Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್! - Vistara News

ಕರ್ನಾಟಕ

Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್!

Prakash Raj: ವಿನೇಶ್‌ ಫೋಗಟ್‌ ಅವರು ಒಲಿಂಪಿಕ್ಸ್‌ನಲ್ಲಿ ಅನರ್ಹತೆಗೊಂಡಿರುವ ಕುರಿತ ಕಾರ್ಟೂನ್‌ನ ಫೋಟೊವನ್ನು ಪ್ರಕಾಶ್‌ ರಾಜ್‌ ಎಕ್ಸ್‌ ಜಾಲತಾಣದಲ್ಲಿ ಫೋಟೊ ಸಮೇತ ಹಂಚಿಕೊಂಡಿದ್ದಾರೆ. ನರೇಂದ್ರ ಮೋದಿ ಅವರೇ ವಿನೇಶ್‌ ಅನರ್ಹತೆಗೆ ಕಾರಣ ಎಂಬುದು ಪ್ರಕಾಶ್‌ ರಾಜ್‌ ಪೋಸ್ಟ್‌ನ ಅರ್ಥವಾಗಿದೆ. ಇದಕ್ಕಾಗಿ ಜನ ನಟನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

Prakash Raj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಆಘಾತವಾಗಿದೆ. ಕುಸ್ತಿಯಲ್ಲಿ ಫೈನಲ್‌ ತಲುಪಿ ಇತಿಹಾಸ ಸೃಷ್ಟಿಸಿದ್ದ ಅವರು ಇನ್ನೇನು ಚಿನ್ನದ ಪದಕಕ್ಕಾಗಿ ಕಾದಾಡಬೇಕು ಎನ್ನುವರಷ್ಟರಲ್ಲಿಯೇ ದೇಹದ ತೂಕ 100 ಗ್ರಾಂ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಿರುವುದು ಕುಸ್ತಿಪಟುವಿನ ಜತೆಗೆ ಇಡೀ ದೇಶದ ಜನರಿಗೆ ಅಸಮಾಧಾನ ಉಂಟಾಗಿದೆ. ಇದರ ಬೆನ್ನಲ್ಲೇ, ವಿನೇಶ್‌ ಫೋಗಟ್‌ ವಿಷಯದಲ್ಲೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಟೀಕಿಸಿ ನಟ ಪ್ರಕಾಶ್‌ ರಾಜ್‌ (Prakash Raj) ಪೋಸ್ಟ್‌ ಮಾಡಿದ್ದು, ನಟನ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿನೇಶ್‌ ಫೋಗಟ್‌ ಅವರು ಒಲಿಂಪಿಕ್ಸ್‌ನಲ್ಲಿ ಅನರ್ಹತೆಗೊಂಡಿರುವ ಕುರಿತ ಕಾರ್ಟೂನ್‌ನ ಫೋಟೊವನ್ನು ಪ್ರಕಾಶ್‌ ರಾಜ್‌ ಎಕ್ಸ್‌ ಜಾಲತಾಣದಲ್ಲಿ ಫೋಟೊ ಸಮೇತ ಹಂಚಿಕೊಂಡಿದ್ದಾರೆ. ತೂಕ ಪರಿಶೀಲನೆ ಯಂತ್ರದ ಮೇಲೆ ವಿನೇಶ್‌ ಫೋಗಟ್‌ ನಿಂತಿರುವ, ಆ ತೂಕದ ಯಂತ್ರದ ಮೇಲೆ ನರೇಂದ್ರ ಮೋದಿ ಅವರು ಹಿಂದಿನಿಂದ ಕಾಲಿಡುತ್ತಿರುವಂತೆ ಬಿಂಬಿಸಿರುವ ಕಾರ್ಟೂನ್‌ನ ಫೋಟೊವನ್ನು ಪ್ರಕಾಶ್‌ ರಾಜ್‌ ಪೋಸ್ಟ್‌ ಮಾಡಿ, ‘ನಿಮಗೆ ಏನು ಅನಿಸುತ್ತದೆ’ ಎಂದು ಪೋಸ್ಟ್‌ ಮಾಡಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ‌

“ಇಟಲಿಯ ಕುಸ್ತಿಪಟು ಕೂಡ ಹೆಚ್ಚಿನ ತೂಕದ ಹಿನ್ನೆಲೆಯಲ್ಲಿ ಒಲಿಂಪಿಕ್ಸ್‌ನಿಂದ ಅನರ್ಹಗೊಂಡಿದ್ದಾರೆ. ಅವರ ಅನರ್ಹತೆಯ ಹಿಂದೆಯೂ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಕೈವಾಡ ಇದೆಯೇ” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ನೀವೊಬ್ಬ ಅರ್ಬನ್‌ ನಕ್ಸಲ್”‌ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. “ನರೇಂದ್ರ ಮೋದಿ ಅವರಿಂದಲೇ ನಿಮ್ಮ ತೂಕ ಹೆಚ್ಚಾಗಿದೆಯೇ” ಎಂದು ಮತ್ತೊಬ್ಬರು ನಟನನ್ನು ಪ್ರಶ್ನಿಸಿದ್ದಾರೆ.

ದೇಶದ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಪ್ರಕಾಶ್‌ ರಾಜ್‌ ಪೋಸ್ಟ್‌ಗಳಿಗೆ ಜನ ಆಕ್ರೋಶ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಭಾರತದ ಚಂದ್ರಯಾನ 3 ಮಿಷನ್‌ ಯಶಸ್ವಿಯಾದ ಬಳಿಕವೂ ಪ್ರಕಾಶ್‌ ರಾಜ್‌ ವ್ಯಂಗ್ಯ ಮಾಡಿದ್ದು ಭಾರಿ ಟೀಕೆಗೆ ಕಾರಣವಾಗಿತ್ತು. ಚಂದ್ರಯಾನ 3ರ ಬಗ್ಗೆ ವ್ಯಂಗ್ಯಭರಿತ ಪೋಸ್ಟ್ ಮಾಡಿದ್ದಕ್ಕೆ ಎಲ್ಲೆಡೆ ನಟ ಪ್ರಕಾಶ್‌ ರಾಜ್‌ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ, ಪ್ರಕಾಶ್‌ ರಾಜ್‌ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀರಾಮಸೇನೆಯಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಕಾಶ್‌ ರಾಜ್‌ ವಿರುದ್ಧ ಕೇಸ್‌ ದಾಖಲಿಸಲಾಗಿತ್ತು.

ಇದನ್ನೂ ಓದಿ: Prakash Raj: ಕಾಶ್ಮೀರವನ್ನು ಪ್ಯಾಲೆಸ್ತೀನ್‌ಗೆ ಹೋಲಿಸಿದ ಪ್ರಕಾಶ್‌ ರಾಜ್;‌ ಕೆಂಡವಾದ ಜನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Nagara Panchami 2024: ನಾಗದೋಷ ಎಂದರೇನು? ಇದರ ಪರಿಹಾರ ಕ್ರಮಗಳು ಏನೇನು?

Nagara Panchami 2024: ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ನಾಗರ ಪಂಚಮಿಯಂದು ನಾಗದೇವತೆಗೆ ತನಿ ಹಾಕುವಲ್ಲಿಂದ, ತಂಬಿಲ ನೀಡುವಲ್ಲಿಂದ ತೊಡಗಿ ಅಷ್ಟ ಪವಿತ್ರ ನಾಗಮಂಡಲದಂತಹ ವಿಶಿಷ್ಟ ಆರಾಧನಾ ಕ್ರಮಗಳವರೆಗೆ ಅವರವರ ಶ್ರದ್ಧಾಭಕ್ತಿ, ಆರ್ಥಿಕ ಸ್ಥಿತಿಗತಿಗಳನ್ನು ಅವಲಂಬಿಸಿ ನಾಗಾರಾಧನೆಯನ್ನು ಈಗಲೂ ನಡೆಸಿಕೊಂಡು ಬರಲಾಗುತ್ತಿದೆ.

VISTARANEWS.COM


on

Nagara Panchami 2024
Koo

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)

ಜಾತಕದಲ್ಲಿ ನವಗ್ರಹಗಳ ಪೈಕಿ ಎರಡು (Nagara Panchami 2024) ಗ್ರಹಗಳಾದ ರಾಹು ಮತ್ತು ಕೇತು ಗ್ರಹಗಳಿಂದ ಉಂಟಾಗುವ ದೋಷಗಳಿಗೆ ಸರ್ಪದೋಷ (ನಾಗದೋಷ) ಎಂದು ಕರೆಯುವರು. ರಾಹು ಕೇತುಗಳನ್ನು ಹೋರಾಸಂಹಿತೆ,ಬೃಹಜ್ಜಾತಕ ಇತ್ಯಾದಿ ಗ್ರಂಥ ಬರೆದ ವರಾಹಮಿಹಿರ ಉಲ್ಲೇಖ ನೀಡಿಲ್ಲವಾದರೂ, ಸೂರ್ಯ ಸಿದ್ದಾಂತದಂತ ಗ್ರಂಥಗಳು ಗ್ರಹಣದ ವಿಷಯದಲ್ಲಿ ಕಂಡುಬರುವ ಛಾಯಾಬಿಂದುಗಳನ್ನು ರಾಹು ಕೇತುಗಳೆಂಬ ಉಲ್ಲೇಖ ಕಂಡುಬರುತ್ತದೆ.
ಅದರಂತೆ ರಾಹು ಕೇತು ಗ್ರಹಗಳು ಛಾಯಾ ಗ್ರಹಗಳು ಇವುಗಳಿಗೆ ತಮ್ಮದೇ ಅಸ್ತಿತ್ವ ಇಲ್ಲ. ಇವುಗಳಿಗೆ ಸದಾ ವಕ್ರಗತಿ. ಆದರೆ ಶನಿವತ್ ರಾಹು, ಕುಜವತ್ ಕೇತು ಎಂಬುದನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಕೆಲವು ಗ್ರಂಥಕಾರರು ಹೇಳಿದ್ದಾರೆ. ಅಂದರೆ ಶನಿಗ್ರಹದಿಂದ ಉಂಟಾಗುವ ಫಲ ಮತ್ತು ದೋಷಗಳಷ್ಟೇ ಪರಿಣಾಮ ರಾಹು ಗ್ರಹದಿಂದ ಉಂಟಾಗುವುದು ಹಾಗೂ ಕುಜಗ್ರಹದಿಂದ ಉಂಟಾಗುವ ಫಲ ಮತ್ತು ದೋಷಗಳಷ್ಟೇ ಪರಿಣಾಮ ಕೇತು ಗ್ರಹದಿಂದ ಉಂಟಾಗುತ್ತದೆ.

ಛಾಯಾಗ್ರಹಗಳು

ರಾಹುಕೇತುಗಳು ಛಾಯಾಗ್ರಹವಾದರೂ ಜಾತಕದಲ್ಲಿ ಅನಿಷ್ಟಸ್ಥಾನದಲ್ಲಿರುವಾಗ ಹಾಗೂ ಗೋಚಾರದಲ್ಲಿ ಅಶುಭ ಸ್ಥಾನದಲ್ಲಿದ್ಧಾಗ ಜಾತಕನಿಗೆ ತೀವ್ರತರವಾದ ಬಾಧೆ ಕೊಡುತ್ತದೆ. ದಶಾ ಮತ್ತು ದಶಾಭುಕ್ತಿ ನಡೆಯುವಾಗ ಇನ್ನೂ ಹೆಚ್ಚು ಬಾಧಿಸುತ್ತದೆ. ದೇಶಾಂತರ ಹೊರಡುವ ಪ್ರಸಂಗವೂ ಸಹ ಬರಬಹುದು.ಮನೆಮಠಬಿಟ್ಟು ಬೀದಿ ಪಾಲಾಗುವ ಸಂಭವ ಇರುತ್ತದೆ.ಉಳಿದ ಗ್ರಹಗಳಿಗಿಂತ ಹೆಚ್ಚು ಬಾಧಕವನ್ನು ಕೊಡುತ್ತವೆ.

ದೋಷ ಗುರುತಿಸುವುದು ಹೇಗೆ?

ಜಾತಕದಲ್ಲಿ ಸುಮಾರಾಗಿ 100ಕ್ಕೆ ಪ್ರತಿಶತ ಒಂದೆರಡು ಮಾತ್ರ ಕಾಲಸರ್ಪದೋಷದಿಂದ ಬಂಧಿತವಾಗಿರುತ್ತದೆ. ಹಾಗಾದರೆ ಕಾಲಸರ್ಪ ದೋಷ ಎಂದರೇನು? ಅದನ್ನು ಜಾತಕದಲ್ಲಿ ಗುರುತಿಸುವುದು ಹೇಗೆ?
ಜಾತಕ(ಕುಂಡಲಿ)ಯಲ್ಲಿ ರಾಹು ಕೇತು ಗ್ರಹಗಳ ಮಧ್ಯದಲ್ಲಿ ಇತರ ಗ್ರಹಗಳು ಅಂದರೆ ರವಿ, ಚಂದ್ರ, ಕುಜ, ಬುಧ, ಗುರು, ಶುಕ್ರ, ಶನಿ ಗ್ರಹಗಳು ಇದ್ದರೆ ಅದು ಕಾಲಸರ್ಪ ದೋಷ ಎನಿಸುತ್ತದೆ. ರಾಹುಕೇತು ಗ್ರಹಗಳು ಸದಾ ವಕ್ರಗತಿಯನ್ನು ಹೊಂದಿದೆ. ರಾಹು ಕೇತು ಗ್ರಹಗಳನ್ನು ಬಿಟ್ಟು ಉಳಿದ ಗ್ರಹಗಳು ತಾವಿರುವ ಮನೆಯಿಂದ ಮುಂದೆ ಚಲಿಸಿದರೆ ರಾಹು ಕೇತು ಗ್ರಹಗಳು ಹಿಂದಕ್ಕೆ ಚಲಿಸುತ್ತವೆ. ಆದ್ದರಿಂದ ಕಾಳಸರ್ಪ ದೋಷದಲ್ಲಿ ರಾಹು ಕೇತು ಗ್ರಹಗಳ ಮಧ್ಯದಲ್ಲಿ ಇತರ ಗ್ರಹಗಳು ಬಂಧಿಯಾದಂತೆ ಇರಬೇಕೇ ವಿನಃ ಉಳಿದ ಗ್ರಹಗಳ ಮಧ್ಯದಲ್ಲಿ ರಾಹು ಕೇತು ಇದ್ದರೆ ಅಲ್ಲ.

ಕಾಳಸರ್ಪ ದೋಷ

ಕಾಳಸರ್ಪ ದೋಷ ಚಿಂತನೆಯ ಬಗ್ಗೆ ಉದಾಹರಣೆ ಮೇಷಲಗ್ನದಲ್ಲಿ ರಾಹು ಇದ್ದು ಸಪ್ತಮವಾದ ತುಲಾದಲ್ಲಿ ಕೇತುವಿದ್ದು ಉಳಿದ ಗ್ರಹಗಳು ಮೇಷದಿಂದ ತುಲಾದ ಒಳಗಡೆ ಇದ್ದರೆ ಕಾಳಸರ್ಪ ದೋಷ ಎಂದು ತಿಳಿಯಬೇಕು.ಇದೇ ರೀತಿ ಉಳಿದ ಹನ್ನೆರಡು ಲಗ್ನಗಳಲ್ಲೂ ಇದರಂತೆ ತಿಳಿದುಕೊಳ್ಳಬೇಕು.
ರಾಹು ಕೇತುಗಳು ಸಮಸಪ್ತಕರಾಗಿ( 7ರಾಶಿ ಅಂತರದಲ್ಲಿ)ಯಾವಾಗಲೂ ಇರುತ್ತಾರೆ.

ಜೋತಿಷ್ಯಶಾಸ್ತ್ರದಿಂದ ತಿಳಿಯುವ ಸರ್ಪದೋಷ, ಆಶ್ಲೇಷಾ ಬಲಿ

ಜ್ಯೋತಿಷ್ಯದಲ್ಲಿ ರಾಹುವಿಗೂ ನಾಗನಿಗೂ ಅನ್ಯೋನ್ಯ ಸಂಬಂಧವಿರುವುದರಿಂದ ಅನೇಕ ರೀತಿಯಾಗಿ ನಾಗಾನುಗ್ರಹ ಹಾಗೂ ನಾಗ ದೋಷಗಳ ಬಗ್ಗೆ ಪರಿಕಲ್ಪನೆಯಿದೆ ಅಂದರೆ ರಾಹುವಿನ ಆದಿ ದೇವತಾ ಹಾಗೂ ಪ್ರತ್ಯಧಿದೇವತಾ ಕಾಲ ಹಾಗೂ ಸರ್ಪ, ದೋಷಗಳನ್ನು ಅತಿಶಯೋಕ್ತಿ ಮಾಡದೆ ಸಣ್ಣ – ಪುಟ್ಟ ಪ್ರಾಯಶ್ಚಿತ್ತದಿಂದಲೇ ನಿವೃತ್ತಿ ಮಾಡಿಸಿ, ನಿರ್ಭೀತಿಯಿಂದಲೇ ಜೀವನ ಮಾಡುವುದಕ್ಕೆ ಜ್ಯೋತಿಷ್ಯದಿಂದ ಪರಿಹರಿಸಿಕೊಳ್ಳುವದಾಗಿದೆ.
ಆಶ್ಲೇಷ ನಕ್ಷತ್ರವು ತಾರಾ ಮಂಡಲದಲ್ಲಿ ಗುರುತಿಸಲಾದ ಇಪ್ಪತ್ತೇಳು ಮಹಾ ನಕ್ಷತ್ರಗಳಲ್ಲಿ ಒಂಭತ್ತನೆಯದು. ಜ್ಯೋತಿಷ್ಯ ಶಾಸ್ತ್ರಾಧಾರದಂತೆ ಪ್ರತಿನಕ್ಷತ್ರಕ್ಕೂ ಒಂದೊಂದು ನಕ್ಷತ್ರ ದೇವತೆ. ಆಶ್ಲೇಷ ನಕ್ಷತ್ರದ ನಕ್ಷತ್ರ ದೇವತೆಯು ಸರ್ಪ. ತನ್ನಿಂದ ಘಟಿಸಿದ ಪ್ರಮಾದದ ಪ್ರಾಯಶ್ಚಿತ್ತಕ್ಕಾಗಿ, ನಾಗದೇವತೆಯ ಅನುಗ್ರಹಕ್ಕಾಗಿ ನಾಗನಿಗೆ ಬಲಿ ಅಥವಾ ಆಹುತಿ ನೀಡುವ ಮೂಲಕ ನಡೆಸುವ ವಿಶೇಷ ಆರಾಧನೆಯೇ ಆಶ್ಲೇಷಾ ಬಲಿ.

ನಾಗಾಲಯಗಳು-ಆಶ್ಲೇಷಾ ಬಲಿ

ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು ಇಂದು ನಾಗರಿಕರೆನಿಸಿದ ವಿದ್ಯಾವಂತರ ಮನೆ ಮನಗಳಲ್ಲೂ ಆಳವಾಗಿ ಬೇರೂರಿ ನಿಂತಿದೆ. ನಾಗರ ಪಂಚಮಿಯಂದು ನಾಗದೇವತೆಗೆ ತನಿ ಹಾಕುವಲ್ಲಿಂದ, ತಂಬಿಲ ನೀಡುವಲ್ಲಿಂದ ತೊಡಗಿ ಅಷ್ಟ ಪವಿತ್ರ ನಾಗಮಂಡಲದಂತಹ ವಿಶಿಷ್ಟ ಆರಾಧನಾ ಕ್ರಮಗಳವರೆಗೆ ಅವರವರ ಶ್ರದ್ಧಾಭಕ್ತಿ, ಆರ್ಥಿಕ ಸ್ಥಿತಿಗತಿಗಳನ್ನು ಅವಲಂಬಿಸಿ ನಾಗಾರಾಧನೆಯನ್ನು ಈಗಲೂ ನಡೆಸಿಕೊಂಡು ಬರಲಾಗುತ್ತಿದೆ. ನಾಗಾರಾಧನೆಯು ಒಟ್ಟಿನಲ್ಲಿ ನಾಗ ಪ್ರೀತಿಗಾಗಿ. ಆದರೆ ನಾಗಾರಾಧನೆಯ ಒಂದು ಅಂಗವಾದ ಆಶ್ಲೇಷಾ ಬಲಿ ಎಂಬುದು ನಾಗ ದೇವತೆಗೆ, ಸರ್ಪ ಸಂಕುಲಕ್ಕೆ ಮಾನವನಿಂದ ಒದಗಿದ ಹಾನಿಯ, ಅಪಚಾರದ ದೆಸೆಯಿಂದ ಉಂಟಾದ ಸರ್ಪ ಶಾಪದ ಪರಿಹಾರಾರ್ಥವಾಗಿ ನಡೆದು ಬಂದಿದೆ.

ಆಶ್ಲೇಷಾ ಬಲಿ ಎಂಬ ಪದಗಳನ್ನು ಕೇಳಿದೊಡನೆಯೇ ಶ್ರೀ ಪರಶುರಾಮ ಸೃಷ್ಟಿಯ ಕ್ಷೇತ್ರಗಳಾದ ಶ್ರೀ ಕುಕ್ಕೆಸುಬ್ರಹ್ಮಣ್ಯ, ಗುತ್ತಿಗಾರು ಸಮೀಪದ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ, ಮಂಗಳೂರು ತಾಲೂಕಿನ ಕುಡುಪು, ಕಾಸರಗೋಡು ತಾಲೂಕಿನ ಮಂಜೇಶ್ವರ, ಬೆಳ್ತಂಗಡಿ ತಾಲೂಕಿನ ಬಳ್ಳಮಂಜ, ಪುತ್ತೂರು ತಾಲೂಕಿನ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಶ್ರೀ ವಾಸುಕಿ ಸನ್ನಿಧಿ, ಆರ್ಯಾಪು ಗ್ರಾಮದ ಕಾರ್ಪಾಡಿ ಇಂತಹ ನಾಗಾಲಯಗಳಲ್ಲಿ ವಿಶೇಷವಾಗಿ ಆಶ್ಲೇಷ ನಕ್ಷತ್ರದ ತಿಥಿಯಂದು ಈ ಆರಾಧನೆ ನಡೆಯುತ್ತದೆ. ಪಂಚಮಿ ಅಥವಾ ಷಷ್ಠಿ ತಿಥಿಯಿದ್ದರೂ ಈ ಆರಾಧನೆಗೆ ಪ್ರಶಸ್ತವೆಂಬ ನಂಬಿಕೆಯಿದೆ.

ಪುರಾಣಗಳಲ್ಲಿ ಉಲ್ಲೇಖಿತವಾದ ಸರ್ಪಗಳ ಜನ್ಮ, ಸರ್ಪ ಸಂಕುಲ

ಕದ್ರೂ ಮತ್ತು ಕಶ್ಯಪ ದಂಪತಿಗಳಿಂದ ಎಂಟು ಪ್ರಧಾನ ನಾಗದೇವತೆಗಳ ಸೃಷ್ಟಿಯಾಯಿತು. ಇದರ ಉಲ್ಲೇಖ “ವರಾಹ ಪುರಾಣ”ದಲ್ಲಿದೆ.
ಸೃಜತಾಃ ಬ್ರಹ್ಮಣಾಃ ಸೃಷ್ಠಿಂ
ಮರೀಚಃ ಸೂರಿಕಾರಣಂ ।
ಪ್ರಥಮಂ ಮನಸಾ
ಧ್ಯಾತಸ್ತಸ್ಯ ಪುತ್ರಸ್ತು ಕಾಶ್ಯಪಃ ।।
ತಸ್ಯ ದಾಕ್ಷಾಯಣೀ ಭಾರ್ಯಾ
ಕದ್ರೂರ್ನಾಮ ಶುಚಿಸ್ಮಿತಾ ।
ಮಾರೀಚೋ ಜನಯಾಮಾಸಾ
ತಸ್ಯಾಂ ಪುತ್ರಾನ್ ಮಹಾ ಬಲಾನ್ ।।
ಅನಂತಂ ವಾಸುಕಿಂ ಚೈವ
ಕಂಬಳಂ ಚ ಮಹಾಬಲಂ ।
ಕರ್ಕೋಟಕಂ ಚ ರಾಜೇಂದ್ರ
ಪದ್ಮಂ ಜಾನ್ಯಂ ಸರೀಸೃಪಮ್ ।।
ಮಹಾ ಪದ್ಮಂ ತಥ ಶಂಖಂ
ಕುಲಿಕಂ ಚಾಪರಾಜಿತಂ ।
ಏತೇ ಕಶ್ಯಪದಾಯದಾಃ
ಪ್ರಧಾನಾಃ ಪರಿಕೀರ್ತಿತಾಃ ।।

ಸರ್ಪಗಳ ಮಾತೆ

ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರೂ ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ ಐವತ್ತೆರಡು ಮಂದಿ ಸರ್ಪಶ್ರೇಷ್ಠರೂ ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿಯೂ ಸಹ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪವಿದ್ದರೂ ನಂಬಿ ಪೂಜಿಸಿದವರಿಗೆ ತಾರಕ ಶಕ್ತಿ- ನಂಬದೆ ಹಾನಿಯುಂಟು ಮಾಡಿದರೆ ಮಾರಕ ಶಕ್ತಿಯೂ ಹೌದು.ನಾಗದೇವತೆಗೆ ಕಾಯೇನ, ವಾಚಾ, ಮನಸಾ ಹಾನಿಯುಂಟು ಮಾಡಿದರೆ, ಅಪಚಾರವೆಸಗಿದರೆ ಸರ್ಪಶಾಪದಿಂದ ವಿಧ ವಿಧದ ಅನಿಷ್ಟಗಳು ಎದುರಾಗಿ ಕಾಡುತ್ತವೆ ಎಂಬುದು ಪೂರ್ವಜರ ಮಾತು. ಆದುದರಿಂದ ಸರ್ಪಶಾಪದಿಂದ ಮುಕ್ತಿ ಪಡೆಯುವ ಮಾರ್ಗಗಳಲ್ಲಿ ಆಶ್ಲೇಷಾ ಬಲಿ ಆರಾಧನೆಯೂ ಒಂದು. ನಾಗರ ಪಂಚಮಿ, ಆಶ್ಲೇಷ ನಕ್ಷತ್ರದ ತಿಥಿ, ಷಷ್ಠಿಯದಿನ ಆಶ್ಲೇಷಾ ಬಲಿಗೆ ಪ್ರಶಸ್ತ. ಕುಕ್ಕೇ ಸುಬ್ರಹ್ಮಣ್ಯ ದೇವಸ್ತಾನದಲ್ಲಿ ಬಹುತೇಕ ಎಲ್ಲ ದಿನಗಳಲ್ಲೂ ಈ ಪೂಜೆ ನಡೆಯುತ್ತದೆ.

ಸರ್ಪ ಶಾಪ ಬರುವುದು ಹೇಗೆ?

ನಾಗ ದೇವತೆಗೆ ಹಾನಿಯುಂಟಾಗುವ, ಅಪಚಾರ ತರುವ ಪ್ರಸಂಗಗಳು ಹಲವು. ಈ ಜನ್ಮದ, ಪೂರ್ವಜನ್ಮದ, ಜನ್ಮ ಜನ್ಮಾಂತರಗಳ ಜೀವಿತಾವಧಿಯ ವಿವಿಧ ಅವಸ್ಥೆಗಳಲ್ಲಿ ಮನಸ್ಸು, ಮಾತು, ಶರೀರ, ಕರ್ಮೇಂದ್ರಿಯ ವ್ಯಾಪಾರಗಳಿಂದ, ಶರೀರದ ಅಂಗಾಂಗಗಳಿಂದ, ಅರಿಷಡ್ವರ್ಗಗಳ ದೆಸೆಯಿಂದ, ತಿಳಿದೋ, ತಿಳಿಯದೆಯೋ ಓರ್ವ ವ್ಯಕ್ತಿ, ಆತನ ಕುಟುಂಬಸ್ಥರು ಪೂರ್ವಜರಿಂದ ನಡೆದ ಸರ್ಪವಧೆ, ದಂಡದಿಂದ ಹೊಡೆಯುವಿಕೆ, ಹುತ್ತಗಳ ಅಗೆತ, ವೃಕ್ಷನಾಶ ಅಥವಾ ಇಂತಹ ದುಷ್ಕೃತ್ಯಗಳಿಗೆ ಪ್ರೇರಣೆ ನೀಡುವುದರಿಂದ ಸರ್ಪಶಾಪ ಉಂಟಾಗುತ್ತದೆ. ತನ್ಮೂಲಕ ಕುಟುಂಬದಲ್ಲಿ ವಿವಾಹ ವಿಳಂಬ,ಬಂಜೆತನ, ಸಂತತಿ ನಾಶ, ಕುಷ್ಠಾದಿ ಮಹಾರೋಗಗಳೂ ಇನ್ನಿತರ ಭಯಂಕರ ಆಪತ್ತುಗಳೂ ಉಂಟಾಗುತ್ತವೆ ಎಂದು ಆಶ್ಲೇಷಾ ಬಲಿ ವಿಧಾನದ ಸಂಕಲ್ಪದಲ್ಲಿ ಹೇಳಲಾಗಿದೆ. ಸರ್ಪಗಳ ಮೊಟ್ಟೆಗಳ ನಾಶವೂ ಇಂತಹ ಅಕೃತ್ಯಗಳ ಸಾಲಿಗೆ ಸೇರುತ್ತದೆ. ಕೃಷಿ ಕ್ಷೇತ್ರದಲ್ಲಿ ಕೃಷಿಕನಿಗೆ ತಿಳಿಯದೆಯೇ ಇಂತಹ ಹಾನಿಗಳು ಸಂಭವಿಸುತ್ತಿರುತ್ತವೆ. ಆದುದರಿಂದ ಕೃಷಿಕರು ವಿಶೇಷವಾಗಿ ನಾಗದೇವತೆಯ ಆರಾಧನೆ ಮಾಡುತ್ತಲೇ ಇರುವುದು ಅನಿವಾರ್ಯವಾಗಿದೆ. ಸಮಸ್ತ ಸರ್ಪದೋಷ, ಸರ್ಪ ಶಾಪಗಳ ಪ್ರಾಯಶ್ಚಿತ್ತ ಪರಿಹಾರಾರ್ಥವಾಗಿ, ಸಕಲೈಶ್ವರ್ಯ ಸಿದ್ಧಿಗಾಗಿ ಆಶ್ಲೇಷಾ ಬಲಿಯನ್ನು ನೀಡಲಾಗುತ್ತದೆ.

ಆಶ್ಲೇಷಾ ಬಲಿ ವಿಧಾನ

ಆಶ್ಲೇಷಾ ಬಲಿಗೆ ಪ್ರಶಸ್ತವಾದ ಶುಭದಿನದಂದು ಕುಟುಂಬದ ಯಜಮಾನನು ಕುಟುಂಬದ ಸದಸ್ಯರೊಡಗೂಡಿ ಶುಚಿರ್ಭೂತನಾಗಿ, ಉಪವಾಸವಿದ್ದು, ಕ್ಷೇತ್ರ ವಿಧಿಗನುಸಾರವಾಗಿ, ವೇದ ಪಾರಂಗತರಾದ ನಿಷ್ಠಾವಂತ ವಿಪ್ರೋತ್ತಮರ ದ್ವಾರಾ ಆಶ್ಲೇಷಾ ಬಲಿಯನ್ನು ನೀಡಬೇಕು. ಸಾಮೂಹಿಕವಾಗಿ ಈ ಪೂಜೆ ನಡೆಸುವುದೂ ಇದೆ. ವ್ಯಕ್ತಿಗತವಾಗಿ ನಡೆಸುವ ಪದ್ಧತಿಯೂ ಉಂಟು. ಶ್ರೀ ಗುರು ಗಣಪತಿ, ನವಶಕ್ತ್ಯಾದಿ ದೇವತೆಗಳನ್ನು ಆವಾಹಿಸಿ ಸಂಕಲ್ಪ ಮಾಡುವುದರೊಂದಿಗೆ ಆಶ್ಲೇಷಾ ಬಲಿ ವಿಧಾನ ಆರಂಭವಾಗುತ್ತದೆ. ತಳಿರು ತೋರಣಗಳಿಂದ ಅಲಂಕೃತವಾದ ನಾಗ ಸನ್ನಿಧಿಯಲ್ಲಿ ಹರಿದ್ರಾ, ಕುಂಕುಮ, ರಂಗೋಲಿ ಪುಡಿಗಳಿಂದ ಸರ್ಪ ನವಪದಮಂಡಲವನ್ನೂ ಆಶ್ಲೇಷಾ ಬಲಿ ಮಂಡಲವನ್ನೂ ಆಕರ್ಷಕವಾಗಿ ಬರೆಯಲಾಗುತ್ತದೆ. ಸರ್ಪ ನವಪದ ಮಂಡಲದ ಕೇಂದ್ರ ಪದದಲ್ಲಿ ಶ್ರೀ ವಾಸುಕೀ ನಾಗರಾಜನಿಗೆ ಅಗ್ರಸ್ಥಾನ. ಉಳಿದ ಅಷ್ಟ ಪದಗಳಲ್ಲಿ ಅಷ್ಟಕುಲ ಸಂಜಾತರಾದ ಅನಂತ, ಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ ಅವರ ಆವಾಹನೆ. ಆಶ್ಲೇಷಾ ಬಲಿ ಮಂಡಲದ 52 ಪದಗಳು ಸರ್ಪಕುಲದ ೫೨ ಮಂದಿ ಸರ್ಪ ಶ್ರೇಷ್ಟರ ಆವಾಹನೆಗಾಗಿವೆ. ಸರ್ಪಗಳ ಪತ್ನಿಯರು, ಪುತ್ರರು, ಪುತ್ರಿಯರು, ಮೊಮ್ಮಕ್ಕಳು, ಮರಿ ಮಕ್ಕಳ ಸಹಿತ ಸರ್ಪ ಸಂಕುಲವನ್ನೂ ಇಂದ್ರಾದಿ ಅಷ್ಟದಿಕ್ಪಾಲಕರನ್ನೂ ದೇವಗಣಗಳನ್ನೂ ನಾಗಗಣಗಳನ್ನೂ ಅವಾಹಿಸಲಾಗುತ್ತದೆ.
ಆಶ್ಲೇಷಾ ಬಲಿ ವಿಧಾನದಂತೆ ಶ್ರೀ ವಾಸುಕೀ ನಾಗರಾಜನನ್ನೂ ಆತನ ಸರ್ಪ ಸಂಕುಲವನ್ನೂ ಧ್ಯಾನಿಸಲಾಗುತ್ತದೆ. ಅನಂತರ ಕಲ್ಪೋಕ್ತವಾಗಿ ಆಸನ, ಸ್ವಾಗತ, ಪಾದ್ಯ, ಅರ್ಘ್ಯ, ಆಚಮನೀಯ, ಮಧುಪರ್ಕ, ಆಚಮನ, ಸ್ನಾನ, ವಸನ, ಆಭರಣ, ಗಂಧ, ಪುಷ್ಪ, ಧೂಪ, ದೀಪ, ನೈವೇದ್ಯ, ವಂದನೆಗಳೆಂಬ ಷೋಡಶೋಪಚಾರ ಪೂಜೆಯನ್ನು ಸಲ್ಲಿಸಲಾಗುತ್ತದೆ. ಸಮಸ್ತ ಸರ್ಪಶಾಪ ಪರಿಹಾರಕ್ಕಾಗಿ ಕ್ಷೀರ, ಶರ್ಕರ, ಕದಳಿ, ಮಧು, ಆಜ್ಯ, ಹರಿದ್ರಾಯುಕ್ತ ಪಿಂಡಗಳನ್ನು ಸರ್ಪಗಳಿಗೆ ಮಂಡಲಗಳ ಪದಗಳಲ್ಲಿರಿಸಿ, ಸಮರ್ಪಿಸಲಾಗುತ್ತದೆ. ದೇವತೆಗಳಿಗೆ ಪ್ರಿಯವಾಗುವಂತೆ ಜ್ಯೋತಿಗಳನ್ನು ಬೆಳಗಿಸಿ ದೇದಿಪ್ಯವಾದ ವಾತಾವರಣವನ್ನು ನಿರ್ಮಿಸಲಾಗುತ್ತದೆ. ಮಹಾಮಂಗಳಾರತಿಯನ್ನು ಬೆಳಗಿ ಮಂತ್ರ ಪುಷ್ಪಾಂಜಲಿಯನ್ನು ಸಮರ್ಪಿಸಲಾಗುತ್ತದೆ. ಆನಂತರ ಪ್ರದಕ್ಷಿಣೆ ಗೈದು, ಸಾಷ್ಟಾಂಗ ನಮಸ್ಕಾರ ಮಾಡಿ, ನಾಗದೇವತೆಯನ್ನು ಪ್ರಸನ್ನಗೊಳಿಸಿ,ಮಹಾಮಹಿಮರಾದ ಸರ್ಪಗಳೇ, ಶ್ರದ್ಧಾ ಭಕ್ತಿಯಿಂದ ಯಥಾಶಕ್ತಿಯಾಗಿ ನಡೆಸಿದ ಈ ಪೂಜೆಯನ್ನು ಅಂಗೀಕರಿಸಿ, ಬಲಿದಾನವನ್ನು ಸ್ವೀಕರಿಸಿರಿ. ಸುಪ್ರೀತರಾಗಿರಿ, ಯಜಮಾನನಿಂದ, ಆತನ ಕುಟುಂಬದವರಿಂದ, ಪೂರ್ವಜರಿಂದ ನಿಮಗಾಗಿರ ಬಹುದಾದ ಸಕಲ ಹಾನಿಯನ್ನು, ಅಪಚಾರಗಳನ್ನು ಮನ್ನಿಸಿ, ಯಜಮಾನನನ್ನು, ಆತನ ಕುಟುಂಬವನ್ನು ಸಕಲ ದುರಿತಗಳಿಂದ ರಕ್ಷಿಸಿರಿ, ಅವರಿಗುಂಟಾಗಿರುವ ಸರ್ಪ ಶಾಪವನ್ನು ನಿವೃತ್ತಿ ಪಡಿಸಿ ಅನುಗ್ರಹಿಸಿರಿ. ಕುಷ್ಠಾದಿ ರೋಗಗಳನ್ನು ನಾಶಗೊಳಿಸಿರಿ. ಆಯುಷ್ಮಂತರಾದ ಪುತ್ರ ಪೌತ್ರರ ಉತ್ತಮ ಸಂತಾನ ಭಾಗ್ಯವನ್ನು ಅನುಗ್ರಹಿಸಿ ಉತ್ತರೋತ್ತರ ಅಭಿವೃದ್ಧಿಯಾಗುವಂತೆ ಆಶಿರ್ವದಿಸಿ, ಅಷ್ಟ್ಯೆಶ್ವರ್ಯಗಳನ್ನು ದಯಪಾಲಿಸುವ ಕೃಪೆ ಮಾಡಿರಿ ಎಂದು ಮನಃಪೂರ್ವಕವಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಗುತ್ತದೆ. ತದನಂತರ ಅರ್ಘ್ಯದಾನ, ಮತ್ತು ವಾಯನಗಳ ದಾನ ನೀಡಲಾಗುತ್ತದೆ. ಪ್ರಸಾದವನ್ನು ವಿತರಿಸಿ, ವಿಸರ್ಜನ ಪೂಜೆಯನ್ನು ನೆರವೇರಿಸಿ ಆಶ್ಲೇಷಾ ಬಲಿ ವಿಧಾನವನ್ನು ಪರಿಸಮಾಪ್ತಿಗೊಳಿಸಲಾಗುತ್ತದೆ.
ಅನಂತರ ಪೂಜೆಯನ್ನು ನೆರವೇರಿಸಿದ ಆಚಾರ್ಯರಿಗೆ ಫಲ, ತಾಂಬೂಲ ಯಥಾಶಕ್ತಿ ದಕ್ಷಿಣೆ ನೀಡಿ ನಮಸ್ಕರಿಸಿ, ಆರ್ಶಿರ್ವಾದ ಪಡೆಯುವುದರೊಂದಿಗೆ ಆಶ್ಲೇಷಾ ಬಲಿ ಪೂಜೆಯು ಮುಕ್ತಾಯವಾಗುತ್ತದೆ.
ಆದಿತ್ಯಾದಿ ನವಗ್ರಹ ಪ್ರಸಾದ ಸಿದ್ಧಿರಸ್ತು.

ಇದನ್ನೂ ಓದಿ: Nagara Panchami : ಶ್ರಾವಣದ ಮೊದಲ ಹಬ್ಬ ನಾಗರ ಪಂಚಮಿ; ಏನಿದರ ಹಿನ್ನೆಲೆ, ವಿಶೇಷ?

Continue Reading

ಮಳೆ

Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Rain News : ರಾಜ್ಯಾದ್ಯಂತ ಮಳೆ ಅಬ್ಬರ ತಗ್ಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನಲ್ಲಿ ಕೆಲವೊಮ್ಮೆ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

ಮಾನ್ಸೂನ್‌‌‌ನಲ್ಲಿ ಟ್ರೆಂಡಿಯಾದ ಫ್ರೆಂಡ್‌‌‌ಶಿಪ್‌ ಡೇ ಫ್ಯಾಷನ್‌ ಥೀಮ್‌

ಮಾನ್ಸೂನ್‌ನಲ್ಲಿ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ (Friendshipday Fashion) ಥೀಮ್‌ ಟ್ರೆಂಡಿಯಾಗಿದೆ. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಅಗಸ್ಟ್ ನ ಮೊದಲ ಭಾನುವಾರ ಸೆಲೆಬ್ರೇಟ್‌ ಫ್ರೆಂಡ್‌ ಶಿಪ್‌ ಡೇ ಫ್ಯಾಷನ್‌ನ ಕಾನ್ಸೆಪ್ಟ್ ಒಂದೇ ಎಂದೆನಿಸಿದರೂ ಥೀಮ್‌ ಹಾಗೂ ಸ್ಟೈಲಿಂಗ್‌ ಪ್ರತಿ ವರ್ಷ ಬದಲಾಗುತ್ತದೆ. ಫ್ರೆಂಡ್ಸ್ ಗ್ರೂಪ್‌ನಲ್ಲಿ ಒಮ್ಮೆ ಕಾಣಿಸಿಕೊಂಡ ಫ್ಯಾಷನ್‌ ಮುಂಬರುವ ವರ್ಷ ಕಾಣಿಸುವುದಿಲ್ಲ! ಎನ್ನುತ್ತಾರೆ ಫ್ಯಾಷನಿಸ್ಟಾಗಳು. ಹಾಗಾದಲ್ಲಿ ಈ ಬಾರಿಯ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ ಏನು? ಹೇಗೆಲ್ಲಾ ಕಾಣಿಸಿಕೊಳ್ಳಬಹುದು? ಮಾನ್ಸೂನ್‌ ಫ್ರೆಂಡ್‌ಶಿಪ್‌ ಡೇ ಲುಕ್‌ ಹೇಗೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಒಂದಿಷ್ಟು ಸಲಹೆ ನೀಡಿದ್ದಾರೆ.

Friendshipday Fashion

ಫ್ರೆಂಡ್‌ಶಿಪ್‌ ಡೇಗೂ ಬಂತು ಫ್ಯಾಷನ್‌ ಥೀಮ್‌

ಫ್ರೆಂಡ್‌ಶಿಪ್‌ ಡೇ ಆಚರಿಸುವ ಸ್ನೇಹಿತರು ಹಾಗೂ ಅವರ ಗ್ರೂಪ್‌ಗಳು, ತಮ್ಮದೇ ಆದ ಥೀಮ್‌ ಫ್ಯಾಷನ್‌ ಫಾಲೋ ಮಾಡಲಾರಂಭಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ, ಮಾಲ್‌-ಶಾಪ್‌ಗಳಲ್ಲಿ ಬಲ್ಕ್‌ ಆರ್ಡರ್ನಲ್ಲಿ ಫ್ಯಾಷನ್‌ವೇರ್‌ಗಳೂ ದೊರೆಯುತ್ತಿವೆ. ಕಾರ್ಪೋರೇಟ್‌ ಕಚೇರಿಯ ಉದ್ಯೋಗಿಗಳಾಗಿರಬಹುದು ಅಥವಾ ಕಾಲೇಜು ಹುಡುಗ-ಹುಡುಗಿಯರಾಗಿರಬಹುದು. ಅವರವರ ಗ್ರೂಪ್‌ನ ಅಭಿರುಚಿಗೆ ತಕ್ಕಂತೆ ಫ್ಯಾಷನ್‌ ಥೀಮ್‌ಗಳನ್ನು ರೂಪಿಸಿಕೊಂಡು ಫ್ಯಾಷನ್‌ವೇರ್‌ಗಳನ್ನು ಧರಿಸುವುದು ಟ್ರೆಂಡಿಯಾಗಿದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಇನ್ನು, ಥೀಮ್‌ ಎಂದಾಕ್ಷಣಾ ಗುಂಪಿನ ಎಲ್ಲರ ಔಟ್‌ಫಿಟ್‌ಗಳು ಒಂದೇ ಆಗಿರಬೇಕೆಂದಿಲ್ಲ! ಒಟ್ಟಿನಲ್ಲಿ ಅವರೆಲ್ಲರೂ ಧರಿಸುವ ಯಾವುದೇ ಉಡುಪು ಅಥವಾ ಆಕ್ಸೆಸರೀಸ್‌ ಇಲ್ಲವೇ ಸ್ಟೈಲಿಂಗ್‌ ಒಂದೇ ಬಗೆಯದ್ದಾಗಿರಬಹುದು. ಅದು ಔಟಿಂಗ್‌ನದ್ದಾಗಿರಬಹುದು, ಪಾರ್ಟಿವೇರ್‌ನದ್ದಾಗಿರಬಹುದು ಅಥವಾ ಕೆಫೆ ಅಥವಾ ರೆಸ್ಟೋರೆಂಟ್‌ನಲ್ಲಿ ಕಾಲ ಕಳೆಯುವಂತದ್ದಾಗಿರಬಹುದು. ಆಯಾ ಗ್ರೂಪ್‌ನ ಐಡೆಂಟಿಟಿಗೆ ತಕ್ಕಂತೆ ಥೀಮ್‌ ಫ್ಯಾಷನ್‌ ಬದಲಿಸಿಕೊಳ್ಳಬಹುದು ಎನ್ನುತ್ತಾರೆ ಡಿಸೈನರ್‌ ರಿಯಾಜ್‌ ಹಾಗೂ ರಕ್ಷ್.

Friendshipday Fashion

ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಸ್ಟೈಲಿಂಗ್‌

ಸ್ನೇಹಿತರ ಗ್ರೂಪ್‌ಗಳು ಕೇವಲ ಜೆನ್‌ ಜಿ, ಮಿಲೆನಿಯಲ್‌ ಜನರಿಂದ ಕೂಡಿರಬೇಕೆಂದಿಲ್ಲ, ಗ್ರೂಪ್‌ಗಳು ವಯಸ್ಸಾಗಿರುವ ಹಿರಿಯರದ್ದು ಆಗಿರಬಹುದು ಅಥವಾ ಸಮಾನ ಮನಸ್ಕರ ವಿಭಿನ್ನ ಗ್ರೂಪ್‌ಗಳಾಗಬಹುದು. ಆಯಾ ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಡ್ರೆಸ್ಸಿಂಗ್‌ ಹಾಗೂ ಸ್ಟೈಲಿಂಗ್‌ ಬದಲಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

ಫ್ರೆಂಡ್‌ಶಿಪ್‌ ಡೇ ಸ್ಟೈಲಿಂಗ್‌ಗೆ ಸಿಂಪಲ್‌ ಟಿಪ್ಸ್

  • ಫ್ರೆಂಡ್ಸ್ ಗ್ರೂಪ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಎಥ್ನಿಕ್‌, ವೆಸ್ಟರ್ನ್‌, ಸೆಮಿ ಎಥ್ನಿಕ್‌, ಬಿಂದಾಸ್‌ ಯಾವುದಾದರೂ ಸರಿಯೇ ಕಂಫರ್ಟಬಲ್‌ ಸ್ಟೈಲಿಂಗ್‌ ಚೂಸ್‌ ಮಾಡಿ.
  • ಔಟಿಂಗ್‌ ಆದಲ್ಲಿ ಮಾನ್ಸೂನ್‌ ಸೀಸನ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಆದಷ್ಟೂ ಯಂಗ್‌ ಲುಕ್‌ ನೀಡುವ ಸ್ಟೈಲಿಂಗ್‌ ಅಳವಡಿಸಿಕೊಳ್ಳಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru: ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿದ ದುಷ್ಟ; ದುರುಳನಿಗೆ ಬಿತ್ತು ಧರ್ಮದೇಟು!

Bengaluru: ಸುನಿತಾ ಅವರು ಬೆಂಗಳೂರಿನಲ್ಲಿ ಇಬ್ಬರ ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ. ಇವರ ಪತಿಯು ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಏಕಾಏಕಿ ದಾಳಿ ಮಾಡಲು ಕಾರಣ ಏನು ಎಂಬುದು ಗೊತ್ತಾಗಿಲ್ಲ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Bengaluru
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇತ್ತೀಚೆಗೆ ಅಪರಾಧ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿರುವ ಮಹಿಳೆ ಮೇಲೆ ಹಲ್ಲೆ, ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಲೈಂಗಿ ಕಿರುಕುಳ, ದರೋಡೆ, ಕಳ್ಳತನ, ಕೊಲೆ ಸೇರಿ ಅಪರಾಧ ಕೃತ್ಯಗಳು (Crime Cases) ಜಾಸ್ತಿಯಾಗುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಸಹಕಾರ ನಗರದಲ್ಲಿ (Sahakar Nagar) ದುಷ್ಟನೊಬ್ಬ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ನೋಡಿದ ಜನ ದುಷ್ಟನಿಗೆ ಧರ್ಮದೇಟು ಕೊಟ್ಟಿದ್ದಾರೆ.

ಸಹಕಾರ ನಗರದಲ್ಲಿ ಸುನಿತಾ (38) ಎಂಬ ಮಹಿಳೆಯು ಗುರುವಾರ (ಆಗಸ್ಟ್‌ 8) ಸಂಜೆ ನಡೆದುಕೊಂಡು ಹೋಗುವಾಗ ವ್ಯಕ್ತಿಯು ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾನೆ. ಕಲ್ಲು ಎತ್ತಿ ಹಾಕಿದ್ದಲ್ಲದೆ, ಕಲ್ಲಿನಿಂದ ಅವರ ತಲೆಯನ್ನು ಜಜ್ಜಿದ್ದಾನೆ. ಇದರಿಂದಾಗಿ ಮಹಿಳೆಯು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ದುಷ್ಟನನ್ನು ಹಿಡಿದು ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ.

ಸುನಿತಾ ಅವರು ಬೆಂಗಳೂರಿನಲ್ಲಿ ಇಬ್ಬರ ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ. ಇವರ ಪತಿಯು ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಏಕಾಏಕಿ ದಾಳಿ ಮಾಡಲು ಕಾರಣ ಏನು ಎಂಬುದು ಗೊತ್ತಾಗಿಲ್ಲ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಹಿಳೆಯು ಆಂಧ್ರಪ್ರದೇಶದ ಕಡಪ ಮೂಲದವರು ಎಂದು ತಿಳಿದುಬಂದಿದೆ.

ವಾಕಿಂಗ್‌ ಮಾಡುವಾಗ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ

ಬೆಂಗಳೂರಿನ ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಕಿಸ್‌ ಕೊಟ್ಟಿದ್ದ ಪ್ರಕರಣ ಸುದ್ದಿಯಾಗಿತ್ತು. ಬೆಳಗಿನ ಜಾವ ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದರು. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವ ವಿಡಿಯೊಗಳು ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು, ಹತ್ಯೆ, ಹಲ್ಲೆ ನಡೆಸುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Self Harming : ನನ್ನಿಂದ ನನ್ನ ಹೆಂಡ್ತಿನಾ ದೂರ ಮಾಡಿದ್ರು ಅಂತ ಆತ್ಮಹತ್ಯೆಗೆ ಯತ್ನಿಸಿದ ಯುವಕ

Continue Reading

ಕರ್ನಾಟಕ

Bengaluru News: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ

Bengaluru News: ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರಿನ ಬಾಲ್ಡ್‌ವಿನ್‌ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ ಲಭಿಸಿದೆ.

VISTARANEWS.COM


on

Bengaluru News
Koo

ಬೆಂಗಳೂರು: ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಮೊಹಮ್ಮದ್‌ ಹಸನೈನ್‌ಗೆ ಚಿನ್ನದ ಪದಕ ಲಭಿಸಿದೆ. ಶಿವಮೊಗ್ಗದಲ್ಲಿ ಎ ಝಡ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾರತ, ನೇಪಾಳ, ಭೂತಾನ್, ದುಬೈ, ಶ್ರೀಲಂಕಾ ಮತ್ತು ಬಾಂಗ್ಲಾ ಸೇರಿದಂತೆ 6 ದೇಶದ ಸ್ಪರ್ಧಿಗಳು (Bengaluru News) ಭಾಗವಹಿಸಿದ್ದರು.

ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್‌ (ಎಕೆಎಸ್‌ಕೆಎ) ನ ಕರ್ನಾಟಕ ರಾಜ್ಯ ಕ್ರೀಡಾ ಆಯೋಗದ ಉಪಾಧ್ಯಕ್ಷ ಹಾಗೂ ರಾಷ್ಟ್ರೀಯ ತೀರ್ಪುಗಾರ ರೆನ್ಶಿ ಜೈನ್ ನೇತೃತ್ವದ ಸುಡೋಕನ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಪ್ರತಿನಿಧಿಸಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಹಸನೈನ್ ಅದ್ವಿತೀಯ ಪ್ರದರ್ಶನ ನೀಡಿದರು.

ಇದನ್ನೂ ಓದಿ: Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಸನೈನ್‌ ಬೆಂಗಳೂರಿನ ಬಾಲ್ಡ್‌ವಿನ್‌ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು, ಏಳು ವರ್ಷದ ಕಟಾ ವಿಭಾಗದಲ್ಲಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಈತನ ಕರಾಟೆಯಲ್ಲಿನ ಸಾಧನೆ ಮತ್ತು ಅತ್ಯುತ್ತಮ ರ‍್ಯಾಂಕಿಂಗ್‌ಗಾಗಿ ರೂ. 25,000 ಚೆಕ್‌ ನೀಡಿ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಎರಡು ಬಾರಿ ರಾಜ್ಯ ಚಾಂಪಿಯನ್ ಹಾಗೂ ದಕ್ಷಿಣ ಭಾರತ ಚಾಂಪಿಯನ್ ಪಡೆದಿರುವ ಕರ್ನಾಟಕದ ಅತಿ ಕಿರಿಯ ಎಂಬ ದಾಖಲೆ ಹೊಂದಿರುವ ಹಸನೈನ್‌ಗೆ ಈ ಪುರಸ್ಕಾರ ಲಭಿಸಿದೆ.

ರೆನ್ಶಿ ಝೈನ್ ಅವರ ವಿದ್ಯಾರ್ಥಿಗಳು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ತಂಡವು ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡರು. ಕಟಾ ವಿಭಾಗದಲ್ಲಿ 13 ಚಿನ್ನ, 5 ಬೆಳ್ಳಿ ಮತ್ತು 7 ಕಂಚಿನ ಪದಕಗಳು ಮತ್ತು ಕುಮಿಟೆ ವಿಭಾಗದಲ್ಲಿ 1 ಚಿನ್ನ, 2 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ಬಾಚಿಕೊಂಡಿದ್ದಾರೆ.

ಇದನ್ನೂ ಓದಿ: Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

ಎಕೆಎಸ್‌ಕೆಎ ಅಧ್ಯಕ್ಷ ಅರುಣ್ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಭಾರ್ಗವ್ ರೆಡ್ಡಿ, ಪಂದ್ಯಾವಳಿಯ ಆಯೋಜಕ ಡಾ. ಶಿಹಾನ್ ಎ ಝಡ್ ಮುಹೀಬ್ ಮತ್ತು ಅಧ್ಯಕ್ಷ ಮತ್ತು ಗ್ರ್ಯಾಂಡ್ ಮಾಸ್ಟರ್ ಡಾ. ಹಂಶಿ ಪ್ರವೀಣ್ ರಂಕಾ ಅವರ ಬೆಂಬಲದೊಂದಿಗೆ ಪಂದ್ಯಾವಳಿಗಳು ಜರುಗಿದವು. ಬಾಲ್ಡ್‌ವಿನ್ ಬಾಯ್ಸ್ ಹೈಸ್ಕೂಲ್ ಪ್ರಿನ್ಸಿಪಾಲ್ ಡಾ. ಲೀನಾ ಡೇನಿಯಲ್ ಅವರು ಯುವ ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿದ್ದಾರೆ.

Continue Reading
Advertisement
Paris Olympics 2024
ಕ್ರೀಡೆ27 mins ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಇಂದು ಭಾರತದ ಸ್ಪರ್ಧಿಗಳ ಕಾದಾಟ; ಯಾವ ಪದಕ ನಿರೀಕ್ಷೆ? ಇಲ್ಲಿದೆ ವೇಳಾಪಟ್ಟಿ

Nagara Panchami 2024
ಕರ್ನಾಟಕ28 mins ago

Nagara Panchami 2024: ನಾಗದೋಷ ಎಂದರೇನು? ಇದರ ಪರಿಹಾರ ಕ್ರಮಗಳು ಏನೇನು?

karnataka weather forecast
ಮಳೆ28 mins ago

Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ58 mins ago

Dina Bhavishya : ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ; ವಾತಾವರಣ ಹದಗೆಡದಂತೆ ಜಾಗ್ರತೆ ವಹಿಸಿ

Neeraj Chopra
ಪ್ರಮುಖ ಸುದ್ದಿ5 hours ago

Neeraj Chopra : ನೀರಜ್​ ಚೋಪ್ರಾಗೆ ರಜತ ಪದಕ; ಪಾಕಿಸ್ತಾನದ ನದೀಮ್​ಗೆ ಒಲಿಂಪಿಕ್​ ದಾಖಲೆಯ ಬಂಗಾರ

Prakash Raj
ಕರ್ನಾಟಕ6 hours ago

Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್!

PR Sreejesh
ಪ್ರಮುಖ ಸುದ್ದಿ7 hours ago

PR Sreejesh : ಕಂಚು ಗೆದ್ದ ತಕ್ಷಣ ಗೋಲ್​ ಕೀಪಿಂಗ್​ ಗ್ಲವ್ಸ್​ಗೆ ದೀರ್ಘದಂಡ ನಮಸ್ಕಾರ ಹಾಕಿದ ಶ್ರೀಜೇಶ್​​​

Bengaluru
ಬೆಂಗಳೂರು7 hours ago

Bengaluru: ಬೆಂಗಳೂರಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕಲ್ಲು ಎತ್ತಿಹಾಕಿದ ದುಷ್ಟ; ದುರುಳನಿಗೆ ಬಿತ್ತು ಧರ್ಮದೇಟು!

Aman Sehrawat
ಪ್ರಮುಖ ಸುದ್ದಿ7 hours ago

Aman Sehrawat : ಸೆಮಿ ಫೈನಲ್​ನಲ್ಲಿ ಸೋತ ಅಮನ್​; ನಾಳೆ ಕಂಚಿನ ಪದಕಕ್ಕಾಗಿ ಹೋರಾಟ

Paris Olympics 2024
ಪ್ರಮುಖ ಸುದ್ದಿ8 hours ago

Paris Olympics 2024 : ಕಂಚು ಗೆದ್ದ ಹಾಕಿ ತಂಡದ ಪಂಜಾಬ್​​ನ ಆಟಗಾರರಿಗೆ ತಲಾ 1 ಕೋಟಿ ರೂ. ಬಹುಮಾನ ಪ್ರಕಟ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ12 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ14 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ15 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌