Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು? - Vistara News

ಪ್ರಮುಖ ಸುದ್ದಿ

Lalbagh Flower Show: ಸಸ್ಯಕಾಶಿಯಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ; ಏನೇನಿದೆ, ಪಾರ್ಕಿಂಗ್‌ ಎಲ್ಲಿ, ಟಿಕೆಟ್‌ ದರ ಎಷ್ಟು?

Lalbagh Flower Show: ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

VISTARANEWS.COM


on

lalbagh flower show 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ (Independence Day) ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ (Horticulture department) ಆಯೋಜನೆಯಾಗುವ ಫಲಪುಷ್ಪ ಪ್ರದರ್ಶನ (Lalbagh Flower Show) ಇಂದಿನಿಂದ ಲಾಲ್‌ಬಾಗ್‌ನಲ್ಲಿ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಬೆಳಗ್ಗೆ ಉದ್ಘಾಟಿಸಲಿದ್ದಾರೆ. ಆಗಸ್ಟ್‌ 8ರಿಂದ 19ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ (Dr BR Ambedkar) ಥೀಮ್ ಆಧರಿಸಿದೆ. ಜೊತೆಗೆ ನವದೆಹಲಿಯ ಸಂಸತ್ ಭವನದ ಕಲಾಕೃತಿ ಇರಲಿದೆ. ಸಂಸತ್‌ ಭವನದ ಪ್ರತಿಕೃತಿಯು 3.6 ಲಕ್ಷ ಗುಲಾಬಿ ಹಾಗೂ 2.4 ಲಕ್ಷ ಸೇವಂತಿಗೆ ಹೂಗಳಲ್ಲಿ ಅನಾವರಣಗೊಂಡಿದೆ. ಸಂಸತ್‌ ಭವನದ ಮುಂಭಾಗದಲ್ಲಿ 12 ಅಡಿ ಎತ್ತರದ ಡಾ.ಬಿ.ಆರ್. ಅಂಬೇಡ್ಕರ್‌ ಅವರ ಪ್ರತಿಮೆ ರಾರಾಜಿಸಲಿದೆ. ಅಂಬೇಡ್ಕರ್ ಅವರ ಚೈತ್ಯಭೂಮಿ ಸ್ಮಾರಕ ಸ್ತೂಪವನ್ನು 3.4 ಲಕ್ಷ ಹೂಗಳಿಂದ ನಿರ್ಮಿಸಲಾಗಿದೆ. ಮಹಾಡ್ ಸತ್ಯಾಗ್ರಹ, ಕಲಾ ರಾಮ್‌ ದೇವಸ್ಥಾನದ ಪ್ರವೇಶ, ಕೋರೆಗಾಂವ್ ವಿಜಯೋತ್ಸವ ಮುಂತಾದ ಅಂಬೇಡ್ಕರ್‌ ಜೀವನದ ಮಹತ್ವದ ಸನ್ನಿವೇಶಗಳ ಕಲಾಕೃತಿಗಳ ಪ್ರದರ್ಶನವಿದೆ.

216ನೇ ಫಲಪುಷ್ಪ ಪ್ರದರ್ಶನಕ್ಕೆ 10:30ಕ್ಕೆ ಚಾಲನೆ. ಅಂಬೇಡ್ಕರ್ ಮೊಮ್ಮಗ ಭೀಮರಾವ್ ಯಶ್ವಂತ್ ಅಂಬೇಡ್ಕರ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿರಲಿದ್ದಾರೆ. ಹೊರರಾಜ್ಯಗಳಿಂದ 8.6 ಲಕ್ಷ ಹೂವುಗಳನ್ನು ರಾಜಧಾನಿಗೆ ತರಲಾಗಿದೆ. 12 ದಿನಗಳ ಕಾಲ ನಡೆಯಲಿರುವ ಕಲರ್‌ಫುಲ್ ಪುಷ್ಪ ಪ್ರದರ್ಶನಕ್ಕೆ ಈ ಬಾರಿ 2.80 ಕೋಟಿ ವೆಚ್ಚ ಮಾಡಲಾಗಿದೆ.

ವಾಹನ ನಿಲುಗಡೆ ನಿಷೇಧ

ಲಾಲ್‌ಬಾಗ್‌ ಸುತ್ತಮುತ್ತಲ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆ (Vehicle parking) ನಿಷೇಧಿಸಲಾಗಿದೆ. ನಿಷೇಧಿತ ರಸ್ತೆಗಳು ಹೀಗಿವೆ:

ಮರೀಗೌಡ ರಸ್ತೆ– ಲಾಲ್‌ಬಾಗ್‌ ಮುಖ್ಯದ್ವಾರದಿಂದ ನಿಮ್ಹಾನ್ಸ್‌ವರೆಗೆ ರಸ್ತೆಯ ಎರಡೂ ಬದಿ.
ಕೆ.ಎಚ್‌. ರಸ್ತೆ – ಕೆ.ಎಚ್‌. ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿ.
ಲಾಲ್‌ಬಾಗ್‌ ರಸ್ತೆ – ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್‌ ಮುಖ್ಯದ್ವಾರದವರೆಗೆ
ಸಿದ್ದಯ್ಯ ರಸ್ತೆ – ಊರ್ವಶಿ ಚಿತ್ರಮಂದಿರದ ಜಂಕ್ಷನ್‌ನಿಂದ ವಿಲ್ಸನ್‌ ಗಾರ್ಡನ್‌ 12ನೇ ಕ್ರಾಸ್‌ವರೆಗೆ
ಬಿಟಿಎಸ್ ಬಸ್ ನಿಲ್ದಾಣ – ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿ.
ಕೃಂಬಿಗಲ್‌ ರಸ್ತೆಯ ಎರಡೂ ಬದಿ
ಲಾಲ್‌ಬಾಗ್‌ ವೆಸ್ಟ್‌ಗೇಟ್‌ನಿಂದ ಆರ್‌.ವಿ. ಟೀಚರ್ಸ್‌ ಕಾಲೇಜುವರೆಗೆ.
ಆರ್‌.ವಿ. ಟೀಚರ್ಸ್‌ ಕಾಲೇಜಿನಿಂದ ಅಶೋಕ ಪಿಲ್ಲರ್‌ವರೆಗೆ.
ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ವರೆಗೆ.

ವಾಹನಗಳ ನಿಲುಗಡೆಗೆ ಅವಕಾಶ ಎಲ್ಲೆಲ್ಲಿ?

  • ಮರೀಗೌಡ ರಸ್ತೆ – ಆಲ್‌ ಅಮೀನ್‌ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಕೆ.ಎಚ್‌. ರಸ್ತೆ– ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
  • ಮರೀಗೌಡ ರಸ್ತೆ – ಹಾಪ್‌ಕಾಮ್ಸ್‌ನಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ಇದೆ.
  • ಜೆ.ಸಿ. ರಸ್ತೆ – ಕಾರ್ಪೊರೇಶನ್‌ ಪಾರ್ಕಿಂಗ್‌ ಸ್ಥಳಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ

ಟಿಕೆಟ್ ದರ ಎಷ್ಟು?

ವಯಸ್ಕರಿಗೆ ಟಿಕೆಟ್ ದರ (Ticket fees) 80 ರೂ. ಮಕ್ಕಳಿಗೆ 30 ರೂ. ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ. ಶಾಲಾ ಮಕ್ಕಳಿಗೆ ಸಂಪೂರ್ಣ ಉಚಿತವಾಗಿದೆ.

ಇದನ್ನೂ ಓದಿ: Lalbagh Flower Show: ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್‌ ಜೀವನಗಾಥೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Divorce Case: ಪ್ರತಿ ಬಾರಿ ʼಸರಸʼ ಆಡಿದಾಗಲೂ ಕಾಸು ಕೊಡಲೇಬೇಕು! ಹೆಂಡತಿಯ ಡಿಮ್ಯಾಂಡ್‌ ಕೇಳಿ ಡಿವೋರ್ಸ್‌ ಪಡೆದ ಗಂಡ!

Divorce Case: ತೈವಾನ್‌ನಲ್ಲಿ ಮಹಿಳೆಯೊಬ್ಬಳು ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಬರುವ ತನ್ನ ಪತಿಯ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ. ಆಕೆ ಪ್ರತಿಬಾರಿ ಇದೇ ರೀತಿ ಮಾಡುತ್ತಿದ್ದರಿಂದ ನೊಂದ ಪತಿ ಆಕೆಗೆ ವಿಚ್ಛೇದನ ನೀಡಿದ್ದಾನೆ. ಪತಿ ಪ್ರತಿ ಬಾರಿ ಲೈಂಗಿಕ ಕ್ರಿಯೆ ನಡೆಸಿದಾಗ ಪತ್ನಿ 1,260 ರೂ. ನೀಡುವಂತೆ ಬೇಡಿಕೆ ಇಡುತ್ತಿದ್ದಳು. ಅಲ್ಲದೇ ಪತ್ನಿ ತನ್ನ ಸಂಬಂಧಿಕರ ಬಳಿ “”ನನ್ನ ಪತಿ ತುಂಬಾ ದಪ್ಪ ಇದ್ದಾನೆ. ಹಾಗಾಗಿ ಆತ ಲೈಂಗಿಕ ತೃಪ್ತಿ ನೀಡಲು ಅಸಮರ್ಥನಾಗಿದ್ದಾನೆʼʼ ಎಂದು ಹೇಳುವ ಮೂಲಕ ಅವನನ್ನು ಅವಮಾನಿಸುತ್ತಿದ್ದಳಂತೆ. ಇದರಿಂದ ಬೇಸತ್ತ ಗಂಡನ ಕತೆ ಇಲ್ಲಿದೆ.

VISTARANEWS.COM


on

Divorce Case
Koo


ದಂಪತಿ ನಡುವೆ ಪ್ರೀತಿ, ಪ್ರಣಯ ಇರುವುದು ಸಹಜ. ಆದರೆ ಲೈಂಗಿಕ ಸುಖ ನೀಡಲು ಹೆಂಡತಿ ಯಾವತ್ತಾದರೂ ಗಂಡನಲ್ಲಿ ಹಣ ಕೇಳುತ್ತಾಳೆಯೇ? ಹಾಗೇ ಮಾಡಿದರೆ ಪತ್ನಿಗೂ ಲೈಂಗಿಕ ಕಾರ್ಯಕರ್ತರಿಗೂ ಯಾವುದೇ ವ್ಯತ್ಯಾಸವಿರುವುದಿಲ್ಲ. ಆದರೆ ಇಲ್ಲೊಬ್ಬ ಮಹಿಳೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಬರುವ ತನ್ನ ಪತಿಯ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ. ಆಕೆ ಪ್ರತಿಬಾರಿ ಇದೇ ರೀತಿ ಮಾಡುತ್ತಿದ್ದರಿಂದ ನೊಂದ ಪತಿ ಆಕೆಗೆ ವಿಚ್ಛೇದನ (Divorce Case) ನೀಡಿದ ಘಟನೆ ತೈವಾನ್‍ನಲ್ಲಿ ನಡೆದಿದೆ.

2014ರಲ್ಲಿ ವಿವಾಹವಾದ ಈ ದಂಪತಿಯ ನಡುವೆ ಆರಂಭದಲ್ಲಿ ಸಾಮರಸ್ಯದ ಸಂಬಂಧವಿತ್ತು. ಈ ದಂಪತಿಗೆ ಇಬ್ಬರು ಮಕ್ಕಳು ಜನಿಸಿದ್ದರು. ಆದರೆ, 2017ರಲ್ಲಿ ಪತ್ನಿ ತಿಂಗಳಿಗೊಮ್ಮೆ ಮಾತ್ರ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಾಯಿಸಿದಾಗ ಅವರ ಸಂಬಂಧದಲ್ಲಿ ಬಿರುಕು ಮೂಡಲು ಶುರುವಾಯಿತು. ಅಲ್ಲದೇ ಪತ್ನಿ ತನ್ನ ಸಂಬಂಧಿಕರ ಬಳಿ ತನ್ನ ಪತಿ ತುಂಬಾ ದಪ್ಪ ಇದ್ದಾನೆ. ಹಾಗಾಗಿ ಆತ ಲೈಂಗಿಕ ತೃಪ್ತಿ ನೀಡಲು ಅಸಮರ್ಥನಾಗಿದ್ದಾನೆ ಎಂದು ಹೇಳುವ ಮೂಲಕ ಅವನನ್ನು ಅವಮಾನಿಸುತ್ತಿದ್ದಳು. ಈ ವಿಚಾರ ತಿಳಿದ ಪತಿ ತನ್ನ ಪತ್ನಿಯಿಂದ ದೂರವಾಗಲು ನಿರ್ಧರಿಸಿ 2021ರಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಆದರೆ ಪತ್ನಿ ತನ್ನ ತಪ್ಪನ್ನು ಒಪ್ಪಿಕೊಂಡು ಸುಧಾರಿಸಿಕೊಂಡು ಹೋಗುವುದಾಗಿ ಭರವಸೆ ನೀಡಿದ್ದಾಳೆ. ಆಗ ಕೇಸ್ ವಾಪಸ್ ಪಡೆಯುವಂತೆ ಮನವೊಲಿಸಿದ್ದಾಳೆ.

ಅವಳ ಭರವಸೆಗಳನ್ನು ನಂಬಿ, ನಂತರ ಪತಿ ತಮ್ಮ ಆಸ್ತಿಯನ್ನು ಅವಳ ಹೆಸರಿಗೆ ನೋಂದಾಯಿಸಿದ್ದಾನೆ. ಇಷ್ಟಾದರೂ ಆಕೆ ಅವನನ್ನು ಭಾವನಾತ್ಮಕವಾಗಿ ನಿಂದನೆ ಮಾಡುವುದನ್ನು ಮುಂದುವರಿಸಿದ್ದಾಳೆ. ಅಲ್ಲದೇ ಪತಿ ಪ್ರತಿ ಬಾರಿ ಲೈಂಗಿಕ ಕ್ರಿಯೆ ನಡೆಸಿದಾಗ ಪತ್ನಿ ಹಣ (ಭಾರತೀಯ ಮೌಲ್ಯದಲ್ಲಿ 1,260 ರೂ.) ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ. ಹಾಗಾಗಿ ಈ ವರ್ಷ ಆತ ಮತ್ತೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಸರಿಪಡಿಸಲು ಸಾಧ್ಯವಿಲ್ಲ ಎಂದು ಅರಿತ ನ್ಯಾಯಾಲಯ ಇವರಿಗೆ ವಿಚ್ಛೇದನ ನೀಡಿದೆ. ಆದರೆ ಹೈಕೋರ್ಟ್‌ಗೆ ಪತ್ನಿ ಮನವಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ಅದನ್ನು ತಿರಸ್ಕರಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ರೀಲ್ಸ್‌ಗಾಗಿ ಬೆಡ್‌ರೂಮ್‌ನಲ್ಲಿ ಅರೆನಗ್ನ ಗೆಳತಿ ಕೈಗೆ ಪಿಸ್ತೂಲ್ ಕೊಟ್ಟ ಪೊಲೀಸ್ ಅಧಿಕಾರಿ!

ಇಂಥ ಪ್ರಕರಣವು ತೈವಾನ್‍ನಲ್ಲಿ ಇದೇ ಮೊದಲಲ್ಲ. ಈ ಹಿಂದೆ ಇದೇ ರೀತಿಯ ಘಟನೆ ದಾಖಲಾಗಿದೆ. 2014ರಲ್ಲಿ ಇನ್ನೊಬ್ಬ ತೈವಾನ್ ಮಹಿಳೆ ತನ್ನ ಪತಿಗೆ ಲೈಂಗಿಕತೆಗಾಗಿ ಮತ್ತು ಊಟಕ್ಕಾಗಿ 5,000 ರೂ. ಶುಲ್ಕ ವಿಧಿಸಿದ್ದಳು. ಈ ವಿವಾದವು ಪೊಲೀಸ್ ಠಾಣೆಯಲ್ಲಿ ಇತ್ಯರ್ಥವಾಗಿತ್ತು. ಅಲ್ಲಿ ಪತಿ ತನ್ನ ಕುಟುಂಬಕ್ಕೆ ತಿಂಗಳಿಗೆ 50,000 ರೂ. ನೀಡಲು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ತೈವಾನ್‍ನಲ್ಲಿ ವಿಚ್ಛೇದನ ಪ್ರಮಾಣವು ಕಳೆದ ವರ್ಷ ಶೇಕಡಾ 0.218 ರಷ್ಟಿತ್ತು ಎನ್ನಲಾಗಿದೆ.

Continue Reading

ದೇಶ

Vinesh Phogat: ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಹಗುರವಾಗಿ ಮಾತ್ನಾಡಿದ್ರಾ ಸುಧಾ ಮೂರ್ತಿ?

Paris Olympics 2024: ದೇಶದ ಗಮನ ಸೆಳೆದಿರುವ ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾ, ಇಂತಹದ್ದ ವಿಚಾರಗಳು ನಡೆಯುತ್ತಿರುತ್ತವೆ. ಏನು ಮಾಡೋಕೆ ಆಗುತ್ತದೆ? ಇದು ಆಟದ ಒಂದು ಭಾಗ. ಈ ಬಗ್ಗೆ ಬೇಸರವಿದೆ. ಅಷ್ಟು ಮಾತ್ರ ಹೇಳಲು ಸಾಧ್ಯ ಎಂದು ಹೇಳಿದ್ದಾರೆ. ಸುಧಾಮೂರ್ತಿಯವರ ಈ ಪ್ರತಿಕ್ರಿಯೆ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಸುಧಾ ಮೂರ್ತಿಯವರು ಇಷ್ಟು ದೊಡ್ಡ ವಿಚಾರದ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸಿದ್ದಾರೆ.

VISTARANEWS.COM


on

vinesh phogat
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌(Paris Olympics 2024)ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅನರ್ಹಗೊಂಡಿರುವ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಬಗ್ಗೆ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ(Sudha Murthy) ನೀಡಿರುವ ಪ್ರತಿಕ್ರಿಯೆ ಇದೀಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.

ದೇಶದ ಗಮನ ಸೆಳೆದಿರುವ ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾ, ಇಂತಹದ್ದ ವಿಚಾರಗಳು ನಡೆಯುತ್ತಿರುತ್ತವೆ. ಏನು ಮಾಡೋಕೆ ಆಗುತ್ತದೆ? ಇದು ಆಟದ ಒಂದು ಭಾಗ. ಈ ಬಗ್ಗೆ ಬೇಸರವಿದೆ. ಅಷ್ಟು ಮಾತ್ರ ಹೇಳಲು ಸಾಧ್ಯ ಎಂದು ಹೇಳಿದ್ದಾರೆ. ಸುಧಾಮೂರ್ತಿಯವರ ಈ ಪ್ರತಿಕ್ರಿಯೆ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಸುಧಾ ಮೂರ್ತಿಯವರು ಇಷ್ಟು ದೊಡ್ಡ ವಿಚಾರದ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸಿದ್ದಾರೆ.

ಸರಳತೆಯ ಪರಮಾವಧಿ ಇದು ಎಂದು ಒಬ್ಬ ನೆಟ್ಟಿಗ ಪ್ರತಿಕ್ರಿಯಿಸಿದ್ದು, ವಿನೇಶ್‌ ಅನರ್ಹತೆ ವಿಚಾರ ತಿಳಿದು ಕೋಟ್ಯಂತರ ಭಾರತೀಯರ ಹೃದಯ ಒಡೆದು ನುಚ್ಚುನೂರಾಗಿದೆ. ಇದೀಗ ಸುಧಾ ಮೂರ್ತಿಯವರು ಆ ಗಾಯ ಮೇಲೆ ಉಪ್ಪು ಸವರುತ್ತಿದ್ದಾರೆ ಎಂದು ಮತ್ತೊರ್ವ ಕಿಡಿಕಾರಿದ್ದಾನೆ. ಸುಧಾ ಮೂರ್ತಿಯವರ ಹೇಳಿಕೆ ಸರಿಯಾಗಿದೆ. ಬಹಳ ಪ್ರ್ಯಾಕ್ಟಿಕಲ್‌ ರೀತಿಯಲ್ಲಿ ಸತ್ಯ ಹೇಳುತ್ತಿದ್ದಾರೆ ಎಂದು ಇನ್ನೊರ್ವ ನೆಟ್ಟಿಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ:Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Continue Reading

ಪ್ರಮುಖ ಸುದ್ದಿ

Hindu-Lingayat Row: ಹಿಂದೂ ಧರ್ಮ ಎಲ್ಲ ಅನಿಷ್ಟ, ಅನಾಚಾರಗಳಿಂದ ಕೂಡಿದ್ದು: ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

Hindu-Lingayat Row: ಆದರೆ ವೈದಿಕ ಪರಂಪರೆಯ ಬೇರುಗಳು ನಮ್ಮ ತಲೆಯಲ್ಲಿ ಬಲವಾಗಿ ತುಂಬಿಕೊಂಡಿವೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ, ಹಿಂದೂ ಧರ್ಮದ ಭಾಗ ಅಲ್ಲ ಎಂಬುದನ್ನು ಎಲ್ಲರೂ ಮಾನ್ಯ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

VISTARANEWS.COM


on

sanehalli panditaradhya sree hindu lingayat row
Koo

ಚಿತ್ರದುರ್ಗ: ಹಿಂದೂ ಧರ್ಮ (Hindu Religion) ಎಂಬುದು ಎಲ್ಲ ಅನಿಷ್ಟ, ಅನಾಚಾರಗಳಿಂದ ಕೂಡಿದ್ದು. ಲಿಂಗಾಯತರು (Lingayat) ಆ ಧರ್ಮದ ಭಾಗವಲ್ಲ. ಲಿಂಗಾಯತವೇ ಬೇರೆ ಧರ್ಮ ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ (Sanehalli Panditharadhya swamiji) ಹೇಳಿದ್ದಾರೆ. ಆ ಮೂಲಕ ಹಿಂದೂ- ಲಿಂಗಾಯತ ಧರ್ಮ ಚರ್ಚೆಗೆ (Hindu-Lingayat Row) ಇನ್ನಷ್ಟು ಬಿಸಿ ಏರಿಸಿದ್ದಾರೆ.

ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಯವರ 30ನೇ ಸ್ಮರಣಾರ್ಥ ಕಾರ್ಯಕ್ರಮದ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ವೇದಿಕೆಯಿಂದ ಈ ಹೇಳಿಕೆ ನೀಡಿದರು. ಲಿಂಗಾಯತ ಧರ್ಮವನ್ನು ಹೊಗಳುವ ಭರದಲ್ಲಿ ಹಿಂದೂ ಧರ್ಮದ ಬಗ್ಗೆ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಲಿಂಗಾಯತ ಧರ್ಮ, ಹಿಂದೂ ಧರ್ಮದ ಒಂದು ಭಾಗ ಅಲ್ಲ. ಹಿಂದೂ ಧರ್ಮ ಅಂದ್ರೆ ಎಲ್ಲ ರೀತಿಯ ಅನಿಷ್ಟ ಅನಾಚಾರ ಒಳಗೊಂಡಿರುವಂಥದ್ದು. ಹಿಂದೂ ಒಂದರ್ಥದಲ್ಲಿ ಧರ್ಮವೇ ಅಲ್ಲ. ಸಿಂಧೂ ನದಿ ದಡದಿಂದ‌ ಈಚೆಗಿನವರು ಧೂ ದೇಶದವರು ಎಂಬ ಅರ್ಥದಲ್ಲಿ ಹಿಂದೂ ಅನ್ನೋದಾದ್ರೆ, ಹಿಂದೂ ಒಂದು ಧರ್ಮ ಎಂದಾದ್ರೆ ನಾವು ಹಿಂದೂ ಧರ್ಮದವರಲ್ಲ. ನಾವು ಸ್ವತಂತ್ರ ಲಿಂಗಾಯತ ಧರ್ಮದವರು ಎಂದು ಅವರು ನುಡಿದರು.

ಆದರೆ ವೈದಿಕ ಪರಂಪರೆಯ ಬೇರುಗಳು ನಮ್ಮ ತಲೆಯಲ್ಲಿ ಬಲವಾಗಿ ತುಂಬಿಕೊಂಡಿವೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ, ಹಿಂದೂ ಧರ್ಮದ ಭಾಗ ಅಲ್ಲ ಎಂಬುದನ್ನು ಎಲ್ಲರೂ ಮಾನ್ಯ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಪ್ರತ್ಯುತ್ತರ ನೀಡಿದ ವಚನಾನಂದ ಶ್ರೀಗಳು

ಈ ಮಾತುಗಳಿಗೆ ಸಭೆಯ ವೇದಿಕೆ ಮೇಲಿನಿಂದಲೇ ಪ್ರತಿಕ್ರಿಯಿಸಿದ ಪಂಚಮಸಾಲಿ ಪೀಠದ ಶ್ವಾಸಗುರು ವಚನಾನಂದ ಶ್ರೀಗಳು (Vachanananda Swamiji), ನಾವೆಲ್ಲ ಒಗ್ಗಟ್ಟಾಗಿ ಹೋದಾಗ ಮಾತ್ರ ಸಮಾಜಕ್ಕೆ ಭವಿಷ್ಯವಿದೆ ಎಂದು ನುಡಿದರು. ಭಕ್ತರಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದರೂ ವಚನಾನಂದ ಶ್ರೀ ಪ್ರತಿಕ್ರಿಯೆ ಮುಂದುವರಿಸಿ ಭಾಷಣ ಮಾಡಿದರು.

ಹಿಂದೂ ಎಂಬುದು ಅತ್ಯಂತ ಸತ್ಯ ಸನಾತನವಾದುದು, ಯಾರು ಏನು ಬೇಕಾದ್ರೂ ಹೇಳಬಹುದು. ಹಿಂದೂ ಎನ್ನುವುದು ಒಂದು ವಿಶಾಲ ಮಹಾ ಸಾಗರ. ಅದರಲ್ಲಿ ಕೇವಲ ವೈದಿಕರಿರಲಿಲ್ಲ. ಅದು ಕೇವಲ ದ್ವೈತ, ಅದ್ವೈತ ಅಲ್ಲ. ಅದು ಶಕ್ತಿ, ವಿಶಿಷ್ಟಾಧ್ವೈತ ಎಲ್ಲವನ್ನು ಒಳಗೊಂಡಂಥದ್ದು. ಎಲ್ಲಾ ಮೂಲ ಪುರುಷರು ಇದ್ದದ್ದು ಹಿಂದೂ ಧರ್ಮದಲ್ಲಿ ಎಂದರು.

ವೀರಶೈವ, ಲಿಂಗಾಯತ ತತ್ವಗಳು ಬೇರೆ ಬೇರೆ ಇರಬಹುದು. ಆದರೆ ನಾವೆಲ್ಲ ಒಗ್ಗಟ್ಟಾಗಿ ಹೋದಾಗ ಮಾತ್ರ ಸಮಾಜಕ್ಕೆ ಭವಿಷ್ಯವಿದೆ. ನಿಮ್ಮ ಮಠ, ಪೀಠ ತತ್ವಗಳು ಏನೇ ಇರಬಹುದು. ಸಾಮಾಜಿಕ, ರಾಜಕೀಯ, ಬೌದ್ಧಿಕವಾಗಿ ನಾವೆಲ್ಲ ಒಂದಾಗಿರಬೇಕು. ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಈ ರೀತಿಯ ಬೇಧ ಭಾವ ಇರಲಿಲ್ಲ ಎಂದು ಅವರು ನುಡಿದರು.

ಇದನ್ನೂ ಓದಿ: Reservation: ಮೊದಲ ಹಂತದ ಹೋರಾಟ ಯಶಸ್ವಿ, 2ನೇ ಹಂತದ ಹೋರಾಟಕ್ಕೆ ಅಣಿ: ಶ್ರೀ ವಚನಾನಂದ ಸ್ವಾಮೀಜಿ

Continue Reading

ದೇಶ

Parliament Session: ವಕ್ಫ್ ಮಸೂದೆ ಮಂಡನೆ: ಸಂಸತ್ತಿನಲ್ಲಿ ಪ್ರತಿಪಕ್ಷಗಳಿಂದ ಭಾರೀ ಕೋಲಾಹಲ

Parliament Session:ಕಾಂಗ್ರೆಸ್‌ ಸಂಸದ ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ನಾವು ಹಿಂದೂಗಳು. ಆದರೆ ನಮ್ಮ ಧರ್ಮದ ಜೊತೆಗೆ ನಾವು ಇತರ ಧರ್ಮಗಳ ನಂಬಿಕೆಯನ್ನು ಗೌರವಿಸುತ್ತೇವೆ. ಈ ಮಸೂದೆಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಗಳ ದೃಷ್ಟಿಯಿಂದ ಮಂಡನೆ ಮಾಡಲಾಗಿದೆ. ಕಳೆದ ಬಾರಿ ಭಾರತದ ಜನತೆ ನಿಮಗೆ ಪಾಠ ಕಲಿಸಿದ್ದು ನಿಮಗೆ ಅರ್ಥವಾಗುತ್ತಿಲ್ಲ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ ಎಂದರು

VISTARANEWS.COM


on

Parliament Session
Koo

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ(Union Minister of Minority Affairs) ಕಿರಣ್‌ ರಿಜಿಜು(Kiren Rijiju) ಬಹುಚರ್ಚಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು(Waqf Amendment) Bill) ಸಂಸತ್‌(Parliament Session)ನಲ್ಲಿ ಇಂದು ಮಂಡಿಸಿದ್ದಾರೆ. ನಿರೀಕ್ಷೆಯಂತೆ ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ಗದ್ದಲವೆಬ್ಬಿಸಿ, ಭಾರೀ ವಿರೋಧ ವ್ಯಕ್ತಪಡಿಸಿವೆ.

ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಹಾಗೂ ವಕ್ಫ್ ಕಾಯಿದೆ, 1995 ಅನ್ನು ʼಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ-1995ʼ ಎಂದು ಮರುನಾಮಕರಣ ಮಾಡುವ ಗುರಿಯೊಂದಿಗೆ ಇಂದು ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿದೆ.

ಪ್ರತಿಪಕ್ಷಗಳ ವಿರೋಧ

ಇನ್ನು ಈ ಮಸೂದೆಗೆ ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, ತಕ್ಷಣ ಇದನ್ನು ಹಿಂಪಡೆಯುವಂತೆ ಆಗ್ರಹಿಸಿವೆ. ಕಾಂಗ್ರೆಸ್‌ ಸಂಸದ ಕೆ.ಸಿ. ವೇಣುಗೋಪಾಲ್‌ ಮಾತನಾಡಿ, ನಾವು ಹಿಂದೂಗಳು. ಆದರೆ ನಮ್ಮ ಧರ್ಮದ ಜೊತೆಗೆ ನಾವು ಇತರ ಧರ್ಮಗಳ ನಂಬಿಕೆಯನ್ನು ಗೌರವಿಸುತ್ತೇವೆ. ಈ ಮಸೂದೆಯು ಮಹಾರಾಷ್ಟ್ರ, ಹರಿಯಾಣ ಚುನಾವಣೆಗಳ ದೃಷ್ಟಿಯಿಂದ ಮಂಡನೆ ಮಾಡಲಾಗಿದೆ. ಕಳೆದ ಬಾರಿ ಭಾರತದ ಜನತೆ ನಿಮಗೆ ಪಾಠ ಕಲಿಸಿದ್ದು ನಿಮಗೆ ಅರ್ಥವಾಗುತ್ತಿಲ್ಲ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ. ಈ ಮಸೂದೆಯು ಸಂವಿಧಾನದ ಮೇಲಿನ ಮೂಲಭೂತ ದಾಳಿಯಾಗಿದೆ…ಈ ಮಸೂದೆಯ ಮೂಲಕ, ಅವರು ಮುಸ್ಲಿಮೇತರರೂ ವಕ್ಫ್ ಆಡಳಿತ ಮಂಡಳಿಯ ಸದಸ್ಯರಾಗಬೇಕೆಂಬ ನಿಬಂಧನೆಯನ್ನು ಹಾಕುತ್ತಿದ್ದಾರೆ. ಇದು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ನೇರ ದಾಳಿಯಾಗಿದೆ ಎಂದು ಕಿಡಿ ಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರಾಜೀವ್‌ ರಂಜನ್‌, ಇದು ಮುಸ್ಲಿಮರ ವಿರುದ್ಧ ಹೇಗೆ? ಪಾರದರ್ಶಕತೆ ತರಲು ಈ ಕಾನೂನನ್ನು ಮಾಡಲಾಗುತ್ತಿದೆ. ಪ್ರತಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ತಿರುಗೇಟು ಕೊಟ್ಟರು.

ಏನೆಲ್ಲ ತಿದ್ದುಪಡಿ?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Continue Reading
Advertisement
Shobha Karandlaje
ದೇಶ12 mins ago

Shobha Karandlaje: ತಮಿಳಿಗರಿಗೆ ಅವಮಾನ- ಕ್ಷಮೆಯಾಚಿಸಿದರೆ ಕೇಸ್‌ ರದ್ದು; ಹೈಕೋರ್ಟ್‌ನಲ್ಲಿ ಎಜಿ ಮಾಹಿತಿ

Dog bite
ಬೆಂಗಳೂರು13 mins ago

Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

International Cat Day
ಪರಿಸರ29 mins ago

International Cat Day: ಇಂದು ಬೆಕ್ಕಿನ ದಿನ; ಇದರ ಆಯುಷ್ಯ, ನಿದ್ದೆ, ಶೃಂಗಾರ ಇತ್ಯಾದಿ ಸಂಗತಿಗಳು ಕುತೂಹಲಕರ!

Gautam Gambhir
ಕ್ರೀಡೆ41 mins ago

Gautam Gambhir: 27 ವರ್ಷದ ಬಳಿಕ ಲಂಕಾ ವಿರುದ್ಧ ಸೋಲು; ಗಂಭೀರ್​ ಫುಲ್​ ಟ್ರೋಲ್​

rave party telugu actress hema
ಕ್ರೈಂ45 mins ago

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ 85 ಜನರ ಮೇಲೆ ಚಾರ್ಜ್‌ಶೀಟ್, ಸುಳ್ಳು ಹೇಳಿದ ನಟಿ ಹೇಮಾ ಮೇಲೂ ಚಾರ್ಜ್

Divorce Case
Latest50 mins ago

Divorce Case: ಪ್ರತಿ ಬಾರಿ ʼಸರಸʼ ಆಡಿದಾಗಲೂ ಕಾಸು ಕೊಡಲೇಬೇಕು! ಹೆಂಡತಿಯ ಡಿಮ್ಯಾಂಡ್‌ ಕೇಳಿ ಡಿವೋರ್ಸ್‌ ಪಡೆದ ಗಂಡ!

Maravoor bridge in danger Vehicular traffic suspended
ದಕ್ಷಿಣ ಕನ್ನಡ54 mins ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Naga Chaitanya Sobhita Love Story REVEALED age gap
ಟಾಲಿವುಡ್59 mins ago

Naga Chaitanya: ನಾಗ ಚೈತನ್ಯ- ಶೋಭಿತಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Murder Case
Latest1 hour ago

Murder Case: ಒಂದೇ ಹುಡುಗಿಯನ್ನು ಪ್ರೀತಿಸಿದ ಸಹೋದರರು; ಈ ತ್ರಿಕೋನ ಪ್ರೇಮ ಕಥೆ ಕೊಲೆಯಲ್ಲಿ ಅಂತ್ಯ!

vinesh phogat
ದೇಶ1 hour ago

Vinesh Phogat: ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಹಗುರವಾಗಿ ಮಾತ್ನಾಡಿದ್ರಾ ಸುಧಾ ಮೂರ್ತಿ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌