Viral News: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ! - Vistara News

Latest

Viral News: ದಂತ ಕಸಿ ಮಾಡಲು ಮೂಳೆಗಳಿಗಾಗಿ ಸಾವಿರಾರು ಶವಗಳನ್ನು ಕದ್ದ ಚೀನಾ ಕಂಪನಿ!

Viral News: ಚೀನಾದ ಕಂಪನಿಯೊಂದು ದಂತ ಕಸಿ ಮಾಡಲು ಸ್ಮಶಾನಗಳು ಮತ್ತು ವೈದ್ಯಕೀಯ ಪ್ರಯೋಗಾಲಯಗಳಿಂದ 4,000ಕ್ಕೂ ಹೆಚ್ಚು ಶವಗಳನ್ನು ಕದ್ದಿದೆ ಎಂದು ಆರೋಪಿಸಲಾಗಿದೆ. ಅಲೋಜೆನಿಕ್ ಮೂಳೆ ಕಸಿಗಳನ್ನು ಉತ್ಪಾದಿಸಲು ಮೂಳೆಗಳನ್ನು ಬಳಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರ ಪ್ರಾಂತ್ಯದ ಶಾಂಕ್ಸಿಯ ರಾಜಧಾನಿ ತೈಯುವಾನ್ನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಬೀಜಿಂಗ್ ಬ್ರೇವ್ ವಕೀಲರ ಸಂಘದ ಅಧ್ಯಕ್ಷ ಯಿ ಶೆಂಗ್ಹುವಾ ಹೇಳಿದ್ದಾರೆ.

VISTARANEWS.COM


on

Viral News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo


ಚೀನಾದ ಕಂಪನಿಯೊಂದು ದಂತ ಕಸಿ ಮಾಡಲು ಸ್ಮಶಾನಗಳು ಮತ್ತು ವೈದ್ಯಕೀಯ ಪ್ರಯೋಗಾಲಯಗಳಿಂದ 4,000 ಕ್ಕೂ ಹೆಚ್ಚು ಶವಗಳನ್ನು ಕದ್ದಿದೆ ಎಂದು ಆರೋಪಿಸಲಾಗಿದೆ. ಪ್ರಸಿದ್ಧ ಕ್ರಿಮಿನಲ್ ವಕೀಲರು ಗುರುವಾರ ಈ ಪ್ರಕರಣಕ್ಕೆ ಸಂಬಂಧಪಟ್ಟ ವಿವರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ನಂತರ ಈ ವಿಚಾರ ಬೆಳಕಿಗೆ ಬಂದಿದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಾಪಟ್ಟೆ ವೈರಲ್‌ (Viral News) ಆಗಿದೆ.

ಬೀಜಿಂಗ್ ಬ್ರೇವ್ ವಕೀಲರ ಸಂಘದ ಅಧ್ಯಕ್ಷ ಯಿ ಶೆಂಗ್ಹುವಾ, ಉತ್ತರ ಪ್ರಾಂತ್ಯದ ಶಾಂಕ್ಸಿಯ ರಾಜಧಾನಿ ತೈಯುವಾನ್‍ನ ಪೊಲೀಸರು ಅಲೋಜೆನಿಕ್ ಮೂಳೆ ಕಸಿಗಳನ್ನು ಉತ್ಪಾದಿಸಲು ಮೂಳೆಗಳನ್ನು ಬಳಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಶಾಂಕ್ಸಿ ಅರೋಯಿ ಬಯೋಮೆಟೀರಿಯಲ್ಸ್ ಎಂಬ ಕಂಪನಿಯು ಸಿಚುವಾನ್, ಗುವಾಂಗ್ಕ್ಸಿ ಮತ್ತು ಶಾಂಡೊಂಗ್ ಪ್ರಾಂತ್ಯಗಳಿಂದ ಶವಗಳು ಮತ್ತು ಶವದ ಕೈಕಾಲುಗಳನ್ನು ಅಕ್ರಮವಾಗಿ ಖರೀದಿಸಿ ಮೂಳೆ ಕಸಿಗಳನ್ನು ತಯಾರಿಸಲು ಬಳಸುತ್ತಿದೆ ಎಂದು ಶಂಕಿಸಲಾಗಿದೆ ಎಂದು ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ತಿಳಿಸಲಾಗಿದೆ.

ಇದರಿಂದ ಕಂಪನಿಯು 380 ಮಿಲಿಯನ್ ಯುವಾನ್ (ಯುಎಸ್ $ 53 ಮಿಲಿಯನ್) ಗಳಿಸಿದೆ. ಅದರಲ್ಲೂ ದಂತ ಕಸಿಗಾಗಿ ಮೂಳೆಗಳನ್ನು ಮಾರಾಟ ಮಾಡುವುದರಿಂದ ಹೆಚ್ಚು ಆದಾಯ ಗಳಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ರೋಗಿಗಳಲ್ಲಿ ಕಸಿಗಳಿಗೆ ಸಾಕಷ್ಟು ಮೂಳೆ ಸಾಂದ್ರತೆ ಇಲ್ಲದಿದ್ದಾಗ ಅಲೋಜೆನಿಕ್ ಕಸಿಗಳನ್ನು ಬಳಸಲಾಗುತ್ತದೆ, ಆದರೆ ಮೂಳೆಯನ್ನು ಸಾಮಾನ್ಯವಾಗಿ ಸೊಂಟದ ಬದಲಿಯಂತಹ ಶಸ್ತ್ರಚಿಕಿತ್ಸೆಗಳಿಗೆ ಒಳಗಾಗುವ ರೋಗಿಗಳಿಂದ ತೆಗೆದುಕೊಳ್ಳಲಾಗುತ್ತದೆ ಎನ್ನಲಾಗಿದೆ.

ಪೊಲೀಸರು 18 ಟನ್ ಮೂಳೆಗಳು ಮತ್ತು 34,000 ಕ್ಕೂ ಹೆಚ್ಚು ಈಗಾಗಲೇ ಸಿದ್ಧಪಡಿಸಿದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಯಿ ಪ್ರಕಟಿಸಿದ ದಾಖಲೆಗಳು ತಿಳಿಸಿವೆ. ಕಂಪನಿಯ ಜನರಲ್ ಮ್ಯಾನೇಜರ್ ಆಗಿದ್ದ ಸು ಎಂಬ ಶಂಕಿತನು ಯುನ್ನಾನ್, ಚಾಂಗ್ಕಿಂಗ್, ಗುಯಿಝೌ ಮತ್ತು ಸಿಚುವಾನ್ ನ ಸ್ಮಶಾನಗಳಿಂದ 4,000 ಕ್ಕೂ ಹೆಚ್ಚು ಮಾನವ ದೇಹಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅವರು ಹೇಳಿದರು. ಯುನ್ನಾನ್ ಪ್ರಾಂತ್ಯದ ಶುಯಿಫು, ಚಾಂಗ್ಕಿಂಗ್ ನ ಬನಾನ್ ಜಿಲ್ಲೆ, ಗುಯಿಝೌನ ಶಿಕಿಯಾನ್ ಕೌಂಟಿ ಮತ್ತು ಸಿಚುವಾನ್‍ನ ಡೇಯಿಂಗ್ ಕೌಂಟಿಯ ಚಿತಾಗಾರದ ಶವಗಳನ್ನು ತುಂಡು ತುಂಡಾಗಿ ಕತ್ತರಿಸಿ ಹೆಚ್ಚಿನ ಸಂಸ್ಕರಣೆಗಾಗಿ ಸು ಅವರ ಕಂಪನಿಗೆ ಸಾಗಿಸುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವೇಗವಾಗಿ ಬಂದು ಅಪ್ಪಳಿಸಿದ ಸ್ಕಾರ್ಪಿಯೋ; ಒಂದೇ ಕುಟುಂಬದ ಮೂವರು ಪಾರಾಗಿದ್ದೇ ಅಚ್ಚರಿ!

ಅಲ್ಲದೇ ತನಿಖೆಯ ಸಮಯದಲ್ಲಿ ಇನ್ನೂ75 ಮಂದಿ ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಚಿತಾಗಾರಗಳಲ್ಲಿನ ಕಾರ್ಮಿಕರು ಮೂಳೆಗಳನ್ನು ಸುಗೆ ಮಾರಾಟ ಮಾಡಲು ಶವಗಳನ್ನು ತುಂಡು ತುಂಡುಗಳಾಗಿ ಕತ್ತರಿಸಿದ್ದಾರೆ ಎಂದು ಶಂಕಿಸಲಾಗಿದೆ. ಶಾಂಡೊಂಗ್‌ನ ಕಿಂಗ್ಡಾವೊ ಯೂನಿವರ್ಸಿಟಿ ಆಸ್ಪತ್ರೆಯ ಲಿವರ್ ಸೆಂಟರ್ ಅಕ್ರಮವಾಗಿ ಶವಗಳನ್ನು ಕಂಪನಿಗೆ ಮಾರಾಟ ಮಾಡಿದೆ ಎಂಬ ಹೇಳಿಕೆಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಹಾಗೇ ವೈದ್ಯಕೀಯ ವಿಜ್ಞಾನಕ್ಕೆ ಉತ್ತಮ ಕೊಡುಗೆ ನೀಡಿದ ಲಿವರ್ ಸೆಂಟರ್ ನ ನಿರ್ದೇಶಕ ಲಿ ಬಾಕ್ಸಿಂಗ್ ಅವರು ಈ ಪ್ರಕರಣದಲ್ಲಿ ಕೈಜೋಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಚಾಮರಾಜನಗರ

CM Siddaramaiah: ನಮಗೆ ಮನೇಲಿ ತಂಗಳು ಇರ್ತಿತ್ತು, ಇಡ್ಲಿ-ದೋಸೆ ಇರ್ತಿಲಿಲ್ಲ ಎಂದ ಸಿಎಂ

CM Siddaramaiah: ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್‌ಗಳು. ನಾನೂ ರಾಚಯ್ಯನವರ ಪ್ರಾಡಕ್ಟು ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯ ಅವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದು ತಿಳಿಸಿದ್ದಾರೆ.

VISTARANEWS.COM


on

CM Siddaramaiah
Koo

ಚಾಮರಾಜನಗರ: ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು (CM Siddaramaiah) ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chamarajanagar News) ತಿಳಿಸಿದರು.

ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗಲ್ಲಿ ಆಲೂರು ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿರುವ ಮಾಜಿ ರಾಜ್ಯಪಾಲ ದಿ. ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು ಮಾತನಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು ಎಂದರು.

ರಾಮಕೃಷ್ಣ ಹೆಗಡೆ ಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದ ರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆ ಕರೆದು ಬೆಳೆಸುವ ಗುಣ ಇತ್ತು. ಹೆಗಡೆ ಮತ್ತು ರಾಚಯ್ಯ ಅವರು ನನ್ನನ್ನು ಕರೆದು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರು ಎಂದು ಇತಿಹಾಸ ಸ್ಮರಿಸಿಕೊಂಡರು.

ಇದನ್ನೂ ಓದಿ: Neeraj Chopra : ನೀರಜ್ ಚೋಪ್ರಾ ಭೇಟಿಯಾದ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ

ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆಯುರಿ ಎಂದು ತಮ್ಮ ಮೇಲೆ ಆರೋಪಿಸಿರುವವರಿಗೆ ಟೀಕಿಸಿದರು.

ನಾನೂ ರಾಚಯ್ಯನವರ ಪ್ರಾಡಕ್ಟು

ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್ ಗಳು. ನಾನೂ ರಾಚಯ್ಯನವರ ಪ್ರಾಡಕ್ಟು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯ ಅವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದು ಹೇಳಿದರು.

ರಾಚಯ್ಯ ಸ್ಮಾರಕದಲ್ಲಿ ಐಎಎಸ್‌-ಐಪಿಎಸ್‌ ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ನಮಗೆ ತಂಗಳು ಮಾತ್ರ ಇರ್ತಿತ್ತು…

ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆ ದಿನಗಳನ್ನು ಸ್ಮರಿಸಿದರು.

ರಾಯಚ್ಯನವರ ಸ್ಮಾರಕ‌ ಉದ್ಘಾಟನಾ ಭಾಷಣ ಶುರು ಮಾಡುವ ವೇಳೆಗೆ ಸಂಜೆ 4 ಗಂಟೆ ಆಗಿತ್ತು. ಊಟದ ಸಮಯ ತಡವಾದದ್ದನ್ನು ಪ್ರಸ್ತಾಪಿಸಿ ಕ್ಷಮೆ ಕೋರಿ ಭಾಷಣ ಆರಂಭಿಸಿದ ಮುಖ್ಯಮಂತ್ರಿಗಳು ಈ ಪ್ರಸಂಗ ನೆನಪಿಸಿಕೊಂಡರು.

ರಾಚಯ್ಯ ಅವರ ಮನೆಯಲ್ಲೂ ಇಡ್ಲಿ ದೋಸೆ ಇರ್ತಿಲಿಲ್ಲ ಅಂತ ಕಾಣ್ತದೆ. ಅವರೂ ನನ್ನಂಗೆ ತಂಗಳು ತಿಂದು ಗಟ್ಟಿಯಾದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.13ರಂದು ಕರೆಂಟ್‌ ಇರಲ್ಲ

ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಕಾನೂನು ಸಚಿವ ಎಚ್.ಕೆ. ಪಾಟೀಲ್, ರಾಚಪ್ಪ ಅವರ ಪತ್ನಿ ಗೌರಮ್ಮ, ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Continue Reading

Latest

Viral Video: ಟಿಕೆಟ್ ಇಲ್ಲದೆ ಎಸಿ ಬೋಗಿಯಲ್ಲಿ ಪ್ರಯಾಣಿಸಿದ ಪೊಲೀಸರು; ಟಿಕೆಟ್‌ ಪರಿಶೀಲಕರಿಗೇ ಧಮಕಿ!

Viral Video: ಇಬ್ಬರು ಪೊಲೀಸರು ಟಿಕೆಟ್ ಇಲ್ಲದೆ ರೈಲಿನ 2ನೇ ಎಸಿ ಬೋಗಿಯಲ್ಲಿ ಅಕ್ರಮವಾಗಿ ಪ್ರಯಾಣಿಸಿದ್ದಾರೆ. ಟಿಟಿಇಯವರು ಬಂದು ಪೊಲೀಸರನ್ನು ಪ್ರಶ್ನಿಸಿದ್ದಾಗ ಈ ವಿಚಾರ ಬೆಳಕಿಗೆ ಬಂದಿದೆ. ಅಲ್ಲಿ ವಾದವಿವಾದಗಳು ಶುರುವಾಗಿವೆ. ಆ ವೇಳೆ ಪೊಲೀಸರು ತಾವು ಅಧಿಕಾರಿಗಳೆಂಬ ದರ್ಪ ತೋರಿದ್ದಾರೆ. ಸಮವಸ್ತ್ರದಲ್ಲಿದ್ದ ಪೊಲೀಸರು ರೈಲ್ವೆ ನಿಯಮಗಳನ್ನು ಧಿಕ್ಕರಿಸಿ ಟಿಟಿಇಯೊಂದಿಗೆ ವಾದದಲ್ಲಿ ತೊಡಗಿ ಅಧಿಕಾರವನ್ನು ದುರಪಯೋಗಪಡಿಸಿಕೊಂಡಿದ್ದಾರೆ. ಈ ಕುರಿತ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral Video
Koo


ಸಾಮಾನ್ಯ ಜನರು ಕೆಲವೊಮ್ಮೆ ಟಿಕೆಟ್ ಇಲ್ಲದೆ ಬಸ್, ರೈಲಿನಲ್ಲಿ ಪ್ರಯಾಣಿಸುತ್ತಾರೆ. ಆದರೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಪೊಲೀಸ್ ಅಧಿಕಾರಿಗಳು ಇಂತಹ ಕೆಲಸ ಮಾಡಿದರೆ ಅದು ಅವರನ್ನು ಕೆಳಮಟ್ಟಕ್ಕೆ ಇಳಿಸುತ್ತದೆ. ಇದೀಗ ಪೊಲೀಸರು ಟಿಕೆಟ್ ಇಲ್ಲದೆ 2ನೇ ಎಸಿ ಬೋಗಿಯಲ್ಲಿ ಪ್ರಯಾಣ ಮಾಡಿ ತಮ್ಮ ಅಧಿಕಾರವನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಾರೆ ಎಂಬುದನ್ನು ತಿಳಿಸುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದ ಹರಿದಾಡುತ್ತಿದ್ದು, ಸಿಕ್ಕಾಪಟ್ಟೆ ವೈರಲ್ (Viral Video) ಆಗಿದೆ.

ಈ ವಿಡಿಯೊದಲ್ಲಿ ಇಬ್ಬರು ಪೊಲೀಸರು ಟಿಕೆಟ್ ಇಲ್ಲದೆ ರೈಲಿನ 2ನೇ ಎಸಿ ಬೋಗಿಯಲ್ಲಿ ಅಕ್ರಮವಾಗಿ ಪ್ರಯಾಣಿಸುತ್ತಿದ್ದಾರೆ. ಟಿಟಿಇಯವರು ಬಂದು ಪೊಲೀಸರನ್ನು ಪ್ರಶ್ನಿಸಿದ್ದಾಗ ಈ ವಿಚಾರ ಬೆಳಕಿಗೆ ಬಂದಿದೆ ಮತ್ತು ಅಲ್ಲಿ ವಾದವಿವಾದಗಳು ಶುರುವಾಗಿದೆ. ಆ ವೇಳೆ ಪೊಲೀಸರು ತಾವು ಅಧಿಕಾರಿಗಳೆಂಬ ದರ್ಪ ತೋರಿದ್ದಾರೆ. ಸಮವಸ್ತ್ರದಲ್ಲಿದ್ದ ಪೊಲೀಸರು ರೈಲ್ವೆ ನಿಯಮಗಳನ್ನು ಧಿಕ್ಕರಿಸಿ ಟಿಟಿಇಯೊಂದಿಗೆ ವಾದದಲ್ಲಿ ತೊಡಗಿ ಅಧಿಕಾರವನ್ನು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಈ ವಿಡಿಯೊದಿಂದ ತಿಳಿಯುತ್ತದೆ. ಇವರ ನಡುವಿನ ಘರ್ಷಣೆ ಹೆಚ್ಚಾಗಿ, ಅವರು ಟಿಟಿಇಗೆ ಬೆದರಿಕೆ ಹಾಕಿದ್ದಾರೆ. ಇದು ಕರ್ತವ್ಯದಲ್ಲಿದ್ದ ಪೊಲೀಸರ ಅಶಿಸ್ತಿತನ್ನು ಸೂಚಿಸುತ್ತದೆ.

ವರದಿ ಪ್ರಕಾರ, ಪೊಲೀಸರ ಬಳಿ ಟಿಕೆಟ್ ಇಲ್ಲ ಎಂದು ತಿಳಿದ ಪ್ರಯಾಣಿಕರೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಟಿಟಿಇ ಅವರ ಬಳಿ ಟಿಕೆಟ್ ತೋರಿಸಲು ಹೇಳಿದ್ದಾರೆ. ಪೊಲೀಸರ ಈ ದುರ್ನಡತೆಯು ಬೋಗಿಯಲ್ಲಿ ಕೋಲಾಹಲವನ್ನು ಹುಟ್ಟುಹಾಕಿತು. ಮತ್ತು ಕಾನೂನನ್ನು ನಿರ್ಲಕ್ಷಿಸುವ ಮತ್ತು ಇತರರನ್ನು ಗೌರವಿಸುವ ಬಗ್ಗೆ ಅಸಮಾಧಾನವನ್ನು ಉಂಟುಮಾಡಿದೆ ಎನ್ನಲಾಗಿದೆ.

ಈ ವಿಡಿಯೊವನ್ನು ‘ಘರ್ ಕೆ ಕಾಲೇಶ್’ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಇದು ವೈರಲ್ ಆಗಿ ಸಾಕಷ್ಟು ಟೀಕೆಗಳನ್ನು ಪಡೆದಿದೆ. ಇದು ಪೊಲೀಸರ ದರ್ಪವನ್ನು ತೋರಿಸುತ್ತದೆ. ಇದರಲ್ಲಿ ಸಮವಸ್ತ್ರದಲ್ಲಿರುವ ಪೊಲೀಸರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ವೈಯಕ್ತಿಕ ಅನುಕೂಲಕ್ಕಾಗಿ ನಿಯಮಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತದೆ.

ಇದನ್ನೂ ಓದಿ:ರೀಲ್ಸ್‌ಗಾಗಿ ಬೆಡ್‌ರೂಮ್‌ನಲ್ಲಿ ಅರೆನಗ್ನ ಗೆಳತಿ ಕೈಗೆ ಪಿಸ್ತೂಲ್ ಕೊಟ್ಟ ಪೊಲೀಸ್ ಅಧಿಕಾರಿ!

ಸಮವಸ್ತ್ರದಲ್ಲಿರಲಿ ಅಥವಾ ಇಲ್ಲದಿರಲಿ, ಯಾವುದೇ ವ್ಯಕ್ತಿಯು ಕಾನೂನಿಗಿಂತ ಮೇಲಲ್ಲ. ಭಾರತೀಯ ರೈಲ್ವೆಯು ಟಿಕೆಟ್ ಇಲ್ಲದೆ ಪ್ರಯಾಣಿಸುವುದರ ವಿರುದ್ಧ ಕಠಿಣ ಕಾನೂನು ಮತ್ತು ನಿಬಂಧನೆಗಳನ್ನು ಹೊಂದಿದೆ, ಇದು ಎಲ್ಲರಿಗೂ ಅನ್ವಯಿಸುತ್ತದೆ. ಒಬ್ಬರ ಸ್ಥಾನ ಅಥವಾ ಅಧಿಕಾರವನ್ನು ಲೆಕ್ಕಿಸದೆ ಪ್ರತಿಯೊಬ್ಬರೂ ಕಾನೂನು ಮಾನದಂಡಗಳನ್ನು ಕಾಪಾಡಿಕೊಳ್ಳಬೇಕು ಮತ್ತು ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕು ಎಂಬ ಅಂಶವನ್ನು ಇದು ಎತ್ತಿ ಹಿಡಿಯುತ್ತದೆ.

Continue Reading

Latest

Viral News: ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಕಂಡಕ್ಟರ್‌ ಮೇಲೆ ನಾಗರಹಾವನ್ನು ಎಸೆದ ಮಹಿಳೆ!

Viral News: ಬಸ್ ನಿಲ್ಲಿಸಲಿಲ್ಲ ಎಂದು ಕೋಪಗೊಂಡ ಮಹಿಳೆಯೊಬ್ಬಳು ಬಸ್ಸಿನ ಹಿಂಭಾಗಕ್ಕೆ ಬಿಯರ್ ಬಾಟಲಿಯನ್ನು ಎಸೆದು ಹಾನಿ ಮಾಡಿದ್ದಾಳೆ. ಆಗ ಬಸ್‌ ನಿಲ್ಲಿಸಿ ಅವಳನ್ನು ತರಾಟೆಗೆ ತೆಗೆದುಕೊಂಡ ಮಹಿಳಾ ಕಂಡಕ್ಟರ್ ಮೇಲೆ ಮಹಿಳೆ ತನ್ನ ಚೀಲದಲ್ಲಿದ್ದ ನಾಗರಹಾವನ್ನು ಎಸೆದಿದ್ದಾಳೆ. ಮೈಮೇಲೆ ಹಾವು ಬಿದ್ದಾಗ ಕಂಡಕ್ಟರ್‌ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಿಚಿತ್ರ ಘಟನೆಯ ಸುದ್ದಿ ಇಲ್ಲಿದೆ.

VISTARANEWS.COM


on

Viral News
Koo


ಹೈದರಾಬಾದ್: ಸಾಮಾನ್ಯವಾಗಿ ಗಂಡಸರು ಕುಡಿದು ರಸ್ತೆಯಲ್ಲಿ ಅವಾಂತರಗಳನ್ನು ಸೃಷ್ಟಿಸುವುದನ್ನು ನಾವು ನೋಡಿರುತ್ತೇವೆ. ಆದರೆ ಇಲ್ಲೊಬ್ಬ ಮಹಿಳೆ ಕುಡಿದು ಅದರ ಮತ್ತಿನಲ್ಲಿ ಬಸ್ ಕಂಡಕ್ಟರ್ ಜೊತೆ ರೌಡಿ ಹಾಗೇ ವರ್ತಿಸಿದ್ದಾಳೆ. ಕುಡಿದ ಮತ್ತಿನಲ್ಲಿದ್ದ ಮಹಿಳೆ ಬಸ್ ನಿಲ್ಲಿಸದಿದ್ದಕ್ಕೆ ಕೋಪಗೊಂಡು ಬಸ್ ಮೇಲೆ ಮದ್ಯದ ಬಾಟಲಿಯಿಂದ ಹಲ್ಲೆ ನಡೆಸಿದ್ದಲ್ಲದೇ ಬಸ್ಸಿನ ಮಹಿಳಾ ಕಂಡಕ್ಟರ್‌ನ ಮೇಲೆ ಹಾವನ್ನು ಎಸೆದಿದ್ದಾಳೆ. ಈ ಘಟನೆ ವಿದ್ಯಾನಗರದಲ್ಲಿ ಗುರುವಾರ ಸಂಜೆ ನಡೆದಿದ್ದು ಇದು ಎಲ್ಲೆಡೆ ವೈರಲ್‌ (Viral News)ಆಗಿದೆ.

ಟಿಜಿಎಸ್‍ಆರ್‌ಟಿಸಿ ಬಸ್ ವಿದ್ಯಾನಗರದ ಮೂಲಕ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ 50 ವರ್ಷ ವಯಸ್ಸಿನ ಬೇಗಂ ಎಂಬ ಮಹಿಳೆ ಬಸ್ ಅನ್ನು ನಿಲ್ಲಿಸಲು ಹೇಳಿದ್ದಾಳೆ. ಆದರೆ ಕಂಡಕ್ಟರ್ ಹಾಗೂ ಡ್ರೈವರ್ ಬಸ್ ನಿಲ್ಲಿಸಲಿಲ್ಲ. ಇದರಿಂದ ಕೋಪಗೊಂಡ ಮಹಿಳೆ ಬಸ್ಸಿನ ಹಿಂಭಾಗಕ್ಕೆ ಬಿಯರ್ ಬಾಟಲಿಯನ್ನು ಎಸೆದು ಹಿಂಭಾಗದ ವಿಂಡ್ ಶೀಲ್ಡ್ ಗೆ ಹಾನಿಮಾಡಿದ್ದಾಳೆ. ಆಗ ಬಸ್ ನಿಲ್ಲಿಸಿ ಡ್ರೈವರ್, ಮಹಿಳಾ ಕಂಡೆಕ್ಟರ್ ಹಾಗೂ ಪ್ರಯಾಣಿಕರು ಅವಳನ್ನು ಹಿಡಿದು ತರಾಟೆಗೆ ತೆಗೆದುಕೊಂಡಾಗ ಮಹಿಳೆ ತನ್ನ ಚೀಲದಲ್ಲಿದ್ದ ನಾಗರಹಾವನ್ನು ಮಹಿಳಾ ಕಂಡಕ್ಟರ್ ಮೈಮೇಲೆ ಎಸೆದಿದ್ದಾಳೆ. ಆಗ ಕಂಡಕ್ಟರ್ ಮೈಮೇಲೆ ಬಿದ್ದ ಹಾವು ಅವರಿಗೆ ಯಾವುದೇ ಹಾನಿ ಮಾಡದೆ ಪಕ್ಕಕ್ಕೆ ಸರಿದುಕೊಂಡು ಹೋಗಿದೆ. ಇದರಿಂದ ಕಂಡಕ್ಟರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಟಿಜಿಎಸ್‍ಆರ್‌ಟಿಸಿ ಎಂಡಿ ವಿಸಿ ಸಜ್ಜನರ್, ಇಂತಹ ಘಟನೆಗಳನ್ನು ನೋಡುವುದು ದುಃಖಕರವಾಗಿದೆ ಎಂದು ತಿಳಿಸಿ ಆರ್‌ಟಿಸಿ ನೌಕರರು ಮತ್ತು ಬಸ್‍ಗಳ ಮೇಲೆ ಇಂತಹ ದಾಳಿಗಳನ್ನು ಮಾಡದಂತೆ ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ. ಮತ್ತು ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಮತ್ತು ಪೊಲೀಸರ ಸಹಾಯದಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಜ್ಜನರ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಹಸ್ತಮೈಥುನದ ವಿಡಿಯೊ ಕಳುಹಿಸಿ ವಿದ್ಯಾರ್ಥಿಯನ್ನು ಕಾಮದ ಬಲೆಗೆ ಸಿಲುಕಿಸಿದ್ದ ಶಿಕ್ಷಕಿಯ ಬಂಧನ!

ಈ ಬಗ್ಗೆ ಮಾತನಾಡಿದ ಮಹಿಳಾ ಕಂಡಕ್ಟರ್, “ನಾನು ಅವಳನ್ನು ಹಿಡಿದು ಅವಳೊಂದಿಗೆ ಮಾತನಾಡುತ್ತಿದ್ದೆ, ಅವಳ ಬಳಿ ಬಸ್ ಮೇಲೆ ಏಕೆ ದಾಳಿ ಮಾಡಿದೆ ಎಂದು ಕೇಳುತ್ತಿದ್ದೆ, ಆಗ ಅವಳು ಇದ್ದಕ್ಕಿದ್ದಂತೆ ತನ್ನ ಚೀಲದಿಂದ ಹಾವನ್ನು ಹೊರತೆಗೆದು ನನ್ನ ಮೇಲೆ ಎಸೆದಳು. ಅಲ್ಲಿದ್ದ ಎಲ್ಲರೂ ಓಡಿಹೋದರು” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮಹಿಳೆಯನ್ನು ವಿಚಾರಣೆ ಮಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ರಾಜಕೀಯ

Jagdeep Dhankhar: ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಇಳಿಸಲು ಹೊರಟಿವೆ ಪ್ರತಿಪಕ್ಷಗಳು! ಇದು ಸಾಧ್ಯವೇ?

ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಅವರೊಂದಿಗಿನ ವಾಗ್ವಾದದ ಬಳಿಕ ಇಂಡಿಯಾ ಬ್ಲಾಕ್ ಕೂಟದ ನಾಯಕರು ಒಟ್ಟಾಗಿ ರಾಜ್ಯಸಭೆಯಿಂದ ಹೊರ ನಡೆದಿದ್ದರು. ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನ್‌ಕರ್ (Jagdeep Dhankhar) ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವನೆಗೆ 87 ಸದಸ್ಯರು ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಮೂಲಗಳು ತಿಳಿಸಿವೆ. ರಾಜ್ಯಸಭಾಧ್ಯಕ್ಷರನ್ನು ಹುದ್ದೆಯಿಂದ ಕೆಳಗಿಸಲು ಸಾಧ್ಯವೇ? ಇದರ ಪ್ರಕ್ರಿಯೆ ಏನು ಎನ್ನುವ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Jagdeep Dhankhar
Koo

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ (Jagdeep Dhankhar) ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ (no-confidence resolution) ಮಂಡಿಸಲು ಸಿದ್ಧತೆ ನಡೆಸುತ್ತಿದೆ. 18ನೇ ಅಧಿವೇಶನದಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ (Rajya Sabha) ವಿರೋಧ ಪಕ್ಷಗಳ ನಾಯಕರುಗಳು (Leaders of opposition parties) ಮತ್ತು ಸಭಾಪತಿ ಜಗದೀಪ್ ಧನ್‌ಕರ್ ನಡುವೆ ವಾಗ್ವಾದ ನಡೆದಿದ್ದು, ಪ್ರತಿಪಕ್ಷ ʼಇಂಡಿಯಾʼ ಬಣಗಳು ಅವರ ವಿರುದ್ಧ ನೊಟೀಸ್ ಸಲ್ಲಿಸಲು ಮುಂದಾಗಿವೆ.

ಮೂಲಗಳ ಪ್ರಕಾರ ನೊಟೀಸ್ ಬಗ್ಗೆ ಚರ್ಚಿಸಿ ನಿರ್ಧರಿಸಬೇಕಿದೆ. ಇದು ಯಾವ ಸಮಯದವರೆಗೆ ಎಂಬುದು ತಿಳಿದು ಬಂದಿಲ್ಲ. ವಿರೋಧ ಪಕ್ಷಗಳು ಅವರನ್ನು ಪದಚ್ಯುತಗೊಳಿಸಲು ಸಂಖ್ಯಾಬಲವನ್ನು ಹೊಂದಿಲ್ಲದ ಕಾರಣ ನಿರ್ಣಯವು ಜಾರಿಯಾಗದಿದ್ದರೂ ಇದು ಅಧ್ಯಕ್ಷರಿಗೆ ವಿರೋಧವನ್ನು ಎತ್ತಿ ತೋರಿಸುವ ವಿಧಾನವಾಗುತ್ತದೆ ಎನ್ನುವುದು ಪ್ರತಿಪಕ್ಷಗಳ ಲೆಕ್ಕಾಚಾರವಾಗಿದೆ.

ಧನ್‌ಕರ್ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವನೆಗೆ 87 ಸದಸ್ಯರು ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಮೂಲಗಳು ತಿಳಿಸಿವೆ. ಎರಡು ದಿನಗಳ ಹಿಂದೆ ಸದನಸ ನಾಯಕ ಜೆ.ಪಿ. ನಡ್ಡಾ ಅವರಿಗೆ ಅನೌಪಚಾರಿಕವಾಗಿ ಉಪಾಧ್ಯಕ್ಷರನ್ನು ಪದಚ್ಯುತಗೊಳಿಸುವ ಪ್ರಸ್ತಾಪವನ್ನು ಸಲ್ಲಿಸಲು ಪ್ರತಿಪಕ್ಷಗಳು ಚಿಂತಿಸಿವೆ ಎಂದು ಮೂಲಗಳು ತಿಳಿಸಿವೆ.

ಪ್ರತಿಪಕ್ಷಗಳ ಆತಂಕವೇನು?

ಸದನದಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ ಅನ್ನು ಪದೇಪದೇ ಆಫ್‌ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಕಳವಳ ವ್ಯಕ್ತಪಡಿಸಿವೆ. ಸದನವನ್ನು ನಿಯಮ ಮತ್ತು ಸಂಪ್ರದಾಯಗಳ ಪ್ರಕಾರ ನಡೆಸಬೇಕೆಂದು ಅವರು ಬಯಸುತ್ತಿದ್ದು, ಸದಸ್ಯರ ವಿರುದ್ಧ ವೈಯಕ್ತಿಕ ಟೀಕೆಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ. ವಿರೋಧ ಪಕ್ಷಗಳ ವಿರುದ್ಧ ಅವರು ಪಕ್ಷಪಾತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದರಿಂದ ಧನ್‌ಕರ್ ಮತ್ತು ಇಂಡಿಯಾ ಬ್ಲಾಕ್ ಪಕ್ಷಗಳ ನಡುವೆ ಸಾಕಷ್ಟು ವಾಗ್ವಾದ ನಡೆಯಿತು. ಸೋನಿಯಾ ಗಾಂಧಿ ನೇತೃತ್ವದ ಪ್ರತಿಪಕ್ಷಗಳು ರಾಜ್ಯಸಭೆಯಿಂದ ಹೊರನಡೆದ ಬೆನ್ನಲ್ಲೇ, ಕಾಂಗ್ರೆಸ್ ಪತ್ರಿಕಾಗೋಷ್ಠಿ ನಡೆಸಿ, ರಾಜ್ಯಸಭಾಧ್ಯಕ್ಷರು ಮೇಲ್ಮನೆಯಲ್ಲಿ ಪ್ರತಿಪಕ್ಷಗಳಿಗೆ ನೀಡಬೇಕಾದ ಪ್ರಾಮುಖ್ಯತೆಯನ್ನು ನೀಡುತ್ತಿಲ್ಲ ಎಂದು ಆರೋಪಿಸಿದರು.


ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಮತ್ತು ಧನ್‌ಕರ್ ನಡುವೆ ತೀವ್ರ ವಾಗ್ವಾದ ನಡೆದ ಬಳಿಕ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳ ನಾಯಕರು ಸದನದಿಂದ ಹೊರನಡೆದಿದ್ದರು. ಇದಕ್ಕೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ನಡ್ಡಾ, ಪ್ರತಿಪಕ್ಷಗಳು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದರು. ಸೋನಿಯಾ ಗಾಂಧಿ ಮತ್ತು ಇತರ ವಿರೋಧ ಪಕ್ಷದ ನಾಯಕರನ್ನು ಒಳಗೊಂದು ಸುದ್ದಿಗೋಷ್ಠಿ ನಡೆಸಿದ ಜಯಾ ಬಚ್ಚನ್, “ನಾವು ಶಾಲಾ ಮಕ್ಕಳಲ್ಲ. ನಾನು ಅವರ ಮಾತಿನಿಂದ ಅಸಮಾಧಾನಗೊಂಡಿದ್ದೇನೆ. ವಿಶೇಷವಾಗಿ ಮಾತನಾಡಲು ನಿಂತಾಗ, ಮೈಕ್ ಸ್ವಿಚ್ ಆಫ್ ಆಗಿತ್ತು. ಅವರು ಪ್ರತಿ ಬಾರಿಯೂ ಅಸಂಸದೀಯ ಪದಗಳನ್ನು ಬಳಸುತ್ತಾರೆʼʼ ಎಂದು ಆರೋಪಿಸಿದ್ದರು.

ವಿರೋಧ ಪಕ್ಷಗಳು ಹೇಳುವುದೇನು?

ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಮಾತನಾಡಿ, ಸಭಾಪತಿಯ ಧೋರಣೆ ಪಕ್ಷಪಾತದಿಂದ ಕೂಡಿದೆ. ರಾಜ್ಯಸಭೆಯಲ್ಲಿ ಸಭಾಪತಿ ಪಕ್ಷಾತೀತ ಆಗಿರಬೇಕು. ಎಲ್ಲಾ ಆಯ್ಕೆಗಳು ಮುಕ್ತವಾಗಿವೆ. ಕಾನೂನು ಮತ್ತು ನಿಯಮ ಪುಸ್ತಕದಲ್ಲಿ ಏನೇ ಇರಲಿ, ಸಂವಿಧಾನದಲ್ಲಿ ಏನೇ ಇರಲಿ, ನಡವಳಿಕೆಯ ಕಾರ್ಯವಿಧಾನದೊಳಗೆ, ಕಾನೂನಿನಲ್ಲಿ ಯಾವುದೇ ನಿಬಂಧನೆಗಳು ಇರಲಿ, ಎಲ್ಲಾ ಆಯ್ಕೆಗಳು ನಮಗೆ ಮುಕ್ತವಾಗಿವೆ. ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವಾಗ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶವಿಲ್ಲ. ಅವರಿಗೂ ಆಗಾಗ ಅಡ್ಡಿಪಡಿಸಲಾಗುತ್ತದೆ. ಅವರ ಮೈಕ್‌ಗಳನ್ನು ಆಗಾಗ ಆಫ್‌ ಮಾಡಲಾಗುತ್ತದೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಉಪ ನಾಯಕ ಪ್ರಮೋದ್ ತಿವಾರಿ ಆರೋಪಿಸಿದ್ದಾರೆ.

Jagdeep Dhankhar
Jagdeep Dhankhar


ಉಪಾಧ್ಯಕ್ಷರನ್ನು ಹೇಗೆ ತೆಗೆದು ಹಾಕಬಹುದು?

ಉಪಾಧ್ಯಕ್ಷರು ರಾಜ್ಯಸಭೆಯ ಪದನಿಮಿತ್ತ ಅಧ್ಯಕ್ಷರಾಗಿದ್ದಾರೆ ಮತ್ತು ಮೇಲ್ಮನೆಯ ಸುಗಮ ಕಾರ್ಯನಿರ್ವಹಣೆಗಾಗಿ ನಿಯಮಗಳು ಮತ್ತು ಸಂಪ್ರದಾಯಗಳನ್ನು ಎತ್ತಿಹಿಡಿಯುವ ಮೂಲಕ ಸಂಸದೀಯ ವ್ಯವಸ್ಥೆಯಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದಾರೆ. ಅವರನ್ನು ಭಾರತದ ಉಪರಾಷ್ಟ್ರಪತಿ ಹುದ್ದೆಯಿಂದ ತೆಗೆದುಹಾಕಿದಾಗ ಮಾತ್ರ ಅವರನ್ನು ರಾಜ್ಯಸಭೆ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಬಹುದು!

ಇದನ್ನು ರಾಜ್ಯಸಭೆಯಲ್ಲಿ ನಿರ್ಣಯದ ಮೂಲಕ ಮಾಡಬಹುದು. ಆ ವೇಳೆ ಬಹುಪಾಲು ಸದಸ್ಯರ ಅಂಗೀಕಾರ ಮುಖ್ಯವಾಗುತ್ತದೆ. ಬಳಿಕ ಲೋಕಸಭೆಯ ಒಪ್ಪಿಗೆ ಬೇಕಾಗುತ್ತದೆ. ಈ ಉದ್ದೇಶಕ್ಕಾಗಿ ನಿರ್ಣಯವನ್ನು ಕನಿಷ್ಠ 14 ದಿನಗಳ ಸೂಚನೆಯ ಅನಂತರ ಮಾತ್ರ ವರ್ಗಾಯಿಸಬಹುದು. ಸಂವಿಧಾನದ ಪರಿಚ್ಛೇದ 67(b) ಪ್ರಕಾರ ಉಪರಾಷ್ಟ್ರಪತಿಯನ್ನು ರಾಜ್ಯಸಭೆಯ ನಿರ್ಣಯದ ಮೂಲಕ ಎಲ್ಲಾ ಸದಸ್ಯರ ಬಹುಮತದ ಬಳಿಕ ಸದನದ ಒಪ್ಪಿಗೆ ಪಡೆದು ತೆಗೆದು ಹಾಕಬಹುದು. ಆದರೆ ನಿರ್ಣಯವನ್ನು ಮಂಡಿಸುವ ಕನಿಷ್ಠ ಹದಿನಾಲ್ಕು ದಿನಗಳ ಸೂಚನೆಯನ್ನು ನೀಡಬೇಕಾಗುತ್ತದೆ.

ಏನು ಪ್ರಕ್ರಿಯೆ?

ಪದಚ್ಯುತಿ ನಿರ್ಣಯವನ್ನು ರಾಜ್ಯಸಭೆಯಲ್ಲಿ ಮಾತ್ರ ಮಂಡಿಸಬಹುದೇ ಹೊರತು ಲೋಕಸಭೆಯಲ್ಲಿ ಅಲ್ಲ.
ಇದನ್ನೂ ಓದಿ: Parliament Session: ರಾಜ್ಯಸಭೆಯಲ್ಲಿ ಮತ್ತೊಮ್ಮೆ ಜಗದೀಪ್ ಧನಕರ್-ಜಯಾ ಬಚ್ಚನ್ ಜಟಾಪಟಿ! ಈ ವಿಡಿಯೊ ನೋಡಿ

ನಿರ್ಣಯವನ್ನು ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕರಿಸಬೇಕಾಗುತ್ತದೆ. ಬಳಿಕ ಲೋಕಸಭೆಯಲ್ಲಿ ಸರಳ ಬಹುಮತದಿಂದಾದರೂ ಒಪ್ಪಿಗೆ ಸೂಚಿಸಬೇಕಾಗುತ್ತದೆ. ನಿರ್ಣಯವು ಪರಿಗಣನೆಯಲ್ಲಿರುವಾಗ ಅಧ್ಯಕ್ಷರು ಸದನದ ಅಧ್ಯಕ್ಷತೆ ವಹಿಸುವಂತಿಲ್ಲ. ಹಾಜರಾಗಬಹುದು, ಮಾತನಾಡಬಹುದು ಮತ್ತು ಕಲಾಪದಲ್ಲಿ ಭಾಗವಹಿಸಬಹುದು. ಆದರೆ ಮತ ಚಲಾಯಿಸಲು ಸಾಧ್ಯವಿಲ್ಲ.
ರಾಜ್ಯಸಭೆಯ ಅಧ್ಯಕ್ಷರ ಪದಚ್ಯುತಿಗೆ ನಿರ್ಣಯವು ಪರಿಗಣನೆಯಲ್ಲಿರುವಾಗ ಸಮಾನ ಮತಗಳು ಬಂದರೆ ಲೋಕಸಭೆಯ ಅಧ್ಯಕ್ಷರು ತಮ್ಮ ಮತ ಚಲಾಯಿಸಬಹುದಾಗಿದೆ.

Continue Reading
Advertisement
KCET Mock Allotment 2024 Engineering mock seat allotment announced
ಬೆಂಗಳೂರು17 mins ago

KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಪ್ರಕಟ

Viral News
ವೈರಲ್ ನ್ಯೂಸ್23 mins ago

Viral News: 5 ಕೆಜಿ ಆಲೂಗಡ್ಡೆ ಲಂಚ ಕೇಳಿ ಅಮಾನತುಗೊಂಡ ಸಬ್‌ ಇನ್ಸ್‌ಪೆಕ್ಟರ್ !

CM Siddaramaiah
ಚಾಮರಾಜನಗರ41 mins ago

CM Siddaramaiah: ನಮಗೆ ಮನೇಲಿ ತಂಗಳು ಇರ್ತಿತ್ತು, ಇಡ್ಲಿ-ದೋಸೆ ಇರ್ತಿಲಿಲ್ಲ ಎಂದ ಸಿಎಂ

High Calcium Foods
ಆರೋಗ್ಯ45 mins ago

High Calcium Foods: ದೇಹಕ್ಕೆ ಮುಖ್ಯವಾದ ಅಧಿಕ ಕ್ಯಾಲ್ಶಿಯಂ ಆಹಾರಗಳನ್ನು ಪಡೆಯುವುದು ಹೇಗೆ?

Narendra Modi
ದೇಶ46 mins ago

Narendra Modi: ಮಕ್ಕಳು, ಸ್ತ್ರೀಯರು ಸೇರಿ ವಯನಾಡು ಸಂತ್ರಸ್ತರನ್ನು ಸಂತೈಸಿದ ಮೋದಿ; Photos ಇಲ್ಲಿವೆ

Smriti Mandhana
ಪ್ರಮುಖ ಸುದ್ದಿ47 mins ago

Smriti Mandhana : ವಿರಾಟ್​ ಕೊಹ್ಲಿ ಜತೆ ನನ್ನನ್ನು ಹೋಲಿಕೆ ಮಾಡಬೇಡಿ; ಸ್ಮೃತಿ ಮಂದಾನ ಮನವಿ

Tharun Sudhir
ಸಿನಿಮಾ51 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮ; ರಿಸೆಪ್ಶನ್‌ ಲೈವ್‌ ವಿಡಿಯೊ ಇಲ್ಲಿದೆ ನೋಡಿ

ಪ್ರಮುಖ ಸುದ್ದಿ1 hour ago

BJP-JDS Padayatra: ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ನಿಲ್ಲಲ್ಲ: ಸಿಎಂ, ಡಿಸಿಎಂ ವಿರುದ್ಧ ಬಿಎಸ್‌ವೈ ಗುಡುಗು

Bengaluru Power Cut
ಕರ್ನಾಟಕ1 hour ago

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.13ರಂದು ಕರೆಂಟ್‌ ಇರಲ್ಲ

Saina Nehwal
ಪ್ರಮುಖ ಸುದ್ದಿ1 hour ago

Saina Nehwal : ನನ್ನ ಸ್ಮ್ಯಾಶ್​ ತಡೆಯಲು ಬುಮ್ರಾಗೆ ಸಾಧ್ಯವಿಲ್ಲ; ಕ್ರಿಕೆಟ್​ಗೆ ಹೆಚ್ಚು ಆದ್ಯತೆ ಬಗ್ಗೆ ತಕರಾರು ಎತ್ತಿದ ಸೈನಾ ನೆಹ್ವಾಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌