CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ - Vistara News

ಕರ್ನಾಟಕ

CDPO suspended: ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

CDPO suspended: ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯಲ್ಲಿ ನಡೆದ ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣದಲ್ಲಿ ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇದೀಗ ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.

VISTARANEWS.COM


on

CDPO suspended
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು (CDPO suspended) ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದ್ದಾರೆ.

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದರು. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.

ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೊ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು. ‌

ಚಿತ್ರೀಕರಣದ ಬಳಿಕ ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸ್‌ ಆ್ಯಪ್ ಗ್ರೂಪ್‌ಗಳ ಮೂಲಕ ಅಪ್‌ ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೊ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ.‌ ಇದೀಗ ವೀಡಿಯೋ‌ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಅನ್ನೋ ಸ್ಥಿತಿ ಮಕ್ಕಳಿಗೆ ಆಗಿದೆ. 69 ಸಾವಿರ ಅಂಗನವಾಡಿಗಳನ್ನು ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿದ್ದೇವೆ‌ ಎಲ್ಲೋ ಒಂದು ಕಡೆ ಆದ್ರೆ ಸಂಪೂರ್ಣ ಇಲಾಖೆಗೆ ಕಷ್ಟ ಆಗುತ್ತೆ. ನಿನ್ನೆ ರಾತ್ರಿಯೇ ಈ ಪ್ರಕರಣ ನನ್ನ ಗಮನಕ್ಕೆ ಬಂದಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಆ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನ ಈಗಾಗಲೇ ಕೆಲಸದಿಂದ ಸಸ್ಪೆಂಡ್ ಮಾಡಲಾಗಿದ್ದು , ಇಂತಹ ತಪ್ಪನ್ನು ಮಾಡಿದ್ರೆ ಕಡ್ಡಾಯವಾಗಿ ಕೆಲಸದಿಂದ ನಿವೃತ್ತಿಗೊಳಿಸುತ್ತೇನೆ. ಬೇರೆಯವರಿಗೆ ಈ ಪ್ರಕರಣ ಪಾಠ ಆಗಬೇಕು. ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಎಲ್ಲಾ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರುಗಳ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಭಾಗವಹಿಸಿದರು.

ಇಲಾಖೆ ವತಿಯಿಂದ ಕರ್ನಾಟಕದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು. ಇಲಾಖೆಯ ಪ್ರಗತಿ ಕುರಿತು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ ಸಚಿವರು, ಜತೆಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ ಎಲ್ಲಾ ಅನುದಾನದ ಕುರಿತು ಮತ್ತೊಮ್ಮೆ ಸದರಿ ಸಭೆಯಲ್ಲಿ ಪ್ರಸ್ತಾಪ ಮಾಡಿದರು.

ಇದನ್ನೂ ಓದಿ | CM Siddaramaiah: ಆರೋಪಗಳ ವಿರುದ್ಧ ರಾಜಕೀಯ, ಕಾನೂನು ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Actor Chetan Ahimsa: ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅವರಂಥವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ. ನಮ್ಮ ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ನಟ ಚೇತನ್‌ ಹೇಳಿದ್ದಾರೆ.

VISTARANEWS.COM


on

Actor Chetan Ahimsa
Koo

ಬೆಂಗಳೂರು: 4 ದಶಕಗಳಿಂದ ರಾಜಕೀಯದಲ್ಲಿದ್ದರೂ ನನಗೆ ಮೈಸೂರಿನಲ್ಲಿ ಸ್ವಂತ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿಕಾರಿದ್ದಾರೆ. ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅವರಂತಹವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ನಟ ಚೇತನ್‌ ಅಹಿಂಸಾ (Actor Chetan Ahimsa) ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಲ್ಲಿ ಪ್ರತಿಕ್ರಿಯಿಸಿರುವ ಅವರು, 52 ಕೋಟಿ ಆಸ್ತಿ ಘೋಷಿಸಿದ್ದರೂ, ಸ್ವಂತ ಮನೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಪರ್ಯಾಸವೆಂದರೆ, ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಲ್ಲಿನ ಅವರ ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅವರಂಥವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ. ನಮ್ಮ ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ನ್ಯಾಯದ ಪರಿಕಲ್ಪನೆ ಇಲ್ಲ, ಎಸ್‌ಸಿಎಸ್‌ಪಿ, ಟಿ.ಎಸ್.ಪಿ. ಯೋಜನೆಯ ಮೀಸಲು ಹಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದರಿಂದ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿ ಕುಂಠಿತವಾಗಿದೆ. ಈ ಅಸಮಾನತೆಯ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಪಕ್ಷ ಮನುವಾದಿ, ಅಸಮಾನತಾವಾದಿ, ಶ್ರೀಮಂತರ ಪರವಾಗಿರುವ ಪಕ್ಷವಾಗಿದೆ. ಈ ಪಕ್ಷದಲ್ಲಿ ಬೆಳೆದಿರುವ ಸಚಿವ ಎಚ್‌.ಸಿ.ಮಹದೇವಪ್ಪ ಸೇರಿ ಹಲವರು, ದಲಿತರು, ಆದಿವಾಸಿಗಳಿಗೆ ಉದ್ದೇಶಪೂರ್ವಕವಾಗಿಯೇ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಎಸ್‌ಸಿಎಸ್‌ಸಿ, ಟಿಎಸ್‌ಪಿ ಅನುದಾನ ಇರುವುದು ಗುಡಿಸಿನಲ್ಲಿರುವವರಿಗೆ ಮನೆ, ಶಿಕ್ಷಣ ರಸ್ತೆ, ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ. ಆದರೆ ಕಳೆದ ವರ್ಷ 12,500 ಕೋಟಿ, ಈ ವರ್ಷ 14,500 ಸಾವಿರ ಕೋಟಿ ದಲಿತರು, ಆದಿವಾಸಿಗಳ ಹಣ ಕಿತ್ತುಕೊಂಡು ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ, ಸಿಎಂಗೆ ನ್ಯಾಯದ ಪರಿಕಲ್ಪನೆ ಗೊತ್ತೇ ಇಲ್ಲ. ಪರಿವರ್ತನೆ ಮನಸ್ಥಿತಿ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

ಪ್ರಕಾಶ್‌ ರೈ ವಿರುದ್ಧ ಅಹಿಂಸಾ ಚೇತನ್‌ ಕಿಡಿ; ಮೋದಿ ಪರ ಬ್ಯಾಟಿಂಗ್ ಮಾಡಿ ʼರೈ ಅಜ್ಞಾನಿʼ ಎಂದ ನಟ

vinesh phogat praksah raj ahimsa chetan
vinesh phogat praksah raj ahimsa chetan

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಯಾವಾಗಲೂ ಕಿಡಿ ಕಾರುತ್ತಿದ್ದ ನಟ ಚೇತನ್‌ ಅಹಿಂಸಾ (Chetan Ahimsa), ಇದೀಗ ಮೋದಿಯವರ ಪರ ಸೋಶಿಯಲ್‌ ಮೀಡಿಯಾ (Social Media) ಪೋಸ್ಟ್‌ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಜೊತೆಗೆ, ವಿನೇಶ್‌ ಫೋಗಟ್‌ (Vinesh Phogat) ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ (Prakash raj) ನಿಲುವಿನ ವಿರುದ್ಧ ಕಿಡಿ ಕಾರಿದ್ದಾರೆ.

50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ ನಡೆಯನ್ನು ಚೇತನ್‌ ಟೀಕಿಸಿದ್ದಾರೆ. ಅದರಲ್ಲೂ ಮೋದಿ ಪರ ನಿಂತ ಅಹಿಂಸಾ ಚೇತನ್​ ನಿಲುವು ನೋಡಿ ತುಂಬಾ ಮಂದಿ ಅಚ್ಚರಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿನ್ನೆ ಪ್ರಕಾಶ್​ ರಾಜ್​ ಕಾರ್ಟೂನ್​ ಶೇರ್ ಮಾಡಿಕೊಂಡಿದ್ದರು. ಇದರಲ್ಲಿ ಕುಸ್ತಿಪಟು ವಿನೇಶ್​ ಫೋಗಟ್ ಅವರು ನಿಂತಿರುವ ತೂಕದ ಯಂತ್ರದ ಮೇಲೆ ನಿಂತಿದ್ದು, ಅವರ ಹಿಂಭಾಗದಲ್ಲಿ ಮತ್ತೊಬ್ಬರು ಕಾಲಿನ ಒಂದು ಬೆರಳನ್ನಿಟ್ಟು 100 ಗ್ರಾಮ್ ತೂಕ ಹೆಚ್ಚಾಗುವಂತೆ ಮಾಡಿದ್ದಾರೆ. ಹಿಂದಿರುವ ವ್ಯಕ್ತಿ ಪ್ರಧಾನಿ ಮೋದಿ ಎಂದು ಚಿತ್ರ ಸೂಚಿಸುವಂತಿದೆ. ಮೋದಿಯೇ ವಿನೇಶ್ ಫೋಗಟ್ ಕುಸ್ತಿ ಚಿನ್ನದ ಪದಕದಿಂದ ವಂಚಿತರಾಗಲು ಕಾರಣವಾಗಿದ್ದಾರೆ ಎಂದು ಅರ್ಥ ಬರುವಂತೆ ಈ ಟ್ವೀಟ್ ಶೇರ್ ಮಾಡಿದ್ದರು.

ಇದಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್​ ಕಿಡಿಕಾರಿದ್ದಾರೆ. ʼವಿನೇಶ್ ಫೋಗಟ್ ಅನರ್ಹತೆಗೆ ಪ್ರಧಾನಿ ಮೋದಿ ಕಾರಣ ಎಂದು ಪ್ರಕಾಶ್ ರೈ ಪೋಸ್ಟ್ ಸಜೆಸ್ಟ್ ಮಾಡುತ್ತದೆ. ಇದು ಸಣ್ಣತನ. ಭಾರತದ ಎಲ್ಲಾ ಲಾಭಗಳಿಗೆ ಮೋದಿಯನ್ನು ಕುರುಡಾಗಿ ಹೊಗಳುವವರು ಹೇಗೆ ಅಜ್ಞಾನಿಗಳೋ, ಹಾಗೆಯೇ ಭಾರತದ ಎಲ್ಲಾ ಸಮಸ್ಯೆಗಳನ್ನು ಮೋದಿಯ ಮೇಲೆ ದೂಷಿಸುವ ರೈ ಅವರಂತಹವರೂ ಅಜ್ಞಾನಿಗಳಾಗಿದ್ದಾರೆ. ಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಟ್ವೀಟ್‌ನಲ್ಲಿ ಚೇತನ್ ಬರೆದಿದ್ದಾರೆ.

ಇಬ್ಬರು ನಟರ ಈ ಟ್ವೀಟ್ಟ್‌ಗಳು ಇದೀಗ ವೈರಲ್ ಆಗುತ್ತಿವೆ. ನೆಟ್ಟಿಗರು ಚೇತನ್ ಕಮೆಂಟ್​ಗೂ ಪರ-ವಿರೋಧ ಕಮೆಂಟ್ ಮಾಡುತ್ತಿದ್ದಾರೆ. ಪ್ರಕಾಶ್ ರಾಜ್​ ಕೆಟ್ಟ ಹೋರಾಟಗಾರ ಎನ್ನುವುದು ಸರಿಯಲ್ಲ ಎಂದಿದ್ದಾರೆ. ವಿನೇಶ್ ಫೋಗಟ್ ಅನರ್ಹತೆಗೆ ಪ್ರಕಾಶ್ ರಾಜ್ ಎಲ್ಲಿಯೂ ಮೋದಿ ಹೆಸರನ್ನು ಮೆನ್ಷನ್ ಮಾಡಿಲ್ಲ. ಆದರೆ ನೀವೇ ಮೋದಿ ಎಳೆದು ತಂದಿದ್ದೀರಿ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಕುಸ್ತಿ ಪಂದ್ಯಾಟದ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ 100 ಗ್ರಾಮ್‌ಗಳ ಹೆಚ್ಚುವರಿ ತೂಕದಿಂದಾಗಿ ಪ್ಯಾರಿಸ್ ಒಲಿಂಪಿಕ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್‌ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ತಮ್ಮ ಅರ್ಧ ವರ್ಷದ ತರಬೇತಿಯನ್ನು ಕಳೆದುಕೊಂಡಿದ್ದ ವಿನೇಶ್, ತಮಗೆ ದೊರಕಿದ್ದ ಅತ್ಯಲ್ಪ ಸಮಯದಲ್ಲಿಯೇ ತರಬೇತಿ ಪಡೆದುಕೊಂಡು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಜೊತೆಗೆ ದೇಶಕ್ಕಾಗಿ ಪದಕ ಗೆಲ್ಲುವ ಮಹದಾಸೆ ಇರಿಸಿಕೊಂಡಿದ್ದರು.

ಇದನ್ನೂ ಓದಿ: Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್!

Continue Reading

ಕರ್ನಾಟಕ

BJP-JDS Padayatra: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ನಮ್ಮ ಹೋರಾಟ ಎಂದ ವಿಜಯೇಂದ್ರ

BJP-JDS Padayatra: ಕಳೆದ ಹದಿನೈದು ತಿಂಗಳ ಭ್ರಷ್ಟಾಚಾರವನ್ನು ವಿರೋಧಿಸಿ ನಾವು ಪಾದಯಾತ್ರೆ ಮಾಡಿದ್ದೇವೆ. ಈ ಹೋರಾಟ ನಿಮ್ಮ ವಿರುದ್ಧ ಅಲ್ಲ, ಭ್ರಷ್ಟಾಚಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

VISTARANEWS.COM


on

BJP-JDS Padayatra
Koo

ಮೈಸೂರು: ಸದನದ ಒಳಗೆ ಮತ್ತು ಹೊರಗೆ ಮಾಡ್ತಿರುವ ಹೋರಾಟ ನಿಮ್ಮ ವಿರುದ್ಧ ಅಲ್ಲ, ಬದಲಾಗಿ ಭ್ರಷ್ಟಾಚಾರದ ವಿರುದ್ಧ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಈ ಹೋರಾಟ (BJP-JDS Padayatra) ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ನಗರದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ರಹಿತ ಅಧಿಕಾರ ಕೊಡುತ್ತೀವಿ, ಅಹಿಂದ ಸಮುದಾಯಗಳಿಗೆ ಸೌಕರ್ಯ ಒದಗಿಸುತ್ತೇವೆ ಎಂದು ಹೇಳಿದ್ದರು. ಕಳೆದ ಹದಿನೈದು ತಿಂಗಳ ಭ್ರಷ್ಟಾಚಾರವನ್ನು ವಿರೋಧಿಸಿ ನಾವು ಪಾದಯಾತ್ರೆ ಮಾಡಿದ್ದೇವೆ. ಈ ಹೋರಾಟ ನಿಮ್ಮ ವಿರುದ್ಧ ಅಲ್ಲ, ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದರು.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಹೋರಾಟ ಅಲ್ಲ, ರಾಜ್ಯದಲ್ಲಿ ಭೀಕರ ಬರ ಇದ್ದಾಗ ಇವರು ರೈತನ ಪರ ಕೆಲಸ ಮಾಡಲಿಲ್ಲ. ಬಡವರು ಮನೆ ಕಳೆದುಕೊಂಡರೆ ಐದು ಲಕ್ಷ ರೂಪಾಯಿ ಕೊಡುತ್ತಿದ್ದರು, ನೀವು ಅದನ್ನು ಒಂದು ಲಕ್ಷಕ್ಕೆ ಇಳಿಸಿದ್ದೀರಿ. ಅದನ್ನೂ ನೀವು ಕೊಡಲಿಲ್ಲ. ರಾಜ್ಯದಲ್ಲಿ ದಾರಿದ್ರ್ಯ ಸರ್ಕಾರ ಇದೆ. ಯಾವುದೇ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆ ಘೋಷಣೆ ಮಾಡಲಿಲ್ಲ. ನೀವು ಮುಖ್ಯಮಂತ್ರಿ ಆದ ಮೇಲೆ ಭೀಕರ ಬರಗಾಲ ಹಾಗೂ 1500 ರೈತರು ಆತ್ಮಹತ್ಯೆ ಮಾಡಿಕೊಂಡರು. ರಾಜ್ಯದಲ್ಲಿ ಸರ್ಕಾರ ಬದುಕಿದ್ದು ಸತ್ತಂತೆ ಎಂದು ಕಿಡಿಕಾರಿದರು.

ನಿಮ್ಮ ವಿರುದ್ಧ ಮಾತನಾಡಿದರೆ ಬೆದರಿಕೆ ಹಾಕುತ್ತೀರಿ, ನಿಮ್ಮ ಸರ್ಕಾರದಿಂದ ರೈತರು, ಕಾರ್ಮಿಕರು ನರಳುತ್ತಿದ್ದಾರೆ. ಹೀಗಾಗಿ ನಿಮ್ಮನ್ನು ತೊಳಗಿಸಬೇಕಿದೆ. ಮೈಸೂರಿಗೆ ಪಾದಯಾತ್ರೆ ಮೂಲಕ ಬಂದ್ರೆ ತಡೆಯುತ್ತೀರಿ, ವಿಧಾನ ಸಭೆ ಹಾಗೂ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಜುಲೈ 14ರಂದು ಒನ್ ಮ್ಯಾನ್ ಕಮಿಷನ್ ನೇಮಕ ಮಾಡುತ್ತಾರೆ. ರಾಜ್ಯದ ಸಿಎಂ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲಿಲ್ಲ. ನಮ್ಮ ಸವಾಲು ಸ್ವೀಕರಿಸಲು ಸಾಧ್ಯವಾಗದೇ ರಣಹೇಡಿ ರೀತಿಯಲ್ಲಿ ಓಡಿ ಹೋಗಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ | BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

ಮುಡಾದಲ್ಲಿ ಹಗರಣ ಆಗಿಲ್ಲವೆಂದರೆ ಯಾಕೆ ಓಡಿ ಹೋದ್ರಿ, ಉಪಮುಖ್ಯಮಂತ್ರಿಗಳು ಬಿಚ್ಚಿಡ್ತೀವಿ ಅಂತ ಬೆದರಿಕೆ ಹಾಕುತ್ತಾರೆ. ತಾಕತ್ತಿದ್ದರೆ ವಾಲ್ಮೀಕಿ ಹಗರಣದಲ್ಲಿ ಮುಚ್ಚಿಟ್ಟಿರುವ ದಾಖಲೆ ಬಿಚ್ಚಿಡಿ ಬನ್ನಿ ಎಂದು ಆಗ್ರಹಿಸಿದರು. ಯಡಿಯೂರಪ್ಪ ರಾಜಕೀಯ ನಿವೃತ್ತಿ ಆಗಬೇಕು ಅಂತೀರಾ? ಯಡಿಯೂರಪ್ಪ ಕಂಡರೆ ನಿಮಗೆ ಯಾಕೆ ಭಯ? 2014 ರಲ್ಲಿ 15 ಎಫ್ಐಆರ್ ದಾಖಲು ಮಾಡಿಸಿದ್ದೀರಿ, ರಾಜಕೀಯವಾಗಿ ಯಡಿಯೂರಪ್ಪ ಹೆದರಿಸಲು ಆಗದೇ ಕೇಸ್ ಹಾಕಿದ್ದೀರಿ. ಯಡಿಯೂರಪ್ಪ ಮೇಲೆ ಹಲ್ಲೆ ಆಗಿ ಬದುಕುಳಿದಾಗ ನನ್ನ ಕೊನೆಯ ಉಸಿರುವವರೆಗೂ ಜನರ ಪರ ಕೆಲಸ ಮಾಡುತ್ತೀನಿ ಎಂದು ನಮ್ಮ ತಾಯಿಗೆ ಹೇಳಿದ್ದರು. ಯಡಿಯೂರಪ್ಪ ಕೊನೆಯ ಉಸಿರು ಇರೋವರೆಗೂ ರಾಜಕೀಯ ಮಾಡುತ್ತಾರೆ ಎಂದು ಹೇಳಿದರು.

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

Karnataka weather Forecast : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಳೆಯು ಅಬ್ಬರಿಸಿದ್ದು, ಭಾನುವಾರಕ್ಕೂ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Koo

ಬೆಂಗಳೂರು: ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆಯಿಂದ (Rain News) ಶುರುವಾಗಿ ಸಂಜೆ ವೇಳೆಗೆ ಹಲವೆಡೆ ಸಾಧಾರಣ (Karnataka weather Forecast) ಮಳೆಯಾಗಿದೆ. ಮುಂಜಾವಿನ ಮಳೆಯಿಂದ ಜಾಗಿಂಗ್, ರನ್ನಿಂಗ್ ಹೋಗುವವರಿಗೆ ತೊಂದರೆ ಆಯಿತು.

ನಗರದ ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಶಿವಾಜಿನಗರ, ಮಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಶೇಷಾದ್ರಿಪುರಂ, ವಿಧಾನಸೌಧದಲ್ಲೂ ಮಳೆಯ ಸಿಂಚನವಾಗಿದೆ.

ಭಾರಿ ಮಳೆಗೆ ಕಾಳಿ ಸೇತುವೆ ಕುಸಿತದಿಂದಾಗಿ ಹೊಸ ಸೇತುವೆಯಲ್ಲಿ ಹೆಚ್ಚಾದ ವಾಹನ ದಟ್ಟಣೆ

ಉತ್ತರ ಕನ್ನಡದ ಕಾರವಾರದ ಕಾಳಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಹೊಸ ಸೇತುವೆಯು ಕಾರವಾರ-ಗೋವಾ ಸಂಪರ್ಕಿಸಲಿದೆ.

ಒಂದೇ ಸೇತುವೆ ಮೇಲೆ ದ್ವಿಮುಖ ಸಂಚಾರದಿಂದ ವಾಹನ ದಟ್ಟಣೆ ಎದುರಾಗಿದ್ದು, ಒಂದರ ಹಿಂದೆ ಒಂದರಂತೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ-ಮಂಗಳೂರು ನಡುವಿನ ಸರಕು ಸಾಗಾಟಕ್ಕೆ ತೊಡಕು ಉಂಟಾಗಿದೆ. ಹೊಸ ಸೇತುವೆಗೆ ಬೀದಿದೀಪ ಅಳವಡಿಸದೇ ಐಆರ್‌ಬಿ ನಿರ್ಲಕ್ಷ್ಯ ವಹಿಸಿದ್ದು, ರಾತ್ರಿ ವೇಳೆ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಹೊಸ ಸೇತುವೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸವಾರರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಸಾಧಾರಣ ಮಳೆ ಸಾಧ್ಯತೆ

ನಾಳೆ ಭಾನುವಾರ ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

BJP-JDS Padayatra: ಈ ಸರ್ಕಾರ ತೆಗೆಯಲು ಎರಡು ಪಕ್ಷಗಳ ಕಾರ್ಯಕರ್ತರ ಸಹಕಾರ ಅಗತ್ಯ. ನಾವು ಒಗ್ಗಟ್ಟಾಗಿ ಹೋಗಬೇಕು. ಈ ಸರ್ಕಾರ ತೆಗೆಯುವವರೆಗೂ ನನ್ನ ಹೋರಾಟ ಮುಂದುವರೆಯುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Koo

ಮೈಸೂರು: ಸಿಎಂ ಸಿದ್ದರಾಮಯ್ಯ ಜತೆ ಬಂಡೆ ರೀತಿ ನಿಲ್ಲುತ್ತೇನೆ ಅಂತ ಡಿಕೆಶಿ ಹೇಳಿದ್ದಾರೆ. ಆದರೆ, 2018ರಲ್ಲಿ ನನಗೂ ಇದೇ ರೀತಿ ಹೇಲಿ ನನ್ನ ಮೇಲೆ ಬಂಡೆ ಹಾಕಿದ್ದರು. ಈಗ ಸಿದ್ದರಾಮಯ್ಯನ ಕತೆ ಸಹ ಮುಗಿಯಿತು. ನನ್ನ ವಿರುದ್ಧ 50 ಡಿನೋಟಿಫಿಕೇಷನ್ ಪ್ರಕರಣ ಇವೆ, ತನಿಖೆ ಮಾಡುಸುವೆ ಎಂದಿದ್ದಾರೆ. ಮಿಸ್ಟರ್ ಡಿ.ಕೆ. ಶಿವಕುಮಾರ್, ಯಾವ ತನಿಖೆ ಮಾಡಿಸುತ್ತಿಯಾ ಮಾಡ್ಸಪ್ಪ ನೋಡೋಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (BJP-JDS Padayatra) ಸವಾಲು ಹಾಕಿದರು.

ನಗರದಲ್ಲಿ ನಡೆದ ಬೆಂಗಳೂರು-ಮೈಸೂರು ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇನೆಂದು ಹೇಳಿದ್ದಾರೆ. ನಾನು 19 ಸ್ಥಾನ ಅಷ್ಟೇ ಗೆಲ್ಲೋದಕ್ಕೆ ಸಾಧ್ಯವಾಗಿದ್ದು ಅಂತ ಹೇಳಿದ್ದಾರೆ. ಮತ್ತೆ ಲೋಕಸಭೆಯಲ್ಲಿ ಯಾಕೆ ಕಡಿಮೆ ಗೆದ್ರಿ? ರಾಜಕೀಯದಲ್ಲಿ ಏಳುಬೀಳು ಇದ್ದಿದ್ದೆ ಎಂದು ಕಿಡಿಕಾರಿದರು.

ಸಿಎಂ ವಿರುದ್ಧ ಮುಗಿಬಿದ್ದ ಅವರು, ಕಪ್ಪು ಚುಕ್ಕೆ ಇಲ್ಲ ಅಂತ ಹೇಳಿದ್ದಾರೆ. ಸಿದ್ದರಾಮಯ್ಯ ಚಡ್ಡಿಯೆಲ್ಲಾ ಕಪ್ಪು ಚುಕ್ಕೆ ಮಾಡಿಕೊಂಡಿದ್ದಾರೆ. ನಾನು ಸಾಲ ಮಾಡಿ ಚುನಾವಣೆ ಮಾಡಿದ್ದೇನೆ. ಮನೆ ಮಾರಿಕೊಂಡು ಚುನಾವಣೆ ಮಾಡಿದ್ದೇನೆಂದು ಹೇಳಿದ್ದಾರೆ. ನಮಗೆ ನಿಮ್ಮ ಪತ್ನಿ ಮೇಲೆ ಗೌರವವಿದೆ, ನೀವು ಈ ರಾಜ್ಯದ ಮುಖ್ಯಮಂತ್ರಿ. ನೀವು ಹಿಂದುಳಿದ ವರ್ಗಗಳಿಗೆ ಅಷ್ಟೇ ಅಲ್ಲ, ಆರೂವರೆ ಕೋಟಿ ಕನ್ನಡಿಗರಿಗೆ ಸಿಎಂ. ದಾನ ಮಾಡುವುದು ತಪ್ಪಲ್ಲ, ಕಾನೂನಿನ ಪ್ರಕಾರ ದಾನ ಮಾಡಿದ್ದರೆ ನಮ್ಮ ಆಕ್ಷೇಪ ಇಲ್ಲ. ಆ ಭೂಮಿ, ಸರ್ಕಾರದ ಭೂಮಿ. ನಿಮ್ಮ ಮೂಗಿನ ನೇರದಲ್ಲಿ ಎಲ್ಲ ನಡೆದಿವೆ. ಈಗ ನಿವೇಶನ ವಾಪಸು ಕೊಡ್ತೀನಿ ಅಂತ ಹೇಳಿದ್ದೀರಿ. ತಪ್ಪು ಮಾಡಿ ವಾಪಸು ಕೊಟ್ರೆ ಕಾನೂನು ಬಾಹಿರ ಚಟುವಟಿಕೆ ಮುಚ್ಚಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | BJP-JDS Padayatra: ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ನಿಲ್ಲಲ್ಲ: ಸಿಎಂ, ಡಿಸಿಎಂ ವಿರುದ್ಧ ಬಿಎಸ್‌ವೈ ಗುಡುಗು

ಯತೀಂದ್ರನಿಗೆ ಕಮಿಟಿಗೆ ಸದಸ್ಯ ಮಾಡಿದರು. ಜನಸಂಪರ್ಕ ಸಭೆಯಲ್ಲಿ ಅಪ್ಪಯ್ಯ ಅಪ್ಪಯ್ಯ ನಾನೇ ಕೊಟ್ಟಿದ್ದು ಐದೇ ಅಂತ ಯತೀಂದ್ರ ಹೇಳಿದರು. ಆ ಮೇಲೆ ಎರಡು ಗಂಟೆ ಮಾಧ್ಯಮಗಳ ಮುಂದೆ ಬರಲಿಲ್ಲ. ಆ ಮೇಲೆ ಅದು ಸಿಎಸ್ಆರ್ ಫಂಡ್ ಅಂತ ನಮ್ಮ ಶಿವಮೊಗ್ಗ ಸ್ನೇಹಿತರು ಹೇಳಿದರು. ನನ್ನ ಪುತ್ರನನ್ನ ರಾಜಕೀಯವಾಗಿ ಬೆಳೆಸಲು ರೇವಣ್ಣ ಪುತ್ರನನ್ನು ಜೈಲಿಗೆ ಕಳುಹಿಸಿದರು ಅಂತ ಹೇಳಿದ್ದೀರಿ ಎಂದು ಕಿಡಿಕಾರಿದರು.

ಈ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹೇಳುತ್ತೇನೆ, ನನ್ನ ಕುಟುಂಬದ ವಿರುದ್ಧ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದ ಅವರು, ಸಿದ್ದರಾಮಯ್ಯ ಅವರೇ ಯಡಿಯೂರಪ್ಪ ಅವರ ಫೋಟೊ ಹಾಕಿಕೊಂಡು ನೀವು ಪೂಜೆ ಮಾಡಬೇಕು. ಬಿಜೆಪಿ, ಕೆಜೆಪಿ, ಜೆಡಿಎಸ್ ನಡುವೆ ವೋಟ್ ಡಿವೈಡ್ ಆಗಿದ್ದರಿಂದ ನೀವು ಸಿಎಂ ಆಗಲು ಸಾಧ್ಯವಾಯಿತು.
1983ರಲ್ಲಿ ನಾನು ಡೆಪಾಸಿಟ್ ಕಟ್ಟೊಕೆ ದುಡ್ಡಿಲ್ಲ ಎಂದಿದ್ದಾರೆ, ಆದರೆ ಆ ದುಡ್ಡು ಕಟ್ಟಿದ್ದು ಜಿ.ಟಿ. ದೇವೇಗೌಡ. ಹೋಗಲಿ ಜನತಾ ಪರಿವಾರದಿಂದ ಒಬ್ಬರ ಹೆಸರು ಆದರೂ ಹೇಳಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

20 ತಿಂಗಳ ಬಳಿಕ ನಾನು ಸಿಎಂ ಸ್ಥಾನ ಬಿಟ್ಟು ಕೊಡಬೇಕು ಎಂದು ನಿರ್ಧಾರ ಮಾಡಿದ್ದೆ, ಆದರೆ ಕಾರಣಾಂತರಗಳಿಂದ ಆಗಲಿಲ್ಲ. ಇದನ್ನು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿಂತುಕೊಂಡು ಹೇಳ್ತಿದ್ದೇನೆ. ಯಡಿಯೂರಪ್ಪ ಅವರು ಜತೆ ಹೋದಾಗ ನನಗೆ ಸಮಸ್ಯೆ ಆಗಲಿಲ್ಲ, ಆದರೆ ನೀವು ಹೆಜ್ಜೆ ಹೆಜ್ಜೆಗೂ ಸಮಸ್ಯೆ ಕೊಟ್ಟಿದ್ದೀರಿ. ಮೋದಿ ಕರೆದು ನೀವು ಸಿಎಂ ಆಗಿ ಎಂದಿದ್ದರು. ಆದರೆ, ನಾನು ಸರ್ಕಾರ ತೆಗೆಯಲ್ಲ ನೀವೇ ತೆಗೆಯಬೇಕು ಅಂತ ಹೇಳಿದ್ದೆ ಎಂದು ತಿಳಿಸಿದರು.

ನಾನು ಏನು ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ಕೊಡಲಿ? ನನ್ನ ಮತ್ತು ಯಡಿಯೂರಪ್ಪ ವಿರುದ್ಧ ನಡೆದ ರಾಜಕೀಯ ಸಂಘರ್ಷದಲ್ಲಿ ಕೇಸ್ ಆಗಿವೆ. ನಾನು ಸಹಿ ಹಾಕಿಲ್ಲ, ಯಾವುದೋ ಅಧಿಕಾರಿ ಹಾಕಿದ್ದು. ಸಿದ್ದರಾಮಯ್ಯ ನಿಮ್ಮ ರಾಜಕೀಯ ಜೀವನ ತೆರೆದ ಪುಸ್ತಕ ಎಂದು ಹೇಳಿದ್ದೀರಿ, ರೀಡೂ ಕೇಸ್ ತೆಗೆಯಿರಿ, ಕೆಂಪಣ್ಣ ರಿಪೋರ್ಟ್ ಟೇಬಲ್ ಮಾಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ | CM Siddaramaiah: ನಮಗೆ ಮನೇಲಿ ತಂಗಳು ಇರ್ತಿತ್ತು, ಇಡ್ಲಿ-ದೋಸೆ ಇರ್ತಿಲಿಲ್ಲ ಎಂದ ಸಿಎಂ

ಈ ಸರ್ಕಾರ ತೆಗೆಯಲು ಎರಡು ಪಕ್ಷಗಳ ಕಾರ್ಯಕರ್ತರ ಸಹಕಾರ ಅಗತ್ಯ. ನಾವು ಒಗ್ಗಟ್ಟಾಗಿ ಹೋಗಬೇಕು. ಈ ಸರ್ಕಾರ ತೆಗೆಯುವವರೆಗೂ ನನ್ನ ಹೋರಾಟ ಮುಂದುವರೆಯುತ್ತೆ ಎಂದು ಹೇಳಿದರು.

Continue Reading
Advertisement
Actor Chetan Ahimsa
ಕರ್ನಾಟಕ4 mins ago

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Hindu Population
ದೇಶ24 mins ago

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Kashmir Encounter
ದೇಶ45 mins ago

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Parsis Olympics 2024
ಕ್ರೀಡೆ55 mins ago

Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

BJP-JDS Padayatra
ಕರ್ನಾಟಕ1 hour ago

BJP-JDS Padayatra: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ನಮ್ಮ ಹೋರಾಟ ಎಂದ ವಿಜಯೇಂದ್ರ

ಮಳೆ1 hour ago

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

ಪ್ರಮುಖ ಸುದ್ದಿ2 hours ago

Vinesh Phogat : ವಿನೇಶ್​ ಫೋಗಟ್​ಗೆ ಅನ್ಯಾಯವಾಗಿದೆ ಎಂದ ಆರ್​. ಅಶ್ವಿನ್​; ಅಥ್ಲೀಟ್​ಗಳ ಸಮಸ್ಯೆ ವಿವರಿಸಿದ ಸ್ಪಿನ್ನರ್​

TV Somanathan
ದೇಶ2 hours ago

TV Somanathan: ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ; ಯಾರಿವರು?

ಮೈಸೂರು2 hours ago

BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Hindus in Bangla
ವಿದೇಶ2 hours ago

Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌