Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ? - Vistara News

ವಿದೇಶ

Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

Israel-Hamas War: ಹಮಾಸ್ ದಾಳಿಯಿಂದ ಮೃತಪಟ್ಟಿರುವ ಪುತ್ರರ ವೀರ್ಯವನ್ನು ಇಸ್ರೇಲ್ ಪೋಷಕರು ಸಂಗ್ರಹಿಸಿ ಇಡುತ್ತಿದ್ದಾರೆ. ಈಗಾಗಲೇ 170ಕ್ಕೂ ಹೆಚ್ಚು ಸೈನಿಕರ ಮತ್ತು ನಾಗರಿಕರ ದೇಹದಿಂದ ವೀರ್ಯವನ್ನು ಸಂಗ್ರಹಿಸಿ ಇಡಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಸಂಗ್ರಹಿಸಿದ ವೀರ್ಯಕ್ಕಿಂತ ಇದು 15 ಪಟ್ಟು ಹೆಚ್ಚಾಗಿದೆ ಎಂದು ಇಸ್ರೇಲ್ ಆರೋಗ್ಯ ಸಚಿವಾಲಯ ಹೇಳಿದೆ.

VISTARANEWS.COM


on

Israel-Hamas War
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಮಾಸ್ ದಾಳಿಯಿಂದ (Israel-Hamas War) ಮೃತಪಟ್ಟಿರುವ ಪುತ್ರರ ವೀರ್ಯವನ್ನು (sperm of the sons) ಇಸ್ರೇಲ್ ನ ಹೆಚ್ಚಿನ ದುಃಖಿತ ಪೋಷಕರು (parents demand) ಕೇಳುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಸೈನಿಕರ (soldier) ಪೋಷಕರಾಗಿದ್ದಾರೆ. ತಮ್ಮ ಪುತ್ರರ ಶವವನ್ನು ಫ್ರೀಜ್ ಮಾಡಲು ಅನೇಕರು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ 170ಕ್ಕೂ ಹೆಚ್ಚು ಸೈನಿಕರ ಮತ್ತು ನಾಗರಿಕರ ದೇಹದಿಂದ ವೀರ್ಯವನ್ನು ಸಂಗ್ರಹಿಸಿ ಇಡಲಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ಸಂಗ್ರಹಿಸಿದ ವೀರ್ಯಕ್ಕಿಂತ ಇದು 15 ಪಟ್ಟು ಹೆಚ್ಚಾಗಿದೆ ಎನ್ನಲಾಗಿದೆ. ತಮ್ಮ ಮಕ್ಕಳ ವೀರ್ಯದಿಂದ ಮುಂದೆ ಗರ್ಭಿಣಿಯಾಗ ಬಯಸುವ ಮಹಿಳೆಯರಿಂದ ಪೋಷಕರು ಮಕ್ಕಳನ್ನು ಪಡೆಯಲು ಅನೇಕರು ಇದರ ಮೊರೆ ಹೋಗಿದ್ದಾರೆ.

ಅಕ್ಟೋಬರ್ 7ರ ಹಮಾಸ್ ದಾಳಿಯ ಬಳಿಕ ಇಸ್ರೇಲ್‌ನಲ್ಲಿ ಕೆಲವು ನಿಯಮಗಳನ್ನು ಸಡಿಲಿಸಲಾಗಿದೆ. ಇದೀಗ ಸೇನಾ ಅಧಿಕಾರಿಗಳೇ ಮೃತಪಟ್ಟ ಸೈನಿಕರ ವೀರ್ಯವನ್ನು ಸಂಗ್ರಹಿಸಿ ಇಡಬೇಕೆ ಎಂದು ಪೋಷಕರನ್ನು ಸಂಪರ್ಕಿಸಿ ಕೇಳುತ್ತಿದ್ದಾರೆ.

2024ರ ಏಪ್ರಿಲ್ 6 ರಂದು ಗಾಜಾ ಪಟ್ಟಿಯಲ್ಲಿ 20 ವರ್ಷದ ರೀಫ್ ಯುದ್ಧದಲ್ಲಿ ಕೊಲ್ಲಲ್ಪಟ್ಟಿದ್ದಾನೆ. ರೀಫ್ ನ ಮನೆಬಾಗಿಲಿಗೆ ಬಂದ ಸೇನಾಧಿಕಾರಿಗಳು ಪೋಷಕರ ಬಳಿ ರೀಫ್ ನ ವೀರ್ಯವನ್ನು ಹಿಂಪಡೆಯಲು ಇನ್ನೂ ಸಮಯವಿದೆ. ಕುಟುಂಬವು ಇದಕ್ಕೆ ಆಸಕ್ತಿ ಹೊಂದಿದೆಯೇ ಎಂದು ಕೇಳಿದ್ದಾರೆ. ಇದಕ್ಕೆ ರೀಫ್ ನ ತಂದೆ ತಕ್ಷಣವೇ ಪ್ರತಿಕ್ರಿಯಿಸಿ ರೀಫ್ ಜೀವನವನ್ನು ಪೂರ್ಣವಾಗಿ ಬದುಕಲಿ ಎಂದು ಹೇಳಿದರು. ರೀಫ್ ಮಕ್ಕಳನ್ನು ಪ್ರೀತಿಸುತ್ತಿದ್ದ, ಸ್ವಂತ ಮಕ್ಕಳನ್ನು ಬಯಸಿದ್ದ. ಆದರೆ ಆತನಿಗೆ ಹೆಂಡತಿ ಅಥವಾ ಗೆಳತಿ ಇಲ್ಲ ಎಂದು ಹೇಳಿಕೊಂಡಿದ್ದರು.

ಮಗನ ವೀರ್ಯ ರಕ್ಷಣೆಗೆ ಪೋಷಕರು ಮುಂದಾಗಿದ್ದರಿಂದ ಆತನ ಮಗುವಿಗೆ ಜನ್ಮ ನೀಡಲು ಹಲವಾರು ಮಹಿಳೆಯರು ಮುಂದೆ ಬಂದಿರುವುದಾಗಿ ರೀಫ್ ಪೋಷಕರು ಹೇಳಿದ್ದಾರೆ. ಇಸ್ರೇಲ್ ಮೇಲೆ ಅಕ್ಟೋಬರ್ 7ರಂದು ಹಮಾಸ್ ದಾಳಿಯ ಅನಂತರ ವೀರ್ಯವನ್ನು ಸಂರಕ್ಷಿಸಲು ಬಯಸುವ ಕುಟುಂಬಗಳ ಸಂಖ್ಯೆ ಬೆಳೆಯುತ್ತಿದೆ. ಈ ದಾಳಿಯಲ್ಲಿ ಸುಮಾರು 1,200 ಜನರು ಕೊಲ್ಲಲ್ಪಟ್ಟರು ಮತ್ತು 251ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳುಗಳಾಗಿ ಮಾಡಲಾಗಿತ್ತು.

ಹಮಾಸ್ ವಿರುದ್ಧ ಇಸ್ರೇಲ್ ಗಾಜಾದಲ್ಲಿ ನಡೆಸಿದ ಪ್ರಮುಖ ಮಿಲಿಟರಿ ಕಾರ್ಯಾಚರಣೆಯಲ್ಲಿ 39,000 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದಾರೆ. ಸುಮಾರು 400 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ. ಇಸ್ರೇಲಿ ಆರೋಗ್ಯ ಸಚಿವಾಲಯದ ಪ್ರಕಾರ ಅಕ್ಟೋಬರ್ 7 ರಿಂದ ನಾಗರಿಕರು ಮತ್ತು ಸೈನಿಕರ ಸುಮಾರು 170 ಯುವಕರಿಂದ ವೀರ್ಯವನ್ನು ಪಡೆಯಲಾಗಿದೆ. ಇದು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಿಸುಮಾರು 15 ಪಟ್ಟು ಹೆಚ್ಚು.


ಈ ಪ್ರಕ್ರಿಯೆಯಲ್ಲಿ ಮೃತ ವ್ಯಕ್ತಿಯ ವೃಷಣದಲ್ಲಿ ಛೇದನವನ್ನು ಮಾಡಿ ಅಂಗಾಂಶದ ಒಂದು ಸಣ್ಣ ತುಂಡನ್ನು ತೆಗೆದು ಜೀವಂತ ವೀರ್ಯ ಕೋಶಗಳನ್ನು ಪ್ರಯೋಗಾಲಯದಲ್ಲಿ ಪ್ರತ್ಯೇಕಿಸಿ ಮತ್ತು ಫ್ರೀಜ್ ಮಾಡಲಾಗುತ್ತದೆ. ವ್ಯಕ್ತಿ ಮೃತಪಟ್ಟ 24 ಗಂಟೆಗಳ ಒಳಗೆ ಇದನ್ನು ಮಾಡಿದರೆ ಯಶಸ್ಸಿನ ಪ್ರಮಾಣ ಹೆಚ್ಚಾಗಿರುತ್ತದೆ. 72 ಗಂಟೆಗಳವರೆಗೆ ಇದನ್ನು ಮಾಡಲು ಅವಕಾಶವಿದೆ.

ಅಕ್ಟೋಬರ್‌ನಲ್ಲಿ ಇಸ್ರೇಲಿ ಆರೋಗ್ಯ ಸಚಿವಾಲಯವು ಪೋಷಕರಿಗೆ ಇದರ ಕಾರ್ಯವಿಧಾನವನ್ನು ಕೋರಲು ನ್ಯಾಯಾಲಯದ ಆದೇಶವನ್ನು ಪಡೆಯುವ ಅಗತ್ಯವನ್ನು ಮನ್ನಾ ಮಾಡಿದೆ. ಐಡಿಎಫ್ ಇತ್ತೀಚಿನ ವರ್ಷಗಳಲ್ಲಿ ದುಃಖಿತ ಪೋಷಕರಿಗೆ ಅದನ್ನು ನೀಡುವಲ್ಲಿ ಮುಂದಾಗಿದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾ ದಂಗೆ ಹಿಂದೆ ಇದ್ಯಾ ಪಾಕ್‌ ISI ಕೈವಾಡ? ಶೇಖ್‌ ಹಸೀನಾ ಪುತ್ರ ಹೇಳಿದಿಷ್ಟು!

ವೀರ್ಯವನ್ನು ಸಂಗ್ರಹಿಸಿಡುವುದು ಸುಲಭವಾಗಿದ್ದರೂ ಮಗುವನ್ನು ಪಡೆಯಲು ಅದನ್ನು ಬಳಸಲು ಬಯಸುವ ವಿಧವೆಯರು ಅಥವಾ ಪೋಷಕರು ನ್ಯಾಯಾಲಯದಲ್ಲಿ ಅದಕ್ಕೆ ದಾಖಲೆಗಳನ್ನು ಸಲ್ಲಿಸಿ ಕಾನೂನು ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಈ ಪ್ರಕ್ರಿಯೆಯು ಕೆಲವು ವರ್ಷಗಳನ್ನು ತೆಗೆದುಕೊಳ್ಳಬಹುದು. ಇದು ಸಮಯವಾಗಿರಲಿದೆ ಎನ್ನುತ್ತಾರೆ ದುಃಖಿತ ಪೋಷಕರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Tarsem Singh: ಪಂಜಾಬ್‌ನವನಾದ ತರ್ಸೇಮ್‌ ಸಿಂಗ್‌, ಉಗ್ರ ಲಖಬೀರ್‌ ಲಾಂಡಾನ ಸಹೋದರನಾಗಿದ್ದಾನೆ. ಈತನು ಮತ್ತೊಬ್ಬ ಉಗ್ರ ಹರ್ವಿಂದರ್‌ ಸಿಂಗ್‌ ರಿಂಡಾನ ಆಪ್ತನೂ ಆಗಿದ್ದಾನೆ. ಈತನು ಬಬ್ಬರ್‌ ಖಲಿಸ್ತಾನ ಇಂಟರ್‌ನ್ಯಾಷನಲ್‌ (BKI) ಉಗ್ರ ಸಂಘಟನೆಯ ಸದಸ್ಯನೂ ಆಗಿದ್ದಾನೆ. ಈತನನ್ನು ಎನ್‌ಐಎ ಅಧಿಕಾರಿಗಳು ಯುಎಇಯಲ್ಲಿ ಬಂಧಿಸಿದ್ದಾರೆ.

VISTARANEWS.COM


on

Tarsem Singh
Koo

ನವದೆಹಲಿ: ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆಯು (NIA) ವಿದೇಶದಲ್ಲೂ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಯಶಸ್ವಿಯಾಗಿದೆ. ಖಲಿಸ್ತಾನಿ ಉಗ್ರ (Khalistan Terrorist) ತರ್ಸೇಮ್‌ ಸಿಂಗ್‌ನನ್ನು (Tarsem Singh) ಎನ್‌ಐಎ ಅಧಿಕಾರಿಗಳು ಯುಎಇಯ ಅಬುಧಾಬಿಯಲ್ಲಿ ಬಂಧಿಸಿದ್ದು, ಭಾರತಕ್ಕೆ ಕರೆದುಕೊಂಡು ಬರುತ್ತಿದ್ದಾರೆ. ತರ್ಸೇಮ್‌ ಸಿಂಗ್‌ ವಿರುದ್ಧ ಎನ್‌ಐಎ ಅಧಿಕಾರಿಗಳು ಇದಕ್ಕೂ ಮೊದಲೇ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದರು. ಅದರಂತೆ, ಯುಎಇ ಅಧಿಕಾರಿಗಳು, ಇಂಟರ್‌ಪೋಲ್‌ ಜತೆ ಸಂಪರ್ಕ ಸಾಧಿಸಿ, ಹಸ್ತಾಂತರ ಪ್ರಕ್ರಿಯೆ ಮುಗಿಸಿ, ತರ್ಸೇಮ್‌ ಸಿಂಗ್‌ನನ್ನು ಅಬುಧಾಬಿಯಲ್ಲಿ ಬಂಧಿಸಿದ್ದಾರೆ.

ಪಂಜಾಬ್‌ನವನಾದ ತರ್ಸೇಮ್‌ ಸಿಂಗ್‌, ಉಗ್ರ ಲಖಬೀರ್‌ ಲಾಂಡಾನ ಸಹೋದರನಾಗಿದ್ದಾನೆ. ಈತನು ಮತ್ತೊಬ್ಬ ಉಗ್ರ ಹರ್ವಿಂದರ್‌ ಸಿಂಗ್‌ ರಿಂಡಾನ ಆಪ್ತನೂ ಆಗಿದ್ದಾನೆ. ಈತನು ಬಬ್ಬರ್‌ ಖಲಿಸ್ತಾನ ಇಂಟರ್‌ನ್ಯಾಷನಲ್‌ (BKI) ಉಗ್ರ ಸಂಘಟನೆಯ ಸದಸ್ಯನೂ ಆಗಿದ್ದಾನೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ. 2023ರ ನವೆಂಬರ್‌ನಲ್ಲಿ ಅಬುಧಾಬಿಯಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಎನ್‌ಐಎ ವಿಶೇಷ ನ್ಯಾಯಾಲಯವು ವಾರಂಟ್‌ ಹೊರಡಿಸಿದ ಬಳಿಕ ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿತ್ತು.

ಇಂಟರ್‌ಪೋಲ್‌ ರೆಡ್‌ ಕಾರ್ನರ್‌ ನೋಟಿಸ್‌ ಹೊರಡಿಸಿದ ಬಳಿಕ 2023ರಲ್ಲಿ ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರನನ್ನು ವಶಪಡಿಸಿಕೊಳ್ಳಲಾಗಿತ್ತು ಇದಾದ ಬಳಿಕ ಎನ್‌ಐಎ ಅಧಿಕಾರಿಗಳು ಯುಎಇ, ಇಂಟರ್‌ಪೋಲ್‌ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಸಮರ್ಪಕ ದಾಖಲೆಗಳನ್ನು ಒದಗಿಸಿ, ಯುಎಇಗೆ ತೆರಳಿ, ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗ ತರ್ಸೇಮ್‌ ಸಿಂಗ್‌ನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಎನ್‌ಐಎ ಅಧಿಕಾರಿಗಳು ಆತನನ್ನು ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಉಗ್ರ ಚಟುವಟಿಕೆಗಳ ಹಿನ್ನೆಲೆಯಲ್ಲಿ ತರ್ಸೇಮ್‌ ಸಿಂಗ್‌ ವಿರುದ್ಧ ಎನ್‌ಐಎ 2022ರ ಆಗಸ್ಟ್‌ನಲ್ಲಿ ಸುಮೋಟೊ (ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳುವುದು) ಕೇಸ್‌ ದಾಖಲಿಸಿಕೊಂಡಿತ್ತು. ಖಲಿಸ್ತಾನ ಲಿಬರೇಷನ್‌ ಫೊರ್ಸ್‌, ಬಿಕೆಐ, ಇಂಟರ್‌ನ್ಯಾಷನಲ್‌ ಸಿಖ್‌ ಯೂತ್‌ ಫೆಡರೇಷನ್‌ ಸೇರಿ ಹಲವು ಉಗ್ರ ಸಂಘಟನೆಗಳು ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುಮೋಟೊ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ತರ್ಸೇಮ್‌ ಸಿಂಗ್‌ ಕೃತ್ಯಗಳು ಬಯಲಾಗಿವೆ. ಇದಾದ ಬಳಿಕ ಎನ್‌ಐಎ ತನಿಖೆ ಚುರುಕುಗೊಳಿಸಿದೆ.

ಇದನ್ನೂ ಓದಿ: Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

Continue Reading

ದೇಶ

CAA Rules: ಪಾಕ್‌, ಬಾಂಗ್ಲಾ, ಆಘ್ಘನ್‌ ನಿರಾಶ್ರಿತರಿಗೆ ಸಿಹಿ ಸುದ್ದಿ; ಸಿಎಎ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

CAA Rules: ಭಾರತದ ಪೌರತ್ವ ಪಡೆಯಲು ನಿರಾಶ್ರಿತ ಅಲ್ಪಸಂಖ್ಯಾತರು ಇನ್ನು ಮುಂದೆ ಸುಲಭವಾಗಿ ಪೌರತ್ವ ಪಡೆಯುವ ರೀತಿಯಲ್ಲಿ ಸಿಎಎ ಕಾಯ್ದೆಯ ಪರಿಚ್ಛೇದ 1 ಎ ನಿಯಮಗಳನ್ನು ಕೇಂದ್ರ ಸರ್ಕಾರ ಬದಲಿಸಿದೆ. ದಾಖಲೆ ಸಲ್ಲಿಕೆಯಲ್ಲಿ ನಿರಾಶ್ರಿತರಿಗೆ ವಿಳಂಬ, ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಸಿಎಎ ನಿಯಮಗಳನ್ನು ಬದಲಾಯಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

VISTARANEWS.COM


on

CAA Rules
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆ ಸೃಷ್ಟಿಯಾಗಿದ್ದು, ಹಿಂದುಗಳ ಮೇಲೆ ಹಲ್ಲೆ, ಹತ್ಯೆ, ದೇವಾಲಯಗಳ ಮೇಲೆ ದಾಳಿಗಳು ನಡೆಯುತ್ತಿವೆ. ಮುಸ್ಲಿಮರೇ ಬಹುಸಂಖ್ಯಾತರಾಗಿರುವ ಬಾಂಗ್ಲಾದೇಶದಲ್ಲಿ ಹಿಂದುಗಳು ಸೇರಿ ಹಲವು ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯ (CAA) ನಿಯಮಗಳನ್ನು ಬದಲಿಸಿದೆ.

ಹೌದು, ಭಾರತದ ಪೌರತ್ವ ಪಡೆಯಲು ನಿರಾಶ್ರಿತ ಅಲ್ಪಸಂಖ್ಯಾತರು ಇನ್ನು ಮುಂದೆ ಸುಲಭವಾಗಿ ಪೌರತ್ವ ಪಡೆಯುವ ರೀತಿಯಲ್ಲಿ ಸಿಎಎ ಕಾಯ್ದೆಯ ಪರಿಚ್ಛೇದ 1 ಎ ನಿಯಮಗಳನ್ನು ಕೇಂದ್ರ ಸರ್ಕಾರ ಬದಲಿಸಿದೆ. ಅದರಂತೆ, ನಿರಾಶ್ರಿತರು ಕೇಂದ್ರ ಸರ್ಕಾರ, ಯಾವುದೇ ರಾಜ್ಯ ಸರ್ಕಾರ ಅಥವಾ ನ್ಯಾಯಾಂಗ ನೀಡುವ ದಾಖಲೆ, ಭೂಮಿಯ ದಾಖಲೆ ನೀಡಿದರೂ ಸಾಕು, ಭಾರತದ ಪೌರತ್ವವನ್ನು ಪಡೆಯಬಹುದಾಗಿದೆ. ಇದರ ಜತೆಗೆ ನಿರಾಶ್ರಿತರ ಅಜ್ಜ-ಅಜ್ಜಿ, ಮುತ್ತಜ್ಜ-ಮುತ್ತಜ್ಜಿಯು ಬಾಂಗ್ಲಾ, ಪಾಕ್‌ ಹಾಗೂ ಅಫಘಾನಿಸ್ತಾನದ ನಿವಾಸಿಗಳು ಎಂಬುದರ ಯಾವುದೇ ದಾಖಲೆ ನೀಡಿದರೂ ಭಾರತದ ಪೌರತ್ವ ಪಡೆಯಬಹುದಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ. ಈಗಾಗಲೇ ಹಲವು ನಿರಾಶ್ರಿತರಿಗೆ ಕೇಂದ್ರ ಸರ್ಕಾರವು ಪೌರತ್ವ ನೀಡಿದೆ.

ಇದನ್ನೂ ಓದಿ: CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Continue Reading

ವಿದೇಶ

Viral News: ಇಸ್ರೇಲ್ ಮಹಿಳಾ ಸೈನಿಕರಿಂದ ನಿರಂತರ ಅತ್ಯಾಚಾರ; ಕ್ರೂರ ಅನುಭವ ಬಿಚ್ಚಿಟ್ಟ ಪ್ಯಾಲೇಸ್ಟಿನಿಯನ್ ಬಂಧಿತ

ಮಹಿಳಾ ಸೈನಿಕರು ತಮ್ಮ ಮೇಲೆ ಅತ್ಯಾಚಾರ ನಡೆಸುತ್ತಿದ್ದರು, ವಿದ್ಯುತ್ ಆಘಾತ ನೀಡಿದ್ದಾರೆ, ಸಾಕಷ್ಟು ಏಟು, ಅವಮಾನವನ್ನು ಮಾಡಿದ್ದಾರೆ. ಎರಡು ರಾತ್ರಿ ಅತ್ಯಂತ ಕನಿಷ್ಠ ಬಟ್ಟೆಯಲ್ಲಿ ಮಳೆಯಲ್ಲಿ ನಿಲ್ಲಿಸಿದ್ದಾರೆ ಎಂದು ಇಸ್ರೇಲ್ ಸೈನಿಕರ ಬಂಧನದಿಂದ ಬಿಡುಗಡೆಯಾದ ಪ್ಯಾಲೇಸ್ಟಿನಿಯನ್ ಇಬ್ರಾಹಿಂ ಸಲೇಂ (Viral News) ಹೇಳಿಕೊಂಡಿದ್ದಾರೆ. ಪ್ಯಾಲೇಸ್ಟಿನಿಯನ್ ಬಂಧಿತ ತಾನು ಅನುಭವಿಸಿರುವ ಕರಾಳ ಅನುಭವವನ್ನು ವಿವರಿಸಿದ್ದಾರೆ. ಅವರ ಮಾತಿನ ವಿಡಿಯೊ ಸಂಚಲನ ಮೂಡಿಸಿದೆ.

VISTARANEWS.COM


on

By

Viral News
Koo

ಪ್ಯಾಲೇಸ್ಟಿನಿಯನ್ ಬಂಧಿತರನ್ನು (Palestinian prisoners) ಇಸ್ರೇಲ್ (Israeli army) ಎಷ್ಟು ಕ್ರೂರವಾಗಿ ನಡೆಸಿಕೊಳ್ಳುತ್ತಿದೆ ಎಂಬುದನ್ನು ಎಂಟು ತಿಂಗಳ ಕಾಲ ಇಸ್ರೇಲ್ ಸೈನಿಕರ ಬಂಧನ ಅನುಭವಿಸಿ ಬಿಡುಗಡೆಯಾದ ಇಬ್ರಾಹಿಂ ಸಲೇಂ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಸುದ್ದಿ ಈಗ ಭಾರಿ ವೈರಲ್ (Viral News) ಆಗಿದೆ.

ಪ್ರಸ್ತುತ ಕೇಂದ್ರ ಗಾಜಾದ (central gaza) ದೇರ್ ಅಲ್-ಬಾಲಾಹ್‌ನಲ್ಲಿರುವ ಅವರು, ಕುಖ್ಯಾತ ಎಸ್ ಡಿ ಇ ತೇಮಾನ್ ಬಂಧನ ಶಿಬಿರದಲ್ಲಿ ತಮ್ಮ ಮೇಲೆ ಅತ್ಯಾಚಾರವಾಗಿದೆ, ವಿದ್ಯುದಾಘಾತ ನೀಡಲಾಗಿದೆ ಮತ್ತು ಸಾಕಷ್ಟು ಏಟು ಕೂಡ ಬಿದ್ದಿದೆ ಎಂಬುದಾಗಿ ತಮ್ಮ ಭಯಾನಕ ನಿಂದನೆಯ ಅನುಭವವನ್ನು ಹೇಳಿಕೊಂಡಿದ್ದಾರೆ. ಅವರು ಹಂಚಿಕೊಂಡಿರುವ ಮುಳ್ಳುತಂತಿಯ ಬೇಲಿಯ ಹಿಂದೆ ನಿಂತಿರುವ ಸೇಲಂ ಅವರ ಚಿತ್ರವು ಅನೇಕ ಪ್ಯಾಲೇಸ್ಟಿನಿಯನ್ ಕೈದಿಗಳು ಅನುಭವಿಸುತ್ತಿರುವ ದೌರ್ಜನ್ಯದ ಚಿತ್ರವಾಗಿದೆ ಎಂದು ಹೇಳಿಕೊಂಡಿದ್ದಾರೆ.

ಇವರ ಅಪಹರಣವಾಗಿದ್ದು ಹೇಗೆ?

2023ರ ಡಿಸೆಂಬರ್ ನಲ್ಲಿ ಇಸ್ರೇಲ್ ಪಡೆಗಳು ಉತ್ತರ ಗಾಜಾದ ಕಮಲ್ ಅಡ್ವಾನ್ ಆಸ್ಪತ್ರೆಯ ಮೇಲೆ ದಾಳಿ ಮಾಡಿದಾಗ ಸೇಲಂ ಅವರಿಗೆ ಅಗ್ನಿಪರೀಕ್ಷೆ ಎದುರಾಯಿತು. ಅಲ್ಲಿ ತೀವ್ರವಾಗಿ ಗಾಯಗೊಂಡ ಮಕ್ಕಳ ಪಕ್ಕದಲ್ಲಿ ಅವರೂ ಇದ್ದರು. ಇಸ್ರೇಲ್ ದಾಳಿಯಲ್ಲಿ ಸೇಲಂನ ಅನೇಕ ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದರು. ಅದು ಅವರ ಒಡಹುಟ್ಟಿದವರು ಮತ್ತು ಅವರ ಹಲವಾರು ಮಕ್ಕಳನ್ನು ಬಲಿ ತೆಗೆದುಕೊಂಡಿತು. ಅವರ ಮನವಿ ಮತ್ತು ಆಸ್ಪತ್ರೆಯ ವರದಿಗಳ ಹೊರತಾಗಿಯೂ ಇಸ್ರೇಲ್ ಸೈನಿಕರು ಅವರನ್ನು ಬಲವಂತವಾಗಿ ಐಸಿಯುನಿಂದ ಕರೆದುಕೊಂಡು ಹೋಗಿ ಬಂಧಿಸಿದರು.


ಮಳೆಯಲ್ಲಿ ಎರಡು ದಿನ

ಸೇಲಂ ಇತರ ಪುರುಷರೊಂದಿಗೆ ಸೈನಿಕರಿಂದ ವಿವಸ್ತ್ರಗೊಳ್ಳಲ್ಪಟ್ಟರು, ಥಳಿಸಲ್ಪಟ್ಟರು ಮತ್ತು ನಿಂದಿಸಲ್ಪಟ್ಟರು. ಸಾಕಷ್ಟು ಅವಮಾನ ಮಾಡಲಾಯಿತು. ಬಳಿಕ ಸೇಲಂ ಅವರನ್ನು ನೆಗೆವ್ ಮರುಭೂಮಿಯಲ್ಲಿನ ಬಂಧನ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಬಂಧಿತರನ್ನು ಎರಡು ರಾತ್ರಿಗಳ ಕಾಲ ಮಳೆಯಲ್ಲಿ ಕಟ್ಟಿಹಾಕಲಾಯಿತು ಮತ್ತು ಕನಿಷ್ಠ ಬಟ್ಟೆ ಮತ್ತು ಆಹಾರವನ್ನು ನೀಡುವ ಮೊದಲು ಬಹುತೇಕ ಅವರು ಬೆತ್ತಲೆಯಾಗಿದ್ದರು.

ಅಲ್ಲಿಂದ ಎಸ್ ಡಿ ಇ ತೇಮಾನ್ ಸೇನಾ ನೆಲೆಗೆ ವರ್ಗಾಯಿಸಲಾಯಿತು. ಇದು ಅತ್ಯಂತ ಕೆಟ್ಟ ಅನುಭವ ಎಂದು ಅವರು ಹೇಳಿದ್ದಾರೆ. 52 ದಿನಗಳವರೆಗೆ ಅವರು ಮಾನಸಿಕವಾಗಿ ಜರ್ಜರಿತದರು. ಅವರಿಗೆ ನಿಯಮಿತ ಶಿಕ್ಷೆ ಮತ್ತು ನಿರಂತರ ಅವಮಾನ ಮಾಡಲಾಯಿತು. ಅತ್ಯಾಚಾರ ನಡೆಸಿದ್ದರಿಂದ ಅನೇಕ ಕೈದಿಗಳು ಗುದನಾಳದ ಗಾಯಗಳನ್ನು ಅನುಭವಿಸಿದರು. ಇಲ್ಲಿ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯಗಳು ಅತಿರೇಕವಾಗಿವೆ. ಇಸ್ರೇಲ್ ಮಹಿಳಾ ಸೈನಿಕರೂ ಅತ್ಯಾಚಾರ ನಡೆಸುತ್ತಾರೆ ಎಂದು ಸೇಲಂ ಹೇಳಿದ್ದಾರೆ.


ಆಗಾಗ್ಗೆ ಮಹಿಳಾ ಸೈನಿಕರಿಂದ ಆಘಾತವು ಎಷ್ಟು ತೀವ್ರವಾಗಿತ್ತು ಎಂದರೆ ಖೈದಿಗಳು ತಮ್ಮ ಗಾಯಗಳಿಗೆ ಮೂಲವ್ಯಾಧಿ ಕಾರಣ ಎಂದು ತಪ್ಪಾಗಿ ಭಾವಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Israel-Hamas War: ಪುತ್ರರ ವೀರ್ಯವನ್ನು ಸಂಗ್ರಹಿಸಿಡುತ್ತಿರುವ ಇಸ್ರೇಲ್ ಪೋಷಕರು! ಯಾಕೆ ಹೀಗೆ?

ಸೇಲಂ ಅವರ ಈ ಸಾಕ್ಷ್ಯವು ಇಸ್ರೇಲ್ ವಶದಲ್ಲಿರುವ ಪ್ಯಾಲೇಸ್ಟಿನಿಯನ್ ಬಂಧಿತರನ್ನು ಎಷ್ಟು ಕ್ರೂರವಾಗಿ ನಡೆಸಿಕೊಲ್ಲಲಾಗುತ್ತಿದೆ ಎಂಬುದನ್ನು ಎತ್ತಿ ತೋರಿಸುತ್ತದೆ. ಅವರ ಅನುಭವಗಳು ಬಂಧನ ಶಿಬಿರಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು ಅಂತಾರಾಷ್ಟ್ರೀಯ ಗಮನ ಮತ್ತು ಹಸ್ತಕ್ಷೇಪದ ಅಗತ್ಯದ ಮೇಲೆ ಬೆಳಕು ಚೆಲ್ಲಿದೆ.

Continue Reading

ದೇಶ

Bangladesh Unrest: ದಂಗೆ ಪೀಡಿತ ಬಾಂಗ್ಲಾದಲ್ಲಿ ಸಿಲುಕಿರುವ ಭಾರತೀಯರು, ಹಿಂದೂಗಳ ರಕ್ಷಣೆಗೆ ಕೇಂದ್ರದಿಂದ ಸಮಿತಿ

Bangladesh Unrest: “ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದೆ” ಎಂದು ಸರ್ಕಾರ ಹೇಳಿದೆ.

VISTARANEWS.COM


on

Bangladesh Unrest
Koo

ನವದೆಹಲಿ: ದಂಗೆ ಪೀಡಿತ ಬಾಂಗ್ಲಾದೇಶ(Bangladesh Unrest)ದಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳು ಹಾಗೂ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳು(Hindu Minorities) ದಿನೇ ದಿನೇ ಭಾರೀ ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ವಹಣೆಗಾಗಿ ಭಾರತ ಸರ್ಕಾರ ಸಮಿತಿಯೊಂದು ರಚಿಸಿದೆ. ಶೇಖ್ ಹಸೀನಾ(Sheikh hasina) ಸರ್ಕಾರದ ಪತನದ ನಂತರ ಉಗ್ರ ಪ್ರತಿಭಟನೆಗಳ ಮಧ್ಯೆ ಈ ಸಮಿತಿಯು ದೇಶದಲ್ಲಿ ಭಾರತೀಯರು ಮತ್ತು ಇತರ ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸುತ್ತದೆ.

“ಭಾರತ ಸರ್ಕಾರವು ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರು ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದಲ್ಲಿರುವ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ ಸಂವಹನ ನಡೆಸಲಿದೆ” ಎಂದು ಸರ್ಕಾರ ಹೇಳಿದೆ.

“ಸಮಿತಿಯ ನೇತೃತ್ವವನ್ನು ಎಡಿಜಿ, ಗಡಿ ಭದ್ರತಾ ಪಡೆ (ಬಿಎಸ್ಎಫ್), ಪೂರ್ವ ಕಮಾಂಡ್ ವಹಿಸಲಿದೆ. ಇನ್ನು ದಕ್ಷಿಣ ಬಂಗಾಳ, ತ್ರಿಪುರ ಬಿಎಸ್‌ಎಫ್‌ ನ ಐಜಿಗಳು, ಲ್ಯಾಂಡ್‌ ಪೋರ್ಟ್ಸ್‌ ಅಥಾರಿಟಿ ಆಫ್‌ ಇಂಡಿಯಾ(LPAI)ನ ಸೆಕ್ರೆಟರಿ ಈ ಸಮಿತಿಯ ಸದಸ್ಯರಾಗಿರಲಿದ್ದಾರೆ” ಎಂದು ಹೇಳಿದೆ.

ನೆರೆಯ ರಾಷ್ಟ್ರ ಬಾಂಗ್ಲಾದಲ್ಲಿ ಭುಗಿಲೆದ್ದಿರುವ ದಂಗೆಯಲ್ಲಿ ಅಲ್ಪಸಂಖ್ಯಾತ ಹಿಂದೂ ದಿನೇ ದಿನೇ ನರಕಯಾತನೆ ಅನುಭವಿಸುವಂತಾಗಿದೆ. ಕಂಡ ಕಂಡಲ್ಲಿ ಹಿಂದೂಗಳನ್ನು, ಅವರಿಗೆ ಸಂಬಂಧಿಸಿದ ಮನೆ ಅಂಗಡಿಗಳನ್ನು ಮತ್ತು ದೇಗುಲಗಳನ್ನು ಕಿಡಿಗೇಡಿಗಳು ಪುಡಿಗಟ್ಟಿದ್ದಾರೆ. ಕೈಗೆ ಸಿಕ್ಕವಸ್ತುಗಳನ್ನು ದೋಚುತ್ತಿದ್ದಾರೆ. ಇದೀಗ ಬಾಂಗ್ಲಾದೇಶದ ಖ್ಯಾತ ಗಾಯಕನ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

ಅಲ್ಲಿನ ಸುಮಾರು 600 ಜನ ಅಕ್ರಮವಾಗಿ ಪಶ್ಚಿಮ ಬಂಗಾಳದ ಗಡಿಪ್ರದೇಶದೊಳಗೆ ಅಕ್ರಮವಾಗಿ ಒಳನುಸುಳಲು ಯತ್ನಿಸಿದ್ದು, ಅವರನ್ನು ತಡೆಯುವಲ್ಲಿ ಗಡಿ ಭದ್ರತಾ ಪಡೆ(BSF) ಯಶಸ್ವಿಯಾಗಿದೆ. ಬಾಂಗ್ಲಾದಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದ್ದು, ಕ್ಷಣ ಕ್ಷಣಕ್ಕೂ ಪ್ರಾಣಭೀತಿ ಎದುರಿಸುತ್ತಿರುವುದಾಗಿ ಹೇಳಿಕೊಂಡು ಅನೇಕ ಜನರು ಭಾರತದ ಗಡಿಯೊಳಗೆ ಪ್ರವೇಶಿಸಲು ಅವಕಾಶ ನೀಡುವಂತೆ ಬಿಎಸ್‌ಎಫ್‌ ಸಿಬ್ಬಂದಿ ಮನವಿ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ದಕ್ಷಿಣ್ ಬೆರುಬರಿ ಗ್ರಾಮದಲ್ಲಿ ಈ ಗುಂಪು ಭಾರತದ ಗಡಿ ದಾಟಲು ಪ್ರಯತ್ನಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಗ್ಲಾದೇಶದ ಪತ್ರಿಕೆಗಳ ವರದಿ ಪ್ರಕಾರ 27 ಜಿಲ್ಲೆಗಳಲ್ಲಿ ಹಿಂದೂಗಳ ವ್ಯಾಪಾರ ಮಳಿಗೆ ಮತ್ತು ಮನೆಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ. ಇನ್ನು ಜಮಾತ್‌-ಎ- ಇಸ್ಲಾಮಿ ಹಿಂದೂ ದೇಗುಲಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿರುವುದನ್ನು ಒಪ್ಪಿಕೊಂಡಿದೆ.

ಬಾಂಗ್ಲಾದೇಶದ ಖುಲ್ನಾ ವಿಭಾಗದಲ್ಲಿರುವ ಮೆಹೆರೆಪುರದಲ್ಲಿರುವ ಇಸ್ಕಾನ್‌ ದೇಗುಲದ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಅಲ್ಲಿರುವ ಕಾಳಿ ಮಂದಿರವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಇಸ್ಕಾನ್ ವಕ್ತಾರ ಯುಧಿಸ್ತಿರ್ ಗೋವಿಂದ ದಾಸ್ ಟ್ವೀಟ್‌ ಮಾಡಿದ್ದು, ಮೆಹರ್‌ಪುರದಲ್ಲಿರುವ ನಮ್ಮ ಇಸ್ಕಾನ್ ಕೇಂದ್ರಗಳಲ್ಲಿ ಒಂದನ್ನು (ಬಾಡಿಗೆಗೆ ನೀಡಲಾಗಿದೆ) ಭಗವಾನ್ ಜಗನ್ನಾಥ, ಬಲದೇವ್ ಮತ್ತು ಸುಭದ್ರಾ ದೇವಿ ದೇವತೆಗಳನ್ನು ಸುಟ್ಟು ಹಾಕಲಾಯಿತು. ಕೇಂದ್ರದಲ್ಲಿ ವಾಸವಾಗಿದ್ದ ಮೂವರು ಭಕ್ತರು ಹೇಗಾದರೂ ತಪ್ಪಿಸಿಕೊಂಡು ಬದುಕುಳಿದರು ಎಂದಿದ್ದಾರೆ.

ಇದನ್ನೂ ಓದಿ: Muhammad Yunus: ಹಿಂದುಗಳನ್ನು ಮೊದಲು ರಕ್ಷಿಸಿ; ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ಗೆ ಮೋದಿ ಆಗ್ರಹ

Continue Reading
Advertisement
Tarsem Singh
ದೇಶ47 mins ago

Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Vinesh Phogat
ಕ್ರೀಡೆ50 mins ago

Vinesh Phogat : ವಿನೇಶ್​​ಗೆ ಬೆಳ್ಳಿ ಪದಕ ಕೊಡಲು ಸಾಧ್ಯವಿಲ್ಲ; ಒಲಿಂಪಿಕ್ಸ್​​ ಸಂಸ್ಥೆ ಮುಖ್ಯಸ್ಥ ಥಾಮಸ್ ಬಾಕ್​ ಸ್ಪಷ್ಟನೆ

ಕರ್ನಾಟಕ1 hour ago

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

Paris Olympics 2024
ಕ್ರೀಡೆ1 hour ago

Paris Olympics 2024 : ಲೈಂಗಿಕ ಕಿರುಕುಳದ ಆರೋಪದ ಮೇಲೆ ಈಜಿಪ್ಟ್​​ ಮೊಹಮ್ಮದ್ ಎಲ್ಸಯೀದ್ ಅರೆಸ್ಟ್​​

Independence day 2024
ತಂತ್ರಜ್ಞಾನ1 hour ago

Independence Day 2024: ಹೊಗೆ ಬಂಡಿಯಿಂದ ವಂದೇ ಭಾರತ್‌‌ವರೆಗೆ; ಭಾರತೀಯ ರೈಲ್ವೆಯ ಅದ್ಭುತ ಪಯಣ!

CAA Rules
ದೇಶ1 hour ago

CAA Rules: ಪಾಕ್‌, ಬಾಂಗ್ಲಾ, ಆಘ್ಘನ್‌ ನಿರಾಶ್ರಿತರಿಗೆ ಸಿಹಿ ಸುದ್ದಿ; ಸಿಎಎ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ!

Bengaluru News
ಬೆಂಗಳೂರು2 hours ago

Bengaluru News: ಬೃಹತ್‌ ಜನಾಂದೋಲನಕ್ಕೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬೆಂಬಲ

KCET Mock Allotment 2024
ಕರ್ನಾಟಕ2 hours ago

KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಮತ್ತೆ ಮುಂದೂಡಿಕೆ; ಯಾವಾಗ ಪ್ರಕಟ?

Neeraj Chopra
ಕ್ರೀಡೆ2 hours ago

Neeraj Chopra : ಸಮಾರೋಪ ಸಮಾರಂಭದಲ್ಲಿ ತ್ರಿವರ್ಣ ಧ್ವಜ ಹಿಡಿಯುವ ಅವಕಾಶ ಶ್ರೀಜೇಶ್​ಗೆ ಬಿಟ್ಟುಕೊಟ್ಟ ನೀರಜ್​ ಚೋಪ್ರಾ

Narendra Modi
ದೇಶ2 hours ago

Narendra Modi: ಮೋದಿ ಪ್ರೊಫೈಲ್‌ ಫೋಟೊ ಈಗ ತಿರಂಗಾ; ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜನರಿಗೆ ಕರೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 day ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 day ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ5 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ6 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌