Paris Olympics: ಇಂದು ಒಲಿಂಪಿಕ್ಸ್​ನಲ್ಲಿ ಭಾರತದ ಕ್ರೀಡಾ ಸ್ಪರ್ಧೆಗಳ ವೇಳಾಪಟ್ಟಿ ಹೀಗಿದೆ - Vistara News

ಕ್ರೀಡೆ

Paris Olympics: ಇಂದು ಒಲಿಂಪಿಕ್ಸ್​ನಲ್ಲಿ ಭಾರತದ ಕ್ರೀಡಾ ಸ್ಪರ್ಧೆಗಳ ವೇಳಾಪಟ್ಟಿ ಹೀಗಿದೆ

Paris Olympics: ಗಾಯದಿಂದಾಗಿ 6 ತಿಂಗಳ ಕಾಲ ಸ್ಪರ್ಧೆಯಿಂದ ದೂರ ಉಳಿದಿದ್ದ ಟೋಕಿಯೋ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತ ವೇಟ್‌ ಲಿಫ್ಟರ್‌ ಮೀರಾಬಾಯಿ ಚಾನು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಮಂಗಳವಾರ ನಡೆದಿದ್ದ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ​ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದಾರೆ. ಆದರೆ, ಬಹಳ ನಿರೀಕ್ಷೆ ಇರಿಸಿದ್ದ ಭಾರತ ಪುರುಷರ ಹಾಕಿ ತಂಡ ಸೆಮಿಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನಿರಾಶೆ ಮೂಡಿಸಿತ್ತು. ಇದೀಗ ಬುಧವಾರ ನಡೆಯುವ ಸ್ಪರ್ಧೆಗಳ ವಿವರ ಹೀಗಿದೆ.

ಅಥ್ಲೆಟಿಕ್ಸ್​( ಪದಕ ಸ್ಪರ್ಧೆ)

ಮ್ಯಾರಥಾನ್ ರೇಸ್ ವಾಕ್ ರಿಲೇ ಮಿಶ್ರ ತಂಡ: ಪನ್ವರ್ ಸೂರಜ್ / ಪ್ರಿಯಾಂಕಾ. (ಆರಂಭ: ಬೆಳಗ್ಗೆ 11 ಗಂಟೆ)

ಗಾಲ್ಫ್​


ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ರೌಂಡ್ 1

ಅದಿತಿ ಅಶೋಕ್

ದಿಶಾ ದಾಗರ್ (ಆರಂಭ: ಮಧ್ಯಾಹ್ನ 12.30)

ಟೇಬಲ್​ ಟೆನಿಸ್​


ಮಹಿಳಾ ತಂಡ ಕ್ವಾರ್ಟರ್‌ಫೈನಲ್: ಭಾರತ-ಜರ್ಮನಿ. (ಆರಂಭ: ಮಧ್ಯಾಹ್ನ 1.30)

ಅಥ್ಲೆಟಿಕ್ಸ್


ಪುರುಷರ ಹೈ ಜಂಪ್ ಅರ್ಹತಾ ಸುತ್ತು: ಸರ್ವೇಶ್ ಅನಿಲ್ ಕುಶಾರೆ. (ಆರಂಭ: ಮಧ್ಯಾಹ್ನ 1.35)

ಅಥ್ಲೆಟಿಕ್ಸ್

ಮಹಿಳೆಯರ 100 ಮೀ ಹರ್ಡಲ್ಸ್ ಸುತ್ತು 1: ಜ್ಯೋತಿ ಯರಾಜಿ. (ಆರಂಭ: ಮಧ್ಯಾಹ್ನ 1.45)

ಕುಸ್ತಿ

ಮಹಿಳೆಯರ ಫ್ರೀಸ್ಟೈಲ್ 53kg (ಆರಂಭ: ಮಧ್ಯಾಹ್ನ 2.30)

ಅಥ್ಲೆಟಿಕ್ಸ್


ಪುರುಷರ ಟ್ರಿಪಲ್ ಜಂಪ್ ಅರ್ಹತೆ
: ಅಬ್ದುಲ್ಲ ನರಂಗೋಳಿಂತೇವಿ, ಪ್ರವೀಣ್ ಚಿತ್ರವೇಲ್ (ಆರಂಭ: ರಾತ್ರಿ 10.45)

ವೇಟ್‌ ಲಿಫ್ಟಿಂಗ್‌

ಮಹಿಳೆಯರ 49 ಕೆಜಿ ವಿಭಾಗ: ಮೀರಾಬಾಯಿ ಚಾನು (ಆರಂಭ: ರಾತ್ರಿ 11)

ಮಂಗಳವಾರ ರಾತ್ರಿ ನಡೆದಿದ್ದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್​ ಪಂದ್ಯದಲ್ಲಿ ವಿನೇಶ್​ ಫೋಗಟ್​ ಕ್ಯೂಬಾದ ಯುಸ್ನಿಲಿಸ್ ಗುಜ್ಮಾನ್(Yusneylys Guzman) ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್​ ಪ್ರವೇಶಿಸಿದ್ದರು. ಈ ಮೂಲಕ ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಇದು ವಿನೇಶ್​ ಅವರ ಮೂರನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Vinesh Phogat: ಚಾಂಪಿಯನ್ಸ್‌ ಫೀಲ್ಡಿನಲ್ಲೇ ಉತ್ತರ ಕೊಡುತ್ತಾರೆ; ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ವಿನೇಶ್ ಫೋಗಟ್‌ಗೆ ರಾಹುಲ್‌ ಗಾಂಧಿ ವಿಷ್‌

Vinesh Phogat: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಫೈನಲ್‌ ಪ್ರವೇಶಿಸಿ ಇತಿಹಾಸ ಬರೆದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅಭಿನಂದನೆಗಳ ಪ್ರವಾಹವೇ ಹರಿದು ಬರುತ್ತಿದೆ. ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅಭಿನಂದನೆ ಸಲ್ಲಿಸಿ, ಚಾಂಪಿಯನ್ಸ್‌ ಯಾವತ್ತೂ ಟೀಕೆಗಳಿಗೆ ಸಾಧನೆ ಮೂಲಕವೇ ಉತ್ತರ ಕೊಡುತ್ತಾರೆ ಎಂದಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

VISTARANEWS.COM


on

Vinesh Phogat
Koo

ಪ್ಯಾರಿಸ್‌: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ​ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) 50 ಕೆಜಿ ಕುಸ್ತಿ ಪಂದ್ಯದಲ್ಲಿ ಫೈನಲ್‌ ಪ್ರವೇಶಿಸಿ ಇತಿಹಾಸ ಬರೆದಿದ್ದಾರೆ. ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ಅವರು ಯುಸ್ನಿಲಿಸ್ ಗುಜ್ಮಾನ್ (Yusneylys Guzman) ಅವರನ್ನು 5-0 ಅಂತರದಿಂದ ಮಣಿಸಿ  ಒಲಿಂಪಿಕ್ಸ್‌ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ಈ ಸಾಧನೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gndhi) ಅಭಿನಂದನೆ ಸಲ್ಲಿಸಿ, ಚಾಂಪಿಯನ್ಸ್‌ ಯಾವತ್ತೂ ಟೀಕೆಗಳಿಗೆ ಸಾಧನೆ ಮೂಲಕವೇ ಉತ್ತರ ಕೊಡುತ್ತಾರೆ ಎಂದಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ತಿವಿದಿದ್ದಾರೆ.

ವಿನೇಶ್ ಫೋಗಟ್ ಈ ಹಿಂದೆ ಭಾರತದ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು​ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕುಸ್ತಿಪಟುಗಳೊಂದಿಗೆ ಪ್ರತಿಭಟನೆ ನಡೆಸಿ ನಡು ರಸ್ತೆಯಲ್ಲೇ ಪೊಲೀಸರಿಂದ ಲಾಠಿ ಏಟು ತಿಂದು ಬಂಧನಕ್ಕೆ ಒಳಗಾಗಿದ್ದರು. ಪ್ರತಿಭಟನೆಗೆ ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಸಹಕರಿಸದೇ ಇದ್ದಾಗ ಪ್ರಧಾನಿ ಮೋದಿಗೆ ಪತ್ರ ಬರೆದು ತಮಗೆ ಲಭಿಸಿದ್ದ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ (Kartavya Path) ಪಾದಚಾರಿ ಮಾರ್ಗದಲ್ಲಿ ತೊರೆದಿದ್ದರು.

ರಾಹುಲ್‌ ಗಾಂಧಿ ಹೇಳಿದ್ದೇನು?

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿನೇಶ್ ಫೋಗಟ್ ಅವರನ್ನು ಅಭಿನಂದಿಸಿದ ರಾಹುಲ್‌ ಗಾಂಧಿ, “ವಿನೇಶ್ ಒಂದೇ ದಿನದಲ್ಲಿ ವಿಶ್ವದ ಮೂವರು ಅಗ್ರ ಕುಸ್ತಿಪಟುಗಳನ್ನು ಸೋಲಿಸಿದ ನಂತರ ಇಡೀ ದೇಶವೇ ಭಾವುಕವಾಗಿದೆ. ವಿನೇಶ್ ಮತ್ತು ಅವರ ತಂಡದ ಸದಸ್ಯರ ಹೋರಾಟವನ್ನು ನಿರಾಕರಿಸಿದ ಮತ್ತು ಅವರ ಉದ್ದೇಶಗಳು ಮತ್ತು ಸಾಮರ್ಥ್ಯಗಳನ್ನು ಪ್ರಶ್ನಿಸಿದ ಎಲ್ಲರಿಗೂ ಉತ್ತರ ಸಿಕ್ಕಿದೆ. ಭಾರತ ರಕ್ತದ ಕಣ್ಣೀರು ಸುರಿಸುವಂತೆ ಮಾಡಿದ ಇಡೀ ಆಡಳಿತ ವ್ಯವಸ್ಥೆಯು ತನ್ನ ಧೈರ್ಯಶಾಲಿ ಮಗಳ ಮುಂದೆ ಈಗ ಕುಸಿದಿದೆ. ಚಾಂಪಿಯನ್‌ಗಳು ಯಾವತ್ತೂ ಮೈದಾನದಿಂದ ತಮ್ಮ ಉತ್ತರವನ್ನು ನೀಡುತ್ತಾರೆ. ವಿನೇಶ್‌ಗೆ ಶುಭ ಹಾರೈಕೆಗಳು. ಪ್ಯಾರಿಸ್‌ನಲ್ಲಿನ ನಿಮ್ಮ ಯಶಸ್ಸಿನ ಪ್ರತಿಧ್ವನಿಯು ದೆಹಲಿಯವರೆಗೆ ಸ್ಪಷ್ಟವಾಗಿ ಕೇಳಿಸುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಅಭಿನಂದನೆಗಳ ಪ್ರವಾಹ

2008ರ ಬೀಜಿಂಗ್‌ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಅಭಿನವ್‌ ಬಿಂದ್ರಾ ಕೂಡಾ ಅಭಿನಂದನೆ ಸಲ್ಲಿಸಿದ್ದಾರೆ. ವಿನೇಶ್ ಫೋಗಟ್ ಖಂಡಿತವಾಗಿಯೂ ಚಿನ್ನದ ಪದಕ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ವಿಶೇಶ್‌ ಅವರ ಸಹೋದರಿ ಗೀತಾ ಫೋಗಟ್‌ ಕೂಡ ಅಭಿನಂದನೆ ಸಲ್ಲಿಸಿ ತಮ್ಮ ತಂದೆಯ ಕನಸು ನನಸಾಗಿದೆ ಎಂದಿದ್ದಾರೆ. ಜತೆಗೆ ದೇಶದ ವಿವಿಧ ಕ್ಷೇತ್ರಗಳ ಗಣ್ಯರೂ ಶುಭ ಹಾರೈಸಿದ್ದಾರೆ.

ಇದನ್ನೂ ಓದಿ: Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಬಳಿಕ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದೀಗ ಫೈನಲ್‌ಗೆ ತಲುಪಿ ಭಾರತದ ಚಿನ್ನದ ಪದಕದ ಕನಸು ಜೀವಂತವಾಗಿಸಿದ್ದಾರೆ.

Continue Reading

ಕ್ರೀಡೆ

Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ

Paris Olympics: 44 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು. ಇನ್ನು ಸ್ಪೇನ್​ ಜತೆ ಕಂಚಿನ ಪದಕಕ್ಕೆ ಸೆಣಸಾಟ ನಡೆಸಲಿದೆ. ಭಾರತ ತಂಡ ಕೊನೇ ಹಂತದಲ್ಲಿ ಹೋರಾಟ ನಡೆಸಿದ ಹೊರತಾಗಿಯೂ ಫೈನಲ್​ಗೆ ಪ್ರವೇಶ ಪಡೆಯಲು ವಿಫಲಗೊಂಡಿತು. ಇದುವರೆಗೆ ಜರ್ಮನಿ ವಿರುದ್ಧ ಉತ್ತಮ ಅಭಿಯಾನ ಹೊಂದಿದ್ದ ಭಾರತ ತಂಡ ಗೆಲ್ಲಲೇಬೇಕಾದ ಅಗತ್ಯ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಎದುರಿಸಿತು.

VISTARANEWS.COM


on

Koo

ಪ್ಯಾರಿಸ್​: ಪ್ಯಾರಿಸ್​ ಪಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಭಾರತದ ಪುರುಷರ ಹಾಕಿ ತಂಡದ ಕನಸು ನುಚ್ಚುನೂರಾಗಿದೆ. ಜರ್ಮನಿ ವಿರುದ್ಧ 3-2 ಅಂತರದಿಂದ ಸೋಲುವ ಮೂಲಕ 44 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡಿತು. ಇನ್ನು ಸ್ಪೇನ್​ ಜತೆ ಕಂಚಿನ ಪದಕಕ್ಕೆ ಸೆಣಸಾಟ ನಡೆಸಲಿದೆ. ಸೆಮಿ ಪೈನಲ್​ನಲ್ಲಿ ಭಾರತ ತಂಡ ಕೊನೇ ಹಂತದಲ್ಲಿ ಹೋರಾಟ ನಡೆಸಿದ ಹೊರತಾಗಿಯೂ ಫೈನಲ್​ಗೆ ಪ್ರವೇಶ ಪಡೆಯಲು ವಿಫಲಗೊಂಡಿತು. ಇದುವರೆಗೆ ಜರ್ಮನಿ ವಿರುದ್ಧ ಉತ್ತಮ ಅಭಿಯಾನ ಹೊಂದಿದ್ದ ಭಾರತ ತಂಡ ಗೆಲ್ಲಲೇಬೇಕಾದ ಅಗತ್ಯ ಪಂದ್ಯದಲ್ಲಿ ಸೋಲುವ ಮೂಲಕ ನಿರಾಸೆ ಎದುರಿಸಿತು.

ಸೇಡು ತೀರಿಸಿಕೊಂಡ ಜರ್ಮನಿ


ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಜರ್ಮನಿ ತಂಡವನ್ನೇ ಮಣಿಸುವ ಮೂಲಕ ಕಂಚಿನ ಪದಕ ಗೆದ್ದು 41 ವರ್ಷಗಳ ಬಳಿಕ ಪದಕದ ಬರ ನೀಗಿಸಿತ್ತು. ಇದೀಗ ಅಂದಿನ ಸೋಲಿಗೆ ಜರ್ಮನಿ ಪ್ಯಾರಿಸ್​ನಲ್ಲಿ ಸೇಡು ತೀರಿಸಿಕೊಂಡಿದೆ. ಭಾರತದ ಫೈನಲ್​ ಕನಸಿಗೆ ತಣ್ಣೀರೆರಚಿದೆ. ಫೈನಲ್​ನಲ್ಲಿ ಜರ್ಮನಿ ತಂಡ ನೆದರ್ಲೆಂರ್ಡ್ಸ್​ ವಿರುದ್ಧ ಕಾದಾಟ ನಡೆಸಲಿದೆ.

ಮೊದಲ ಕ್ವಾರ್ಟರ್​​ ಆರಂಭಿಕ ಹಂತದಲ್ಲೇ ಭಾರತಕ್ಕೆ ಫೆನಾಲ್ಟಿ ಕಾರ್ನರ್​ ಅವಕಾಶ ಲಭಿಸಿತು. ಆದರೆ ಹರ್ಮಾನ್‌ಪ್ರೀತ್ ಸಿಂಗ್ ಇದನ್ನು ಗೋಲಾಗಿ ಪರಿವರ್ತಿಸುವಲ್ಲಿ ಎಡವಿದರು. ಈ ಅವಕಾಶ ಕೈ ತಪ್ಪಿದ ಕೆಲವೇ ಕ್ಷಣದಲ್ಲಿ ಮತ್ತೊಂದು ಫೆನಾಲ್ಟಿ ಕಾರ್ನರ್ ಲಭಿಸಿತು. ಇಲ್ಲಿ ಯಾವುದೇ ತಪ್ಪು ಮಾಡದೆ ಹರ್ಮಾನ್‌ಪ್ರೀತ್ ಗೋಲು ಬಾರಿಸಿ ಭಾರತಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟರು. ಮೊದಲ ಕ್ವಾರ್ಟರ್​ 1-0 ಅಂತರದಲ್ಲಿ ಕೊನೆಗೊಂಡಿತು.

ದ್ವಿತೀಯ ಕ್ವಾರ್ಟರ್​ನಲ್ಲಿ ಜರ್ಮನಿಯ ಗೊಂಜಾಲೊ ಪೀಲಾಟ್ ಮಿಂಚಿನ ವೇಗದಲ್ಲಿ ನುಗ್ಗಿ ಗೋಲು ಬಾರಿಸಿ ಪಂದ್ಯವನ್ನು 1-1 ಸಮಬಲಕ್ಕೆ ತಂದರು. ಇದಾದ ಕೆಲವೇ ನಿಮಿಷದಲ್ಲಿ ಜರ್ಮನಿ ತಂಡ ಮತ್ತೊಂದು ಗೋಲು ಬಾರಿಸುವ ಮೂಲಕ 2-1 ಮುನ್ನಡೆ ಸಾಧಿಸಿತು. ಮೂರನೇ ಕ್ವಾರ್ಟರ್​ನಲ್ಲಿ ಭಾರತ ಮತ್ತೆ ಗೋಲು ಬಾರಿಸಿ ಪಂದ್ಯವನ್ನು ಹಿಡಿತಕ್ಕೆ ತಂದಿತು. ಅಂತಿಮ ಕ್ವಾರ್ಟರ್​ನಲ್ಲಿ ಇನ್ನೇನು ಪಂದ್ಯ ಮುಕ್ತಾಯಕ್ಕೆ ಸುಮಾರು 7 ನಿಮಿಷ ಬಾಕಿ ಇರುವಾಗ ಜರ್ಮನಿ ಮತ್ತೊಂದು ಗೋಲು ಬಾರಿಸಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿತು.

ಕಳೆದ ಕ್ವಾರ್ಟರ್‌ ಫೈನಲ್‌ನಲ್ಲಿ ಪಂದ್ಯದಲ್ಲಿ ಭಾರತ ಕೇವಲ 10 ಮಂದಿಯ ನೆರವಿನಿಂದ ಗ್ರೇಟ್​ ಬ್ರಿಟನ್ ವಿರುದ್ಧ ಜಿದ್ದಾಜಿದ್ದಿನ ಪ್ರದರ್ಶನ ನೀಡಿ ಶೂಟೌಟ್‌ನಲ್ಲಿ ಗೆದ್ದು ಬೀಗಿ ಸೆಮಿಫೈನಲ್​ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಹಿಮಾಲಯ ಪರ್ವತದಂತೆ ತೆಡೆಗೋಡೆಯಾಗಿ ನಿಂತು ಹಲವು ಗೋಲುಗಳನ್ನು ತಡೆದಿದ್ದ ಗೋಲ್​ ಕೀಪರ್​ ಪಿ.ಆರ್​. ಶ್ರೀಜೇಶ್​ ಗೆಲುವಿನ ಹೀರೊ ಎನಿಸಿಕೊಂಡಿದ್ದರು. ಆದರೆ ಸೆಮಿ ಫೈನಲ್​ನಲ್ಲಿ ಇದೇ ಪ್ರದರ್ಶನ ತೋರುವಲ್ಲಿ ವಿಫಲರಾದರು.

ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ​ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದಾರೆ. ಮಂಗಳವಾರ ರಾತ್ರಿ ನಡೆದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್​ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್(Yusneylys Guzman) ಅವರನ್ನು 5-0 ಅಂತರದಿಂದ ಮಣಿಸಿ ಈ ಸಾಧನೆ ಮಾಡಿದರು. ಈ ಮೂಲಕ ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಇದು ವಿನೇಶ್​ ಅವರ ಮೂರನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

Continue Reading

ಕ್ರೀಡೆ

Paris Olympics: ಫೈನಲ್​ ಪ್ರವೇಶಿಸಿ ಐತಿಹಾಸಿಕ ಪದಕ ಖಾತ್ರಿಪಡಿಸಿದ ಕುಸ್ತಿಪಟು ವಿನೇಶ್ ಫೋಗಟ್

Paris Olympics: ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಭಾರತದ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು​ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕುಸ್ತಿಪಟುಗಳೊಂದಿಗೆ ಪ್ರತಿಭಟನೆ ನಡೆಸಿ ನಡು ರಸ್ತೆಯಲ್ಲೇ ಪೊಲೀಸರಿಂದ ಲಾಠಿ ಏಟು ತಿಂದು ಬಂಧನಕ್ಕೆ ಒಳಗಾಗಿದ್ದ, ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ​ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದಾರೆ.

ಮಂಗಳವಾರ ರಾತ್ರಿ ನಡೆದ ಮಹಿಳೆಯರ 50 ಕೆಜಿ ಕುಸ್ತಿ ಸೆಮಿಫೈನಲ್​ ಪಂದ್ಯದಲ್ಲಿ ಯುಸ್ನಿಲಿಸ್ ಗುಜ್ಮಾನ್(Yusneylys Guzman) ಅವರನ್ನು 5-0 ಅಂತರದಿಂದ ಮಣಿಸಿ ಈ ಸಾಧನೆ ಮಾಡಿದರು. ಈ ಮೂಲಕ ವಿನೇಶ್ ಫೋಗಟ್ ಒಲಿಂಪಿಕ್ ಇತಿಹಾಸದಲ್ಲಿ ಫೈನಲ್‌ ಪ್ರವೇಶಿಸಿ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೂ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. 50 ಕೆಜಿ ವಿಭಾಗದಲ್ಲಿ ವಿನೇಶ್ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಇದು ವಿನೇಶ್​ ಅವರ ಮೂರನೇ ಒಲಿಂಪಿಕ್ಸ್​ ಟೂರ್ನಿಯಾಗಿದೆ.

ಸುಸಾಕಿಗೆ ಸೋಲುಣಿಸಿದ ಮೊದಲ ಕುಸ್ತಿಪಟು


ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್​ ಅವರು ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಅತ್ಯಂತ ರೋಚಕ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ನಾಲ್ಕು ಬಾರಿಯ ವಿಶ್ವ ಚಾಂಪಿಯನ್​, ಸೋಲನ್ನೇ ಕಾಣದ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಮೂಲಕ ಸುಸಾಕಿ ಅವರಿಗೆ ಮೊದಲ ಸೋಲಿನ ರುಚಿ ತೋರಿಸಿದರು.

ಇದನ್ನೂ ಓದಿ Paris Olympics 2024 : ಕಂಚು ಕಳೆದುಕೊಂಡ ಲಕ್ಷ್ಯ ಸೇನ್​​; 2008ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಪದಕವಿಲ್ಲ

ಸಸಾಕಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಕಂಡ ಮೊದಲ ಆಘಾತಕಾರಿ ಸೋಲು ಇದಾಗಿದೆ. ಈ ಪಂದ್ಯಕ್ಕೂ ಮುನ್ನ 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸುಸಾಕಿ ಎಲ್ಲ ಪಂದ್ಯವನ್ನು ಗೆದ್ದು ಬೀಗಿದ್ದರು. ಇದೀಗ ಇವರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್​ ಹಾಕುವಲ್ಲಿ ಭಾರತೀಯ ಕುಸ್ತಿಪಟು ಯಶಸ್ಸು ಕಂಡಿದ್ದಾರೆ. ಈ ಗೆಲುವು ಸಾಧಿಸಿದಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಯಂತೆ ಅವರು ಫೈನಲ್​ ಪ್ರವೇಶಿಸಿ ಪದಕವೊಂದನ್ನು ಖಾತ್ರಿಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ Paris Olympics: ನಾಳೆ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಹೀಗಿದೆ

ಪ್ರಶಸ್ತಿ ಹಿಂದಿರುಗಿಸಿದ್ದ ವಿನೇಶ್​

ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಪ್ರತಿಭಟನೆಗೆ ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಸಹಕರಿಸದೇ ಇದ್ದಾಗ ಪ್ರಧಾನಿ ಮೋದಿಗೆ ಪತ್ರ ಬರೆದು ತಮಗೆ ಲಭಿಸಿದ್ದ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು. 

Continue Reading

ಕ್ರೀಡೆ

Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

Bajrang Punia: ಅನ್ಯಾಯದ ವಿರುದ್ಧ ಧ್ವನಿ ಎತ್ತಿದಾಗ ಈ ಹುಡುಗಿಯನ್ನು ಯಾರು ಬೆಂಬಲಿಸಿಲ್ಲ. ಇಂದು ಇದೇ ಹುಡುಗಿ ದೇಶದ ಧ್ವಜವನ್ನು ಮತ್ತು ಹೆಸರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾಳೆ ಎಂದು ಟ್ವೀಟ್​ ಮಾಡುವ ಮೂಲಕ ಸಾಕ್ಷಿ ಮಲಿಕ್‌ ಕೇಂದ್ರ ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

VISTARANEWS.COM


on

Bajrang Punia
Koo

ನವದೆಹಲಿ​: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics 2024) ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶ ಪಡೆಯುತ್ತಿದ್ದಂತೆ, ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌(Sakshi Malik) ಮತ್ತು ಬಜರಂಗ್‌ ಪೂನಿಯ(Bajrang Punia) ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿದ್ದಾರೆ. ಜತೆಗೆ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.

ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಬಜರಂಗ್‌, “ಜಗತನ್ನೇ ಗೆಲ್ಲಲು ಹೊರಟಿರುವ ವಿನೇಶಾ ಫೋಗಟ್ ಹಿಂದೊಮ್ಮೆ ತನ್ನದೇ ದೇಶದಲ್ಲಿ ಸೋಲು ಎದುರಿಸಿದ್ದಳು. ಲೈಗಿಂಕ ಕಿರುಕುಳದ ವಿರುದ್ಧ ನ್ಯಾಯಕ್ಕಾಗಿ ಹೋರಾಡಿದ್ದ ಈಕೆಯ ಮೇಲೆ ತನ್ನದೇ ದೇಶದಲ್ಲಿ ಲಾಠಿಯಿಂದ ಹೊಡೆದು ದಮನಿಸಲಾಗಿತ್ತು. ಬೀದಿಯಲ್ಲಿ ಎಳೆದಾಡಿ ತುಳಿದು ಅವಾಮಾನಿಸಲಾಗಿತ್ತು. ಇಂದು ಈ ಹುಡುಗಿಯ ಸಾಧನೆಯ ಮುಂದೆ ದೇಶದ ವ್ಯವಸ್ಥೆ ಸೋಲು ಕಂಡಿದೆ” ಎಂದು ಬರೆದುಕೊಂಡಿದ್ದಾರೆ.

ಸಾಕ್ಷಿ ಮಲಿಕ್‌ ಕೂಡ ಟ್ವೀಟ್​ ಮಾಡಿ, “ಅನ್ಯಾಯದ ವಿರುದ್ಧ ಧ್ವನಿ ಎತ್ತಿದಾಗ ಈ ಹುಡುಗಿಯನ್ನು ಯಾರು ಬೆಂಬಲಿಸಿಲ್ಲ. ಇಂದು ಇದೇ ಹುಡುಗಿ ದೇಶದ ಧ್ವಜವನ್ನು ಮತ್ತು ಹೆಸರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾಳೆ” ಎಂದು ಬರೆದುಕೊಳ್ಳುವ ಮೂಲಕ ಕೇಂದ್ರ ಸರ್ಕಾರಕ್ಕೆ ತಿರುಗೇಟು ಕೊಟ್ಟಿದ್ದಾರೆ.

ವಿನೇಶ್ ಫೋಗಟ್ ಅವರು ಕುಸ್ತಿಯಲ್ಲಿ ಒಲಿಂಪಿಕ್ ಸೆಮಿ ಫೈನಲ್‌ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೈನಲ್​ನಲ್ಲಿ ಚಿನ್ನ ಅಥವಾ ಬೆಳ್ಳಿ ಗೆದ್ದರೆ ಐತಿಹಾಸಿಕ ಪದಕ ಗೆದ್ದ ಸಾಧನೆ ಮಾಡಲಿದ್ದಾರೆ. ಇಂದು ರಾತ್ರಿ 10.15ಕ್ಕೆ ನಡೆಯುವ ಫೈನಲ್​ ಪಂದ್ಯದಲ್ಲಿ ವಿನೇಶ್​ ಅವರು ಯುಸ್ನಿಲಿಸ್ ಗುಜ್ಮಾನ್ ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಮಂಗಳವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು.

ಬ್ರಿಜ್​ ಭೂಷಣ್​ ಆಪ್ತ ಸಂಜಯ್ ಸಿಂಗ್ ಭಾರತ ಕುಸ್ತಿ ಫೆಡರೇಷನ್‌ನ ಅಧ್ಯಕ್ಷರಾದ ಹಿನ್ನೆಲೆ ಇದನ್ನು ಖಂಡಿಸಿ ಒಲಿಂಪಿಕ್​ ಪದಕ ವಿಜೇತೆ ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದರು. ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

Continue Reading
Advertisement
Tharun Sudhir sonal monteiro qualities she likes the most about tharun
ಸ್ಯಾಂಡಲ್ ವುಡ್13 seconds ago

Tharun Sudhir: ಸೋನಾಲ್‌  ಬ್ಯಾಚುಲರ್ ಪಾರ್ಟಿ ಬಲು ಜೋರು!  ಕೈ ಹಿಡಿಯೋ ಸುಂದರಿಯನ್ನು ಮುದ್ದಾಗಿ ತರುಣ್ ಹೇಗೆ ಕರೆಯುತ್ತಾರೆ?

Murder case
ಕ್ರೈಂ2 mins ago

Murder Case: ಪತ್ನಿಯನ್ನು ಕೊಂದು ಪರಾರಿಯಾದ, ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಸತ್ತ!

Health Tips
ಆರೋಗ್ಯ17 mins ago

Health Tips: ರಾತ್ರಿ ಪದೇಪದೆ ಬಾಯಾರಿಕೆ‌ ಆಗುತ್ತದೆಯೆ? ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಬಹುದು

Bigg Boss Tamil 8 Kamal Haasan Bids Farewell As Host
ಕಿರುತೆರೆ28 mins ago

Bigg Boss Tamil 8: ಬಿಗ್​ ಬಾಸ್​ ಸೀಸನ್ 8​ರ ಹೋಸ್ಟ್​ ನಾನಲ್ಲ ಎಂದ ಕಮಲ್‌ ಹಾಸನ್‌; ಕಾರಣ ಬಿಚ್ಚಿಟ್ಟ ನಟ!

belagavi factory fire tragedy
ಬೆಳಗಾವಿ47 mins ago

Factory Fire Tragedy: ಟೇಪ್‌ ನಿರ್ಮಾಣ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ; ಹತ್ತಾರು ಜೀವಹಾನಿ ಆತಂಕ

Independence Day 2024
ದೇಶ52 mins ago

Independence Day 2024: ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೇಳಲೇಬೇಕಾದ ಟಾಪ್‌ 10 ದೇಶಭಕ್ತಿ ಗೀತೆಗಳಿವು

Vinesh Phogat
ಕ್ರೀಡೆ59 mins ago

Vinesh Phogat: ಚಾಂಪಿಯನ್ಸ್‌ ಫೀಲ್ಡಿನಲ್ಲೇ ಉತ್ತರ ಕೊಡುತ್ತಾರೆ; ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿದ ವಿನೇಶ್ ಫೋಗಟ್‌ಗೆ ರಾಹುಲ್‌ ಗಾಂಧಿ ವಿಷ್‌

kali river bridge collapse
ಪ್ರಮುಖ ಸುದ್ದಿ1 hour ago

Kali Bridge Collapse: ಕಾಳಿ ನದಿಗೆ ಕಟ್ಟಿದ ಸೇತುವೆ ಕುಸಿತ, ಟ್ರಕ್‌ ಬಿದ್ದು ಚಾಲಕನಿಗೆ ಗಾಯ

Shravan 2024
ಪ್ರಮುಖ ಸುದ್ದಿ1 hour ago

Shravan 2024: ಶ್ರಾವಣ ಶುಕ್ರವಾರದ ವಿಶೇಷವೇನು? ಅಂದು ಏನು ಮಾಡಬೇಕು? ಏನು ಮಾಡಬಾರದು?

muhammad yunus bangladesh unrest
ಪ್ರಮುಖ ಸುದ್ದಿ2 hours ago

Bangladesh Unrest: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇಮಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು15 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ16 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌