ಬ್ಯಾಂಕ್‌ ಖಾತೆಗೆ ನಾಲ್ವರು ನಾಮಿನಿಗಳನ್ನು ಸೇರಿಸಲು ಅವಕಾಶ; ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆಯಲ್ಲಿ ಏನೇನು ಬದಲಾವಣೆ? - Vistara News

ವಾಣಿಜ್ಯ

ಬ್ಯಾಂಕ್‌ ಖಾತೆಗೆ ನಾಲ್ವರು ನಾಮಿನಿಗಳನ್ನು ಸೇರಿಸಲು ಅವಕಾಶ; ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆಯಲ್ಲಿ ಏನೇನು ಬದಲಾವಣೆ?

Nirmala Sitharaman: ಠೇವಣಿದಾರರು ಇನ್ನು ಮುಂದೆ ಬ್ಯಾಂಕ್ ಖಾತೆಗೆ ನಾಲ್ವರು ನಾಮಿನಿಯಾಗಿ ಸೇರ್ಪಡೆಗೊಳಿಸುವ ಅವಕಾಶ ಹೊಂದಲಿದ್ದಾರೆ. ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ–2024ರಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ಪ್ರಸ್ತುತ ಬ್ಯಾಂಕ್ ಖಾತೆಗೆ ಒಬ್ಬರನ್ನು ನಾಮಿನಿ ಮಾಡಲು ಅವಕಾಶವಿದೆ.

VISTARANEWS.COM


on

Nirmala Sitharaman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಠೇವಣಿದಾರರು ಇನ್ನು ಮುಂದೆ ಬ್ಯಾಂಕ್ ಖಾತೆಗೆ ನಾಲ್ವರು ನಾಮಿನಿಯಾಗಿ ಸೇರ್ಪಡೆಗೊಳಿಸುವ ಅವಕಾಶ ಹೊಂದಲಿದ್ದಾರೆ. ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಲೋಕಸಭೆಯಲ್ಲಿ ಮಂಡಿಸಿದ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ–2024 (Banking Laws Amendment Bill)ರಲ್ಲಿ ಈ ಬಗ್ಗೆ ತಿಳಿಸಿದ್ದಾರೆ.

ಪ್ರಸ್ತುತ ಬ್ಯಾಂಕ್ ಖಾತೆಗೆ ಒಬ್ಬರನ್ನು ನಾಮಿನಿ ಮಾಡಲು ಅವಕಾಶವಿದೆ. ಇದೀಗ ಮಸೂದೆ ಏಕಕಾಲದಲ್ಲಿ ನಾಲ್ವರನ್ನು ವಾರಸುದಾರರನ್ನಾಗಿ ಮಾಡಲು ಅವಕಾಶ ನೀಡಿದೆ. ಠೇವಣಿದಾರರು ಮತ್ತು ಹೂಡಿಕೆದಾರರ ಹಿತ ಕಾಪಾಡಲು ಸರ್ಕಾರವು ಈ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಬ್ಯಾಂಕ್‌ನಲ್ಲಿರುವ ಠೇವಣಿ, ಚಿನ್ನಾಭರಣ, ದಾಖಲೆ ಪತ್ರಗಳು ಹಾಗೂ ಲಾಕರ್‌ಗಳಿಗೂ ಈ ಕಾನೂನಿನಡಿ ಠೇವಣಿದಾರರು ತಮ್ಮ ಉತ್ತರಾಧಿಕಾರಿಗಳ ನೇಮಿಸುವ ಅಧಿಕಾರ ಹೊಂದಲಿದ್ದಾರೆ.

ಮಸೂದೆಯಲ್ಲಿ ಏನೇನಿದೆ?

ವಾರಸುದಾರರಿಲ್ಲದ ಲಾಭಾಂಶ, ಷೇರು, ಬಡ್ಡಿ ಅಥವಾ ಬಾಂಡ್‌ಗಳನ್ನು ಹೂಡಿಕೆದಾರರ ಶಿಕ್ಷಣ ಮತ್ತು ರಕ್ಷಣಾ ನಿಧಿಗೆ ವರ್ಗಾಯಿಸಲು ಅನುವು ಮಾಡಿಕೊಡಲಿದೆ. ವಾರಸುದಾರರು ಇದ್ದರೆ ಆ ನಿಧಿಯ ಮೂಲಕ ಹಣ ವಾಪಸ್‌ ಪಡೆಯುವ ಅವಕಾಶವೂ ಇದೆ.

ಮಸೂದೆಯು ಸಬ್‌ಸ್ಟಾನ್ಶಿಯಲ್‌ ಇಂಟರೆಸ್ಟ್‌ (Substantial interest) ಅನ್ನು ಮರುವ್ಯಾಖ್ಯಾನಿಸುವುದನ್ನೂ ಪ್ರಸ್ತಾವಿಸುತ್ತದೆ. ಅಂದರೆ ಇಂದು ಕಂಪೆನಿಯಲ್ಲಿ ನಿರ್ದೇಶಕರು 5 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿ ಹೊಂದಿದ್ದರೆ ಅದನ್ನು ಸಬ್‌ಸ್ಟಾನ್ಶಿಯಲ್‌ ಇಂಟರೆಸ್ಟ್‌ ಎಂದು ಪರಿಗಣಿಸಲಾಗುತ್ತದೆ. ಇಂತಹವರಿಗೆ ಸಾಲ ಕೊಡಲು ಮಂಡಳಿಯ ಅನುಮೋದನೆ ಅಗತ್ಯವಾಗಿರುತ್ತದೆ. ಇದೀಗ ಸಬ್‌ಸ್ಟಾನ್ಶಿಯಲ್‌ ಇಂಟರೆಸ್ಟ್‌ ಮೊತ್ತವನ್ನು 1968ರಲ್ಲಿ ನಿರ್ಧರಿಸಿದ 5 ಲಕ್ಷ ರೂ.ಗಳಿಂದ 2 ಕೋಟಿ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಬ್ಯಾಂಕುಗಳು ಆರ್‌ಬಿಐಗೆ ಶಾಸನಬದ್ಧ ವರದಿಗಳನ್ನು ಸಲ್ಲಿಸುವ ದಿನಾಂಕಗಳನ್ನು ಪರಿಷ್ಕರಿಸುವ ಗುರಿಯನ್ನು ಮಸೂದೆ ಹೊಂದಿದೆ. ಪ್ರಸ್ತುತ ಬ್ಯಾಂಕುಗಳು ನಿಯಮಾವಳಿ ಅನುಸರಿಸಿರುವ ಬಗ್ಗೆ ಪ್ರತೀ ತಿಂಗಳ ಎರಡನೇ ಮತ್ತು ನಾಲ್ಕನೇ ಶುಕ್ರವಾರಗಳಂದು ವರದಿ ಸಲ್ಲಿಸಬೇಕು. ಆದರೆ ತಿದ್ದುಪಡಿ ಮಾಡಲಾದ ನಿಯಮದ ಪ್ರಕಾರ ತಿಂಗಳ 15ನೇ ತಾರೀಕು ಮತ್ತು ತಿಂಗಳಾಂತ್ಯಕ್ಕೆ ಈ ವರದಿ ಸಲ್ಲಿಸಿದರೆ ಸಾಕು.

ಪ್ರಸ್ತಾವಿತ ತಿದ್ದುಪಡಿಗಳು ಲೆಕ್ಕಪರಿಶೋಧಕರ (Auditors) ಸಂಭಾವನೆಯನ್ನು ನಿರ್ಧರಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸ್ವಾತಂತ್ರ್ಯವನ್ನು ನೀಡಲು ಮುಂದಾಗಿದೆ. ಇದು ಬ್ಯಾಂಕುಗಳಿಗೆ ಅತ್ಯುತ್ತಮ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಅವಕಾಶ ನೀಡುವ ಮೂಲಕ ಲೆಕ್ಕಪರಿಶೋಧನೆಯ ಗುಣಮಟ್ಟವನ್ನು ಸುಧಾರಿಸುವ ಸಾಧ್ಯತೆಯಿದೆ.

ಕಳೆದ ವಾರ ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದ ಈ ಮಸೂದೆಯು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ 1934, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ 1955, ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ 1970 ಮತ್ತು ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ 1980 ಅನ್ನು ತಿದ್ದುಪಡಿ ಮಾಡಿದೆ.

ಬಜೆಟ್‌ನಲ್ಲಿ ಪ್ರಸ್ತಾವ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024ರ ಬಜೆಟ್ ಭಾಷಣದಲ್ಲಿ, ಬ್ಯಾಂಕ್ ಆಡಳಿತವನ್ನು ಸುಧಾರಿಸಲು ಮತ್ತು ಹೂಡಿಕೆದಾರರ ರಕ್ಷಣೆಯನ್ನು ಹೆಚ್ಚಿಸಲು, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಬ್ಯಾಂಕಿಂಗ್ ಕಂಪನಿಗಳ ಕಾಯ್ದೆ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Gold Rate Today: ಚಿನ್ನದ ದರದಲ್ಲಿ ಸತತ ಎರಡನೇ ದಿನವೂ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 10) ಚಿನ್ನದ ದರ ಕೊಂಚ ಹೆಚ್ಚಾಗಿದೆ. ಇಂದು 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ ₹ 20 ಮತ್ತು 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ ₹ 22 ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,445 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,031 ಇದೆ.

VISTARANEWS.COM


on

Koo

ಬೆಂಗಳೂರು: ಚಿನ್ನದ ದರದಲ್ಲಿ ಸತತ ಎರಡನೇ ದಿನವೂ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್‌ 10) ಚಿನ್ನದ ದರ ಹೆಚ್ಚಾಗಿದೆ (Gold Rate Today). ಇಂದು 1 ಗ್ರಾಂ 22 ಕ್ಯಾರಟ್‌ ಚಿನ್ನದ ದರದಲ್ಲಿ ₹ 20 ಮತ್ತು 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ ₹ 22 ಏರಿಕೆ ಕಂಡು ಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,445 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,031 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,560 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,450 ಮತ್ತು ₹ 6,44,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,248 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,310 ಮತ್ತು ₹ 7,03,100 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,460 ₹ 7,046
ಮುಂಬೈ₹ 6,445 ₹ 7,031
ಬೆಂಗಳೂರು₹ 6,445 ₹ 7,031
ಚೆನ್ನೈ₹ 6,445 ₹ 7,031

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 80.65 ಹಾಗೂ 8 ಗ್ರಾಂಗೆ ₹ 645.20 ಇದೆ. 10 ಗ್ರಾಂ ₹ 806.50 ಹಾಗೂ 1 ಕಿಲೋಗ್ರಾಂ ₹ 80,650 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು?

    Continue Reading

    ವಾಣಿಜ್ಯ

    Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

    Hindenburg: ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ವರದಿ ಪ್ರಕಟಿಸಿ ಸಂಚಲನ ಸೃಷಿಸಿದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಮುಂದಾಗಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

    VISTARANEWS.COM


    on

    Hindenburg
    Koo

    ವಾಷಿಂಗ್ಟನ್‌: ಗೌತಮ್‌ ಅದಾನಿ (Gautam Adani)  ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ (Hindenburg) ಸಂಸ್ಥೆಯು 2023ರ ಜನವರಿಯಲ್ಲಿ ವರದಿ ಪ್ರಕಟಿಸಿದ ದೇಶಾದ್ಯಂತ ಸಂಚಲ ಮೂಡಿಸಿತ್ತು. ಇದೀಗ ಮತ್ತೊಮ್ಮೆ ಭಾರತ ಕೇಂದ್ರೀತ ವರದಿ ಪ್ರಕಟಿಸುವುದಾಗಿ ಘೋಷಿಸಿದೆ. ಈ ಬಗ್ಗೆ ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೂಚನೆ ನೀಡಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ (Something big soon India) ಎಂದು ಸಂಸ್ಥೆ ಬರೆದುಕೊಂಡಿದೆ. ಅದಾನಿ ಗ್ರೂಪ್ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿ ನಿಯಮ ಉಲ್ಲಂಘನೆಗಳನ್ನು ಮಾಡುತ್ತಿದೆ ಎಂದು ಆರೋಪಿಸಿ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಸಜ್ಜಾಗಿದೆ.

    2023ರ ಜನವರಿಯಲ್ಲಿ ಅದಾನಿ ಗ್ರೂಪ್ ಕುರಿತ ವರದಿ ಪ್ರಕಟವಾದ ಬಳಿಕ ಅದರ ಷೇರುಗಳ ಮೌಲ್ಯ ಗಣನೀಯವಾಗಿ ಕುಸಿದಿದ್ದವು. ಆದಾಗ್ಯೂ ಅದಾನಿ ಗ್ರೂಪ್ ಈ ಆರೋಪಗಳನ್ನು ನಿರಾಕರಿಸಿತ್ತು.

    ಹಿಂಡನ್‌ಬರ್ಗ್‌ ವರದಿಯಲ್ಲಿ ಏನಿತ್ತು?

    ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ವ್ಯಾಪಕ ಚರ್ಚೆ ಹುಟ್ಟು ಹಾಕಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

    ಹಿಂಡನ್‌ಬರ್ಗ್‌ ವರದಿ ಕುರಿತು ತನಿಖೆಯಾಗಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಹಲವರು ಮೊರೆ ಹೋಗಿದ್ದರು. ಅಲ್ಲದೆ ಅದಾನಿ ಗ್ರೂಪ್‌ ಅಕ್ರಮ ಪತ್ತೆಹಚ್ಚುವಲ್ಲಿ ಸೆಬಿ ವಿಫಲವಾಗಿದೆ. ಹಾಗಾಗಿ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಹಾಗಾಗಿ ಸರ್ವೋಚ್ಚ ನ್ಯಾಯಾಲಯವು 2023ರ ಮಾರ್ಚ್‌ನಲ್ಲಿ ಸೆಬಿ ತನಿಖೆ ಮೇಲೆ ನಿಗಾ ಇರಿಸಲು, ತನಿಖೆಯಲ್ಲಿ ದೋಷ ಪತ್ತೆಹಚ್ಚಲು ಆರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು. ಇದಾದ ಎರಡು ತಿಂಗಳ ಬಳಿಕ ಸೆಬಿಯು ಸುಪ್ರೀಂ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿತ್ತು. “ಅದಾನಿ ಗ್ರೂಪ್‌ ವಂಚನೆ ಮಾಡಿದೆ ಎಂಬುದನ್ನು ಸಾಬೀತುಪಡಿಸಲು ಈ ಹಂತದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ” ಎಂದು ಉಲ್ಲೇಖಿಸಿತ್ತು.

    ಇದನ್ನೂ ಓದಿ: Gautam Adani : ಎನ್​ಡಿಟಿವಿ ಆಯ್ತು; ಈಗ ಸುದ್ದಿ ಸಂಸ್ಥೆ ಐಎಎನ್​ಎಸ್​ ಅದಾನಿ ಪಾಲು

    ಗೌತಮ್‌ ಅದಾನಿ-ಹಿಂಡನ್‌ಬರ್ಗ್‌ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ನಡೆಸುತ್ತಿರುವ ತನಿಖೆಯ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿತ್ತು. “ಸೆಬಿಯು ತನಿಖೆ ಹಾಗೂ ನಿಯಂತ್ರಕ ಸಂಸ್ಥೆಯಾಗಿರುವುದರಿಂದ ಅದರ ತನಿಖೆಯಲ್ಲಿ ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡಲು ಆಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಇದರಿಂದಾಗಿ ಗೌತಮ್‌ ಅದಾನಿ ನೇತೃತ್ವದ ಗ್ರೂಪ್‌ಗೆ ರಿಲೀಫ್‌ ಸಿಕ್ಕಿತ್ತು.

    Continue Reading

    ವಾಣಿಜ್ಯ

    Richest Indian Family: ಭಾರತದ ಜಿಡಿಪಿಯ ಶೇ. 10ರಷ್ಟು ಸಂಪತ್ತು ಹೊಂದಿರುವ ಅಂಬಾನಿ ಕುಟುಂಬ! ಇತರ ಶ್ರೀಮಂತ ಕುಟುಂಬಗಳು ಯಾವವು?

    ಭಾರತದ ಅತ್ಯಂತ ಶ್ರೀಮಂತ ಕುಟುಂಬವಾಗಿ ಅಂಬಾನಿ, ಬಜಾಜ್, ಬಿರ್ಲಾ ಕುಟುಂಬ ಬಾರ್ಕ್ಲೇಸ್-ಹುರುನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲಿ ಗುರುತಿಸಿಕೊಂಡಿದೆ. ದೇಶದ ಪ್ರಮುಖ ಈ ಮೂರು ಕುಟುಂಬ (Richest Indian Family) ವ್ಯವಹಾರಗಳ 460 ಶತಕೋಟಿ ಡಾಲರ್ ಆಗಿದ್ದು, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ಸಮೀಕ್ಷೆ ತಿಳಿಸಿದೆ. ಅಂಬಾನಿ ಹೊರತಾಗಿ ಭಾರತದ ಇತರ ಶ್ರೀಮಂತ ಕುಟುಂಬಗಳು ಯಾವವು? ಈ ಕುರಿತ ಮಾಹಿತಿ ಇಲ್ಲಿದೆ.

    VISTARANEWS.COM


    on

    By

    Koo

    ಭಾರತದ ಅತ್ಯಂತ ಶ್ರೀಮಂತ ಕುಟುಂಬ (Richest Indian Family) ಎಂದೇ ಗುರುತಿಸಲ್ಪಟ್ಟಿರುವ ಅಂಬಾನಿ ಕುಟುಂಬದ (Ambani Family) ಸಂಪತ್ತು ಭಾರತದ ಜಿಡಿಪಿಯ (GDP of India) ಶೇ. 10ರಷ್ಟಿದೆ. ಅಂಬಾನಿ ಕುಟುಂಬವು ಭಾರತದ ಉದ್ಯಮಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಒಟ್ಟು 25,75,000 ಕೋಟಿ ಮೌಲ್ಯದ ಸಂಪತ್ತನ್ನು ಹೊಂದಿದೆ.

    ಬಾರ್ಕ್ಲೇಸ್-ಹುರುನ್ ಇಂಡಿಯಾ ಸಮೀಕ್ಷೆಯಲ್ಲಿ (Barclays-Hurun India report) ನೀಡಿರುವ ಶ್ರೇಯಾಂಕಗಳ ಪ್ರಕಾರ ಇದು 2024ರ ಮಾರ್ಚ್ 20ರ ಕಂಪೆನಿಯ ಮೌಲ್ಯಮಾಪನಗಳನ್ನು ಆಧರಿಸಿವೆ. ಇದು ಖಾಸಗಿ ಹೂಡಿಕೆಗಳು ಮತ್ತು ಇತರ ಆಸ್ತಿಗಳನ್ನು ಹೊರತುಪಡಿಸಿದೆ.


    ಅಂಬಾನಿಯ ಅನಂತರ ಬಜಾಜ್ ಕುಟುಂಬವು 7,13,000 ಕೋಟಿ ಮೌಲ್ಯದ ಸಂಪತ್ತಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ನಿರಜ್ ಬಜಾಜ್ ಅವರ ಕುಟುಂಬದ ಮುಖ್ಯಸ್ಥರಾಗಿದ್ದಾರೆ.


    ಬಿರ್ಲಾ ಕುಟುಂಬ 5.39 ಲಕ್ಷ ಕೋಟಿ ಸಂಪತ್ತು ಹೊಂದಿದ್ದು, ಮೂರನೇ ಸ್ಥಾನದಲ್ಲಿದೆ. ದೇಶದ ಪ್ರಮುಖ ಈ ಮೂರು ಕುಟುಂಬ ವ್ಯವಹಾರಗಳ 460 ಶತಕೋಟಿ ಡಾಲರ್ ಆಗಿದ್ದು, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ಸಮೀಕ್ಷೆ ತಿಳಿಸಿದೆ.

    ಈ ಪಟ್ಟಿಯಲ್ಲಿ ಸಜ್ಜನ್ ಜಿಂದಾಲ್ ನೇತೃತ್ವದ ಕುಟುಂಬವು 4.71 ಲಕ್ಷ ಕೋಟಿ ರೂ. ಮೌಲ್ಯದ ಸಂಪತ್ತಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದು, ನಾಡಾರ್ ಕುಟುಂಬವು 4.30 ಲಕ್ಷ ಕೋಟಿ ರೂ. ಮೌಲ್ಯದೊಂದಿಗೆ ಐದನೇ ಸ್ಥಾನದಲ್ಲಿದೆ. ನಾಡಾರ್ ಕುಟುಂಬದ ರೋಶನಿ ನಾಡರ್ ಮಲ್ಹೋತ್ರಾ ಅವರು ಟಾಪ್ 10 ಕುಟುಂಬದ ವ್ಯವಹಾರಗಳ ಪಟ್ಟಿಯಲ್ಲಿ ಏಕೈಕ ಮಹಿಳೆಯಾಗಿದ್ದಾರೆ.


    ಮೊದಲ ತಲೆಮಾರಿನ ಕುಟುಂಬ

    ಅದಾನಿ ಕುಟುಂಬವು 15,44,000 ಕೋಟಿ ಮೌಲ್ಯದೊಂದಿಗೆ ಅತ್ಯಂತ ಮೌಲ್ಯಯುತವಾದ ಮೊದಲ ತಲೆಮಾರಿನ ಕುಟುಂಬ ವ್ಯವಹಾರವಾಗಿ ಹೊರಹೊಮ್ಮಿದೆ. ಅನಂತರದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕರಾದ ಪೂನಾವಾಲಾ ಕುಟುಂಬವು 2,37,000 ಕೋಟಿ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದೆ. 91,200 ಕೋಟಿ ರೂ. ಮೌಲ್ಯದ ಡಿವಿ ಕುಟುಂಬ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

    ಇದನ್ನೂ ಓದಿ: Mukesh Ambani: ಮುಕೇಶ್ ಅಂಬಾನಿ ಮನೆಯ ವಿದ್ಯುತ್ ಬಿಲ್ ಎಷ್ಟಿರಬಹುದು ಊಹಿಸಿ!

    ಹುರುನ್ ಇಂಡಿಯಾದ ಸಂಸ್ಥಾಪಕ ಮತ್ತು ಮುಖ್ಯ ಸಂಶೋಧಕ ಅನಾಸ್ ರಹಮಾನ್ ಜುನೈದ್ ಈ ಕುರಿತು ಪ್ರತಿಕ್ರಿಯಿಸಿ, ಕೈಗಾರಿಕಾ ಉತ್ಪನ್ನಗಳ ವಲಯದಲ್ಲಿ 28 ಕಂಪೆನಿಗಳು 4,58,700 ಕೋಟಿ ರೂ. ಮತ್ತು ಆಟೋಮೊಬೈಲ್ ವಲಯದ 23 ಕಂಪೆನಿಗಳು ಮತ್ತು ಫಾರ್ಮಾಸ್ಯುಟಿಕಲ್ಸ್ ವಲಯದ 22 ಕಂಪೆನಿಗಳು 1,876,200 ಕೋಟಿ ರೂ. ಮೌಲ್ಯದ್ದಾಗಿವೆ. ಈ ವ್ಯವಹಾರಗಳು ಭಾರತದ ಜಾಗತಿಕ ಸ್ಪರ್ಧಾತ್ಮಕತೆ ಮತ್ತು ಆರ್ಥಿಕ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವಲ್ಲಿ ಪ್ರಮುಖವಾಗಿವೆ. ಈ ಕುಟುಂಬದ ವ್ಯವಹಾರಗಳ ಗಮನಾರ್ಹವಾದ ಉದ್ಯಮ ವೈವಿಧ್ಯತೆಯು ಭಾರತದಲ್ಲಿ ದೀರ್ಘಕಾಲೀನ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಯನ್ನು ನಿರ್ವಹಿಸುವಲ್ಲಿ ಮತ್ತು ಮುನ್ನಡೆಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಪ್ರದರ್ಶಿಸುತ್ತದೆ ಎಂದು ಹೇಳಿದ್ದಾರೆ.


    ಏಷ್ಯಾ ಪೆಸಿಫಿಕ್‌ನ ಬಾರ್ಕ್ಲೇಸ್ ಖಾಸಗಿ ಬ್ಯಾಂಕ್ ಮುಖ್ಯಸ್ಥ ನಿತಿನ್ ಸಿಂಗ್ ಮಾತನಾಡಿ, ಭಾರತವು ಸಂಕೀರ್ಣ ದೇಶವಾಗಿದೆ. ಇದು ವಿವಿಧ ರಾಜ್ಯಗಳು ಮತ್ತು ವಿವಿಧ ವಸ್ತುಗಳಿಂದ ಮಾಡಲ್ಪಟ್ಟಿದೆ. ಈ ಸಂಕೀರ್ಣ ಪರಿಸರದಲ್ಲಿ ಹೇಗೆ ಕೆಲಸ ಮಾಡಬೇಕೆಂದು ತಿಳಿದಿರುವ ಜನರಿಗೆ ಇದು ಪ್ರಯೋಜನವನ್ನು ನೀಡುತ್ತದೆ. ಬಹು ಪೀಳಿಗೆಯ ವ್ಯವಹಾರಗಳು ಹಲವಾರು ವರ್ಷಗಳ ಬಳಿಕ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

    Continue Reading

    ದೇಶ

    Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

    Lending Rate: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ ಎಂದೇ ಹೇಳಲಾಗುತ್ತಿತ್ತು. ಆದರೆ, ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಸಾಲ ಪಡೆದವರಿಗೆ ಈಗ ಇಎಂಐ ಹೊರೆಯಾಗಲಿದೆ.

    VISTARANEWS.COM


    on

    Lending Rate
    Koo

    ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆಯೇ ರೆಪೋ ದರ (Repo Rate) ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee)ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನೆಲೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹಾಗಾಗಿ, ಸಾಲಗಾರರಿಗೆ ಇಎಂಐ ಹೊರೆಯಾಗುವುದಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಬ್ಯಾಂಕ್‌ ಆಫ್ ಬರೋಡಾ (‌Bank Of Baroda) ಈಗ ಬಡ್ಡಿದರ (Lending Rate) ಏರಿಕೆ ಮಾಡಿದ್ದು, ಆ ಬ್ಯಾಂಕ್‌ನಲ್ಲಿ ಸಾಲ ಪಡೆದವರಿಗೆ ಇಎಂಐ ಹೊರೆಯಾಗುವುದು ನಿಶ್ಚಿತವಾಗಿದೆ.

    ಹೌದು, ಬ್ಯಾಂಕ್‌ ಆಫ್‌ ಬರೋಡಾ ಈಗ ಬಡ್ಡಿದರವನ್ನು 5 ಮೂಲಾಂಕ (Basic Points) ಏರಿಕೆ ಮಾಡಿದೆ. ಆಗಸ್ಟ್‌ 12ರಿಂದಲೇ ನೂತನ ಬಡ್ಡಿದರವು ಜಾರಿಗೆ ಬರಲಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ತಿಳಿಸಿದೆ. 3 ತಿಂಗಳು, 6 ತಿಂಗಳು ಹಾಗೂ ಒಂದು ವರ್ಷದವರೆಗೆ ಸಾಲ ತೆಗೆದುಕೊಂಡವರಿಗೆ ಬಡ್ಡಿದರ ಏರಿಕೆ ಮಾಡಿರುವುದರಿಂದ ಅವರಿಗೆ ಮಾಸಿಕ ಇಎಂಐ ಜಾಸ್ತಿಯಾಗಲಿದೆ.

    ಮೂರು ತಿಂಗಳ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.45ರಿಂದ ಶೇ.8.50ಗೆ ಏರಿಕೆ ಮಾಡಿದೆ. ಹಾಗೆಯೇ, 6 ತಿಂಗಳ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.70ರಿಂದ ಶೇ.8.75ಕ್ಕೆ, 1 ವರ್ಷದ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಶೇ.8.90ರಿಂದ ಶೇ.8.95ಕ್ಕೆ ಏರಿಕೆ ಮಾಡಲಾಗಿದೆ. ಇದು ಸಹಜವಾಗಿಯೇ ಗ್ರಾಹಕರಿಗೆ ಹೊರೆಯಾಗಲಿದೆ ಎಂಬುದಾಗಿ ತಿಳಿದುಬಂದಿದೆ.

    ಸಾಮಾನ್ಯವಾಗಿ, ರೆಪೋ ರೇಟ್‌ ಆಧಾರದ ಮೇಲೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿಯನ್ನು ಹೆಚ್ಚಿಸುತ್ತವೆ. ಆರ್‌ಬಿಐ ರೆಪೋ ರೇಟ್‌ ಹೆಚ್ಚಳ ಮಾಡಿದಾಗ ಮಾತ್ರ ಬ್ಯಾಂಕ್‌ಗಳು ಇಂತಹ ಕ್ರಮ ತೆಗೆದುಕೊಳ್ಳುತ್ತವೆ. ಆದರೆ, ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿದೆ. ಅಲ್ಲಿಂದ ಇಲ್ಲಿಯವರೆಗೆ ಆರ್‌ಬಿಐ ರೆಪೋ ದರವನ್ನು ಯಥಾಸ್ಥಿತಿ ಉಳಿಸಿಕೊಂಡು ಬಂದಿದೆ. ಇಷ್ಟಾದರೂ, ಬ್ಯಾಂಕ್‌ ಆಫ್‌ ಬರೋಡಾ ಏಕೆ ಬಡ್ಡಿದರ ಏರಿಕೆ ಮಾಡಿದೆ ಎಂಬುದು ಗ್ರಾಹಕರ ಪ್ರಶ್ನೆಯಾಗಿದೆ.

    ಆರ್‌ಬಿಐ ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆ ಅಥವಾ ಇಳಿಕೆಯಾಗುವುದಿಲ್ಲ.

    ಇದನ್ನೂ ಓದಿ: PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

    Continue Reading
    Advertisement
    Narendra Modi
    ಪ್ರಮುಖ ಸುದ್ದಿ2 mins ago

    Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ

    Californium Stone
    ಕ್ರೈಂ17 mins ago

    Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

    Vinesh Phogat
    ಕ್ರೀಡೆ32 mins ago

    Vinesh Phogat: ಇಂದು ರಾತ್ರಿ 9.30ಕ್ಕೆ ವಿನೇಶ್ ಫೋಗಟ್‌ ಬೆಳ್ಳಿ​ ಪದಕದ ಭವಿಷ್ಯ ನಿರ್ಧಾರ

    Varamahalaxmi Decoration
    ಧಾರ್ಮಿಕ32 mins ago

    Varamahalaxmi Decoration: ವರಮಹಾಲಕ್ಷ್ಮಿಯ ಸಿಂಗಾರಕ್ಕೂ ಬಂತು ಮಿನಿ ವಸ್ತ್ರಾಭರಣಗಳು!

    Trainee Doctor
    ದೇಶ35 mins ago

    Trainee Doctor: ಆಸ್ಪತ್ರೆಯಲ್ಲಿಯೇ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ, ಬಳಿಕ ಹತ್ಯೆ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ

    Motivational Tips
    ಲೈಫ್‌ಸ್ಟೈಲ್43 mins ago

    Motivational Tips: ನಿಮ್ಮದೇ ಈ 10 ಅಭ್ಯಾಸಗಳು ಜೀವನದ ಯಶಸ್ಸಿಗೆ ಅಡ್ಡಗೋಡೆಯಾಗಬಹುದು!

    CDPO suspended
    ಕರ್ನಾಟಕ48 mins ago

    CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

    Viral Video
    Latest50 mins ago

    Viral Video: ಟಿಕೆಟ್ ಇಲ್ಲದೆ ಎಸಿ ಬೋಗಿಯಲ್ಲಿ ಪ್ರಯಾಣಿಸಿದ ಪೊಲೀಸರು; ಟಿಕೆಟ್‌ ಪರಿಶೀಲಕರಿಗೇ ಧಮಕಿ!

    KEA
    ಬೆಂಗಳೂರು55 mins ago

    KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

    New Railway Projects
    ದೇಶ1 hour ago

    New Railway Projects: 24,657 ಕೋಟಿ ರೂ. ಮೊತ್ತದ 8 ರೈಲು ಯೋಜನೆಗಳಿಗೆ ಅನುಮೋದನೆ

    Sharmitha Gowda in bikini
    ಕಿರುತೆರೆ10 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ10 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ2 days ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 days ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 days ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು4 days ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ4 days ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ6 days ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ1 week ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ1 week ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ1 week ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ1 week ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌