Road Accident : ಪ್ರತ್ಯೇಕ ಅಪಘಾತದಲ್ಲಿ ಆರು ಬೈಕ್‌ ಸವಾರರ ದುರ್ಮರಣ; ಓರ್ವನಿಗೆ ಗಂಭೀರ ಗಾಯ - Vistara News

ವಿಜಯನಗರ

Road Accident : ಪ್ರತ್ಯೇಕ ಅಪಘಾತದಲ್ಲಿ ಆರು ಬೈಕ್‌ ಸವಾರರ ದುರ್ಮರಣ; ಓರ್ವನಿಗೆ ಗಂಭೀರ ಗಾಯ

Road Accident : ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ಐವರು ಬೈಕ್‌ ಸವಾರರು ಸ್ಥಳದಲ್ಲೇ
ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಇಬ್ಬರಲ್ಲಿ ಒಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಬೈಕ್‌ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ (Road Accident) ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ. ಶಂಕರ್ (26) ಮೃತ ದುರ್ದೈವಿ.

ವಿಜಯನಗರದ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದಲ್ಲಿ ಅಪಘಾತ ನಡೆದಿದೆ. ಶಂಕರ್, ಸುಂಕಪ್ಪ ಇಬ್ಬರೂ ಪಿಕೆ ಹಳ್ಳಿ ಗ್ರಾಮದವರು. ಲಾರಿ ಗಂಗಾವತಿಯಿಂದ ಬುಕ್ಕಸಾಗರಕ್ಕೆ ಬರುತ್ತಿತ್ತು. ಬುಕ್ಕಸಾಗರಿಂದ ಗಂಗಾವತಿಯತ್ತ ಬೈಕ್ ಬರುವಾಗ ಮುಖಾಮುಖಿ ಡಿಕ್ಕಿ ಆಗಿದೆ.

ಕಮಲಾಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳು ಸುಂಕಪ್ಪನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆತನೂ ಚಿಕಿತ್ಸೆ ಫಲಿಸದೇ ಶುಕ್ರವಾರ ಸಂಜೆ ಮೃತಪಟ್ಟಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Fraud Case: ಆರ್‌ಬಿಐ ಹಾಗೂ ಇಡಿ ಹೆಸರಿನಲ್ಲಿ ಕೋಟಿ ಕೋಟಿ ಲೂಟಿ; ಖತರ್ನಾಕ್‌ ಗ್ಯಾಂಗ್‌ ಅರೆಸ್ಟ್‌

ಕೊಡಗಿನಲ್ಲಿ ಮರಕ್ಕೆ ಬೈಕ್‌ ಡಿಕ್ಕಿ; ಸವಾರರ ದುರ್ಮರಣ

ಕೊಡಗಿನ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬೈಕ್‌ವೊಂದು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ ಸವಾರರು ಇಬ್ಬರು ದುರ್ಮರಣ ಹೊಂದಿದ್ದಾರೆ. ಕೊಡಗಿನ ಸುಂಟಿಕೊಪ್ಪ ಬಳಿಯ ಶಾಂತಿಗೇರಿಯಲ್ಲಿ ರಾತ್ರಿ ಅಪಘಾತ ನಡೆದಿದೆ. ಪ್ರಸನ್ನ(24), ಆಕಾಶ್(24) ಮೃತ ದುರ್ದೈವಿಗಳು.

ಮೃತರು ಪಿರಿಯಾಪಟ್ಟಣ ತಾಲೂಕಿನ ಹಾಲೇನಹಳ್ಳಿ ನವಲೂರು ಗ್ರಾಮದವರು. ಪಿರಿಯಾಪಟ್ಟಣದಿಂದ ಮಡಿಕೇರಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ‌ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ತುಮಕೂರಿನಲ್ಲಿ ಬೈಕ್‌ಗಳ ನಡುವೆ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು

ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ಘಟನೆ ನಡೆದಿದೆ. ಹೊಳೆ ನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಯ ಕಲ್ಲಳ್ಳಿ ನಿವಾಸಿ ನವೀನ್ (28) ಹಾಗೂ ತಿಪಟೂರು ತಾಲೂಕಿನ ಗಂಗನಘಟ್ಟ ಗ್ರಾಮದ ಶೇಷಾದ್ರಿ (47) ಮೃತ ದುರ್ದೈವಿಗಳು.

ನವೀನ್ ಎಂಬಾತ ಚನ್ನರಾಯಪಟ್ಟಣ ಕಡೆಯಿಂದ ತಿಪಟೂರು ಮಾರ್ಗವಾಗಿ ಅಪಾಚಿ ಬೈಕ್‌ನಲ್ಲಿ ಹೋಗುತ್ತಿದ್ದ. ಈ ವೇಳೆ ಶೇಷಾದ್ರಿ ಹಾಗೂ ಸಚಿನ್ ಎಂಬುವವರು ಹಿಂಬದಿಯಿಂದ ಜುಪಿಟರ್ ಬೈಕ್‌ನಲ್ಲಿ ಬರುತ್ತಿದ್ದರು. ಮುಂದೆ ಹೋಗುತ್ತಿದ್ದ ನವೀನ್ ಏಕಾಏಕಿ ಬೈಕ್ ತಿರುಗಿಸಿದ ಪರಿಣಾಮ, ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದೆ.

ಡಿಕ್ಕಿ ರಭಸಕ್ಕೆ ನವೀನ್, ಶೇಷಾದ್ರಿ ಸ್ಥಳದಲ್ಲೇ ಮೃತಪಟ್ಟರೆ, ಸಚಿನ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಸ್ಥಳಕ್ಕೆ ನೊಣವಿನಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತಿಪಟೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವಾರಾಂತ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಇತ್ತ ಮಳೆ ಇಲ್ಲದೆ ಕಂಗಲಾಗಿದ್ದ ವಿಜಯಪುರದಲ್ಲಿ ಮಳೆಯಾದರೆ, ಕಲಬುರಗಿಯಲ್ಲಿ ನೀರು ನುಗ್ಗಿ ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Rain News : ರಾಜ್ಯಾದ್ಯಂತ ಮಳೆ ಅಬ್ಬರ ತಗ್ಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನಲ್ಲಿ ಕೆಲವೊಮ್ಮೆ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

ಮಾನ್ಸೂನ್‌‌‌ನಲ್ಲಿ ಟ್ರೆಂಡಿಯಾದ ಫ್ರೆಂಡ್‌‌‌ಶಿಪ್‌ ಡೇ ಫ್ಯಾಷನ್‌ ಥೀಮ್‌

ಮಾನ್ಸೂನ್‌ನಲ್ಲಿ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ (Friendshipday Fashion) ಥೀಮ್‌ ಟ್ರೆಂಡಿಯಾಗಿದೆ. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಅಗಸ್ಟ್ ನ ಮೊದಲ ಭಾನುವಾರ ಸೆಲೆಬ್ರೇಟ್‌ ಫ್ರೆಂಡ್‌ ಶಿಪ್‌ ಡೇ ಫ್ಯಾಷನ್‌ನ ಕಾನ್ಸೆಪ್ಟ್ ಒಂದೇ ಎಂದೆನಿಸಿದರೂ ಥೀಮ್‌ ಹಾಗೂ ಸ್ಟೈಲಿಂಗ್‌ ಪ್ರತಿ ವರ್ಷ ಬದಲಾಗುತ್ತದೆ. ಫ್ರೆಂಡ್ಸ್ ಗ್ರೂಪ್‌ನಲ್ಲಿ ಒಮ್ಮೆ ಕಾಣಿಸಿಕೊಂಡ ಫ್ಯಾಷನ್‌ ಮುಂಬರುವ ವರ್ಷ ಕಾಣಿಸುವುದಿಲ್ಲ! ಎನ್ನುತ್ತಾರೆ ಫ್ಯಾಷನಿಸ್ಟಾಗಳು. ಹಾಗಾದಲ್ಲಿ ಈ ಬಾರಿಯ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ ಏನು? ಹೇಗೆಲ್ಲಾ ಕಾಣಿಸಿಕೊಳ್ಳಬಹುದು? ಮಾನ್ಸೂನ್‌ ಫ್ರೆಂಡ್‌ಶಿಪ್‌ ಡೇ ಲುಕ್‌ ಹೇಗೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಒಂದಿಷ್ಟು ಸಲಹೆ ನೀಡಿದ್ದಾರೆ.

Friendshipday Fashion

ಫ್ರೆಂಡ್‌ಶಿಪ್‌ ಡೇಗೂ ಬಂತು ಫ್ಯಾಷನ್‌ ಥೀಮ್‌

ಫ್ರೆಂಡ್‌ಶಿಪ್‌ ಡೇ ಆಚರಿಸುವ ಸ್ನೇಹಿತರು ಹಾಗೂ ಅವರ ಗ್ರೂಪ್‌ಗಳು, ತಮ್ಮದೇ ಆದ ಥೀಮ್‌ ಫ್ಯಾಷನ್‌ ಫಾಲೋ ಮಾಡಲಾರಂಭಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ, ಮಾಲ್‌-ಶಾಪ್‌ಗಳಲ್ಲಿ ಬಲ್ಕ್‌ ಆರ್ಡರ್ನಲ್ಲಿ ಫ್ಯಾಷನ್‌ವೇರ್‌ಗಳೂ ದೊರೆಯುತ್ತಿವೆ. ಕಾರ್ಪೋರೇಟ್‌ ಕಚೇರಿಯ ಉದ್ಯೋಗಿಗಳಾಗಿರಬಹುದು ಅಥವಾ ಕಾಲೇಜು ಹುಡುಗ-ಹುಡುಗಿಯರಾಗಿರಬಹುದು. ಅವರವರ ಗ್ರೂಪ್‌ನ ಅಭಿರುಚಿಗೆ ತಕ್ಕಂತೆ ಫ್ಯಾಷನ್‌ ಥೀಮ್‌ಗಳನ್ನು ರೂಪಿಸಿಕೊಂಡು ಫ್ಯಾಷನ್‌ವೇರ್‌ಗಳನ್ನು ಧರಿಸುವುದು ಟ್ರೆಂಡಿಯಾಗಿದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಇನ್ನು, ಥೀಮ್‌ ಎಂದಾಕ್ಷಣಾ ಗುಂಪಿನ ಎಲ್ಲರ ಔಟ್‌ಫಿಟ್‌ಗಳು ಒಂದೇ ಆಗಿರಬೇಕೆಂದಿಲ್ಲ! ಒಟ್ಟಿನಲ್ಲಿ ಅವರೆಲ್ಲರೂ ಧರಿಸುವ ಯಾವುದೇ ಉಡುಪು ಅಥವಾ ಆಕ್ಸೆಸರೀಸ್‌ ಇಲ್ಲವೇ ಸ್ಟೈಲಿಂಗ್‌ ಒಂದೇ ಬಗೆಯದ್ದಾಗಿರಬಹುದು. ಅದು ಔಟಿಂಗ್‌ನದ್ದಾಗಿರಬಹುದು, ಪಾರ್ಟಿವೇರ್‌ನದ್ದಾಗಿರಬಹುದು ಅಥವಾ ಕೆಫೆ ಅಥವಾ ರೆಸ್ಟೋರೆಂಟ್‌ನಲ್ಲಿ ಕಾಲ ಕಳೆಯುವಂತದ್ದಾಗಿರಬಹುದು. ಆಯಾ ಗ್ರೂಪ್‌ನ ಐಡೆಂಟಿಟಿಗೆ ತಕ್ಕಂತೆ ಥೀಮ್‌ ಫ್ಯಾಷನ್‌ ಬದಲಿಸಿಕೊಳ್ಳಬಹುದು ಎನ್ನುತ್ತಾರೆ ಡಿಸೈನರ್‌ ರಿಯಾಜ್‌ ಹಾಗೂ ರಕ್ಷ್.

Friendshipday Fashion

ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಸ್ಟೈಲಿಂಗ್‌

ಸ್ನೇಹಿತರ ಗ್ರೂಪ್‌ಗಳು ಕೇವಲ ಜೆನ್‌ ಜಿ, ಮಿಲೆನಿಯಲ್‌ ಜನರಿಂದ ಕೂಡಿರಬೇಕೆಂದಿಲ್ಲ, ಗ್ರೂಪ್‌ಗಳು ವಯಸ್ಸಾಗಿರುವ ಹಿರಿಯರದ್ದು ಆಗಿರಬಹುದು ಅಥವಾ ಸಮಾನ ಮನಸ್ಕರ ವಿಭಿನ್ನ ಗ್ರೂಪ್‌ಗಳಾಗಬಹುದು. ಆಯಾ ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಡ್ರೆಸ್ಸಿಂಗ್‌ ಹಾಗೂ ಸ್ಟೈಲಿಂಗ್‌ ಬದಲಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

ಫ್ರೆಂಡ್‌ಶಿಪ್‌ ಡೇ ಸ್ಟೈಲಿಂಗ್‌ಗೆ ಸಿಂಪಲ್‌ ಟಿಪ್ಸ್

  • ಫ್ರೆಂಡ್ಸ್ ಗ್ರೂಪ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಎಥ್ನಿಕ್‌, ವೆಸ್ಟರ್ನ್‌, ಸೆಮಿ ಎಥ್ನಿಕ್‌, ಬಿಂದಾಸ್‌ ಯಾವುದಾದರೂ ಸರಿಯೇ ಕಂಫರ್ಟಬಲ್‌ ಸ್ಟೈಲಿಂಗ್‌ ಚೂಸ್‌ ಮಾಡಿ.
  • ಔಟಿಂಗ್‌ ಆದಲ್ಲಿ ಮಾನ್ಸೂನ್‌ ಸೀಸನ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಆದಷ್ಟೂ ಯಂಗ್‌ ಲುಕ್‌ ನೀಡುವ ಸ್ಟೈಲಿಂಗ್‌ ಅಳವಡಿಸಿಕೊಳ್ಳಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Karnataka Weather : ಮಳೆ ಬಂದರೂ ಕಷ್ಟ ಬಾರದೆ ಇದ್ದರೂ ನಷ್ಟ ಎಂಬಂತಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಮಳೆ ಇಲ್ಲದೇ ಅನಾವೃಷ್ಠಿಯಾಗಿದೆ. ಇತ್ತ ಭೀಮಾ ನದಿ ಅಬ್ಬರಕ್ಕೆ ಕೆಲವೆಡೆ ನೆರೆ ಸೃಷ್ಟಿಯಾಗಿದೆ. ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Weather Forecast
Koo

ವಿಜಯನಗರ: ಒಂದು ಕಡೆ ಭಾರಿ ಮಳೆಯಿಂದಾಗಿ (Karnataka Weather Forecast) ಅತಿ ವೃಷ್ಠಿ ಉಂಟಾದರೆ ಮೊತ್ತೊಂದು ಕಡೆ ಮಳೆ (No Rain) ಇಲ್ಲದೇ ಅನಾವೃಷ್ಠಿಯಾಗಿದೆ. ಮಳೆಯಿಂದ ಮನೆ-ಮಠ ಕಳೆದುಕೊಂಡು ನಷ್ಟ ಅನುಭವಿಸಿದ್ದರೆ, ಇತ್ತ ಕಡೆ ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಸ್ವತಃ ರೈತರೇ ಬೆಳೆ ನಾಶ ಮಾಡಿದ್ದಾರೆ. ವಿಜಯನಗರದ ಗೊಲ್ಲರಹಳ್ಳಿ ಗ್ರಾಮದ ಗುಬ್ಬಿಕಾಳೇ ಶ್ರೀ ಪರಶುರಾಮ ಎಂಬ ರೈತ ಬೆಳೆ ನಾಶ ಮಾಡಿದ್ದಾರೆ.

ಪರಶುರಾಮ ಅವರು 8 ಎಕರೆಯಲ್ಲಿ ಸಾವಿರಾರು ರೂ. ಖರ್ಚು ಮಾಡಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಮುಂಗಾರಿನಲ್ಲಿ ಅಲ್ಪ ಸ್ವಲ್ಪ ಮಳೆ ಬಂದಿದ್ದರಿಂದ ರೈತರು ಬಿತ್ತನೆ ಮಾಡಿದ್ದರು. ಮುಂದಿನ ದಿನಗಳಲ್ಲಿ ಸಮರ್ಪಕ ಮಳೆ ಬಾರದಿದ್ದಕ್ಕೆ ಕಾಳು ಕಟ್ಟುವ ಮೊದಲೇ ಬೆಳೆ ಒಣಗಿ ಹೋಗಲಿದೆ. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 4,625 ಹಕ್ಟೇರ್‌ ಜೋಳ, ಮೆಕ್ಕೆಜೋಳ, ಸಜ್ಜೆ ಇನ್ನಿತರ ಬೆಳೆ ಬಿತ್ತನೆ ಕಾರ್ಯ ಆಗಿದೆ.

ಆದರೆ ಮಳೆ ಇಲ್ಲದೇ ಒಣಗುತ್ತಿದೆ ಎಂದು ರೈತರು ಸಂಕಟದಿಂದ ಬೆಳೆ ನಾಶ ಮಾಡುತ್ತಿದ್ದಾರೆ. ಎಲ್ಲಾ ಕಡೆ ಬಿತ್ತನೆಯಾಗಿದ್ದು ತಂಪು ಇಲ್ಲದಿರುವುದು ಬೆಳೆ ಒಣಗಿ ನೆಲಕಚ್ಚಿ ಲಕ್ಷಾಂತರ ರೂಪಾಯಿ ನಷ್ಟವನ್ನುಂಟು ಮಾಡಿದೆ. ಬಿತ್ತನೆ ಮಾಡಿದ್ದ ಖರ್ಚು ಕೂಡ ರೈತನಿಗೆ ಬಾರದೇ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಒಂದು ಎಕರೆ ಬಿತ್ತನೆಗೆ 20 ರಿಂದ 30 ಸಾವಿರ ರೂ ಖರ್ಚು ಮಾಡಲಾಗಿದೆ. ಈಗ ಬಿಡಿಗಾಸು ಸಿಗದೆ ರೈತರು ಕಂಗಾಲಾಗಿದ್ದಾರೆ. ದನಕರುಗಳಿಗೆ ಮೇವಾದರೂ ಸಿಗಲಿ ಎಂಬ ಉದ್ದೇಶದಿಂದ ಕಟಾವು ಮಾಡ್ತಿದ್ದೇವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

ಮೈದುಂಬಿ ತುಂಬಿ ಹರಿಯುತ್ತಿರುವ ಭೀಮಾ

ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಉಜನಿ ಜಲಾಶಯದಿಂದ ಮತ್ತೆ ಭೀಮಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಭೀಮಾ ನದಿ ಮೈದುಂಬಿ ತುಂಬಿ ಹರಿಯುತ್ತಿದ್ದು, ಕಲಬುರಗಿಯ ಅಫಜಲಪೂರ ಘತ್ತರಗಾ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಕಲಬುರಗಿ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಆಗಿದೆ. ದೇವಲಗಾಣಗಾಪುರ ಬಳಿಯ ಸೇತುವೆ ಸಹ ಮುಳುಗಡೆಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸೇತುವೆ ಕಡೆ ಜನ ಹೋಗದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ಮಹಾರಾಷ್ಟ್ರದ ಮಳೆಯಿಂದ ತತ್ತರಿಸಿದ ಗಡಿ ಜನತೆ

ಮಹಾರಾಷ್ಟ್ರದ ಮಳೆಯಿಂದ ಗಡಿ ಜನತೆ ತತ್ತರಿಸಿ ಹೋಗಿದ್ದಾರೆ. ಕಳೆದ ಒಂದು ವಾರದಿಂದ ಕೃಷ್ಣಾ ನದಿ ಒಳ ಹರಿವು ಯಥಾವತ್‌ ಕಾಯ್ದುಕೊಂಡಿದೆ. ಕೃಷ್ಣಾ ನದಿ ಒಳ ಹರಿವಿನಿಂದ ಕೃಷ್ಣಾ ನದಿ ತೀರದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈಗಾಗಲೇ ನದಿ‌ ತೀರದ ಜನರಿಗೆ ತೊಂದರೆಯಾಗದಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಸರ್ಕಾರದ ಆದೇಶಕ್ಕಿಲ್ಲ ಕವಡೆ ಕಾಸಿನ‌ ಕಿಮ್ಮತ್ತಿಲ್ಲ. ನೆರೆ ಬಂದರೂ ತಾಲೂಕಾಡಳಿತ ಗಂಜಿ‌ ಕೇಂದ್ರ ತೆಗೆದಿಲ್ಲ. ಕಲಬುರಗಿಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದ ನೆರೆ ಸಂತ್ರಸ್ಥರು ಸಂಕಷ್ಟ ಪಡುತ್ತಿದ್ದಾರೆ. ದನಗಳಿಗೆ ಮೇವಿಲ್ಲ, ಇರಲು ಜಾಗ ಇಲ್ಲ ಹೀಗಾದರೆ ಹೇಗೆ ಎಂದು ನೆರೆ ಸಂತ್ರಸ್ಥರು ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಿದ್ದಾರೆ.

ಯಾದಗಿರಿಯಲ್ಲಿ ನದಿ ತೀರದ ದೇಗುಲಗಳು ಜಲಾವೃತ

ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯದಿಂದ ಭಾರಿ ಪ್ರಮಾಣದ ನೀರು ಬಿಡುಗಡೆ ಆಗುತ್ತಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ ಭೀಮಾನದಿಗೆ 80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಬ್ಯಾರೇಜ್‌ನ 24 ಗೇಟ್‌ಗಳಲ್ಲಿ 20 ಗೇಟ್ ಓಪನ್ ಮಾಡಿ ನೀರು ಬಿಡುಗಡೆ ಮಾಡಲಾಗಿದ್ದು, ಅಪಾಯದ ಮಟ್ಟ ಮೀರಿ ಭೀಮಾನದಿ ಹರಿಯುತ್ತಿದೆ. ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಕಂಗಳೇಶ್ವರ ಹಾಗೂ ವಿರಾಂಜನೇಯ ದೇಗುಲಗಳು ಸಂಪೂರ್ಣ ಮುಳುಗಡೆಯಾಗಿದೆ. ಈಗಾಗಲೇ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಮುಂಗಾರು ಚುರುಕು

ನೈರುತ್ಯ ಮುಂಗಾರು ಉತ್ತರ ಒಳನಾಡಲ್ಲಿ ಚುರುಕುಗೊಂಡಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿತ್ತು. ಶುಕ್ರವಾರದಂದು (ಆ.9) ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವಡೆ ಹಗುರದಿಂದ ಕೂಡಿರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ; ಉಳಿದೆಡೆ ಹೇಗಿರಲಿದೆ?

Karnataka weather Forecast : ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಮಲೆನಾಡು-ಕರಾವಳಿ ಸುತ್ತಮುತ್ತ ತಗ್ಗಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದ್ದು, ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕ ಸ್ಥಳಗಳಲ್ಲಿ (Rain News) ಮಳೆಯಾಗಲಿದೆ. ಉತ್ತರ ಒಳನಾಡಿನ ಮಧ್ಯಮ ಮಳೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಗಾಳಿ ವೇಗವು ಹೆಚ್ಚಲಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Tarsem Singh
ದೇಶ48 mins ago

Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Vinesh Phogat
ಕ್ರೀಡೆ51 mins ago

Vinesh Phogat : ವಿನೇಶ್​​ಗೆ ಬೆಳ್ಳಿ ಪದಕ ಕೊಡಲು ಸಾಧ್ಯವಿಲ್ಲ; ಒಲಿಂಪಿಕ್ಸ್​​ ಸಂಸ್ಥೆ ಮುಖ್ಯಸ್ಥ ಥಾಮಸ್ ಬಾಕ್​ ಸ್ಪಷ್ಟನೆ

ಕರ್ನಾಟಕ1 hour ago

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

Paris Olympics 2024
ಕ್ರೀಡೆ1 hour ago

Paris Olympics 2024 : ಲೈಂಗಿಕ ಕಿರುಕುಳದ ಆರೋಪದ ಮೇಲೆ ಈಜಿಪ್ಟ್​​ ಮೊಹಮ್ಮದ್ ಎಲ್ಸಯೀದ್ ಅರೆಸ್ಟ್​​

Independence day 2024
ತಂತ್ರಜ್ಞಾನ1 hour ago

Independence Day 2024: ಹೊಗೆ ಬಂಡಿಯಿಂದ ವಂದೇ ಭಾರತ್‌‌ವರೆಗೆ; ಭಾರತೀಯ ರೈಲ್ವೆಯ ಅದ್ಭುತ ಪಯಣ!

CAA Rules
ದೇಶ1 hour ago

CAA Rules: ಪಾಕ್‌, ಬಾಂಗ್ಲಾ, ಆಘ್ಘನ್‌ ನಿರಾಶ್ರಿತರಿಗೆ ಸಿಹಿ ಸುದ್ದಿ; ಸಿಎಎ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

Bengaluru News
ಬೆಂಗಳೂರು2 hours ago

Bengaluru News: ಬೃಹತ್‌ ಜನಾಂದೋಲನಕ್ಕೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬೆಂಬಲ

KCET Mock Allotment 2024
ಕರ್ನಾಟಕ2 hours ago

KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಮತ್ತೆ ಮುಂದೂಡಿಕೆ; ಯಾವಾಗ ಪ್ರಕಟ?

Neeraj Chopra
ಕ್ರೀಡೆ2 hours ago

Neeraj Chopra : ಸಮಾರೋಪ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯುವ ಅವಕಾಶ ಶ್ರೀಜೇಶ್​ಗೆ ಬಿಟ್ಟುಕೊಟ್ಟ ನೀರಜ್​ ಚೋಪ್ರಾ

Narendra Modi
ದೇಶ2 hours ago

Narendra Modi: ಮೋದಿ ಪ್ರೊಫೈಲ್‌ ಫೋಟೊ ಈಗ ತಿರಂಗಾ; ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜನರಿಗೆ ಕರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌