Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ! - Vistara News

Latest

Amnesia Disease: ಈ ಗ್ರಾಮದಲ್ಲಿರುವ ಎಲ್ಲರೂ ಮರೆಗುಳಿಗಳು! ಇಲ್ಲಿ ಏನು ಖರೀದಿಸಿದರೂ ದುಡ್ಡೇ ಕೇಳುವುದಿಲ್ಲ!

Amnesia Disease: ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ, ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

VISTARANEWS.COM


on

Unique Village
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಸಾಮಾನ್ಯವಾಗಿ ಮರೆಗುಳಿತನ ಸಮಸ್ಯೆ ವಯಸ್ಸಾದಂತೆ ಕಾಡುತ್ತದೆ. ಆದರೆ ಇತ್ತೀಚೆಗೆ ಇದು ಹೆಚ್ಚಿನ ಜನರಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಆದರೆ ಇಲ್ಲೊಂದು ವಿಚಿತ್ರವಾದ ಗ್ರಾಮವಿದೆ. ಈ ಗ್ರಾಮದಲ್ಲಿ ಬರೀ ಮರೆಗುಳಿತನ (Amnesia Disease) ಸಮಸ್ಯೆಯಿಂದ ಬಳಲುತ್ತಿರುವ ಜನರೇ ತುಂಬಿದ್ದಾರೆ. ಇಲ್ಲಿನ ಜನರಿಗೆ ಹಣದ ಅವಶ್ಯಕತೆಯೇ ಇಲ್ಲವಂತೆ. ಹಾಗಾದ್ರೆ ಈ ಗ್ರಾಮದಲ್ಲಿನ ಜನರು ಯಾಕೆ ಹೀಗಿದ್ದಾರೆ? ಇದಕ್ಕೆ ಕಾರಣವೇನು ಎಂಬುದರ ಮಾಹಿತಿ ಇಲ್ಲಿದೆ.

ಫ್ರಾನ್ಸ್‌ನ ಲ್ಯಾಂಡೈಸ್ ಗ್ರಾಮವು ದೇಶದ ಇತರ ಸ್ಥಳಗಳಿಗಿಂತ ತುಂಬಾ ಭಿನ್ನವಾಗಿದೆ. ಯಾಕೆಂದರೆ ಇಲ್ಲಿ ಪ್ರತಿಯೊಬ್ಬ ನಿವಾಸಿಯೂ ಮರೆಗುಳಿತನದಿಂದ ಬಳಲುತ್ತಿದ್ದಾರೆ. 2020ರಲ್ಲಿ ಅಲ್ಝೈಮರ್ ವಿರುದ್ಧ ಹೋರಾಡುವ ಜನರಿಗೆ ಪ್ರಾಯೋಗಿಕ ಸಮುದಾಯವಾಗಿ ಲ್ಯಾಂಡೈಸ್ ಗ್ರಾಮವನ್ನು ಸ್ಥಾಪಿಸಲಾಯಿತು. ಇದನ್ನು ಬೋರ್ಡೆಕ್ಸ್ ವಿಶ್ವವಿದ್ಯಾಲಯದ ಸಂಶೋಧಕರ ಸಲಹೆ ಮೇರೆಗೆ ಸ್ಥಾಪಿಸಲಾಗಿದೆ. ಇದು ಅಲ್ಝೈಮರ್ ಪೀಡಿತ ರೋಗಿಗಳನ್ನು ನೋಡಿಕೊಳ್ಳಲು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

ಅಲ್ಲದೇ ಲಾಂಡೈಸ್ ಗ್ರಾಮದಲ್ಲಿ ವಾಸಿಸುವ ಯಾರೂ ಹಣವನ್ನು ಸಂಪಾದಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಅವರು ಆ ಗ್ರಾಮದಲ್ಲಿ ಎಲ್ಲಿಗೇ ಹೋಗುವುದಾದರೂ ತಮ್ಮ ಪರ್ಸ್‌ಗಳನ್ನು ತೆಗೆದುಕೊಂಡು ಹೋಗಬೇಕಾಗಿಲ್ಲ. ಯಾಕೆಂದರೆ ಈ ಗ್ರಾಮದಲ್ಲಿರುವ ಯಾವ ಅಂಗಡಿಗಳೂ ಹಣವನ್ನು ಸ್ವೀಕರಿಸುವುದಿಲ್ಲ. ಅಲ್ಲದೇ ಈ ಗ್ರಾಮದಲ್ಲಿ ವಾಸಿಸಲು ಗ್ರಾಮಸ್ಥರು ವಾರ್ಷಿಕ € 28,000 ಶುಲ್ಕವನ್ನು ಪಾವತಿಸಿದರೆ ಸಾಕು. ಹೆಚ್ಚಿನ ನಿರ್ವಹಣಾ ವೆಚ್ಚಗಳನ್ನು ಪ್ರಾದೇಶಿಕ ಫ್ರೆಂಚ್ ಸರ್ಕಾರ ನೋಡಿಕೊಳ್ಳುತ್ತದೆ.

ಈ ಗ್ರಾಮದಲ್ಲಿ ಒಂದು ಮಹಡಿಯ ಮನೆಗಳಿರುತ್ತದೆ. ಪ್ರತಿಯೊಂದೂ ಮನೆಯಲ್ಲಿ ಎಂಟು ನಿವಾಸಿಗಳು ವಾಸವಾಗಿರುತ್ತಾರೆ. ಪ್ರತಿ ಮನೆ ಅಡುಗೆಮನೆ, ಕುಳಿತುಕೊಳ್ಳುವ ಮತ್ತು ಊಟದ ಕೋಣೆಗಳನ್ನು ಹೊಂದಿರುತ್ತದೆ. ಈ ಗ್ರಾಮದಲ್ಲಿ ಸುಮಾರು 120 ಜನರಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೇ ಈ ಗ್ರಾಮದಲ್ಲಿ ರೋಗಿಗಳ ಸೇವೆ ಮಾಡಲು ವೈದ್ಯರು, ನರ್ಸ್‌ಗಳು , ಜೆರೊಂಟೋಲಾಜಿಕಲ್ ಸಹಾಯಕರು, ಮನಶ್ಶಾಸ್ತ್ರಜ್ಞರು, ಔದ್ಯೋಗಿಕ ಚಿಕಿತ್ಸಕ, ಸೈಕೋಮೋಟರ್ ಥೆರಪಿಸ್ಟ್, ಆನಿಮೇಟರ್ಗಳು, ಜೊತೆಗೆ ಅಡುಗೆಯವರು, ಆಡಳಿತ ಸಿಬ್ಬಂದಿ ಇತ್ಯಾದಿಗಳನ್ನು ಒಳಗೊಂಡ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಾರೆ.

ಇದನ್ನೂ ಓದಿ:  ಎಸ್ಕಲೇಟರ್ ಮೇಲೆ ಮಗುವನ್ನು ನಿಲ್ಲಿಸಲು ತಾಯಿಯ ಕಸರತ್ತು; ಮುಂದೇನಾಯ್ತು ನೋಡಿ

65 ವರ್ಷದ ಪ್ಯಾಟ್ರೀಷಿಯಾ ಎಂಬ ಲಾಂಡೈಸ್ ನಿವಾಸಿಯೊಬ್ಬರು ಈ ಗ್ರಾಮದ ಬಗ್ಗೆ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿ, “ಅಲ್ಝೈಮರ್ ರೋಗಕ್ಕೆ ಒಳಗಾದರೆ ಜೀವನ ಅಷ್ಟೊಂದು ಸುಲಭವಲ್ಲ ಎಂದು ನನಗೆ ತಿಳಿದಿತ್ತು. ಹಾಗಾಗಿ ನಾನು ಭಯಭೀತನಾಗಿದ್ದೆ. ನನಗೆ ಆರೋಗ್ಯ ಸರಿಯಿರಲಿಲ್ಲ. ನಾನು ದಣಿದಿದ್ದೆ. ಹಾಗಾಗಿ ನನಗೆ ಸಹಾಯ ಮಾಡಬಹುದಾದ ಯಾವುದಾದರೊಂದು ಆಶ್ರಮದಲ್ಲಿ ಇರಲು ಬಯಸುತ್ತಿದ್ದೆ. ಆದರೆ ಲಾಂಡೈಸ್ ನನ್ನ ಜೀವನವನ್ನು ಮರಳಿ ನೀಡಿದೆ. ಅಲ್ಲಿ ನನಗಾಗಿ ಅಡುಗೆ ಮಾಡಲು ಒಬ್ಬ ಮಹಿಳೆ ಇದ್ದಳು. ಇತರ ಆರೈಕೆ ಮನೆಗಳಲ್ಲಿ ಈ ತರಹದ ಸೌಲಭ್ಯಗಳಿರುವುದಿಲ್ಲ. ಆದರೆ ಇಲ್ಲಿ, ಜೀವನ ತುಂಬಾ ಸುಂದರವಾಗಿತ್ತು” ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

ದೇವರ ಭಾಗ- 1 (Devara Part-1) ಚಿತ್ರದ ಹೊಸ ಹಾಡು ಬಿಡುಗಡೆಯಾಗಿದ್ದು, ಇದರಲ್ಲಿ ಜೂನಿಯರ್ ಎನ್‌ಟಿಆರ್ ತಮಗಿಂತ 14 ವರ್ಷ ಚಿಕ್ಕವಳಾದ ಜಾನ್ವಿಯನ್ನು ರೊಮ್ಯಾನ್ಸ್ ಮಾಡುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. ಈ ಜೋಡಿ ನೋಡಲು ತುಂಬಾ ವಿಚಿತ್ರವಾಗಿದೆ ಎಂಬುದಾಗಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

By

Devara Part 1
Koo

ಜೂನಿಯರ್ ಎನ್‌ಟಿಆರ್ (Jr NTR) ಮತ್ತು ಜಾನ್ವಿ ಕಪೂರ್ (Janhvi Kapoor) ಅಭಿನಯದ ʼದೇವರ ಭಾಗ-1ʼ (Devara Part 1) ಚಿತ್ರದ ಹೊಸ ಹಾಡನ್ನು (new song) ಬಿಡುಗಡೆ ಮಾಡಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ, ಗೇಲಿಗೆ ಗುರಿಯಾಗಿದೆ. ಚುಟ್ಟಮಲ್ಲೆ ಚುಟ್ಟೆಸ್ಟಾಂಡಿ ತುಂಟರಿಚಿಪು.. ಹಾಡಿನ ವಿಡಿಯೋದ ಬಗ್ಗೆ ಸಾಕಷ್ಟು ನೆಗೆಟಿವ್ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಈ ಮ್ಯೂಸಿಕ್ ವಿಡಿಯೋದಲ್ಲಿ ಜೂನಿಯರ್ ಎನ್‌ಟಿಆರ್ ತಮಗಿಂತ 14 ವರ್ಷ ಚಿಕ್ಕವಳಾದ ಜಾನ್ವಿಯನ್ನು ರೊಮ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದು. ಇವರಿಬ್ಬರ ಜೋಡಿಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. ಈ ಜೋಡಿ ನೋಡಲು ತುಂಬಾ ವಿಚಿತ್ರವಾಗಿದೆ ಎಂದು ಹೇಳಿದ್ದಾರೆ.

ಈ ಜೋಡಿಯು ತುಂಬಾ ವಿಚಿತ್ರವಾಗಿ ಕಾಣುತ್ತದೆ. ವಯಸ್ಸಿನ ಅಂತರವು ಎದ್ದು ಕಾಣುತ್ತಿದೆ. ರೆಡ್ಡಿಟ್ ಬಳಕೆದಾರರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಈ ಸಂಗೀತ ವಿಡಿಯೋವನ್ನು ಹಂಚಿಕೊಂಡು “ದಯವಿಟ್ಟು ಜೂನಿಯರ್ ಎನ್‌ಟಿಆರ್‌ಗೆ ಹೀಗೆ ಮಾಡಬೇಡಿ” ಎಂದು ಹೇಳಿದ್ದಾರೆ. “ನಾಟು ನಾಟು” ಅನಂತರ ಇದು “ಡೋಂಟ್-ಡು ಡೋಂಟ್-ಡು” ಎಂಬಂತೆ ಭಾಸವಾಗುತ್ತದೆ ಎಂಬುದಾಗಿ ಮತ್ತೊಬ್ಬರು ಕಾಮೆಂಟ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಇದು ತುಂಬಾ ಅಹಿತಕರವಾಗಿದೆ. ಇವರಿಬ್ಬರ ನಡುವಿನ ವಯಸ್ಸಿನ ಅಂತರವು ದೊಡ್ಡದಾಗಿದೆ ಎಂದು ಅವರಿಗೆ ತಿಳಿದಿದೆ ಮತ್ತು ಅದು ಯಾರಿಗಾದರೂ ಅನಾನುಕೂಲತೆಯನ್ನು ಉಂಟು ಮಾಡುತ್ತದೆ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಹಿಪ್ ಥ್ರಸ್ಟಿಂಗ್, ಸೊಂಟದ ಕ್ಲೋಸ್ ಅಪ್‌ಗಳು ಮೊದಲಾದವುಗಳಿಂದ ಭಾರತೀಯ ಚಲನಚಿತ್ರಗಳು ಯಾವಾಗ ಮುಂದಕ್ಕೆ ಹೋಗುತ್ತವೆಯೋ? ಇದು ತುಂಬಾ ಆತಂಕಕಾರಿಯಾಗಿದೆ. ನಾವು ಯಾವಾಗ ಉತ್ತಮ, ಸಂವೇದನಾಶೀಲ ಚಲನಚಿತ್ರಗಳನ್ನು ಮಾಡುತ್ತೇವೆ ಎಂದು ಇನ್ನೊಬ್ಬ ಬಳಕೆದಾರರು ಹೇಳಿಕೊಂಡಿದ್ದಾರೆ.


ಚುಟ್ಟಮಲ್ಲೆ ಹಾಡಿಗೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ಇದು ಚಿತ್ರದ ಎರಡನೇ ಹಾಡು. ಚಿತ್ರದ ಮೊದಲ ಸಿಂಗಲ್ ಫಿಯರ್ ಸಾಂಗ್ ಈಗಾಗಲೇ ಹೆಚ್ಚಿನ ನಿರೀಕ್ಷೆಗಳನ್ನು ಉಂಟು ಮಾಡಿತ್ತು. ಅನಿರುದ್ಧ್ ಸಂಗೀತ ಸಂಯೋಜನೆಯ ಜೈಲರ್ ಚಿತ್ರದ ಹಿಟ್ ಟ್ರ್ಯಾಕ್ ಆಗಿರುವ ಹುಕುಂನ ಜನಪ್ರಿಯತೆಯನ್ನು ಇದು ಮೀರಿಸುತ್ತದೆ ಎಂದು ನಿರ್ಮಾಪಕ ನಾಗ ವಂಶಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Actor Yash: ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರುವ ಇದು ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲು ಸಿದ್ಧವಾಗುತ್ತಿದೆ. ಕೊರಟಾಲ ಶಿವ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ನಟಿಸಿದ್ದಾರೆ.


ಇದು ಜಾನ್ವಿ ಮತ್ತು ಸೈಫ್ ಅವರ ಮೊದಲ ತೆಲುಗು ಚಿತ್ರವಾಗಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ ಟಿಆರ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಮಿಕ್ಕಿಲಿನೇನಿ ಮತ್ತು ಕೊಸರಾಜು ಹರಿಕೃಷ್ಣ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

Continue Reading

ಆರೋಗ್ಯ

Shravan Recipes: ಶ್ರಾವಣ ಮಾಸದಲ್ಲಿ ಸಾಬುದಾನದ ಈ 5 ಖಾದ್ಯಗಳನ್ನು ಮಾಡಿ ನೋಡಿ

Shravan Recipes: ಶ್ರಾವಣ ಮಾಸದಲ್ಲಿ (Shravan 2024) ಉಪವಾಸ ವ್ರತಗಳನ್ನು ಆಚರಿಸುವವರು ಏನು ತಿನ್ನಬೇಕು, ಏನು ತಿನ್ನಬಾರದು ಎನ್ನುವ ನಿಯಮಗಳಿವೆ. ಉಪವಾಸ ನಿರತರಿಗೆ ತಾಜಾ ತರಕಾರಿ ಮತ್ತು ಹಣ್ಣುಗಳ ಜೊತೆಗೆ, ಸಾಬುದಾನವು ಭಾರತದಲ್ಲಿ ಅತ್ಯಂತ ಜನಪ್ರಿಯ ಆಹಾರವಾಗಿದೆ. ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಸಾಬುದಾನವನ್ನು ಪ್ರತಿ ದಿನ ಒಂದೇ ರೀತಿಯಾಗಿ ತಿನ್ನುವುದು ಬೇಸರ ಮೂಡಿಸಬಹುದು. ಅದಕ್ಕಾಗಿ ಸಾಬುದಾನದ ವಿವಿಧ ರೀತಿಯ ಖಾದ್ಯಗಳ ವಿವರ ಇಲ್ಲಿದೆ.

VISTARANEWS.COM


on

By

shravan foods
Koo

ಭಾರತದಲ್ಲಿ ಶ್ರಾವಣ ಮಾಸವು ಹೆಚ್ಚಿನ ಪ್ರಾಮುಖ್ಯತೆಯನ್ನು (Shravan Recipes) ಹೊಂದಿದೆ. ಶಿವನ ಆಶೀರ್ವಾದವನ್ನು ಪಡೆಯಲು ಹೆಚ್ಚಿನ ಭಕ್ತರು (Shravan 2024) ಉಪವಾಸ ವ್ರತಾಚರಣೆ (fast) ಮಾಡುತ್ತಾರೆ. ಉಪವಾಸ ನಿರತರು ಸಾತ್ವಿಕ ಆಹಾರವನ್ನು (fasting food) ಮಾತ್ರ ಸೇವಿಸುತ್ತಾರೆ. ಉಪವಾಸ ವ್ರತಗಳನ್ನು ಆಚರಿಸುವವರು ಏನು ತಿನ್ನಬೇಕು, ಏನು ತಿನ್ನಬಾರದು ಎನ್ನುವ ನಿಯಮಗಳಿವೆ. ಉಪವಾಸ ನಿರತರಿಗೆ ತಾಜಾ ತರಕಾರಿ (Vegetables) ಮತ್ತು ಹಣ್ಣುಗಳ (fruits) ಜೊತೆಗೆ, ಸಾಬುದಾನವು (Sabudana) ಭಾರತದಲ್ಲಿ ಅತ್ಯಂತ ಜನಪ್ರಿಯ ಉಪವಾಸದ ಆಹಾರವಾಗಿದೆ.

ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಸಾಬುದಾನವನ್ನು ಪ್ರತಿ ದಿನ ಒಂದೇ ರೀತಿಯಾಗಿ ತಿನ್ನುವುದು ಬೇಸರ ಮೂಡಿಸಬಹುದು. ಅದಕ್ಕಾಗಿ ಸಾಬುದಾನದ ವಿವಿಧ ರೀತಿಯ ಖಾದ್ಯಗಳನ್ನು ಮಾಡಿ ಸೇವಿಸಬಹುದು.

ಮರಗೆಣಸಿನ ಬೇರುಗಳಿಂದ ತಯಾರಿಸುವ ಸಾಬುದಾನ ವ್ರತ ಸ್ನೇಹಿ ಆಹಾರಗಳಲ್ಲಿ ಒಂದು. ಇದನ್ನು ಉಪವಾಸ ನಿರತರು ಸೇವಿಸುವುದರಿಂದ ಹೆಚ್ಚು ಕಾಲ ಹೊಟ್ಟೆ ತುಂಬಿದ ಅನುಭವವನ್ನು ಪಡೆಯಬಹುದು. ಹಲವಾರು ಪೋಷಕಾಂಶಗಳನ್ನು ಹೊಂದಿರುವ ಸಾಬುದಾನ ನಂಬರ್ ಒನ್ ಫಾಸ್ಟಿಂಗ್ ಫುಡ್ ಎಂದೇ ಪರಿಗಣಿಸಲಾಗಿದೆ.

ಟಪಿಯೋಕಾ ಮುತ್ತುಗಳು ಎಂದೂ ಕರೆಯಲ್ಪಡುವ ಸಾಬುದಾನವು ಅನೇಕ ಭಾರತೀಯ ಮನೆಗಳಲ್ಲಿ ಪ್ರಧಾನವಾಗಿ ಬಳಸಲಾಗುತ್ತದೆ. ವಿಶೇಷವಾಗಿ ನವರಾತ್ರಿ, ಜನ್ಮಾಷ್ಟಮಿ ಮತ್ತು ಶ್ರಾವಣ ಮಾಸದ ಉಪವಾಸದ ಅವಧಿಯಲ್ಲಿ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ.

ಸಾಬುದಾನ ಅಥವಾ ಸಾಗೋ ಮೂಲತಃ ಸಣ್ಣ ಪಿಷ್ಟದ ಮುತ್ತುಗಳು. ಇದರಲ್ಲಿ ಹೆಚ್ಚಿನ ಪಿಷ್ಟದ ಅಂಶವಿರುವುದರಿಂದ ಸುಲಭವಾಗಿ ಬೇಯಿಸಬಹುದು. ಸಿಹಿ ಮತ್ತು ಖಾರ ಎರಡಕ್ಕೂ ಹೊಂದಿಕೆಯಾಗುವ ಸಾಗುವಿನ ರುಚಿ ಮಕ್ಕಳಿಂದ ಹಿಡಿದು ವೃದ್ಧರಿಗೂ ಪ್ರಿಯವಾಗುವುದು.

ಆರೋಗ್ಯ ಪ್ರಯೋಜನಗಳು ಏನು?

ಉಪವಾಸ ನಿರತರು ಸಾಮಾನ್ಯವಾಗಿ ಆಹಾರ ಸೇವಿಸದೇ ದೀರ್ಘಕಾಲದವರೆಗೆ ಇರಬೇಕಾಗುತ್ತದೆ. ಹೀಗಾಗಿ ನಿರಂತರ ಶಕ್ತಿಯನ್ನು ಒದಗಿಸುವ ಯಾವುದನ್ನಾದರೂ ಸ್ವಲ್ಪ ಸಾತ್ವಿಕ ಆಹಾರ ಸೇವಿಸುವುದು ಬಹುಮುಖ್ಯವಾಗಿರುತ್ತದೆ. ಆದ್ದರಿಂದ ಪ್ರಾಥಮಿಕವಾಗಿ ಕಾರ್ಬೋಹೈಡ್ರೇಟ್‌ಗಳನ್ನು ಒಳಗೊಂಡಿರುವ ಸಬುದಾನವು ದಿನವಿಡೀ ನಮ್ಮನ್ನು ಶಕ್ತಿಯುತವಾಗಿರಿಸುತ್ತದೆ.

ಉಪವಾಸದ ಸಮಯದಲ್ಲಿ ಸಾಬುದಾನಕ್ಕೆ ಆದ್ಯತೆ ನೀಡಲು ಮತ್ತೊಂದು ಪ್ರಮುಖ ಕಾರಣವೆಂದರೆ ಅದು ಸುಲಭವಾಗಿ ಜೀರ್ಣವಾಗುತ್ತದೆ. ಹೊಟ್ಟೆಯನ್ನು ಭಾರಗೊಳಿಸುವುದಿಲ್ಲ. ಹೊಟ್ಟೆಗೆ ಸಂಬಂಧಿಸಿ ಯಾವುದೇ ಅಸ್ವಸ್ಥತೆ ಅಥವಾ ಉಬ್ಬುವಿಕೆಯನ್ನು ಉಂಟುಮಾಡುವುದಿಲ್ಲ.

ಸಾಬುದಾನದಲ್ಲಿ ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಖನಿಜಗಳಲ್ಲಿ ಸಮೃದ್ಧವಾಗಿದೆ. ಹೀಗಾಗಿ ಇದರ ಸೇವನೆ ಉಪವಾಸ ನಿರತರಿಗೆ ಅತ್ಯಗತ್ಯ.


1. ಸಾಬುದಾನ ಖಿಚಡಿ

ಬೆಳಗ್ಗಿನ ಉಪಾಹಾರ, ಸಂಜೆಯ ಫಲಾಹಾರಕ್ಕೆ ಸಾಬುದಾನ ಖಿಚಡಿ ಒಂದು ಜನಪ್ರಿಯ ಉಪವಾಸ ಖಾದ್ಯ. ರಾತ್ರಿಯಿಡೀ ನೆನೆಸಿಟ್ಟ ಸಾಬುದಾನಕ್ಕೆ ಹುರಿದ ಕಡಲೆಕಾಳು, ಜೀರಿಗೆ, ಹಸಿರು ಮೆಣಸಿನಕಾಯಿ ಮತ್ತು ಬೇಯಿಸಿದ ಆಲೂಗಡ್ಡೆಯನ್ನು ಬೆರೆಸಿ ಖಿಚಿಡಿ ತಯಾರಿಸಲಾಗುತ್ತದೆ.


2. ಸಾಬುದಾನ ವಡಾ

ಉಪವಾಸದ ವೇಳೆ ಗರಿಗರಿಯಾದ ಮತ್ತು ರುಚಿಕರವಾದ ತಿಂಡಿಗಳನ್ನು ತಿನ್ನಲು ಬಯಸುವವರು ಸಾಬುದಾನ ವಡಾವನ್ನು ತಯಾರಿಸಬಹುದು. ನೆನೆಸಿದ ಸಾಬುದಾನವನ್ನು ಬೇಯಿಸಿದ ಆಲೂಗಡ್ಡೆ, ಹುರಿದ ಕಡಲೆಕಾಯಿಗಳು ಮತ್ತು ವಿವಿಧ ಮಸಾಲೆಗಳೊಂದಿಗೆ ಬೆರೆಸಿ, ಅನಂತರ ಆಕಾರ ಕೊಟ್ಟು ಎಣ್ಣೆಯಲ್ಲಿ ಕರಿಯಿರಿ. ಇದನ್ನು ಹುಣಸೆ ಹಣ್ಣಿನ ಚಟ್ನಿ ಅಥವಾ ಮಸಾಲೆಯುಕ್ತ ಹಸಿರು ಚಟ್ನಿಯೊಂದಿಗೆ ಸೇವಿಸಲು ರುಚಿಯಾಗಿರುತ್ತದೆ.


3. ಸಾಬುದಾನ ಖೀರ್

ಸಿಹಿ ತಿನ್ನಲು ಬಯಸುವವರಿಗೆ ಸಾಬುದಾನದ ಖೀರ್‌ ಅತ್ಯುತ್ತಮ ಆಯ್ಕೆಯಾಗಿದೆ. ಇದು ಸಾಗು, ಹಾಲು ಮತ್ತು ಸಕ್ಕರೆ ಹಾಕಿ ಇದನ್ನು ತಯಾರಿಸಲಾಗುತ್ತದೆ. ಇದಕ್ಕಾಗಿ ಸಾಬುದಾನವನ್ನು ಮೊದಲು ನೆನೆಸಿ ಇಡಬೇಕು. ಬಳಿಕ ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ. ಜೊತೆಗೆ ಒಂದೆರಡು ಕೇಸರಿ ದಳಗಳು, ಕತ್ತರಿಸಿದ ಬೀಜಗಳನ್ನು ಹಾಕಿದರೆ ಸಾಬೂದಾನದ ಖೀರ್ ಸವಿಯಲು ಸಿದ್ಧ.


4. ಸಾಬುದಾನ ದೋಸೆ

ಸಾಬುದಾನ ದೋಸೆಯು ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರದ ವಿಶಿಷ್ಟ ಮತ್ತು ಆರೋಗ್ಯಕರ ತಿನಿಸು. ಅಕ್ಕಿಯ ಬದಲಿಗೆ ನೆನೆಸಿದ ಸಾಬುದಾನ, ಹಿಸುಕಿದ ಆಲೂಗಡ್ಡೆ ಮತ್ತು ಮಸಾಲೆಯನ್ನು ಸೇರಿಸಿ ಇದನ್ನು ತಯಾರಿಸಲಾಗುತ್ತದೆ. ಈ ದೋಸೆಯು ಗ್ಲುಟನ್ ಮುಕ್ತವಾಗಿದೆ ಮತ್ತು ಪೋಷಕಾಂಶಗಳಿಂದ ತುಂಬಿರುತ್ತದೆ. ಇದನ್ನು ತೆಂಗಿನಕಾಯಿ ಚಟ್ನಿಯೊಂದಿಗೆ ಬಿಸಿಯಾಗಿ ಸವಿಯಬಹುದು.

ಇದನ್ನೂ ಓದಿ: Shravan 2024: ಶ್ರಾವಣ ಮಾಸದಲ್ಲೇಕೆ ಮಾಂಸಾಹಾರ ಮಾಡಬಾರದು? ಇದಕ್ಕಿದೆ ವೈಜ್ಞಾನಿಕ ಕಾರಣ!


5. ಸಾಬುದಾನದ ಲಡ್ಡು

ಸಕ್ಕರೆ ಮತ್ತು ತುಪ್ಪದಿಂದ ತಯಾರಿಸಿದ ಸಾಬುದಾನದ ಲಡ್ಡು ರುಚಿಯ ಜೊತೆಗೆ ಪೌಷ್ಟಿಕ ಖಾದ್ಯವಾಗಿದೆ. ಸಕ್ಕರೆ ಪುಡಿ, ಏಲಕ್ಕಿ ಮತ್ತು ಗೋಡಂಬಿ ಮತ್ತು ಬಾದಾಮಿಗಳಂತಹ ಬೀಜಗಳನ್ನು ಲಡ್ಡುವಿನಲ್ಲಿ ಸೇರಿಸಬಹುದು. ಇದು ತ್ವರಿತ ಶಕ್ತಿಯ ವರ್ಧಕವೂ ಹೌದು.

Continue Reading

Latest

Viral Video: ಪಿಕ್‌ನಿಕ್‌ಗೆಂದು ಬಂದವನು ರೀಲ್ಸ್‌ ಮಾಡಲು ಹೋದ; ಜಲಪಾತದಿಂದ ಬಿದ್ದು ಸತ್ತ

Viral Video: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ರೀಲ್ಸ್ ಮಾಡಲು ಹೋಗಿ ರಾಜಸ್ಥಾನದ ಭಿಲ್ವಾರಾದ ಜಲಪಾತದಲ್ಲಿ ಯುವಕನೊಬ್ಬ 150 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನದಿಯ ಬಲವಾದ ಪ್ರವಾಹಗಳ ನಡುವೆ ಯುವಕರು ಹಗ್ಗವನ್ನು ಗಟ್ಟಿಯಾಗಿ ಹಿಡಿದು ಅದರ ತುದಿಯಲ್ಲಿ ಹರಿಯುವ ಪ್ರವಾಹದಲ್ಲಿ ಸಿಲುಕಿದ್ದ ತಮ್ಮ ಸ್ನೇಹಿತನನ್ನು ಎಳೆಯುತ್ತಿದ್ದಾರೆ. ಆದರೂ, ಆತ ನೀರಿನ ರಭಸಕ್ಕೆ ಹಿಡಿತ ಕಳೆದುಕೊಂಡು ಅವನ ಸ್ನೇಹಿತರ ಕಣ್ಮುಂದೆಯೇ ಬಲವಾದ ಪ್ರವಾಹಗಳ ಜೊತೆಗೆ ಕೊಚ್ಚಿಹೋಗಿದ್ದಾನೆ.

VISTARANEWS.COM


on

Viral Video
Koo


ದೇಶಾದ್ಯಂತ ಭಾರೀ ಮಳೆಯಾಗಿದ್ದ ಹಿನ್ನೆಲೆಯಲ್ಲಿ ನೀರಿನ ರಭಸ ಹೆಚ್ಚಾಗಿ ಅನೇಕ ಜಲಪಾತಗಳು ಉಕ್ಕಿ ಹರಿಯುತ್ತಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ರೀಲ್ಸ್ ಮಾಡಲು ಹೋಗಿ ರಾಜಸ್ಥಾನದ ಭಿಲ್ವಾರಾದ ಜಲಪಾತದಲ್ಲಿ ಯುವಕನೊಬ್ಬ 150 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಈ ವೈರಲ್ ವಿಡಿಯೊದಲ್ಲಿ ನದಿಯ ಬಲವಾದ ಪ್ರವಾಹಗಳ ನಡುವೆ ಯುವಕರು ಹಗ್ಗವನ್ನು ಗಟ್ಟಿಯಾಗಿ ಹಿಡಿದು ಅದರ ತುದಿಯಲ್ಲಿ ಹರಿಯುವ ಪ್ರವಾಹದಲ್ಲಿ ಸಿಲುಕಿದ್ದ ತಮ್ಮ ಸ್ನೇಹಿತನನ್ನು ಎಳೆಯುತ್ತಿದ್ದಾರೆ. ಆದರೂ, ಆತ ನೀರಿನ ರಭಸಕ್ಕೆ ಹಿಡಿತ ಕಳೆದುಕೊಂಡು ಅವನ ಸ್ನೇಹಿತರ ಕಣ್ಮುಂದೆಯೇ ಬಲವಾದ ಪ್ರವಾಹಗಳ ಜೊತೆಗೆ ಕೊಚ್ಚಿಹೋಗಿದ್ದಾನೆ. ಈ ಘಟನೆಯಲ್ಲಿ ಯುವಕ ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಮೃತ ಯುವಕ ಭಿಲ್ವಾರಾ ಜಿಲ್ಲೆಯ ಭವಾನಿ ನಗರದ ನಿವಾಸಿ ಕನ್ಹಯ್ಯಾಲಾಲ್ ಬೈರ್ವಾ (26) ಎಂಬುದಾಗಿ ತಿಳಿದುಬಂದಿದೆ. ಈತ ಸೋಮವಾರ ವಿಶ್ವಪ್ರಸಿದ್ಧ ಮೇನಾಲ್ ಜಲಪಾತಕ್ಕೆ ತನ್ನ ಸ್ನೇಹಿತರ ಜೊತೆಗೆ ಪಿಕ್‍ನಿಕ್‌ಗೆ ಬಂದಿದ್ದಾನೆ. ಎಲ್ಲರೂ ಬಂಡೆಗಳ ಮೇಲೆ ಕುಳಿತು ಸ್ನಾನ ಮಾಡಿದ್ದಾರೆ. ಆ ವೇಳೆ ಅವರು ಸೆಲ್ಫಿ ತೆಗೆದುಕೊಳ್ಳುವುದರ ಜೊತೆಗೆ ರೀಲ್ ಮಾಡಲು ಮುಂದಾಗಿದ್ದಾರೆ. ಆ ವೇಳೆ ಕನ್ಹಯ್ಯಾಲಾಲ್ ಕಾಲು ಜಾರಿ ಬಲವಾದ ಪ್ರವಾಹಕ್ಕೆ ಸಿಲುಕಿದ್ದಾನೆ. ಆಗ ಆತ ಜಲಪಾತಕ್ಕೆ ಜೋಡಿಸಲಾದ ಸುರಕ್ಷತಾ ಸರಪಳಿಯನ್ನು ಹಿಡಿದಿದ್ದಾನೆ. ಹಾಗಾಗಿ ಅವರ ಸ್ನೇಹಿತರು ಮತ್ತು ಸ್ಥಳೀಯರು ಅವನನ್ನು ರಕ್ಷಿಸಲು ಪ್ರಯತ್ನಿಸಿದರು.

ಅಂತಿಮವಾಗಿ ಅವನ ಕೈ ಸರಪಳಿಯಿಂದ ಜಾರಿ ಜಲಪಾತದಿಂದ 150 ಅಡಿ ಕೆಳಗೆ ಬಿದ್ದನು. ಮಾಹಿತಿ ಬಂದ ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ತಂಡ ಸ್ಥಳಕ್ಕೆ ಬಂದಿದ್ದಾರೆ. ಸ್ಥಳೀಯರು ಹಾಗೂ ರಕ್ಷಣಾ ತಂಡ ಕನ್ಹಯ್ಯಾಲಾಲ್ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರೀಲ್ಸ್‌ ಮಾಡುವಾಗ ಕುತ್ತಿಗೆಗೆ ದಾರ ಬಿಗಿದು ಬಾಲಕ ಸಾವು; ವಿಡಿಯೊ ಇದೆ

ಇತ್ತೀಚಿನ ದಿನಗಳಲ್ಲಿ ರೀಲ್ ಮಾಡಲು ಹೋಗಿ ಸಾವಿಗೀಡಾಗುವವರ ವೇಗವಾಗಿ ಹೆಚ್ಚುತ್ತಿದೆ. ಇದು ಒಂದೇ ಘಟನೆಯಲ್ಲ. ಸೋಶಿಯಲ್ ಮೀಡಿಯಾದಲ್ಲಿ ಲೈಕ್ , ಶೇರ್‌ ಮತ್ತು ಫಾಲೋವರ್ಸ್‍ಗಳನ್ನು ಪಡೆಯಲು ಜನರು ತಮ್ಮ ಪ್ರಾಣವನ್ನು ಪಣಕ್ಕಿಡುತ್ತಿದ್ದಾರೆ. ಇದಕ್ಕೂ ಮುಂಚೆಯೇ, ಸೋಶಿಯಲ್ ಮೀಡಿಯಾದಲ್ಲಿ ರೀಲ್ ಮಾಡಲು ಹೋಗಿ ಅನೇಕ ಯುವಕರು ಮತ್ತು ಯುವತಿಯರು ಸಾವನ್ನಪ್ಪಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲವೆಂದು ನ್ಯಾಯಾಧೀಶರಿಗೇ ಬಾರಿಸಿದ ವಕೀಲೆ!

ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ಭಾವಿ ಪತಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಧೀಶರ ಮೇಲೆ ವಕೀಲರೊಬ್ಬರು ಹಲ್ಲೆ ನಡೆಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಇಬ್ಬರೂ ಮಹಿಳೆಯರು ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

VISTARANEWS.COM


on

By

Viral video
Koo

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂದು ವಕೀಲರೊಬ್ಬರು ನ್ಯಾಯಾಧೀಶರ (fight between lawyer and judge) ಮೇಲೆ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗುತ್ತಿದೆ. ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಮಹಿಳಾ ವಕೀಲರ ನಡುವಿನ ವ್ಯಾಪಕ ವಾಗ್ವಾದದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ವಿಡಿಯೋದಲ್ಲಿ ನ್ಯಾಯಾಧೀಶರೊಂದಿಗೆ ಮಹಿಳಾ ವಕೀಲರು ಜಗಳವಾಡುವುದನ್ನು ಕಾಣಬಹುದು. ಇದು ಸಾಮಾಜಿಕ ಜಾಲತಾಣ ಬಳಕೆದಾರರ ಗಮನವನ್ನು ಸೆಳೆಯುತ್ತಿದ್ದು ಸಾಕಷ್ಟು ಕಾಮೆಂಟ್‌ಗಳು ಬರುತ್ತಿವೆ.
ಇದು 2022ರ ವಿಡಿಯೋ ಕ್ಲಿಪ್ ಎನ್ನಲಾಗುತ್ತಿದೆ. ಆದರೆ ಈಗ ಸಾಮಾಜಿಕ ಜಾಲತಾಣದಲ್ಲಿ ಮಾಯಾಂಕ್ ಬರ್ಮಿ ಎಂಬವರು ಹಂಚಿಕೊಂಡಿದ್ದು, ತಕ್ಷಣವೇ ಭಾರೀ ವೈರಲ್ ಆಗಿದೆ.

ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಕೀಲರ ಭಾವಿ ಪತಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದಾಗ ಜಗಳ ಆರಂಭವಾಗಿದೆ ಎಂದು ಶೀರ್ಷಿಕೆಯಲ್ಲಿ ಹೇಳಲಾಗಿದೆ.

ಈ ವಿಡಿಯೋದಲ್ಲಿ ಇಬ್ಬರೂ ತಮ್ಮ ಹುದ್ದೆಯ ಗೌರವಾರ್ಥವಾಗಿರುವ ಕಪ್ಪು ಬಟ್ಟೆಗಳನ್ನು ಧರಿಸಿದ್ದರು. ಇಬ್ಬರ ನಡುವೆಯೂ ತೀವ್ರ ಜಗಳವಾಗಿದೆ. ಸುತ್ತಮುತ್ತ ಸಾಕಷ್ಟು ಮಂದಿ ನೆರೆದಿದ್ದರು. ಕೆಲವರು ಇವರ ಜಗಳದ ವಿಡಿಯೋವನ್ನು ಕೂಡ ಮಾಡುತ್ತಿದ್ದರು. ಪರಸ್ಪರರ ಕೂದಲನ್ನು ಎಳೆದುಕೊಂಡು, ಹೊಡೆದಾಡಿಕೊಂಡ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಕೊನೆಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಧ್ಯೆ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದರು.


ಇದನ್ನೂ ಓದಿ: Shocker News : ಯುಪಿ ಸಿಎಂ ಯೋಗಿ ಅಧಿಕೃತ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಪರಿಸ್ಥಿತಿ ತುಂಬಾ ಗಂಭೀರವಾಗಿದ್ದರೂ ಆನ್‌ಲೈನ್‌ನಲ್ಲಿ ಮಾತ್ರ ಇದು ಎಲ್ಲರ ಮನೋರಂಜನೆಗೆ ಕಾರಣವಾಗಿದೆ. ಅನೇಕರು ಇದು ಭಾರತದಲ್ಲಿ ಮಾತ್ರ ಸಂಭವಿಸಲು ಸಾಧ್ಯ ಎಂದು ಹೇಳಿದ್ದಾರೆ. ಆಗಸ್ಟ್ 4ರಂದು ಹಂಚಿಕೊಂಡಿರುವ ಈ ವಿಡಿಯೋವನ್ನು ಈಗಾಗಲೇ ಐದು ಲಕ್ಷಕ್ಕೂ ಹೆಚ್ಚು ಮಂದಿ ಇದನ್ನು ವೀಕ್ಷಿಸಿದ್ದಾರೆ. ವೃತ್ತಿಪರ ಗಡಿಯನ್ನು ಮರೆತು ವೈಯಕ್ತಿಕ ಭಾವನೆಯಿಂದ ಈ ರೀತಿ ನ್ಯಾಯಾಧೀಶರು ಮತ್ತು ವಕೀಲರು ಘರ್ಷಣೆಗೆ ಇಳಿದಿರುವುದಕ್ಕೆ ಕೆಲವರು ತೀಕ್ಷ್ಣವಾಗಿಯೂ ಪ್ರತಿಕ್ರಿಯಿಸಿದ್ದಾರೆ.

Continue Reading
Advertisement
Almonds
ಆರೋಗ್ಯ29 seconds ago

Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Devara Part 1
ಸಿನಿಮಾ8 mins ago

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

Bangladesh Unrest
ವಿದೇಶ9 mins ago

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

National Handloom Day
ಫ್ಯಾಷನ್18 mins ago

National Handloom Day: ಮಾಡರ್ನ್‌ ಯುವತಿಯರ ಮನವನ್ನೂ ಗೆಲ್ಲುತ್ತಿರುವ ಹ್ಯಾಂಡ್‌ ಲೂಮ್‌ ಸೀರೆ

Mangalore Homestay case
ಕರ್ನಾಟಕ26 mins ago

Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ

shravan foods
ಆರೋಗ್ಯ36 mins ago

Shravan Recipes: ಶ್ರಾವಣ ಮಾಸದಲ್ಲಿ ಸಾಬುದಾನದ ಈ 5 ಖಾದ್ಯಗಳನ್ನು ಮಾಡಿ ನೋಡಿ

IND vs SL 3rd ODI
ಕ್ರೀಡೆ37 mins ago

IND vs SL 3rd ODI: ನಾಳೆ ಅಂತಿಮ ಏಕದಿನ; ರೋಹಿತ್​ ಪಡೆಗೆ ಗೆಲ್ಲಲೇ ಬೇಕಾದ ಒತ್ತಡ!

Wild Animals Attack
ಚಿಕ್ಕಮಗಳೂರು1 hour ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Fortis Hospital
ಬೆಂಗಳೂರು1 hour ago

Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

Viral Video
Latest1 hour ago

Viral Video: ಪಿಕ್‌ನಿಕ್‌ಗೆಂದು ಬಂದವನು ರೀಲ್ಸ್‌ ಮಾಡಲು ಹೋದ; ಜಲಪಾತದಿಂದ ಬಿದ್ದು ಸತ್ತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 hour ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌