Good News: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ಆದೇಶ - Vistara News

ಪ್ರಮುಖ ಸುದ್ದಿ

Good News: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ಆದೇಶ

Good News: ಖಾಸಗಿ ಅನುದಾನಿತ ಪ್ರೌಢಶಾಲೆ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅನುಮೋದನೆ ನೀಡಿದೆ.

VISTARANEWS.COM


on

Teacher jobs good news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಕ, ಬೋಧಕ (Teachers) ಹುದ್ದೆಗಳ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ (good news) ದೊರೆತಿದೆ. ದಿನಾಂಕ 1-1-2016ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ (Aided Schools) ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ನೀಡಿದೆ.

ರಾಜ್ಯದಲ್ಲಿ 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡು ಈಗಾಗಲೇ ವೇತನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅನುಮೋದನೆ ನೀಡಿದೆ.

ಈ ಮೊದಲು 1987ರಿಂದ 1994-95ರ ಅವಧಿಯಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ಹಣಕಾಸು ಇಲಾಖೆಯು ಅನುಮತಿ ನೀಡಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಮಾರ್ಪಡಿಸಿರುವ ಶಿಕ್ಷಣ ಇಲಾಖೆಯು, 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡ ಎಲ್ಲ ಸಂಸ್ಥೆಗಳಿಗೂ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. 2016-17ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಹುದ್ದೆ ಭರ್ತಿ ಮಾಡಿಕೊಳ್ಳುವ ಶಾಲಾ, ಕಾಲೇಜುಗಳು ಆರಂಭವಾದ ಅಂದಿನಿಂದ ನಿರಂತರವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

CM Siddaramaiah: ನಾಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಬ್ಬರ; ʼಜನಾಂದೋಲನ ಸಮಾವೇಶʼ ಮೂಲಕ ದೋಸ್ತಿ ಪಾದಯಾತ್ರೆಗೆ ಟಕ್ಕರ್‌

CM Siddaramaiah: ನಾಳೆ ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಜನಾಂದೋಲನ ಸಮಾವೇಶದ ಮೂಲಕ ಪ್ರತಿಪಕ್ಷಗಳ ಆಪಾದನೆಗಳಿಗೆ ಉತ್ತರ ನೀಡಲು ಸಿದ್ದರಾಮಯ್ಯ ಮುಂದಾಗಿದ್ದು, ಹೆಚ್ಚು ಜನ ಸೇರಿಸಲು ಪ್ರಮುಖವಾಗಿ 6 ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

cm siddaramaiah
Koo

ಮೈಸೂರು: ಬಿಜೆಪಿ- ಜೆಡಿಎಸ್‌ ಪಾದಯಾತ್ರೆ (BJP-JDS Padayatra) ಮೈಸೂರು (Mysore) ತಲುಪುವ ಒಂದು ದಿನ ಮೊದಲೇ ಭಾರಿ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ದೋಸ್ತಿಗಳಿಗೆ ಟಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಸಜ್ಜಾಗಿದ್ದಾರೆ. ನಾಳೆ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್‌ನ (Congress) ʼಜನಾಂದೋಲನ ಸಮಾವೇಶʼಕ್ಕೆ ಸುಮಾರು 2 ಲಕ್ಷ ಜನ ಸೇರಿಸಲು ಕೈ ಪಡೆ ಚಿಂತಿಸಿದೆ.

ನಾಳೆ ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಜನಾಂದೋಲನ ಸಮಾವೇಶದ ಮೂಲಕ ಪ್ರತಿಪಕ್ಷಗಳ ಆಪಾದನೆಗಳಿಗೆ ಉತ್ತರ ನೀಡಲು ಸಿದ್ದರಾಮಯ್ಯ ಮುಂದಾಗಿದ್ದು, ಹೆಚ್ಚು ಜನ ಸೇರಿಸಲು ಪ್ರಮುಖವಾಗಿ 6 ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಸೂಚನೆ ಕೊಡಲಾಗಿದೆ. ಜೊತೆಗೆ ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಆಗಮಿಸಲಿದ್ದಾರೆ.

ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡಲಿದ್ದು, ಬಿಜೆಪಿ-ಜೆಡಿಎಸ್ ಕಾಲದ ಹಗರಣಗಳ ಕುರಿತು ಪ್ರಸ್ತಾಪ ಮಾಡಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ಭ್ರಷ್ಟಾಚಾರ ಪ್ರಕರಣಗಳ ಪ್ರಸ್ತಾಪ ಮಾಡಲಿದ್ದಾರೆ.

ಇದಕ್ಕೂ ಮೊದಲು ರಾಜ್ಯ ರಾಜಕೀಯ ಇತಿಹಾಸದಲ್ಲಿ ಬಿಎಸ್‌ವೈ- ಎಚ್‌ಡಿಕೆ ನಡುವೆ ನಡೆದ ಟಾಕ್ ಫೈಟ್ ವಿಡಿಯೋ ತುಣುಕುಗಳ ಪ್ರದರ್ಶನ ಏರ್ಪಡಿಸಲಾಗಿದ್ದು, ಬಿಜೆಪಿ ಆಡಳಿತ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಹೇಳಿಕೆಗಳನ್ನೂ ಪ್ರದರ್ಶಿಸಲಾಗುತ್ತದೆ.

ಹಿಂದೆ ಹೆಚ್‌ಡಿಕೆ ಕುಟುಂಬದ ವಿರುದ್ಧ ಬಿಎಸ್‌ವೈ ಮಾಡಿದ್ದ ಆರೋಪಗಳನ್ನು, ಹೆಚ್‌ಡಿಕೆ ಕುಟುಂಬಕ್ಕೆ ಸಂಬಂಧಿಸಿದ 42 ಸೈಟ್‌ಗಳ ಕುರಿತು ಬಿಜೆಪಿ ನೀಡಿದ್ದ ಜಾಹೀರಾತನ್ನು ಕೈ ಪಡೆ ದೊಡ್ಡ ದೊಡ್ಡ ಫ್ಲೆಕ್ಸ್ ಮಾಡಿ ಹಾಕಲಿದೆ ಎನ್ನಲಾಗಿದೆ. ನಾಳೆ ಮೈಸೂರು ನಗರದ ಉದ್ದಕ್ಕೂ ಬಿಜೆಪಿ ನೀಡಿದ್ದ ಜಾಹೀರಾತಿನ ಪ್ರತಿಯನ್ನು ಬ್ಯಾನರ್ಸ್ ಮಾಡಿ ಕಾಂಗ್ರೆಸ್‌ ಹಾಕಲಿದೆ ಎಂದು ತಿಳಿದುಬಂದಿದೆ. ಆ ಮೂಲಕ ಜೆಡಿಎಸ್- ಬಿಜೆಪಿ ನಾಯಕರಿಗೆ ಮುಜುಗರ ಸೃಷ್ಟಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.

ಒಂದಾದ್ರಾ ಸಿದ್ದರಾಮಯ್ಯ- ಬಿಕೆ ಹರಿಪ್ರಸಾದ್?‌

ಪಕ್ಷದೊಳಗೆ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಭಿನ್ನಮತ ಹೊಂದಿದ್ದ ಮುಖಂಡ ಬಿಕೆ ಹರಿಪ್ರಸಾದ್‌ ನಿನ್ನೆ ರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಹಿಂದೆ ಅಸಮಾಧಾನಗೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಬಿಕೆಹೆಚ್ ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಿಎಂ ಅವರನ್ನು ದಿಢೀರ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಸುದೀರ್ಘ ಒಂದುವರೆ ಗಂಟೆಗಳ ಕಾಲ ಸಿಎಂ ಹಾಗೂ ಹರಿಪ್ರಸಾದ್ ಮಾತುಕತೆ ನಡೆಸಿದರು. ಸಚಿವ ಮಹದೇವಪ್ಪ ಕರೆ ಮಾಡಿ ಬಿಕೆ ಹರಿಪ್ರಸಾದ್‌ಗೆ ಆಹ್ವಾನ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಬಳಿಗೆ ಹರಿಪ್ರಸಾದ್ ಅವರನ್ನು ಆರ್.ಎಲ್ ಜಾಲಪ್ಪ ಅವರ ಅಳಿಯ ನಾಗರಾಜ್ ಕರೆದುಕೊಂಡು ಹೋದರು. ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬರುವಂತೆ ಬಿಕೆ ಹರಿಪ್ರಸಾದ್‌ಗೆ ಸಿದ್ದರಾಮಯ್ಯ ಖುದ್ದು ಆಹ್ವಾನಿಸಿದರು.

ಬಿಜೆಪಿ- ಜೆಡಿಎಸ್ ಪಾದಯಾತ್ರೆಯ ಹಿನ್ನೆಲೆಯಲ್ಲಿ ಯಾವೆಲ್ಲ ಷಡ್ಯಂತ್ರ ತಮ್ಮ ವಿರುದ್ಧ ನಡೆದಿದೆ ಎಂಬ ಅಭಿಪ್ರಾಯವನ್ನು ಹರಿಪ್ರಸಾದ್‌ ಜೊತೆ ಸಿಎಂ ಹಂಚಿಕೊಂಡಿದ್ದಾರೆ. ಇದೀಗ ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬಿಕೆಎಚ್‌ ಹೋಗ್ತಾರಾ ಇಲ್ಲವಾ ಎಂಬ ಕುತೂಹಲ ಮೂಡಿದೆ. ಹೈಕಮಾಂಡ್ ನಾಯಕರ ನಡೆ ನೋಡಿ ಅವರು ತೀರ್ಮಾನ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

Continue Reading

Latest

Viral Video: ಹಿಂದೂ ಹುಡುಗನನ್ನು ಪ್ರೀತಿಸಿದ್ದಕ್ಕೆ ನಡುರಸ್ತೆಯಲ್ಲಿ ಎಲ್ಲರೆದುರೇ ತಂಗಿಯ ಕತ್ತು ಹಿಸುಕಿ ಕೊಂದ ಅಣ್ಣ!

Viral Video: ಹಿಂದೂ ಹುಡುಗನನ್ನು ಪ್ರೀತಿಸಿದಕ್ಕೆ ತನ್ನ 16 ವರ್ಷದ ಸಹೋದರಿಯನ್ನು ಸಹೋದರನೊಬ್ಬ ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರೆ ಕತ್ತು ಹಿಸುಕಿ ಕೊಂದ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ನಡೆದಿದೆ. ಈ ವಿಡಿಯೊ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈಕೆ ಮೂರು ಬಾರಿ ಮನೆಯಿಂದ ಓಡಿ ಹೋಗಿ ತಂದೆಯ ಮರ್ಯಾದೆ ತೆಗೆದಿದ್ದಾಳೆ ಹಾಗಾಗಿ ಕೊಲೆ ಮಾಡಿದೆ ಎಂದು ಆರೋಪಿ ಹೇಳಿದ್ದಾನೆ. ಹತ್ತಾರು ಮಂದಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರೂ ಯಾರೊಬ್ಬರೂ ಈ ಬಾಲಕಿಯ ನೆರವಿಗೆ ಬರಲಿಲ್ಲ.

VISTARANEWS.COM


on

Viral Video
Koo


ಹಿಂದೂ ಹುಡುಗನನ್ನು ಪ್ರೀತಿಸಿದಕ್ಕೆ ತನ್ನ 16 ವರ್ಷದ ಸಹೋದರಿಯನ್ನು ಸಹೋದರನೊಬ್ಬ ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರೆ ಕತ್ತು ಹಿಸುಕಿ ಕೊಂದ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಆತ ನಡುರಸ್ತೆಯಲ್ಲಿ ಸಹೋದರಿಯನ್ನು ಕೊಲೆ ಮಾಡುವ ಆಘಾತಕಾರಿ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ನೆಟ್ಟಿಗರನ್ನು ದಿಗ್ಭ್ರಮೆಗೊಳಿಸಿದೆ.

ವರದಿಗಳ ಪ್ರಕಾರ, ಆರೋಪಿಯನ್ನು 20 ವರ್ಷದ ಹಸೀನ್ ಎಂದು ಗುರುತಿಸಲಾಗಿದ್ದು, ಹಸೀನ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಇದೀಗ ಸಹೋದರಿಯ ಕೊಲೆ ಪ್ರಕರಣದಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಮುಸ್ಲಿಂ ಕುಟುಂಬಕ್ಕೆ ಸೇರಿದವಳಾಗಿದ್ದು, ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು. ಪೊಲೀಸರ ಮಾಹಿತಿ ಪ್ರಕಾರ, ಹುಡುಗಿ ಇತ್ತೀಚೆಗೆ ತನ್ನ ಗೆಳೆಯನೊಂದಿಗೆ ಓಡಿಹೋಗಿದ್ದಳು. ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದರಿಂದ ಪೊಲೀಸರು ಇಬ್ಬರನ್ನೂ ವಾಪಾಸು ಕರೆಸಿ ಕುಟುಂಬಕ್ಕೆ ಒಪ್ಪಿಸಿದ್ದಾರೆ.

ಸಮಾಜದಲ್ಲಿ ಮರ್ಯಾದೆಗೆ ಹೆದರಿ ಆಕೆ ಓಡಿಹೋದ ವ್ಯಕ್ತಿಯ ವಿರುದ್ಧ ಕುಟುಂಬವು ದೂರು ದಾಖಲಿಸಿಲ್ಲ ಎನ್ನಲಾಗಿದೆ. ಕುಟುಂಬದವರು ಅವಳಿಗೆ ಎಷ್ಟೇ ಬುದ್ಧಿ ಹೇಳಿದರೂ ಆಕೆ ತನ್ನ ಹಿಂದೂ ಗೆಳೆಯನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಹಾಗಾಗಿ ಆಕೆಯ ನಡವಳಿಕೆಯಿಂದ ಬೇಸರಗೊಂಡ ಕುಟುಂಬದವರು ಆಕೆಗೆ ಬೇರೆಯವರೊಂದಿಗೆ ಮದುವೆ ಮಾಡಿಸಲು ವ್ಯವಸ್ಥೆ ಮಾಡಿದರು. ಆದರೆ ಅವಳು ತನ್ನ ಪ್ರೇಮಿಯನ್ನು ಮದುವೆಯಾಗುವ ನಿರ್ಧಾರ ಮಾಡಿ ಬುಧವಾರ, ಅವಳು ಮತ್ತೆ ಅವನೊಂದಿಗೆ ಓಡಿಹೋಗಲು ಪ್ರಯತ್ನಿಸಿದ್ದಾಳೆ. ಆದರೆ ಅವಳ ಸಹೋದರ ಅವಳನ್ನು ತಡೆಯಲು ಯತ್ನಿಸಿದ್ದಾನೆ. ಆದರೆ ಅವನ ಮಾತು ಕೇಳದೆ ಆಕೆ ಮನೆಯಿಂದ ಹೊರಗೆ ಓಡಿದ್ದಾಳೆ. ಆದರೆ ಅವಳ ಸಹೋದರ ಅವಳನ್ನು ಬೆನ್ನಟ್ಟಿ ನಡು ರಸ್ತೆಯಲ್ಲಿ ಅವಳಿಗೆ ಹೊಡೆದು ನಂತರ ಜನರ ಸಮ್ಮುಖದಲ್ಲಿ ಅವಳ ಕತ್ತು ಹಿಸುಕಿ ಕೊಂದಿದ್ದಾನೆ.

ಇದನ್ನೂ ಓದಿ: 11 ವರ್ಷಗಳ ಹಿಂದೆ ಸತ್ತಿದ್ದ ಗಂಡ ಕನಸಲ್ಲಿ ಬಂದು ʼಸೇರಿದʼ; ಹಾಗಾಗಿ ಮಗು ಹುಟ್ಟಿತು ಅಂತಿದ್ದಾಳೆ ಈ ಹೆಂಗಸು!

ಘಟನೆಯ ವೈರಲ್ ವಿಡಿಯೊದಲ್ಲಿ ಸಂತ್ರಸ್ತೆ ರಸ್ತೆಯಲ್ಲಿ ಮಲಗಿದ್ದರೆ, ಆರೋಪಿ ಅವಳನ್ನು ಕತ್ತು ಹಿಸುಕುತ್ತಿದ್ದಾನೆ. ಜನರು ಸುತ್ತಲೂ ನಿಂತು ಈ ದೃಶ್ಯವನ್ನು ವೀಕ್ಷಿಸುತ್ತಿದ್ದಾರೆ. ಆರೋಪಿಗಳನ್ನು ತಡೆಯಲು ಯಾರೂ ಮುಂದಾಗುವುದಿಲ್ಲ. ಕೆಲವು ಮಕ್ಕಳು ಸಹ ಹತ್ತಿರದಲ್ಲಿ ನಿಂತು, ಆರೋಪಿ ತನ್ನ ಸಹೋದರಿಯನ್ನು ಕತ್ತು ಹಿಸುಕುವುದನ್ನು ನೋಡುತ್ತಿದ್ದಾರೆ. ವಿಡಿಯೊದಲ್ಲಿ, ಆರೋಪಿ, ಈಕೆ ಮೂರು ಬಾರಿ ಮನೆಯಿಂದ ಓಡಿ ಹೋಗಿ ತನ್ನ ತಂದೆಯ ಮರ್ಯಾದೆ ತೆಗೆದಿದ್ದಳೆ. ಅದು ಅವರ ಸಾವಿಗೆ ಕಾರಣವಾಗಬಹುದು ಎಂದು ತಾನು ಹೀಗೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Continue Reading

ಕ್ರೀಡೆ

Mary Kom: ಒಂದೇ ತಾಸಿನಲ್ಲಿ 2 ಕೆಜಿ ತೂಕ ಇಳಿಸಿ ಚಿನ್ನ ಗೆದ್ದಿದ್ದ ಬಾಕ್ಸರ್​ ಮೇರಿ ಕೋಮ್

Mary Kom: ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

VISTARANEWS.COM


on

Mary Kom
Koo

ನವದೆಹಲಿ: ದೇಹತೂಕ ಕಾಪಾಡಿಕೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಒಲಿಂಪಿಕ್ಸ್ ಕೂಟದಿಂದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(vinesh phogat) ಅನರ್ಹಗೊಂಡಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಅಗತ್ಯಕ್ಕಿಂತ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ಕಾರಣ ಅವರನ್ನು ಫೈನಲ್ ಸ್ಪರ್ಧೆಯಲ್ಲಿ ಆಡದಂತೆ ಅನರ್ಹಗೊಳಿಸಲಾಗಿತ್ತು. ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012 ರ ಒಲಿಂಪಿಕ್ ಕಂಚಿನ ಪದಕ ವಿಜೇತೆ, ಭಾರತದ ಖ್ಯಾತ ಬಾಕ್ಸಿಂಗ್​ ತಾರೆ ಮೇರಿ ಕೋಮ್(Mary Kom) ಕೂಡ ಹಿಂದೊಮ್ಮೆ ತೂಕದ ಸಮಸ್ಯೆಯಿಂದ ಅನರ್ಹಗೊಳ್ಳುವ ಭೀತಿಯನ್ನು ಎದುರಿಸಿದ್ದರಂತೆ. ಈ ವಿಚಾರವನ್ನು ಅವರೇ ಈಗ ಬಹಿರಂಗಪಡಿಸಿದ್ದಾರೆ.

ವಿನೇಶ್ ಫೋಗಟ್ ಘಟನೆಯ ಬಳಿಕ ಸಂದರ್ಶನವೊಂದರಲ್ಲಿ ಮಾತನಾಡಿದ ಖ್ಯಾತ ಮಹಿಳಾ ಬಾಕ್ಸರ್ ಮೇರಿ ಕೋಮ್, 2018ರಲ್ಲಿ ಪೊಲೆಂಡ್‌ನ ಗ್ಲಿವೈಸ್‌ನಲ್ಲಿ ನಡೆದಿದ್ದ ಮಹಿಳೆಯರ 13ನೇ ಸಿಲೆಸಿಯನ್ ಓಪನ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ನನಗೆ ತೂಕದ ಸಮಸ್ಯೆ ಎದುರಾಗಿತ್ತು. ನಾನು ಸ್ಪರ್ಧಿಸುವ ವಿಭಾಗದಲ್ಲಿ 48 ಕೆಜಿ ತೂಕದ ಮಿತಿ ಇತ್ತು. ಅದಕ್ಕಿಂತ ಒಂದೆರಡು ಕಿಲೋಗ್ರಾಂಗಳಷ್ಟು ಹೆಚ್ಚಿನ ತೂಕ ಹೊಂದಿದ್ದೆ. ಹೀಗಾಗಿ ಅನರ್ಹದ ಭೀತಿ ಎದುರಿಸಿದ್ದೆ. ಆದರೆ, ನಾನು ಸತತವಾಗಿ ಒಂದು ಗಂಟೆ ಸ್ಕಿಪ್ಪಿಂಗ್ ಮಾಡಿದ ನಂತರ ತೂಕವನ್ನು ಇಳಿಸಲು ಸಾಧ್ಯವಾಯಿತು” ಎಂದು ಮೇರಿ ಕೋಮ್‌ ಅಂದಿನ ಘಟನೆಯನ್ನು ಮೆಲುಕು ಹಾಕಿದ್ದಾರೆ.

ಇದನ್ನೂ ಓದಿ Paris Olympics: ಶ್ರೀಜೇಶ್​ಗೆ ಸಿಗಲಿ ಗೆಲುವಿನ ವಿದಾಯ; ಇಂದು ಭಾರತ-ಸ್ಪೇನ್​ ಕಂಚಿನ ಕಾದಾಟ

ಚಿನ್ನ ಗೆದ್ದಿದ್ದ ಕೋಮ್​


ಅಚ್ಚರಿ ಎಂದರೆ ಕೋಮ್​ ಒಂದು ಗಂಟೆಯ ಅವಧಿಯಲ್ಲಿ 2 ಕೆಜಿ ತೂಕ ಇಳಿಸಿ ಫೈನಲ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು. ತೂಕ ಇಳಿಸುವ ಸಲುವಾಗಿ ಸತತ 1 ಗಂಟೆಗಳ ಕಾಲ ಅವರು ಸ್ಕಿಪ್ಪಿಂಗ್ ನಡೆಸಿದ್ದಾಗಿ ​ ಹೇಳಿಕೊಂಡಿದ್ದಾರೆ.

ಬೆಳ್ಳಿ ಪದಕ್ಕಕೆ ಮನವಿ ಮಾಡಿದ ವಿನೇಶ್​


ವಿನೇಶ್ ಫೋಗಟ್ ತಮ್ಮನ್ನು ಅನರ್ಹ ಮಾಡಿದ ನಿರ್ಧಾರದ ವಿರುದ್ಧ ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್ (ಸಿಎಎಸ್)ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜಂಟಿ ಬಳ್ಳಿಪದಕವನ್ನು ನೀಡುವಂತೆ ಕೋರಿದ್ದಾರೆ. ಗುರುವಾರ ಈ ಮೇಲ್ಮನವಿ ಬಗ್ಗೆ ಮಧ್ಯಂತರ ತೀರ್ಪು ನೀಡುವ ನಿರೀಕ್ಷೆ ಇದ್ದು, ಮೂಲ ನಿರ್ಧಾರವನ್ನು ಬದಲಿಸುವ ಸಾಧ್ಯತೆಯೂ ಇದೆ. ಒಲಿಂಪಿಕ್ ಕೂಟದ ಕಟ್ಟುನಿಟ್ಟಿನ ಸಂರಚನೆ ಕಾರಣದಿಂದಾಗಿ ಚಿನ್ನದ ಪದಕಕ್ಕೆ ಸ್ಪರ್ಧಿಸುವ ಅವಕಾಶವನ್ನು ನೀಡುವ ಸಾಧ್ಯತೆ ಕಡಿಮೆ. ಏಕೆಂದರೆ ಚಿನ್ನದ ಪದಕಕ್ಕಾಗಿ ಇರುವ ಸ್ಪರ್ಧೆಯ ಮರು ವೇಳಾಪಟ್ಟಿ ಸಿದ್ಧಪಡಿಸುವುದು ಸವಾಲುದಾಯಕ. ಆದರೆ ಅಧಿಕೃತ ಪ್ರಸಾರಸಂಸ್ಥೆಯಾಗಿರುವ ಜಿಯೊಸಿನಿಮಾ ಪ್ರಕಾರ, ವಿನೇಶ್ ಜಂಟಿ ಬೆಳ್ಳಿಪದಕಕ್ಕಾಗಿ ಮನವಿ ಸಲ್ಲಿಸಿದ್ದಾರೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

Continue Reading

ಪ್ರಮುಖ ಸುದ್ದಿ

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Lalbagh Flower Show: ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

VISTARANEWS.COM


on

lalbagh flower show 2024
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ (Horticulture department) ಆಯೋಜನೆಯಾಗುವ ಫಲಪುಷ್ಪ ಪ್ರದರ್ಶನ (Lalbagh Flower Show) ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಬೆಳಗ್ಗೆ ಉದ್ಘಾಟಿಸಲಿದ್ದಾರೆ. ಆಗಸ್ಟ್‌ 8ರಿಂದ 19ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಜೊತೆಗೆ ನವದೆಹಲಿಯ ಸಂಸತ್ ಭವನದ ಕಲಾಕೃತಿ ಇರಲಿದೆ. ಸಂಸತ್‌ ಭವನದ ಪ್ರತಿಕೃತಿಯು 3.6 ಲಕ್ಷ ಗುಲಾಬಿ ಹಾಗೂ 2.4 ಲಕ್ಷ ಸೇವಂತಿಗೆ ಹೂಗಳಲ್ಲಿ ಅನಾವರಣಗೊಂಡಿದೆ. ಸಂಸತ್‌ ಭವನದ ಮುಂಭಾಗದಲ್ಲಿ 12 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಪ್ರತಿಮೆ ರಾರಾಜಿಸಲಿದೆ. ಅಂಬೇಡ್ಕರ್ ಅವರ ಚೈತ್ಯಭೂಮಿ ಸ್ಮಾರಕ ಸ್ತೂಪವನ್ನು 3.4 ಲಕ್ಷ ಹೂಗಳಿಂದ ನಿರ್ಮಿಸಲಾಗಿದೆ. ಮಹಾಡ್ ಸತ್ಯಾಗ್ರಹ, ಕಲಾ ರಾಮ್‌ ದೇವಸ್ಥಾನದ ಪ್ರವೇಶ, ಕೋರೆಗಾಂವ್ ವಿಜಯೋತ್ಸವ ಮುಂತಾದ ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

216ನೇ ಫಲಪುಷ್ಪ ಪ್ರದರ್ಶನಕ್ಕೆ 10:30ಕ್ಕೆ ಚಾಲನೆ. ಅಂಬೇಡ್ಕರ್ ಮೊಮ್ಮಗ ಭೀಮರಾವ್ ಯಶ್ವಂತ್ ಅಂಬೇಡ್ಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಹೊರರಾಜ್ಯಗಳಿಂದ 8.6 ಲಕ್ಷ ಹೂವುಗಳನ್ನು ರಾಜಧಾನಿಗೆ ತರಲಾಗಿದೆ. 12 ದಿನಗಳ ಕಾಲ ನಡೆಯಲಿರುವ ಕಲರ್‌ಫುಲ್ ಪುಷ್ಪ ಪ್ರದರ್ಶನಕ್ಕೆ ಈ ಬಾರಿ 2.80 ಕೋಟಿ ವೆಚ್ಚ ಮಾಡಲಾಗಿದೆ.

ವಾಹನ ನಿಲುಗಡೆ ನಿಷೇಧ

ಲಾಲ್‌ಬಾಗ್‌ ಸುತ್ತಮುತ್ತಲ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ (Vehicle parking) ನಿಷೇಧಿಸಲಾಗಿದೆ. ನಿಷೇಧಿತ ರಸ್ತೆಗಳು ಹೀಗಿವೆ:

ಮರೀಗೌಡ ರಸ್ತೆ– ಲಾಲ್‌ಬಾಗ್‌ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿ.
ಕೆ.ಎಚ್‌. ರಸ್ತೆ – ಕೆ.ಎಚ್‌. ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ.
ಲಾಲ್‌ಬಾಗ್‌ ರಸ್ತೆ – ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್‌ ಮುಖ್ಯದ್ವಾರದವರೆಗೆ
ಸಿದ್ದಯ್ಯ ರಸ್ತೆ – ಊರ್ವಶಿ ಚಿತ್ರಮಂದಿರದ ಜಂಕ್ಷನ್‌ನಿಂದ ವಿಲ್ಸನ್‌ ಗಾರ್ಡನ್‌ 12ನೇ ಕ್ರಾಸ್‌ವರೆಗೆ
ಬಿಟಿಎಸ್ ಬಸ್ ನಿಲ್ದಾಣ – ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿ.
ಕೃಂಬಿಗಲ್‌ ರಸ್ತೆಯ ಎರಡೂ ಬದಿ
ಲಾಲ್‌ಬಾಗ್‌ ವೆಸ್ಟ್‌ಗೇಟ್‌ನಿಂದ ಆರ್‌.ವಿ. ಟೀಚರ್ಸ್‌ ಕಾಲೇಜುವರೆಗೆ.
ಆರ್‌.ವಿ. ಟೀಚರ್ಸ್‌ ಕಾಲೇಜಿನಿಂದ ಅಶೋಕ ಪಿಲ್ಲರ್‌ವರೆಗೆ.
ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ.

ವಾಹನಗಳ ನಿಲುಗಡೆಗೆ ಅವಕಾಶ ಎಲ್ಲೆಲ್ಲಿ?

  • ಮರೀಗೌಡ ರಸ್ತೆ – ಆಲ್‌ ಅಮೀನ್‌ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಕೆ.ಎಚ್‌. ರಸ್ತೆ– ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಮರೀಗೌಡ ರಸ್ತೆ – ಹಾಪ್‌ಕಾಮ್ಸ್‌ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಇದೆ.
  • ಜೆ.ಸಿ. ರಸ್ತೆ – ಕಾರ್ಪೊರೇಶನ್‌ ಪಾರ್ಕಿಂಗ್‌ ಸ್ಥಳಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ

ಟಿಕೆಟ್ ದರ ಎಷ್ಟು?

ವಯಸ್ಕರಿಗೆ ಟಿಕೆಟ್ ದರ (Ticket fees) 80 ರೂ. ಮಕ್ಕಳಿಗೆ 30 ರೂ. ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ. ಶಾಲಾ ಮಕ್ಕಳಿಗೆ ಸಂಪೂರ್ಣ ಉಚಿತವಾಗಿದೆ.

ಇದನ್ನೂ ಓದಿ: Lalbagh Flower Show: ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್‌ ಜೀವನಗಾಥೆ!

Continue Reading
Advertisement
Swapnil Kusale
ಕ್ರೀಡೆ7 mins ago

Swapnil Kusale: ತವರಿಗೆ ಮರಳಿದ ಸ್ವಪ್ನಿಲ್​ ಕುಸಾಲೆ; ಮುಂಬೈಯಲ್ಲಿ ಭರ್ಜರಿ ಸ್ವಾಗತ

Naga Chaitanya engagement Sobhita Dhulipala engaged
ಟಾಲಿವುಡ್10 mins ago

Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

Parliament Session
ರಾಜಕೀಯ33 mins ago

Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Assault Case
ಬೆಂಗಳೂರು35 mins ago

Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

Abhishek Ambareesh wife aviva is pregnant actress samalatha will become grandmother
ಸಿನಿಮಾ42 mins ago

Abhishek Ambareesh: ಗುಡ್‌ ನ್ಯೂಸ್‌ ಕೊಟ್ಟ ಅಭಿಷೇಕ್ ಅಂಬರೀಶ್; ಮಂಡ್ಯದ ಗಂಡು ಹುಟ್ಟಿ ಬರ್ತಿದ್ದಾರೆ ಅಂದ್ರು ಅಂಬಿ ಫ್ಯಾನ್ಸ್‌!

Prajwal Revanna Case HD Revanna bail plea arguments and counter arguments
ಕ್ರೈಂ49 mins ago

Prajwal Revanna Case: ರೇವಣ್ಣ, ಪ್ರಜ್ವಲ್‌ ರೇವಣ್ಣ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ

Vinesh Phogat
ಕ್ರೀಡೆ50 mins ago

Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Bangladesh Unrest
ವಿದೇಶ1 hour ago

Bangladesh Unrest: ದೇವರ ಮೂರ್ತಿಗಳು ಪುಡಿ ಪುಡಿ; ಹಿಂದೂಗಳ ರಕ್ಷಣೆಗೆ ಸೇನೆ, ಪೊಲೀಸರೇ ಹಿಂದೇಟು

Paris Olympics
ಕ್ರೀಡೆ1 hour ago

Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

Buddhadeb Bhattacharjee
ದೇಶ1 hour ago

Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌