Aman sehrawat : ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್​​; ಭಾರತದ ಒಲಿಂಪಿಕ್ಸ್ ಪದಕಗಳ ಸಂಖ್ಯೆ 6ಕ್ಕೆ ಏರಿಕೆ - Vistara News

ಪ್ರಮುಖ ಸುದ್ದಿ

Aman sehrawat : ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್​​; ಭಾರತದ ಒಲಿಂಪಿಕ್ಸ್ ಪದಕಗಳ ಸಂಖ್ಯೆ 6ಕ್ಕೆ ಏರಿಕೆ

Aman sehrawat : ಅಮನ್ ಅವರ ಪದಕದೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 5ಕ್ಕೆ ಏರಿದೆ. ಅದರಲ್ಲಿ ನಾಲ್ಕು ಕಂಚಿನ ಪದಕವಾದರೆ ಒಂದು ಬೆಳ್ಳಿಯ ಪದಕವಾಗಿದೆ. ಬೆಳ್ಳಿಯನ್ನು ನೀರಜ್​ ಗೆದ್ದಿದ್ದರೆ, ಶೂಟರ್​​ ಮನು ಭಾಕರ್ ಎರಡು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಅದರಲ್ಲೊಂದು ಮಿಶ್ರ ತಂಡದಲ್ಲಿ ಸರಬ್​ಜೋತ್ ಸಿಂಗ್​ ಜತೆಗೆ. ಪುರುಷರ ಶೂಟಿಂಗ್​ನಲ್ಲಿ ಸ್ವಪ್ನಿಲ್ ಕುಸಾಳೆ ಮತ್ತೊಂದು ಪದಕ ಗೆದ್ದಿದ್ದರು. ಮತ್ತೊಂದು ಕಂಚಿನ ಪದಕ ಹಾಕಿ ತಂಡದ ಮೂಲಕ ದೊರಕಿದೆ.

VISTARANEWS.COM


on

Aman Sehrawat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ ನ ಪುರುಷರ ಕುಸ್ತಿ 57 ಕೆ. ಜಿ ವಿಭಾಗದಲ್ಲಿ ಭಾರತದ ಅಮನ್​ ಸೆಹ್ರಾವತ್​ ಕಂಚಿನ ಪದಕ ಗೆದ್ದಿದ್ದಾರೆ. ಅವರು ಪೊರ್ಟೊ ರಿಕೊ ದೇಶದ ಡೇರಿಯನ್​ ಕ್ರೂಜ್ ವಿರುದ್ಧ 13-5 ಅಂಕಗಳ ಅಂತರದ ಜಯ ಸಾಧಿಸುವ ಮೂಲಕ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದರು. 21 ವರ್ಷದ ಅಮನ್​ ಚೊಚ್ಚಲ ಒಲಿಂಪಿಕ್ಸ್​ನಲ್ಲಿಯೇ ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದರು. ಇದರೊಂದಿಗೆ ಭಾರತಕ್ಕೆ ಕುಸ್ತಿಯಲ್ಲಿ ಒಂದು ಕಂಚಿನ ಪದಕ ಒಲಿಯಿತು. ಕುಸ್ತಿ ಹಾಗೂ ಬಾಕ್ಸಿಂಗ್ ಭಾರತದ ಪಾಲಿಗೆ ಪದಕ ತರುವ ವಿಭಾಗವಾಗಿದ್ದರೂ ಈ ಬಾರಿ ಹೆಚ್ಚು ನಿರಾಸೆ ಉಂಟಾಗಿತ್ತು. ಇದೀಗ ಕಂಚಿನ ಪದಕ ಗೆಲ್ಲುವ ಮೂಲಕ ಆ ಕೊರತೆಯನ್ನು ನೀಗಿಸಿದ್ದಾರೆ.

ಅಮನ್ ಅವರ ಪದಕದೊಂದಿಗೆ ಭಾರತದ ಒಟ್ಟು ಪದಕಗಳ ಸಂಖ್ಯೆ 6ಕ್ಕೆ ಏರಿದೆ. ಅದರಲ್ಲಿ 5 ಕಂಚಿನ ಪದಕವಾದರೆ ಒಂದು ಬೆಳ್ಳಿಯ ಪದಕವಾಗಿದೆ. ಬೆಳ್ಳಿಯನ್ನು ನೀರಜ್​ ಗೆದ್ದಿದ್ದರೆ, ಶೂಟರ್​​ ಮನು ಭಾಕರ್ ಎರಡು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದರು. ಅದರಲ್ಲೊಂದು ಮಿಶ್ರ ತಂಡದಲ್ಲಿ ಸರಬ್​ಜೋತ್ ಸಿಂಗ್​ ಜತೆಗೆ. ಪುರುಷರ ಶೂಟಿಂಗ್​ನಲ್ಲಿ ಸ್ವಪ್ನಿಲ್ ಕುಸಾಳೆ ಮತ್ತೊಂದು ಪದಕ ಗೆದ್ದಿದ್ದರು. ಮತ್ತೊಂದು ಕಂಚಿನ ಪದಕ ಹಾಕಿ ತಂಡದ ಮೂಲಕ ದೊರಕಿದೆ. ಇದೀಗ ಅಮನ್​ ಒಂದು ಪದಕ ಗೆದ್ದಿದ್ದಾರೆ.

ಕಂಚಿನ ಪದಕ ಹಣಾಹಣಿಯಲ್ಲಿ ಅಮನ್ ಆರಂಭದಲ್ಲಿಯೇ ಕೆಚ್ಚೆದೆ ತೋರಿದರು. ಎದುರಾಳಿ ಮೇಳೆ ಸಂಪೂರ್ಣ ಮೆಲುಗೈ ಸಾಧಿಸಿದರು. ಅವರ ಬಿಗಿ ಹಿಡಿತಕ್ಕೆ ಎದುರಾಳಿಯ ಲಯ ತಪ್ಪಿತು. ಹೀಗಾಗಿ ಅಮನ್​ ನಿರಂತರವಾಗಿ ಅಂಕಗಳನ್ನು ಗೆದ್ದರು. ಕೊನೇ ಹಂತದಲ್ಲಿ ಸುಸ್ತಾದ ಎದುರಾಳಿ ಸೋಲೊಪ್ಪಿಕೊಂಡರು.

ಪ್ರೀ ಕ್ವಾರ್ಟರ್​ ಮತ್ತು ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಗೆಲುವು ಸಾಧಿಸಿದ್ದ ಅಮನ್​ ಬಳಿಕ ನಡೆದ ಸೆಮಿ ಫೈನಲ್​ ಪಂದ್ಯದಲ್ಲಿ ಅಗ್ರ ಶ್ರೇಯಾಂಕದ ಜಪಾನ್‌ನ ರೀ ಹಿಗುಚಿ ವಿರುದ್ಧ ಸೋಲು ಕಂಡಿದ್ದರು. ಹಿಗುಚಿ ರಿಯೊ ಒಲಿಂಪಿಕ್ಸ್‌ನಲ್ಲಿ (2016) ಬೆಳ್ಳಿ ಗೆದ್ದ ಸಾಧಕನಾಗಿದ್ದರು.

ಗುರುವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಅಮನ್​ ಅಲ್ಬೆನಿಯಾದ ಝೆಲಿಮ್ಖಾನ್ ಅಬಕರೋವ್ ವಿರುದ್ಧ 12-0 ಅಂತರದ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ನಾರ್ತ್ ಮ್ಯಾಸೆಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದ ಮಣಿಸಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಅಮನ್​ ಅವರಿಗೆ ಇದು ಚೊಚ್ಚಲ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಮೊದಲ ಪ್ರಯತ್ನದಲ್ಲೇ ಅವರು ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವರ್ಷ ನಡೆದಿದ್ದ ಏಷ್ಯನ್​ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಅಮನ್​ ಅವರದ್ದಾಗಿದೆ.

ಇದನ್ನೂ ಓದಿ: Vinesh Phogat : ವಿನೇಶ್​​ಗೆ ಬೆಳ್ಳಿ ಪದಕ ಕೊಡಲು ಸಾಧ್ಯವಿಲ್ಲ; ಒಲಿಂಪಿಕ್ಸ್​​ ಸಂಸ್ಥೆ ಮುಖ್ಯಸ್ಥ ಥಾಮಸ್ ಬಾಕ್​ ಸ್ಪಷ್ಟನೆ

57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಳೆದ ಟೋಕಿಯೊ ಬೆಳ್ಳಿ ಪದಕ ಗೆದ್ದಿದ್ದ ರವಿ ದಹಿಯಾ ಅವರನ್ನು ರಾಷ್ಟ್ರೀಯ ಆಯ್ಕೆ ಟ್ರಯಲ್ಸ್‌ನಲ್ಲಿ ಮಣಿಸುವ ಮೂಲಕ ಅಮನ್‌ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು. ಇದೀಗ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಂಚಿನ ಪದಕ ನಿರೀಕ್ಷೆಯಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಫುಲ್‌ ಟೆನ್ಷನ್‌; ದಿನದ ಮಟ್ಟಿಗೆ ಖರ್ಚು ಹೆಚ್ಚು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ ಷಷ್ಠಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಶನಿವಾರ ಸಂಜೆ 06:33ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣ ಇರಲಿದೆ. ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ವೃಷಭ ರಾಶಿಯವರು ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (10-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ.
ತಿಥಿ: ಷಷ್ಠಿ 29:44 ವಾರ: ಶನಿವಾರ
ನಕ್ಷತ್ರ: ಚಿತ್ತಾ 29:47 ಯೋಗ: ಸಾಧ್ಯ 14:50
ಕರಣ: ಕೌಲವ 16:30 ಅಮೃತಕಾಲ: ರಾತ್ರಿ 10:35ರಿಂದ 12:24
ದಿನದ ವಿಶೇಷ: ಕಲ್ಕಿ ಜಯಂತಿ, ಶ್ರಾವಣ ಶನಿವಾರ, ಷಷ್ಠಿ

ಸೂರ್ಯೋದಯ : 06:07   ಸೂರ್ಯಾಸ್ತ : 06:43

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ವಿವಾಹ ಅಪೇಕ್ಷಿತರಿಗೆ ಅನುಕೂಲಕರ ವಾತಾವರಣ ಇರಲಿದೆ. ಶುಭ ಸುದ್ದಿ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಶುಭ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ:6

Horoscope Today

ವೃಷಭ: ಆತ್ಮವಿಶ್ವಾಸ ಹೆಚ್ಚಾಗಲಿದೆ. ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಅತಿರೇಕದ ಮಾತುಗಳನ್ನಾಡಿ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯ ದಿನದ ಕೊನೆಯಲ್ಲಿ ಹದಗೆಡುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ:5

Horoscope Today

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮವಾಗಿರಲಿದೆ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ ಇದೆ. ಆರ್ಥಿಕ ಲಾಭ ಸಾಧಾರಣವಾಗಿರಲಿದೆ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಸಿಂಹ: ಆರೋಗ್ಯ ಕಾಳಜಿ ಇರಲಿ . ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ ಇರಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಇರಲಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ ಇರಲಿದೆ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ ಇದೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಹಿರಿಯರಿಂದ ಒತ್ತಡ ಇರಲಿದೆ. ಹಣಕಾಸು,ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರ್ಥಿಕ ಲಾಭ.ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ ಇದೆ. ಆಪ್ತರಿಂದ ಸಲಹೆ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು ಮಾಡುವಿರಿ. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ವ್ಯಾಪಾರ ವ್ಯವಹಾರ ಸಾಧಾರಣವಾಗಿರಲಿದೆ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ . ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು:ಆಪ್ತರಿಂದ ಬೆಂಬಲ ಸಿಗಲಿದೆ. ಕೆಲಸಕಾರ್ಯಗಳಲ್ಲಿ ಪ್ರಗತಿ ಇರಲಿದೆ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಮಕರ: ಉತ್ಸಾಹಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ.ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮೀನ: ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು ಇರಲಿದೆ. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರಿಂದ ಒತ್ತಡ ಇರಲಿದೆ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಢೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

PMAY: ನಗರ ಪ್ರದೇಶಗಳ ಬಡವರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್;‌ 1 ಕೋಟಿ ಮನೆ ನಿರ್ಮಾಣಕ್ಕೆ ಕೇಂದ್ರ ಅಸ್ತು

PMAY: ಮುಂದಿನ 5 ವರ್ಷಗಳಲ್ಲಿ ಒಂದು ಕೋಟಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, 1 ಕೋಟಿ ಕುಟುಂಬಗಳಿಗೆ ಹಣಕಾಸು ನೆರವು ನೀಡಲಿದೆ. ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾದ ಮೊದಲ ಸಂಪುಟ ಸಭೆಯಲ್ಲೇ ಪಿಎಂಎವೈ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದರು.

VISTARANEWS.COM


on

PMAY
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಿದೆ. ಪ್ರಧಾನಮಂತ್ರಿ ಆವಾಸ್‌ ಯೋಜನೆ- ನಗರ 2.0 ಜಾರಿಗೆ (PMAY 2.0) ಕೇಂದ್ರ ಸಚಿವ ಸಂಪುಟ ಸಭೆಯು ಸಮ್ಮತಿ ಸೂಚಿಸಿದ್ದು, ನಗರ ಪ್ರದೇಶಗಳ 1 ಕೋಟಿ ಬಡವರು ಹಾಗೂ ಮಧ್ಯಮವರ್ಗದವರು ಇದರ ಪ್ರಯೋಜನ ಪಡೆಯಲಿದ್ದಾರೆ. ಅಂದರೆ ಪಿಎಂಎವೈ ಯೋಜನೆ ಅಡಿಯಲ್ಲಿ ನಗರ ಪ್ರದೇಶಗಳಲ್ಲಿ 1 ಕೋಟಿ ಮನೆಗಳನ್ನು ನಿರ್ಮಿಸಲಾಗುತ್ತದೆ.

ಮುಂದಿನ 5 ವರ್ಷಗಳಲ್ಲಿ ಒಂದು ಕೋಟಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, 1 ಕೋಟಿ ಕುಟುಂಬಗಳಿಗೆ ಹಣಕಾಸು ನೆರವು ನೀಡಲಿದೆ. ನಗರ ಪ್ರದೇಶಗಳಲ್ಲಿ ಸುಸಜ್ಜಿತ ಮನೆ ನಿರ್ಮಿಸುವವರಿಗೆ ಕೇಂದ್ರ ಸರ್ಕಾರವು 1 ಚದರ ಅಡಿಗೆ 3 ಸಾವಿರ ರೂ. ನೆರವು ನೀಡಲಿದೆ. ಇನ್ನು ಇಂಟರೆಸ್ಟ್‌ ಸಬ್ಸಿಡಿ ಯೋಜನೆ ಅಡಿಯಲ್ಲಿ ಬಡ ಕುಟುಂಬಗಳಿಗೆ 25-35 ಲಕ್ಷ ರೂ.ವರೆಗೆ ಶೇ.4ರ ಬಡ್ಡಿದರದೊಂದಿಗೆ ಸಾಲ ನೀಡುತ್ತದೆ. 1.8 ಲಕ್ಷ ರೂ.ವರೆಗೆ ಸಬ್ಸಿಡಿ ನೀಡಲಾಗುತ್ತದೆ. ಇದಕ್ಕಾಗಿ ಕೇಂದ್ರ ಸರ್ಕಾರವು 2.3 ಲಕ್ಷ ಕೋಟಿ ರೂ. ವ್ಯಯಿಸಲಾಗಿದೆ. ಹಾಗೆಯೇ, ಪಿಎಂಎವೈ 2.0 ಯೋಜನೆಗೆ 10 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ತೀರ್ಮಾನಿಸಿದೆ.

8 ರೈಲ್ವೆ ಲೈನ್‌ ಯೋಜನೆಗಳಿಗೆ ಅನುಮೋದನೆ

ದೇಶದ 7 ರಾಜ್ಯಗಳ 14 ಜಿಲ್ಲೆಗಳ ಮೂಲಕ ಹಾದು ಹೋಗುವ 8 ಹೊಸ ರೈಲ್ವೆ ಲೈನ್‌ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ವ್ಯಾಪಾರ, ಸಂಪರ್ಕ ಹಾಗೂ ಉದ್ಯೋಗ ಸೃಷ್ಟಿಗೆ ಈ ಯೋಜನೆಗಳು ಸಹಕಾರಿಯಾಗಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಡಿಶಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜಾರ್ಖಂಡ್‌, ಬಿಹಾರ, ತೆಲಂಗಾಣ ಹಾಗೂ ಪಶ್ಚಿಮ ಬಂಗಾಳದಲ್ಲಿ 8 ಹೊಸ ರೈಲ್ವೆ ಲೈನ್‌ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಡವರು ಸ್ವಂತ ಮನೆ ಕನಸನ್ನು ನನಸು ಮಾಡುವ ದಿಸೆಯಲ್ಲಿ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್‌ ಯೋಜನೆ ಜಾರಿಗೆ ತಂದಿದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಸುಮಾರು 4.21 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ. ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಪಿಎಂಎವೈ ಯೋಜನೆ ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದರು.

ಇದನ್ನೂ ಓದಿ: CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

Continue Reading

ಪ್ರಮುಖ ಸುದ್ದಿ

Arshad Nadeem : ಒಲಿಂಪಿಕ್ಸ್ ದಾಖಲೆಯೊಂದಿಗೆ ಬಂಗಾರ ಗೆದ್ದ ಅರ್ಷದ್ ನದೀಮ್​ಗೆ ಪಾಕ್​ ಪ್ರಧಾನಿ ಕೊಟ್ಟ ಬಹುಮಾನ ಕೇವಲ 3 ಲಕ್ಷ ರೂಪಾಯಿ!

Arshad Nadeem : ಗೆಲುವಿನೊಂದಿಗೆ ಪಾಕಿಸ್ತಾನ ಒಲಿಂಪಿಕ್ಸ್​ನಲ್ಲಿ ತನ್ನ ಮೊದಲ ವೈಯಕ್ತಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಈ ಹಿಂದೆ ಪಾಕಿಸ್ತಾನ 1960, 1968 ಮತ್ತು 1984ರಲ್ಲಿ ಹಾಕಿಯಲ್ಲಿ ಕೇವಲ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿತ್ತು. ನದೀಮ್ ಅವರ ಗೆಲುವು ಆಟಗಾರ ಮತ್ತು ಪಾಕಿಸ್ತಾನ ಎರಡಕ್ಕೂ ಮಹತ್ವದ ಮೈಲಿಗಲ್ಲಾಗಿದೆ.

VISTARANEWS.COM


on

Arshad Nadeem
Koo

ನವದೆಹಲಿ: ಒಲಿಂಪಿಕ್ ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ಪಾಕಿಸ್ತಾನ ಜಾವೆಲಿನ್ ಎಸೆತಗಾರ ಅರ್ಷದ್​ ನದೀಮ್​ಗೆ (Arshad Nadeem) ಅಲ್ಲಿನ ಪ್ರಧಾನಿ ಘೋಷಿಸಿರುವ ಬಹುಮಾನ ಮೊತ್ತ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಪುರುಷರ ಫೈನಲ್ನಲ್ಲಿ ನದೀಮ್ 92.97 ಮೀಟರ್ ಜಾವೆಲಿನ್ ಎಸೆತದಲ್ಲಿ ದಾಖಲೆ ನಿರ್ಮಿಸುವ ಮೂಲಕ 32 ವರ್ಷಗಳ ನಂತರ ಪಾಕಿಸ್ತಾನದ ಮೊದಲ ಒಲಿಂಪಿಕ್ ಚಿನ್ನದ ಪದಕವನ್ನು ನದೀಮ್ ತಂದುಕೊಟ್ಟಿದ್ದರು. ಆದರೂ ಅವರಿಗೆ ಕೊಟ್ಟಿರುವುದು ಕೇವಲ 3 ಲಕ್ಷ ಭಾರತೀಯ ರೂಪಾಯಿ.

ಗೆಲುವಿನೊಂದಿಗೆ ಪಾಕಿಸ್ತಾನ ಒಲಿಂಪಿಕ್ಸ್​ನಲ್ಲಿ ತನ್ನ ಮೊದಲ ವೈಯಕ್ತಿಕ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಈ ಹಿಂದೆ ಪಾಕಿಸ್ತಾನ 1960, 1968 ಮತ್ತು 1984ರಲ್ಲಿ ಹಾಕಿಯಲ್ಲಿ ಕೇವಲ ಮೂರು ಒಲಿಂಪಿಕ್ ಚಿನ್ನದ ಪದಕಗಳನ್ನು ಗೆದ್ದಿತ್ತು. ನದೀಮ್ ಅವರ ಗೆಲುವು ಆಟಗಾರ ಮತ್ತು ಪಾಕಿಸ್ತಾನ ಎರಡಕ್ಕೂ ಮಹತ್ವದ ಮೈಲಿಗಲ್ಲಾಗಿದೆ.

ಪಾಕ್ ಪ್ರಧಾನಿಯಿಂದ ಅವಮಾನ; ಡ್ಯಾನಿಶ್ ಕನೇರಿಯಾ

ಒಲಿಂಪಿಕ್ಸ್​ನಲ್ಲಿ ಐತಿಹಾಸಿಕ ವಿಜಯದ ಹೊರತಾಗಿಯೂ, ನದೀಮ್​​ಗೆ ಪ್ರಧಾನಿಯವರು 10 ಲಕ್ಷ ಪಾಕಿಸ್ತಾನ ರೂಪಾಇ (ಸುಮಾರು 3 ಲಕ್ಷ ಭಾರತ ರೂಪಾಯಿ) ನೀಡಿದರು. ಅಷ್ಟು ಕಡಿಮೆ ಮೊತ್ತ ಕೊಟ್ಟ ಹೊರತಾಗಿಯೂ ಚೆಕ್​ ನೀಡುವ ಚಿತ್ರವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಶರೀಫ್ ತಮ್ಮ ಅಭಿನಂದನಾ ಪೋಸ್ಟ್​ನಲ್ಲಿ “ಶಹಬ್ಬಾಸ್​ ಅರ್ಷದ್​ ಇತಿಹಾಸ ಸೃಷ್ಟಿ ಮಾಡಿದ್ದೀರಿ. ಪಾಕಿಸ್ತಾನದ ಮೊದಲ ಒಲಿಂಪಿಕ್ ಜಾವೆಲಿನ್ ಚಾಂಪಿಯನ್​ ನೀವು. ದೇಶಕ್ಕೆ ಹೆಮ್ಮೆ ತಂದಿದ್ದಿರಿ ಎಂದು ಬರೆದುಕೊಂಡಿದ್ದಾರೆ.

ಪಾಕಿಸ್ತಾನ ಪ್ರಧಾನಿ ನದೀಮ್​​ ನೀಡಿದ ಗೌರವದ ಬಗ್ಗೆ ಪ್ರತಿಕ್ರಿಯಿಸಿದ ಕನೇರಿಯಾ, ಈ ಮೊತ್ತವನ್ನು ಒಲಿಂಪಿಕ್ ಚಿನ್ನದ ಪದಕ ವಿಜೇತ ಮತ್ತು ಅವರ ಗಮನಾರ್ಹ ಸಾಧನೆಗೆ ಅಗೌರವ ಎಂದು ಕರೆದಿದ್ದಾರೆ. ಇತರ ದೇಶಗಳು ತಮ್ಮ ಒಲಿಂಪಿಕ್ ಹೀರೋಗಳಿಗೆ ನೀಡುವ ಬಹುಮಾನದ ಮೊತ್ತಕ್ಕೆ ಹೋಲಿಸಿದರೆ ಬಹುಮಾನದ ಮೊತ್ತ ಏನೂ ಅಲ್ಲ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಹೇಳಿದ್ದಾರೆ.

ನದೀಮ್​​ಗೆ ಉತ್ತಮ ಮಾನ್ಯತೆ ನೀಡುವಂತೆ ಕನೇರಿಯಾ ಆಗ್ರಹ

2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ನದೀಮ್ ಕೂಡ ಸುಮಾರು 42 ಲಕ್ಷ ರೂ.ಗಳನ್ನು ಬಹುಮಾನವಾಗಿ ಪಡೆಯುತ್ತಾರೆ. ಅಂಥದ್ದರಲ್ಲಿ ಕೇವಲ 10 ಲಕ್ಷ ರೂಪಾಯಿ ಘೋಷಿಸಿದ್ದೀರಿ. ಅದರಲ್ಲಿ 243,069 ರೂಪಾಯಿ ಪ್ಯಾರಿಸ್​ಗೆ ಹೋಗುವ ವಿಮಾನದ ಟಿಕೆಟ್​ಗೆ ಇದೆ ಎಂದು ಕನೇರಿಯಾ ಹೇಳಿದ್ದಾರೆ.

ಒಲಿಂಪಿಕ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಸಾಧನೆಗಾಗಿ ನದೀಮ್ ಅವರಿಗೆ ಹೆಚ್ಚು ಬಹುಮಾನವನ್ನು ನೀಡುವಂತೆ ಅವರು ಪ್ರಧಾನಿಯನ್ನು ಒತ್ತಾಯಿಸಿದ್ದಾರೆ. ಕನೇರಿಯಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಾನ್ಯ ಪ್ರಧಾನ ಮಂತ್ರಿಯವರೇ, ಕನಿಷ್ಠ ಆಕರ್ಷಕ ಅಭಿನಂದನೆಗಳನ್ನು ಸಲ್ಲಿಸಿ. ನೀವು ನೀಡಿದ ಸಣ್ಣ ಮೊತ್ತದ ಚಿತ್ರವನ್ನು ತೆಗೆಯಿರಿ. ಈ ಮೊತ್ತವು ತುಂಬಾ ಸಣ್ಣದು. ಅವರಿಗೆ ವಿಮಾನ ಟಿಕೆಟ್ ಗಳನ್ನು ಸಹ ಖರೀದಿಸಲು ಸಾಧ್ಯವಿಲ್ಲ. ಅರ್ಷದ್ ಅವರ ಶ್ರಮವನ್ನು ಪರಿಗಣಿಸಿದರೆ ಇದು ಅವರಿಗೆ ಮತ್ತು ರಾಷ್ಟ್ರಕ್ಕೆ ಮಾಡಿದ ಅವಮಾನ” ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಕಂಚಿನ ಪದಕ ಗೆದ್ದಿರುವ ಸ್ಪರ್ಧಿಗಳಿಗೆ ಆಯಾ ರಾಜ್ಯಗಳೇ ಕೋಟಿ ಕೋಟಿ ರೂಪಾಯಿ ಬಹುಮಾನ ನೀಡುತ್ತಿದೆ. ಅಂಥದ್ದರಲ್ಲಿ ಪಾಕಿಸ್ತಾನದ ಪ್ರಧಾನಿ ಕೇವಲ 10 ಲಕ್ಷ ರೂಪಾಯಿ ಕೊಟ್ಟು ಟೀಕೆಗೆ ಒಳಗಾಗಿದ್ದಾರೆ.

Continue Reading

ಪ್ರಮುಖ ಸುದ್ದಿ

Plane Crash: ವಿಮಾನ ಪತನ; 62 ಪ್ರಯಾಣಿಕರು ಸೇರಿ ಎಲ್ಲ 70 ಮಂದಿಯ ದುರ್ಮರಣ, Videoಗಳು ಇವೆ

Plane Crash: ವಿಮಾನದ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲಾಗುತ್ತಿದೆ. ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶವಗಳನ್ನು ಸಾಗಿಸಲು ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

VISTARANEWS.COM


on

Plane Crash
Koo

ಬ್ರೆಸಿಲಿಯಾ: ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ (Brazil Plane Crash) ಸಂಭವಿಸಿದೆ. 62 ಪ್ರಯಾಣಿಕರು ಸೇರಿ ಒಟ್ಟು 70 ಜನರಿದ್ದ ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ (Sao Paulo) ಪತನಗೊಂಡಿದ್ದು (Plane Crash), ಭೂಮಿಗೆ ಅಪ್ಪಳಿಸುತ್ತಲೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ. ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ 70 ಜನರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಾಸ್ಕಾವೆಲ್‌ನಿಂದ ಗುವಾರುಲ್ಹೋಸ್‌ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಸಾವೋ ಪೌಲೋ ರಾಜ್ಯದ ವಿನ್ಹೇಡೋ ಎಂಬ ಪ್ರದೇಶದಲ್ಲಿ ವಿಮಾನವು ಪತನಗೊಂಡಿದೆ. ಅದೃಷ್ಟವಶಾತ್‌, ವಿಮಾನವು ಜನವಸತಿ ಪ್ರದೇಶದಲ್ಲಿ ಪತನಗೊಂಡಿಲ್ಲ. ಆದರೂ, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಪತನಗೊಂಡ ಬಳಿಕ ಹೊತ್ತಿಕೊಂಡ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ಬ್ರೆಜಿಲ್‌ನಲ್ಲಿಯೇ ಇದು ಇತ್ತೀಚೆಗೆ ಸಂಭವಿಸಿದ ಭೀಕರ ವಿಮಾನ ದುರಂತ ಎಂದು ತಿಳಿದುಬಂದಿದೆ.

ವಿಮಾನದಲ್ಲಿ 62 ಪ್ರಯಾಣಿಕರು ಹಾಗೂ 8 ವಿಮಾನದ ಸಿಬ್ಬಂದಿ ಇದ್ದರು. ವಿಮಾನ ಹಾರಾಟ ನಡೆಸುತ್ತಿರುವಾಗಲೇ ನಿಯಂತ್ರಣ ತಪ್ಪಿದೆ. ಅದು ಬೀಳುವ ಮುನ್ನ ಬೆಂಕಿ ಕಾಣಿಸಿಕೊಂಡಿರಲಿಲ್ಲ. ಭೂಮಿಗೆ ಅಪ್ಪಳಿಸಿದ ರಭಸಕ್ಕೆ ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ವೇಳೆಗೆ ಎಲ್ಲ ಪ್ರಯಾಣಿಕರು ಮೃತಪಟ್ಟಿದ್ದರು ಎನ್ನಲಾಗಿದೆ. ವಿಮಾನ ಪತನವಾಗುವ ಭೀಕರ ವಿಡಿಯೊಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ವಿಮಾನದ ಅವಶೇಷಗಳಿಂದ ಶವಗಳನ್ನು ಹೊರತೆಗೆಯಲಾಗುತ್ತಿದೆ. ಮೃತಪಟ್ಟವರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿಯು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶವಗಳನ್ನು ಸಾಗಿಸಲು ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದುವರೆಗೆ, ವಿಮಾನ ಪತನಕ್ಕೆ ನಿಖರ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಆದಾಗ್ಯೂ, ಪ್ರಕರಣವನ್ನು ಸರ್ಕಾರವು ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿ: Plane Crash: ನೇಪಾಳದಲ್ಲಿ 19 ಪ್ರಯಾಣಿಕರಿದ್ದ ವಿಮಾನ ಪತನ; ವಿಡಿಯೋ ಇದೆ

Continue Reading
Advertisement
Dina Bhavishya
ಭವಿಷ್ಯ9 mins ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಫುಲ್‌ ಟೆನ್ಷನ್‌; ದಿನದ ಮಟ್ಟಿಗೆ ಖರ್ಚು ಹೆಚ್ಚು

PMAY
ದೇಶ5 hours ago

PMAY: ನಗರ ಪ್ರದೇಶಗಳ ಬಡವರಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್;‌ 1 ಕೋಟಿ ಮನೆ ನಿರ್ಮಾಣಕ್ಕೆ ಕೇಂದ್ರ ಅಸ್ತು

Arshad Nadeem
ಪ್ರಮುಖ ಸುದ್ದಿ5 hours ago

Arshad Nadeem : ಒಲಿಂಪಿಕ್ಸ್ ದಾಖಲೆಯೊಂದಿಗೆ ಬಂಗಾರ ಗೆದ್ದ ಅರ್ಷದ್ ನದೀಮ್​ಗೆ ಪಾಕ್​ ಪ್ರಧಾನಿ ಕೊಟ್ಟ ಬಹುಮಾನ ಕೇವಲ 3 ಲಕ್ಷ ರೂಪಾಯಿ!

Plane Crash
ಪ್ರಮುಖ ಸುದ್ದಿ5 hours ago

Plane Crash: ವಿಮಾನ ಪತನ; 62 ಪ್ರಯಾಣಿಕರು ಸೇರಿ ಎಲ್ಲ 70 ಮಂದಿಯ ದುರ್ಮರಣ, Videoಗಳು ಇವೆ

Aman Sehrawat
ಪ್ರಮುಖ ಸುದ್ದಿ6 hours ago

Aman sehrawat : ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್​​; ಭಾರತದ ಒಲಿಂಪಿಕ್ಸ್ ಪದಕಗಳ ಸಂಖ್ಯೆ 6ಕ್ಕೆ ಏರಿಕೆ

Creamy Layer
ದೇಶ6 hours ago

Creamy Layer: ಎಸ್‌ಸಿ, ಎಸ್‌ಟಿಗೆ ಕೆನೆಪದರ ಮೀಸಲಾತಿ ಇಲ್ಲ; ಸುಪ್ರೀಂ ಆದೇಶದ ಬೆನ್ನಲ್ಲೇ ಕೇಂದ್ರ ಸ್ಪಷ್ಟನೆ

Bengaluru News
ಕರ್ನಾಟಕ6 hours ago

Bengaluru News: ಕಾರ್ಪೊರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್‌ಆರ್ ಹಣ ವಿನಿಯೋಗಿಸಲಿ: ದಿನೇಶ್ ಗುಂಡೂರಾವ್

Tarsem Singh
ದೇಶ7 hours ago

Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Vinesh Phogat
ಕ್ರೀಡೆ7 hours ago

Vinesh Phogat : ವಿನೇಶ್​​ಗೆ ಬೆಳ್ಳಿ ಪದಕ ಕೊಡಲು ಸಾಧ್ಯವಿಲ್ಲ; ಒಲಿಂಪಿಕ್ಸ್​​ ಸಂಸ್ಥೆ ಮುಖ್ಯಸ್ಥ ಥಾಮಸ್ ಬಾಕ್​ ಸ್ಪಷ್ಟನೆ

ಕರ್ನಾಟಕ8 hours ago

NEET UG 2024: ಯುಜಿ ನೀಟ್: ಆ.12, 13ಕ್ಕೆ ದಾಖಲಾತಿ ಪರಿಶೀಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 day ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ7 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌