Vinesh Phogat: ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಹಗುರವಾಗಿ ಮಾತ್ನಾಡಿದ್ರಾ ಸುಧಾ ಮೂರ್ತಿ? - Vistara News

ದೇಶ

Vinesh Phogat: ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಹಗುರವಾಗಿ ಮಾತ್ನಾಡಿದ್ರಾ ಸುಧಾ ಮೂರ್ತಿ?

Paris Olympics 2024: ದೇಶದ ಗಮನ ಸೆಳೆದಿರುವ ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾ, ಇಂತಹದ್ದ ವಿಚಾರಗಳು ನಡೆಯುತ್ತಿರುತ್ತವೆ. ಏನು ಮಾಡೋಕೆ ಆಗುತ್ತದೆ? ಇದು ಆಟದ ಒಂದು ಭಾಗ. ಈ ಬಗ್ಗೆ ಬೇಸರವಿದೆ. ಅಷ್ಟು ಮಾತ್ರ ಹೇಳಲು ಸಾಧ್ಯ ಎಂದು ಹೇಳಿದ್ದಾರೆ. ಸುಧಾಮೂರ್ತಿಯವರ ಈ ಪ್ರತಿಕ್ರಿಯೆ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಸುಧಾ ಮೂರ್ತಿಯವರು ಇಷ್ಟು ದೊಡ್ಡ ವಿಚಾರದ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸಿದ್ದಾರೆ.

VISTARANEWS.COM


on

vinesh phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌(Paris Olympics 2024)ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅನರ್ಹಗೊಂಡಿರುವ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಬಗ್ಗೆ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ(Sudha Murthy) ನೀಡಿರುವ ಪ್ರತಿಕ್ರಿಯೆ ಇದೀಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.

ದೇಶದ ಗಮನ ಸೆಳೆದಿರುವ ವಿನೇಶ್‌ ಪೋಗಟ್‌ ಅನರ್ಹತೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧಾ, ಇಂತಹದ್ದ ವಿಚಾರಗಳು ನಡೆಯುತ್ತಿರುತ್ತವೆ. ಏನು ಮಾಡೋಕೆ ಆಗುತ್ತದೆ? ಇದು ಆಟದ ಒಂದು ಭಾಗ. ಈ ಬಗ್ಗೆ ಬೇಸರವಿದೆ. ಅಷ್ಟು ಮಾತ್ರ ಹೇಳಲು ಸಾಧ್ಯ ಎಂದು ಹೇಳಿದ್ದಾರೆ. ಸುಧಾಮೂರ್ತಿಯವರ ಈ ಪ್ರತಿಕ್ರಿಯೆ ಬಗ್ಗೆ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ. ಸುಧಾ ಮೂರ್ತಿಯವರು ಇಷ್ಟು ದೊಡ್ಡ ವಿಚಾರದ ಬಗ್ಗೆ ಹಗುರವಾಗಿ ಪ್ರತಿಕ್ರಿಯಿಸಿರುವುದು ಸರಿಯಲ್ಲ ಎಂದು ಕೆಲವರು ಟೀಕಿಸಿದ್ದಾರೆ.

ಸರಳತೆಯ ಪರಮಾವಧಿ ಇದು ಎಂದು ಒಬ್ಬ ನೆಟ್ಟಿಗ ಪ್ರತಿಕ್ರಿಯಿಸಿದ್ದು, ವಿನೇಶ್‌ ಅನರ್ಹತೆ ವಿಚಾರ ತಿಳಿದು ಕೋಟ್ಯಂತರ ಭಾರತೀಯರ ಹೃದಯ ಒಡೆದು ನುಚ್ಚುನೂರಾಗಿದೆ. ಇದೀಗ ಸುಧಾ ಮೂರ್ತಿಯವರು ಆ ಗಾಯ ಮೇಲೆ ಉಪ್ಪು ಸವರುತ್ತಿದ್ದಾರೆ ಎಂದು ಮತ್ತೊರ್ವ ಕಿಡಿಕಾರಿದ್ದಾನೆ. ಸುಧಾ ಮೂರ್ತಿಯವರ ಹೇಳಿಕೆ ಸರಿಯಾಗಿದೆ. ಬಹಳ ಪ್ರ್ಯಾಕ್ಟಿಕಲ್‌ ರೀತಿಯಲ್ಲಿ ಸತ್ಯ ಹೇಳುತ್ತಿದ್ದಾರೆ ಎಂದು ಇನ್ನೊರ್ವ ನೆಟ್ಟಿಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ಸ್‌ನಲ್ಲಿ 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯ ಮ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ:Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Waqf Act: ಪುರಸಭೆ ಕಚೇರಿಯನ್ನೇ ನುಂಗಿದ ವಕ್ಫ್‌ ಮಂಡಳಿ; ಆಸ್ತಿ ಕಬಳಿಕೆ ಬಣ್ಣ ಬಯಲು ಮಾಡಿದ ಕೇಂದ್ರ ಸಚಿವ!

Waqf Act: Parliament Session: ವಕ್ಫ್ ಕಾಯ್ದೆ 1995ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಹಾಗೂ ವಕ್ಫ್ ಕಾಯಿದೆ, 1995 ಅನ್ನು ʼಏಕೀಕೃತ ವಕ್ಫ್ ನಿರ್ವಹಣೆ, ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ ಕಾಯಿದೆ-1995ʼ ಎಂದು ಮರುನಾಮಕರಣ ಮಾಡುವ ಗುರಿಯೊಂದಿಗೆ ಇಂದು ಕೇಂದ್ರ ಸರ್ಕಾರ ಮಸೂದೆ ಮಂಡನೆ ಮಾಡಿದೆ. ಇನ್ನು ತಿದ್ದುಪಡಿ ಕುರಿತು ಪ್ರತಿಪಕ್ಷಗಳ ಆಕ್ಷೇಪಕ್ಕೆ ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್‌ ರಿಜಿಜು ಅವರು ನಿದರ್ಶನಗಳ ಸಮೇತ ತಿರುಗೇಟು ನೀಡಿದ್ದಾರೆ.

VISTARANEWS.COM


on

Waqf Act
Koo

ನವದೆಹಲಿ: ಪ್ರತಿಪಕ್ಷಗಳ ವಿರೋಧದ ನಡುವೆಯೇ ಬಹುಚರ್ಚಿತ ವಕ್ಫ್‌ ತಿದ್ದುಪಡಿ ವಿಧೇಯಕವನ್ನು (Waqf Amendment Bill) ಸಂಸತ್‌(Parliament Session)ನಲ್ಲಿ ಗುರುವಾರ ಮಂಡಿಸಲಾಗಿದೆ. ಇದೀಗ ಈ ಮದೂದೆಯ ಪರಿಶೀಲನೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕೇಂದ್ರ ಸರ್ಕಾರ ಕಳುಹಿಸಿದೆ. ಇಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ (Union Minister of Minority Affairs) ಕಿರಣ್‌ ರಿಜಿಜು (Kiren Rijiju) ಮಸೂದೆಯನ್ನು ಮಂಡಿಸಿದ್ದಾರೆ. ಅಷ್ಟೇ ಅಲ್ಲ, ವಕ್ಫ್‌ ಕಾಯ್ದೆಗೆ (Waqf Act) ತಿದ್ದುಪಡಿ ತರುವ ಕುರಿತು ಪ್ರತಿಪಕ್ಷಗಳ ಆರೋಪಗಳಿಗೆ ನಿದರ್ಶನಗಳ ಸಮೇತ ಮರುತ್ತರ ನೀಡಿದ್ದಾರೆ.

“ವಕ್ಫ್‌ ಕಾಯ್ದೆಗೆ ತಿದ್ದುಪಡಿ ಕುರಿತು ಹಲವು ತನಿಖಾ ವರದಿಗಳನ್ನು ಆಧರಿಸಿಯೇ ತೀರ್ಮಾನಿಸಲಾಗಿದೆ. ವಕ್ಫ್‌ ಮಂಡಳಿಯು ಪರಮಾಧಿಕಾರವನ್ನು ಬಳಸಿಕೊಂಡು ತಿರುಚಿರಪಳ್ಳಿ ಎಂಬ ಇಡೀ ಗ್ರಾಮವನ್ನು ವಕ್ಫ್‌ ಆಸ್ತಿ ಎಂದು ಘೋಷಿಸಲಾಗಿದೆ. ಇದರಲ್ಲಿ ಧರ್ಮ ನೋಡಬೇಡಿ, ಗ್ರಾಮದಲ್ಲಿ 1,500 ವರ್ಷಗಳ ಇತಿಹಾಸ ಇರುವ ಸುಂದರೇಶ್ವರ ದೇವಾಲಯ ಇದೆ. ಆದರೂ, ವಕ್ಫ್‌ ಆಸ್ತಿ ಎಂದು ಘೋಷಿಸಲಾಯಿತು. ಇದಷ್ಟೇ ಅಲ್ಲ, ಸೂರತ್‌ ಮುನ್ಸಿಪಲ್‌ ಕಾರ್ಪೊರೇಷನ್‌ನ ಕೇಂದ್ರ ಕಚೇರಿಯನ್ನೇ ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸಲಾಗಿದೆ ಎಂದರೆ ನೀವು ಕಲ್ಪನೆ ಮಾಡಿಕೊಳ್ಳಬೇಕು” ಎಂದು ಪ್ರತಿಪಕ್ಷಗಳ ಆರೋಪಗಳಿಗೆ ಕಿರಣ್‌ ರಿಜಿಜು ತಿರುಗೇಟು ನೀಡಿದ್ದಾರೆ.

“ನಾನು ಒಬ್ಬ ಬೌದ್ಧ ಧರ್ಮೀಯನಾಗಿದ್ದೇನೆ. ನಾನು ಹಿಂದು ಅಲ್ಲ, ಮುಸ್ಲಿಂ ಅಲ್ಲ. ಆದರೆ, ಎಲ್ಲ ಧರ್ಮಗಳನ್ನು ನಾನು ಗೌರವಿಸುತ್ತೇನೆ. ಇದರಲ್ಲಿ ಧಾರ್ಮಿಕ ವಿಷಯವನ್ನು ಹುಡುಕಬೇಡಿ. ಪುರಸಭೆ ಕಚೇರಿ ಹೇಗೆ ಖಾಸಗಿ ಆಸ್ತಿ ಆಗುತ್ತದೆ? ಪುರಸಭೆ ಕಚೇರಿಯನ್ನು ಹೇಗೆ ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸಲಾಗುತ್ತದೆ? ಇದೆಲ್ಲವನ್ನು ಗಮನಿಸಿಯೇ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ” ಎಂದು ತಿಳಿಸಿದರು.

ಏನೆಲ್ಲ ಬದಲಾವಣೆ?

ದೇಶದ ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿ ಆಸ್ತಿ ಎಂಬುದಾಗಿ ಘೋಷಿಸವ, ಅದನ್ನು ಯಾರೂ ಕೋರ್ಟ್‌ನಲ್ಲೂ ಪ್ರಶ್ನಿಸಲು ಸಾಧ್ಯವಾಗದಂತಹ ಪರಮಾಧಿಕಾರವನ್ನು ವಕ್ಫ್‌ ಕಾಯ್ದೆಯು ನೀಡಿದೆ. ಆದರೆ, ಈ ಪರಮಾಧಿಕಾರವನ್ನು ರದ್ದುಗೊಳಿಸುವುದು ಪ್ರಮುಖ ಬದಲಾವಣೆಯಾಗಿದೆ. ಇನ್ನು, ಆಯಾ ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಇಬ್ಬರು ಹೆಣ್ಣುಮಕ್ಕಳು ಕಡ್ಡಾಯವಾಗಿ ಇರುವುದು, ವಕ್ಫ್‌ ಮಂಡಳಿ ಆಸ್ತಿ ಕುರಿತು ಜಿಲ್ಲಾಧಿಕಾರಿ ತೀರ್ಮಾನ ತೆಗೆದುಕೊಳ್ಳುವುದು ಸೇರಿ ಹಲವು ಬದಲಾವಣೆ ಮಾಡಲಾಗುತ್ತದೆ.

ಅಷ್ಟೇ ಅಲ್ಲ, ಸಮಿತಿಯಲ್ಲಿ ಒಬ್ಬ ಕೇಂದ್ರ ಸಚಿವ, ಮೂವರು ಸಂಸದರು, ಮೂರು ಮುಸ್ಲಿಂ ಸಂಘಟನೆಗಳ ಮುಖಂಡರು ಹಾಗೂ ಮೂವರು ಮುಸ್ಲಿಂ ಕಾನೂನು ತಜ್ಞರು ಇರಲಿದ್ದಾರೆ. ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ನ ಇಬ್ಬರು ಜಡ್ಜ್‌ಗಳು ಸಮಿತಿಯ ಸದಸ್ಯರಾಗಿರುತ್ತಾರೆ. ಯಾವುದೇ ಆಸ್ತಿಯನ್ನು ವಕ್ಫ್‌ ಆಸ್ತಿ ಎಂಬುದಾಗಿ ಘೋಷಿಸುವ ಮೊದಲು ನೋಟಿಸ್‌ ನೀಡಬೇಕು. ಆ ಕುರಿತು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ವಕ್ಫ್‌ ಆಸ್ತಿಗಳ ಸರ್ವೇಯನ್ನು ಜಿಲ್ಲಾಧಿಕಾರಿ ಎದುರು ಮಾಡಬೇಕು. ಮಂಡಳಿಯ ನಿರ್ಧಾರ ಪ್ರಶ್ನಿಸಿ 90 ದಿನಗಳಲ್ಲಿ ಆಸ್ತಿಯ ಮಾಲೀಕರು ಅಥವಾ ಸಂಬಂಧಪಟ್ಟವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಅಧಿಕಾರ ನೀಡಲಾಗಿದೆ.

ಆಸ್ತಿಯ ಬದಲು ಹಣಕಾಸು ನೆರವು ಬಂದರೆ, ಆ ಹಣವನ್ನು ಕೇಂದ್ರ ಸರ್ಕಾರ ಸಲಹೆಯಂತೆ ವಿಧವೆಯರು, ವಿಚ್ಛೇದನ ಪಡೆದವರು ಹಾಗೂ ಅನಾಥರ ಕಲ್ಯಾಣಕ್ಕೆ ವಿನಿಯೋಗಿಸಬೇಕು. ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿರುವ ಬೋಹ್ರಾ ಹಾಗೂ ಆಗಾಖಾನಿ ಸಮುದಾಯದವರಿಗೆ ಪ್ರತ್ಯೇಕ ಮಂಡಳಿಸಲು ಪ್ರಸ್ತಾಪಿಸಲಾಗಿದೆ.

ಏನಿದು ವಕ್ಫ್‌ ಕಾಯ್ದೆ?

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ಇದನ್ನೂ ಓದಿ: Waqf Board: ಜಾಮಾ ಮಸೀದಿ ಸೇರಿ ವಕ್ಫ್‌ ಬೋರ್ಡ್‌ಗೆ ಕಾಂಗ್ರೆಸ್‌ ನೀಡಿದ 123 ಆಸ್ತಿ ಸ್ವಾಧೀನಕ್ಕೆ ಕೇಂದ್ರ ಸರ್ಕಾರ ನಿರ್ಧಾರ!

Continue Reading

ದೇಶ

Wayanad Landslide: ವಯನಾಡಿನಲ್ಲಿ ಸೈನಿಕರ ಕಾರ್ಯಾಚರಣೆ ಮುಕ್ತಾಯ; ಸೆಲ್ಯೂಟ್‌ ಹೊಡೆದು ಬೀಳ್ಕೊಟ್ಟ ಜನ, Video ಇದೆ

Wayanad Landslide: ಭಾರತೀಯ ಸೇನೆಯ ಸುಮಾರು 500 ಸದಸ್ಯರಿರುವ ಬೆಟಾಲಿಯನ್‌ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು. ತಿರುವನಂತಪುರಂ, ಕಲ್ಲಿಕೋಟೆ, ಕಣ್ಣೂರು ಹಾಗೂ ಬೆಂಗಳೂರಿನಿಂದ ಹೋಗಿದ್ದ ಯೋಧರು ವಾಪಸಾಗಿದ್ದಾರೆ. ಇವರಿಗೆ ವಯನಾಡು ಜಿಲ್ಲಾಡಳಿತದ ಜತೆಗೆ ಜನರು ಕೂಡ ಭಾವುಕರಾಗಿ ಬೀಳ್ಕೊಡುಗೆ ನೀಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Wayanad Landslide
Koo

ವಯನಾಡು: ಕೇರಳದ ವಯನಾಡಿನಲ್ಲಿ (Wayanad Landslide) ಕೆಲ ದಿನಗಳ ಹಿಂದೆ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 400 ದಾಟಿದೆ. ಇನ್ನು ಕಳೆದ 10 ದಿನಗಳಿಂದ ಅವಶೇಷಗಳ ಅಡಿಯಲ್ಲಿ, ಬೆಟ್ಟ ಗುಡ್ಡಗಳಲ್ಲಿ ಸಿಲುಕಿದ್ದ ಜನರ ರಕ್ಷಣೆಗಾಗಿ ನಿರಂತರವಾಗಿ ಕೈಗೊಂಡಿದ್ದ ಸೇನೆಯ ಕಾರ್ಯಾಚರಣೆಯು (Indian Army Rescue Operation) ಮುಕ್ತಾಯವಾಗಿದೆ. ಕಳೆದ 10 ದಿನಗಳಲ್ಲಿ ಸಾವಿರಾರು ಜನರನ್ನು ರಕ್ಷಣೆ ಮಾಡಿದ ಯೋಧರಿಗೆ (Army Soldiers) ಜನ ಚಪ್ಪಾಳೆ ತಟ್ಟಿ, ಸೆಲ್ಯೂಟ್‌ ಹೊಡೆದು, ಹೂಮಳೆ ಸುರಿಸಿ ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಕಳೆದ 10 ದಿನಗಳಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಭಾರತದ ಯೋಧರಿಗೆ ವಯನಾಡು ಜಿಲ್ಲಾಡಳಿತವು ಬೀಳ್ಕೊಡುಗೆ ಸಮಾರಂಭ ಆಯೋಜಿಸಿತ್ತು. ಇದೇ ವೇಳೆ ಸಾರ್ವಜನಿಕರು ಕೂಡ ಯೋಧರಿಗೆ ಗೌರವ ಸಲ್ಲಿಸಿದರು. ಯೋಧರ ಮೇಲೆ ಹೂಗಳನ್ನು ಸುರಿದು, ಚಪ್ಪಾಳೆ ತಟ್ಟಿ ಭಾವುಕರಾಗಿ ಯೋಧರನ್ನು ಬೀಳ್ಕೊಟ್ಟಿದ್ದಾರೆ. ಕೊಚ್ಚಿ ಡಿಫೆನ್ಸ್‌ ಪಬ್ಲಿಕ್‌ ರಿಲೇಷನ್ಸ್‌ ಆಫೀಸರ್‌ ಎಕ್ಸ್ ಖಾತೆಯಿಂದ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಭಾರತೀಯ ಸೇನೆಯ ಸುಮಾರು 500 ಸದಸ್ಯರಿರುವ ಬೆಟಾಲಿಯನ್‌ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತ್ತು. ತಿರುವನಂತಪುರಂ, ಕಲ್ಲಿಕೋಟೆ, ಕಣ್ಣೂರು ಹಾಗೂ ಬೆಂಗಳೂರಿನಿಂದ ಹೋಗಿದ್ದ ಯೋಧರು ವಾಪಸಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನೆಯ ಜತೆಗೆ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ದಳದ ಸಿಬ್ಬಂದಿ, ಕೇರಳ ಪೊಲೀಸರು ಕೂಡ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು.

6 ಜನರಿಗಾಗಿ 8 ಗಂಟೆ ಕಾರ್ಯಾಚರಣೆ ನಡೆಸಿದ್ದರು

ಮೆಪ್ಪಾಡಿಯ ಸೂಜಿಪ್ಪಾರ ಜಲಪಾತವಿರುವ ಎರಾಕುಂಡ್‌ ಅರಣ್ಯ ಪ್ರದೇಶದಲ್ಲಿದ್ದ ಕೃಷ್ಣನ್‌, ಅವರ ಪತ್ನಿ ಶಾಂತಾ ಮತ್ತು ನಾಲ್ಕು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ನಾಲ್ವರು ಅರಣ್ಯಾಧಿಗಳ ಗುಂಪು ಸತತ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿತ್ತು. 10 ಹಗ್ಗಗಳನ್ನು ಸೇರಿಸಿ ಕಟ್ಟಿ ಈ ಕಾರ್ಯಾಚರಣೆ ನಡೆಸಲಾಗಿತ್ತು.

ಕಲ್ಪೆಟ್ಟ ರೇಂಜ್‌ ಫಾರೆಸ್ಟ್‌ ಆಫೀಸರ್‌ ಕೆ.ಆಶೀಫ್‌, ಮುಂಡಕೈ ಸೆಕ್ಷನ್‌ ಫಾರೆಸ್ಟ್‌ ಆಫೀಸರ್‌ ಜಯಚಂದ್ರನ್‌, ಕಲ್ಪೆಟ್ಟ ರೇಂಜ್‌ ಬೀಟ್‌ ಫಾರೆಸ್ಟ್‌ ಆಫೀಸರ್‌ ಕೆ.ಅನಿಲ್‌ ಕುಮಾರ್‌ ಮತ್ತು ಕಲ್ಪೆಟ್ಟ ಆರ್‌.ಆರ್‌.ಡಿ. ಅನೂಪ್‌ ತೋಮಸ್‌ ಅವರನ್ನೊಳಗೊಂಡ ಗುಂಪು ಅತ್ಯಂತ ಸಾಹಸಿಕವಾಗಿ ಈ ಆದಿವಾಸಿ ಕುಟುಂಬವನ್ನು ಕಾಪಾಡಿತ್ತು. ಇದು ದೇಶಾದ್ಯಂತ ಸುದ್ದಿಯಾಗಿತ್ತು. ರಕ್ಷಣಾ ಕಾರ್ಯಾಚರಣೆ ತಂಡಗಳ ಶ್ರಮವನ್ನು ಜನ ಕೊಂಡಾಡಿದ್ದರು.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 402: ಸರ್ವಧರ್ಮ ಪ್ರಾರ್ಥನೆ ಮೂಲಕ ಸಾಮೂಹಿಕ ಶವ ಸಂಸ್ಕಾರ

Continue Reading

ದೇಶ

Jagdeep Dhankhar: ನೀವು ಎಲ್ಲೆ ಮೀರಿದ್ದೀರಿ; ರಾಜ್ಯಸಭೆಯಲ್ಲಿ ಗಲಾಟೆ ಬಳಿಕ ಜಗದೀಪ್‌ ಧನಕರ್‌ ಸಭಾತ್ಯಾಗ

Jagdeep Dhankhar: ಕುಸ್ತಿಪಟು ವಿನೇಶ್‌ ಫೋಗಟ್‌ ಅವರ ಅನರ್ಹತೆ ವಿವಾರವನ್ನು ಚರ್ಚಿಸಬೇಕು ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರು ಗದ್ದಲ ಎಬ್ಬಿಸಿದ್ದಾರೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್‌ ಅವರು ಇದಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಗಲಾಟೆ ಜೋರಾಗಿದೆ. ಇದಾದ ಬಳಿಕ ಧನಕರ್‌ ಅವರೇ ಸಭಾತ್ಯಾಗ ಮಾಡಿದ್ದಾರೆ. ʼʼವಿನೇಶ್ ಫೋಗಟ್ ಅವರ ಅನರ್ಹತೆಯಿಂದ ಇಡೀ ದೇಶಕ್ಕೆ ನೋವಾಗಿದೆ. ಆದರೆ ಪ್ರತಿಪಕ್ಷಗಳ ನಾಯಕರು ತಮಗೆ ಮಾತ್ರ ನೋವಾಗಿದೆ ಎನ್ನುವಂತೆ ವರ್ತಿಸುತ್ತಿದ್ದಾರೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವುದು ಫೋಗಟ್ ಅವರಿಗೆ ಮಾಡಿದ ದೊಡ್ಡ ಅಗೌರವ” ಎಂದು ಜಗದೀಪ್ ಧನಕರ್‌ ಹೇಳಿದ್ದಾರೆ.

VISTARANEWS.COM


on

Jagdeep Dhankhar
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) ವಿನೇಶ್‌ ಫೋಗಟ್‌ (Vinesh Phogat) ಅವರು ಅನರ್ಹಗೊಂಡು, ಚಿನ್ನದ ಪದಕದಿಂದ ವಂಚಿತರಾಗಿರುವುದಕ್ಕೆ ದೇಶಾದ್ಯಂತ ಅಸಮಾಧಾನ, ಬೇಸರ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಅವರ ಅನರ್ಹತೆ ವಿಚಾರಕ್ಕೆ ರಾಜಕೀಯದ ಲೇಪನ ಸಿಕ್ಕಿದೆ. ವಿನೇಶ್‌ ಫೋಗಟ್‌ ಅವರ ಅನರ್ಹತೆಗೆ ಮೋದಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್‌ ಹೇಳಿದೆ. ಇನ್ನು, ವಿನೇಶ್‌ ಫೋಗಟ್‌ ಅವರ ಅನರ್ಹತೆಯ ವಿಚಾರ ಚರ್ಚಿಸಲು ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಸದಸ್ಯರು ರಾಜ್ಯಸಭೆಯಲ್ಲಿ ಗಲಾಟೆ ನಡೆಸಿದ್ದಾರೆ. ಇದರಿಂದ ಬೇಸತ್ತ ಸಭಾಧ್ಯಕ್ಷ ಜಗದೀಪ್‌ ಧನಕರ್‌ (Jagdeep Dhankhar) ಅವರೇ ಸಭಾತ್ಯಾಗ ಮಾಡಿದ್ದಾರೆ.

ಪಟ್ಟಿ ಮಾಡಲಾದ ದಾಖಲೆಗಳನ್ನು ಸದನದಲ್ಲಿ ಮಂಡಿಸಿದ ಕೂಡಲೇ ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎದ್ದು ನಿಂತು ಅನರ್ಹತೆಯ ವಿಷಯವನ್ನು ಪ್ರಸ್ತಾವಿಸಿದರು. ಇದರ ಹಿಂದೆ ಯಾರು ಇದ್ದಾರೆ ಎಂದು ಪ್ರಶ್ನಿಸಿದರು. ಆದರೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಖರ್ಗೆ ಅವರಿಗೆ ಈ ವಿಷಯ ಎತ್ತಲು ಅವಕಾಶ ನೀಡಲಿಲ್ಲ. ಬಳಿಕ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಕೂಡ ಪ್ರಶ್ನೆಗಳನ್ನು ಕೇಳಲು ಮುಂದಾದರು. ಅವರಿಗೂ ಅವಕಾಶ ದೊರೆಯಲಿಲ್ಲ. ಇದಕ್ಕೆ ಡೆರೆಕ್ ಒ’ಬ್ರಿಯಾನ್ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಜೈರಾಮ್‌ ರಮೇಶ್‌ ಅವರು ವ್ಯಂಗ್ಯವಾಗಿ ನಗಲು ಶುರು ಮಾಡಿದರು. ಇದರಿಂದ ಕುಪಿತರಾದ ಜಗದೀಪ್‌ ಧನಕರ್‌ ಅವರು, “ನಿಮ್ಮ ಅಭ್ಯಾಸ ನನಗೆ ಗೊತ್ತು. ನನಗೆ ಬಿಡಿ, ಸಭಾಧ್ಯಕ್ಷರ ಸ್ಥಾನಕ್ಕಾದರೂ ಗೌರವ ಕೊಡಿ. ಇದು ನೀವು ದೇಶದ ಪ್ರಜಾಪ್ರಭುತ್ವಕ್ಕೆ, ಸ್ಪೀಕರ್‌ ಹುದ್ದಗೆ ಮಾಡುತ್ತಿರುವ ಅವಮಾನ. ನಿಮ್ಮ ವರ್ತನೆ ನೋಡಿದರೆ ನಾನು ಇಲ್ಲಿ ಕೂರಲು ಅರ್ಹನೇ ಅಲ್ಲ ಎಂದು ಎನಿಸುತ್ತಿದೆ. ಹಾಗಾಗಿ ನಾನಿನ್ನು ಇಲ್ಲಿ ಕೂರುವುದಿಲ್ಲ” ಎಂದು ಧನಕರ್‌ ಅವರು ಸಭಾತ್ಯಾಗ ಮಾಡಿದರು.

ಇದಕ್ಕೂ ಮೊದಲು, “ನೀವು ಸಭಾಧ್ಯಕ್ಷರ ಮೇಲೆ ಕೂಗುತ್ತಿದ್ದೀರಿ. ನಿಮ್ಮ ಈ ನಡವಳಿಕೆ ಸರಿಯಲ್ಲ. ನಿಮ್ಮ ಕ್ರಮವನ್ನು ನಾನು ಖಂಡಿಸುತ್ತೇನೆ. ಈ ವರ್ತನೆ ಪುನರಾವರ್ತಿಸಿದರೆ ಮುಂದಿನ ಬಾರಿ ಸದನದಿಂದ ಹೊರಗೆ ಕಳುಹಿಸಬೇಕಾಗುತ್ತದೆʼʼ ಎಂದು ಜಗದೀಪ್‌ ಧನಕರ್‌ ಅವರು ಎಚ್ಚರಿಕೆ ನೀಡಿದರು. ಇದರಿಂದ ಸದನದಲ್ಲಿ ಕೋಲಾಹಲ ಮೂಡಿ ಪ್ರತಿಪಕ್ಷಗಳ ಸದಸ್ಯರು ಕೂಡ ಸಭಾತ್ಯಾಗ ಮಾಡಿದರು. ವಿನೇಶ್‌ ಫೋಗಟ್‌ ಅನರ್ಹತೆ ಕುರಿತು ಈಗಾಗಲೇ ಕೇಂದ್ರ ಸಚಿವ ಮನ್ಸುಖ್‌ ಮಂಡಾವಿಯ ಅವರು ಸದನದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: Sonu Sood : ಸೋನು ಸೂದ್​, ಕಂಗನಾ ರಣಾವತ್​ ‘ಎಂಜಲು ರೊಟ್ಟಿಯ’ ಗಲಾಟೆ

Continue Reading

ದೇಶ

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Cattle Smuggling: ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗೋವುಗಳ ಅಕ್ರಮ ಸಾಗಣೆಯನ್ನು ಮಹಿಳಾ ಪೇದೆಯು ತಡೆದಿದ್ದಾರೆ. ಮಾಲ್ಡಾ ಜಿಲ್ಲೆಯ ಕೇದಾರಿಪರ ಬಳಿಯ ಗಡಿಯಲ್ಲಿ ಸುಮಾರು ಆರೇಳು ಅಕ್ರಮ ಸಾಗಣೆದಾರರನ್ನು ಬಿಎಸ್‌ಎಫ್‌ ಮಹಿಳಾ ಪೇದೆಯು ತಡೆದಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಮಹಿಳಾ ಪೇದೆಯು ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Cattle Smuggling
Koo

ಕೋಲ್ಕೊತಾ: ಭಾರತದ ಗಡಿಯಲ್ಲಿ ಪುರುಷರು ಮಾತ್ರವಲ್ಲ ಮಹಿಳಾ ಯೋಧರು ಕೂಡ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆ. ಉಗ್ರರು, ಅಕ್ರಮ ಒಳನುಸುಳುಕೋರರನ್ನು ನಿಗ್ರಹಿಸುವ ಜತೆಗೆ ಗಡಿಯಲ್ಲಿ ಅಕ್ರಮ ಚಟುವಟಿಕೆಗಳನ್ನೂ ದಕ್ಷತೆಯಿಂದ ತಡೆಯುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆಯೊಬ್ಬರು (BSF Woman Constable) ಚಾಣಾಕ್ಷತನದಿಂದ ಗೋವುಗಳ ಅಕ್ರಮ ಸಾಗಣೆಯನ್ನು (Cattle Smuggling) ತಡೆಯುವ ಮೂಲಕ ಶೌರ್ಯ ಮೆರೆದಿದ್ದಾರೆ.

ಹೌದು, ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗೋವುಗಳ ಅಕ್ರಮ ಸಾಗಣೆಯನ್ನು ಮಹಿಳಾ ಪೇದೆಯು ತಡೆದಿದ್ದಾರೆ. ಮಾಲ್ಡಾ ಜಿಲ್ಲೆಯ ಕೇದಾರಿಪರ ಬಳಿಯ ಗಡಿಯಲ್ಲಿ ಸುಮಾರು ಆರೇಳು ಅಕ್ರಮ ಸಾಗಣೆದಾರರನ್ನು ಬಿಎಸ್‌ಎಫ್‌ ಮಹಿಳಾ ಪೇದೆಯು ತಡೆದಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಮಹಿಳಾ ಪೇದೆಯು ಕಾರ್ಯಾಚರಣೆ ಕೈಗೊಳ್ಳುವ ಜತೆಗೆ ಅಪಾಯದ ಮುನ್ನೆಚ್ಚರಿಕೆ ಅರಿತು ಸಿಬ್ಬಂದಿಗೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಎಸ್‌ಎಫ್‌ ಮಹಿಳಾ ಪೇದೆಯು ಗೋವುಗಳ ಸಾಗಣೆದಾರರನ್ನು ತಡೆದ ಬಳಿಕ ದುಷ್ಕರ್ಮಿಗಳು ಮಹಿಳಾ ಪೇದೆ ಮೇಲೆ ದಾಳಿ ಆರಂಭಿಸಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಆಗಲೂ ಜಗ್ಗದ ಪೇದೆಯು ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಬೆಚ್ಚಿದ ದುಷ್ಕರ್ಮಿಗಲೂ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಗೋವುಗಳನ್ನು ಅಲ್ಲಿಯೇ ಬಿಟ್ಟು ಅವರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಾದ ಬಳಿಕ ಬಿಎಸ್‌ಎಫ್‌ ಯೋಧರ ತಂಡವು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ. ಕತ್ತಲಿದ್ದ ಕಾರಣ ಸ್ವಯಂ ರಕ್ಷಣೆಗಾಗಿ ಮಹಿಳಾ ಪೇದೆಯು ಗುಂಡಿನ ದಾಳಿ ನಡೆಸಿದ್ದಾರೆ. ಕತ್ತಲಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಳಿಕ ಬಿಎಸ್‌ಎಫ್‌ ಯೋಧರು ಆರು ಎಮ್ಮೆಗಳು ಹಾಗೂ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಬಿಎಸ್‌ಎಫ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BSF Chief: ಬಿಎಸ್‌ಎಫ್‌ ನೂತನ ಮುಖ್ಯಸ್ಥರಾಗಿ ದಲ್ಜಿತ್‌ ಸಿಂಗ್‌ ಚೌಧರಿ ನೇಮಕ

Continue Reading
Advertisement
Waqf Act
ದೇಶ25 mins ago

Waqf Act: ಪುರಸಭೆ ಕಚೇರಿಯನ್ನೇ ನುಂಗಿದ ವಕ್ಫ್‌ ಮಂಡಳಿ; ಆಸ್ತಿ ಕಬಳಿಕೆ ಬಣ್ಣ ಬಯಲು ಮಾಡಿದ ಕೇಂದ್ರ ಸಚಿವ!

ಪ್ರಮುಖ ಸುದ್ದಿ39 mins ago

Paris Olympics 2024 : ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ, ಸ್ಪೇನ್ ವಿರುದ್ಧ 2-1 ಗೋಲ್​ಗಳ ಗೆಲುವು

Viral Video
Latest1 hour ago

Viral Video: ಮೃಗಾಲಯಕ್ಕೆ ನುಗ್ಗಿ ಪ್ರಾಣಿಗಳನ್ನೂ ಹಿಂಸಿಸಿದ ಬಾಂಗ್ಲಾದ ದುಷ್ಟ ಪ್ರತಿಭಟನಾಕಾರರು!

CM Siddaramaiah
ಕರ್ನಾಟಕ1 hour ago

CM Siddaramaiah: ಮೋದಿ ಸರ್ಕಾರದ ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

KPSC Exam
ನೋಟಿಸ್ ಬೋರ್ಡ್1 hour ago

KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

Baby Death
Latest1 hour ago

Baby Death: ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ!

Wayanad Landslide
ದೇಶ1 hour ago

Wayanad Landslide: ವಯನಾಡಿನಲ್ಲಿ ಸೈನಿಕರ ಕಾರ್ಯಾಚರಣೆ ಮುಕ್ತಾಯ; ಸೆಲ್ಯೂಟ್‌ ಹೊಡೆದು ಬೀಳ್ಕೊಟ್ಟ ಜನ, Video ಇದೆ

Manu Bhaker
ಪ್ರಮುಖ ಸುದ್ದಿ2 hours ago

Paris Olympics 2024 : ಅಥ್ಲೀಟ್​ಗಳಿಗೆ ಒಲಿಂಪಿಕ್ಸ್​ ಮಸ್ಕಾಟ್​ ಚಿತ್ರ ಇರುವ ಕಾಂಡೋಮ್ ಹಂಚಿದ ಆಯೋಜಕರು!

Viral Video
Latest2 hours ago

Viral Video: ಒಂಟೆಯ ಮುಂದಿನ ಕಾಲು ಕಟ್ಟಿ ಚೂರಿಯಿಂದ ಇರಿದ; ಒಂಟೆ ಜಾಡಿಸಿ ಒದ್ದ ಹೊಡೆತಕ್ಕೆ ಸತ್ತೇ ಹೋದ!

Bengaluru Power Cut
ಕರ್ನಾಟಕ2 hours ago

Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌