KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ - Vistara News

ನೋಟಿಸ್ ಬೋರ್ಡ್

KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

KPSC Exam: ಆಗಸ್ಟ್‌ 25ರಂದು ಕೆಪಿಎಸ್‌ಸಿಯ ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆಯನ್ನೂ ಮುಂದೂಡಲಾಗಿದೆ. ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವುದರಿಂದ 25ರ ಬದಲಿಗೆ 27ಕ್ಕೆ ಪರೀಕ್ಷೆ ನಡೆಸಲು ಆಯೋಗ ತೀರ್ಮಾನಿಸಿದೆ.

VISTARANEWS.COM


on

KPSC Exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC Exam) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಆ ದಿನದಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿದೆ.

ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದಾರೆ. ಪೂರ್ವಭಾವಿ ಪರೀಕ್ಷೆಗೆ ಆಯೋಗವು ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹೀಗಾಗಿ ಹೆಚ್ಚಿನ ಕಾಲಾವಕಾಶ ನೀಡದೆ, ಬೇರೆ ಪರೀಕ್ಷೆಗಳೊಂದಿಗೆ Overlap ಆಗದಂತೆ ಅಲ್ಪಕಾಲ ಮುಂದೂಡಲು ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಆಗಸ್ಟ್‌ 25ರ ಬದಲು 27ರಂದು ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಮರುನಿಗದಿಪಡಿಸಲು ಆಯೋಗವು ತೀರ್ಮಾನಿಸಿದೆ. ಅಭ್ಯರ್ಥಿಗಳು ಆಗಸ್ಟ್‌ 15ರ ನಂತರ ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲದಿಂದ ಡೌನ್‌ ಲೋಡ್ ಮಾಡಿಕೊಳ್ಳಬಹುದು. ಉಳಿದಂತೆ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ ಎಂದು ಆಯೋಗ ತಿಳಿಸಿದೆ.

ಮುಂದುವರೆಸುತ್ತಾ, ದಿನಾಂಕ:27-08-2024 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ ರಾಜ್ಯದ ಎಲ್ಲಾ ಜಿಲ್ಲೆಗಳ ಪರೀಕ್ಷಾ ಉಪಕೇಂದ್ರಗಳಿಗೆ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಲು ಹಾಗೂ ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: Job Vacancies: ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು

ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lalbagh Flower Show: ಲಾಲ್‌ಬಾಗ್ ಫ್ಲವರ್‌ ಶೋ; ನಾಳೆಯಿಂದ ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿಷೇಧ

Lalbagh Flower Show: ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಲಾಲ್‌ಬಾಗ್‌ಗೆ ಲಕ್ಷಾಂತರ ಜನ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುಗಮ‌ ಸಂಚಾರಕ್ಕೆ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಮಾಡಲಾಗಿದ್ದು, ಫ್ಲವರ್ ಶೋಗೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Lalbagh Flower Show
Koo

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆಯಿಂದ ಆ.8ರಿಂದ 19ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Flower Show) ಆಯೋಜಿಸಿರುವ ಹಿನ್ನೆಲೆಯಲ್ಲಿ ಉದ್ಯಾನಕ್ಕೆ ಗಣ್ಯವ್ಯಕ್ತಿಗಳು, ಪ್ರವಾಸಿಗರು, ಸಾರ್ವಜನಿಕರು ಸೇರಿ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇರುವುದರಿಂದ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಹೀಗಾಗಿ ಸಂಚಾರ ಪೊಲೀಸ್‌ ವಿಭಾಗದಿಂದ ಸುಗಮ ಸಂಚಾರಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದ್ದು, ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಒಟ್ಟು 12 ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುವ ಹಿನ್ನೆಲೆಯಲ್ಲಿ ಲಾಲ್‌ಬಾಗ್‌ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಡಾ. ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  2. ಕೆ.ಎಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ
    ಮಾಡಬಹುದಾಗಿದೆ.
  3. ಡಾ. ಮರಿಗೌಡ ರಸ್ತೆ- ಹಾಪ್ ಕಾಮ್ಸ್‌ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
  4. ಜೆ.ಸಿ. ರಸ್ತೆ- ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  1. ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  2. ಕೆ.ಎಚ್.ರಸ್ತೆ, ಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ,
  3. ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ
  4. ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ
  5. ಬಿಟಿಎಸ್ ಬಸ್ ಸ್ಟಾಪ್ ಬಿಎಂಟಿಸಿ ಜಂಕ್ಷನ್‌ನಿಂದ ರಸ್ತೆಯ ಎರಡೂ ಬದಿಗಳಲ್ಲಿ.
  6. ಕೃಂಬಿಗಲ್ ರಸ್ತೆಯ ಎರಡೂ ಕಡೆಗಳಲ್ಲಿ.
  7. ಲಾಲ್‌ಬಾಗ್ ವೆಸ್ಟ್‌ಗೇಟ್‌ನಿಂದ ಆರ್.ವಿ. ಟೀಚರ್ಸ್ ಕಾಲೇಜ್‌ವರೆಗೆ.
  8. ಆರ್‌ವಿ ಟೀಚರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲ‌ರ್‌ವರೆಗೆ
  9. ಅಶೋಕ ಪಿಲ್ಲರ್‌ನಿಂದ ಸಿದ್ದಾಮರ ಜಂಕ್ಷನ್ ವರೆಗೆ.

ಡಾ. ಮರೀಗೌಡ ರಸ್ತೆ, ಲಾಲ್‌ಬಾಗ್ ರಸ್ತೆ, ಕೆ.ಎಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಮಟ್ಟಿಗೆ ಸಮೂಹ ಸಾರಿಗೆ ವಾಹನಗಳಾದ ಬಿಎಂಟಿಸಿ ಬಸ್‌ಗಳು, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಹಾಗೂ ವಾಹನಗಳ ನಿಲುಗಡೆಗೆ ಮಾಡಲಾಗಿರುವ ವ್ಯವಸ್ಥೆಯನ್ನು ಅನುಸರಿಸಲು ಕೋರಲಾಗಿದೆ.

    ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

    Lalbagh Flower Show 2024
    Lalbagh Flower Show 2024

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆಯ ಥೀಮ್‌ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ.

    ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.

    ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್‌ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

    ಪ್ರವೇಶ ಶುಲ್ಕ ಎಷ್ಟು?

    168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್‌ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

    ಇದನ್ನೂ ಓದಿ | Rajya Sabha Election: 9 ರಾಜ್ಯಗಳ 12 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ಘೋಷಣೆ; ಸೆ.3ಕ್ಕೆ ಮತದಾನ

    ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

    Continue Reading

    ಕರ್ನಾಟಕ

    DCET 2024: ಡಿಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ಸದ್ಯಕ್ಕೆ ಸ್ಥಗಿತ; ಚಾಯ್ಸ್ ಆಯ್ಕೆಗೆ ಆ.8ರವರೆಗೆ ಅವಕಾಶ

    DCET 2024: ಡಿಸಿಇಟಿ-24 ತೆಗೆದುಕೊಂಡು ಮೊದಲ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು ಆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕೆಇಎ ತಿಳಿಸಿದೆ.

    VISTARANEWS.COM


    on

    DCET 2024
    Koo

    ಬೆಂಗಳೂರು: ಡಿಸಿಇಟಿ-24 (DCET 2024) ತೆಗೆದುಕೊಂಡು, ಮೊದಲ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ಆಯ್ಕೆ ಮಾಡಲು ಆ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

    ಮಳೆ ಕಾರಣಕ್ಕೆ ಶುಲ್ಕ ಪಾವತಿ ಇತ್ಯಾದಿ ಸಮಸ್ಯೆಗಳು ಎದುರಾಗಿವೆ ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿದ್ದು, ಇಚ್ಛೆ ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗುವುದು. ಸದ್ಯದಲ್ಲೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ಮೊದಲ ಸುತ್ತಿನಲ್ಲಿ ಚಾಯ್ಸ್ – 1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡವರು ಆ.8ರೊಳಗೆ ಚಲನ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಶುಲ್ಕ ಪಾವತಿಗೆ ಆ.9ರವರೆಗೆ ಅವಕಾಶ ಇರುತ್ತದೆ. ಆ.10ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ನಾಟಾಗೂ ಅವಕಾಶ

    ಡಿಸಿಇಟಿ-24ಗೆ ಅರ್ಜಿ ಸಲ್ಲಿಸಿ, ದಾಖಲಾತಿ ಪೂರ್ಣಗೊಳಿಸಿರುವ ಆರ್ಕಿಟೆಕ್ಚರ್ ಅಭ್ಯರ್ಥಿಗಳು, ನಾಟಾ ಅಂಕಗಳನ್ನು ಪ್ರಾಧಿಕಾರಕ್ಕೆ ಸಲ್ಲಿಸದೇ ಇದ್ದಲ್ಲಿ ಆ.8ರಂದು ಖುದ್ದು ಕೆಇಎಗೆ ಬಂದು ಸಲ್ಲಿಸಿ, ರಾಂಕ್ ಪಡೆಯಬಹುದು. ನಂತರ 2ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಬಹುದು ಎಂದು ಅವರು ಸಲಹೆ ನೀಡಿದ್ದಾರೆ.

    ಇದನ್ನೂ ಓದಿ | Bangalore Hotels: ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

    ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

    ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ (NEET 2024) ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್‌ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ. ಆಗಸ್ಟ್ 5ರ ಬೆಳಗ್ಗೆ 11ಕ್ಕೆ ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಯುಜಿ ನೀಟ್-2024 ಲಿಂಕ್ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 7 ರಂದು ಬೆಳಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

    ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್‌ಅನ್ನು ಎನ್‌ಟಿಎ ಡೇಟಾದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೇರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

    ಆ.7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

    ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಇನ್ನೂ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹವರು ಆ.7ರಿಂದ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

    ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜುಲೈ 26ರಂದು ನೀಟ್‌ ಯುಜಿ 2024 ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

    Continue Reading

    ಕರ್ನಾಟಕ

    Lalbagh Flower Show: ಆ.8ರಿಂದ 19ವರೆಗೆ ಲಾಲ್‌ಬಾಗ್‌ ಫ್ಲವರ್‌ ಶೋ; ಅನಾವರಣವಾಗಲಿದೆ ಭೀಮ ಸಂದೇಶ

    Lalbagh Flower Show: ಈ ಬಾರಿಯ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಹಲವು ವಿಶೇಷತೆಗಳನ್ನು ಹೊಂದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಥೀಮ್‌ನಡಿ ಫಲಪುಷ್ಪ ಪ್ರದರ್ಶನಕ್ಕೆ ಲಾಲ್‌ಬಾಗ್‌ ಸಜ್ಜಾಗಿದ್ದು, ಫ್ಲವರ್‌ ಶೋನಲ್ಲಿ ಸಂವಿಧಾನ, ಅಂಬೇಡ್ಕರ್‌ ಪ್ರತಿಮೆ, ಅವರು ಬಾಳಿ ಬದುಕಿದ ಮನೆ, ಅವರ ಆದರ್ಶಗಳು ಹೂವುಗಳಲ್ಲಿ ಅನಾವರಣವಾಗಲಿದೆ.

    VISTARANEWS.COM


    on

    Lalbagh Flower Show
    Koo

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್‌ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆಯ ಥೀಮ್‌ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್‌ ಶೋಗೆ ಚಾಲನೆ ನೀಡಲಿದ್ದಾರೆ.

    ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.

    ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್‌ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

    ಪ್ರವೇಶ ಶುಲ್ಕ ಎಷ್ಟು?

    168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್‌ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.

    ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್‌ ಜೀವನಗಾಥೆ!

    Lalbagh Flower Show 2024
    Lalbagh Flower Show 2024

    ಈ ಬಾರಿ ರಾಜಧಾನಿಯ ಲಾಲ್‌ಬಾಗ್‌ನಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ (Independence Day) ಫಲಪುಷ್ಪ ಪ್ರದರ್ಶನ (Lalbagh Flower Show) ಹಲವು ವಿಶೇಷತೆಗಳನ್ನು ಹೊಂದಿದೆ. ಮುಖ್ಯವಾಗಿ ಈ ಬಾರಿಯ ಥೀಮ್‌ ಹಾಗೂ ವಿಶೇಷ ಆಕರ್ಷಣೆ, ಸಂವಿಧಾನ ಶಿಲ್ಪಿ ಡಾ. ಬಿಆರ್‌ ಅಂಬೇಡ್ಕರ್‌ (Dr BR Ambedkar) ಅವರ ಜೀವನಗಾಥೆ ನೋಡುಗರನ್ನು ರಂಜಿಸಲಿದೆ.

    ಬೆಂಗಳೂರಿನ ಲಾಲ್‌ಬಾಗ್​​ನಲ್ಲಿ ಆಗಸ್ಟ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ (Lalbagh Flower Show) ವೀಕ್ಷಿಸಲು ಜನ ಕಾತರದಿಂದ ಕಾಯುತ್ತಾರೆ. ಪ್ರತಿ ವರ್ಷ ವಿಭಿನ್ನ ಥೀಮ್​​ನಲ್ಲಿ ಫ್ಲವರ್ ಶೋ ಆಯೋಜಿಸುವ ಮೂಲಕ ಲಾಲ್‌ಬಾಗ್‌ಗೆ ಅಸಂಖ್ಯಾತ ಜನರನ್ನು ಆಕರ್ಷಿಸಲಾಗುತ್ತದೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಲಾಲ್‌ಬಾಗ್​​ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜೀವನ ಗಾಥೆಯನ್ನು ಬಿಂಬಿಸುವ ಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, ವಿದೇಶಿ ಹಾಗೂ ಸ್ವದೇಶಿ ಹೂಗಳಿಂದ ಈ ಬಾರಿಯ ಫ್ಲವರ್ ಶೋ ಕಂಗೊಳಿಸಲಿದೆ.

    ಈ ಸಲ ಲಾಲ್‌ಬಾಗ್‌ನಲ್ಲಿ ನಡೆಯಲಿರುವ ಫ್ಲವರ್‌ ಶೋಗೆ (Lalbagh Flower Show) ಸುಮಾರು 3 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದು, ಹೂಗಳ ಆಯ್ಕೆ ನಡೆಯುತ್ತಿದೆ. ಎಂದಿನಂತೆ ಆಂಥೋರಿಯಂ, ಲಿಲ್ಲಿ, ಆರ್ಕಿಡ್, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್‌ ಹೂಗಳು, ರೆಡ್‌ಹಾಟ್‌ ಪೋಕರ್‌, ಆಲ್‌ಸ್ಟೋಮೇರಿಯನ್‌ ಲಿಲ್ಲಿ, ಪೂಷಿಯಾ, ಅಗಪಾಂಥಸ್‌, ಸೈಕ್ಲೋಮನ್‌, ಕ್ಯಾಲಾಲಿಲ್ಲಿ, ಸುಗಂಧ ರಾಜ ಮುಂತಾದ ಹೂಗಳಿಂದ ಅಂಬೇಡ್ಕರ್ ಅರಳಲಿದ್ದಾರೆ. 10-12 ದೇಶಗಳಿಂದ ಹೂಗಳನ್ನು ತರಿಸಿಕೊಳ್ಳಲಾಗುತ್ತದೆ. ಕೊಲಂಬಿಯಾ, ನೆದರ್ ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾದಿಂದ ಹೂಗಳು ಲಾಲ್‌ಬಾಗ್‌ಗೆ ಆಗಮಿಸಲಿವೆ. ಫ್ಲವರ್ ಶೋನಲ್ಲಿ 60ಕ್ಕೂ ಹೆಚ್ಚು ಜಾತಿಯ ಹೂಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಒಟ್ಟು 15 ಲಕ್ಷದಷ್ಟು ಹೂಗಳನ್ನು ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಸದ್ಯ ಲಾಲ್ ಬಾಗ್ ಗಾರ್ಡನ್​ನಲ್ಲಿ 4 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಹೂಗಳನ್ನು ಸಿದ್ಧಮಾಡಿಕೊಳ್ಳಲಾಗುತ್ತಿದೆ.

    ಇದನ್ನೂ ಓದಿ | Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್‌! ಹಾಡು ರಿಲೀಸ್‌ ಮಾಡಿದ ಲೂಸ್ ಮಾದ

    ಇದಲ್ಲದೇ ವಿವಿಧ ಬಗೆಯ ಆಕರ್ಷಕ ಬೋನ್ಸಾಯ್, ಇಕೆಬಾನ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಗಳ ಪ್ರದರ್ಶನವೂ ಇರಲಿದೆ. ಸಧ್ಯ ಒಂದೊಂದೇ ವಿದೇಶಿ ಹೂಗಳನ್ನು ತರಿಸಿಕೊಳ್ಳಲಾಗುತ್ತಿದೆ ಎಂದು ‌ಲಾಲ್‌ಬಾಗ್ ನಿರ್ದೇಶಕ ರಮೇಶ್ ತಿಳಿಸಿದ್ದಾರೆ. ಈ ವರ್ಷ ಸುಮಾರು 50 ಮಾದರಿಯ ಪ್ರದರ್ಶನಕ್ಕೆ ಸಲಹೆಗಳು ಬಂದಿದ್ದು ಅಂತಿಮವಾಗಿ ಅಂಬೇಡ್ಕರ್ ಅವರ ಥೀಮ್ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಹಿಂದೆ ಭಕ್ತಿ ಭಂಡಾರಿ ಬಸವಣ್ಣ ಮತ್ತು ಹೆಮ್ಮೆಯ ನಟ ಪುನೀತ್ ರಾಜ್ ಕುಮಾರ್ ಅವರ ಫಲಪುಷ್ಪ ಪ್ರದರ್ಶನ ನಡೆದಿತ್ತು.

    Continue Reading

    ಕರ್ನಾಟಕ

    KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

    KAS Prelims Exam: ಲೋಕಸಭಾ ಚುನಾವಣೆ ಸೇರಿ ವಿವಿಧ ಕಾರಣಗಳಿಂದ ಹಲವು ಬಾರಿ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆಯನ್ನು(KAS Recruitment 2024) ಆ.25ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಮತ್ತೆ ಎರಡು ದಿನಗಳ ಕಾಲ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದೂಡಿದೆ.

    VISTARANEWS.COM


    on

    KAS prelims exam
    Koo

    ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ (KAS Prelims Exam) ಮತ್ತೆ ಮುಂದೂಡಿಕೆಯಾಗಿದೆ. ಒಂದೇ ದಿನ ಬ್ಯಾಂಕಿಂಗ್‌ ಪರೀಕ್ಷೆ ಹಾಗೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದರಿಂದ ಎರಡು ದಿನಗಳ ಕಾಲ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ.

    ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

    ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಅಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಅವರೊಂದಿಗೆ ಚರ್ಚಿಸಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

    ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಪತ್ರ

    ಆ.27 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ 564 ಪರೀಕ್ಷಾ ಉಪಕೇಂದ್ರಗಳಿಗೆ ಒಂದು ದಿವಸದ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಿ, ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವಂತೆ ಅನುವು ಮಾಡಿಕೊಡಬೇಕು ಹಾಗೂ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಸರ್ಕಾರದ ಕಾರ್ಯದರ್ಶಿ ರಣದೀಪ್‌ ಡಿ. ಅವರಿಗೆ ಪತ್ರ ಬರೆದಿದ್ದಾರೆ.

    ಇದನ್ನೂ ಓದಿ | Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

    Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

    teacher jobs alert
    teacher jobs alert

    ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

    ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

    ಷರತ್ತುಗಳು:

    ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

    ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

    ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

    Continue Reading
    Advertisement
    PR Sreejesh
    ಪ್ರಮುಖ ಸುದ್ದಿ30 mins ago

    PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

    Bengaluru
    ಬೆಂಗಳೂರು1 hour ago

    Bengaluru: ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿದ ದುಷ್ಟ; ದುರುಳನಿಗೆ ಬಿತ್ತು ಧರ್ಮದೇಟು!

    Aman Sehrawat
    ಪ್ರಮುಖ ಸುದ್ದಿ1 hour ago

    Aman Sehrawat : ಸೆಮಿ ಫೈನಲ್​ನಲ್ಲಿ ಸೋತ ಅಮನ್​; ನಾಳೆ ಕಂಚಿನ ಪದಕಕ್ಕಾಗಿ ಹೋರಾಟ

    Paris Olympics 2024
    ಪ್ರಮುಖ ಸುದ್ದಿ2 hours ago

    Paris Olympics 2024 : ಕಂಚು ಗೆದ್ದ ಹಾಕಿ ತಂಡದ ಪಂಜಾಬ್​​ನ ಆಟಗಾರರಿಗೆ ತಲಾ 1 ಕೋಟಿ ರೂ. ಬಹುಮಾನ ಪ್ರಕಟ

    Best Selling Cars
    ಆಟೋಮೊಬೈಲ್2 hours ago

    Best Selling Cars: ಜುಲೈನಲ್ಲಿ ಅತೀ ಹೆಚ್ಚು ಮಾರಾಟವಾದ ಕಾರುಗಳು ಯಾವವು?

    Muhammad Yunus
    ದೇಶ2 hours ago

    Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

    Bengaluru News
    ಕರ್ನಾಟಕ2 hours ago

    Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

    chess player
    ಕ್ರೀಡೆ2 hours ago

    Chess Player : ಪ್ರತಿಸ್ಪರ್ಧಿಗೆ ವಿಷ ಹಾಕಿ ಕೊಲ್ಲಲು ಯತ್ನಿಸಿದ ರಷ್ಯಾದ ಚೆಸ್ ಆಟಗಾರ್ತಿ; ಇಲ್ಲಿದೆ ವಿಡಿಯೊ

    Toyota
    ಕರ್ನಾಟಕ2 hours ago

    Toyota: ಗ್ರಾಮೀಣ ಯುವ ಜನತೆಗೆ ಟೊಯೊಟಾದಿಂದ ಉತ್ತಮ ತರಬೇತಿ, ಶಿಕ್ಷಣ; ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶ್ಲಾಘನೆ

    Channapatna News
    ಕರ್ನಾಟಕ3 hours ago

    Channapatna News: ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ6 hours ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ8 hours ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ9 hours ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ4 days ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ5 days ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ1 week ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ1 week ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ1 week ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌