Shravan 2024: ಶ್ರಾವಣ ಶನಿವಾರದ ವಿಶೇಷ ಏನು? ಇದನ್ನು ಹೇಗೆ ಆಚರಿಸಿದರೆ ದೋಷ ನಿವಾರಣೆಯಾಗುತ್ತದೆ? - Vistara News

Latest

Shravan 2024: ಶ್ರಾವಣ ಶನಿವಾರದ ವಿಶೇಷ ಏನು? ಇದನ್ನು ಹೇಗೆ ಆಚರಿಸಿದರೆ ದೋಷ ನಿವಾರಣೆಯಾಗುತ್ತದೆ?

Shravan 2024: ಶ್ರಾವಣ ಮಾಸದಲ್ಲಿ ಬರುವ ಪ್ರತಿವಾರಗಳಿಗೆ ವಿಶೇಷ ಮಹತ್ವವಿದೆ. ಹಾಗಾಗಿ ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶನಿವಾರವನ್ನು ಶ್ರಾವಣ ಶನಿವಾರ ಅಥವಾ ಸಂಪತ್ ಶನಿವಾರ ಎಂದು ಕರೆಯುತ್ತಾರೆ. ಈ ದಿನ ಲಕ್ಷ್ಮಿ-ವೆಂಕಟೇಶ್ವರ, ಹನುಮಂತ ಹಾಗೂ ಶನಿದೇವನನ್ನು ಪೂಜಿಸಲಾಗುತ್ತದೆ.ಶ್ರಾವಣ ಶನಿವಾರದ ಪೂಜಾ ವಿಧಾನಗಳು ಏನು? ಹೇಗೆ ಇದನ್ನು ಮಾಡಬಹುದು ಎಂಬುದಕ್ಕೆ ಇಲ್ಲಿದೆ ಮಾಹಿತಿ.

VISTARANEWS.COM


on

Shravan 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
  • ಪವಿತ್ರಾ ಶೆಟ್ಟಿ

ಶ್ರಾವಣ ಮಾಸ ಆಗಸ್ಟ್ 5ರಿಂದ ಪ್ರಾರಂಭವಾಗಿದೆ. ಸೆಪ್ಟೆಂಬರ್ 3, 2024 ಮಂಗಳವಾರದ ಅಮಾವಾಸ್ಯೆಯ ತಿಥಿಯಂದು ಶ್ರಾವಣ ಮಾಸ ಕೊನೆಗೊಳ್ಳುತ್ತದೆ. ಈ ಮಾಸ ಹಿಂದೂಗಳಿಗೆ ಬಹಳ ಪವಿತ್ರವಾದ ಮಾಸ. ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತವೆ. ಹಾಗಾಗಿ ಈ ಮಾಸದಲ್ಲಿ ಶಿವನ ಆರಾಧನೆಯ ಜೊತೆಗೆ ವಿಷ್ಣು, ಲಕ್ಷ್ಮಿ, ಪಾರ್ವತಿ ಮುಂತಾದ ದೇವರುಗಳ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರೆ. ಶ್ರಾವಣ ಮಾಸದಲ್ಲಿ ಬರುವ ಪ್ರತಿವಾರಗಳಿಗೆ ವಿಶೇಷ ಮಹತ್ವವಿದೆ. ಹಾಗಾಗಿ ಶ್ರಾವಣ ಮಾಸ (Shravan 2024)ದಲ್ಲಿ ಬರುವ ಪ್ರತಿ ಶನಿವಾರವನ್ನು ಶ್ರಾವಣ ಶನಿವಾರ ಅಥವಾ ಸಂಪತ್ ಶನಿವಾರ ಎಂದು ಕರೆಯುತ್ತಾರೆ. ಈ ದಿನ ಲಕ್ಷ್ಮಿ ವೆಂಕಟೇಶ್ವರ, ಹನುಮಂತ ಹಾಗೂ ಶನಿದೇವನನ್ನು ಪೂಜಿಸಲಾಗುತ್ತದೆ. ಆ ವರ್ಷ ಶ್ರಾವಣ ಶನಿವಾರ ಆಗಸ್ಟ್ 10, 17, 24 ಹಾಗೂ 31ರಂದು ಬಂದಿದೆ. ಹಾಗಾಗಿ ಈ ಶ್ರಾವಣ ಶನಿವಾರದ ಪೂಜಾ ವಿಧಾನಗಳನ್ನು ತಿಳಿದುಕೊಳ್ಳಿ.

Shravan 2024
Shravan 2024

ಲಕ್ಷ್ಮಿ-ವೆಂಕಟೇಶ್ವರ ಪೂಜೆ:

ಶ್ರಾವಣ ಶನಿವಾರದಂದು ವಿಶೇಷವಾಗಿ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯನ್ನು ಪೂಜಿಸಲಾಗುತ್ತದೆ. ಈ ದಿನ ವೆಂಕಟೇಶ್ವರ ಸ್ವಾಮಿಯನ್ನು ಪೂಜಿಸುವುದರಿಂದ ವಿಶೇಷ ಫಲಗಳು ದೊರೆಯುತ್ತದೆ ಎಂಬ ನಂಬಿಕೆ ಇದೆ. ಶ್ರಾವಣ ಶನಿವಾರದ ದಿನ ಮನೆಯನ್ನು ಸ್ವಚ್ಛಗೊಳಿಸಿ ಮನೆಯ ತುಳಸಿಯ ಕಟ್ಟೆಯ ಮುಂದೆ ಶಂಖ, ಚಕ್ರದ ರಂಗೋಲಿಯನ್ನು ಹಾಕಿ. ಹಾಗೇ ಮನೆಯೊಳಗೆ ವೆಂಕಟೇಶ್ವರ ಸ್ಮಾವಿಯ ಪೋಟೊ ಇಟ್ಟು ಅದಕ್ಕೆ ತುಳಸಿ ಹಾರವನ್ನು ಹಾಕಿ ಹಾಗೂ ಹಳದಿ ಬಣ್ಣದ ಹೂ ಸ್ವಾಮಿಗೆ ಪ್ರಿಯವಾದ್ದರಿಂದ ಹಳದಿ ಬಣ್ಣದ ಹೂಗಳಿಂದ ಅಲಂಕಾರ ಮಾಡಿ. ಹಾಗೇ ಸ್ವಾಮಿಯ ಮುಂದೆ ಅಕ್ಕಿಹಿಟ್ಟಿನಿಂದ ತಯಾರಿಸಿದ ದೀಪವನ್ನು ಬೆಳಗಿಸಿ. ಈ ದೀಪವನ್ನು ಅಕ್ಕಿಹಿಟ್ಟು, ಬೆಲ್ಲ ಮತ್ತು ತುಪ್ಪವನ್ನು ಬೆರೆಸಿ ತಯಾರಿಸುತ್ತಾರೆ. ಹಾಗೇ ಪೂಜೆಯ ವೇಳೆ ವೆಂಕಟೇಶ್ವರ ಸ್ವಾಮಿ ನಾಮಗಳನ್ನು ಪಠಿಸುತ್ತಾ ದೀಪಾರಾಧನೆ ಮಾಡಿದರೆ ಒಳ್ಳೆಯದು. ದೇವರಿಗೆ ಸಿಹಿ ನೈವೇದ್ಯವನ್ನು ಅರ್ಪಿಸಿ.

ಅಲ್ಲದೇ ಶ್ರಾವಣ ಶನಿವಾರದಂದು ವೆಂಕಟೇಶ್ವರ ಸ್ವಾಮಿಯನ್ನು ಆರಾಧಿಸುವವರು ಪಡಿ ಕೇಳುವ ಶಾಸ್ತ್ರವನ್ನು ಮಾಡಬೇಕು. ಅಂದರೆ ಶುಭ್ರವಾದ ಬಟ್ಟೆ ತೊಟ್ಟು ಹಣೆಗೆ ಗೋವಿಂದನ ನಾಮವನ್ನು ಹಚ್ಚಿ ತಾಮ್ರದ ಚೊಂಬನ್ನು ಹಿಡಿದುಕೊಂಡು ಕನಿಷ್ಠ ಐದು ಮನೆಗೆ ಹೋಗಿ ಭಿಕ್ಷೆ ಅಥವಾ ಪಡಿ ಕೇಳಬೇಕು. ಅದರಿಂದ ಬಂದ ಧಾನ್ಯದಿಂದ ಸ್ವಾಮಿಗೆ ನೈವೇದ್ಯ ಅರ್ಪಿಸಬೇಕು.

Shravan 2024
Shravan 2024

ಶನಿದೇವನ ಪೂಜೆ :

ನಿಮ್ಮ ಜಾತಕದಲ್ಲಿ ಶನಿ ಸಾಡೇಸಾತಿ, ಅಷ್ಟಮ ಶನಿ, ಪಂಚಮ ಶನಿ ಮುಂತಾದ ಶನಿ ದೋಷವಿದ್ದರೆ ಶ್ರಾವಣ ಶನಿವಾರ ಪೂಜೆ ಮಾಡುವುದು ಅವಶ್ಯಕ. ಶ್ರಾವಣ ಶನಿವಾರದಂದು ಶನಿ ಪೂಜೆ ಮಾಡಿದರೆ ಶನಿ ದೋಷ ನಿವಾರಣೆಯಾಗುತ್ತದೆ. ಈ ದಿನ ಶನಿಯ ಜೊತೆಗೆ ಶಿವ ಪೂಜೆ ಮಾಡುತ್ತಾ ಮೃತ್ಯುಂಜಯ ಮಂತ್ರವನ್ನು ಪಠಿಸಬೇಕು. ಹಾಗೇ ಶನಿ ಬೀಜಮಂತ್ರವನ್ನು ಪಠಿಸಿ. ಹಾಗೇ ಈ ದಿನ ಶನಿದೇವಾಲಯಕ್ಕೆ ಹೋಗಿ ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿಸಿದರೆ ಒಳ್ಳೆಯದು.

Shravan 2024
Shravan 2024

ಹನುಮಂತನ ಪೂಜೆ:

ಶ್ರಾವಣ ಶನಿವಾರದಂದು ಹನುಮಂತ ಸ್ವಾಮಿಯನ್ನು ಪೂಜಿಸಲಾಗುತ್ತದೆ. ಇದರಿಂದ ನಿಮ್ಮ ಜೀವನದಲ್ಲಿ ಎದುರಾದ ಸಂಕಷ್ಟಗಳು ನಿವಾರಣೆಯಾಗುತ್ತವೆ. ಮತ್ತು ಶನಿದೋಷದಿಂದ ಮುಕ್ತಿ ಪಡೆಯಬಹುದು. ಹಾಗಾಗಿ ಹೆಚ್ಚಿನ ಜನರು ಶ್ರಾವಣ ಶನಿವಾರದಂದು ಉಪವಾಸ ವ್ರತಗಳನ್ನು ಆಚರಣೆ ಮಾಡುತ್ತಾರೆ. ಮತ್ತು ಈ ದಿನ ಹನುಮಂತನ ದೇವಸ್ಥಾನಕ್ಕೆ ತೆರಳಿ ಹನುಮಂತನ ಪೂಜೆ ಮಾಡುತ್ತಾರೆ.

ಶ್ರಾವಣ ಶನಿವಾರದಂದು ಈ ಕೆಲಸ ಮಾಡಿ:
ಶ್ರಾವಣ ಶನಿವಾರದಂದು ಶನಿ ದೇವರಿಗೆ ಸಂಬಂಧಿಸಿದ ಕಪ್ಪು ಬಟ್ಟೆ, ಕಪ್ಪು ಎಳ್ಳು, ಬೀಗಗಳು, ಛತ್ರಿಗಳು, ಬಟ್ಟೆಗಳು ಮುಂತಾದ ವಸ್ತುಗಳನ್ನು ನಿರ್ಗತಿಕರಿಗೆ ಮತ್ತು ಬಡವರಿಗೆ ದಾನ ಮಾಡಿ. ಈ ದಿನ ಶಿವ ದೇವಾಲಯದಲ್ಲಿ ಮರೆಯದೆ ಬಾರ್ಲಿಯನ್ನು ದಾನ ಮಾಡಿ. ಹಾಗೇ ಶ್ರಾವಣ ಶನಿವಾರದಂದು ಶಿವನಿಗೆ ಶನಿಗೆ ಪ್ರಿಯವಾದ ಶಮಿ ಹೂವುಗಳನ್ನು ಅರ್ಪಿಸಿ. ಇದರಿಂದ ಶನಿಗ್ರಹದ ಸಾಡೇಸಾತಿ, ಶನಿ ದೋಷ, ಶನಿ ಮಹಾದಶ, ಶನಿ ಧೈಯ್ಯಾ ಸೇರಿದಂತೆ ಇನ್ನಿತರ ಶನಿಗೆ ಸಂಬಂಧಿಸಿದ ದೋಷಗಳ ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಶ್ರಾವಣ ಶುಕ್ರವಾರದ ವಿಶೇಷವೇನು? ಅಂದು ಏನು ಮಾಡಬೇಕು? ಏನು ಮಾಡಬಾರದು?

ಒಟ್ಟಾರೆ ಶ್ರಾವಣ ಶನಿವಾರದಂದು ದೇವರ ಪೂಜೆಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಂಡು ಜೀವನದಲ್ಲಿ ಎದುರಾದ ಸಂಕಷ್ಟಗಳನ್ನು ನಿವಾರಿಸಿಕೊಳ್ಳಿ. ಪ್ರತಿ ಶ್ರಾವಣ ಶನಿವಾರದಂದು ನಿಯಮಗಳ ಪ್ರಕಾರ ಪೂಜೆ ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಸಿದ್ಧಿಸಿಕೊಳ್ಳಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Israel-Hamas War: ಹಮಾಸ್ ದಾಳಿಯಿಂದ ಮೃತಪಟ್ಟಿರುವ ಪುತ್ರರ ವೀರ್ಯವನ್ನು ಇಸ್ರೇಲ್ ಪೋಷಕರು ಸಂಗ್ರಹಿಸಿ ಇಡುತ್ತಿದ್ದಾರೆ. ಈಗಾಗಲೇ 170ಕ್ಕೂ ಹೆಚ್ಚು ಸೈನಿಕರ ಮತ್ತು ನಾಗರಿಕರ ದೇಹದಿಂದ ವೀರ್ಯವನ್ನು ಸಂಗ್ರಹಿಸಿ ಇಡಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಸಂಗ್ರಹಿಸಿದ ವೀರ್ಯಕ್ಕಿಂತ ಇದು 15 ಪಟ್ಟು ಹೆಚ್ಚಾಗಿದೆ ಎಂದು ಇಸ್ರೇಲ್ ಆರೋಗ್ಯ ಸಚಿವಾಲಯ ಹೇಳಿದೆ.

VISTARANEWS.COM


on

By

Israel-Hamas War
Koo

ಹಮಾಸ್ ದಾಳಿಯಿಂದ (Israel-Hamas War) ಮೃತಪಟ್ಟಿರುವ ಪುತ್ರರ ವೀರ್ಯವನ್ನು (sperm of the sons) ಇಸ್ರೇಲ್ ನ ಹೆಚ್ಚಿನ ದುಃಖಿತ ಪೋಷಕರು (parents demand) ಕೇಳುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಸೈನಿಕರ (soldier) ಪೋಷಕರಾಗಿದ್ದಾರೆ. ತಮ್ಮ ಪುತ್ರರ ಶವವನ್ನು ಫ್ರೀಜ್ ಮಾಡಲು ಅನೇಕರು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ 170ಕ್ಕೂ ಹೆಚ್ಚು ಸೈನಿಕರ ಮತ್ತು ನಾಗರಿಕರ ದೇಹದಿಂದ ವೀರ್ಯವನ್ನು ಸಂಗ್ರಹಿಸಿ ಇಡಲಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ಸಂಗ್ರಹಿಸಿದ ವೀರ್ಯಕ್ಕಿಂತ ಇದು 15 ಪಟ್ಟು ಹೆಚ್ಚಾಗಿದೆ ಎನ್ನಲಾಗಿದೆ. ತಮ್ಮ ಮಕ್ಕಳ ವೀರ್ಯದಿಂದ ಮುಂದೆ ಗರ್ಭಿಣಿಯಾಗ ಬಯಸುವ ಮಹಿಳೆಯರಿಂದ ಪೋಷಕರು ಮಕ್ಕಳನ್ನು ಪಡೆಯಲು ಅನೇಕರು ಇದರ ಮೊರೆ ಹೋಗಿದ್ದಾರೆ.

ಅಕ್ಟೋಬರ್ 7ರ ಹಮಾಸ್ ದಾಳಿಯ ಬಳಿಕ ಇಸ್ರೇಲ್‌ನಲ್ಲಿ ಕೆಲವು ನಿಯಮಗಳನ್ನು ಸಡಿಲಿಸಲಾಗಿದೆ. ಇದೀಗ ಸೇನಾ ಅಧಿಕಾರಿಗಳೇ ಮೃತಪಟ್ಟ ಸೈನಿಕರ ವೀರ್ಯವನ್ನು ಸಂಗ್ರಹಿಸಿ ಇಡಬೇಕೆ ಎಂದು ಪೋಷಕರನ್ನು ಸಂಪರ್ಕಿಸಿ ಕೇಳುತ್ತಿದ್ದಾರೆ.

2024ರ ಏಪ್ರಿಲ್ 6 ರಂದು ಗಾಜಾ ಪಟ್ಟಿಯಲ್ಲಿ 20 ವರ್ಷದ ರೀಫ್ ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾನೆ. ರೀಫ್ ನ ಮನೆಬಾಗಿಲಿಗೆ ಬಂದ ಸೇನಾಧಿಕಾರಿಗಳು ಪೋಷಕರ ಬಳಿ ರೀಫ್ ನ ವೀರ್ಯವನ್ನು ಹಿಂಪಡೆಯಲು ಇನ್ನೂ ಸಮಯವಿದೆ. ಕುಟುಂಬವು ಇದಕ್ಕೆ ಆಸಕ್ತಿ ಹೊಂದಿದೆಯೇ ಎಂದು ಕೇಳಿದ್ದಾರೆ. ಇದಕ್ಕೆ ರೀಫ್ ನ ತಂದೆ ತಕ್ಷಣವೇ ಪ್ರತಿಕ್ರಿಯಿಸಿ ರೀಫ್ ಜೀವನವನ್ನು ಪೂರ್ಣವಾಗಿ ಬದುಕಲಿ ಎಂದು ಹೇಳಿದರು. ರೀಫ್ ಮಕ್ಕಳನ್ನು ಪ್ರೀತಿಸುತ್ತಿದ್ದ, ಸ್ವಂತ ಮಕ್ಕಳನ್ನು ಬಯಸಿದ್ದ. ಆದರೆ ಆತನಿಗೆ ಹೆಂಡತಿ ಅಥವಾ ಗೆಳತಿ ಇಲ್ಲ ಎಂದು ಹೇಳಿಕೊಂಡಿದ್ದರು.

ಮಗನ ವೀರ್ಯ ರಕ್ಷಣೆಗೆ ಪೋಷಕರು ಮುಂದಾಗಿದ್ದರಿಂದ ಆತನ ಮಗುವಿಗೆ ಜನ್ಮ ನೀಡಲು ಹಲವಾರು ಮಹಿಳೆಯರು ಮುಂದೆ ಬಂದಿರುವುದಾಗಿ ರೀಫ್ ಪೋಷಕರು ಹೇಳಿದ್ದಾರೆ. ಇಸ್ರೇಲ್ ಮೇಲೆ ಅಕ್ಟೋಬರ್ 7ರಂದು ಹಮಾಸ್ ದಾಳಿಯ ಅನಂತರ ವೀರ್ಯವನ್ನು ಸಂರಕ್ಷಿಸಲು ಬಯಸುವ ಕುಟುಂಬಗಳ ಸಂಖ್ಯೆ ಬೆಳೆಯುತ್ತಿದೆ. ಈ ದಾಳಿಯಲ್ಲಿ ಸುಮಾರು 1,200 ಜನರು ಕೊಲ್ಲಲ್ಪಟ್ಟರು ಮತ್ತು 251ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳಾಗಿ ಮಾಡಲಾಗಿತ್ತು.

ಹಮಾಸ್ ವಿರುದ್ಧ ಇಸ್ರೇಲ್ ಗಾಜಾದಲ್ಲಿ ನಡೆಸಿದ ಪ್ರಮುಖ ಮಿಲಿಟರಿ ಕಾರ್ಯಾಚರಣೆಯಲ್ಲಿ 39,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ. ಸುಮಾರು 400 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ. ಇಸ್ರೇಲಿ ಆರೋಗ್ಯ ಸಚಿವಾಲಯದ ಪ್ರಕಾರ ಅಕ್ಟೋಬರ್ 7 ರಿಂದ ನಾಗರಿಕರು ಮತ್ತು ಸೈನಿಕರ ಸುಮಾರು 170 ಯುವಕರಿಂದ ವೀರ್ಯವನ್ನು ಪಡೆಯಲಾಗಿದೆ. ಇದು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಿಸುಮಾರು 15 ಪಟ್ಟು ಹೆಚ್ಚು.


ಈ ಪ್ರಕ್ರಿಯೆಯಲ್ಲಿ ಮೃತ ವ್ಯಕ್ತಿಯ ವೃಷಣದಲ್ಲಿ ಛೇದನವನ್ನು ಮಾಡಿ ಅಂಗಾಂಶದ ಒಂದು ಸಣ್ಣ ತುಂಡನ್ನು ತೆಗೆದು ಜೀವಂತ ವೀರ್ಯ ಕೋಶಗಳನ್ನು ಪ್ರಯೋಗಾಲಯದಲ್ಲಿ ಪ್ರತ್ಯೇಕಿಸಿ ಮತ್ತು ಫ್ರೀಜ್ ಮಾಡಲಾಗುತ್ತದೆ. ವ್ಯಕ್ತಿ ಮೃತಪಟ್ಟ 24 ಗಂಟೆಗಳ ಒಳಗೆ ಇದನ್ನು ಮಾಡಿದರೆ ಯಶಸ್ಸಿನ ಪ್ರಮಾಣ ಹೆಚ್ಚಾಗಿರುತ್ತದೆ. 72 ಗಂಟೆಗಳವರೆಗೆ ಇದನ್ನು ಮಾಡಲು ಅವಕಾಶವಿದೆ.

ಅಕ್ಟೋಬರ್‌ನಲ್ಲಿ ಇಸ್ರೇಲಿ ಆರೋಗ್ಯ ಸಚಿವಾಲಯವು ಪೋಷಕರಿಗೆ ಇದರ ಕಾರ್ಯವಿಧಾನವನ್ನು ಕೋರಲು ನ್ಯಾಯಾಲಯದ ಆದೇಶವನ್ನು ಪಡೆಯುವ ಅಗತ್ಯವನ್ನು ಮನ್ನಾ ಮಾಡಿದೆ. ಐಡಿಎಫ್ ಇತ್ತೀಚಿನ ವರ್ಷಗಳಲ್ಲಿ ದುಃಖಿತ ಪೋಷಕರಿಗೆ ಅದನ್ನು ನೀಡುವಲ್ಲಿ ಮುಂದಾಗಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾ ದಂಗೆ ಹಿಂದೆ ಇದ್ಯಾ ಪಾಕ್‌ ISI ಕೈವಾಡ? ಶೇಖ್‌ ಹಸೀನಾ ಪುತ್ರ ಹೇಳಿದಿಷ್ಟು!

ವೀರ್ಯವನ್ನು ಸಂಗ್ರಹಿಸಿಡುವುದು ಸುಲಭವಾಗಿದ್ದರೂ ಮಗುವನ್ನು ಪಡೆಯಲು ಅದನ್ನು ಬಳಸಲು ಬಯಸುವ ವಿಧವೆಯರು ಅಥವಾ ಪೋಷಕರು ನ್ಯಾಯಾಲಯದಲ್ಲಿ ಅದಕ್ಕೆ ದಾಖಲೆಗಳನ್ನು ಸಲ್ಲಿಸಿ ಕಾನೂನು ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಈ ಪ್ರಕ್ರಿಯೆಯು ಕೆಲವು ವರ್ಷಗಳನ್ನು ತೆಗೆದುಕೊಳ್ಳಬಹುದು. ಇದು ಸಮಯವಾಗಿರಲಿದೆ ಎನ್ನುತ್ತಾರೆ ದುಃಖಿತ ಪೋಷಕರು.

Continue Reading

ಬೆಂಗಳೂರು

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Bengaluru Power Cut: ಬೆಂಗಳೂರು ನಗರದ 66/11 ಕೆ.ವಿ ಅಬ್ಬಿಗೆರೆ ಎಂಯುಎಸ್‌ಎಸ್‌ 2 ನೇ ರನ್ 11ಕೆವಿ 1000 sqmm ಕೇಬಲ್ ಟಿಆರ್‌-1 ರಿಂದ ಬ್ಯಾಂಕ್-1 ಮತ್ತು ಟಿಆರ್‌-2 ರಿಂದ ಬ್ಯಾಂಕ್-2 ಗೆ ಐಸೊಲೇಟರ್ ಕೆಲಸ ಮತ್ತು ವಾರ್ಷಿಕ ನಿರ್ವಹಣೆಗಾಗಿ, 11ಕೆವಿ ಬ್ರೇಕರ್, ಬಸ್ ಜಿಒಎಸ್‌ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.11 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

VISTARANEWS.COM


on

Bengaluru power cut
Koo

ಬೆಂಗಳೂರು: ನಗರದ 66/11 ಕೆ.ವಿ ಅಬ್ಬಿಗೆರೆ ಎಂಯುಎಸ್‌ಎಸ್‌ 2 ನೇ ರನ್ 11ಕೆವಿ 1000 sqmm ಕೇಬಲ್ ಟಿಆರ್‌-1 ರಿಂದ ಬ್ಯಾಂಕ್-1 ಮತ್ತು ಟಿಆರ್‌-2 ರಿಂದ ಬ್ಯಾಂಕ್-2 ಗೆ ಐಸೊಲೇಟರ್ ಕೆಲಸ ಮತ್ತು ವಾರ್ಷಿಕ ನಿರ್ವಹಣೆಗಾಗಿ, 11ಕೆವಿ ಬ್ರೇಕರ್, ಬಸ್ ಜಿಒಎಸ್‌ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru Power Cut) ನಗರದ ಹಲವೆಡೆ ಆ.11 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Kannada New Movie: ಸಾಮಾಜಿಕ ಕಳಕಳಿಯ ‘ವಿಕಾಸ ಪರ್ವ’ಕ್ಕೆ ಸಾಥ್ ನೀಡಿದ ಪ್ರಣಯರಾಜ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ನಗರದ ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಲಕ್ಷ್ಮೀಪುರ ಗ್ರಾಮ, ಶ್ರೀರಾಮ್ ಸಮೀಕ್ಷಾ ಅಪಾರ್ಟ್‌ಮೆಂಟ್, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ಸಿಂಗಾಪುರ ಗಾರ್ಡನ್, ಅಬ್ಬಿಗೆರೆ ಗ್ರಾಮ, ನಿಸರ್ಗ ಲೇಔಟ್, ಲಕ್ಷ್ಮಿ ದೇವಸ್ಥಾನ ರಸ್ತೆ, ಕೆಂಪೇಗೌಡ ಉದ್ಯಾನ, ಕುವೆಂಪುನಗರ, ವಿಶ್ವೇಶ್ವರಯ್ಯ ಲೇಔಟ್‌, ವಡೇರಹಳ್ಳಿ, ಎಚ್.ವಿ.ವಿ. ಲೇಔಟ್‌, ಕಾನ್ಶಿರಾಮನಗರ, ನೇತಾಜಿ ಲೇಔಟ್, ಸೆವೆನ್ ಹಿಲ್ಸ್ ಕೌಂಟಿ, ಲಕ್ಷ್ಮೀಪುರ ಮುಖ್ಯ ರಸ್ತೆ, ಬ್ರಿಗೇಡ್ ಅಪಾರ್ಟ್‌ಮೆಂಟ್, ಐಸಿಟಿಎಸ್, ಕೆರೆಗುಡ್ಡದಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

ಬೆಂಗಳೂರು

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Kannada New Movie: “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ, ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದ “ಕೇದಾರ್ ನಾಥ್ ಕುರಿಫಾರಂ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕೇದಾರ್ ನಾಥ್ ಕುರಿಫಾರಂ” ಚಿತ್ರದ (Kannada New Movie) ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಣ್ಣೂರ್ ಜಗದೀಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ಶೀನು ಸಾಗರ್, ನಾನು “ದುನಿಯಾ” ಸೂರಿ ಅವರ ನಿರ್ದೇಶನದ ಚಿತ್ರಗಳಲ್ಲಿ ನಟನಾಗಿ ಹಾಗೂ ಸಹಾಯಕ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದೆ. ಛಾಯಾಗ್ರಾಹಕ ಸತ್ಯ ಹೆಗಡೆ ಅವರ ಬಳಿ ಛಾಯಾಗ್ರಹಣ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದೆ. ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾನು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಕಥೆ, ಸಂಭಾಷಣೆ ಹಾಗೂ ಸಹ ನಿರ್ದೇಶನ ರಾಜೇಶ್ ಸಾಲುಂಡಿ ಅವರದು. ಇದು ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ‌.

ಕಾಮಿಡಿ ಥ್ರಿಲ್ಲರ್ ಜಾನರ್‌ನ ಕಥಾ ಹಂದರ ಹೊಂದಿರುವ ಈ ಚಿತ್ರ ನೂರು ರೂಪಾಯಿ ಕೊಟ್ಟು ಟಿಕೆಟ್ ಪಡೆದ ಪ್ರೇಕ್ಷಕನಿಗೆ ಯಾವುದೇ ರೀತಿಯ ಬೇಸರ ಮಾಡದೆ ಮನೋರಂಜನೆಯ ಮಹಾಪೂರವನ್ನೇ ಹರಿಸುತ್ತದೆ. ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಮಡೆನೂರ್ ಮನು ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಿರ್ಮಾಪಕ ಕೆ.ಎಂ. ನಟರಾಜ್ ಈ ಚಿತ್ರವನ್ನು ಆಗಸ್ಟ್ 30 ರಂದು ತೆರೆಗೆ ತರುವ ಪ್ರಯತ್ನದಲ್ಲಿದ್ದಾರೆ ಎಂದು ನಿರ್ದೇಶಕ ಶೀನು ಸಾಗರ್ ತಿಳಿಸಿದರು.

“ಕಾಲೇಜ್ ಕುಮಾರ”, “ಜಾನ್ ಜಾನಿ ಜನಾರ್ದನ್” ಚಿತ್ರಗಳಿಗೆ ಸಹ ನಿರ್ಮಾಪಕನಾಗಿದ್ದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಾಯಕಿಯ ತಂದೆಯ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ನಟರಾಜ್.

“ಕಾಮಿಡಿ ಕಿಲಾಡಿಗಳು” ರಿಯಾಲಿಟಿ ಶೋ ನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಮನೋರಂಜನೆಗೆ ಬರವಿಲ್ಲ. ಮಂಜು ನನ್ನ ಪಾತ್ರದ ಹೆಸರು ಎಂದು ಮಡೆನೂರ್ ಮನು ತಿಳಿಸಿದರು.

ಇದನ್ನೂ ಓದಿ: Reliance Industries: ರಿಲಯನ್ಸ್ ಕಂಪನಿಯಿಂದ ಸರ್ಕಾರಕ್ಕೆ 1.86 ಲಕ್ಷ ಕೋಟಿ ರೂ. ತೆರಿಗೆ ಪಾವತಿ!

ಈ ಸಂದರ್ಭದಲ್ಲಿ ನಾಯಕಿ ಶಿವಾನಿ ಹಾಗೂ ನಟ ಮುತ್ತು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನೃತ್ಯ ನಿರ್ದೇಶಕ ನಾಗಭೂಷಣ್ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ವಾಣಿಜ್ಯ

Mukesh Ambani: ಮುಕೇಶ್ ಅಂಬಾನಿ ಮನೆಯ ವಿದ್ಯುತ್ ಬಿಲ್ ಎಷ್ಟಿರಬಹುದು ಊಹಿಸಿ!

ಮುಖೇಶ್ ಅಂಬಾನಿ ವಾಸಿಸುವ ಆಂಟಿಲಿಯಾ ಹೆಸರಿನ ನಿವಾಸದಲ್ಲಿನ ಎಲ್ಲ ಸೌಲಭ್ಯಗಳ ಒಟ್ಟು ಅಂದಾಜು ಮೌಲ್ಯ ಸುಮಾರು 15,000 ಕೋಟಿ ರೂಪಾಯಿ. ಆಂಟಿಲಿಯಾ ಕಲ್ಪಿಸಬಹುದಾದ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆಂಟಿಲಿಯಾದಲ್ಲಿನ ಸಿಬ್ಬಂದಿಗೆ ಉತ್ತಮ ಸಂಭಾವನೆ ನೀಡಲಾಗುತ್ತದೆ. ತಿಂಗಳಿಗೆ ಪ್ರತಿಯೊಬ್ಬರೂ ತಲಾ 1.5 ರಿಂದ 2 ಲಕ್ಷ ರೂ.ವರೆಗೆ ಸಂಬಳ ಪಡೆಯುತ್ತಾರೆ. ಮುಕೇಶ್ ಅಂಬಾನಿ (Mukesh Ambani) ಮನೆಯಲ್ಲಿ ಮುಂಬಯಿಯ ಸುಮಾರು 7,000 ಮಧ್ಯಮ ವರ್ಗದ ಮನೆಗಳು ಬಳಸಬಹುದಾದ ವಿದ್ಯುತ್ ಶಕ್ತಿಯನ್ನು ಬಳಸಲಾಗುತ್ತದೆ!

VISTARANEWS.COM


on

By

Mukesh Ambani
Koo

ಮುಂಬಯಿನ (mumbai) ಹೃದಯಭಾಗದಲ್ಲಿರುವ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಅವರ 27 ಅಂತಸ್ತಿನ ಅತಿ ಎತ್ತರದ ಆಂಟಿಲಿಯಾ ಕಟ್ಟಡವು (Antilia building) ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಪಾರ್ಕಿಂಗ್, ಈಜುಕೊಳ, ಸ್ಪಾ, ಆರೋಗ್ಯ ಕೇಂದ್ರ, ದೇವಸ್ಥಾನ, ಟೆರೇಸ್ ಗಾರ್ಡನ್, ಅನೇಕ ದೊಡ್ಡ ಎಲಿವೇಟರ್‌ಗಳು ಮತ್ತು ಥಿಯೇಟರ್‌ಗಳನ್ನು ಒಳಗೊಂಡಿದೆ. ಇಲ್ಲಿ ಎಲ್ಲ ಕೆಲಸಗಳು ಸರಾಗವಾಗಿ ನಡೆಯಲು 600 ಮಂದಿ ಸಿಬ್ಬಂದಿಯನ್ನು ನೇಮಿಸಿಕೊಂಡಿದೆ.

ಕಟ್ಟಡದ ಬೃಹತ್ ಗಾತ್ರಕ್ಕೆ ಹೆಚ್ಚಿನ ಒತ್ತಡದ ವಿದ್ಯುತ್ ಸಂಪರ್ಕದ ಅಗತ್ಯವಿದೆ. ಆಂಟಿಲಿಯಾ ಗಮನಾರ್ಹ ಪ್ರಮಾಣದ ವಿದ್ಯುತ್ ಅನ್ನು ಬಳಸುತ್ತದೆ. ಮುಂಬಯಿನ ಸುಮಾರು 7,000 ಮಧ್ಯಮ ವರ್ಗದ ಮನೆಗಳು ಬಳಸಬಹುದಾದ ವಿದ್ಯುತ್ ಶಕ್ತಿಯನ್ನು ಆಂಟಿಲಿಯಾ ಬಳಸುತ್ತಿದೆ.


ಎಂಟು ತೀವ್ರತೆಯ ಭೂಕಂಪಗಳನ್ನು ತಡೆದುಕೊಳ್ಳಲು ಆಂಟಿಲಿಯಾವನ್ನು ವಿನ್ಯಾಸಗೊಳಿಸಲಾಗಿದೆ. ಇದರ ನಿರ್ಮಾಣವು 2006ರಲ್ಲಿ ಪ್ರಾರಂಭವಾಯಿತು ಮತ್ತು 2010 ರಲ್ಲಿ ಪೂರ್ಣಗೊಂಡಿತು.

ಆಂಟಿಲಿಯಾದಲ್ಲಿರುವ ಎಲ್ಲ ಸೌಲಭ್ಯಗಳ ಒಟ್ಟು ಅಂದಾಜು ಮೌಲ್ಯ ಸುಮಾರು 15,000 ಕೋಟಿ ರೂಪಾಯಿ. ಆಂಟಿಲಿಯಾ ಕಲ್ಪಿಸಬಹುದಾದ ಎಲ್ಲಾ ಸೌಲಭ್ಯಗಳನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಆಂಟಿಲಿಯಾದಲ್ಲಿನ ಸಿಬ್ಬಂದಿಗೆ ಉತ್ತಮ ಸಂಭಾವನೆ ನೀಡಲಾಗುತ್ತದೆ. ತಿಂಗಳಿಗೆ ಪ್ರತಿಯೊಬ್ಬರೂ ತಲಾ 1.5 ರಿಂದ 2 ಲಕ್ಷ ರೂ.ವರೆಗೆ ಸಂಬಳ ಪಡೆಯುತ್ತಾರೆ.


ಇದನ್ನೂ ಓದಿ: Bank Cheque: ಬ್ಯಾಂಕ್‌ಗೆ ಚೆಕ್‌ ಹಾಕಿದ ಕೆಲವೇ ಗಂಟೆಗಳಲ್ಲಿ ಇನ್ನು ಖಾತೆಗೆ ಜಮಾ; ಆರ್‌ಬಿಐ ಮಹತ್ವದ ಘೋಷಣೆ

ಆಂಟಿಲಿಯಾ ಒಳಾಂಗಣ ವಿನ್ಯಾಸಗಳು ಕಮಲ ಮತ್ತು ಸೂರ್ಯನ ಗುಣಲಕ್ಷಣಗಳನ್ನು ಒಳಗೊಂಡಿವೆ. ಕಟ್ಟಡದ ಪ್ರತಿಯೊಂದು ಮಹಡಿಯು ವಿಶಿಷ್ಟ ವಿನ್ಯಾಸವನ್ನು ಹೊಂದಿದೆ ಮತ್ತು ವಿವಿಧ ವಸ್ತುಗಳನ್ನು ಬಳಸಲಾಗಿದೆ.

ವಿದ್ಯುತ್ ಬಿಲ್‌ಗೆ ಸಂಬಂಧಿಸಿದಂತೆ ಹೇಳುವುದಾದರೆ, ಆಂಟಿಲಿಯಾ ಕಟ್ಟಡ ಪ್ರತಿ ತಿಂಗಳು ಸುಮಾರು 6,37,240 ಯೂನಿಟ್ ವಿದ್ಯುತ್ ಅನ್ನು ಬಳಸುತ್ತದೆ. ಇದರರ್ಥ ಮಾಸಿಕ ವಿದ್ಯುತ್ ಬಿಲ್ ಸರಾಸರಿ 70 ಲಕ್ಷ ರೂಪಾಯಿಗಳು ಮತ್ತು ಇದು ಕೆಲವೊಮ್ಮೆ ಇನ್ನೂ ಹೆಚ್ಚಾಗಬಹುದು ಎನ್ನಲಾಗುತ್ತದೆ.

Continue Reading
Advertisement
Oats or Quinoa
ಆರೋಗ್ಯ36 mins ago

Oats or Quinoa: ಓಟ್ಸ್‌, ಕಿನೊವಾ- ಇವೆರೆಡರಲ್ಲಿ ಯಾವುದು ಬೆಸ್ಟ್?

Waqf Bill
ದೇಶ57 mins ago

Waqf Bill: ವಕ್ಫ್‌ ಕಾಯ್ದೆಗೆ ತಿದ್ದುಪಡಿ; 21 ಸದಸ್ಯರ ಸಮಿತಿ ರಚಿಸಿದ ಕೇಂದ್ರ, ಓವೈಸಿ, ತೇಜಸ್ವಿ ಸೂರ್ಯಗೆ ಸ್ಥಾನ

Neeraj Chopra
ಕ್ರೀಡೆ58 mins ago

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

LOve case
ಬಾಗಲಕೋಟೆ1 hour ago

Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

Muda Scam
ಪ್ರಮುಖ ಸುದ್ದಿ1 hour ago

Muda Scam: ಸಿಎಂ ವಿರುದ್ಧದ ಖಾಸಗಿ ದೂರಿನ ಅರ್ಜಿ ವಿಚಾರಣೆ; ಆ.13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Israel-Hamas War
ವಿದೇಶ1 hour ago

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Karnataka Nataka Akademi Award
ಉತ್ತರ ಕನ್ನಡ2 hours ago

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Duniya Vijay bheema movie review
ಸ್ಯಾಂಡಲ್ ವುಡ್2 hours ago

Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

Bengaluru power cut
ಬೆಂಗಳೂರು2 hours ago

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Kannada New Movie
ಬೆಂಗಳೂರು2 hours ago

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌