Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ - Vistara News

ಕ್ರೀಡೆ

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

Neeraj Chopra : “ಮೊದಲನೆಯದಾಗಿ, ಅರ್ಷದ್ ನದೀಮ್, ಫೈನಲ್​ಗೆ ಅರ್ಹತೆ ಪಡೆದಿರುವುದಕ್ಕೆ ಅಭಿನಂದನೆಗಳು” ಎಂದು ಪಾಕಿಸ್ತಾನದ ಟೆಸ್ಟ್ ನಾಯಕ ಶಾನ್ ಮಸೂದ್ ಹೇಳಿದ್ದಾರೆ. “ನಮ್ಮ ಶುಭ ಹಾರೈಕೆಗಳು ಮತ್ತು ಪ್ರಾರ್ಥನೆಗಳು ನಿಮ್ಮೊಂದಿಗಿವೆ. ನೀವು ಪಾಕಿಸ್ತಾನಕ್ಕಾಗಿ ಪದಕ ಗೆಲ್ಲುತ್ತೀರಿ ಎಂದು ನಾವು ಕುತೂಹಲದಿಂದ ಕಾಯುತ್ತಿದ್ದೇವೆ ಮತ್ತು ಆಶಿಸುತ್ತೇವೆ. ಪಾಕಿಸ್ತಾನಕ್ಕಾಗಿ ನೀವು ಏನು ಮಾಡಿದ್ದೀರಿ ಮತ್ತು ಸಾಧಿಸಿದ್ದೀರಿ ಎಂಬುದನ್ನು ಪದಗಳಲ್ಲಿ ವಿವರಿಸಲಾಗದು ನೀವು ರೋಲ್ ಮಾಡೆಲ್ ಮತ್ತು ಆಗಸ್ಟ್ 8 ರಂದು ನೀವು ವೇದಿಕೆಯಲ್ಲಿರುತ್ತೀರಿ ಎಂದು ನಾವು ಭಾವಿಸುತ್ತೇವೆ. ಆಲ್ ದಿ ಬೆಸ್ಟ್, ಸಹೋದರ, ಎಂದು ಅವರು ಹೇಳಿದ್ದಾರೆ.

VISTARANEWS.COM


on

Neeraj Chopra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ (Paris Olympics 2024) ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಅಂತಿಮ ಸ್ಪರ್ಧೆಯಲ್ಲಿ ಏಷ್ಯಾದ ಇಬ್ಬರು ಜಾವೆಲಿನ್ ಎಸೆತಗಾರರು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ನೀರಜ್ ಚೋಪ್ರಾ (Neeraj Chopra) ಈ ಸ್ಪರ್ಧೆಯಲ್ಲಿ ಹಾಲಿ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಆಗಿ ಟ್ರ್ಯಾಕ್ ಗೆ ಬರಲಿದ್ದಾರೆ. ಇದೇ ವೇಳೆ ಪಾಕಿಸ್ತಾನದ ಅರ್ಷದ್ ನದೀಮ್ ತಮ್ಮ ದೇಶಕ್ಕಾಗಿ 1992ರ ಬಳಿಕ ಒಲಿಂಪಿಕ್ ಮೊದಲ ಪದಕ ಗೆಲ್ಲುವ ಗುರಿ ಹೊಂದಿದ್ದಾರೆ. ಪಿಸಿಬಿ (ಪಾಕಿಸ್ತಾನ ಕ್ರಿಕೆಟ್ ಮಂಡಳಿ) ಪಾಕಿಸ್ತಾನ ತಂಡದ ಸ್ಟಾರ್ ಕ್ರಿಕೆಟಿಗರನ್ನು ಒಳಗೊಂಡ ವಿಶೇಷ ವೀಡಿಯೊವೊಂದನ್ನು ಬಿಡುಗಡೆ ಮಾಡಿದ್ದು, ಅರ್ಷದ್​​ಗೆ ಶುಭ ಹಾರೈಸಿದೆ. ಅದರಲ್ಲಿ ಅವರು ಈ ಬಾರಿ ನಾವೇ ಚಿನ್ನ ಗೆಲ್ಲೋದು ಎಂದು ಹೇಳಿದ್ದಾರೆ.

“ಮೊದಲನೆಯದಾಗಿ, ಅರ್ಷದ್ ನದೀಮ್, ಫೈನಲ್​ಗೆ ಅರ್ಹತೆ ಪಡೆದಿರುವುದಕ್ಕೆ ಅಭಿನಂದನೆಗಳು” ಎಂದು ಪಾಕಿಸ್ತಾನದ ಟೆಸ್ಟ್ ನಾಯಕ ಶಾನ್ ಮಸೂದ್ ಹೇಳಿದ್ದಾರೆ. “ನಮ್ಮ ಶುಭ ಹಾರೈಕೆಗಳು ಮತ್ತು ಪ್ರಾರ್ಥನೆಗಳು ನಿಮ್ಮೊಂದಿಗಿವೆ. ನೀವು ಪಾಕಿಸ್ತಾನಕ್ಕಾಗಿ ಪದಕ ಗೆಲ್ಲುತ್ತೀರಿ ಎಂದು ನಾವು ಕುತೂಹಲದಿಂದ ಕಾಯುತ್ತಿದ್ದೇವೆ ಮತ್ತು ಆಶಿಸುತ್ತೇವೆ. ಪಾಕಿಸ್ತಾನಕ್ಕಾಗಿ ನೀವು ಏನು ಮಾಡಿದ್ದೀರಿ ಮತ್ತು ಸಾಧಿಸಿದ್ದೀರಿ ಎಂಬುದನ್ನು ಪದಗಳಲ್ಲಿ ವಿವರಿಸಲಾಗದು ನೀವು ರೋಲ್ ಮಾಡೆಲ್ ಮತ್ತು ಆಗಸ್ಟ್ 8 ರಂದು ನೀವು ವೇದಿಕೆಯಲ್ಲಿರುತ್ತೀರಿ ಎಂದು ನಾವು ಭಾವಿಸುತ್ತೇವೆ. ಆಲ್ ದಿ ಬೆಸ್ಟ್, ಸಹೋದರ, ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Gautam Gambhir: 27 ವರ್ಷದ ಬಳಿಕ ಲಂಕಾ ವಿರುದ್ಧ ಸೋಲು; ಗಂಭೀರ್​ ಫುಲ್​ ಟ್ರೋಲ್​

ಬಾಬರ್ ಅಜಮ್, ನಸೀಮ್ ಶಾ, ಸರ್ಫರಾಜ್ ಅಹ್ಮದ್, ಶಾಹೀನ್ ಶಾ ಅಫ್ರಿದಿ ಮತ್ತು ಉಮರ್ ಗುಲ್ ಸೇರಿದಂತೆ ನದೀಮ್ ಉತ್ತಮ ಪ್ರದರ್ಶನ ನೀಡಿ ಪದಕ ತರಲಿ ಎಂದು ಇತರ ಹಾಲಿ ಮತ್ತು ಮಾಜಿ ಆಟಗಾರರು ಹಾರೈಸಿದ್ದಾರೆ.

ಅರ್ಷದ್ ನದೀಮ್ ವಿರುದ್ಧ ನೀರಜ್ ಚೋಪ್ರಾ


2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಪಾಕಿಸ್ತಾನದ ಏಕೈಕ ಭರವಸೆ ಅರ್ಷದ್ ನದೀಮ್. ಬುಡಾಪೆಸ್ಟ್​​ನಲ್ಲಿ ವಿಶ್ವ ಚಾಂಪಿಯನ್ಶಿಪ್​​ನಲ್ಲಿ ನೀರಜ್ ಚಿನ್ನದ ಪದಕ ಗೆದ್ದಾಗ ನದೀಮ್​ ಬೆಳ್ಳಿ ಗೆದ್ದಿದ್ದರು. ಅವರು ತಮ್ಮ ಮೊದಲ ಪ್ರಯತ್ನದಲ್ಲೇ 86.59 ಮೀಟರ್ ಎಸೆದು 84 ಮೀಟರ್ ನೇರ ಅರ್ಹತಾ ಅಂಕವನ್ನು ದಾಟಿದ್ದಾರೆ. ಟೋಕಿಯೊ ಒಲಿಂಪಿಕ್ಸ್ 2020 ಚಿನ್ನದ ಪದಕ ವಿಜೇತ ನೀರಜ್ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀಟರ್ ಎಸೆಯುವ ಮೂಲಕ 32 ಎಸೆತಗಾರರನ್ನು ಒಳಗೊಂಡ ಎರಡೂ ಗುಂಪುಗಳಲ್ಲಿ ಅಗ್ರಸ್ಥಾನ ಪಡೆದಿದ್ದಾರೆ.

ಪುರುಷರ ಜಾವೆಲಿನ್ ಥ್ರೋ ಫೈನಲ್ ಆಗಸ್ಟ್ 8 ರಂದು ಪ್ಯಾರಿಸ್​​ನ ಸ್ಟೇಡ್ ಡಿ ಫ್ರಾನ್ಸ್ನಲ್ಲಿ ನಡೆಯಲಿದೆ. ಟೋಕಿಯೊ 2020 ರಲ್ಲಿ ನೀರಜ್ 87.58 ಮೀಟರ್ ಎಸೆಯುವ ಮೂಲಕ ಒಲಿಂಪಿಕ್ ಚಾಂಪಿಯನ್ ಆಗಿ ಕಿರೀಟ ಧರಿಸಿದರು. 27ರ ಹರೆಯದ ಅರ್ಷದ್ ನದೀಮ್ 84.62 ಮೀಟರ್ ಎಸೆದು ಐದನೇ ಸ್ಥಾನ ಪಡೆದಿದ್ದರು. ಒಲಿಂಪಿಕ್ಸ್ ಇತಿಹಾಸದಲ್ಲಿ ಯಾವುದೇ ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಯ ಫೈನಲ್​​​ಗೆ ಅರ್ಹತೆ ಪಡೆದ ಮೊದಲ ಪಾಕಿಸ್ತಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

Bengaluru News: ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರಿನ ಬಾಲ್ಡ್‌ವಿನ್‌ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ ಲಭಿಸಿದೆ.

VISTARANEWS.COM


on

Bengaluru News
Koo

ಬೆಂಗಳೂರು: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ ಲಭಿಸಿದೆ. ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾರತ, ನೇಪಾಳ, ಭೂತಾನ್, ದುಬೈ, ಶ್ರೀಲಂಕಾ ಮತ್ತು ಬಾಂಗ್ಲಾ ಸೇರಿದಂತೆ 6 ದೇಶದ ಸ್ಪರ್ಧಿಗಳು (Bengaluru News) ಭಾಗವಹಿಸಿದ್ದರು.

ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್‌ (ಎಕೆಎಸ್‌ಕೆಎ) ನ ಕರ್ನಾಟಕ ರಾಜ್ಯ ಕ್ರೀಡಾ ಆಯೋಗದ ಉಪಾಧ್ಯಕ್ಷ ಹಾಗೂ ರಾಷ್ಟ್ರೀಯ ತೀರ್ಪುಗಾರ ರೆನ್ಶಿ ಜೈನ್ ನೇತೃತ್ವದ ಸುಡೋಕನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಪ್ರತಿನಿಧಿಸಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಹಸನೈನ್ ಅದ್ವಿತೀಯ ಪ್ರದರ್ಶನ ನೀಡಿದರು.

ಇದನ್ನೂ ಓದಿ: Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಸನೈನ್‌ ಬೆಂಗಳೂರಿನ ಬಾಲ್ಡ್‌ವಿನ್‌ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು, ಏಳು ವರ್ಷದ ಕಟಾ ವಿಭಾಗದಲ್ಲಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಈತನ ಕರಾಟೆಯಲ್ಲಿನ ಸಾಧನೆ ಮತ್ತು ಅತ್ಯುತ್ತಮ ರ‍್ಯಾಂಕಿಂಗ್‌ಗಾಗಿ ರೂ. 25,000 ಚೆಕ್‌ ನೀಡಿ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಎರಡು ಬಾರಿ ರಾಜ್ಯ ಚಾಂಪಿಯನ್ ಹಾಗೂ ದಕ್ಷಿಣ ಭಾರತ ಚಾಂಪಿಯನ್ ಪಡೆದಿರುವ ಕರ್ನಾಟಕದ ಅತಿ ಕಿರಿಯ ಎಂಬ ದಾಖಲೆ ಹೊಂದಿರುವ ಹಸನೈನ್‌ಗೆ ಈ ಪುರಸ್ಕಾರ ಲಭಿಸಿದೆ.

ರೆನ್ಶಿ ಝೈನ್ ಅವರ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ತಂಡವು ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡರು. ಕಟಾ ವಿಭಾಗದಲ್ಲಿ 13 ಚಿನ್ನ, 5 ಬೆಳ್ಳಿ ಮತ್ತು 7 ಕಂಚಿನ ಪದಕಗಳು ಮತ್ತು ಕುಮಿಟೆ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

ಎಕೆಎಸ್‌ಕೆಎ ಅಧ್ಯಕ್ಷ ಅರುಣ್ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ, ಪಂದ್ಯಾವಳಿಯ ಆಯೋಜಕ ಡಾ. ಶಿಹಾನ್ ಎ ಝಡ್ ಮುಹೀಬ್ ಮತ್ತು ಅಧ್ಯಕ್ಷ ಮತ್ತು ಗ್ರ್ಯಾಂಡ್ ಮಾಸ್ಟರ್ ಡಾ. ಹಂಶಿ ಪ್ರವೀಣ್ ರಂಕಾ ಅವರ ಬೆಂಬಲದೊಂದಿಗೆ ಪಂದ್ಯಾವಳಿಗಳು ಜರುಗಿದವು. ಬಾಲ್ಡ್‌ವಿನ್ ಬಾಯ್ಸ್ ಹೈಸ್ಕೂಲ್ ಪ್ರಿನ್ಸಿಪಾಲ್ ಡಾ. ಲೀನಾ ಡೇನಿಯಲ್ ಅವರು ಯುವ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿದ್ದಾರೆ.

Continue Reading

ಕ್ರೀಡೆ

Chess Player : ಪ್ರತಿಸ್ಪರ್ಧಿಗೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ರಷ್ಯಾದ ಚೆಸ್ ಆಟಗಾರ್ತಿ; ಇಲ್ಲಿದೆ ವಿಡಿಯೊ

chess player : ಘಟನೆಯು ಚೆಸ್ ಸಮುದಾಯವನ್ನು ಬೆಚ್ಚಿಬೀಳಿಸಿದೆ. ರಷ್ಯಾದ ಚೆಸ್ ಫೆಡರೇಶನ್ ಅಧ್ಯಕ್ಷ ಆಂಡ್ರೆ ಫಿಲಾಟೊವ್, ತನಿಖೆ ಬಾಕಿ ಇರುವವರೆಗೆ ಅಬಕರೋವಾ ಅವರನ್ನು ರಷ್ಯಾದ ಚೆಸ್ ಸ್ಪರ್ಧೆಗಳಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಅವರು ಆಜೀವ ನಿಷೇಧಕ್ಕೆ ಒಳಗಾಗಬಹುದು.

VISTARANEWS.COM


on

chess player
Koo

ಬೆಂಗಳೂರು: ಆಟಗಳಲ್ಲಿ ಎದುರಾಳಿಗಳನ್ನು ಸೋಲಿಸಿ ಸಂಭ್ರಮಿಸಬೇಕು. ಅವರನ್ನು ದೈಹಿಕವಾಗಿ ಹಾನಿ ಮಾಡುವ ಮೂಲಕ ಅಲ್ಲ. ಆದರೆ ಕೆಲವೊಬ್ಬರು ಸಾಮರ್ಥ್ಯ ಇದ್ದ ಹೊರತಾಗಿಯೂ ಎದುರಾಳಿಗೆ ಹಾನಿ ಮಾಡಿ ಗೆಲ್ಲುವುದಕ್ಕೆ ಯತ್ನಿಸುತ್ತಾರೆ. ಅಂಥದ್ದೇ ಒಂದು ಘಟನೆ ರಷ್ಯಾದಲ್ಲಿ ನಡೆದಿದೆ. ರಷ್ಯಾದ ದಗೆಸ್ತಾನ್ ಗಣರಾಜ್ಯದ 40 ವರ್ಷದ ಚೆಸ್ ಆಟಗಾರ್ತಿ ಅಮೀನಾ ಅಬಕರೋವಾ ಪ್ರತಿಸ್ಪರ್ಧಿಗೆ ವಿಷ ಹಾಕಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ. ಅಬಕರೋವಾಗೆ ರಷ್ಯಾದ ಚೆಸ್ ಫೆಡರೇಶನ್ ಅಮಾನತು ಶಿಕ್ಷೆ ವಿಧಿಸಿದೆ. ಆಗಸ್ಟ್ 2ರಂದು ದಗೆಸ್ತಾನ್ ಚೆಸ್ ಚಾಂಪಿಯನ್ಶಿಪ್ ಸಮಯದಲ್ಲಿ ತನ್ನ ಪ್ರತಿಸ್ಪರ್ಧಿ ಉಮೈಗನಾಟ್ ಉಸ್ಮಾನೋವಾಗೆ ಪಾದರಸದ ವಿಷ ಹಾಕಿದ್ದರು. ಆರೋಪಿಗೆ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಎದುರಿಸುತ್ತಿದ್ದಾರೆ.

ಪಂದ್ಯಕ್ಕೆ 20 ನಿಮಿಷಗಳ ಮೊದಲು ಆಟದ ಹಾಲ್​ಗೆ ಹೋಗಿದ್ದ ಅಬಕರೋವಾ. ಉಸ್ಮಾನೋವಾ ಅವರ ಬೋರ್ಡ್ ಬಳಿಗೆ ನಡೆದು, ಥರ್ಮಾಮೀಟರ್​ನಿಂದ ಮಾರಕ ಪಾದರಸವನ್ನು ಬೋರ್ಡ್ ಮತ್ತು ಉಸ್ಮಾನೋವಾ ಅವರ ಕೆಲವು ಕಾಯಿನ್​ಗಳೀಗೆ ಲೇಪಿಸುತ್ತಿರುವುದನ್ನು ಭದ್ರತಾ ಕ್ಯಾಮೆರಾಗಳಲ್ಲಿ ದಾಖಲಾಗಿದ್ದವು. ಆಟ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಉಸ್ಮಾನೋವಾ ಅನಾರೋಗ್ಯಕ್ಕೆ ಒಳಗಾಗಿದ್ದರು. ವಾಕರಿಕೆ ಮತ್ತು ತಲೆತಿರುಗುವಿಕೆಯ ಬಗ್ಗೆ ದೂರು ನೀಡಿದ್ದರು. ತಕ್ಷಣ ವೈದ್ಯಕೀಯ ತಂಡ ನೆರವಿಗೆ ಬಂದಿದ್ದು ವಿಷಪ್ರಾಶನವೇ ಇದಕ್ಕೆ ಕಾರಣ ಎಂದು ವೈದ್ಯರು ಹೇಳಿದ್ದರು.

ವಿಚಾರಣೆಯ ಬಳಿಕ ಒಸ್ಮಾನೋವಾ ಬಗ್ಗೆ ವೈಯಕ್ತಿಕ ಹಗೆತನದಿಂದಾಗಿ ವಿಷ ಹಾಕಿದ್ದೇನೆ ಎಂದು ಅಬಕರೋವಾ ಒಪ್ಪಿಕೊಂಡಿದ್ದಾರೆ. ತನ್ನ ಉದ್ದೇಶ ಉಸ್ಮಾನೋವಾ ಕೊಲೆ ಮಾಡುವುದು ಮಾಡುವುದು ಅಲ್ಲ ಆಕೆಯನ್ನು ಹೆದರಿಸುವುದು ಎಂದು ಅವಳು ಹೇಳಿಕೊಂಡಿದ್ದಾಳೆ.

ಬೆಚ್ಚಿ ಬೀಳಿಸಿದ ಘಟನೆ

ಘಟನೆಯು ಚೆಸ್ ಸಮುದಾಯವನ್ನು ಬೆಚ್ಚಿಬೀಳಿಸಿದೆ. ರಷ್ಯಾದ ಚೆಸ್ ಫೆಡರೇಶನ್ ಅಧ್ಯಕ್ಷ ಆಂಡ್ರೆ ಫಿಲಾಟೊವ್, ತನಿಖೆ ಬಾಕಿ ಇರುವವರೆಗೆ ಅಬಕರೋವಾ ಅವರನ್ನು ರಷ್ಯಾದ ಚೆಸ್ ಸ್ಪರ್ಧೆಗಳಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಅವರು ಆಜೀವ ನಿಷೇಧಕ್ಕೆ ಒಳಗಾಗಬಹುದು.

ಇದನ್ನೂ ಓದಿ: Paris Olympics 2024 : ಕಂಚಿನ ಪದಕ ಗೆದ್ದ ಹಾಕಿ ತಂಡದ ಆಟಗಾರರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಅಬಕರೋವಾ ಅವರ ಕ್ರಮಗಳ ಬಗ್ಗೆ ದಗೆಸ್ತಾನದ ಕ್ರೀಡಾ ಸಚಿವ ಸಾಜಿದಾ ಸಾಜಿಡೋವಾ ಆಘಾತ ವ್ಯಕ್ತಪಡಿಸಿದರು. ಅದು ಹಾಜರಿದ್ದ ಎಲ್ಲರ ಜೀವಕ್ಕೆ ಅಪಾಯವನ್ನುಂಟುಮಾಡುವ ಯೋಜನೆ ಎಂದು ಹೇಳಿದ್ದಾರೆ.

ಅನಾರೋಗ್ಯದ ಹೊರತಾಗಿಯೂ, ಉಸ್ಮಾನೋವಾ ಸಂಪೂರ್ಣವಾಗಿ ಚೇತರಿಸಿಕೊಂಡು ಆಟ ಮುಂದುವರಿಸಿದ್ದಾರೆ. ಅವರು ಸ್ಪರ್ಧೆಯಲ್ಲಿ ಎರಡನೇ ಸ್ಥಾನವನ್ನು ಪಡೆದಿದ್ದಾರೆ. ನಾಲ್ಕನೇ ಸುತ್ತಿನ ನಂತರ ಅಬಕರೋವಾ ಅವರನ್ನು ಹೊರಹಾಕಲಾಗಿತ್ತು.

Continue Reading

ಕ್ರೀಡೆ

Paris Olympics 2024 : ಕಂಚಿನ ಪದಕ ಗೆದ್ದ ಹಾಕಿ ತಂಡದ ಆಟಗಾರರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Paris Olympics 2024: “ಈ ಸಾಧನೆಯನ್ನು ಮುಂದಿನ ತಲೆಮಾರುಗಳು ನೆನಪಿನಲ್ಲಿಟ್ಟುಕೊಳ್ಳುತ್ತವೆ! ಒಲಿಂಪಿಕ್ಸ್​ನಲ್ಲಿ ಮಿಂಚಿದ ಭಾರತೀಯ ಹಾಕಿ ತಂಡ ಕಂಚಿನ ಪದಕವನ್ನು ಮನೆಗೆ ತಂದಿದೆ! ಇದು ಇನ್ನೂ ವಿಶೇಷ. ಏಕೆಂದರೆ ಇದು ಒಲಿಂಪಿಕ್ಸ್​ನಲ್ಲಿ ಅವರ ಸತತ ಎರಡನೇ ಪದಕ. ಅವರ ಯಶಸ್ಸು ಕೌಶಲ್ಯ, ಪರಿಶ್ರಮ ಮತ್ತು ತಂಡದ ಮನೋಭಾವದ ವಿಜಯ. ಅವರು ಅಪಾರ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವ ತೋರಿಸಿದರು. ಆಟಗಾರರಿಗೆ ಅಭಿನಂದನೆಗಳು. ಪ್ರತಿಯೊಬ್ಬ ಭಾರತೀಯನೂ ಹಾಕಿಯೊಂದಿಗೆ ಭಾವನಾತ್ಮಕ ಸಂಪರ್ಕ ಹೊಂದಿದ್ದಾನೆ. ಈ ಸಾಧನೆಯು ನಮ್ಮ ರಾಷ್ಟ್ರದ ಯುವಕರಲ್ಲಿ ಕ್ರೀಡೆಯನ್ನು ಇನ್ನಷ್ಟು ಜನಪ್ರಿಯಗೊಳಿಸುತ್ತದೆ ” ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಸತತ ಎರಡನೇ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪ್ಯಾರಿಸ್​​ನಲ್ಲಿ (Paris Olympics 2024) ನಡೆದ ಕಂಚಿನ ಪದಕ ಪಂದ್ಯದಲ್ಲಿ ಸ್ಪೇನ್ ವಿರುದ್ಧ ಗೆದ್ದ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ ಭಾರತೀಯ ಹಾಕಿ ತಂಡಕ್ಕೆ ಕರೆ ಮಾಡಿದರು. ಸ್ಪೇನ್ ತಂಡವನ್ನು 2-1 ಗೋಲುಗಳಿಂದ ಮಣಿಸಿದ ಭಾರತ ಕಂಚಿನ ಪದಕ ತನ್ನದಾಗಿಸಿಕೊಂಡಿತು. ಭಾರತ ತಂಡ ಜರ್ಮನಿ ವಿರುದ್ಧದ ಸೆಮಿಫೈನಲ್​​ನಲ್ಲಿ 2-3 ಗೋಲುಗಳಿಂದ ಸೋಲನುಭವಿಸಿ ಫೈನಲ್ ತಲುಪಲು ವಿಫಲವಾಗಿತ್ತು.

ಪಿಎಂ ಮೋದಿ ಇಡೀ ತಂಡವನ್ನು ಅವರೆಲ್ಲರ ಐತಿಹಾಸಿಕ ಸಾಧನೆಗಾಗಿ ಅಭಿನಂದಿಸಿದರು. ಇದು ಕೌಶಲ್ಯ, ಪರಿಶ್ರಮ ಮತ್ತು ತಂಡದ ಮನೋಭಾವದ ಯಶಸ್ಸು ಎಂದು ಬಣ್ಣಿಸಿದರು. ಈ ಸಾಧನೆಯು ಯುವಜನರಲ್ಲಿ ಹಾಕಿಯನ್ನು ಇನ್ನಷ್ಟು ಜನಪ್ರಿಯಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು.

“ಈ ಸಾಧನೆಯನ್ನು ಮುಂದಿನ ತಲೆಮಾರುಗಳು ನೆನಪಿನಲ್ಲಿಟ್ಟುಕೊಳ್ಳುತ್ತವೆ! ಒಲಿಂಪಿಕ್ಸ್​ನಲ್ಲಿ ಮಿಂಚಿದ ಭಾರತೀಯ ಹಾಕಿ ತಂಡ ಕಂಚಿನ ಪದಕವನ್ನು ಮನೆಗೆ ತಂದಿದೆ! ಇದು ಇನ್ನೂ ವಿಶೇಷ. ಏಕೆಂದರೆ ಇದು ಒಲಿಂಪಿಕ್ಸ್​ನಲ್ಲಿ ಅವರ ಸತತ ಎರಡನೇ ಪದಕ. ಅವರ ಯಶಸ್ಸು ಕೌಶಲ್ಯ, ಪರಿಶ್ರಮ ಮತ್ತು ತಂಡದ ಮನೋಭಾವದ ವಿಜಯ. ಅವರು ಅಪಾರ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವ ತೋರಿಸಿದರು. ಆಟಗಾರರಿಗೆ ಅಭಿನಂದನೆಗಳು. ಪ್ರತಿಯೊಬ್ಬ ಭಾರತೀಯನೂ ಹಾಕಿಯೊಂದಿಗೆ ಭಾವನಾತ್ಮಕ ಸಂಪರ್ಕ ಹೊಂದಿದ್ದಾನೆ. ಈ ಸಾಧನೆಯು ನಮ್ಮ ರಾಷ್ಟ್ರದ ಯುವಕರಲ್ಲಿ ಕ್ರೀಡೆಯನ್ನು ಇನ್ನಷ್ಟು ಜನಪ್ರಿಯಗೊಳಿಸುತ್ತದೆ ” ಎಂದು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಹಾಕಿಯಲ್ಲಿ ಭಾರತದ ಸಾಧನೆ

52 ವರ್ಷಗಳ ನಂತರ ಭಾರತವು ಕ್ರೀಡಾಕೂಟದಲ್ಲಿ ಸತತ ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. 1972ರ ಒಲಿಂಪಿಕ್ಸ್​ನಲ್ಲಿ ಭಾರತ ಕೊನೆಯ ಬಾರಿ ಸತತ ಪದಕಗಳನ್ನು ಗೆದ್ದಿತ್ತು. 96 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಭಾರತವು ಎಂಟು ಚಿನ್ನ, ಒಂದು ಬೆಳ್ಳಿ ಮತ್ತು ನಾಲ್ಕು ಕಂಚು ಸೇರಿದಂತೆ 14 ಪದಕಗಳನ್ನು ಗೆದ್ದಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 9ರಂದು ಭಾರತೀಯ ಅಥ್ಲೀಟ್​ಗಳಿಗೆ ಯಾವ ಸ್ಪರ್ಧೆಗಳಿವೆ? ಇಲ್ಲಿದೆ ಅದರ ವಿವರ

ಪಂದ್ಯದ ಮೊದಲ ಉಭಯ ತಂಡಗಳು ಗೋಲು ರಹಿತ ಆಟ ಆಡಿವೆ. ಆದರೆ ಮಾರ್ಕ್ ಮಿರಾಲೆಸ್ 18ನೇ ನಿಮಿಷದಲ್ಲಿ ಸ್ಪೇನ್ಗೆ ಮುನ್ನಡೆ ತಂದುಕೊಟ್ಟರು. ಆದರೆ 30ನೇ ನಿಮಿಷದಲ್ಲಿ ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಸಿಂಗ್ ಗೋಲು ಬಾರಿಸಿ ತಂಡಕ್ಕೆ ಮುನ್ನಡೆ ತಂದುಕೊಟ್ಟರು. 33ನೇ ನಿಮಿಷದಲ್ಲಿ ಹರ್ಮನ್ ಪ್ರೀತ್ ಮತ್ತೊಂದು ಗೋಲ್ ಬಾರಿಸಿ ತಂಡಕ್ಕೆ ಮುನ್ನಡೆ ತಂದುಕೊಟ್ಟರು.

Continue Reading

ಕ್ರೀಡೆ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 9ರಂದು ಭಾರತೀಯ ಅಥ್ಲೀಟ್​ಗಳಿಗೆ ಯಾವ ಸ್ಪರ್ಧೆಗಳಿವೆ? ಇಲ್ಲಿದೆ ಅದರ ವಿವರ

Paris Olympics 2024 : 1972ರಲ್ಲಿ ಪುರುಷರ ಹಾಕಿ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿತ್ತು. ಅದೇ ರೀತಿ ಭಾರತ ಹಾಕಿ ತಂಡ ಮತ್ತೊಮ್ಮೆ ಸತತ ಎರಡು ಬಾರಿ ಪದಕವನ್ನು ಗೆದ್ದುಕೊಂಡಿದೆ. 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಇದೀಗ ಮತ್ತೆ ಕಂಚಿನ ಪದಕಕ್ಕೆ ಭಾಜನವಾಗಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಗುರುವಾರ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ಹಾಕಿ ತಂಡ ಸ್ಪೇನ್ ವಿರುದ್ಧದ ಕಂಚಿನ ಪದಕದ ಪಂದ್ಯದಲ್ಲಿ ಗೆದ್ದಿದೆ. ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಎಲ್ಲವೂ ಕಂಚಿನ ಪದಕಗಳಾಗಿವೆ. ಭಾರತದ ಪಾಲಿಗೆ ಇದು ಖುಷಿಯ ವಿಚಾರವೇ ಸರಿ. ಪುರುಷರ 57 ಕೆ.ಜಿ ವಿಭಾಗದ ಪದಕದ ಸುತ್ತಿಗೆ ಪ್ರವೇಶ ಪಡೆಯುವ ಗುರಿಯೊಂದಿಗೆ ಪ್ರದರ್ಶನ ನೀಡಿದ್ದಾರೆ. ಗುರುವಾರ ನಡೆದ ಆರಂಭಿಕ ಎರಡು ಪಂದ್ಯಗಳಲ್ಲಿ ಅಮನ್ ಅತ್ಯುತ್ತಮ ಪ್ರದರ್ಶನ ನೀಡಿದರು, ತಾಂತ್ರಿಕ ಶ್ರೇಷ್ಠತೆಯೊಂದಿಗೆ ಎರಡನ್ನೂ ಗೆದ್ದಿದ್ದಾರೆ.

1972ರಲ್ಲಿ ಪುರುಷರ ಹಾಕಿ ತಂಡ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದಿತ್ತು. ಅದೇ ರೀತಿ ಭಾರತ ಹಾಕಿ ತಂಡ ಮತ್ತೊಮ್ಮೆ ಸತತ ಎರಡು ಬಾರಿ ಪದಕವನ್ನು ಗೆದ್ದುಕೊಂಡಿದೆ. 2021ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿತ್ತು. ಇದೀಗ ಮತ್ತೆ ಕಂಚಿನ ಪದಕಕ್ಕೆ ಭಾಜನವಾಗಿದೆ.

ಭಾರತ ನಿಯೋಗದ ಕೆಲವು ಸ್ಪರ್ಧಿಗಳು ಆಗಸ್ಟ್​​ 9ರಂದು ಕೆಲವೊಂದು ಸ್ಪರ್ಧೆಗಳಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಆ ಸ್ಪರ್ಧೆಗಳ ವಿವರ ಈ ಕೆಳಗೆ ನೀಡಲಾಗಿದೆ.

ಇದನ್ನೂ ಓದಿ: Paris Olympics 2024 : ಕ್ರೀಡಾಗ್ರಾಮಲ್ಲಿ ಮಾದಕ ವಸ್ತು ಕೊಕೇನ್ ಸೇವನೆ, ಆಸ್ಟ್ರೇಲಿಯಾದ ಹಾಕಿ ಆಟಗಾರನ ಬಂಧನ

ಮಧ್ಯಾಹ್ನ 12:30: ಗಾಲ್ಫ್ – ಮಹಿಳೆಯರ ವೈಯಕ್ತಿಕ ಸ್ಟ್ರೋಕ್ ಪ್ಲೇ ರೌಂಡ್ 2 ರಲ್ಲಿ ದೀಕ್ಷಾ ದಾಗರ್ ಮತ್ತು ಅದಿತಿ ಅಶೋಕ್.

ಮಧ್ಯಾಹ್ನ 2:10: ಅಥ್ಲೆಟಿಕ್ಸ್ – ಮಹಿಳೆಯರ 4×400 ಮೀಟರ್ ರಿಲೇ ಹೀಟ್ಸ್.
ಭಾರತದ ಜ್ಯೋತಿಕಾ ಶ್ರೀ ದಂಡಿ, ಕಿರಣ್ ಪಹಲ್, ಎಂ.ಪೂವಮ್ಮ ರಾಜು ಮತ್ತು ವಿಠ್ಠಲ ರಾಮರಾಜ್ ಕಣಕ್ಕಿಳಿಯಲಿದ್ದಾರೆ.

ಮಧ್ಯಾಹ್ನ 2:35: ಅಥ್ಲೆಟಿಕ್ಸ್ – ಪುರುಷರ 4×400 ಮೀಟರ್ ರಿಲೇ ಹೀಟ್ಸ್.
ಅಮೋಜ್ ಜಾಕೋಬ್, ರಾಜೇಶ್ ರಮೇಶ್, ಸಂತೋಷ್ ಕುಮಾರ್ ತಮಿಳರಸನ್ ಮತ್ತು ಮುಹಮ್ಮದ್ ಅಜ್ಮಲ್ ವರಿಯತೋಡಿ ಸೆಮಿಫೈನಲ್ ಗೆ ಅರ್ಹತೆ ಪಡೆಯುವ ಗುರಿ ಹೊಂದಿದ್ದಾರೆ.

ಮಧ್ಯಾಹ್ನ 2:30: ಮಹಿಳೆಯರ 57 ಕೆ.ಜಿ ಫ್ರೀಸ್ಟೈಲ್​ನಲ್ಲಿ ಕುಸ್ತಿಯಲ್ಲಿ ಅನ್ಶು ಮಲಿಕ್ . ಅನ್ಶು ಅವರ ಅದೃಷ್ಟ ಮಾಜಿ ಒಲಿಂಪಿಕ್ ಮತ್ತು ವಿಶ್ವ ಚಾಂಪಿಯನ್ ಹೆಲೆನ್ ಮರೌಲಿಸ್ ಅವರ ವಿರುದ್ಧ ಗೆಲ್ಲುವ ಮೂಲಕ ನಿರ್ಧಾರವಾಗಲಿದೆ.

ರಾತ್ರಿ 11:10: ಪುರುಷರ 57 ಕೆ.ಜಿ ಫ್ರೀಸ್ಟೈಲ್ ಕಂಚಿನ ಅಥವಾ ಚಿನ್ನದ ಪದಕ ಪಂದ್ಯದಲ್ಲಿ (ಪದಕ ಸ್ಪರ್ಧೆಗಳು) ಅಮನ್ ಸೆಹ್ರಾವತ್.

Continue Reading
Advertisement
Muhammad Yunus
ದೇಶ10 mins ago

Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

Bengaluru News
ಕರ್ನಾಟಕ22 mins ago

Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

chess player
ಕ್ರೀಡೆ23 mins ago

Chess Player : ಪ್ರತಿಸ್ಪರ್ಧಿಗೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ರಷ್ಯಾದ ಚೆಸ್ ಆಟಗಾರ್ತಿ; ಇಲ್ಲಿದೆ ವಿಡಿಯೊ

Toyota
ಕರ್ನಾಟಕ24 mins ago

Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

Channapatna News
ಕರ್ನಾಟಕ27 mins ago

Channapatna News: ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್

ಲೈಫ್‌ಸ್ಟೈಲ್29 mins ago

Tips For Parents: ಮಗುವಿಗೆ ಕನ್ನಡಕ ಬೇಕೆಂಬುದು ಪಾಲಕರಿಗೆ ತಿಳಿಯುವುದು ಹೇಗೆ?

Muhammad Yunus
ಪ್ರಮುಖ ಸುದ್ದಿ31 mins ago

Muhammad Yunus: ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್‌ ಯೂನಸ್‌ ಪದಗ್ರಹಣ!

Monsoon Fashion Do’s & Don’ts
ಫ್ಯಾಷನ್39 mins ago

Monsoon Fashion Do’s & Don’ts: ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

Paris Olympics 2024
ಕ್ರೀಡೆ44 mins ago

Paris Olympics 2024 : ಕಂಚಿನ ಪದಕ ಗೆದ್ದ ಹಾಕಿ ತಂಡದ ಆಟಗಾರರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Weight Loss Tips kannada
ಆರೋಗ್ಯ52 mins ago

Foods For Weight Loss: ಈ ಆಹಾರಗಳನ್ನು ಸೇವಿಸಿ; ಸಲೀಸಾಗಿ ತೂಕ ಇಳಿಸಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ7 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌