Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು? - Vistara News

ಕ್ರೀಡೆ

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Vinesh Phogat: ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಪ್ಪನ(ಬ್ರಿಜ್​ ಭೂಷಣ್ ಶರಣ್​ ಸಿಂಗ್​) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುಂತೆ ಮಾಡಿದ್ದ ವಿನೇಶ್ ಫೋಗಟ್(Vinesh Phogat)​ ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಅನರ್ಹಗೊಂಡ ಬಗ್ಗೆ ಬ್ರಿಜ್​ ಭೂಷಣ್ ಪುತ್ರ(Brij Bhushan’s son Karan), ಬಿಜೆಪಿ ಸಂಸದ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಪ್ರತಿಕ್ರಿಯೆ ನೀಡಿದ್ದಾರೆ.

​ಸಂಸತ್​ ಅಧಿವೇಶನಕ್ಕೆ ತೆರಳುತ್ತಿದ್ದ ಕರಣ್‌ ಭೂಷಣ್‌ ಸಿಂಗ್‌ ಮಾಧ್ಯಮದ ಜತೆ ಮಾತನಾಡುವ ವೇಳೆ, “ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್(Kaiserganj) ಲೋಕಸಭಾ ಕ್ಷೇತ್ರದಿಂದ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ತಂದೆ ಬ್ರಿಜ್​ ಭೂಷಣ್(Brij Bhushan)​ 2019ರ ಲೋಕಸಭಾ ಚುನಾವಣೆಯಲ್ಲಿ, ಕೈಸರ್‌ಗಂಜ್‌ನಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. 

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಲಾಗಿತ್ತು.

ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಇದನ್ನೂ ಓದಿ Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್​ ಫೈನಲ್​ ಪಂದ್ಯಕ್ಕೂ ಮುನ್ನ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

IND vs SL 3rd ODI: ಮೊದಲ ಪಂದ್ಯ ರೋಚಕ ಟೈ ಆದರೆ, ಎರಡನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು. ಈಗ ಮೂರನೇ ಪಂದ್ಯವನ್ನೂ ಸೋಲುವ ಮೂಲಕ ಭಾರತ ತಂಡವು ಏಕದಿನ ಸರಣಿಯನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದೆ. ಶ್ರೀಲಂಕಾ ತಂಡವು ಭಾರತದ ವಿರುದ್ಧ 27 ವರ್ಷಗಳ ಬಳಿಕ ಮೊದಲ ಬಾರಿಗೆ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

VISTARANEWS.COM


on

IND vs SL 3rd ODI
Koo

ಕೊಲೊಂಬೊ: ಟಿ-20 ವಿಶ್ವಕಪ್‌, ಶ್ರೀಲಂಕಾ ವಿರುದ್ಧದ ಟಿ-20 ಸರಣಿ ಗೆಲುವಿನ ಅತ್ಯುತ್ಸಾಹದಲ್ಲಿದ್ದ ಭಾರತ ತಂಡಕ್ಕೆ ಶ್ರೀಲಂಕಾ ತಂಡವು ಏಕದಿನ ಸರಣಿಯಲ್ಲಿ (IND vs SL 3rd ODI) ಆಘಾತ ನೀಡಿದೆ. ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಬಳಗವನ್ನು 110 ರನ್‌ಗಳಿಂದ ಮಣಿಸುವ ಮೂಲಕ ಶ್ರೀಲಂಕಾ 27 ವರ್ಷಗಳ ಬಳಿಕ ಭಾರತದ ವಿರುದ್ಧ ಏಕದಿನ ಸರಣಿ ಗೆದ್ದ ದಾಖಲೆ ಬರೆಯಿತು.

ಶ್ರೀಲಂಕಾ ನೀಡಿದ 249 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತ ತಂಡವು 26.1 ಓವರ್‌ಗಳಲ್ಲಿ 138 ರನ್‌ಗಳಿಸಿ ಆಲೌಟ್‌ ಆಗುವ ಮೂಲಕ 110 ರನ್‌ಗಳಿಂದ ಸೋಲನುಭವಿಸಿತು. ಭಾರತದ ಪರ ರೋಹಿತ್‌ ಶರ್ಮಾ (35) ರನ್‌ ಗಳಿಸಿದ್ದು ಬಿಟ್ಟರೆ, ಉಳಿದ ಯಾವೊಬ್ಬ ಆಟಗಾರನೂ ನೆಲಕಚ್ಚಿ ಆಡಲಿಲ್ಲ. ವಿರಾಟ್‌ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದರು. ರಿಷಭ್‌ ಪಂತ್‌, ಶ್ರೇಯಸ್‌ ಅಯ್ಯರ್‌ ಕೂಡ ಭಾರತ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಲಿಲ್ಲ. ಶುಭಮನ್‌ ಗಿಲ್‌ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಇದರಿಂದಾಗಿ ಭಾರತ ಮೂರನೇ ಪಂದ್ಯವನ್ನು ಸೋತು, ಸರಣಿ ಬಿಟ್ಟುಕೊಡಬೇಕಾಯಿತು.

ಆವಿಷ್ಕ ಫರ್ನಾಂಡೋ ಭರ್ಜರಿ ಬ್ಯಾಟಿಂಗ್

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಶ್ರೀಲಂಕಾ, ಭರ್ಜರಿ ಆರಂಭ ಪಡೆಯಿತು. ಪಥುಮ್‌ ನಿಸಂಕಾ (45), ಆವಿಷ್ಕ ಫರ್ನಾಂಡೋ (96) ಹಾಗೂ ಕುಶಾಲ್‌ ಮೆಂಡಿಸ್‌ (59) ರನ್‌ಗಳ ನೆರವಿನಿಂದ ಒಂದು ಹಂತದಲ್ಲಿ ಶ್ರೀಲಂಕಾ 3 ವಿಕೆಟ್‌ಗೆ 183 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿತ್ತು. ಬೃಹತ್‌ ಮೊತ್ತ ಪೇರಿಸುವ ಸಾಧ್ಯತೆಯೂ ಇತ್ತು. ಆದರೆ, ನಂತರ ಬಂದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳ ದಾಳಿಗೆ ಸಿಲುಕಿ ವಿಕೆಟ್‌ ಒಪ್ಪಿಸಿದ ಕಾರಣ ಶ್ರೀಲಂಕಾ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 248 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಭಾರತದ ಪರ ರಿಯಾನ್‌ ಪರಾಗ್‌ 3 ವಿಕೆಟ್‌ ಕಬಳಿಸಿದರೆ, ಅಕ್ಷರ್‌ ಪಟೇಲ್‌, ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌ ಹಾಗೂ ಕುಲದೀಪ್‌ ಯಾದವ್‌ ಅವರು ತಲಾ ಒಂದು ವಿಕೆಟ್‌ ಪಡೆದರು. ಮೊದಲ ಪಂದ್ಯ ರೋಚಕ ಟೈ ಆದರೆ, ಎರಡನೇ ಪಂದ್ಯದಲ್ಲಿ ಭಾರತವು 32 ರನ್‌ಗಳಿಂದ ಸೋಲನುಭವಿಸಿತ್ತು.

ಸಂಕ್ಷಿಪ್ತ ಸ್ಕೋರ್‌

ಶ್ರೀಲಂಕಾ 50 ಓವರ್‌ಗಳಲ್ಲಿ 248/7

(ಆವಿಷ್ಕ ಫರ್ನಾಂಡೋ 96, ಕುಶಾಲ್‌ ಮೆಂಡಿಸ್‌ 59, ರಿಯಾನ್‌ ಪರಾಗ್‌ 54/3)

ಭಾರತ ಓವರ್‌ಗಳಲ್ಲಿ 130ಕ್ಕೆ ಆಲೌಟ್‌

(ರೋಹಿತ್‌ ಶರ್ಮಾ 35, ರಿಯಾನ್‌ ಪರಾಗ್‌ 30, ದುನಿತ್‌ ವೆಲ್ಲಲಾಗೆ 27/5)

ಇದನ್ನೂ ಓದಿ: Chuttamalle Song: ‘ಮಾನಿಕೆ ಮಾಗೆ ಹಿತೆ’ ಹಾಡಿನ ಟ್ಯೂನ್‌ ಕದ್ರಾ ಅನಿರುದ್ಧ ರವಿಚಂದರ್? ಶ್ರೀಲಂಕಾ ಕಂಪೋಸರ್‌ ಹೇಳೋದೇನು?

Continue Reading

ಕ್ರೀಡೆ

Paris Olympics: ನಾಳೆ ನೀರಜ್​ ಚೋಪ್ರಾ ಫೈನಲ್​ ಸ್ಪರ್ಧೆ; ಕಂಚಿನ ಪದಕಕ್ಕೆ ಹಾಕಿ ತಂಡ ಹೋರಾಟ

Paris Olympics: ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದ, ಭಾರತ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಸ್ಪರ್ಧಿಸಲಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಕುಸ್ತಿ ವಿಭಾಗದಲ್ಲಿ ಬುಧವಾರ ಐತಿಹಾಸಿಕ ಪದಕ ನಿರೀಕ್ಷೆಯಲ್ಲಿದ್ದ ಭಾರತೀಯರ ನಿರೀಕ್ಷೆಯೊಂದು ಹುಸಿಯಾಗಿದೆ. 50 ಕೆಜಿ ಮಹಿಳಾ ವಿಭಾಗದ ಕುಸ್ತಿ ಫೈನಲ್​ ಪಂದ್ಯದಲ್ಲಿ ಬುಧವಾರ ರಾತ್ರಿ ಕಣಕ್ಕಿಳಿಯಬೇಕಿದ್ದ ವಿನೇಶ್​ ಫೋಗಟ್​ ಅವರ ತೂಕ ವಿಭಾಗದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ಅವರನ್ನು ಈ ಸ್ಪರ್ಧೆಯಿಂದ ಅನರ್ಹಗೊಳಿಸಲಾಯಿತು. ಹೀಗಾಗಿ ಭಾರತ ಪದಕಕೊಂದನ್ನು ಕಳೆದುಕೊಂಡಿತು. ಇದೀಗ ನಾಳೆ(ಗುರುವಾರ) ನಡೆಯುವ ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಸ್ಪರ್ಧೆಯಲ್ಲಿ ಭಾರತ ಒಟ್ಟು ಮೂರು ಪದಕ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿದೆ. ವೇಳಾಪಟ್ಟಿ ಹೀಗಿದೆ.

ಐತಿಹಾಸಿಕ ಪದಕ ನಿರೀಕ್ಷೆಯಲ್ಲಿ ಸಾಬ್ಳೆ


ಒಲಿಂಪಿಕ್ಸ್‌ ಇತಿಹಾಸದಲ್ಲಿ 3,000 ಮೀ. ಸ್ಟೀಪಲ್‌ಚೇಸ್‌ ಸ್ಪರ್ಧೆಯಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯನೆಂಬ ದಾಖಲೆ ಬರೆದಿರುವ ಅಥ್ಲೀಟ್‌ ಅವಿನಾಶ್‌ ಮುಕುಂದ್‌ ಸಾಬ್ಲೆ(Avinash Sable) ಗುರುವಾರ ರಾತ್ರಿ 1.13 ಗಂಟೆಗೆ ನಡೆಯುವ ಫೈನಲ್​ ಪಂದ್ಯದಲ್ಲಿ ಐತಿಹಾಸಿಕ ಪದಕ ಗೆಲ್ಲುವ ಇರಾದೆಯೊಂದಿಗೆ ಓಟ ಆರಂಭಿಸಲಿದ್ದಾರೆ. ಸೋಮವಾರ ನಡೆದಿದ್ದ 2ನೇ ವಿಭಾಗದ ಹೀಟ್‌ನಲ್ಲಿ ಸಾಬ್ಲೆ 8:15.43 ನಿಮಿಷಗಳಲ್ಲಿ ಸ್ಪರ್ಧೆ ಮುಗಿಸಿ 5ನೇ ಸ್ಥಾನಿಯಾಗಿದ್ದರು. ಕಳೆದ ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಅವರು 8.09.91 ನಿಮಿಷಗಳ ಸಾಧನೆಗೈದಿದ್ದರು.

ಚಿನ್ನದ ನಿರೀಕ್ಷೆಯಲ್ಲಿ ನೀರಜ್​


ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದ, ಭಾರತ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಾರಿಯೂ ಚಿನ್ನದ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಮಂಗಳವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀ. ದೂರ ಜಾವೆಲಿನ್​ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದ್ದರು. ನೀರಜ್​ ಅವರೇ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಅವರ ಮೇಲೆ ನಿರೀಕ್ಷೆ ಇರಿಸಲಾಗಿದೆ. ಜರ್ಮನಿಯ ಜೂಲಿಯನ್ ವೆಬ್ಬರ್, ಪಾಕಿಸ್ತಾನದ ಅರ್ಷದ್ ನದೀಮ್, ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಕಂಚಿನ ಪದಕಕ್ಕೆ ಹಾಕಿ ತಂಡ ಹೋರಾಟ


ಮಂಗಳವಾರ ನಡೆದಿದ್ದ ಪುರುಷರ ಹಾಕಿ ಸೆಮಿಫೈನಲ್​ ಪಂದ್ಯದಲ್ಲಿ ಜರ್ಮನಿ ವಿರುದ್ಧ 3-2 ಅಂತರದಿಂದ ಸೋಲುವ ಮೂಲಕ 44 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸುವ ಅವಕಾಶ ಕಳೆದುಕೊಂಡ ಭಾರತ ತಂಡ ನಾಳೆ(ಗುರುವಾರ) ನಡೆಯುವ ಕಂಚಿನ ಪದಕದ ಹೋರಾಟದಲ್ಲಿ ಸ್ಪೇನ್​ ವಿರುದ್ಧ ಆಡಲಿದೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದಿದ್ದ ಭಾರತ ಈ ಬಾರಿಯೂ ಕಂಚಿನ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ Paris Olympics 2024 : ಕಂಚು ಕಳೆದುಕೊಂಡ ಲಕ್ಷ್ಯ ಸೇನ್​​; 2008ರ ಬಳಿಕ ಮೊದಲ ಬಾರಿಗೆ ಭಾರತಕ್ಕೆ ಬ್ಯಾಡ್ಮಿಂಟನ್​ನಲ್ಲಿ ಪದಕವಿಲ್ಲ

ವೇಳಾಪಟ್ಟಿ ಹೀಗಿದೆ


3,000 ಮೀ. ಸ್ಟೀಪಲ್‌ಚೇಸ್‌ ಫೈನಲ್​:
ಅವಿನಾಶ್‌ ಸಾಬ್ಲೆ. (ಆರಂಭ; ರಾತ್ರಿ 1.13)

ಗಾಲ್ಫ್​

ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ರೌಂಡ್ 2; ಅದಿತಿ ಅಶೋಕ್​, ದಿಶಾ ದಾಗರ್. (ಆರಂಭ: ಮಧ್ಯಾಹ್ನ 12.30)

ಹಾಕಿ

ಪುರುಷರ ಕಂಚಿನ ಸ್ಪರ್ಧೆ; ಭಾರತ vs ಸ್ಟೇನ್. (ಆರಂಭ​; ಸಂಜೆ 5.30)

ಜಾವೆಲಿನ್​ ಫೈನಲ್​


ನೀರಜ್​ ಚೋಪ್ರಾ
. ಆರಂಭ(ರಾತ್ರಿ 11.55)

Continue Reading

ಕ್ರೀಡೆ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

Vinesh Phogat:‌ 52 ಕೆ.ಜಿ ತೂಕ ಹೊಂದಿದ್ದ ವಿನೇಶ್‌ ಫೋಗಟ್‌ ಅವರು 2 ಕೆ.ಜಿ ತೂಕ ಇಳಿಸಲು ಇಡೀ ರಾತ್ರಿ ವರ್ಕೌಟ್‌ ಮಾಡಿದ್ದು, ನಿರ್ಜಲೀಕರಣದಿಂದಾಗಿ ಬೆಳಗ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಿದ ಬೆನ್ನಲ್ಲೇ, ರಾತ್ರೋರಾತ್ರಿ 2 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹದಲ್ಲಿ ಏನೆಲ್ಲ ಆಗುತ್ತದೆ, ವಿನೇಶ್‌ ಫೋಗಟ್‌ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇದಕ್ಕೆ ತಜ್ಞರು ಏನು ಹೇಳುತ್ತಾರೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಆಘಾತವಾಗಿದೆ. ಕುಸ್ತಿಯಲ್ಲಿ ಫೈನಲ್‌ ತಲುಪಿ ಇತಿಹಾಸ ಸೃಷ್ಟಿಸಿದ್ದ ಅವರು ಇನ್ನೇನು ಚಿನ್ನದ ಪದಕಕ್ಕಾಗಿ ಕಾದಾಡಬೇಕು ಎನ್ನುವರಷ್ಟರಲ್ಲಿಯೇ ದೇಹದ ತೂಕ 100 ಗ್ರಾಂ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಿರುವುದು ಕುಸ್ತಿಪಟುವಿನ ಜತೆಗೆ ಇಡೀ ದೇಶದ ಜನರಿಗೆ ಅಸಮಾಧಾನ ಉಂಟಾಗಿದೆ. ಮತ್ತೊಂದೆಡೆ, 52 ಕೆ.ಜಿ ತೂಕ ಹೊಂದಿದ್ದ ವಿನೇಶ್‌ ಫೋಗಟ್‌ ಅವರು 2 ಕೆ.ಜಿ ತೂಕ ಇಳಿಸಲು ಇಡೀ ರಾತ್ರಿ ವರ್ಕೌಟ್‌ ಮಾಡಿದ್ದು, ನಿರ್ಜಲೀಕರಣದಿಂದಾಗಿ ಬೆಳಗ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಹೀಗೆ, ರಾತ್ರೋರಾತ್ರಿ ದೇಹದ ತೂಕವನ್ನು 2-3 ಕೆ.ಜಿ ಇಳಿಸಿದರೆ ದೇಹಕ್ಕೆ ಏನಾಗುತ್ತದೆ ಎಂಬುದರ ಕುರಿತು ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಜ್ಞರು ಮಾಹಿತಿ ನೀಡಿದ್ದಾರೆ.

ತಜ್ಞರು ಹೇಳುವುದೇನು?

‘ಒಂದೇ ರಾತ್ರಿಯಲ್ಲಿ ದೇಹದ ತೂಕವನ್ನು 2-3 ಕೆ.ಜಿ ಇಳಿಸುವುದು ಸಾಧ್ಯವೇ ಇಲ್ಲ ಅಂತಲ್ಲ. ಆದರೆ, ಹಾಗೆ ಮಾಡುವುದು ತುಂಬ ಅಪಾಯಕಾರಿ’ ಎಂದು ದೆಹಲಿಯ ಮಹಾರಾಜ ಅಗ್ರಸೇನ ಆಸ್ಪತ್ರೆಯ ಔಷಧ ತಜ್ಞ ಡಾ.ಸಂಜಯ್‌ ಗುಪ್ತಾ ತಿಳಿಸಿದ್ದಾರೆ. ಮತ್ತೊಬ್ಬ ಔಷಧ ತಜ್ಞರಾದ ಡಾ.ಮಂಜೀತಾ ನಾಥ್‌ ದಾಸ್‌ ಅವರು ಕೂಡ ಇದನ್ನೇ ಉಚ್ಚರಿಸಿದ್ದು, “ಹಾಗೆ ಮಾಡುವುದು ಪ್ರಾಣಕ್ಕೂ ಅಪಾಯಕಾರಿ” ಎಂದಿದ್ದಾರೆ.

“ನಮ್ಮ ದೇಹದ ತೂಕವು ಮೂಳೆ, ಮಾಂಸ ಹಾಗೂ ಬೊಜ್ಜನ್ನು ಆಧರಿಸಿರುತ್ತದೆ. ಆದರೆ, ನೀರು ಕುಡಿಯದೆ, ಉಪ್ಪು ಸೇವಿಸದೆ, ಕಾರ್ಬ್ಸ್‌ ಹಾಗೂ ಪ್ರೊಟೀನ್‌ಗಳನ್ನು ಮಾತ್ರ ಸೇವಿಸಿ ಇಡೀ ರಾತ್ರಿ ವರ್ಕೌಟ್‌ ಮಾಡಿದರೆ, 2-3 ಕೆ.ಜಿ ತೂಕ ಇಳಿಸಿದರೆ ದೇಹ ತಡೆದುಕೊಳ್ಳುವುದಿಲ್ಲ. ನಿರ್ಜಲೀಕರಣವು ದೇಹವನ್ನು ಬಾಧಿಸುತ್ತದೆ. ಅದರಲ್ಲೂ 29 ವರ್ಷದ ವಿನೇಶ್‌ ಫೋಗಟ್‌ ಅವರು ಇಂತಹ ದುಸ್ಸಾಹಸಕ್ಕೆ ಕೈಹಾಕಿದ್ದು ಅವರ ದೇಹದ ಮೇಲೆ ಪರಿಣಾಮ ಬೀರಿದೆ” ಎಂದು ಅವರು ತಿಳಿಸಿದ್ದಾರೆ.

ತೂಕ ಕಳೆದುಕೊಳ್ಳುವ ಪ್ರಸ್ತಾಪವೇ ಇಲ್ಲ

“ನೀರನ್ನೂ ಸೇವಿಸದೆ ರಾತ್ರಿಯಿಡೀ ವರ್ಕೌಟ್‌ ಮಾಡಿದರೆ ದೇಹವು ನಿರ್ಜಲೀಕರಣದಿಂದ ಬಸವಳಿದುಹೋಗುತ್ತದೆ. ಹಾಗೆ ಮಾಡಿದವರು ಬೆಳಗ್ಗೆ ಎದ್ದು ತಿರುಗಾಡಲು ಕೂಡ ಆಗುವುದಿಲ್ಲ. ಹೀಗೆ, ರಾತ್ರೋರಾತ್ರಿ ನೀರು ಕುಡಿಯದೆ, ವರ್ಕೌಟ್‌ ಮಾಡಿ, ತೂಕ ಕಳೆದುಕೊಳ್ಳುವಂತೆ ಸಾಮಾನ್ಯ ಜನರಿಗಾಗಲಿ, ಅಥ್ಲೀಟ್‌ಗಳಿಗಾಗಲಿ ವೈದ್ಯಕೀಯವಾಗಿ ಅನುಮತಿ ನೀಡಲು ಸಾಧ್ಯವೇ ಇಲ್ಲ” ಎಂಬುದಾಗಿ ಡಾ.ದಾಸ್‌ ತಿಳಿಸಿದ್ದಾರೆ.

ರಾತ್ರಿಯಿಡೀ ವರ್ಕೌಟ್‌ ಮಾಡುವುದು, ನೀರು ಸೇವಿಸದಿರುವುದರಿಂದ, ಕ್ಯಾಲರಿ ತೆಗೆದುಕೊಳ್ಳದಿರುವುದರಿಂದ ದೇಹದಲ್ಲಿ ಬ್ಲಡ್‌ ಶುಗರ್‌ ಲೆವೆಲ್‌ 70 ಮಿಲಿಗ್ರಾಂಗೆ (ಪ್ರತಿ ಡೆಸಿಲಿಟರ್‌ಗೆ) ಇಳಿಯಲಿದೆ. ದೇಹದ ಶಕ್ತಿಯ ಮೂಲವಾದ ಗ್ಲಿಕೋಜೆನ್‌ ಸಂಗ್ರಹವು ಕುಸಿತವಾಗುತ್ತದೆ. ಇದರಿಂದಾಗಿ ದೇಹವು ನಿಶ್ಯಕ್ತಿಗೊಳ್ಳುತ್ತದೆ ಎಂಬುದಾಗಿ ಡಾ.ಗುಪ್ತಾ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Continue Reading

ಪ್ರಮುಖ ಸುದ್ದಿ

Vinesh Phogat: ವಿನೇಶ್‌ ಫೋಗಟ್‌ ಅನರ್ಹ; ಕ್ರಮ ಕೈಗೊಳ್ಳುವಂತೆ ಒಲಿಂಪಿಕ್ಸ್‌ ಅಸೋಸಿಯೇಷನ್‌ಗೆ ಮೋದಿ ಸೂಚನೆ!

Vinesh Phogat: 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹಗೊಳಿಸಲಗಿದೆ. ಇದಕ್ಕೆ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವೀಯ ತಿಳಿಸಿದ್ದಾರೆ.

VISTARANEWS.COM


on

Vinesh Phogat
Koo

ದೆಹಲಿ/ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರು ಅನರ್ಹಗೊಂಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿನೇಶ್‌ ಫೋಗಟ್‌ ಪರವಾಗಿ ದೇಶವೇ ಒಗ್ಗೂಡಿ ನಿಂತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ವಿನೇಶ್‌ ಫೋಗಟ್‌ ಪರವಾಗಿ ನಿಂತಿದ್ದಾರೆ. ಇದರ ಬೆನ್ನಲ್ಲೇ, ಭಾರತೀಯ ಒಲಿಂಪಿಕ್ಸ್‌ ಅಸೋಷಿಯೇಷನ್‌ (IOA) ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ಮಾಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ಪಿ.ಟಿ.ಉಷಾ ಅವರಿಗೆ ನರೇಂದ್ರ ಮೋದಿ ಅವರು ಕರೆ ಮಾಡಿರುವ ಕುರಿತು ಕೇಂದ್ರ ಕ್ರೀಡಾ ಸಚಿವ ಮನ್ಸುಖ್‌ ಮಂಡಾವಿಯ ಅವರು ಸಂಸತ್‌ನಲ್ಲಿ ಮಾಹಿತಿ ನೀಡಿದ್ದಾರೆ. “50 ಕೆಜಿಗಿಂತ 100 ಗ್ರಾಂ ತೂಕ ಹೆಚ್ಚಿದ್ದ ಕಾರಣ ನೀಡಿ ವಿನೇಶ್‌ ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. ಈಗಾಗಲೇ ಭಾರತೀಯ ಒಲಿಂಪಿಕ್ಸ್‌ ಅಸೋಸಿಯೇಷನ್‌ ಪ್ರತಿಭಟನೆ ವ್ಯಕ್ತಪಡಿಸಿದೆ. ನರೇಂದ್ರ ಮೋದಿ ಅವರೂ ಪಿ.ಟಿ. ಉಷಾ ಅವರಿಗೆ ಕರೆ ಮಾಡುವ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ” ಎಂದು ಸಚಿವ ತಿಳಿಸಿದ್ದಾರೆ.

ಪ್ರತಿಯೊಂದು ಹೆಜ್ಜೆಯಲ್ಲೂ ವಿನೇಶ್‌ ಫೋಗಟ್‌ ಅವರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ. ಅವರಿಗೆ ವೈಯಕ್ತಿಕ ಸಿಬ್ಬಂದಿಯನ್ನೂ ಭಾರತ ಕಳುಹಿಸಿದೆ. ಸಹಾಯಕ ಸಿಬ್ಬಂದಿಯನ್ನೂ ಅವರಿಗೆ ಒದಗಿಸಲಾಗಿದೆ. ಇದಕ್ಕೂ ಮೊದಲು ಕೂಡ ವಿನೇಶ್‌ ಫೋಗಟ್‌ ಅವರ ಸಾಧನೆಗೆ ಕೇಂದ್ರ ಸರ್ಕಾರ ಹಣಕಾಸು ನೆರವು ನೀಡಿದೆ. ಮುಂದಿನ ದಿನಗಳಲ್ಲೂ ನೆರವು ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ವಿನೇಶ್‌ ಫೋಗಟ್‌ಗೆ ಬಾಲಿವುಡ್‌ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

Continue Reading
Advertisement
Bangladesh Unrest
ವಿದೇಶ1 min ago

Bangladesh Unrest: ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದಾಳಿಗೆ ಇಸ್ಲಾಮಿಕ್‌ ರಾಷ್ಟ್ರಗಳಿಂದ ಹಣ; ಇಲ್ಲಿದೆ ಸ್ಫೋಟಕ ಮಾಹಿತಿ

World Breastfeeding Week 2024
ಆರೋಗ್ಯ20 mins ago

World Breastfeeding Week 2024: ಹಾಲುಣಿಸುವುದು ನಿಲ್ಲಿಸಿದ ಮೇಲೆ ತಾಯಿಯ ತೂಕ ಹೆಚ್ಚುವುದೇಕೆ? ಆಗೇನು ಮಾಡಬೇಕು?

Actor Darshan
ಕ್ರೈಂ22 mins ago

Actor Darshan: ನಟ ದರ್ಶನ್‌ಗೆ ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು; ಕೋರ್ಟ್‌ಗೆ ವರದಿ

IND vs SL 3rd ODI
ಕ್ರೀಡೆ26 mins ago

IND vs SL 3rd ODI: 3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು; ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

Paris Olympics
ಕ್ರೀಡೆ54 mins ago

Paris Olympics: ನಾಳೆ ನೀರಜ್​ ಚೋಪ್ರಾ ಫೈನಲ್​ ಸ್ಪರ್ಧೆ; ಕಂಚಿನ ಪದಕಕ್ಕೆ ಹಾಕಿ ತಂಡ ಹೋರಾಟ

Electric Vehicles
ಆಟೋಮೊಬೈಲ್1 hour ago

Electric Vehicles: ಎಲೆಕ್ಟ್ರಿಕ್‌ ಕಾರು ಖರೀದಿಸಿದವರಿಗೆ ಪೆಟ್ರೋಲ್, ಡೀಸೆಲ್‌ ಕಾರಿಗೆ ಮರಳುವ ಇಚ್ಛೆ; ಕಾರಣ ಏನು?

Wayanad Landslide
ಕರ್ನಾಟಕ1 hour ago

Wayanad Landslide: ಭೂಕುಸಿತ ಸಂತ್ರಸ್ತರಿಗೆ ನೆರವು; ಯುವ ಕಾಂಗ್ರೆಸ್‌ ಮುಖಂಡ ಧ್ರುವ ಜತ್ತಿ ಭೇಟಿ

Blazer Saree Fashion
ಫ್ಯಾಷನ್1 hour ago

Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

Waqf Act
ದೇಶ2 hours ago

Waqf Act: ನಾಳೆ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡನೆ; ಪರಮಾಧಿಕಾರ ರದ್ದು ಸೇರಿ ಏನೆಲ್ಲ ಬದಲು?

Headphone Side Effect
ಆರೋಗ್ಯ2 hours ago

Headphone Side Effect: ಹೆಡ್ ಫೋನ್ ಬಳಕೆಯಿಂದ ಮೆದುಳು, ಹೃದಯದ ಮೇಲೆ ಭೀಕರ ಪರಿಣಾಮ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು1 day ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 day ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌