Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ - Vistara News

ಉಡುಪಿ

Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Heart Attack : ಮಲಗಿದ್ದಲ್ಲೇ ವ್ಯಕ್ತಿಯೊಬ್ಬರ ಹೃದಯದ ಬಡಿತ ನಿಂತು ಹೋಗಿದ್ದು, ನಾಲ್ಕೈದು ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಶವ (Dead Body Found) ಪತ್ತೆಯಾಗಿದೆ. ಬಾಗಲಕೋಟೆಯಲ್ಲಿ ಬಸ್‌ ಹತ್ತುವಾಗಲೇ ಪ್ರಯಾಣಿಕನಿಗೆ ಹೃದಯಾಘಾತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Heart attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಉಡುಪಿಯ ಕುಂದಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಮನೆಯೊಳಗೆ ಶವ (Dead Body Found) ಪತ್ತೆಯಾಗಿದೆ. ಸಂತೋಷ್‌ ಆಚಾರ್ಯ(45) ಮೃತ ದುರ್ದೈವಿ. ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಅವರು ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನಗೆ ಹೋಗಿ ಬರುತ್ತಿದ್ದರು.

ಅಣ್ಣ ಮನೆಗೆ ಬರಲಿಲ್ಲವೆಂದು ಸಹೋದರ ಸುರೇಶ್ ಆಚಾರ್ಯರವರು ಫೋನ್ ಮಾಡಿದ್ದರು. ಸಂತೋಷ್‌ ಅವರ ಫೋನ್ ಸ್ವಿಚ್ ಆಫ್ ಆದ ಕಾರಣಕ್ಕೆ ಮನೆಗೆ ಸ್ನೇಹಿತರೊಬ್ಬರನ್ನು ಕಳುಹಿಸಿ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಚಾಪೆಯ ಮೇಲೆ ಮಲಗಿದ್ದ ಸ್ಥಿತಿಯಲ್ಲೇ ಸಂತೋಷ್‌ ಮೃತಪಟ್ಟಿದ್ದು, ಕೊಳೆತಿರುವ ಶವ ಪತ್ತೆಯಾಗಿದೆ.

ಕಳೆದ ಮಂಗಳವಾರ ಬೆಳಗ್ಗೆ ಸಂತೋಷ್‌ ಅವರು ತಮ್ಮ ಸ್ನೇಹಿತನಿಗೆ ಗುಡ್ ಮಾರ್ನಿಂಗ್ ಸಂದೇಶ ಮಾಡಿದ್ದಾರೆ. ಬಳಿಕ ಮಂಗಳವಾರ ರಾತ್ರಿ ಮಲಗಿದ್ದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಹೆಡ್‌ಫೋನ್‌ ಹಾಕಿಕೊಂಡು ಹಾಡು ಕೇಳುತ್ತಾ ಮಲಗಿರುವ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಮೃತರು ತಾಯಿ, ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿಗೆ ಕಾರಣವೇನು ಎಂಬುದು ತಿಳಿಯಲಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

ಬಸ್‌ ಹತ್ತುವಾಗ ಎದೆನೋವು, ಕುಸಿದು ಬಿದ್ದು ವ್ಯಕ್ತಿ ಸಾವು

ಬಸ್ ಹತ್ತುವ ವೇಳೆ ವ್ಯಕ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಸ್ ನಿಲ್ದಾಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬಾಗಲಕೋಟೆಯ ಇಳಕಲ್ಲ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಗೌಡಪ್ಪ ಸಂಗಪ್ಪ ಹೊಕ್ರಾಣಿ (61) ಮೃತ ದುರ್ದೈವಿ.

ಗೌಡಪ್ಪ ಮೂಲತಃ ವಿಜಯಪುರ ಜಿಲ್ಲೆ ಮುದ್ದೆಬಿಹಾಳ ನಿವಾಸಿಯಾಗಿದ್ದಾರೆ. ಸಂಡೂರಿನಿಂದ ಮರಳಿ ಊರಿಗೆ ಹೋಗುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಇಳಕಲ್ಲ ಪಿಎಸ್ಐ ಎಸ್.ಆರ್.ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Drowned in water : ಬಾಲಕನ ಜೀವಕ್ಕೆ ಉರುಳಾದ ಪಂಪ್‌ ಸೆಟ್‌ ಕೇಬಲ್‌; ಕಾಲು ಜಾರಿ ನೀರುಪಾಲಾದ ವೃದ್ಧ

Drowned in water : ರಾಯಚೂರಿನಲ್ಲಿ ಈಜಲು ನದಿಗೆ ಇಳಿದಾಗ ಪಂಪ ಸೆಟ್ ಕೇಬಲ್ ಕಾಲಿಗೆ ಸಿಲುಕಿ ಹೊರಬಾರಲು ಆಗದೆ ಬಾಲಕನೊರ್ವ ಮೃತಪಟ್ಟಿದ್ದಾನೆ. ಇತ್ತ ಉಡುಪಿಯಲ್ಲಿ ಹೊಳೆಗೆ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊರ್ವ ಅಸುನೀಗಿದ್ದಾರೆ.

VISTARANEWS.COM


on

By

Drowned in water
Koo

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋದ (Drowned in water) ಬಾಲಕ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿರೇಶ್ (13) ಮೃತ ದುರ್ದೈವಿ.

ವಿರೇಶ್‌ ಜಾತ್ರೆ ನಿಮಿತ್ತ ಚೀಕಲಪರ್ವಿ ಗ್ರಾಮಕ್ಕೆ ಬಂದಿದ್ದ. ಈ ವೇಳೆ ತನ್ನಿಬ್ಬರೂ ಸ್ನೇಹಿತರೊಂದಿಗೆ ನದಿಗೆ ಈಜಲು ತೆರಳಿದ್ದ. ನದಿಗೆ ಇಳಿದಿರುವಾಗ ಪಂಪ ಸೆಟ್ ಕೇಬಲ್ ವಿರೇಶ್‌ನ ಕಾಲಿಗೆ ಸಿಲುಕಿದೆ. ಇದರಿಂದ ನೀರಿನಿಂದ ಹೊರಬಾರಲು ಆಗದೆ ಉಸಿರುಗಟ್ಟಿ ಮೃತಪಟ್ಟಿದ್ದಾನೆ.

ಸ್ಥಳೀಯರ ಸಹಾಯದಿಂದ ಮೃತ ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

‌ಕಾಲು ಜಾರಿ ನೀರಿಗೆ ಬಿದ್ದು ವೃದ್ಧ ಸಾವು

ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಮೃತಪಟ್ಟವರು.

ನಿನ್ನೆ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋದವರು ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು. ಶನಿವಾರ ಬೆಳಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಶವ ತೇಲುತ್ತಿರುವುದು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟ ಪೊಲೀಸರು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ದೋಣಿಯಲ್ಲಿ ಸಾಗಿ ಮೃತದೇಹವನ್ನು ಹೊರತೆಗೆದಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ರಾಯಚೂರಿನಲ್ಲಿ ಚಾವಣಿ ಕುಸಿತ ವಿದ್ಯಾರ್ಥಿಗಳಿಗೆ ಗಾಯ

ವಸತಿ ನಿಲಯದಲ್ಲಿ ಕೊಠಡಿ ಚಾವಣಿ ಪ್ಲಾಸ್ಟಿಂಗ್ ಲೇಯರ್ ಕುಸಿತದಿಂದಾಗಿ ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರದಲ್ಲಿ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿಗಳಾದ ಗುರುವೇಶ್, ಕಿರಣ್, ಕಾರ್ತಿಕ್‌ಗೆ ಗಾಯಗೊಂಡಿದ್ದಾರೆ. ಗ್ರಾಮದಲ್ಲಿನ ಬಿಸಿಎಂ ಪ್ರಿಮೆಟ್ರಿಕ್ ಬಾಲಕರ ವಸತಿನಿಲಯದಲ್ಲಿ ಘಟನೆ ನಡೆದಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ.

ಬಸ್‌ಗೆ ಲಾರಿ ಡಿಕ್ಕಿ, ವಿದ್ಯಾರ್ಥಿ ಗಂಭೀರ

ಉಡುಪಿ: ಉಡುಪಿಯ ಕುಂದಾಪುರದಲ್ಲಿ ಬಸ್‌ಗೆ ಲಾರಿಯೊಂದು (Road Accident) ಡಿಕ್ಕಿ ಹೊಡೆದಿದೆ. ಓರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹಲವರಿಗೆ ಸಣ್ಣ-ಪುಣ್ಣ ಗಾಯಗೊಂಡಿದ್ದಾರೆ. ಉಡುಪಿಯ ತಲ್ಲೂರು ಪ್ರವಾಸಿ ಹೋಟೆಲ್‌ ಎದುರು ರಾಷ್ಟ್ರೀಯ ಹೆದ್ದಾರಿ 66ಯಲ್ಲಿ ಅಪಘಾತ ಸಂಭವಿಸಿದೆ.

ಖಾಸಗಿ ಬಸ್‌ಗೆ ಲಾರಿಯೊಂದು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಬಸ್‌ನಲ್ಲಿರುವ ಹಲವು ಮಂದಿಗೆ ಗಾಯವಾಗಿದೆ. ಬೈಂದೂರ್‌ ನಿಂದ ಕುಂದಾಪುರದ ಕಡೆಗೆ ಬರುತ್ತಿದ್ದಾಗ ಅಪಘಾತ ನಡೆದಿದೆ. ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಬಸ್‌ ಚಾಲಕ ನಿಲ್ಲಿಸಲು ಹೋದಾಗ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಸ್ಕೂಲ್ ವಿದ್ಯಾರ್ಥಿ ಪ್ರಸಾದ್ ಗಂಭೀರ ಗಾಯಗೊಂಡಿದ್ದಾನೆ. ಅಪಘಾತದಲ್ಲಿ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಈ ದಿನ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಹಾಗೂ ಒಳನಾಡಿನಲ್ಲಿ ವಾತಾವರಣ ಹೇಗಿರಲಿದೆ? ಇಲ್ಲಿದೆ ಮಾಹಿತಿ

VISTARANEWS.COM


on

By

karnataka weather Forecast
Koo

ಬೆಂಗಳೂರು: ಆಗಸ್ಟ್‌ 10ರಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೈಸೂರು-ಮಂಡ್ಯದಲ್ಲೂ ಭಾರಿ ಮಳೆ

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಸುರಿಯಲಿದೆ.

ಇದನ್ನೂ ಓದಿ: Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವಾರಾಂತ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಇತ್ತ ಮಳೆ ಇಲ್ಲದೆ ಕಂಗಲಾಗಿದ್ದ ವಿಜಯಪುರದಲ್ಲಿ ಮಳೆಯಾದರೆ, ಕಲಬುರಗಿಯಲ್ಲಿ ನೀರು ನುಗ್ಗಿ ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Rain News : ರಾಜ್ಯಾದ್ಯಂತ ಮಳೆ ಅಬ್ಬರ ತಗ್ಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನಲ್ಲಿ ಕೆಲವೊಮ್ಮೆ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

ಮಾನ್ಸೂನ್‌‌‌ನಲ್ಲಿ ಟ್ರೆಂಡಿಯಾದ ಫ್ರೆಂಡ್‌‌‌ಶಿಪ್‌ ಡೇ ಫ್ಯಾಷನ್‌ ಥೀಮ್‌

ಮಾನ್ಸೂನ್‌ನಲ್ಲಿ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ (Friendshipday Fashion) ಥೀಮ್‌ ಟ್ರೆಂಡಿಯಾಗಿದೆ. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಅಗಸ್ಟ್ ನ ಮೊದಲ ಭಾನುವಾರ ಸೆಲೆಬ್ರೇಟ್‌ ಫ್ರೆಂಡ್‌ ಶಿಪ್‌ ಡೇ ಫ್ಯಾಷನ್‌ನ ಕಾನ್ಸೆಪ್ಟ್ ಒಂದೇ ಎಂದೆನಿಸಿದರೂ ಥೀಮ್‌ ಹಾಗೂ ಸ್ಟೈಲಿಂಗ್‌ ಪ್ರತಿ ವರ್ಷ ಬದಲಾಗುತ್ತದೆ. ಫ್ರೆಂಡ್ಸ್ ಗ್ರೂಪ್‌ನಲ್ಲಿ ಒಮ್ಮೆ ಕಾಣಿಸಿಕೊಂಡ ಫ್ಯಾಷನ್‌ ಮುಂಬರುವ ವರ್ಷ ಕಾಣಿಸುವುದಿಲ್ಲ! ಎನ್ನುತ್ತಾರೆ ಫ್ಯಾಷನಿಸ್ಟಾಗಳು. ಹಾಗಾದಲ್ಲಿ ಈ ಬಾರಿಯ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ ಏನು? ಹೇಗೆಲ್ಲಾ ಕಾಣಿಸಿಕೊಳ್ಳಬಹುದು? ಮಾನ್ಸೂನ್‌ ಫ್ರೆಂಡ್‌ಶಿಪ್‌ ಡೇ ಲುಕ್‌ ಹೇಗೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಒಂದಿಷ್ಟು ಸಲಹೆ ನೀಡಿದ್ದಾರೆ.

Friendshipday Fashion

ಫ್ರೆಂಡ್‌ಶಿಪ್‌ ಡೇಗೂ ಬಂತು ಫ್ಯಾಷನ್‌ ಥೀಮ್‌

ಫ್ರೆಂಡ್‌ಶಿಪ್‌ ಡೇ ಆಚರಿಸುವ ಸ್ನೇಹಿತರು ಹಾಗೂ ಅವರ ಗ್ರೂಪ್‌ಗಳು, ತಮ್ಮದೇ ಆದ ಥೀಮ್‌ ಫ್ಯಾಷನ್‌ ಫಾಲೋ ಮಾಡಲಾರಂಭಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ, ಮಾಲ್‌-ಶಾಪ್‌ಗಳಲ್ಲಿ ಬಲ್ಕ್‌ ಆರ್ಡರ್ನಲ್ಲಿ ಫ್ಯಾಷನ್‌ವೇರ್‌ಗಳೂ ದೊರೆಯುತ್ತಿವೆ. ಕಾರ್ಪೋರೇಟ್‌ ಕಚೇರಿಯ ಉದ್ಯೋಗಿಗಳಾಗಿರಬಹುದು ಅಥವಾ ಕಾಲೇಜು ಹುಡುಗ-ಹುಡುಗಿಯರಾಗಿರಬಹುದು. ಅವರವರ ಗ್ರೂಪ್‌ನ ಅಭಿರುಚಿಗೆ ತಕ್ಕಂತೆ ಫ್ಯಾಷನ್‌ ಥೀಮ್‌ಗಳನ್ನು ರೂಪಿಸಿಕೊಂಡು ಫ್ಯಾಷನ್‌ವೇರ್‌ಗಳನ್ನು ಧರಿಸುವುದು ಟ್ರೆಂಡಿಯಾಗಿದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಇನ್ನು, ಥೀಮ್‌ ಎಂದಾಕ್ಷಣಾ ಗುಂಪಿನ ಎಲ್ಲರ ಔಟ್‌ಫಿಟ್‌ಗಳು ಒಂದೇ ಆಗಿರಬೇಕೆಂದಿಲ್ಲ! ಒಟ್ಟಿನಲ್ಲಿ ಅವರೆಲ್ಲರೂ ಧರಿಸುವ ಯಾವುದೇ ಉಡುಪು ಅಥವಾ ಆಕ್ಸೆಸರೀಸ್‌ ಇಲ್ಲವೇ ಸ್ಟೈಲಿಂಗ್‌ ಒಂದೇ ಬಗೆಯದ್ದಾಗಿರಬಹುದು. ಅದು ಔಟಿಂಗ್‌ನದ್ದಾಗಿರಬಹುದು, ಪಾರ್ಟಿವೇರ್‌ನದ್ದಾಗಿರಬಹುದು ಅಥವಾ ಕೆಫೆ ಅಥವಾ ರೆಸ್ಟೋರೆಂಟ್‌ನಲ್ಲಿ ಕಾಲ ಕಳೆಯುವಂತದ್ದಾಗಿರಬಹುದು. ಆಯಾ ಗ್ರೂಪ್‌ನ ಐಡೆಂಟಿಟಿಗೆ ತಕ್ಕಂತೆ ಥೀಮ್‌ ಫ್ಯಾಷನ್‌ ಬದಲಿಸಿಕೊಳ್ಳಬಹುದು ಎನ್ನುತ್ತಾರೆ ಡಿಸೈನರ್‌ ರಿಯಾಜ್‌ ಹಾಗೂ ರಕ್ಷ್.

Friendshipday Fashion

ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಸ್ಟೈಲಿಂಗ್‌

ಸ್ನೇಹಿತರ ಗ್ರೂಪ್‌ಗಳು ಕೇವಲ ಜೆನ್‌ ಜಿ, ಮಿಲೆನಿಯಲ್‌ ಜನರಿಂದ ಕೂಡಿರಬೇಕೆಂದಿಲ್ಲ, ಗ್ರೂಪ್‌ಗಳು ವಯಸ್ಸಾಗಿರುವ ಹಿರಿಯರದ್ದು ಆಗಿರಬಹುದು ಅಥವಾ ಸಮಾನ ಮನಸ್ಕರ ವಿಭಿನ್ನ ಗ್ರೂಪ್‌ಗಳಾಗಬಹುದು. ಆಯಾ ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಡ್ರೆಸ್ಸಿಂಗ್‌ ಹಾಗೂ ಸ್ಟೈಲಿಂಗ್‌ ಬದಲಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

ಫ್ರೆಂಡ್‌ಶಿಪ್‌ ಡೇ ಸ್ಟೈಲಿಂಗ್‌ಗೆ ಸಿಂಪಲ್‌ ಟಿಪ್ಸ್

  • ಫ್ರೆಂಡ್ಸ್ ಗ್ರೂಪ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಎಥ್ನಿಕ್‌, ವೆಸ್ಟರ್ನ್‌, ಸೆಮಿ ಎಥ್ನಿಕ್‌, ಬಿಂದಾಸ್‌ ಯಾವುದಾದರೂ ಸರಿಯೇ ಕಂಫರ್ಟಬಲ್‌ ಸ್ಟೈಲಿಂಗ್‌ ಚೂಸ್‌ ಮಾಡಿ.
  • ಔಟಿಂಗ್‌ ಆದಲ್ಲಿ ಮಾನ್ಸೂನ್‌ ಸೀಸನ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಆದಷ್ಟೂ ಯಂಗ್‌ ಲುಕ್‌ ನೀಡುವ ಸ್ಟೈಲಿಂಗ್‌ ಅಳವಡಿಸಿಕೊಳ್ಳಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ಪ್ರಮುಖ ಸುದ್ದಿ8 mins ago

Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ

Californium Stone
ಕ್ರೈಂ22 mins ago

Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

Vinesh Phogat
ಕ್ರೀಡೆ37 mins ago

Vinesh Phogat: ಇಂದು ರಾತ್ರಿ 9.30ಕ್ಕೆ ವಿನೇಶ್ ಫೋಗಟ್‌ ಬೆಳ್ಳಿ​ ಪದಕದ ಭವಿಷ್ಯ ನಿರ್ಧಾರ

Varamahalaxmi Decoration
ಧಾರ್ಮಿಕ37 mins ago

Varamahalaxmi Decoration: ವರಮಹಾಲಕ್ಷ್ಮಿಯ ಸಿಂಗಾರಕ್ಕೂ ಬಂತು ಮಿನಿ ವಸ್ತ್ರಾಭರಣಗಳು!

Trainee Doctor
ದೇಶ40 mins ago

Trainee Doctor: ಆಸ್ಪತ್ರೆಯಲ್ಲಿಯೇ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ, ಬಳಿಕ ಹತ್ಯೆ; ಮರಣೋತ್ತರ ಪರೀಕ್ಷೆ ವರದಿಯಲ್ಲಿ ಸ್ಫೋಟಕ ಮಾಹಿತಿ

Motivational Tips
ಲೈಫ್‌ಸ್ಟೈಲ್48 mins ago

Motivational Tips: ನಿಮ್ಮದೇ ಈ 10 ಅಭ್ಯಾಸಗಳು ಜೀವನದ ಯಶಸ್ಸಿಗೆ ಅಡ್ಡಗೋಡೆಯಾಗಬಹುದು!

CDPO suspended
ಕರ್ನಾಟಕ53 mins ago

CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

Viral Video
Latest56 mins ago

Viral Video: ಟಿಕೆಟ್ ಇಲ್ಲದೆ ಎಸಿ ಬೋಗಿಯಲ್ಲಿ ಪ್ರಯಾಣಿಸಿದ ಪೊಲೀಸರು; ಟಿಕೆಟ್‌ ಪರಿಶೀಲಕರಿಗೇ ಧಮಕಿ!

KEA
ಬೆಂಗಳೂರು1 hour ago

KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

New Railway Projects
ದೇಶ1 hour ago

New Railway Projects: 24,657 ಕೋಟಿ ರೂ. ಮೊತ್ತದ 8 ರೈಲು ಯೋಜನೆಗಳಿಗೆ ಅನುಮೋದನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌