Shira News: ವರ್ಗಾವಣೆಗೊಂಡ ಶಿರಾ ತಾ.ಪಂ ಇಓ ಅನಂತ್‌ರಾಜ್‌ಗೆ ಬೀಳ್ಕೊಡುಗೆ - Vistara News

ತುಮಕೂರು

Shira News: ವರ್ಗಾವಣೆಗೊಂಡ ಶಿರಾ ತಾ.ಪಂ ಇಓ ಅನಂತ್‌ರಾಜ್‌ಗೆ ಬೀಳ್ಕೊಡುಗೆ

Shira News: ಶಿರಾ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಈಚೆಗೆ ವರ್ಗಾವಣೆಗೊಂಡ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನಂತ್‌ರಾಜ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಜರುಗಿತು.

VISTARANEWS.COM


on

Shira News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿರಾ: ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಈಚೆಗೆ ವರ್ಗಾವಣೆಗೊಂಡ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅನಂತ್‌ರಾಜ್ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು (Shira News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Gruha Jyothi: ಗೃಹ ಜ್ಯೋತಿ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌; ಮನೆ ಬದಲಿಸುವವರಿಗೆ ಡಿ-ಲಿಂಕ್ ಸೌಲಭ್ಯ

ತಾಲೂಕು ಪಂಚಾಯಿತಿ ನೌಕರರು ಹಾಗೂ ಸ್ಥಳೀಯ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ತಹಸೀಲ್ದಾರ್‌ ಡಾ. ದತ್ತಾತ್ರೇಯ ಗಾದ ಮಾತನಾಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಅನಿವಾರ್ಯ. ಆದರೆ ಕೆಲಸ ನಿರ್ವಹಿಸಿದ ಸ್ಥಳದಲ್ಲಿ ಅಧಿಕಾರಿ ನಿರ್ವಹಿಸಿದ ಕೆಲಸ ಶಾಶ್ವತವಾಗಿ ಉಳಿಯುವಂತಾದಾಗ ಮಾತ್ರ ಸೇವೆಗೆ ನಿಜವಾದ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಅನಂತ್ ರಾಜ್ ಅವರು ಉತ್ತಮ ಕಾರ್ಯನಿರ್ವಹಿಸುವ ಮೂಲಕ ತಾಲೂಕಿನ ಜನತೆಯ ಮನದಲ್ಲಿ ಇದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತ್ ರಾಜ್, ಸನ್ಮಾನ ಸ್ವೀಕರಿಸಿ, ಬಳಿಕ ಮಾತನಾಡಿದರು.

ಇದನ್ನೂ ಓದಿ: Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ರುದ್ರೇಶ್, ತಾಲೂಕು ವೈದ್ಯಾಧಿಕಾರಿ ಡಾ. ಸಿದ್ದೇಶ್ವರ್, ಸಹಾಯ ಕೃಷಿ‌ ನಿರ್ದೇಶಕ ಡಾ. ನಾಗರಾಜ್, ನೂತನ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾ.ಪಂ. ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

Karnataka Weather Forecast : ಸುಳಿಗಾಳಿ ಎಫೆಕ್ಟ್‌ನಿಂದಾಗಿ ರಭಸವಾಗಿ ಬೀಸುವ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಮತ್ತೆ ಮಳೆ ಅವಾಂತರಗಳು ಮುಂದುವರಿದಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಬೆಳಗಾವಿ: ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಾದ ಹಿನ್ನೆಲೆಯಲ್ಲಿ ಆಗಸ್ಟ್ 9 ರವರೆಗೆ ರಾಜ್ಯಾದ್ಯಂತ ಭಾರಿ ಮಳೆಯಾಗುವ (Karnataka Weather Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ (Heavy Rain) ಹಲವೆಡೆ ಅಸ್ತವ್ಯಸ್ತವಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಕಿತ್ತೂರು ತಾಲೂಕಿನ ನಿಂಗಾಪುರ ಗ್ರಾಮಕ್ಕೆ ಹೊಂದಿಕೊಂಡಿರೋ ಹುಲಿಕೆರೆ ಹಿನ್ನೀರಿನಲ್ಲಿ ವಿದ್ಯಾರ್ಥಿಗಳು ಪರದಾಟ ಅನುಭವಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಮಕ್ಕಳು ಕೆರೆಯ ಪಾಲಾಗುವ ಭೀತಿ ಇದೆ.

ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಕೆರೆ, ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ಮಕ್ಕಳು ಕಲಿಕೆಗಾಗಿ ಜೀವ ಪಣಕ್ಕಿಟ್ಟು ಕೆರೆ ದಾಟುವಂತಾಗಿದೆ. ಕೆರೆ ಹಿನ್ನೀರು ದಾಟಿ ಶಾಲೆಗೆ ಹೋಗಲು ವಿದ್ಯಾರ್ಥಿಗಳು ಗಾಳಿ ತುಂಬಿದ ಟ್ಯೂಬೆಗಳೇ ಗತಿಯಾಗಿದೆ. ಪೋಷಕರು ಗಾಳಿ ತುಂಬಿದ ಟ್ಯೂಬ್‌ಗೆ ಹಗ್ಗ ಕಟ್ಟಿ ಎಳೆದು ಮಕ್ಕಳ ದಾಟಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಮಕ್ಕಳು ಕೆರೆಯ ಪಾಲಾಗುವ ಭೀತಿ ಇದೆ. ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಹೋಟೆಲ್‌ ನುಗ್ಗಿದ ನೀರು

ಮಳೆಯ ಅಬ್ಬರಕ್ಕೆ ಹೋಟೆಲ್ ಅಂಗಡಿಗಳಿಗೆ ನೀರು ನುಗ್ಗಿದೆ. ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಹೋಟೆಲ್ ಮಾಲೀಕರು ಪರದಾಡಬೇಕಾಯಿತು. ದೊಡ್ಡಬಳ್ಳಾಪುರದ ರೈಲ್ವೆ ಸ್ಟೇಷನ್ ಬಳಿ ಇರುವ ಅಂಗಡಿಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಚರಂಡಿಗಳು ಬಂದ್ ಮಾಡಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮುಚ್ಚಿರುವ ಚರಂಡಿಗಳನ್ನು ತೆರವುಗೊಳಿಸುವಂತೆ ನಗರ ಸಭೆ ಅಧಿಕಾರಿಗಳಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಳೆ ತಗ್ಗಿದ್ದರೂ ಮುಂದುವರಿದ ಪ್ರವಾಹ ಸ್ಥಿತಿ

ಮಹಾರಾಷ್ಟ್ರದಲ್ಲಿ ಮಳೆ ಕಡಿಮೆಯಾದರೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಮಳೆ ಪ್ರಮಾಣ ಕಡಿಮೆಯಾದರೂ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿದು ಬರುತ್ತಿದೆ. ಪರಿಣಾಮ ಕೃಷ್ಣಾ ನದಿ ತೀರದ ಜಮೀನುಗಳು ಸ‌ಂಪೂರ್ಣ ಜಲಾವೃತಗೊಂಡಿದೆ. ಕಾಗವಾಡ ತಾಲೂಕಿನ ಜುಗೂಳ ಹಾಗೂ ಮಹಾರಾಷ್ಟ್ರದ ಖಿದ್ರಾಪೂರ ಗ್ರಾಮದ ಕೆಲ ಪ್ರದೇಶಗಳ ಜಲಾವೃತ ಯಥಾಸ್ಥಿತಿ ಇದೆ. ಚಿಕ್ಕೋಡಿ ಉಪ ವಿಭಾಗದ 22 ಗ್ರಾಮಗಳ ನದಿ ತೀರದಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಮಳೆ ಪ್ರಮಾಣ ಹೆಚ್ಚಾದರೇ ನದಿ ತೀರ ಬಿಟ್ಟು ಗ್ರಾಮಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ.

ವಿಜಯಪುರದಲ್ಲಿ ಉಮರಾಣಿ- ಲವಗಿ ಹಳೆಯ ಬ್ಯಾರೇಜ್ ಮುಳುಗಡೆ

ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದಾಗಿ ಭೀಮಾನದಿ ತುಂಬಿ ಹರಿಯುತ್ತಿದೆ. ಪರಿಣಾಮ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾ ನದಿಗೆ ಅಡ್ಡಲಾಗಿರುವ ಉಮರಾಣಿ- ಲವಗಿ ಹಳೆಯ ಬ್ಯಾರೇಜ್ ಮುಳುಗಡೆಯಾಗಿದೆ. ಚಡಚಣ, ಇಂಡಿ, ಆಲಮೇಲ ಸಿಂದಗಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ಇದೆ.

ಧಾರಾಕಾರ ಮಳೆಗೆ ಆಸ್ಪತ್ರೆಗೆ ನುಗ್ಗಿದ ನೀರು

ತುಮಕೂರಿನ ಗುಬ್ಬಿ ಪಟ್ಟಣದಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ನೀರು ನುಗ್ಗಿದೆ. ರೋಗಿಗಳಿದ್ದ ಕೊಠಡಿ ಸಂಪೂರ್ಣ ಜಲಾವೃತಗೊಂಡಿತ್ತು. ನೀರು ನುಗ್ಗಿದ ಪರಿಣಾಮ ರೋಗಿಗಳು ಪರದಾಡಬೇಕಾಯಿತು. ಕೆಳಗೆ ನೀರು ಮಯವಾದ ಕಾರಣಕ್ಕೆ ಮಧ್ಯರಾತ್ರಿಯೇ ರೋಗಿಗಳನ್ನು ಮೊದಲ ಹಾಗೂ ಎರಡನೇ ಮಹಡಿಯಲ್ಲಿರುವ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.

ತುಮಕೂರಿನಲ್ಲಿ ಧರೆಗುರುಳಿದ ಮರ

ತುಮಕೂರು ಜಿಲ್ಲೆಯಲ್ಲಿ ರಭಸವಾಗಿ ಸುರಿದ ಮಳೆಗೆ ವಿವಿಧೆಡೆ ಅವಾಂತರವೇ ಸೃಷ್ಟಿಯಾಗಿತ್ತು. ಮರವೊಂದು ರಸ್ತೆಗೆ ಉರುಳಿ ಬಿದ್ದಿತ್ತು. ಇತ್ತ ಬೈಕ್‌ ಸವಾರ ಕೂದಲೆಳೆ ಅಂತರದಿಂದ ಪಾರಾಗಿದ್ದರು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕ್ಯಾಮೇನಹಳ್ಳಿ ಬಳಿ ಘಟನೆ ನಡೆದಿದೆ. ಮರ ಬಿದ್ದ ಕಾರಣ ಬೈಕ್‌ನ ಹೆಡ್‌ಲೈಟ್ ಪುಡಿ ಪುಡಿಯಾಗಿತ್ತು.

ನದಿ ನೀರು ಇಳಿಕೆ ಆಯಿತು; ಮೊಸಳೆಗಳ ಕಾಟ ಶುರುವಾಯಿತು

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುಣ್ಣರಗಿ ಗ್ರಾಮದಲ್ಲಿ ವೇದಗಂಗಾ ನದಿ‌ ನೀರಲ್ಲಿ ಇಳಿಕೆ ಆಗುತ್ತಿದ್ದಂತೆ ಮೊಸಳೆಗಳ ಕಾಟ ಹೆಚ್ಚಾಗುತ್ತಿದೆ. ನಾಲ್ಕೈದು ಮೊಸಳೆಗಳು ಗ್ರಾಮದ ಹೊರ ವಲಯದಲ್ಲಿ ಪತ್ತೆಯಾಗಿವೆ. ಮೊಸಳೆ ಮರಿಗಳು ಗ್ರಾಮಕ್ಕೆ ನುಗ್ಗಿದ್ದು, ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು ಜತೆಗೆ ಉತ್ತರ ಕನ್ನಡ ಜಿಲ್ಲೆಗೆ ಇಂದು ಭಾರಿ ಮಳೆ ಮುನ್ಸೂಚನೆ

Karnataka Weather Forecast : ಮಂಗಳವಾರವೂ ಬೆಂಗಳೂರಿಗೆ ಮಳೆ ಮುನ್ಸೂಚನೆ (Heavy Rain Alert) ಇದ್ದು, ಉತ್ತರ ಕನ್ನಡಕ್ಕೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರ ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆ.6ರಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು (Rain News), 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ.

ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಲಘು ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಕೋಲಾರದಲ್ಲಿ ಭಾರಿ ಮಳೆ

ದಕ್ಷಿಣ ಒಳನಾಡಿನ ಕೋಲಾರ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ದಾವಣಗೆರೆ, ವಿಜಯನಗರ ಸೇರಿದಂತೆ ಚಿಕ್ಕಬಳ್ಳಾಪುರದ ಸುತ್ತಮುತ್ತ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗದಲ್ಲೂ ವ್ಯಾಪಕ ಮಳೆ ಅಬ್ಬರ

ಮಲೆನಾಡು ಭಾಗದಲ್ಲಿ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ಗಾಳಿ ಸಹಿತ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Road Accident : ಶಾಲಾ ಶಿಕ್ಷಕನ ಬಲಿ ಪಡೆದ ಸ್ಕೂಲ್‌ ವ್ಯಾನ್‌; ಒಂಟಿ ಸಲಗ ದಾಳಿಗೆ ವೃದ್ಧೆ ಸಾವು

ಮಳೆ ಬಂದರೆ ಚಿತ್ರದುರ್ಗದಲ್ಲಿ ಗುಡ್ಡ ಕುಸಿತ ಭೀತಿ

ಕೋಟೆ ನಾಡು ಚಿತ್ರದುರ್ಗದಲ್ಲಿ ಗುಡ್ಡ ಕುಸಿತದ ಭೀತಿ ಶುರುವಾಗಿದೆ. ಚಿತ್ರದುರ್ಗದ ಸುತ್ತ ಮುತ್ತಲಿನ ಗುಡ್ಡ ಕಡಿದು ಲೇಔಟ್ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ನಗರದ ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಧವಳಗಿರಿಯ ಬಡಾವಣೆ ಸೇರಿ ಹಲವೆಡೆ ಗುಡ್ಡ ಕಡಿತ ಉಂಟಾಗಿದೆ. ಹಣದಾಸೆಗೆ ನಗರಸಭೆ ಅಧಿಕಾರಿಗಳು ಪ್ರಕೃತಿಯ ನಾಶ ಮಾಡುತ್ತಿದ್ದಾರೆ. ಅಪಾಯದ ಮಟ್ಟಕ್ಕೆ ಗುಡ್ಡ ಕಡಿಯುತ್ತಿರುವುದಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಮಳೆ ಬಂದ ಸಮಯದಲ್ಲಿ ಗುಡ್ಡದಲ್ಲಿ ಮಣ್ಣಿನ ಸವೆತ ಉಂಟಾಗುತ್ತಿದೆ. ಹೀಗೆ ಆದರೆ ಕೇರಳದ ರೀತಿಯಲ್ಲಿ ನಮಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಕಂಗಲಾದರು.

ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ

ಭೀಮಾನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಭೀಮಾನದಿಗೆ ಒಳಹರಿವು ಹೆಚ್ಚಳ ಗೊಂಡಿದೆ. ಭೀಮಾನದಿ ಅಬ್ಬರಕ್ಕೆ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather : ಬೆಂಗಳೂರಲ್ಲಿ ಸಂಜೆಗೆ ದಿಢೀರ್‌ ಗುಡುಗು ಸಹಿತ ಮಳೆ; ನೇತ್ರಾವತಿ, ಪಲ್ಗುಣಿ ನದಿ ತೀರ ಪ್ರದೇಶದಲ್ಲಿ ನೆರೆ

Karnataka Weather Forecast : ಬೆಂಗಳೂರಿನಲ್ಲಿ ಗುಡುಗು ಸಹಿತ (Rain News) ಮಳೆಯಾದರೆ, ಬೆಳಗಾವಿಯಲ್ಲಿ ನೆರೆಗೆ ರೈತರ ಬದುಕು ಅತಂತ್ರಗೊಂಡಿದೆ. ಉಜನಿ ಜಲಾಶಯ ಭರ್ತಿಯಾಗಿದ್ದು, ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ನದಿ ನೀರು ರಭಸಕ್ಕೆ ಜಮೀನು ಕೊಚ್ಚಿ ಹೋಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ದಿಢೀರ್‌ ಗುಡುಗು ಸಹಿತ (Rain News) ಭಾರಿ ಮಳೆಯಾಗಿದೆ. ಕಳೆದ ಹಲವು ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ (Karnataka Weather Forecast) ಇತ್ತು. ಮಧ್ಯಾಹ್ನದ ಹೊತ್ತು ಬಿಸಿಲ ಧಗೆ ಕೊಂಚ ಹೆಚ್ಚಾಗಿತ್ತು. ಸಂಜೆ ಆಗುತ್ತಿದ್ದಂತೆ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಿದೆ.

ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು. ಆಫೀಸ್‌ನಿಂದ ಮನೆಗೆ ತೆರಳುತ್ತಿದ್ದವರು ಒದ್ದೆಯಾಗುವಂತಾಯಿತು. ಬೈಕ್‌ ಸವಾರರು ಮಳೆಯಿಂದ ಬಸ್‌ ನಿಲ್ದಾಣದ ಮೊರೆ ಹೋದರು.

ಬೆಳಗಾವಿಯಲ್ಲಿ ನೆರೆಗೆ ರೈತರ ಬದುಕು ಅತಂತ್ರ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಬೆಳಗಾವಿಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಜಲಾಶಯಗಳು ಶೇಕಡಾ 90 ರಷ್ಟು ಭರ್ತಿಯಾಗಿದೆ. ಮಳೆ ತಗ್ಗಿದ್ದರೂ, ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ರೈತರು, ನೆರೆ ಸಂತ್ರಸ್ತರ ಬದುಕು ಅತಂತ್ರವಾಗಿದೆ.

ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಹಾನಿಯಾಗಿದೆ. ಕೃಷ್ಣಾ, ಘಟಪ್ರಭಾ, ಮಲಪ್ರಭಾ, ವೇದಗಂಗಾ, ದೂದಗಂಗಾ, ಮಾರ್ಕಂಡೇಯ, ಹೀರಣ್ಯಕೇಶಿ ನದಿಗಳಿಂದ ಪ್ರವಾಹ ನಿರ್ಮಾಣವಾಗಿದೆ. ಸಪ್ತ ನದಿಗಳ ಪಾತ್ರದ ಗ್ರಾಮಗಳಲ್ಲಿ ಯಥಾಸ್ಥಿತಿ ಪ್ರವಾಹ ಸ್ಥಿತಿ ಇದೆ. ಜಿಲ್ಲೆಯ 7 ತಾಲೂಕಿನಲ್ಲಿ 50ಕ್ಕೂ ಅಧಿಕ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ.

ಗೋಕಾಕ್, ಮೂಡಲಗಿ, ಚಿಕ್ಕೋಡಿ, ನಿಪ್ಪಾಣಿ, ಅಥಣಿ, ಕಾಗವಾಡ, ರಾಯಬಾಗ ತಾಲೂಕಿನಲ್ಲಿ 46 ಕಾಳಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. 5,700ಕ್ಕೂ ಅಧಿಕ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಜಿಲ್ಲಾಡಳಿತ ಶಿಫ್ಟ್ ಮಾಡಿದ್ದಾರೆ. ಪ್ರವಾಹಕ್ಕೆ ಇಪ್ಪತ್ತು ಸಾವಿರಕ್ಕೂ ಅಧಿಕ ನೆರೆ ಸಂತ್ರಸ್ತರ ಬದುಕು ಬೀದಿಗೆ ಬಿದ್ದಿದೆ. ಸದ್ಯ ಜಿಲ್ಲೆಯಲ್ಲಿ 38 ಸೇತುವೆಗಳು ಜಲಾವೃತಗೊಂಡಿದೆ. ಮಳೆ ಹೊಡೆತಕ್ಕೆ 950 ಮನೆಗಳಿಗೆ ಹಾನಿಯಾಗಿದೆ. ಜೂನ್ 1 ರಿಂದ ಈವರೆಗೂ 6 ಜನರು ಬಲಿಯಾಗಿದ್ದಾರೆ. 50 ಸಾವಿರಕ್ಕೂ ಅಧಿಕ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಉಜನಿ ಜಲಾಶಯ ಭರ್ತಿ; ಭೀಮಾ ನದಿಗೆ ಬಿಡುಗಡೆ

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಜನಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ ಬಾರಿ ಪ್ರಮಾಣದ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಉಜನಿ ಜಲಾಶಯದಿಂದ 40,000 ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಿದೆ. ಬಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದರಿಂದ ಕಲಬುರಗಿ ಜಿಲ್ಲಾಡಳಿತದಿಂದ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ನದಿಯ ಕಡೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಜಾನುವಾರುಗಳನ್ನು ಕೂಡ ನದಿಯ ಕಡೆ ಬಿಡದಂತೆ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಡಕಾದ ಕೃಷ್ಣಾ ನದಿ ನೀರು

ಶಾಲೆ ಅಂಗನವಾಡಿ ದೇವಸ್ಥಾನ ಎಲ್ಲವನ್ನು ಕೃಷ್ಣಾ ನದಿ ನೀರು ಆವರಿಸಿದೆ. ಎಸ್ ಎಸ್‌ಎಲ್‌ಸಿ ಮಕ್ಕಳ ಕುರಿತು ಶಿಕ್ಷಕರು ಕಳವಳ ವ್ಯಕ್ತಪಡಿಸಿದ್ದಾರೆ. ಶಾಲೆಗೆ ನಿರಂತರ ರಜೆಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಹಿನ್ನಡೆ ಆಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಕೃಷ್ಣಾ ನದಿ ನೀರು ಆವರಿಸಿದೆ.

ಶಿಕ್ಷಕರು ಬೇರೆ ಕಡೆ ಒಂದು ರೂಮ್ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದ್ದಾರೆ. ಕಳೆದ ಒಂದು ವಾರದಿಂದಿಲೂ ಶಾಲಾ ಆವರಣದಲ್ಲಿ ಜಲಾವೃತಗೊಂಡಿದೆ. 180 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಪ್ರೌಢ ಶಾಲೆಗೆ ಸೋಮವಾರ ರಜೆ ನೀಡಲಾಗಿತ್ತು.

ಇದನ್ನೂ ಓದಿ: Drowned in Water: ನೀರುಪಾಲಾದ ವ್ಯಕ್ತಿಯ ಶವ ಹುಡುಕಾಟಕ್ಕೆ ಕೆರೆ ನೀರನ್ನೇ ಖಾಲಿ ಮಾಡಲು ಹೋದ ಗ್ರಾಮಸ್ಥರು

ನದಿ ನೀರು ರಭಸಕ್ಕೆ ಕೊಚ್ಚಿ ಹೋದ ಜಮೀನು

ರೈತರ ಜಮೀನನ್ನು ತುಂಗಭದ್ರಾ ನದಿ ಆಪೋಷಣೆ ಮಾಡಿದೆ. ನದಿ ಕೊರತಕ್ಕೆ ಗದಗ ಜಿಲ್ಲೆಯ ಹಮ್ಮಿಗಿ ಬ್ಯಾರೇಜ್ ಪಕ್ಕದ ನೂರಾರು ಎಕರೆ ಜಮೀನು ಕೊಚ್ಚಿ ಹೋಗಿದೆ. ಸಿಂಗಟಾಲೂರು ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಈ ಸಮಸ್ಯೆ ಎದುರಾಗಿದೆ. ಬೃಹತ್ ಮಾವಿನ ಮರ, ತೆಂಗಿನಗಿಡ, ಭತ್ತದ ಗದ್ದೆಗಳು ನೀರುಪಾಲಾಗಿವೆ.

ನೇತ್ರಾವತಿ ಹಾಗೂ ಪಲ್ಗುಣಿ ನದಿ ತೀರ ಪ್ರದೇಶದಲ್ಲಿ ನೆರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಜೀವನದಿ ನೇತ್ರಾವತಿ ಹಾಗೂ ಪಲ್ಗುಣಿ ನದಿ ತೀರ ಪ್ರದೇಶದಲ್ಲಿ ನೆರೆ ಸೃಷ್ಟಿಯಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಮಾಹಿತಿ ನೀಡಿದ್ದಾರೆ. ಜಿಲ್ಲೆಯ ನೇತ್ರಾವತಿ ಹಾಗೂ ಪಲ್ಗುಣಿ ನದಿಯ ಪ್ರವಾಹಕ್ಕೆ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ತೀರ ಪ್ರದೇಶದ ಜನರಿಗೆ ನಷ್ಟ ಉಂಟಾಗಿದೆ. ತುಂಬಾ ಅಪಾಯದ ಮನೆಗಳ ಜನರನ್ನು ಸ್ಥಳಾಂತರಿಸಲಾಗಿದೆ.

ಅದ್ಯಪಾಡಿ, ಬಂಟ್ವಾಳ, ಪಡುಶೆಡ್ಡೆ ಪರಿಸರದಲ್ಲಿ ತುಂಬ ನೆರೆಯಿಂದ ತುಂಬಾ ಹಾನಿಯಾಗಿದೆ ಭಾಗಶಃ ಹಾನಿಯಾದ ಪ್ರದೇಶಗಳಲ್ಲಿ ಜನರಿಗೆ ಎಚ್ಚರಿಕೆ ಇರುವಂತೆ ಸೂಚನೆ ನೀಡಲಾಗಿದೆ. ಇನ್ನೂ ಬೆಳ್ತಂಗಡಿ ಭಾಗದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಮರೋಡಿ, ಸವಣಾಲು ಭಾಗದ ಪ್ರದೇಶಗಳನಲ್ಲಿ ಸಂಪರ್ಕ ಸೇತುವೆ ಕುಸಿದಿದೆ. ಇದಕ್ಕೆ ಪರ್ಯಾಯವಾಗಿ ಕಾಲು ಸೇತುವೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕೆತ್ತಿಕಲ್ಲು ಪರಿಸರದಲ್ಲಿ ಭೂಕುಸಿತದ ಭೀತಿ ಇದೆ. ರಾಷ್ಟ್ರೀಯ ಅಧಿಕಾರಿಗಳು ಈ ಬಗ್ಗೆ ಮುಂದಿನ ವಾರ ಪರಿಶೀಲನೆ ಮಾಡಲಾಗುವುದು ಎಂದರು. ಕಡಲಕೊರೆತದ ಕುರಿತಾಗಿದೆ ಸಭೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಸರಿಯಾದ ಪರಿಹಾರವನ್ನು ಮಾಡಲಾಗುತ್ತೆ.

ಮಳೆ ಬಂದರೆ ಚಿತ್ರದುರ್ಗದಲ್ಲಿ ಗುಡ್ಡ ಕುಸಿತ ಭೀತಿ

ಕೋಟೆ ನಾಡು ಚಿತ್ರದುರ್ಗದಲ್ಲಿ ಗುಡ್ಡ ಕುಸಿತದ ಭೀತಿ ಶುರುವಾಗಿದೆ. ಚಿತ್ರದುರ್ಗದ ಸುತ್ತ ಮುತ್ತಲಿನ ಗುಡ್ಡ ಕಡಿದು ಲೇಔಟ್ ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ನಗರದ ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಧವಳಗಿರಿಯ ಬಡಾವಣೆ ಸೇರಿ ಹಲವೆಡೆ ಗುಡ್ಡ ಕಡಿತ ಉಂಟಾಗಿದೆ. ಹಣದಾಸೆಗೆ ನಗರಸಭೆ ಅಧಿಕಾರಿಗಳು ಪ್ರಕೃತಿಯ ನಾಶ ಮಾಡುತ್ತಿದ್ದಾರೆ. ಅಪಾಯದ ಮಟ್ಟಕ್ಕೆ ಗುಡ್ಡ ಕಡಿಯುತ್ತಿರುವುದಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ. ಮಳೆ ಬಂದ ಸಮಯದಲ್ಲಿ ಗುಡ್ಡದಲ್ಲಿ ಮಣ್ಣಿನ ಸವೆತ ಉಂಟಾಗುತ್ತಿದೆ. ಹೀಗೆ ಆದರೆ ಕೇರಳದ ರೀತಿಯಲ್ಲಿ ನಮಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಕಂಗಲಾದರು.

ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ

ಭೀಮಾನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಭೀಮಾನದಿಗೆ ಒಳಹರಿವು ಹೆಚ್ಚಳ ಗೊಂಡಿದೆ. ಭೀಮಾನದಿ ಅಬ್ಬರಕ್ಕೆ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shira News: ಶಿರಾ ನಗರಸಭೆಯ ವತಿಯಿಂದ ಭಾನುವಾರ ನಗರದ ದೊಡ್ಡಕೆರೆಯ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಹೇಮಾವತಿ ಜಲಾಶಯದಿಂದ ಶಿರಾದ ದೊಡ್ಡಕೆರೆಗೆ ನೀರು ಹರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆಯ ಆಯುಕ್ತ ರುದ್ರೇಶ್‌ ಅವರ ನೇತೃತ್ವದಲ್ಲಿ ಸಿಬ್ಬಂದಿ ಸ್ವಚ್ಛತಾ ಕಾರ್ಯ ಕೈಗೊಂಡರು.

VISTARANEWS.COM


on

Shira News
Koo

ಶಿರಾ: ಶಿರಾ ನಗರಸಭೆಯ ವತಿಯಿಂದ ಭಾನುವಾರ ನಗರದ ದೊಡ್ಡಕೆರೆಯ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಹೇಮಾವತಿ ಜಲಾಶಯದಿಂದ ಶಿರಾದ ದೊಡ್ಡಕೆರೆಗೆ ನೀರು ಹರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆಯ ಆಯುಕ್ತ ರುದ್ರೇಶ್‌ ಅವರ ನೇತೃತ್ವದಲ್ಲಿ ಸಿಬ್ಬಂದಿ ಸ್ವಚ್ಛತಾ ಕಾರ್ಯ (Shira News) ಕೈಗೊಂಡರು.

ಇದನ್ನೂ ಓದಿ: Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

ತುಮಕೂರು ಭಾಗದ ನಾಲೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಿರುವ ಕಾರಣ ಶಿರಾ ದೊಡ್ಡಕೆರೆಯ ಸುತ್ತಮುತ್ತಲೂ ಯಥೇಚ್ಛವಾಗಿ ಬೆಳೆದಿದ್ದ ಗಿಡ-ಗಂಟೆಗಳು, ಕಸದರಾಶಿಯನ್ನು ನಗರಸಭೆಯ ಸಿಬ್ಬಂದಿ ತೆರವು ಗೊಳಿಸಿ, ಸ್ವಚ್ಛತಾ ಕಾರ್ಯ ನಡೆಸಿದರು.

ಇನ್ನು ಕೆರೆಯ ಸುತ್ತಮುತ್ತಲಿನ ನಾನಾ ಬಡಾವಣೆಗಳಿಂದ ಹರಿಬಿಡುವ ಕೊಳಚೆ ನೀರು ಕೆರೆಗೆ ಸೇರದಂತೆ ಅಗತ್ಯ ಕ್ರಮ ಕೈಗೊಂಡು ಹಾಗೂ ಸುತ್ತಲಿನ ತಂತಿ ಬೇಲಿಗಳನ್ನು ಭದ್ರಗೊಳಿಸಿ, ತಂತಿ ಬೇಲಿಗೆ ಆವರಿಸಿಕೊಂಡಿದ್ದ ಗಿಡ-ಗಂಟೆಗಳನ್ನು ತೆರವುಗೊಳಿಸಲಾಯಿತು.

ಇದನ್ನೂ ಓದಿ: Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

ಈ ಕುರಿತು ನಗರಸಭೆಯ ಆಯುಕ್ತ ರುದ್ರೇಶ್‌ ಮಾತನಾಡಿ, ದೊಡ್ಡಕೆರೆಯ ಸುತ್ತಮುತ್ತಲೂ ಬೆಳೆದಿದ್ದ ಗಿಡ-ಗಂಟೆ, ತ್ಯಾಜ್ಯವನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Continue Reading
Advertisement
ಕ್ರೀಡೆ5 hours ago

Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ

Shira News
ತುಮಕೂರು5 hours ago

Shira News: ವರ್ಗಾವಣೆಗೊಂಡ ಶಿರಾ ತಾ.ಪಂ ಇಓ ಅನಂತ್‌ರಾಜ್‌ಗೆ ಬೀಳ್ಕೊಡುಗೆ

Rekha Sharma
ದೇಶ5 hours ago

Rekha Sharma: ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮಾ ಅಧಿಕಾರಾವಧಿ ಪೂರ್ಣ

Bangladesh unrest
ದೇಶ6 hours ago

Bangladesh Unrest: ಶೇಖ್ ಹಸೀನಾ ಬೆಂಬಲಿಗನ ಫೈವ್‌ ಸ್ಟಾರ್‌ ಹೊಟೇಲ್‌ಗೆ ಬೆಂಕಿ; 24 ಜನ ಸಜೀವ ದಹನ

Paris Olympics
ಕ್ರೀಡೆ6 hours ago

Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

Bangladesh unrest
ದೇಶ7 hours ago

Bangladesh Unrest: ಶೇಖ್‌ ಹಸೀನಾಗೆ 8 ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ಭಾರತದ ಜ್ಯೋತಿಷಿ; ಆತನ ಭವಿಷ್ಯವಾಣಿ ಏನು?

Pralhad Joshi
ದೇಶ7 hours ago

Pralhad Joshi: 2030ರಲ್ಲೂ ನಾವಿಲ್ಲೇ ಇರುತ್ತೇವೆ, ನೀವಲ್ಲೇ ಇರುತ್ತೀರಿ; ಸಂಸತ್‌ನಲ್ಲಿ ಪ್ರತಿಪಕ್ಷಗಳಿಗೆ ಜೋಶಿ ಟಾಂಗ್

Bangladesh Protest
ವಿದೇಶ7 hours ago

Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

Reliance Foundation
ಕರ್ನಾಟಕ7 hours ago

Reliance Foundation: ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ನೆರವು

B.Ed Exam Scam
ಕರ್ನಾಟಕ7 hours ago

B.Ed Exam Scam: ಬಿ.ಇಡಿ ಪರೀಕ್ಷೆ ಅಕ್ರಮ; ಗುಲ್ಬರ್ಗಾ ವಿವಿ ಕುಲಸಚಿವೆ ಸೇರಿ ಐವರ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು11 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ12 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌