Paris Olympics: ಐತಿಹಾಸಿಕ ಪದಕ ಗೆಲ್ಲಲಿ ಮೀರಾಬಾಯಿ; ಇಂದು ಬಲಾಢ್ಯರ ಜತೆ ಸ್ಪರ್ಧೆ - Vistara News

ಕ್ರೀಡೆ

Paris Olympics: ಐತಿಹಾಸಿಕ ಪದಕ ಗೆಲ್ಲಲಿ ಮೀರಾಬಾಯಿ; ಇಂದು ಬಲಾಢ್ಯರ ಜತೆ ಸ್ಪರ್ಧೆ

Paris Olympics: ಚಾನು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿರುವ ಭಾರತದ ಏಕೈಕ ವೇಟ್ಲಿಫ್ಟರ್ ಆಗಿದ್ದಾರೆ. ಒಟ್ಟಾರೆಯಾಗಿ ಇದು ಅವರಿಗೆ ಮೂರನೇ ಒಲಿಂಪಿಕ್ಸ್ ಟೂರ್ನಿಯಾಗಿದೆ. ಕಳೆದ ಬಾರಿ ಟೋಕಿಯೊದಲ್ಲಿ ಭಾರತದ ಪದಕ ಖಾತೆಯನ್ನು ತೆರೆದದ್ದು ಚಾನು. ಈ ಬಾರಿ ಚಿನ್ನದ ಪದಕದೊಂದಿಗೆ ಮಿನುಗಲಿ ಎನ್ನುವುದು ಎಲ್ಲ ಭಾರತೀಯರ ಹಾರೈಕೆಯಾಗಿದೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ಯಾರಿಸ್​: ಕಳೆದ ಟೋಕಿಯೊ ಒಲಿಂಪಿಕ್ಸ್‌ ವೇಟ್‌ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಪದಕದ ಖಾತೆಯನ್ನು ತೆರೆದಿದ್ದ ಮೀರಾಬಾಯಿ ಚಾನು(mirabai chanu) ಇಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಗಾಯದಿಂದಾಗಿ 6 ತಿಂಗಳ ಕಾಲ ಸ್ಪರ್ಧೆಯಿಂದ ದೂರ ಉಳಿದಿದ್ದ ಕಾರಣ ಅವರ ಫಿಟ್​ನೆಸ್​ ಹೇಗಿರಲಿದೆ ಎನ್ನುವ ಆತಂಕ ಕೂಡ ಉಂಟು ಮಾಡಿದೆ. ಹಾಲಿ ಒಲಿಂಪಿಕ್​ ಚಾಂಪಿಯನ್​ ಚೀನಾದ ಹೌ ಝಿಹುಯಿ ಅವರಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಪಂದ್ಯ ರಾತ್ರಿ 11 ಗಂಟೆಗೆ ನಡೆಯಲಿದೆ.

ಇಂದು ರಾತ್ರಿ ನಡೆಯುವ ಮಹಿಳಾ 49 ಕೆಜಿ ವಿಭಾಗದಲ್ಲಿ ಚಾನು ಸ್ಪರ್ಧೆ ಮಾಡಲಿದ್ದಾರೆ. ಪದಕ ಗೆದ್ದರೆ ಒಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಮೊದಲ ಭಾರತೀಯ ಕುಸ್ತಿಪಟು ಎಂಬ ದಾಖಲೆ ನಿರ್ಮಿಸಲಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಒಟ್ಟು 202 ಕೆಜಿ ಭಾರವನ್ನೆತ್ತಿ (87 ಕೆಜಿ, 115 ಕೆಜಿ) ಬೆಳ್ಳಿ ಪದಕ ಗೆದ್ದಿದ್ದರು. ಗಾಯದಿಂದಾಗಿ ಕಳೆದ ಏಷ್ಯಡ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಚಾನು ಸ್ನ್ಯಾಚ್‌ನಲ್ಲಿ 88 ಕೆಜಿ ದಾಖಲೆ ಹೊಂದಿದ್ದಾರೆ. ಹಾಗೆಯೇ ಜೆರ್ಕ್‌ನಲ್ಲಿ 119 ಕೆಜಿ ಎತ್ತಿರುವುದು ವೈಯಕ್ತಿಕ ದಾಖಲೆಯಾಗಿದೆ.

ಇದನ್ನೂ ಓದಿ Paris Olympics: ಇಂದು ಒಲಿಂಪಿಕ್ಸ್​ನಲ್ಲಿ ಭಾರತದ ಕ್ರೀಡಾ ಸ್ಪರ್ಧೆಗಳ ವೇಳಾಪಟ್ಟಿ ಹೀಗಿದೆ

ಗೆಲ್ಲುವ ವಿಶ್ವಾಸ ಇದೆ

ಮೀರಾಬಾಯಿ ಚಾನು ಕಳೆದ ಒಂದು ತಿಂಗಳಿಂದ ಪ್ಯಾರಿಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಅಭ್ಯಾಸದ ವೇಳೆ ಅವರು ಸಂಪೂರ್ಣ ಫಿಟ್​ ಆಗಿ ಕಂಡು ಬಂದಿದ್ದಾರೆ. ಅವರು ಈ ಬಾರಿಯೂ ಭಾರತಕ್ಕೆ ಪದಕ ಗೆಲ್ಲುವ ವಿಶ್ವಾಸ ನನಗಿದೆ ಎಂದು ಕೋಚ್‌ ವಿಜಯ್‌ ಶರ್ಮ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಫಿಸಿಕಲ್‌ ಥೆರಪಿಸ್ಟ್‌ ಹಾಗೂ ಕಂಡೀಶನಿಂಗ್‌ ಕೋಚ್‌ ಆಗಿರುವ ಅಮೆರಿಕದ ಡಾ| ಏರಾನ್‌ ಹಾರ್ಶಿಗ್‌ ಕೂಡ ಚಾನು ಉತ್ತಮ ಲಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಚಾನು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿರುವ ಭಾರತದ ಏಕೈಕ ವೇಟ್ಲಿಫ್ಟರ್ ಆಗಿದ್ದಾರೆ. ಒಟ್ಟಾರೆಯಾಗಿ ಇದು ಅವರಿಗೆ ಮೂರನೇ ಒಲಿಂಪಿಕ್ಸ್ ಟೂರ್ನಿಯಾಗಿದೆ. ಕಳೆದ ಬಾರಿ ಟೋಕಿಯೊದಲ್ಲಿ ಭಾರತದ ಪದಕ ಖಾತೆಯನ್ನು ತೆರೆದದ್ದು ಚಾನು. ಈ ಬಾರಿ ಚಿನ್ನದ ಪದಕದೊಂದಿಗೆ ಮಿನುಗಲಿ ಎನ್ನುವುದು ಎಲ್ಲ ಭಾರತೀಯರ ಹಾರೈಕೆಯಾಗಿದೆ.

ಮೀರಾಬಾಯಿಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌ ಧೃಡಪಡಿಸಿಕೊಳ್ಳಲು ಐಡಬ್ಲ್ಯುಎಫ್ ವಿಶ್ವಕಪ್‌ನಲ್ಲಿ ಕಡ್ಡಾಯವಾಗಿ ಸ್ಪರ್ಧಿಸಬೇಕಾಗಿತ್ತು. ಹೀಗಾಗಿ ಅವರು ಈ ಕೂಟದಲ್ಲಿ ಕಣಕ್ಕಿಳಿದರು. ಒಟ್ಟು 184 ಕೆಜಿ (81ಕೆಜಿ+103ಕೆಜಿ)ತೂಕ ಎತ್ತಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು. ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ನಡೆದಿದ್ದ ಏಷ್ಯನ್‌ ಗೇಮ್ಸ್‌ ವೇಳೆ ತೊಡೆಯ ಸ್ನಾಯುಬೇನೆಗೆ ತುತ್ತಾಗಿದ್ದ ಚಾನು ಆ ಬಳಿಕ ಯಾವುದೇ ಪ್ರಮುಖ ಕೂಟದಲ್ಲಿ ಪಾಲ್ಗೊಂಡಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

Vinesh Phogat Disqualified: ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Vinesh Phogat Disqualified
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಕುಸ್ತಿಯಲ್ಲಿ ಫೈನಲ್​ ಪ್ರವೇಶಿಸುವ ಮೂಲಕ ಐತಿಹಾಸಿಕ ಪದಕವೊಂದನ್ನು ಗೆಲ್ಲುವು ನಿರೀಕ್ಷೆಯಲಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರನ್ನು ಒಲಿಂಪಿಕ್ಸ್​ ಸಮಿತಿ ಅನರ್ಹ ಮಾಡಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ(Vinesh Phogat Disqualified) ಮಾಡಲಾಗಿದೆ. ಅವರ ಈ ಹಿನ್ನಡೆಗೆ ತೂಕ ಬದಲಾವಣೆಯೂ ಕಾರಣವಾಗಿರಬಹುದೆಂಬ ಚರ್ಚೆಗಳು ಇದೀಗ ಶುರುವಾಗಿದೆ.

ಹೌದು, ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು. ಒಲಿಂಪಿಕ್ಸ್​ ಆರಂಭಕ್ಕೂ ಮುನ್ನ ನಡೆದಿದ್ದ ಸೀನಿಯರ್‌ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿಯೂ ವಿನೇಶ್​ 55 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕ ಗೆದ್ದಿದ್ದರು. ಆದರೆ, 50 ಕೆಜಿ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಅವರು ಕಣಕ್ಕಿಳಿದ್ದರು. ಇದೀಗ ತೂಕ ಬದಲಿಸಿದ್ದೇ ಅವರ ಈ ಹಿನ್ನಡೆಗೆ ಕಾರಣ ಎಂದರೂ ತಪ್ಪಾಗಲಾರದು.

ಒಲಿಂಪಿಕ್ಸ್​ ಸ್ಪರ್ಧೆಗೂ ಮುನ್ನ ವಿನೇಶ್​ ಅವರ ತೂಕ 2 ಕೆಜಿ ಹೆಚ್ಚಳವಾಗಿತ್ತು. ಇದನ್ನು ಕಡಿಮೆ ಮಾಡಲೆಂದೆ ಅವರು ನಿದ್ದೆ, ಆಹಾರ ಬಿಟ್ಟು ಅತ್ಯಂತ ಕಠಿಣ ವ್ಯಾಯಾಮ ನಡೆಸಿ ಸುಮಾರು 1.90 ಕೆಜಿ ತೂಕ ಇಳಿಸಿಕೊಂಡಿದ್ದರು. ಆದರೆ 100 ಗ್ರಾಂ ಹೆಚ್ಚಳದಿಂದ ಇದೀಗ ಅವರ ಒಲಿಂಪಿಕ್ಸ್​ ಪದಕದ ಕನಸು ನುಚ್ಚುನೂರಾಗಿದೆ. ಒಂದೊಮ್ಮೆ ಅವರು ತಮ್ಮ ಈ ಹಿಂದಿನಂತೆ 53 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರೆ ಈ ಹಿನ್ನಡೆ ಉಂಟಾಗುತ್ತಿರಲಿಲ್ಲ.

ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ


ಅನರ್ಹವಾಗಿ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ. ಜತೆತೆ ಅಂತಾರಾಷ್ಟ್ರೀಯ ಒಲಿಂಪಿಕ್​ ಸಮಿತಿಗೆ ಮತ್ತೊಮ್ಮೆ ಈ ನಿರ್ಧಾರವನ್ನು ಪರಿಶೀಲಿಸುವಂತೆ ಮೋದಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ Vinesh Phogat:‌ ರಾತ್ರಿಯಿಡೀ ಪ್ರಯತ್ನಪಟ್ಟರೂ ಇಳಿಯದೆ ವಿನೇಶ್‌ ಕನಸು ನುಚ್ಚುನೂರು ಮಾಡಿದ ಆ 100 ಗ್ರಾಂ!

ಆಸ್ಪತ್ರೆಗೆ ದಾಖಲು


ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Vinesh Phogat:‌ ರಾತ್ರಿಯಿಡೀ ಪ್ರಯತ್ನಪಟ್ಟರೂ ಇಳಿಯದೆ ವಿನೇಶ್‌ ಕನಸು ನುಚ್ಚುನೂರು ಮಾಡಿದ ಆ 100 ಗ್ರಾಂ!

Vinesh Phogat:‌ ವಿನೇಶ್‌, ಮಂಗಳವಾರ ರಾತ್ರಿ ಸರಿಸುಮಾರು 2 ಕಿಲೋಗಳಷ್ಟು ಅಧಿಕ ತೂಕ ಹೊಂದಿದ್ದರು ಎನ್ನಲಾಗಿದೆ. ಇದನ್ನು ಕರಗಿಸಲು ಆಕೆ ಇಡೀ ರಾತ್ರಿ ನಿದ್ರೆ ಮಾಡದೆ ವ್ಯಾಯಾಮದಲ್ಲಿ ನಿರತರಾಗಿದ್ದರು. ಜಾಗಿಂಗ್‌ನಿಂದ ಹಿಡಿದು ಸ್ಕಿಪ್ಪಿಂಗ್ ಮತ್ತು ಸೈಕ್ಲಿಂಗ್‌ವರೆಗೆ.

VISTARANEWS.COM


on

Vinesh Phogat disqaulify
Koo

ಹೊಸದಿಲ್ಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ತಾರಾ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat)​ ಹೆಚ್ಚಿದ 100 ಗ್ರಾಂ ತೂಕದಿಂದಾಗಿ ಅವಕಾಶ (Vinesh Phogat Disqualify) ಕಳೆದುಕೊಂಡಿದ್ದಾಳೆ. ಮಂಗಳವಾರ ರಾತ್ರಿಯಿಡೀ ಆಕೆ ತನ್ನ ಹೆಚ್ಚಿನ ತೂಕವನ್ನು ಇಳಿಸಿ 50 ಕೆಜಿ ತೂಕದ ವ್ಯಾಪ್ತಿಯೊಳಗೆ ಬರಲು ಹರಸಾಹಸಪಟ್ಟಿದ್ದಳು ಎಂಬುದು ವರದಿಯಾಗಿದೆ.

ತೂಕ ವಿಭಾಗದಲ್ಲಿ 50 ಕೆಜಿಗಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ಆಕೆ ಬುಧವಾರ ರಾತ್ರಿ ನಡೆಯುವ ಫೈನಲ್​ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಅವರ ಸವಾಲು ಎದುರಿಸಬೇಕಿತ್ತು. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ.

“ಮಹಿಳಾ ಕುಸ್ತಿ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅನರ್ಹತೆಯ ಸುದ್ದಿಯನ್ನು ಭಾರತೀಯ ತಂಡವು ವಿಷಾದದಿಂದ ಹಂಚಿಕೊಳ್ಳುತ್ತದೆ. ರಾತ್ರಿಯುದ್ದಕ್ಕೂ ವಿನೇಶ್‌ ಸೇರಿದಂತೆ ಇಡೀ ತಂಡ ಮಾಡಿದ ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ಅವರು ಇಂದು ಬೆಳಿಗ್ಗೆ 50 ಕೆಜಿಗಿಂತ ಕೆಲವು ಗ್ರಾಂಗಳಷ್ಟು ತೂಕವನ್ನು ಹೆಚ್ಚಿಗೆ ಹೊಂದಿದ್ದರು” ಎಂದು ಭಾರತೀಯ ಒಲಿಂಪಿಕ್ಸ್‌ ಸಮಿತಿ ಹೇಳಿದೆ. “ಈ ಸಮಯದಲ್ಲಿ ಈ ಬಗ್ಗೆ ನಾವು ಹೆಚ್ಚಿನ ಕಾಮೆಂಟ್‌ ಮಾಡುವುದಿಲ್ಲ. ಭಾರತ ತಂಡವು ವಿನೇಶ್ ಅವರ ಖಾಸಗಿತನವನ್ನು ಗೌರವಿಸುವಂತೆ ವಿನಂತಿಸುತ್ತದೆ. ಮುಂದಿನ ಸ್ಪರ್ಧೆಗಳ ಮೇಲೆ ಅವರ ಗಮನ ಕೇಂದ್ರೀಕರಿಸಲು ಉದ್ದೇಶಿಸಲಾಗಿದೆʼʼ ಎಂದಿದೆ.

ಇಂದು ಮುಂಜಾನೆ ನಡೆದ ತೂಕ ಪರಿಶೀಲನೆಯ ವೇಳೆ ವಿನೇಶ್‌ 50 ಕಿಲೋಗಿಂತ 100 ಗ್ರಾಂ ಅಧಿಕ ತೂಕ ಹೊಂದಿದ್ದರು. ಸ್ಪರ್ಧೆಯ ನಿಯಮಗಳ ಪ್ರಕಾರ ಫೋಗಟ್ ಇಂದು ಫೈನಲ್‌ನಲ್ಲಿ ಸ್ಪರ್ಧೀಸುವಂತಿಲ್ಲ. 50 ಕೆಜಿ ವಿಭಾಗದಲ್ಲಿ ಕೇವಲ ಚಿನ್ನ ಮತ್ತು ಕಂಚಿನ ಪದಕ ವಿಜೇತರಿರುತ್ತಾರೆ. ಮಂಗಳವಾರವೂ ಪಂದ್ಯಕ್ಕೆ ಮೊದಲು ವಿನೇಶ್‌ ತೂಕ ಅಳೆಯಲಾಗಿತ್ತು. ಆದರೆ ನಿಯಮದ ಪ್ರಕಾರ ಕುಸ್ತಿಪಟುಗಳು ಸ್ಪರ್ಧೆಯ ಎರಡೂ ದಿನಗಳಲ್ಲಿ ತಮ್ಮ ತೂಕದ ವಿಭಾಗದಲ್ಲಿ ಉಳಿಯಬೇಕು.

ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ ಫೈನಲ್ ತಲುಪಿದ ಕುಸ್ತಿಪಟು ವಿನೇಶ್‌, ಮಂಗಳವಾರ ರಾತ್ರಿ ಸರಿಸುಮಾರು 2 ಕಿಲೋಗಳಷ್ಟು ಅಧಿಕ ತೂಕ ಹೊಂದಿದ್ದರು ಎನ್ನಲಾಗಿದೆ. ಇದನ್ನು ಕರಗಿಸಲು ಆಕೆ ಇಡೀ ರಾತ್ರಿ ನಿದ್ರೆ ಮಾಡದೆ ವ್ಯಾಯಾಮದಲ್ಲಿ ನಿರತರಾಗಿದ್ದರು. ಜಾಗಿಂಗ್‌ನಿಂದ ಹಿಡಿದು ಸ್ಕಿಪ್ಪಿಂಗ್ ಮತ್ತು ಸೈಕ್ಲಿಂಗ್‌ವರೆಗೆ. ಆದರೆ ಇದು ಸಾಕಾಗಲಿಲ್ಲ. ಕೊನೆಯ 100 ಗ್ರಾಂಗಳನ್ನು ಕರಗಿಸಲು ಇನ್ನು ಸ್ವಲ್ಪ ಕಾಲಾವಕಾಶವನ್ನು ನೀಡುವಂತೆ ಭಾರತೀಯ ನಿಯೋಗ ಮನವಿ ಮಾಡಿತು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ರಾತ್ರಿ ಪೂರ್ತಿ ವ್ಯಾಮಾಯ ಹಾಗೂ ತೂಕವಿಳಿಸುವ ಕಸರತ್ತು ಮಾಡಿದ ವಿನೇಶ್‌ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಫೋಗಟ್ 50 ಕೆಜಿ ವಿಭಾಗದಲ್ಲಿ ಭಾಗವಹಿಸಲು ಕಷ್ಟವಾಗಿರುವುದು ಇದೇ ಮೊದಲಲ್ಲ. ಅವಳು ಸಾಮಾನ್ಯವಾಗಿ ಸ್ಪರ್ಧಿಸುವ ವಿಭಾಗ 53 ಕೆಜಿ. ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿಯೂ ಸಹ ಅವರು ಇದೇ ರೀತಿಯ ಅಗ್ನಿಪರೀಕ್ಷೆಯನ್ನು ಎದುರಿಸಿದ್ದರು.

ಮಂಗಳವಾರ ಫೋಗಟ್ ಒಲಿಂಪಿಕ್ಸ್‌ನ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಚಿನ್ನದ ಪದಕದ ಪಂದ್ಯದ ಹಾದಿಯಲ್ಲಿ ಅವರು ವಿಶ್ವದ ನಂಬರ್ 1 ಆಗಿದ್ದ ಜಪಾನ್‌ನ ಕುಸ್ತಿಪಟು ಯುಯಿ ಸುಸಾಕಿಯನ್ನು ಸೋಲಿಸಿದರು. ಉಕ್ರೇನ್ ಮತ್ತು ಕ್ಯೂಬಾದ ಕುಸ್ತಿಪಟುಗಳ ವಿರುದ್ಧ ಇನ್ನೂ ಎರಡು ಅದ್ಭುತ ಗೆಲುವುಗಳನ್ನು ಸಾಧಿಸಿದ್ದರು. ಸಾರಾ ಹಿಲ್ಡೆಬ್ರಾಂಡ್ ವಿರುದ್ಧ ಫೈನಲ್‌ನಲ್ಲಿ ಸ್ಪರ್ಧಿಸಬೇಕಿತ್ತು. ಅವರ ವಿರುದ್ಧ ಫೋಗಟ್ ಈ ಹಿಂದೆ ಸೆಣಸಿ ಗೆದ್ದ ಉತ್ತಮ ದಾಖಲೆ ಇತ್ತು. ಆದರೆ ಅಮೆರಿಕದ ಆಟಗಾರ್ತಿ ಈಗ ಚಿನ್ನದ ಪದಕ ಗೆಲ್ಲುತ್ತಾಳೆ. ಫೋಗಟ್ ಬರಿಗೈಯಲ್ಲಿ ಹಿಂತಿರುಗಬೇಕಿದೆ.

ಇದನ್ನೂ ಓದಿ: Vinesh Phogat: ಅನರ್ಹ ವಿನೇಶ್​ ಫೋಗತ್‌ಗೆ ಪ್ರಧಾನಿ ಮೋದಿ ಸಾಂತ್ವನ; ಮತ್ತಷ್ಟು ಬಲಿಷ್ಠರಾಗಿ ಮರಳಿ ಬನ್ನಿ ಎಂಬ ಹಾರೈಕೆ

Continue Reading

ಕ್ರೀಡೆ

Vinesh Phogat: ತೀವ್ರ ಅಸ್ವಸ್ಥಗೊಂಡ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

Vinesh Phogat: ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದಾರೆ ಎನ್ನಲಾಗಿದೆ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ.

VISTARANEWS.COM


on

Vinesh Phogat
Koo

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪಂದ್ಯಾಟಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಅನರ್ಹಗೊಂಡಿರುವ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ(Dehydration)ನಿಂದಾಗಿ ತಲೆಸುತ್ತಿ ಬಿದ್ದ ವಿನೇಶ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದಾರೆ ಎನ್ನಲಾಗಿದೆ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ.

ಇನ್ನು ಈ ಬಗ್ಗೆ ಈ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​, ಕ್ವಾರ್ಟರ್​ ಫೈನಲ್​ ಮತ್ತು ಸೆಮಿಫೈನಲ್​ ಪಂದ್ಯದಲ್ಲಿ ವಿನೇಶ್ ಅವರು ತನಗಿಂತ ಮೇಲಿನ ಶ್ರೇಯಾಂಕದ, ಅದರಲ್ಲೂ ಪ್ರೀ ಕ್ವಾರ್ಟರ್​ನಲ್ಲಿ 4 ಬಾರಿಯ ವಿಶ್ವ ಚಾಂಪಿಯನ್​ ಹಾಗೂ ಸೋಲನ್ನೇ ಕಾಣದ ಕುಸ್ತಿಪಟುವಿಗೆ ಸೋಲುಣಿಸಿದ್ದು ನಿಜಕ್ಕೂ ಸಣ್ಣ ಸಾಧನೆಯಲ್ಲ. 8 ಗಂಟೆಯ ಅಂತರದಲ್ಲಿ ಮೂರು ಗೆಲುವು ಸಾಧಿಸಿ ಅವರು ಫೈನಲ್​ ಪ್ರವೇಶಿಸಿದ್ದರು. ಇಡೀ ದಿನದಲ್ಲಿ ಆಡಿದ ಮೂರು ಬೌಟ್‌ಗಳಲ್ಲಿಯೂ ವಿನೇಶ್​ ಪಾರಮ್ಯ ಮೆರೆದಿದ್ದರು.

ಇದನ್ನೂ ಓದಿ:Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Continue Reading

ಕ್ರೀಡೆ

Vinesh Phogat: ಅನರ್ಹ ವಿನೇಶ್​ ಫೋಗತ್‌ಗೆ ಪ್ರಧಾನಿ ಮೋದಿ ಸಾಂತ್ವನ; ಮತ್ತಷ್ಟು ಬಲಿಷ್ಠರಾಗಿ ಮರಳಿ ಬನ್ನಿ ಎಂಬ ಹಾರೈಕೆ

Vinesh Phogat: ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದ, ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಫೈನಲ್​ ಪಂದ್ಯ ಆಡಲು ಕೆವಲೇ ಗಂಟೆಗಳು ಬಾಕಿ ಇರುವಾಗಲೇ ಅವರನ್ನು ಒಲಿಂಪಿಕ್ಸ್​ ಸಮಿತಿ ಅನರ್ಹ ಮಾಡಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ಈ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ.

“ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​, ಕ್ವಾರ್ಟರ್​ ಫೈನಲ್​ ಮತ್ತು ಸೆಮಿಫೈನಲ್​ ಪಂದ್ಯದಲ್ಲಿ ವಿನೇಶ್ ಅವರು ತನಗಿಂತ ಮೇಲಿನ ಶ್ರೇಯಾಂಕದ, ಅದರಲ್ಲೂ ಪ್ರೀ ಕ್ವಾರ್ಟರ್​ನಲ್ಲಿ 4 ಬಾರಿಯ ವಿಶ್ವ ಚಾಂಪಿಯನ್​ ಹಾಗೂ ಸೋಲನ್ನೇ ಕಾಣದ ಕುಸ್ತಿಪಟುವಿಗೆ ಸೋಲುಣಿಸಿದ್ದು ನಿಜಕ್ಕೂ ಸಣ್ಣ ಸಾಧನೆಯಲ್ಲ. 8 ಗಂಟೆಯ ಅಂತರದಲ್ಲಿ ಮೂರು ಗೆಲುವು ಸಾಧಿಸಿ ಅವರು ಫೈನಲ್​ ಪ್ರವೇಶಿಸಿದ್ದರು. ಇಡೀ ದಿನದಲ್ಲಿ ಆಡಿದ ಮೂರು ಬೌಟ್‌ಗಳಲ್ಲಿಯೂ ವಿನೇಶ್​ ಪಾರಮ್ಯ ಮೆರೆದಿದ್ದರು.

ಇದನ್ನೂ ಓದಿ Paris Olympics: ಐತಿಹಾಸಿಕ ಪದಕ ಗೆಲ್ಲಲಿ ಮೀರಾಬಾಯಿ; ಇಂದು ಬಲಾಢ್ಯರ ಜತೆ ಸ್ಪರ್ಧೆ

ಒಂದೊಮ್ಮೆ ಅವರು ಫೈನಲ್​ನಲ್ಲಿ ಸ್ಪರ್ಧಿಸಿ ಪದಕ ಗೆಲ್ಲುತ್ತಿದ್ದರೆ ಇದು ಮಹಿಳಾ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಒಲಿದ 2ನೇ ಪದವಾಗಿರುತ್ತಿತ್ತು. ಇದಕ್ಕೂ ಮುನ್ನ ರಿಯೊ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್ ಅವರು ಕಂಚು ಗೆದ್ದಿದ್ದರು. 2016ರ ರಿಯೊ ಒಲಿಂಪಿಕ್ಸ್​ನಲ್ಲಿ ಮಂಡಿನೋವಿನಿಂದ ಸಮಸ್ಯೆಯಾಗಿತ್ತು. 2021ರ ಟೋಕಿಯೊದಲ್ಲಿ ಅನಿರೀಕ್ಷಿತ ಸೋಲು ಕಂಡು ಹೊರಬಿದಿದ್ದರು. ಇದೀಗ ತೂಕ ಹೆಚ್ಚಳ ಅವರ ಚೊಚ್ಚಲ ಒಲಿಂಪಿಕ್​ ಪದಕ್ಕೆ ಹಿನ್ನಡೆಯಾಗಿ ಪರಿಣಮಿಸಿತು.

Continue Reading
Advertisement
bjp-jds padayatra Sumalatha ambareesh
ಪ್ರಮುಖ ಸುದ್ದಿ8 mins ago

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

Actor Darshan
ಕರ್ನಾಟಕ13 mins ago

Actor Darshan: ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ; ಎಫ್‌ಎಸ್‌ಎಲ್ ವರದಿಯಲ್ಲಿ ದೃಢ

Actor Dhanush Raayan set for OTT release
ಕಾಲಿವುಡ್13 mins ago

Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

Crop Over Festival
Latest35 mins ago

Rihanna Crop Over: ʼಊರ ಹಬ್ಬʼದಲ್ಲಿ ʼನಗ್ನ ಉಡುಗೆʼ ಧರಿಸಿ ಸಂಚಲನ ಮೂಡಿಸಿದ ರಿಹಾನ್ನಾ!

Viral Video
Latest47 mins ago

Viral Video: ರಸ್ತೆಯಲ್ಲಿ ಚುಡಾಯಿಸಿದ ಪುಂಡನಿಗೆ ಬುದ್ಧಿ ಕಲಿಸಿದ ವಿದ್ಯಾರ್ಥಿನಿ; ವಿಡಿಯೊ ನೋಡಿ

Bangladesh Unrest
ವಿದೇಶ58 mins ago

Bangladesh Unrest: ಶೇಖ್‌ ಹಸೀನಾ ಅವರ ಪಕ್ಷದ ಮುಖಂಡರು, ಕಾರ್ಯಕರ್ತರೇ ಟಾರ್ಗೆಟ್‌; ಒಂದೇ ದಿನ 29 ಜನ ಬಲಿ

Student Abuse
Latest59 mins ago

Student Abuse: ʼಮೇಡಂ ನನಗೆ ಪಿರಿಯಡ್ಸ್‌ʼ ಎಂದರೂ ಬಿಡದೆ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿದ ಶಿಕ್ಷಕಿ!

Vinesh Phogat Disqualified
ಕ್ರೀಡೆ1 hour ago

Vinesh Phogat Disqualified: ತೂಕ ವಿಭಾಗ ಬದಲಿಸಿದ್ದೇ ವಿನೇಶ್​ ಹಿನ್ನಡೆಗೆ ಕಾರಣವಾಯಿತೇ?

Namma Metro
ಕರ್ನಾಟಕ1 hour ago

Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

Vinesh Phogat
ದೇಶ1 hour ago

Vinesh Phogat: ನೋ! ನೋ! ನೋ!; ವಿನೇಶ್​ ಫೋಗಟ್ ಅನರ್ಹತೆ ಕೆಟ್ಟ ಕನಸಾಗಿರಲಿ: ಆನಂದ್‌ ಮಹೀಂದ್ರಾ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು21 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ22 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌