Baby Death: ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ! - Vistara News

Latest

Baby Death: ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ!

Baby Death: ಮಧ್ಯರಾತ್ರಿಯಲ್ಲಿ ಮಗು ಅಳುವುದನ್ನು ನಿಲ್ಲಿಸಲಿಲ್ಲ ಎಂದು ತಾಯಿಯ ಪ್ರಿಯಕರ ಮೊದಲು ಮಗುವಿನ ಕಾಲುಗಳನ್ನು ಹಿಡಿದು ನೆಲಕ್ಕೆ ಬಡಿದಿದ್ದಾನೆ. ನಂತರ ಉಸಿರಾಟವನ್ನು ನಿಲ್ಲಿಸಲು ಬಾಯಿಯನ್ನು ಮುಚ್ಚಿದ್ದಾನೆ. ಇದರಿಂದ ಮಗು ಸಾವನಪ್ಪಿದೆ. ತಾಯಿ ತನ್ನ ಮಗಳ ನಿರ್ಜೀವ ದೇಹವನ್ನು ಹಿಡಿದುಕೊಂಡು ಇಡೀ ರಾತ್ರಿ ಅಳುತ್ತಾ ಕಳೆದರೆ, ಪ್ರೇಮಿ ಹತ್ತಿರದಲ್ಲೇ ನಿಶ್ಚಿಂತೆಯಿಂದ ಮಲಗಿದ್ದ. ಮರುದಿನ ಬೆಳಗ್ಗೆ ಅವನು ಸ್ಥಳದಿಂದ ಓಡಿಹೋಗಿದ್ದಾನೆ. ನಂತರ ತಾಯಿ ಈ ಕೃತ್ಯವನ್ನು ಪೊಲೀಸರ ಗಮನಕ್ಕೆ ತಂದಿದ್ದಾಳೆ.

VISTARANEWS.COM


on

Baby Death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ತಾಯಿ-ಮಗುವಿನ ಬಾಂಧ್ಯವ್ಯ ತುಂಬಾ ಅನ್ಯೋನ್ಯವಾದದ್ದು. ಮಗು ಎಷ್ಟೇ ಅತ್ತರೂ, ಹಠ ಹಿಡಿದರೂ ಕೂಡ ತಾಯಿ ಬೇಸರ ಮಾಡಿಕೊಳ್ಳದೆ ಅದನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಾಳೆ. ಒಂದು ವೇಳೆ ಸಿಟ್ಟಲ್ಲಿ ಹೊಡೆದರೂ ಸ್ವಲ್ಪ ಹೊತ್ತಿನಲ್ಲೇ ಮಗುವನ್ನು ಮುದ್ದಾಡುತ್ತಾಳೆ. ಹಾಗೇ ಬೇರೆ ಯಾರಾದರೂ ತನ್ನ ಮಗುವಿಗೆ ಹಾನಿ ಮಾಡಲು ಬಂದರೆ ತನ್ನ ಪ್ರಾಣವನ್ನು ಲೆಕ್ಕಿಸದೆ ಮಗುವನ್ನು ಕಾಪಾಡುತ್ತಾಳೆ. ಆದರೆ ಮಧ್ಯಪ್ರದೇಶದಲ್ಲಿ ಅಳುವುದನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಒಂದು ವರ್ಷದ ಮಗಳನ್ನು ಆಕೆಯ ತಾಯಿಯ ಎದುರೇ ಪ್ರಿಯಕರನ ಅಮಾನುಷವಾಗಿ ಕೊಲೆ (Baby Death) ಮಾಡಿದ್ದಾನೆ. ಮಧ್ಯಪ್ರದೇಶದ ಶಿವಪುರಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಈ ಮಹಿಳೆ ಪ್ರಿಯಕರನ ಜತೆ ಮಲಗಿದ್ದಳು. ಮಧ್ಯರಾತ್ರಿಯಲ್ಲಿ ಮಗು ಅಳಲು ಶುರು ಮಾಡಿದೆ. ಅಳುವುದನ್ನು ನಿಲ್ಲಿಸಲಿಲ್ಲ, ತನ್ನ ಪ್ರಣಯಕ್ಕೆ ತೊಂದರೆ ಆಯಿತು ಎಂದು ಸಿಟ್ಟುಗೊಂಡ ಪ್ರಿಯಕರ ಮೊದಲು ಮಗುವಿನ ಕಾಲುಗಳನ್ನು ಹಿಡಿದು ನೆಲಕ್ಕೆ ಬಡಿದಿದ್ದಾನೆ. ನಂತರ ಉಸಿರಾಟವನ್ನು ನಿಲ್ಲಿಸಲು ಬಾಯಿಯನ್ನು ಮುಚ್ಚಿದ್ದಾನೆ. ಇದರಿಂದ ಮಗು ಸಾವನಪ್ಪಿದೆ. ತಾಯಿ ತನ್ನ ಮಗಳ ನಿರ್ಜೀವ ದೇಹವನ್ನು ಹಿಡಿದುಕೊಂಡು ಇಡೀ ರಾತ್ರಿ ಅಳುತ್ತಾ ಕಳೆದರೆ, ಪ್ರೇಮಿ ಹತ್ತಿರದಲ್ಲೇ ನಿದ್ದೆ ಮಾಡುತ್ತಿದ್ದ! ಮರುದಿನ ಬೆಳಗ್ಗೆ ಅವನು ಸ್ಥಳದಿಂದ ಓಡಿಹೋಗಿದ್ದಾನೆ. ನಂತರ ತಾಯಿ ಈ ಘಟನೆಯನ್ನು ಪೊಲೀಸರಿಗೆ ತಿಳಿಸಿದ್ದಾಳೆ.

ಮಾಹಿತಿಯ ಪ್ರಕಾರ, ಮೃತ ಮಗುವನ್ನು ಛಾಯಾ ಎಂದು ಗುರುತಿಸಲಾಗಿದೆ. ಆರೋಪಿ ಪ್ರೇಮಿ ಭೈಯಾಲಾಲ್ ಆದಿವಾಸಿ ಒಂದು ವರ್ಷದಿಂದ ಬೆಂಗಳೂರಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಈ ಅವಧಿಯಲ್ಲಿ, ಅವನು ಜಯಂತಿ ಆದಿವಾಸಿ (35) ಅವಳನ್ನು ಭೇಟಿಯಾಗಿದ್ದಾನೆ. ಜಯಂತಿ ತನ್ನ ಪತಿ ಪರಮಾನಂದ್ ಮತ್ತು ಮೂವರು ಮಕ್ಕಳೊಂದಿಗೆ ಅಲ್ಲಿ ಕೆಲಸ ಮಾಡುತ್ತಿದ್ದಳು. ಸುಮಾರು 20 ದಿನಗಳ ಹಿಂದೆ ಜಯಂತಿ ತನ್ನ ಪತಿ ಮತ್ತು ಇಬ್ಬರು ಹಿರಿಯ ಮಕ್ಕಳಾದ ದಾಮಿನಿ (9) ಮತ್ತು ದೇವ್ (8) ಅವರನ್ನು ಬಿಟ್ಟು ತನ್ನ ಒಂದು ವರ್ಷದ ಮಗಳು ಛಾಯಾಳನ್ನು ಕರೆದುಕೊಂಡು ಪ್ರಿಯಕರ ಭೈಯಾಲಾಲ್ ಅವನೊಂದಿಗೆ ಶಿವಪುರಿಯಲ್ಲಿ ವಾಸವಾಗಿದ್ದಳು.

ಮಂಗಳವಾರ ರಾತ್ರಿ ಅವರು ಊಟ ಮಾಡಿ ಮಲಗಿದ ನಂತರ ಮಧ್ಯರಾತ್ರಿಯ ಸುಮಾರಿಗೆ, ಛಾಯಾ ಅಳಲು ಪ್ರಾರಂಭಿಸಿದಳು, ಭೈಯಾಲಾಲ್‌ನನ್ನು ಎಬ್ಬಿಸಿದಳು. ಇದರಿಂದ ಕೋಪಗೊಂಡ ಅವನು ಮಗುವನ್ನು ಹೊಡೆದನು, ಇದರಿಂದ ಮಗು ಜೋರಾಗಿ ಅತ್ತಿದೆ. ನಂತರ ಅವನು ಛಾಯಾಳ ಕಾಲುಗಳನ್ನು ಹಿಡಿದು ನೆಲಕ್ಕೆ ಹೊಡೆದ. ಇದರಿಂದಾಗಿ ಅವಳ ಬಾಯಿ ಮತ್ತು ತಲೆಯಿಂದ ತೀವ್ರ ರಕ್ತಸ್ರಾವವಾಯಿತು. ನಂತರ ಅವನು ಅವಳ ಬಾಯಿಯನ್ನು ಮುಚ್ಚಿ ಉಸಿರುಗಟ್ಟಿಸಿ ಕೊಂದನು. ಮರುದಿನ ಬೆಳಗ್ಗೆ ಭೈಯಾಲಾಲ್ ಗುಡಿಸಲಿನಿಂದ ಹೊರಟು ಹೋದಾಗ ಜಯಂತಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾಳೆ.

ಇದನ್ನೂ ಓದಿ:  ʼಊರ ಹಬ್ಬʼದಲ್ಲಿ ʼನಗ್ನ ಉಡುಗೆʼ ಧರಿಸಿ ಸಂಚಲನ ಮೂಡಿಸಿದ ರಿಹಾನ್ನಾ!

ಭೈಯಾಲಾಲ್ ಆದಿವಾಸಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಮೋರ್ ಕಲಾನ್ ಪೊಲೀಸ್ ಠಾಣೆಯ ಉಸ್ತುವಾರಿ ನೀತು ಸಿಂಗ್ ಹೇಳಿದ್ದಾರೆ. ಜಯಂತಿಯ ಅತ್ತೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಪತಿ ಪರಮಾನಂದ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆಟೋಮೊಬೈಲ್

Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

ಮನೆಗೊಂದು ಕಾರು ಬೇಕು ಎನ್ನುವ ಆಸೆ ಜೊತೆಗೆ ಇದಕ್ಕೆ ಪೂರಕವಾಗಿ ವಿವಿಧ ಆಕರ್ಷಕ ಕೊಡುಗೆಗಳಿಂದ ಕಾರುಗಳ ಬೇಡಿಕೆ ಇತ್ತೀಚೆಗೆ ಹೆಚ್ಚಾಗುತ್ತಲೇ ಇದೆ. ಜುಲೈ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು (Best Selling Cars) ಮತ್ತು ಮಾರುಕಟ್ಟೆಯಲ್ಲಿ ಬೇಡಿಕೆ ಕಳೆದುಕೊಂಡ ಕಾರುಗಳು ಯಾವುದು ಗೊತ್ತೇ? ಇಲ್ಲಿದೆ ಇದರ ಸಂಪೂರ್ಣ ಡಿಟೇಲ್ಸ್.

VISTARANEWS.COM


on

By

Best Selling Cars
Koo

ಜುಲೈ ತಿಂಗಳು ಕೆಲವು ಕಾರು ಕಂಪನಿಗಳಿಗೆ (car) ಹಬ್ಬವನ್ನು ಉಂಟು (Best Selling Cars) ಮಾಡಿದರೆ, ಇನ್ನು ಕೆಲವು ಕಾರು ತಯಾರಕರಿಗೆ ಸಣ್ಣ ಹೊಡೆತವನ್ನೂ ನೀಡಿದೆ. ಇದರಲ್ಲಿ ಮುಖ್ಯವಾಗಿ ಮಾರುತಿ ಸುಜುಕಿ (Maruti Suzuki), ಹುಂಡೈ (Hyundai) ಮತ್ತು ಟಾಟಾ ಮೋಟಾರ್ಸ್‌ನ (Tata Motors) ಕಾರುಗಳು ಮಾರಾಟದಲ್ಲಿ ಕುಸಿತವನ್ನು ದಾಖಲಿಸಿತ್ತು. ಹಿನ್ನಡೆಯ ಹೊರತಾಗಿಯೂ ಹುಂಡೈ ಜುಲೈ ತಿಂಗಳಲ್ಲಿ ಕಾರು ಮಾರಾಟದಲ್ಲಿ ಕ್ರೆಟಾ (Hyundai Creta) ಟಾಟಾ ಪಂಚ್ (Tata Punch) ಸೇರಿದಂತೆ ಕೆಲವು ಜನಪ್ರಿಯ ಮಾದರಿಗಳಿಗೆ ಸಡ್ಡು ಹೊಡೆದಿದೆ.

ಜುಲೈ 2024ರಲ್ಲಿ ಹೆಚ್ಚು ಮಾರಾಟವಾದ ಹತ್ತು ಪ್ರಮುಖ ಕಾರುಗಳ ವಿವರ ಇಲ್ಲಿದೆ:

ಜುಲೈ ತಿಂಗಳಲ್ಲಿ 17,350 ಯುನಿಟ್‌ಗಳನ್ನು ಮಾರಾಟ ಮಾಡುವುದರೊಂದಿಗೆ ಹ್ಯುಂಡೈ ಕ್ರೆಟಾ ಮುನ್ನಡೆಯನ್ನು ಕಂಡಿದೆ. 2023ರ ಜುಲೈಗೆ ಹೋಲಿಸಿದರೆ ಶೇ. 23ರಷ್ಟು ಬೇಡಿಕೆ ಹೆಚ್ಚಾಗಿರುವುದಾಗಿ ಕಂಪನಿ ಪ್ರಕಟಿಸಿದೆ. ಅಲ್ಲದೇ ಹೊಸ ಹುಂಡೈ ಕ್ರೆಟಾ ಜನವರಿಯಿಂದ ಈವರೆಗೆ 1 ಲಕ್ಷ ಮಾರಾಟದ ಮೈಲುಗಲ್ಲನ್ನು ತಲುಪಿದೆ. ಈ ವರ್ಷ. ಕ್ರೆಟಾ ಎನ್ ಲೈನ್ ಆವೃತ್ತಿಯಲ್ಲಿಯೂ ಲಭ್ಯವಿದ್ದು, ಸ್ಪೋರ್ಟಿಯರ್ ಆವೃತ್ತಿಯನ್ನು ಬಯಸುವ ಗ್ರಾಹಕರನ್ನು ಆಕರ್ಷಿಸುತ್ತಿದೆ.


ಮಾರುತಿ ಸುಜುಕಿ ಸ್ವಿಫ್ಟ್ ನಂ.2

ಕ್ರೆಟಾದ ಬಳಿಕ ಮಾರುತಿ ಸುಜುಕಿ ಸ್ವಿಫ್ಟ್ 16,854 ಯುನಿಟ್‌ಗಳ ಮಾರಾಟವನ್ನು ದಾಖಲಿಸಿದೆ. ಶೇ. 6ರಷ್ಟು ಮಾರಾಟ ಕುಸಿತವನ್ನು ಕಂಡಿದೆ. ಸ್ವಿಫ್ಟ್ ಅನಂತರ ವ್ಯಾಗನರ್ ಕಳೆದ ತಿಂಗಳು ಮಾರಾಟ ಕುಸಿತವನ್ನು ದಾಖಲಿಸಿದ ಅನಂತರ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಧನಾತ್ಮಕ ಬೆಳವಣಿಗೆಯನ್ನು ದಾಖಲಿಸಿದೆ.

ಕಳೆದ ತಿಂಗಳ ಬೆಸ್ಟ್-ಸೆಲ್ಲರ್, ಟಾಟಾ ಪಂಚ್ 16,121 ಯುನಿಟ್‌ಗಳ ಮಾರಾಟ ಮತ್ತು ಶೇ. 34ರಷ್ಟು ಬೆಳವಣಿಗೆಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ. ಪಂಚ್ ಸೇರಿದಂತೆ ಇನ್ನೂ ಎರಡು ಮಾರುತಿ ಸುಜುಕಿ ವಾಹನಗಳಾದ ಎರ್ಟಿಗಾ ಮತ್ತು ಬ್ರೆಝಾ, ಕ್ರಮವಾಗಿ 15,701 ಯುನಿಟ್ ಮತ್ತು 14,676 ಯುನಿಟ್‌ಗಳನ್ನು ಮಾರಾಟವಾಗಿದೆ. ಎರ್ಟಿಗಾ ಶೇ. 9, ಬ್ರೆಝಾ ಶೇ. 11 ರಷ್ಟು ಮಾರಾಟ ಕುಸಿತವನ್ನು ಅನುಭವಿಸಿದೆ.


ಟಾಟಾ ನೆಕ್ಸಾನ್ ಸ್ಥಾನ ಏನು?:

ಏಳನೇ ಸ್ಥಾನದಲ್ಲಿ ಟಾಟಾ ನೆಕ್ಸಾನ್ ಇದ್ದು, ಇದು ಮೊದಲ ಬಾರಿಗೆ ಧನಾತ್ಮಕ ಬೆಳವಣಿಗೆಯನ್ನು ಕಂಡಿದೆ. ಟಾಟಾ ಜುಲೈ 2024 ರಲ್ಲಿ 13,902 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದ್ದು, ಶೇ. 13ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ.

ಜುಲೈ 2024ರಲ್ಲಿ ಧನಾತ್ಮಕ ಬೆಳವಣಿಗೆಯನ್ನು ದಾಖಲಿಸಿದ ಕೆಲವೇ ಕಾರು ತಯಾರಕರಲ್ಲಿ ಮಹೀಂದ್ರಾ ಕೂಡ ಒಂದಾಗಿದೆ. 12,237 ಯುನಿಟ್‌ಗಳ ಮಾರಾಟವನ್ನು ನೋಂದಾಯಿಸಿದ ಸ್ಕಾರ್ಪಿಯೊ ಟಾಪ್ 10 ರಲ್ಲಿ ಸ್ಥಾನ ಪಡೆದಿದೆ. ಮಾರುತಿ ಸುಜುಕಿ ಉತ್ಪನ್ನಗಳಾದ ಇಕೋ, ಡಿಜೈರ್ ಎರಡೂ ಮಾರಾಟದಲ್ಲಿ ಕುಸಿತವನ್ನು ಅನುಭವಿಸಿದೆ.

ಇದನ್ನೂ ಓದಿ: Bike Mileage Tips: ಬೈಕ್‌‌ಗೆ ಟ್ಯೂಬ್, ಟ್ಯೂಬ್ ಲೆಸ್ ಟಯರ್; ಇವೆರಡರಲ್ಲಿ ಯಾವುದು ಬೆಸ್ಟ್?

ಯಾವುದು ಎಷ್ಟು?

ಹುಂಡೈ ಕ್ರೆಟಾ ಈ ಬಾರಿ 17,350ರಷ್ಟು ಮಾರಾಟವಾಗಿದ್ದು, ಕಳೆದ ವರ್ಷ 14,062ರಷ್ಟಾಗಿತ್ತು.


ಮಾರುತಿ ಸುಜುಕಿ ಸ್ವಿಫ್ಟ್ ಈ ಬಾರಿ 16,854, ಕಳೆದ ಬಾರಿ 17,896, ಮಾರುತಿ ಸುಜುಕಿ ವ್ಯಾಗನ್ ಆರ್ ಈ ಬಾರಿ 16,191, ಕಳೆದ ವರ್ಷ 12,970, ಟಾಟಾ ಪಂಚ್ ಈ ಬಾರಿ 16,121, ಕಳೆದ ವರ್ಷ 12,019, ಮಾರುತಿ ಸುಜುಕಿ ಎರ್ಟಿಗಾ ಈ ಬಾರಿ 15,701, ಕಳೆದ ಬಾರಿ 14,352, ಮಾರುತಿ ಸುಜುಕಿ ಬ್ರೆಝಾ ಈ ಬಾರಿ 14,676, ಕಳೆದ ವರ್ಷ 16,543, ಟಾಟಾ ನೆಕ್ಸಾನ್ ಈ ಬಾರಿ 13,902, ಕಳೆದ ವರ್ಷ 12,349, ಮಹೀಂದ್ರ ಸ್ಕಾರ್ಪಿಯೋ ಈ ಬಾರಿ 12,237, ಕಳೆದ ಬಾರಿ 10,522, ಮಾರುತಿ ಸುಜುಕಿ ಇಕೋ ಈ ಬಾರಿ 11,916, ಕಳೆದ ವರ್ಷ 12,037, ಮಾರುತಿ ಸುಜುಕಿ ಡಿಜೈರ್ ಈ ಬಾರಿ 11,647 ಕಳೆದ ವರ್ಷ 13,395ರಷ್ಟು ಮಾರಾಟವನ್ನು ದಾಖಲಿಸಿದೆ.

Continue Reading

ಕರ್ನಾಟಕ

Channapatna News: ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್

Channapatna News: ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ ಎಂದು ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜನತೆಗೆ ಆದಷ್ಟು ಬೇಗ ಅನುಕೂಲ ಮಾಡಿಕೊಡುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈಗ ಇರುವ ಜಮೀನುಗಳ ಅಕ್ಕಪಕ್ಕ ಖಾಸಗಿಯವರು ಜಮೀನು ನೀಡಿದರೆ ಸರ್ಕಾರದಿಂದ ಖರೀದಿಸಲಾಗುವುದು. ಈಗಾಗಲೇ ಚನ್ನಪಟ್ಟಣ ತಾಲೂಕು ಸೇರಿದಂತೆ ಒಟ್ಟು ಮೂರು ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಮೂಲ ಸೌಕರ್ಯ ಅಭಿವೃದ್ದಿಗೆ ತಲಾ 100 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Channapatna News
Koo

ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (Channapatna News) ತಿಳಿಸಿದರು.

ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದ್ದ ʼಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಸರಣಿ ಕಾರ್ಯಕ್ರದಲ್ಲಿ ಮನೆ, ನಿವೇಶನ ಹಂಚಿಕೆ ಬಗ್ಗೆ ನಾಗರಿಕರಿಗೆ ಡಿಸಿಎಂ ಶಿವಕುಮಾರ್ ಅವರು ಈ ಹಿಂದೆ ಭರವಸೆ ನೀಡಿದ್ದರು. ಅದರಂತೆ ನಿವೇಶನಗಳಿಗಾಗಿ ಸ್ಥಳ ವೀಕ್ಷಣೆಗೆ ತಾಲೂಕಿನ ಹನುಮಂತನಗರ, ಪಟ್ಲು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನೂ ಓದಿ: Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

ಜನತೆಗೆ ಆದಷ್ಟು ಬೇಗ ಅನುಕೂಲ ಮಾಡಿಕೊಡುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈಗ ಇರುವ ಜಮೀನುಗಳ ಅಕ್ಕಪಕ್ಕ ಖಾಸಗಿಯವರು ಜಮೀನು ನೀಡಿದರೆ ಸರ್ಕಾರದಿಂದ ಖರೀದಿಸಲಾಗುವುದು. ಈಗಾಗಲೇ ಚನ್ನಪಟ್ಟಣ ತಾಲೂಕು ಸೇರಿದಂತೆ ಒಟ್ಟು ಮೂರು ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಮೂಲ ಸೌಕರ್ಯ ಅಭಿವೃದ್ದಿಗೆ ತಲಾ 100 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ. ಬಡವರಿಗೆ ನಿವೇಶನ, ಮನೆ ಹಂಚಲಾಗುವುದು. ಅರ್ಜಿ ನೀಡಿರುವವರ ಮನೆಗೆ ತೆರಳಿ ಅಧಿಕಾರಿಗಳು ಸತ್ಯಾಸತ್ಯತೇ ಪರಿಶೀಲನೆ ಮಾಡುತ್ತಾರೆ. ಈಗಲೂ ಮನೆಗೆ ಅರ್ಜಿ ನೀಡಬಹುದು ಎಂದು ತಿಳಿಸಿದರು.

ಕನಕಪುರದಲ್ಲಿ ನೂರಾರು ಎಕರೆ ಹಂಚಿದ್ದೇನೆ. ನಾನೇ ಖುದ್ದಾಗಿ ವಾರ್ಡ್ ಮಟ್ಟದಲ್ಲಿ ನಿವೇಶನ ಹಂಚಿಕೆ ಮಾಡಿದ್ದೇನೆ. ಇಲ್ಲಿಯೂ ಇದೇ ರೀತಿ ಹಂಚಿಕೆ ಮಾಡಲಾಗುವುದು. ಉತ್ತಮ ದರ್ಜೆಯ ಲೇಔಟ್‌ಗಳನ್ನು ನಿರ್ಮಾಣ ಮಾಡಿ, ಒಳಚರಂಡಿ, ಕುಡಿಯುವ ನೀರು, ಶಾಲೆ, ಅಂಗನವಾಡಿ, ದೇವಸ್ಥಾನ, ರಸ್ತೆ ಸೇರಿದಂತೆ ಎಲ್ಲಾ ಸೌಕರ್ಯ ನೀಡಲಾಗುವುದು ಎಂದು ಹೇಳಿದರು.

ಉಪಚುನಾವಣೆ ಮುಂಚಿತವಾಗಿಯೇ ಹಂಚಿಕೆ ಮಾಡಲಾಗುವುದೇ ಎಂದಾಗ “ಈಗಾಗಲೇ ಸ್ಕೆಚ್ ಕೂಡ ಮಾಡಲಾಗಿದೆ. ಚನ್ನಪಟ್ಟಣ ನಗರ ಮಾತ್ರವಲ್ಲ, ಆಯಾಯ ಹಳ್ಳಿಗಳಲ್ಲಿ ಅಲ್ಲಲ್ಲಿಯೇ ನಿವೇಶನ ಹಂಚಿಕೆ ಮಾಡಲಾಗುವುದು. ಅವೇರಗಳ್ಳಿ, ಸುಳ್ಳೇರಿ, ಶಿಬನಹಳ್ಳಿ, ವಂದಾರಗುಪ್ಪೆ, ಅಲ್ಲಾಳುಸಂದ್ರ ಸೇರಿದಂತೆ ಬ್ರಹ್ಮಿಣೀಪುರದಲ್ಲಿ 9 ಎಕರೆ, ಪಟ್ಲು ಗ್ರಾಮದಲ್ಲಿ 22 ಎಕರೆ ಸೇರಿದಂತೆ ಆಯಾಯ ಗ್ರಾಮಮಟ್ಟದಲ್ಲಿ ಎಷ್ಟು ಭೂಮಿ ಲಭ್ಯತೆ ಇದೆಯೋ ಅವುಗಳನ್ನು ಗುರುತಿಸಲಾಗಿದೆ ಎಂದರು.

ಇದನ್ನೂ ಓದಿ: EPF New Rule: ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ.ವರೆಗೆ ಇಪಿಎಫ್‌ನಿಂದ ಹಣ ಪಡೆಯಲು ಅವಕಾಶ

ಕುಮಾರಸ್ವಾಮಿ ಅವರ ಸ್ವಚ್ಚತೆ ಬಗ್ಗೆ ತಿಳಿಸಲಿ

ನಮ್ಮ ಸಮಾವೇಶಕ್ಕೆ ಬಿಜೆಪಿ, ಜೆಡಿಎಸ್ ಉತ್ತರ ನೀಡಲಿ. ನಾವು ಕೇವಲ ಉತ್ತರ ನೀಡಿ ಎಂದಷ್ಟೇ ಕೇಳುತ್ತಿದ್ದೇವೆ. ಮಾಧ್ಯಮವೊಂದರಲ್ಲಿ ಗಣಿ ವಿಚಾರವಾಗಿ ಸುದ್ದಿ ಬಿತ್ತರವಾಗುತ್ತಿತ್ತು. ಮೈನಿಂಗ್ ಮಿನಿಸ್ಟರ್ ಮೈನಿಂಗ್ ಹೇಗೆ ಕೊಟ್ಟರು ಎಂದು ಚರ್ಚೆಯಾಗುತ್ತಿತ್ತು. ಮೈನಿಂಗ್, ಸ್ಟೀಲ್, ಕಬ್ಬಿಣ ಸಚಿವರು ಅನುಮತಿ ಕೊಟ್ಟರು ಎನ್ನುವ ವಿಚಾರವಿದೆ. ಡೀನೋಟಿಫಿಕೇಶನ್ ಸೇರಿದಂತೆ ಇತರೇ ಆರೋಪಗಳಿಗೆ ಉತ್ತರ ನೀಡಲಿ. ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರಲ್ಲವೇ, ಅವರ ಸ್ವಚ್ಚತೆ ಬಗ್ಗೆ ತಿಳಿಸಲಿ ಎಂದು ಸವಾಲು ಹಾಕಿದರು.

Continue Reading

ದೇಶ

Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

Reliance Industries: 2023-24ರ ಹಣಕಾಸು ವರ್ಷದಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ದಾಟಿದ ಭಾರತದ ಮೊದಲ ಕಂಪನಿ ಎಂದೆನಿಸಿಕೊಂಡಿದೆ ರಿಲಯನ್ಸ್. ಈ ಅಂಕಿ- ಅಂಶವನ್ನು ಇಲ್ಲಿಯವರೆಗೆ ಯಾವುದೇ ಕಂಪನಿ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇ. 27ರಷ್ಟು ಜಿಗಿತ ಕಂಡಿದೆ. ಮಾರುಕಟ್ಟೆ ಬಂಡವಾಳ ಮೌಲ್ಯದ ವಿಚಾರಕ್ಕೆ ಬಂದಲ್ಲಿ ರಿಲಯನ್ಸ್ ವಿಶ್ವದ 48ನೇ ಕಂಪನಿಯಾಗಿದ್ದು, ಕಂಪನಿಯ ಏಕೀಕೃತ ಆದಾಯ 10 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Reliance Industries
Koo

ನವದೆಹಲಿ: ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ನೇತೃತ್ವದ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) 2023-24ನೇ ಸಾಲಿನ ಹಣಕಾಸು ವರ್ಷದಲ್ಲಿ ಸರ್ಕಾರಕ್ಕೆ ಒಟ್ಟು 1,86,440 ಕೋಟಿ (1.86 ಲಕ್ಷ ಕೋಟಿ) ರೂಪಾಯಿಗಳನ್ನು ತೆರಿಗೆಯಾಗಿ ಠೇವಣಿ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು 9 ಸಾವಿರ ಕೋಟಿ ರೂಪಾಯಿ ಅಧಿಕವಾಗಿದೆ ಎಂಬುದು ಕಂಪನಿಯ ವಾರ್ಷಿಕ ವರದಿಯಲ್ಲಿ ತಿಳಿದುಬಂದಿದೆ. ಇದು ಒಂದು ರಾಜ್ಯದ ಇಡೀ ವರ್ಷದ ಬಜೆಟ್‌ ಮೊತ್ತದಷ್ಟು!

ದೇಶದ ಆರ್ಥಿಕತೆಗೆ ರಿಲಯನ್ಸ್ ಕೊಡುಗೆ ಮಹತ್ವದ್ದಾಗಿದೆ. 2023-24 ರ ಹಣಕಾಸು ವರ್ಷದಲ್ಲಿ 20 ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ದಾಟಿದ ಭಾರತದ ಮೊದಲ ಕಂಪನಿ ಎಂದೆನಿಸಿಕೊಂಡಿದೆ ರಿಲಯನ್ಸ್. ಈ ಅಂಕಿ- ಅಂಶವನ್ನು ಇಲ್ಲಿಯವರೆಗೆ ಯಾವುದೇ ಕಂಪನಿ ತಲುಪುವುದಕ್ಕೆ ಸಾಧ್ಯವಾಗಿಲ್ಲ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಇದು ಶೇ. 27ರಷ್ಟು ಜಿಗಿತ ಕಂಡಿದೆ. ಮಾರುಕಟ್ಟೆ ಬಂಡವಾಳ ಮೌಲ್ಯದ ವಿಚಾರಕ್ಕೆ ಬಂದಲ್ಲಿ ರಿಲಯನ್ಸ್ ವಿಶ್ವದ 48ನೇ ಕಂಪನಿಯಾಗಿದ್ದು, ಕಂಪನಿಯ ಏಕೀಕೃತ ಆದಾಯ 10 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟಿದೆ.

ಇದನ್ನೂ ಓದಿ: Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

ರಫ್ತಿನಲ್ಲೂ ರಿಲಯನ್ಸ್ ದೇಶದ ಸಾಮರ್ಥ್ಯಕ್ಕೆ ಬಲ ತುಂಬಿದೆ. ಕಳೆದ ಹಣಕಾಸು ವರ್ಷದಲ್ಲಿ ರಿಲಯನ್ಸ್ ಸುಮಾರು 3 ಲಕ್ಷ ಕೋಟಿ ರೂಪಾಯಿ ಮೌಲ್ಯದಷ್ಟು ರಫ್ತು ಮಾಡಿದೆ. ಅಷ್ಟೇ ಅಲ್ಲ, ಕಂಪನಿಯು ದೇಶದಲ್ಲಿ ಬಂಡವಾಳ ಆಸ್ತಿಗಳ ಸೃಷ್ಟಿಯಲ್ಲಿಯೂ ಖಾಸಗಿ ವಲಯದ ಅತಿದೊಡ್ಡ ಕೊಡುಗೆದಾರರಲ್ಲಿ ಒಂದಾಗಿದೆ. ವಾರ್ಷಿಕ ವರದಿಯ ಪ್ರಕಾರ, 2023-24ರ ಹಣಕಾಸು ವರ್ಷದಲ್ಲಿ ರಿಲಯನ್ಸ್ 1 ಲಕ್ಷ 35 ಸಾವಿರ ಕೋಟಿ ರೂಪಾಯಿ ಕೊಡುಗೆ ನೀಡಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರು ವಾರ್ಷಿಕ ವರದಿ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿ, ಕಳೆದ ದಶಕದಲ್ಲಿ ಜಾಗತಿಕ ಆರ್ಥಿಕ ಸನ್ನಿವೇಶದಲ್ಲಿ ಭಾರತದ ಪ್ರಾಮುಖ್ಯತೆ ಹಲವು ಪಟ್ಟು ಹೆಚ್ಚಾಗಿದೆ. ಅಸ್ಥಿರತೆ ಮತ್ತು ಅನಿಶ್ಚಿತತೆಯ ಈ ಜಗತ್ತಿನಲ್ಲಿ ಭಾರತವು ಸ್ಥಿರತೆ ಮತ್ತು ಸಮೃದ್ಧಿಯ ಸಂಕೇತವಾಗಿ ಕಾಣುತ್ತಿದೆ. 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದ ಫಲವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಬಲವಾದ ಬೆಳವಣಿಗೆ ಆಗಿದೆ. ಭಾರತ ಮತ್ತು ಭಾರತೀಯತೆಯ ಈ ಚೈತನ್ಯವೇ ರಿಲಯನ್ಸ್ ಅನ್ನು ನಿರಂತರವಾಗಿ ಹೊಸತನ್ನು ಕಂಡುಕೊಳ್ಳಲು ಮತ್ತು ಪ್ರತಿ ಪ್ರಯತ್ನದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಪ್ರೇರೇಪಿಸುತ್ತದೆ. ರಿಲಯನ್ಸ್ ಕುಟುಂಬವು ಭಾರತದ ಬೆಳವಣಿಗೆಯ ಯಶೋಗಾಥೆ ಭಾಗವಾಗುವುದು ಮತ್ತು ಅದರ ಅದ್ಭುತ ಬೆಳವಣಿಗೆಗೆ ಕೊಡುಗೆ ನೀಡುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಂಪನಿಯು ಸಾಮಾಜಿಕ ಜವಾಬ್ದಾರಿಗಾಗಿ (ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ) ಒಟ್ಟು 1,592 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದು ಹಿಂದಿನ ಹಣಕಾಸು ವರ್ಷಕ್ಕಿಂತ 300 ಕೋಟಿ ರೂಪಾಯಿ ಹೆಚ್ಚಾಗಿದೆ. ಲಾಭ ಗಳಿಸುವಲ್ಲಿಯೂ ಕಂಪನಿ ಮೊದಲ ಸ್ಥಾನದಲ್ಲಿದ್ದು, 2023-24ನೇ ಹಣಕಾಸು ವರ್ಷದಲ್ಲಿ ತೆರಿಗೆ ನಂತರದ ಲಾಭ 79 ಸಾವಿರ ಕೋಟಿ ರೂಪಾಯಿ ಗಳಿಸಿದೆ. ಇದು ಕಳೆದ ಹಣಕಾಸು ವರ್ಷದಲ್ಲಿ ಗಳಿಸಿದ್ದ 73 ಸಾವಿರದ 670 ಕೋಟಿ ರೂಪಾಯಿಗಿಂತ ಶೇ 7.3ರಷ್ಟು ಹೆಚ್ಚಾಗಿದೆ.

Continue Reading

ಕರ್ನಾಟಕ

Nijalingappa Memory: ಎಸ್. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಫೂರ್ತಿದಾಯಕ: ಸಿಎಂ ಸಿದ್ದರಾಮಯ್ಯ

Nijalingappa Memory: ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Nijalingappa Memory
Koo

ಬೆಂಗಳೂರು: ಕರ್ನಾಟಕದ ಅಭಿವೃದ್ಧಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್. ನಿಜಲಿಂಗಪ್ಪನವರ (Nijalingappa Memory) ತತ್ವಾದರ್ಶಗಳು ಸ್ಫೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಗುರುವಾರ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್. ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಫೂರ್ತಿದಾಯಕವಾಗಿವೆ ಎಂದರು.

ಬಿಜೆಪಿ, ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ

ಸಂಸತ್‌ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಿಜೆಪಿ ಹಾಗೂ ಎನ್‌ಡಿಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Bank Cheque: ಬ್ಯಾಂಕ್‌ಗೆ ಚೆಕ್‌ ಹಾಕಿದ ಕೆಲವೇ ಗಂಟೆಗಳಲ್ಲಿ ಇನ್ನು ಖಾತೆಗೆ ಜಮಾ; ಆರ್‌ಬಿಐ ಮಹತ್ವದ ಘೋಷಣೆ

ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್‌ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಬಿ.ಕೆ. ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Continue Reading
Advertisement
PR Sreejesh
ಪ್ರಮುಖ ಸುದ್ದಿ28 mins ago

PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

Bengaluru
ಬೆಂಗಳೂರು1 hour ago

Bengaluru: ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿದ ದುಷ್ಟ; ದುರುಳನಿಗೆ ಬಿತ್ತು ಧರ್ಮದೇಟು!

Aman Sehrawat
ಪ್ರಮುಖ ಸುದ್ದಿ1 hour ago

Aman Sehrawat : ಸೆಮಿ ಫೈನಲ್​ನಲ್ಲಿ ಸೋತ ಅಮನ್​; ನಾಳೆ ಕಂಚಿನ ಪದಕಕ್ಕಾಗಿ ಹೋರಾಟ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಕಂಚು ಗೆದ್ದ ಹಾಕಿ ತಂಡದ ಪಂಜಾಬ್​​ನ ಆಟಗಾರರಿಗೆ ತಲಾ 1 ಕೋಟಿ ರೂ. ಬಹುಮಾನ ಪ್ರಕಟ

Best Selling Cars
ಆಟೋಮೊಬೈಲ್2 hours ago

Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

Muhammad Yunus
ದೇಶ2 hours ago

Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

Bengaluru News
ಕರ್ನಾಟಕ2 hours ago

Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

chess player
ಕ್ರೀಡೆ2 hours ago

Chess Player : ಪ್ರತಿಸ್ಪರ್ಧಿಗೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ರಷ್ಯಾದ ಚೆಸ್ ಆಟಗಾರ್ತಿ; ಇಲ್ಲಿದೆ ವಿಡಿಯೊ

Toyota
ಕರ್ನಾಟಕ2 hours ago

Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

Channapatna News
ಕರ್ನಾಟಕ3 hours ago

Channapatna News: ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ8 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ9 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌