Travel tips | ಈ 10 ಮಂದಿ ಜೊತೆಗೆ ಪ್ರವಾಸ ಮಾಡಲೇಬಾರದು! - Vistara News

ಪ್ರಮುಖ ಸುದ್ದಿ

Travel tips | ಈ 10 ಮಂದಿ ಜೊತೆಗೆ ಪ್ರವಾಸ ಮಾಡಲೇಬಾರದು!

ಪ್ರವಾಸ ಅರ್ಥಪೂರ್ಣವೆನಿಸಲು ಒಳ್ಳೆಯ ಕಂಪನಿ ಇರಬೇಕು. ಕೆಲವರು ಜತೆಗಿದ್ದರೆ ಇಡೀ ಪ್ರವಾಸದ ಆನಂದವೇ ಸರ್ವನಾಶ ಆಗಿಬಿಡುತ್ತದೆ. ಅಂಥ ಹತ್ತು ಮಂದಿಯ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

travel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೋಲೋ ಪ್ರವಾಸವೆಂಬುದು ಸದ್ಯದ ಟ್ರೆಂಡ್‌ ಆದರೂ ಬಹಳಷ್ಟು ಮಂದಿಗೆ ಬಹಳಷ್ಟು ಸಂದರ್ಭಗಳಲ್ಲಿ ಒಬ್ಬರೇ ಪ್ರವಾಸ ಮಾಡುವುದು ಸಾಧ್ಯವಾಗುವುದಿಲ್ಲ. ಪ್ರವಾಸಕ್ಕೆ ಒಂದಿಬ್ಬರೋ ಅಥವಾ ಒಂದು ಗುಂಪೋ ಇದ್ದರೆ ಎಷ್ಟು ಚೆನ್ನಾಗಿತ್ತು ಅನಿಸುತ್ತದೆ. ಜೊತೆಗಾರರು ಇದ್ದಾಗ, ಏಕಾಕಿತನ ಕಾಡದೆ, ಅದ್ಭುತವಾಗಿ ಸಮಯ ಕಳೆಯಬಹುದು ಎಂಬುದೂ ನಿಜವೇ. ಆದರೆ, ಜೊತೆಗಾರರು ಎಂಥವರು ಎಂಬುದರ ಮೇಲೆ ನಿಮ್ಮ ಇಡೀ ಪ್ರವಾಸ ನಿಂತಿರುತ್ತದೆ. ʻಹೇ ನಿನ್ನ ಜೊತೆ ನಾನೂ ಪ್ರವಾಸಕ್ಕೆ ಬರುತ್ತೇನೆʼ ಎಂದು ನಮ್ಮ ಬೆನ್ನ ಹಿಂದೆ ಬೀಳುವ ಮಂದಿ ನಿಜಕ್ಕೂ ನಮ್ಮದೇ ಮಾದರಿಯ ಪ್ರವಾಸ ಪ್ರಿಯರಾ ಎಂಬುದನ್ನು ನಾವು ಮೊದಲೇ ಯೋಚಿಸಬೇಕಾಗುತ್ತದೆ. ಹಾಗಾಗಿ ಪ್ರವಾಸ ಹೊರಡುವ ಮುನ್ನ ಎಂಥ ಮಂದಿಯನ್ನು ನಮ್ಮ ಪ್ರವಾಸದಿಂದ ದೂರ ಇರಿಸಬೇಕು ಎಂಬ ಬಗ್ಗೆ ನೋಡೋಣ.

೧. ಹೋಗುವ ಸ್ಥಳದ ಬಗ್ಗೆ ಎಲ್ಲ ಮಾಹಿತಿಯೂ ತಿಳಿದ ಮಂದಿ ಇರುತ್ತಾರೆ. ಇಡೀ ಪ್ರವಾಸಲ್ಲಿ, ಏನೇ ವಿಚಾರ ಬಂದರೂ ಎಲ್ಲಿಗೇ ಹೋದರೂ ಅವರು ಇದೆಲ್ಲ ನನಗೆ ಗೊತ್ತು ಎಂಬ ಮನೋಸ್ಥಿತಿಯಲ್ಲೇ ಇರುತ್ತಾರೆ. ಅವರು ಚೆನ್ನಾಗಿ ಓದಿ ತಿಳಿದುಕೊಂಡಿರುವವರೇ ಇರಬಹುದು, ಆದರೆ, ಇಂಥವರ ಜೊತೆ ಹೋದರೆ, ಪ್ರವಾಸದ ಸಣ್ಣ ಸಣ್ಣ ಖುಷಿಗಳು ದಕ್ಕದೆ, ಪ್ರತಿಯೊಂದಕ್ಕೂ ನೀವು ಅವರನ್ನೇ ಅವಲಂಬಿಸಬೇಕಾಗಿ ಬಂದು ನೆಮ್ಮದಿ ಹಾಳಾಗುತ್ತದೆ.

೨. ಕೆಲವರಿರುತ್ತಾರೆ, ಅವರಿಗೆ ಪ್ರವಾಸ ಎಂದರೆ ಕುಡಿಯೋದು. ಅವರು ಎಲ್ಲೇ ಉಳಿದುಕೊಂಡರೂ ಅಲ್ಲಿ ಬಾಟಲಿ ಹರವಿಬಿಡುತ್ತಾರೆ. ಸಮುದ್ರ ತೀರವೋ ಬಾರ್‌ಗಳೋ ಸಿಕ್ಕಿದರೆ ಮುಗೀತು. ಅವರಿಗೆ ಹಬ್ಬ. ಅವರ ಜೊತೆ ಹೋದರೆ ಕುಡಿತ ಬಿಟ್ಟರೆ ಬೇರೆ ಯಾವುದೇ ಮನರಂಜನೆ ಇರುವುದಿಲ್ಲ. ಹೊಸ ಜಾಗವೊಂದನ್ನು ನೋಡುವುದು, ಹೊಸ ಸಾಹಸಗಳನ್ನು ಮಾಡುವುದು, ಅಲ್ಲಿನ ಹೊಸ ರುಚಿಗಳನ್ನು ಟ್ರೈ ಮಾಡುವುದು, ಕಲೆ, ಸಂಸ್ಕೃತಿಯನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುವುದು ಎಲ್ಲವೂ ನಿಮಗಿನ್ನು ಕೇವಲ ಕನಸಾದೀತು. ಎಚ್ಚರ.

೩. ಇನ್ನೂ ಕೆಲವರಿರುತ್ತಾರೆ. ಹುಟ್ಟಿದ ಮೇಲೆ ನೆಲದಲ್ಲಿ ಕಾಲೇ ಇಟ್ಟಿಲ್ಲವೇನೋ ಎಂಬಂತೆ ನಡೆದುಕೊಳ್ಳುತ್ತಾರೆ. ಎಲ್ಲೋ ರಸ್ತೆಯಲ್ಲಿ ೧೦ ನಿಮಿಷ ನಡೆದು ಹೋಗುತ್ತಿದ್ದರೆ ಸುಸ್ತಾಗುತ್ತಾರೆ. ಇನ್ನೆಲ್ಲೋ ಒತ್ತೊತ್ತಾದ ಜನಸಂದಣಿಯಲ್ಲಿ ಹೆಜ್ಜೆ ಹಾಕಬೇಕೆಂದರೆ ಕುಯ್ಯೋ ಮುರ್ರೋ ಎಂದು ಆಕಾಶ ಭೂಮಿ ಒಂದು ಮಾಡುತ್ತಾರೆ. ಇಂತಹ ಡ್ರಾಮಾ ಕ್ವೀನ್‌ /ಕಿಂಗ್‌ಗಳ ಜೊತೆ ತಿರುಗಾಡುವುದೇ ಹಿಂಸೆ ಅನಿಸತೊಡಗುತ್ತದೆ.

travel

೪. ಬೆಳಗ್ಗೆ ತನ್ನ ಮನೆಯಲ್ಲಿ ಭಾನುವಾರದ ರಜಾದಿನದಂದು ಎದ್ದಂತೆ ನಿಧಾನಕ್ಕೆ ಸೂರ್ಯನ ಪ್ರಖರ ಬಿಸಿಲು ಮುಖಕ್ಕೆ ಬಿದ್ದಾಗಲಷ್ಟೇ ಏಳುವ ಮಂದಿಯ ಜೊತೆಗೂ ಪ್ರವಾಸ ಕಷ್ಟ. ಹೊಸತೊಂದು ಜಾಗಕ್ಕೆ ಬಂದಾಗ ಬೇಗ ಎದ್ದು, ಒಂದು ವಾಕ್‌ ಮಾಡುವುದು ಅಥವಾ ಸೂರ್ಯೋದಯವನ್ನು ಕಣ್ತುಂಬಿಕೊಳ್ಳುವುದು, ಚಾರಣ ಮಾಡುವುದು ಇವನ್ನೆಲ್ಲ ಇಂಥವರು ನಿಮ್ಮ ಜೊತೆಗೆ ಇದ್ದರೆ ಮಾಡಲಾಗುವುದೇ ಇಲ್ಲ. ಇವರು ನಿಧಾನಕ್ಕೆ ಎದ್ದು ಹಾಸಿಗೆಗೇ ಚಹಾ ತರಿಸಿಕೊಂಡು, ಆಮೇಲೆ ಹಲ್ಲುಜ್ಜಿ ತಿಂಡಿಗೆ ಆರ್ಡರ್‌ ಕೊಟ್ಟು, ಕಾಲು ಚಾಚಿ, ಪಟ್ಟಾಂಗ ಹೊಡೆಯುತ್ತಾ ತಿಂಡಿ ತಿನ್ನುವಷ್ಟರಲ್ಲಿ ಸೂರ್ಯ ತನ್ನ ಅರ್ಧ ದಾರಿ ಕ್ರಮಿಸಿರುತ್ತಾನೆ. ಇಂಥವರೊಂದಿಗೆ ನಿಮ್ಮ ಪ್ರವಾಸ ಫ್ಲಾಪ್!‌

೫. ಕೆಲವರು ಎಲ್ಲೇ ಹೋಗಲಿ ಬರಲಿ ಕೆಲಸದ ಬ್ಯುಸಿಯಲ್ಲೇ ಇರುತ್ತಾರೆ. ಚಂದದ ಜಾಗದಲ್ಲಿ ಕೂತು ಫೋನ್‌, ಲ್ಯಾಪ್‌ಟಾಪ್‌ ಹಿಡಿದು ಕೆಲಸ ಮಾಡುತ್ತಿರುತ್ತಾರೆ. ಅಥವಾ ಪದೇ ಪದೇ ಬರುವ ಕಾಲ್‌ಗಳಲ್ಲಿ ಕಚೇರಿಯ ಮಂದಿಯೊಂದಿಗೆ ಚರ್ಚೆ, ಮಾತುಕತೆ ನಡೆಸುತ್ತಲೇ ಇರುತ್ತಾರೆ. ಇಂಥವರಿದ್ದರೂ, ನಿಮ್ಮ ಇಡೀ ಪ್ರವಾಸ ಅಂದಗೆಡುತ್ತದೆ.

ಇದನ್ನೂ ಓದಿ: Visa free countries | ವೀಸಾ ಇಲ್ಲದೆ ಭಾರತೀಯರಿನ್ನು 60 ದೇಶಗಳಿಗೆ ಹೋಗಬಹುದು!

೬. ಎಂಥ ಜಾಗಕ್ಕೆ ಹೋದರೂ ಉತ್ಸಾಹವಿಲ್ಲದಂತೆ ನೀರಸವಾಗಿರುವ ಮಂದಿಯೂ ಇರುತ್ತಾರೆ. ಇವರು ಹೆಚ್ಚು ಮಾತನಾಡುವುದಿಲ್ಲ. ಖುಷಿಯನ್ನು ಪ್ರಕಟಿಸುವುದೂ ಇಲ್ಲ. ಇಂಥವರೊಂದಿಗೂ ಪ್ರವಾಸ ಕಷ್ಟ.

೭. ಕೆಲವರಿಗೆ ಏನು ಮಾಡಲೂ ಭಯ. ಏನೇ ಹೊಸ ಯೋಜನೆ ಹಾಕಿಕೊಂಡರೂ ಇವರು ಮಧ್ಯದಲ್ಲಿ ಬಾಯಿ ಹಾಕಿ ಭಯ ವ್ಯಕ್ತಪಡಿಸುತ್ತಾರೆ. ಯಾರಾದರೂ ಹೊಸಬರು ಸಿಕ್ಕರೆ ಮಾತನಾಡಿದರೆ ಅವರ ಮೇಲೆ ಅನುಮಾನ, ರಾತ್ರಿ ರಸ್ತೆಯಲ್ಲಿ ನಡೆದು ಹೋಗಲು ಭಯ, ಡ್ರೈವರ್‌ ಸ್ವಲ್ಪ ಹೆಚ್ಚು ಮಾತಾಡಿದನೆಂದರೆ ಅವನ ಮೇಲೆ ಸಂಶಯ… ಹೀಗೆ ಪ್ರತಿಯೊಂದೂ ಅವರಿಗೆ ಸಹಜವಾಗಿ ಕಾಣುವುದೇ ಇಲ್ಲ. ಇಂಥವರೊಂದಿಗೂ ಪ್ರವಾಸ ಕಷ್ಟ.

೮. ಇನ್ನೂ ಕೆಲವರಿರುತ್ತಾರೆ. ತಾವು ಹೋದ ಜಾಗದ ಬಗ್ಗೆ ಫೇಸ್‌ಬುಕ್/ ಇನ್‌ಸ್ಟಾದಲ್ಲಿ ಅಪ್‌ಡೇಟ್‌ ಮಾಡದಿದ್ದರೆ ಬದುಕಿದ್ದೇ ವ್ಯರ್ಥ ಎಂಬಂತೆ ಆಡುತ್ತಾರೆ. ಹೋದ ಹೋಟೇಲು, ತಿಂದ ಜಾಗ, ನಿಂತ, ನಡೆದ ಪ್ರತಿಯೊಂದು ವಿಷಯವೂ ಸಾಮಾಜಿಕ ಜಾಲತಾಣದಲ್ಲಿ ಕ್ಷಣಕ್ಷಣಕ್ಕೆ ಅಪ್‌ಡೇಟ್‌ ಆಗುತ್ತಿರುತ್ತದೆ. ಇಂಥವರು ಜೊತೆಗಿದ್ದರೆ ಬಲುಕಷ್ಟ.

೯. ಫೋಟೋ ಹುಚ್ಚಿನ ಮಂದಿಯೂ ಇರುತ್ತಾರೆ. ಎಲ್ಲೇ ಹೋದರೂ ಬಂದರೂ ಇವರಿಗೆ ಫೋಟೋಗಳಷ್ಟೇ ಬೇಕಾಗಿರುತ್ತದೆ. ಹೋದ ತಕ್ಷಣ ನಿಂತು ನಾನಾ ಭಂಗಿಯ ಪೋಸ್‌ ಕೊಟ್ಟು, ಅದು ತನ್ನ ಅಲೋಚನೆಗೆ ತಕ್ಕ ಹಾಗೆ ಬರುವವರೆಗೆ ಬಿಡದೆ ಕ್ಲಿಕ್ಕಿಸುತ್ತಿರುತ್ತಾರೆ. ಅದಕ್ಕಾಗಿ ಅಮೋಘವಾಗಿ ರೆಡಿಯಾಗಿ, ಸೆಲ್ಫಿಗಳನ್ನೇ ತೆಗೆಯುತ್ತಾ, ಹೋದ ಜಾಗ ಯಾವುದು ಎಂಬ ಬಗ್ಗೆಯೂ ಅವರಿಗೆ ಕುತೂಹಲ ಇರದ ಹಾಗೆ ವರ್ತಿಸುತ್ತಾರೆ. ಇಂಥವರೊಂದಿಗೆ ಎಷ್ಟು ಕಷ್ಟ ಯೋಚಿಸಿ.

೧೦. ಜೋಡಿ ಹಕ್ಕಿಗಳಂತೆ ಸದಾ ಪ್ರೀತಿಯಲ್ಲಿ ಮುಳುಗಿರುವ ಮಂದಿಯೂ ಗುಂಪಿನಲ್ಲಿ ಕಷ್ಟ. ಅವರು, ಮಾತಿಗೊಮ್ಮೆ ಲವ್‌ ಯೂ ಹೇಳಿಕೊಂಡು, ತನ್ನ ಹುಡುಗಿಗೆ ಕಾಲು ಉಳುಕಿದರೆ, ತೊಡೆಯ ಮೇಲೆ ಕೂರಿಸಿಕೊಂಡು ಮಗುವಿನಂತೆ ನೋಡಿಕೊಳ್ಳುತ್ತಾ, ಹೋದಲ್ಲಿ ಬಂದಲ್ಲಿ ಇಂಥದ್ದನ್ನೇ ಪ್ರದರ್ಶಿಸುತ್ತಾ ಸುತ್ತಲಿನವರನ್ನು ಮುಜುಗರಕ್ಕೀಡು ಮಾಡುತ್ತಿರುತ್ತಾರೆ. ಇಂಥವರು ಗುಂಪಿನಲ್ಲಿ ಹೋಗುವ ಬದಲು ಇಬ್ಬರೇ ಹೋಗುವುದು ಉತ್ತಮ.

ಇದನ್ನೂ ಓದಿ: Solo Travel: ಸೋಲೋ ಪ್ರವಾಸ ಗೆಲ್ಲೋಕೆ 15 ಸೂತ್ರಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

SSLC 2024 Exam 2: ಎಸ್ಎಸ್ಎಲ್‌ಸಿ ಪರೀಕ್ಷೆ-2, ಜೂನ್‌ 14ರಿಂದ 22 ರವರೆಗೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಬಿಡುಗಡೆ ಮಾಡಿದೆ.

VISTARANEWS.COM


on

SSLC 2024 Exam 2
Koo

ಬೆಂಗಳೂರು: 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2ರ (SSLC 2024 Exam 2) ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಬಿಡುಗಡೆ ಮಾಡಿದ್ದು, ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದಾರೆ.

2024ರ ಎಸ್ಎಸ್ಎಲ್‌ಸಿ ಪರೀಕ್ಷೆ-2 ಅನ್ನು ಈ ಹಿಂದೆ ಜೂನ್‌ 7ರಿಂದ 14ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರದ ಸೂಚನೆ ಅನ್ವಯ ಪರೀಕ್ಷೆ-2ನ್ನು ಮುಂದೂಡಿ, ಜೂನ್‌ 14ರಿಂದ 22 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾ ಉಪನಿರ್ದೇಶಕರು(ಆಡಳಿತ) ಸೇರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ

  • 14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.
  • 15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • 18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ
  • 19-06-2024 ಬುಧವಾರ: ಅರ್ಥ ಶಾಸ್ತ್ರ
  • 20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.
  • 21-06-2024 ಶುಕ್ರವಾರ– ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ
  • 22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಗ್ರೇಸ್‌ ಮಾರ್ಕ್ಸ್‌ ಅಲ್ಲ, ಗುಣಮಟ್ಟದ ಶಿಕ್ಷಣವೇ ಫಲಿತಾಂಶಕ್ಕೆ ದಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಫೇಲ್‌ ಆದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

SSLC Exam 2024

ಬೆಂಗಳೂರು: 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ (SSLC 2024 Exam 2) ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿ ರಾಜ್ಯ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾದ ಸೂಚನೆಗಳ ಅನ್ವಯ ಮುಂದೂಡಲಾಗಿದ್ದು, ಮೇ 29ರಿಂದ ಜೂ.6ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳು ನಡೆಯಲಿವೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ನಿರ್ದೇಶಕರು (ಪ್ರೌಢ ಶಿಕ್ಷಣ) ಆದೇಶ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಹಿಂದೆ ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್‌ 13ವರೆಗೆ ನಡೆಸಲು ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Veerabhadreswara Fair: ಪ್ರತಿವರ್ಷ ಜರುಗುವ ಅದ್ಧೂರಿಯಾಗಿ ವೀರಭದ್ರೇಶ್ವರ ಜಾತ್ರೆ ನಡೆಯುತ್ತಾ ಬರುತ್ತಿದೆ. ಈ ವೇಳೆ ಹತ್ತಾರು‌ ಸಾವಿರ ಭಕ್ತರ ಸಮ್ಮುಖದಲ್ಲಿ ಜಯಘೋಷಗಳೊಂದಿಗೆ ರಥೋತ್ಸವ ನಡೆಯುತ್ತದೆ. ಶನಿವಾರ ರಥೋತ್ಸವದ ವೇಳೆ ಭಕ್ತರೆಲ್ಲರೂ ಸೇರಿ ರಥ ಎಳೆಯುವಾಗ ರಥದ ಚಕ್ರದಡಿ ಇಬ್ಬರು ಬಿದ್ದಿದ್ದಾರೆ. ಇದು ಗೊತ್ತಾಗದೇ ಎಳೆದಿದ್ದರಿಂದ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Two killed after being hit by the wheel of a chariot while performing at Veerabhadreswara fair
Koo

ಗದಗ: ಗದಗ ಜಿಲ್ಲೆ ರೋಣ ಪಟ್ಟಣದ ವೀರಭದ್ರೇಶ್ವರ ಜಾತ್ರೆಯಲ್ಲಿ (Veerabhadreswara Fair) ರಥದ ಚಕ್ರದಡಿ‌ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ರಥ ಎಳೆಯುವ ವೇಳೆ ಈ ಅವಘಡ ನಡೆದಿದೆ.

ಪ್ರತಿವರ್ಷ ಜರುಗುವ ಅದ್ಧೂರಿಯಾಗಿ ವೀರಭದ್ರೇಶ್ವರ ಜಾತ್ರೆ ನಡೆಯುತ್ತಾ ಬರುತ್ತಿದೆ. ಈ ವೇಳೆ ಹತ್ತಾರು‌ ಸಾವಿರ ಭಕ್ತರ ಸಮ್ಮುಖದಲ್ಲಿ ಜಯಘೋಷಗಳೊಂದಿಗೆ ರಥೋತ್ಸವ ನಡೆಯುತ್ತದೆ. ಶನಿವಾರ ರಥೋತ್ಸವದ ವೇಳೆ ಭಕ್ತರೆಲ್ಲರೂ ಸೇರಿ ರಥ ಎಳೆಯುವಾಗ ರಥದ ಚಕ್ರದಡಿ ಇಬ್ಬರು ಬಿದ್ದಿದ್ದಾರೆ. ಇದು ಗೊತ್ತಾಗದೇ ಎಳೆದಿದ್ದರಿಂದ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಒಬ್ಬ ಭಕ್ತನ ತಲೆ‌ ಮೇಲೆ ರಥದ ಚಕ್ರ ಹತ್ತಿಳಿದಿದ್ದರಿಂದ ತಲೆಬುರುಡೆ ಅಪ್ಪಚ್ಚಿಯಾಗಿದೆ. ಮತ್ತೊಬ್ಬನ ಬೆನ್ನಿನ ಮೇಲೆ ಹಾದು ಹೋಗಿದೆ. ಹೀಗಾಗಿ ಆತನೂ ಅಲ್ಲಿಯೇ ಉಸಿರು ಚೆಲ್ಲಿದ್ದಾನೆ. ರಥೋತ್ಸವಕ್ಕೆ‌ ಎಸೆಯುವ ಉತ್ತುತ್ತೆಯನ್ನು ಆರಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಮಲ್ಲಪ್ಪ ಲಿಂಗನಗೌಡರ (55) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ರೋಣ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

ಮುಂಬೈ: ಗಂಡ-ಹೆಂಡತಿ, ಪ್ರಿಯತಮ-ಪ್ರಿಯತಮೆ ಸೇರಿ ಯಾವುದೇ ಸಂಬಂಧದಲ್ಲಿ ಅನುಮಾನ ಎಂಬ ಪೀಡೆ ಹೊಕ್ಕರೆ ಅಲ್ಲಿಗೆ ಮುಗಿಯಿತು ಕತೆ. ಒಂದೋ ಆ ಸಂಬಂಧದಲ್ಲಿ ಬಿರುಕು ಮೂಡುತ್ತದೆ, ಇಲ್ಲವೇ ಪರಸ್ಪರ ಹಿಂಸೆಗೆ ದಾರಿ ಮಾಡುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ವ್ಯಕ್ತಿಯೊಬ್ಬ ತನ್ನ ಪತಿಯ ಶೀಲ ಶಂಕಿಸಿ, ಆಕೆ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕುವ ಮೂಲಕ ರಕ್ಕಸ ಕೃತ್ಯ ಎಸಗಿದ್ದಾನೆ.

ಪುಣೆಯ ವಾಕಡ್‌ ಪ್ರದೇಶದಲ್ಲಿ ಮೇ 11ರಂದು ಪತಿಯು ಮೃಗದಂತೆ ವರ್ತಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ದುಷ್ಟನನ್ನು ಬಂಧಿಸಿದ್ದಾರೆ. ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

Physical Abuse

ಪ್ರಕರಣದ ಕುರಿತು ತನಿಖಾಧಿಕಾರಿ ಬಾಲಾಜಿ ಮೆತೆ ಅವರು ಮಾಹಿತಿ ನೀಡಿದ್ದಾರೆ. “ಗಂಡ ಹಾಗೂ ಹೆಂಡತಿ ನೇಪಾಳದವರು. ಉದ್ಯೋಗ ಅರಸಿ ಅವರು ಮೇ ತಿಂಗಳ ಮೊದಲ ವಾರದಲ್ಲಿ ವಾಕಡ್‌ಗೆ ಬಂದು ನೆಲೆಸಿದ್ದರು. ಮೇ 11ರಂದು ಪಾನಮತ್ತನಾಗಿ ಬಂದ ವ್ಯಕ್ತಿಯು ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಶೀಲ ಶಂಕಿಸಿದ ಆತನು ಒದ್ದು, ಆಕೆಯ ಕೈಕಾಲು ಕಟ್ಟಿ, ಗುಪ್ತಾಂಗಕ್ಕೆ ಮೊಳೆ ಜಡಿದು, ಚಾಕುವಿನಿಂದ ಹಲ್ಲೆ ನಡೆಸಿ, ಬೀಗ ಹಾಕಿದ್ದಾನೆ. ಮಹಿಳೆಯು ಅಂಗಲಾಚಿದರೂ ಆತನು ಬಿಟ್ಟಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Murder Case : ಶೀಲ ಶಂಕಿಸಿ ಪತ್ನಿಯ ಕುತ್ತಿಗೆ ಹಿಸುಕಿ ಕೊಂದ ಸಂಶಯ ಪಿಶಾಚಿ ಗಂಡ

ಮಹಿಳೆ ಅರಚುವ ಧ್ವನಿ ಕೇಳಿ ಪಕ್ಕದ ಮನೆಯ ಲಲಿತ್‌ ಪರಿಹಾರ್‌ ಎಂಬುವರು ಮನೆಗೆ ತೆರಳಿ ನೋಡಿದಾಗ, ಮಹಿಳೆಯು ರಕ್ತದ ಮಧ್ಯೆ ಬಿದ್ದಿರುವುದು ಕಂಡಿದೆ. ಕೂಡಲೇ ಅವರು ಸುತ್ತಮುತ್ತಲಿವರನ್ನು ಕರೆದ ಅವರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದಾದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Continue Reading

ದೇಶ

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Voter Turnout: ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಈಗ ನಾಲ್ಕನೇ ಹಂತದಲ್ಲಿ ಮತದಾನ ಪ್ರಮಾಣವು ಹೆಚ್ಚಾಗಿರುವುದು ಸಕಾರಾತ್ಮಕ ಬೆಳವಣಿಗೆ ಎಂದೇ ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

VISTARANEWS.COM


on

Voter Turnout
Koo

ನವದೆಹಲಿ: ಕಳೆದ ಸೋಮವಾರ (ಮೇ 13) ನಡೆದ ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನದ ಕುರಿತು ಚುನಾವಣೆ ಆಯೋಗವು (Election Commission) ಶುಕ್ರವಾರ ತಡರಾತ್ರಿ (ಮೇ 17) ಮಾಹಿತಿ ನೀಡಿದೆ. ನಾಲ್ಕನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಮೂರು ಹಂತಗಳಿಗಿಂತ ಗರಿಷ್ಠ ಮತದಾನ (Voter Turnout) ದಾಖಲಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ. ಅಷ್ಟೇ ಅಲ್ಲ, ಬಿಹಾರದಲ್ಲಿ 2, 3, ಹಾಗೂ 4ನೇ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂಬುದಾಗಿ ಆಯೋಗವು ಮಹತ್ವದ ಮಾಹಿತಿ ಹಂಚಿಕೊಂಡಿದೆ.

ಮೊದಲ ಹಂತದಲ್ಲಿ ನಡೆದ ಮತದಾನ ಪ್ರಮಾಣವು ಶೇ.66.14ರಷ್ಟಿದ್ದರೆ, ಎರಡನೇ ಹಂತದಲ್ಲಿ ಶೇ.66.71ರಷ್ಟು ಮತದಾನ ದಾಖಲಾಗಿತ್ತು. ಮೂರನೇ ಹಂತದಲ್ಲಿ ಒಟ್ಟು ಶೇ.65.68ರಷ್ಟು ಮತದಾನ ದಾಖಲಾಗಿತ್ತು. ಮೂರೂ ಹಂತಗಳಲ್ಲಿ 2019ಕ್ಕಿಂತ ಕಡಿಮೆ ಮತದಾನ ದಾಖಲಾಗಿದ್ದು ಚರ್ಚೆಗೆ ಗ್ರಾಸವಾಗಿತ್ತು. ಆದರೀಗ, 4ನೇ ಹಂತದಲ್ಲಿ ಶೇ.69.16ರಷ್ಟು ಮತದಾನ ದಾಖಲಾಗಿದ್ದು, ಕಳೆದ ಬಾರಿಗಿಂತ ಕೇವಲ 0.40ರಷ್ಟು ಕಡಿಮೆಯಾಗಿದೆ. ಹಾಗಾಗಿ, ನಾಲ್ಕನೇ ಹಂತದ ಮತದಾನವು ಸಕಾರಾತ್ಮಕ ಬೆಳವಣಿಗೆ ಎಂದು ಹೇಳಲಾಗುತ್ತಿದೆ.

ಬಿಹಾರ, ಜಾರ್ಖಂಡ್‌ನಲ್ಲಿ ಹೆಣ್ಮಕ್ಳೇ ಸ್ಟ್ರಾಂಗು!

ಸಾಮಾನ್ಯವಾಗಿ ಬಹುತೇಕ ಕ್ಷೇತ್ರಗಳಲ್ಲಿ ಮತದಾನ ಮಾಡುವವರು ಮಹಿಳೆಯರಿಗಿಂತ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಆದರೆ, ಎರಡು, ಮೂರು ಹಾಗೂ ನಾಲ್ಕನೇ ಹಂತದಲ್ಲಿ ಬಹಾರದ 15 ಹಾಗೂ ಜಾರ್ಖಂಡ್‌ನ 13 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ ಎಂಬುದಾಗಿ ಚುನಾವಣೆ ಆಯೋಗ ತಿಳಿಸಿದೆ. ಹಾಗೆಯೇ, ಪಶ್ಚಿಮ ಬಂಗಾಳದ 6, ಬಿಹಾರ, ಆಂಧ್ರದಲ್ಲಿ ತಲಾ 5, ಒಡಿಶಾ 2, ತೆಲಂಗಾಣ ಹಾಗೂ ಮಧ್ಯಪ್ರದೇಶದಲ್ಲಿ ತಲಾ 1 ಕ್ಷೇತ್ರಗಳಲ್ಲಿ ಹೆಣ್ಣುಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವೋಟ್‌ ಹಾಕಿದ್ದಾರೆ.

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು ಐದನೇ ಹಂತದ ಮತದಾನವು ಮೇ 20ರಂದು ನಡೆಯಲಿದೆ. ಜೂನ್‌ 1ರಂದು ಕೊನೆಯ ಅಥವಾ ಏಳನೇ ಹಂತದ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದುವರೆಗೆ 379 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಂತಾಗಿದೆ.

ಇದನ್ನೂ ಓದಿ: Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Continue Reading

ಕ್ರೀಡೆ

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ.

VISTARANEWS.COM


on

RCB vs CSK
Koo

ಬೆಂಗಳೂರು: ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡಿದೆ. ಆರ್​ಸಿಬಿ ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಮಳೆ ಭೀತಿಯ ನಡುವೆಯೂ ಈ ಪಂದ್ಯವನ್ನು ರಣರೋಚಕ ಪೈಪೋಟಿ ಎಂದೇ ನಿರೀಕ್ಷೆ ಮಾಡಲಾಗಿದೆ. ಉಭಯ ತಂಡಗಳ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೌಸ್​ ಫುಲ್​ ಆಗಿದೆ.

ಪಿಚ್​ ರಿಪೋರ್ಟ್​


ಬೆಂಗಳೂರಿನ(Bengaluru) ಎಂ ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. 50ಕ್ಕೂ ಅಧಿಕ ಬಾರಿ ಚೇಸಿಂಗ್​ ನಡೆಸಿದ ತಂಡವೇ ಜಯಶಾಲಿಯಾಗಿದೆ. 40 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2993 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಈ ಬಾರಿ ಕೊಹ್ಲಿ 13 ಪಂದ್ಯ ಆಡಿ 661 ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ.

ಆರ್​ಸಿಬಿಗೆ ಬೇಕು ಲೆಕ್ಕಾಚಾರದ ಗೆಲುವು


ನೆಟ್‌ ರನ್‌ರೇಟ್‌ನಲ್ಲಿ ಚೆನ್ನೈ ಮುಂದಿದೆ (0.528). ಆರ್‌ಸಿಬಿ 0.387 ರನ್‌ರೇಟ್‌ ಹೊಂದಿದೆ. ಹೀಗಾಗಿ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಬೇಕಾದರೆ, ಆರ್‌ಸಿಬಿ ಕನಿಷ್ಠ 18 ರನ್‌ ಅಂತರದಿಂದ ಗೆಲ್ಲಬೇಕು ಅಥವಾ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು ಆಗ ಮಾತ್ರ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲಿದೆ. ಈ ಎರಡು ಲೆಕ್ಕಾಚಾರದ ಗೆಲುವು ಒಲಿಯದೇ ಹೋದರೆ ಆರ್​ಸಿಬಿ ನಿರಾಸೆಗೆ ಒಳಗಾಗಲಿದೆ. 5ನೇ ಸ್ಥಾನಿಯಾಗಿ ಟೂರ್ನಿಯಿಂದ ನಿರ್ಗಮಿಸಲಿದೆ. ಚೆನ್ನೈ ಮುನ್ನಡೆಗೆ ಸಾಮಾನ್ಯ ಗೆಲುವು ಸಾಕು. 16 ಅಂಕ ಗಳಿಸಿ 4ನೇ ತಂಡವಾಗಿ ಪ್ಲೇ ಆಫ್​ಗೆ ಲಗ್ಗೆ ಇಡಲಿದೆ.

ಇದನ್ನೂ ಓದಿ RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ದಾಖಲೆ


ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನು ಆಡಿವೆ. ಈ ಪೈಕಿ ಚೆನ್ನೈ ಐದರಲ್ಲಿ ಗೆದ್ದರೆ, ಆರ್​ಸಿಬಿ ನಾಲ್ಕರಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈ ಲೆಕ್ಕಾಚಾರದಲ್ಲಿ ಚೆನ್ನೈ ಬಲಿಷ್ಠ ಎನ್ನಲಡ್ಡಿಯಿಲ್ಲ. ಇಲ್ಲಿ ನಡೆದ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆಲುವು ಸಾಧಿಸಿದೆ. ಈ ಆವೃತ್ತಿಯ 6 ಪಂದ್ಯಗಳ ಪೈಕಿ ಸಮಾನಾಗಿ 3 ಬಾರಿ ಚೇಸಿಂಗ್​ ಮತ್ತು ಮೊದಲು ಬ್ಯಾಟಿಂಗ್​ ನಡೆಸಿದ ತಂಡಗಳು ಜಯಿಸಿದೆ.

ಐಪಿಎಲ್​ ಮುಖಾಮುಖಿ


ಆರ್​ಸಿಬಿ ಮತ್ತು ಚೆನ್ನೈ ತಂಡ ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 10 ಪಂದ್ಯ ಗೆದ್ದರೆ, ಚೆನ್ನೈ 21 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಕಳೆದ ಮೂರು ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ತಂಡವೇ ಗೆದ್ದಿದೆ. ಹೀಗಾಗಿ ನಾಳಿನ ಪಂದ್ಯದಲ್ಲಿಯೂ ಚೆನ್ನೈ ಗೆಲುವಿನ ಫೇವರಿಟ್​ ಆಗಿದೆ. ಈ ಬಾರಿಯ ಉದ್ಘಾಟನ ಪಂದ್ಯದಲ್ಲಿಯೂ ಚೆನ್ನೈ ಆರ್​ಸಿಬಿಗೆ ಸೋಲುಣಿಸಿತ್ತು.

ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿದೆ. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಸ್ವಾರಸ್ಯವೆಂದರೆ ಚೆನ್ನೈ ವಿರುದ್ಧವೇ 2 ಗೆಲುವು ಸಾಧಿಸಿದೆ. ಹೀಗಾಗಿ ಇಂದು ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆ.

Continue Reading
Advertisement
Inspirational Story
ಶಿಕ್ಷಣ3 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ4 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

SSLC 2024 Exam 2
ಪ್ರಮುಖ ಸುದ್ದಿ15 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ23 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Voter Turnout
ದೇಶ38 mins ago

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ41 mins ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

BJP State President B Y Vijayendra latest statement in bengaluru
ಕರ್ನಾಟಕ43 mins ago

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

Shed houses electric poles damaged due to heavy rain and wind in Karatagi
ಕೊಪ್ಪಳ46 mins ago

Heavy Rain: ಕಾರಟಗಿಯಲ್ಲಿ ಭಾರೀ ಮಳೆ ಗಾಳಿಗೆ ಅಪಾರ ಹಾನಿ; ಸಚಿವ ಶಿವರಾಜ ತಂಗಡಗಿ ಪರಿಶೀಲನೆ

cylinder explosion in Kunigal 6 people seriously injured, Kunigal MLA Dr Ranganath visit victoria Hospital in bengaluru
ತುಮಕೂರು49 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; ಮನೆಯ ಮೂವರಲ್ಲದೆ, ಪಕ್ಕದ ಮನೆಯ ಮೂವರಿಗೂ ಗಂಭೀರ ಗಾಯ

RCB vs CSK
ಕ್ರೀಡೆ60 mins ago

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ24 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌