Prajwal Revanna Case: ರೇವಣ್ಣ, ಪ್ರಜ್ವಲ್‌ ರೇವಣ್ಣ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ - Vistara News

ಕ್ರೈಂ

Prajwal Revanna Case: ರೇವಣ್ಣ, ಪ್ರಜ್ವಲ್‌ ರೇವಣ್ಣ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ

ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna) ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ (Karnataka High Court) ಆಗಸ್ಟ್ 29ಕ್ಕೆ ಮುಂದೂಡಿದೆ.

VISTARANEWS.COM


on

Prajwal Revanna Case HD Revanna bail plea arguments and counter arguments
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೈಂಗಿಕ ಕಿರುಕುಳ (Physical abuse) ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್‌ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna) ಹಾಗೂ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ (Karnataka High Court) ಆಗಸ್ಟ್ 29ಕ್ಕೆ ಮುಂದೂಡಿದೆ.

ಇದರೊಂದಿಗೆ, ಆಗಸ್ಟ್ 29ರವರೆಗೂ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಇರುವುದು ನಿಶ್ಚಿತ. ಪ್ರತ್ಯೇಕ ಅರ್ಜಿಗಳನ್ನು ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿತ್ತು. ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ದೂರುಗಳ ಎಫ್‌ಐಆರ್‌ ರದ್ದುಪಡಿಸಲು ಅರ್ಜಿಗಳಲ್ಲಿ ಕೋರಲಾಗಿತ್ತು.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ, ಪ್ರಜ್ವಲ್‌ ರೇವಣ್ಣ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೊಗಳು ಅಸಲಿಯಾಗಿವೆ. ವಿಡಿಯೊಗಳನ್ನು ತಿರುಚಿಲ್ಲ ಎಂಬುದಾಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯು (FSL Report) ತಿಳಿಸಿದೆ. ಇದರಿಂದಾಗಿ ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲು ಎಸ್‌ಐಟಿಗೆ ಆನೆ ಬಲ ಬಂದಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ. ಎಲ್ಲ ವಿಡಿಯೊಗಳು ಅಸಲಿಯಾಗಿವೆ ಎಂಬುದಾಗಿ ಎಸ್‌ಎಫ್‌ಎಲ್‌ ವರದಿ ಸಲ್ಲಿಸಿದ್ದು, ವರದಿ ಈಗ ಎಸ್‌ಐಟಿ ತಂಡದ ಕೈಸೇರಿದೆ. ಇದರಿಂದಾಗಿ ಎಸ್‌ಐಟಿ ಇನ್ನು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಿದೆ ಎಂದು ತಿಳಿದುಬಂದಿದೆ.

ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊಗಳಲ್ಲಿ ಪುರುಷನ ಮುಖವನ್ನು ತೋರಿಸಿಲ್ಲ. ಹಾಗಾಗಿ, ಅಶ್ಲೀಲ ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಇದುವರೆಗೆ ದೃಢವಾಗಿಲ್ಲ. ಈಗ ವಿಡಿಯೊಗಳು ಅಸಲಿಯಾಗಿವೆ ಎಂಬುದು ಮಾತ್ರ ವರದಿಯಿಂದ ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಕೂಡ ಬಯಲಾಗಿದೆ. ಎಫ್‌ಎಸ್‌ಎಲ್‌ ವರದಿ ಬಳಿಕ ಎಸ್‌ಐಟಿ ಅಧಿಕಾರಿಗಳ ತನಿಖೆಯು ಚುರುಕುಗೊಂಡಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುತ್ತಾರೆ. ಅದರಲ್ಲಿ, ಎಫ್‌ಎಸ್‌ಎಲ್‌ ವರದಿಯ ಕುರಿತು ಕೂಡ ಉಲ್ಲೇಖಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ, ವಿಡಿಯೊ ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದರು. ಇದಾದ ಕೆಲ ದಿನಗಳ ಬಳಿಕ ಅವರು ಭಾರತಕ್ಕೆ ವಾಪಸ್‌ ಬಂದಿದ್ದರು. ಭಾರತಕ್ಕೆ ವಾಪಸಾಗುತ್ತಲೇ ಅವರನ್ನು ಬಂಧಿಸಲಾಗಿದ್ದು, ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲು ಸೇರಿದ್ದರು. ಅವರು ಈಗ ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ಪ್ರಕರಣವು ಎಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಮುಳುವಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಎಫ್‌ಐಆರ್‌; ಪ್ರೀತಂ ಗೌಡ ಮೇಲೂ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Bellary News : ದಟ್ಟ ಅರಣ್ಯದಲ್ಲಿರುವ ಗುಹೆಯಲ್ಲಿ ನಿಧಿ ಹುಡುಕಾಟಕ್ಕೆ ಹೋದ ನಿಧಿಗಳ್ಳರು ಅರಣ್ಯಾಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ. ಸಿನಿಮೀಯ ರೀತಿಯಲ್ಲಿ ನಿಧಿ ಶೋಧನೆ ಕಂಡು ಪೊಲೀಸರೇ ಶಾಕ್‌ ಆಗಿದ್ದರು. ಇಷ್ಟಕ್ಕೂ ನಿಧಿಗಳ್ಳರು ಸಿಕ್ಕಿ ಬಿದ್ದಿದ್ದು ಹೇಗೆ? ಇಲ್ಲಿದೆ ನೋಡಿ ಮಾಹಿತಿ

VISTARANEWS.COM


on

By

Bellary news
Koo

ಬಳ್ಳಾರಿ: ಖದೀಮರ ಗ್ಯಾಂಗ್‌ವೊಂದು ಸಿನಿಮೀಯ ರೀತಿಯಲ್ಲಿ ಐತಿಹಾಸಿಕ ಅರಣ್ಯ ಪ್ರದೇಶದಲ್ಲಿ ನಿಧಿಗಾಗಿ ಶೋಧ (Bellary News) ನಡೆಸಿದ್ದಾರೆ. ಆಂಧ್ರದ ನಿಧಿಗಳ್ಳರು ಬಳ್ಳಾರಿಯ ಸಂಡೂರು ಅರಣ್ಯ ಪ್ರದೇಶದಲ್ಲಿ ಆತ್ಯಾಧುನಿಕ ಟೆಕ್ನಾಲಜಿ ಬಳಸಿ ನಿಧಿ ಶೋಧನೆಗೆ ಮುಂದಾಗಿದ್ದರು.

ದಟ್ಟ ಕಾಡಿನ ಮಧ್ಯದಲ್ಲಿರುವ ಗುಹೆಗಳಲ್ಲಿ ನಿಧಿಗಾಗಿ ಹುಡುಕಾಟ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೋಣಿ ಮಲೈ ಅರಣ್ಯ ವ್ಯಾಪ್ತಿಯಲ್ಲಿ ಚಿನ್ನ, ವಜ್ರಕ್ಕಾಗಿ ಹುಡುಕಾಡಿದ್ದಾರೆ. ಇದಕ್ಕಾಗಿ ಗುಹೆಯಲ್ಲಿ ಆಕ್ಸಿಜನ್, ಜನರೇಟರ್, ಡಿಗ್ಗಿಗ್ ಮಷೀನ್ ಸೇರಿದಂತೆ ಅತ್ಯಾಧುನಿಕ ಸಾಧನಗಳನ್ನು ಬಳಸಿದ್ದಾರೆ.

ಅರಣ್ಯಾಧಿಕಾರಿಗಳು ಆಂಧ್ರದ ಐವರು ನಿಧಿಗಳ್ಳರ ಹೆಡೆಮುರಿ ಕಟ್ಟಿದ್ದಾರೆ. ಆಂಧ್ರ ಮೂಲದ ಶ್ರೀನಿವಾಸ್(45), ಆಕಾಶ್( 20) , ಶ್ರೀನಿವಾಸ್, ವೆಂಕಟ್ ರಾವ್ ಹಾಗೂ ಗದಗ ಮೂಲದ ಭಗತ್ ಸಿಂಗ್ ದೊಡ್ಡಮನಿ(50) ಬಂಧಿತ ಆರೋಪಿಗಳು.

ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಎಂಟ್ರಿ ಆಗುತ್ತಿದ್ದಂತೆ ಇನ್ನುಳಿದ 06 ಮಂದಿ ಖದೀಮರು ಕಾಲ್ಕಿತ್ತಿದ್ದಾರೆ. ಒಟ್ಟು 11 ಜನರ ತಂಡವು ತಾರಾನಗರದ ನಾರಿಹಳ್ಳದ ಹಿಂಭಾದ ಅರಣ್ಯ ಗುಡ್ಡದಲ್ಲಿ ನಿಧಿಗಾಗಿ ಶೋಧ ನಡೆಸಿದ್ದಾರೆ. ಗುಹೆಗೊಳಗೆ ಸುರಂಗ ಕೊರೆಯಲು ಮುಂದಾಗಿತ್ತು, ಇದಕ್ಕಾಗಿ ತಾತ್ಕಾಲಿಕ ಆಕ್ಸಿಜನ್ ವ್ಯವಸ್ಥೆಯನ್ನೂ ಮಾಡಿತ್ತು.

ಇದನ್ನೂ ಓದಿ: Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

ಖದೀಮರು ಲಾಕ್‌ ಆಗಿದ್ದು ಹೇಗೆ?

ಖದೀಮರು ದೋಣಿಮಲೈ ಬ್ಲಾಕ್ ಅರಣ್ಯದ ಪ್ರದೇಶದ ಗುಹೆಯ 40 ಅಡಿ ಆಳ ಇಳಿದಿದ್ದರು. ಇವರಲ್ಲಿ ನಾಲ್ವರು ನೀರು ತರಲು ನಾರಿಹಳ್ಳಕ್ಕೆ ಹೋಗಿದ್ದರು. ನೀರು‌ ತರುವಾಗ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳ ಕೈಗೆ ಲಾಕ್ ಆಗಿದ್ದರು. ಈ ವೇಳೆ ವಿಚಾರಣೆ ನಡೆಸಿದಾಗ ಕೃತ್ಯದ ಬಗ್ಗೆ ಬಾಯಿಬಿಟ್ಟಿದ್ದಾರೆ. ಗುಹೆ ಹತ್ತಿರ ಹೋದ ಅರಣ್ಯಾಧಿಕಾರಿಗಳು ಖದೀಮರ ಸುರಂಗ ಕೊರೆಯುವ ವ್ಯವಸ್ಥೆ ನೋಡಿ ಶಾಕ್ ಆಗಿದ್ದರು. ಸದ್ಯ ಕಾಡು ಪ್ರಾಣಿಗಳ ಹತ್ಯೆ ಆಕ್ಟ್ ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ಕಾಡಿಗೆ ಖದೀಮರು ಎಂಟ್ರಿಗೂ ಮುನ್ನವೇ ನಿಧಿ ಶೋಧನೆ ಬಗ್ಗೆ ಬ್ಲೂ ಪ್ರಿಂಟ್ ಹೊಂದಿದ್ದರು. ತಾರಾನಗರ ಗ್ರಾಮದ ವ್ಯಕ್ತಿ ಮೂಲಕ ನಿಧಿ ಮಾಹಿತಿ ಸಂಗ್ರಹಿಸಿದ್ದರು. ಆದರೆ ನಿಧಿ ಸಿಗುವ ಮುನ್ನವೇ ಅರಣ್ಯಾಧಿಕಾರಿಗಳಿಗೆ ಲಾಕ್‌ ಆಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Dog Bite : ಬೀದಿ ನಾಯಿಗಳ ಕಾಟಕ್ಕೆ ಮನೆ ಮಾರಾಟಕ್ಕೆ ಮುಂದಾದ ಜನ್ರು!

Dog Bite : ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ಓಎಂಬಿಆರ್‌ ಲೇಔಟ್‌ ಮಂದಿ ಮನೆ ಮಾರಾಟಕ್ಕೆ ಮುಂದಾಗಿದ್ದಾರೆ. ಸಂಜೆಯಾದರೆ ಮನೆಯಿಂದ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಜನರು ಕಂಗಲಾಗಿದ್ದಾರೆ.

VISTARANEWS.COM


on

By

Dog bite
Koo

ಬೆಂಗಳೂರು: ಬೆಂಗಳೂರಿನ ಆ ಏರಿಯಾ ನಿವಾಸಿಗಳು ಮನೆಯಿಂದ ಹೊರಬರಬೇಕಾದರೂ ಸಾವಿರ ಸಲ ಯೋಚನೆ ಮಾಡಬೇಕು. ಯಾಕೆಂದರೆ ರಸ್ತೆಯಲ್ಲಿ ಹೋಗುವಾಗ ಯಾವ ಬೀದಿ ನಾಯಿ (Dog Bite) ಎಲ್ಲಿಂದ ಬಂದು ಕಚ್ಚುತ್ತೋ ಅನ್ನೋ ಆತಂಕದಲ್ಲೇ ದಿನದೂಡುತ್ತಿದ್ದಾರೆ.

ಒಂದು ತಿಂಗಳಲ್ಲಿ 40ಕ್ಕೂ ಅಧಿಕ ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದೆ. ನಿತ್ಯ ನಾಯಿ ದಾಳಿಯಿಂದಾಗಿ ಜನರು ಆಸ್ಪತ್ರೆಪಾಲಾಗಿದ್ದಾರೆ. ಬೆಂಗಳೂರಿನ ಬಾಣಸವಾಡಿಯ ಓಎಂಬಿಆರ್ ಲೇಔಟ್ ಬರೋಬ್ಬರಿ 40 ಬೀದಿ ನಾಯಿಗಳು ಇವೆ. ಸ್ಥಳೀಯರು ಬೀದಿ ನಾಯಿಗಳಿಗೆ ಹೆದರಿ ಏರಿಯಾಗೆ ಹೋಗಲು ಭಯ ಪಡುವಂತಾಗಿದೆ.

ಬೀದಿ ನಾಯಿಗಳ ಹಾವಳಿಗೆ ಬೇಸತ್ತು ಮನೆ ಖಾಲಿ ಮಾಡಲು ಮುಂದಾಗಿದ್ದಾರೆ. ಸಂಜೆ 7 ಗಂಟೆ ಮೇಲೆ ಮನೆಯಿಂದ ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಮನೆಗೆ ಸಂಬಂಧಿಕರು ಬರುತ್ತಿಲ್ಲ, ಮಕ್ಕಳು ಸ್ಕೂಲ್‌ಗೆ ಹೋಗುತ್ತಿಲ್ಲ. ವೃದ್ಧ ಹೊರಗೆ ಕಾಲಿಡುವಂತಿಲ್ಲ ಎಂದು ಗೋಳಾಡುತ್ತಿದ್ದಾರೆ. ದಿನಕ್ಕೆ‌ ಕನಿಷ್ಠ ಇಬ್ಬರ ಮೇಲೆ ನಾಯಿಗಳು ದಾಳಿ ನಡೆಸುತ್ತಿವೆ. ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ಟು ಕೊಟ್ಟು ಸುಸ್ತಾದ ಏರಿಯಾದ ಜನರು ಸ್ವಂತ ಮನೆಗಳನ್ನೇ ಮಾರಾಟಕ್ಕಿಟ್ಟಿದ್ದಾರೆ.

ಇದನ್ನೂ ಓದಿ: Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

ಬೈಕ್‌ ಸವಾರ ಪ್ರಾಣ ಕಸಿದ ಕಾರು

ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66ರ ಗಾಂವಗೇರಿ ಬಳಿ ಕಾರು -ಬೈಕ್ ನಡುವೆ (Road Accident) ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರವಾರದ ಕಾಜುಭಾಗದ ನಿವಾಸಿ ವಿನೋದ ನಾಯ್ಕ (30) ಮೃತ ದುರ್ದೈವಿ.

ಸ್ಥಳಕ್ಕೆ ಚಿತ್ತಾಕುಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಚಿತ್ತಾಕುಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೆಜಿಎಫ್‌ನಲ್ಲಿ ಏರ್ ಬ್ಲಾಸ್ಟ್‌

ಕೋಲಾರ ಕೆಜಿಎಫ್ ನಗರದಲ್ಲಿ ಭಯಾನಕ ಜೋರು ಶಬ್ಧ ಕೇಳಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಏರ್ ಬ್ಲಾಸ್ಟ್ ಆಗಿದೆ. ಜೋರು ಶಬ್ದದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೆಜಿಎಫ್ ನಗರದ ಮಾರಿಕುಪ್ಪಂ ಹಾಗೂ ಅಂಡರ್ ಸನ್ ಪೇಟೆ ನಿವಾಸಿಗಳು ಮನೆಯಿಂದ ಹೊರ ಬಂದಿದ್ದರು. ಈ ಬಗ್ಗೆ ಬಿಜಿಎಂಎಲ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಮಾರಿಕುಪ್ಪಂನಲ್ಲಿರುವ ಮೈಸೂರ್ ಮಿಲ್ಸ್‌ನಲ್ಲಿ ಏರ್ ಬ್ಲಾಸ್ಟ್‌ನಿಂದಾಗಿ ಭಾರಿ ಭಯಾನಕ‌ ಶಬ್ಧ ಬಂದಿದೆ ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ 85 ಜನರ ಮೇಲೆ ಚಾರ್ಜ್‌ಶೀಟ್, ಸುಳ್ಳು ಹೇಳಿದ ನಟಿ ಹೇಮಾ ಮೇಲೂ ಚಾರ್ಜ್

Rave Party: ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ (Actress Hema) ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಹೇಮಾ ವಿರುದ್ಧವೂ ಸಾಕ್ಷಿಗಳಿದ್ದು, ಸಿಸಿಬಿ ಚಾರ್ಜ್ ಫ್ರೇಮ್ ಮಾಡಿದೆ. ಈಕೆ ಡ್ರಗ್ಸ್ ಸೇವನೆ ಮಾಡಿದ್ದಕ್ಕೆ ಸಾಕ್ಷಿ ಲಭ್ಯವಾಗಿದೆ.

VISTARANEWS.COM


on

rave party telugu actress hema
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿ ರೇವ್ ಪಾರ್ಟಿ (Rave Party) ನಡೆಸಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರ (CCB Police) ತನಿಖೆ ಪೂರ್ಣಗೊಂಡಿದ್ದು, ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ರೇವ್‌ ಪಾರ್ಟಿಯಲ್ಲಿ ಭಾಗವಹಿಸಿದ್ದ ತೆಲುಗು ನಟಿ ಹೇಮಾ (Actress Hema) ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳಲಾಗಿದೆ. ಹೇಮಾ ವಿರುದ್ಧವೂ ಸಾಕ್ಷಿಗಳಿದ್ದು, ಸಿಸಿಬಿ ಚಾರ್ಜ್ ಫ್ರೇಮ್ ಮಾಡಿದೆ. ಈಕೆ ಡ್ರಗ್ಸ್ ಸೇವನೆ ಮಾಡಿದ್ದಕ್ಕೆ ಸಾಕ್ಷಿ ಲಭ್ಯವಾಗಿದೆ.

ಡ್ರಗ್ಸ್ ಸೇವನೆ ಮಾಡಿದ್ದೂ ಅಲ್ಲದೇ ಪೊಲೀಸರ ತನಿಖೆ ವೇಳೆ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾಳೆ. ಪೊಲೀಸರಿಗೆ ತನಿಖೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾಳೆ. ಪ್ರಭಾವ ಬಳಸಿ ತನಿಖೆಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿರುವ ಬಗ್ಗೆಯೂ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ತಾನು ರೇವ್‌ ಪಾರ್ಟಿಯಲ್ಲಿ ಭಾಗವಹಿಸಿಯೇ ಇಲ್ಲ ಎಂದು ಈಕೆ ಪಾರ್ಟಿಯ ಸ್ಥಳದಿಂದಲೇ ಮಾಧ್ಯಮಗಳಿಗೆ ವಿಡಿಯೋ ಕಳಿಸಿ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದಳು.

ಪಾರ್ಟಿ ಆಯೋಜನೆ ಮಾಡಿದ್ದ ಐವರು ಸೇರಿ ಒಟ್ಟು 85ಕ್ಕೂ ಹೆಚ್ಚು ಜನರ ವಿರುದ್ಧ ಚಾರ್ಜ್‌ಶೀಟ್ ಮಂಡಿಸಲಾಗುತ್ತಿದೆ. ಇನ್ನೂ ಕೆಲವೇ ದಿನದಲ್ಲಿ ನ್ಯಾಯಾಲಯಕ್ಕೆ ಇದನ್ನು ಸಿಸಿಬಿ ಸಲ್ಲಿಕೆ ಮಾಡಲಿದೆ ಎಂದು ತಿಳಿದುಬಂದಿದೆ. ಪಾರ್ಟಿಯಲ್ಲಿ 85ಕ್ಕೂ ಹೆಚ್ಚು ಜನರು ಭಾಗವಹಿಸಿರುವುದು ಪತ್ತೆಯಾಗಿತ್ತು. ಪಕ್ಕದ ಆಂಧ್ರಪ್ರದೇಶದ ಅನೇಕ ಪ್ರಭಾವಿಗಳು, ಶ್ರೀಮಂತ ಉದ್ಯಮಿಗಳು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ  ಅವರನ್ನು ಬಂಧಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ಕೋರ್ಟ್‌ ಆಕೆಗೆ ವಿಧಿಸಿತ್ತು. ನಂತರ ಜಾಮೀನು ಮಂಜೂರಾಗಿತ್ತು. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌, ನಟಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನಟಿ ಹೇಮಾಳಿಂದ ಯಾವುದೇ ಮಾದಕ ವಸ್ತು ವಶಕ್ಕೆ ಪಡೆಯಲಾಗಿಲ್ಲ. ಹಲವು ದಿನಗಳ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಹೇಮಾ ಅಲಿಯಾಸ್ ಕೊಲ್ಲ ಹೇಮಾ ಪರ ವಕೀಲ ಮಹೇಶ್ ಕಿರಣ್ ಶೆಟ್ಟಿ ವಾದ ಮಂಡಿಸಿದ್ದಾರೆ. ಹೀಗಾಗಿ ನಟಿ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ರೇವ್‌ ಪಾರ್ಟಿ ಪ್ರಕರಣದಲ್ಲಿ (Rave Party) ವಿಚಾರಣೆಗೆ ಆಗಮಿಸಿದ್ದ ತೆಲುಗು ನಟಿ ಹೇಮಾ ಅವರನ್ನು ಜೂನ್‌ 3ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾ ಅವರನ್ನು ಜೂನ್‌ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶಿಸಿದ್ದರು.

ಮೇ 19ರಂದು ಎಲೆಕ್ಟ್ರಾನಿಕ್‌ ಸಿಟಿಯ (Electronic city) ಫಾರ್ಮ್‌ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಟಿ ಹೇಮಾ ಹಾಜರಾಗಿದ್ದಾಗ ಅವರನ್ನು ಅಧಿಕಾರಿಗಳು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

Continue Reading

Latest

Murder Case: ಒಂದೇ ಹುಡುಗಿಯನ್ನು ಪ್ರೀತಿಸಿದ ಸಹೋದರರು; ಈ ತ್ರಿಕೋನ ಪ್ರೇಮ ಕಥೆ ಕೊಲೆಯಲ್ಲಿ ಅಂತ್ಯ!

Murder Case: ಸೋದರ ಸಂಬಂಧಿಗಳಾದ ವಿನೋದ್ ಮತ್ತು ಮನೀಶ್ ಒಂದೇ ಹುಡುಗಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ವಿನೋದ್ ಐದು ವರ್ಷಗಳಿಂದ ಅವಳೊಂದಿಗೆ ಸಂಬಂಧ ಹೊಂದಿದ್ದ. ಅವರ ಸಂಬಂಧವು ಮದುವೆಯ ಹಂತಕ್ಕೆ ತಲುಪಿತ್ತು. ಆದರೆ, ತಾನು ಪ್ರೀತಿಸುತ್ತಿದ್ದ ಹುಡುಗಿ ಮೇಲೆ ಅನುಮಾನಗೊಂಡಿದ್ದ ವಿನೋದ್ ಅವಳ ಮೊಬೈಲ್ ಚೆಕ್ ಮಾಡಿದಾಗ ಆಕೆಗೆ ತನ್ನ ಸಹೋದರ ಸಂಬಂಧಿ ಮನೀಶ್‍ನೊಂದಿಗೆ ಸಂಬಂಧವಿದೆ ಎಂಬುದು ತಿಳಿದು ಬಂದಿದೆ. ಆಗ ಕೋಪ ಮತ್ತು ಅಸೂಯೆಯಿಂದ ವಿನೋದ್ ಸೇಡು ತೀರಿಸಿಕೊಳ್ಳುವ ನಿರ್ಧಾರ ಮಾಡಿದ. ಮುಂದೇನಾಯ್ತು? ಈ ಸುದ್ದಿ ಓದಿ.

VISTARANEWS.COM


on

Murder Case
Koo


ಪ್ರೀತಿಯ ವಿಚಾರದಲ್ಲಿ ಮೋಸ, ಕೊಲೆ ಪ್ರಕರಣಗಳು ಆಗಾಗ ನಡೆಯುತ್ತಿರುತ್ತವೆ. ಇದೀಗ ಜಾರ್ಖಂಡ್‍ನಲ್ಲಿ ತ್ರಿಕೋನ ಪ್ರೇಮ ಕಥೆಯೊಂದು ದುರಂತವಾಗಿ ಅಂತ್ಯ ಕಂಡಿದೆ. ಜಾರ್ಖಂಡ್‍ನ ಗೋಮಿಯಾದಲ್ಲಿ ಇಬ್ಬರು ಸಹೋದರರು ಒಂದೇ ಹುಡುಗಿಯನ್ನು ಪ್ರೀತಿಸಿದ ನಂತರ ಈ ತ್ರಿಕೋನ ಪ್ರೇಮ ಕಥೆ ತಿರುವು ಪಡೆದು ಕೊಲೆಗೆ (Murder Case)ಕಾರಣವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಪ್ರಣಯ ಮತ್ತು ದ್ರೋಹದ ಈ ದುರಂತ ಪ್ರೇಮಕಥೆಯಿಂದ ಅವರ ಕುಟುಂಬ ದುಃಖಕ್ಕೀಡಾಗಿದೆ.

ಕತಾರಾ ಒಪಿ ಪ್ರದೇಶದ ಜಿರ್ಕಿ ಎಂಬ ಸಣ್ಣ ಹಳ್ಳಿಯಲ್ಲಿ, ಸೋದರ ಸಂಬಂಧಿಗಳಾದ ವಿನೋದ್ ಮತ್ತು ಮನೀಶ್ ಒಂದೇ ಹುಡುಗಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ವಿನೋದ್ ಐದು ವರ್ಷಗಳಿಂದ ಅವಳೊಂದಿಗೆ ಸಂಬಂಧ ಹೊಂದಿದ್ದ. ಅವರ ಸಂಬಂಧವು ಮದುವೆಯ ಹಂತಕ್ಕೆ ತಲುಪಿತ್ತು. ಆದರೆ, ತಾನು ಪ್ರೀತಿಸುತ್ತಿದ್ದ ಹುಡುಗಿ ಮೇಲೆ ಅನುಮಾನಗೊಂಡಿದ್ದ ವಿನೋದ್ ಅವಳ ಮೊಬೈಲ್ ಚೆಕ್ ಮಾಡಿದಾಗ ಆಕೆಗೆ ತನ್ನ ಸಹೋದರ ಸಂಬಂಧಿ ಮನೀಶ್‍ನೊಂದಿಗೆ ಸಂಬಂಧವಿದೆ ಎಂಬುದು ತಿಳಿದು ಬಂದಿದೆ. ಆಗ ಕೋಪ ಮತ್ತು ಅಸೂಯೆಯಿಂದ ವಿನೋದ್ ಸೇಡು ತೀರಿಸಿಕೊಳ್ಳುವ ನಿರ್ಧಾರ ಮಾಡಿದ.

ಪೊಲೀಸರ ಪ್ರಕಾರ, ಅವನು ಗೋಮಿಯಾದಲ್ಲಿ ಕಮ್ಮಾರನನ್ನು ಭೇಟಿ ಮಾಡಿ ಹರಿತವಾದ ಕೊಡಲಿಯನ್ನು ರೆಡಿ ಮಾಡಿಸಿ ಅದರಿಂದ ತನ್ನ ಸೋದರ ಸಂಬಂಧಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ. ಕೊಲೆ ನಡೆದ ದಿನ ವಿನೋದ್ ತನ್ನ ತಾಯಿಯೊಂದಿಗೆ ಜಿರ್ಕಿಯಲ್ಲಿರುವ ತನ್ನ ಸೋದರ ಮಾವನ ಮನೆಗೆ ಹೋಗಿದ್ದಾನೆ. ಮನೀಶ್ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಕಂಡಿದ್ದಾನೆ. ಈ ಅವಕಾಶವನ್ನು ಬಳಸಿಕೊಂಡ ವಿನೋದ್, ಮನೀಶ್ ಮೇಲೆ ಆಯುಧದಿಂದ ಹಲ್ಲೆ ನಡೆಸಿ, ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ರಸ್ತೆಯಲ್ಲಿ ಚುಡಾಯಿಸಿದ ಪುಂಡನಿಗೆ ಬುದ್ಧಿ ಕಲಿಸಿದ ವಿದ್ಯಾರ್ಥಿನಿ; ವಿಡಿಯೊ ನೋಡಿ

ಮನೀಶ್‍ನ ಕ್ರೂರ ಹತ್ಯೆಯು ಕುಟುಂಬ ಮತ್ತು ಹಳ್ಳಿಯಾದ್ಯಂತ ಆಘಾತವನ್ನುಂಟುಮಾಡಿತು. ನಂತರ, ಗ್ರಾಮಸ್ಥರು ಪ್ರತಿಭಟನೆಗಿಳಿಸು ರಸ್ತೆಗಳಲ್ಲಿ ತಡೆಯೊಡ್ಡಿದರು. ಹಾಗೂ ತ್ವರಿತ ಕ್ರಮ ಮತ್ತು ನ್ಯಾಯಕ್ಕಾಗಿ ಒತ್ತಾಯಿಸಿದ್ದರಿಂದ ಅಲ್ಲಿ ಆಕ್ರೋಶ ಭುಗಿಲೆದ್ದಿತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತ್ವರಿತವಾಗಿ ತಮ್ಮ ತನಿಖೆಯನ್ನು ತೀವ್ರಗೊಳಿಸಿದರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು ಮತ್ತು ಆರಂಭದಲ್ಲಿ ಅವರನ್ನು ದಾರಿತಪ್ಪಿಸಲು ಪ್ರಯತ್ನಿಸಿದ ವಿನೋದ್‍ನನ್ನು ವಿಚಾರಣೆ ನಡೆಸಿದರು. ಕೊನೆಗೆ, ಒತ್ತಡದಲ್ಲಿ, ವಿನೋದ್ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡ. ಇದರಿಂದಾಗಿ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಒಬ್ಬ ಯುವಕ ಜೈಲು ಪಾಲಾಗಿ ಮತ್ತೊಬ್ಬನ್ನು ಕಳೆದುಕೊಂಡ ಕುಟುಂಬ ಈಗ ದುಃಖದಲ್ಲಿ ಮುಳುಗಿದೆ.

Continue Reading
Advertisement
karnataka Weather Forecast
ಮಳೆ2 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Manu Bhaker
ಕ್ರೀಡೆ3 mins ago

Manu Bhaker : ಮನು ಭಾಕರ್​ಗೆ ಕ್ರೀಡಾ ಇಲಾಖೆಯಿಂದ ವಿಶೇಷ ಸನ್ಮಾನ; 30 ಲಕ್ಷ ರೂಪಾಯಿ ವಿತರಣೆ

Lalbagh Flower Show
ಬೆಂಗಳೂರು4 mins ago

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Cattle Smuggling
ದೇಶ17 mins ago

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Paris Olympics 2024
ಪ್ರಮುಖ ಸುದ್ದಿ50 mins ago

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Naga Chaitanya deleated ex samantha
ಸಿನಿಮಾ52 mins ago

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Road Accident
ಉಡುಪಿ1 hour ago

Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Aman Sehrawat
ಕ್ರೀಡೆ1 hour ago

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Sunita Williams
ವಿದೇಶ1 hour ago

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Neeraj Chopra
ಕ್ರೀಡೆ1 hour ago

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌