Pushpa 2 New Poster: ಲುಂಗಿಯುಟ್ಟು ಒಂದು ಕೈಯಲ್ಲಿ ಕೊಡಲಿ, ಇನ್ನೊಂದು ಕೈಯಲ್ಲಿ ಗನ್ ಹಿಡಿದು ಅಬ್ಬರಿಸಿದ ಫಹಾದ್ ಫಾಸಿಲ್! ​ - Vistara News

ಟಾಲಿವುಡ್

Pushpa 2 New Poster: ಲುಂಗಿಯುಟ್ಟು ಒಂದು ಕೈಯಲ್ಲಿ ಕೊಡಲಿ, ಇನ್ನೊಂದು ಕೈಯಲ್ಲಿ ಗನ್ ಹಿಡಿದು ಅಬ್ಬರಿಸಿದ ಫಹಾದ್ ಫಾಸಿಲ್! ​

Pushpa 2 New Poster: ಬನ್ವರ್​ ಸಿಂಗ್​ ಶೆಕಾವತ್​ ಎಂಬುದು ಆ ಪಾತ್ರದ ಹೆಸರು. ಹುಟ್ಟುಹಬ್ಬದ ಪ್ರಯುಕ್ತ ಅವರ ಪಾತ್ರದ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ.ರಶ್ಮಿಕಾ ಮಂದಣ್ಣ ಸಹ ನಟ ಫಹಾದ್ ಫಾಸಿಲ್‌ಗೆ ಶುಭ ಹಾರೈಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಪೋಸ್ಟರ್ ಅನ್ನು ಹಂಚಿಕೊಂಡ ರಶ್ಮಿಕಾ, “ನಿಮಗೆ ಜನ್ಮದಿನದ ಶುಭಾಶಯಗಳು ಸರ್” ಎಂದು ಬರೆದಿದ್ದಾರೆ.

VISTARANEWS.COM


on

Pushpa 2 New Poster Fahadh Faasil Birthday Treat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಫಹಾದ್ ಫಾಸಿಲ್ ಆಗಸ್ಟ್‌ 8ರಂದು ತಮ್ಮ 42ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಫಹಾದ್ ಫಾಸಿಲ್ (Pushpa 2 New Poster) ಹುಟ್ಟುಹಬ್ಬಕ್ಕೆ ಪುಷ್ಪಾ 2 ತಂಡ ( Fahadh Faasil’s Birthday ) ಹೊಸ ಪೋಸ್ಟರ್ ಅನಾವರಣಗೊಳಿಸಿದೆ. ಗನ್​, ಕೊಡಲಿ ಹಿಡಿದು ಫಹಾದ್​ ಪಾಸಿಲ್​ ಪೋಸ್​ ನೀಡಿದ್ದಾರೆ. ಬನ್ವರ್​ ಸಿಂಗ್​ ಶೆಕಾವತ್​ ಎಂಬುದು ಆ ಪಾತ್ರದ ಹೆಸರು. ಹುಟ್ಟುಹಬ್ಬದ ಪ್ರಯುಕ್ತ ಅವರ ಪಾತ್ರದ ಫಸ್ಟ್​ ಲುಕ್​ ಬಿಡುಗಡೆ ಮಾಡಲಾಗಿದೆ.

ಪೋಸ್ಟರ್‌ನಲ್ಲಿ ಫಹಾದ್ ಫಾಸಿಲ್ ಲುಂಗಿ ಧರಿಸಿರುವುದನ್ನು ಕಾಣಬಹುದು. ಒಂದು ಕೈಯಲ್ಲಿ ಪಿಸ್ತೂಲು ಮತ್ತು ಇನ್ನೊಂದು ಕೈಯಲ್ಲಿ ಗುದ್ದಲಿ ಹಿಡಿದಿರುವುದನ್ನು ಕಾಣಬಹುದು. ರಶ್ಮಿಕಾ ಮಂದಣ್ಣ ಸಹ ನಟ ಫಹಾದ್ ಫಾಸಿಲ್‌ಗೆ ಶುಭ ಹಾರೈಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಪೋಸ್ಟರ್ ಅನ್ನು ಹಂಚಿಕೊಂಡ ರಶ್ಮಿಕಾ, “ನಿಮಗೆ ಜನ್ಮದಿನದ ಶುಭಾಶಯಗಳು ಸರ್” ಎಂದು ಬರೆದಿದ್ದಾರೆ.

ಡಿಸೆಂಬರ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಕೆಲವು ದಿನಗಳ ಹಿಂದೆ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ತೆಗೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಕೆಲವರು ಮೈತ್ರಿ ಮೂವಿ ಮೇಕರ್ಸ್‌ಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಕೇಳಿದ್ದಾರೆ. ಒಬ್ಬರು ʻನೀವು ವೀಡಿಯೊವನ್ನು ಏಕೆ ಲೀಕ್ ಮಾಡುತ್ತಿದ್ದೀರಿʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ದಯವಿಟ್ಟು ವಿಡಿಯೊವನ್ನು ಡಿಲಿಟ್‌ ಮಾಡಿ ಎಂದು ಕಮೆಂಟ್‌ ಮಾಡಿದ್ದಾರೆ.ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ.

ಇದನ್ನೂ ಓದಿ; Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Double iSmart: ʻಡಬಲ್ ಇಸ್ಮಾರ್ಟ್ ʼಸಿನಿಮಾದ ಬಿಗ್ ಬುಲ್ ಸಾಂಗ್ ಔಟ್‌!

Double iSmart: ಭಾಸ್ಕರಭಟ್ಲ ರವಿಕುಮಾರ್ ಅವರ ಸಾಹಿತ್ಯವು ಬಿಗ್ ಬುಲ್ ಪಾತ್ರವನ್ನು ಪರಿಚಯಸಿದೆ. ಪೃಧ್ವಿ ಚಂದ್ರ ಮತ್ತು ಸಂಜನಾ ಕಲ್ಮಂಜೆ ಅವರ ಗಾಯನವು ಹಾಡಿಗೆ ಮತ್ತಷ್ಟು ಶಕ್ತಿಯನ್ನು ತುಂಬಿದೆ. ಮಣಿ ಶರ್ಮಾ ಸಂಗೀತ ಒದಗಿಸಿದ್ದಾರೆ.

VISTARANEWS.COM


on

Double iSmart bull bull song Out
Koo

ಬೆಂಗಳೂರು: ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ʻಡಬಲ್ ಇಸ್ಮಾರ್ಟ್ʼ ಥಿಯೇಟ್ರಿಕಲ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಉಸ್ತಾದ್ ರಾಮ್ ಪೋತಿನೇನಿ ಮತ್ತು ಡೈನಾಮಿಕ್ ಡೈರೆಕ್ಟರ್ ಪೂರಿ ಜಗನ್ನಾಥ್ ಜೋಡಿ ಚಿತ್ರವು ಆಗಸ್ಟ್ 15 ರಂದು ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

ಇಂದು, ಚಿತ್ರತಂಡ ಬಿಗ್ ಬುಲ್ ಎಂಬ ವಿಶೇಷ ಹಾಡನ್ನು ಬಿಡುಗಡೆ ಮಾಡಿದೆ. ಪೂರಿ ಜಗನ್ನಾಥ್ ಅವರು ತಮ್ಮ ಖಳನಾಯಕರನ್ನು ಅಷ್ಟೇ ಶಕ್ತಿಶಾಲಿ ಪಾತ್ರಗಳಲ್ಲಿ ಪ್ರಸ್ತುತಪಡಿಸಲು ಹೆಸರುವಾಸಿಯಾಗಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ, ಅವರು ಡಬಲ್ ಇಸ್ಮಾರ್ಟ್ ನಲ್ಲಿ ಮುಖ್ಯ ಖಳನಾಯಕನ ಮೇಲೆ ಹಾಡನ್ನು ತಯಾರಿಸಿದ್ದಾರೆ. ಬಿಗ್ ಬುಲ್ ಪಾತ್ರವನ್ನು ಸಂಜಯ್ ದತ್ ನಿರ್ವಹಿಸಿದ್ದಾರೆ.

ಭಾಸ್ಕರಭಟ್ಲ ರವಿಕುಮಾರ್ ಅವರ ಸಾಹಿತ್ಯವು ಬಿಗ್ ಬುಲ್ ಪಾತ್ರವನ್ನು ಪರಿಚಯಸಿದೆ. ಪೃಧ್ವಿ ಚಂದ್ರ ಮತ್ತು ಸಂಜನಾ ಕಲ್ಮಂಜೆ ಅವರ ಗಾಯನವು ಹಾಡಿಗೆ ಮತ್ತಷ್ಟು ಶಕ್ತಿಯನ್ನು ತುಂಬಿದೆ. ಮಣಿ ಶರ್ಮಾ ಸಂಗೀತ ಒದಗಿಸಿದ್ದಾರೆ.

ಇದನ್ನೂ ಓದಿ: Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

ಡಬಲ್ ಇಸ್ಮಾರ್ಟ್ ಚಿತ್ರ ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸಿದ್ದಾರೆ. ಸ್ಯಾಮ್ ಕೆ ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಕ್ಯಾಮೆರಾ ಹಿಡಿದಿದ್ದಾರೆ.

ಸ್ವಾತಂತ್ರ್ಯ ದಿನದಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರವು ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಟಾಲಿವುಡ್

Naga Chaitanya: ಸಮಂತಾಗೆ ಪ್ರಪೋಸ್‌ ಮಾಡಿದ ದಿನವೇ ಎಂಗೇಜ್‌ ಆದ ನಾಗಚೈತನ್ಯ! ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಂಡ್ರಾ ನಟ?

Naga Chaitanya: 37 ವರ್ಷದ ನಟ ನಾಗ ಚೈತನ್ಯ ಅವರು 32 ವರ್ಷದ ಶೋಭಿತಾಗೆ ತಮ್ಮ ಹೈದರಾಬಾದ್ನ ಮನೆಯಲ್ಲಿ ಉಂಗುರ ತೊಡಿಸಿದ್ದಾರೆ. ಈ ಜೋಡಿ ನಡುವೆ 5 ವರ್ಷಗಳ ಏಜ್ ಗ್ಯಾಪ್ ಇದೆ. ನಾಗ ಚೈತನ್ಯಗಿಂತ ಶೋಭಿತಾ 5 ವರ್ಷ ಚಿಕ್ಕವರಾಗಿದ್ದಾರೆ.

VISTARANEWS.COM


on

Naga Chaitanya got engaged on the day he proposed to Samantha
Koo

ಬೆಂಗಳೂರು: ಆಗಸ್ಟ್ 8ರ ದಿನಾಂಕಕ್ಕೂ ಸಮಂತಾ ಮತ್ತು ನಾಗಚೈತನ್ಯಗೂ (Naga Chaitanya) ನಂಟಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ಕೆಲ ವರ್ಷಗಳ ಹಿಂದೆ ‘ಏ ಮಾಯಾ ಚೇಸಾವೆ’ ಸಿನಿಮಾ ಮಾಡುವಾಗ ಆ.8ರ ದಿನಾಂಕದಂದು ನಾಗಚೈತನ್ಯಗೆ ಸಮಂತಾ ಪ್ರೇಮ ನಿವೇದನೆ ಮಾಡಿದ್ದರು. ಹಾಗಾಗಿ ಈ ದಿನ ಇಬ್ಬರ ಪಾಲಿಗೆ ವಿಶೇಷವಾಗಿತ್ತು. ಈಗ ಬೇಕಂತಲೇ ಮಾಜಿ ಪತ್ನಿ ವಿರುದ್ಧ ಸೇಡು ತೀರಿಸಿಕೊಳ್ಳಲು ನಟ ಆಗಸ್ಟ್‌ 8ರಂದೇ ಶೋಭಿತಾ ಧೂಳಿಪಾಲ ಜತೆ ಎಂಗೇಜ್‌ ಆಗಿದ್ದಾರೆ ಎನ್ನಲಾಗಿದೆ.

ನಾಗ ಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜೋಡಿ ಹೈದರಾಬಾದ್‌ನಲ್ಲಿ ನಾಗಾರ್ಜುನ ಅವರ ಮನೆಯಲ್ಲಿ ಎಂಗೇಜ್‌ಮೆಂಟ್‌ ಮಾಡಿಕೊಂಡಿದೆ. ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಸೂಪರ್‌ಸ್ಟಾರ್ ನಾಗಾರ್ಜುನ ಹಂಚಿಕೊಂಡು ಜೋಡಿಗೆ ಆಶೀರ್ವದಿಸಿದರು.

37 ವರ್ಷದ ನಟ ನಾಗ ಚೈತನ್ಯ ಅವರು 32 ವರ್ಷದ ಶೋಭಿತಾಗೆ ತಮ್ಮ ಹೈದರಾಬಾದ್ನ ಮನೆಯಲ್ಲಿ ಉಂಗುರ ತೊಡಿಸಿದ್ದಾರೆ. ಈ ಜೋಡಿ ನಡುವೆ 5 ವರ್ಷಗಳ ಏಜ್ ಗ್ಯಾಪ್ ಇದೆ. ನಾಗ ಚೈತನ್ಯಗಿಂತ ಶೋಭಿತಾ 5 ವರ್ಷ ಚಿಕ್ಕವರಾಗಿದ್ದಾರೆ.

ಇದನ್ನೂ ಓದಿ: Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

ಮೇ 2022ರಲ್ಲಿ, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ನಟಿ ಚಿತ್ರದ ಪ್ರಚಾರ ಮಾತ್ರವಲ್ಲದೆ ಮೇ 31 ರಂದು ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ನಾಗ ಚೈತನ್ಯ ಅವರು ಆಚರಣೆಯ ಭಾಗವಾಗಿದ್ದರು. ಬಳಿಕ ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ವಕೇಶನ್‌ಗೆ ಹೋಗಿರುವ ಹಲವಾರು ಫೋಟೊಗಳು ವೈರಲ್‌ ಆಗಿವೆ. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Continue Reading

ಸಿನಿಮಾ

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Naga Chaitanya: ನಾಗ ಚೈತನ್ಯ ಈ ಹಿಂದೆ ಸಮಂತಾ ಅವರೊಂದಿಗಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು, ಇದರಲ್ಲಿ ಸಮಂತಾ ಜತೆ ಇದ್ದ ಕೆಲವು ಫೋಟೊಗಳು, ಮನೆಯ ಚಿತ್ರಗಳು ಇತ್ತು. ಮಜಿಲಿ ತಂಡದೊಂದಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ.

VISTARANEWS.COM


on

Naga Chaitanya deleated ex samantha
Koo

ಬೆಂಗಳೂರು: ನಾಗ ಚೈತನ್ಯ (Naga Chaitanya) ಅವರು ಶೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಮಾಜಿ ಪತ್ನಿ ಸಮಂತಾ ರುತ್ ಪ್ರಭು ಜತೆ ಇರುವ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ನಾಗ ಚೈತನ್ಯ ಮತ್ತು ಶೋಭಿತಾ ಗುರುವಾರ ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡರು. ಜೋಡಿಯ ನಿಶ್ಚಿತಾರ್ಥದ ಫೋಟೋಗಳನ್ನು ನಾಗಾರ್ಜುನ ಅವರು ಹಂಚಿಕೊಂಡಿದ್ದಾರೆ

ನಾಗ ಚೈತನ್ಯ ಈ ಹಿಂದೆ ಸಮಂತಾ ಅವರೊಂದಿಗಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು, ಇದರಲ್ಲಿ ಸಮಂತಾ ಜತೆ ಇದ್ದ ಕೆಲವು ಫೋಟೊಗಳು, ಮನೆಯ ಚಿತ್ರಗಳು ಇತ್ತು. ಮಜಿಲಿ ತಂಡದೊಂದಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ. ಮಜಿಲಿ ಚಿತ್ರದ ಪೋಸ್ಟರ್ ಕೂಡ ಇದೆ. ಇದೀಗ ವರದಿಯ ಪ್ರಕಾರ ರ ಟೈಮ್‌ಲೈನ್‌ನಲ್ಲಿ ಇವರಿಬ್ಬರ ಪೋಸ್ಟ್‌ಗಳು ಮಾತ್ರ ಇವೆ.

ಇದನ್ನೂ ಓದಿ: Kannada New Movie: ‘ಮರ್ಫಿ’ ಸಿನಿಮಾದ ಹಾಡು ಬಿಡುಗಡೆ; ಸಮಯ ಸ್ಮರಿಸಿದ ಪ್ರಭು ಮುಂಡ್ಕೂರ್!

ಮೇ 2022ರಲ್ಲಿ, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ನಟಿ ಚಿತ್ರದ ಪ್ರಚಾರ ಮಾತ್ರವಲ್ಲದೆ ಮೇ 31 ರಂದು ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ನಾಗ ಚೈತನ್ಯ ಅವರು ಆಚರಣೆಯ ಭಾಗವಾಗಿದ್ದರು. ಬಳಿಕ ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ವಕೇಶನ್‌ಗೆ ಹೋಗಿರುವ ಹಲವಾರು ಫೋಟೊಗಳು ವೈರಲ್‌ ಆಗಿವೆ. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

37 ವರ್ಷದ ನಟ ನಾಗ ಚೈತನ್ಯ ಅವರು 32 ವರ್ಷದ ಶೋಭಿತಾಗೆ ತಮ್ಮ ಹೈದರಾಬಾದ್ನ ಮನೆಯಲ್ಲಿ ಉಂಗುರ ತೊಡಿಸಿದ್ದಾರೆ. ಈ ಜೋಡಿ ನಡುವೆ  5 ವರ್ಷಗಳ ಏಜ್ ಗ್ಯಾಪ್ ಇದೆ. ನಾಗ ಚೈತನ್ಯಗಿಂತ ಶೋಭಿತಾ 5 ವರ್ಷ ಚಿಕ್ಕವರಾಗಿದ್ದಾರೆ.

ಅಂತಿಮವಾಗಿ, ನಾಗಾರ್ಜುನ ಎಕ್ಸ್‌ನಲ್ಲಿ ಸುದ್ದಿಯನ್ನು ದೃಢಪಡಿಸಿದ್ದಾರೆ. ಫೋಟೊಗಳನ್ನು ಹಂಚಿಕೊಂಡು, “ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥ ಬೆಳಗ್ಗೆ 9:42ಕ್ಕೆ ಶೋಭಿತಾ ಧೂಳಿಪಾಲ ಜತೆ ನೆರವೇರಿದೆ. ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ! 8.8.8 ಅನಂತ ಪ್ರೀತಿಯ ಆರಂಭʼʼಎಂದು ಬರೆದುಕೊಂಡಿದ್ದಾರೆ.

Continue Reading

ಟಾಲಿವುಡ್

Naga Chaitanya: ನಾಗ ಚೈತನ್ಯ- ಶೋಭಿತಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Naga Chaitanya: ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. 

VISTARANEWS.COM


on

Naga Chaitanya Sobhita Love Story REVEALED age gap
Koo

ಬೆಂಗಳೂರು: ನಾಗ ಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜೋಡಿ ಹೈದರಾಬಾದ್‌ನಲ್ಲಿ ನಾಗಾರ್ಜುನ ಅವರ ಮನೆಯಲ್ಲಿ ಎಂಗೇಜ್‌ಮೆಂಟ್‌ ಮಾಡಿಕೊಂಡಿದೆ. ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಸೂಪರ್‌ಸ್ಟಾರ್ ನಾಗಾರ್ಜುನ ಹಂಚಿಕೊಂಡು ಜೋಡಿಗೆ ಆಶೀರ್ವದಿಸಿದರು. ಆದರೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಎಂಬ ಕುತೂಹಲ ಫ್ಯಾನ್ಸ್‌ಗೆ ಇದೆ. ತಿಳಿಯಲು ಮುಂದೆ ಓದಿ.

ಮೇ 2022ರಲ್ಲಿ, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ನಟಿ ಚಿತ್ರದ ಪ್ರಚಾರ ಮಾತ್ರವಲ್ಲದೆ ಮೇ 31 ರಂದು ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ನಾಗ ಚೈತನ್ಯ ಅವರು ಆಚರಣೆಯ ಭಾಗವಾಗಿದ್ದರು. ಬಳಿಕ ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ವಕೇಶನ್‌ಗೆ ಹೋಗಿರುವ ಹಲವಾರು ಫೋಟೊಗಳು ವೈರಲ್‌ ಆಗಿವೆ. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

37 ವರ್ಷದ ನಟ ನಾಗ ಚೈತನ್ಯ ಅವರು 32 ವರ್ಷದ ಶೋಭಿತಾಗೆ ತಮ್ಮ ಹೈದರಾಬಾದ್ನ ಮನೆಯಲ್ಲಿ ಉಂಗುರ ತೊಡಿಸಿದ್ದಾರೆ. ಈ ಜೋಡಿ ನಡುವೆ  5 ವರ್ಷಗಳ ಏಜ್ ಗ್ಯಾಪ್ ಇದೆ. ನಾಗ ಚೈತನ್ಯಗಿಂತ ಶೋಭಿತಾ 5 ವರ್ಷ ಚಿಕ್ಕವರಾಗಿದ್ದಾರೆ.

ಅಂತಿಮವಾಗಿ, ನಾಗಾರ್ಜುನ ಎಕ್ಸ್‌ನಲ್ಲಿ ಸುದ್ದಿಯನ್ನು ದೃಢಪಡಿಸಿದ್ದಾರೆ. ಫೋಟೊಗಳನ್ನು ಹಂಚಿಕೊಂಡು, “ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥ ಬೆಳಗ್ಗೆ 9:42ಕ್ಕೆ ಶೋಭಿತಾ ಧೂಳಿಪಾಲ ಜತೆ ನೆರವೇರಿದೆ. ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ! 8.8.8 ಅನಂತ ಪ್ರೀತಿಯ ಆರಂಭʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. 

Continue Reading
Advertisement
Oats or Quinoa
ಆರೋಗ್ಯ33 mins ago

Oats or Quinoa: ಓಟ್ಸ್‌, ಕಿನೊವಾ- ಇವೆರೆಡರಲ್ಲಿ ಯಾವುದು ಬೆಸ್ಟ್?

Waqf Bill
ದೇಶ55 mins ago

Waqf Bill: ವಕ್ಫ್‌ ಕಾಯ್ದೆಗೆ ತಿದ್ದುಪಡಿ; 21 ಸದಸ್ಯರ ಸಮಿತಿ ರಚಿಸಿದ ಕೇಂದ್ರ, ಓವೈಸಿ, ತೇಜಸ್ವಿ ಸೂರ್ಯಗೆ ಸ್ಥಾನ

Neeraj Chopra
ಕ್ರೀಡೆ55 mins ago

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

LOve case
ಬಾಗಲಕೋಟೆ60 mins ago

Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

Muda Scam
ಪ್ರಮುಖ ಸುದ್ದಿ1 hour ago

Muda Scam: ಸಿಎಂ ವಿರುದ್ಧದ ಖಾಸಗಿ ದೂರಿನ ಅರ್ಜಿ ವಿಚಾರಣೆ; ಆ.13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Israel-Hamas War
ವಿದೇಶ1 hour ago

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Karnataka Nataka Akademi Award
ಉತ್ತರ ಕನ್ನಡ2 hours ago

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Duniya Vijay bheema movie review
ಸ್ಯಾಂಡಲ್ ವುಡ್2 hours ago

Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

Bengaluru power cut
ಬೆಂಗಳೂರು2 hours ago

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Kannada New Movie
ಬೆಂಗಳೂರು2 hours ago

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌