Saina Nehwal : ನನ್ನ ಸ್ಮ್ಯಾಶ್​ ತಡೆಯಲು ಬುಮ್ರಾಗೆ ಸಾಧ್ಯವಿಲ್ಲ; ಕ್ರಿಕೆಟ್​ಗೆ ಹೆಚ್ಚು ಆದ್ಯತೆ ಬಗ್ಗೆ ತಕರಾರು ಎತ್ತಿದ ಸೈನಾ ನೆಹ್ವಾಲ್​ - Vistara News

ಪ್ರಮುಖ ಸುದ್ದಿ

Saina Nehwal : ನನ್ನ ಸ್ಮ್ಯಾಶ್​ ತಡೆಯಲು ಬುಮ್ರಾಗೆ ಸಾಧ್ಯವಿಲ್ಲ; ಕ್ರಿಕೆಟ್​ಗೆ ಹೆಚ್ಚು ಆದ್ಯತೆ ಬಗ್ಗೆ ತಕರಾರು ಎತ್ತಿದ ಸೈನಾ ನೆಹ್ವಾಲ್​

Saina Nehwal : ಕ್ರಿಕೆಟ್ ಮತ್ತು ಇತರ ಭಾರತೀಯ ಕ್ರೀಡೆಗಳ ನಡುವಿನ ಅಸಮಾನತೆ ಕಡಿಮೆಯಾಗಿ ಕ್ರೀಡಾಪಟುಗಳಿಗೆ ಉತ್ತಮ ಸೌಲಭ್ಯಗಳನ್ನು ನೀಡಿದರೆ, ಅವರು ದೇಶಕ್ಕೆ ಹೆಚ್ಚಿನ ಪದಕ ತರಲು ಸಾಧ್ಯವಾಗುತ್ತದೆ ಎಂದು ಸೈನಾ ನೆಹ್ವಾಲ್ ಗಮನಸೆಳೆದರು.

VISTARANEWS.COM


on

Saina Nehwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : 2012 ರ ಲಂಡನ್ ಒಲಿಂಪಿಕ್ಸ್​​ನಲ್ಲಿ ಕಂಚಿನ ಪದಕ ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ (Saina Nehwal), ಭಾರತದಲ್ಲಿ ಇತರ ಕ್ರೀಡೆಗಳಿಗಿಂತ ಕ್ರಿಕೆಟ್ ಗೆ ಹೆಚ್ಚಿನ ಸೌಲಭ್ಯಗಳು ಮತ್ತು ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮತ್ತೊಮ್ಮೆ ತಕರಾರರು ತೆಗೆದಿದ್ದಾರೆ. ಇತ್ತೀಚೆಗೆ, ಕೆಕೆಆರ್​ನ ಯುವ ಬ್ಯಾಟರ್​​ ಆಂಗ್ರಿಶ್ ರಘುವಂಶಿ ಅವರು ಸೈನಾ ನೆಹ್ವಾಲ್ ಅವರನ್ನು ಅಣಕಿಸುವ ಟ್ವೀಟ್ ಮಾಡಿದ್ದರು. ಅದರಿಂದ ಬೇಸರಗೊಂಡಿರುವ ನೆಹ್ವಾಲ್​ ಪರೋಕ್ಷವಾಗಿ ಕ್ರಿಕೆಟ್​ ಕ್ಷೇತ್ರಕ್ಕೆ ಟಾಂಗ್ ಕೊಟ್ಟಿದ್ದಾರೆ. ಕ್ರಿಕೆಟರ್​ಗಳಿಂತ ಉಳಿದ ಕ್ರೀಡಾಕೂಟಗಳ ಆಟಗಾರರೇ ಹೆಚ್ಚು ಶ್ರಮ ವಹಿಸುತ್ತಾರೆ. ನನ್ನ ಸ್ಮ್ಯಾಶ್ ತಡೆದುಕೊಳ್ಳುವುದಕ್ಕೂ ಜಸ್​ಪ್ರಿತ್​​ ಬುಮ್ರಾಗೆ ಸಾಧ್ಯವಿಲ್ಲ ಎಂಬುದಾಗಿ ಹೇಳಿದ್ದಾರೆ.

“ವಿರಾಟ್ ಕೊಹ್ಲಿ ಆ ಮಟ್ಟದಲ್ಲಿ ಬೆಳೆದಿದ್ದು ಹೇಗೆ? ಎಲ್ಲರೂ ಏಕೆ ರೋಹಿತ್ ಶರ್ಮಾ ರೀತಿ ಆಗಲು ಬಯಸುತ್ತಾರೆ. ಆದರೆ ಕೆಲವರಿಗಷ್ಟೇ ಆ ರೀತಿ ಆಗಲು ಸಾಧ್ಯವಾಗುತ್ತದೆ. ಅದು ಕೌಶಲ್ಯ ಆಧಾರಿತ ಕ್ರೀಡೆ ಎಂದು ನಾನು ಭಾವಿಸುತ್ತೇನೆ. ನಾನ್ಯಾಕೆ ಬೌಲರ್​ಗಳನ್ನು ಎದುರಿಸಬೇಕು ಎಂದು ಸೈನಾ ಪ್ರಶ್ನಿಸಿದ್ದಾರೆ. (ಅಂಗ್​ಕ್ರಿಶ್​ ಸೈನಾ ಅವರನ್ನು ಲೇವಡಿ ಮಾಡುವ ಭರದಲ್ಲಿ ಬುಮ್ರಾ ಅವರ ಬೌಲಿಂಗ್ ಎದುರಿಸಲಿ ಎಂದು ಸವಾಲೊಡ್ಡಿದ್ದರು) ನಾನು 8 ವರ್ಷಗಳಿಂದ ಆಡುತ್ತಿದ್ದರೆ, ಬಹುಶಃ ನಾನು ಜಸ್ಪ್ರೀತ್ ಬುಮ್ರಾಗೆ ಉತ್ತರಿಸುತ್ತಿದ್ದೆ”ಎಂದು ಸೈನಾ ನೆಹ್ವಾಲ್ ಶುಭಂಕರ್ ಮಿಶ್ರಾ ಅವರ ಪಾಡ್​ಕಾಸ್ಟ್​​ನಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಇತ್ತೀಚೆಗೆ ರಾಜಕಾರಣಿಯಾಗಿ ಮಾರ್ಪಟ್ಟ ಸೈನಾ ನೆಹ್ವಾಲ್, ದೇಶದಲ್ಲಿ ಇಂತಹ ವಿಷಯಗಳಿಗಾಗಿ ಪೈಪೋಟಿ ಮಾಡಬಾರದು. ಪ್ರತಿಯೊಂದು ಕ್ರೀಡೆಯೂ ಪ್ರವರ್ಧಮಾನಕ್ಕೆ ಬರಲು ಅವಕಾಶ ಇರಬೇಕು ಎಂದು ಹೇಳಿದರು.

“ಜಸ್ಪ್ರೀತ್ ಬುಮ್ರಾ ನನ್ನೊಂದಿಗೆ ಬ್ಯಾಡ್ಮಿಂಟನ್ ಆಡಿದರೆ ಬಹುಶಃ ಅವರು ನನ್ನ ಸ್ಮಾಶ್ ತೆಗೆದುಕೊಳ್ಳಲು ಸಾಧ್ಯವೇ ಆಗುವುದಿಲ್ಲ. ಈ ವಿಷಯಗಳಿಗಾಗಿ ನಾವು ನಮ್ಮ ಸ್ವಂತ ದೇಶದಲ್ಲಿ ನಮ್ಮೊಂದಿಗೆ ಜಗಳವಾಡಬಾರದು. ಅದನ್ನೇ ನಾನು ಹೇಳಲು ಬಯಸುತ್ತೇನೆ. ಪ್ರತಿಯೊಂದು ಕ್ರೀಡೆಯೂ ಅದರ ಸ್ಥಾನದಲ್ಲಿ ಅತ್ಯುತ್ತಮವಾಗಿದೆ. ಆದರೆ ಇತರ ಕ್ರೀಡೆಗಳಿಗೂ ಮೌಲ್ಯ ನೀಡಿ ಎಂದು ನಾನು ಹೇಳಲು ಬಯಸುತ್ತೇನೆ. ಇಲ್ಲದಿದ್ದರೆ, ನಾವು ಕ್ರೀಡಾ ಸಂಸ್ಕೃತಿಯನ್ನು ಎಲ್ಲಿಂದ ಬೆಳೆಸುತ್ತೇವೆ. ಕ್ರಿಕೆಟ್, ಬಾಲಿವುಡ್ ಯಾವಾಗಲೂ ನಮ್ಮ ಉದ್ದೇಶವಾಗಿರುತ್ತದೆ ಎಂದು 2012 ರ ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಹೇಳಿದರು.

ಇದನ್ನೂ ಓದಿ: Neeraj Chopra : ನೀರಜ್ ಚೋಪ್ರಾ ಭೇಟಿಯಾದ ಫುಟ್ಬಾಲ್ ತಂಡದ ನಾಯಕ ಸುನೀಲ್ ಛೆಟ್ರಿ

ಕ್ರಿಕೆಟ್ ಮತ್ತು ಇತರ ಭಾರತೀಯ ಕ್ರೀಡೆಗಳ ನಡುವಿನ ಅಸಮಾನತೆ ಕಡಿಮೆಯಾಗಿ ಕ್ರೀಡಾಪಟುಗಳಿಗೆ ಉತ್ತಮ ಸೌಲಭ್ಯಗಳನ್ನು ನೀಡಿದರೆ, ಅವರು ದೇಶಕ್ಕೆ ಹೆಚ್ಚಿನ ಪದಕ ತರಲು ಸಾಧ್ಯವಾಗುತ್ತದೆ ಎಂದು ಸೈನಾ ನೆಹ್ವಾಲ್ ಗಮನಸೆಳೆದರು.

“ನಮ್ಮಲ್ಲಿ ಎಷ್ಟು ಬ್ಯಾಡ್ಮಿಂಟನ್ ಅಕಾಡೆಮಿಗಳಿವೆ? ಕ್ರಿಕೆಟ್​ನಲ್ಲಿ ಎಷ್ಟು ಇಲ್ಲ ಎಂದು ಯೋಚಿಸಿ… ಬ್ಯಾಡ್ಮಿಂಟನ್​ಗಾಗಿ ಅತ್ಯುತ್ತಮ ಸೌಲಭ್ಯಗಳಿರುವ ಅನೇಕ ಅಕಾಡೆಮಿಗಳು ಇದ್ದರೆ ನಾವು ಗುಣಮಟ್ಟದ ಆಟಗಾರರನ್ನು ಪಡೆಯಲು ಸಾಧ್ಯ ಎಂಬುದಾಗಿ ಅವರು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್‌ ಹೆಡ್‌ಫೋನ್; ಹೇಗಂತೀರಾ?

Trainee Doctor: ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ, ಈ ಕೊಲೆಯ ಆರೋಪಿಯನ್ನು ಬಂಧಿಸಲು ಒಂದು ಬ್ಲ್ಯೂಟೂತ್‌ ಹೆಡ್‌ಫೋನ್‌ ಎಂದರೆ ನಂಬಲೇಬೇಕು.

VISTARANEWS.COM


on

Trainee Doctor
Koo

ಕೋಲ್ಕೊತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕೊತಾ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರೈನಿ ಮಹಿಳಾ ವೈದ್ಯೆಯ (Kolkata Trainee Doctor) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಮಹಿಳಾ ವೈದ್ಯೆಯ ಹತ್ಯೆಗೂ ಮುನ್ನವೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು ಎಂಬ ಮಾಹಿತಿಯು ಮರಣೋತ್ತರ ಪರೀಕ್ಷೆ ವರದಿಯಲ್ಲಿ (Post Mortem Report) ಬಹಿರಂಗವಾಗಿದೆ. ಇದರ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಈ ಆರೋಪಿಯ ಬಂಧನಕ್ಕೆ ಕಾರಣವಾಗಿದ್ದು ಒಂದು ಬ್ಲ್ಯೂಟೂತ್‌ ಹೆಡ್‌ಸೆಟ್‌ ಎಂಬುದು ಗಮನಾರ್ಹ ಸಂಗತಿಯಾಗಿದೆ.

ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ 31 ವರ್ಷದ ಮಹಿಳೆಯು ಕಳೆದ ಗುರುವಾರ (ಆಗಸ್ಟ್‌ 8) ಆರ್‌ ಕೆ ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಅಧ್ಯಯನ ಮಾಡಲು ಹೋಗಿದ್ದ ಹತ್ಯೆಗೀಡಾಗಿದ್ದರು. ಶುಕ್ರವಾರ ಬೆಳಗ್ಗೆ ಮಹಿಳಾ ವೈದ್ಯೆಯ ಶವವು ಅರೆಬೆತ್ತಲೆ ಪತ್ತೆಯಾಗಿದೆ. ಶವ ಪತ್ತೆಯಾದ ಜಾಗದಲ್ಲಿ ಬ್ಲ್ಯೂಟೂತ್‌ ಹೆಡ್‌ಫೋನ್‌ ಒಂದು ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧಿಸಿದ್ದು ಹೇಗೆ?

ಕೊಲೆ ಪ್ರಕರಣ ಬಯಲಾದ ಬಳಿಕ ಪೊಲೀಸರು ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಕೊಲೆ ನಡೆದ ಸೆಮಿನಾರ್‌ ಹಾಲ್‌ ಬಳಿಯಲ್ಲಿ ಸಂಜಯ್‌ ರಾಯ್‌ ಎಂಬ ಆರೋಪಿಯು ಅದೇ ರಾತ್ರಿ ಸಂಶಯಾಸ್ಪದವಾಗಿ ಓಡಾಡಿದ್ದಾನೆ. ಅಲ್ಲದೆ, ಶುಕ್ರವಾರ ಬೆಳಗಿನ ಜಾವ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಇದಾದ ಬಳಿಕ ಶಂಕಿತ ಆರೋಪಿಗಳ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಬೈಲ್‌ಗಳನ್ನು ವಶಪಡಿಸಿಕೊಂಡು, ಆ ಬ್ಲ್ಯೂಟೂತ್‌ ಹೆಡ್‌ಫೋನ್‌ ಜತೆ ಪೇರ್‌ (Pair) ಮಾಡಿದ್ದಾರೆ. ಆಗ ಸಂಜಯ್‌ ರಾಯ್‌ನ ಮೊಬೈಲ್‌ ಹೆಡ್‌ಫೋನ್‌ಗೆ ಕನೆಕ್ಟ್‌ ಆಗಿದೆ.

“ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕೋಲ್ಕೊತಾ ಪೊಲೀಸ್‌ ಆಯುಕ್ತ ವಿನೀತ್‌ ಕುಮಾರ್‌ ಗೋಯಲ್‌ ಈಗಾಗಲೇ ತಿಳಿಸಿದ್ದಾರೆ.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

Continue Reading

ಕರ್ನಾಟಕ

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Actor Chetan Ahimsa: ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅವರಂಥವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ. ನಮ್ಮ ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ನಟ ಚೇತನ್‌ ಹೇಳಿದ್ದಾರೆ.

VISTARANEWS.COM


on

Actor Chetan Ahimsa
Koo

ಬೆಂಗಳೂರು: 4 ದಶಕಗಳಿಂದ ರಾಜಕೀಯದಲ್ಲಿದ್ದರೂ ನನಗೆ ಮೈಸೂರಿನಲ್ಲಿ ಸ್ವಂತ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿಕಾರಿದ್ದಾರೆ. ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅವರಂತಹವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ನಟ ಚೇತನ್‌ ಅಹಿಂಸಾ (Actor Chetan Ahimsa) ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಲ್ಲಿ ಪ್ರತಿಕ್ರಿಯಿಸಿರುವ ಅವರು, 52 ಕೋಟಿ ಆಸ್ತಿ ಘೋಷಿಸಿದ್ದರೂ, ಸ್ವಂತ ಮನೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಪರ್ಯಾಸವೆಂದರೆ, ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್‌ನಲ್ಲಿನ ಅವರ ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅವರಂಥವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ. ನಮ್ಮ ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ನ್ಯಾಯದ ಪರಿಕಲ್ಪನೆ ಇಲ್ಲ, ಎಸ್‌ಸಿಎಸ್‌ಪಿ, ಟಿ.ಎಸ್.ಪಿ. ಯೋಜನೆಯ ಮೀಸಲು ಹಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಮಾನ್ಯ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದರಿಂದ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿ ಕುಂಠಿತವಾಗಿದೆ. ಈ ಅಸಮಾನತೆಯ ವ್ಯವಸ್ಥೆಯಲ್ಲಿ ಕಾಂಗ್ರೆಸ್ ಪಕ್ಷ ಮನುವಾದಿ, ಅಸಮಾನತಾವಾದಿ, ಶ್ರೀಮಂತರ ಪರವಾಗಿರುವ ಪಕ್ಷವಾಗಿದೆ. ಈ ಪಕ್ಷದಲ್ಲಿ ಬೆಳೆದಿರುವ ಸಚಿವ ಎಚ್‌.ಸಿ.ಮಹದೇವಪ್ಪ ಸೇರಿ ಹಲವರು, ದಲಿತರು, ಆದಿವಾಸಿಗಳಿಗೆ ಉದ್ದೇಶಪೂರ್ವಕವಾಗಿಯೇ ದ್ರೋಹ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಎಸ್‌ಸಿಎಸ್‌ಸಿ, ಟಿಎಸ್‌ಪಿ ಅನುದಾನ ಇರುವುದು ಗುಡಿಸಿನಲ್ಲಿರುವವರಿಗೆ ಮನೆ, ಶಿಕ್ಷಣ ರಸ್ತೆ, ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ. ಆದರೆ ಕಳೆದ ವರ್ಷ 12,500 ಕೋಟಿ, ಈ ವರ್ಷ 14,500 ಸಾವಿರ ಕೋಟಿ ದಲಿತರು, ಆದಿವಾಸಿಗಳ ಹಣ ಕಿತ್ತುಕೊಂಡು ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ, ಸಿಎಂಗೆ ನ್ಯಾಯದ ಪರಿಕಲ್ಪನೆ ಗೊತ್ತೇ ಇಲ್ಲ. ಪರಿವರ್ತನೆ ಮನಸ್ಥಿತಿ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ | Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

ಪ್ರಕಾಶ್‌ ರೈ ವಿರುದ್ಧ ಅಹಿಂಸಾ ಚೇತನ್‌ ಕಿಡಿ; ಮೋದಿ ಪರ ಬ್ಯಾಟಿಂಗ್ ಮಾಡಿ ʼರೈ ಅಜ್ಞಾನಿʼ ಎಂದ ನಟ

vinesh phogat praksah raj ahimsa chetan
vinesh phogat praksah raj ahimsa chetan

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಯಾವಾಗಲೂ ಕಿಡಿ ಕಾರುತ್ತಿದ್ದ ನಟ ಚೇತನ್‌ ಅಹಿಂಸಾ (Chetan Ahimsa), ಇದೀಗ ಮೋದಿಯವರ ಪರ ಸೋಶಿಯಲ್‌ ಮೀಡಿಯಾ (Social Media) ಪೋಸ್ಟ್‌ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಜೊತೆಗೆ, ವಿನೇಶ್‌ ಫೋಗಟ್‌ (Vinesh Phogat) ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ (Prakash raj) ನಿಲುವಿನ ವಿರುದ್ಧ ಕಿಡಿ ಕಾರಿದ್ದಾರೆ.

50 ಕಿಲೋಗಿಂತ 100 ಗ್ರಾಂ ತೂಕ ಹೆಚ್ಚಳವಾದ ಹಿನ್ನೆಲೆ ಪ್ಯಾರಿಸ್ ಒಲಿಂಪಿಕ್ಸ್‌-2024ರ ಫೈನಲ್‌ ಕುಸ್ತಿ ಪಂದ್ಯದಿಂದ ಹೊರ ಬಿದ್ದ ವಿನೇಶ್‌ ಫೋಗಟ್ ಪರ, ಮೋದಿ ವಿರುದ್ಧ ಪೋಸ್ಟ್‌ ಹಾಕಿದ್ದ ಪ್ರಕಾಶ್‌ ರೈ ನಡೆಯನ್ನು ಚೇತನ್‌ ಟೀಕಿಸಿದ್ದಾರೆ. ಅದರಲ್ಲೂ ಮೋದಿ ಪರ ನಿಂತ ಅಹಿಂಸಾ ಚೇತನ್​ ನಿಲುವು ನೋಡಿ ತುಂಬಾ ಮಂದಿ ಅಚ್ಚರಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಿನ್ನೆ ಪ್ರಕಾಶ್​ ರಾಜ್​ ಕಾರ್ಟೂನ್​ ಶೇರ್ ಮಾಡಿಕೊಂಡಿದ್ದರು. ಇದರಲ್ಲಿ ಕುಸ್ತಿಪಟು ವಿನೇಶ್​ ಫೋಗಟ್ ಅವರು ನಿಂತಿರುವ ತೂಕದ ಯಂತ್ರದ ಮೇಲೆ ನಿಂತಿದ್ದು, ಅವರ ಹಿಂಭಾಗದಲ್ಲಿ ಮತ್ತೊಬ್ಬರು ಕಾಲಿನ ಒಂದು ಬೆರಳನ್ನಿಟ್ಟು 100 ಗ್ರಾಮ್ ತೂಕ ಹೆಚ್ಚಾಗುವಂತೆ ಮಾಡಿದ್ದಾರೆ. ಹಿಂದಿರುವ ವ್ಯಕ್ತಿ ಪ್ರಧಾನಿ ಮೋದಿ ಎಂದು ಚಿತ್ರ ಸೂಚಿಸುವಂತಿದೆ. ಮೋದಿಯೇ ವಿನೇಶ್ ಫೋಗಟ್ ಕುಸ್ತಿ ಚಿನ್ನದ ಪದಕದಿಂದ ವಂಚಿತರಾಗಲು ಕಾರಣವಾಗಿದ್ದಾರೆ ಎಂದು ಅರ್ಥ ಬರುವಂತೆ ಈ ಟ್ವೀಟ್ ಶೇರ್ ಮಾಡಿದ್ದರು.

ಇದಕ್ಕೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಅಹಿಂಸಾ ಚೇತನ್​ ಕಿಡಿಕಾರಿದ್ದಾರೆ. ʼವಿನೇಶ್ ಫೋಗಟ್ ಅನರ್ಹತೆಗೆ ಪ್ರಧಾನಿ ಮೋದಿ ಕಾರಣ ಎಂದು ಪ್ರಕಾಶ್ ರೈ ಪೋಸ್ಟ್ ಸಜೆಸ್ಟ್ ಮಾಡುತ್ತದೆ. ಇದು ಸಣ್ಣತನ. ಭಾರತದ ಎಲ್ಲಾ ಲಾಭಗಳಿಗೆ ಮೋದಿಯನ್ನು ಕುರುಡಾಗಿ ಹೊಗಳುವವರು ಹೇಗೆ ಅಜ್ಞಾನಿಗಳೋ, ಹಾಗೆಯೇ ಭಾರತದ ಎಲ್ಲಾ ಸಮಸ್ಯೆಗಳನ್ನು ಮೋದಿಯ ಮೇಲೆ ದೂಷಿಸುವ ರೈ ಅವರಂತಹವರೂ ಅಜ್ಞಾನಿಗಳಾಗಿದ್ದಾರೆ. ಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಟ್ವೀಟ್‌ನಲ್ಲಿ ಚೇತನ್ ಬರೆದಿದ್ದಾರೆ.

ಇಬ್ಬರು ನಟರ ಈ ಟ್ವೀಟ್ಟ್‌ಗಳು ಇದೀಗ ವೈರಲ್ ಆಗುತ್ತಿವೆ. ನೆಟ್ಟಿಗರು ಚೇತನ್ ಕಮೆಂಟ್​ಗೂ ಪರ-ವಿರೋಧ ಕಮೆಂಟ್ ಮಾಡುತ್ತಿದ್ದಾರೆ. ಪ್ರಕಾಶ್ ರಾಜ್​ ಕೆಟ್ಟ ಹೋರಾಟಗಾರ ಎನ್ನುವುದು ಸರಿಯಲ್ಲ ಎಂದಿದ್ದಾರೆ. ವಿನೇಶ್ ಫೋಗಟ್ ಅನರ್ಹತೆಗೆ ಪ್ರಕಾಶ್ ರಾಜ್ ಎಲ್ಲಿಯೂ ಮೋದಿ ಹೆಸರನ್ನು ಮೆನ್ಷನ್ ಮಾಡಿಲ್ಲ. ಆದರೆ ನೀವೇ ಮೋದಿ ಎಳೆದು ತಂದಿದ್ದೀರಿ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಕುಸ್ತಿ ಪಂದ್ಯಾಟದ ಮಹಿಳೆಯರ 50 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ 100 ಗ್ರಾಮ್‌ಗಳ ಹೆಚ್ಚುವರಿ ತೂಕದಿಂದಾಗಿ ಪ್ಯಾರಿಸ್ ಒಲಿಂಪಿಕ್‌ನಲ್ಲಿ ಕುಸ್ತಿಪಟು ವಿನೇಶ್ ಫೋಗಟ್‌ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ತಮ್ಮ ಅರ್ಧ ವರ್ಷದ ತರಬೇತಿಯನ್ನು ಕಳೆದುಕೊಂಡಿದ್ದ ವಿನೇಶ್, ತಮಗೆ ದೊರಕಿದ್ದ ಅತ್ಯಲ್ಪ ಸಮಯದಲ್ಲಿಯೇ ತರಬೇತಿ ಪಡೆದುಕೊಂಡು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದರು. ಜೊತೆಗೆ ದೇಶಕ್ಕಾಗಿ ಪದಕ ಗೆಲ್ಲುವ ಮಹದಾಸೆ ಇರಿಸಿಕೊಂಡಿದ್ದರು.

ಇದನ್ನೂ ಓದಿ: Prakash Raj:‌ ವಿನೇಶ್‌ ಫೋಗಟ್‌ ಅನರ್ಹತೆಗೆ ಮೋದಿ ಕಾರಣ ಎಂಬಂತೆ ಪ್ರಕಾಶ್ ರಾಜ್‌ ಪೋಸ್ಟ್;‌ ಜನರಿಂದ ರೋಸ್ಟ್!

Continue Reading

ದೇಶ

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Hindu Population: ಅಸ್ಸಾಂ ಹಾಗೂ ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಬದಲಾವಣೆಯಾಗಿರುವ ಕುರಿತು 2011ರ ಜನಗಣತಿಯ ಮಾಹಿತಿಯೇ ಹೇಳುತ್ತದೆ ಎಂಬುದಾಗಿ ಹಿಮಂತ ಬಿಸ್ವಾ ಶರ್ಮಾ ಅವರು ಮತ್ತೆ ಹಿಂದುಗಳ ಜನಸಂಖ್ಯೆ ಕುಂಠಿತವಾಗಿರುವ ಕುರಿತ ಚರ್ಚೆಗೆ ಇಂಬು ನೀಡಿದ್ದಾರೆ.

VISTARANEWS.COM


on

Hindu Population
Koo

ದಿಸ್ಪುರ: ಭಾರತದಲ್ಲಿ ಕೆಲ ದಶಕಗಳಿಂದ ಹಿಂದುಗಳ ಜನಸಂಖ್ಯೆಯು (Hindu Population) ಕಡಿಮೆಯಾಗಿದೆ ಎಂಬ ವರದಿಗಳು ಇತ್ತೀಚೆಗೆ ಕೇಳಿಬಂದು, ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಇದರ ಬೆನ್ನಲ್ಲೇ, ಅಸ್ಸಾಂನಲ್ಲಿ ಹಿಂದುಗಳ ಜನಸಂಖ್ಯೆಯು ಕಡಿಮೆಯಾಗಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

“ಅಸ್ಸಾಂ ಹಾಗೂ ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಬದಲಾವಣೆಯಾಗಿರುವ ಕುರಿತು 2011ರ ಜನಗಣತಿಯ ಮಾಹಿತಿಯೇ ಹೇಳುತ್ತದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ನಲ್ಲೂ ಇದೇ ಪರಿಸ್ಥಿತಿ ಇದೆ. ಜನಗಣತಿ ದಾಖಲೆ ಪ್ರಕಾರ, ಅಸ್ಸಾಂನಲ್ಲಿ 1951ರಿಂದ 2011ರ ಅವಧಿಯಲ್ಲಿ ಹಿಂದು ಜನಸಂಖ್ಯೆಯ ಪ್ರಮಾಣವು ಶೇ.9.23ರಷ್ಟು ಕಡಿಮೆಯಾಗಿದೆ. ಬಾಂಗ್ಲಾದೇಶದಲ್ಲಂತೂ ಹಿಂದುಗಳ ಸ್ಥಿತಿ ಕಷ್ಟಕರವಾಗಿದ್ದು, ಶೇ.13.5ಕ್ಕೆ ಇಳಿಕೆಯಾಗಿದೆ” ಎಂಬುದಾಗಿ ವರದಿ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದಾಳಿ ನಡೆಸುತ್ತಿರುವ ಕುರಿತು ಮಾತನಾಡಿದ ಅವರು, “ಬಾಂಗ್ಲಾದೇಶದಲ್ಲಿ ಹಿಂದುಗಳ ಸ್ಥಿತಿಯು ಚಿಂತಾಜನಕವಾಗಿದೆ. ಗಾಜಾದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಲಾಗಿದೆ ಎಂಬುದಾಗಿ ದೇಶದಲ್ಲಿ ಪ್ರತಿಭಟನೆ ನಡೆಸಿದರು. ಆದರೆ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಆಗುತ್ತಿರುವ ದಾಳಿಗಳ ಕುರಿತು ಪ್ರತಿಪಕ್ಷಗಳ ನಾಯಕರು ಮಾತನಾಡುವುದಿಲ್ಲ. ಜಗತ್ತಿನ ಮುಸ್ಲಿಮರ ಬಗ್ಗೆ ಕಾಳಜಿ ತೋರುವ ಕಾಂಗ್ರೆಸ್‌, ಹಿಂದುಗಳ ಬಗ್ಗೆ ಯಾವುದೇ ಕಾಳಜಿ ತೋರುವುದಿಲ್ಲ” ಎಂದರು.

ಕೆಲ ದಿನಗಳ ಹಿಂದೆಯೂ ಹಿಮಂತ ಬಿಸ್ವಾ ಶರ್ಮಾ ಅವರು ಹಿಂದುಗಳ ಕುರಿತು ಮಾತನಾಡಿದ್ದರು. “ಹಿಂದುಗಳಿಂದ ದೇಶದಲ್ಲಿ ಕೋಮುವಾದ ಸೃಷ್ಟಿಯಾಗುವುದಿಲ್ಲ. ದೇಶದಲ್ಲಿ ಬಾಂಗ್ಲಾದೇಶ ಮೂಲದ ಧರ್ಮವು (ಇಸ್ಲಾಂ) ಕೋಮುವಾದ ಸೃಷ್ಟಿಸುತ್ತದೆ. ಇದಕ್ಕೆ ಲೋಕಸಭೆ ಚುನಾವಣೆಯೇ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದರು. ಅಸ್ಸಾಂನಲ್ಲಿ ಯಾವ ಧರ್ಮದವರು ಯಾವ ಪಕ್ಷಕ್ಕೆ ಮತ ನೀಡಿದ್ದಾರೆ ಎಂಬುದನ್ನು ವಿಶ್ಲೇಷಿಸುತ್ತ ಅವರು ಹೀಗೆ ಹೇಳಿದ್ದರು.

ಇದನ್ನೂ ಓದಿ: Himanta Sarma: ಹಿಂದು ಅಲ್ಲ, ಆ ಒಂದು ಧರ್ಮದಿಂದ ಕೋಮುವಾದ ಸೃಷ್ಟಿ ಎಂದ ಹಿಮಂತ ಶರ್ಮಾ! ಯಾವುದದು?

Continue Reading

ದೇಶ

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Kashmir Encounter: ಅನಂತನಾಗ್‌ ಜಿಲ್ಲೆಯ ಅಲ್ಹಾನ್‌ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

VISTARANEWS.COM


on

Kashmir Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಸೈನಿಕರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಉಗ್ರರು ಮುಂದುವರಿಸಿದ್ದು, ಅನಂತನಾಗ್‌ ಜಿಲ್ಲೆಯಲ್ಲಿ (Anantnag District) ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯ ವೇಳೆ ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಇದಾದ ಬಳಿಕವೂ ಭದ್ರತಾ ಸಿಬ್ಬಂದಿಯು ಎನ್‌ಕೌಂಟರ್‌ ನಡೆದ ಜಾಗವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಅನಂತನಾಗ್‌ ಜಿಲ್ಲೆಯ ಅಲ್ಹಾನ್‌ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದಾದ ಬಳಿಕವೇ ಹೆಚ್ಚಿನ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ.

“ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿರುವ ಜತೆಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಮುಂದುವರಿಸಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ಉಗ್ರರಾಗಿರಬಹುದು ಎಂದು ಶಂಕಿಸಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ನಂತರವೂ ಉಗ್ರರ ದಾಳಿಗಳು ಮುಂದುವರಿದಿವೆ. ಸೈನಿಕರು, ಸೇನಾ ನೆಲಗಳು, ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Terrorist Attack: ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಸೇನೆ

Continue Reading
Advertisement
BJP-JDS Padayatra
ಕರ್ನಾಟಕ20 mins ago

BJP-JDS Padayatra: ಪರಿಶಿಷ್ಟ, ಒಬಿಸಿಯವರಿಗೆ ಕಾಂಗ್ರೆಸ್‌ನಿಂದ ಸದಾ ಅಪಮಾನ; ಪ್ರಲ್ಹಾದ್‌ ಜೋಶಿ

Independence Day 2024
ದೇಶ24 mins ago

Independence day 2024: ಮೊದಲ ಸ್ವಾತಂತ್ರ್ಯೋತ್ಸವದಲ್ಲಿ ಗಾಂಧೀಜಿಯೇ ಭಾಗವಹಿಸಲಿಲ್ಲ! ಇಲ್ಲಿವೆ ಸ್ವಾತಂತ್ರ್ಯ ದಿನಾಚರಣೆಯ ಕುತೂಹಲಕರ ಸಂಗತಿಗಳು

Shira News
ತುಮಕೂರು33 mins ago

Shira News: ಶ್ರಾವಣದ ಮೊದಲ ಶನಿವಾರ; ಶಿರಾ ತಾಲೂಕಿನಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ

Jitesh Sharma
ಕ್ರೀಡೆ44 mins ago

Jitesh Sharma : ಟೆಕಿ ಜತೆ ಎಂಗೇಜ್ಮೆಂಟ್​ ಮಾಡಿಕೊಂಡ ಜಿತೇಶ್ ಶರ್ಮಾ

Trainee Doctor
ಪ್ರಮುಖ ಸುದ್ದಿ1 hour ago

Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್‌ ಹೆಡ್‌ಫೋನ್; ಹೇಗಂತೀರಾ?

Actor Chetan Ahimsa
ಕರ್ನಾಟಕ2 hours ago

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Hindu Population
ದೇಶ2 hours ago

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Kashmir Encounter
ದೇಶ3 hours ago

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Parsis Olympics 2024
ಕ್ರೀಡೆ3 hours ago

Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

BJP-JDS Padayatra
ಕರ್ನಾಟಕ3 hours ago

BJP-JDS Padayatra: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ನಮ್ಮ ಹೋರಾಟ ಎಂದ ವಿಜಯೇಂದ್ರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌