CM Siddaramaiah: ನಾಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಬ್ಬರ; ʼಜನಾಂದೋಲನ ಸಮಾವೇಶʼ ಮೂಲಕ ದೋಸ್ತಿ ಪಾದಯಾತ್ರೆಗೆ ಟಕ್ಕರ್‌ - Vistara News

ಮೈಸೂರು

CM Siddaramaiah: ನಾಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅಬ್ಬರ; ʼಜನಾಂದೋಲನ ಸಮಾವೇಶʼ ಮೂಲಕ ದೋಸ್ತಿ ಪಾದಯಾತ್ರೆಗೆ ಟಕ್ಕರ್‌

CM Siddaramaiah: ನಾಳೆ ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಜನಾಂದೋಲನ ಸಮಾವೇಶದ ಮೂಲಕ ಪ್ರತಿಪಕ್ಷಗಳ ಆಪಾದನೆಗಳಿಗೆ ಉತ್ತರ ನೀಡಲು ಸಿದ್ದರಾಮಯ್ಯ ಮುಂದಾಗಿದ್ದು, ಹೆಚ್ಚು ಜನ ಸೇರಿಸಲು ಪ್ರಮುಖವಾಗಿ 6 ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

cm siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಬಿಜೆಪಿ- ಜೆಡಿಎಸ್‌ ಪಾದಯಾತ್ರೆ (BJP-JDS Padayatra) ಮೈಸೂರು (Mysore) ತಲುಪುವ ಒಂದು ದಿನ ಮೊದಲೇ ಭಾರಿ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ದೋಸ್ತಿಗಳಿಗೆ ಟಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಸಜ್ಜಾಗಿದ್ದಾರೆ. ನಾಳೆ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್‌ನ (Congress) ʼಜನಾಂದೋಲನ ಸಮಾವೇಶʼಕ್ಕೆ ಸುಮಾರು 2 ಲಕ್ಷ ಜನ ಸೇರಿಸಲು ಕೈ ಪಡೆ ಚಿಂತಿಸಿದೆ.

ನಾಳೆ ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ಜನಾಂದೋಲನ ಸಮಾವೇಶದ ಮೂಲಕ ಪ್ರತಿಪಕ್ಷಗಳ ಆಪಾದನೆಗಳಿಗೆ ಉತ್ತರ ನೀಡಲು ಸಿದ್ದರಾಮಯ್ಯ ಮುಂದಾಗಿದ್ದು, ಹೆಚ್ಚು ಜನ ಸೇರಿಸಲು ಪ್ರಮುಖವಾಗಿ 6 ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಸೂಚನೆ ಕೊಡಲಾಗಿದೆ. ಜೊತೆಗೆ ರಾಜ್ಯದ ವಿವಿಧೆಡೆಯಿಂದ ಕಾಂಗ್ರೆಸ್‌ ಕಾರ್ಯಕರ್ತರು ಆಗಮಿಸಲಿದ್ದಾರೆ.

ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಕೇಳಿ ಬಂದಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡಲಿದ್ದು, ಬಿಜೆಪಿ-ಜೆಡಿಎಸ್ ಕಾಲದ ಹಗರಣಗಳ ಕುರಿತು ಪ್ರಸ್ತಾಪ ಮಾಡಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ಭ್ರಷ್ಟಾಚಾರ ಪ್ರಕರಣಗಳ ಪ್ರಸ್ತಾಪ ಮಾಡಲಿದ್ದಾರೆ.

ಇದಕ್ಕೂ ಮೊದಲು ರಾಜ್ಯ ರಾಜಕೀಯ ಇತಿಹಾಸದಲ್ಲಿ ಬಿಎಸ್‌ವೈ- ಎಚ್‌ಡಿಕೆ ನಡುವೆ ನಡೆದ ಟಾಕ್ ಫೈಟ್ ವಿಡಿಯೋ ತುಣುಕುಗಳ ಪ್ರದರ್ಶನ ಏರ್ಪಡಿಸಲಾಗಿದ್ದು, ಬಿಜೆಪಿ ಆಡಳಿತ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಕೊಟ್ಟ ಹೇಳಿಕೆಗಳನ್ನೂ ಪ್ರದರ್ಶಿಸಲಾಗುತ್ತದೆ.

ಹಿಂದೆ ಹೆಚ್‌ಡಿಕೆ ಕುಟುಂಬದ ವಿರುದ್ಧ ಬಿಎಸ್‌ವೈ ಮಾಡಿದ್ದ ಆರೋಪಗಳನ್ನು, ಹೆಚ್‌ಡಿಕೆ ಕುಟುಂಬಕ್ಕೆ ಸಂಬಂಧಿಸಿದ 42 ಸೈಟ್‌ಗಳ ಕುರಿತು ಬಿಜೆಪಿ ನೀಡಿದ್ದ ಜಾಹೀರಾತನ್ನು ಕೈ ಪಡೆ ದೊಡ್ಡ ದೊಡ್ಡ ಫ್ಲೆಕ್ಸ್ ಮಾಡಿ ಹಾಕಲಿದೆ ಎನ್ನಲಾಗಿದೆ. ನಾಳೆ ಮೈಸೂರು ನಗರದ ಉದ್ದಕ್ಕೂ ಬಿಜೆಪಿ ನೀಡಿದ್ದ ಜಾಹೀರಾತಿನ ಪ್ರತಿಯನ್ನು ಬ್ಯಾನರ್ಸ್ ಮಾಡಿ ಕಾಂಗ್ರೆಸ್‌ ಹಾಕಲಿದೆ ಎಂದು ತಿಳಿದುಬಂದಿದೆ. ಆ ಮೂಲಕ ಜೆಡಿಎಸ್- ಬಿಜೆಪಿ ನಾಯಕರಿಗೆ ಮುಜುಗರ ಸೃಷ್ಟಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.

ಒಂದಾದ್ರಾ ಸಿದ್ದರಾಮಯ್ಯ- ಬಿಕೆ ಹರಿಪ್ರಸಾದ್?‌

ಪಕ್ಷದೊಳಗೆ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಭಿನ್ನಮತ ಹೊಂದಿದ್ದ ಮುಖಂಡ ಬಿಕೆ ಹರಿಪ್ರಸಾದ್‌ ನಿನ್ನೆ ರಾತ್ರಿ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಹಿಂದೆ ಅಸಮಾಧಾನಗೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಬಿಕೆಹೆಚ್ ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಸಿಎಂ ಅವರನ್ನು ದಿಢೀರ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಸುದೀರ್ಘ ಒಂದುವರೆ ಗಂಟೆಗಳ ಕಾಲ ಸಿಎಂ ಹಾಗೂ ಹರಿಪ್ರಸಾದ್ ಮಾತುಕತೆ ನಡೆಸಿದರು. ಸಚಿವ ಮಹದೇವಪ್ಪ ಕರೆ ಮಾಡಿ ಬಿಕೆ ಹರಿಪ್ರಸಾದ್‌ಗೆ ಆಹ್ವಾನ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಬಳಿಗೆ ಹರಿಪ್ರಸಾದ್ ಅವರನ್ನು ಆರ್.ಎಲ್ ಜಾಲಪ್ಪ ಅವರ ಅಳಿಯ ನಾಗರಾಜ್ ಕರೆದುಕೊಂಡು ಹೋದರು. ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬರುವಂತೆ ಬಿಕೆ ಹರಿಪ್ರಸಾದ್‌ಗೆ ಸಿದ್ದರಾಮಯ್ಯ ಖುದ್ದು ಆಹ್ವಾನಿಸಿದರು.

ಬಿಜೆಪಿ- ಜೆಡಿಎಸ್ ಪಾದಯಾತ್ರೆಯ ಹಿನ್ನೆಲೆಯಲ್ಲಿ ಯಾವೆಲ್ಲ ಷಡ್ಯಂತ್ರ ತಮ್ಮ ವಿರುದ್ಧ ನಡೆದಿದೆ ಎಂಬ ಅಭಿಪ್ರಾಯವನ್ನು ಹರಿಪ್ರಸಾದ್‌ ಜೊತೆ ಸಿಎಂ ಹಂಚಿಕೊಂಡಿದ್ದಾರೆ. ಇದೀಗ ಮೈಸೂರಿನ ಜನಾಂದೋಲನ ಸಮಾವೇಶಕ್ಕೆ ಬಿಕೆಎಚ್‌ ಹೋಗ್ತಾರಾ ಇಲ್ಲವಾ ಎಂಬ ಕುತೂಹಲ ಮೂಡಿದೆ. ಹೈಕಮಾಂಡ್ ನಾಯಕರ ನಡೆ ನೋಡಿ ಅವರು ತೀರ್ಮಾನ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Karnataka Weather : ಮಳೆ ಬಂದರೂ ಕಷ್ಟ ಬಾರದೆ ಇದ್ದರೂ ನಷ್ಟ ಎಂಬಂತಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಮಳೆ ಇಲ್ಲದೇ ಅನಾವೃಷ್ಠಿಯಾಗಿದೆ. ಇತ್ತ ಭೀಮಾ ನದಿ ಅಬ್ಬರಕ್ಕೆ ಕೆಲವೆಡೆ ನೆರೆ ಸೃಷ್ಟಿಯಾಗಿದೆ. ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Weather Forecast
Koo

ವಿಜಯನಗರ: ಒಂದು ಕಡೆ ಭಾರಿ ಮಳೆಯಿಂದಾಗಿ (Karnataka Weather Forecast) ಅತಿ ವೃಷ್ಠಿ ಉಂಟಾದರೆ ಮೊತ್ತೊಂದು ಕಡೆ ಮಳೆ (No Rain) ಇಲ್ಲದೇ ಅನಾವೃಷ್ಠಿಯಾಗಿದೆ. ಮಳೆಯಿಂದ ಮನೆ-ಮಠ ಕಳೆದುಕೊಂಡು ನಷ್ಟ ಅನುಭವಿಸಿದ್ದರೆ, ಇತ್ತ ಕಡೆ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಸ್ವತಃ ರೈತರೇ ಬೆಳೆ ನಾಶ ಮಾಡಿದ್ದಾರೆ. ವಿಜಯನಗರದ ಗೊಲ್ಲರಹಳ್ಳಿ ಗ್ರಾಮದ ಗುಬ್ಬಿಕಾಳೇ ಶ್ರೀ ಪರಶುರಾಮ ಎಂಬ ರೈತ ಬೆಳೆ ನಾಶ ಮಾಡಿದ್ದಾರೆ.

ಪರಶುರಾಮ ಅವರು 8 ಎಕರೆಯಲ್ಲಿ ಸಾವಿರಾರು ರೂ. ಖರ್ಚು ಮಾಡಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಮುಂಗಾರಿನಲ್ಲಿ ಅಲ್ಪ ಸ್ವಲ್ಪ ಮಳೆ ಬಂದಿದ್ದರಿಂದ ರೈತರು ಬಿತ್ತನೆ ಮಾಡಿದ್ದರು. ಮುಂದಿನ ದಿನಗಳಲ್ಲಿ ಸಮರ್ಪಕ ಮಳೆ ಬಾರದಿದ್ದಕ್ಕೆ ಕಾಳು ಕಟ್ಟುವ ಮೊದಲೇ ಬೆಳೆ ಒಣಗಿ ಹೋಗಲಿದೆ. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 4,625 ಹಕ್ಟೇರ್‌ ಜೋಳ, ಮೆಕ್ಕೆಜೋಳ, ಸಜ್ಜೆ ಇನ್ನಿತರ ಬೆಳೆ ಬಿತ್ತನೆ ಕಾರ್ಯ ಆಗಿದೆ.

ಆದರೆ ಮಳೆ ಇಲ್ಲದೇ ಒಣಗುತ್ತಿದೆ ಎಂದು ರೈತರು ಸಂಕಟದಿಂದ ಬೆಳೆ ನಾಶ ಮಾಡುತ್ತಿದ್ದಾರೆ. ಎಲ್ಲಾ ಕಡೆ ಬಿತ್ತನೆಯಾಗಿದ್ದು ತಂಪು ಇಲ್ಲದಿರುವುದು ಬೆಳೆ ಒಣಗಿ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವನ್ನುಂಟು ಮಾಡಿದೆ. ಬಿತ್ತನೆ ಮಾಡಿದ್ದ ಖರ್ಚು ಕೂಡ ರೈತನಿಗೆ ಬಾರದೇ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಒಂದು ಎಕರೆ ಬಿತ್ತನೆಗೆ 20 ರಿಂದ 30 ಸಾವಿರ ರೂ ಖರ್ಚು ಮಾಡಲಾಗಿದೆ. ಈಗ ಬಿಡಿಗಾಸು ಸಿಗದೆ ರೈತರು ಕಂಗಾಲಾಗಿದ್ದಾರೆ. ದನಕರುಗಳಿಗೆ ಮೇವಾದರೂ ಸಿಗಲಿ ಎಂಬ ಉದ್ದೇಶದಿಂದ ಕಟಾವು ಮಾಡ್ತಿದ್ದೇವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

ಮೈದುಂಬಿ ತುಂಬಿ ಹರಿಯುತ್ತಿರುವ ಭೀಮಾ

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಉಜನಿ ಜಲಾಶಯದಿಂದ ಮತ್ತೆ ಭೀಮಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಭೀಮಾ ನದಿ ಮೈದುಂಬಿ ತುಂಬಿ ಹರಿಯುತ್ತಿದ್ದು, ಕಲಬುರಗಿಯ ಅಫಜಲಪೂರ ಘತ್ತರಗಾ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಲಬುರಗಿ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಆಗಿದೆ. ದೇವಲಗಾಣಗಾಪುರ ಬಳಿಯ ಸೇತುವೆ ಸಹ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಕಡೆ ಜನ ಹೋಗದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮಹಾರಾಷ್ಟ್ರದ ಮಳೆಯಿಂದ ತತ್ತರಿಸಿದ ಗಡಿ ಜನತೆ

ಮಹಾರಾಷ್ಟ್ರದ ಮಳೆಯಿಂದ ಗಡಿ ಜನತೆ ತತ್ತರಿಸಿ ಹೋಗಿದ್ದಾರೆ. ಕಳೆದ ಒಂದು ವಾರದಿಂದ ಕೃಷ್ಣಾ ನದಿ ಒಳ ಹರಿವು ಯಥಾವತ್‌ ಕಾಯ್ದುಕೊಂಡಿದೆ. ಕೃಷ್ಣಾ ನದಿ ಒಳ ಹರಿವಿನಿಂದ ಕೃಷ್ಣಾ ನದಿ ತೀರದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ ನದಿ‌ ತೀರದ ಜನರಿಗೆ ತೊಂದರೆಯಾಗದಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಸರ್ಕಾರದ ಆದೇಶಕ್ಕಿಲ್ಲ ಕವಡೆ ಕಾಸಿನ‌ ಕಿಮ್ಮತ್ತಿಲ್ಲ. ನೆರೆ ಬಂದರೂ ತಾಲೂಕಾಡಳಿತ ಗಂಜಿ‌ ಕೇಂದ್ರ ತೆಗೆದಿಲ್ಲ. ಕಲಬುರಗಿಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದ ನೆರೆ ಸಂತ್ರಸ್ಥರು ಸಂಕಷ್ಟ ಪಡುತ್ತಿದ್ದಾರೆ. ದನಗಳಿಗೆ ಮೇವಿಲ್ಲ, ಇರಲು ಜಾಗ ಇಲ್ಲ ಹೀಗಾದರೆ ಹೇಗೆ ಎಂದು ನೆರೆ ಸಂತ್ರಸ್ಥರು ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ.

ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತ

ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಆಗುತ್ತಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ ಭೀಮಾನದಿಗೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಬ್ಯಾರೇಜ್‌ನ 24 ಗೇಟ್‌ಗಳಲ್ಲಿ 20 ಗೇಟ್ ಓಪನ್ ಮಾಡಿ ನೀರು ಬಿಡುಗಡೆ ಮಾಡಲಾಗಿದ್ದು, ಅಪಾಯದ ಮಟ್ಟ ಮೀರಿ ಭೀಮಾನದಿ ಹರಿಯುತ್ತಿದೆ. ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಕಂಗಳೇಶ್ವರ ಹಾಗೂ ವಿರಾಂಜನೇಯ ದೇಗುಲಗಳು ಸಂಪೂರ್ಣ ಮುಳುಗಡೆಯಾಗಿದೆ. ಈಗಾಗಲೇ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು

ನೈರುತ್ಯ ಮುಂಗಾರು ಉತ್ತರ ಒಳನಾಡಲ್ಲಿ ಚುರುಕುಗೊಂಡಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿತ್ತು. ಶುಕ್ರವಾರದಂದು (ಆ.9) ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವಡೆ ಹಗುರದಿಂದ ಕೂಡಿರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kali Bridge Collapse: ಕಾಳಿನದಿ ಸೇತುವೆ ಕುಸಿತ; ಉ.ಕ ಡಿಸಿಯಿಂದ ಮಾಹಿತಿ ಪಡೆದ ಸಿಎಂ

Kali Bridge Collapse: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

VISTARANEWS.COM


on

CM Siddaramaiah
Koo

ಮೈಸೂರು: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು (Kali Bridge Collapse) ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇದನ್ನೂ ಓದಿ: Namma Metro: ಆ.6ರಂದು ನಮ್ಮ ಮೆಟ್ರೋದಲ್ಲಿ ದಾಖಲೆ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ

ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸೇತುವೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.

ಕಾಳಿ ನದಿಗೆ ಕಟ್ಟಿದ ಸೇತುವೆ ಕುಸಿತ, ಟ್ರಕ್‌ ಬಿದ್ದು ಚಾಲಕನಿಗೆ ಗಾಯ

ಕಾಳಿ ನದಿಗೆ (Kali River) ಅಡ್ಡಲಾಗಿ ಕಟ್ಟಿದ್ದ ಹಳೆಯ ಸೇತುವೆ (Kali Bridge Collapse) ಕುಸಿದುಬಿದ್ದಿದ್ದು, ಅದರ ಮೇಲೆ ಚಲಿಸುತ್ತಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ (truck driver injury) ಗಾಯವಾಗಿದೆ. ಹೊಸ ಸೇತುವೆಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದ್ದ ಕಾರಣ ಭಾರಿ ಅನಾಹುತ ಆಗಿಲ್ಲ.

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್‌ನಲ್ಲಿರುವ ಈ ಸೇತುವೆಯನ್ನು ಕಾರವಾರ- ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 60 ವರ್ಷ ಹಳೆಯದಾದ ಸೇತುವೆ. ಇತ್ತೀಚೆಗೆ ನಿರ್ಮಿಸಲಾದ ಹೊಸ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಹಳೆಯ ಸೇತುವೆಯನ್ನು ಅಪಾಯಕಾರಿ ಎಂದು ಪರಿಗಣಿಸಲಾಗಿತ್ತು.

ಮಳೆ ಹಾಗೂ ನೀರಿನ ರಭಸ ಹೆಚ್ಚಾಗಿ ಸೇತುವೆ ಕುಸಿದು ಕೆಳಗೆ ಬಿದ್ದಿದ್ದು, ಅದರ ಮೇಲಿದ್ದ ಟ್ರಕ್‌ ಕೆಳಗೆ ಬಿದ್ದು ಚಾಲಕನಿಗೆ ಗಾಯವಾಗಿದೆ. ಚಾಲಕನನ್ನು ಅಗ್ನಿಶಾಮಕ‌ ಹಾಗೂ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಲಾರಿ ಚಾಲಕ ಕೇರಳ ಮೂಲದ ರಾಧಾಕೃಷ್ಣ ನಾಳಾ ಸ್ವಾಮಿ (37) ರಕ್ಷಣೆಗೊಳಗಾದವರು. ಟ್ರಕ್‌ ಸಂಪೂರ್ಣ ನೀರಿನಲ್ಲಿ ಮುಳುಗಿದೆ.

ವಿಷಯ ತಿಳಿದ ಕೂಡಲೇ ಎಚ್ಚೆತ್ತ ಉತ್ತರಕನ್ನಡ ಎಸ್.ಪಿ ನಾರಾಯಣ್, ಎಎಸ್‌ಪಿ ಜಯಕುಮಾರ ಹಾಗೂ ಡಿಎಸ್‌ಪಿ ಗಿರೀಶ್ ಸೇರಿದಂತೆ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಲಾರಿ ಚಾಲಕನನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರಿಂದ ಮಾಹಿತಿ ಸಿಗುತ್ತಿದ್ದಂತೆ ಡಿಸಿ ಲಕ್ಷ್ಮಿಪ್ರಿಯಾ ಮಧ್ಯರಾತ್ರಿ ಸ್ಥಳಕ್ಕೆ ಧಾವಿಸಿದ್ದು, ಮಾಹಿತಿ ಪಡೆದರು.

ಅವೈಜ್ಞಾನಿಕ ಕಾಮಗಾರಿಯಿಂದ ಕಳೆದ 15 ದಿನಗಳ ಹಿಂದಷ್ಟೆ ಶಿರೂರು ಗುಡ್ಡ ಕುಸಿತ ಆಗಿತ್ತು. ಈಗ ಹಳೆಯ ಸೇತುವೆ ಬಿದ್ದಿರುವ ಹಿನ್ನೆಲೆಯಲ್ಲಿ, ಐಆರ್‌ಬಿಯಿಂದ ನಿರ್ಮಾಣ ಮಾಡಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಈಗ ಕುಸಿದ ಸೇತುವೆಯ ಪಕ್ಕದಲ್ಲಿರುವ ಹೊಸ ಸೇತುವೆಯ ಗುಣಮಟ್ಟ ಪರೀಕ್ಷೆ ಮಾಡಲು, ಸೇತುವ ಗುಣಮಟ್ಟದ ಬಗ್ಗೆ 12 ಗಂಟೆಯೊಳಗೆ ವರದಿ ಸಲ್ಲಿಸುವಂತೆ IRB ಹಾಗೂ NHAIಗೆ ಡಿಸಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ. ಸೇತುವೆ ಗುಣಮಟ್ಟದ ವರದಿ ಬರುವವರೆಗೂ ಸಂಚಾರ ನಿಷೇಧಿಸಲಾಗಿದ್ದು, ಸದ್ಯ ಕಾರವಾರದಿಂದ ಗೋವಾ ಕಡೆ ಹೋಗುವ ಸಂಚಾರ ಬಂದ್ ಆಗಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಭಾನುವಾರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿತ್ತು. ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗದಲ್ಲಿ ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಭಾರಿ ಪ್ರಮಾಣದ ಕಲ್ಲು, ಮಣ್ಣು ಕುಸಿದಿತ್ತು. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದರು. ಸ್ಥಳಕ್ಕೆ ಬಂದ ಕಾರವಾರ ಟ್ರಾಫಿಕ್ ಪೊಲೀಸರು ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಿಸಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿಸಿದ್ದರಲ್ಲದೆ, ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು.

Continue Reading

ಪ್ರಮುಖ ಸುದ್ದಿ

BJP-JDS Padayatra: ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ‌ ; ಬ್ಯಾನರ್‌ಗಳಲ್ಲೂ ಕಾಣಿಸಿಕೊಳ್ಳದ ಸುಮಲತಾ ಅಂಬರೀಷ್‌!

BJP-JDS Padayatra: ಬುಧವಾರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದ್ದರೂ, ಮಂಡ್ಯದಲ್ಲಿ ಹಾಕಿರುವ ಫ್ಲೆಕ್ಸ್‌- ಬ್ಯಾನರ್‌ಗಳಿಂದಲೂ ಸುಮಲತಾ ಕಣ್ಮರೆಯಾಗಿದ್ದಾರೆ. ಯಾವ ನಾಯಕರೂ ತಮ್ಮ ಬ್ಯಾನರ್‌ಗಳಲ್ಲಿ ಸುಮಲತಾ ಅವರನ್ನು ಸ್ಮರಿಸಿಕೊಂಡಿಲ್ಲ.

VISTARANEWS.COM


on

bjp-jds padayatra Sumalatha ambareesh
Koo

ಮಂಡ್ಯ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ನಡೆಸಲಾಗುತ್ತಿರುವ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ (BJP-JDS Padayatra) ಐದನೇ ದಿನ ಮಂಡ್ಯ ತಲುಪಿದ್ದು, ಉಭಯ ಪಕ್ಷಗಳ ನಾಯಕರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್‌ (Sumalatha Ambareesh) ಮಾತ್ರ ಎಲ್ಲೂ ಕಾಣಿಸಿಕೊಂಡಿಲ್ಲ.

ಕಳೆದ ಲೋಕಸಭೆ ಚುನಾವಣೆಗೂ (Loksabha Election 2024) ಮುನ್ನ ಬಿಜೆಪಿ ಸೇರ್ಪಡೆಯಾಗಿದ್ದ ಸುಮಲತಾ, ಬಿಜೆಪಿ ಸೇರಿದ್ದು ನನ್ನ ಜೀವನದಲ್ಲೇ ಸುದಿನ ಎಂದಿದ್ದರು. ಆದರೆ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಮಂಡ್ಯ ಜೆಡಿಎಸ್‌ ಪಾಲಾಗಿ, ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಟಿಕೆಟ್‌ ಒಲಿದಿತ್ತು. ಮಂಡ್ಯದಲ್ಲಿ ಟಿಕೆಟ್‌ಗಾಗಿ ಪ್ರಯತ್ನಿಸಿದ್ದ ಸುಮಲತಾ, ಕುಮಾರಣ್ಣ ಪರ ಪ್ರಚಾರ ಕಣದಲ್ಲೆಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇದೀಗ ಪಾದಯಾತ್ರೆಯಲ್ಲಿಯೂ ಅವರು ಕಾಣಿಸಿಕೊಂಡಿಲ್ಲ. ಹೀಗಾಗಿ, ಮಂಡ್ಯದ ರಾಜಕಾರಣದಲ್ಲಿ ಮತ್ತೆ ಸುಮಲತಾ ಅಂಬರೀಷ್‌ ಸೈಡ್‌ಲೈನ್ ಆದ್ರಾ ಎಂಬ ಪ್ರಶ್ನೆ ಮೂಡಿದೆ.

ಬುಧವಾರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದ್ದರೂ, ಮಂಡ್ಯದಲ್ಲಿ ಹಾಕಿರುವ ಫ್ಲೆಕ್ಸ್‌- ಬ್ಯಾನರ್‌ಗಳಿಂದಲೂ ಸುಮಲತಾ ಕಣ್ಮರೆಯಾಗಿದ್ದಾರೆ. ಯಾವ ನಾಯಕರೂ ತಮ್ಮ ಬ್ಯಾನರ್‌ಗಳಲ್ಲಿ ಸುಮಲತಾ ಅವರನ್ನು ಸ್ಮರಿಸಿಕೊಂಡಿಲ್ಲ. ರಾಜ್ಯ ಬಿಜೆಪಿ, ಜೆಡಿಎಸ್ ವತಿಯಿಂದ ಹಾಕಿರುವ ಫ್ಲೆಕ್ಸ್‌ಗಳಲ್ಲಿ ಸುಮಲತಾ ಅವರಿಗೆ ಯಾವುದೇ ಸ್ಥಾನ ನೀಡಿಲ್ಲ. ಪಾದಯಾತ್ರೆ ಪ್ರಚಾರ ಮತ್ತು ಪಾದಯಾತ್ರಿಗಳ ಸ್ವಾಗತ ಕೋರುವ ಫ್ಲೆಕ್ಸ್, ಬ್ಯಾನರ್‌ಗಳಲ್ಲಿ ಅವರು ಕಾಣಿಸಿಕೊಂಡಿಲ್ಲ.

ಬೆಂಗಳೂರಿನಿಂದ ಮೈಸೂರಿನವರೆಗೂ ಹಾಕಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್‌ಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ಪುಡಿ ನಾಯಕರು, ಕಾರ್ಯಕರ್ತರ ಫೋಟೋಗಳಿದ್ದರೂ ಸುಮಲತಾ ಮುಖ ಎಲ್ಲೂ ಕಾಣಿಸಿಕೊಂಡಿಲ್ಲ. ಬಿಜೆಪಿ ಇರಲಿ, ಸುಮಲತಾ ಅವರ ಆಪ್ತರು, ಬೆಂಬಲಿಗರಿಗೂ ಸುಮಲತಾ ಬೇಡವಾದರೇ ಎಂಬ ಪ್ರಶ್ನೆ ಎದ್ದಿದೆ. ಅಧಿಕಾರ ಇದ್ದಾಗ ಅವರನ್ನು ಮೆರೆಸುತ್ತಿದ್ದ ಆಪ್ತರು, ಬೆಂಬಲಿಗರು ಕೂಡ ಸುಮಲತಾರ ಫ್ಲೆಕ್ಸ್ ಹಾಕದೆ ನಿರ್ಲಕ್ಷ್ಯ ತೋರಿದಂತಿದೆ. ಪಾದಯಾತ್ರೆ ಕುರಿತು ನಡೆಸಲಾಗಿದ್ದ ಪೂರ್ವಭಾವಿ ಸಭೆಯಲ್ಲೂ ಸುಮಲತಾ ಪಾಲ್ಗೊಂಡಿರಲಿಲ್ಲ.

ಮುಡಾ ಹಗರಣದ ಇನ್ನಷ್ಟು ದಾಖಲೆ ಕೇಳಿದ ರಾಜ್ಯಪಾಲರು; ತನಿಖೆಗೆ ಅನುಮತಿ ಖಚಿತ

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ವಿರುದ್ಧ ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಅನುಮತಿ ನೀಡುವುದು ಬಹುತೇಕ ಖಚಿತವಾಗಿದ್ದು, ಮುಡಾ ಹಗರಣದ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀಡುವಂತೆ ಅರ್ಜಿದಾರ ಟಿಜೆ ಅಬ್ರಹಾಂ (TJ Abraham) ಅವರಿಗೆ ಸೂಚಿಸಿದ್ದಾರೆ.

ನಿನ್ನೆ ಈ ಕುರಿತು ಅಬ್ರಹಾಂ ಅವರನ್ನು ಕರೆದು ಮಾಹಿತಿ ಪಡೆದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಕ್ಯಾಬಿನೆಟ್ ನಿರ್ಣಯದ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ (Supreme Court) ತೀರ್ಪುಗಳ ಮಾಹಿತಿ ಕೊಡುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ಪ್ರಕರಣವನ್ನು ಗಟ್ಟಿಗೊಳಿಸಲು ಅಗತ್ಯವಾದ ಮಾಹಿತಿಗಳನ್ನು ಪಡೆಯಲು ಮುಂದಾಗಿದ್ದಾರೆ.

ಕ್ಯಾಬಿನೆಟ್‌ ರಾಜ್ಯಪಾಲರಿಗೆ ತನ್ನ ನಿರ್ಣಯವನ್ನು ಕಳಿಸುವುದರ ಜೊತೆಗೆ, ದೂರುದಾರರ ಚಾರಿತ್ರ್ಯವನ್ನೂ ಪ್ರಶ್ನೆ ಮಾಡಿತ್ತು. ಸರ್ಕಾರಿ ಅಧಿಕಾರಿಯನ್ನು ಒಂದು ಕೋಟಿ ರೂಪಾಯಿಗೆ ಬ್ಲಾಕ್‌ಮೇಲ್‌ ಮಾಡಿದ ಆರೋಪ ಅಬ್ರಹಾಂ ಮೇಲಿದೆ ಎಂದಿತ್ತು. ಈ ಕುರಿತು ಸಿಡಿಯನ್ನು ಕೂಡ ರಾಜ್ಯಪಾಲರಿಗೆ ರವಾನೆ ಮಾಡಿತ್ತು. ಈ ಆರೋಪದ ಸತ್ಯಾಸತ್ಯತೆಯ ಬಗ್ಗೆ ಮಾಹಿತಿ ನೀಡಿ ಎಂದು ಕೂಡ ರಾಜ್ಯಪಾಲರು ಅಬ್ರಹಾಂಗೆ ಸೂಚಿಸಿದ್ದಾರೆ.

ಹೀಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿ ದಾಖಲೆ ಕೊಡಲಿದ್ದೇನೆ ಎಂದು ದೂರುದಾರ ಅಬ್ರಹಾಂ ತಿಳಿಸಿದ್ದಾರೆ. ಸರ್ಕಾರದ ಆರೋಪಕ್ಕೆ ಪ್ರತಿಯಾಗಿ ದಾಖಲೆ ರೆಡಿ ಮಾಡಿಕೊಳ್ಳುತ್ತಿದ್ದು, ಮುಡಾ ಹಗರಣಕ್ಕೆ ಸಂಬಂಧಿಸಿದ ಇನ್ನಷ್ಟು ದಾಖಲೆ ಪತ್ರಗಳನ್ನು ಸಜ್ಜುಗೊಳಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Continue Reading

ರಾಜಕೀಯ

Karnataka Congress Office: ಬೆಂಗಳೂರು, ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಹೊಸ ಕಚೇರಿ ಕಟ್ಟಡ; ನಿರ್ಮಾಣಕ್ಕೆ ಸಮಿತಿಗಳ ರಚನೆ

Karnataka Congress Office: ಬೆಂಗಳೂರಿನ ರೇಸ್ ಕೋರ್ಸ್ (Race course road) ರಸ್ತೆಯಲ್ಲಿರುವ ಕಾಂಗ್ರೆಸ್ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಮಿತಿ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಸಚಿವ ಕೆಜೆ ಜಾರ್ಜ್ (KJ George) ಅವರನ್ನು ನೇಮಿಸಲಾಗಿದೆ.

VISTARANEWS.COM


on

karnataka congress office
Koo

ಬೆಂಗಳೂರು: ರಾಜ್ಯ ರಾಜಧಾನಿ ಹಾಗೂ ಮೈಸೂರಿನಲ್ಲಿ ಕಾಂಗ್ರೆಸ್‌ ಪಕ್ಷದ (karnataka congress office) ಕಚೇರಿಗಾಗಿ ಎರಡು ಹೊಸ ಭವ್ಯ ಕಟ್ಟಡಗಳ ನಿರ್ಮಾಣಕ್ಕೆ ಕೆಪಿಸಿಸಿ (KPCC) ಉದ್ದೇಶಿಸಿದ್ದು, ಇದಕ್ಕಾಗಿ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ. ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಆದೇಶ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಮಿತಿ ರಚಿಸಿದ್ದಾರೆ.

ಬೆಂಗಳೂರಿನ ರೇಸ್ ಕೋರ್ಸ್ (Race course road) ರಸ್ತೆಯಲ್ಲಿರುವ ಕಾಂಗ್ರೆಸ್ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಮಿತಿ ರಚಿಸಲಾಗಿದ್ದು, ಇದರ ಅಧ್ಯಕ್ಷರಾಗಿ ಸಚಿವ ಕೆಜೆ ಜಾರ್ಜ್ (KJ George) ಅವರನ್ನು ನೇಮಿಸಲಾಗಿದೆ. ಎಂಎಲ್ಸಿ ಗೋವಿಂದರಾಜ್ ಸಂಚಾಲಕರಾಗಿ, ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್, ಸಚಿವರಾದ ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಶಾಸಕ ಕೃಷ್ಣಪ್ಪ ಸೇರಿ ಒಟ್ಟು 9 ಮಂದಿ ಸಮಿತಿಯಲ್ಲಿದ್ದಾರೆ.

ಮೈಸೂರಿನಲ್ಲಿ ಕಾಂಗ್ರೆಸ್ ಕಟ್ಟಡ ನಿರ್ಮಾಣ ಜವಾಬ್ದಾರಿ ಸಚಿವ ಮಹದೇವಪ್ಪ ಹೆಗಲಿಗೆ ಹೊರಿಸಲಾಗಿದೆ. ಸಮಿತಿ ಸದಸ್ಯರಾಗಿ ಸಚಿವ ಕೆ. ವೆಂಕಟೇಶ್, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ, ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ ನೇಮಕ ಮಾಡಲಾಗಿದೆ. ಮುಡಾ ಅಧ್ಯಕ್ಷ ಮರಿಗೌಡ ಕೂಡ ಸಮಿತಿಯಲ್ಲಿದ್ದಾರೆ.

ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು: ಎಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಡ್ಯ: “ಕುಮಾರಸ್ವಾಮಿ ಅವರು ಈ ಹಿಂದೆ ಅವರೇ ನೀಡಿರುವ ಯು ಟರ್ನ್ ಹೇಳಿಕೆಗಳ ಬಗ್ಗೆ ಉತ್ತರ ನೀಡಲಿ. ಅವರು ನುಡಿದಂತೆ ನಡೆಯಲಿ, ಕೊಟ್ಟ ಮಾತು ತಪ್ಪುವುದನ್ನು ಬಿಡಲಿ” ಎಂದು ಡಿಸಿಎಂ ಡಿಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ನಡೆದ ʼಜನಾಂದೋಲನ ಸಭೆʼ ಯಲ್ಲಿ ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಅಶ್ವತ್ಥನಾರಾಯಣ್, ಯೋಗೀಶ್ವರ್ ಅವರು ಪರಸ್ಪರ ಆರೋಪ, ಪ್ರತ್ಯಾರೋಪ, ಯೂ ಟರ್ನ್ ಹೊಡೆದಿದ್ದ ಹೇಳಿಕೆಗಳನ್ನು ವಿಡಿಯೋ ಮೂಲಕ ತೆರೆಯ ಮೇಲೆ ಪ್ರದರ್ಶಿಸಿದ ನಂತರ ಡಿಸಿಎಂ ಶಿವಕುಮಾರ್ ಮಾತನಾಡಿದರು.

“ಜನ ತೀರ್ಪು ನೀಡಿದ್ದಾರೆ. ಆದ ಕಾರಣಕ್ಕೆ ಗಂಡು ಭೂಮಿ ಮಂಡ್ಯದಲ್ಲಿ ಗೆಲುವು ಕಂಡಿದ್ದೀರಿ. ಇಲ್ಲಿಗೆ ಬಂದು ನಿಮ್ಮ ತಿರುವು-ಮುರುವು ಹೇಳಿಕೆಗಳ ಬಗ್ಗೆ ಉತ್ತರ ನೀಡಬೇಕು. ನಿಮ್ಮ ಅಮೃತದ ನುಡಿಮುತ್ತುಗಳನ್ನು ಈ ನೆಲದ ಮೇಲೆ ಉದುರಿಸಬೇಕು. “ಯೂಟರ್ನ್ ಕುಮಾರ, ಕ್ಷಣಕ್ಕೊಂದು ಮಾತು ಕ್ಷಣಕ್ಕೊಂದು ಬಣ್ಣ” ಎಂದು ಶಿವಕುಮಾರ್ ಅವರು ಕುಮಾರಸ್ವಾಮಿ ಅವರನ್ನು ಛೇಡಿಸಿದರು.

“ಮೋದಿ ಅವರ ಕೈ ಹಿಡಿದು ಕೇವಲ ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಣ್ಣ ಹೇಳಿದ್ದರು. ಆದರೆ ಈಗ ನಾವು ಐದು ಜನ ಮಂತ್ರಿಗಳಿದ್ದೇವೆ, ನಾನು ಆ ರೀತಿ ಮಾತು ಕೊಡಲು ಮೂರ್ಖನೇ ಎಂದು ಹೇಳುತ್ತಿದ್ದಾರೆ. ಈ ಹೇಳಿಕೆಗಳಿಗೆ ಬಿಜೆಪಿ ಹಾಗೂ ಕುಮಾರಸ್ವಾಮಿ ಇಬ್ಬರೂ ಉತ್ತರ ಕೊಡಬೇಕು. 10 ನಿಮಿಷದಲ್ಲಿ ನಾನು ತೋರಿಸಿದ ಮೈತ್ರಿ ನಾಯಕರ ಮಾತುಗಳಿಗೆ ಉತ್ತರ ಕೊಡಲಿ” ಎಂದು ಆಗ್ರಹಿಸಿದರು.

ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

Continue Reading
Advertisement
karnataka Weather Forecast
ಮಳೆ5 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Manu Bhaker
ಕ್ರೀಡೆ6 mins ago

Manu Bhaker : ಮನು ಭಾಕರ್​ಗೆ ಕ್ರೀಡಾ ಇಲಾಖೆಯಿಂದ ವಿಶೇಷ ಸನ್ಮಾನ; 30 ಲಕ್ಷ ರೂಪಾಯಿ ವಿತರಣೆ

Lalbagh Flower Show
ಬೆಂಗಳೂರು7 mins ago

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Cattle Smuggling
ದೇಶ20 mins ago

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Paris Olympics 2024
ಪ್ರಮುಖ ಸುದ್ದಿ53 mins ago

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Naga Chaitanya deleated ex samantha
ಸಿನಿಮಾ55 mins ago

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Road Accident
ಉಡುಪಿ1 hour ago

Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Aman Sehrawat
ಕ್ರೀಡೆ1 hour ago

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Sunita Williams
ವಿದೇಶ1 hour ago

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Neeraj Chopra
ಕ್ರೀಡೆ1 hour ago

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌