Kangana v/s Rahul Gandhi: ರಾಹುಲ್‌ ಗಾಂಧಿಯ ತಿರುಚಿದ ಫೊಟೋ ಶೇರ್‌; ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ - Vistara News

ದೇಶ

Kangana v/s Rahul Gandhi: ರಾಹುಲ್‌ ಗಾಂಧಿಯ ತಿರುಚಿದ ಫೊಟೋ ಶೇರ್‌; ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ

Kangana v/s Rahul Gandhi: ಇತ್ತೀಚೆಗೆ ಸಂಸತ್‌ನಲ್ಲಿ ಜಾತಿಗಣತಿ ಬಗ್ಗೆ ರಾಹುಲ್‌ ಗಾಂಧಿ ಹೇಳಿಕೆ ನೀಡಿರುವುದನ್ನೇ ಉಲ್ಲೇಖಿಸಿ ಕಂಗನಾ ರಾಹುಲ್‌ ಗಾಂಧಿಯವರ ಫೊಟೋವೊಂದನ್ನು ಶೇರ್‌ ಮಾಡಿದ್ದಾರೆ. ತಲೆಗೆ ಮುಸ್ಲಿಮರು ಧರಿಸುವಂತಹ ಟೋಪಿ, ಕತ್ತಿನಲ್ಲಿ ಕ್ರೈಸ್ತರು ಧರಿಸುವ ಕ್ರಾಸ್‌, ಹಣೆಗೆ ವಿಭೂತಿ ಹಚ್ಚಿರುವ ರೀತಿಯಲ್ಲಿ ಎಡಿಟ್‌ ಮಾಡಿರುವ ಫೊಟೋವನ್ನು ಕಂಗನಾ ರಣಾವತ್‌ ಶೇರ್‌ ಮಾಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಸಂಸದೆ ಕಂಗನಾ ರಣಾವತ್‌(Kangana v/s Rahul Gandhi)ಗೆ ಕಾನೂನು ಸಂಕಷ್ಟ ಎದುರಾಗಿದೆ. ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಅವರು ತಿರುಚಿದ ಫೊಟೋವನ್ನು ಶೇರ್‌ ಮಾಡಿರುವ ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಕಂಗನಾ ವಿರುದ್ಧ ಬರೋಬ್ಬರಿ 40ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಇತ್ತೀಚೆಗೆ ಸಂಸತ್‌ನಲ್ಲಿ ಜಾತಿಗಣತಿ ಬಗ್ಗೆ ರಾಹುಲ್‌ ಗಾಂಧಿ ಹೇಳಿಕೆ ನೀಡಿರುವುದನ್ನೇ ಉಲ್ಲೇಖಿಸಿ ಕಂಗನಾ ರಾಹುಲ್‌ ಗಾಂಧಿಯವರ ಫೊಟೋವೊಂದನ್ನು ಶೇರ್‌ ಮಾಡಿದ್ದಾರೆ. ತಲೆಗೆ ಮುಸ್ಲಿಮರು ಧರಿಸುವಂತಹ ಟೋಪಿ, ಕತ್ತಿನಲ್ಲಿ ಕ್ರೈಸ್ತರು ಧರಿಸುವ ಕ್ರಾಸ್‌, ಹಣೆಗೆ ವಿಭೂತಿ ಹಚ್ಚಿರುವ ರೀತಿಯಲ್ಲಿ ಎಡಿಟ್‌ ಮಾಡಿರುವ ಫೊಟೋವನ್ನು ಕಂಗನಾ ರಣಾವತ್‌ ಶೇರ್‌ ಮಾಡಿದ್ದಾರೆ. ʼಜಾತಿ ಕೇಳದೇ ಜಾತಿ ಗಣತಿ ಮಾಡಲು ಹೊರಟಿರುವ ಜಾತಿ ಜೀವಿʼ ಎಂದು ಪೋಸ್ಟ್ ಮಾಡಿದ್ದಾರೆ.

ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ

ಗಾಂಧಿ ಕುರಿತ ಅಸಹ್ಯಕರ ಮೀಮ್‌ಗಾಗಿ ಕಂಗನಾ ಅವರನ್ನು ನೆಟ್ಟಿಗರು ಟೀಕಿಸಿದ್ದಾರೆ ಮತ್ತು ಇದೀಗ, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ನರೇಂದ್ರ ಮಿಶ್ರಾ ಅವರು ನಟಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಐಟಿ ಕಾಯ್ದೆಯಡಿ ಯಾರೊಬ್ಬರ ಚಿತ್ರವನ್ನು ಮಾರ್ಫ್ ಮಾಡುವುದು ಮತ್ತು ಅವರ ಅನುಮತಿಯಿಲ್ಲದೆ ಅದನ್ನು ಇಂಟರ್ನೆಟ್‌ನಲ್ಲಿ ಹಂಚಿಕೊಳ್ಳುವುದು ಕಾನೂನುಬಾಹಿರ ಎಂದು ಮಿಶ್ರಾ ಹೇಳಿದ್ದಾರೆ. ನಂತರ ರಾಹುಲ್‌ ಅವರು ತಮ್ಮ ವಿರುದ್ಧ 40 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಮತ್ತು ಗಾಂಧಿಯವರ ಪ್ರತಿಷ್ಠೆಯನ್ನು ಹಾಳು ಮಾಡಿದ್ದಕ್ಕಾಗಿ ಪರಿಹಾರ ಕೇಳಿದ್ದಾರೆ ಎಂದು ಹೇಳಿದರು.

“ಯಾರೊಬ್ಬರ ಒಪ್ಪಿಗೆಯಿಲ್ಲದೆ ಅಂತಹ ಚಿತ್ರವನ್ನು ಪೋಸ್ಟ್ ಮಾಡುವ ಮೂಲಕ ನೀವು ಹೇಗೆ ಅವರ ಮಾನಹಾನಿ ಮಾಡುತ್ತೀರಿ? ಮೀಮ್‌ಗಳನ್ನು ಮಾಡಲು ಮತ್ತು ಇನ್ನೊಬ್ಬರ ವ್ಯಕ್ತಿತ್ವವನ್ನು ಕೆಡಿಸಲು ಒಬ್ಬರು ಸಂಸತ್ತಿಗೆ ಪ್ರವೇಶಿಸುವುದಿಲ್ಲ. ನಾನು ಸೇರಿದಂತೆ ನಾವು ಕಾಂಗ್ರೆಸ್ ಪಕ್ಷದ ಭಾಗವಾಗಿದ್ದೇವೆ ಮತ್ತು ಮಾನಹಾನಿ ಮಾಡುವ ಹಕ್ಕನ್ನು ಅವರಿಗೆ ಕೊಟ್ಟವರು ಯಾರು? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಕೆಲವು ದಿನಗಳ ಹಿಂದೆ ರಾಹುಲ್‌ ಗಾಂಧಿಯವರ ಡ್ರಗ್‌ ಟೆಸ್ಟ್‌ ಮಾಡಿಸಬೇಕೆಂದು ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿಗೆ ಘನತೆ ಇಲ್ಲ, ನಿನ್ನೆ ಅವರು ನಾವು ಶಿವಾಜಿಯವರ ಬಾರಾತ್ ಮತ್ತು ಇದು ಚಕ್ರವ್ಯೂಹ ಎಂದು ಹೇಳುತ್ತಿದ್ದಾರೆ, ಅವರು ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದರೆ ಅವರನ್ನು ಪರೀಕ್ಷಿಸಬೇಕು ಎಂದು ನನಗೆ ಅನಿಸುತ್ತದೆ ಎಂದು ಹೇಳಿದ್ದರು.

ಇದನ್ನೂ ಓದಿ:Kangana Ranaut: ವಿನೇಶ್‌ಗೆ ಅಭಿನಂದಿಸಿ ವ್ಯಂಗ್ಯದ ಪೋಸ್ಟ್ ಮಾಡಿದ ಬೆನ್ನಲ್ಲೇ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದ ಕಂಗನಾ ರಣಾವತ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಮೋದಿ ಪ್ರೊಫೈಲ್‌ ಫೋಟೊ ಈಗ ತಿರಂಗಾ; ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜನರಿಗೆ ಕರೆ

Narendra Modi: “ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು ಸತತ ಮೂರನೇ ಆವೃತ್ತಿಯ ಹರ್‌ ಘರ್‌ ತಿರಂಗಾ ಅಭಿಯಾನವನ್ನು ಆಗಸ್ಟ್‌ 9ರಿಂದ 15ರವರೆಗೆ ಆಚರಿಸಲಾಗುತ್ತದೆ” ಎಂಬುದಾಗಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಮಾಹಿತಿ ನೀಡಿದ್ದಾರೆ. ಮೋದಿ ಅವರೂ ಅಭಿಯಾನದ ಯಶಸ್ಸಿಗೆ ಕರೆ ನೀಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ದೇಶದ ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ದೇಶಕ್ಕೆ ದೇಶವೇ ಸ್ವಾತಂತ್ರ್ಯದ ಸಂಭ್ರಮ ಆಚರಿಸಲು ಸಿದ್ಧವಾಗಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಸಾಮಾಜಿಕ ಜಾಲತಾಣದ (X Social Media) ಪ್ರೊಫೈಲ್‌ ಪಿಕ್ಚರ್‌ ಬದಲಾಯಿಸಿದ್ದಾರೆ. ತಿರಂಗಾವನ್ನೇ ಡಿಪಿಯನ್ನಾಗಿ ಮಾಡಿರುವ ನರೇಂದ್ರ ಮೋದಿ (Narendra Modi) ಅವರು ದೇಶದ ಜನತೆಗೂ ಹರ್‌ ಘರ್‌ ತಿರಂಗಾ (Har Ghar Tiranga) ಅಭಿಮಾನಕ್ಕೆ ಕರೆ ನೀಡಿದ್ದಾರೆ.

“ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಹರ್‌ ಘರ್‌ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸೋಣ, ಸ್ಮರಣೀಯಗೊಳಿಸೋಣ. ನಾನು ನನ್ನ ಖಾತೆಯ ಪ್ರೊಫೈಲ್‌ ಫೋಟೊವನ್ನು ಬದಲಾಯಿಸಿದ್ದೇನೆ. ನೀವು ಕೂಡ ನಿಮ್ಮ ಪ್ರೊಫೈಲ್‌ ಫೋಟೊವನ್ನು ತಿರಂಗಾವನ್ನೇ ಸೆಟ್‌ ಮಾಡಿಕೊಳ್ಳುವ ಮೂಲಕ ಅಭಿಯಾನಕ್ಕೆ ಅಭೂತಪೂರ್ವ ಯಶಸ್ಸು ತರೋಣ” ಎಂದು ಪ್ರೊಫೈಲ್‌ ಫೋಟೊ ಬದಲಾಯಿಸಿದ ಬಳಿಕ ನರೇಂದ್ರ ಮೋದಿ ಅವರು ಪೋಸ್ಟ್‌ ಮಾಡಿದ್ದಾರೆ.

“ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು ಸತತ ಮೂರನೇ ಆವೃತ್ತಿಯ ಹರ್‌ ಘರ್‌ ತಿರಂಗಾ ಅಭಿಯಾನವನ್ನು ಆಗಸ್ಟ್‌ 9ರಿಂದ 15ರವರೆಗೆ ಆಚರಿಸಲಾಗುತ್ತದೆ” ಎಂಬುದಾಗಿ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಮಾಹಿತಿ ನೀಡಿದ್ದಾರೆ. ಹಾಗೆಯೇ, ಪ್ರತಿಯೊಬ್ಬರೂ ತಮ್ಮ ಮನೆಯ ಮೇಲೆ ತಿರಂಗಾ ಹಾರಿಸಿ, ಆ ತಿರಂಗಾ ಜತೆ ಇರುವ ಫೋಟೊವನ್ನು ಹರ್‌ ಘರ್‌ ತಿರಂಗಾ ವೆಬ್‌ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡಿ ಎಂದು ತಿಳಿಸಿದರು.

ಈ ಬಾರಿಯ ಅಭಿಯಾನದ ಭಾಗವಾಗಿ ಸಂಸತ್‌ ಸದಸ್ಯರು ತಿರಂಗಾ ಬೈಕ್‌ ರ‍್ಯಾಲಿಯನ್ನೂ ಕೈಗೊಳ್ಳಲಿದ್ದಾರೆ. ಆಗಸ್ಟ್‌ 13ರಂದು ಭಾರತ ಮಂಟಪಂನ ಪ್ರಗತಿ ಮೈದಾನದಿಂದ ಮೇಜರ್‌ ಧ್ಯಾನ್‌ ಚಂದ್‌ ಸ್ಟೇಡಿಯಂವರೆಗೆ ತಿರಂಗಾ ಬೈಕ್‌ ರ‍್ಯಾಲಿಯನ್ನು ಕೈಗೊಳ್ಳಲಾಗುತ್ತಿದೆ. ಸಂಸದರು ಬೈಕ್‌ಗೆ ತಿರಂಗಾ ಕಟ್ಟಿಕೊಂಡು ಇಂಡಿಯಾ ಗೇಟ್‌ ಮೂಲಕ ಸ್ಟೇಡಿಯಂಗೆ ತಲುಪಲಿದ್ದಾರೆ. ಇದಕ್ಕೂ ಮೊದಲಿನ ಅಭಿಯಾನಗಳಿಗೂ ದೇಶದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Vinesh Phogat: ಪ್ರಕಾಶ್‌ ರೈ ವಿರುದ್ಧ ಅಹಿಂಸಾ ಚೇತನ್‌ ಕಿಡಿ; ಮೋದಿ ಪರ ಬ್ಯಾಟಿಂಗ್ ಮಾಡಿ ʼರೈ ಅಜ್ಞಾನಿʼ ಎಂದ ನಟ

Continue Reading

ವಾಣಿಜ್ಯ

Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು?

ಭಾರತದ ಅತ್ಯಂತ ಶ್ರೀಮಂತ ಕುಟುಂಬವಾಗಿ ಅಂಬಾನಿ, ಬಜಾಜ್, ಬಿರ್ಲಾ ಕುಟುಂಬ ಬಾರ್ಕ್ಲೇಸ್-ಹುರುನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲಿ ಗುರುತಿಸಿಕೊಂಡಿದೆ. ದೇಶದ ಪ್ರಮುಖ ಈ ಮೂರು ಕುಟುಂಬ (Richest Indian Family) ವ್ಯವಹಾರಗಳ 460 ಶತಕೋಟಿ ಡಾಲರ್ ಆಗಿದ್ದು, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ಸಮೀಕ್ಷೆ ತಿಳಿಸಿದೆ. ಅಂಬಾನಿ ಹೊರತಾಗಿ ಭಾರತದ ಇತರ ಶ್ರೀಮಂತ ಕುಟುಂಬಗಳು ಯಾವವು? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Koo

ಭಾರತದ ಅತ್ಯಂತ ಶ್ರೀಮಂತ ಕುಟುಂಬ (Richest Indian Family) ಎಂದೇ ಗುರುತಿಸಲ್ಪಟ್ಟಿರುವ ಅಂಬಾನಿ ಕುಟುಂಬದ (Ambani Family) ಸಂಪತ್ತು ಭಾರತದ ಜಿಡಿಪಿಯ (GDP of India) ಶೇ. 10ರಷ್ಟಿದೆ. ಅಂಬಾನಿ ಕುಟುಂಬವು ಭಾರತದ ಉದ್ಯಮಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಒಟ್ಟು 25,75,000 ಕೋಟಿ ಮೌಲ್ಯದ ಸಂಪತ್ತನ್ನು ಹೊಂದಿದೆ.

ಬಾರ್ಕ್ಲೇಸ್-ಹುರುನ್ ಇಂಡಿಯಾ ಸಮೀಕ್ಷೆಯಲ್ಲಿ (Barclays-Hurun India report) ನೀಡಿರುವ ಶ್ರೇಯಾಂಕಗಳ ಪ್ರಕಾರ ಇದು 2024ರ ಮಾರ್ಚ್ 20ರ ಕಂಪೆನಿಯ ಮೌಲ್ಯಮಾಪನಗಳನ್ನು ಆಧರಿಸಿವೆ. ಇದು ಖಾಸಗಿ ಹೂಡಿಕೆಗಳು ಮತ್ತು ಇತರ ಆಸ್ತಿಗಳನ್ನು ಹೊರತುಪಡಿಸಿದೆ.


ಅಂಬಾನಿಯ ಅನಂತರ ಬಜಾಜ್ ಕುಟುಂಬವು 7,13,000 ಕೋಟಿ ಮೌಲ್ಯದ ಸಂಪತ್ತಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ನಿರಜ್ ಬಜಾಜ್ ಅವರ ಕುಟುಂಬದ ಮುಖ್ಯಸ್ಥರಾಗಿದ್ದಾರೆ.


ಬಿರ್ಲಾ ಕುಟುಂಬ 5.39 ಲಕ್ಷ ಕೋಟಿ ಸಂಪತ್ತು ಹೊಂದಿದ್ದು, ಮೂರನೇ ಸ್ಥಾನದಲ್ಲಿದೆ. ದೇಶದ ಪ್ರಮುಖ ಈ ಮೂರು ಕುಟುಂಬ ವ್ಯವಹಾರಗಳ 460 ಶತಕೋಟಿ ಡಾಲರ್ ಆಗಿದ್ದು, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ಸಮೀಕ್ಷೆ ತಿಳಿಸಿದೆ.

ಈ ಪಟ್ಟಿಯಲ್ಲಿ ಸಜ್ಜನ್ ಜಿಂದಾಲ್ ನೇತೃತ್ವದ ಕುಟುಂಬವು 4.71 ಲಕ್ಷ ಕೋಟಿ ರೂ. ಮೌಲ್ಯದ ಸಂಪತ್ತಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ನಾಡಾರ್ ಕುಟುಂಬವು 4.30 ಲಕ್ಷ ಕೋಟಿ ರೂ. ಮೌಲ್ಯದೊಂದಿಗೆ ಐದನೇ ಸ್ಥಾನದಲ್ಲಿದೆ. ನಾಡಾರ್ ಕುಟುಂಬದ ರೋಶನಿ ನಾಡರ್ ಮಲ್ಹೋತ್ರಾ ಅವರು ಟಾಪ್ 10 ಕುಟುಂಬದ ವ್ಯವಹಾರಗಳ ಪಟ್ಟಿಯಲ್ಲಿ ಏಕೈಕ ಮಹಿಳೆಯಾಗಿದ್ದಾರೆ.


ಮೊದಲ ತಲೆಮಾರಿನ ಕುಟುಂಬ

ಅದಾನಿ ಕುಟುಂಬವು 15,44,000 ಕೋಟಿ ಮೌಲ್ಯದೊಂದಿಗೆ ಅತ್ಯಂತ ಮೌಲ್ಯಯುತವಾದ ಮೊದಲ ತಲೆಮಾರಿನ ಕುಟುಂಬ ವ್ಯವಹಾರವಾಗಿ ಹೊರಹೊಮ್ಮಿದೆ. ಅನಂತರದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕರಾದ ಪೂನಾವಾಲಾ ಕುಟುಂಬವು 2,37,000 ಕೋಟಿ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದೆ. 91,200 ಕೋಟಿ ರೂ. ಮೌಲ್ಯದ ಡಿವಿ ಕುಟುಂಬ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Mukesh Ambani: ಮುಕೇಶ್ ಅಂಬಾನಿ ಮನೆಯ ವಿದ್ಯುತ್ ಬಿಲ್ ಎಷ್ಟಿರಬಹುದು ಊಹಿಸಿ!

ಹುರುನ್ ಇಂಡಿಯಾದ ಸಂಸ್ಥಾಪಕ ಮತ್ತು ಮುಖ್ಯ ಸಂಶೋಧಕ ಅನಾಸ್ ರಹಮಾನ್ ಜುನೈದ್ ಈ ಕುರಿತು ಪ್ರತಿಕ್ರಿಯಿಸಿ, ಕೈಗಾರಿಕಾ ಉತ್ಪನ್ನಗಳ ವಲಯದಲ್ಲಿ 28 ಕಂಪೆನಿಗಳು 4,58,700 ಕೋಟಿ ರೂ. ಮತ್ತು ಆಟೋಮೊಬೈಲ್ ವಲಯದ 23 ಕಂಪೆನಿಗಳು ಮತ್ತು ಫಾರ್ಮಾಸ್ಯುಟಿಕಲ್ಸ್ ವಲಯದ 22 ಕಂಪೆನಿಗಳು 1,876,200 ಕೋಟಿ ರೂ. ಮೌಲ್ಯದ್ದಾಗಿವೆ. ಈ ವ್ಯವಹಾರಗಳು ಭಾರತದ ಜಾಗತಿಕ ಸ್ಪರ್ಧಾತ್ಮಕತೆ ಮತ್ತು ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವಲ್ಲಿ ಪ್ರಮುಖವಾಗಿವೆ. ಈ ಕುಟುಂಬದ ವ್ಯವಹಾರಗಳ ಗಮನಾರ್ಹವಾದ ಉದ್ಯಮ ವೈವಿಧ್ಯತೆಯು ಭಾರತದಲ್ಲಿ ದೀರ್ಘಕಾಲೀನ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಯನ್ನು ನಿರ್ವಹಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.


ಏಷ್ಯಾ ಪೆಸಿಫಿಕ್‌ನ ಬಾರ್ಕ್ಲೇಸ್ ಖಾಸಗಿ ಬ್ಯಾಂಕ್ ಮುಖ್ಯಸ್ಥ ನಿತಿನ್ ಸಿಂಗ್ ಮಾತನಾಡಿ, ಭಾರತವು ಸಂಕೀರ್ಣ ದೇಶವಾಗಿದೆ. ಇದು ವಿವಿಧ ರಾಜ್ಯಗಳು ಮತ್ತು ವಿವಿಧ ವಸ್ತುಗಳಿಂದ ಮಾಡಲ್ಪಟ್ಟಿದೆ. ಈ ಸಂಕೀರ್ಣ ಪರಿಸರದಲ್ಲಿ ಹೇಗೆ ಕೆಲಸ ಮಾಡಬೇಕೆಂದು ತಿಳಿದಿರುವ ಜನರಿಗೆ ಇದು ಪ್ರಯೋಜನವನ್ನು ನೀಡುತ್ತದೆ. ಬಹು ಪೀಳಿಗೆಯ ವ್ಯವಹಾರಗಳು ಹಲವಾರು ವರ್ಷಗಳ ಬಳಿಕ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

Continue Reading

ದೇಶ

Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

Lending Rate: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ ಎಂದೇ ಹೇಳಲಾಗುತ್ತಿತ್ತು. ಆದರೆ, ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಸಾಲ ಪಡೆದವರಿಗೆ ಈಗ ಇಎಂಐ ಹೊರೆಯಾಗಲಿದೆ.

VISTARANEWS.COM


on

Lending Rate
Koo

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆಯೇ ರೆಪೋ ದರ (Repo Rate) ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee)ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನೆಲೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಾಗಾಗಿ, ಸಾಲಗಾರರಿಗೆ ಇಎಂಐ ಹೊರೆಯಾಗುವುದಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಬ್ಯಾಂಕ್‌ ಆಫ್ ಬರೋಡಾ (‌Bank Of Baroda) ಈಗ ಬಡ್ಡಿದರ (Lending Rate) ಏರಿಕೆ ಮಾಡಿದ್ದು, ಆ ಬ್ಯಾಂಕ್‌ನಲ್ಲಿ ಸಾಲ ಪಡೆದವರಿಗೆ ಇಎಂಐ ಹೊರೆಯಾಗುವುದು ನಿಶ್ಚಿತವಾಗಿದೆ.

ಹೌದು, ಬ್ಯಾಂಕ್‌ ಆಫ್‌ ಬರೋಡಾ ಈಗ ಬಡ್ಡಿದರವನ್ನು 5 ಮೂಲಾಂಕ (Basic Points) ಏರಿಕೆ ಮಾಡಿದೆ. ಆಗಸ್ಟ್‌ 12ರಿಂದಲೇ ನೂತನ ಬಡ್ಡಿದರವು ಜಾರಿಗೆ ಬರಲಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ತಿಳಿಸಿದೆ. 3 ತಿಂಗಳು, 6 ತಿಂಗಳು ಹಾಗೂ ಒಂದು ವರ್ಷದವರೆಗೆ ಸಾಲ ತೆಗೆದುಕೊಂಡವರಿಗೆ ಬಡ್ಡಿದರ ಏರಿಕೆ ಮಾಡಿರುವುದರಿಂದ ಅವರಿಗೆ ಮಾಸಿಕ ಇಎಂಐ ಜಾಸ್ತಿಯಾಗಲಿದೆ.

ಮೂರು ತಿಂಗಳ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.45ರಿಂದ ಶೇ.8.50ಗೆ ಏರಿಕೆ ಮಾಡಿದೆ. ಹಾಗೆಯೇ, 6 ತಿಂಗಳ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.70ರಿಂದ ಶೇ.8.75ಕ್ಕೆ, 1 ವರ್ಷದ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.90ರಿಂದ ಶೇ.8.95ಕ್ಕೆ ಏರಿಕೆ ಮಾಡಲಾಗಿದೆ. ಇದು ಸಹಜವಾಗಿಯೇ ಗ್ರಾಹಕರಿಗೆ ಹೊರೆಯಾಗಲಿದೆ ಎಂಬುದಾಗಿ ತಿಳಿದುಬಂದಿದೆ.

ಸಾಮಾನ್ಯವಾಗಿ, ರೆಪೋ ರೇಟ್‌ ಆಧಾರದ ಮೇಲೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿಯನ್ನು ಹೆಚ್ಚಿಸುತ್ತವೆ. ಆರ್‌ಬಿಐ ರೆಪೋ ರೇಟ್‌ ಹೆಚ್ಚಳ ಮಾಡಿದಾಗ ಮಾತ್ರ ಬ್ಯಾಂಕ್‌ಗಳು ಇಂತಹ ಕ್ರಮ ತೆಗೆದುಕೊಳ್ಳುತ್ತವೆ. ಆದರೆ, ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿದೆ. ಅಲ್ಲಿಂದ ಇಲ್ಲಿಯವರೆಗೆ ಆರ್‌ಬಿಐ ರೆಪೋ ದರವನ್ನು ಯಥಾಸ್ಥಿತಿ ಉಳಿಸಿಕೊಂಡು ಬಂದಿದೆ. ಇಷ್ಟಾದರೂ, ಬ್ಯಾಂಕ್‌ ಆಫ್‌ ಬರೋಡಾ ಏಕೆ ಬಡ್ಡಿದರ ಏರಿಕೆ ಮಾಡಿದೆ ಎಂಬುದು ಗ್ರಾಹಕರ ಪ್ರಶ್ನೆಯಾಗಿದೆ.

ಆರ್‌ಬಿಐ ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆ ಅಥವಾ ಇಳಿಕೆಯಾಗುವುದಿಲ್ಲ.

ಇದನ್ನೂ ಓದಿ: PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Continue Reading

ಪ್ರಮುಖ ಸುದ್ದಿ

Hijab Ban: ಕಾಲೇಜಿನಲ್ಲಿ ಹಿಜಾಬ್‌ ನಿಷೇಧಿಸಿದ್ದಕ್ಕೆ ಸುಪ್ರೀಂ ಕೋರ್ಟ್‌ ತರಾಟೆ; ತಿಲಕಕ್ಕೆ ವಿನಾಯಿತಿ ಏಕೆ ಎಂದು ಪ್ರಶ್ನೆ!

Hijab Ban: ಮುಂಬೈನಲ್ಲಿರುವ ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜಿನಲ್ಲಿ ಇತ್ತೀಚೆಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದ್ದು, ಕಾಲೇಜು ಆವರಣದಲ್ಲಿ ಹಿಜಾಬ್‌, ನಕಾಬ್‌, ಬುರ್ಖಾ, ಶಾಲು, ಟೋಪಿ, ಬ್ಯಾಡ್ಜ್‌ಗಳನ್ನು ಧರಿಸಿಕೊಂಡು ಬರುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಇದಕ್ಕೆ ಸುಪ್ರೀಂ ಕೋರ್ಟ್‌ ಈಗ ತಡೆಯಾಜ್ಞೆ ನೀಡಿದೆ.

VISTARANEWS.COM


on

Hijab Ban
Koo

ನವದೆಹಲಿ: ಕರ್ನಾಟಕದಂತೆ ಮಹಾರಾಷ್ಟ್ರದ ಮುಂಬೈನಲ್ಲೂ ಶಿಕ್ಷಣ ಸಂಸ್ಥೆಗಳಲ್ಲಿ (Hijab Ban) ಹಿಜಾಬ್‌ ಧರಿಸುವುದನ್ನು ನಿಷೇಧಿಸಿದ ಆದೇಶವು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ, ಹಿಜಾಬ್‌ ಧರಿಸುವುದನ್ನು ನಿಷೇಧಿಸಿದ ಮುಂಬೈನ (Mumbai College) ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜಿನ ಆದೇಶಕ್ಕೆ ಸುಪ್ರೀಂ ಕೋರ್ಟ್‌ (Supreme Court) ತಡೆಯಾಜ್ಞೆ ನೀಡಿದೆ. ಇದರಿಂದ ಸುಪ್ರೀಂ ಕೋರ್ಟ್‌ನಲ್ಲಿ ಕಾಲೇಜುಗಳಿಗೆ ಹಿನ್ನಡೆಯಾದಂತಾಗಿದೆ.

ಕಾಲೇಜು ಆಡಳಿತ ಮಂಡಳಿ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ಸಂಜಯ್‌ ಕುಮಾರ್‌ ನೇತೃತ್ವದ ನ್ಯಾಯಪೀಠವು, “ಕಾಲೇಜು ಆಡಳಿತ ಮಂಡಳಿ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಆದರೆ, ತರಗತಿಯಲ್ಲಿ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಕೂರುವಂತಿಲ್ಲ. ಯಾವುದೇ ಧಾರ್ಮಿಕ ಚಟುವಟಿಕೆಗಳಿಗೆ ಕ್ಯಾಂಪಸ್‌ನಲ್ಲಿ ಕೈಗೊಳ್ಳುವಂತಿಲ್ಲ. ಇನ್ನು, ಕಾಲೇಜು ಆಡಳಿತ ಮಂಡಳಿಯು ಬುರ್ಖಾ, ನಿಕಾಬ್‌, ಹಿಜಾಬ್‌ ನಿಷೇಧಿಸಿದ್ದು, ಬಿಂದಿ, ತಿಲಕಕ್ಕೆ ಏಕೆ ಅವಕಾಶ ಕೊಟ್ಟಿದೆ” ಎಂದೂ ಪ್ರಶ್ನಿಸಿತು.

ಕಾಲೇಜಿನ ಆದೇಶ ಏನಾಗಿತ್ತು?

ಮುಂಬೈನಲ್ಲಿರುವ ಚೆಂಬುರ್‌ ಟ್ರೋಂಬೆ ಎಜುಕೇಷನ್‌ ಸೊಸೈಟಿಯ ಎನ್‌.ಜಿ.ಆಚಾರ್ಯ ಹಾಗೂ ಕೆ.ಕೆ. ಮರಾಠೆ ಕಾಲೇಜಿನಲ್ಲಿ ಇತ್ತೀಚೆಗೆ ವಸ್ತ್ರಸಂಹಿತೆ ಜಾರಿಗೆ ತರಲಾಗಿದ್ದು, ಕಾಲೇಜು ಆವರಣದಲ್ಲಿ ಹಿಜಾಬ್‌, ನಕಾಬ್‌, ಬುರ್ಖಾ, ಶಾಲು, ಟೋಪಿ, ಬ್ಯಾಡ್ಜ್‌ಗಳನ್ನು ಧರಿಸಿಕೊಂಡು ಬರುವಂತಿಲ್ಲ ಎಂದು ಆದೇಶ ಹೊರಡಿಸಿತ್ತು. ಆದರೆ, ಕಾಲೇಜಿನಲ್ಲಿ ಪದವಿಯ ದ್ವಿತೀಯ ಹಾಗೂ ಅಂತಿಮ ವರ್ಷದ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ 9 ವಿದ್ಯಾರ್ಥಿನಿಯರು ಕಾಲೇಜಿನ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಇದನ್ನು ಬಾಂಬೆ ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಆದರೀಗ, ಸುಪ್ರೀಂ ಕೋರ್ಟ್‌, ಕಾಲೇಜಿನ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಅಷ್ಟೇ ಅಲ್ಲ, ವಿದ್ಯಾರ್ಥಿಗಳು ಔಪಚಾರಿಕ ಮತ್ತು ಯೋಗ್ಯವಾದ ಉಡುಗೆಯನ್ನು ಧರಿಸಬೇಕು. ಅವರು ಶರ್ಟ್‌-ಪ್ಯಾಂಟ್‌ ಧರಿಸಬಹುದು. ಹುಡುಗಿಯರು ಭಾರತೀಯ ಹಾಗೂ ಮಾರ್ಡನ್‌ ಡ್ರೆಸ್‌ ಧರಿಸಬಹುದು. ಆದರೆ ಆದರೆ ಒಂದು ಧರ್ಮ, ಜಾತಿಯನ್ನು ಪ್ರತಿನಿಧಿಸುವಂತಹ ಬಟ್ಟೆಯನ್ನು ಧರಿಸುವಂತಿಲ್ಲ. ಜೀನ್ಸ್‌, ಟಿ ಶರ್ಟ್‌, ಅಸಭ್ಯ ರೀತಿಯ ಉಡುಗೆಗಳನ್ನು ಧರಿಸಲು ಅವಕಾಶ ಇಲ್ಲ. ಹಿಜಾಬ್‌, ಬುರ್ಖಾ, ನಖಾಬ್, ಶಾಲು, ಟೋಪಿಗಳನ್ನು ತೆಗೆದೇ ಕ್ಯಾಂಪಸ್‌ ಒಳಗೆ ಬರಬೇಕು ಎಂದು ಪ್ರಕಟಣೆ ತಿಳಿಸಿತ್ತು.

ಇದನ್ನೂ ಓದಿ: Bikini vs : Hijab : ಸ್ಪೇನ್​, ಈಜಿಪ್ಟ್​ ನಡುವಿನ ಬೀಚ್ ವಾಲಿಬಾಲ್ ಪಂದ್ಯದ ವೇಳೆ ಕಿಡಿ ಹಚ್ಚಿದ ಬಿಕಿನಿ ವರ್ಸಸ್ ಹಿಜಾಬ್​ ಚರ್ಚೆ

Continue Reading
Advertisement
Neeraj Chopra
ಕ್ರೀಡೆ21 seconds ago

Neeraj Chopra : ಸಮಾರೋಪ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯುವ ಅವಕಾಶ ಶ್ರೀಜೇಶ್​ಗೆ ಬಿಟ್ಟುಕೊಟ್ಟ ನೀರಜ್​ ಚೋಪ್ರಾ

Narendra Modi
ದೇಶ5 mins ago

Narendra Modi: ಮೋದಿ ಪ್ರೊಫೈಲ್‌ ಫೋಟೊ ಈಗ ತಿರಂಗಾ; ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜನರಿಗೆ ಕರೆ

ವಾಣಿಜ್ಯ16 mins ago

Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು?

Viral news
ವೈರಲ್ ನ್ಯೂಸ್26 mins ago

Viral News: ಮಾಂಸದೂಟಕ್ಕಾಗಿ ಜಗಳ: ಮೆದುಳು ಹೊರಬರುವಂತೆ ಬಡಿದು ಪತಿಯನ್ನೇ ಕೊಂದ ಮಹಿಳೆ

CM Siddaramaiah
ಕರ್ನಾಟಕ29 mins ago

CM Siddaramaiah: 4 ದಶಕದಿಂದ ರಾಜಕೀಯದಲ್ಲಿರುವ ನನ್ನ ಬದುಕು ತೆರೆದ ಪುಸ್ತಕ: ಸಿಎಂ ಸಿದ್ದರಾಮಯ್ಯ

Paris Olympics 2024
ಪ್ರಮುಖ ಸುದ್ದಿ39 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಆಗಸ್ಟ್​​ 10ರಂದು ಭಾರತಕ್ಕೆ ಯಾವ್ಯಾವ ಸ್ಪರ್ಧೆಗಳಿವೆ? ಇಲ್ಲಿದೆ ವಿವರ

Viral News
ವಿದೇಶ53 mins ago

Viral News: ಇಸ್ರೇಲ್ ಮಹಿಳಾ ಸೈನಿಕರಿಂದ ನಿರಂತರ ಅತ್ಯಾಚಾರ; ಕ್ರೂರ ಅನುಭವ ಬಿಚ್ಚಿಟ್ಟ ಪ್ಯಾಲೇಸ್ಟಿನಿಯನ್ ಬಂಧಿತ

Lending Rate
ದೇಶ1 hour ago

Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

Vinesh Phogat
ಕ್ರೀಡೆ1 hour ago

Vinesh Phogat: ಕುಸ್ತಿಯಲ್ಲಿ ಅರಳಿದ ಪ್ರೀತಿ, ಒಂದು ರೂಪಾಯಿ ಖರ್ಚಿನಲ್ಲಿ ಮದುವೆ; ಇದುವೇ ವಿನೇಶ್​ ಫೋಗಟ್​ – ಸೋಮ್​ವೀರ್​ ಪ್ರೇಮದ ಕತೆ

Hijab Ban
ಪ್ರಮುಖ ಸುದ್ದಿ2 hours ago

Hijab Ban: ಕಾಲೇಜಿನಲ್ಲಿ ಹಿಜಾಬ್‌ ನಿಷೇಧಿಸಿದ್ದಕ್ಕೆ ಸುಪ್ರೀಂ ಕೋರ್ಟ್‌ ತರಾಟೆ; ತಿಲಕಕ್ಕೆ ವಿನಾಯಿತಿ ಏಕೆ ಎಂದು ಪ್ರಶ್ನೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌