Deepika Padukone: ಡಿನ್ನರ್ ಡೇಟ್‌ನಲ್ಲಿ ಗುಳಿ ಕೆನ್ನೆ ಸುಂದರಿ ; ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಫಿದಾ! - Vistara News

ಬಾಲಿವುಡ್

Deepika Padukone: ಡಿನ್ನರ್ ಡೇಟ್‌ನಲ್ಲಿ ಗುಳಿ ಕೆನ್ನೆ ಸುಂದರಿ ; ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಫಿದಾ!

Deepika Padukone: ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿದ್ದಂತೆ, ಹಲವಾರು ಅಭಿಮಾನಿಗಳು ಸೆಲ್ಫಿಗಾಗಿ ದೀಪಿಕಾ ಅವರಿಗೆ ಒತ್ತಾಯಿಸಿದರು. ನಟ ತನ್ನ ಕಾರಿನ ಕಡೆಗೆ ಹೋಗುತ್ತಿರುವಾಗ ಫಾ ಅವರೊಂದಿಗೆ ನಗುತ್ತಿರುವ ಮತ್ತು ಸಂವಹನ ನಡೆಸುತ್ತಿರುವುದು ಕಂಡುಬಂದಿತು.

VISTARANEWS.COM


on

Deepika Padukone looks stunning as she steps out for dinner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ದೀಪಿಕಾ ಪಡುಕೋಣೆ (Deepika Padukone) ಗುರುವಾರ ಸಂಜೆ ಮುಂಬೈನಲ್ಲಿ ಡಿನ್ನರ್‌ ನೈಟ್‌ನಲ್ಲಿ ಕಂಡಿದ್ದಾರೆ. ನಟಿಯ ಹಲವಾರು ಫೋಟೊ ಮತ್ತು ವೀಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಟಿ ಏಕಾಂಗಿಯಾಗಿ ರೆಸ್ಟೋರೆಂಟ್‌ನಿಂದ ಹೊರಬರುತ್ತಿರುವುದು ಕಂಡುಬಂದಿದೆ.

ದೀಪಿಕಾ ಅವರು ಡಿನ್ನರ್‌ ನೈಟ್‌ಗೆ ಹಸಿರು ಹೂವಿನ ಸೂಟ್, ಬಿಳಿ ಪ್ಯಾಂಟ್ ಮತ್ತು ಕಂದು ಬಣ್ಣದ ಹೀಲ್ಸ್‌ನಲ್ಲಿ ಕಾಣಿಸಿಕೊಂಡರು. ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿದ್ದಂತೆ, ಹಲವಾರು ಅಭಿಮಾನಿಗಳು ಸೆಲ್ಫಿಗಾಗಿ ದೀಪಿಕಾ ಅವರಿಗೆ ಒತ್ತಾಯಿಸಿದರು. ನಟ ತನ್ನ ಕಾರಿನ ಕಡೆಗೆ ಹೋಗುತ್ತಿರುವಾಗ ಫಾ ಅವರೊಂದಿಗೆ ನಗುತ್ತಿರುವ ಮತ್ತು ಸಂವಹನ ನಡೆಸುತ್ತಿರುವುದು ಕಂಡುಬಂದಿತು. ಕಾರಿನೊಳಗೆ ಕಾಲಿಡುವ ಮೊದಲು, ದೀಪಿಕಾ ಪಾಪರಾಜಿಗೆ “ಧನ್ಯವಾದ” ಎಂದು ಹೇಳಿದರು.

ನಟಿಯ ಲುಕ್‌ ಕಂಡು ಫ್ಯಾನ್ಸ್‌ ಕೂಡ ಮುಚ್ಚುಗೆ ವ್ಯಕತಪಡಿಸುತ್ತಿದ್ದಾರೆ. “ದೀಪಿಕಾ, ನಿಮ್ಮ ಸೌಂದರ್ಯವು ಕೆಲವು ಜನರನ್ನು ಕೊಲ್ಲುತ್ತಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ತಾಯಿಯಾಗುವ ಸಂಭ್ರಮದಲ್ಲಿರುವ ನಟಿ ದೀಪಿಕಾ ಪಡುಕೋಣೆ ತನ್ನ ಬೇಬಿ ಬಂಪ್ ಅನ್ನು ತುಂಬಾ ವಿಶೇಷವಾದ ಲುಕ್‌ನಲ್ಲಿ ತೋರಿಸಲು ಪ್ರಾರಂಭಿಸಿದ್ದಾರೆ. ಹಾಗೇ ಗರ್ಭಿಣಿಯರು ತಮ್ಮ ಬೇಬಿ ಬಂಪ್‌ನಲ್ಲಿ ಯಾವ ರೀತಿ ಫ್ಯಾಷನ್ ಡ್ರೆಸ್ ಧರಿಸಬಹುದು ಎಂದು ತೋರಿಸಿಕೊಡುತ್ತಿದ್ದಾರೆ.

ಇದನ್ನೂ ಓದಿ: Deepika Padukone: ದೀಪಿಕಾ ಜತೆ ಹಸಿ ಬಿಸಿ ದೃಶ್ಯಗಳನ್ನು ನಿಭಾಯಿಸಿದ್ದು ಅಷ್ಟು ಸುಲಭವಾಗಿರಲಿಲ್ಲ ಎಂದ ಸಿದ್ಧಾಂತ್ ಚತುರ್ವೇದಿ!

ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.ಸಿನಿಮಾ ವಿಚಾರಕ್ಕೆ ಬಂದರೆ ದೀಪಿಕಾ ಅವರು ರೋಹಿತ್ ಶೆಟ್ಟಿ ಅವರ ʻಸಿಂಗಮ್ ಅಗೇನ್‌ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಜಯ್ ದೇವಗನ್, ಕರೀನಾ ಕಪೂರ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಅರ್ಜುನ್ ಕಪೂರ್ ಜೊತೆಗೆ ಲೇಡಿ ಸಿಂಗಮ್ ಪಾತ್ರಕ್ಕೆ ದೀಪಿಕಾ ಹೆಜ್ಜೆ ಹಾಕಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Laapataa Ladies: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ‘ಲಾಪತಾ ಲೇಡೀಸ್’!

Laapataa Ladies: ವರದಿಯ ಪ್ರಕಾರ ಭಾರತದ ಮುಖ್ಯ ನ್ಯಾಯಾಧೀಶರು ಸಹ ಹಾಜರಿರುತ್ತಾರೆ. ಸಂಜೆ 4:15 ರಿಂದ 6:20 ರವರೆಗೆ ನ್ಯಾಯಾಲಯದ ಸಮಯದ ನಂತರ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ವರದಿಯಾಗಿದೆ. ನಂತರ ಆಮೀರ್ ಖಾನ್ ಮತ್ತು ಕಿರಣ್ ರಾವ್ ಅವರೊಂದಿಗೆ ಸಂವಾದ ನಡೆಯಲಿದೆ.

VISTARANEWS.COM


on

Laapataa Ladies to be screened in Supreme Court
Koo

ಬೆಂಗಳೂರು: ಕಿರಣ್ ಅವರ ರಾವ್ ನಿರ್ದೇಶನದ, ‘ಲಾಪತಾ ಲೇಡೀಸ್’ (Laapataa Ladies) ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳಲಿದೆ. ನಿರ್ದೇಶಕರು ಹಾಗೂ ನಿರ್ಮಾಪಕ ಆಮೀರ್ ಖಾನ್ ಸಹ ಪ್ರದರ್ಶನದಲ್ಲಿ ಹಾಜರಿರುತ್ತಾರೆ. ಬಳಿಕ ಪ್ರೇಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ವರದಿಯ ಪ್ರಕಾರ ಭಾರತದ ಮುಖ್ಯ ನ್ಯಾಯಾಧೀಶರು ಸಹ ಹಾಜರಿರುತ್ತಾರೆ. ಸಂಜೆ 4:15 ರಿಂದ 6:20 ರವರೆಗೆ ನ್ಯಾಯಾಲಯದ ಸಮಯದ ನಂತರ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ವರದಿಯಾಗಿದೆ. ನಂತರ ಆಮೀರ್ ಖಾನ್ ಮತ್ತು ಕಿರಣ್ ರಾವ್ ಅವರೊಂದಿಗೆ ಸಂವಾದ ನಡೆಯಲಿದೆ.

ಲಿಂಗ ಸಮಾನತೆಯ ವಿಷಯವನ್ನು ಆಧರಿಸಿದ ‘ಲಾಪತಾ ಲೇಡೀಸ್’ ಚಲನಚಿತ್ರವನ್ನು ಶುಕ್ರವಾರ, 9 ರಂದು ಪ್ರದರ್ಶಿಸಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖವಾಗಿದೆ.

ಆಮೀರ್ ಖಾನ್ ಪ್ರೊಡಕ್ಷನ್ (APK) ಮತ್ತು ಕಿರಣ್ ಅವರ ಕಿಂಡ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ʻಲಾಪತಾ ಲೇಡೀಸ್‌ʼ (Laapataa Ladies) ಇತ್ತೀಚೆಗೆ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. 14 ವರ್ಷಗಳ ಬ್ರೇಕ್‌ ನಂತರ ಚಿತ್ರವನ್ನು ನಿರ್ದೇಶಿಸಿದ್ದಾರೆ ಕಿರಣ್. ಸಿನಿಮಾ ಬಗ್ಗೆ ಮೆಚ್ಚುಗೆ ಕೇಳಿಬಂದಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಈ ಸಿನಿಮಾವನ್ನು ಥಿಯೇಟರ್​ನಲ್ಲಿ ನೋಡಿರಲಿಲ್ಲ. . ಸ್ನೇಹಾ ದೇಸಾಯಿ ಬರೆದು ಆಮೀರ್ ಖಾನ್ ನಿರ್ಮಿಸಿದ ‘ಲಾಪತಾ ಲೇಡೀಸ್’ ಬಿಪ್ಲಬ್ ಗೋಸ್ವಾಮಿಯವರ ಕಾದಂಬರಿಯನ್ನು ಆಧರಿಸಿದೆ. ಮಾರ್ಚ್ 1 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು.ಮಹಿಳಾ ಪ್ರಧಾನ ವಸ್ತುವಿಷಯವನ್ನು ‘ಲಾಪತಾ ಲೇಡೀಸ್​’ ಚಿತ್ರದಲ್ಲಿದೆ. ಗಂಭೀರವಾದ ವಿಷಯವಾದರೂ ಕೂಡ ಇಡೀ ಸಿನಿಮಾವನ್ನು ಹಾಸ್ಯದ ಧಾಟಿಯಲ್ಲಿ ಕಟ್ಟಿಕೊಡಲಾಗಿದೆ. ಎಮೋಷನಲ್​ ದೃಶ್ಯಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ.

ಇದನ್ನೂ ಓದಿ: Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

ಲಾಪತಾ ಲೇಡೀಸ್’ ಚಿತ್ರವನ್ನು ಕಿರಣ್ ರಾವ್ ಅವರು ನಿರ್ದೇಶಿಸಿದ್ದಾರೆ. ಆಮೀರ್ ಖಾನ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ರವಿ ಕಿಶನ್ ಜತೆಗೆ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಸ್ಪರ್ಶ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸ್ನೇಹಾ ದೇಸಾಯಿ ಬರೆದಿದ್ದರು. ಇದೀಗ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಇದೆ.

Continue Reading

ಕರ್ನಾಟಕ

Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

Thangalaan Movie: ಜ್ಞಾನವೇಲ್ ರಾಜ್ ನಿರ್ಮಾಣದ ಪಾ. ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಆಧರಿಸಿ ಈ ಚಿತ್ರ ಮಾಡಲಾಗಿದೆ. ಈ ಸಿನಿಮಾದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮತ್ತಿತರರು ನಟಿಸಿದ್ದಾರೆ.

VISTARANEWS.COM


on

Thangalan Movie
Koo

ಬೆಂಗಳೂರು: ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಿದ್ದಾರೆ “ಕಬಾಲಿ” ಖ್ಯಾತಿಯ ನಿರ್ದೇಶಕ ಪಾ ರಂಜಿತ್‍. ಈ ಚಿತ್ರದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮುಂತಾದವರು ನಟಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ “ಅನ್ನಿಯನ್”, “ಪಿತಾಮಗನ್” ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು. ನಾವು ನಮಗೆ ಗೊತ್ತಿಲ್ಲದ ಪಾತ್ರಗಳಾಗುವುದೇ ನಿಜವಾದ ಕಷ್ಟ. ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು? ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು. ಈ ಚಿತ್ರಕ್ಕಾಗಿ ಒಂದು ಶತಕದ ಹಿಂದಕ್ಕೆ ಹೋಗುವಂತಾಯಿತು ಎಂದು ತಿಳಿಸಿದರು.

ಇದನ್ನೂ ಓದಿ: Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಹಂಚಿಕೊಂಡರು.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವುದಕ್ಕೆ ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರʼ ದೊಡ್ಡ ಸ್ಫೂರ್ತಿ ಎಂದು ತಿಳಿಸಿದ ಚಿಯಾನ್ ವಿಕ್ರಮ್, ಉತ್ತಮ ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎನ್ನುವುದನ್ನು ಆ ಚಿತ್ರ ತೋರಿಸಿತು ಎಂದರು.

ಇದನ್ನೂ ಓದಿ: Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕ ಪಾ. ರಂಜಿತ್ ವಿವರಿಸಿದರು. “ನಾನು ಮತ್ತು ವರಲಕ್ಷ್ಮೀ” ಕನ್ನಡ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ ನಟಿ ಮಾಳವಿಕ ಮೋಹನನ್ “ತಂಗಲಾನ್” ಚಿತ್ರದ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಹಾಲಿವುಡ್ ನಟ ಡೇನಿಯಲ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಈ ಚಿತ್ರ ಪ್ರತಿಷ್ಠಿತ ಕೆ.ವಿ‌.ಎನ್ ಸಂಸ್ಥೆಯ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ‌.

Continue Reading

ಸಿನಿಮಾ

Kangana Ranaut: ವಿನೇಶ್‌ಗೆ ಅಭಿನಂದಿಸಿ ವ್ಯಂಗ್ಯದ ಪೋಸ್ಟ್ ಮಾಡಿದ ಬೆನ್ನಲ್ಲೇ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದ ಕಂಗನಾ ರಣಾವತ್‌!

Kangana Ranaut: ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

VISTARANEWS.COM


on

Kangana Reacts to Vinesh Phogat's Olympics Disqualification
Koo

ಬೆಂಗಳೂರು: ಪ್ಯಾರಿಸ್ 2024ರ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಿಂದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ನಂತರ ನಟಿ-ರಾಜಕಾರಣಿ ಕಂಗನಾ ರಣಾವತ್‌ (Kangana Ranaut) ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಿದ್ದು, ಕೋಟ್ಯಂತರ ಭಾರತೀಯರ ಚಿನ್ನದ ಪದಕದ ಕನಸಿಗೆ ಕೊಳ್ಳಿ ಇಟ್ಟಂತಾಗಿದೆ.  ಇದೀಗ ಈ ಬಗ್ಗೆ ಕಂಗನಾ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ಸುದ್ದಿಗೆ ಪ್ರತಿಕ್ರಿಯಿಸಿದ ಕಂಗನಾ ರಣಾವತ್‌ ಇನ್‌ಸ್ಟಾದಲ್ಲಿ ʻʻಸಿಂಹಿಣಿʼʼಎಂದು ಕರೆದಿದ್ದಾರೆ. ʻʻಅಳಬೇಡ, ವಿನೇಶ್, ಇಡೀ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ” ಎಂದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ವಿನೇಶ್‌ರನ್ನು ಸಾಂತ್ವನಗೊಳಿಸುವ ಭಾರತದ ನಕ್ಷೆಯಗ್ರಾಫಿಕ್ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ ಕಂಗನಾ.

ಇದಕ್ಕೂ ಮೊದಲು ಕಂಗನಾ ಇನ್‌ಸ್ಟಾ ಸ್ಟೋರಿಯಲ್ಲಿ, ‘ಭಾರತಕ್ಕೆ ಮೊದಲ ಚಿನ್ನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತಿದ್ದೇನೆ. ವಿನೇಶ್ ಫೋಗಟ್ ಒಮ್ಮೆ ಚಳವಳಿಯಲ್ಲಿ ಭಾಗವಹಿಸಿದ್ದರು, ಅದರಲ್ಲಿ ಅವರು ‘ಮೋದಿ ನಿಮ್ಮ ಸಮಾಧಿಯನ್ನು ಅಗೆಯುತ್ತಾರೆ’ ಎಂದು ಹೇಳಿದ್ದರು. ಇದರ ಹೊರತಾಗಿಯೂ ದೇಶವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ. ಅವರು ಅತ್ಯುತ್ತಮ ತರಬೇತಿ, ತರಬೇತುದಾರರು ಮತ್ತು ಸೌಲಭ್ಯಗಳನ್ನು ಪಡೆದರು. ಇದು ಪ್ರಜಾಪ್ರಭುತ್ವದ ಸೌಂದರ್ಯ ಮತ್ತು ಉತ್ತಮ ನಾಯಕ’ ಎಂದು ಹೇಳಿದ್ದರು. ಈ ಹೇಳಿಕೆಗೆ ಸಖತ್‌ ಚರ್ಚೆಯೂ ಆಗಿತ್ತು.

ಇದನ್ನೂ ಓದಿ: Actor Dhanush: ಧನುಷ್ ನಟನೆಯ ʻ50ʼನೇ ಸಿನಿಮಾ ಒಟಿಟಿ ಬಿಡುಗಡೆ ಯಾವಾಗ, ಎಲ್ಲಿ?

ಕಳೆದ ವರ್ಷ, 29 ವರ್ಷದ ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ, ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದೇ ಇದ್ದಾಗ ನಿರಂತರವಾಗಿ ಪ್ರತಿಭಟನೆಗಳನ್ನು ಮುನ್ನಡೆಸುವಾಗ ಅವರು ದೀರ್ಘಕಾಲದವರೆಗೆ ಕುಸ್ತಿಯಿಂದ ದೂರವಿದ್ದರು.

ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌

ಜಂಟಿಯಾಗಿ ಬೆಳ್ಳಿ ಪದಕ ಹಸ್ತಾಂತರಿಸುವಂತೆ ಕೋರಿ ವಿನೇಶ್‌ ಫೋಗಟ್‌ ಮನವಿ ಸಲ್ಲಿಸಿದ್ದಾರೆ. ಈ ವಿಚಾರದಲ್ಲಿ ಕೋರ್ಟ್‌ (CAS) ತನ್ನ ಅಂತಿಮ ತೀರ್ಪನ್ನು ಇಂದು (ಆಗಸ್ಟ್‌ 8) ಬೆಳಿಗ್ಗೆ 11:30ಕ್ಕೆ ಪ್ರಕಟಿಸಲಿದೆ. ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯವು ಫೋಗಟ್ ಪರವಾಗಿ ತೀರ್ಪು ನೀಡಿದರೆ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (International Olympic Committee) ಬೆಳ್ಳಿ ಪದಕ ನೀಡಬೇಕಾಗುತ್ತದೆ. ಹೀಗಾಗಿ ತೀರ್ಪಿಗಾಗಿ ಭಾರತೀಯರು ನಿರೀಕ್ಷೆಯೆಂದ ಕಾದು ಕುಳಿತ್ತಿದ್ದಾರೆ. ಯಾವುದೇ ಕ್ರೀಡಾ ಕೂಟದ ವೇಳೆ ಉದ್ಭವಿಸಬಹುದಾದ ವಿವಾದಗಳನ್ನು ಪರಿಹರಿಸಲು ಅಂತಾರಾಷ್ಟ್ರೀಯ ಸಂಸ್ಥೆ ಸಿಎಎಸ್‌ಯನ್ನು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಸ್ಥಾಪಿಸಲಾಗಿದೆ.

ನಿವೃತ್ತಿ ಘೋಷಣೆ

ಇದೀಗ 29 ವರ್ಷದ ವಿನೇಶ್‌ ಫೋಗಟ್‌ ಅವರು ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿದೆ. ನಾನು ಸೋತೆ.. ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

Continue Reading

ಬಾಲಿವುಡ್

Vinesh Phogat: ತೂಕ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯ, ಇದು ಮಹಿಳೆಯರಿಗೆ ಪಾಠ ಎಂದ ಹೇಮಾ ಮಾಲಿನಿ ಫುಲ್‌ ಟ್ರೋಲ್‌!

Vinesh Phogat: ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ. ಈ ಅಹಿತಕರ ಘಟನೆಗೆ ಪ್ರತಿಕ್ರಿಯಿಸಿದ ಹಿರಿಯ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಹೇಳಿಕೆಯು ನೆಟ್ಟಿಗರಿಗೆ ಸರಿ ಎನಿಸಿಲ್ಲ.

VISTARANEWS.COM


on

Vinesh Phogat Hema Malini's Comment Loses 100 gm
Koo

ಬೆಂಗಳೂರು: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ (Paris Olympics 2024) 50 ಕಿಲೋ ತೂಕದ ವಿಭಾಗದಲ್ಲಿ ಸ್ಪರ್ಧಿಸಲು ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ಕುಸ್ತಿಗೆ (Wrestling) ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ (Social media X) ಪೋಸ್ಟ್ ಮೂಲಕ ಅವರು ಕುಸ್ತಿಯಿಂದ ನಿವೃತ್ತಿ (retirement) ಘೋಷಿಸಿದರು. ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ. ಈ ಅಹಿತಕರ ಘಟನೆಗೆ ಪ್ರತಿಕ್ರಿಯಿಸಿದ ಹಿರಿಯ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಹೇಳಿಕೆಯು ನೆಟ್ಟಿಗರಿಗೆ ಸರಿ ಎನಿಸಿಲ್ಲ.

ಈ ಬಗ್ಗೆ ನಟಿ ಮತ್ತು ರಾಜಕಾರಣಿ ಹೇಮಾ ಮಾಲಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ ʻʻಇದು ತುಂಬಾ ಆಶ್ಚರ್ಯಕರವಾಗಿದೆ. 100 ಗ್ರಾಂ ಅಧಿಕ ತೂಕದ ಕಾರಣಕ್ಕಾಗಿ ಅನರ್ಹಗೊಳಿಸಿರುವುದು ವಿಚಿತ್ರವಾಗಿದೆ. ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ. ಇದು ನಮಗೆಲ್ಲರಿಗೂ ಪಾಠವಾಗಿದೆ. ಕಲಾವಿದರಿಗೆ, ಮಹಿಳೆಯರಿಗೆ ಇದು ಒಂದು ಪಾಠ. ವಿನೇಶ್​ ಆದಷ್ಟು ಬೇಗ 100 ಗ್ರಾಂ ತೂಕ ಇಳಿಸಿಕೊಳ್ಳಲಿ. ಆದರೆ ಅವರಿಗೆ ಇನ್ನೊಂದು ಅವಕಾಶ ಸಿಗುವುದಿಲ್ಲ’ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

ಇಂಥ ಹೇಳಿಕೆಗಳನ್ನು ನೀಡುವ ಹೇಮಾ ಮಾಲಿನಿ ಅವರು ಸಂಸದೆ ಆಗಲು ಅನರ್ಹರು ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ‘ಇಂಥವರಿಗೆ ಜನರು ಹೇಗೆ ಮತ ಹಾಕುತ್ತಾರೆ ಅಂತ ನನಗೆ ಅರ್ಥವೇ ಆಗುತ್ತಿಲ್ಲ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Vinesh Phogat: ಬೆಳ್ಳಿ ಪದಕಕ್ಕಾಗಿ ಕೋರ್ಟ್‌ ಕದ ತಟ್ಟಿದ ವಿನೇಶ್‌ ಫೋಗಟ್‌; ಇಂದು ತೀರ್ಪು ಪ್ರಕಟ

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ವಿನೇಶ್​ ಫೋಗಟ್​ ಅವರಿಗೆ ಧೈರ್ಯ ತುಂಬಿದ್ದಾರೆ. ಆಲಿಯಾ ಭಟ್​, ಫರ್ಹಾನ್​ ಅಖ್ತರ್​, ಕರೀನಾ ಕಪೂರ್​, ತಾಪ್ಸಿ ಪನ್ನು, ರಣವೀರ್​ ಸಿಂಗ್​, ರಕುಲ್​ ಪ್ರೀತ್​ ಸಿಂಗ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ‘ವಿನೇಶ್​ ಅವರೇ ನಮ್ಮ ಪಾಲಿನ ಚಾಂಪಿಯನ್​’ ಎಂದು ಹೇಳಿದ್ದಾರೆ. 

ವಿನೇಶ್‌ಗೆ ತಾರೆಯರ ಬೆಂಬಲ

ವಿನೇಶ್‌ ಫೋಗಟ್‌ ಅವರ ಪರವಾಗಿ ಬಾಲಿವುಡ್‌ ಸೆಲೆಬ್ರಿಟಿಗಳು ನಿಂತಿದ್ದಾರೆ. ಫರ್ಹಾನ್ ಅಖ್ತರ್, ತಾಪ್ಸಿ ಪನ್ನು, ಸೋನಾಕ್ಷಿ ಸಿನ್ಹಾ ಮತ್ತು ವಿಕ್ಕಿ ಕೌಶಲ್ ಸೇರಿದಂತೆ ಹಲವಾರು ಬಾಲಿವುಡ್ ತಾರೆಯರು ಕುಸ್ತಿಪಟುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಲಿಯಾ ಭಟ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ “ವಿನೇಶ್ ಫೋಗಟ್ ನೀವು ಇಡೀ ದೇಶಕ್ಕೆ ಸ್ಫೂರ್ತಿ. ನಿಮ್ಮ ಸ್ಥೈರ್ಯವನ್ನು , ನಿಮ್ಮ ಧೈರ್ಯವನ್ನು ಯಾವುದೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮತ್ತು ಇತಿಹಾಸವನ್ನು ಸೃಷ್ಟಿಸಲು ನೀವು ಅನುಭವಿಸಿದ ಕಷ್ಟಗಳನ್ನು ಯಾವುದೂ ತೆಗೆದುಹಾಕುವುದಿಲ್ಲ! ನಾವು ನಿಮ್ಮೊಂದಿಗೆ ಇರುತ್ತೇವೆ. ನೀವೇ ಚಿನ್ನ – ನೀವೇ ಕಬ್ಬಿಣ ಮತ್ತು ನೀವೇ ಸ್ಟೀಲ್‌! ಯಾವುದೂ ನಿಮ್ಮಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ! ಯುಗಗಳ ಚಾಂಪಿಯನ್! ನಿಮ್ಮಂತೆ ಯಾರೂ ಇಲ್ಲʼʼ ಎಂದು ಬರೆದುಕೊಂಡಿದ್ದಾರೆ.

ಫರ್ಹಾನ್ ಅಖ್ತರ್ ಅವರು ಪೋಸ್ಟ್‌ನಲ್ಲಿ ವಿನೇಶ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮತ್ತು ಶೀರ್ಷಿಕೆಯಲ್ಲಿ ಬರೆದಿದ್ದಾರೆ, ” ವಿನೇಶ್ ನಿಮ್ಮ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಮತ್ತು ನೀವು ಕ್ರೀಡೆಗಾಗಿ ಮಾಡಿದ್ದೀರಿʼʼ ಎಂದು ಬರೆದುಕೊಂಡಿದ್ದಾರೆ. ಜೋಯಾ ಅಖ್ತರ್ “ಚಾಂಪಿಯನ್ ನೀವು ಚಿನ್ನ! ನೀವು ಸಾಧಿಸಿದ್ದು ಪದಕಗಳನ್ನು ಮೀರಿದ್ದು. ತುಂಬಾ ಹೆಮ್ಮೆ. ಸ್ಫೂರ್ತಿʼʼಎಂದು ಬರೆದುಕೊಂಡಿದ್ದಾರೆ. ವಿಕ್ಕಿ ಕೌಶಲ್‌, ಪದಕಗಳನ್ನು ಮೀರಿದ ವಿಜೇತೆ ಎಂದು ಬರೆದುಕೊಂಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

Continue Reading
Advertisement
Oats or Quinoa
ಆರೋಗ್ಯ31 mins ago

Oats or Quinoa: ಓಟ್ಸ್‌, ಕಿನೊವಾ- ಇವೆರೆಡರಲ್ಲಿ ಯಾವುದು ಬೆಸ್ಟ್?

Waqf Bill
ದೇಶ53 mins ago

Waqf Bill: ವಕ್ಫ್‌ ಕಾಯ್ದೆಗೆ ತಿದ್ದುಪಡಿ; 21 ಸದಸ್ಯರ ಸಮಿತಿ ರಚಿಸಿದ ಕೇಂದ್ರ, ಓವೈಸಿ, ತೇಜಸ್ವಿ ಸೂರ್ಯಗೆ ಸ್ಥಾನ

Neeraj Chopra
ಕ್ರೀಡೆ53 mins ago

Neeraj Chopra : ವಿನೇಶ್ ಪೋಗಟ್​​ಗೆ ಅನರ್ಹತೆ ಬಗ್ಗೆ ಮಾತನಾಡಿದ ನೀರಜ್ ಚೋಪ್ರಾ; ಏನಂದ್ರು ಅವರು?

LOve case
ಬಾಗಲಕೋಟೆ58 mins ago

Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

Muda Scam
ಪ್ರಮುಖ ಸುದ್ದಿ1 hour ago

Muda Scam: ಸಿಎಂ ವಿರುದ್ಧದ ಖಾಸಗಿ ದೂರಿನ ಅರ್ಜಿ ವಿಚಾರಣೆ; ಆ.13ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Israel-Hamas War
ವಿದೇಶ1 hour ago

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Karnataka Nataka Akademi Award
ಉತ್ತರ ಕನ್ನಡ2 hours ago

Karnataka Nataka Akademi Award: ಉ.ಕ ಜಿಲ್ಲೆಯ ಮೂವರು ಕಲಾವಿದರಿಗೆ ಕರ್ನಾಟಕ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Duniya Vijay bheema movie review
ಸ್ಯಾಂಡಲ್ ವುಡ್2 hours ago

Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

Bengaluru power cut
ಬೆಂಗಳೂರು2 hours ago

Bengaluru Power Cut: ಆ.11ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Kannada New Movie
ಬೆಂಗಳೂರು2 hours ago

Kannada New Movie: ‘ಕೇದಾರ್ ನಾಥ್ ಕುರಿಫಾರಂ’ ಚಿತ್ರದ ಟ್ರೇಲರ್, ಹಾಡುಗಳು ರಿಲೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌