Viral Video: ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲವೆಂದು ನ್ಯಾಯಾಧೀಶರಿಗೇ ಬಾರಿಸಿದ ವಕೀಲೆ! - Vistara News

ವೈರಲ್ ನ್ಯೂಸ್

Viral Video: ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲವೆಂದು ನ್ಯಾಯಾಧೀಶರಿಗೇ ಬಾರಿಸಿದ ವಕೀಲೆ!

ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ಭಾವಿ ಪತಿಗೆ ಜಾಮೀನು ನೀಡಲು ನಿರಾಕರಿಸಿದ ನ್ಯಾಯಾಧೀಶರ ಮೇಲೆ ವಕೀಲರೊಬ್ಬರು ಹಲ್ಲೆ ನಡೆಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಇಬ್ಬರೂ ಮಹಿಳೆಯರು ಹೊಡೆದಾಡಿಕೊಂಡಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

VISTARANEWS.COM


on

Viral video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತನ್ನ ಪ್ರಿಯಕರನಿಗೆ ಜಾಮೀನು ಕೊಡಿಸಿಲ್ಲ ಎಂದು ವಕೀಲರೊಬ್ಬರು ನ್ಯಾಯಾಧೀಶರ (fight between lawyer and judge) ಮೇಲೆ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗುತ್ತಿದೆ. ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಮಹಿಳಾ ವಕೀಲರ ನಡುವಿನ ವ್ಯಾಪಕ ವಾಗ್ವಾದದ ಬಳಿಕ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ವಿಡಿಯೋದಲ್ಲಿ ನ್ಯಾಯಾಧೀಶರೊಂದಿಗೆ ಮಹಿಳಾ ವಕೀಲರು ಜಗಳವಾಡುವುದನ್ನು ಕಾಣಬಹುದು. ಇದು ಸಾಮಾಜಿಕ ಜಾಲತಾಣ ಬಳಕೆದಾರರ ಗಮನವನ್ನು ಸೆಳೆಯುತ್ತಿದ್ದು ಸಾಕಷ್ಟು ಕಾಮೆಂಟ್‌ಗಳು ಬರುತ್ತಿವೆ.
ಇದು 2022ರ ವಿಡಿಯೋ ಕ್ಲಿಪ್ ಎನ್ನಲಾಗುತ್ತಿದೆ. ಆದರೆ ಈಗ ಸಾಮಾಜಿಕ ಜಾಲತಾಣದಲ್ಲಿ ಮಾಯಾಂಕ್ ಬರ್ಮಿ ಎಂಬವರು ಹಂಚಿಕೊಂಡಿದ್ದು, ತಕ್ಷಣವೇ ಭಾರೀ ವೈರಲ್ ಆಗಿದೆ.

ಮಹಾರಾಷ್ಟ್ರದ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಕೀಲರ ಭಾವಿ ಪತಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದಾಗ ಜಗಳ ಆರಂಭವಾಗಿದೆ ಎಂದು ಶೀರ್ಷಿಕೆಯಲ್ಲಿ ಹೇಳಲಾಗಿದೆ.

ಈ ವಿಡಿಯೋದಲ್ಲಿ ಇಬ್ಬರೂ ತಮ್ಮ ಹುದ್ದೆಯ ಗೌರವಾರ್ಥವಾಗಿರುವ ಕಪ್ಪು ಬಟ್ಟೆಗಳನ್ನು ಧರಿಸಿದ್ದರು. ಇಬ್ಬರ ನಡುವೆಯೂ ತೀವ್ರ ಜಗಳವಾಗಿದೆ. ಸುತ್ತಮುತ್ತ ಸಾಕಷ್ಟು ಮಂದಿ ನೆರೆದಿದ್ದರು. ಕೆಲವರು ಇವರ ಜಗಳದ ವಿಡಿಯೋವನ್ನು ಕೂಡ ಮಾಡುತ್ತಿದ್ದರು. ಪರಸ್ಪರರ ಕೂದಲನ್ನು ಎಳೆದುಕೊಂಡು, ಹೊಡೆದಾಡಿಕೊಂಡ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಕೊನೆಗೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಧ್ಯೆ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದರು.


ಇದನ್ನೂ ಓದಿ: Shocker News : ಯುಪಿ ಸಿಎಂ ಯೋಗಿ ಅಧಿಕೃತ ನಿವಾಸದ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಪರಿಸ್ಥಿತಿ ತುಂಬಾ ಗಂಭೀರವಾಗಿದ್ದರೂ ಆನ್‌ಲೈನ್‌ನಲ್ಲಿ ಮಾತ್ರ ಇದು ಎಲ್ಲರ ಮನೋರಂಜನೆಗೆ ಕಾರಣವಾಗಿದೆ. ಅನೇಕರು ಇದು ಭಾರತದಲ್ಲಿ ಮಾತ್ರ ಸಂಭವಿಸಲು ಸಾಧ್ಯ ಎಂದು ಹೇಳಿದ್ದಾರೆ. ಆಗಸ್ಟ್ 4ರಂದು ಹಂಚಿಕೊಂಡಿರುವ ಈ ವಿಡಿಯೋವನ್ನು ಈಗಾಗಲೇ ಐದು ಲಕ್ಷಕ್ಕೂ ಹೆಚ್ಚು ಮಂದಿ ಇದನ್ನು ವೀಕ್ಷಿಸಿದ್ದಾರೆ. ವೃತ್ತಿಪರ ಗಡಿಯನ್ನು ಮರೆತು ವೈಯಕ್ತಿಕ ಭಾವನೆಯಿಂದ ಈ ರೀತಿ ನ್ಯಾಯಾಧೀಶರು ಮತ್ತು ವಕೀಲರು ಘರ್ಷಣೆಗೆ ಇಳಿದಿರುವುದಕ್ಕೆ ಕೆಲವರು ತೀಕ್ಷ್ಣವಾಗಿಯೂ ಪ್ರತಿಕ್ರಿಯಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

Viral News: ಪರೀಕ್ಷೆಗಳು ಪ್ರಾರಂಭವಾದ ತಕ್ಷಣ, ಕೊಠಡಿಯೊಳಗೆ ಕೆಲವು ಭದ್ರತಾ ಸಿಬ್ಬಂದಿಗಳಿಗೆ ಮೊಬೈಲ್‌ ಬಳಕೆ ಅನುಮಾನ ಬಂದಿತು. ನಂತರ ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಮತ್ತೊಂದು ಸಭಾಂಗಣಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಒಬ್ಬೊಬ್ಬರನ್ನೇ ವಿಚಾರಣೆಗೆ ಒಳಪಡಿಸಿ ತಪಾಸಣೆ ನಡೆಸಲಾಯಿತು. ಮೆಟಲ್ ಡಿಟೆಕ್ಟರ್‌ ಗಳ ಮೂಲಕ ದೇಹವನ್ನು ಹುಡುಕುತ್ತಿದ್ದಂತೆ, ಕೆಲ ವಿದ್ಯಾರ್ಥಿನಿಯರು ತಮ್ಮ ಗುಪ್ತಾಂಗದಲ್ಲಿ ಮೊಬೈಲ್‌ ಸಿಕ್ಕಿಸಿಕೊಂಡು ಬಂದಿದ್ದೂ ಪತ್ತೆಯಾಯಿತು.

VISTARANEWS.COM


on

Viral News
Koo

ಕೋಲ್ಕತ್ತಾ: ಪರೀಕ್ಷೆಗಳಲ್ಲಿ ಚೀಟಿ ಇಟ್ಟುಕೊಂಡು ಅಕ್ರಮ ಎಸಗುವ ಕಾಲ ಹೋಯ್ತು. ಆದರೆ ಚೀಟಿಗಿಂತಲೂ ಈಗ ಮೊಬೈಲ್‌ ಸಹಾಯದಿಂದ ಅಕ್ರಮ ಎಸಗುವುದು ವಿದ್ಯಾರ್ಥಿಗಳಿಗೆ ಸುಲಭ. ಏಕೆಂದರೆ ಒಂದೇ ಒಂದು ಕ್ಲಿಕ್‌ನಲ್ಲಿ ಎಲ್ಲಾ ಮಾಹಿತಿ ಕಣ್ಣಮುಂದೆ ಇರುತ್ತದೆ. ಆದರೆ ಅಷ್ಟು ದೊಡ್ಡ ಮೊಬೈಲನ್ನು ಯಾರಿಗೂ ಗೊತ್ತಾಗದಂತೆ ಇಟ್ಟುಕೊಂಡು ಪರೀಕ್ಷಾ ಕೊಠಡಿಗೆ ಹೋಗುವುದಾದರೂ ಹೇಗೆ? ಅದಕ್ಕಂತಾನೇ ಈ ಕಿಲಾಡಿಗಳು ಮಾಡಿದ್ದೇನು ಗೊತ್ತಾ? ಪರಿಶೀಲನೆ ನಡೆಸಿದ ಸಿಬ್ಬಂದಿಗಳೇ ಒಂದು ಕ್ಷಣಕ್ಕೆ ದಂಗಾಗಿ ನಿಂತಿದ್ದರು. ಕೊನೆಗೆ ವಿಧಿಯಿಲ್ಲದೇ ಪರೀಕ್ಷೆಯನ್ನೇ ರದ್ದು ಮಾಡಬೇಕಾಗಿ ಬಂದಿತ್ತು(Viral News).

ಏನಿದು ಘಟನೆ? ಯಾವ ಪರೀಕ್ಷೆ?

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬೀರ್ಭುಮ್‌ನ ಸೂರಿಯ ಬೆನಿಮಾಧಬ್ ಇನ್ಸ್ಟಿಟ್ಯೂಷನ್‌ನಲ್ಲಿ ಎಎನ್ಎಂ ಮತ್ತು ಜಿಎನ್ಎಂ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪರೀಕ್ಷೆ ನಡೆಯುತ್ತಿತ್ತು. ಮಾಲ್ಡಾದ ಕೆಲವು ವಿದ್ಯಾರ್ಥಿಗಳು ಸೂರಿಯ ಬೆನಿಮಾಧಬ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುತ್ತಿದ್ದರು. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಫೋನ್ ಗಳನ್ನು ಅನುಮತಿಸಲಾಗುವುದಿಲ್ಲ ಎಂದು ತಿಳಿಸಲಾಗಿತ್ತು.

ಪ್ರತಿಯೊಬ್ಬರನ್ನು ಸರಿಯಾಗಿ ಪರಿಶೀಲನೆ ನಡೆಸಿಯೇ ಮಹಿಳಾ ಸೆಕ್ಯುರಿಟಿ ಗಾರ್ಡ್‌ಗಳು ಪರೀಕ್ಷಾ ಕೊಠಡಿಗೆ ಹೋಗಲು ಅನುಮತಿಸುತ್ತಿದ್ದರು. ಪರಿಶೀಲನೆ ವೇಳೆ ಹಲವರ ಬಳಿ ಮೊಬೈಲ್‌, ಕಾಪಿ ಚೀಟಿ ಪತ್ತೆಯಾಗಿತ್ತು. ತಕ್ಷಣ ಅವರಿಂದ ಅದನ್ನು ಸೀಜ್‌ ಮಾಡಿ ಅವರನ್ನು ಪರೀಕ್ಷ ಕೊಠಡಿಗೆ ಕಳುಹಿಸಲಾಗಿತ್ತು. ಆದರೆ ಇನ್ನು ಕೆಲವರು ಸಿಬ್ಬಂದಿಗಳ ಕಣ್ತಪ್ಪಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದರು.

ಗುಪ್ತಾಂಗದೊಳಗೂ ಸಿಕ್ತು ಮೊಬೈಲ್‌

ಆದರೆ ಪರೀಕ್ಷೆಗಳು ಪ್ರಾರಂಭವಾದ ತಕ್ಷಣ, ಕೊಠಡಿಯೊಳಗೆ ಕೆಲವು ಭದ್ರತಾ ಸಿಬ್ಬಂದಿಗಳಿಗೆ ಮೊಬೈಲ್‌ ಬಳಕೆ ಅನುಮಾನ ಬಂದಿತು. ನಂತರ ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಮತ್ತೊಂದು ಸಭಾಂಗಣಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಒಬ್ಬೊಬ್ಬರನ್ನೇ ವಿಚಾರಣೆಗೆ ಒಳಪಡಿಸಿ ತಪಾಸಣೆ ನಡೆಸಲಾಯಿತು. ಮೆಟಲ್ ಡಿಟೆಕ್ಟರ್‌ ಗಳ ಮೂಲಕ ದೇಹವನ್ನು ಹುಡುಕುತ್ತಿದ್ದಂತೆ, ಕೆಲ ವಿದ್ಯಾರ್ಥಿನಿಯರು ತಮ್ಮ ಗುಪ್ತಾಂಗದಲ್ಲಿ ಮೊಬೈಲ್‌ ಸಿಕ್ಕಿಸಿಕೊಂಡು ಬಂದಿದ್ದೂ ಪತ್ತೆಯಾಯಿತು.

ಮತ್ತೆ ಕೆಲವರು ಶೂ ಅನ್ನು ಅನ್ನು ಕತ್ತರಿಸಿ ಮೊಬೈಲ್ ಫೋನ್ ಅನ್ನು ಅದರಲ್ಲಿ ಇಟ್ಟುಕೊಂಡು ಬಂದಿದ್ದರು. ಕೂಡಲೇ ಹೀಗೆ ಮೊಬೈಲ್‌ ಇಟ್ಟುಕೊಂಡು ಬಂದಿದ್ದವರನ್ನೆಲ್ಲಾ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಪರೀಕ್ಷೆಗಳಿಂದ ಡಿಬಾರ್‌ ಮಾಡುವ ಆದೇಶ ಹೊರಡಿಸಿದರು. ಮೊಬೈಲ್‌ಗಳನ್ನೂ ವಶಕ್ಕೆ ಪಡೆದರು. ಘಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಲದ ಪರೀಕ್ಷಾ ನಿಯಂತ್ರಕರು ಪರೀಕ್ಷೆಗಳನ್ನು ರದ್ದುಪಡಿಸುವಂತೆ ಶಿಫಾರಸು ಮಾಡಿದ್ದು ಪರೀಕ್ಷೆ ರದ್ದುಪಡಿಸಲಾಗಿದೆ. ಹೊಸ ದಿನಾಂಕವನ್ನು ಪರೀಕ್ಷೆಗೆ ಪ್ರಕಟಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: NEET UG 2024: ನೀಟ್ ಅಕ್ರಮ; ಇಂದು ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು-CBI ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

Continue Reading

ಕ್ರೀಡೆ

Rohit Sharma: ಯುಪಿಎಸ್ಸಿ ಕೋಚಿಂಗ್​ನಲ್ಲಿಯೂ ರೋಹಿತ್​ ಶರ್ಮ ಹವಾ; ವೈರಲ್​ ವಿಡಿಯೊ ಇಲ್ಲಿದೆ

Rohit Sharma: ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಭಾರತ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮ(Rohit Sharma) ಅವರ ಸಾಧನೆ ಇದೀಗ ಯುಪಿಎಸ್ಸಿ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದೆ. ಹೌದು, ಯುಪಿಎಸ್ಸಿ(UPSC ) ಕೋಚಿಂಗ್​ ಸೆಂಟರ್​ ಒಂದರಲ್ಲಿ ಶಿಕ್ಷಕರೊಬ್ಬರು(UPSC teacher) ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ರೋಹಿತ್​ ಅವರ ಬ್ಯಾಟಿಂಗ್​ ಬಗ್ಗೆ ಗುಣಗಾನ ಮಾಡಿದ್ದಾರೆ. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(viral video) ಆಗಿದೆ.

ಪಾಠ ಮಾಡುತ್ತಿದ್ದ ಶಿಕ್ಷಕ, ರೋಹಿತ್ ಶರ್ಮ ಅವರ ಬ್ಯಾಟಿಂಗ್ ನೋಡುವಾಹ ರನ್​ ಗಳಿಸಲೆಂದೇ ಈ ಪಿಚ್​ ಮಾಡಿರುವಂತೆ ತೋರುತ್ತದೆ. ಆದರೆ, ಇತರ ಬ್ಯಾಟರ್‌ಗಳು ಕ್ರೀಸ್​ಗೆ ಬಂದಾಗ ಅದು ಕಠಿಣ ಎಂದು ಅನಿಸುತ್ತದೆ. ಅದು ಏಕೆ ಎಂಬುದು ನಿಜಕ್ಕೂ ಗೊಂದಲಮಯವಾಗಿದೆ ಎಂದು ಹೇಳುವ ಮೂಲಕ ಪರೀಕ್ಷೆ ಬರೆಯಲು ಸಜ್ಜಾಗಿ ನಿಂತಿರುವ ವಿದ್ಯಾರ್ಥಿಗಳು ರೋಹಿತ್​ ರನ್​ ಗಳಿಸಿದಂತೆ ಅಂಕ ಗಳಿಸಬೇಕು ಎನ್ನುವ ಉದಾಹರಣೆಯನ್ನು ನೀಡಿದ್ದಾರೆ. ಈ ವಿಡಿಯೊ ಕಂಡ ನೆಟ್ಟಿಗರು ಮಿಶ್ರ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ರೋಹಿತ್​ ಶೂನ್ಯಕ್ಕೆ ಔಟ್​ ಆದ ಹಲವು ನಿದರ್ಶನ ಇದೆ ಎಂದು ಹಾಸ್ಯ ಮಾಡಿದರೆ, ಇನ್ನು ಕೆಲವರು ರೋಹಿತ್​ ಏಕದಿನದಲ್ಲಿ ಮೂರು ಬಾರಿ ದ್ವಿಶತಕ ಬಾರಿಸಿದ್ದಾರೆ ಎಂದು ಕಮೆಂಟ್​ ಮಾಡಿದ್ದಾರೆ.

ಲಂಕಾ ವಿರುದ್ಧ ನಾಳೆ ನಡೆಯುವ ಅಂತಿಮ ಏಕದಿನ ಪಂದ್ಯದಲ್ಲಿ ರೋಹಿತ್​ ಶರ್ಮ 2 ಸಿಕ್ಸರ್​ ಬಾರಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ(Most sixes in career in ODIs) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್​ (331 ಸಿಕ್ಸರ್​) ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ರೋಹಿತ್​ 330 ಸಿಕ್ಸರ್​ ಬಾರಿಸಿ ಮೂರನೇ ಸ್ಥಾನಿಯಾಗಿದ್ದಾರೆ. ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ವಿಶ್ವ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಆಟಗಾರ ಶಾಹೀದ್ ಅಫ್ರಿದಿ ಹೆಸರಿನಲ್ಲಿದೆ. ಅಫ್ರಿದಿ 398 ಏಕದಿನ ಪಂದ್ಯಗಳನ್ನಾಡಿ 351 ಸಿಕ್ಸರ್​ ಬಾರಿಸಿದ್ದಾರೆ. ರೋಹಿತ್​ ಕನಿಷ್ಠ 2 ವರ್ಷಗಳ ಕಾಲ ಏಕದಿನ ಆಡಿದರೆ ಈ ದಾಖಲೆಯನ್ನು ಮುರಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದನ್ನೂ ಓದಿ Rohit Sharma: ಕ್ರಿಸ್​ ಗೇಲ್​ ಸಿಕ್ಸರ್​ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​

ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

Latest

Viral Video: ಪಿಕ್‌ನಿಕ್‌ಗೆಂದು ಬಂದವನು ರೀಲ್ಸ್‌ ಮಾಡಲು ಹೋದ; ಜಲಪಾತದಿಂದ ಬಿದ್ದು ಸತ್ತ

Viral Video: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ರೀಲ್ಸ್ ಮಾಡಲು ಹೋಗಿ ರಾಜಸ್ಥಾನದ ಭಿಲ್ವಾರಾದ ಜಲಪಾತದಲ್ಲಿ ಯುವಕನೊಬ್ಬ 150 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನದಿಯ ಬಲವಾದ ಪ್ರವಾಹಗಳ ನಡುವೆ ಯುವಕರು ಹಗ್ಗವನ್ನು ಗಟ್ಟಿಯಾಗಿ ಹಿಡಿದು ಅದರ ತುದಿಯಲ್ಲಿ ಹರಿಯುವ ಪ್ರವಾಹದಲ್ಲಿ ಸಿಲುಕಿದ್ದ ತಮ್ಮ ಸ್ನೇಹಿತನನ್ನು ಎಳೆಯುತ್ತಿದ್ದಾರೆ. ಆದರೂ, ಆತ ನೀರಿನ ರಭಸಕ್ಕೆ ಹಿಡಿತ ಕಳೆದುಕೊಂಡು ಅವನ ಸ್ನೇಹಿತರ ಕಣ್ಮುಂದೆಯೇ ಬಲವಾದ ಪ್ರವಾಹಗಳ ಜೊತೆಗೆ ಕೊಚ್ಚಿಹೋಗಿದ್ದಾನೆ.

VISTARANEWS.COM


on

Viral Video
Koo


ದೇಶಾದ್ಯಂತ ಭಾರೀ ಮಳೆಯಾಗಿದ್ದ ಹಿನ್ನೆಲೆಯಲ್ಲಿ ನೀರಿನ ರಭಸ ಹೆಚ್ಚಾಗಿ ಅನೇಕ ಜಲಪಾತಗಳು ಉಕ್ಕಿ ಹರಿಯುತ್ತಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ರೀಲ್ಸ್ ಮಾಡಲು ಹೋಗಿ ರಾಜಸ್ಥಾನದ ಭಿಲ್ವಾರಾದ ಜಲಪಾತದಲ್ಲಿ ಯುವಕನೊಬ್ಬ 150 ಅಡಿ ಎತ್ತರದಿಂದ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಈ ವೈರಲ್ ವಿಡಿಯೊದಲ್ಲಿ ನದಿಯ ಬಲವಾದ ಪ್ರವಾಹಗಳ ನಡುವೆ ಯುವಕರು ಹಗ್ಗವನ್ನು ಗಟ್ಟಿಯಾಗಿ ಹಿಡಿದು ಅದರ ತುದಿಯಲ್ಲಿ ಹರಿಯುವ ಪ್ರವಾಹದಲ್ಲಿ ಸಿಲುಕಿದ್ದ ತಮ್ಮ ಸ್ನೇಹಿತನನ್ನು ಎಳೆಯುತ್ತಿದ್ದಾರೆ. ಆದರೂ, ಆತ ನೀರಿನ ರಭಸಕ್ಕೆ ಹಿಡಿತ ಕಳೆದುಕೊಂಡು ಅವನ ಸ್ನೇಹಿತರ ಕಣ್ಮುಂದೆಯೇ ಬಲವಾದ ಪ್ರವಾಹಗಳ ಜೊತೆಗೆ ಕೊಚ್ಚಿಹೋಗಿದ್ದಾನೆ. ಈ ಘಟನೆಯಲ್ಲಿ ಯುವಕ ಮೃತಪಟ್ಟಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಮೃತ ಯುವಕ ಭಿಲ್ವಾರಾ ಜಿಲ್ಲೆಯ ಭವಾನಿ ನಗರದ ನಿವಾಸಿ ಕನ್ಹಯ್ಯಾಲಾಲ್ ಬೈರ್ವಾ (26) ಎಂಬುದಾಗಿ ತಿಳಿದುಬಂದಿದೆ. ಈತ ಸೋಮವಾರ ವಿಶ್ವಪ್ರಸಿದ್ಧ ಮೇನಾಲ್ ಜಲಪಾತಕ್ಕೆ ತನ್ನ ಸ್ನೇಹಿತರ ಜೊತೆಗೆ ಪಿಕ್‍ನಿಕ್‌ಗೆ ಬಂದಿದ್ದಾನೆ. ಎಲ್ಲರೂ ಬಂಡೆಗಳ ಮೇಲೆ ಕುಳಿತು ಸ್ನಾನ ಮಾಡಿದ್ದಾರೆ. ಆ ವೇಳೆ ಅವರು ಸೆಲ್ಫಿ ತೆಗೆದುಕೊಳ್ಳುವುದರ ಜೊತೆಗೆ ರೀಲ್ ಮಾಡಲು ಮುಂದಾಗಿದ್ದಾರೆ. ಆ ವೇಳೆ ಕನ್ಹಯ್ಯಾಲಾಲ್ ಕಾಲು ಜಾರಿ ಬಲವಾದ ಪ್ರವಾಹಕ್ಕೆ ಸಿಲುಕಿದ್ದಾನೆ. ಆಗ ಆತ ಜಲಪಾತಕ್ಕೆ ಜೋಡಿಸಲಾದ ಸುರಕ್ಷತಾ ಸರಪಳಿಯನ್ನು ಹಿಡಿದಿದ್ದಾನೆ. ಹಾಗಾಗಿ ಅವರ ಸ್ನೇಹಿತರು ಮತ್ತು ಸ್ಥಳೀಯರು ಅವನನ್ನು ರಕ್ಷಿಸಲು ಪ್ರಯತ್ನಿಸಿದರು.

ಅಂತಿಮವಾಗಿ ಅವನ ಕೈ ಸರಪಳಿಯಿಂದ ಜಾರಿ ಜಲಪಾತದಿಂದ 150 ಅಡಿ ಕೆಳಗೆ ಬಿದ್ದನು. ಮಾಹಿತಿ ಬಂದ ಕೂಡಲೇ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ತಂಡ ಸ್ಥಳಕ್ಕೆ ಬಂದಿದ್ದಾರೆ. ಸ್ಥಳೀಯರು ಹಾಗೂ ರಕ್ಷಣಾ ತಂಡ ಕನ್ಹಯ್ಯಾಲಾಲ್ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ರೀಲ್ಸ್‌ ಮಾಡುವಾಗ ಕುತ್ತಿಗೆಗೆ ದಾರ ಬಿಗಿದು ಬಾಲಕ ಸಾವು; ವಿಡಿಯೊ ಇದೆ

ಇತ್ತೀಚಿನ ದಿನಗಳಲ್ಲಿ ರೀಲ್ ಮಾಡಲು ಹೋಗಿ ಸಾವಿಗೀಡಾಗುವವರ ವೇಗವಾಗಿ ಹೆಚ್ಚುತ್ತಿದೆ. ಇದು ಒಂದೇ ಘಟನೆಯಲ್ಲ. ಸೋಶಿಯಲ್ ಮೀಡಿಯಾದಲ್ಲಿ ಲೈಕ್ , ಶೇರ್‌ ಮತ್ತು ಫಾಲೋವರ್ಸ್‍ಗಳನ್ನು ಪಡೆಯಲು ಜನರು ತಮ್ಮ ಪ್ರಾಣವನ್ನು ಪಣಕ್ಕಿಡುತ್ತಿದ್ದಾರೆ. ಇದಕ್ಕೂ ಮುಂಚೆಯೇ, ಸೋಶಿಯಲ್ ಮೀಡಿಯಾದಲ್ಲಿ ರೀಲ್ ಮಾಡಲು ಹೋಗಿ ಅನೇಕ ಯುವಕರು ಮತ್ತು ಯುವತಿಯರು ಸಾವನ್ನಪ್ಪಿದ್ದಾರೆ.

Continue Reading

Latest

Viral Video: ಇದ್ದಕ್ಕಿದ್ದಂತೆ ಚಲಿಸಿದ ಟ್ರಕ್; ಯುವತಿಯ ಸಾಹಸ ಹೇಗಿತ್ತು ನೋಡಿ!

Viral Video: ಟ್ರಕ್‌ವೊಂದು ಇದ್ದಕ್ಕಿದ್ದಂತೆ ಚಲಿಸಿದಾಗ ಯುವತಿಯೊಬ್ಬಳು ತಕ್ಷಣ ಓಡಿ ಹೋಗಿ ಟ್ರಕ್ ಏರಿ ಹ್ಯಾಂಡ್ ಬ್ರೇಕ್ ಹಾಕಿ ನಡೆಯಬೇಕಾಗಿದ್ದ ಭಾರಿ ಆಪತ್ತು ತಡೆದಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆ ಯುವತಿಯನ್ನು ಎಲ್ಲರೂ ರಿಯಲ್ ಹೀರೋ ಎಂದು ಶ್ಲಾಘಿಸಿದ್ದಾರೆ. ಮಹಿಳೆ ಟ್ರಕ್ ಪಕ್ಕದಲ್ಲಿ ಹಾದುಹೋಗುವಾಗ ಟ್ರಕ್ ಇದ್ದಕ್ಕಿದ್ದಂತೆ ಮುಂದೆ ಚಲಿಸಿದೆ. ಹಿಂದೆ ಇಬ್ಬರು ಪುರುಷರು ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಆಗ ಇದನ್ನು ನೋಡಿದ ಮಹಿಳೆ ಧೃತಿಗೆಡದೆ ತಕ್ಷಣ ಓಡಿಹೋಗಿ ಟ್ರಕ್ ಏರಿ ಹ್ಯಾಂಡ್ ಬ್ರೇಕ್ ಹಾಕಿ ಟ್ರಕ್ ಅನ್ನು ನಿಲ್ಲಿಸಿದ್ದಾಳೆ.

VISTARANEWS.COM


on

Viral Video
Koo


ಕೆಲವೊಮ್ಮೆ ಚಾಲಕನ ಬೇಜವಾಬ್ದಾರಿತನದಿಂದ ವಾಹನಗಳು ಇದ್ದಕ್ಕಿದ್ದಂತೆ ಚಲಿಸಿ ಅಪಘಾತಕ್ಕೆ ಕಾರಣವಾಗುತ್ತವೆ. ಇಂತಹ ಘಟನೆಯಿಂದ ಅನೇಕ ಜನರು ಆಪತ್ತಿಗೆ ಸಿಲುಕಿದ್ದಾರೆ. ಇದೀಗ ಅಂತಹದೊಂದು ಘಟನೆ ನಡೆದಿದ್ದು, ನಿಂತಿದ್ದ ಟ್ರಕ್‌ವೊಂದು ಇದ್ದಕ್ಕಿದ್ದಂತೆ ಚಲಿಸಿದೆ. ಇದನ್ನು ನೋಡಿದ ಮಹಿಳೆಯೊಬ್ಬಳು ತಕ್ಷಣ ಟ್ರಕ್ ಏರಿ ಹ್ಯಾಂಡ್ ಬ್ರೇಕ್ ಹಾಕಿ ನಡೆಯಬೇಕಾಗಿದ್ದ ಆಪತ್ತು ತಡೆದಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ. ಆ ಮಹಿಳೆಯನ್ನು ಎಲ್ಲರೂ ರಿಯಲ್ ಹೀರೋ ಎಂದು ಕರೆದಿದ್ದಾರೆ.

ಈ ಘಟನೆ ಅಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಹಿಡಿಯಾಗಿದೆ. ವಿಡಿಯೊದಲ್ಲಿ ಮಹಿಳೆ ಟ್ರಕ್ ಮುಂದೆ ಹಾದುಹೋಗುವಾಗ ಟ್ರಕ್ ಇದ್ದಕ್ಕಿದ್ದಂತೆ ಮುಂದೆ ಚಲಿಸಿದೆ. ಹಿಂದೆ ಇಬ್ಬರು ಪುರುಷರು ಟ್ರಕ್ ಅನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಆಗ ಇದನ್ನು ನೋಡಿದ ಮಹಿಳೆ ಧೃತಿಗೆಡದೆ ತಕ್ಷಣ ಓಡಿಹೋಗಿ ಟ್ರಕ್ ಏರಿ ಹ್ಯಾಂಡ್ ಬ್ರೇಕ್ ಹಾಕಿ ಟ್ರಕ್ ಅನ್ನು ನಿಲ್ಲಿಸಿದ್ದಾಳೆ.

ಮಹಿಳೆಯ ತ್ವರಿತ ಚಿಂತನೆ ಮತ್ತು ನಿರ್ಣಾಯಕ ಕ್ರಮವು ಅಂತಿಮವಾಗಿ ಸಂಭವಿಸಬಹುದಾದ ದುರಂತ ಅಪಘಾತವನ್ನು ತಪ್ಪಿಸಿತು. ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಅವಳ ಧೈರ್ಯ ಮತ್ತು ಒಳ್ಳೆ ಮನಸ್ಸನ್ನು ಕಂಡು ಹೊಗಳಿದ್ದಾರೆ. ಮತ್ತು ಟ್ರಕ್ ಅನ್ನು ಹಿಂದಕ್ಕೆ ಎಳೆಯುವ ಸಾಹಸ ಮಾಡಿದ ಇಬ್ಬರು ಪುರುಷರನ್ನು ಅನೇಕರು ಟೀಕಿಸಿದ್ದಾರೆ.

“ಎಲ್ಲಾ ಶ್ರೇಯಸ್ಸು ಆ ಧೈರ್ಯಶಾಲಿ ಹುಡುಗಿಗೆ ಸಲ್ಲುತ್ತದೆ. ಅವಳು ತನ್ನ ಸಮಯ ಪ್ರಜ್ಞೆಯನ್ನು ಸರಿಯಾದ ಸಮಯದಲ್ಲಿ ಬಳಸಿದಳು. ಟ್ರಕ್ ಅನ್ನು ಹಿಂದಕ್ಕೆ ಎಳೆಯುವ ಮೂಲಕ ನಿಲ್ಲಿಸಲು ಪ್ರಯತ್ನಿಸಿದ ಆ ಇಬ್ಬರು ಪುರುಷರಿಗೆ ಯಾವುದೇ ಕ್ರೆಡಿಟ್ ಇಲ್ಲ” ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ. “ಎಳೆಯುವ ಮೂಲಕ ಟ್ರಕ್ ಅನ್ನು ನಿಲ್ಲಿಸಬಹುದು ಎಂದು ಇಬ್ಬರು ಹುಡುಗರು ಹೇಗೆ ಯೋಚಿಸಿದರು?” ಎಂದು ಇನ್ನೊಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. “ಅವಳ ಧೈರ್ಯವನ್ನು ಮೆಚ್ಚುತ್ತೇನೆ. ಲೆಗ್ ಬ್ರೇಕ್ ಬದಲು ಹ್ಯಾಂಡ್ ಬ್ರೇಕ್ ಬಳಸುವುದು ಉತ್ತಮ ” ಎಂದು ಮತ್ತೊಬ್ಬ ಬಳಕೆದಾರರು ಬರೆದಿದ್ದಾರೆ.

ಇದನ್ನೂ ಓದಿ: ಪತಿ ಬೈದಿದ್ದಕ್ಕೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ; ಬೆಚ್ಚಿ ಬೀಳಿಸುವ ವಿಡಿಯೊ

ಈ ವಿಡಿಯೊ ಘರ್ ಕೆ ಕಲೇಶ್ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಪೋಸ್ಟ್ ಆಗಿದ್ದು, ಇದಕ್ಕೆ 936.8ಕೆ ವೀವ್ಸ್, 7831 ಲೈಕ್ಸ್ ಬಂದಿದೆ. ಈ ಘಟನೆಯಲ್ಲಿದ್ದ ಮಹಿಳೆ, ಘಟನೆಯ ನಿರ್ದಿಷ್ಟ ಸ್ಥಳ ಮತ್ತು ದಿನಾಂಕವನ್ನು ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

Continue Reading
Advertisement
Bajrang Punia
ಕ್ರೀಡೆ24 mins ago

Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

Viral News
ವೈರಲ್ ನ್ಯೂಸ್31 mins ago

Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

DK Shivakumar
ಕರ್ನಾಟಕ36 mins ago

DK Shivakumar: ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

Gruha Jyothi
ಕರ್ನಾಟಕ47 mins ago

Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

Mukesh Ambani Mobile
ವಾಣಿಜ್ಯ54 mins ago

Mukesh Ambani Mobile: ಮುಕೇಶ್ ಅಂಬಾನಿ, ನೀತಾ ಅಂಬಾನಿ ಯಾವ ಮೊಬೈಲ್‌ ಬಳಸುತ್ತಾರೆ? ಅವುಗಳ ವೈಶಿಷ್ಟ್ಯ ಏನೇನು?

walking
ಆರೋಗ್ಯ1 hour ago

Walking for Weight Loss: ಇಲ್ಲಿವೆ ಬಗೆಬಗೆಯ ವಾಕಿಂಗ್‌; ತೂಕ ಇಳಿಸಲು ಇವುಗಳಿಂದಲೂ ಸಾಧ್ಯ! ಟ್ರೈ ಮಾಡಿ ನೋಡಿ

Koppala News
ಕೊಪ್ಪಳ1 hour ago

Koppala News: ಸಿದ್ದಾಪುರದಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಡಿಸಿ ನಲೀನ್ ಅತುಲ್ ಚಾಲನೆ

DCET 2024
ಕರ್ನಾಟಕ1 hour ago

DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

Paris Olympics
ಕ್ರೀಡೆ2 hours ago

Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

Handwork Saree Blouse
ಫ್ಯಾಷನ್2 hours ago

Handwork Saree Blouse: ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಹ್ಯಾಂಡ್‌ ವರ್ಕ್‌ ಡಿಸೈನರ್‌ ಬ್ಲೌಸ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು4 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌