SSC Recruitment 2024: ಗುಡ್‌ನ್ಯೂಸ್‌; 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ - Vistara News

ಉದ್ಯೋಗ

SSC Recruitment 2024: ಗುಡ್‌ನ್ಯೂಸ್‌; 2,006 ಸ್ಟೆನೋಗ್ರಾಫರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

SSC Recruitment 2024: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17.

VISTARANEWS.COM


on

SSC Recruitment 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 17 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್‌ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಸಿ ಸ್ಟೆನೋಗ್ರಾಫರ್‌ ಗ್ರೂಪ್‌ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-30 ವರ್ಷದೊಳಗಿರಬೇಕು ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-27 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಆನ್‌ಲೈನ್‌ ಮೂಲಕ 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ, ಮಹಿಳಾ, ಮಾಜಿ ಸೈನಿಕ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್ ಆಧಾರಿತ ಆನ್‌ಲೈನ್‌ ಪರೀಕ್ಷೆ ಜತೆಗೆ ಸ್ಟೆನೋಗ್ರಾಫಿ ಸ್ಕಿಲ್‌ ಟೆಸ್ಟ್‌ ಇರುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮೂಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಕೊನೆಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 30,000 ರೂ. – 39, 995 ರೂ. ಮಾಸಿಕ ವೇತನ ದೊರೆಯಲಿದೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login)
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

KAS Prelims Exam: ಲೋಕಸಭಾ ಚುನಾವಣೆ ಸೇರಿ ವಿವಿಧ ಕಾರಣಗಳಿಂದ ಹಲವು ಬಾರಿ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆಯನ್ನು(KAS Recruitment 2024) ಆ.25ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಮತ್ತೆ ಎರಡು ದಿನಗಳ ಕಾಲ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದೂಡಿದೆ.

VISTARANEWS.COM


on

KAS prelims exam
Koo

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ (KAS Prelims Exam) ಮತ್ತೆ ಮುಂದೂಡಿಕೆಯಾಗಿದೆ. ಒಂದೇ ದಿನ ಬ್ಯಾಂಕಿಂಗ್‌ ಪರೀಕ್ಷೆ ಹಾಗೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದರಿಂದ ಎರಡು ದಿನಗಳ ಕಾಲ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಅಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಅವರೊಂದಿಗೆ ಚರ್ಚಿಸಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಪತ್ರ

ಆ.27 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ 564 ಪರೀಕ್ಷಾ ಉಪಕೇಂದ್ರಗಳಿಗೆ ಒಂದು ದಿವಸದ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಿ, ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವಂತೆ ಅನುವು ಮಾಡಿಕೊಡಬೇಕು ಹಾಗೂ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಸರ್ಕಾರದ ಕಾರ್ಯದರ್ಶಿ ರಣದೀಪ್‌ ಡಿ. ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

teacher jobs alert
teacher jobs alert

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

Continue Reading

ಪ್ರಮುಖ ಸುದ್ದಿ

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Jobs Alert: ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

VISTARANEWS.COM


on

teacher jobs alert
Koo

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

Continue Reading

ಕರ್ನಾಟಕ

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

KHIR City: ಬೆಂಗಳೂರು ನಗರದಿಂದ 60 ಕಿ.ಮೀ. ದೂರದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಒಟ್ಟು 2,000 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಜಾಗದಲ್ಲಿ ಯೋಜನೆ ತಲೆ ಎತ್ತಲಿದೆ. ಒಟ್ಟು ಎರಡೂ ಹಂತಗಳಲ್ಲಿ 40 ಸಾವಿರ ಕೋಟಿ ರೂ.ಗಳಿಗಿಂತಲೂ ಹೆಚ್ಚು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಆ.23 ರಂದು ಬೆಳಿಗ್ಗೆ 11 ಗಂಟೆಗೆ ನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೆಎಚ್ಐಆರ್ ಸಿಟಿಗೆ ಚಾಲನೆ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

VISTARANEWS.COM


on

KHIR City project Launch on August 23 at bengaluru says Minister MB Patil
Koo

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಎನ್ನಲಾದ, ಬಹು ಮಹತ್ತ್ವಾಕಾಂಕ್ಷೆಯ `ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿʼ (ಕೆಎಚ್ಐಆರ್ ಸಿಟಿ) ಯೋಜನೆಯ (KHIR City) ಮೊದಲನೇ ಹಂತಕ್ಕೆ ಆ.23ರಂದು ಶುಕ್ರವಾರ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಶನಿವಾರ ಪ್ರಕಟಣೆ ನೀಡಿರುವ ಅವರು, ನಗರದಿಂದ 60 ಕಿ.ಮೀ. ದೂರದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಒಟ್ಟು 2,000 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಜಾಗದಲ್ಲಿ ಯೋಜನೆ ತಲೆ ಎತ್ತಲಿದೆ. ಒಟ್ಟು ಎರಡೂ ಹಂತಗಳಲ್ಲಿ 40 ಸಾವಿರ ಕೋಟಿ ರೂ.ಗಳಿಗಿಂತಲೂ ಹೆಚ್ಚು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. 23 ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೆಎಚ್ಐಆರ್ ಸಿಟಿಗೆ ಚಾಲನೆ ಸಿಗಲಿದೆʼ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಉದ್ಯಮ ವಲಯದ ಪ್ರಮುಖರು ಕೂಡ ಭಾಗವಹಿಸಲಿದ್ದು, ಹೆಸರುಗಳು ಅಂತಿಮವಾಗುತ್ತಿವೆ ಎಂದರು.

ಪ್ರಪಂಚದ ಬೇರೆ ಬೇರೆ ಭಾಗಗಳಲ್ಲಿಯೂ ವಿಶೇಷ ನಗರಗಳ ಪರಿಕಲ್ಪನೆ ಇದೆ. ಕೇಂದ್ರ ಸರ್ಕಾರ ಕೂಡ ಇದೇ ಮಾದರಿಯನ್ನು ಅನುಸರಿಸುತ್ತದೆ. ಆದರೆ, ಕೆಎಚ್ಐಆರ್ ಸಿಟಿಯಲ್ಲಿ ನಾಲ್ಕೂ ವಲಯಗಳಲ್ಲಿನ ಜಾಗತಿಕ ಮಟ್ಟದ ಅತ್ಯುನ್ನತ ಕಂಪನಿಗಳು ನೆಲೆಯೂರಲಿವೆ. ಇದಕ್ಕೆ ಬೇಕಾದ ಜಮೀನು, ವಿದ್ಯುತ್, ನೀರು, ರಸ್ತೆ ಮತ್ತಿತರ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಇದರಿಂದ ಆರ್ಥಿಕ ವರಮಾನ ಹೆಚ್ಚಳದ ಜತೆಗೆ ರಫ್ತು ವಹಿವಾಟು ಕೂಡ ವೃದ್ಧಿಸಲಿದೆ. ಇದರಿಂದಾಗಿ ಬೆಂಗಳೂರು ನಗರವು ಇನ್ನೊಂದು ಸ್ತರ ಮೇಲೇರಲಿದೆ ಎಂದು ಅವರು ಹೇಳಿದ್ದಾರೆ.

ಜಾಗತಿಕವಾಗಿ ಉತ್ಕೃಷ್ಟ ಮಟ್ಟದ ಉದ್ದಿಮೆಗಳು, ವಿಶ್ವವಿದ್ಯಾಲಯಗಳು, ಮೆಡಿಕಲ್ ಟೂರಿಸಂ, ಸಂಶೋಧನೆ, ಚಿಕಿತ್ಸೆ, ನಾವೀನ್ಯತೆ ಇವುಗಳಿಗೆ ಉದ್ದೇಶಿತ ಸಿಟಿಯಲ್ಲಿ ಆದ್ಯತೆ ನೀಡಲಾಗುವುದು. ಜತೆಗೆ ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮೆಟೀರಿಯಲ್ಸ್, ನವೋದ್ಯಮಗಳು, ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ, ಜೀವವಿಜ್ಞಾನಗಳು ಮತ್ತು ಆಧುನಿಕ ತಂತ್ರಜ್ಞಾನ ವಲಯಗಳ ಕಂಪನಿಗಳು ಕೂಡ ಇಲ್ಲಿ ಬರಲಿವೆ.

ಮುಖ್ಯವಾಗಿ ಒಟ್ಟಾರೆ ಯೋಜನೆಯಿಂದ ಅಪಾರ ಸಂಖ್ಯೆಯ ಪರೋಕ್ಷ ಉದ್ಯೋಗಗಳು ಕೂಡ ಸೃಷ್ಟಿಯಾಗಲಿವೆ. ಇದರಿಂದ ಸ್ಥಳೀಯವಾಗಿ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದಕ್ಕಾಗಿ ಸರ್ಕಾರವು ಸ್ಪಷ್ಟ ರೂಪುರೇಷೆಯನ್ನು ಈಗಾಗಲೇ ಆಖೈರುಗೊಳಿಸಿದೆ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

ಕೆಎಚ್ಐಆರ್ ಸಿಟಿಯಲ್ಲಿ ಆರಂಭವಾಗಲಿರುವ ಉದ್ದಿಮೆಗಳಿಗೆ ಸಕಲ ರೀತಿಯ ಸೌಲಭ್ಯಗಳನ್ನೂ ಒದಗಿಸಲಾಗುವುದು. ರಾಜ್ಯದಲ್ಲೇ ನೆಲೆ ಹೊಂದಿರುವ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಉದ್ದಿಮೆಗಳು ಮತ್ತು ಸಂಶೋಧನಾ ಸಂಸ್ಥೆಗಳಿಗೂ ಇಲ್ಲಿ ಅವಕಾಶವಿರಲಿದೆ. ಈ ಮೂಲಕ ನಮ್ಮಲ್ಲಿನ ಸಂಸ್ಥೆಗಳು ಕೂಡ ಜಾಗತಿಕ ಗುಣಮಟ್ಟದ ಎತ್ತರಕ್ಕೆ ಬೆಳೆಯಲು ಅವಕಾಶ ಒದಗಿಸಲಾಗುವುದು. ಒಟ್ಟಿನಲ್ಲಿ ನಾವು ಜಾಗತಿಕ ಮಟ್ಟದಲ್ಲಿ ಪ್ರಮುಖ ಹೂಡಿಕೆ ತಾಣವಾಗಿ ಹೊರಹೊಮ್ಮಬೇಕು ಎನ್ನುವುದು ಇದರ ಹಿಂದಿನ ಆಶಯಗಳಲ್ಲಿ ಒಂದಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Continue Reading

ಕರ್ನಾಟಕ

KAS Recruitment 2024: ಆ.25ರಂದೇ ನಡೆಯಲಿದೆ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆ: ಕೆಪಿಎಸ್‌ಸಿ ಸ್ಪಷ್ಟನೆ

KAS Recruitment 2024: ಆ.25ರಂದು ನಿಗದಿಯಾಗಿರುವ ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕದಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲವೆಂದು ಎಂದು ಕೆಪಿಎಸ್‌ಸಿ ತಿಳಿಸಿದೆ.

VISTARANEWS.COM


on

KAS Recruitment 2024
Koo

ಬೆಂಗಳೂರು: ಲೋಕಸಭಾ ಚುನಾವಣೆ ಸೇರಿ ವಿವಿಧ ಕಾರಣಗಳಿಂದ ಹಲವು ಬಾರಿ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆ(KAS Recruitment 2024), ಆ.25ರಂದೇ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕೆಪಿಎಸ್‌ಸಿ, ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ಫೆ.26ಎಂದು ಅಧಿಸೂಚನೆ ಹೊರಡಿಸಿತ್ತು. ಈ ಸಂಬಂಧ ಜುಲೈ 30ರಂದು ನಡೆದ ಆಯೋಗದ ಸಭೆಯಲ್ಲಿ ಚರ್ಚಿಸಿ, ಆ.25ರಂದು ನಿಗದಿಪಡಿಸಿರುವ ಪೂರ್ವಭಾವಿ ಪರೀಕ್ಷೆಗೆ (KAS prelims exam) ಈಗಾಗಲೇ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕದಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲವೆಂದು ತೀರ್ಮಾನಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ | Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

ಪರೀಕ್ಷಾ ದಿನಾಂಕ ಬದಲಾವಣೆಗೆ ಮನವಿ

ಕೆಎಎಸ್‌ ಪೂರ್ವ ಭಾವಿ ಪರೀಕ್ಷೆ ನಿಗದಿಯಾಗಿರುವ ಆ.25ರಂದೇ ಬ್ಯಾಂಕಿಂಗ್‌ ಹುದ್ದೆಗಳಿಗೆ ಐಬಿಪಿಎಸ್‌ ಪರೀಕ್ಷೆ ನಡೆಸುತ್ತಿದೆ. ಇದರಿಂದ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಮಸ್ಯೆಯಾಗಲಿದೆ. ಹೀಗಾಗಿ ಕೆಎಎಸ್‌ ಪ್ರಿಲಿಮ್ಸ್ ಪರೀಕ್ಷಾ ದಿನಾಂಕ ಮುಂದೂಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದಾರೆ. ಆದರೆ, ಈಗಾಗಲೇ ಪೂರ್ವ ಸಿದ್ಧತೆ ನಡೆದಿರುವುದರಿಂದ ದಿನಾಂಕ ಬದಲಿಸಲು ಸಾಧ್ಯವಿಲ್ಲ ಎಂದು ಕೆಪಿಎಸ್‌ಸಿ ತಿಳಿಸಿದೆ.

Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

ಬೆಂಗಳೂರು: ಐಟಿಐ, ಬಿಟೆಕ್‌ ಅಥವಾ ಬಿಇ ಓದಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ ಲಿಮಿಟೆಡ್‌ (Electronics Corporation of India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (ECIL Recruitment 2024). ಪ್ರಾಜೆಕ್ಟ್‌ ಎಂಜಿನಿಯರ್‌, ಟೆಕ್ನಿಕಲ್‌ ಆಫೀಸರ್‌ ಸೇರಿ ಸುಮಾರು 115 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ತಿಳಿಸಿದೆ. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 8 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಪ್ರಾಜೆಕ್ಟ್ ಎಂಜಿನಿಯರ್ 20 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್
ಟೆಕ್ನಿಕಲ್ ಆಫೀಸರ್ 53 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿಟೆಕ್
ಜೂನಿಯರ್ ಟೆಕ್ನಿಷಿಯನ್ 42 ಹುದ್ದೆ, ವಿದ್ಯಾರ್ಹತೆ: ಐಟಿಐ

ವಯೋಮಿತಿ

ಪ್ರಾಜೆಕ್ಟ್ ಎಂಜಿನಿಯರ್: ಗರಿಷ್ಠ ವಯಸ್ಸು 33 ವರ್ಷ
ಟೆಕ್ನಿಕಲ್ ಆಫೀಸರ್: ಗರಿಷ್ಠ ವಯಸ್ಸು 33 ವರ್ಷ
ಜೂನಿಯರ್ ಟೆಕ್ನಿಷಿಯನ್: ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ವಿದ್ಯಾರ್ಹತೆ, ಉದ್ಯೋಗದ ಅನುಭವ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಾಜೆಕ್ಟ್ ಎಂಜಿನಿಯರ್: 40,000 ರೂ. – 55,000 ರೂ., ಟೆಕ್ನಿಕಲ್ ಆಫೀಸರ್: 25,000 ರೂ. – 31,000 ರೂ. ಮತ್ತು ಜೂನಿಯರ್ ಟೆಕ್ನಿಷಿಯನ್: 22,412 ರೂ. – 27,258 ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರಿಗೆ ಜಾಮ್ನಗರ, ಬಾರಕ್‌ಪುರ, ಕೈಗಾ, ಹೈದರಾಬಾದ್‌, ವಿಶಾಖಪಟ್ಟಣ, ಗೌರಿಬಿದನೂರು, ಮಂಗಳೂರು, ಮುಂಬೈ, ಚೆನ್ನೈ, ಥಾಣೆ, ನವದೆಹಲಿ, ಅಲಹದಾಬಾದ್‌, ಗುವಹಾಟಿ, ನಾಗ್ಪುರ, ರಾವತ್‌ಭಾಟ, ಗುಜರಾತ್‌, ತಾರಾಪುರ, ಖರಕ್‌ಪುರ, ಕುಂಡಕುಳಂ ಮುಂತಾಡೆ ಪೋಸ್ಟಿಂಗ್‌ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ECIL Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.ecil.co.in/job_details_17_2024.php)
  • ಅಗತ್ಯ ವಿವರಗಳನ್ನು ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಂಡು ಪ್ರಿಂಟ್‌ಔಟ್‌ ತೆಗೆಯಿರಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ ecil.co.inಗೆ ಭೇಟಿ ನೀಡಿ.

ಇದನ್ನೂ ಓದಿ: SSC Recruitment 2024: 2,0

Continue Reading
Advertisement
Koppala News
ಕೊಪ್ಪಳ46 seconds ago

Koppala News: ಸಿದ್ದಾಪುರದಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಡಿಸಿ ನಲೀನ್ ಅತುಲ್ ಚಾಲನೆ

DCET 2024
ಕರ್ನಾಟಕ24 mins ago

DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

Paris Olympics
ಕ್ರೀಡೆ47 mins ago

Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

Handwork Saree Blouse
ಫ್ಯಾಷನ್1 hour ago

Handwork Saree Blouse: ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಹ್ಯಾಂಡ್‌ ವರ್ಕ್‌ ಡಿಸೈನರ್‌ ಬ್ಲೌಸ್‌!

Bangladesh Unrest
ದೇಶ1 hour ago

Bangladesh Unrest: ಬಾಂಗ್ಲಾದಲ್ಲಿ 19,000 ಭಾರತೀಯರು ಸಿಲುಕಿದ್ದಾರೆ; ಸಚಿವ ಜೈ ಶಂಕರ್‌

Bangalore Hotels
ಕರ್ನಾಟಕ2 hours ago

Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Rohit Sharma
ಕ್ರೀಡೆ2 hours ago

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Almonds
ಆರೋಗ್ಯ2 hours ago

Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Devara Part 1
ಸಿನಿಮಾ2 hours ago

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

Bangladesh Unrest
ವಿದೇಶ2 hours ago

Bangladesh Unrest: ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌; ರಫಾ.. ರಫಾ.. ಎಂದು ಬೊಬ್ಬಿಡುತ್ತಿದ್ದ ಸೆಲೆಬ್ರಿಟಿಗಳು ಈಗೇಕೆ ಸೈಲೆಂಟ್‌?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು3 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌