Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು... - Vistara News

ಪ್ರಮುಖ ಸುದ್ದಿ

Bangladesh Protest : ಆಘಾತಕಾರಿ ಬೆಳವಣಿಗೆ; ಬಾಂಗ್ಲಾದಲ್ಲಿ ಹಿಂದೂಗಳಿಗೆ ಜೀವ ಬೆದರಿಕೆ; ಕಣ್ಣೀರಿಡುತ್ತಿದ್ದಾರೆ ಮಹಿಳೆಯರು…

Bangladesh Protest : ದುಷ್ಕರ್ಮಿಗಳು ನನ್ನ ಮನೆಯನ್ನು ಧ್ವಂಸಗೊಳಿಸಿದರು. ನನ್ನ ಕುಟುಂಬ ಮತ್ತು ನನಗೆ ಕೊಲೆ ಬೆದರಿಕೆಗಳು ಬರುತ್ತಿವೆ. ನಾವೆಲ್ಲರೂ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಓಡಿ ಹೋಗಲು ಬೆದರಿಕೆ ಹಾಕಲಾಗುತ್ತಿದೆ. ನಾನು ಬಾಂಗ್ಲಾದೇಶದ ಪ್ರಜೆಯಲ್ಲವೇ? ನಾನು ಇಲ್ಲಿ ವಾಸಿಸಲು ಸ್ವತಂತ್ರನಲ್ಲವೇ? ನನ್ನ ಕುಟುಂಬ ಮತ್ತು ನಾನು ಭಾರತದಲ್ಲಿ ಆಶ್ರಯವನ್ನು ಏಕೆ ಹುಡುಕಬೇಕು? ನಾವು ಹಿಂದೂಗಳು ಎಂಬ ಕಾರಣಕ್ಕಾಗಿಯೇ?” ಎಂದು ಮಹಿಳೆ ಭಾವುಕರಾಗಿ ಕೇಳಿದ್ದಾರೆ.

VISTARANEWS.COM


on

Bangladesh Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಾಂಗ್ಲಾದಲ್ಲಿ ಉಂಟಾಗಿರುವ ಅರಾಜಕತೆ (Bangladesh Protest ) ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಜೀವಕ್ಕೆ ಅಪಾಯ ತಂದೊಡ್ಡಿದೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಅಲ್ಲಿನ ಹಿಂದೂ ಮಹಿಳೆಯೊಬ್ಬರು ಸುರಕ್ಷತೆಗಾಗಿ ಅಂಗಲಾಚುವ ವಿಡಿಯೊವೊಂದು ವೈರಲ್ ಆಗಿದೆ. ಇದು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಜೀವನದ ದುಃಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತಿದೆ. ದುಷ್ಕರ್ಮಿಗಳು ತಮ್ಮ ಮನೆಯನ್ನು ಧ್ವಂಸಗೊಳಿಸಿದ್ದಲ್ಲದೆ, ತನ್ನ ಕುಟುಂಬವನ್ನು ಭಾರತಕ್ಕೆ ವಾಪಸ್​ ಹೋಗುವಂತೆ ಒತ್ತಾಯಿಸಿ ಕೊಲೆ ಬೆದರಿಕೆಗಳನ್ನು ಒಡ್ಡುತ್ತಿದ್ದಾರೆ ಎಂದು ಮಹಿಳೆ ವಿವರಿಸಿದ್ದಾರೆ. ಘಟನೆಯನ್ನು ವಿವರಿಸುವಾಗ ಮಹಿಳೆಯ ಜೋರಾಗಿ ಅಳುತ್ತಿದ್ದಾರೆ.

ದುಷ್ಕರ್ಮಿಗಳು ನನ್ನ ಮನೆಯನ್ನು ಧ್ವಂಸಗೊಳಿಸಿದರು. ನನ್ನ ಕುಟುಂಬ ಮತ್ತು ನನಗೆ ಕೊಲೆ ಬೆದರಿಕೆಗಳು ಬರುತ್ತಿವೆ. ನಾವೆಲ್ಲರೂ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಓಡಿ ಹೋಗಲು ಬೆದರಿಕೆ ಹಾಕಲಾಗುತ್ತಿದೆ. ನಾನು ಬಾಂಗ್ಲಾದೇಶದ ಪ್ರಜೆಯಲ್ಲವೇ? ನಾನು ಇಲ್ಲಿ ವಾಸಿಸಲು ಸ್ವತಂತ್ರನಲ್ಲವೇ? ನನ್ನ ಕುಟುಂಬ ಮತ್ತು ನಾನು ಭಾರತದಲ್ಲಿ ಆಶ್ರಯವನ್ನು ಏಕೆ ಹುಡುಕಬೇಕು? ನಾವು ಹಿಂದೂಗಳು ಎಂಬ ಕಾರಣಕ್ಕಾಗಿಯೇ?” ಎಂದು ಮಹಿಳೆ ಭಾವುಕರಾಗಿ ಕೇಳಿದ್ದಾರೆ.

ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಯ ನಂತರ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಇಸ್ಲಾಮಿಕ್ ಉಗ್ರಗಾಮಿಗಳು ಬಳಸಿಕೊಳ್ಳುತ್ತಿದ್ದಾರೆ. ಬಾಂಗ್ಲಾದೇಶವು ಪ್ರಸ್ತುತ ಪ್ರಕ್ಷುಬ್ಧತೆಯಲ್ಲಿ ಮುಳುಗಿದೆ. ಉಗ್ರಗಾಮಿ ಗುಂಪುಗಳು ಹಿಂದೂ ಅಲ್ಪಸಂಖ್ಯಾತರ ಮೇಲೆ ತಮ್ಮ ದಾಳಿಗಳನ್ನು ಆರಂಭಿಸಿವೆ. ಮನೆಗಳನ್ನು ಸುಡುವುದು, ಮಹಿಳೆಯರ ಅಪಹರಣ ಮತ್ತು ವ್ಯಾಪಕ ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಗಲಭೆ ಪೀಡಿತ ಪ್ರದೇಶಗಳ ಪ್ರತ್ಯಕ್ಷದರ್ಶಿ ವರದಿಗಳು ಮತ್ತು ವೀಡಿಯೊಗಳು ಬೆಚ್ಚಿ ಬೀಳಿಸುವಂತಿದೆ. ಇಸ್ಕಾನ್ ಮತ್ತು ಕಾಳಿ ದೇವಾಲಯ ಸೇರಿದಂತೆ ಹಿಂದೂ ಮನೆಗಳು ಮತ್ತು ದೇವಾಲಯಗಳನ್ನು ಲೂಟಿ ಮಾಡಲಾಗುತ್ತಿದೆ. ಅಲ್ಲೆಲ್ಲ ಬೆಂಕಿ ಹಚ್ಚಲಾಗಿದೆ. ಮಹಿಳೆಯರನ್ನು ಅಪಹರಿಸಿ ಅಜ್ಞಾತ ಸ್ಥಳಗಳಿಗೆ ಕರೆದೊಯ್ಯಲಾಗುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ದಾಳಿಕೋರರು ಕಾನೂನು ಮತ್ತು ಮಾನವ ಜೀವದ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಅಲ್ಪ ಸಂಖ್ಯಾತ ಸಮುದಾಯವು ಭಯದಲ್ಲಿ ಬದುಕುತ್ತಿದೆ.

ಹಿಂಸಾಚಾರವು ಭಾನುವಾರ ಭೀಕರವಾಗಿತ್ತು ಘರ್ಷಣೆಗಳ ಪರಿಣಾಮವಾಗಿ ಹಿಂದೂ ಕೌನ್ಸಿಲರ್ ಹಾಗೂ ಪರಶುರಾಮ್ ಥಾನಾ ಅವಾಮಿ ಲೀಗ್ ಸದಸ್ಯ ಹರಧನ್ ರಾಯ್ ಸೇರಿದಂತೆ ನೂರಾರು ಜನರನ್ನು ಹತ್ಯೆ ಮಾಡಲಾಗಿದೆ. ಪ್ರತಿಭಟನಾಕಾರರು ಮತ್ತು ಸರ್ಕಾರದ ಬೆಂಬಲಿಗರ ನಡುವಿನ ಘರ್ಷಣೆಗಳು ತೀವ್ರಗೊಳ್ಳುತ್ತಿದ್ದಂತೆ ಹಿಂಸಾಚಾರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Muhammad Yunus : ನೊಬೆಲ್ ಪುರಸ್ಕೃತ ಮುಹಮ್ಮದ್ ಯೂನುಸ್​ ಬಾಂಗ್ಲಾ ಮಧ್ಯಂತರ ಸರ್ಕಾರದ ಸಲಹೆಗಾರ

ಹೆಚ್ಚುತ್ತಿರುವ ಹಿಂಸಾಚಾರವನ್ನು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳು ಖಂಡಿಸಿವೆ. ಹಿಂದೂ ಅಲ್ಪಸಂಖ್ಯಾತರನ್ನು ರಕ್ಷಿಸಲು ತಕ್ಷಣದ ಕ್ರಮವನ್ನು ಒತ್ತಾಯಿಸಿವೆ. ಆದಾಗ್ಯೂ, ಬಾಂಗ್ಲಾದೇಶದ ಅಧಿಕಾರಿಗಳು ಬಿಕ್ಕಟ್ಟನ್ನು ಪರಿಹರಿಸಲು ಹೆಣಗಾಡುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

Muda Scam: ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಟಿ.ಜೆ. ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆ ಹಾಗೂ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದಾರೆ.

VISTARANEWS.COM


on

MUDA scam
Koo

ಬೆಂಗಳೂರು: ಮುಡಾ ಹಗರಣ (Muda Scam) ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಟಿ. ಜೆ. ಅಬ್ರಹಾಂ ಅವರು ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ಸಿಎಂ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆಗಳನ್ನು ನೀಡಿದ್ದಾರೆ.

ರಾಜಭವನಕ್ಕೆ ಬರುವಂತೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಸೂಚಿಸಿದ ಹಿನ್ನೆಲೆಯಲ್ಲಿ ಅಬ್ರಹಾಂ ಭೇಟಿಯಾಗಿದ್ದರು. ಮುಡಾ ಹಗರಣ ಕುರಿತು ಮತ್ತಷ್ಟು ದಾಖಲೆಗಳನ್ನು ರಾಜ್ಯಪಾಲರು ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.

ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದ ಟಿ.ಜೆ. ಅಬ್ರಹಾಂ

ರಾಜ್ಯಪಾಲರ ಭೇಟಿ ಬಳಿಕ ಟಿ.ಜೆ. ಅಬ್ರಹಾಂ ಮಾತನಾಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನನ್ನ ಬೇಡಿಕೆ ಏನಿತ್ತೋ ಅದರ ಮೇರೆಗೆ ಸರ್ಕಾರಕ್ಕೆ ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದರು. ಆದರೆ ಸಚಿವ ಸಂಪುಟ ಸಿಎಂ ತಪ್ಪಿಲ್ಲ, ರಾಜ್ಯಪಾಲರು ನೋಟಿಸ್ ಕೊಟ್ಟಿರೋದೇ ತಪ್ಪು ಅಂತ ನಿರ್ಣಯ ಮಾಡಿದೆ. ಅಬ್ರಹಾಂ ಸರಿಯಿಲ್ಲ ಅಂತಲೂ ಸರ್ಕಾರ ಆಪಾದನೆ ಮಾಡಿದೆ. ಹೀಗಾಗಿ ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಸರ್ಕಾರ ನನ್ನ ಮೇಲೆ ಮಾಡಿರುವ ಆರೋಪ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ನನಗೆ ತಿಳಿದ ಮಟ್ಟಿಗೆ ರಾಜ್ಯಪಾಲರು ಸಿಎಂಗೆ ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ ಎಂದರೆ ಅವರಿಗೆ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಇದೆ ಎಂದರ್ಥ. ಕಳೆದ ಗುರುವಾರ ರಾಜ್ಯಪಾಲರ ಸಮಯ ಕೇಳಿದ್ದೆ, ಇವತ್ತು ಬರಲು ಹೇಳಿದ್ದರು, ಬಂದು ಸ್ಪಷ್ಟೀಕರಣ ಕೊಟ್ಟಿದ್ದೇನೆ ಎಂದರು.

ನನ್ನ ವಿರುದ್ಧ ಯಾವ ದೂರೂ ಇಲ್ಲ. ಸರ್ಕಾರಕ್ಕೆ ನಾನು ನೇರ ಸವಾಲ್ ಹಾಕುತ್ತೇನೆ. ನನ್ನ ವಿರುದ್ಧ ಕೇಸ್ ಹುಡುಕಿ, ಹುಡುಕಲು ಆಗದಿದ್ದರೆ ಹೇಗೆ ಹುಡುಕಬೇಕು ಅಂತ ನನ್ನ ಕೇಳಿ ಎಂದು ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿಟ್ಟಿದೆ. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ​

ಸಿಎಂಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ನೋಟಿಸ್ ವಾಪಸ್ ಪಡೆಯುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ | L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

Continue Reading

ಪ್ರಮುಖ ಸುದ್ದಿ

Viral News: ಸರ್ಕಾರಿ ಶಾಲಾ ಮಕ್ಕಳಿಗೆ ಸಾಂಬಾರ್‌ ಇಲ್ಲವೆಂದು ಅನ್ನದ ಜತೆ ಮೆಣಸಿನ ಪುಡಿ ಕೊಟ್ಟರು!

Viral News: ತೆಲಂಗಾಣದ ಕೊಥಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವಾಗಿ ವಿದ್ಯಾರ್ಥಿಗಳಿಗೆ ಅನ್ನದ ಜೊತೆ ಸಾರನ್ನು ನೀಡುವ ಬದಲು ಮೆಣಸಿನ ಪುಡಿ ನೀಡಿದ ಘಟನೆ ವ್ಯಾಪಕ ಟೀಕೆಗೆ ಕಾರಣವಾಗಿದೆ. ಈ ಘಟನೆಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. “ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವ ಸಿಎಂ ಉಪಾಹಾರ ಯೋಜನೆಯನ್ನು ರದ್ದುಗೊಳಿಸಿದ ಸರ್ಕಾರವು ಈಗ ಮಧ್ಯಾಹ್ನದ ಊಟವನ್ನು ಒದಗಿಸುವಲ್ಲಿ ವಿಫಲವಾಗಿದೆ. ಇದು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆʼʼ ಎಂದು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಮುಖಂಡ ಹರೀಶ್ ರಾವ್ ಕಿಡಿಕಾರಿದ್ದಾರೆ.

VISTARANEWS.COM


on

Viral News
Koo


ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟದ ಯೋಜನೆ ಜಾರಿ ಮಾಡಿದ ಸರ್ಕಾರ ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಸರಿಯಾಗಿ ಪೂರೈಸುತ್ತಿಲ್ಲ. ಇದರಿಂದ ಶಾಲಾ ಮಕ್ಕಳು ಸಂಕಷ್ಟಕ್ಕೀಡಾಗಿದ್ದಾರೆ. ಸರಿಯಾಗಿ ಊಟ ಸಿಗದೆ ಪರದಾಡುವಂತಾಗಿದೆ. ದೇಶದ ಹಲವು ಕಡೆಯಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಇದೇ ಕಥೆಯಾಗಿದೆ. ಇದೀಗ ಅಂತದೊಂದು ಘಟನೆ ತೆಲಂಗಾಣದ ಕೊಥಪಲ್ಲಿ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದ್ದು, ಈ ಸರ್ಕಾರಿ ಶಾಲೆಯ ಅವ್ಯವಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral News) ಆಗಿ ಬಯಲಿಗೆ ಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದಾರೆ.

ತೆಲಂಗಾಣದ ಕೊಥಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವಾಗಿ ವಿದ್ಯಾರ್ಥಿಗಳಿಗೆ ಅನ್ನದ ಜೊತೆ ಸಾರನ್ನು ನೀಡುವ ಬದಲು ಮೆಣಸಿನ ಪುಡಿ ಮತ್ತು ಎಣ್ಣೆಯನ್ನು ನೀಡಿದ ಘಟನೆಯ ನಡೆದಿದೆ. ಆಗಸ್ಟ್ 3 ರ ಶನಿವಾರದಂದು ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದು ವಿವಾದಕ್ಕೆ ಕಾರಣವಾಗಿತ್ತು. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಮುಖಂಡ ಹರೀಶ್ ರಾವ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದರು. “ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರವನ್ನು ಒದಗಿಸುವ ಸಿಎಂ ಉಪಾಹಾರ ಯೋಜನೆಯನ್ನು ರದ್ದುಗೊಳಿಸಿದ ಸರ್ಕಾರವು ಈಗ ಮಧ್ಯಾಹ್ನದ ಊಟವನ್ನು ಒದಗಿಸುವಲ್ಲಿ ವಿಫಲವಾಗಿದೆ.

ಇದು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಂಬಂಧಿಸಿದ ಅಡುಗೆ ಸಹಾಯಕರ ವೇತನ ಬಾಕಿ ಇರುವುದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಊಟ ಸಿಗುತ್ತಿಲ್ಲ. ಹಾಗಾಗಿ ಉಪ ಮುಖ್ಯಮಂತ್ರಿ ಕೂಡಲೇ ಸ್ಪಂದಿಸಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಬಾಕಿ ಬಿಲ್ ಪಾವತಿಸಿ, ಕಾರ್ಮಿಕರ ವೇತನ ಪಾವತಿಸಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಿ ಎಂದು ಮನವಿ ಮಾಡುತ್ತೇನೆ “ ಎಂದು ಟ್ವೀಟ್ ಮಾಡಿದ್ದಾರೆ.

ಇದರಿಂದಾಗಿ ಸರ್ವ ಶಿಕ್ಷಣ ಅಕಾಡೆಮಿಕ್ ಮಾನಿಟರಿಂಗ್ ಸೆಲ್ ಅಧಿಕಾರಿಗಳು ಸೋಮವಾರ ಶಾಲೆಗೆ ಭೇಟಿ ನೀಡಿದ್ದಾರೆ. ಈ ಘಟನೆಗೆ ಪ್ರತಿಕ್ರಿಯಿಸಿದ, ಜಿಲ್ಲಾ ಅಧಿಕಾರಿಗಳು ಮಂಡಲ ಶಿಕ್ಷಣ ಅಧಿಕಾರಿಗಳು (ಎಂಇಒಗಳು), ಮುಖ್ಯ ಶಿಕ್ಷಕರು (ಎಚ್ಎಂ) ಮತ್ತು ಶಿಕ್ಷಕರನ್ನು ಎಚ್ಚರಿಸಿ, ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಸರಿಯಾಗಿ ನೋಡಿಕೊಳ್ಳುವಂತೆ ಕೇಳಿಕೊಂಡರು.‌

ಇದನ್ನೂ ಓದಿ:Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

ಮಧ್ಯಾಹ್ನದ ಊಟವನ್ನು ಪೂರೈಸುವ ಏಜೆನ್ಸಿಯು ವಿದ್ಯಾರ್ಥಿಗಳಿಗೆ ಅನ್ನದೊಂದಿಗೆ ದಾಲ್ ಮತ್ತು ತರಕಾರಿಗಳನ್ನು ಮಾತ್ರ ನೀಡುತ್ತದೆ. ಆದರೆ ಮೊಟ್ಟೆಗಳನ್ನು ನೀಡುತ್ತಿಲ್ಲ. ಇದಕ್ಕೆ ಕಾರಣ ಮೊಟ್ಟೆಗಳ ಪೂರೈಕೆಯಲ್ಲಿನ ಕೊರತೆ ಎನ್ನಲಾಗಿದೆ. ಹಾಗಾಗಿ ಮಧ್ಯಾಹ್ನದ ಊಟದ ಬಜೆಟ್ ಅನ್ನು ಹೆಚ್ಚಿಸಬೇಕು ಎಂದು ಏಜೆನ್ಸಿ ಒತ್ತಾಯಿಸಿದೆ. ಪ್ರಾಥಮಿಕ ತರಗತಿ ಮಕ್ಕಳಿಗೆ 5 ರೂ., ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 8 ರೂ. ಮೊತ್ತವನ್ನು ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದರು ಮತ್ತು ನಿಗದಿಪಡಿಸಿದ ಸ್ಥಳದಲ್ಲಿ ಸಮಸ್ಯೆ ಇರುವುದರಿಂದ ಮೊಟ್ಟೆಗಳನ್ನು ಪೂರೈಸಲು ಮತ್ತು ಅಡುಗೆಮನೆಯನ್ನು ನಿರ್ಮಿಸಿಕೊಡಬೇಕೆಂದು ಇಲಾಖೆಗೆ ವಿನಂತಿಸಿದರು ಎಂಬುದಾಗಿ ತಿಳಿದುಬಂದಿದೆ.

Continue Reading

ವಿದೇಶ

Bangladesh Unrest: ಬಾಂಗ್ಲಾ ಸಂಸತ್‌ ವಿಸರ್ಜನೆ; ಮಾಜಿ ಪ್ರಧಾನಿ ಖಲೀದಾ ಜಿಯಾ ಜೈಲಿನಿಂದ ರಿಲೀಸ್‌

Bangladesh Unrest: ಶೇಖ್‌ ಹಸೀನಾ ಅವರ ಬದ್ಧ ವಿರೋಧಿ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನೂ ಇಂದು ಬಿಡುಗಡೆಗೊಳಿಸಲಾಗಿದೆ. ಜಿಯಾರನ್ನು 2018ರಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಶಹಾಬುದ್ದೀನ್ ನೇತೃತ್ವದ ಸಭೆಯಲ್ಲಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷರ ಪತ್ರಿಕಾ ತಂಡವು ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

Bangladesh unrest
Koo

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಲಿನ ಸರ್ಕಾರದ ವಿರುದ್ಧ ನಡೆಯುತ್ತಿದ್ದ (Bangladesh Unrest) ಪ್ರತಿಭಟನೆ ಪ್ರತಿಭಟನೆ ಸೇನಾ ದಂಗೆಯಾಗಿ ಮಾರ್ಪಟ್ಟಿದೆ. ಇದರ ಬೆನ್ನಲ್ಲೇ ಶೇಖ್ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಇದೀಗ ಬಾಂಗ್ಲಾದೇಶ ರಾಷ್ಟ್ರಪತಿ ಮೊಹಮ್ಮದ್‌ ಶಹಬುದ್ದೀನ್‌ ಇಂದು ಸಂಸತ್ತನ್ನು ವಿಸರ್ಜಿಸಿದ್ದಾರೆ.

ಮೂರು ಸೇನೆಯ ಮುಖ್ಯಸ್ಥರು, ವಿವಿಧ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಮುಖಂಡರು ಹಾಗೂ ತಾರತಮ್ಯ ವಿರೋಧಿ ವಿದ್ಯಾರ್ಥಿಗಳ ಸಂಘಟನೆ ಮುಖಂಡರ ಜೊತೆ ಚರ್ಚೆ ನಡೆಸಿದ ಬಳಿಕ ರಾಷ್ಟ್ರಪತಿಯವರು ಈ ನಿರ್ಧಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನೂ ಹೊರಹಾಕಿದ್ದಾರೆ.

ಖಲೀದಾ ಜಿಯಾ ರಿಲೀಸ್‌

ಮತ್ತೊಂದೆಡೆ ಶೇಖ್‌ ಹಸೀನಾ ಅವರ ಬದ್ಧ ವಿರೋಧಿ ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನೂ ಇಂದು ಬಿಡುಗಡೆಗೊಳಿಸಲಾಗಿದೆ. ಜಿಯಾರನ್ನು 2018ರಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸ್ಟ್‌ ಮಾಡಲಾಗಿತ್ತು. ಶಹಾಬುದ್ದೀನ್ ನೇತೃತ್ವದ ಸಭೆಯಲ್ಲಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ವಾನುಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷರ ಪತ್ರಿಕಾ ತಂಡವು ಹೇಳಿಕೆಯಲ್ಲಿ ತಿಳಿಸಿದೆ. ಸಭೆಯಲ್ಲಿ ಸೇನಾ ಮುಖ್ಯಸ್ಥ ಜನರಲ್ ವಕಾರ್ ಉಜ್ ಜಮಾನ್, ನೌಕಾಪಡೆ ಮತ್ತು ವಾಯುಪಡೆ ಮುಖ್ಯಸ್ಥರು ಮತ್ತು ಬಿಎನ್‌ಪಿ, ಜಮಾತ್-ಎ-ಇಸ್ಲಾಮಿ ಪಾರ್ಟಿ ಸೇರಿದಂತೆ ಹಲವು ವಿರೋಧ ಪಕ್ಷಗಳ ಉನ್ನತ ನಾಯಕರು ಉಪಸ್ಥಿತರಿದ್ದರು.

ಇನ್ನು ದಂಗೆ ಪ್ರಾರಂಭವಾದಗಿನಿಂದ ಆ.5ರವರೆಗೆ ಅರೆಸ್ಟ್‌ ಮಾಡಿರುವ ಜನರನ್ನು ಬಿಡುಗಡೆಗೊಳಿಸಲಾಗಿದೆ. ಮತ್ತೊಂದೆಡೆ ಜಮಾತ್‌ ಎ ಇಸ್ಲಾಮಿ ಮುಖ್ಯಸ್ಥ ಡಾ. ಶಾಫಿಖರ್‌ ರೆಹ್ಮಾನ್‌ ಪತ್ರಿಕಾಗೋಷ್ಠಿ ಕರೆದು ಬಾಂಗ್ಲಾದ ಪ್ರಸ್ತುತ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ.

ಶೇಖ್ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಹಸೀನಾ ಬಾಂಗ್ಲಾದೇಶದಿಂದ ಮಿಲಿಟರಿ ವಿಮಾನದಲ್ಲಿ ಪಲಾಯನ ಮಾಡಿದ್ದಾರೆ ಎಂಬ ಸುದ್ದಿ ಹರಡುತ್ತಿದ್ದಂತೆ, ಪ್ರತಿಭಟನಾಕಾರರು ಮಾಜಿ ಪ್ರಧಾನಿಯ ನಿವಾಸಕ್ಕೆ ನುಗ್ಗಿ ಮಾಜಿ ಅವರ ಬ್ರಾಗಳನ್ನೂ ಬಿಡಿದೇ ದೋಚಿದ್ದಾರೆ. ಇದರ ವಿಡಿಯೊ ಹಾಗೂ ಚಿತ್ರಗಳು ವೈರಲ್​ ಆಗಿವೆ. ಅಲ್ಲಿನ ಪ್ರತಿಭಟನಾಕಾರರ ಮನಸ್ಥಿತಿಯ ಬಗ್ಗೆ ಜಾಗತಿಕವಾಗಿ ಟೀಕೆಗಳು ಕೇಳಿ ಬಂದಿವೆ.

ಪ್ರತಿಭಟನಾಕಾರರು ಸೀರೆಗಳು ಸೇರಿದಂತೆ ತಮ್ಮಿಂದ ಸಾಧ್ಯವಾದದ್ದನ್ನು ನಿರಂತರವಾಗಿ ಲೂಟಿ ಮಾಡಿದ್ದರು. ವೈರಲ್ ವೀಡಿಯೊಗಳು ಮತ್ತು ಚಿತ್ರಗಳು ಪ್ರತಿಭಟನಾಕಾರರೊಬ್ಬರು ನಾಚಿಕೆಯಿಲ್ಲದೆ ಕೈಯಲ್ಲಿ ಬ್ರಾಗಳನ್ನು ಹಿಡಿದುಕೊಂಡು ಮಾಜಿ ಪ್ರಧಾನಿಯ ಅಧಿಕೃತ ನಿವಾಸದಿಂದ ಲೂಟಿ ಮಾಡಿರುವುದನ್ನು ತೋರಿಸಿದೆ. ಇದು ಪ್ರತಿಭಟನೆಯಲ್ಲ ಕೇವಲ ದೊಂಬಿ ಎಂಬುದನ್ನು ಸಾಬೀತು ಮಾಡಿದೆ.

ಇದನ್ನೂ ಓದಿ: Bangladesh Protest: ಬಾಂಗ್ಲಾದೇಶದಲ್ಲಿನ ಹಿಂಸಾಚಾರದ ಹಿಂದೆ ಬೇರೆ ದೇಶಗಳ ಕೈವಾಡವಿದೆಯೇ?; ರಾಹುಲ್‌ ಗಾಂಧಿ ಪ್ರಶ್ನೆ

Continue Reading

ಉದ್ಯೋಗ

SSC Recruitment 2024: ಗುಡ್‌ನ್ಯೂಸ್‌; 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

SSC Recruitment 2024: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17.

VISTARANEWS.COM


on

SSC Recruitment 2024
Koo

ನವದೆಹಲಿ: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಸಿ ಸ್ಟೆನೋಗ್ರಾಫರ್‌ ಗ್ರೂಪ್‌ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-30 ವರ್ಷದೊಳಗಿರಬೇಕು ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-27 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಆನ್‌ಲೈನ್‌ ಮೂಲಕ 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ, ಮಹಿಳಾ, ಮಾಜಿ ಸೈನಿಕ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್ ಆಧಾರಿತ ಆನ್‌ಲೈನ್‌ ಪರೀಕ್ಷೆ ಜತೆಗೆ ಸ್ಟೆನೋಗ್ರಾಫಿ ಸ್ಕಿಲ್‌ ಟೆಸ್ಟ್‌ ಇರುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮೂಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಕೊನೆಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 30,000 ರೂ. – 39, 995 ರೂ. ಮಾಸಿಕ ವೇತನ ದೊರೆಯಲಿದೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login)
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading
Advertisement
Devara Part 1
ಸಿನಿಮಾ4 mins ago

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

Bangladesh Unrest
ವಿದೇಶ6 mins ago

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

National Handloom Day
ಫ್ಯಾಷನ್15 mins ago

National Handloom Day: ಮಾಡರ್ನ್‌ ಯುವತಿಯರ ಮನವನ್ನೂ ಗೆಲ್ಲುತ್ತಿರುವ ಹ್ಯಾಂಡ್‌ ಲೂಮ್‌ ಸೀರೆ

Mangalore Homestay case
ಕರ್ನಾಟಕ22 mins ago

Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ

shravan foods
ಆರೋಗ್ಯ33 mins ago

Shravan Recipes: ಶ್ರಾವಣ ಮಾಸದಲ್ಲಿ ಸಾಬುದಾನದ ಈ 5 ಖಾದ್ಯಗಳನ್ನು ಮಾಡಿ ನೋಡಿ

IND vs SL 3rd ODI
ಕ್ರೀಡೆ33 mins ago

IND vs SL 3rd ODI: ನಾಳೆ ಅಂತಿಮ ಏಕದಿನ; ರೋಹಿತ್​ ಪಡೆಗೆ ಗೆಲ್ಲಲೇ ಬೇಕಾದ ಒತ್ತಡ!

Wild Animals Attack
ಚಿಕ್ಕಮಗಳೂರು1 hour ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Fortis Hospital
ಬೆಂಗಳೂರು1 hour ago

Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

Viral Video
Latest1 hour ago

Viral Video: ಪಿಕ್‌ನಿಕ್‌ಗೆಂದು ಬಂದವನು ರೀಲ್ಸ್‌ ಮಾಡಲು ಹೋದ; ಜಲಪಾತದಿಂದ ಬಿದ್ದು ಸತ್ತ

Komari Janaiah Naidu
ಸಿನಿಮಾ1 hour ago

Komari Janaiah Naidu: ಟಾಲಿವುಡ್‌ ನಿರ್ದೇಶಕ ಕೊಮರಿ ಜನಯ್ಯ ನಾಯ್ಡು ಆತ್ಮಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 hour ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌