Vinesh Phogat: ತೂಕ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯ, ಇದು ಮಹಿಳೆಯರಿಗೆ ಪಾಠ ಎಂದ ಹೇಮಾ ಮಾಲಿನಿ ಫುಲ್‌ ಟ್ರೋಲ್‌! - Vistara News

ಬಾಲಿವುಡ್

Vinesh Phogat: ತೂಕ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯ, ಇದು ಮಹಿಳೆಯರಿಗೆ ಪಾಠ ಎಂದ ಹೇಮಾ ಮಾಲಿನಿ ಫುಲ್‌ ಟ್ರೋಲ್‌!

Vinesh Phogat: ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ. ಈ ಅಹಿತಕರ ಘಟನೆಗೆ ಪ್ರತಿಕ್ರಿಯಿಸಿದ ಹಿರಿಯ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಹೇಳಿಕೆಯು ನೆಟ್ಟಿಗರಿಗೆ ಸರಿ ಎನಿಸಿಲ್ಲ.

VISTARANEWS.COM


on

Vinesh Phogat Hema Malini's Comment Loses 100 gm
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಕುಸ್ತಿಗೆ (Wrestling) ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ (Social media X) ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು. ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ. ಈ ಅಹಿತಕರ ಘಟನೆಗೆ ಪ್ರತಿಕ್ರಿಯಿಸಿದ ಹಿರಿಯ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಹೇಳಿಕೆಯು ನೆಟ್ಟಿಗರಿಗೆ ಸರಿ ಎನಿಸಿಲ್ಲ.

ಈ ಬಗ್ಗೆ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ ʻʻಇದು ತುಂಬಾ ಆಶ್ಚರ್ಯಕರವಾಗಿದೆ. 100 ಗ್ರಾಂ ಅಧಿಕ ತೂಕದ ಕಾರಣಕ್ಕಾಗಿ ಅನರ್ಹಗೊಳಿಸಿರುವುದು ವಿಚಿತ್ರವಾಗಿದೆ. ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ. ಇದು ನಮಗೆಲ್ಲರಿಗೂ ಪಾಠವಾಗಿದೆ. ಕಲಾವಿದರಿಗೆ, ಮಹಿಳೆಯರಿಗೆ ಇದು ಒಂದು ಪಾಠ. ವಿನೇಶ್​ ಆದಷ್ಟು ಬೇಗ 100 ಗ್ರಾಂ ತೂಕ ಇಳಿಸಿಕೊಳ್ಳಲಿ. ಆದರೆ ಅವರಿಗೆ ಇನ್ನೊಂದು ಅವಕಾಶ ಸಿಗುವುದಿಲ್ಲ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

ಇಂಥ ಹೇಳಿಕೆಗಳನ್ನು ನೀಡುವ ಹೇಮಾ ಮಾಲಿನಿ ಅವರು ಸಂಸದೆ ಆಗಲು ಅನರ್ಹರು ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ‘ಇಂಥವರಿಗೆ ಜನರು ಹೇಗೆ ಮತ ಹಾಕುತ್ತಾರೆ ಅಂತ ನನಗೆ ಅರ್ಥವೇ ಆಗುತ್ತಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Vinesh Phogat: ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌; ಇಂದು ತೀರ್ಪು ಪ್ರಕಟ

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ವಿನೇಶ್​ ಫೋಗಟ್​ ಅವರಿಗೆ ಧೈರ್ಯ ತುಂಬಿದ್ದಾರೆ. ಆಲಿಯಾ ಭಟ್​, ಫರ್ಹಾನ್​ ಅಖ್ತರ್​, ಕರೀನಾ ಕಪೂರ್​, ತಾಪ್ಸಿ ಪನ್ನು, ರಣವೀರ್​ ಸಿಂಗ್​, ರಕುಲ್​ ಪ್ರೀತ್​ ಸಿಂಗ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ‘ವಿನೇಶ್​ ಅವರೇ ನಮ್ಮ ಪಾಲಿನ ಚಾಂಪಿಯನ್​’ ಎಂದು ಹೇಳಿದ್ದಾರೆ. 

ವಿನೇಶ್‌ಗೆ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Kangana Ranaut: ವಿನೇಶ್‌ಗೆ ಅಭಿನಂದಿಸಿ ವ್ಯಂಗ್ಯದ ಪೋಸ್ಟ್ ಮಾಡಿದ ಬೆನ್ನಲ್ಲೇ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದ ಕಂಗನಾ ರಣಾವತ್‌!

Kangana Ranaut: ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Kangana Reacts to Vinesh Phogat's Olympics Disqualification
Koo

ಬೆಂಗಳೂರು: ಪ್ಯಾರಿಸ್ 2024ರ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಿಂದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ನಂತರ ನಟಿ-ರಾಜಕಾರಣಿ ಕಂಗನಾ ರಣಾವತ್‌ (Kangana Ranaut) ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ಸುದ್ದಿಗೆ ಪ್ರತಿಕ್ರಿಯಿಸಿದ ಕಂಗನಾ ರಣಾವತ್‌ ಇನ್‌ಸ್ಟಾದಲ್ಲಿ ʻʻಸಿಂಹಿಣಿʼʼಎಂದು ಕರೆದಿದ್ದಾರೆ. ʻʻಅಳಬೇಡ, ವಿನೇಶ್, ಇಡೀ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ” ಎಂದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ವಿನೇಶ್‌ರನ್ನು ಸಾಂತ್ವನಗೊಳಿಸುವ ಭಾರತದ ನಕ್ಷೆಯಗ್ರಾಫಿಕ್ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ ಕಂಗನಾ.

ಇದಕ್ಕೂ ಮೊದಲು ಕಂಗನಾ ಇನ್‌ಸ್ಟಾ ಸ್ಟೋರಿಯಲ್ಲಿ, ‘ಭಾರತಕ್ಕೆ ಮೊದಲ ಚಿನ್ನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತಿದ್ದೇನೆ. ವಿನೇಶ್ ಫೋಗಟ್ ಒಮ್ಮೆ ಚಳವಳಿಯಲ್ಲಿ ಭಾಗವಹಿಸಿದ್ದರು, ಅದರಲ್ಲಿ ಅವರು ‘ಮೋದಿ ನಿಮ್ಮ ಸಮಾಧಿಯನ್ನು ಅಗೆಯುತ್ತಾರೆ’ ಎಂದು ಹೇಳಿದ್ದರು. ಇದರ ಹೊರತಾಗಿಯೂ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ. ಅವರು ಅತ್ಯುತ್ತಮ ತರಬೇತಿ, ತರಬೇತುದಾರರು ಮತ್ತು ಸೌಲಭ್ಯಗಳನ್ನು ಪಡೆದರು. ಇದು ಪ್ರಜಾಪ್ರಭುತ್ವದ ಸೌಂದರ್ಯ ಮತ್ತು ಉತ್ತಮ ನಾಯಕ’ ಎಂದು ಹೇಳಿದ್ದರು. ಈ ಹೇಳಿಕೆಗೆ ಸಖತ್‌ ಚರ್ಚೆಯೂ ಆಗಿತ್ತು.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ಕಳೆದ ವರ್ಷ, 29 ವರ್ಷದ ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ, ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದೇ ಇದ್ದಾಗ ನಿರಂತರವಾಗಿ ಪ್ರತಿಭಟನೆಗಳನ್ನು ಮುನ್ನಡೆಸುವಾಗ ಅವರು ದೀರ್ಘಕಾಲದವರೆಗೆ ಕುಸ್ತಿಯಿಂದ ದೂರವಿದ್ದರು.

ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌

ಜಂಟಿಯಾಗಿ ಬೆಳ್ಳಿ ಪದಕ ಹಸ್ತಾಂತರಿಸುವಂತೆ ಕೋರಿ ವಿನೇಶ್‌ ಫೋಗಟ್‌ ಮನವಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಕೋರ್ಟ್‌ (CAS) ತನ್ನ ಅಂತಿಮ ತೀರ್ಪನ್ನು ಇಂದು (ಆಗಸ್ಟ್‌ 8) ಬೆಳಿಗ್ಗೆ 11:30ಕ್ಕೆ ಪ್ರಕಟಿಸಲಿದೆ. ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಫೋಗಟ್ ಪರವಾಗಿ ತೀರ್ಪು ನೀಡಿದರೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (International Olympic Committee) ಬೆಳ್ಳಿ ಪದಕ ನೀಡಬೇಕಾಗುತ್ತದೆ. ಹೀಗಾಗಿ ತೀರ್ಪಿಗಾಗಿ ಭಾರತೀಯರು ನಿರೀಕ್ಷೆಯೆಂದ ಕಾದು ಕುಳಿತ್ತಿದ್ದಾರೆ. ಯಾವುದೇ ಕ್ರೀಡಾ ಕೂಟದ ವೇಳೆ ಉದ್ಭವಿಸಬಹುದಾದ ವಿವಾದಗಳನ್ನು ಪರಿಹರಿಸಲು ಅಂತಾರಾಷ್ಟ್ರೀಯ ಸಂಸ್ಥೆ ಸಿಎಎಸ್‌ಯನ್ನು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸ್ಥಾಪಿಸಲಾಗಿದೆ.

ನಿವೃತ್ತಿ ಘೋಷಣೆ

ಇದೀಗ 29 ವರ್ಷದ ವಿನೇಶ್‌ ಫೋಗಟ್‌ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

Continue Reading

ಕ್ರೀಡೆ

John Abraham: ಮನು ಭಾಕರ್‌ ಗೆದ್ದ ಒಲಿಂಪಿಕ್ಸ್‌ ಪದಕ ಮುಟ್ಟಿದ ಜಾನ್‌ ಅಬ್ರಾಹಂ; ನೆಟ್ಟಿಗರಿಂದ ನಟನಿಗೆ ಕ್ಲಾಸ್‌ ಏಕೆ?

John Abraham: ಆಗಸ್ಟ್‌ 8ರ ಬುಧವಾರ ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನು ಮತ್ತು ಅವರ ಕೋಚ್​ ಜಸ್ಪಾಲ್‌ ರಾಣಾ ಅವರನ್ನು ಅಭಿಮಾನಿಗಳು ತಮ್ಮ ಹೆಗಲ ಮೇಲೆ ಎತ್ತಿಕೊಂಡು ಸಂಭ್ರಮಿಸಿದರು. ಇದಾದ ಬಳಿಕ ಮನು ಭಾಕರ್‌ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿ ಹಲವರನ್ನು ಭೇಟಿಯಾದರು. ಇನ್ನು, ಮನು ಭಾಕರ್‌ ಅವರು ಜಾನ್‌ ಅಬ್ರಾಹಂ ಅವರನ್ನು ಭೇಟಿಯಾದ ಬಳಿಕ ಸಣ್ಣದೊಂದು ವಿವಾದ ಸೃಷ್ಟಿಯಾಗಿದೆ.

VISTARANEWS.COM


on

John Abraham
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್ (Paris Olympics 2024)​ ಶೂಟಿಂಗ್​ ವಿಭಾಗದಲ್ಲಿ 2 ಐತಿಹಾಸಿಕ ಕಂಚಿನ ಪದಕ ಗೆದ್ದ ಶೂಟರ್​ ಮನು ಭಾಕರ್ (Manu Bhaker) ಅವರು ಬುಧವಾರ (ಆಗಸ್ಟ್‌ 7) ಭಾರತಕ್ಕೆ ಆಗಮಿಸಿದ್ದಾರೆ. ಅವರು ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಹೂವಿನ ಹಾರ ಮತ್ತು ಸಿಹಿ ತಿನ್ನಿಸುವ ಮೂಲಕ ಭರ್ಜರಿ ವೆಲ್​ಕಮ್​ ಮಾಡಲಾಯಿತು. ಇದಾದ ಬಳಿಕ ಬಾಲಿವುಡ್‌ ನಟ ಜಾನ್‌ ಅಬ್ರಾಹಂ ಅವರು ಮನು ಭಾಕರ್‌ ಅವರನ್ನು ಭೇಟಿಯಾಗಿದ್ದು, ಅವರ ಪದಕಗಳನ್ನು ನಟ ಮುಟ್ಟಿದ್ದು ಈಗ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಮನು ಭಾಕರ್‌ ಜತೆಗಿನ ಫೋಟೊವನ್ನು ಜಾನ್‌ ಅಬ್ರಾಹಂ ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅವರು ಮನು ಭಾಕರ್‌ ಅವರ ಒಂದು ಪದಕವನ್ನು ಕೈಯಲ್ಲಿ ಹಿಡಿದಿರುವುದು ಈಗ ಜನರ ಆಕ್ರೋಶಕ್ಕೆ ಕಾರಣವಾಗಿದೆ. “ಒಲಿಂಪಿಕ್ಸ್‌ನಲ್ಲಿ ಮನು ಭಾಕರ್‌ ಅವರು ಪದಕಗಳನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಅವರು ಗೆದ್ದಿರುವ ಪದಕಗಳನ್ನು ನೀವೇ ಗೆದ್ದಿರುವಂತೆ ಹಿಡಿದುಕೊಂಡು ಪೋಸ್‌ ನೀಡುವುದು ಸಮಂಜಸವಲ್ಲ” ಎಂದು ಜನ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

22 ವರ್ಷದ ಮನು ಭಾಕರ್ ಇದಕ್ಕೂ ಮುನ್ನ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಹ್ಯಾಟ್ರಿಕ್​ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದರು.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಅಂದಿನ ಸೋಲಿನಿಂದ ಮನನೊಂದು ಶೂಟಿಂಗ್​ಗೆ ವಿದಾಯ ಹೇಳಲು ಬಯಸಿದ್ದ ಮನು, ತಂದೆಯ ಆತ್ಮವಿಶ್ವಾಸದ ಮಾತಿನಂತೆ ಶೂಟಿಂಗ್​ನಲ್ಲಿ ಮುಂದುವರಿದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆದ್ದು ಭಾರತೀಯ ಒಲಿಂಪಿಕ್ಸ್​ ಕ್ರೀಡಾ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ: Manu Bhaker: ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಮನು ಭಾಕರ್​ಗೆ ತವರಿನಲ್ಲಿ ಅದ್ಧೂರಿ ಸ್ವಾಗತ

Continue Reading

ಬಾಲಿವುಡ್

Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

Akshay Kumar: ಸಾಜಿದ್ ಖಾನ್ ನಿರ್ದೇಶನದ ಹೇ ಬೇಬಿ ಸಿನಿಮಾ ಇಂಗ್ಲಿಷ್ ಸಿನಿಮಾ ‘ತ್ರೀ ಮೆನ್ ಅಂಡ್ ಎ ಬೇಬಿ’ ಚಿತ್ರದ ರಿಮೇಕ್ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿತ್ತು. ಈ ಮೂವರು ನಟರ ಜೊತೆಗೆ, ಒಬ್ಬಳು ಮುದ್ದಾದ ಹುಡುಗಿ ಕೂಡ ಇದ್ದಳು. ಇದೀಗ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ‘ಖೇಲ್ ಖೇಲ್ ಮೇ’ ಸಿನಿಮಾ ಪ್ರಚಾರ ಮಾಡಲು ಮತ್ತೆ ಮೂವರು ಒಂದಾಗಿದ್ದಾರೆ.

VISTARANEWS.COM


on

Akshay Kumar Riteish Fardeen recreate Heyy Babyy
Koo

ಬೆಂಗಳೂರು: ಅಕ್ಷಯ್ ಕುಮಾರ್ (Akshay Kumar) ನಟನೆಯ ‘ಹೇ ಬೇಬಿ’ ಸಿನಿಮಾ 2007ರಲ್ಲಿ ರಿಲೀಸ್ ಆಯಿತು. ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು.  ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ಇದೀಗ ‘ಹೇ ಬೇಬಿ’ ಚಿತ್ರದ ಸ್ಟೆಪ್ಸ್‌ವನ್ನು ರಿ ಕ್ರಿಯೇಟ್‌ ಮಾಡಿದ್ದಾರೆ. ಅಕ್ಷಯ್ ಅವರ ಮುಂಬರುವ ಚಿತ್ರ, ‘ಖೇಲ್ ಖೇಲ್ ಮೇ’ ಸಿನಿಮಾ ಪ್ರಚಾರ ಮಾಡಲು ಮತ್ತೆ ಮೂವರು ಒಂದಾಗಿ, ಚಿತ್ರದ ಹೊಸ ಹಾಡು ‘ಹೌಲಿ ಹೌಲಿ’ಯ ಸಾಂಗ್‌ಗೆ ಹೆಜ್ಜೆ ಇಟ್ಟಿದ್ದಾರೆ.

ಸಾಜಿದ್ ಖಾನ್ ನಿರ್ದೇಶನದ ಹೇ ಬೇಬಿ ಸಿನಿಮಾ ಇಂಗ್ಲಿಷ್ ಸಿನಿಮಾ ‘ತ್ರೀ ಮೆನ್ ಅಂಡ್ ಎ ಬೇಬಿ’ ಚಿತ್ರದ ರಿಮೇಕ್ ಆಗಿತ್ತು. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿತ್ತು. ಈ ಮೂವರು ನಟರ ಜೊತೆಗೆ, ಒಬ್ಬಳು ಮುದ್ದಾದ ಹುಡುಗಿ ಕೂಡ ಇದ್ದಳು. ಇದೀಗ ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ‘ಖೇಲ್ ಖೇಲ್ ಮೇ’ ಸಿನಿಮಾ ಪ್ರಚಾರ ಮಾಡಲು ಮತ್ತೆ ಮೂವರು ಒಂದಾಗಿದ್ದಾರೆ.

ಅಕ್ಷಯ್ ಅವರು ಮಂಗಳವಾರ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಮೋಜಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಹೀಗೆ ಬರೆದಿದ್ದಾರೆ, “ಹೇ ಬೇಬಿ ಹೌಲಿ ಹೌಲಿಯನ್ನು ಭೇಟಿಯಾದಾಗ, ಈಗ ನೀವು ನಿಮ್ಮ ಸ್ನೇಹಿತರೊಂದಿಗೆ ಹೌಲಿ ಹೌಲಿ ರೀಲ್ಸ್‌ ಮಾಡಿ , ನಮ್ಮೊಂದಿಗೆ ಹಂಚಿಕೊಳ್ಳಿ. ಮತ್ತು 15 ಆಗಸ್ಟ್, 2024 ರಂದು ಚಿತ್ರಮಂದಿರಗಳಲ್ಲಿ ಖೇಲ್ ಖೇಲ್ ಮೇ ಬಿಡುಗಡೆಯಾಗುತ್ತಿದೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ಈ ತಿಂಗಳ ಆರಂಭದಲ್ಲಿ, ‘ಖೇಲ್ ಖೇಲ್ ಮೇ’ ತಂಡ ಟ್ರೈಲರ್ ಅನ್ನು ಬಿಡುಗಡೆ ಗೊಳಿಸಿದರು. ಅಕ್ಷಯ್, ತಾಪ್ಸಿ ಪನ್ನು, ವಾಣಿ ಕಪೂರ್, ಫರ್ದೀನ್ ಖಾನ್ ಮತ್ತು ಆಮಿ ವಿರ್ಕ್ ನಟಿಸಿರುವ ಈ ಚಿತ್ರ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಮರ್ ಕೌಶಿಕ್ ನಿರ್ದೇಶನದ ರಾಜ್‌ಕುಮಾರ್ ರಾವ್ ಮತ್ತು ಶ್ರದ್ಧಾ ಕಪೂರ್ ಅವರ ʻಸ್ಟ್ರೀಟ್ 2ʼ ರೊಂದಿಗೆ ಘರ್ಷಣೆಯಾಗುವ ಈ ಚಿತ್ರವನ್ನು ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಮೂಲಕ ಅಕ್ಷಯ್ ಕುಮಾರ್ ದೊಡ್ಡ ಫ್ಲಾಪ್ ಕಂಡರು. ‘ಸರ್ಫಿರಾ’ ಕೂಡ ಕಳಪೆ ಗಳಿಕೆ ಮಾಡಿತು.

Continue Reading

ಸಿನಿಮಾ

Divya Seth: ಸುಷ್ಮಾ ಸೇಠ್ ಮೊಮ್ಮಗಳು, ʻಜಬ್ ವಿ ಮೆಟ್ ʼಚಿತ್ರದ ಖ್ಯಾತ ನಟಿಯ ಪುತ್ರಿ ನಿಧನ

Divya Seth: ವರದಿಯು ಪ್ರಕಾರ ಮಿಹಿಕಾಗೆ ಮೊದಲು ಜ್ವರ ಮತ್ತು ನಂತರ ಮೂರ್ಛೆ ರೋಗ ಇತ್ತು ಎಂದು ವರದಿಯಾಗಿದೆ. ಇದೀಗ ಮಗಳ ಸಾವಿನಿಂದ ಕುಟುಂಬ ಇನ್ನೂ ಆಘಾತದಲ್ಲಿದೆ. ಕಳೆದ ವಾರವಷ್ಟೇ, ಕುಟುಂಬದ ಮೂರು ತಲೆಮಾರಿನ ಫೋಟೊವನ್ನು ದಿವ್ಯಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು.

VISTARANEWS.COM


on

Divya Seth Sushma Seth granddaughter Mihika Shah dies Divya Seth shares the news
Koo

ಬೆಂಗಳೂರು: ಹಿರಿಯ ನಟಿ ಸುಷ್ಮಾ ಸೇಠ್ (Sushma Seth) ಅವರ ಮೊಮ್ಮಗಳು, ನಟಿ ದಿವ್ಯಾ ಸೇಠ್ ಶಾ (Divya Seth) ಅವರ ಪುತ್ರಿ ಮಿಹಿಕಾ ಶಾ (Mihika Shah) ಸೋಮವಾರ ನಿಧನರಾದರು. ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದಿಲ್ಲವಾದರೂ, ಕೆಲವು ವರದಿಗಳ ಪ್ರಕಾರ ಅನಾರೋಗ್ಯದಿಂದಾಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ದುಃಖದ ಸುದ್ದಿಯನ್ನು ದಿವ್ಯಾ ಅವರು ಮಂಗಳವಾರ ಸೋಷಿಯಲ್‌ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ದಿವ್ಯಾ ಬರೆದುಕೊಂಡಿದ್ದಾರೆ, “ಆಗಸ್ಟ್ 8 ರಂದು ಮಿಹಿಕಾ ಸೇಠ್‌ ಗೌರವ ನಮನ ಪ್ರಾರ್ಥನೆ ನಡೆಯಲಿದೆ ಎಂದು ಪೋಸ್ಟ್ ಮೂಲಕ ತಿಳಿಸಿದ್ದಾರೆ. .” ನೋಟಿನಲ್ಲಿ ದಿವ್ಯಾ ಮತ್ತು ಆಕೆಯ ಪತಿ ಸಿದ್ಧಾರ್ಥ್ ಶಾ ಸಹಿ ಕೂಡ ಇದೆ. ಮಗಳ ಸಾವಿಗೆ ಕಾರಣವನ್ನು ಅವರು ಟಿಪ್ಪಣಿಯಲ್ಲಿ ಬಹಿರಂಗಪಡಿಸಿಲ್ಲ.

ವರದಿಯು ಪ್ರಕಾರ ಮಿಹಿಕಾಗೆ ಮೊದಲು ಜ್ವರ ಮತ್ತು ನಂತರ ಮೂರ್ಛೆ ರೋಗ ಇತ್ತು ಎಂದು ವರದಿಯಾಗಿದೆ. ಇದೀಗ ಮಗಳ ಸಾವಿನಿಂದ ಕುಟುಂಬ ಇನ್ನೂ ಆಘಾತದಲ್ಲಿದೆ. ಕಳೆದ ವಾರವಷ್ಟೇ, ಕುಟುಂಬದ ಮೂರು ತಲೆಮಾರಿನ ಫೋಟೊವನ್ನು ದಿವ್ಯಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದರು. ಚಿತ್ರದಲ್ಲಿ, ತನ್ನ ಮಗಳೊಂದಿಗೆ ಹಸಿರು ಉಡುಪಿನಲ್ಲಿ ಮತ್ತು ಅವರ ತಾಯಿ ಕೆಂಪು ಉಡುಪಿನಲ್ಲಿ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

ಮಿಹಿಕಾ ಹಿರಿಯ ನಟಿ ಸುಷ್ಮಾ ಸೇಠ್ ಅವರ ಮೊಮ್ಮಗಳು, ʻಕಭಿ ಖುಷಿ ಕಭಿ ಗಮ್ …, ಚಲ್ ಮೇರೆ ಭಾಯ್, ಕಲ್ ಹೋ ನ ಹೋ, ನಾಗಿನಾ ಮತ್ತು ಸ್ಟೂಡೆಂಟ್ ಆಫ್ ದಿ ಸ್ಟೂಡೆಂಟ್ ಮುಂತಾದ ಚಿತ್ರಗಳಲ್ಲಿ ಜನಪ್ರಿಯ ಪಾತ್ರಗಳನ್ನು ನಿರ್ವಹಿಸುವ ಮೂಲಕ ತಮ್ಮ ಬಹುಮುಖ ಪ್ರತಿಭೆಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

ದಿವ್ಯಾ ಸೇಠ್ ಅವರು ʻಜಬ್ ವಿ ಮೆಟ್ʼ, ʻಲ್ ಧಡಕ್ನೆ ದೋʼ, ʻಆರ್ಟಿಕಲ್ 370ʼ ನಂತಹ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬನೇಗಿ ಅಪ್ನಿ ಬಾತ್ ಮತ್ತು ದೇಖ್ ಭಾಯಿ ದೇಖ್‌ನಂತಹ ದೂರದರ್ಶನ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರೆ. 1978ರಲ್ಲಿ ಬಾಲಿವುಡ್‌ನ ಜೂನೂನ್ ಚಿತ್ರದ ಮೂಲಕ ಬೆಳ್ಳಿ ಪರದೆಗೆ ಕಾಲಿಟ್ಟ ಸುಷ್ಮಾ ಸೇಟ್‌, ಸಿಲ್ಸಿಲಾ, ಪ್ರೇಮ್ ರೋಗ್, ರಾಮ್ ತೇರಿ ಗಂಗಾ ಮೈಲಿ, ದೀವಾನಾ ಸೇರಿದಂತೆ ಹಲವು ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. 

Continue Reading
Advertisement
Swapnil Kusale
ಕ್ರೀಡೆ11 mins ago

Swapnil Kusale: ತವರಿಗೆ ಮರಳಿದ ಸ್ವಪ್ನಿಲ್​ ಕುಸಾಲೆ; ಮುಂಬೈಯಲ್ಲಿ ಭರ್ಜರಿ ಸ್ವಾಗತ

Naga Chaitanya engagement Sobhita Dhulipala engaged
ಟಾಲಿವುಡ್14 mins ago

Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

Parliament Session
ರಾಜಕೀಯ37 mins ago

Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Assault Case
ಬೆಂಗಳೂರು39 mins ago

Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

Abhishek Ambareesh wife aviva is pregnant actress samalatha will become grandmother
ಸಿನಿಮಾ46 mins ago

Abhishek Ambareesh: ಗುಡ್‌ ನ್ಯೂಸ್‌ ಕೊಟ್ಟ ಅಭಿಷೇಕ್ ಅಂಬರೀಶ್; ಮಂಡ್ಯದ ಗಂಡು ಹುಟ್ಟಿ ಬರ್ತಿದ್ದಾರೆ ಅಂದ್ರು ಅಂಬಿ ಫ್ಯಾನ್ಸ್‌!

Prajwal Revanna Case HD Revanna bail plea arguments and counter arguments
ಕ್ರೈಂ53 mins ago

Prajwal Revanna Case: ರೇವಣ್ಣ, ಪ್ರಜ್ವಲ್‌ ರೇವಣ್ಣ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ

Vinesh Phogat
ಕ್ರೀಡೆ54 mins ago

Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Bangladesh Unrest
ವಿದೇಶ1 hour ago

Bangladesh Unrest: ದೇವರ ಮೂರ್ತಿಗಳು ಪುಡಿ ಪುಡಿ; ಹಿಂದೂಗಳ ರಕ್ಷಣೆಗೆ ಸೇನೆ, ಪೊಲೀಸರೇ ಹಿಂದೇಟು

Paris Olympics
ಕ್ರೀಡೆ1 hour ago

Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

Buddhadeb Bhattacharjee
ದೇಶ2 hours ago

Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌