Bangladesh Unrest: ಬಾಂಗ್ಲಾ ಹಂಗಾಮಿ ಪ್ರಧಾನಿಯಾಗಿ ಇಂದು ಮೊಹಮ್ಮದ್‌ ಯೂನಸ್‌ ಪದಗ್ರಹಣ; ಶಾಂತಿಗಾಗಿ ಕರೆ - Vistara News

ವಿದೇಶ

Bangladesh Unrest: ಬಾಂಗ್ಲಾ ಹಂಗಾಮಿ ಪ್ರಧಾನಿಯಾಗಿ ಇಂದು ಮೊಹಮ್ಮದ್‌ ಯೂನಸ್‌ ಪದಗ್ರಹಣ; ಶಾಂತಿಗಾಗಿ ಕರೆ

Bangladesh Unrest: ಬಾಂಗ್ಲಾದಲ್ಲಿ ಹೊಸದಾಗಿ ಚುನಾವಣೆ ಆಯೋಜಿಸುವವರೆಗೆ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 83 ವರ್ಷದ ಮೊಹಮ್ಮದ್ ಯೂನಸ್ ಅವರು ಶೇಖ್‌ ಹಸೀನಾ ಅವರ ಪ್ರಮುಖ ಟೀಕಾಕಾರರು ಮತ್ತು ರಾಜಕೀಯ ವಿರೋಧಿಯೂ ಆಗಿದ್ದಾರೆ. ಅರ್ಥಶಾಸ್ತ್ರಜ್ಞರು ಆಗಿರುವ ಯೂನಸ್ 2006ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರು ಇಂದು ಬಾಂಗ್ಲಾದೇಶದ ಹಂಗಾಮಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

VISTARANEWS.COM


on

muhammad yunus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಮೀಸಲಾತಿ ವಿರೋಧಿಸಿ ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಪರಾರಿಯಾಗಿರುವ ನಂತರ, ದೇಶದ ಮಧ್ಯಂತರ ಸರ್ಕಾರದ (interim Budget) ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ (Muhammad Yunus) ಅವರನ್ನು ನೇಮಕ ಮಾಡಲಾಗಿದೆ. ಇನ್ನು, ಮೊಹಮ್ಮದ್‌ ಯೂನಸ್‌ ಅವರು ಗುರುವಾರ (ಆಗಸ್ಟ್‌ 8) ಹಂಗಾಮಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

”ಮೊಹಮ್ಮದ್‌ ಯೂನಸ್‌ ಅವರು ಬಾಂಗ್ಲಾದೇಶದ ಪ್ರಧಾನಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜತೆಗೆ 15 ಸಲಹೆಗಾರರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ” ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್‌ ವಾಕರ್‌ ಉಜ್‌ ಜಮಾನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗುರುವಾರ ರಾತ್ರಿ 8 ಗಂಟೆಗೆ ಮೊಹಮ್ಮದ್‌ ಯೂನಸ್‌ ಅವರು ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮೊಹಮ್ಮದ್‌ ಯೂನಸ್‌ ಅವರು ಸದ್ಯ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ಮೊಹಮ್ಮದ್‌ ಯೂನಸ್‌ ಅವರು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಢಾಕಾ ತಲುಪಲಿದ್ದಾರೆ. ಇದರಿಂದಾಗಿ ಢಾಕಾ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪದಗ್ರಹಣಕ್ಕೂ ಮುನ್ನ ದೇಶದ ಜನರಿಗೆ ಕರೆ ನೀಡಿರುವ ಅವರು, “ಯಾರೂ ಕೂಡ ಹಿಂಸೆಯನ್ನು ಪ್ರಚೋದಿಸಬಾರು ಹಾಗೂ ಹಿಂಸಾಚಾರದಲ್ಲಿ ತೊಡಗಬಾರದು. ಎಲ್ಲರೂ ಶಾಂತಿ ಕಾಪಾಡೋಣ” ಎಂದು ಹೇಳಿದ್ದಾರೆ.

ಶಾಂತಿಗಾಗಿ ಖಲೀದಾ ಜಿಯಾ ಮನವಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ, ಬಿಎನ್‌ಪಿ ಮುಖ್ಯಸ್ಥೆ ಖಲೀದಾ ಜಿಯಾ ಅವರು ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಶಾಂತಿಯ ಸಂದೇಶ ಸಾರಿದ್ದಾರೆ. “ನಮ್ಮ ದೇಶದ ಜನರ ಹೋರಾಟವೇ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ. ಇದು ಸಿಟ್ಟು ಅಥವಾ ಸೇಡು ಅಲ್ಲ. ಇದು ಪ್ರೀತಿ ಹಾಗೂ ಶಾಂತಿಯಿಂದ ದೇಶವನ್ನು ಮರು ನಿರ್ಮಾಣ ಮಾಡುವ ಗುರಿಯಾಗಿದೆ. ಹಾಗಾಗಿ, ಎಲ್ಲರೂ ಶಾಂತಿಯಿಂದ ವರ್ತಿಸಿ, ಹೊಸ ಹಾಗೂ ಸಮೃದ್ಧ ಬಾಂಗ್ಲಾದೇಶವನ್ನು ನಿರ್ಮಿಸೋಣ” ಎಂದು ಕರೆ ನೀಡಿದ್ದಾರೆ.

ಮತ್ತೊಂದೆಡೆ, ಆಶ್ರಯ ನೀಡಲು ಅಮೆರಿಕ ಹಾಗೂ ಬ್ರಿಟನ್‌ ನಿರಾಕರಿಸಿದ ಕಾರಣ ಮಾಜಿ ಪ್ರಧಾನಿ ಶೇಖ್‌ ಹಸೀನಾ ಅವರು ಭಾರತದಲ್ಲಿಯೇ ಉಳಿದಿದ್ದಾರೆ. ಅಜ್ಞಾತ ಸ್ಥಳದಲ್ಲಿ ಅವರನ್ನು ಇರಿಸಲಾಗಿದ್ದು, ಕೇಂದ್ರ ಸರ್ಕಾರವು ಬಿಗಿ ಭದ್ರತೆ ಒದಗಿಸಿದೆ. ಬೇರೆ ದೇಶಗಳಲ್ಲಿ ಅವರಿಗೆ ಆಶ್ರಯ ಸಿಗದ ಕಾರಣ ಭಾರತದಲ್ಲಿಯೇ ಉಳಿಯುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bangladesh Unrest: ಭಾರತದ ಗಡಿಯೊಳಗೆ ಪ್ರವೇಶಕ್ಕೆ ಬಾಂಗ್ಲಾದ 600 ಜನ ಯತ್ನ-BSF ಮಾಹಿತಿ

Bangladesh Unrest: ಬಾಂಗ್ಲಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಪ್ರಾಣಭೀತಿ ಎದುರಿಸುತ್ತಿರುವುದಾಗಿ ಹೇಳಿಕೊಂಡು ಅನೇಕ ಜನರು ಭಾರತದ ಗಡಿಯೊಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಬಿಎಸ್‌ಎಫ್‌ ಸಿಬ್ಬಂದಿ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದಕ್ಷಿಣ್ ಬೆರುಬರಿ ಗ್ರಾಮದಲ್ಲಿ ಈ ಗುಂಪು ಭಾರತದ ಗಡಿ ದಾಟಲು ಪ್ರಯತ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Bangladesh unrest
Koo

ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ಹಿಂಸಾಚಾರ(Bangladesh Unrest) ಮುಂದುವರೆದಿರುವ ಹಿನ್ನೆಲೆ ಅಲ್ಲಿನ ಸುಮಾರು 600 ಜನ ಅಕ್ರಮವಾಗಿ ಪಶ್ಚಿಮ ಬಂಗಾಳದ ಗಡಿಪ್ರದೇಶದೊಳಗೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ್ದು, ಅವರನ್ನು ತಡೆಯುವಲ್ಲಿ ಗಡಿ ಭದ್ರತಾ ಪಡೆ(BSF) ಯಶಸ್ವಿಯಾಗಿದೆ. ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಶೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಅಲ್ಲಿಂದ ಪಲಾಯಣ ಮಾಡಿರುವ ಬೆನ್ನಲ್ಲೇ ಗಡಿ ಪ್ರದೇಶಗಳಲ್ಲಿ ಬಿಎಸ್‌ಎಫ್‌ ಹೈ ಅಲರ್ಟ್‌ ಆಗಿದೆ.

ಬಾಂಗ್ಲಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಪ್ರಾಣಭೀತಿ ಎದುರಿಸುತ್ತಿರುವುದಾಗಿ ಹೇಳಿಕೊಂಡು ಅನೇಕ ಜನರು ಭಾರತದ ಗಡಿಯೊಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಬಿಎಸ್‌ಎಫ್‌ ಸಿಬ್ಬಂದಿ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದಕ್ಷಿಣ್ ಬೆರುಬರಿ ಗ್ರಾಮದಲ್ಲಿ ಈ ಗುಂಪು ಭಾರತದ ಗಡಿ ದಾಟಲು ಪ್ರಯತ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಅವರು ನಮ್ಮಲ್ಲಿ ಮನವಿ ಮಾಡಿದರು ಮತ್ತು ದೇಶಕ್ಕೆ ಬಿಡುವಂತೆ ಕೇಳಿಕೊಂಡರು, ಅವರು ದಾಳಿಗೆ ಹೆದರುತ್ತಿರುವುದಾಗಿ ಮತ್ತು ತಮ್ಮ ಜೀವದ ಭಯವಿದೆ ಎಂದು ಹೇಳಿದ್ದಾರೆ. ಹಾಗೆಂದ ಮಾತ್ರಕ್ಕೆ ಈ ಮಾದರಿಯಲ್ಲಿ ಅವರಿಗೆ ಗಡಿಯೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಅವರಿಗೆ ಅರ್ಥಮಾಡಿಸಲಾಗಿದೆ ಎಂದು ಹೇಳಿದರು.

ಗುಂಪಿನಲ್ಲಿನ ಕೆಲವು ಜನರು ಚದುರಿಹೋದರೆ, ಅನೇಕರು ಬುಧವಾರ ಸಂಜೆ ತಡವಾಗಿ ಗಡಿ ಬಿಂದುವಿನಲ್ಲಿಯೇ ಇದ್ದರು, ಅಂತಿಮವಾಗಿ ಅವರು ದಾಟಲು ಅವಕಾಶ ನೀಡುತ್ತಾರೆ ಎಂಬ ಆಸೆಯಲ್ಲಿ ಕಾಯುತ್ತಿದ್ದರು. ಮುಳ್ಳುತಂತಿಯ ಮೇಲೆ ಜಮಾಯಿಸಿದ ಜನರು ಒಳಗೆ ಬಿಡುವಂತೆ ಮನವಿ ಮಾಡುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದರು.

ಮೀಸಲಾತಿ ವಿರೋಧಿಸಿ ನಿರಂತರ ಪ್ರತಿಭಟನೆ, ಗಲಭೆಗಳ (Bangladesh Unrest) ಬಳಿಕ ಮಾಜಿ ಪ್ರಧಾನಿ ಶೇಖ್ ಹಸೀನಾ (Sheikh Hasina) ಬಾಂಗ್ಲಾದೇಶವನ್ನು (Bangladesh) ತೊರೆದು ಪರಾರಿಯಾಗಿರುವ ನಂತರ, ದೇಶದ ಮಧ್ಯಂತರ ಸರ್ಕಾರದ (interim Budget) ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನಸ್ (Muhammad Yunus) ಅವರನ್ನು ನೇಮಕ ಮಾಡಲಾಗಿದೆ. ಇನ್ನು, ಮೊಹಮ್ಮದ್‌ ಯೂನಸ್‌ ಅವರು ಗುರುವಾರ (ಆಗಸ್ಟ್‌ 8) ಹಂಗಾಮಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೊಹಮ್ಮದ್‌ ಯೂನಸ್‌ ಅವರು ಬಾಂಗ್ಲಾದೇಶದ ಪ್ರಧಾನಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜತೆಗೆ 15 ಸಲಹೆಗಾರರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ” ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್‌ ವಾಕರ್‌ ಉಜ್‌ ಜಮಾನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗುರುವಾರ ರಾತ್ರಿ 8 ಗಂಟೆಗೆ ಮೊಹಮ್ಮದ್‌ ಯೂನಸ್‌ ಅವರು ಪ್ರಧಾನಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮೊಹಮ್ಮದ್‌ ಯೂನಸ್‌ ಅವರು ಸದ್ಯ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿದ್ದಾರೆ. ಎಮಿರೇಟ್ಸ್‌ ವಿಮಾನದಲ್ಲಿ ಮೊಹಮ್ಮದ್‌ ಯೂನಸ್‌ ಅವರು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಢಾಕಾ ತಲುಪಲಿದ್ದಾರೆ. ಇದರಿಂದಾಗಿ ಢಾಕಾ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಪದಗ್ರಹಣಕ್ಕೂ ಮುನ್ನ ದೇಶದ ಜನರಿಗೆ ಕರೆ ನೀಡಿರುವ ಅವರು, “ಯಾರೂ ಕೂಡ ಹಿಂಸೆಯನ್ನು ಪ್ರಚೋದಿಸಬಾರು ಹಾಗೂ ಹಿಂಸಾಚಾರದಲ್ಲಿ ತೊಡಗಬಾರದು. ಎಲ್ಲರೂ ಶಾಂತಿ ಕಾಪಾಡೋಣ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾ ಹಂಗಾಮಿ ಪ್ರಧಾನಿಯಾಗಿ ಇಂದು ಮೊಹಮ್ಮದ್‌ ಯೂನಸ್‌ ಪದಗ್ರಹಣ; ಶಾಂತಿಗಾಗಿ ಕರೆ

Continue Reading

ಕ್ರೀಡೆ

Vinesh Phogat: ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌; ಇಂದು ತೀರ್ಪು ಪ್ರಕಟ

Vinesh Phogat: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದ ಫೈನಲ್‌ ಪಂದ್ಯದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಬೆಳ್ಳಿ ಪದಕ ಹಸ್ತಾಂತರಿಸುವಂತೆ ಕೋರಿದ್ದಾರೆ. ಈ ವಿಚಾರದಲ್ಲಿ ಕೋರ್ಟ್‌ (CAS) ತನ್ನ ಅಂತಿಮ ತೀರ್ಪನ್ನು ಇಂದು (ಆಗಸ್ಟ್‌ 8) ಬೆಳಿಗ್ಗೆ 11:30ಕ್ಕೆ ಪ್ರಕಟಿಸಲಿದೆ.

VISTARANEWS.COM


on

Vinesh Phogat
Koo

ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) 50 ಕಿಲೋ ತೂಕದ ವಿಭಾಗದ ಫೈನಲ್‌ ಪಂದ್ಯದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (Court of Arbitration for Sport)ಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ. ಈ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.

ಇದೀಗ ಜಂಟಿಯಾಗಿ ಬೆಳ್ಳಿ ಪದಕ ಹಸ್ತಾಂತರಿಸುವಂತೆ ಕೋರಿ ವಿನೇಶ್‌ ಫೋಗಟ್‌ ಮನವಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಕೋರ್ಟ್‌ (CAS) ತನ್ನ ಅಂತಿಮ ತೀರ್ಪನ್ನು ಇಂದು (ಆಗಸ್ಟ್‌ 8) ಬೆಳಿಗ್ಗೆ 11:30ಕ್ಕೆ ಪ್ರಕಟಿಸಲಿದೆ. ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಫೋಗಟ್ ಪರವಾಗಿ ತೀರ್ಪು ನೀಡಿದರೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (International Olympic Committee) ಬೆಳ್ಳಿ ಪದಕ ನೀಡಬೇಕಾಗುತ್ತದೆ. ಹೀಗಾಗಿ ತೀರ್ಪಿಗಾಗಿ ಭಾರತೀಯರು ನಿರೀಕ್ಷೆಯೆಂದ ಕಾದು ಕುಳಿತ್ತಿದ್ದಾರೆ. ಯಾವುದೇ ಕ್ರೀಡಾ ಕೂಟದ ವೇಳೆ ಉದ್ಭವಿಸಬಹುದಾದ ವಿವಾದಗಳನ್ನು ಪರಿಹರಿಸಲು ಅಂತಾರಾಷ್ಟ್ರೀಯ ಸಂಸ್ಥೆ ಸಿಎಎಸ್‌ಯನ್ನು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸ್ಥಾಪಿಸಲಾಗಿದೆ.

ಪ್ರಧಾನಿ, ರಾಷ್ಟ್ರಪತಿ ಸಾಂತ್ವನ

ಮಂಗಳವಾರ ನಡೆದ ಸೆಮಿಫೈನಲ್‌ನಲ್ಲಿ ವಿನೇಶ್‌ ಅವರು ಕ್ಯೂಬಾದ ಯಸ್ನಿಲಿಸ್​ ಗುಜ್ಮನ್​ ಲೋಪೆಜ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಒಲಿಂಪಿಕ್ಸ್‌ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆ ಮೂಲಕ ಚಿನ್ನದ ಪದಕ ಗೆಲ್ಲುವ ಭರವಸೆ ಮೂಡಿಸಿದ್ದರು. ಅದರಂತೆ ಬುಧವಾರ ಫೈನಲ್‌ ಪಂದ್ಯ ನಡೆಯುವ ಮುನ್ನ ತೂಕ ಪರೀಕ್ಷಿಸುವ ವೇಳೆ 50 ಕೆಜಿಗಿಂತ 100 ಗ್ರಾಂ ಹೆಚ್ಚಿರುವುದು ಕಂಡು ಬಂದಿತ್ತು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿತ ಅನೇಕರು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿಯ ನಿರ್ಧಾರದ ವಿರುದ್ಧ ಕಿಡಿ ಕಾರಿದ್ದಾರೆ. ಜತೆಗೆ ವಿನೇಶ್‌ ಅವರಿಗೆ ಸಾಂತ್ವನ ಹೇಳಿದ್ದಾರೆ.

ಇದನ್ನೂ ಓದಿ: Vinesh Phogat: ವಿನೇಶ್‌ ಫೋಗಟ್‌ ಅನರ್ಹ; ದಿಢೀರ್ 2-3 ಕೆ.ಜಿ ತೂಕ ಇಳಿಸಲು ಮುಂದಾದರೆ ದೇಹಕ್ಕೆ ಏನಾಗುತ್ತದೆ?

ನಿವೃತ್ತಿ ಘೋಷಣೆ

ಇದೀಗ 29 ವರ್ಷದ ವಿನೇಶ್‌ ಫೋಗಟ್‌ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Vinesh Phogat: ʼನನ್ನ ವಿರುದ್ಧ ಕುಸ್ತಿ ಗೆದ್ದಿದೆ..ʼ ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Vinesh Phogat: “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

VISTARANEWS.COM


on

Vinesh Phogat
Koo

ಹೊಸದಿಲ್ಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಕುಸ್ತಿಗೆ (Wrestling) ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ (Social media X) ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು.

“ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ.

ಕ್ರಮ ಕೈಗೊಳ್ಳಲು ಮೋದಿ ಸೂಚನೆ

ದೆಹಲಿ/ಪ್ಯಾರಿಸ್:‌ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಭಾರತದ ಖ್ಯಾತ ಮಹಿಳಾ ಕುಸ್ತಿಪಟು (Wrestler) ವಿನೇಶ್​ ಫೋಗಟ್ (Vinesh Phogat) ಅವರು ಅನರ್ಹಗೊಂಡಿರುವುದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವಿನೇಶ್‌ ಫೋಗಟ್‌ ಪರವಾಗಿ ದೇಶವೇ ಒಗ್ಗೂಡಿ ನಿಂತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ವಿನೇಶ್‌ ಫೋಗಟ್‌ ಪರವಾಗಿ ನಿಂತಿದ್ದಾರೆ. ಇದರ ಬೆನ್ನಲ್ಲೇ, ಭಾರತೀಯ ಒಲಿಂಪಿಕ್ಸ್‌ ಅಸೋಷಿಯೇಷನ್‌ (IOA) ಅಧ್ಯಕ್ಷೆ ಪಿ.ಟಿ.ಉಷಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ಮಾಡಿದ್ದು, ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ವಿನೇಶ್‌ಗೆ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಿನೇಶ್ ಪೋಗಟ್- ಉತ್ತರ ಸಿಗದ ಪ್ರಶ್ನೆಗಳು

Continue Reading

ಅಂಕಣ

ರಾಜಮಾರ್ಗ ಅಂಕಣ: ವಿನೇಶ್ ಪೋಗಟ್ ತೂಕ ಇದ್ದಕ್ಕಿದ್ದಂತೆ 2 ಕೆ.ಜಿ ಹೆಚ್ಚಿದ್ದು ಹೇಗೆ? ಉತ್ತರ ಸಿಗದ ಪ್ರಶ್ನೆ!

ರಾಜಮಾರ್ಗ ಅಂಕಣ: ಆಕೆಗೆ ಪದಕವು ಸಿಗಲಿಲ್ಲ ಎಂಬ ನೋವಿನ ನಡುವೆಯೂ ಆಕೆಯು ಪ್ಯಾರಿಸ್ ನಗರದಲ್ಲಿ ಮಾಡಿದ ಹೋರಾಟವನ್ನು ನಾವು ಕಣ್ಣಾರೆ ನೋಡಿದ್ದೇವೆ. ಇದುವರೆಗೂ ಸೋಲೇ ಕಾಣದ ವಿಶ್ವ ಚಾಂಪಿಯನ್ ಆಟಗಾರ್ತಿಯನ್ನು ಆಕೆಯು ಸೋಲಿಸಿದ್ದು, ಸೆಮಿಯಲ್ಲಿ ಒಂದು ಅಂಕವನ್ನು ಬಿಟ್ಟುಕೊಡದೆ ಗೆದ್ದದ್ದು ಇದನ್ನೆಲ್ಲ ನಾವು ನೋಡಿದ್ದೇವೆ. ಇದೇನೂ ಸಣ್ಣ ಗೆಲುವಲ್ಲ.

VISTARANEWS.COM


on

Vinesh Phogat ರಾಜಮಾರ್ಗ ಅಂಕಣ
Koo

ಭಾರತವು ತನ್ನ ಮನೆಮಗಳನ್ನು ವೀರೋಚಿತವಾಗಿ ಸ್ವಾಗತಿಸಬೇಕು

Rajendra-Bhat-Raja-Marga-Main-logo

:: ರಾಜೇಂದ್ರ ಭಟ್‌ ಕೆ.

ರಾಜಮಾರ್ಗ ಅಂಕಣ: ಭಾರತೀಯರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬುಧವಾರ ಆಗಿರುವ ಆಘಾತದಿಂದ ಇನ್ನೂ ಹೊರಬಂದಿಲ್ಲ. ಮಂಗಳವಾರ ರಾತ್ರಿ ಆಕೆಯ (Vinesh Phogat) ಮೂರು ಪಂದ್ಯಗಳನ್ನು ನೋಡಿದವರು ಆಕೆಯನ್ನು ‘ಹೆಣ್ಣುಹುಲಿ’ ಎಂದು ಕರೆದಿದ್ದರು. ಆಕೆ ಫೈನಲ್ ಪ್ರವೇಶ ಮಾಡಿದ್ದಾಗ ‘ಚಿನ್ನವನ್ನೇ ಗೆದ್ದು ಬಾ’ ಎಂಬ ಕನವರಿಕೆಯು ದೇಶದಾದ್ಯಂತ ಆರಂಭ ಆಗಿತ್ತು. ಆಕೆಯನ್ನು ಭಾರತವು ಮನೆಮಗಳಾಗಿ ಸ್ವೀಕಾರ ಮಾಡಿತ್ತು.

ಆಕೆಯ ತೂಕವು ಅಷ್ಟೊಂದು ವೇಗವಾಗಿ ಏರಿದ್ದು ಹೇಗೆ?

ಸೆಮಿಸ್ ಗೆಲ್ಲುವತನಕ ಆಕೆಯ ದೇಹತೂಕ ಸರಿ ಇತ್ತು.ಆದರೆ ರಾತ್ರಿ ಸ್ಪರ್ಧೆಗಳು ಮುಗಿದು ಊಟ ಮುಗಿಸಿದಾಗ ಆಕೆಯ ತೂಕವು ಎರಡು ಕೆಜಿ ಹೆಚ್ಚು ಇರುವುದು ಆಕೆಗೆ ಗೊತ್ತಾಗಿದೆ. ಅದನ್ನವಳು ತನ್ನ ವಿದೇಶಿ ಕೋಚಗೆ ತಕ್ಷಣ ತಿಳಿಸಿದ್ದಾರೆ. ರಾತ್ರಿ ಇಡೀ ಕೋಚ್ ಸಲಹೆ ಪಡೆದು ತೂಕವನ್ನು ಇಳಿಸಲು ಭಾರೀ ಬೆವರು ಬಸಿದಿದ್ದಾರೆ. ಇಡೀ ರಾತ್ರಿ ಜಾಗಿಂಗ್, ಸೈಕ್ಲಿಂಗ್, ವಾರ್ಮ್ ಅಪ್ ಎಲ್ಲವನ್ನೂ ಮಾಡಿದ್ದಾರೆ. ಮಾಧ್ಯಮಗಳು ವರದಿ ಮಾಡಿದ ಪ್ರಕಾರ ಆಕೆ ತಲೆಕೂದಲು ಕಟ್ ಮಾಡಿದ್ದಾರೆ. ರಕ್ತವನ್ನೂ ನೀಡಿದ್ದಾರೆ! ಒಂದು ಘಂಟೆ ಸ್ಟೀಮ್ ಬಾತ್ ಮಾಡಿದ್ದಾರೆ. ಇಡೀ ರಾತ್ರಿ ಆಕೆ ಮಲಗಲೇ ಇಲ್ಲ.

ಆಕೆಯು ಹರ್ಯಾಣದ ರಣ ಭೂಮಿಯಿಂದ ಬಂದವರು!

ಆಕೆ ಹುಟ್ಟು ಹೋರಾಟಗಾರ್ತಿ ಎನ್ನುವುದು ಹಿಂದೆ ಕೂಡ ಹಲವು ಬಾರಿ ಸಾಬೀತಾಗಿದೆ. ಆಮೀರ್ ಖಾನ್ ಅಭಿನಯಿಸಿದ ಅತ್ಯಂತ ಯಶಸ್ವೀ ಚಿತ್ರ ದಂಗಲ್ ಈಕೆಯ ಅಪ್ಪನ ಸಾಧನೆಯ ಕುರಿತು ಹೆಣೆದ ಕಥೆಯಾದರೂ ಮಿಂಚಿದ್ದು ಇದೇ ವಿನೇಶ್ ಫೊಗಟ್!

ಆಕೆಯು ಈಗಾಗಲೇ ಮೂರು ಕಾಮನ್ ವೆಲ್ತ್ ಕೂಟಗಳಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಏಷಿಯಾಡ್ ಕೂಟದಲ್ಲಿ ಕೂಡ ಆಕೆ ಚಿನ್ನವನ್ನು ಗೆದ್ದು ಭಾರತವನ್ನು ಗೆಲ್ಲಿಸಿದ್ದಾರೆ. ಕುಸ್ತಿ ವಿಶ್ವ ಚಾಂಪಿಯನ್ ಸ್ಪರ್ಧೆಯಲ್ಲಿ ಕೂಡ
ಆಕೆ ಪದಕವನ್ನು ಗೆದ್ದಿದ್ದಾರೆ. ಆದರೆ ಕಳೆದ ಒಲಿಂಪಿಕ್ಸ್ ಕೂಟದಲ್ಲಿ ಆಕೆಯು ಕ್ವಾರ್ಟರ್ ಫೈನಲ್ ತನಕ ಬಂದು ಇಂಜುರಿ ಆಗಿ ಕಣ್ಣೀರು ಹಾಕುತ್ತಾ ಹಿಂದೆ ಬಂದದ್ದನ್ನು ಭಾರತವು ಇನ್ನೂ ಮರೆತಿಲ್ಲ. ಅಂತಹ ವಿನೇಶ್ ಈ ಬಾರಿ ದೇಹತೂಕದ ಕಾರಣಕ್ಕೆ ಅನರ್ಹರಾಗಿದ್ದಾರೆ. ಅದು ದುರಂತ.

ಆಕೆಗೆ ಈಗಲೇ 29 ವರ್ಷ ವಯಸ್ಸು. ಮುಂದಿನ ಒಲಿಂಪಿಕ್ಸ್ ಸ್ಪರ್ಧೆಗೆ ಆಕೆಯು ಮತ್ತೆ ಸ್ಪರ್ಧಿಸುವುದು ತುಂಬಾ ಕಷ್ಟ. ಇದು ಆಕೆಗೂ ಗೊತ್ತಿದೆ. ಅದಕ್ಕಾಗಿ ಇಡೀ ರಾತ್ರಿ ದೇಹತೂಕವನ್ನು ಇಳಿಸಲು ಆಕೆಯು ಹೋರಾಟಕ್ಕೆ ಇಳಿದಿದ್ದಾರೆ. ಏನೆಲ್ಲ ಮಾಡಲು ಸಾಧ್ಯವೋ ಅದನ್ನೆಲ್ಲ ಮಾಡಿದ್ದಾರೆ. ಒಂದು ರಾತ್ರಿಯ ಅವಧಿಯಲ್ಲಿ ಒಂದು ಕೆಜಿ ಒಂಬೈನೂರು ಗ್ರಾಂ ಇಳಿಸುವುದು ಸುಲಭದ ಮಾತಲ್ಲ. ಇನ್ನೂ ನೂರು ಗ್ರಾಮ್ ಇಳಿಸಲು ಆಗಿಲ್ಲ ಎಂಬ ನೋವಿಗಿಂತ ಭಾರತವು ಪದಕವನ್ನು ಮಿಸ್ ಮಾಡಿಕೊಂಡಿತು ಎಂಬ ನೋವು ಆಕೆಗೆ ದೊಡ್ಡದು. ನಮಗೆ ಅದಕ್ಕಿಂತ ದೊಡ್ಡ ನೋವು ಎಂದರೆ ಆಕೆಯು ತನ್ನ ದೇಹದ ಮೇಲೆ ಮಾಡಿದ ಅಮಾನುಷ ಪ್ರಯೋಗಗಳು! ಅದಕ್ಕಿಂತ ದೊಡ್ಡ ನೋವು ಭಾರತೀಯರಿಗೆ ಅಂದರೆ ನಮ್ಮ ಮನೆಮಗಳು ಫೈನಲಿಗೂ ಮೊದಲು ಅನರ್ಹ ಆದದ್ದು!

ಆಕೆಯ ದೇಹತೂಕವು ಸಡನ್ನಾಗಿ ಎರಡು ಕೆಜಿ ಹೆಚ್ಚಾದದ್ದು ಹೇಗೆ?

ಓರ್ವ ಅಂತಾರಾಷ್ಟ್ರೀಯ ವೃತ್ತಿಪರ ಕ್ರೀಡಾಪಟು ಯಾವ ಆಹಾರವನ್ನು ತೆಗೆದುಕೊಳ್ಳುವ ಮೊದಲು ತನ್ನ ಕೋಚ್‌ಗೆ ತೋರಿಸಿ ನಂತರ ತಿನ್ನಬೇಕು. ಇದು ನಿಯಮ. ಭಾರತೀಯ ಒಲಿಂಪಿಕ್ ತಂಡದಲ್ಲಿ ವೈದ್ಯರು, ಡಯಟೀಶಿಯನ್, ಫಿಸಿಯೋ ಎಲ್ಲರೂ ಇರುತ್ತಾರೆ. ಕ್ರೀಡಾಪಟುಗಳು ತಿನ್ನುವ ಪ್ರತಿಯೊಂದು ಆಹಾರ ಪದಾರ್ಥವು ಪರೀಕ್ಷೆಗೆ ಒಳಗಾಗುತ್ತದೆ. ಒಂದು ಮಾತ್ರೆ, ಒಂದು ಇಂಜೆಕ್ಷನ್ ಕೂಡ ಅನುಮತಿ ಪಡೆಯದೆ ತೆಗೆದುಕೊಳ್ಳುವ ಹಾಗೆ ಇಲ್ಲ. ಹಾಗಿರುವಾಗ ಆಕೆಯ ದೇಹತೂಕ ಅಷ್ಟೊಂದು ಹೆಚ್ಚಳ ಆದದ್ದು ಹೇಗೆ? ಅದರಲ್ಲಿ ಯಾರ ಕೈವಾಡವು ಇದೆ ಅನ್ನುವುದು ವಿಚಾರಣೆಗೆ ಒಳಗಾಗಬೇಕಾದ ವಿಷಯ. ಆ ದಿಸೆಯಲ್ಲಿ ಭಾರತೀಯ ಒಲಿಂಪಿಕ್ ಸಮಿತಿಯು ಸರಿಯಾಗಿ ವಿಚಾರಣೆ ನಡೆದು ವಿವರಣೆ ನೀಡಬೇಕು. ಆಗ ಮಾತ್ರ ಆಕೆಗೆ ಮತ್ತು ಭಾರತಕ್ಕೆ ಸ್ವಲ್ಪ ಮಟ್ಟದ ನೆಮ್ಮದಿ ಸಿಗಬಹುದು.

ಆಕೆಯನ್ನು ವೀರೋಚಿತವಾಗಿಯೇ ಭಾರತ ಬರಮಾಡಿಕೊಳ್ಳಬೇಕು!

ಆಕೆಗೆ ಪದಕವು ಸಿಗಲಿಲ್ಲ ಎಂಬ ನೋವಿನ ನಡುವೆಯೂ ಆಕೆಯು ಪ್ಯಾರಿಸ್ ನಗರದಲ್ಲಿ ಮಾಡಿದ ಹೋರಾಟವನ್ನು ನಾವು ಕಣ್ಣಾರೆ ನೋಡಿದ್ದೇವೆ. ಇದುವರೆಗೂ ಸೋಲೇ ಕಾಣದ ವಿಶ್ವ ಚಾಂಪಿಯನ್ ಆಟಗಾರ್ತಿಯನ್ನು ಆಕೆಯು ಸೋಲಿಸಿದ್ದು, ಸೆಮಿಯಲ್ಲಿ ಒಂದು ಅಂಕವನ್ನು ಬಿಟ್ಟುಕೊಡದೆ ಗೆದ್ದದ್ದು ಇದನ್ನೆಲ್ಲ ನಾವು ನೋಡಿದ್ದೇವೆ. ಇದೇನೂ ಸಣ್ಣ ಗೆಲುವಲ್ಲ. ಆದ್ದರಿಂದ ವಿನೆಶ್ ಫೊಗಾಟ್ ಭಾರತದ ಮನೆಮಗಳಾಗಿ ಭಾರತಕ್ಕೆ ಹಿಂದಿರುಗುತ್ತಾಳೆ. ಒಲಿಂಪಿಕ್ ಪದಕ ವಿಜೇತರಿಗೆ ಸಿಗುವ ಗೌರವ ಮತ್ತು ಬಹುಮಾನಗಳು ಆಕೆಗೂ ದೊರಕಬೇಕು ಎನ್ನುವುದೇ ಆಶಯ.

ಏನಂತೀರಿ?

ರಾಜಮಾರ್ಗ ಅಂಕಣ: ನಾವು ನಾಶ ಆಗೋದು ಯಾವಾಗ?ಇದನ್ನೂ ಓದಿ:

Continue Reading
Advertisement
Vinay Rajkumar pepe preset Vinay Rajkumar Shreelesh S Nair
ಸ್ಯಾಂಡಲ್ ವುಡ್5 mins ago

Vinay Rajkumar: ʻಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್: ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ!

Mary Kom
ಕ್ರೀಡೆ8 mins ago

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Repo Rate
ವಾಣಿಜ್ಯ12 mins ago

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Naga Chaitanya Nagarjuna Called Sobhita Dhulipala Hot
ಟಾಲಿವುಡ್18 mins ago

Naga Chaitanya: ನಾನು ಹೀಗೆ ಹೇಳಬಾರದು..ಆದರೂ ಶೋಭಿತಾ ತುಂಬಾ ಹಾಟ್‌ ಎಂದಿದ್ದ ನಾಗಾರ್ಜುನ; ವಿಡಿಯೊ ವೈರಲ್‌!

Henna Jihad
ದೇಶ30 mins ago

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

lalbagh flower show 2024
ಪ್ರಮುಖ ಸುದ್ದಿ34 mins ago

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Gold Rate Today
ಚಿನ್ನದ ದರ39 mins ago

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಬಂಗಾರ ಇಂದು ಇಷ್ಟು ಅಗ್ಗ

ಉದ್ಯೋಗ45 mins ago

Banking Recruitment 2024: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 896 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ; ಆಯ್ಕೆ ಪ್ರಕ್ರಿಯೆ ಹೇಗೆ? Complete Details

Actor Yash journey begins Yash Gave Update On Toxic Movie
ಸ್ಯಾಂಡಲ್ ವುಡ್47 mins ago

Actor Yash:  ʻಟಾಕ್ಸಿಕ್‌ʼ ಪಯಣ ಶುರುವಾಗಿದೆ ಎಂದು ಗುಡ್‌ ನ್ಯೂಸ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

head master self harming
ಕ್ರೈಂ56 mins ago

Self Harming: ಇಬ್ಬರು ಇನ್‌ಸ್ಪೆಕ್ಟರ್‌ಗಳ ಬಳಿಕ ಹೆಡ್‌ಮಾಸ್ಟರ್‌ ಶಾಲೆಯಲ್ಲೇ ಆತ್ಮಹತ್ಯೆ; ಏನಾಗ್ತಿದೆ ರಾಜ್ಯದಲ್ಲಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ7 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌