Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ - Vistara News

ಕರ್ನಾಟಕ

Mangalore Homestay case: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ ಎಲ್ಲಾ 40 ಆರೋಪಿಗಳು ಖುಲಾಸೆ

Mangalore Homestay case: ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಪತ್ರಕರ್ತ ನವೀನ್ ಸೂರಿಂಜೆ ಪ್ರಕರಣವನ್ನು ನ್ಯಾಯಾಲಯ ಈ ಹಿಂದೆಯೇ ಕೈಬಿಟ್ಟಿತ್ತು. ಉಳಿದ 40 ಆರೋಪಿಗಳನ್ನು ಕೋರ್ಟ್ ಮಂಗಳವಾರ ದೋಷ ಮುಕ್ತಗೊಳಿಸಿದೆ.

VISTARANEWS.COM


on

Mangalore Homestay case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಮಂಗಳೂರು ಹೋಮ್‌ ಸ್ಟೇ ದಾಳಿ ಪ್ರಕರಣದ (Mangalore Homestay case) ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಮಹತ್ವದ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷಮುಕ್ತರಾಗಿದ್ದಾರೆ.

ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಪತ್ರಕರ್ತ ನವೀನ್ ಸೂರಿಂಜೆ ಪ್ರಕರಣವನ್ನು ನ್ಯಾಯಾಲಯ ಈ ಹಿಂದೆಯೇ ಕೈಬಿಟ್ಟಿತ್ತು. ಇಂದು ಉಳಿದ 40 ಆರೋಪಿಗಳನ್ನು ಕೋರ್ಟ್ ದೋಷ ಮುಕ್ತಗೊಳಿಸಿದೆ. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿದೆ.

ಏನಿದು ಪ್ರಕರಣ?

2012ರ ಜುಲೈ 28 ರಂದು ಹಿಂದು ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇ ಮೇಲೆ ದಾಳಿ ಮಾಡಿದ್ದರು. ಯುವಕ ಯುವತಿಯರು ಹೋಂ ಸ್ಟೇಯಲ್ಲಿ ತಂಗಿದ್ದು, ಬರ್ತ್ ಡೇ ಪಾರ್ಟಿ ಮಾಡುತ್ತಿದ್ದಾಗ ಅವರ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ತೀವ್ರ ಹಲ್ಲೆ ನಡೆಸಿದ್ದರು. ಈ ಬಗ್ಗೆ ಸಂತ್ರಸ್ತರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂತಿಮವಾಗಿ ಪೊಲೀಸರು 44 ಮಂದಿಯ ಮೇಲೆ ಆರೋಪ ಪಟ್ಟಿ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಘಟನೆ ನಡೆದು ಸುದೀರ್ಘ 12 ವರ್ಷ ವಿಚಾರಣೆ ಬಳಿಕ ಮಂಗಳವಾರ ಅಂತಿಮ ತೀರ್ಪು ಹೊರಬಿದ್ದಿದೆ.

ಇದನ್ನೂ ಓದಿ | Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!

Gadag News
Gadag News

ಗದಗ: ಮಕ್ಕಳ ಕೂದಲು ಕಟ್ ಮಾಡಿದ್ದಕ್ಕೆ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು ಬಿದ್ದಿದೆ. ಗದಗ (Gadag News) ಬೆಟಗೇರಿ ಸೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಡ್ರಾಮಾವೇ ನಡೆದಿದೆ. ಶಿಕ್ಷಕ ಬೆನೋಯ್ ಎಂಬಾತ ಶಾಲೆಯ ಆರು ಮಕ್ಕಳಿಗೆ ಹೇರ್ ಕಟ್ ಮಾಡಿದ್ದಾರೆ.

ಕೂದಲು ಕಟ್ ಮಾಡುವ ವೇಳೆ ವಿದ್ಯಾರ್ಥಿ ಹಣೆಗೆ ಗಾಯವಾಗಿದೆ. ಏಳನೇ ತರಗತಿ ವಿದ್ಯಾರ್ಥಿಗೆ ಬೆನೋಯ್ ಕತ್ತರಿಯಿಂದ ಗಾಯ ಮಾಡಿದ್ದಾರೆ. ಶಿಕ್ಷಕ ಬೆನೋಯ್ ವರ್ತನೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಬುರಡಿ ಎದುರೇ ಪೋಷಕರು ಧರ್ಮದೇಟು ನೀಡಿದ್ದಾರೆ.

ಇದನ್ನೂ ಓದಿ: Self Harming: ಹೊಸದುರ್ಗದಲ್ಲಿ ಬ್ಯಾಂಕ್‌ ಆಫೀಸರ್‌ ಸೂಸೈಡ್‌; ರೈಲಿಗೆ ಸಿಲುಕಿ ಮತ್ತಿಬ್ಬರು ಸಾವು

ಬಳಿಕ ಬೆನೋಯ್‌ನ್ನು ವಜಾಗೊಳಿಸುವಂತೆ ಪಾಲಕರು ಆಗ್ರಹಿಸಿದ್ದಾರೆ. ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ಅಧಿಕಾರಿ ವರದಿ ಪಡೆದಿದ್ದಾರೆ. ಮೇಲಾಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಗದಗ ಶಹರ ಬಿಇಒ ಆರ್‌ಎಸ್ ಬುರಡಿ ಮಾಹಿತಿ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Reliance Foundation: ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ನೆರವು

Reliance Foundation: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ಫೌಂಡೇಷನ್‌ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಆಹಾರ ಪದಾರ್ಥಗಳು, ಒಣಹಣ್ಣುಗಳು, ಹಾಲು, ಪಡಿತರ, ಅಡುಗೆ ಪಾತ್ರೆಗಳು, ಕುಡಿಯುವ ನೀರು, ಮೂಲಭೂತ ನೈರ್ಮಲ್ಯ ವಸ್ತುಗಳು, ಟೆಂಟ್‌ಗಳು, ಹಾಸಿಗೆಗಳು, ಸೋಲಾರ್ ಚಾಲಿತ ಸಾಧನಗಳು ಮತ್ತು ಟಾರ್ಚ್‌ಗಳಂತಹ ವಸ್ತುಗಳನ್ನು ಒದಗಿಸುತ್ತಿದೆ.

VISTARANEWS.COM


on

Reliance Foundation
Koo

ವಯನಾಡ್: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ (Reliance Foundation) ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆಯನ್ನು ಮಾಡಿದೆ. ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಆಹಾರ ಪದಾರ್ಥಗಳು, ಒಣಹಣ್ಣುಗಳು, ಹಾಲು, ಪಡಿತರ, ಅಡುಗೆ ಪಾತ್ರೆಗಳು, ಕುಡಿಯುವ ನೀರು, ಮೂಲಭೂತ ನೈರ್ಮಲ್ಯ ವಸ್ತುಗಳು, ಟೆಂಟ್‌ಗಳು, ಹಾಸಿಗೆಗಳು, ಸೋಲಾರ್ ಚಾಲಿತ ಸಾಧನಗಳು ಮತ್ತು ಟಾರ್ಚ್‌ಗಳಂತಹ ವಸ್ತುಗಳನ್ನು ಒದಗಿಸುತ್ತಿದೆ.

ಸಂತ್ರಸ್ತ ಕುಟುಂಬಗಳಿಗೆ ಬೀಜಗಳು, ಮೇವು, ಉಪಕರಣಗಳು ಮತ್ತು ವೃತ್ತಿಪರ ತರಬೇತಿಯನ್ನು ನೀಡಲಾಗುವುದು, ಇದರಿಂದ ಅವರ ಜೀವನವು ಮತ್ತೆ ಹಳಿಗೆ ಮರಳುತ್ತದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡೆತಡೆಗಳು ಆಗದಿರುವಂತೆ ರಿಲಯನ್ಸ್ ಫೌಂಡೇಷನ್‌ನಿಂದ ಪುಸ್ತಕಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡಂತೆ ಶಿಕ್ಷಣಕ್ಕೆ ಬೇಕಾದ ಬೆಂಬಲವನ್ನು ನೀಡುತ್ತದೆ.

ಇದನ್ನೂ ಓದಿ: Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

ರಕ್ಷಣಾ ಕಾರ್ಯಕರ್ತರು ಮತ್ತು ವಿಪತ್ತು ನಿರ್ವಹಣಾ ತಂಡಗಳ ಸುಗಮ ಕಾರ್ಯನಿರ್ವಹಣೆಗಾಗಿ ರಿಲಯನ್ಸ್ ಜಿಯೋ ವಿಶೇಷ ಟವರ್‌ಗಳನ್ನು ಸ್ಥಾಪಿಸಿದೆ. ಇದರಿಂದ ಸಂವಹನವನ್ನು ಸುಧಾರಿಸಬಹುದು ಮತ್ತು ವಿಪತ್ತು ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಬಹುದು. ಮಾನಸಿಕ-ಸಾಮಾಜಿಕ ಆಘಾತದಿಂದ ಪೀಡಿತ ವ್ಯಕ್ತಿಗಳಿಗೆ ರಿಲಯನ್ಸ್ ಫೌಂಡೇಷನ್ ತಜ್ಞರ ಸಹಾಯವನ್ನು ಸಹ ಒದಗಿಸುತ್ತಿದೆ.

ಕೇರಳದಲ್ಲಿ ನಡೆದ ಈ ದುರಂತ ಘಟನೆಯ ಕುರಿತು ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ, “ವಯನಾಡಿನ ಜನರ ನೋವು ಮತ್ತು ಭೂಕುಸಿತದಿಂದ ಉಂಟಾದ ಅಪಾರ ನಷ್ಟದಿಂದ ನಾವೂ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ, ಘಟನೆಯಿಂದ ಬಾಧಿತರಾದ ಪ್ರತಿ ವ್ಯಕ್ತಿ ಮತ್ತು ಕುಟುಂಬದೊಂದಿಗೆ ನಾವಿದ್ದೇವೆ.” ಎಂದು ತಿಳಿಸಿರುವ ಅವರು, ನಮ್ಮ ರಿಲಯನ್ಸ್ ಫೌಂಡೇಷನ್ ತಂಡಗಳು ಹಗಲು- ರಾತ್ರಿ ಕೆಲಸ ಮಾಡುತ್ತಿವೆ. ಈ ಕಷ್ಟದ ಸಮಯದಲ್ಲಿ ನಾವು ಕೇರಳದ ಜನರೊಂದಿಗೆ ನಿಲ್ಲುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

ಪರಿಹಾರ ಸಾಮಗ್ರಿಗಳೊಂದಿಗೆ ಸಮಸ್ಯೆ ಆದ ಸ್ಥಳದಲ್ಲಿ ರಿಲಯನ್ಸ್ ಫೌಂಡೇಷನ್ ತಂಡಗಳಿವೆ. ರಾಜ್ಯದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತದೊಂದಿಗೆ ನಿರಂತರ ಚರ್ಚೆ ನಡೆಸಲಾಗುತ್ತಿದೆ. ಪ್ರತಿಯೊಂದು ಕಾರ್ಯವನ್ನು ರಾಜ್ಯ ಸರ್ಕಾರ ಮತ್ತು ಇತರ ವಿಪತ್ತು ನಿರ್ವಹಣಾ ಸಂಸ್ಥೆಗಳ ಸಮನ್ವಯದಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಇದರಿಂದ ಸಹಾಯವು ಸಮಯಕ್ಕೆ ತಲುಪುತ್ತದೆ. ರಿಲಯನ್ಸ್ ಫೌಂಡೇಷನ್ ದೀರ್ಘಾವಧಿಯಲ್ಲಿ ವಯನಾಡಿನ ಜನರನ್ನು ಬೆಂಬಲಿಸಲು ಬದ್ಧವಾಗಿದೆ ಎಂದು ತಿಳಿಸಿದೆ.

Continue Reading

ಕರ್ನಾಟಕ

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

B.Ed Exam Scam: ಪರೀಕ್ಷಾ ಅಕ್ರಮಕ್ಕೆ ಅನುಕೂಲ‌ ಮಾಡಿಕೊಟ್ಟಿದ್ದಾರೆಂಬ ಆರೋಪದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವೆ ಸೇರಿ ಐವರ ವಿರುದ್ಧ ಕೇಸ್‌ ದಾಖಲಾಗಿದೆ. ಆದರೆ, ಈ ಮೊದಲೇ ದೂರು ನೀಡಿದ್ದರೂ ಪೊಲೀಸರು ತಮ್ಮ ದೂರನ್ನು ಸ್ವೀಕರಿಸಿಲ್ಲ ಎಂದು ಕುಲಸಚಿವೆ ಆರೋಪಿಸಿದ್ದಾರೆ.

VISTARANEWS.COM


on

B.Ed Exam Scam
Koo

ಕಲಬುರಗಿ: ಬಿ.ಇಡಿ ಪರೀಕ್ಷೆ ಅಕ್ರಮಕ್ಕೆ (B.Ed Exam Scam) ಸಂಬಂಧಿಸಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ ಸೇರಿ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ನಾಗರಾಜ್ ಎಂಬುವವರು ನೀಡಿದ ದೂರಿನ ಮೇರೆಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೀಕ್ಷಾ ಅಕ್ರಮಕ್ಕೆ ಅನುಕೂಲ‌ ಮಾಡಿಕೊಟ್ಟಿದ್ದಾರೆಂಬ ಆರೋಪದಲ್ಲಿ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ, ಅಲ್‌ ಬದರ್‌ ಕಾಲೇಜಿನ ಪ್ರಾಂಶುಪಾಲರಾದ ಮಲ್ಲಮ್ಮ ಮಂಠಾಳೆ, ಬಿ.ಇಡಿ ವಿಷಯ ನಿರ್ವಾಹಕ ಸ್ವರೂಪ ಭಟ್ಟರ್ಕಿ, ಪರೀಕ್ಷೆ ಮೇಲ್ವಿಚಾರಕ ಮೌನೇಶ್‌ ಅಕ್ಕಿ, ಇಂದಿರಾ ಗಾಂಧಿ ಬಿ.ಇಡಿ ಕಾಲೇಜಿನ ಅಧ್ಯಕ್ಷ ಮೌಲಾ ಪಟೇಲ್‌ ವಿರುದ್ಧ ಪ್ರಕರಣ ದಾಖಲಾಗಿದೆ.

2024ರ ಜುಲೈನಲ್ಲಿ‌ ನಡೆದ ಬಿ.ಇಡಿ ಪರೀಕ್ಷೆ ವೇಳೆ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಬಿ.ಇಡಿ ಪರೀಕ್ಷೆಗೆ 100 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲಾಗಿತ್ತು. ಆದರೆ, ಪರೀಕ್ಷೆಗೆ ಅರ್ಹರು ಕೇವಲ 22 ವಿದ್ಯಾರ್ಥಿಗಳು ಮಾತ್ರ. ಬಿ.ಇಡಿ ಪ್ರಥಮ‌ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎನ್ನಲಾಗಿತ್ತು. ನಕಲಿ ದಾಖಲೆಗಳು ಸೃಷ್ಟಿಸಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಹಾಲ್‌ ಟಿಕೆಟ್ ನೀಡಿದ ಆರೋಪ ಇಂದಿರಾಗಾಂಧಿ ಬಿ.ಇಡಿ ಕಾಲೇಜು ಹಾಗೂ ಅಲ್ ಬದರ್ ಕಾಲೇಜು ವಿರುದ್ಧ ಕೇಳಿಬಂದಿತ್ತು.

ದೂರು ಕೊಟ್ಟಿದ್ದ ಕುಲಸಚಿವೆ ಮೇಲೆಯೇ ಎಫ್‌ಐಆರ್‌!

ಪರೀಕ್ಷಾ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂದಿರಾಗಾಂಧಿ ಬಿ.ಇಡಿ ಕಾಲೇಜು ಹಾಗೂ ಅಲ್ ಬದರ್ ಕಾಲೇಜು ವಿರುದ್ಧ ಜುಲೈ 8ರಂದೇ ಮೌಲ್ಯಮಾಪನ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ ಅವರು ಇದೇ ಅಶೋಕನಗರ ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದರು ಎನ್ನಲಾಗಿದೆ. ಆದರೆ, ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪ ಕೇಳಿಬಂದಿದೆ.

ಮೊದಲಿಗೆ ವಿವಿ ಪೊಲೀಸ್ ಠಾಣೆಯಿಂದ ರಾಘವೇಂದ್ರ ಪೊಲೀಸ್ ಠಾಣೆ, ಅಲ್ಲಿಂದ ಮತ್ತೆ ಅಶೋಕನಗರ ಪೊಲೀಸ್ ಠಾಣೆಗೆ ಕುಲಸಚಿವೆ ಅಲೆದಾಡಿದ್ದಾರೆ. ಆದರೆ, ಮೊದಲು ದೂರು ದಾಖಲಿಸಿದ್ದ ಪ್ರಕರಣದ ತನಿಖೆ ಬಿಟ್ಟು, ನಂತರ ದಾಖಲಿಸಿದ್ದ ಪ್ರಕರಣದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಮೌಲ್ಯಮಾಪನ ಕುಲಸಚಿವೆ ಪ್ರೊ.ಡಾ.ಮೇದಾವಿನಿ ಎಸ್.ಕಟ್ಟಿ ಆರೋಪಿಸಿದ್ದಾರೆ.

ಇದನ್ನೂ ಓದಿ | Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

ಬೇಗ ಎಫ್‌ಐಆರ್‌ ಮಾಡಲು ಅಗೋದಿಲ್ಲಾ ಎಂದಿದ್ದ ಪೊಲೀಸರು, ಈಗ ಏಕಾ ಏಕಿ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದೇಕೆ? ಎಂದು ಕಲಬುರಗಿ ಸೌತ್ ಎಸಿಪಿ ಭೋತೆಗೌಡ ಅವರ ಮೇಲೆ ಕುಲಸಚಿವೆ ಅನುಮಾನ ವ್ಯಕ್ತಪಡಿಸಿದ್ದಾರೆ.

Continue Reading

ಕರ್ನಾಟಕ

DK Shivakumar: ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

DK Shivakumar: ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು ಎಂದು ಎಚ್‌.ಡಿ. ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ.

VISTARANEWS.COM


on

DK Shivakumar
Koo

ಮಂಡ್ಯ: “ಕುಮಾರಸ್ವಾಮಿ ಅವರು ಈ ಹಿಂದೆ ಅವರೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವತ್ಥನಾರಾಯಣ್, ಯೋಗೀಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ ನಂತರ ಡಿಸಿಎಂ ಶಿವಕುಮಾರ್ ಮಾತನಾಡಿದರು.

“ಜನ ತೀರ್ಪು ನೀಡಿದ್ದಾರೆ. ಆದ ಕಾರಣಕ್ಕೆ ಗಂಡು ಭೂಮಿ ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು. “ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ” ಎಂದು ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಛೇಡಿಸಿದರು.

ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

“ಮೋದಿ ಅವರ ಕೈ ಹಿಡಿದು ಕೇವಲ ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಣ್ಣ ಹೇಳಿದ್ದರು. ಆದರೆ ಈಗ ನಾವು ಐದು ಜನ ಮಂತ್ರಿಗಳಿದ್ದೇವೆ, ನಾನು ಆ ರೀತಿ ಮಾತು ಕೊಡಲು ಮೂರ್ಖನೇ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆಗಳಿಗೆ ಬಿಜೆಪಿ ಹಾಗೂ ಕುಮಾರಸ್ವಾಮಿ ಇಬ್ಬರೂ ಉತ್ತರ ಕೊಡಬೇಕು. 10 ನಿಮಿಷದಲ್ಲಿ ನಾನು ತೋರಿಸಿದ ಮೈತ್ರಿ ನಾಯಕರ ಮಾತುಗಳಿಗೆ ಉತ್ತರ ಕೊಡಲಿ” ಎಂದು ಆಗ್ರಹಿಸಿದರು.

“ಕುಮಾರಸ್ವಾಮಿ ಅವರನ್ನು ಕಾವೇರಿ ನೀರಿನ ವಿಚಾರದ ಸಭೆಗೆ ಕರೆದಿದ್ದೆವು. ಅದಕ್ಕೆ ಅವರು ದ್ರಾಕ್ಷಿ, ಗೋಡಂಬಿ ತಿನ್ನಲು ಬರಬೇಕೆ ಎಂದಿದ್ದರು. ಆದರೆ ಅದೇ ದಿನ ಪಾಂಡವಪುರದಲ್ಲಿ ಬಾಡೂಟದಲ್ಲಿ ಭಾಗವಹಿಸಿದ್ದರು. ಕಾವೇರಿ ನೀರು, ರೈತರು, ರಾಜ್ಯದ ಹಿತ ಅವರಿಗೆ ಮುಖ್ಯವಾಗಿರಲಿಲ್ಲ. ಕುಮಾರಣ್ಣ ಏನೂ ಬೇಕಾದರೂ ಮಾಡಿಕೊಳ್ಳಲಿ, ಆದರೆ ನಮಗೆ ಮಾತ್ರ ನಿಮ್ಮ ಹಿತ ಮುಖ್ಯ” ಎಂದರು.

“148 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಅಲ್ಲದೇ 64 ಟಿಎಂಸಿ ನೀರು ಸಮುದ್ರಕ್ಕೆ ಹರಿದು ಹೋಗಿದೆ. ಹೆಚ್ಚಾಗಿ ಸಮುದ್ರಕ್ಕೆ ಹರಿದು ಹೋದ ನೀರನ್ನು ಹಿಡಿದಿಡುವ ಸಲುವಾಗಿ ಮೇಕೆದಾಟು ಯೋಜನೆ ಸಾಕಾರಕ್ಕಾಗಿ ಪಾದಯಾತ್ರೆ ಮಾಡಿದೆವು” ಎಂದು ಹೇಳಿದರು.

“ಕುಮಾರಸ್ವಾಮಿ ನನ್ನ ಕುಟುಂಬದ ಬಗ್ಗೆ ಮಾತನಾಡಲಿ ಎಂದೇ ಅವರ ಕುಟುಂಬದ ಬಗ್ಗೆ ಮಾತನಾಡುತ್ತಾ ಬರುತ್ತಿದ್ದೇನೆ. ನಿಮ್ಮ ಅತ್ತೆಯ ಕೆಐಡಿಬಿ ಭೂಮಿ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಇದೇ ಬಿಜೆಪಿಯವರು ನಿನ್ನ ಕುಟುಂಬಕ್ಕೆ ಹಂಚಿಕೆಯಾಗಿರುವ ಮುಡಾ ಸೈಟುಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ” ಎಂದು ಸವಾಲು ಹಾಕಿದರು.

“ನನ್ನ ಅಧ್ಯಕ್ಷತೆಯಲ್ಲಿ, ಸಿದ್ದರಾಮಯ್ಯ ಅವರ ಮುಖಂಡತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ. ಬಿಜೆಪಿಗೆ 65, ಜೆಡಿಎಸ್‌ಗೆ 19 ಸ್ಥಾನಗಳು ಬಂದವು. ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆಗಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸಲು ಆಗುವುದಿಲ್ಲ. ಮುಂದಿನ 10 ವರ್ಷವೂ ಕಾಂಗ್ರೆಸ್ ಸರ್ಕಾರವಿರುತ್ತದೆ” ಎಂದರು.

ಕುಮಾರಸ್ವಾಮಿ ಮೇಲೆ ಮಾತ್ರ ನಂಬಿಕೆ

ಭಾಷದ ಮಧ್ಯೆ ವೇದಿಕೆಯ ಎಲ್ಇಡಿ ಮೂಲಕ ಮೈತ್ರಿ ನಾಯಕರ ಹೇಳಿಕೆಗಳ ವಿಡಿಯೋ ಪ್ರದರ್ಶಿಸಿದ ನಂತರ ಮಾತು ಮುಂದುವರಿಸಿದ ಡಿಸಿಎಂ ಅವರು “ಯಾರ ಮಾತನ್ನು ನಂಬಬೇಡಿ ಎಂದು ಶಾಸಕ ಪ್ರಿಯಾಕ್ ಖರ್ಗೆ ಅವರು ಹೇಳಿದರು. ಅವರ ಮಾತಿನಂತೆ ನನಗೆ ಮುನಿಯಪ್ಪ ಅವರು, ಚೆಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಯಾರ ಮೇಲೂ ನಂಬಿಕೆಯಿಲ್ಲ ನನಗೆ ಕುಮಾರಸ್ವಾಮಿ ಅವರ ಮೇಲೆ, ಬೂಕನಕೆರೆ ಯಡಿಯೂರಪ್ಪ, ಯೋಗೀಶ್ವರ್, ಯತ್ನಾಳ್ ಮೇಲೆ ಮಾತ್ರ ನನಗೆ ನಂಬಿಕೆ” ಎಂದು ವ್ಯಂಗ್ಯವಾಡಿದರು.

ಉದ್ಯೋಗ ಕೊಡಿಸಿದರೆ ಒಂದು ಕೋಟಿ ನಮಸ್ಕಾರ ಹೇಳುತ್ತೇನೆ

“ಎಸ್.ಎಂ.ಕೃಷ್ಣ ಅವರು ಮದ್ದೂರಿನ ಸೋಮನಹಳ್ಳಿ, ಮಂಡ್ಯದ ತೂಬಿನಕೆರೆಯಲ್ಲಿ ಕೈಗಾರಿಕಾ ಪ್ರದೇಶಗಳನ್ನು ಸ್ಥಾಪನೆ ಮಾಡಿದರು. ಕುಮಾರಸ್ವಾಮಿ ಅವರೇ ಮೋದಿ ಅವರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೈಗಾರಿಕಾ ಮಂತ್ರಿ ಮಾಡಿದ್ದಾರೆ. ಮಂಡ್ಯ ಮತ್ತು ಹಾಸನ ಭಾಗದಲ್ಲಿ 10 ಸಾವಿರ ಉದ್ಯೋಗ ಸೃಷ್ಟಿ ಮಾಡುವ ಕೈಗಾರಿಕೆ ಮಾಡುತ್ತೇನೆ ಎಂದು ಹೇಳಿದ್ದೀರಾ. ನಮ್ಮ ಜನರಿಗೆ ಉದ್ಯೋಗ ಸಿಗುತ್ತದೆ ಎಂದರೆ ನಾವು ನಿಮಗೆ ಸಹಕಾರ ನೀಡುತ್ತೇವೆ. ನಮ್ಮ ಯುವಕರಿಗೆ ಕೆಲಸ ನೀಡಪ್ಪ ಒಂದು ಕೋಟಿ ನಮಸ್ಕಾರ ಹೇಳುತ್ತೇನೆ” ಎಂದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಧಮ್ ಇಲ್ಲ

“ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು.

ರಾಜ್ಯದ ಬಡವರ ವಿರುದ್ಧದ ಪಾದಯಾತ್ರೆ

“ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್‌ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಸರ್ಕಾರ ಬೀಳಿಸುವ ಹುನ್ನಾರ ಮಾಡುತ್ತಿದ್ದಾರೆ. ಕುಮಾರಸ್ವಾಮಿ, ಯಡಿಯೂರಪ್ಪ ಅವರೇ ಸರ್ಕಾರ ಬೀಳಿಸುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ಅಶೋಕಣ್ಣ ನಿನ್ನ ಕೈಯಲ್ಲಿ ಧಮ್ ಇಲ್ಲ. ವಿಜಯೇಂದ್ರಣ್ಣ ಕಾಂಗ್ರೆಸ್ ಪಕ್ಷದ ಭಿಕ್ಷೆಯಿಂದ ವಿಧಾನಸಭೆಗೆ ಬಂದಿದ್ದೀಯ. ನಾಗರಾಜ್ ಗೌಡನಿಗೆ ಟಿಕೆಟ್ ನೀಡಿದ್ದರೆ ನೀನು ಗೆಲ್ಲುತ್ತಿರಲಿಲ್ಲ. ಇದನ್ನು ಗಮನದಲ್ಲಿಟ್ಟುಕೋ” ಎಂದು ಹೇಳಿದರು.

ವಿಜಯೇಂದ್ರ ನಿಮ್ಮ ತಂದೆ ರಾಜೀನಾಮೆ ಕೊಟ್ಟಿದ್ದೇಕೆ?

“ವಿಜಯೇಂದ್ರ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎನ್ನುತ್ತೀಯಲ್ಲ. ನಿಮ್ಮ ತಂದೆ ಏತಕ್ಕೆ ರಾಜಿನಾಮೆ ನೀಡಿದರು. ಲಕ್ಷ್ಮೀವಿಲಾಸ್ ಬ್ಯಾಂಕ್‌ನಲ್ಲಿ ದುಬೈಯಲ್ಲಿ ಖಾತೆ ತೆರೆದು ಕೋಟ್ಯಂತರ ರೂಪಾಯಿ ವರ್ಗಾವಣೆಯಾಯಿತಲ್ಲ, ಇನ್ನೂ ಏಕೆ ನಿಮ್ಮ ಸರ್ಕಾರ ಇದರ ಬಗ್ಗೆ ತನಿಖೆ ಮಾಡಿಸಿಲ್ಲ. ನಿನ್ನಿಂದಾಗಿ ನಿಮ್ಮ ತಂದೆಯಿಂದ ಏಕೆ ರಾಜಿನಾಮೆ ಕೊಡಿಸಿದರು. ತಂಗಿ ಮಕ್ಕಳು, ನೆಂಟರು ಸೇರಿದಂತೆ ಇತರರ ಹೆಸರಿನಲ್ಲಿ ಅಕ್ರಮ ನಡೆಯಿತಲ್ಲ, ಅದರ ಬಗ್ಗೆ ಬಿಚ್ಚಿಡಲೇ? ಈ ವಿಚಾರಗಳೆಲ್ಲ ವಿಧಾನಸಭೆಯಲ್ಲಿ ಚರ್ಚೆಯಾಗಿ ದಾಖಲೆಗೆ ಹೋಗಬೇಕು. ಸರಿಯಾದ ಸಂದರ್ಭದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ” ಎಂದರು.

ಪಾಪ ವಿಮೋಚನಾ ಯಾತ್ರೆ

“ಬಿಜೆಪಿ, ಜೆಡಿಎಸ್ ಪಾದಯಾತ್ರೆಯು ಪಾಪ ವಿಮೋಚನೆಯ ಯಾತ್ರೆ. ನೀವು ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೀರಿ. ಕುಮಾರಸ್ವಾಮಿ ಅವರೇ ನಿಮ್ಮ ಸಹೋದರರ ಆಸ್ತಿ ಪಟ್ಟಿ ಬಿಚ್ಚಿಡಿ ಎಂದರೂ ಬಿಚ್ಚಿಡುತ್ತಿಲ್ಲ. ನೀವು ಎಲ್ಲಿಗೆ ಬೇಕಾದರೂ ಚರ್ಚೆಗೆ ಕರೆಯಿರಿ ನಾನು ಸಿದ್ಧನಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ | Bangladesh Unrest: ಬಾಂಗ್ಲಾದಲ್ಲಿ 19,000 ಭಾರತೀಯರು ಸಿಲುಕಿದ್ದಾರೆ; ಸಚಿವ ಜೈ ಶಂಕರ್‌

“ಮಂಡ್ಯದ ಜನರ ಬದುಕಿಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಎಸ್.ಎಂ. ಕೃಷ್ಣ ಅವರ ಬಗ್ಗೆ ಕುಮಾರಸ್ವಾಮಿ ಮಾತನಾಡುತ್ತಾರೆ. ನಿಮಗೆ ಮಂಡ್ಯದ ನಾಯಕರಾದ ಮಾದೇಗೌಡರು ಹಾಗೂ ಕೃಷ್ಣ ಅವರ ಬಗ್ಗೆ ಮಾತನಾಡುವ ಹಕ್ಕಿಲ್ಲ. ರೈತರ ಮಕ್ಕಳ, ಕಾವೇರಿ ತಾಯಿಯ ನಾಡಿನ ರಕ್ಷಣೆಗಾಗಿ ಜನರು ನಮಗೆ 136 ಸ್ಥಾನ ನೀಡಿದ್ದಾರೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುತ್ತೇವೆ. ನಿಮ್ಮ ಕುತಂತ್ರ, ಕೇಂದ್ರ ಸರ್ಕಾರದ ಕುತಂತ್ರ ಜನರ ತೀರ್ಪಿನ ಮುಂದೆ ನಡೆಯುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

Continue Reading

ಕರ್ನಾಟಕ

Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

Gruha Jyothi: ಮನೆ ಬದಲಾಯಿಸಿದ ನಂತರ ಮತ್ತೆ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Gruha Jyothi
Koo

ಬೆಂಗಳೂರು: ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ (Gruha Jyothi) ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ. ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ.

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?

ಗ್ರಾಹಕರು https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Fortis Hospital: ಅಪಘಾತದಲ್ಲಿ ತಲೆಗೆ ತೀವ್ರ ಏಟು; ಕ್ಲಿಷ್ಟ ಶಸ್ತ್ರಚಿಕಿತ್ಸೆಯಿಂದ ಯುವಕನಿಗೆ ಜೀವ ದಾನ

ಮನೆ ಬದಲಿಸುವ ಸಂದರ್ಭದಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌.ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.

ʼಗೃಹಜ್ಯೋತಿʼಗೆ ವರ್ಷದ ಸಂಭ್ರಮ

2024ರ ಜೂನ್‌ವರೆಗೆ ಒಟ್ಟು ನೋಂದಣಿ-1.67 ಕೋಟಿ, ಒಟ್ಟು ಫಲಾನುಭವಿಗಳು-1.56 ಕೋಟಿ. 2023 ಆಗಸ್ಟ್ ರಿಂದ 2024 ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟು ಸಬ್ಸಿಡಿ-8239 ಕೋಟಿ ರೂ.

“ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ” ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

“ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡುವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ತಿಳಿಸಿದ್ದಾರೆ.

Continue Reading
Advertisement
Paris Olympics
ಕ್ರೀಡೆ11 mins ago

Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

Bangladesh unrest
ದೇಶ36 mins ago

Bangladesh Unrest: ಶೇಖ್‌ ಹಸೀನಾಗೆ 8 ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ಭಾರತದ ಜ್ಯೋತಿಷಿ; ಆತನ ಭವಿಷ್ಯವಾಣಿ ಏನು?

Pralhad Joshi
ದೇಶ38 mins ago

Pralhad Joshi: 2030ರಲ್ಲೂ ನಾವಿಲ್ಲೇ ಇರುತ್ತೇವೆ, ನೀವಲ್ಲೇ ಇರುತ್ತೀರಿ; ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್

Bangladesh Protest
ವಿದೇಶ39 mins ago

Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

Reliance Foundation
ಕರ್ನಾಟಕ40 mins ago

Reliance Foundation: ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ನೆರವು

B.Ed Exam Scam
ಕರ್ನಾಟಕ55 mins ago

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

Bajrang Punia
ಕ್ರೀಡೆ2 hours ago

Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

Viral News
ವೈರಲ್ ನ್ಯೂಸ್2 hours ago

Viral News: ಗುಪ್ತಾಂಗ ಭಾಗದಲ್ಲಿ ಪತ್ತೆಯಾಯ್ತು ಮೊಬೈಲ್‌; ಪರೀಕ್ಷೆಯಲ್ಲಿ ಕಾಪಿ ಹೊಡಿಯೋಕೆ ಅಭ್ಯರ್ಥಿಗಳ ಹೊಸ ಟೆಕ್ನಿಕ್‌!

DK Shivakumar
ಕರ್ನಾಟಕ2 hours ago

DK Shivakumar: ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

Gruha Jyothi
ಕರ್ನಾಟಕ2 hours ago

Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು5 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌