Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ? - Vistara News

ಪ್ರಮುಖ ಸುದ್ದಿ

Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ?

Paris Olympics Medal Table: ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಆಯ್ಕೆ ಮಾಡಿಕೊಂಡ ರ‍್ಯಾಂಕಿಂಗ್ ವಿಧಾನದ ಪ್ರಕಾರ ಒಲಿಂಪಿಕ್ ಕೂಟದಲ್ಲಿ ಆಯಾ ದೇಶ ಗೆದ್ದ ಚಿನ್ನದ ಪದಕದ ಆಧಾರದಲ್ಲಿ ರ‍್ಯಾಂಕಿಂಗ್ ನೀಡಲಾಗುತ್ತದೆ.

VISTARANEWS.COM


on

Paris Olympics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ನಾಳೆ(ಭಾನುವಾರ) ಸಮಾರೋಪ ಸಮಾರಂಭ ನಡೆಯಲಿದ್ದು ಟೂರ್ನಿಗೆ ಅಧಿಕೃತವಾಗಿ ತೆರೆ ಬೀಳಲಿದೆ. ಸದ್ಯ ಪದಕ ಪಟ್ಟಿಯಲ್ಲಿ(Paris Olympics Medal Table) ಅಮೆರಿಕ ಅಗ್ರಸ್ಥಾನ ಪಡೆದಿದೆ. ಚೀನಾ ಮತ್ತು ಆಸ್ಟ್ರೇಲಿಯಾ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಭಾರತ 6 ಪದಕ ಗೆದ್ದು 69ನೇ ಸ್ಥಾನಿಯಾಗಿದೆ. ಪಾಕಿಸ್ತಾನ ಏಕೈಕ ಪದಕ ಗೆದ್ದರೂ ಭಾರತಕ್ಕಿಂತ 8 ಸ್ಥಾನ ಪ್ರಗತಿ ಸಾಧಿಸಿ 58ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಒಂದು ಪದಕ ಗೆದ್ದರೂ ಪಾಕಿಸ್ತಾನ ಭಾರತಕ್ಕಿಂತ ಮೇಲೆ ಹೇಗೆ ಸ್ಥಾನ ಪಡೆಯಿತು ಎನ್ನುವುದು ಕ್ರೀಡಾಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಇದಕ್ಕೆ ಉತ್ತರ ಇಲ್ಲಿದೆ.

ಶುಕ್ರವಾರ ರಾತ್ರಿಯ ವರೆಗೂ ಪದಕದ ಖಾತೆಯನ್ನೇ ತೆರೆಯದೇ ಇದ್ದ ಪಾಕಿಸ್ತಾನಕ್ಕೆ ಪುರುಷರ ಜಾವೆಲಿನ್​ ಎಸೆತದಲ್ಲಿ ಬರೋಬ್ಬರಿ 92.97 ಮೀಟರ್ ದೂರ ಜಾವೆಲಿನ್ ಎಸೆದು ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದು ಬೀಗಿದ್ದರು. ಈ ಮೂಲಕ ಪಾಕ್​ಗೆ ಪದಕದ ಖಾತೆ ತೆರೆದಿದ್ದರು. ಜತೆಗೆ 40 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಚಿನ್ನದ ಪದವೊಂದನ್ನು ಗೆದ್ದ ಸಾಧನೆ ಮಾಡಿದ್ದರು. ಭಾರತ 6 ಪದಕ ಗೆದ್ದರೂ ಕೂಡ ಪದಕ ಪಟ್ಟಿಯಲ್ಲಿ ಪಾಕ್​ಗಿಂತ ಕೆಳಗಿರಲು ಕಾರಣ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯಲ್ಲಿರುವ ನಿಯಮ.

ನಿಯಮ ಏನು ಹೇಳುತ್ತೆ?


ಹೌದು, ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ(ಐಒಸಿ) ಆಯ್ಕೆ ಮಾಡಿಕೊಂಡ ರ‍್ಯಾಂಕಿಂಗ್ ವಿಧಾನದ ಪ್ರಕಾರ ಒಲಿಂಪಿಕ್ ಕೂಟದಲ್ಲಿ ಆಯಾ ದೇಶ ಗೆದ್ದ ಚಿನ್ನದ ಪದಕದ ಆಧಾರದಲ್ಲಿ ರ‍್ಯಾಂಕಿಂಗ್ ನೀಡಲಾಗುತ್ತದೆ. ಉದಾಹರಣೆಗೆ ಒಂದು ದೇಶ 10 ಬೆಳ್ಳಿ ಅಥವಾ ಕಂಚಿನ ಪದಕ ಪಡೆದರೂ, ಏಕೈಕ ಚಿನ್ನದ ಪದಕ ಪಡೆದ ರಾಷ್ಟ್ರಕ್ಕಿಂತ ಕೆಳಗಿರುತ್ತದೆ. ಎರಡು ದೇಶಗಳು ಸಮಾನ ಸಂಖ್ಯೆಯ ಚಿನ್ನದ ಪದಕ ಗೆದ್ದಲ್ಲಿ, ಬೆಳ್ಳಿ ಹಾಗೂ ಕಂಚಿನ ಪದಕಗಳು ಗಣನೆಗೆ ಬರುತ್ತವೆ. ಒಟ್ಟಾರೆ ಚಿನ್ನದ ಪದಕ ಗೆದ್ದ ಆಧಾರದಲ್ಲಿ ಅಂಕಟ್ಟಿಯಲ್ಲಿ ಸ್ಥಾನ ನಿರ್ಧಾರವಾಗುತ್ತದೆ. ಹೀಗಾಗಿ ಭಾರತ ಪಾಕಿಸ್ತಾನಕ್ಕಿಂತ ಕೆಳಗಿನ ಸ್ಥಾನ ಪಡೆದಿದೆ.

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರ ಒಲಿಂಪಿಕ್ ಅನರ್ಹತೆ ಮತ್ತು ಮಹಿಳೆಯರ 50 ಕೆ.ಜಿ ವಿಭಾಗದ ಕುಸ್ತಿಯಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ (ಸಿಎಎಸ್)ಗೆ ಸಲ್ಲಿಸಿದ ಮನವಿಯ ಬಗ್ಗೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಮುಖ್ಯಸ್ಥ ಥಾಮಸ್ ಬಾಕ್​​ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ಸ್ಪರ್ಧೆಯಲ್ಲಿ ಎರಡು ಬೆಳ್ಳಿ ಪದಕಗಳನ್ನು ನೀಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಬಾಕ್​ ಹೇಳಿದ್ದಾರೆ. ಆದಾಗ್ಯೂ, ಚಿನ್ನದ ಪದಕದ ಪಂದ್ಯಕ್ಕೆ ಮುಂಚಿತವಾಗಿ ಅನರ್ಹಗೊಂಡ ಭಾರತೀಯ ಕುಸ್ತಿಪಟುವಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ ಎಂಬುದಾಗಿ ನುಡಿದಿದ್ದಾರೆ.

ಪ್ಯಾರಿಸ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಥಾಮಸ್, ಸಿಎಎಸ್ ನಿರ್ಧಾರಕ್ಕೆ ಐಒಸಿ ಬದ್ಧವಾಗಿರುತ್ತದೆ ಎಂದು ಹೇಳಿದರು. ಎರಡು ಬೆಳ್ಳಿ ಪದಕಗಳನ್ನು ನೀಡುವುದು ತಪ್ಪು ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ

Narendra Modi: ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿಗೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಚುರಲ್‌ಮಲ, ಮುಂಡಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ದುರಂತದ ತೀವ್ರತೆ ಬಗ್ಗೆ ಮನವರಿಕೆ ಮಾಡಿದ್ದಾರೆ.

VISTARANEWS.COM


on

Narendra Modi
Koo

ತಿರುವನಂತಪುರಂ: ಕೇರಳದ ವಯನಾಡು ಭೂಕುಸಿತವು (Wayand Landslide) ದೇಶಾದ್ಯಂತ ಬೆಚ್ಚಿಬೀಳಿಸಿದೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಯನಾಡಿನಲ್ಲಿ ಭೂಕುಸಿತದ ತೀವ್ರತೆ ಕುರಿತು ವೈಮಾನಿಕ ಸಮೀಕ್ಷೆ ನಡೆಸಿದರು. ಅಷ್ಟೇ ಅಲ್ಲ, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ನಿರಾಶ್ರಿತರ ಕೇಂದ್ರದಲ್ಲಿರುವ ಮಹಿಳೆಯರು, ಮಕ್ಕಳು ಸೇರಿ ಎಲ್ಲರೊಂದಿಗೂ ಮಾತನಾಡಿದ ಅವರು ಸಾಂತ್ವನ ಹೇಳಿದರು.

ಇದಕ್ಕೂ ಮೊದಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬಳಿಕ ಮೋದಿ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಪ್ರಯಾಣ ಬೆಳೆಸಿದರು.‌ ಮೋದಿ ಅವರೊಂದಿಗೆ ಆರಿಫ್ ಮೊಹಮ್ಮದ್ ಖಾನ್, ಪಿಣರಾಯಿ ವಿಜಯನ್ ಮತು ಕೇಂದ್ರ ಸಚಿವ ಸುರೇಶ್‌ ಗೋಪಿ ಕೂಡ ತೆರಳಿದರು. ಭೂಕುಸಿತದಿಂದ ನೂರಾರು ಜನರು ಸಾವನ್ನಪ್ಪಿದ ವಯನಾಡಿನಲ್ಲಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡರು.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಚುರಲ್‌ಮಲ, ಮುಂಡಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ದುರಂತದ ತೀವ್ರತೆ ಬಗ್ಗೆ ಮನವರಿಕೆ ಮಾಡಿದರು. ದುರಂತ ಪೀಡಿತ ಸ್ಥಳದಲ್ಲಿ ಬೀಡು ಬಿಟ್ಟಿರುವ ರಕ್ಷಣಾ ತಂಡಗಳಿಂದ ಮಾಹಿತಿ ಪಡೆದ ಮೋದಿ ನಿರಾಶ್ರಿತರ ಶಿಬಿರ, ಗಾಯಗೊಂಡರವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೂ ಭೇಟಿ ನೀಡಿದರು. ಈ ಪ್ರದೇಶದಲ್ಲಿನ ಪುನರ್ವಸತಿ ಪ್ರಯತ್ನಗಳ ಮೇಲ್ವಿಚಾರಣೆ ನಡೆಸುವ ನಿರೀಕ್ಷೆಯಿದೆ.

ಜುಲೈ 30ರಂದು ವಯನಾಡಿನ ಮೆಪ್ಪಾಡಿ ಪ್ರದೇಶದ ಮುಂಡಕೈಯಲ್ಲಿ ಭೂಕುಸಿತ ಸಂಭವಿಸಿ ಅಪಾರ ಜೀವ ಹಾನಿ ಮತ್ತು ವ್ಯಾಪಕ ನಾಶನಷ್ಟಕ್ಕೆ ಉಂಟಾಗಿದೆ. ದುರಂತದಲ್ಲಿ ಮೃತರ ಸಂಖ್ಯೆ 400 ದಾಟಿದೆ. ಕೇರಳದಲ್ಲಿ ನಡೆದ ಅತೀ ಭೀಕರ ದುರಂತಗಳಲ್ಲಿ ಇದೂ ಒಂದು ಎನಿಸಿಕೊಂಡಿದೆ. ಸತತ 10 ದಿನಗಳವರೆಗೆ ನಡೆದ ರಕ್ಷಣಾ ಕಾರ್ಯಾಚರಣೆಯು ಅಂತ್ಯವಾಗಿದೆ.

ಇದನ್ನೂ ಓದಿ: Narendra Modi: ಮೋದಿ ಪ್ರೊಫೈಲ್‌ ಫೋಟೊ ಈಗ ತಿರಂಗಾ; ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜನರಿಗೆ ಕರೆ

Continue Reading

ದೇಶ

Trainee Doctor: ಆಸ್ಪತ್ರೆಯಲ್ಲಿಯೇ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ, ಬಳಿಕ ಹತ್ಯೆ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ

Trainee Doctor: ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ.

VISTARANEWS.COM


on

Trainee Doctor
Koo

ಕೋಲ್ಕೊತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕೊತಾ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರೈನಿ ಮಹಿಳಾ ವೈದ್ಯೆಯ (Kolkata Trainee Doctor) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಮಹಿಳಾ ವೈದ್ಯೆಯ ಹತ್ಯೆಗೂ ಮುನ್ನವೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು ಎಂಬ ಮಾಹಿತಿಯು ಮರಣೋತ್ತರ ಪರೀಕ್ಷೆ ವರದಿಯಲ್ಲಿ (Post Mortem Report) ಬಹಿರಂಗವಾಗಿದೆ.

ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ 31 ವರ್ಷದ ಮಹಿಳೆಯು ಕಳೆದ ಗುರುವಾರ (ಆಗಸ್ಟ್‌ 8) ಆರ್‌ ಕೆ ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಅಧ್ಯಯನ ಮಾಡಲು ಹೋಗಿದ್ದ ಹತ್ಯೆಗೀಡಾಗಿದ್ದರು. ಶುಕ್ರವಾರ ಬೆಳಗ್ಗೆ ಮಹಿಳಾ ವೈದ್ಯೆಯ ಶವವು ಪತ್ತೆಯಾಗಿದೆ. ಇದಾದ ಬಳಿಕ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ.

“ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕೋಲ್ಕೊತಾ ಪೊಲೀಸ್‌ ಆಯುಕ್ತ ವಿನೀತ್‌ ಕುಮಾರ್‌ ಗೋಯಲ್‌ ತಿಳಿಸಿದ್ದಾರೆ.

ವೈದ್ಯೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣವು ಭಾರಿ ಸುದ್ದಿಯಾಗಿದ್ದು, ಪ್ರತಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಸಾರ್ವಜನಿಕರೂ ಈ ಕುರಿತು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದಾರೆ. “ಆರೋಪಿಗಳು ಯಾರೇ ಆಗಿದ್ದರೂ, ಅವರನ್ನು ಬಂಧಿಸಿ ಗಲ್ಲಿಗೇರಿಸಲಾಗುವುದು” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ರಾಜ್ಯದ ಹಲವೆಡೆ ಪ್ರಕರಣ ಖಂಡಿಸಿ ಪ್ರತಿಭಟನೆಗಳೂ ನಡೆದಿವೆ.

ಇದನ್ನೂ ಓದಿ: Sexual Abuse: ಸ್ವಂತ ಮಗಳಿಗೆ ಬಲವಂತವಾಗಿ ಅಶ್ಲೀಲ ವಿಡಿಯೊ ತೋರಿಸಿ ಅತ್ಯಾಚಾರ; ಕಾಮುಕ ತಂದೆಯ ಬಂಧನ

Continue Reading

ದೇಶ

New Railway Projects: 24,657 ಕೋಟಿ ರೂ. ಮೊತ್ತದ 8 ರೈಲು ಯೋಜನೆಗಳಿಗೆ ಅನುಮೋದನೆ

New Railway Projects: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ಸುಮಾರು 24,657 ಕೋಟಿ ರೂ.ಗಳ ರೈಲ್ವೆ ಸಚಿವಾಲಯದ 8 ಯೋಜನೆಗಳಿಗೆ ಅನುಮೋದನೆ ನೀಡಿದೆ. ʼಗುನುಪುರ್-ತೇರುಬಲಿ (ಹೊಸ ಮಾರ್ಗ), ಜುನಾಗಢ್-ನಬರಂಗ್‌ಪುರ, ಬಾದಂಪಹಾರ್-ಕಂದುಜಾರ್ಗಢ, ಬಂಗ್ರಿಪೊಸಿ-ಗೊರುಮಹಿಸಾನಿ, ಮಲ್ಕನ್ಗಿರಿ-ಪಾಂಡುರಂಗಪುರಂ (ಭದ್ರಾಚಲಂ ಮೂಲಕ), ಬುರಮರ-ಚಕುಲಿಯಾ, ಜಲ್ನಾ-ಜಲ್ಗಾಂವ್ ಮತ್ತು ಬಿಕ್ರಮಶಿಲಾ-ಕಟಾರಿಯಾ- ಇವು ಕೇಂದ್ರ ಸಚಿವ ಸಂಪುಟ ಅನುಮೋದಿಸಿದ ಎಂಟು ಪ್ರಮುಖ ಹೊಸ ರೈಲ್ವೆ ಮಾರ್ಗ ಯೋಜನೆಗಳುʼʼ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

VISTARANEWS.COM


on

New Railway Projects
Koo

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯು ಸುಮಾರು 24,657 ಕೋಟಿ ರೂ.ಗಳ ರೈಲ್ವೆ ಸಚಿವಾಲಯದ 8 ಯೋಜನೆಗಳಿಗೆ ಅನುಮೋದನೆ ನೀಡಿದೆ (New Railway Projects). ಒಡಿಶಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜಾರ್ಖಂಡ್, ಬಿಹಾರ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಏಳು ರಾಜ್ಯಗಳ 14 ಜಿಲ್ಲೆಗಳನ್ನು ಈ ಯೋಜನೆಗಳು ಒಳಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.

ʼʼಗುನುಪುರ್-ತೇರುಬಲಿ (ಹೊಸ ಮಾರ್ಗ), ಜುನಾಗಢ್-ನಬರಂಗ್‌ಪುರ, ಬಾದಂಪಹಾರ್-ಕಂದುಜಾರ್ಗಢ, ಬಂಗ್ರಿಪೊಸಿ-ಗೊರುಮಹಿಸಾನಿ, ಮಲ್ಕನ್ಗಿರಿ-ಪಾಂಡುರಂಗಪುರಂ (ಭದ್ರಾಚಲಂ ಮೂಲಕ), ಬುರಮರ-ಚಕುಲಿಯಾ, ಜಲ್ನಾ-ಜಲ್ಗಾಂವ್ ಮತ್ತು ಬಿಕ್ರಮಶಿಲಾ-ಕಟಾರಿಯಾ- ಇವು ಕೇಂದ್ರ ಸಚಿವ ಸಂಪುಟ ಅನುಮೋದಿಸಿದ ಎಂಟು ಪ್ರಮುಖ ಹೊಸ ರೈಲ್ವೆ ಮಾರ್ಗ ಯೋಜನೆಗಳುʼʼ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ʼʼಹೊಸ ಮಾರ್ಗದ ಪ್ರಸ್ತಾಪಗಳು ನೇರ ಸಂಪರ್ಕವನ್ನು ಒದಗಿಸುತ್ತವೆ ಮತ್ತು ಪ್ರಯಾಣವನ್ನು ಸುಗಮಗೊಳಿಸುತ್ತದೆ. ಈ ಹೊಸ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದ ದೃಷ್ಟಿಕೋನಕ್ಕೆ ಅನುಗುಣವಾಗಿವೆ. ಇವು ಈ ಪ್ರದೇಶಗಳಲ್ಲಿ ಸಮಗ್ರ ಅಭಿವೃದ್ಧಿಯ ಮೂಲಕ ಸ್ಥಳೀಯರನ್ನು ʼಆತ್ಮ ನಿರ್ಭರʼವನ್ನಾಗಿ ಮಾಡುತ್ತದೆ. ಅವರ ಉದ್ಯೋಗ / ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆʼʼ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಉದ್ಯೋಗ ಸೃಷ್ಟಿ

ʼʼಈ ರೈಲ್ವೆ ಯೋಜನೆಗಳು ಆರ್ಥಿಕ ಅನುಕೂಲವನ್ನು ಒದಗಿಸುವುದಲ್ಲೇ ಸಾವಿರಾರು ಸಂಖ್ಯೆಯ ಉದ್ಯೋಗ ಸೃಷ್ಟಿಗೂ ಕಾರಣವಾಗಲಿವೆ. ಈ ಯೋಜನೆಗಳೊಂದಿಗೆ 64 ಹೊಸ ನಿಲ್ದಾಣಗಳನ್ನು ನಿರ್ಮಿಸಲಾಗುವುದು. ಸುಮಾರು 510 ಹಳ್ಳಿಗಳ 40 ಲಕ್ಷಕ್ಕೂ ಅಧಿಕ ಮಂದಿಗೆ ಅನುಕೂಲವಾಗಲಿದೆʼʼ ಮಾಹಿತಿ ನೀಡಿದ್ದಾರೆ. “ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಅಜಂತಾ ಗುಹೆಗಳನ್ನು ಭಾರತೀಯ ರೈಲ್ವೆ ಜಾಲದ ಮೂಲಕ ಸಂಪರ್ಕಿಸಲಾಗುವುದು. ಇದು ಹೆಚ್ಚಿನ ಸಂಖ್ಯೆಯ ಪ್ರವಾಸಿಗರಿಗೆ ಅನುಕೂಲವಾಗಲಿದೆ” ಎಂದಿದ್ದಾರೆ.

ಕೃಷಿ ಉತ್ಪನ್ನಗಳು, ರಸಗೊಬ್ಬರ, ಕಲ್ಲಿದ್ದಲು, ಕಬ್ಬಿಣದ ಅದಿರು, ಉಕ್ಕು, ಸಿಮೆಂಟ್, ಬಾಕ್ಸೈಟ್, ಸುಣ್ಣದ ಕಲ್ಲು, ಅಲ್ಯೂಮಿನಿಯಂ ಪುಡಿ, ಗ್ರಾನೈಟ್, ಬ್ಯಾಲಸ್ಟ್, ಕಂಟೇನರ್‌ ಮುಂತಾದ ಸರಕುಗಳ ಸಾಗಣೆಗೂ ಈ ಹೊಸ ಯೋಜನೆ ವೇಗ ನೀಡಲಿದೆ. ರೈಲ್ವೆಯು ಪರಿಸರ ಸ್ನೇಹಿ ಮತ್ತು ಇಂಧನ ದಕ್ಷ ಸಾರಿಗೆ ವಿಧಾನವಾಗಿರುವುದರಿಂದ ಪರಿಸರ ಮಾಲಿನ್ಯ ತಡೆಗಟ್ಟುವ ನಮ್ಮ ಗುರಿಯನ್ನು ಸಾಧಿಸಲು ಇದು ನೆರವಾಗಲಿದೆ. ಅಲ್ಲದೆ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದನ್ನು ಕಡಿಮೆ ಮಾಡಲು (32.20 ಕೋಟಿ ಲೀಟರ್) ಮತ್ತು ಪರಿಸರಕ್ಕೆ ಹೊರ ಸೂಸುವ ಇಂಗಾಲದ ಡೈಆಕ್ಸೈಡ್ ಪ್ರಮಾಣವನ್ನು (0.87 ಮಿಲಿಯನ್ ಟನ್) ಕಡಿಮೆ ಮಾಡಲು ಈ ಯೋಜನೆಗಳು ದೊಡ್ಡ ಮಟ್ಟದ ಕೊಡುಗೆ ನೀಡಲಿವೆ. ಇದು 3.5 ಕೋಟಿ ಗಿಡಗಳ ನಾಟಿಗೆ ಸಮ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Independence Day 2024: ಹೊಗೆ ಬಂಡಿಯಿಂದ ವಂದೇ ಭಾರತ್‌‌ವರೆಗೆ; ಭಾರತೀಯ ರೈಲ್ವೆಯ ಅದ್ಭುತ ಪಯಣ!

“ನಾವು 1,300 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡುತ್ತಿದ್ದೇವೆ ಮತ್ತು ಪ್ರತಿವರ್ಷ 5,000 ಕಿ.ಮೀ. ಹಳಿಗಳನ್ನು ನಿರ್ಮಿಸುತ್ತಿದ್ದೇವೆʼʼ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ಕರ್ನಾಟಕ

Davanagere Benne Dose: ದಾವಣಗೆರೆ ಬೆಣ್ಣೆ ದೋಸೆಗೆ ಜಿಐ ಟ್ಯಾಗ್‌ ಕೊಡಲ್ಲ ಎಂದ ಕೇಂದ್ರ; ಯಾಕೆಂದರೆ…

Davanagere Benne Dose: “ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ”ಎಂದು ಕೇಂದ್ರ ಸರಕಾರ ಹೇಳಿದೆ.

VISTARANEWS.COM


on

davanagere benne dose
Koo

ಬೆಂಗಳೂರು: ಬಿಸಿಯಾದ, ಗರಿಗರಿಯಾದ, ಪಕ್ಕದಲ್ಲಿ ಆಲೂ ಪಲ್ಯವನ್ನಿಟ್ಟುಕೊಂಡ, ಮೇಲೊಂದು ಕರಗುತ್ತಿರುವ ಬೆಣ್ಣೆಯ ಮುದ್ದೆ ಇಟ್ಟು ನೀಡುವ ದಾವಣಗೆರೆ ಬೆಣ್ಣೆ ದೋಸೆ (Davanagere Benne Dose) ಅದೆಷ್ಟೋ ವರ್ಷಗಳಿಂದ ಕರ್ನಾಟಕದಾದ್ಯಂತ (Karnataka) ಆಹಾರಪ್ರೇಮಿಗಳನ್ನು ತೃಪ್ತಿಪಡಿಸುತ್ತಿದೆ. ಆದರೆ ಈ ʼದಾವಣಗೆರೆ ಬೆಣ್ಣೆ ದೋಸೆʼ ಎಂಬ ಖಾದ್ಯಕ್ಕೆ ಜಿಐ ಟ್ಯಾಗ್‌ (GI tag) ಅರ್ಥಾತ್‌ ʼಭೌಗೋಳಿಕ ಗುರುತಿನʼ (Geographical Indication) ಟ್ಯಾಗ್‌ ನೀಡಲು ಸಾಧ್ಯವಿಲ್ಲವಂತೆ.

ಹೌದು, ಇದು ಕರ್ನಾಟಕದಾದ್ಯಂತ ಲಭ್ಯವಿದೆ ಎಂಬ ಅಂಶವೇ ಈ ಜನಪ್ರಿಯ ದೋಸೆಗೆ ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಪಡೆಯುವ ದಾರಿಯಲ್ಲಿ ಮುಳ್ಳಾಗಿದೆ. ʼದಾವಣಗೆರೆ ಬೆಣ್ಣೆ ದೋಸೆ ಯಾವುದೇ ಒಂದು ಸೀಮಿತ ಪ್ರದೇಶಕ್ಕೆ ನಿರ್ದಿಷ್ಟವಾಗಿಲ್ಲದ ಕಾರಣ GI ಟ್ಯಾಗ್‌ಗೆ ಅರ್ಹತೆ ಪಡೆಯುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ದಾವಣಗೆರೆಯ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ (davanagere MP Prabha Mallikarjun) ಅವರು ಸದನದಲ್ಲಿ ಕೋರಿದ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಈ ವಿಷಯ ತಿಳಿಸಿದೆ. ತಮ್ಮ ಜಿಲ್ಲೆಯ ಸುಪ್ರಸಿದ್ಧವಾದ ದೋಸೆಗೆ GI ಟ್ಯಾಗ್ ಒದಗಿಸಿಕೊಡುವ ಕುರಿತು ಪ್ರಭಾ ಪ್ರಶ್ನಿಸಿದ್ದರು.

“ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ. ಜಿಐ ಟ್ಯಾಗ್‌ ಪಡೆಯಲು ನಿರ್ದಿಷ್ಟ ಪ್ರದೇಶವು ವಿಶಿಷ್ಟತೆಯ ಅಂಶವಾಗಿ ಅಪೇಕ್ಷಿತವಾಗಿದೆ. ಇದು ಹಲವಾರು ಸ್ಥಳಗಳಲ್ಲಿ ಉತ್ಪಾದನೆಯಾಗುತ್ತಿರುವ ಕಾರಣ ನಿರ್ದಿಷ್ಟ ಪ್ರದೇಶಕ್ಕೆ ಹೆಚ್ಚು ವಿಶಿಷ್ಟವಾಗಿಲ್ಲ” ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಹಕಾರ ಸಚಿವ ಜಿತಿನ್ ಪ್ರಸಾದ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಉತ್ತರದ ನಂತರ, ಜಿಐ ಟ್ಯಾಗ್‌ಗೆ ನೋಂದಣಿಗೆ ಕನಿಷ್ಠ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾಧಿಕಾರಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಪ್ರಭಾ ಅವರು ತಿಳಿಸಿದ್ದಾರೆ.

“ರಸಗುಲ್ಲಾ, ಲೋನಾವಳ ಚಿಕ್ಕಿ ಮತ್ತು ಇತರ ಉತ್ಪನ್ನಗಳಿಗೆ ಈಗಾಗಲೇ ಜಿಐ ಟ್ಯಾಗ್ ಇದೆ. ಇದನ್ನು ಭಾರತದಾದ್ಯಂತ ವ್ಯಾಪಕವಾಗಿ ಉತ್ಪಾದಿಸಲಾಗುತ್ತದೆ ಮತ್ತು ಮಾರಾಟ ಮಾಡಲಾಗುತ್ತದೆ. ಅದೇ ರೀತಿ ದಾವಣಗೆರೆ ಬೆಣ್ಣೆ ದೋಸೆ ಕೂಡ ರಾಜ್ಯಾದ್ಯಂತ ಮಾರಾಟವಾಗುತ್ತಿದೆ. ಈ ಕಾರಣಕ್ಕಾಗಿ ಈ ವಿಶಿಷ್ಟ ಉತ್ಪನ್ನಕ್ಕಾಗಿ ಜಿಐ ಟ್ಯಾಗ್ ಅನ್ನು ಪಡೆದುಕೊಳ್ಳುವುದು ತಪ್ಪಬಾರದು” ಎಂದು ಪ್ರಭಾ ಹೇಳಿದ್ದಾರೆ.

“ದಾವಣಗೆರೆಯ ಯಾವುದೇ ವ್ಯಕ್ತಿ ದೇಶದ ಯಾವುದೇ ಸ್ಥಳಕ್ಕೆ ಹೋದರೆ ಅಲ್ಲಿ ಆತನನ್ನು ಮೊದಲು ಬೆಣ್ಣೆ ದೋಸೆಯ ಬಗ್ಗೆ ಕೇಳಲಾಗುತ್ತದೆ. ಈ ಉತ್ಪನ್ನಕ್ಕೆ ಅಂತಹ ಕ್ರೇಜ್ ಇದೆ. ನಾನು ಸಂಸತ್ತಿಗೆ ಹೋದ ಮೊದಲ ದಿನ, ದೇಶದ ವಿವಿಧ ಭಾಗಗಳಿಂದ ಬಂದ ನನ್ನ ಎಲ್ಲಾ ಸಹೋದ್ಯೋಗಿಗಳು ದಾವಣಗೆರೆ ಬೆಣ್ಣೆ ದೋಸೆಯ ಬಗ್ಗೆ ನನ್ನನ್ನು ಕೇಳಿದರು. ಆಗ, ಜಿಐ ಟ್ಯಾಗ್ ಪಡೆಯುವುದು ಎಷ್ಟು ಮುಖ್ಯ ಎಂದು ನಾನು ಅರಿತುಕೊಂಡೆ” ಎಂದು ಅವರು ಹೇಳಿದರು.

ಬೆಣ್ಣೆ ದೋಸೆಯ ಮೂಲವನ್ನು ನಾಲ್ಕು ಸಹೋದರರಲ್ಲಿ ಕಾಣಲಾಗುತ್ತದೆ. ಕೋಠಿನ್ ಶಾಂತಪ್ಪ, ಮಹದೇವಪ್ಪ, ಶಂಕರಪ್ಪ ಮತ್ತು ಬಸವಂತಪ್ಪ. ಇವರು ಬೆಳಗಾವಿ ಜಿಲ್ಲೆಯ ರಾಮದುರ್ಗದ ಬೀಡ್ಕಿ ಗ್ರಾಮದಿಂದ 1928ರಲ್ಲಿ ದಾವಣಗೆರೆಗೆ ಉದ್ಯೋಗದ ಹುಡುಕಾಟದಲ್ಲಿ ವಲಸೆ ಬಂದವರು. ತಮ್ಮ ತಾಯಿ ಚೆನ್ನಮ್ಮ ಅವರಿಂದ ದೋಸೆ ತಯಾರಿಕೆಯ ಕಲೆಯನ್ನು ಕಲಿತರು. ಇವರ ಅಮ್ಮ ತಮ್ಮ ಮಕ್ಕಳಿಗೆ ರುಚಿಕರವಾದ ರಾಗಿ ದೋಸೆಯನ್ನು ತಯಾರಿಸುತ್ತಿದ್ದರಂತೆ. ಈ ಸೋದರರಿಂದ ಮಸಾಲೆ ಸಹಿತದ ಬೆಣ್ಣೆ ದೋಸೆ ಜನಪ್ರಿಯವಾಯಿತು. ಇವರ ಮೊದಲ ದೋಸೆ ಆರು ಪೈಸೆಗೆ ಮಾರಾಟವಾಯಿತು. ಈಗ ಈ ಅಂಗಡಿಗಳನ್ನು ನಡೆಸುತ್ತಿರುವ ಅವರ ಮಕ್ಕಳು, ಮೊಮ್ಮಕ್ಕಳು ತಯಾರಿಸುತ್ತಿರುವ ದೋಸೆಗೆ 55ರಿಂದ 65 ರೂ. ಬೆಲೆಯಿದೆ.

ಕರ್ನಾಟಕದಲ್ಲಿ ನಂಜನಗೂಡು ರಸಬಾಳೆ, ಚನ್ನಪಟ್ಟಣದ ಮರದ ಗೊಂಬೆಗಳು, ಮೈಸೂರು ಮಲ್ಲಿಗೆ, ಮೈಸೂರು ರೇಷ್ಮೆ, ಬೀದರ್‌ನ ಬಿದರಿ ಕಲೆ, ಇಳಕಲ್‌ ಹಾಗೂ ಮೊಳಕಾಲ್ಮುರು ಸೀರೆಗಳು, ಕೊಡಗಿನ ಕಿತ್ತಳೆ, ಅಪ್ಪೆಮಿಡಿ ಮಾವು, ಧಾರವಾಡ ಪೇಡಾ, ಬಾಬಾಬುಡನ್‌ಗಿರಿಯ ಅರೇಬಿಕಾ ಕಾಫಿ ಮುಂತಾದವು ಜಿಐ ಟ್ಯಾಗ್‌ ಪಡೆದಿವೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading
Advertisement
Narendra Modi
ಪ್ರಮುಖ ಸುದ್ದಿ6 mins ago

Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ

Californium Stone
ಕ್ರೈಂ20 mins ago

Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

Vinesh Phogat
ಕ್ರೀಡೆ35 mins ago

Vinesh Phogat: ಇಂದು ರಾತ್ರಿ 9.30ಕ್ಕೆ ವಿನೇಶ್ ಫೋಗಟ್‌ ಬೆಳ್ಳಿ​ ಪದಕದ ಭವಿಷ್ಯ ನಿರ್ಧಾರ

Varamahalaxmi Decoration
ಧಾರ್ಮಿಕ35 mins ago

Varamahalaxmi Decoration: ವರಮಹಾಲಕ್ಷ್ಮಿಯ ಸಿಂಗಾರಕ್ಕೂ ಬಂತು ಮಿನಿ ವಸ್ತ್ರಾಭರಣಗಳು!

Trainee Doctor
ದೇಶ38 mins ago

Trainee Doctor: ಆಸ್ಪತ್ರೆಯಲ್ಲಿಯೇ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ, ಬಳಿಕ ಹತ್ಯೆ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ

Motivational Tips
ಲೈಫ್‌ಸ್ಟೈಲ್47 mins ago

Motivational Tips: ನಿಮ್ಮದೇ ಈ 10 ಅಭ್ಯಾಸಗಳು ಜೀವನದ ಯಶಸ್ಸಿಗೆ ಅಡ್ಡಗೋಡೆಯಾಗಬಹುದು!

CDPO suspended
ಕರ್ನಾಟಕ51 mins ago

CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

Viral Video
Latest54 mins ago

Viral Video: ಟಿಕೆಟ್ ಇಲ್ಲದೆ ಎಸಿ ಬೋಗಿಯಲ್ಲಿ ಪ್ರಯಾಣಿಸಿದ ಪೊಲೀಸರು; ಟಿಕೆಟ್‌ ಪರಿಶೀಲಕರಿಗೇ ಧಮಕಿ!

KEA
ಬೆಂಗಳೂರು59 mins ago

KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

New Railway Projects
ದೇಶ1 hour ago

New Railway Projects: 24,657 ಕೋಟಿ ರೂ. ಮೊತ್ತದ 8 ರೈಲು ಯೋಜನೆಗಳಿಗೆ ಅನುಮೋದನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌