Nikkita Ghag: ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಖ್ಯಾತ ಬಾಲಿವುಡ್‌ ನಟಿ! - Vistara News

ಬಾಲಿವುಡ್

Nikkita Ghag: ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಖ್ಯಾತ ಬಾಲಿವುಡ್‌ ನಟಿ!

Nikkita Ghag: ನಟಿ ಸದಾ ತಮ್ಮ ಫ್ಯಾಶನ್‌ಗಾಗಿಯೇ ಸುದ್ದಿಯಲ್ಲಿರುತ್ತಾರೆ. ಟಾಪ್‌ಲೆಸ್ ಫೋಟೋಶೂಟ್‌ನಲ್ಲಿ, ಅರ್ಧ-ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸುವುದನ್ನು ಕಾಣಬಹುದು. ನಿಖಿತಾ ಘಾಗ್ ಟಾಪ್ ಪೋನಿ ಸ್ಟೈಲ್ ಮತ್ತು ಮೇಕಪ್‌ನೊಂದಿಗೆ ಸ್ಟನ್ನಿಂಗ್‌ ಆಗಿ ಕಂಡಿದ್ದಾರೆ. ಚಿತ್ರಗಳನ್ನು ಹಂಚಿಕೊಂಡ ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ, “ಡ್ರೆಸ್ಸಿಂಗ್‌ನ ಸಂತೋಷವು ಒಂದು ಕಲೆ.”ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Nikkita Ghag Breaks Internet With Naked Photoshoot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ನಿಖಿತಾ ಘಾಗ್ (Nikkita Ghag) ಅವರು ಬೆಕಾಬೂ 3, ಫುಹ್ ಸೆ ಫ್ಯಾಂಟಸಿ, ನಶಿಲಾ ಹುಸ್ನ್ ಮತ್ತು ಹಲವು ಸಿನಿಮಾ ಸೇರಿದಂತೆ ಸಿರೀಸ್‌ನಲ್ಲಿ ಕೆಲಸ ಮಾಡಿದ್ದಾರೆ. ನಟಿ ಯಾವಾಗಲೂ ತನ್ನ ಫ್ಯಾಷನ್ ಸ್ಟೇಟ್‌ಮೆಂಟ್‌ಗಳ ಬಗ್ಗೆಯೇ ಸುದ್ದಿಯಾಗುತ್ತಿರುತ್ತಾರೆ. ಇದೀಗ ನಟಿ ತನ್ನ ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ನಟಿಯ ಹಾಟ್‌ ಪೋಸ್‌ಗೆ ಪಡ್ಡೆ ಹುಡುಗರು ಸುಸ್ತಾಗಿದ್ದಾರೆ.

ನಟಿ ಸದಾ ತಮ್ಮ ಫ್ಯಾಶನ್‌ಗಾಗಿಯೇ ಸುದ್ದಿಯಲ್ಲಿರುತ್ತಾರೆ. ಟಾಪ್‌ಲೆಸ್ ಫೋಟೋಶೂಟ್‌ನಲ್ಲಿ, ಅರ್ಧ-ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸುವುದನ್ನು ಕಾಣಬಹುದು. ನಿಖಿತಾ ಘಾಗ್ ಟಾಪ್ ಪೋನಿ ಸ್ಟೈಲ್ ಮತ್ತು ಮೇಕಪ್‌ನೊಂದಿಗೆ ಸ್ಟನ್ನಿಂಗ್‌ ಆಗಿ ಕಂಡಿದ್ದಾರೆ. ಚಿತ್ರಗಳನ್ನು ಹಂಚಿಕೊಂಡ ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ, “ಡ್ರೆಸ್ಸಿಂಗ್‌ನ ಸಂತೋಷವು ಒಂದು ಕಲೆ.”ಎಂದು ಬರೆದುಕೊಂಡಿದ್ದಾರೆ.

ಕೆಲವರು ನಟಿಯ ಲುಕ್‌ಗೆ ಹೊಗಳಿದರೆ, ಇನ್ನೂ ಕೆಲವರು ಪೂರ್ತಿ ಬಟ್ಟೆ ಬಿಚ್ಚಿಟ್ಟುಬಿಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Duniya Vijay: ಹೇಗಿದೆ ‘ಭೀಮ’ ಸಿನಿಮಾ? ಪ್ರೇಕ್ಷಕರು ಹೇಳೋದೇನು?

ಸದ್ಯ ನಟಿ ನಿಖಿತಾ ಘಾಗ್ಡಿ ಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಆನಂದಿ ಕಾರ್ಯಕ್ರಮದೊಂದಿಗೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೊನೆಯದಾಗಿ ಆಲ್ಟ್ಸ್ ಪ್ಯಾರ್ ಕಾ ಬಜಾರ್ (ಕಾರ್-ಒ-ಬಾರ್) ನಲ್ಲಿ ಕಾಣಿಸಿಕೊಂಡಿದ್ದರು. ಅವರ ಜೊತೆಗೆ, ಶೋನಲ್ಲಿ ಹೇಮಾನ್ಶಿ ರೂಪಾರೆಲ್, ದರ್ಶ್ ಪ್ರಜಾಪತಿ ಮತ್ತು ಮೋಹಿತ್ ದುಸೇಜಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

John Abraham : ನಾನು ಸಾವನ್ನು ಮಾರಲ್ಲ ಎಂದು ಶಾರುಖ್ ಖಾನ್, ಅಜಯ್ ದೇವಗನ್‌ಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಜಾನ್ ಅಬ್ರಹಾಂ!

John Abraham: ಪಾಡ್‌ಕಾಸ್ಟ್‌ನಲ್ಲಿ ಕಾಣಿಸಿಕೊಂಡ ಜಾನ್, ‘ಸಾವನ್ನು ಮಾರಲು’ ಎಂದೂ ಬಯಸುವುದಿಲ್ಲ ಎಂದು ಹೇಳಿದರು. ನಟ ರ ಜಾಹೀರಾತು ಬಗ್ಗೆ ನೇರವಾಗಿ ಹೆಸರನ್ನು ಹೇಳದೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪಾನ್ ಮಸಾಲ ಮಾರುವುದನ್ನು ಸಾವನ್ನು ಮಾರಾಟ ಮಾಡಿದಂತೆ’ ಎಂದು ಅವರು ಹೇಳಿದ್ದಾರೆ.

VISTARANEWS.COM


on

John Abraham slams actors for endorsing paan masala
Koo

ಬೆಂಗಳೂರು: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್, ಟೈಗರ್ ಶ್ರಾಫ್ ಫಿಟ್ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ನೀಡುವವರು. ಇವರು ಪಾನ್ ಮಸಾಲ ಸೇವನೆ ಮಾಡುವುದಿಲ್ಲ. ಆದಾಗ್ಯೂ ವಿಮಲ್ ಪ್ರಚಾರದಲ್ಲಿ ಇವರು ಭಾಗಿ ಆಗುತ್ತಿದ್ದಾರೆ. ಇದನ್ನು ಜಾನ್ ಅಬ್ರಹಾಂ ಟೀಕಿಸಿದ್ದಾರೆ.

ಪಾಡ್‌ಕಾಸ್ಟ್‌ನಲ್ಲಿ ಕಾಣಿಸಿಕೊಂಡ ಜಾನ್, ‘ಸಾವನ್ನು ಮಾರಲು’ ಎಂದೂ ಬಯಸುವುದಿಲ್ಲ ಎಂದು ಹೇಳಿದರು. ನಟ ರ ಜಾಹೀರಾತು ಬಗ್ಗೆ ನೇರವಾಗಿ ಹೆಸರನ್ನು ಹೇಳದೆ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪಾನ್ ಮಸಾಲ ಮಾರುವುದನ್ನು ಸಾವನ್ನು ಮಾರಾಟ ಮಾಡಿದಂತೆ’ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಜಾನ್‌ ಮಾತನಾಡಿ ʻʻಜನರು ಫಿಟ್ನೆಸ್ ಬಗ್ಗೆ ಮಾತನಾಡುತ್ತಾರೆ. ಆ ಬಳಿಕ ಅದೇ ವ್ಯಕ್ತಿಗಳು ಪಾನ್ ಮಸಾಲ ಪ್ರಚಾರ ಮಾಡುತ್ತಾರೆ. ನಾನು ಇಂಡಸ್ಟ್ರಿಯ ಎಲ್ಲರನ್ನೂ ಪ್ರೀತಿಸುತ್ತೇನೆ. ನಾನು ಅವರನ್ನು ಅಗೌರವಿಸುತ್ತಿಲ್ಲ. ಒಂದು ವಿಚಾರವನ್ನು ನಾನು ಸ್ಪಷ್ಟಪಡಿಸಬೇಕು. ನಾನು ನನ್ನ ಬಗ್ಗೆ ಮಾತನಾಡುತ್ತೇನೆ. ನಾನು ಸಾವನ್ನು ಮಾರಾಟ ಮಾಡಲ್ಲ. ಇದಕ್ಕೆ ನಾನು ಹಾಕಿಕೊಂಡ ಪ್ರಿನ್ಸಿಪಲ್ ಕಾರಣ. ನಾನು ನನ್ನ ಜೀವನವನ್ನು ಪ್ರಾಮಾಣಿಕತೆಯಿಂದ ಜೀವಿಸಿದರೆ ಮತ್ತು ನಾನು ಬೋಧಿಸುವದನ್ನು ನಾನು ಅಭ್ಯಾಸ ಮಾಡಿದರೆ, ಆಗ ನಾನೇ ರೋಲ್ ಮಾಡೆಲ್ ’ ಎಂದಿದ್ದಾರೆ ಅವರು.

ಇದನ್ನೂ ಓದಿ: Prashanth Neel-Jr Ntr:‌ ಸೆಟ್ಟೇರಿತು ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾ; ರಿಲೀಸ್‌ ಡೇಟ್‌ ಅನೌನ್ಸ್!

ಈ ಹಿಂದೆ, ನಟರಾದ ಅಜಯ್ ದೇವಗನ್ ಮತ್ತು ಅಕ್ಷಯ್ ಕುಮಾರ್ ಅವರು ಪಾನ್ ಮಸಾಲಾ ಮತ್ತು ಗುಟ್ಕಾ ಬ್ರಾಂಡ್‌ಗಳನ್ನು ಪ್ರಚಾರ ಮಾಡಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದರು. ಅಕ್ಷಯ್ ಅವರು ಅಂತಹ ಪ್ರಚಾರಗಳಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು. “ಈ ಜಾಹೀರಾತುಗಳನ್ನು 13ನೇ ಅಕ್ಟೋಬರ್, 2021 ರಂದು ಚಿತ್ರೀಕರಿಸಲಾಗಿದೆ. ಸಾರ್ವಜನಿಕವಾಗಿ ಘೋಷಿಸಿದಾಗಿನಿಂದ ನಾನು ಬ್ರ್ಯಾಂಡ್‌ನೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಅವರು ಈಗಾಗಲೇ ಚಿತ್ರೀಕರಿಸಿದ ಜಾಹೀರಾತುಗಳನ್ನು ಮುಂದಿನ ತಿಂಗಳ ಅಂತ್ಯದವರೆಗೆ ಕಾನೂನುಬದ್ಧವಾಗಿ ಚಲಾಯಿಸಬಹುದು ”ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಜಾನ್ ಅಬ್ರಹಾಂ ಅವರು ‘ವೇದ’ ಸಿನಿಮಾ ಆಗಸ್ಟ್ 15ರಂದು ಬಿಡುಗಡೆ ಆಗುತ್ತಿದೆ. ಜಾತಿ ವಿಚಾರಗಳ ಬಗ್ಗೆ ಈ ಸಿನಿಮಾ ಇದೆ. ಈ ಚಿತ್ರದ ಜೊತೆಗೆ ‘ಸ್ತ್ರೀ 2’ ಸೇರಿ ಹಲವು ಚಿತ್ರಗಳು ಬಿಡುಗಡೆ ಆಗಿದೆ.

Continue Reading

ಬಾಲಿವುಡ್

Laapataa Ladies: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳುತ್ತಿದೆ ‘ಲಾಪತಾ ಲೇಡೀಸ್’!

Laapataa Ladies: ವರದಿಯ ಪ್ರಕಾರ ಭಾರತದ ಮುಖ್ಯ ನ್ಯಾಯಾಧೀಶರು ಸಹ ಹಾಜರಿರುತ್ತಾರೆ. ಸಂಜೆ 4:15 ರಿಂದ 6:20 ರವರೆಗೆ ನ್ಯಾಯಾಲಯದ ಸಮಯದ ನಂತರ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ವರದಿಯಾಗಿದೆ. ನಂತರ ಆಮೀರ್ ಖಾನ್ ಮತ್ತು ಕಿರಣ್ ರಾವ್ ಅವರೊಂದಿಗೆ ಸಂವಾದ ನಡೆಯಲಿದೆ.

VISTARANEWS.COM


on

Laapataa Ladies to be screened in Supreme Court
Koo

ಬೆಂಗಳೂರು: ಕಿರಣ್ ಅವರ ರಾವ್ ನಿರ್ದೇಶನದ, ‘ಲಾಪತಾ ಲೇಡೀಸ್’ (Laapataa Ladies) ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರದರ್ಶನಗೊಳ್ಳಲಿದೆ. ನಿರ್ದೇಶಕರು ಹಾಗೂ ನಿರ್ಮಾಪಕ ಆಮೀರ್ ಖಾನ್ ಸಹ ಪ್ರದರ್ಶನದಲ್ಲಿ ಹಾಜರಿರುತ್ತಾರೆ. ಬಳಿಕ ಪ್ರೇಕ್ಷಕರೊಂದಿಗೆ ಸಂವಾದ ನಡೆಸಲಿದ್ದಾರೆ.

ವರದಿಯ ಪ್ರಕಾರ ಭಾರತದ ಮುಖ್ಯ ನ್ಯಾಯಾಧೀಶರು ಸಹ ಹಾಜರಿರುತ್ತಾರೆ. ಸಂಜೆ 4:15 ರಿಂದ 6:20 ರವರೆಗೆ ನ್ಯಾಯಾಲಯದ ಸಮಯದ ನಂತರ ಚಲನಚಿತ್ರವನ್ನು ಪ್ರದರ್ಶಿಸಲಾಗುತ್ತದೆ ಎಂದು ವರದಿಯಾಗಿದೆ. ನಂತರ ಆಮೀರ್ ಖಾನ್ ಮತ್ತು ಕಿರಣ್ ರಾವ್ ಅವರೊಂದಿಗೆ ಸಂವಾದ ನಡೆಯಲಿದೆ.

ಲಿಂಗ ಸಮಾನತೆಯ ವಿಷಯವನ್ನು ಆಧರಿಸಿದ ‘ಲಾಪತಾ ಲೇಡೀಸ್’ ಚಲನಚಿತ್ರವನ್ನು ಶುಕ್ರವಾರ, 9 ರಂದು ಪ್ರದರ್ಶಿಸಲಾಗುವುದು ಎಂದು ನೋಟಿಸ್‌ನಲ್ಲಿ ಉಲ್ಲೇಖವಾಗಿದೆ.

ಆಮೀರ್ ಖಾನ್ ಪ್ರೊಡಕ್ಷನ್ (APK) ಮತ್ತು ಕಿರಣ್ ಅವರ ಕಿಂಡ್ಲಿಂಗ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ʻಲಾಪತಾ ಲೇಡೀಸ್‌ʼ (Laapataa Ladies) ಇತ್ತೀಚೆಗೆ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. 14 ವರ್ಷಗಳ ಬ್ರೇಕ್‌ ನಂತರ ಚಿತ್ರವನ್ನು ನಿರ್ದೇಶಿಸಿದ್ದಾರೆ ಕಿರಣ್. ಸಿನಿಮಾ ಬಗ್ಗೆ ಮೆಚ್ಚುಗೆ ಕೇಳಿಬಂದಿದ್ದರೂ ಕೂಡ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಈ ಸಿನಿಮಾವನ್ನು ಥಿಯೇಟರ್​ನಲ್ಲಿ ನೋಡಿರಲಿಲ್ಲ. . ಸ್ನೇಹಾ ದೇಸಾಯಿ ಬರೆದು ಆಮೀರ್ ಖಾನ್ ನಿರ್ಮಿಸಿದ ‘ಲಾಪತಾ ಲೇಡೀಸ್’ ಬಿಪ್ಲಬ್ ಗೋಸ್ವಾಮಿಯವರ ಕಾದಂಬರಿಯನ್ನು ಆಧರಿಸಿದೆ. ಮಾರ್ಚ್ 1 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು.ಮಹಿಳಾ ಪ್ರಧಾನ ವಸ್ತುವಿಷಯವನ್ನು ‘ಲಾಪತಾ ಲೇಡೀಸ್​’ ಚಿತ್ರದಲ್ಲಿದೆ. ಗಂಭೀರವಾದ ವಿಷಯವಾದರೂ ಕೂಡ ಇಡೀ ಸಿನಿಮಾವನ್ನು ಹಾಸ್ಯದ ಧಾಟಿಯಲ್ಲಿ ಕಟ್ಟಿಕೊಡಲಾಗಿದೆ. ಎಮೋಷನಲ್​ ದೃಶ್ಯಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ.

ಇದನ್ನೂ ಓದಿ: Duniya Vijay: ರಾಜ್ಯಾದ್ಯಂತ `ಭೀಮ’ ಸಿನಿಮಾ ರಿಲೀಸ್; ಬ್ಲಾಕ್‌ ಕೋಬ್ರಾಗೆ ಭರ್ಜರಿ ವೆಲ್‌ಕಮ್‌ ಮಾಡಿದ ಫ್ಯಾನ್ಸ್‌!

ಲಾಪತಾ ಲೇಡೀಸ್’ ಚಿತ್ರವನ್ನು ಕಿರಣ್ ರಾವ್ ಅವರು ನಿರ್ದೇಶಿಸಿದ್ದಾರೆ. ಆಮೀರ್ ಖಾನ್ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ್ದಾರೆ. ಚಿತ್ರದಲ್ಲಿ ರವಿ ಕಿಶನ್ ಜತೆಗೆ ನಿತಾಂಶಿ ಗೋಯೆಲ್, ಪ್ರತಿಭಾ ರಂತ, ಸ್ಪರ್ಶ ಶ್ರೀವಾತ್ಸವ್ ಕಾಣಿಸಿಕೊಂಡಿದ್ದಾರೆ. ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸ್ನೇಹಾ ದೇಸಾಯಿ ಬರೆದಿದ್ದರು. ಇದೀಗ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಇದೆ.

Continue Reading

ಬಾಲಿವುಡ್

Deepika Padukone: ಡಿನ್ನರ್ ಡೇಟ್‌ನಲ್ಲಿ ಗುಳಿ ಕೆನ್ನೆ ಸುಂದರಿ ; ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಫಿದಾ!

Deepika Padukone: ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿದ್ದಂತೆ, ಹಲವಾರು ಅಭಿಮಾನಿಗಳು ಸೆಲ್ಫಿಗಾಗಿ ದೀಪಿಕಾ ಅವರಿಗೆ ಒತ್ತಾಯಿಸಿದರು. ನಟ ತನ್ನ ಕಾರಿನ ಕಡೆಗೆ ಹೋಗುತ್ತಿರುವಾಗ ಫಾ ಅವರೊಂದಿಗೆ ನಗುತ್ತಿರುವ ಮತ್ತು ಸಂವಹನ ನಡೆಸುತ್ತಿರುವುದು ಕಂಡುಬಂದಿತು.

VISTARANEWS.COM


on

Deepika Padukone looks stunning as she steps out for dinner
Koo

ಬೆಂಗಳೂರು: ನಟಿ ದೀಪಿಕಾ ಪಡುಕೋಣೆ (Deepika Padukone) ಗುರುವಾರ ಸಂಜೆ ಮುಂಬೈನಲ್ಲಿ ಡಿನ್ನರ್‌ ನೈಟ್‌ನಲ್ಲಿ ಕಂಡಿದ್ದಾರೆ. ನಟಿಯ ಹಲವಾರು ಫೋಟೊ ಮತ್ತು ವೀಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಟಿ ಏಕಾಂಗಿಯಾಗಿ ರೆಸ್ಟೋರೆಂಟ್‌ನಿಂದ ಹೊರಬರುತ್ತಿರುವುದು ಕಂಡುಬಂದಿದೆ.

ದೀಪಿಕಾ ಅವರು ಡಿನ್ನರ್‌ ನೈಟ್‌ಗೆ ಹಸಿರು ಹೂವಿನ ಸೂಟ್, ಬಿಳಿ ಪ್ಯಾಂಟ್ ಮತ್ತು ಕಂದು ಬಣ್ಣದ ಹೀಲ್ಸ್‌ನಲ್ಲಿ ಕಾಣಿಸಿಕೊಂಡರು. ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿದ್ದಂತೆ, ಹಲವಾರು ಅಭಿಮಾನಿಗಳು ಸೆಲ್ಫಿಗಾಗಿ ದೀಪಿಕಾ ಅವರಿಗೆ ಒತ್ತಾಯಿಸಿದರು. ನಟ ತನ್ನ ಕಾರಿನ ಕಡೆಗೆ ಹೋಗುತ್ತಿರುವಾಗ ಫಾ ಅವರೊಂದಿಗೆ ನಗುತ್ತಿರುವ ಮತ್ತು ಸಂವಹನ ನಡೆಸುತ್ತಿರುವುದು ಕಂಡುಬಂದಿತು. ಕಾರಿನೊಳಗೆ ಕಾಲಿಡುವ ಮೊದಲು, ದೀಪಿಕಾ ಪಾಪರಾಜಿಗೆ “ಧನ್ಯವಾದ” ಎಂದು ಹೇಳಿದರು.

ನಟಿಯ ಲುಕ್‌ ಕಂಡು ಫ್ಯಾನ್ಸ್‌ ಕೂಡ ಮುಚ್ಚುಗೆ ವ್ಯಕತಪಡಿಸುತ್ತಿದ್ದಾರೆ. “ದೀಪಿಕಾ, ನಿಮ್ಮ ಸೌಂದರ್ಯವು ಕೆಲವು ಜನರನ್ನು ಕೊಲ್ಲುತ್ತಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ತಾಯಿಯಾಗುವ ಸಂಭ್ರಮದಲ್ಲಿರುವ ನಟಿ ದೀಪಿಕಾ ಪಡುಕೋಣೆ ತನ್ನ ಬೇಬಿ ಬಂಪ್ ಅನ್ನು ತುಂಬಾ ವಿಶೇಷವಾದ ಲುಕ್‌ನಲ್ಲಿ ತೋರಿಸಲು ಪ್ರಾರಂಭಿಸಿದ್ದಾರೆ. ಹಾಗೇ ಗರ್ಭಿಣಿಯರು ತಮ್ಮ ಬೇಬಿ ಬಂಪ್‌ನಲ್ಲಿ ಯಾವ ರೀತಿ ಫ್ಯಾಷನ್ ಡ್ರೆಸ್ ಧರಿಸಬಹುದು ಎಂದು ತೋರಿಸಿಕೊಡುತ್ತಿದ್ದಾರೆ.

ಇದನ್ನೂ ಓದಿ: Deepika Padukone: ದೀಪಿಕಾ ಜತೆ ಹಸಿ ಬಿಸಿ ದೃಶ್ಯಗಳನ್ನು ನಿಭಾಯಿಸಿದ್ದು ಅಷ್ಟು ಸುಲಭವಾಗಿರಲಿಲ್ಲ ಎಂದ ಸಿದ್ಧಾಂತ್ ಚತುರ್ವೇದಿ!

ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.ಸಿನಿಮಾ ವಿಚಾರಕ್ಕೆ ಬಂದರೆ ದೀಪಿಕಾ ಅವರು ರೋಹಿತ್ ಶೆಟ್ಟಿ ಅವರ ʻಸಿಂಗಮ್ ಅಗೇನ್‌ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಜಯ್ ದೇವಗನ್, ಕರೀನಾ ಕಪೂರ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಅರ್ಜುನ್ ಕಪೂರ್ ಜೊತೆಗೆ ಲೇಡಿ ಸಿಂಗಮ್ ಪಾತ್ರಕ್ಕೆ ದೀಪಿಕಾ ಹೆಜ್ಜೆ ಹಾಕಿದ್ದಾರೆ.

Continue Reading

ಕರ್ನಾಟಕ

Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

Thangalaan Movie: ಜ್ಞಾನವೇಲ್ ರಾಜ್ ನಿರ್ಮಾಣದ ಪಾ. ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಆಧರಿಸಿ ಈ ಚಿತ್ರ ಮಾಡಲಾಗಿದೆ. ಈ ಸಿನಿಮಾದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮತ್ತಿತರರು ನಟಿಸಿದ್ದಾರೆ.

VISTARANEWS.COM


on

Thangalan Movie
Koo

ಬೆಂಗಳೂರು: ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಿದ್ದಾರೆ “ಕಬಾಲಿ” ಖ್ಯಾತಿಯ ನಿರ್ದೇಶಕ ಪಾ ರಂಜಿತ್‍. ಈ ಚಿತ್ರದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮುಂತಾದವರು ನಟಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ “ಅನ್ನಿಯನ್”, “ಪಿತಾಮಗನ್” ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು. ನಾವು ನಮಗೆ ಗೊತ್ತಿಲ್ಲದ ಪಾತ್ರಗಳಾಗುವುದೇ ನಿಜವಾದ ಕಷ್ಟ. ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು? ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು. ಈ ಚಿತ್ರಕ್ಕಾಗಿ ಒಂದು ಶತಕದ ಹಿಂದಕ್ಕೆ ಹೋಗುವಂತಾಯಿತು ಎಂದು ತಿಳಿಸಿದರು.

ಇದನ್ನೂ ಓದಿ: Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಹಂಚಿಕೊಂಡರು.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವುದಕ್ಕೆ ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರʼ ದೊಡ್ಡ ಸ್ಫೂರ್ತಿ ಎಂದು ತಿಳಿಸಿದ ಚಿಯಾನ್ ವಿಕ್ರಮ್, ಉತ್ತಮ ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎನ್ನುವುದನ್ನು ಆ ಚಿತ್ರ ತೋರಿಸಿತು ಎಂದರು.

ಇದನ್ನೂ ಓದಿ: Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕ ಪಾ. ರಂಜಿತ್ ವಿವರಿಸಿದರು. “ನಾನು ಮತ್ತು ವರಲಕ್ಷ್ಮೀ” ಕನ್ನಡ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ ನಟಿ ಮಾಳವಿಕ ಮೋಹನನ್ “ತಂಗಲಾನ್” ಚಿತ್ರದ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಹಾಲಿವುಡ್ ನಟ ಡೇನಿಯಲ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಈ ಚಿತ್ರ ಪ್ರತಿಷ್ಠಿತ ಕೆ.ವಿ‌.ಎನ್ ಸಂಸ್ಥೆಯ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ‌.

Continue Reading
Advertisement
Bangladesh Unrest
ಕರ್ನಾಟಕ9 mins ago

Bangladesh Unrest: ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Viral News
Latest11 mins ago

Viral News: ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಕಂಡಕ್ಟರ್‌ ಮೇಲೆ ನಾಗರಹಾವನ್ನು ಎಸೆದ ಮಹಿಳೆ!

Viral News
Latest17 mins ago

Viral News: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ!

Jagdeep Dhankhar
ರಾಜಕೀಯ25 mins ago

Jagdeep Dhankhar: ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಇಳಿಸಲು ಹೊರಟಿವೆ ಪ್ರತಿಪಕ್ಷಗಳು! ಇದು ಸಾಧ್ಯವೇ?

Bangladesh Unrest
ವಿದೇಶ43 mins ago

Bangladesh Unrest: ಪ್ರತಿಭಟನೆಗೆ ಮಣಿದು ರಾಜೀನಾಮೆಗೆ ಮುಂದಾದ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಒಬೈದುಲ್ ಹಸನ್

ed raid
ಬೆಂಗಳೂರು57 mins ago

ED Raid: ಬೆಂಗಳೂರು, ಧಾರವಾಡದಲ್ಲಿ ಕೆಐಎಡಿಬಿ ಕಚೇರಿಗಳಿಗೆ ಇಡಿ ದಾಳಿ; 26 ಗಂಟೆ ಪರಿಶೀಲಿಸಿದರೂ ಮುಗಿಯದ ಹಗರಣದ ದಾಖಲೆ!

Govt Quota Seats
ಕರ್ನಾಟಕ1 hour ago

Govt Quota Seats: ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ಇನ್ಮುಂದೆ ಖಾಸಗಿ ಪದವಿ ಕಾಲೇಜುಗಳಲ್ಲೂ ಸಿಗಲಿದೆ ಸರ್ಕಾರಿ ಕೋಟಾ ಸೀಟ್!

Team India
ಕ್ರೀಡೆ1 hour ago

Team India: ಆಸೀಸ್​ ಪ್ರವಾಸದಲ್ಲಿ 2 ದಿನಗಳ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಆಡಲಿದೆ ಭಾರತ ತಂಡ

Narendra Modi
ದೇಶ2 hours ago

Narendra Modi: ಭೂಕುಸಿತ ಪೀಡಿತ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ

Anti-Racist Protests
ವಿದೇಶ2 hours ago

Britain Violence: ಬ್ರಿಟನ್‌ನಲ್ಲಿ ವಲಸಿಗರು, ಮುಸ್ಲಿಮರ ವಿರುದ್ಧ ಪ್ರತಿಕಾರದ ದಾಳಿ ನಡೆಯುತ್ತಿರುವುದೇಕೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌