Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ - Vistara News

ವಿದೇಶ

Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

Bangladesh Unrest: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿಯೂ ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಸುವ ಜನರಿದ್ದುಮ ಅವರ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬರೆದುಕೊಂಡಿರುವ ದಾನಿಶ್ ಕನೇರಿಯಾ, “ಭಾರತ ಜಾಗರೂಕವಾಗಿರಬೇಕು: ನಿಮ್ಮ ರಾಷ್ಟ್ರದೊಳಗಿನ ಕೆಲವರು ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಯಾಗಲು ಬಯಸುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಜಾಗರೂಕರಾಗಿರಿ” ಎಂದು ಹೇಳಿದ್ದಾರೆ.

VISTARANEWS.COM


on

Bangladesh Unrest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರ (Bangladesh Unrest)ದ ಮಧ್ಯೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ (Danish Kaneria) ಅವರು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿಯೂ ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಸುವ ಜನರಿದ್ದುಮ ಅವರ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರದ ಹಿಂದೆ ಚೀನಾ ಮತ್ತು ಪಾಕಿಸ್ತಾನದ ಐಎಸ್ಐ ಇದೆ ಎನ್ನಲಾಗುತ್ತಿದೆ. ಪ್ರಧಾನಿ ಶೇಖ್ ಹಸೀನಾ ಅವರ ಮಗ ಕೂಡ ಐಎಸ್ಐ ಪಾತ್ರದ ಬಗ್ಗೆ ಸಂದೇಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಾನಿಶ್ ಕನೇರಿಯಾ ಭಾರತಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬರೆದುಕೊಂಡಿರುವ ದಾನಿಶ್ ಕನೇರಿಯಾ, “ಭಾರತ ಜಾಗರೂಕವಾಗಿರಬೇಕು: ನಿಮ್ಮ ರಾಷ್ಟ್ರದೊಳಗಿನ ಕೆಲವರು ಬಾಂಗ್ಲಾದೇಶದಂತಹ ಸನ್ನಿವೇಶ ಸೃಷ್ಟಿಯಾಗಲು ಬಯಸುತ್ತಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಜಾಗರೂಕರಾಗಿರಿ” ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಸದ್ಯ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ದೇವಾಲಯಗಳ ಮೇಲೆ ಆಕ್ರಮಣ ಮಾಡುತ್ತಿರುವ ಆತಂಕಕಾರಿ ವಿಡಿಯೊ ಹೊರ ಬರುತ್ತಿರುವ ಮಧ್ಯೆ ದಾನಿಶ್ ಕನೇರಿಯಾ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ಸಹಾಯ ಮಾಡಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

“ಬಾಂಗ್ಲಾದೇಶದ ಹಿಂದೂಗಳನ್ನು ರಕ್ಷಿಸಲು ತಕ್ಷಣ ಮಧ್ಯ ಪ್ರವೇಶಿಸುವಂತೆ ನಾನು ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ. ನಾವು ನಮ್ಮ ಸಹೋದರ ಸಹೋದರಿಯರನ್ನು ಉಗ್ರಗಾಮಿಗಳಿಗೆ ಬಿಟ್ಟು ಕೊಡಬಾರದು. #SaveBangladeshiHindus” ಎಂದು ಅವರು ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದ ಡೈಲಿ ಸ್ಟಾರ್ ವರದಿಯ ಪ್ರಕಾರ, ಕನಿಷ್ಠ 27 ಜಿಲ್ಲೆಗಳಲ್ಲಿನ ಹಿಂದೂಗಳ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಾಕಾರರ ಗುಂಪುಗಳು ದಾಳಿ ನಡೆಸಿವೆ ಮತ್ತು ಬೆಲೆಬಾಳುವ ವಸ್ತುಗಳನ್ನು ಲೂಟಿ ಮಾಡಿದೆ. ಬಾಂಗ್ಲಾದೇಶದ ಖುಲ್ನಾ ವಿಭಾಗದಲ್ಲಿರುವ ಮೆಹರ್ಪುರದ ಇಸ್ಕಾನ್ ದೇವಾಲಯ ಮತ್ತು ಕಾಳಿ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಲಾಗಿದೆ. “ಮೆಹರ್ಪುರದಲ್ಲಿರುವ ನಮ್ಮ ಇಸ್ಕಾನ್ ಕೇಂದ್ರವನ್ನು ಉದ್ರಿಕ್ತರ ಗುಂಪು ಸುಟ್ಟು ಹಾಕಿದೆ. ಇದರಲ್ಲಿ ಭಗವಾನ್ ಜಗನ್ನಾಥ, ಬಲದೇವ್ ಮತ್ತು ಸುಭದ್ರಾ ದೇವಿಯ ವಿಗ್ರಹಗಳೂ ಇದ್ದವು. ಈ ವೇಳೆ ಇಲ್ಲಿದ್ದ ಮೂವರು ಭಕ್ತರು ಹೇಗೋ ತಪ್ಪಿಸಿಕೊಂಡಿದ್ದಾರೆ” ಎಂದು ಇಸ್ಕಾನ್ ವಕ್ತಾರ ಯುಧಿಷ್ಠಿರ ಗೋವಿಂದ ದಾಸ್ ತಿಳಿಸಿದ್ದಾರೆ.

ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌ ಅಭಿಯಾನ

ಬಾಂಗ್ಲಾದೇಶದಲ್ಲಿ ಹಿಂದೂಗಳು ಸಂಕಷ್ಟಕ್ಕೆ ಒಳಗಾಗಿರುವ ನಡುವೆ ಆಲ್‌ ಐಸ್‌ ಆನ್‌ ಬಾಂಗ್ಲಾದೇಶ್‌ ಹಿಂದೂಸ್‌ (All eyes on Bangladesh Hindus) ಎಂಬ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ ಆಗುತ್ತಿದೆ. ಬಾಂಗ್ಲಾದೇಶದ ಹಿಂದೂಗಳು ಮತ್ತು ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಮೌನವಾಗಿರುವುದಕ್ಕೆ ಬಾಲಿವುಡ್ ಸೆಲೆಬ್ರಿಟಿಗಳನ್ನು ನೆಟ್ಟಿಗರು ಟೀಕಿಸುತ್ತಿರುವ ಪರಿಕಲ್ಪನೆ ‘ಎಲ್ಲ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ’ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿವೆ.  ಕೆಲವು ತಿಂಗಳುಗಳ ಹಿಂದೆ ಇಸ್ರೇಲ್ ದಾಳಿಯನ್ನು ಖಂಡಿಸಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿ ಅನೇಕರು ಇನ್‌ಸ್ಟಾಗ್ರಾಮ್‌ನಲ್ಲಿ ‘ಆಲ್ ಐಸ್ ಆನ್ ರಫಾ’ ಘೋಷಣೆಯೊಂದಿಗೆ ಹಂಚಿಕೊಂಡಿದ್ದರು. ಈ ಪೈಕಿ ಬಾಲಿವುಡ್‌ ತಾರೆಯರೂ ಇದ್ದರು.

ಇದನ್ನೂ ಓದಿ: Bangladesh Chronology: 1971ರ ದೇಶ ಉದಯದಿಂದ ಹಿಡಿದು 2024ರ ದಂಗೆಯವರೆಗೆ; ಇಲ್ಲಿದೆ ಬಾಂಗ್ಲಾದೇಶದ ಸಂಪೂರ್ಣ ರಕ್ತ ಚರಿತ್ರೆ!

ಇದೀಗ ಬಾಂಗ್ಲಾದಲ್ಲಿ ಹಿಂದೂಗಳ ಮನೆ ಮನೆಗೆ ನುಗ್ಗಿ ಕಿಡಿಗೇಡಿಗಳು ದಾಂಧಲೆ ಎಬ್ಬಿಸುತ್ತಿದ್ದರೂ, ಯಾರೊಬ್ಬರೂ ತುಟಿಕ್‌ ಪಿಟಿಕ್‌ ಅನ್ನದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಳ ಚರ್ಚೆಯಾಗುತ್ತಿದೆ. ಸಿನಿತಾರೆಯರ ಏಕಪಕ್ಷೀಯ ನಡೆಗೆ ಹಲವು ಟೀಕೆ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Rihanna Crop Over: ʼಊರ ಹಬ್ಬʼದಲ್ಲಿ ʼನಗ್ನ ಉಡುಗೆʼ ಧರಿಸಿ ಸಂಚಲನ ಮೂಡಿಸಿದ ರಿಹಾನ್ನಾ!

Rihanna Crop Over: ಬಾರ್ಬಾಡಿಯನ್ ಗಾಯಕಿ ರಿಹಾನ್ನಾ ತನ್ನ ತಾಯ್ನಾಡಿನ ಉತ್ಸವವಾದ ಕ್ರಾಪ್ ಓವರ್ ಫೆಸ್ಟಿವಲ್‌ನಲ್ಲಿ ಬಹಳ ವಿಭಿನ್ನವಾಗಿ ಕಾಣಿಸಿಕೊಂಡು ಜನರ ಗಮನ ಸೆಳೆದಿದ್ದಾರೆ. ರಿಹಾನ್ನಾ ತನ್ನ ಚರ್ಮದ ಹೊಳಪನ್ನು ತೋರಿಸಲು ನಗ್ನ ಬಾಡಿ ಸೂಟ್ ಅನ್ನು ಆರಿಸಿಕೊಂಡಿದ್ದಾರೆ. ರಿಹಾನ್ನಾ ಚರ್ಮದ ಹೊಳಪು ನೋಡಿದವರಿಗೆ ಅಸೂಯೆ ಮೂಡುವುದು ಖಂಡಿತ! ಇನ್ನು ಅವರು ಧರಿಸಿದ ಈ ವಿಶಿಷ್ಟ ಬಾಡಿ ಸೂಟ್ ಅಂತೂ ನೋಡುಗರ ಕಣ್ಣು ಕುಕ್ಕುವಂತೆ ಇದೆ.

VISTARANEWS.COM


on

Crop Over Festival
Koo


ಅಂತಾರಾಷ್ಟ್ರೀಯ ಖ್ಯಾತಿಯ ಗಾಯಕಿ ರಿಹಾನ್ನಾ ತನ್ನ ತಾಯ್ನಾಡಿನ ಉತ್ಸವವಾದ ಕ್ರಾಪ್ ಓವರ್ ಫೆಸ್ಟಿವಲ್‍ (Crop Over Festival)ನಲ್ಲಿ ಅನೇಕ ಬಾರಿ ವಿಶೇಷ ಶೈಲಿಯಲ್ಲಿ ಕಾಣಿಸಿಕೊಂಡಿದ್ದರೂ, ಈ ವರ್ಷ ಮಾತ್ರ ಅವರು ಬಹಳ ವಿಭಿನ್ನವಾಗಿ ಕಾಣಿಸಿಕೊಂಡು ಜನರ ಗಮನ ಸೆಳೆದಿದ್ದಾರೆ. ಅವರು ಕ್ರಾಪ್ ಆಫ್ ಫೆಸ್ಟಿವಲ್‍ಗಾಗಿ ಬೆಜೆಲ್ಡ್ ಕಾಸ್ಟ್ಯೂಮ್ ಬಾಡಿ ಸೂಟ್‍ನಲ್ಲಿ ನಗ್ನವಾಗಿ ಕಾಣಿಸಿಕೊಂಡಿದ್ದಾರೆ. ಈ ಉಡುಗೆಯಲ್ಲಿ ಮಿಂಚಿದ ರಿಹಾನ್ನಾ ಕೆರಿಬಿಯನ್ ದೇವತೆಯಂತೆ ಕಾಣಿಸಿದ್ದಾರೆ. ಅವರ ಈ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಿಹಾನ್ನಾ ತನ್ನ ಚರ್ಮದ ಹೊಳಪನ್ನು ತೋರಿಸಲು ನಗ್ನ ಬಾಡಿ ಸೂಟ್ ಅನ್ನು ಆರಿಸಿಕೊಂಡಿದ್ದಾರೆ. ರಿಹಾನ್ನಾ ಚರ್ಮದ ಹೊಳಪು ನೋಡಿದವರಿಗೆ ಅಸೂಯೆ ಮೂಡುವುದು ಖಂಡಿತ. ಇನ್ನು ಅವರು ಧರಿಸಿದ ಈ ವಿಶಿಷ್ಟ ಬಾಡಿ ಸೂಟ್ ಅನ್ನು ಕೆಂಪು, ಹಳದಿ ಮತ್ತು ಬಿಳಿ ಬಣ್ಣವನ್ನು ಒಳಗೊಂಡ ವಿವಿಧ ಬಣ್ಣಗಳಲ್ಲಿ ಅಲಂಕರಿಸಿದ ಸ್ಟೋನ್ ವರ್ಕ್‍ನಿಂದ ಅಲಂಕರಿಸಲಾಗಿದೆ.

Crop Over Festival
Crop Over Festival

ಹಾಗೇ ಅಧರಿಸಿದ ಆಭರಣಗಳು ಮತ್ತು ಕಿರೀಟವನ್ನು ಸಹ ಅದೇ ಬಣ್ಣದ ಸ್ಟೋನ್‍ಗಳಿಂದ ರೆಡಿ ಮಾಡಲಾಗಿದೆ. ಹಾಗೇ ನಿಯಾನ್, ಕಿತ್ತಳೆ ಮತ್ತು ಫುಶಿಯಾ ಬಣ್ಣಗಳನ್ನು ಹೊಂದಿರುವ ಚಿನ್ನದ ಹೊಳಪಿನ ಚಪ್ಪಲಿಗಳು ಮತ್ತು ತನ್ನ ಬೆನ್ನಿಗೆ ಬಣ್ಣ ಬಣ್ಣದ ಗರಿಗಳಿಂದ ತಯಾರಿಸಿದ ರೆಕ್ಕೆಗಳನ್ನು ಧರಿಸಿ ಅವರು ತನ್ನ ನೋಟವನ್ನು ಹೆಚ್ಚು ಆಕರ್ಷಕವಾಗಿ ಮಾಡಿದ್ದಾರೆ.

ಅಲ್ಲದೇ ಮೇಕಪ್‍ಗಾಗಿ, ಅವರು ಗಾಢ ಬಣ್ಣದ ಲಿಪ್ ಲೈನರ್ ಜೊತೆಗೆ ತಿಳಿ ಬಣ್ಣದ ಲಿಪ್ ಶೇಡ್, ಹೈಲೈಟರ್ ಬದಲಿಗೆ ಗ್ಲಿಟರ್ಸ್ , ಐಲೈನರ್ ನೊಂದಿಗೆ ಬೂದು ಬಣ್ಣದ ಐಶಾಡೋವನ್ನು ಹಚ್ಚಿದ್ದಾರೆ. ಹಾಗೇ ಅವರು ತನ್ನ ಸಂಪೂರ್ಣ ನೋಟವನ್ನು ಪ್ರದರ್ಶಿಸಲು ತನ್ನ ಗುಂಗುರು ಕೂದಲನ್ನು ಬಿಟ್ಟಿದ್ದಾರೆ.

ಕ್ರಾಪ್ ಓವರ್ ಫೆಸ್ಟಿವಲ್
ಕ್ರಾಪ್ ಓವರ್ ಫೆಸ್ಟಿವಲ್ ಒಂದು ಬಾರ್ಬಾಡಿಯನ್‍ನಲ್ಲಿ ನಡೆಯುವ ಒಂದು ಸಾಂಪ್ರದಾಯಿಕ ಆಚರಣೆಯಾಗಿದ್ದು, ಇದು 1940 ರ ದಶಕದಲ್ಲಿ ಪ್ರಾರಂಭವಾಗಿದೆ. ಈ ರೋಮಾಂಚಕ ಆಚರಣೆಯಲ್ಲಿ ಮಾಸ್ಕ್ವಾರೆಡ್ ಬ್ಯಾಂಡ್ ಗಳು(Masquerade Bands) ಸಕ್ವಿನ್ (sequin )ಧರಿಸಿದ ಉತ್ಸಾಹಿಗಳು, ವರ್ಣರಂಜಿತ ಗರಿಗಳು, ಪ್ರಕಾಶಮಾನವಾದ ಉಚ್ಚಾರಣೆಗಳು, ಆ ವರ್ಷದ ಕೊನೆಯಲ್ಲಿ ಬೆಳೆದ ಬೆಳೆಗಳನ್ನು ಮೆರವಣಿಗೆಯ ಮೂಲಕ ಪ್ರದರ್ಶಿಸುತ್ತಾರೆ.

Continue Reading

ವಿದೇಶ

Bangladesh Unrest: ಶೇಖ್‌ ಹಸೀನಾ ಅವರ ಪಕ್ಷದ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್‌; ಒಂದೇ ದಿನ 29 ಜನ ಬಲಿ

Bangladesh Unrest: ಢಾಕಾದಲ್ಲಿ, ಗುಲಿಸ್ತಾನ್ ಪ್ರದೇಶದಲ್ಲಿನ ಅವಾಮಿ ಲೀಗ್‌ನ ಕೇಂದ್ರ ಕಚೇರಿಯ ಭಾಗಗಳಿಗೆ ಪದೇ ಪದೇ ಬೆಂಕಿ ಹಚ್ಚಲಾಯಿತು, ನೂರಾರು ಜನರು ಉರಿಯುತ್ತಿರುವ ಕಟ್ಟಡದಿಂದ ಪೀಠೋಪಕರಣಗಳು, ಟೈಲ್ಸ್, ರಾಡ್‌ಗಳು ಮತ್ತು ಇತರ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಹಸೀನಾ ರಾಜೀನಾಮೆ ನೀಡಿದ ಸ್ವಲ್ಪ ಸಮಯದ ನಂತರ ಕಚೇರಿಗೆ ಬೆಂಕಿ ಹಚ್ಚಲಾಯಿತು ಮತ್ತು ಮಂಗಳವಾರ ಮಧ್ಯಾಹ್ನ 12.30 ರ ಸುಮಾರಿಗೆ ಮತ್ತೆ ದಾಳಿ ನಡೆಸಲಾಯಿತು.

VISTARANEWS.COM


on

Bangladesh Unrest
Koo

ಢಾಕಾ: ಬಾಂಗ್ಲಾದೇಶ(Bangladesh Unrest)ದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ(Sheikh Hasina) ಅವರ ಅವಾಮಿ ಲೀಗ್‌ ಪಕ್ಷದ 20 ಮುಖಂಡರು ಸೇರಿದಂತೆ ಬರೋಬ್ಬರಿ 29 ಜನರ ಮೃತದೇಹ ದೇಶಾದ್ಯಂತ ಬುಧವಾರ ಪತ್ತೆಯಾಗಿದೆ. ಶೇಖ್‌ ಹಸೀನಾ ಪ್ರಧಾನಿ ಪಟ್ಟದಿಂದ ಕೆಳಗಿಳಿದಿರುವ ಬೆನ್ನಲ್ಲೇ ದೇಶಾದ್ಯಂತ ಈ ಮಾರಣಹೋಮ ನಡೆದಿದೆ.

ಸತ್ಖೀರದಲ್ಲಿ 10 ಜನ ಮತ್ತು ಕೊಮಿಲ್ಲಾ ಪ್ರದೇಶದಲ್ಲಿ 11ಕ್ಕೂ ಅಧಿಕ ಗುಂಪು ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರದೇಶಗಳಲ್ಲಿ ಅವಾಮಿ ಲೀಗ್‌ನ ಮುಖಂಡರು ಮತ್ತು ಕಾರ್ಯಕರ್ತರ ಮನೆ, ವ್ಯಾಪಾರ ಮಳಿಗೆಗಳನ್ನು ಗುರಿಯಾಗಿಸಿ ಭೀಕರ ದಾಳಿ ನಡೆಯುತ್ತಿದೆ. ಪ್ರತ್ಯಕ್ಷದರ್ಶಿಯೊಬ್ಬರು ಹೇಳುವ ಪ್ರಕಾರ ಅಶೋಕ್ತಾಲಾದಲ್ಲಿ ಮಾಜಿ ಕೌನ್ಸಿಲರ್ ಎಂಡಿ ಶಾ ಆಲಂ ಅವರ ಮನೆಯ ಮೇಲೆ ದಾಳಿ ನಡೆದಿದ್ದು, ಉದ್ರಿಕ್ತ ಗುಂಪೊಂದು ಬೆಂಕಿ ಹಚ್ಚಿದೆ. ಪರಿಣಾಮವಗಿ ಐವರು ಯುವಕರು ಸೇರಿದಂತೆ ಆರು ಮಂದಿ ಬೆಂಕಿಗೆ ಬಲಿಯಾಗಿದ್ದು, ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಗ್ಗೆ ಅವರ ಮೃತದೇಹಗಳು ಪತ್ತೆಯಾಗಿವೆ.

ಅದೇ ರೀತಿ ನಾಟೋರ್-2 (ಸದರ್ ಮತ್ತು ನಲ್ದಂಗ) ಕ್ಷೇತ್ರದ ಸಂಸದ ಶಫೀಕುಲ್ ಇಸ್ಲಾಂ ಶಿಮುಲ್ ಅವರ ಮನೆಗೆ ಗುಂಪೊಂದು ಬೆಂಕಿ ಹಚ್ಚಿದಾಗ ನಾಲ್ವರು ಸಾವನ್ನಪ್ಪಿದ್ದಾರೆ. ನಂತರ ಅವರ ಶವಗಳು ಮನೆಯ ವಿವಿಧ ಕೊಠಡಿಗಳು ಮತ್ತು ಬಾಲ್ಕನಿಗಳಲ್ಲಿ ಪತ್ತೆಯಾಗಿವೆ.

ಅವಾಮಿ ಲೀಗ್ ಕಚೇರಿ ಮೇಲೆ ದಾಳಿ

ಢಾಕಾದಲ್ಲಿ, ಗುಲಿಸ್ತಾನ್ ಪ್ರದೇಶದಲ್ಲಿನ ಅವಾಮಿ ಲೀಗ್‌ನ ಕೇಂದ್ರ ಕಚೇರಿಯ ಭಾಗಗಳಿಗೆ ಪದೇ ಪದೇ ಬೆಂಕಿ ಹಚ್ಚಲಾಯಿತು, ನೂರಾರು ಜನರು ಉರಿಯುತ್ತಿರುವ ಕಟ್ಟಡದಿಂದ ಪೀಠೋಪಕರಣಗಳು, ಟೈಲ್ಸ್, ರಾಡ್‌ಗಳು ಮತ್ತು ಇತರ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಹಸೀನಾ ರಾಜೀನಾಮೆ ನೀಡಿದ ಸ್ವಲ್ಪ ಸಮಯದ ನಂತರ ಕಚೇರಿಗೆ ಬೆಂಕಿ ಹಚ್ಚಲಾಯಿತು ಮತ್ತು ಮಂಗಳವಾರ ಮಧ್ಯಾಹ್ನ 12.30 ರ ಸುಮಾರಿಗೆ ಮತ್ತೆ ದಾಳಿ ನಡೆಸಲಾಯಿತು.

ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿರುವ ತಮ್ಮ ನಿವಾಸಿಗಳ ಸುರಕ್ಷತೆ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಈ ಮಧ್ಯೆ ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ (ಆಗಸ್ಟ್‌ 7) ದಿಲ್ಲಿಯಿಂದ ಬಾಂಗ್ಲಾದೇಶದ ರಾಜಧಾನಿ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲು ತೀರ್ಮಾನಿಸಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Continue Reading

ಪ್ರಮುಖ ಸುದ್ದಿ

Vinesh Phogat:‌ ರಾತ್ರಿಯಿಡೀ ಪ್ರಯತ್ನಪಟ್ಟರೂ ಇಳಿಯದೆ ವಿನೇಶ್‌ ಕನಸು ನುಚ್ಚುನೂರು ಮಾಡಿದ ಆ 100 ಗ್ರಾಂ!

Vinesh Phogat:‌ ವಿನೇಶ್‌, ಮಂಗಳವಾರ ರಾತ್ರಿ ಸರಿಸುಮಾರು 2 ಕಿಲೋಗಳಷ್ಟು ಅಧಿಕ ತೂಕ ಹೊಂದಿದ್ದರು ಎನ್ನಲಾಗಿದೆ. ಇದನ್ನು ಕರಗಿಸಲು ಆಕೆ ಇಡೀ ರಾತ್ರಿ ನಿದ್ರೆ ಮಾಡದೆ ವ್ಯಾಯಾಮದಲ್ಲಿ ನಿರತರಾಗಿದ್ದರು. ಜಾಗಿಂಗ್‌ನಿಂದ ಹಿಡಿದು ಸ್ಕಿಪ್ಪಿಂಗ್ ಮತ್ತು ಸೈಕ್ಲಿಂಗ್‌ವರೆಗೆ.

VISTARANEWS.COM


on

Vinesh Phogat disqaulify
Koo

ಹೊಸದಿಲ್ಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ತಾರಾ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat)​ ಹೆಚ್ಚಿದ 100 ಗ್ರಾಂ ತೂಕದಿಂದಾಗಿ ಅವಕಾಶ (Vinesh Phogat Disqualify) ಕಳೆದುಕೊಂಡಿದ್ದಾಳೆ. ಮಂಗಳವಾರ ರಾತ್ರಿಯಿಡೀ ಆಕೆ ತನ್ನ ಹೆಚ್ಚಿನ ತೂಕವನ್ನು ಇಳಿಸಿ 50 ಕೆಜಿ ತೂಕದ ವ್ಯಾಪ್ತಿಯೊಳಗೆ ಬರಲು ಹರಸಾಹಸಪಟ್ಟಿದ್ದಳು ಎಂಬುದು ವರದಿಯಾಗಿದೆ.

ತೂಕ ವಿಭಾಗದಲ್ಲಿ 50 ಕೆಜಿಗಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ಆಕೆ ಬುಧವಾರ ರಾತ್ರಿ ನಡೆಯುವ ಫೈನಲ್​ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಅವರ ಸವಾಲು ಎದುರಿಸಬೇಕಿತ್ತು. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ.

“ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅನರ್ಹತೆಯ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಳ್ಳುತ್ತದೆ. ರಾತ್ರಿಯುದ್ದಕ್ಕೂ ವಿನೇಶ್‌ ಸೇರಿದಂತೆ ಇಡೀ ತಂಡ ಮಾಡಿದ ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ಅವರು ಇಂದು ಬೆಳಿಗ್ಗೆ 50 ಕೆಜಿಗಿಂತ ಕೆಲವು ಗ್ರಾಂಗಳಷ್ಟು ತೂಕವನ್ನು ಹೆಚ್ಚಿಗೆ ಹೊಂದಿದ್ದರು” ಎಂದು ಭಾರತೀಯ ಒಲಿಂಪಿಕ್ಸ್‌ ಸಮಿತಿ ಹೇಳಿದೆ. “ಈ ಸಮಯದಲ್ಲಿ ಈ ಬಗ್ಗೆ ನಾವು ಹೆಚ್ಚಿನ ಕಾಮೆಂಟ್‌ ಮಾಡುವುದಿಲ್ಲ. ಭಾರತ ತಂಡವು ವಿನೇಶ್ ಅವರ ಖಾಸಗಿತನವನ್ನು ಗೌರವಿಸುವಂತೆ ವಿನಂತಿಸುತ್ತದೆ. ಮುಂದಿನ ಸ್ಪರ್ಧೆಗಳ ಮೇಲೆ ಅವರ ಗಮನ ಕೇಂದ್ರೀಕರಿಸಲು ಉದ್ದೇಶಿಸಲಾಗಿದೆʼʼ ಎಂದಿದೆ.

ಇಂದು ಮುಂಜಾನೆ ನಡೆದ ತೂಕ ಪರಿಶೀಲನೆಯ ವೇಳೆ ವಿನೇಶ್‌ 50 ಕಿಲೋಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದರು. ಸ್ಪರ್ಧೆಯ ನಿಯಮಗಳ ಪ್ರಕಾರ ಫೋಗಟ್ ಇಂದು ಫೈನಲ್‌ನಲ್ಲಿ ಸ್ಪರ್ಧೀಸುವಂತಿಲ್ಲ. 50 ಕೆಜಿ ವಿಭಾಗದಲ್ಲಿ ಕೇವಲ ಚಿನ್ನ ಮತ್ತು ಕಂಚಿನ ಪದಕ ವಿಜೇತರಿರುತ್ತಾರೆ. ಮಂಗಳವಾರವೂ ಪಂದ್ಯಕ್ಕೆ ಮೊದಲು ವಿನೇಶ್‌ ತೂಕ ಅಳೆಯಲಾಗಿತ್ತು. ಆದರೆ ನಿಯಮದ ಪ್ರಕಾರ ಕುಸ್ತಿಪಟುಗಳು ಸ್ಪರ್ಧೆಯ ಎರಡೂ ದಿನಗಳಲ್ಲಿ ತಮ್ಮ ತೂಕದ ವಿಭಾಗದಲ್ಲಿ ಉಳಿಯಬೇಕು.

ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ ಫೈನಲ್ ತಲುಪಿದ ಕುಸ್ತಿಪಟು ವಿನೇಶ್‌, ಮಂಗಳವಾರ ರಾತ್ರಿ ಸರಿಸುಮಾರು 2 ಕಿಲೋಗಳಷ್ಟು ಅಧಿಕ ತೂಕ ಹೊಂದಿದ್ದರು ಎನ್ನಲಾಗಿದೆ. ಇದನ್ನು ಕರಗಿಸಲು ಆಕೆ ಇಡೀ ರಾತ್ರಿ ನಿದ್ರೆ ಮಾಡದೆ ವ್ಯಾಯಾಮದಲ್ಲಿ ನಿರತರಾಗಿದ್ದರು. ಜಾಗಿಂಗ್‌ನಿಂದ ಹಿಡಿದು ಸ್ಕಿಪ್ಪಿಂಗ್ ಮತ್ತು ಸೈಕ್ಲಿಂಗ್‌ವರೆಗೆ. ಆದರೆ ಇದು ಸಾಕಾಗಲಿಲ್ಲ. ಕೊನೆಯ 100 ಗ್ರಾಂಗಳನ್ನು ಕರಗಿಸಲು ಇನ್ನು ಸ್ವಲ್ಪ ಕಾಲಾವಕಾಶವನ್ನು ನೀಡುವಂತೆ ಭಾರತೀಯ ನಿಯೋಗ ಮನವಿ ಮಾಡಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ರಾತ್ರಿ ಪೂರ್ತಿ ವ್ಯಾಮಾಯ ಹಾಗೂ ತೂಕವಿಳಿಸುವ ಕಸರತ್ತು ಮಾಡಿದ ವಿನೇಶ್‌ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಫೋಗಟ್ 50 ಕೆಜಿ ವಿಭಾಗದಲ್ಲಿ ಭಾಗವಹಿಸಲು ಕಷ್ಟವಾಗಿರುವುದು ಇದೇ ಮೊದಲಲ್ಲ. ಅವಳು ಸಾಮಾನ್ಯವಾಗಿ ಸ್ಪರ್ಧಿಸುವ ವಿಭಾಗ 53 ಕೆಜಿ. ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿಯೂ ಸಹ ಅವರು ಇದೇ ರೀತಿಯ ಅಗ್ನಿಪರೀಕ್ಷೆಯನ್ನು ಎದುರಿಸಿದ್ದರು.

ಮಂಗಳವಾರ ಫೋಗಟ್ ಒಲಿಂಪಿಕ್ಸ್‌ನ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಚಿನ್ನದ ಪದಕದ ಪಂದ್ಯದ ಹಾದಿಯಲ್ಲಿ ಅವರು ವಿಶ್ವದ ನಂಬರ್ 1 ಆಗಿದ್ದ ಜಪಾನ್‌ನ ಕುಸ್ತಿಪಟು ಯುಯಿ ಸುಸಾಕಿಯನ್ನು ಸೋಲಿಸಿದರು. ಉಕ್ರೇನ್ ಮತ್ತು ಕ್ಯೂಬಾದ ಕುಸ್ತಿಪಟುಗಳ ವಿರುದ್ಧ ಇನ್ನೂ ಎರಡು ಅದ್ಭುತ ಗೆಲುವುಗಳನ್ನು ಸಾಧಿಸಿದ್ದರು. ಸಾರಾ ಹಿಲ್ಡೆಬ್ರಾಂಡ್ ವಿರುದ್ಧ ಫೈನಲ್‌ನಲ್ಲಿ ಸ್ಪರ್ಧಿಸಬೇಕಿತ್ತು. ಅವರ ವಿರುದ್ಧ ಫೋಗಟ್ ಈ ಹಿಂದೆ ಸೆಣಸಿ ಗೆದ್ದ ಉತ್ತಮ ದಾಖಲೆ ಇತ್ತು. ಆದರೆ ಅಮೆರಿಕದ ಆಟಗಾರ್ತಿ ಈಗ ಚಿನ್ನದ ಪದಕ ಗೆಲ್ಲುತ್ತಾಳೆ. ಫೋಗಟ್ ಬರಿಗೈಯಲ್ಲಿ ಹಿಂತಿರುಗಬೇಕಿದೆ.

ಇದನ್ನೂ ಓದಿ: Vinesh Phogat: ಅನರ್ಹ ವಿನೇಶ್​ ಫೋಗತ್‌ಗೆ ಪ್ರಧಾನಿ ಮೋದಿ ಸಾಂತ್ವನ; ಮತ್ತಷ್ಟು ಬಲಿಷ್ಠರಾಗಿ ಮರಳಿ ಬನ್ನಿ ಎಂಬ ಹಾರೈಕೆ

Continue Reading

ದೇಶ

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Bangladesh Unrest: ಬಾಂಗ್ಲಾದೇಶಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ ದಿಲ್ಲಿಯಿಂದ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ.

VISTARANEWS.COM


on

Bangladesh Unrest
Koo

ನಬದೆಹಲಿ: ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಅಲ್ಲಿರುವ ತಮ್ಮ ನಿವಾಸಿಗಳ ಸುರಕ್ಷತೆ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಈ ಮಧ್ಯೆ ಏರ್ ಇಂಡಿಯಾ, ವಿಸ್ತಾರ ಮತ್ತು ಇಂಡಿಗೋ ವಿಮಾನಗಳು ಬುಧವಾರ (ಆಗಸ್ಟ್‌ 7) ದಿಲ್ಲಿಯಿಂದ ಬಾಂಗ್ಲಾದೇಶದ ರಾಜಧಾನಿ ಢಾಕಾಗೆ ನಿಗದಿಯಂತೆ ಹಾರಾಟ ನಡೆಸಲು ತೀರ್ಮಾನಿಸಿವೆ. ಜತೆಗೆ ಏರ್ ಇಂಡಿಯಾ ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಭಾರತೀಯರನ್ನು ಮರಳಿ ಕರೆತರಲು ವಿಶೇಷ ವಿಮಾನ ಸೇವೆಯನ್ನೂ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.

ಏರ್ ಇಂಡಿಯಾ ಬುಧವಾರ ದಿಲ್ಲಿಯಿಂದ ಢಾಕಾಗೆ ತನ್ನ ನಿಗದಿತ ಎರಡು ದೈನಂದಿನ ವಿಮಾನಗಳ ಹಾರಾಟ ನಡೆಸಲಿದೆ. ಜತೆಗೆ ವಿಸ್ತಾರ ಮತ್ತು ಇಂಡಿಗೋ ಬುಧವಾರದಿಂದ ಬಾಂಗ್ಲಾದೇಶದ ರಾಜಧಾನಿಗೆ ನಿಗದಿಪಡಿಸಿದ ಸೇವೆಗಳನ್ನು ನಿರ್ವಹಿಸಲಿವೆ. ವಿಸ್ತಾರ ಮತ್ತು ಇಂಡಿಗೋ ಎರಡೂ ವಿಮಾನಯಾನ ಸಂಸ್ಥೆಗಳು ಮಂಗಳವಾರ ಢಾಕಾಗೆ ತೆರಳುವ ವಿಮಾನ ಸಂಚಾರವನ್ನು ರದ್ದುಗೊಳಿಸಿದ್ದವು.

ವಿಸ್ತಾರ ವಿಮಾನ ಢಾಕಾಗೆ ಮುಂಬೈನಿಂದ ಪ್ರತಿದಿನ ಮತ್ತು ದಿಲ್ಲಿಯಿಂದ ವಾರಕ್ಕೆ ಮೂರು ಸೇವೆಗಳನ್ನು ಒದಗಿಸುತ್ತದೆ. ಇಂಡಿಗೋ ಒಂದು ವಿಮಾನ ಪ್ರತಿ ದಿನ ದಿಲ್ಲಿ, ಮುಂಬೈ ಮತ್ತು ಚೆನ್ನೈನಿಂದ ಢಾಕಾಗೆ ತೆರಳುತ್ತದೆ. ಜತೆಗೆ ಕೋಲ್ಕತ್ತಾದಿಂದ ಬಾಂಗ್ಲಾದೇಶಕ್ಕೆ ಪ್ರತಿದಿನ ಎರಡು ಸೇವೆಗಳನ್ನು ಒದಗಿಸುತ್ತದೆ.

ದಿಲ್ಲಿಗೆ ಬಂದಿಳಿದ 205 ಭಾರತೀಯರು

ಈ ಮಧ್ಯೆ ಬುಧವಾರ ಏರ್‌ ಇಂಡಿಯಾದ ವಿಶೇಷ ವಿಮಾನದಲ್ಲಿ 205 ಭಾರತೀಯರು ಢಾಕಾದಿಂದ ದಿಲ್ಲಿಗೆ ಬಂದಿಳಿದಿದ್ದಾರೆ. ಮಂಗಳವಾರ ತಡರಾತ್ರಿ ಢಾಕಾದಿಂದ ಈ ಎ 321 (A321) ವಿಮಾನ ಟೇಕ್‌ ಆಫ್‌ ಆಗಿತ್ತು. ಈ ವಿಮಾನದಲ್ಲಿ 6 ಮಕ್ಕಳೂ ಇದ್ದರು.

ಮೇಘಾಲಯ, ಮಣಿಪುರಗಳಲ್ಲಿ ರಾತ್ರಿ ಕರ್ಫ್ಯೂ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಮೀಪದ ಮಣಿಪುರ ಮತ್ತು ಮೇಘಾಲಯಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಬಾಂಗ್ಲಾದೇಶದಲ್ಲಿನ ಗಲಭೆ ಕಾರಣದಿಂದ ಅಲ್ಲಿನ ಜನರು ಮಣಿಪುರಕ್ಕೆ ಒಳನುಸುಳುವ ಸಾಧ್ಯತೆ ಇದೆ ಎಂದು ಎಂದು ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ತಿಳಿಸಿದ್ದಾರೆ. ಮಣಿಪುರವು ಮ್ಯಾನ್ಮಾರ್‌ನೊಂದಿಗೆ 398 ಕಿ.ಮೀ. ಅಂತಾರಾಷ್ಟ್ರೀಯ ಗಡಿಗಳನ್ನು ಹೊಂದಿದೆ. ಅದಾಗ್ಯೂ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿಲ್ಲ. ಆದರೆ ಮಣಿಪುರವು ಬಾಂಗ್ಲಾದೇಶದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ದಕ್ಷಿಣ ಅಸ್ಸಾಂನೊಂದಿಗೆ ಅಂತಾರಾಜ್ಯ ಗಡಿಗಳನ್ನು ಹೊಂದಿದೆ. ಈ ಕಾರಣಕ್ಕೆ ಇಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Bangladesh Unrest: ಭಾರತದಲ್ಲೂ ಬಾಂಗ್ಲಾ ಮಾದರಿ ಗಲಭೆಗೆ ಸಂಚು; ಪಾಕ್‌ ಮಾಜಿ ಕ್ರಿಕೆಟಿಗನ ಸ್ಫೋಟಕ ಮಾಹಿತಿ

ಇನ್ನು ಬಾಂಗ್ಲಾದೇಶದೊಂದಿಗೆ 445 ಕಿ.ಮೀ. ಗಡಿಯನ್ನು ಹಂಚಿಕೊಂಡಿರುವ ಮೇಘಾಲಯದಲ್ಲಿ ಸೋಮವಾರ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ನಿರಾಶ್ರಿತರ ಚಲನೆಯನ್ನು ತಡೆಗಟ್ಟಲು ಗಡಿಯಿಂದ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ಮೇಘಾಲಯ ಉಪಮುಖ್ಯಮಂತ್ರಿ ಪ್ರೆಸ್ಟೋನ್ ಟಿನ್ಸಾಂಗ್ ಹೇಳಿದ್ದಾರೆ. ರಾಜ್ಯದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಬಿಎಸ್ಎಫ್ ಕಟ್ಟುನಿಟ್ಟಾದ ಜಾಗ್ರತೆ ವಹಿಸಲಿದೆ ಎಂದೂ ವಿವರಿಸಿದ್ದಾರೆ.

Continue Reading
Advertisement
bjp-jds padayatra Sumalatha ambareesh
ಪ್ರಮುಖ ಸುದ್ದಿ8 mins ago

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

Actor Darshan
ಕರ್ನಾಟಕ13 mins ago

Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

Actor Dhanush Raayan set for OTT release
ಕಾಲಿವುಡ್13 mins ago

Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

Crop Over Festival
Latest36 mins ago

Rihanna Crop Over: ʼಊರ ಹಬ್ಬʼದಲ್ಲಿ ʼನಗ್ನ ಉಡುಗೆʼ ಧರಿಸಿ ಸಂಚಲನ ಮೂಡಿಸಿದ ರಿಹಾನ್ನಾ!

Viral Video
Latest47 mins ago

Viral Video: ರಸ್ತೆಯಲ್ಲಿ ಚುಡಾಯಿಸಿದ ಪುಂಡನಿಗೆ ಬುದ್ಧಿ ಕಲಿಸಿದ ವಿದ್ಯಾರ್ಥಿನಿ; ವಿಡಿಯೊ ನೋಡಿ

Bangladesh Unrest
ವಿದೇಶ58 mins ago

Bangladesh Unrest: ಶೇಖ್‌ ಹಸೀನಾ ಅವರ ಪಕ್ಷದ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್‌; ಒಂದೇ ದಿನ 29 ಜನ ಬಲಿ

Student Abuse
Latest60 mins ago

Student Abuse: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

Vinesh Phogat Disqualified
ಕ್ರೀಡೆ1 hour ago

Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

Namma Metro
ಕರ್ನಾಟಕ1 hour ago

Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Vinesh Phogat
ದೇಶ1 hour ago

Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು21 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ22 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌