಿಕೆಗೆ ವಿರುದ್ಧ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? 

ಬಾಂಗ್ಲಾದೇಶದಲ್ಲಿ ಮೀಸಲಾತಿ ಕಾರಣಕ್ಕಾಗಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. 1971ರಲ್ಲಿ ನಡೆದ ಬಾಂಗ್ಲಾದೇಶ ಹೋರಾಟದಲ್ಲಿ ಭಾಗಿಯಾದವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಮೀಸಲಾತಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಕೆಲ ದಿನಗಳ ಹಿಂದೆಯೂ ನಡೆದ ಹಿಂಸಾತ್ಮಕ ಹೋರಾಟದಲ್ಲಿ ನೂರಾರು ಜನ ಮೃತಪಟ್ಟಿದ್ದರು.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆ ಭುಗಿಲೇಳುತ್ತಲೇ ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌, ಶೇ. 30ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆದರೆ ಸಂಪೂರ್ಣವಾಗಿ ಮೀಸಲಾತಿಯನ್ನು ರದ್ದುಗೊಳಿಸುವ ಬದಲು ಶೇ.5ರಷ್ಟು ಮೀಸಲಾತಿ ಮುಂದುವರಿಸಿದೆ. ಸಂಪೂರ್ಣವಾಗಿ ಮೀಸಲಾತಿ ರದ್ದುಗೊಳಿಸಬೇಕು ಎಂದು ಜನರ ಆಗ್ರಹವಾಗಿದ್ದು, ಇದಕ್ಕಾಗಿ ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆಗೆ ಪ್ರತಿಪಕ್ಷಗಳೂ ಬೆಂಬಲ ನೀಡಿದ್ದು, ಶೇಖ್‌ ಹಸೀನಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಅದರಂತೆ ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ.

ಭಾರತಕ್ಕೆ ಬಂದಿದ್ದೇಕೆ?

ಭಾರತವು ಬಾಂಗ್ಲಾದೇಶಕ್ಕೆ ಮಿತ್ರರಾಷ್ಟ್ರವಾಗಿದ್ದು, ನರೇಂದ್ರ ಮೋದಿ ಅವರಿಗೆ ಶೇಖ್‌ ಹಸೀನಾ ಆಪ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪ್ರಾಣಭಯದಿಂದ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಅವರು ಇಂಗ್ಲೆಂಡ್‌ಗೆ ತೆರಳಿದ್ದಾರೆ ಎಂದೂ ಮೂಲಗಳು ತಿಳಿಸಿವೆ. ಶೇಖ್‌ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನಗೈದ ಬೆನ್ನಲ್ಲೇ ಇತ್ತ ಬಾಂಗ್ಲಾದೇಶದಲ್ಲಿ ಮಧ್ಯಂತರ ಮಿಲಿಟರಿ ಆಡಳಿತ ಜಾರಿಗೆ ಬಂದಿದೆ. ದೇಶದ ಆಡಳಿತ ಈಗ ಸೇನೆಯ ವ್ಯಾಪ್ತಿಗೆ ಬಂದಿದೆ. 

ಇದನ್ನೂ ಓದಿ: Bangla Protest Explainer: ಬಾಂಗ್ಲಾದಲ್ಲಿ ಹಿಂಸೆ ಭುಗಿಲೆದ್ದಿದ್ದೇಕೆ? ಶೇಖ್ ಹಸೀನಾ ಭಾರತಕ್ಕೆ ಪರಾರಿಯಾಗಿದ್ದೇಕೆ? ಮುಂದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bangladesh Protest: ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಹಿಂದೆ ಬೇರೆ ದೇಶಗಳ ಕೈವಾಡವಿದೆಯೇ?; ರಾಹುಲ್‌ ಗಾಂಧಿ ಪ್ರಶ್ನೆ

Bangladesh Protest: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖ್‌ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯಲ್ಲಿ ಅವಲೋಕಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಿದರು.

VISTARANEWS.COM


on

Bangladesh Protest
Koo

ನವದೆಹಲಿ: ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು (Bangladesh Protest), ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖ್‌ ಹಸೀನಾ (Sheik Hasina) ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯಲ್ಲಿ ಅವಲೋಕಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ (S Jaishankar) ಅವರು ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು, ʼʼಕಳೆದ ಕೆಲವು ವಾರಗಳಲ್ಲಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ನಾಟಕೀಯ ಬೆಳವಣಿಗೆಗಳಲ್ಲಿ ವಿದೇಶಿ ಶಕ್ತಿಗಳು ವಿಶೇಷವಾಗಿ ಪಾಕಿಸ್ತಾನದ ಕೈವಾಡ ಇರಬಹುದೆ?ʼʼ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರ ಈ ಕೋನದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಪ್ರತಿಬಿಂಬಿಸಲು ಪಾಕಿಸ್ತಾನದ ರಾಜತಾಂತ್ರಿಕರೊಬ್ಬರು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ನಿರಂತರವಾಗಿ ಫೋಟೊ ಹಂಚಿಕೊಳ್ಳುತ್ತಿದ್ದಾರೆ. ಇದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಕೇಂದ್ರ ಹೇಳಿದೆ.

ಸರ್ಕಾರದ ಕಾರ್ಯ ತಂತ್ರವೇನು?

ಢಾಕಾದಲ್ಲಿನ ಅಧಿಕಾರ ಹಸ್ತಾಂತರದ ರಾಜತಾಂತ್ರಿಕ ಪರಿಣಾಮಗಳನ್ನು ಎದುರಿಸುವಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಅಲ್ಪಾವಧಿ ಮತ್ತು ದೀರ್ಘಕಾಲೀನ ಕಾರ್ಯತಂತ್ರವೇನು ? ಎಂದೂ ರಾಹುಲ್ ಗಾಂಧಿ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಜೈಶಂಕರ್‌, ʼʼಸದ್ಯ ಬಾಂಗ್ಲಾದೇಶದಲ್ಲಿ ರಾಜಕೀಯ ಚಟುವಟಿಕೆ ನಡೆಯುತ್ತಿದ್ದು, ಈಗಲೇ ಯಾವುದನ್ನೂ ನಿರ್ಧರಿಸಲು ಸಾಧ್ಯವಿಲ್ಲ. ಅಲ್ಲಿನ ಬೆಳವಣಿಗೆಯನ್ನೂ ಸೂಕ್ಷ್ಮವಾಗಿ ಪರಿಶೀಲಿಸಿ ಮುಂದಿನ ನಡೆ ತೀರ್ಮಾನಿಸಲಾಗುವುದುʼʼ ಎಂದು ತಿಳಿಸಿದರು.

ಬಾಂಗ್ಲಾದೇಶದಲ್ಲಿ ನಡೆದ ನಾಟಕೀಯ ತಿರುವನ್ನು ಮೊದಲೇ ಊಹಿಸಲಾಗಿತ್ತೆ ? ಎಂಬ ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಶಂಕರ್‌, ʼʼಭಾರತವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿತ್ತುʼʼ ಎಂದು ಹೇಳಿದರು. ಇದೇ ವೇಳೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳ ನಾಯಕರು ನೆರೆ ದೇಶದ ಈ ಬಿಕ್ಕಟ್ಟನ್ನು ನಿಭಾಯಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಲಿದೆ ಎಂದು ಭರವಸೆ ನೀಡಿದರು.

ಸಭೆಯ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಮಾಹಿತಿ ನೀಡಿದ ವಿದೇಶಾಂಗ ಸಚಿವ ಜೈಶಂಕರ್‌ ಅವರು, ಪ್ರತಿಪಕ್ಷಗಳ ಸರ್ವಾನುಮತದ ಬೆಂಬಲವನ್ನು ಶ್ಲಾಘಿಸಿದರು. “ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಂದು ಸಂಸತ್ತಿನಲ್ಲಿ ಆಯೋಜಿಸಿದ್ದ ಸರ್ವಪಕ್ಷ ಸಭೆಯಲ್ಲಿ ವಿವರಿಸಿದ್ದೇನೆ. ಬಳಿಕ ಈ ವಿಚಾರದಲ್ಲಿ ಬೆಂಬಲ ನೀಡುವುದಾಗಿ ಎಲ್ಲ ಪಕ್ಷಗಳ ಮುಖಂಡರು ತಿಳಿಸಿದ್ದಾರೆʼʼ ಎಂದು ಬರೆದುಕೊಂಡಿದ್ದಾರೆ.

ಪರಿಸ್ಥಿತಿಯ ಅವಲೋಕನ

ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಜೈಶಂಕರ್‌, ʼʼಪ್ರಸ್ತುತ ದೆಹಲಿಯಲ್ಲಿರುವ ಶೇಖ್ ಹಸೀನಾ ಅವರು ಚೇತರಿಸಿಕೊಳ್ಳಲಿ. ಅವರಿಗಾಗಿ ಸ್ವಲ್ಪ ಸಮಯಾವಕಾಶ ನೀಡೋಣ. ಬಳಿಕ ಮುಂದಿನ ಕ್ರಮದ ಬಗ್ಗೆ ಕೇಂದ್ರ ಅವರೊಂದಿಗೆ ಸಮಾಲೋಚನೆ ನಡೆಸಲಿದೆ. ಸರ್ಕಾರ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಜತೆಗೆ ಬಾಂಗ್ಲಾದೇಶದ ಸೇನೆಯೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಶೇಖ್ ಹಸೀನಾ ಭಾರತಕ್ಕೆ ಬಂದ ನಂತರ ನಡೆಯುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆʼʼ ಎಂದು ತಿಳಿಸಿದರು.

ಇದನ್ನೂ ಓದಿ: Bangladesh Protest: ಮುಸ್ಲಿಂ ದೇಶಗಳಲ್ಲಿ ಯಾರೂ ಸುರಕ್ಷಿತರಲ್ಲ; ಮತ್ತೊಂದು ಕಿಡಿ ಹೊತ್ತಿಸಿದ ಕಂಗನಾ ರಣಾವತ್

Continue Reading

ವಾಣಿಜ್ಯ

Stock Market: ಮಹಾ ಕುಸಿತದಿಂದ ಚೇತರಿಕೆಯ ಹಾದಿಯಲ್ಲಿ ಷೇರುಪೇಟೆ; ಸೆನ್ಸೆಕ್ಸ್‌ 921, ನಿಫ್ಟಿ 285 ಪಾಯಿಂಟ್‌ ಜಿಗಿತ

Stock Market: ಸೋಮವಾರದ ಮಹಾಕುಸಿತದಿಂದ ಭಾರತೀಯ ಷೇರುಪೇಟೆ ಚೇತರಿಸಿಕೊಳ್ಳುತ್ತಿದೆ. ಮಂಗಳವಾರ ಬಿಎಸ್ಇ ಸೆನ್ಸೆಕ್ಸ್ (Sensex) 921 ಪಾಯಿಂಟ್ಸ್ ಅಥವಾ ಶೇ. 1.23ರಷ್ಟು ಏರಿಕೆ ಕಂಡು 79,680ಕ್ಕೆ ತಲುಪಿದರೆ ನಿಫ್ಟಿ 50 (Nifty) ಶೇ. 1.09ರಷ್ಟು ಅಥವಾ 262 ಪಾಯಿಂಟ್ಸ್ ಏರಿಕೆ ಕಂಡು 24,318 ಅಂಕಗಳ ಗಡಿ ದಾಟಿದೆ.

VISTARANEWS.COM


on

Stock Market
Koo

ಮುಂಬೈ: ಅಮೆರಿಕದ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಸೋಮವಾರ (ಆಗಸ್ಟ್‌ 5) ಪಾತಾಳಕ್ಕೆ ಕುಸಿದಿದ್ದ ಭಾರತೀಯ ಷೇರುಪೇಟೆ (Stock Market) ಇಂದು (ಆಗಸ್ಟ್‌ 6) ಚೇತರಿಸಿಕೊಂಡಿದ್ದು ಮತ್ತೆ ಏರುಗತಿಯಲ್ಲಿದೆ. ಜಾಗತಿಕ ಮಾರುಕಟ್ಟೆಗಳ ಒತ್ತಡದಿಂದ ಕುಸಿದಿದ್ದ ಷೇರು ಮಾರುಕಟ್ಟೆಯಲ್ಲಿ ಲವಲವಿಕೆ ಕಂಡು ಬಂದಿದೆ. ಮಂಗಳವಾರ ಬಿಎಸ್ಇ ಸೆನ್ಸೆಕ್ಸ್ (Sensex) 921 ಪಾಯಿಂಟ್ಸ್ ಅಥವಾ ಶೇ. 1.23ರಷ್ಟು ಏರಿಕೆ ಕಂಡು 79,680ಕ್ಕೆ ತಲುಪಿದರೆ ನಿಫ್ಟಿ 50 (Nifty) ಶೇ. 1.09ರಷ್ಟು ಅಥವಾ 262 ಪಾಯಿಂಟ್ಸ್ ಏರಿಕೆ ಕಂಡು 24,318 ಅಂಕಗಳ ಗಡಿ ದಾಟಿದೆ.

ಎನ್ಎಸ್ಇ (NSE)ಯಲ್ಲಿ ಟಾಟಾ ಮೋಟಾರ್ಸ್, ಲಾರ್ಸೆನ್ ಮತ್ತು ಟೂಬ್ರೊ (L&T) ಹಾಗೂ ಒಎನ್‌ಜಿಸಿ ಲಾಭ ಗಳಿಸಿದರೆ, ಎಸ್‌ಬಿಐ ಲೈಫ್, ಅಪೊಲೊ ಆಸ್ಪತ್ರೆ ಮತ್ತು ನೆಸ್ಲೆ ಇಂಡಿಯಾ ನಷ್ಟದತ್ತ ಮುಖ ಮಾಡಿದವು. ಬಿಎಸ್ಇ (BSE)ಯಲ್ಲಿ ಟಾಟಾ ಮೋಟಾರ್ಸ್, ಅದಾನಿ ಪೋರ್ಟ್ಸ್ ಮತ್ತು ಎಲ್ & ಟಿ ಶೇ. 3ರಷ್ಟು ಏರಿಕೆ ಕಂಡರೆ, ಮಾರುತಿ, ಟಾಟಾ ಸ್ಟೀಲ್ ಮತ್ತು ಜೆಎಸ್‌ಡಬ್ಲ್ಯು ಸ್ಟೀಲ್ ಮೌಲ್ಯ ತಲಾ ಶೇ. 2ರಷ್ಟು ಏರಿಕೆಯಾಗಿದೆ.

ಹೂಡಿಕೆದಾರರ ಸಂಪತ್ತು 7 ಲಕ್ಷ ಕೋಟಿ ರೂ. ಹೆಚ್ಚಳ

ಮುಂಬೈ ಷೇರುಪೇಟೆ ಬಿಎಸ್‌ಇ ಸೆನ್ಸೆಕ್ಸ್ ಮಾರುಕಟ್ಟೆ ಕ್ಯಾಪ್ ಬರೋಬ್ಬರಿ 449 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಈ ಮೂಲಕ ಹೂಡಿಕೆದಾರರು ಅರ್ಧ ಗಂಟೆಯಲ್ಲಿ 7 ಲಕ್ಷ ಕೋಟಿ ರೂ. ಸಂಪಾದಿಸಿದ್ದಾರೆ. ಕಳೆದ ವಹಿವಾಟಿನಲ್ಲಿ ಇದರ ಮೌಲ್ಯ 442 ಲಕ್ಷ ಕೋಟಿ ರೂಪಾಯಿ ಆಗಿತ್ತು. ಈ ಮಧ್ಯೆ ಇಂದು ರೂಪಾಯಿಯ ಮೌಲ್ಯ ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದು, ಡಾಲರ್‌ ವಿರುದ್ಧ 83.8950ಕ್ಕೆ ತಲುಪಿದೆ.

ಏಷ್ಯಾ-ಪೆಸಿಫಿಕ್ ಮಾರುಕಟ್ಟೆಯಲ್ಲಿಯೂ ಚೇತರಿಕೆ

ಇತ್ತ ಏಷ್ಯಾ-ಪೆಸಿಫಿಕ್ ಮಾರುಕಟ್ಟೆಗಳಲ್ಲಿಯೂ ಚೇತರಿಕೆ ಕಂಡು ಬಂತು. ಜಪಾನ್‌ನ ಮಾರುಕಟ್ಟೆಗಳು ಅತಿ ಹೆಚ್ಚಿನ ಪ್ರಗತಿ ಸಾಧಿಸಿವೆ. ನಿಕ್ಕಿ 225 (Nikkei 225) ಶೇ. 9.87ರಷ್ಟು ಮತ್ತು ಬ್ರಾಡ್ ಬೇಸ್ಡ್ ಟೋಪಿಕ್ಸ್ (Topix) ಶೇ. 9.95ರಷ್ಟು ಏರಿಕೆಯಾಗಿದೆ. ಹಿಂದಿನ ವಹಿವಾಟಿನಲ್ಲಿ ನಿಕ್ಕಿ 225 ಮತ್ತು ಟೋಪಿಕ್ಸ್ ಶೇ. 12ಕ್ಕಿಂತ ಹೆಚ್ಚು ಕುಸಿದಿದ್ದವು. ಇಂದು ಭರ್ಜರಿಯಾಗಿ ಕಂಬ್ಯಾಕ್‌ ಮಾಡಿದ ಜಪಾನ್ ಷೇರುಗಳು ತೀವ್ರವಾಗಿ ಚೇತರಿಸಿಕೊಂಡವು. ಇತ್ತ ಅಮೆರಿಕಾದ ಸ್ಟಾಕ್ ಫ್ಯೂಚರ್ಸ್‌ ಶೇ. 1ರಷ್ಟು ಏರಿಕೆಗೊಂಡಿದೆ.

ಇದನ್ನೂ ಓದಿ: Indian Currency: 2000 ರೂ. ನೋಟು ತಯಾರಿಸಲು 4 ರೂ. ಖರ್ಚು; 10 ರೂ. ನೋಟು ಮುದ್ರಿಸಲು 96 ಪೈಸೆ ಬೇಕು!

ಸೋಮವಾರದ ಮಹಾ ಕುಸಿತದಿಂದ ಚೇತರಿಕೆ

ಸೋಮವಾರ ಬಿಎಸ್‌ಇ ಸೆನ್ಸೆಕ್ಸ್ 2,393 ಪಾಯಿಂಟ್ಸ್ ಕುಸಿದು 78,588ಕ್ಕೆ ತಲುಪಿದರೆ, ನಿಫ್ಟಿ 50 ಸೂಚ್ಯಂಕವು ಆರಂಭಿಕ ವ್ಯವಹಾರಗಳಲ್ಲಿ 405 ಪಾಯಿಂಟ್ಸ್ ಕುಸಿದು 24,302 ಮಟ್ಟಕ್ಕೆ ಬಂದು ಮುಟ್ಟಿತ್ತು. ಕೆಲವೇ ಗಂಟೆಗಳಲ್ಲಿ ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ. ನಷ್ಟವಾಗಿತ್ತು. ಸದ್ಯ ಈ ಮಹಾಕುಸಿತದಿಂದ ದೇಶಿಯ ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದ್ದು ಹೂಡಿಕೆದಾರರು ನಿರಾಳರಾಗಿದ್ದಾರೆ. ಭಾರತ ಮಾತ್ರವಲ್ಲ ಏಷ್ಯನ್ ಮಾರುಕಟ್ಟೆಯಲ್ಲಿಯೂ ಸೋಮವಾರ ಕುಸಿತ ಕಂಡುಬಂದಿತ್ತು. ಜಪಾನ್‌ನ ನಿಕ್ಕಿ ಶೇ. 4.63 ಮತ್ತು ಹಾಂಗ್‌ಕಾಂಗ್‌ನ ಹ್ಯಾಂಗ್ ಸೆಂಗ್ ಶೇ. 0.58ರಷ್ಟು ಕುಸಿದಿತ್ತು. ಚೀನಾದ ಶಾಂಘೈ ಕಾಂಪೋಸಿಟ್ ಕೂಡ ಶೇ. 0.22ರಷ್ಟು ಇಳಿಕೆ ಕಂಡಿತ್ತು.

Continue Reading

ಪ್ರಮುಖ ಸುದ್ದಿ

Muhammad Yunus : ನೊಬೆಲ್ ಪುರಸ್ಕೃತ ಮುಹಮ್ಮದ್ ಯೂನುಸ್​ ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ

Muhammad Yunus : ಮಧ್ಯಂತರ ಸರ್ಕಾರವನ್ನು ರಚಿಸಲು ನಾವು ನಿರ್ಧರಿಸಿದ್ದೇವೆ. ಇದರಲ್ಲಿ ದೇಶವಾಸಿಗಳ ವಿಶ್ವಾಸ ಹೊಂದಿರುವ ಅಂತರರಾಷ್ಟ್ರೀಯ ಖ್ಯಾತಿಯ ನೊಬೆಲ್ ಪ್ರಶಸ್ತಿ ವಿಜೇತ ಡಾ.ಮೊಹಮ್ಮದ್ ಯೂನುಸ್ ಮುಖ್ಯ ಸಲಹೆಗಾರರಾಗಿರುತ್ತಾರೆ ಎಂದು ನಹೀದ್ ಘೋಷಿಸಿದ್ದಾರೆ.

VISTARANEWS.COM


on

Muhammad Yunus
Koo

ನವದೆಹಲಿ: ಬಡತನದ ವಿರುದ್ಧದ ಹೋರಾಟಗಾರ ಹಾಗೂ ‘ಬಡವರ ಬ್ಯಾಂಕರ್’ ಎಂದೇ ಖ್ಯಾತಿ ಹೊಂದಿರುವ ನೊಬೆಲ್ ಪ್ರಶಸ್ತಿ ವಿಜೇತ ಡಾ.ಮುಹಮ್ಮದ್ ಯೂನುಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಲಿದ್ದಾರೆ. ಆ ದೇಶದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಚಳವಳಿಯ ಸಂಯೋಜಕರು ತಿಳಿಸಿದ್ದಾರೆ ಈ ಮಾಹಿತಿ ಪ್ರಕಟಿಸಿದ್ದಾರೆ ಎಂಬುದಾಗಿ ಡೈಲಿ ಸ್ಟಾರ್ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊವೊಂದರಲ್ಲಿಯೂ ಈ ಮಾಹಿತಿ ನೀಡಲಾಗಿದೆ. ಶೇಖ್ ಹಸೀನಾ ಅವರ ಪದಚ್ಯುತಿಗೆ ಕಾರಣವಾದ ಆಂದೋಲನದ ಪ್ರಮುಖ ಸಂಯೋಜಕರಲ್ಲಿ ಒಬ್ಬರಾದ ನಹೀದ್ ಇಸ್ಲಾಂ ಈ ವಿವರಣೆ ನೀಡಿದ್ದರೆ. ದೇಶದ ಪರಿಸ್ಥಿತಿಯನ್ನು ಪರಿಗಣಿಸಿ ಪ್ರೊಫೆಸರ್ ಯೂನುಸ್ ಜವಾಬ್ದಾರಿ ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಧ್ಯಂತರ ಸರ್ಕಾರವನ್ನು ರಚಿಸಲು ನಾವು ನಿರ್ಧರಿಸಿದ್ದೇವೆ. ಇದರಲ್ಲಿ ದೇಶವಾಸಿಗಳ ವಿಶ್ವಾಸ ಹೊಂದಿರುವ ಅಂತರರಾಷ್ಟ್ರೀಯ ಖ್ಯಾತಿಯ ನೊಬೆಲ್ ಪ್ರಶಸ್ತಿ ವಿಜೇತ ಡಾ.ಮೊಹಮ್ಮದ್ ಯೂನುಸ್ ಮುಖ್ಯ ಸಲಹೆಗಾರರಾಗಿರುತ್ತಾರೆ ಎಂದು ನಹೀದ್ ಘೋಷಿಸಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ಬಗ್ಗೆ ವ್ಯಾಪಕ ವಿರೋಧ ವ್ಯಕ್ತಗೊಂಡಿತ್ತು. ಆ ಬಳಿಕ ಉಂಟಾದ ಅರಾಜಕತೆಯಿಂದಾಗಿ ಪ್ರಧಾನಿ ಹಸೀನಾ ಆಡಳಿತದ ಪತನಗೊಂಡಿತ್ತು. ಇನ್ನು ಮಧ್ಯಂತರ ಸರ್ಕಾರವನ್ನು ರಚಿಸಲಾಗುವುದು ಎಂದು ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಹೇಳಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಒಂದು ತಿಂಗಳ ಕಾಲ ನಡೆದ ಪ್ರತಿಭಟನೆಯಲ್ಲಿ 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡುವಂತೆ ಅಧ್ಯಕ್ಷರು ಆದೇಶಿಸಿದ್ದಾರೆ.

ಯೂನುಸ್ ಅವರ ಸಾರ್ವಜನಿಕ ಪ್ರೊಫೈಲ್ ಮತ್ತು ಪಾಶ್ಚಿಮಾತ್ಯ ದೇಶಗಳೊಂದಿಗೆ ವಿಶೇಷವಾಗಿ ಅಮೆರಿಕದೊಂದಿಗೆ ಅವರ ನಿಕಟ ಸಂಪರ್ಕ ಹೊಂದಿದ್ದರು. ಹೀಗಾಗಿ 2008ರಲ್ಲಿ ಅಧಿಕಾರಕ್ಕೆ ಮರಳಿದಾಗಿನಿಂದ ಹಸೀನಾ ಅವರೊಂದಿಗೆ ಒಳ್ಳೆಯ ಸಂಬಂಧ ಹೊಂದಿರಲಿಲ್ಲಲ. 2011 ರಲ್ಲಿ,ಹಸೀನಾ ನೇತೃತ್ವದ ಸರ್ಕಾರವು ಯೂನಸ್​ ಅವರನ್ನು ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ಬಲವಂತವಾಗಿ ವಜಾ ಮಾಡಿತ್ತು. ಅವರು ಕಾನೂನಾತ್ಮಕ 60 ವರ್ಷ ಮೀರಿದವರು ಎಂದು ಕಾರಣಕ್ಕೆ ನೀಡಿತ್ತು. ಅದೇ ರೀತಿ ಅವರು ಸಲಿಂಗಕಾಮದ ಉತ್ತೇಜಕ ಎಂದು ಆರೋಪಿಸಲಾಗಿತ್ತು. ಯೂನುಸ್ ವಿರುದ್ಧ ಹಸೀನಾ ಸರ್ಕಾರ 190ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ.

ಮುಹಮ್ಮದ್ ಯೂನುಸ್ ಯಾರು?

ಬಾಂಗ್ಲಾದೇಶದಲ್ಲಿ ಲಕ್ಷಾಂತರ ಜನರನ್ನು ಬಡತನದಿಂದ ಹೊರತರುವಲ್ಲಿ ಮಾಡಿದ ಕೆಲಸಕ್ಕಾಗಿ 83 ವರ್ಷದ ಅವರಿಗೆ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿತ್ತು. ಅವರು ಸ್ಥಾಪಿಸಿದ ಮೈಕ್ರೋಫೈನಾನ್ಸ್ ಸಾಲದಾತ ಗ್ರಾಮೀಣ ಬ್ಯಾಂಕ್ ಬಾಂಗ್ಲಾದೇಶದ ಗ್ರಾಮೀಣ ಬಡವರಿಗೆ ಸಣ್ಣ ಸಾಲಗಳನ್ನು ನೀಡುತ್ತದೆ. ಇದು ದೇಶದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಿದೆ.

ಇದನ್ನೂ ಓದಿ: Bangladesh Protest : ಬಾಂಗ್ಲಾದೇಶ ಬಿಕ್ಕಟ್ಟು; ಸರ್ವಪಕ್ಷ ಸಭೆ ಕರೆದ ವಿದೇಶಾಂಗ ಸಚಿವ ಜೈಶಂಕರ್

ಈ ವರ್ಷದ ಆರಂಭದಲ್ಲಿ, ದೇಶದ ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಯೂನುಸ್​ಗೆ ಶಿಕ್ಷೆ ವಿಧಿಸಲಾಯಿತು. ದೇಶದ ಅತಿದೊಡ್ಡ ಮೊಬೈಲ್ ಫೋನ್ ಕಂಪನಿಯಾದ ಗ್ರಾಮೀಣ ಫೋನ್​ನಲ್ಲಿ ಪಾಲನ್ನು ಹೊಂದಿರುವ ಗ್ರಾಮೀಣ ಟೆಲಿಕಾಂನ ಕಾರ್ಮಿಕರ ಕಲ್ಯಾಣ ನಿಧಿಯಿಂದ 2 ಮಿಲಿಯನ್ ಡಾಲರ್ ದುರುಪಯೋಗಪಡಿಸಿದ ಆರೋಪದ ಮೇಲೆ ಬಾಂಗ್ಲಾದೇಶದ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು.

1940 ರಲ್ಲಿ ಚಿತ್ತಗಾಂಗ್​​ನಲ್ಲಿ ಜನಿಸಿದ ಮುಹಮ್ಮದ್ ಯೂನುಸ್, ಅಮೆರಿಕದಲ್ಲಿ ವಾಂಡರ್ಬಿಲ್ಟ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಅಧ್ಯಯನ ಮಾಡಿದ್ದರು. ಅದಕ್ಕೆ ಮೊದಲು ಢಾಕಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದರು. ಯೂನುಸ್ ಬಾಂಗ್ಲಾದೇಶಕ್ಕೆ ಮರಳುವ ಮೊದಲು ಮಿಡಲ್ ಟೆನ್ನೆಸ್ಸೀ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರು.

Continue Reading

ದೇಶ

Wayanad Landslide: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 402: ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕ ಶವ ಸಂಸ್ಕಾರ

Wayanad Landslide: ವಯನಾಡು ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಇದಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಗುರುತು ಸಿಗದ ಮೃತದೇಹಗಳಿಗೆ ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕವಾಗಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ. ಪುತ್ತುಮಲ ಎಂಬಲ್ಲಿ ಸೋಮವಾರ 29 ಮೃತದೇಹ ಮತ್ತು 154 ದೇಹದ ಭಾಗಗಳ ಅಂತಿಮ ಕ್ರಿಯೆಯನ್ನು ಹಿಂದು, ಕ್ರಿಶ್ಚಿಯನ್‌ ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ಬಳಿಕ ನೆರವೇರಿಸಲಾಯಿತು.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳ ಮಾತ್ರವಲ್ಲ ದೇಶವನ್ನೇ ಬೆಚ್ಚಿಬೀಳಿಸಿದ್ದ ವಯನಾಡು ಭೂಕುಸಿತ (Wayanad Landslide) ಸಂಭವಿಸಿ ಇಂದಿಗೆ 1 ವಾರ. ಈಗಲೂ ಮೃತದೇಹ ಪತ್ತೆಯಾಗುತ್ತಲೇ ಇದೆ. ಸದ ಪ್ರವಾಸಿಗರಿಂದ ಗಿಜಿಗುಡುತ್ತಿದ್ದ ವಯನಾಡಿನ ಮೇಪ್ಪಾಡಿಯಲ್ಲಿ ಈಗ ಸ್ಮಶಾನ ಮೌನ ಆವರಿಸಿದೆ ಮತ್ತು ಕಣ್ಣೀರಿನ ಕಥೆಗಳೇ ತುಂಬಿಕೊಂಡಿದೆ. ಕಂಡು ಕೇಳರಿಯದ ಈ ಭೀಕರ ದುರಂತದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 402ಕ್ಕೆ ಏರಿದ್ದು, ಇನ್ನೂ ನೂರಾರು ಮಂದಿ ಪತ್ತೆಯಾಗಬೇಕಿದೆ. ಇದಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಗುರುತು ಸಿಗದ ಮೃತದೇಹಗಳಿಗೆ ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕವಾಗಿ ಅಂತಿಮ ವಿಧಿ ವಿಧಾನ ನಡೆಸಲಾಗುತ್ತಿದೆ.

ಪುತ್ತುಮಲ ಎಂಬಲ್ಲಿ ಸೋಮವಾರ 29 ಮೃತದೇಹ ಮತ್ತು 154 ದೇಹದ ಭಾಗಗಳ ಅಂತಿಮ ಕ್ರಿಯೆಯನ್ನು ಹಿಂದು, ಕ್ರಿಶ್ಚಿಯನ್‌ ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ಬಳಿಕ ನೆರವೇರಿಸಲಾಯಿತು. ಅಪರಾಹ್ನ ಆರಂಭವಾದ ಈ ಪ್ರಕ್ರಿಯೆ ಮಧ್ಯರಾತ್ರಿ ವೇಳೆ ಪೂರ್ತಿಯಾಯಿತು.

ಅವಶೇಷಗಳಡಿ ಸಿಕ್ಕ ಶರೀರದ ಭಾಗಗಳನ್ನೂ ಮೃತದೇಹವೆಂದು ಪರಿಗಣಿಸಿ ಅದಕ್ಕೆ ತಕ್ಕಂತೆ ವಿಧಿ ವಿಧಾನ ನಡೆಸಲಾಯಿತು. ಪ್ರತಿ ಮೃತದೇಹದ ಮುಂಭಾಗದಲ್ಲಿ ಮೊದಲಿಗೆ ಕ್ರಿಶ್ಚಿಯನ್‌ ಬಳಿಕ ಹಿಂದು ಮತ್ತು ಮುಸ್ಲಿಂ ಧರ್ಮದ ಪ್ರಾರ್ಥನೆ ನಡೆಸಿ ನಂತರ ಅಂತ್ಯ ಸಂಸ್ಕಾರ ನಡೆಸಿ ಮಣ್ಣು ಮಾಡಲಾಯಿತು.

ʼʼಮೃತದೇಹದ ಭಾಗಗಳ ಫೋಟೊ, ರಕ್ತದ ಮಾದರಿ, ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿ ಇಡಲಾಗುತ್ತಿದೆ. ಭವಿಷ್ಯದಲ್ಲಿ ವಾರಸುದಾರರಿಗೆ ಗುರುತು ಹಿಡಿಯಲು ಸಹಾಯವಾಗುವಂತೆ ಆಲ್ಬಂ ಮಾಡಿ ಇರಿಸಲಾಗುವುದುʼʼ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ʼʼಇದೊಂದು ಭಾವನಾತ್ಮಕ ಕ್ಷಣವಾಗಿತ್ತು. ಮೃತದೇಹದ ಕೆಲವೇ ಭಾಗಗಳು ದೊರೆತ ಹಿನ್ನಲೆಯಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಸಿ ಅವರ ಅಂತಿಮ ಸಂಸ್ಕಾರ ನಡೆಸಲಾಗಿದೆʼʼ ಎಂದು ಸ್ಥಳೀಯರು ತಿಳಿಸಿದ್ದಾರೆ. ಆ್ಯಂಬುಲೆನ್ಸ್‌ ಮೂಲಕ ಮೃತದೇಹ ಮತ್ತು ಮೃತದೇಹದ ಭಾಗಗಳನ್ನು ತಂದು ಇದಕ್ಕಾಗಿ ಸಜ್ಜುಗೊಳಿಸಿದ್ದ ಟೇಬಲ್‌ ಮೇಲಿರಿಸಿ ಪ್ರಾರ್ಥನೆ ಸಲ್ಲಿಸುವಾಗ ಸ್ಥಳದಲ್ಲಿದ್ದವರು ಭಾವುಕರಾದರು.

ಅವಘಡ ನಡೆದ ಸ್ಥಳಗಳ ಮಣ್ಣು, ಅವಶೇಷಗಳ ರಾಶಿ ಅಡಿಯಲ್ಲಿ ಸುಮಾರು 180 ಮೃತದೇಹದ ಭಾಗಗಳು ಕಂಡು ಬಂದಿವೆ. ಇನ್ನೂ ಸುಮಾರು 180 ಮಂದಿ ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ಮುಂದುವರಿದಿದೆ. ಗಾಯಗೊಂಡ 91 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಮಾರು 16 ಕಾಳಜಿ ಕೇಂದ್ರಗಳಲ್ಲಿ 2,514 ಸಂತ್ರಸ್ತರು ಆಶ್ರಯ ಪಡೆದಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡಿಗಾಗಿ ಮಿಡಿಯಿತು ವಿದೇಶಿಗರ ಮನ; ಸಂತ್ರಸ್ತರ ನೆರವಿಗೆ ಧಾವಿಸಿದ ಇಂಗ್ಲೆಂಡ್‌ನ ವಿದ್ಯಾರ್ಥಿನಿಯರು

ಇಂದು ಸೂಜಿಪಾರದಲ್ಲಿ ಹುಡುಕಾಟ ನಡೆಯಲಿದೆ. ಈ ಹಿಂದೆ ಕಾರ್ಯಾಚರಣೆ ನಡೆಸಲು ಸಾಧ್ಯವಾಗದ ಭಾಗಗಳಿಗೆ ತೆರಳಿ ಸ್ವಯಂಸೇವಕರು ಕಾರ್ಯಾಚರಣೆ ನಡೆಸಲಿದ್ದಾರೆ. ಹೆಲಿಕಾಫ್ಟರ್‌ ಮೂಲಕ ರಕ್ಷಣಾ ಸಿಬ್ಬಂದಿ ಇಲ್ಲಿಗೆ ತೆರಳಲಿದ್ದಾರೆ. ತರಬೇತಿ ಪಡೆದ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ, ನಾಲ್ಕು ಮಂದಿ ಎಸ್‌ಒಜಿ, ಆರು ಮಂದಿ ಸೇನಾ ಸಿಬ್ಬಂದಿಯನ್ನು ಒಳಗೊಂಡ 12 ಮಂದಿಯ ತಂಡ ಪ್ರಯಾಣ ಬೆಳೆಸಲಿದೆ. ಸನ್‌ರೈಸ್‌ ವ್ಯಾಲಿಯ ಸುತ್ತಮುತ್ತ ಶೋಧ ಕಾರ್ಯ ನಡೆಯಲಿದೆ. ಮೃತದೇಹ ಕಂಡು ಬಂದರೆ ಅದನ್ನು ಸಾಗಿಸಲು ವಿಶೇಷ ಹೆಲಿಕಾಫ್ಟರ್‌ ಅನ್ನೂ ಸಜ್ಜುಗೊಳಿದಲಾಗಿದೆ ಎಂದು ಸಚಿವ ಕೆ.ರಾಜನ್‌ ತಿಳಿಸಿದ್ದಾರೆ. ಇದೇ ವೇಳೆ ದುರಂತ ನಡೆದ ಸ್ಥಳದಲ್ಲಿ ಸೇನೆ ತಿಳಿಸುವವರೆಗೆ ಹುಡುಕಾಟ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ.

Continue Reading
Advertisement
Hasin Jahan
ಕ್ರೀಡೆ8 mins ago

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Unique Village
Latest18 mins ago

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

C Kannada movie release on August 23
ಕರ್ನಾಟಕ39 mins ago

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Bangladesh Protest
ಪ್ರಮುಖ ಸುದ್ದಿ41 mins ago

Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು…

Gruha Lakshmi Scheme
ಪ್ರಮುಖ ಸುದ್ದಿ42 mins ago

Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

Murder Case
Latest45 mins ago

Murder Case: ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದು ಕೊಳಕ್ಕೆ ಎಸೆದ ಮಗಳು!

Bangladesh Protest
ದೇಶ48 mins ago

Bangladesh Protest: ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಹಿಂದೆ ಬೇರೆ ದೇಶಗಳ ಕೈವಾಡವಿದೆಯೇ?; ರಾಹುಲ್‌ ಗಾಂಧಿ ಪ್ರಶ್ನೆ

Self Harming
ಚಿತ್ರದುರ್ಗ50 mins ago

Self Harming: ಹೊಸದುರ್ಗದಲ್ಲಿ ಬ್ಯಾಂಕ್‌ ಆಫೀಸರ್‌ ಸೂಸೈಡ್‌; ರೈಲಿಗೆ ಸಿಲುಕಿ ಮತ್ತಿಬ್ಬರು ಸಾವು

Karnataka Trains
Latest54 mins ago

Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Sharan Prakash Patil
ಬೆಂಗಳೂರು1 hour ago

Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌