Chuttamalle Song: 'ಮಾನಿಕೆ ಮಾಗೆ ಹಿತೆ' ಹಾಡಿನ ಟ್ಯೂನ್‌ ಕದ್ರಾ ಅನಿರುದ್ಧ ರವಿಚಂದರ್? ಶ್ರೀಲಂಕಾ ಕಂಪೋಸರ್‌ ಹೇಳೋದೇನು? - Vistara News

ಟಾಲಿವುಡ್

Chuttamalle Song: ‘ಮಾನಿಕೆ ಮಾಗೆ ಹಿತೆ’ ಹಾಡಿನ ಟ್ಯೂನ್‌ ಕದ್ರಾ ಅನಿರುದ್ಧ ರವಿಚಂದರ್? ಶ್ರೀಲಂಕಾ ಕಂಪೋಸರ್‌ ಹೇಳೋದೇನು?

Chuttamalle Song: ದೇವರ’ ಚಿತ್ರದ ‘ಚುಟ್ಟಮಲ್ಲೆ’ ಹಾಡು ಆಗಸ್ಟ್ 5 ರಂದು ಲಾಂಚ್ ಆಗಿದ್ದು, ಅಂದಿನಿಂದ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರು ‘ಮಾನಿಕೆ ಮಾಗೆ ಹಿತೆ’ ಕಾಪಿ ಮಾಡಿದ ಆರೋಪದ ಮೇಲೆ ಟ್ರೋಲ್ ಆಗಿದ್ದಾರೆ. ಆದರೆ ಈ ಬಗ್ಗೆ ಅನಿರುದ್ಧ ಅವರು ಈ ವಿಷಯದ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ.

VISTARANEWS.COM


on

Chuttamalle Song Manike Mage Hithe song copy Chamath reposted
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶ್ರೀಲಂಕಾ ಗಾಯಕಿ ಯೋಹಾನಿ ಧ್ವನಿಯಲ್ಲಿ ಮೂಡಿ ಬಂದ ‘ಮಾನಿಕೆ ಮಾಗೆ ಹಿತೆ’ (Manike Mage Hithe) ಹಾಡು ರಾತ್ರೋ ರಾತ್ರಿ ಫೇಮಸ್‌ ಆಗಿತ್ತು. ಸಿಂಹಳ ಗೀತೆಯಾದ ʻಮಾನಿಕೆ ಮಾಗೆ ಹಿತೆʼ 2020ರಲ್ಲಿ ಸತೀಶನ್‌ ರತ್ನಯಕ ಮೊದಲು ಹಾಡಿದ್ದರು. ‘ಮಾನಿಕೆ ಮಾಗೆ ಹಿತೆ’ ಕೆಲವು ವರ್ಷಗಳ ಹಿಂದೆ ಸೆನ್ಷೇಷನ್‌ ಕ್ರಿಯೇಟ್‌ ಮಾಡಿತ್ತು. ಇತ್ತೀಚೆಗೆ ಬಿಡುಗಡೆಯಾದ ‘ದೇವರ’ ಚಿತ್ರದ ‘ಚುಟ್ಟಮಲ್ಲೆ’ ಹಾಡು ‘ ʻಮಾನಿಕೆ ಮಾಗೆ ಹಿತೆʼ’ ಹಾಡಿಗೆ ಹೋಲಿಕೆಯಿದೆ ಎಂದು (Chuttamalle Song) ಹಲವರು ಟ್ರೋಲ್‌ ಕೂಡ ಮಾಡಿದ್ದಾರೆ. ಇದಾದ ಬಳಿಕ ಹಾಡಿನ ಸಂಯೋಜಕ ಚಮತ್ ಸಂಗೀತ್ ಪ್ರತಿಕ್ರಿಯಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿನ ತಮ್ಮ ಅಧಿಕೃತ ಪೋಸ್ಟ್‌ನಲ್ಲಿ, ಚಮತ್ ಅವರು ಯಾವಾಗಲೂ ‘ಚುಟ್ಟಮಲ್ಲೆ’ ಹಿಂದೆ ಇರುವ ಸಂಯೋಜಕ ಅನಿರುದ್ಧ ರವಿಚಂದರ್ ( Anirudh Ravichander) ಅವರ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ.

ಎರಡೂ ಹಾಡುಗಳ ನಡುವಿನ ಸಾಮ್ಯತೆಗಳನ್ನು ಎತ್ತಿ ತೋರಿಸುವ ವೀಡಿಯೊ ಮಾಡಿದ ಪ್ರಭಾವಿಗಳ ವೀಡಿಯೊವನ್ನು ಚಮತ್ ಮರು ಪೋಸ್ಟ್ ಮಾಡಿದ್ದಾರೆ. “ಯಾವಾಗಲೂ ಅನಿರುದ್ಧ್ ಅವರ ಕೆಲಸವನ್ನು ಮೆಚ್ಚುವ ನಾನು. ನನ್ನ ಹಾಡು ‘ಮಾನಿಕೆ ಮಾಗೆ ಹಿತೆ’ ಅವರನ್ನು ಇದೇ ರೀತಿಯ ಹಾಡು ರಚಿಸಲು ಸ್ಫೂರ್ತಿ ನೀಡಿರುವುದನ್ನು ನೋಡಿ ನನಗೆ ಸಂತೋಷವಾಗಿದೆ.”ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

‘ದೇವರ’ ಚಿತ್ರದ ‘ಚುಟ್ಟಮಲ್ಲೆ’ ಹಾಡು ಆಗಸ್ಟ್ 5 ರಂದು ಲಾಂಚ್ ಆಗಿದ್ದು, ಅಂದಿನಿಂದ ಸಂಗೀತ ಸಂಯೋಜಕ ಅನಿರುದ್ಧ್ ರವಿಚಂದರ್ ಅವರು ‘ಮಾನಿಕೆ ಮಾಗೆ ಹಿತೆ’ ಕಾಪಿ ಮಾಡಿದ ಆರೋಪದ ಮೇಲೆ ಟ್ರೋಲ್ ಆಗಿದ್ದಾರೆ. ಆದರೆ ಈ ಬಗ್ಗೆ ಅನಿರುದ್ಧ ಅವರು ಈ ವಿಷಯದ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ.

ʻಮನಿಕೆ ಮಾಗೆ ಹಿತೆ’ ಎಂಬುದು ಶ್ರೀಲಂಕಾದ ಗೀತೆಯಾಗಿದ್ದು, ಇದನ್ನು ಚಮ್ಂತ್ ಸಂಗೀತ್ ಸಂಯೋಜಿಸಿದ್ದಾರೆ ಮತ್ತು ಯೋಹಾನಿ ಹಾಡಿದ್ದಾರೆ. 2021 ರಲ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಜನರು ರೀಲ್ಸ್‌ ಮಾಡುವ ಮೂಲಕ ಖ್ಯಾತಿ ಪಡೆಯಿತು.
ಜೂನಿಯರ್ ಎನ್‌ಟಿಆರ್ ಮತ್ತು ಜಾನ್ವಿ ಕಪೂರ್ ಅವರ ‘ದೇವರ’ ಸೆಪ್ಟೆಂಬರ್ 27 ರಂದು ಥಿಯೇಟರ್‌ಗಳಲ್ಲಿ ಗ್ರ್ಯಾಂಡ್ ರಿಲೀಸ್‌ಗೆ ಸಜ್ಜಾಗುತ್ತಿದೆ. ಮೊದಲ ಭಾಗವು ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದ್ದರೆ, ಎರಡನೇ ಭಾಗವು ಪ್ರಸ್ತುತ ನಿರ್ಮಾಣ ಹಂತದಲ್ಲಿದೆ. ಈ ಚಿತ್ರವನ್ನು ಕೊರಟಾಲ ಶಿವ ಬರೆದು ನಿರ್ದೇಶಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Niharika Konidela: ತೆಲುಗು ಚಿತ್ರರಂಗ ನನ್ನ ಅಪ್ಪನ ಆಸ್ತಿ ಅಲ್ಲ ಎಂದ ನಟ ಚಿರಂಜೀವಿ ಸಹೋದರ ನಾಗಬಾಬು!

Niharika Konidela: ಮೆಗಾ ಫ್ಯಾಮಿಲಿ ತೆಲುಗು ಚಿತ್ರರಂಗವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಇತರೆ ಹೀರೋಗಳು ಮೆಗಾ ಫ್ಯಾಮಿಲಿಯ ಬೆದರಿಕೆಗೆ ಹೆದರಿದ್ದಾರೆ ಎಂದೆಲ್ಲ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಈ ವೇಳೆ ‘ತೆಲುಗು ಚಿತ್ರರಂಗ ಎಂಬುದು ನನ್ನ ಅಪ್ಪನ, ನನ್ನ ತಾತನ ಅಥವಾ ನಮ್ಮ ಕುಟುಂಬ ಆಸ್ತಿಯಲ್ಲ. ಕಷ್ಟ ಪಟ್ಟು ಕೆಲಸ ಮಾಡುವ ಎಲ್ಲರ ಆಸ್ತಿ’ ಎಂದಿದ್ದಾರೆ ನಾಗಬಾಬು.

VISTARANEWS.COM


on

Niharika Konidela Nagendra Babu says Industry Is Not Our Father's Property
Koo

ಆಗಸ್ಟ್ 9 ರಂದು ಬಿಡುಗಡೆಯಾಗಲಿರುವ ನಿಹಾರಿಕಾ ಕೊನಿಡೇಲಾ (Niharika Konidela ) ಅವರ “ಕಮಿಟಿ ಕುರ್ರೊಲ್ಲು” (Committee Kurrollu) ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಚಿತ್ರದ ಪ್ರಚಾರಗಳು ಪ್ರೇಕ್ಷಕರನ್ನು ಆಕರ್ಷಿಸಿವೆ. ಹಾಡುಗಳು ಟೀಸರ್ ಮತ್ತು ಟ್ರೇಲರ್ ಸಿನಿರಸಿಕರ ಮನ ಮುಟ್ಟಿದೆ. ಇತ್ತೀಚೆಗೆ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಅದ್ಧೂರಿಯಾಗಿ ನಡೆಯಿತು. ನಿಹಾರಿಕಾ ಅವರ ತಂದೆ, ಮೆಗಾ ಬ್ರದರ್ ನಾಗಬಾಬು, ಅವರ ಸಹೋದರ ಮೆಗಾ ಪ್ರಿನ್ಸ್ ವರುಣ್ ತೇಜ್ ಮತ್ತು ಅವರ ಸೋದರಸಂಬಂಧಿ ಸಾಯಿ ದುರ್ಗಾ ತೇಜ್ ಅವರು ಈ ಸಮಾರಂಭದಲ್ಲಿ ಭಾಗವಹಿಸಿ, ಚಿತ್ರದ ಸ್ಟಾರ್ ಪವರ್ ಅನ್ನು ಹೆಚ್ಚಿಸಿದ್ದರು. ಈ ವೇಳೆ ‘ತೆಲುಗು ಚಿತ್ರರಂಗ ಎಂಬುದು ನನ್ನ ಅಪ್ಪನ, ನನ್ನ ತಾತನ ಅಥವಾ ನಮ್ಮ ಕುಟುಂಬ ಆಸ್ತಿಯಲ್ಲ. ಕಷ್ಟ ಪಟ್ಟು ಕೆಲಸ ಮಾಡುವ ಎಲ್ಲರ ಆಸ್ತಿ’ ಎಂದಿದ್ದಾರೆ ನಾಗಬಾಬು.

ಮೆಗಾ ಫ್ಯಾಮಿಲಿ ತೆಲುಗು ಚಿತ್ರರಂಗವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಇತರೆ ಹೀರೋಗಳು ಮೆಗಾ ಫ್ಯಾಮಿಲಿಯ ಬೆದರಿಕೆಗೆ ಹೆದರಿದ್ದಾರೆ ಎಂದೆಲ್ಲ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಮಾಜಿ ಸಚಿವೆ ರೋಜಾ ಬಹಿರಂಗವಾಗಿ ಮೆಗಾ ಫ್ಯಾಮಿಲಿಯನ್ನು ರೌಡಿ ಫ್ಯಾಮಿಲಿ ಎಂದು ಸಂಭೋಧಿಸಿದ್ದರು. ಇತ್ತೀಚೆಗಿನ ವರ್ಷಗಳಲ್ಲಿ ಮೆಗಾ ಫ್ಯಾಮಿಲಿಯ ಕುಟುಂಬದ ಸದಸ್ಯರು ಹೆಚ್ಚು ಸಂಖ್ಯೆಯಲ್ಲಿ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 10ಕ್ಕೂ ಹೆಚ್ಚು ಮಂದಿ ಹೀರೋಗಳೇ ಇದ್ದಾರೆ. ಆದರೆ ಇತ್ತೀಚೆಗೆ ಮೆಗಾ ಫ್ಯಾಮಿಲಿ ಮೇಲೆ ಕೆಲವರು ಆರೋಪ ಮಾಡಿದ್ದಾರೆ.

ಇದೀಗ ನಾಗಬಾಬು ಹೊಸ ಹುಡುಗರ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ; Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವು ಸೋಮವಾರ ಪಿಠಾಪುರಂ ಕ್ಷೇತ್ರದಲ್ಲಿ ನಡೆದಿದ್ದು, ಕಮಿಟಿ ಕುರೋಲ್ಲು ತಂಡದ ಕಲಾವಿದರು ಮತ್ತು ಸಿಬ್ಬಂದಿ ಹಾಜರಿದ್ದರು. ನಿರ್ಮಾಪಕಿಯಾಗಿರುವ ಮಗಳ ಬಗ್ಗೆ ನಟ ನಾಗಬಾಬು ಶ್ಲಾಘಿಸಿದರು. ಹೀಗೆ ನಟ ಮಾತನ್ನು ಮುಂದುವರಿಸುವಾಗ ತೆಲುಗು ಸಿನಿ ಉದ್ಯಮ ಯಾರಿಗೂ ಸೇರಿಲ್ಲ ಮತ್ತು ಯಾವುದೇ ಪ್ರತಿಭಾವಂತ ವ್ಯಕ್ತಿ ಇಲ್ಲಿ ಯಶಸ್ಸನ್ನು ಸಾಧಿಸಬಹುದು ಎಂದು ಹೇಳಿದರು.

ʻʻಈ ಉದ್ಯಮ ನನ್ನ ಅಪ್ಪನ ಆಸ್ತಿಯಲ್ಲ. ಪ್ರತಿಭೆ ಇದ್ದರೆ ಯಾರು ಬೇಕಾದರೂ ಬರಬಹುದು ಎಂದರು. ಅಷ್ಟೆ ಅಲ್ಲ, ತೆಲುಗು ಚಿತ್ರರಂಗ ಎಂಬುದು ಮೆಗಾ ಕುಟುಂಬ, ನಂದಮೂರಿ ಕುಟುಂಬ, ದಗ್ಗುಬಾಟಿ, ಅಕ್ಕಿನೇನಿ ಕುಟುಂಬದ ಆಸ್ತಿಯಲ್ಲ. ಕಷ್ಟ ಪಟ್ಟು ಕೆಲಸ ಮಾಡುವ ಎಲ್ಲರ ಆಸ್ತಿ’ ಎಂದಿದ್ದಾರೆ.

ಯದು ವಂಶಿ ನಿರ್ದೇಶನದಲ್ಲಿ ಚಿತ್ರ ತಯಾರಾಗುತ್ತಿದ್ದು, ಅವರೇ ಕಥೆಯನ್ನೂ ಬರೆದಿದ್ದಾರೆ. ಸಾಯಿಕುಮಾರ್, ಗೋಪರಾಜು ರಮಣ, ಶರಣ್ಯ ಸುರೇಶ್, ಶ್ರೀ ಲಕ್ಷ್ಮಿ, ಟೀನಾ ಶ್ರಾವ್ಯ, ಪ್ರಸಾದ್ ಬೆಹ್ರಾ, ಕೋಟ ಜಯರಾಮ್, ಕಿಟ್ಟಯ್ಯ, ಈಶ್ವರ್ ರಾಚಿರಾಜು, ವಿಶಿಕಾ ಸೇರಿದಂತೆ ಹಲವರು ಇದ್ದಾರೆ. ಇದನ್ನು ಪಿಂಕ್ ಎಲಿಫೆಂಟ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಜಯಲಕ್ಷ್ಮಿ ಅಡಪಾಕ, ನಿಹಾರಿಕಾ ಕೊನಿಡೇಲ, ಪದ್ಮಜಾ ಕೊನಿಡೇಲ ಮತ್ತು ರಮೇಶ್ ಮಾನ್ಯಂ ನಿರ್ಮಿಸುತ್ತಿದ್ದಾರೆ.

ಚಿತ್ರಕ್ಕೆ ಅನುದೀಪ್ ದೇವ್ ಸಂಗೀತ ನೀಡಿದ್ದು, ಎದುರೋಳು ರಾಜು ಅವರ ಛಾಯಾಗ್ರಹಣ ಮತ್ತು ಅನ್ವರ್ ಅಲಿ ಸಂಕಲನ ಮಾಡಿದ್ದಾರೆ. ಚಿತ್ರವು ಆಗಸ್ಟ್ 9 ರಂದು ಬಿಡುಗಡೆಯಾಗುತ್ತಿದೆ. ವರದಿಗಳ ಪ್ರಕಾರ ನಾಗಬಾಬು ಅವರು ತಮ್ಮ ಮಗಳು ನಿಹಾರಿಕಾ ಅವರ ಒತ್ತಾಯದ ಮೇರೆಗೆ ʻಕಮಿಟಿ ಕುರೋಲ್ಲುʼ ಕಥೆಯನ್ನು ಕೇಳಿದ್ದಾರೆ ಮತ್ತು ಅದನ್ನು ಇಷ್ಟಪಟ್ಟಿದ್ದಾರೆ.

Continue Reading

South Cinema

Rishab Shetty: ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು; ಚಿಯಾನ್ ವಿಕ್ರಮ್ ಭೇಟಿ ಬಳಿಕ ರಿಷಬ್ ಶೆಟ್ಟಿ ರಿಯಾಕ್ಷನ್‌!

Rishab Shetty: ತಂಗಾಲನ್’ ಬಿಡುಗಡೆಗೆ ಮುನ್ನ, ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಈ ಹಿಂದೆ, ತಯಾರಕರು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೆಂಗಳೂರು ಈವೆಂಟ್ ಆಗಸ್ಟ್ 6 ರಂದು ನಡೆದಿದ್ದು, ತಂಡ ಈಗ ಮುಂಬೈ ಮತ್ತು ಕೊಚ್ಚಿಗೆ ತೆರಳಲಿದೆ.

VISTARANEWS.COM


on

Rishab Shetty meets Chiyaan Vikram after 24 years
Koo

ಬೆಂಗಳೂರು: ಕನ್ನಡ ನಟ ರಿಷಬ್ ಶೆಟ್ಟಿ (Rishab Shetty) ಅವರು ಆಗಸ್ಟ್ 6ರಂದು ಬೆಂಗಳೂರಿನಲ್ಲಿ ತಮಿಳು ನಟ ಚಿಯಾನ್ ವಿಕ್ರಮ್ ಅವರನ್ನು ಭೇಟಿಯಾದರು. ಕೆಲವು ಕ್ಯಾಂಡಿಡ್ ಚಿತ್ರಗಳನ್ನು ಹಂಚಿಕೊಂಡ ರಿಷಬ್, ನಟನಾಗಿ ತನ್ನ ಪ್ರಯಾಣದಲ್ಲಿ ತನಗೆ ಸ್ಫೂರ್ತಿ ನೀಡಿದ ವಿಕ್ರಮ್ ಅವರನ್ನು ಭೇಟಿಯಾಗಲು 24 ವರ್ಷಗಳೇ ಬೇಕಾಯ್ತು ಎಂದು ಬರೆದುಕೊಂಡಿದ್ದಾರೆ. ಚಿಯಾನ್ ವಿಕ್ರಮ್ ಅವರು ಪಾ ರಂಜಿತ್ ನಿರ್ದೇಶನದ ತಮ್ಮ ಮುಂಬರುವ ಚಿತ್ರ ‘ತಂಗಾಲನ್’ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಆಗ ರಿಷಬ್‌ ಅವರನ್ನು ನಟ ಭೇಟಿಯಾಗಿದ್ದಾರೆ.

ಆಗಸ್ಟ್ 6 ರಿಷಬ್ ಶೆಟ್ಟಿ ಜೀವನದಲ್ಲಿ ಮರೆಯಲಾಗದ ದಿನವಾಗಿದೆ. ಎಕ್ಸ್ ಪೇಜ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ರಿಷಬ್, “ನಟನಾಗುವಾಗ ನನ್ನ ಪ್ರಯಾಣದಲ್ಲಿ, ವಿಕ್ರಮ್ ಸರ್ ಯಾವಾಗಲೂ ನನಗೆ ಸ್ಫೂರ್ತಿಯಾಗಿದ್ದರು. 24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂದು ವಿಕ್ರಮ್‌ ಅವರನ್ನು ಭೇಟಿಯಾದೆ. ಹೀಗಾಗಿ ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು, ತಂಗಲಾನ್‌ ಸಿನಿಮಾಗೆ ಶುಭ ಹಾರೈಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

‘ತಂಗಾಲನ್’ ಬಿಡುಗಡೆಗೆ ಮುನ್ನ, ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಬಂದಿತ್ತು. ಈ ಹಿಂದೆ, ತಯಾರಕರು ಹೈದರಾಬಾದ್ ಮತ್ತು ಚೆನ್ನೈನಲ್ಲಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಬೆಂಗಳೂರು ಈವೆಂಟ್ ಆಗಸ್ಟ್ 6 ರಂದು ನಡೆದಿದ್ದು, ತಂಡ ಈಗ ಮುಂಬೈ ಮತ್ತು ಕೊಚ್ಚಿಗೆ ತೆರಳಲಿದೆ.

ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ’ ಪ್ರೀಕ್ವೆಲ್‌ನ ಚಿತ್ರೀಕರಣದಲ್ಲಿದ್ದಾರೆ, ಇದು ಡಿಸೆಂಬರ್ 2024 ರಲ್ಲಿ ಬಿಡುಗಡೆಯಾಗಲಿದೆ. ಚಿಯಾನ್ ವಿಕ್ರಮ್ ‘ತಂಗಲಾನ್’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಆಗಸ್ಟ್ 15 ರಂದು ಬಹು ಭಾಷೆಗಳಲ್ಲಿ ಥಿಯೇಟರ್‌ಗಳಲ್ಲಿ ಬರಲಿದೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ಚಿತ್ರದಲ್ಲಿ ಹಾಲಿವುಡ್ ನಟ ಡೇನಿಯಲ್ ಕ್ಯಾಲ್ಟಗಿರೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್‌ ವಿಕ್ರಮ್‌. ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಿದೆ. ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.

Continue Reading

ಸಿನಿಮಾ

Devara Part 1: ಕಿರಿಯ ವಯಸ್ಸಿನ ಜಾನ್ವಿ ಕಪೂರ್‌ ಜತೆ ರೊಮ್ಯಾನ್ಸ್‌ ; ಟ್ರೋಲ್‌ಗೆ ಗುರಿಯಾದ ಜೂನಿಯರ್ ಎನ್‌ಟಿಆರ್!

ದೇವರ ಭಾಗ- 1 (Devara Part-1) ಚಿತ್ರದ ಹೊಸ ಹಾಡು ಬಿಡುಗಡೆಯಾಗಿದ್ದು, ಇದರಲ್ಲಿ ಜೂನಿಯರ್ ಎನ್‌ಟಿಆರ್ ತಮಗಿಂತ 14 ವರ್ಷ ಚಿಕ್ಕವಳಾದ ಜಾನ್ವಿಯನ್ನು ರೊಮ್ಯಾನ್ಸ್ ಮಾಡುತ್ತಿರುವುದಕ್ಕೆ ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. ಈ ಜೋಡಿ ನೋಡಲು ತುಂಬಾ ವಿಚಿತ್ರವಾಗಿದೆ ಎಂಬುದಾಗಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

By

Devara Part 1
Koo

ಜೂನಿಯರ್ ಎನ್‌ಟಿಆರ್ (Jr NTR) ಮತ್ತು ಜಾನ್ವಿ ಕಪೂರ್ (Janhvi Kapoor) ಅಭಿನಯದ ʼದೇವರ ಭಾಗ-1ʼ (Devara Part 1) ಚಿತ್ರದ ಹೊಸ ಹಾಡನ್ನು (new song) ಬಿಡುಗಡೆ ಮಾಡಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗೆ, ಗೇಲಿಗೆ ಗುರಿಯಾಗಿದೆ. ಚುಟ್ಟಮಲ್ಲೆ ಚುಟ್ಟೆಸ್ಟಾಂಡಿ ತುಂಟರಿಚಿಪು.. ಹಾಡಿನ ವಿಡಿಯೋದ ಬಗ್ಗೆ ಸಾಕಷ್ಟು ನೆಗೆಟಿವ್ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಈ ಮ್ಯೂಸಿಕ್ ವಿಡಿಯೋದಲ್ಲಿ ಜೂನಿಯರ್ ಎನ್‌ಟಿಆರ್ ತಮಗಿಂತ 14 ವರ್ಷ ಚಿಕ್ಕವಳಾದ ಜಾನ್ವಿಯನ್ನು ರೊಮ್ಯಾನ್ಸ್ ಮಾಡುತ್ತಿರುವುದನ್ನು ಕಾಣಬಹುದು. ಇವರಿಬ್ಬರ ಜೋಡಿಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಟ್ರೋಲ್ ಮಾಡಿದ್ದಾರೆ. ಈ ಜೋಡಿ ನೋಡಲು ತುಂಬಾ ವಿಚಿತ್ರವಾಗಿದೆ ಎಂದು ಹೇಳಿದ್ದಾರೆ.

ಈ ಜೋಡಿಯು ತುಂಬಾ ವಿಚಿತ್ರವಾಗಿ ಕಾಣುತ್ತದೆ. ವಯಸ್ಸಿನ ಅಂತರವು ಎದ್ದು ಕಾಣುತ್ತಿದೆ. ರೆಡ್ಡಿಟ್ ಬಳಕೆದಾರರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಈ ಸಂಗೀತ ವಿಡಿಯೋವನ್ನು ಹಂಚಿಕೊಂಡು “ದಯವಿಟ್ಟು ಜೂನಿಯರ್ ಎನ್‌ಟಿಆರ್‌ಗೆ ಹೀಗೆ ಮಾಡಬೇಡಿ” ಎಂದು ಹೇಳಿದ್ದಾರೆ. “ನಾಟು ನಾಟು” ಅನಂತರ ಇದು “ಡೋಂಟ್-ಡು ಡೋಂಟ್-ಡು” ಎಂಬಂತೆ ಭಾಸವಾಗುತ್ತದೆ ಎಂಬುದಾಗಿ ಮತ್ತೊಬ್ಬರು ಕಾಮೆಂಟ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಇದು ತುಂಬಾ ಅಹಿತಕರವಾಗಿದೆ. ಇವರಿಬ್ಬರ ನಡುವಿನ ವಯಸ್ಸಿನ ಅಂತರವು ದೊಡ್ಡದಾಗಿದೆ ಎಂದು ಅವರಿಗೆ ತಿಳಿದಿದೆ ಮತ್ತು ಅದು ಯಾರಿಗಾದರೂ ಅನಾನುಕೂಲತೆಯನ್ನು ಉಂಟು ಮಾಡುತ್ತದೆ ಎಂದು ಮತ್ತೊಬ್ಬರು ತಿಳಿಸಿದ್ದಾರೆ.

ಹಿಪ್ ಥ್ರಸ್ಟಿಂಗ್, ಸೊಂಟದ ಕ್ಲೋಸ್ ಅಪ್‌ಗಳು ಮೊದಲಾದವುಗಳಿಂದ ಭಾರತೀಯ ಚಲನಚಿತ್ರಗಳು ಯಾವಾಗ ಮುಂದಕ್ಕೆ ಹೋಗುತ್ತವೆಯೋ? ಇದು ತುಂಬಾ ಆತಂಕಕಾರಿಯಾಗಿದೆ. ನಾವು ಯಾವಾಗ ಉತ್ತಮ, ಸಂವೇದನಾಶೀಲ ಚಲನಚಿತ್ರಗಳನ್ನು ಮಾಡುತ್ತೇವೆ ಎಂದು ಇನ್ನೊಬ್ಬ ಬಳಕೆದಾರರು ಹೇಳಿಕೊಂಡಿದ್ದಾರೆ.


ಚುಟ್ಟಮಲ್ಲೆ ಹಾಡಿಗೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ಇದು ಚಿತ್ರದ ಎರಡನೇ ಹಾಡು. ಚಿತ್ರದ ಮೊದಲ ಸಿಂಗಲ್ ಫಿಯರ್ ಸಾಂಗ್ ಈಗಾಗಲೇ ಹೆಚ್ಚಿನ ನಿರೀಕ್ಷೆಗಳನ್ನು ಉಂಟು ಮಾಡಿತ್ತು. ಅನಿರುದ್ಧ್ ಸಂಗೀತ ಸಂಯೋಜನೆಯ ಜೈಲರ್ ಚಿತ್ರದ ಹಿಟ್ ಟ್ರ್ಯಾಕ್ ಆಗಿರುವ ಹುಕುಂನ ಜನಪ್ರಿಯತೆಯನ್ನು ಇದು ಮೀರಿಸುತ್ತದೆ ಎಂದು ನಿರ್ಮಾಪಕ ನಾಗ ವಂಶಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Actor Yash: ಧರ್ಮಸ್ಥಳದಲ್ಲಿ ರಾಕಿಂಗ್ ಸ್ಟಾರ್ ಯಶ್, ಟಾಕ್ಸಿಕ್‌ ಶೂಟಿಂಗ್‌ಗೂ ಮುನ್ನ ಟೆಂಪಲ್‌ ರನ್

ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರುವ ಇದು ಸೆಪ್ಟೆಂಬರ್ 27ರಂದು ಬಿಡುಗಡೆಯಾಗಲು ಸಿದ್ಧವಾಗುತ್ತಿದೆ. ಕೊರಟಾಲ ಶಿವ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್, ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ನಟಿಸಿದ್ದಾರೆ.


ಇದು ಜಾನ್ವಿ ಮತ್ತು ಸೈಫ್ ಅವರ ಮೊದಲ ತೆಲುಗು ಚಿತ್ರವಾಗಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ ಟಿಆರ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಸುಧಾಕರ್ ಮಿಕ್ಕಿಲಿನೇನಿ ಮತ್ತು ಕೊಸರಾಜು ಹರಿಕೃಷ್ಣ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.

Continue Reading

ಕರ್ನಾಟಕ

Devara Movie: ಬಂದಿದೆ ʼದೇವರʼ ಸೆಕೆಂಡ್‌ ಸಾಂಗ್‌; ಕನ್ನಡದಲ್ಲೂ ಇದೆ ʼಸ್ವಾತಿಮುತ್ತೇ ಸಿಕ್ಕಂಗೈತೆʼ ರೊಮ್ಯಾಂಟಿಕ್‌ ಹಾಡು!

Devara Movie: ಟಾಲಿವುಡ್ ನಟ ಜೂನಿಯರ್‌ ಎನ್‌ಟಿಆರ್‌ ನಟನೆಯ ʼದೇವರʼ ಸಿನಿಮಾದ ಎರಡನೇ ಹಾಡು ಬಿಡುಗಡೆ ಆಗಿದೆ. ಅನಿರುದ್ಧ ರವಿಚಂದರ್‌ ಸಂಗೀತ ನೀಡಿರುವ, ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಈ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಯುವಸುಧಾ ಆರ್ಟ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ. ಈ ಚಿತ್ರದ ನಿರ್ಮಾಪಕರು.

VISTARANEWS.COM


on

Tollywood actor Junior NTR starrer Devara movie second song release
Koo

ಬೆಂಗಳೂರು: ಟಾಲಿವುಡ್ ನಟ ಜೂನಿಯರ್‌ ಎನ್‌ಟಿಆರ್‌ ನಟನೆಯ ʼದೇವರʼ ಸಿನಿಮಾ (Devara Movie) ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಇದೀಗ ಇದೇ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದೆ. ಅನಿರುದ್ಧ ರವಿಚಂದರ್‌ ಸಂಗೀತ ನೀಡಿರುವ, ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.

ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಈ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಯುವಸುಧಾ ಆರ್ಟ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ. ಈ ಚಿತ್ರದ ನಿರ್ಮಾಪಕರು. ದೇವರ ಸಿನಿಮಾ ಮೂಲಕ, ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌ ಸೌತ್‌ಗೆ ಎಂಟ್ರಿಕೊಟ್ಟಿದ್ದಾರೆ. ಖಳ ನಟನಾಗಿ ಸೈಫ್‌ ಅಲಿಖಾನ್‌ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Paris Olympics 2024 : ನೀರಜ್ ಚೋಪ್ರಾ ಜಾವೆಲಿನ್ ಎಸೆತ ಸೇರಿದಂತೆ ಆ.6ರಂದು ಪ್ಯಾರಿಸ್​ ಒಲಿಂಪಿಕ್ಸ್​​ನಲ್ಲಿ ಭಾರತೀಯ ಸ್ಪರ್ಧಿಗಳು ಇವರು…

ಈಗಾಗಲೇ ಇದೇ ದೇವರ ಸಿನಿಮಾದಿಂದ ಫಿಯರ್‌ ಹಾಡು ಬಿಡುಗಡೆಯಾಗಿದೆ. ಆ ಹಾಡಿನ ಮೂಲಕ ಪ್ರಚಾರ ಕೆಲಸ ಆರಂಭಿಸಿದ್ದ ಚಿತ್ರತಂಡಕ್ಕೆ ಮೊದಲ ಹಾಡೇ ದೊಡ್ಡ ಆಹ್ವಾನ ನೀಡಿತ್ತು. ಇದೀಗ ಇದೇ ಸಿನಿಮಾದ ಅನಿರುದ್ಧ ರವಿಚಂದರ್‌ ಸಂಗೀತ ನೀಡಿರುವ ಎರಡನೇ ಹಾಡು ಬಿಡುಗಡೆಯಾಗಿದೆ. ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್‌ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.

ಈ ಹಾಡಿನಲ್ಲಿ ಜಾಹ್ನವಿ ಕಪೂರ್‌ ಗ್ಲಾಮರಸ್‌ ಅವತಾರದಲ್ಲಿ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾಹ್ನವಿ ಜೋಡಿಯ ಕೆಮಿಸ್ಟ್ರಿಯೂ ನೋಡುಗರ ಕಣ್ಣರಳಿಸುವಂತಿದೆ. ವರದರಾಜ್‌ ಚಿಕ್ಕಬಳ್ಳಾಪುರ ಈ ಹಾಡಿಗೆ ಬಾಸ್ಕೋ ಮಾರ್ಟಿಸ್ ಅವರ ನೃತ್ಯ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.

ಇದನ್ನೂ ಓದಿ: KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

ಈ ಹೈ-ಆಕ್ಟೇನ್ ದೇವರ ಸಿನಿಮಾ ಎರಡು ಭಾಗಗಳ ರಿಲೀಸ್‌ ಆಗಲಿದೆ, ಮೊದಲ ಭಾಗ ಸೆಪ್ಟೆಂಬರ್ 27 ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ರಿಲೀಸ್‌ ಆಗಲಿದೆ. ಇನ್ನು ಸಿನಿಮಾದಲ್ಲಿ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ, ಆರ್.ರತ್ನವೇಲು ಛಾಯಾಗ್ರಹಣ, ಸಾಬು ಸಿರಿಲ್ ಪ್ರೊಡಕ್ಷನ್‌ ಡಿಸೈನ್‌ ಮಾಡಿದ್ದಾರೆ.

Continue Reading
Advertisement
National Handloom day 2024
ಫ್ಯಾಷನ್37 mins ago

National Handloom day 2024: ಕರ್ನಾಟಕದ ಹೆಮ್ಮೆಯ ವಿಶ್ವ ಪ್ರಸಿದ್ಧ ಹ್ಯಾಂಡ್‌ ಲೂಮ್‌ ಸೀರೆಗಳಿವು

Viral Video
Latest47 mins ago

Viral Video: 11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

Vinesh Phogat
ಕ್ರೀಡೆ59 mins ago

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

Lalbagh Flower Show
ಕರ್ನಾಟಕ1 hour ago

Lalbagh Flower Show: ಲಾಲ್‌ಬಾಗ್ ಫ್ಲವರ್‌ ಶೋ; ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

Viral Video
Latest1 hour ago

Viral Video: ರೀಲ್ಸ್‌ಗಾಗಿ ಬೆಡ್‌ರೂಮ್‌ನಲ್ಲಿ ಅರೆನಗ್ನ ಗೆಳತಿ ಕೈಗೆ ಪಿಸ್ತೂಲ್ ಕೊಟ್ಟ ಪೊಲೀಸ್ ಅಧಿಕಾರಿ!

Viral News
Latest2 hours ago

Viral News: ಚಹಾ ಮಾರಾಟದಿಂದ ಇವರಿಗೆ ಪ್ರತಿ ತಿಂಗಳು 2 ಲಕ್ಷ ರೂ. ಆದಾಯ!

Viral video
ವೈರಲ್ ನ್ಯೂಸ್2 hours ago

Viral Video: ಐದನೇ ಮಹಡಿಯಿಂದ ಬಾಲಕಿ ಮೇಲೆ ಬಿದ್ದ ಶ್ವಾನ; ಆಮೇಲೆ ಆಗಿದ್ದೇನು? ವಿಡಿಯೋ ಇದೆ

OTT Releases
ಸಿನಿಮಾ2 hours ago

OTT Releases: ಇಂಡಿಯನ್ 2, ಟರ್ಬೊ ಸೇರಿದಂತೆ ಹಲವು ಹೊಸ ಚಿತ್ರಗಳು ಈ ವಾರ ಒಟಿಟಿಯಲ್ಲಿ!

Gowri Movie Saanya Iyer Samar Lankesh eating dosa with together
ಸಿನಿಮಾ2 hours ago

Gowri Movie: ಸಮರ್ಜಿತ್‌ಗೆ ನಾಚಿಕೆಯಿಂದ ದೋಸೆ ತಿನ್ನಿಸಿದ ಸಾನ್ಯಾ ಅಯ್ಯರ್; ಇದೇನು ಡೇಟಿಂಗಾ ಎಂದು ಪ್ರಶ್ನೆ ಇಟ್ಟ ಫ್ಯಾನ್ಸ್!

Self Harming
ಕರ್ನಾಟಕ2 hours ago

Self Harming: ಇನ್‍ಸ್ಟಾಗ್ರಾಂ ಪ್ರೇಯಸಿ ಕೈಕೊಟ್ಟಿದ್ದಕ್ಕೆ ನೇಣಿಗೆ ಶರಣಾದ ಯುವಕ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌