Self Harming: ಪತಿ ಬೈದಿದ್ದಕ್ಕೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ; ಬೆಚ್ಚಿ ಬೀಳಿಸುವ ವಿಡಿಯೊ - Vistara News

Latest

Self Harming: ಪತಿ ಬೈದಿದ್ದಕ್ಕೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ; ಬೆಚ್ಚಿ ಬೀಳಿಸುವ ವಿಡಿಯೊ

Self Harming: ಗಂಡ-ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂದು ಹೇಳುತ್ತಾರೆ. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಗಂಡ ಬೈದಿದ್ದಕ್ಕೆ ಇಲ್ಲೊಬ್ಬಳು ಮಹಿಳೆ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಡಿಯ ಮೇಲೆ ನಿಂತಿದ್ದ ಮಹಿಳೆಯನ್ನು ಹಿಂದಿನಿಂದ ಬಂದು ಗಂಡ ತಡೆಯಲು ಪ್ರಯತ್ನಿಸಿದ್ದಾನೆ. ಆದರೆ ಮಹಿಳೆ, ಅವನ ಮಾತನ್ನು ಕೇಳದೆ, ಮೂರನೇ ಮಹಡಿಯಿಂದ ಜಿಗಿದಿದ್ದಾಳೆ.ಪತಿಯೊಂದಿಗೆ ಜಗಳವಾಡಿದ ನಂತರ ಅವಳು ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಳು ಎನ್ನಲಾಗಿದೆ.

VISTARANEWS.COM


on

Self Harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಇಂದೋರ್: ಪತಿ ಪತ್ನಿಯರ ನಡುವೆ ಜಗಳ, ಗಲಾಟೆ ನಡೆಯುವುದು ಸಹಜ. ಈ ವಿಚಾರ ತಿಳಿದು ಅನುಸರಿಸಿಕೊಂಡು ಬಾಳಿದರೆ ದಂಪತಿ ನಡುವೆ ಸಾಮರಸ್ಯ ಹೆಚ್ಚಾಗುತ್ತದೆ. ಆದರೆ ಕೆಲವರು ಸಣ್ಣ ವಿಚಾರಕ್ಕೆ ದುಡುಕಿನ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದ ಇಬ್ಬರ ಜೀವನ ಹಾಳಾಗುತ್ತದೆ. ಎಷ್ಟೋ ಮಹಿಳೆಯರು ಪತಿ ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದೀಗ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪತಿಯೊಂದಿಗೆ ಜಗಳವಾಡಿದ ಮಹಿಳೆ ಮಹಡಿಯಿಂದ ಜಿಗಿದು ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪತಿಯ ಜೊತೆ ಜಗಳವಾಡಿ ನೊಂದ 27 ವರ್ಷದ ಮಹಿಳೆ ತಾನು ವಾಸವಿದ್ದ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ಇಂದೋರ್‌ನ ಲಸುಡಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಾಪುರ್ ಟೌನ್‍ಶಿಪ್‌ನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಮಹಿಳೆ ಯಾವುದೇ ಭಯವಿಲ್ಲದೆ ಮಹಡಿಯಿಂದ ಜಿಗಿಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ. ಈ ವಿಡಿಯೊ ವೈರಲ್ ಆಗಿದೆ. ಈ ವೈರಲ್ ಕ್ಲಿಪ್‍ನಲ್ಲಿ ಸೀರೆ ಉಟ್ಟ ಮಹಿಳೆ ಟೆರೇಸ್‍ನ ಅಂಚಿನಲ್ಲಿ ನಿಂತಿದ್ದಾಳೆ. ಆದರೆ ಒಬ್ಬ ವ್ಯಕ್ತಿ ಹಿಂದಿನಿಂದ ಬಂದು ಅವಳನ್ನು ತಡೆಯಲು ಪ್ರಯತ್ನಿಸುತ್ತಾನೆ. ಮಹಿಳೆ, ಅವನ ಮಾತನ್ನು ಕೇಳದೆ, ಮೂರನೇ ಮಹಡಿಯಿಂದ ಜಿಗಿದಳು. ಪತಿಯೊಂದಿಗೆ ಜಗಳವಾಡಿದ ನಂತರ ಅವಳು ಈ ಕಠಿಣ ನಿರ್ಧಾರವನ್ನು ತೆಗೆದುಕೊಂಡಳು ಎನ್ನಲಾಗಿದೆ.

ಇದನ್ನೂ ಓದಿ: ಮಗನನ್ನೇ ಹೊಡೆದು ಕೊಂದು, ಸುಟ್ಟು ಹಾಕಿ ಕೊಳಕ್ಕೆ ಎಸೆದ ತಂದೆ-ತಾಯಿ; ಹೃದಯ ತಲ್ಲಣಿಸುವ ವಿಡಿಯೊ

ಮೃತರನ್ನು ಇಡಬ್ಲ್ಯೂಎಸ್ ಕ್ವಾರ್ಟರ್ಸ್ ನಿವಾಸಿ ಅಂಗೂರಿ ಬಾಯಿ ಎಂದು ಗುರುತಿಸಲಾಗಿದೆ. ಪತಿ ಆಕೆಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಹಾಗಾಗಿ ಅವಳು ಕಟ್ಟಡದ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಮಹಿಳೆ ಸಾಗರ ಮೂಲದವಳು. ಆಕೆಯ ಪತಿ ರಾಹುಲ್ ಲೋಧಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

Amnesia Disease: ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ, ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

Unique Village
Koo


ಸಾಮಾನ್ಯವಾಗಿ ಮರೆಗುಳಿತನ ಸಮಸ್ಯೆ ವಯಸ್ಸಾದಂತೆ ಕಾಡುತ್ತದೆ. ಆದರೆ ಇತ್ತೀಚೆಗೆ ಇದು ಹೆಚ್ಚಿನ ಜನರಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಆದರೆ ಇಲ್ಲೊಂದು ವಿಚಿತ್ರವಾದ ಗ್ರಾಮವಿದೆ. ಈ ಗ್ರಾಮದಲ್ಲಿ ಬರೀ ಮರೆಗುಳಿತನ (Amnesia Disease) ಸಮಸ್ಯೆಯಿಂದ ಬಳಲುತ್ತಿರುವ ಜನರೇ ತುಂಬಿದ್ದಾರೆ. ಇಲ್ಲಿನ ಜನರಿಗೆ ಹಣದ ಅವಶ್ಯಕತೆಯೇ ಇಲ್ಲವಂತೆ. ಹಾಗಾದ್ರೆ ಈ ಗ್ರಾಮದಲ್ಲಿನ ಜನರು ಯಾಕೆ ಹೀಗಿದ್ದಾರೆ? ಇದಕ್ಕೆ ಕಾರಣವೇನು ಎಂಬುದರ ಮಾಹಿತಿ ಇಲ್ಲಿದೆ.

ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಅಲ್ಲದೇ ಲಾಂಡೈಸ್ ಗ್ರಾಮದಲ್ಲಿ ವಾಸಿಸುವ ಯಾರೂ ಹಣವನ್ನು ಸಂಪಾದಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಅವರು ಆ ಗ್ರಾಮದಲ್ಲಿ ಎಲ್ಲಿಗೇ ಹೋಗುವುದಾದರೂ ತಮ್ಮ ಪರ್ಸ್‌ಗಳನ್ನು ತೆಗೆದುಕೊಂಡು ಹೋಗಬೇಕಾಗಿಲ್ಲ. ಯಾಕೆಂದರೆ ಈ ಗ್ರಾಮದಲ್ಲಿರುವ ಯಾವ ಅಂಗಡಿಗಳೂ ಹಣವನ್ನು ಸ್ವೀಕರಿಸುವುದಿಲ್ಲ. ಅಲ್ಲದೇ ಈ ಗ್ರಾಮದಲ್ಲಿ ವಾಸಿಸಲು ಗ್ರಾಮಸ್ಥರು ವಾರ್ಷಿಕ € 28,000 ಶುಲ್ಕವನ್ನು ಪಾವತಿಸಿದರೆ ಸಾಕು. ಹೆಚ್ಚಿನ ನಿರ್ವಹಣಾ ವೆಚ್ಚಗಳನ್ನು ಪ್ರಾದೇಶಿಕ ಫ್ರೆಂಚ್ ಸರ್ಕಾರ ನೋಡಿಕೊಳ್ಳುತ್ತದೆ.

ಈ ಗ್ರಾಮದಲ್ಲಿ ಒಂದು ಮಹಡಿಯ ಮನೆಗಳಿರುತ್ತದೆ. ಪ್ರತಿಯೊಂದೂ ಮನೆಯಲ್ಲಿ ಎಂಟು ನಿವಾಸಿಗಳು ವಾಸವಾಗಿರುತ್ತಾರೆ. ಪ್ರತಿ ಮನೆ ಅಡುಗೆಮನೆ, ಕುಳಿತುಕೊಳ್ಳುವ ಮತ್ತು ಊಟದ ಕೋಣೆಗಳನ್ನು ಹೊಂದಿರುತ್ತದೆ. ಈ ಗ್ರಾಮದಲ್ಲಿ ಸುಮಾರು 120 ಜನರಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಈ ಗ್ರಾಮದಲ್ಲಿ ರೋಗಿಗಳ ಸೇವೆ ಮಾಡಲು ವೈದ್ಯರು, ನರ್ಸ್‌ಗಳು , ಜೆರೊಂಟೋಲಾಜಿಕಲ್ ಸಹಾಯಕರು, ಮನಶ್ಶಾಸ್ತ್ರಜ್ಞರು, ಔದ್ಯೋಗಿಕ ಚಿಕಿತ್ಸಕ, ಸೈಕೋಮೋಟರ್ ಥೆರಪಿಸ್ಟ್, ಆನಿಮೇಟರ್ಗಳು, ಜೊತೆಗೆ ಅಡುಗೆಯವರು, ಆಡಳಿತ ಸಿಬ್ಬಂದಿ ಇತ್ಯಾದಿಗಳನ್ನು ಒಳಗೊಂಡ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ.

ಇದನ್ನೂ ಓದಿ:  ಎಸ್ಕಲೇಟರ್ ಮೇಲೆ ಮಗುವನ್ನು ನಿಲ್ಲಿಸಲು ತಾಯಿಯ ಕಸರತ್ತು; ಮುಂದೇನಾಯ್ತು ನೋಡಿ

65 ವರ್ಷದ ಪ್ಯಾಟ್ರೀಷಿಯಾ ಎಂಬ ಲಾಂಡೈಸ್ ನಿವಾಸಿಯೊಬ್ಬರು ಈ ಗ್ರಾಮದ ಬಗ್ಗೆ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿ, “ಅಲ್ಝೈಮರ್ ರೋಗಕ್ಕೆ ಒಳಗಾದರೆ ಜೀವನ ಅಷ್ಟೊಂದು ಸುಲಭವಲ್ಲ ಎಂದು ನನಗೆ ತಿಳಿದಿತ್ತು. ಹಾಗಾಗಿ ನಾನು ಭಯಭೀತನಾಗಿದ್ದೆ. ನನಗೆ ಆರೋಗ್ಯ ಸರಿಯಿರಲಿಲ್ಲ. ನಾನು ದಣಿದಿದ್ದೆ. ಹಾಗಾಗಿ ನನಗೆ ಸಹಾಯ ಮಾಡಬಹುದಾದ ಯಾವುದಾದರೊಂದು ಆಶ್ರಮದಲ್ಲಿ ಇರಲು ಬಯಸುತ್ತಿದ್ದೆ. ಆದರೆ ಲಾಂಡೈಸ್ ನನ್ನ ಜೀವನವನ್ನು ಮರಳಿ ನೀಡಿದೆ. ಅಲ್ಲಿ ನನಗಾಗಿ ಅಡುಗೆ ಮಾಡಲು ಒಬ್ಬ ಮಹಿಳೆ ಇದ್ದಳು. ಇತರ ಆರೈಕೆ ಮನೆಗಳಲ್ಲಿ ಈ ತರಹದ ಸೌಲಭ್ಯಗಳಿರುವುದಿಲ್ಲ. ಆದರೆ ಇಲ್ಲಿ, ಜೀವನ ತುಂಬಾ ಸುಂದರವಾಗಿತ್ತು” ಎಂದು ಹೇಳಿದ್ದಾರೆ.

Continue Reading

ಕರ್ನಾಟಕ

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Kannada New Movie: ‘ಸಿ’ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಇದು ಕಿರಣ್ ಸುಬ್ರಮಣಿ ಅವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದ್ದು, ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

VISTARANEWS.COM


on

C Kannada movie release on August 23
Koo

ಬೆಂಗಳೂರು: ʼಸಿʼ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ (Kannada New Movie) ಈಗಾಗಲೇ ಟೀಸರ್ ಮತ್ತು ಕಂದಾ ಕಂದಾ ಎನ್ನುವ ಹಾಡಿನ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ. ಇದರ ಜತೆಗೆ ಸಿ ಸಿನಿಮಾಗೆ ನಟ ಯೋಗಿ ಮತ್ತು ಖ್ಯಾತ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಅವರ ಬೆಂಬಲ ಕೂಡ ಸಿಕ್ಕಿದೆ‌.

ಅಂದಹಾಗೆ ‘ಸಿ’ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ಸಿನಿಮಾ. ಕಿರಣ್ ನಿರ್ದೇಶನದ ಜತೆಗೆ ಸಿನಿಮಾದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಸಿನಿಮಾದಿಂದ ‘ಇದು ಎ ಅಲ್ಲ ಬಿ ಅಲ್ಲ ಸಿ…’ ಎನ್ನುವ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಎಬಿ ಮುರಳಿಧರನ್ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಶಶಾಂಕ್ ಶೇಷಗಿರಿ, ಸುರಭಿ ಭಾರದ್ವಜ್ ಹಾಗೂ ಜ್ಞಾನ ಹಾಡಿದ್ದಾರೆ. ಈ ಹಾಡಿಗೆ ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ.

ವಿಶೇಷ ಎಂದರೆ ಈ ಹಾಡನ್ನು ಲೂಸ್ ಮಾದ ಖ್ಯಾತಿಯ ನಟ ಯೋಗಿ ರಿಲೀಸ್ ಮಾಡಿದ್ದಾರೆ. ಹಾಡಿನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಯೋಗಿ ಹೊಸ ಸಿನಿಮಾ ತಂಡದ ಬೆನ್ನಿಗೆ ನಿಂತಿರುವುದು ಸಿ ಚಿತ್ರತಂಡಕ್ಕೆ ಖುಷಿ ತಂದಿದೆ. ಇನ್ನು ಖ್ಯಾತ ಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಕೂಡ ಸಿ ಸಿನಿಮಾದ ಹಾಡನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಇಡೀ ಸಿನಿಮಾಗೆ ಒಳ್ಳೆದಾಗಲಿ, ಕನ್ನಡ ಚಿತ್ರರಂಗ ಬೆಳೆಯಲಿ ಎಂದು ಅವರು ಹಾರೈಸಿದ್ದಾರೆ.

‘ಸಿ’ ಚಿತ್ರವು ಕಣ್ಣು ಕಾಣದ ಮಗಳು ಹಾಗೂ ಅಪ್ಪನ ನಡುವಿನ ಬಾಂಧವ್ಯದ ಬಗ್ಗೆ ಇದೆ. ಕಣ್ಣು ಕಾಣದ ಮಗಳ ಆಸೆಯನ್ನು ನೆರವೇರಿಸಲು ಅಪ್ಪ ಎಷ್ಟೆಲ್ಲ ಕಷ್ಟ ಪಡುತ್ತಾರೆ, ಮಗಳಿಗಾಗಿ ಅಪ್ಪನ ಹೋರಾಟದ ಕಥೆಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಕಿರಣ್ ಸುಬ್ರಮಣಿ.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ಸಿ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಇದನ್ನೂ ಓದಿ: Gold Rate Today: ಕೊನೆಗೂ ಇಳಿಯಿತು ಬಂಗಾರದ ದರ; ಇಂದು ಚಿನ್ನ ಇಷ್ಟು ಅಗ್ಗ

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ. ಸದ್ಯ ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಸಿ ಸಿನಿಮಾ ಆಗಸ್ಟ್‌ 23ಕ್ಕೆ ತೆರೆಗೆ ಬರುತ್ತಿದೆ.

Continue Reading

Latest

Murder Case: ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದು ಕೊಳಕ್ಕೆ ಎಸೆದ ಮಗಳು!

Murder Case: ಪ್ರೀತಿಗೆ ಕುರುಡು ಅಂತಾರೆ. ಪ್ರೀತಿಯಲ್ಲಿ ಬಿದ್ದವರಿಗೆ ಆ ಕ್ಷಣದಲ್ಲಿ ಹೆತ್ತು ಹೊತ್ತು ಸಾಕಿ ಬೆಳೆಸಿದವರಿಗಿಂತ ತಮ್ಮ ಪ್ರಿಯತಮ/ಪ್ರಿಯಕರನೇ ಹೆಚ್ಚಾಗಿರುತ್ತಾರೆ! ಇಲ್ಲೊಂದು ಇಂತಹದ್ದೇ ಘಟನೆ ನಡೆದಿದೆ. ಮಗಳ ಪ್ರೀತಿಯನ್ನು ವಿರೋಧಿಸಿದ್ದಕ್ಕೆ ತಾಯಿ ತನ್ನ ಜೀವವನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಬಂದಿದೆ. ತಾಯಿಯು ಮಗಳ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದ ಕೋಪಗೊಂಡ ಮಗಳು ಮತ್ತು ಆಕೆಯ ಪ್ರಿಯಕರ ತಮ್ಮ ಸಹಚರನ ಸಹಾಯದಿಂದ ಆಕೆಯನ್ನು ಕೊಲೆ ಮಾಡಿ ಶವವನ್ನು ಕೊಳಕ್ಕೆ ಎಸೆದಿದ್ದಾರೆ.

VISTARANEWS.COM


on

Murder Case
Koo


ಪ್ರೀತಿ ಎನ್ನುವ ಮಾಯೆ ಯಾವ ಮಟ್ಟದಲ್ಲಿ ಇಂದಿನ ಯುವ ಪೀಳಿಗೆಯನ್ನು ಆವರಿಸಿಕೊಂಡಿತೆಂದರೆ ಪ್ರೀತಿಗಾಗಿ ಅವರು ತಮ್ಮವರನ್ನೇ ಕೊಲ್ಲುವ ಮಟ್ಟಕ್ಕೂ ಹೋಗುತ್ತಾರೆ. ಕೆಲವರು ಅವರ ಪ್ರೀತಿಗೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದರೆ ತಮಗೆ ಯಾರು ಬೇಡವೆಂದು ತಮ್ಮವರನ್ನು ಬಿಟ್ಟು ತಾನು ಪ್ರೀತಿಸಿದವರ ಜೊತೆ ಓಡಿಹೋಗಿ ಬೇರೆ ಕಡೆ ಜೀವನ ಕಟ್ಟಿಕೊಳ್ಳುತ್ತಾರೆ. ಆದರೆ ಇನ್ನೂ ಕೆಲವರು ತಮ್ಮ ಪ್ರೀತಿಗೆ ವಿರೋಧಿಸಿದ ತಮ್ಮವರನ್ನು ಕೊಲೆ (Murder Case) ಮಾಡಿ ಬಿಡುತ್ತಾರೆ. ಅಂತಹದೊಂದು ಘಟನೆ ಇದೀಗ ಉತ್ತರ ಪ್ರದೇಶದ ಬಾಂದಾದಲ್ಲಿ ನಡೆದಿದೆ.

ತಾಯಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ಸೋಮವಾರ ಬಂಧಿಸಿದ್ದಾರೆ. ಕೊಲೆಗೆ ಸಹಾಯ ಮಾಡಿದ ಇನ್ನೊಬ್ಬ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ ಎನ್ನಲಾಗಿದೆ. ಬಲ್ಲನ್ ಗ್ರಾಮದಲ್ಲಿ ವಾಸಿಸುತ್ತಿದ್ದ ರಾಜುಲಿಯಾ (45) ಮಗಳ ಕೈಯಿಂದ ಕೊಲೆಯಾದ ದುರ್ದೈವಿ. ಅವರನ್ನು ಜುಲೈ 29 ರಂದು ಅವರ ಮಗಳಾದ ನೀತು ಮತ್ತು ಆಕೆಯ ಪ್ರಿಯಕರ ಅತುಲ್ ಅರ್ಕ್ ಇವರಿಬ್ಬರು ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದರು ಎಂಬುದಾಗಿ ತಿಳಿದುಬಂದಿದೆ.

ತಾಯಿ ರಾಜುಲಿಯಾ ಮಗಳ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಕೋಪಗೊಂಡ ಮಗಳು ಮತ್ತು ಆಕೆಯ ಪ್ರಿಯಕರ ತಮ್ಮ ಸಹಚರ ದಾದುವಾ ರಾಯ್ದಾಸ್ ಸಹಾಯದಿಂದ ಆಕೆಯನ್ನು ಕೊಲೆ ಮಾಡಿ ಶವವನ್ನು ಕೊಳಕ್ಕೆ ಎಸೆದಿದ್ದಾರೆ. ನಂತರ ಆಕೆಯ ಶವವನ್ನು ಕೊಳದಲ್ಲಿ ಕಂಡವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಜುಲೈ 30 ರಂದು ಪೊಲೀಸರು ರಾಜುಲಿಯಾ ಅವರ ಶವವನ್ನು ಕೊಳದ ಬಳಿ ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿಯಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ, ಇದರ ಪರಿಣಾಮವಾಗಿ ಕುತ್ತಿಗೆ ಮೂಳೆ ಮುರಿದಿದೆ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ: ಪತಿ ಬೈದಿದ್ದಕ್ಕೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ; ಬೆಚ್ಚಿ ಬೀಳಿಸುವ ವಿಡಿಯೊ

ಹಾಗಾಗಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಸೋಮವಾರ ಪೊಲೀಸರು ಪ್ರಕರಣವನ್ನು ಭೇದಿಸಿದ್ದು, ಕೊಲೆಯಲ್ಲಿ ಮಾಡಿದ ಮಹಿಳೆಯ ಮಗಳು ನೀತು ಮತ್ತು ಆಕೆಯ ಪ್ರಿಯಕರ ಅತುಲ್ ಅರ್ಕ್ ಅವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ದಾದುವಾ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

Latest

Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Konkan Railway: ಪಶ್ಚಿಮ ಘಟ್ಟ ಭಾಗದ ಎಡಕುಮೇರಿ – ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಕಾರಣ ರೈಲು ಸಂಚಾರಕ್ಕೆ ತಡೆಯಾಗಿದೆ. ಹಾಗಾಗಿ ಇಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿದ್ದ ಹಿನ್ನಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಆಗಸ್ಟ್ 8ರವರೆಗೆ ರದ್ದುಪಡಿಸಲಾಗಿದೆ

VISTARANEWS.COM


on

Karnataka Trains
Koo

ಬೆಂಗಳೂರು : ರಾಜ್ಯದೆಲ್ಲೆಡೆ ಭಾರೀ ಮಳೆ ಸುರಿಯುತ್ತಿರುವ ಕಾರಣ ಹಲವೆಡೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾದ ಕಾರಣ ಬಸ್ ಹಾಗೂ ರೈಲ್ವೆ ಸಂಚಾರದಲ್ಲಿ ಸಮಸ್ಯೆ ಎದುರಾಗಿದೆ. ಪಶ್ಚಿಮ ಘಟ್ಟ ಭಾಗದ ಎಡಕುಮೇರಿ – ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಕಾರಣ ರೈಲು ಸಂಚಾರಕ್ಕೆ ತಡೆಯಾಗಿದೆ. ಹಾಗಾಗಿ ಇಲ್ಲಿ ದುರಸ್ತಿ ಕಾರ್ಯಗಳು ನಡೆಯುತ್ತಿದ್ದ ಹಿನ್ನಲೆಯಲ್ಲಿ ಕೊಂಕಣ ರೈಲು (Konkan Railway) ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಆಗಸ್ಟ್ 8ರವರೆಗೆ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ರದ್ದಾದ ರೈಲುಗಳ ವಿವರ ಹೀಗಿದೆ:

  • ರೈಲು ನಂ.16595 ಕೆಎಸ್ಆರ್ ಬೆಂಗಳೂರು- ಕಾರವಾರ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆಗಸ್ಟ್ 7ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16596 ಕಾರವಾರ- ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.01595 ಕಾರವಾರ- ಮಡಗಾಂವ್ ಹಾಗೂ ರೈಲು ನಂ. 01596 ಮಡಗಾಂವ್-ಕಾರವಾರ ವಿಶೇಷ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16585 ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು- ಮುರ್ಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆ.7ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16586 ಮುರ್ಡೇಶ್ವರ- ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆ.8ರವರೆಗೆ ಸಂಪೂರ್ಣ ರದ್ದು.
  • ರೈಲು ನಂ.16515 ಕೆಎಸ್ಆರ್ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲಿನ ಆ.7ರವರೆಗಿನ ಸಂಚಾರ ಸಂಪೂರ್ಣ ರದ್ದು.
  • ರೈಲು ನಂ.16516 ಕಾರವಾರ- ಕೆಎಸ್ಆರ್ ಯಶವಂತಪುರ ಎಕ್ಸ್‌ಪ್ರೆಸ್‌ ರೈಲಿನ ಆ.8ರವರೆಗಿನ ಸಂಚಾರವನ್ನು ಸಂಪೂರ್ಣವಾಗಿ ರದ್ದು ಪಡಿಸಲಾಗಿದೆ.

ಇದನ್ನೂ ಓದಿ: Railway Rules: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

ಈ ಕುರಿತು ಕೊಂಕಣ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರ ಪ್ರಕಟಣೆ ತಿಳಿಸಿದೆ. ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಕಹಿ ಸುದ್ದಿಯನ್ನು ನೀಡಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಅವಕಾಶ ನೀಡಿಲ್ಲ. ಆದರೆ ಸದ್ಯದಲ್ಲೇ ದುರಸ್ಥಿ ಕಾರ್ಯ ಸಂಪೂರ್ಣವಾಗಲಿದ್ದು, ನಂತರ ರೈಲು ಸಂಚಾರ ಮುಂದುವರಿಯಲಿದೆ. ಅಲ್ಲಿಯವರೆಗೆ ರೈಲು ಪ್ರಯಾಣಿಕರು ಸಹಕರಿಸುವಂತೆ ವಿನಂತಿಸಲಾಗಿದೆ.

Continue Reading
Advertisement
Hasin Jahan
ಕ್ರೀಡೆ8 mins ago

Hasin Jahan: ಮೊಹಮ್ಮದ್​ ಶಮಿ ಕುಟುಂಬದ ವಿರುದ್ಧ ವ್ಯಂಗ್ಯವಾಡಿದ ವಿಚ್ಛೇದಿತ ಪತ್ನಿ

Unique Village
Latest18 mins ago

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

C Kannada movie release on August 23
ಕರ್ನಾಟಕ39 mins ago

Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

Bangladesh Protest
ಪ್ರಮುಖ ಸುದ್ದಿ41 mins ago

Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು…

Gruha Lakshmi Scheme
ಪ್ರಮುಖ ಸುದ್ದಿ42 mins ago

Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

Murder Case
Latest45 mins ago

Murder Case: ಪ್ರಿಯಕರನ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದು ಕೊಳಕ್ಕೆ ಎಸೆದ ಮಗಳು!

Bangladesh Protest
ದೇಶ48 mins ago

Bangladesh Protest: ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಹಿಂದೆ ಬೇರೆ ದೇಶಗಳ ಕೈವಾಡವಿದೆಯೇ?; ರಾಹುಲ್‌ ಗಾಂಧಿ ಪ್ರಶ್ನೆ

Self Harming
ಚಿತ್ರದುರ್ಗ50 mins ago

Self Harming: ಹೊಸದುರ್ಗದಲ್ಲಿ ಬ್ಯಾಂಕ್‌ ಆಫೀಸರ್‌ ಸೂಸೈಡ್‌; ರೈಲಿಗೆ ಸಿಲುಕಿ ಮತ್ತಿಬ್ಬರು ಸಾವು

Karnataka Trains
Latest54 mins ago

Konkan Railway: ಕಾರವಾರ – ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರ ಆ. 8ರವರೆಗೆ ರದ್ದು

Sharan Prakash Patil
ಬೆಂಗಳೂರು1 hour ago

Sharan Prakash Patil: ಮೆಡಿಕಲ್‌ ಕಾಲೇಜುಗಳಲ್ಲಿ ವ್ಯಾಸ್ಕ್ಯುಲಾರ್‌ ವಿಭಾಗ ಪ್ರಾರಂಭ : ಸಚಿವ ಶರಣಪ್ರಕಾಶ್‌ ಪಾಟೀಲ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ7 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌