Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ - Vistara News

ಬೆಂಗಳೂರು

Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

Fortis Hospital: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Fortis Hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ನರ ಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ., 19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ ತೀವ್ರತೆಯಿಂದಾಗಿ ಇವರ ಬಲಗೈ ಮೂಳೆ ಮುರಿದು, ತಲೆಗೆ ತೀವ್ರವಾಗಿ ಗಾಯವಾಗಿ ಕಿವಿಯಿಂದ ರಕ್ತಸ್ತ್ರಾವವಾಗಿತ್ತು. ಇದರಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು. ಕೂಡಲೇ ಅವರನ್ನು ಫೋರ್ಟಿಸ್‌ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ಕರೆತರಲಾಯಿತು.

ಕೂಡಲೇ ನಮ್ಮ ವೈದ್ಯರ ತಂಡ ಅವರನ್ನು ಎಂಆರ್‌ಐಗೆ ಒಳಪಡಿಸಲಾಯಿತು. ಅವರಿಗೆ ಮೆದುಳಿನ ಕೋಶಗಳ ನಡುವೆ ಸಂಪರ್ಕ ಕಲ್ಪಿಸುವ ನರಗಳಲ್ಲಿ ರಕ್ತಸ್ರಾವ ಆಗಿರುವುದು ಕಂಡು ಬಂತು. ಇದನ್ನು ಆಕ್ಸಾನಲ್‌ ಗಾಯ ಎನ್ನಲಾಗುತ್ತದೆ. ಈ ಗಾಯದಿಂದ ಅವರು ಮಾತನಾಡುವ ಹಾಗೂ ಚಲಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುವ ಸಂಭವವಿರುತ್ತದೆ. ಹೀಗಾಗಿ ಅವರಿಗೆ ಕೂಡಲೇ ತುರ್ತು ಚಿಕಿತ್ಸೆಯನ್ನು ನೀಡಲಾಯಿತು. ನ್ಯೂರೋ ತಂಡವು ಅವರ ಮಾತಿನ ತೊಂದರೆ, ಮೆಮೊರಿ ಸಮಸ್ಯೆಯನ್ನು ಪರಿಸರಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡಿದರು. ಆರಂಭಿಕ ಚಿಕಿತ್ಸೆಯ ನಂತರ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ನೀಡಲಾಗುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: Janopakari Doddanna Shetty: ಗಾಣಿಗ ಸಮುದಾಯ ಶ್ರಮದಿಂದ ಬದುಕು ಕಟ್ಟಿಕೊಂಡಿದೆ; ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ನಾರಾಯಣ್ ಹುಲ್ಸೆ ಮಾತನಾಡಿ, ಅಪಘಾತದಿಂದ ರಾಜ್‌ ಅವರ ಬಲಗೈ ಮೇಲ್ಭಾಗದ ಮೂಳೆ ಮುರಿದ ಕಾರಣ ಅವರಿಗೆ ತೆಳವಾದ ತಂತಿಯನ್ನು ಬಳಸಿಕೊಂಡು, ಪ್ಲೇಟ್‌ ಹಾಗೂ ಸ್ಕ್ರೂಗಳನ್ನು ಬಲಗೊಳಿಸಲಾಗಿದೆ. ಜತೆಗೆ ಮೊಣಕೈ ಕೀಲಿನ ಒಂದು ಭಾಗವನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

Gruha Jyothi: ಮನೆ ಬದಲಾಯಿಸಿದ ನಂತರ ಮತ್ತೆ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Gruha Jyothi
Koo

ಬೆಂಗಳೂರು: ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ (Gruha Jyothi) ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?

ಗ್ರಾಹಕರು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.

ʼಗೃಹಜ್ಯೋತಿʼಗೆ ವರ್ಷದ ಸಂಭ್ರಮ

2024ರ ಜೂನ್‌ವರೆಗೆ ಒಟ್ಟು ನೋಂದಣಿ-1.67 ಕೋಟಿ, ಒಟ್ಟು ಫಲಾನುಭವಿಗಳು-1.56 ಕೋಟಿ. 2023 ಆಗಸ್ಟ್ ರಿಂದ 2024 ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು ಸಬ್ಸಿಡಿ-8239 ಕೋಟಿ ರೂ.

“ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ” ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

“ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡುವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ತಿಳಿಸಿದ್ದಾರೆ.

Continue Reading

ಕರ್ನಾಟಕ

DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

DCET 2024: ಡಿಸಿಇಟಿ-24 ತೆಗೆದುಕೊಂಡು ಮೊದಲ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು ಆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ.

VISTARANEWS.COM


on

DCET 2024
Koo

ಬೆಂಗಳೂರು: ಡಿಸಿಇಟಿ-24 (DCET 2024) ತೆಗೆದುಕೊಂಡು, ಮೊದಲ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು ಆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಮಳೆ ಕಾರಣಕ್ಕೆ ಶುಲ್ಕ ಪಾವತಿ ಇತ್ಯಾದಿ ಸಮಸ್ಯೆಗಳು ಎದುರಾಗಿವೆ ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿದ್ದು, ಇಚ್ಛೆ ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗುವುದು. ಸದ್ಯದಲ್ಲೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಮೊದಲ ಸುತ್ತಿನಲ್ಲಿ ಚಾಯ್ಸ್ – 1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡವರು ಆ.8ರೊಳಗೆ ಚಲನ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಶುಲ್ಕ ಪಾವತಿಗೆ ಆ.9ರವರೆಗೆ ಅವಕಾಶ ಇರುತ್ತದೆ. ಆ.10ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಟಾಗೂ ಅವಕಾಶ

ಡಿಸಿಇಟಿ-24ಗೆ ಅರ್ಜಿ ಸಲ್ಲಿಸಿ, ದಾಖಲಾತಿ ಪೂರ್ಣಗೊಳಿಸಿರುವ ಆರ್ಕಿಟೆಕ್ಚರ್ ಅಭ್ಯರ್ಥಿಗಳು, ನಾಟಾ ಅಂಕಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸದೇ ಇದ್ದಲ್ಲಿ ಆ.8ರಂದು ಖುದ್ದು ಕೆಇಎಗೆ ಬಂದು ಸಲ್ಲಿಸಿ, ರಾಂಕ್ ಪಡೆಯಬಹುದು. ನಂತರ 2ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ (NEET 2024) ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್‌ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ. ಆಗಸ್ಟ್ 5ರ ಬೆಳಗ್ಗೆ 11ಕ್ಕೆ ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಯುಜಿ ನೀಟ್-2024 ಲಿಂಕ್ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 7 ರಂದು ಬೆಳಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್‌ಅನ್ನು ಎನ್‌ಟಿಎ ಡೇಟಾದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೇರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಆ.7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಇನ್ನೂ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹವರು ಆ.7ರಿಂದ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜುಲೈ 26ರಂದು ನೀಟ್‌ ಯುಜಿ 2024 ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

Continue Reading

ಕರ್ನಾಟಕ

Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Bangalore Hotels: ಹೋಟೆಲ್‌, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ-ವಹಿವಾಟು ಅವಧಿ ವಿಸ್ತರಿಸಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ.

VISTARANEWS.COM


on

Bangalore Hotels
Koo

ಬೆಂಗಳೂರು: ರಾಜಧಾನಿಯಲ್ಲಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ (Bangalore Hotels) ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ ವ್ಯಾಪಾರ-ವಹಿವಾಟು ನಡೆಸಲು ಅನುಮತಿ ನೀಡಿದೆ.

ಈ ಬಗ್ಗೆ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್‌ ಎನ್‌.ಕೆ. ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಸಿಎಲ್‌ 4, ಸಿಎಲ್‌ 6, ಸಿಎಲ್‌ 7, ಸಿಎಲ್‌ 7D ಲೈಸೆನ್ಸ್ ಪಡೆದ ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌ಗೆ ಬೆಳಗ್ಗೆ 9 ರಿಂದ ಮಧ್ಯರಾತ್ರಿ 1 ಗಂಟೆವರೆಗೆ ಹಾಗೂ ಸಿಎಲ್‌ 9 ಲೈಸೆನ್ಸ್ ಪಡೆದ ಬಾರ್‌ಗಳಿಗೆ ಬೆಳಗ್ಗೆ 10ರಿಂದ ಮಧ್ಯರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿನ ಸಮಯ ನಿಗದಿಪಡಿಸಲಾಗಿದೆ.

2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 269 ರಲ್ಲಿ ಘೋಷಿಸಲಾದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯಾರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗಿದೆ. ಜುಲೈ 06 ರಂದು ನಡೆದ ಸಭೆಯಲ್ಲಿ ಆರ್ಥಿಕ ಇಲಾಖೆ ಸಹಮತಿ ನೀಡಿದ ಹಿನ್ನೆಲೆ ವ್ಯಾಪಾರ-ವಹಿವಾಟು ವಿಸ್ತರಣೆಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | Almonds For Health: ಉತ್ತಮ ಆರೋಗ್ಯಕ್ಕಾಗಿ ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು?

Lalbagh Flower Show: ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

Lalbagh Flower Show
Lalbagh Flower Show

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆಯ ಥೀಮ್‌ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.

ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್‌ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

ಪ್ರವೇಶ ಶುಲ್ಕ ಎಷ್ಟು?

168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್‌ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

Women PG: ಬೆಂಗಳೂರಿನಲ್ಲಿ ಮಹಿಳಾ ಪಿಜಿಗಳಿಗೆ ಇನ್ನು ಮುಂದೆ ಕಟ್ಟುನಿಟ್ಟಿನ ರೂಲ್ಸ್! ಫಾಲೋ ಮಾಡದಿದ್ದರೆ ಕೇಸ್

ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

Continue Reading

ಕರ್ನಾಟಕ

Muda Scam: ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ.ಅಬ್ರಹಾಂ; ಸಿಎಂ ವಿರುದ್ಧ ತನಿಖೆಗೆ ಮತ್ತಷ್ಟು ದಾಖಲೆ

Muda Scam: ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಟಿ.ಜೆ. ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆ ಹಾಗೂ ಮಾಹಿತಿಯನ್ನು ರಾಜ್ಯಪಾಲರಿಗೆ ನೀಡಿದ್ದಾರೆ.

VISTARANEWS.COM


on

MUDA scam
Koo

ಬೆಂಗಳೂರು: ಮುಡಾ ಹಗರಣ (Muda Scam) ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಆರ್‌ಟಿಐ ಕಾರ್ಯಕರ್ತ ಟಿ. ಜೆ. ಅಬ್ರಹಾಂ ಅವರು ಇದೀಗ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ಸಿಎಂ ವಿರುದ್ಧ ಅನೇಕ ದಾಖಲೆಗಳನ್ನು ನೀಡಿದ್ದ ಅಬ್ರಹಾಂ, ಇದೀಗ ಮತ್ತಷ್ಟು ದಾಖಲೆಗಳನ್ನು ನೀಡಿದ್ದಾರೆ.

ರಾಜಭವನಕ್ಕೆ ಬರುವಂತೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಸೂಚಿಸಿದ ಹಿನ್ನೆಲೆಯಲ್ಲಿ ಅಬ್ರಹಾಂ ಭೇಟಿಯಾಗಿದ್ದರು. ಮುಡಾ ಹಗರಣ ಕುರಿತು ಮತ್ತಷ್ಟು ದಾಖಲೆಗಳನ್ನು ರಾಜ್ಯಪಾಲರು ಕೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ರಾಜ್ಯಪಾಲರು ಅನುಮತಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಮೂಡಿವೆ.

ಆರೋಪದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದ ಟಿ.ಜೆ. ಅಬ್ರಹಾಂ

ರಾಜ್ಯಪಾಲರ ಭೇಟಿ ಬಳಿಕ ಟಿ.ಜೆ. ಅಬ್ರಹಾಂ ಮಾತನಾಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನನ್ನ ಬೇಡಿಕೆ ಏನಿತ್ತೋ ಅದರ ಮೇರೆಗೆ ಸರ್ಕಾರಕ್ಕೆ ರಾಜ್ಯಪಾಲರು ಶೋಕಾಸ್ ನೊಟೀಸ್ ಕೊಟ್ಟಿದ್ದರು. ಆದರೆ ಸಚಿವ ಸಂಪುಟ ಸಿಎಂ ತಪ್ಪಿಲ್ಲ, ರಾಜ್ಯಪಾಲರು ನೋಟಿಸ್ ಕೊಟ್ಟಿರೋದೇ ತಪ್ಪು ಅಂತ ನಿರ್ಣಯ ಮಾಡಿದೆ. ಅಬ್ರಹಾಂ ಸರಿಯಿಲ್ಲ ಅಂತಲೂ ಸರ್ಕಾರ ಆಪಾದನೆ ಮಾಡಿದೆ. ಹೀಗಾಗಿ ಪ್ರಕರಣದ ಬಗ್ಗೆ ರಾಜ್ಯಪಾಲರಿಗೆ ಸ್ಪಷ್ಟನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

ಸರ್ಕಾರ ನನ್ನ ಮೇಲೆ ಮಾಡಿರುವ ಆರೋಪ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ನನಗೆ ತಿಳಿದ ಮಟ್ಟಿಗೆ ರಾಜ್ಯಪಾಲರು ಸಿಎಂಗೆ ಎರಡನೇ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದಾರೆ ಎಂದರೆ ಅವರಿಗೆ ಪ್ರಕರಣವನ್ನು ಮುಂದುವರಿಸಲು ಆಸಕ್ತಿ ಇದೆ ಎಂದರ್ಥ. ಕಳೆದ ಗುರುವಾರ ರಾಜ್ಯಪಾಲರ ಸಮಯ ಕೇಳಿದ್ದೆ, ಇವತ್ತು ಬರಲು ಹೇಳಿದ್ದರು, ಬಂದು ಸ್ಪಷ್ಟೀಕರಣ ಕೊಟ್ಟಿದ್ದೇನೆ ಎಂದರು.

ನನ್ನ ವಿರುದ್ಧ ಯಾವ ದೂರೂ ಇಲ್ಲ. ಸರ್ಕಾರಕ್ಕೆ ನಾನು ನೇರ ಸವಾಲ್ ಹಾಕುತ್ತೇನೆ. ನನ್ನ ವಿರುದ್ಧ ಕೇಸ್ ಹುಡುಕಿ, ಹುಡುಕಲು ಆಗದಿದ್ದರೆ ಹೇಗೆ ಹುಡುಕಬೇಕು ಅಂತ ನನ್ನ ಕೇಳಿ ಎಂದು ಕಿಡಿಕಾರಿದ್ದಾರೆ.

ಏನಿದು ಪ್ರಕರಣ?

ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿಟ್ಟಿದೆ. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್​ ನೋಟಿಸ್ ನೀಡಿದ್ದರು. ​

ಸಿಎಂಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ನೋಟಿಸ್ ವಾಪಸ್ ಪಡೆಯುತ್ತಾರಾ ಎಂಬುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ | L K Advani: ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

MUDA scam: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ (MUDA scam) ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ನೀಡಿರುವ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಕೂಡ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Gruha Lakshmi Scheme: ಮಹಿಳೆಯರಿಗೆ ಗುಡ್‌ ನ್ಯೂಸ್‌; ಇಂದಿನಿಂದಲೇ 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮೆ

ಸಿಎಂಗೆ ಪ್ರಾಸಿಕ್ಯೂಷನ್‌ ಭಯ

ಮುಡಾ ಅಕ್ರಮದಲ್ಲಿ ಸಿಎಂ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಈಗಾಗಲೇ ಸಚಿವ ಸಂಪುಟ ರಾಜ್ಯಪಾಲರಿಗೆ ಉತ್ತರ ನೀಡಿದೆ. ರಾಜ್ಯ ಸರ್ಕಾರ ಕಳುಹಿಸಿರುವ ನಿರ್ಣಯವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪರಿಶೀಲನೆ ಮಾಡುತ್ತಿದ್ದಾರೆ. ಒಂದೆಡೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಡಲು ಸಿದ್ಧತೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಟೀಮ್‌ನಿಂದ ಕಾನೂನು ಹೋರಾಟಕ್ಕೆ ಸಿದ್ಧತೆ ಶುರುವಾಗಿದೆ.

Continue Reading
Advertisement
Bajrang Punia
ಕ್ರೀಡೆ21 mins ago

Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

Viral News
ವೈರಲ್ ನ್ಯೂಸ್28 mins ago

Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

DK Shivakumar
ಕರ್ನಾಟಕ33 mins ago

DK Shivakumar: ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

Gruha Jyothi
ಕರ್ನಾಟಕ45 mins ago

Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

Mukesh Ambani Mobile
ವಾಣಿಜ್ಯ51 mins ago

Mukesh Ambani Mobile: ಮುಕೇಶ್ ಅಂಬಾನಿ, ನೀತಾ ಅಂಬಾನಿ ಯಾವ ಮೊಬೈಲ್‌ ಬಳಸುತ್ತಾರೆ? ಅವುಗಳ ವೈಶಿಷ್ಟ್ಯ ಏನೇನು?

walking
ಆರೋಗ್ಯ59 mins ago

Walking for Weight Loss: ಇಲ್ಲಿವೆ ಬಗೆಬಗೆಯ ವಾಕಿಂಗ್‌; ತೂಕ ಇಳಿಸಲು ಇವುಗಳಿಂದಲೂ ಸಾಧ್ಯ! ಟ್ರೈ ಮಾಡಿ ನೋಡಿ

Koppala News
ಕೊಪ್ಪಳ1 hour ago

Koppala News: ಸಿದ್ದಾಪುರದಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಡಿಸಿ ನಲೀನ್ ಅತುಲ್ ಚಾಲನೆ

DCET 2024
ಕರ್ನಾಟಕ1 hour ago

DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

Paris Olympics
ಕ್ರೀಡೆ2 hours ago

Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

Handwork Saree Blouse
ಫ್ಯಾಷನ್2 hours ago

Handwork Saree Blouse: ಫೆಸ್ಟಿವ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಹ್ಯಾಂಡ್‌ ವರ್ಕ್‌ ಡಿಸೈನರ್‌ ಬ್ಲೌಸ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು4 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌