Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ! - Vistara News

ಸ್ಯಾಂಡಲ್ ವುಡ್

Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!

Tharun Sudhir: ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ. ಆಗಸ್ಟ್ 10ರಂದು ಆರತಕ್ಷತೆ ಕಾರ್ಯಕ್ರಮ ನಡೆದರೆ ಆಗಸ್ಟ್ 11ರಂದು ವಿವಾಹ ಕಾರ್ಯಕ್ರಮ ನೆರವೇರುತ್ತಿದೆ.

VISTARANEWS.COM


on

Tharun Sudhir Sonal Monteiro invite celebrities and politicians for marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ (Tharun Sudhir) ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಮದುವೆಗೂ ಮುನ್ನ ಫ್ಯಾಮಿಲಿ ಜೊತೆ ಸೋನಾಲ್ ಬ್ಯಾಚುಲರೇಟ್ ಪಾರ್ಟಿ ಮಾಡಿಕೊಂಡಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಕಿಚ್ಚ ಸುದೀಪ್​, ರಚಿತಾ ರಾಮ್​, ಶ್ರೀಮುರಳಿ, ಮಾಲಾಶ್ರೀ ಮುಂತಾದವರನ್ನು ಆಹ್ವಾನಿಸಲಾಗಿದೆ. ರಾಜಕೀಯ ಮುಖಂಡರಿಗೂ ಆಹ್ವಾನ ನೀಡಲಾಗಿದೆ.

ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದರು.

ಇದನ್ನೂ ಓದಿ: Actor Yash: ಸರಳವಾಗಿ ಜರುಗಿತು ಯಶ್‌ ʻಟಾಕ್ಸಿಕ್‌ʼ ಸಿನಿಮಾ ಮುಹೂರ್ತ: ಫೋಟೊಗಳು ವೈರಲ್‌!

ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ.

ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ ಹಾಗೂ ಎರಡು ಪೆನ್ ಮತ್ತು ಒಂದು ಸೀಡ್ ಬಾಲ್ ಇವೆ. ವಿಶೇಷ ಅಂದರೆ ಮದುವೆ ಮುಗಿದ ನಂತರ ಪತ್ರಿಕೆ ಏನ್ ಮಾಡೋದು ಅಂತ ಯೋಚನೆ ಮಾಡೋ ಹಾಗಿಲ್ಲ, ಯಾಕಂದ್ರೆ ಸೋನಾಲ್ ಮತ್ತು ತರುಣ್ ಮದ್ವೆ ನಂತರ ಪತ್ರಿಕಯನ್ನ ಒಂದು ಮಣ್ಣಿನ ಪಾಟ್‌ನಲ್ಲಿ ಹಾಕಿದ್ದರೆ ಅದು ಮಣ್ಣಿನಲ್ಲಿ ಬೆರೆದು ಗಿಡ ಬೆಳೆಯುತ್ತೆ. ಅದಷ್ಟೇ ಅಲ್ಲ ಖಾಲಿ ಪುಸ್ತಕದಲ್ಲಿ ಬರೆದು ಹಾಳೆ ಖಾಲಿ ಆದ ನಂತರ ಅದು ಮಣ್ಣು ಸೇರಿದ್ದರೆ ಅದ್ರಿಂದಲೂ ಹೂವಿನ ಗಿಡ ಬೆಳೆಯುತ್ತೆ. ಇನ್ನು ಪೆನ್ ಮತ್ತು ಪೆನ್ಸಿಲ್ ಬೆರೆದು ಖಾಲಿ ಆದ್ರೆ ಅದನ್ನು ಮಣ್ಣಿಗೆ ಹಾಕಿದ್ರೆ ಚಂದದ ಹೂವಿನ ಹಾಗೂ ತರಕಾರಿ ಗಿಡ ಬೆಳೆಯುತ್ತೆ. ಹೀಗೆ ತಮ್ಮ ವಿವಾಹದ ಆಹ್ವಾನ ಪತ್ರಿಕೆ ಸಖತ್ ಸ್ಪೆಷಲ್ ಮತ್ತು ಪರಿಸರ ಸ್ನೇಹಿ ಆಗಿರಲಿ ಎಂದು ತರುಣ್ ಈ ರೀತಿ ಪ್ಲಾನ್ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ‘ಮರ್ಫಿ’ ಸಿನಿಮಾದ ಹಾಡು ಬಿಡುಗಡೆ; ಸಮಯ ಸ್ಮರಿಸಿದ ಪ್ರಭು ಮುಂಡ್ಕೂರ್!

Kannada New Movie: BSP ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್ ವರ್ಮಾ ಜೊತೆಗೂಡಿ ಚಿತ್ರಕಥೆ ಬರೆದಿದ್ದಾರೆ. ರೊಮ್ಯಾಂಟಿಕ್ ಡ್ರಾಮಾ ಎಳೆಯ ʻಮರ್ಫಿʼ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.

VISTARANEWS.COM


on

Kannada New Movie Samaya Lyrical Murphy Roshini Varma Rajat Hegde
Koo

ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಪ್ರಭು ಮುಂಡ್ಕೂರ್ ನಟನೆಯ ʻಮರ್ಫಿʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟಂಬರ್ 27ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯಗಳಿಗೆ ಚಾಲನೆ ಕೊಡಲಾಗಿದೆ. ಮರ್ಫಿ ಅಂಗಳದಿಂದ ಸಮಯ ಎಂಬ ಮನಮೋಹಕ ಹಾಡು ಬಿಡುಗಡೆ ಮಾಡಲಾಗಿದೆ. ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಗೀತೆಗೆ ಧನಂಜಯ್ ರಂಜನ್ ಪದ ಗೀಚಿದ್ದು, ರಜತ್ ಹೆಗ್ಡೆ ಧ್ವನಿಯಾಗಿದ್ದಾರೆ. ನಾಯಕ ಪ್ರಭು ಮುಂಡ್ಕೂರ್, ನಾಯಕಿಯರಾದ ರೋಶಿನಿ ಪ್ರಕಾಶ್ ಹಾಗೂ ಇಳಾ ವೀರಮಲ್ಲ ಹಾಡಿನಲ್ಲಿ ಮಿಂಚಿದ್ದಾರೆ.

BSP ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್ ವರ್ಮಾ ಜೊತೆಗೂಡಿ ಚಿತ್ರಕಥೆ ಬರೆದಿದ್ದಾರೆ. ರೊಮ್ಯಾಂಟಿಕ್ ಡ್ರಾಮಾ ಎಳೆಯ ʻಮರ್ಫಿʼ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ನವೀನ್ ರೆಡ್ಡಿ, ಪ್ರಭು, ವರ್ಮಾ ಸಂಭಾಷಣೆ ಬರೆದಿದ್ದು, ಮಹೇಶ ತೊಗಟ ಸಂಕಲನ, ಆದರ್ಶ ಆರ್ ಕ್ಯಾಮೆರಾ ಹಿಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!

ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ ನಡಿ ರಾಮ್ ಕೋ ಸೋಮಣ್ಣ ಹಾಗೂ ಬಿಎಸ್ ಪಿ ವರ್ಮಾ ಮರ್ಫಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಯು ಸರ್ಟಿಫಿಕೇಟ್ ಪಡೆದು ಸೆನ್ಸಾರ್ ಪಾಸಾಗಿರುವ ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಎಮೋಷನಲ್ ಅಂಶಗಳನ್ನು ಅಚ್ಚುಕಟ್ಟಾಗಿ ಕಟ್ಟಿ ಕೊಡಲಾಗಿದೆ. ಒಂದೇ ಮಾತಿನಲ್ಲಿ ಹೇಳಬೇಕು ಎಂದರೆ ಮನೆಮಂದಿಯಲ್ಲಾ ಕುಳಿತು ನೋಡುವಂತಹ ಒಂದು ನೀಟಾದ ಸಿನಿಮಾ ಎನ್ನುವುದು ಚಿತ್ರತಂಡ ಅಭಿಪ್ರಾಯ. ಇನ್ನು ಮರ್ಫಿಯಲ್ಲಿ ಏಳು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಪಕ್ಕ ಸೆಪ್ಟಂಬರ್ 27ರಂದು ರಾಜ್ಯಾದ್ಯಂತ ಮರ್ಫಿ ಸಿನಿಮಾ ಬೆಳ್ಳಿಪರದೆಗೆ ಎಂಟ್ರಿ ಕೊಡಲಿದೆ.

Continue Reading

ಸಿನಿಮಾ

Abhishek Ambareesh: ಗುಡ್‌ ನ್ಯೂಸ್‌ ಕೊಟ್ಟ ಅಭಿಷೇಕ್ ಅಂಬರೀಶ್; ಮಂಡ್ಯದ ಗಂಡು ಹುಟ್ಟಿ ಬರ್ತಿದ್ದಾರೆ ಅಂದ್ರು ಅಂಬಿ ಫ್ಯಾನ್ಸ್‌!

Abhishek Ambareesh: ಅಂಬಿ ಕುಟುಂಬದಲ್ಲಿ ಇದೇ ವಾರ ಅವಿವ ಬಿಡಪ ಅವರಿಗೆ ಅದ್ಧೂರಿಯಾಗಿ ಸೀಮಂತ ಮಾಡಲು ಪ್ಲಾನ್ ಮಾಡಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಇದೇ ವಾರ ಅದ್ಧೂರಿಯಾಗಿ ಅಂಬಿ ನಿವಾಸದಲ್ಲಿ ಸೀಮಂತ ಕಾರ್ಯ ನೇರವೇರಲಿದೆ ಎನ್ನಲಾಗಿದೆ.

VISTARANEWS.COM


on

Abhishek Ambareesh wife aviva is pregnant actress samalatha will become grandmother
Koo

ಬೆಂಗಳೂರು: ಅಭಿಷೇಕ್ ಅಂಬರೀಶ್ (Abhishek Ambareesh) ಹಾಗೂ ಅವಿವ ಬಿಡಪ ಜೂನ್‌ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ ಜ್ಯೂನಿಯರ್‌ ರೆಬೆಲ್‌ಸ್ಟಾರ್ ಖ್ಯಾತಿಯ ಅಭಿಷೇಕ್ ಅಂಬರೀಶ್ ಅವರು ಅಪ್ಪನಾಗುವ ಖುಷಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಮದುವೆಯಾಗಿ ಒಂದು ವರ್ಷದಲ್ಲಿಯೇ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ರೆಡಿಯಾಗಿದ್ದಾರೆ ಎನ್ನಲಾಗಿದೆ.

ನಾಲ್ಕು ವರ್ಷಗಳಿಂದ ಅಭಿಷೇಕ್ ಮತ್ತು ಅವಿವ ಬಿಡಪ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿ ವಿಚಾರವನ್ನು ಕುಟುಂಬಕ್ಕೆ ತಿಳಿಸಿ ಗ್ರೀನ್ ಸಿಗ್ನಲ್ ಪಡೆದು ನಿಶ್ಚಿತಾರ್ಥ ಮಾಡಿಕೊಂಡು ಮದುವೆ ಆದರು. ಇದೀಗ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಪ್ಪ ಆಗ್ತಿರುವ ಖುಷಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಇನ್ನು ವರ್ಷ ತುಂಬುವಷ್ಟರಲ್ಲಿ ಅಭಿಷೇಕ್ ಅಂಬರೀಶ್ ಪತ್ನಿ ಅವಿವ ಬಿಡಪ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಅಂಬಿ ಕುಟುಂಬದಲ್ಲಿ ಇದೇ ವಾರ ಅವಿವ ಬಿಡಪ ಅವರಿಗೆ ಅದ್ಧೂರಿಯಾಗಿ ಸೀಮಂತ ಮಾಡಲು ಪ್ಲಾನ್ ಮಾಡಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಇದೇ ವಾರ ಅದ್ಧೂರಿಯಾಗಿ ಅಂಬಿ ನಿವಾಸದಲ್ಲಿ ಸೀಮಂತ ಕಾರ್ಯ ನೇರವೇರಲಿದೆ ಎನ್ನಲಾಗಿದೆ.ಸೊಸೆ ಗರ್ಭಿಣಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಂಬಿ ಅಭಿಮಾನಿಗಳು ಮತ್ತೆ ರೆಬೆಲ್‌ಸ್ಟಾರ್ ಹುಟ್ಟಿಬರಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!

ಅವಿವ ಬಿಡಪ ಫ್ಯಾಷನ್‌ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮದೇ ಸ್ವಿಮ್ ಸೂಟ್‌ ಬ್ರ್ಯಾಂಡ್‌ನ ಲಾಂಚ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅಪ್ಪ ಆಗುತ್ತಿದ್ದಾರೆಯೇ? ನೀವು ಅಜ್ಜಿ ಆಗುತ್ತಿದ್ದೀರಿಯೇ? (Abhishek Ambareesh And Aviva) ಎಂಬ ಪ್ರಶ್ನೆ ಸಮಮತಾ ಅವರಿಗೆ ಬಂದಿತ್ತು. ಆಗ ಸಮಲತಾ ಅವರು ʻʻಸದ್ಯಕ್ಕೆ ಇಲ್ಲ. ಸಿಹಿ ಸುದ್ದಿ ಇದ್ದಾಗ ಖಂಡಿತ ಹೇಳುತ್ತೇನೆʼʼಎಂದಿದ್ದರು.

Continue Reading

ಸ್ಯಾಂಡಲ್ ವುಡ್

Actor Yash: ಸರಳವಾಗಿ ಜರುಗಿತು ಯಶ್‌ ʻಟಾಕ್ಸಿಕ್‌ʼ ಸಿನಿಮಾ ಮುಹೂರ್ತ: ಫೋಟೊಗಳು ವೈರಲ್‌!

Actor Yash: ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ವೆಂಕಟ್ ಕೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವೆಂಕಟ್ ಜೊತೆ ಇರೋ ಫೋಟೋನ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ಗೆ ಅರ್ಧಗಂಟೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

VISTARANEWS.COM


on

Actor Yash Toxic Movie muhurtha Photos Viral
Koo

ಬೆಳ್ಳಂಬೆಳಗ್ಗೆ ಯಶ್ (Yash) ಮುಂದಿನ (Actor Yash)ಸಿನಿಮಾ ಕುರಿತು ಅಪ್‌ಡೇಟ್ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಚಿತ್ರಕ್ಕೆ ಇಂದು (ಆ.8) ಸರಳವಾಗಿ ಚಾಲನೆ ನೀಡಿದ್ದಾರೆ.

 ‘ಪಯಣ ಶುರುವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ. 

ಇದನ್ನೂ ಓದಿ: Actor Yash:  ʻಟಾಕ್ಸಿಕ್‌ʼ ಪಯಣ ಶುರುವಾಗಿದೆ ಎಂದು ಗುಡ್‌ ನ್ಯೂಸ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

ಯಶ್ ಅವರು ಇತ್ತೀಚೆಗಷ್ಟೇ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಪಡೆದಿದ್ದರು. 

 ಈ ಚಿತ್ರಕ್ಕೆ ಗೀತು ಮೋಹನ್ ದಾಸ್ ನಿರ್ದೇಶನ ಮಾಡಲಿದ್ದಾರೆ. ಯಶ್ ನಟನೆಯ ಈ ಸಿನಿಮಾವನ್ನು ಕೆವಿಎನ್‌ ಸಂಸ್ಥೆ ನಿರ್ಮಾಣ ಮಾಡುತ್ತಿದೆ. 

Continue Reading

ಸ್ಯಾಂಡಲ್ ವುಡ್

Vinay Rajkumar: ʻಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್: ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ!

Vinay Rajkumar: ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮೂಡಿ ಬರ್ತಿರುವ ಪೆಪೆ ಒಂದು ರೀತಿ ಪರಿಪೂರ್ಣ ವಿಭಿನ್ನ ಸಿನಿಮಾ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ.

VISTARANEWS.COM


on

Vinay Rajkumar pepe preset Vinay Rajkumar Shreelesh S Nair
Koo

ಬೆಂಗಳೂರು: ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ (Vinay Rajkumar) `ಪೆಪೆ’ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ.

ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್ ಅಡಿ ಚಿತ್ರ ಹಾಡೊಂದನ್ನು ಅನಾವರಣ ಮಾಡಿದೆ. ಪಿಆರ್ ಕೆ ಆಡಿಯೊದಲ್ಲಿ ರಿಲೀಸ್ ಆಗಿರುವ ಗಾನಬಜಾನ ವಿಭಿನ್ನತೆಯಿಂದ ಕೂಡಿದೆ. ಜೇನು ಕುರುಬ ಬುಡಗಟ್ಟು ಜನಾಂಗದ ಆಚಾರ ವಿಚಾರ ತೆರೆದಿಡುವ ಗೀತೆಗೆ ಗಿರಿಜನ ಸಮಗ್ರ ಅಭಿವೃದ್ದಿ ಕಲಾ ಸಂಸ್ಥೆ ಹಾಗೂ ಜೆ.ಜಿ.ಕುಮಾರ ಧ್ವನಿಯಾಗಿದ್ದು, ಪೂರ್ಣಚಂದ್ರ ತೇಜಸ್ವಿ ಟ್ಯೂನ್ ಹಾಕಿದ್ದಾರೆ. ಇನ್ನೂ ಚಿತ್ರತಂಡ ಖುದ್ದು ಹೇಳಿಕೊಂಡಂತೆ ಇಡೀ ಚಿತ್ರದ ಸೌಂಡ್ ಡಿಸೈನ್ ಬೇರೆ ರೀತಿ ಇದೆ ಅನ್ನೋದಕ್ಕೆ ಬಿಡುಗಡೆಯಾಗಿರುವ ಈ ಹಾಡು ಸೂಕ್ತ ಉದಾಹರಣೆ.

ಶ್ರೀಲೇಶ್ ಎಸ್ ನಾಯರ್ ನಿರ್ದೇಶನ ಮೂಡಿ ಬರ್ತಿರುವ ಪೆಪೆ ಒಂದು ರೀತಿ ಪರಿಪೂರ್ಣ ವಿಭಿನ್ನ ಸಿನಿಮಾ. ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಇದನ್ನೂ ಓದಿ: Vinay Rajkumar: ಸೆನ್ಸಾರ್ ಪಾಸಾದ ‘ಪೆಪೆ’; ವಿನಯ್ ರಾಜ್ ಕುಮಾರ್ ಚಿತ್ರಕ್ಕೆ A’ ಸರ್ಟಿಫಿಕೇಟ್!

ಡಾ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದು ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

Continue Reading
Advertisement
Lalbagh Flower Show
ಬೆಂಗಳೂರು59 seconds ago

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Cattle Smuggling
ದೇಶ14 mins ago

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Paris Olympics 2024
ಪ್ರಮುಖ ಸುದ್ದಿ47 mins ago

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Naga Chaitanya deleated ex samantha
ಸಿನಿಮಾ49 mins ago

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Road Accident
ಉಡುಪಿ58 mins ago

Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Aman Sehrawat
ಕ್ರೀಡೆ1 hour ago

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Sunita Williams
ವಿದೇಶ1 hour ago

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Neeraj Chopra
ಕ್ರೀಡೆ1 hour ago

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

parliament session
ದೇಶ1 hour ago

Parliament Session: ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಸರ್ಕಾರ ಪ್ರಸ್ತಾಪ

Job Alert
ಉದ್ಯೋಗ1 hour ago

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

ಟ್ರೆಂಡಿಂಗ್‌