ಬೆಳಗಾವಿಯಲ್ಲಿ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರ ಆಶ್ವಾಸನೆ - Vistara News

ಬೆಳಗಾವಿ

ಬೆಳಗಾವಿಯಲ್ಲಿ 700 ಎಕರೆ ಜಮೀನು ಹಸ್ತಾಂತರಕ್ಕೆ ಕೇಂದ್ರ ರಕ್ಷಣಾ ಸಚಿವರ ಆಶ್ವಾಸನೆ

ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗಿದೆ.

VISTARANEWS.COM


on

ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಭೇಟಿ ಮಾಡಿದರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬೆಳಗಾವಿಯಲ್ಲಿ 700 ಎಕರೆ ಹುಲ್ಲುಗಾವಲಿನ ಪ್ರದೇಶ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿದೆ. ಅದು ರಾಜ್ಯ ಸರ್ಕಾರದ ಜಮೀನು. ಈ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಮಾಹಿತಿ ನೀಡಿದರು.

ಇದನ್ನು ಓದಿ | ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಅನಂತಕುಮಾರ್‌ ಅವರ ಕೊಡುಗೆ ಅಪಾರ: CM ಬಸವರಾಜ ಬೊಮ್ಮಾಯಿ ಶ್ಲಾಘನೆ

ಬೆಳಗಾವಿಯಲ್ಲಿ ಐ.ಟಿ ಪಾರ್ಕ್ ಮಾಡುವ ಉದ್ದೇಶವಿದೆ. ಅದಕ್ಕೆ ಈ ಜಮೀನನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕಾಗುದೆ. ಅದಕ್ಕಾಗಿ ಈ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕ ವಾಗಿ ಸ್ಪಂದಿಸಿದ ಸಿಂಗ್ ಅವರು, ಸಂಬಂಧಪಟ್ಟವರ ಜತೆ ಮಾತನಾಡಿ ವರದಿ ತರಿಸಿಕೊಂಡು ತೀರ್ಮಾನ ಮಾಡುವುದಾಗಿ ತಿಳಿಸಿದ್ದಾರೆ ಎಂದು ಸಿಎಂ ಹೇಳಿದರು.

ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಬಗ್ಗೆ ಅವಧಿ ವಿಸ್ತರಣೆಗೆ ಕೋರಲಾಗಿದ್ದ ಹಿನ್ನೆಲೆಯಲ್ಲಿ ವಿಸ್ತರಣೆ ನೀಡಿದ್ದಾರೆ. ಶಾಲೆಯ ಉದ್ಘಾಟನೆಗೆ ಕೇಂದ್ರ ರಕ್ಷಣಾ ಸಚಿವರನ್ನು ಆಹ್ವಾನಿಸಲಾಯಿತು ಎಂದರು.

ಇದನ್ನು ಓದಿ | ಕೋಲಾರ, ಮಂಡ್ಯ ಭಾಗದಿಂದ ಬಿಜೆಪಿ ಹೆಚ್ಚು ಜನ ಬರುತ್ತಿದ್ದಾರೆ: ಅಚ್ಚರಿ ಮೂಡಿಸಿದ CM ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಳಗಾವಿ

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

Belagavi News: ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ.

VISTARANEWS.COM


on

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
Koo

ಬೆಳಗಾವಿ: ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿಯ ಕನ್ನಡ ಶಾಲೆಗಳಿಗೆ (Kannada Schools) ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯ ಹಾಳು ಮಾಡುತ್ತಿರುವ ಮಹಾರಾಷ್ಟ್ರ ಸರ್ಕಾರದ (Maharashtra Government) ಕನ್ನಡ ವಿರೋಧಿ ನೀತಿಯನ್ನು ಪ್ರತಿಭಟಿಸುವ ಕುರಿತು ಈಗ ಕನ್ನಡಿಗರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ (Belagavi News) ಬರೆದಿದ್ದಾರೆ.

ಈ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಇತರರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ಕುರಿತು ಗಮನ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ಸರ್ಕಾರವು ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಎಲ್ಲ ಮರಾಠಿ ಶಾಲೆಗಳಿಗೆ ಸರ್ವ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರ ಹಿತವನ್ನು ಗಮನದಲ್ಲಿಟ್ಟುಕೊಂಡು ಮರಾಠಿ ಭಾಷಿಕರ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನೇ ನೇಮಿಸುತ್ತ ಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುವ ಮೂಲಕ ಅಲ್ಲಿಯ ಕನ್ನಡಿಗರ ಹಿತಕ್ಕೆ ಧಕ್ಕೆ ತರುವಂಥ ಕನ್ನಡಿಗರ ಹಾಗೂ ಕನ್ನಡ ವಿರೋಧಿ ನಿಲುವನ್ನು ಮಹಾರಾಷ್ಟ್ರ ಸರ್ಕಾರ ತಳೆಯುತ್ತಿದೆ ಎಂದು ಹೇಳಿದ್ದಾರೆ.

ಸಾಂಗ್ಲಿ ಜಿಲ್ಲಾ ಪಂಚಾಯಿತಿಯು ಇತ್ತೀಚೆಗೆ ಕನ್ನಡ ಶಾಲೆಗಳಿಗಾಗಿ ನೇಮಕ ಮಾಡಿದ 24 ಶಿಕ್ಷಕರ ಪೈಕಿ ಕೇವಲ ನಾಲ್ವರು ಮಾತ್ರ ಕನ್ನಡಿಗರಾಗಿದ್ದಾರೆ. ಕನ್ನಡ ಡಿ.ಎಡ್. ಪದವಿ ಪಡೆದ ನೂರಾರು ಶಿಕ್ಷಕರು ಕನ್ನಡ ಪ್ರದೇಶಗಳಲಿದ್ದು ಅವರನ್ನು ಕನ್ನಡ ಶಾಲೆಗಳಿಗೆ ನೇಮಕ ಮಾಡದೇ ಮರಾಠಿ ಶಿಕ್ಷಕರನ್ನು ನೇಮಕ ಮಾಡುತ್ತಿರುವ ಅಲ್ಲಿಯ ಸರ್ಕಾರದ ಕ್ರಮವು ದುರದ್ದೇಶಪೂರಿತವಾಗಿದೆ. ಈ ಕ್ರಮದ ವಿರುದ್ಧ ಅಲ್ಲಿಯ ಕನ್ನಡಿಗರು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಅವರ ಬೆನ್ನಿಗೆ ಕರ್ನಾಟಕ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ತನ್ನ ಸೂಕ್ತ ಹಾಗೂ ಸಮಂಜಸವಾದ ಪ್ರತಿಭಟನೆಯನ್ನು ತಿಳಿಸಬೇಕು. ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಡಿಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರನ್ನೊಳಗೊಂಡ ನಿಯೋಗವನ್ನು ಮಹಾರಾಷ್ಟ್ರಕ್ಕೆ ಕಳುಹಿಸಿ ಸಮಗ್ರವಾದ ವರದಿಯೊಂದನ್ನು ತಾವು ತರಿಸಿಕೊಂಡು ಮಹಾರಾಷ್ಟ್ರ ಸರ್ಕಾರದ ಗಮನಕ್ಕೆ ತರುವ ಮೂಲಕ ಅಲ್ಲಿಯ ಕನ್ನಡಿಗರ ಹಿತರಕ್ಷಣೆಗೆ ಕ್ರಮ ಕೈಕೊಳ್ಳುವಂತೆ ಒತ್ತಾಯಿಸಬೇಕೆಂದು ಕೋರುತ್ತೇವೆ ಎಂದು ಬೆಳಗಾವಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಹಾಗೂ ಸದಸ್ಯರು ಪತ್ರ ಬರೆದು ಕರ್ನಾಟಕ ಸರ್ಕಾರಕ್ಕೆ ಮಹಾರಾಷ್ಟ್ರ ಧೋರಣೆಯನ್ನು ಮನವರಿಕೆ ಮಾಡಿದ್ದಾರೆ.

Continue Reading

ಮಳೆ

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು, ಚಿಕ್ಕಮಗಳೂರಲ್ಲಿ (Rain News) ಮಳೆಯಾಗಿದ್ದು, ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು:ಕಳೆದೊಂದು ವಾರದಿಂದ ಮಲೆನಾಡು ಭಾಗದಲ್ಲಿ ಬಿಡುವು ಕೊಟ್ಟಿದ್ದ ವರುಣ ಸೋಮವಾರ (Karnataka weather Forecast) ಅಬ್ಬರಿಸಿದ್ದ. ಕಾಫಿನಾಡು ಚಿಕ್ಕಮಗಳೂರಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಧಾರಾಕಾರ ಮಳೆ (Rain News) ಸುರಿದಿದೆ. ಗಾಳಿ ಸಹಿತ ಮಳೆಗೆ ಸವಾರರು ಹೆಡ್ ಲೈಟ್ ಹಾಕಿಕೊಂಡೇ ವಾಹನ ಚಾಲನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಬಣಕಲ್, ಚಾರ್ಮಾಡಿ ಘಾಟ್ ಸುತ್ತಮುತ್ತ ಭಾರೀ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ವಾಹನ ಸವಾರರು ಪರದಾಡಬೇಕಾಯಿತು. ಅದರಲ್ಲೂ ಚಾರ್ಮಾಡಿ ಘಾಟಿಯಲ್ಲಿ ವಾಹನಗಳು ಮಂದಗತಿಯಲ್ಲಿ ಸಾಗಿದ್ದವು. ಭಾರಿ ಮಳೆಗೆ ರಸ್ತೆ ಕಾಣದೆ ಹಲವರು ರಸ್ತೆ ಬದಿ ವಾಹನ ನಿಲ್ಲಿಸಿಕೊಂಡಿದ್ದರು.

ಬೆಂಗಳೂರಲ್ಲಿ ಸಣ್ಣ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ಕಳೆದ ನಾಲ್ಕೈದು ದಿನಗಳಿಂದ ಮಳೆಯು ಮಾಯವಾಗಿತ್ತು. ನಗರದ ಹಲವು ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಶುರುವಾಗಿತ್ತು. ಮುಖ್ಯವಾಗಿ ಕಾರ್ಪೋರೇಶನ್, ಕೆಆರ್‌ ಮಾರ್ಕೆಟ್, ಮೆಜೆಸ್ಟಿಕ್, ಶೇಷಾದ್ರಿಪುರಂ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗಿದೆ. ದಿಢೀರ್‌ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತೊಂದರೆಯುನ್ನುಂಟಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕುಮಟಾದಲ್ಲಿ ಅತಿ ಹೆಚ್ಚು ಮಳೆ ದಾಖಲು

ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿತ್ತು. ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, 9 ಸೆಂ.ಮೀ ದಾಖಲಾಗಿದೆ.

ಉಳಿದಂತೆ ಗೇರ್ಸೊಪ್ಪ, ಗೋಕರ್ಣ, ಅಂಕೋಲಾ, ಗದಗದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಕಿ, ಹಳಿಯಾಳ, ಶಿರಾಲಿ ಪಿಟಿಒ, ಸಂಕೇಶ್ವರ , ಕುಶಾಲನಗರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಇನ್ನೂ ಕಾರವಾರ, ಹೊನ್ನಾವರ, ನಿಪ್ಪಾಣಿಯಲ್ಲಿ 3 ಸೆಂ.ಮೀ ಹಾಗೂ ಯಲ್ಲಾಪುರ, ಮುಂಡಗೋಡು , ಚಿಕ್ಕೋಡಿ , ಹಿಡಕಲ್ ಅಣೆಕಟ್ಟು, ಬೆಳಗಾವಿ ವಿಮಾನ ನಿಲ್ದಾಣ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ಬೆಳ್ತಂಗಡಿ, ಸಿದ್ದಾಪುರ, ಜಗಲಬೆಟ್, ಕೋಟ, ಕಿರವ, ಕದ್ರಾ, ಲೋಂಡಾ, ಹಾವೇರಿ ಪಿಟಿಒ, ಔರಾದ್ , ಧಾರವಾಡ ಹಾಗೂ ಕುಂದಗೋಳ, ಚಿಂತಾಮಣಿ, ರಾಯಲ್ಪಾಡು, ಸೋಮವಾರಪೇಟೆ, ಕೊಡಗು, ಹಾರಂಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಜೂನ್‌ 18ರಂದು ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿಯು ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಜತೆಗೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Road Accident : ರಸ್ತೆ ದಾಟುವಾಗ ಹರಿದ ಕಾರು; ಒದ್ದಾಡಿ ಪ್ರಾಣಬಿಟ್ಟ ಬಾಲಕ

Road Accident : ರಸ್ತೆ ದಾಟುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಬಾಲಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ ಬಾಲಕನನ್ನು ಚಾಲಕನೇ ಆಸ್ಪತ್ರೆಗೆ ಕರೆದುಹೋಗಿದ್ದಾನೆ. ಆದರೆ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ನೇರವಾಗಿ ಠಾಣೆಗೆ ಹೋಗಿ ಶರಣಾಗಿದ್ದಾನೆ.

VISTARANEWS.COM


on

By

Road Accident
Koo

ಬೆಳಗಾವಿ: ಕಾರೊಂದು ಹರಿದ ಪರಿಣಾಮ (Road Accident) ಬಾಲಕನೊರ್ವ ದಾರುಣವಾಗಿ ಮೃತಪಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ವಿನಯ್ ಲಕ್ಷ್ಮಣ ಕೆಂಚನ್ನವರ್(8) ಮೃತ ದುರ್ದೈವಿ.

ಅಂದಹಾಗೇ ವಿನಯ್‌ ನಾಗನೂರು ಬಳಿ ರಸ್ತೆ ದಾಟುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡಿದ್ದ ವಿನಯ್‌ ತೀವ್ರ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ. ಇತ್ತ ಅಪಘಾತವಾಗುತ್ತಿದ್ದಂತೆ ಕಾರು ಚಾಲಕನೇ ಬಾಲಕನನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.

ಆದರೆ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿದ್ದಾಗಿ ಖಚಿತ ಪಡಿಸಿದ್ದಾರೆ. ಬಳಿಕ ಆಸ್ಪತ್ರೆಯಿಂದ ಚಾಲಕ ನೇರ ಠಾಣೆಗೆ ಹಾಜರಾಗಿದ್ದಾನೆ. ಸದ್ಯ ಬಾಲಕನ ಮೃತದೇಹವು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಜಯನಗರದಲ್ಲಿ ಲಾರಿ ಪಲ್ಟಿ

ಮೊಟ್ಟೆ ಹೊತ್ತು ಹೊರಟಿದ್ದ ಲಾರಿಯೊಂದು ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 50ರ ಶಿವಪುರ ಗ್ರಾಮದ ಬಳಿ ಘಟನೆ ನಡೆದಿದೆ. ವಿಜಯನಗರದ ಕೂಡ್ಲಿಗಿ ತಾಲೂಕಿನ ಹಾರುವನಹಳ್ಳಿ ಗ್ರಾಮದ ಬಳಿಯ ಕೋಳಿ ಫಾರಂನಿಂದ ಲೋಡ್ ಆಗಿ ಲಾರಿ ಹೊರಟಿತ್ತು. ನಿದ್ರೆ ಮಂಪರಿನಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ರಭಸಕ್ಕೆ ಮೊಟ್ಟೆಗಳು ಒಡೆದು ಹೋಗಿತ್ತು. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Bakrid 2024 : ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು. ಆಗಲೇ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗುತ್ತದೆ ಎಂದು ಬಕ್ರೀದ್‌ ( Eid al Adha ) ಪ್ರಾರ್ಥನೆಯಲ್ಲಿ ಪಾಲ್ಗೊಂಡು ಸಿದ್ದರಾಮಯ್ಯ ಮಾತನಾಡಿದರು.

VISTARANEWS.COM


on

By

Bakrid 2024
Koo

ಬೆಂಗಳೂರು: ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಕ್ರೀದ್ (Eid al Adha) ಅಂಗವಾಗಿ ಚಾಮರಾಜಪೇಟೆ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ (Bakrid 2024 ) ಪಾಲ್ಗೊಂಡು ಮಾತನಾಡಿದರು.

ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಒಬ್ಬರಿಗೊಬ್ಬರು ಶುಭಕೋರಿದರು. ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಉಪಸ್ಥಿತಿ ಇದ್ದರು. ಮುಸಲ್ಮಾನರ ಅಮಾಮ್ ಶಾಲು (ಟೋಪಿ) ಹಾಕಿ ಸಿದ್ದರಾಮಯ್ಯರಿಗೆ ಸನ್ಮಾನ ಮಾಡಿದರು.

bakrid 2024

ಬಳಿಕ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಇಡೀ ಭಾರತದಲ್ಲಿ ಬಕ್ರೀದ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿದ್ದೀರಿ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ಎಲ್ಲಾ ಭಾಷೆ, ಧರ್ಮಕ್ಕೆ ಸಮಾನತೆ ಕೊಡುವ ಬಹುತ್ವದ ದೇಶವಿದು. ನಾವೆಲ್ಲರೂ ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಸಿಕೊಳ್ಳಬೇಕು. ಆಗಲೇ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗುತ್ತದೆ. ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು, ಯಾವುದೇ ತಾರತಮ್ಯ ಮಾಡಲ್ಲ ಎಂದರು.

ಕೊಪ್ಪಳದಲ್ಲೂ ತ್ಯಾಗ ಬಲಿದಾನದ ಪ್ರತೀಕವಾಗಿರುವ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಈದ್ಗಾ ಮೈದಾನದಲ್ಲಿ ಸಾವಿರಾರು ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಸೇರಿ ಹಲವರು ಭಾಗಿಯಾಗಿದ್ದರು.

ಇದನ್ನೂ ಓದಿ: Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

ಬೆಳಗಾವಿ ಅಂಜುಮಾನ ಮೈದಾನ ಹಾಗೂ ಶಿವಮೊಗ್ಗ, ವಿಜಯನಗರ ಹೊಸಪೇಟೆಯ ಅಂಬೇಡ್ಕರ್ ಸರ್ಕಲ್ ಬಳಿ ಇರುವ ಈದ್ಗಾ ಮೈದಾನದಲ್ಲೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಹೂಡಾ ಅಧ್ಯಕ್ಷ ಇಮಾಮ್, ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಸೇರಿ ಹಲವರು ಭಾಗಿಯಾಗಿದ್ದರು.

ಬಳ್ಳಾರಿ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆದಿದೆ. ಇದೇ ವೇಳೆ ಧರ್ಮಗುರುಗಳಿಂದ ಪ್ರವಾದಿ ಮಹಮದ್ ಪೈಗಂಬರರ ಜೀವನದ ಮಹತ್ವ ಬೋಧನೆ ಮಾಡಲಾಯಿತು. ತ್ಯಾಗ ಹಾಗೂ ಬಲಿದಾನಗಳ ಬಗ್ಗೆ ಧರ್ಮ ಗುರು ವಿವರಿಸಿದರು. ಪ್ರಾರ್ಥನೆ ನಂತರ ಪರಸ್ಪರ ಶುಭಾಶಯ ಕೋರಿದರು.

ಬಾಗಲಕೋಟೆಯ ಮುಧೋಳ ನಗರದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಧೋಳ ಶಾಸಕ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಭಾಗಿಯಾದರು. ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರಿಗೆ ಶುಭಾಶಯ ತಿಳಿಸಿದರು. ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಈದ್ಗಾ ಮೈದಾನದಲ್ಲೂ ನಮಾಜ್‌ ಮಾಡಲಾಯಿತು.

ಮೈಸೂರು ಹಾಗೂ ಮಂಡ್ಯದಲ್ಲೂ ಬಕ್ರೀದ್ ಅಂಗವಾಗಿ ವಿವಿಧೆಡೆಗಳಲ್ಲಿರುವ ಮಸೀದಿಗಳಲ್ಲಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಧರ್ಮಗುರು ಉಸ್ಮಾನ್ ಷರೀಫ್ ಅವರು ಭಾಗಿಯಾಗಿದ್ದರು. ಮಂಡ್ಯದ ಈದ್ಗಾ ಮೈದಾನದಲ್ಲಿ ನಗರಸಭೆ ಸದಸ್ಯ ನಹೀಮ್ ಪ್ರಾರ್ಥನೆ ಸಲ್ಲಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Chikkanna
ಕರ್ನಾಟಕ9 mins ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ46 mins ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು48 mins ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ49 mins ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ53 mins ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ57 mins ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ1 hour ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ1 hour ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest2 hours ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ2 hours ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು9 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು10 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌