BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ - Vistara News

ಮೈಸೂರು

BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

BJP-JDS Padayatra: ಈ ಸರ್ಕಾರ ತೆಗೆಯಲು ಎರಡು ಪಕ್ಷಗಳ ಕಾರ್ಯಕರ್ತರ ಸಹಕಾರ ಅಗತ್ಯ. ನಾವು ಒಗ್ಗಟ್ಟಾಗಿ ಹೋಗಬೇಕು. ಈ ಸರ್ಕಾರ ತೆಗೆಯುವವರೆಗೂ ನನ್ನ ಹೋರಾಟ ಮುಂದುವರೆಯುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಸಿಎಂ ಸಿದ್ದರಾಮಯ್ಯ ಜತೆ ಬಂಡೆ ರೀತಿ ನಿಲ್ಲುತ್ತೇನೆ ಅಂತ ಡಿಕೆಶಿ ಹೇಳಿದ್ದಾರೆ. ಆದರೆ, 2018ರಲ್ಲಿ ನನಗೂ ಇದೇ ರೀತಿ ಹೇಲಿ ನನ್ನ ಮೇಲೆ ಬಂಡೆ ಹಾಕಿದ್ದರು. ಈಗ ಸಿದ್ದರಾಮಯ್ಯನ ಕತೆ ಸಹ ಮುಗಿಯಿತು. ನನ್ನ ವಿರುದ್ಧ 50 ಡಿನೋಟಿಫಿಕೇಷನ್ ಪ್ರಕರಣ ಇವೆ, ತನಿಖೆ ಮಾಡುಸುವೆ ಎಂದಿದ್ದಾರೆ. ಮಿಸ್ಟರ್ ಡಿ.ಕೆ. ಶಿವಕುಮಾರ್, ಯಾವ ತನಿಖೆ ಮಾಡಿಸುತ್ತಿಯಾ ಮಾಡ್ಸಪ್ಪ ನೋಡೋಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (BJP-JDS Padayatra) ಸವಾಲು ಹಾಕಿದರು.

ನಗರದಲ್ಲಿ ನಡೆದ ಬೆಂಗಳೂರು-ಮೈಸೂರು ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇನೆಂದು ಹೇಳಿದ್ದಾರೆ. ನಾನು 19 ಸ್ಥಾನ ಅಷ್ಟೇ ಗೆಲ್ಲೋದಕ್ಕೆ ಸಾಧ್ಯವಾಗಿದ್ದು ಅಂತ ಹೇಳಿದ್ದಾರೆ. ಮತ್ತೆ ಲೋಕಸಭೆಯಲ್ಲಿ ಯಾಕೆ ಕಡಿಮೆ ಗೆದ್ರಿ? ರಾಜಕೀಯದಲ್ಲಿ ಏಳುಬೀಳು ಇದ್ದಿದ್ದೆ ಎಂದು ಕಿಡಿಕಾರಿದರು.

ಸಿಎಂ ವಿರುದ್ಧ ಮುಗಿಬಿದ್ದ ಅವರು, ಕಪ್ಪು ಚುಕ್ಕೆ ಇಲ್ಲ ಅಂತ ಹೇಳಿದ್ದಾರೆ. ಸಿದ್ದರಾಮಯ್ಯ ಚಡ್ಡಿಯೆಲ್ಲಾ ಕಪ್ಪು ಚುಕ್ಕೆ ಮಾಡಿಕೊಂಡಿದ್ದಾರೆ. ನಾನು ಸಾಲ ಮಾಡಿ ಚುನಾವಣೆ ಮಾಡಿದ್ದೇನೆ. ಮನೆ ಮಾರಿಕೊಂಡು ಚುನಾವಣೆ ಮಾಡಿದ್ದೇನೆಂದು ಹೇಳಿದ್ದಾರೆ. ನಮಗೆ ನಿಮ್ಮ ಪತ್ನಿ ಮೇಲೆ ಗೌರವವಿದೆ, ನೀವು ಈ ರಾಜ್ಯದ ಮುಖ್ಯಮಂತ್ರಿ. ನೀವು ಹಿಂದುಳಿದ ವರ್ಗಗಳಿಗೆ ಅಷ್ಟೇ ಅಲ್ಲ, ಆರೂವರೆ ಕೋಟಿ ಕನ್ನಡಿಗರಿಗೆ ಸಿಎಂ. ದಾನ ಮಾಡುವುದು ತಪ್ಪಲ್ಲ, ಕಾನೂನಿನ ಪ್ರಕಾರ ದಾನ ಮಾಡಿದ್ದರೆ ನಮ್ಮ ಆಕ್ಷೇಪ ಇಲ್ಲ. ಆ ಭೂಮಿ, ಸರ್ಕಾರದ ಭೂಮಿ. ನಿಮ್ಮ ಮೂಗಿನ ನೇರದಲ್ಲಿ ಎಲ್ಲ ನಡೆದಿವೆ. ಈಗ ನಿವೇಶನ ವಾಪಸು ಕೊಡ್ತೀನಿ ಅಂತ ಹೇಳಿದ್ದೀರಿ. ತಪ್ಪು ಮಾಡಿ ವಾಪಸು ಕೊಟ್ರೆ ಕಾನೂನು ಬಾಹಿರ ಚಟುವಟಿಕೆ ಮುಚ್ಚಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | BJP-JDS Padayatra: ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ನಿಲ್ಲಲ್ಲ: ಸಿಎಂ, ಡಿಸಿಎಂ ವಿರುದ್ಧ ಬಿಎಸ್‌ವೈ ಗುಡುಗು

ಯತೀಂದ್ರನಿಗೆ ಕಮಿಟಿಗೆ ಸದಸ್ಯ ಮಾಡಿದರು. ಜನಸಂಪರ್ಕ ಸಭೆಯಲ್ಲಿ ಅಪ್ಪಯ್ಯ ಅಪ್ಪಯ್ಯ ನಾನೇ ಕೊಟ್ಟಿದ್ದು ಐದೇ ಅಂತ ಯತೀಂದ್ರ ಹೇಳಿದರು. ಆ ಮೇಲೆ ಎರಡು ಗಂಟೆ ಮಾಧ್ಯಮಗಳ ಮುಂದೆ ಬರಲಿಲ್ಲ. ಆ ಮೇಲೆ ಅದು ಸಿಎಸ್ಆರ್ ಫಂಡ್ ಅಂತ ನಮ್ಮ ಶಿವಮೊಗ್ಗ ಸ್ನೇಹಿತರು ಹೇಳಿದರು. ನನ್ನ ಪುತ್ರನನ್ನ ರಾಜಕೀಯವಾಗಿ ಬೆಳೆಸಲು ರೇವಣ್ಣ ಪುತ್ರನನ್ನು ಜೈಲಿಗೆ ಕಳುಹಿಸಿದರು ಅಂತ ಹೇಳಿದ್ದೀರಿ ಎಂದು ಕಿಡಿಕಾರಿದರು.

ಈ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಹೇಳುತ್ತೇನೆ, ನನ್ನ ಕುಟುಂಬದ ವಿರುದ್ಧ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದ ಅವರು, ಸಿದ್ದರಾಮಯ್ಯ ಅವರೇ ಯಡಿಯೂರಪ್ಪ ಅವರ ಫೋಟೊ ಹಾಕಿಕೊಂಡು ನೀವು ಪೂಜೆ ಮಾಡಬೇಕು. ಬಿಜೆಪಿ, ಕೆಜೆಪಿ, ಜೆಡಿಎಸ್ ನಡುವೆ ವೋಟ್ ಡಿವೈಡ್ ಆಗಿದ್ದರಿಂದ ನೀವು ಸಿಎಂ ಆಗಲು ಸಾಧ್ಯವಾಯಿತು.
1983ರಲ್ಲಿ ನಾನು ಡೆಪಾಸಿಟ್ ಕಟ್ಟೊಕೆ ದುಡ್ಡಿಲ್ಲ ಎಂದಿದ್ದಾರೆ, ಆದರೆ ಆ ದುಡ್ಡು ಕಟ್ಟಿದ್ದು ಜಿ.ಟಿ. ದೇವೇಗೌಡ. ಹೋಗಲಿ ಜನತಾ ಪರಿವಾರದಿಂದ ಒಬ್ಬರ ಹೆಸರು ಆದರೂ ಹೇಳಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

20 ತಿಂಗಳ ಬಳಿಕ ನಾನು ಸಿಎಂ ಸ್ಥಾನ ಬಿಟ್ಟು ಕೊಡಬೇಕು ಎಂದು ನಿರ್ಧಾರ ಮಾಡಿದ್ದೆ, ಆದರೆ ಕಾರಣಾಂತರಗಳಿಂದ ಆಗಲಿಲ್ಲ. ಇದನ್ನು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿಂತುಕೊಂಡು ಹೇಳ್ತಿದ್ದೇನೆ. ಯಡಿಯೂರಪ್ಪ ಅವರು ಜತೆ ಹೋದಾಗ ನನಗೆ ಸಮಸ್ಯೆ ಆಗಲಿಲ್ಲ, ಆದರೆ ನೀವು ಹೆಜ್ಜೆ ಹೆಜ್ಜೆಗೂ ಸಮಸ್ಯೆ ಕೊಟ್ಟಿದ್ದೀರಿ. ಮೋದಿ ಕರೆದು ನೀವು ಸಿಎಂ ಆಗಿ ಎಂದಿದ್ದರು. ಆದರೆ, ನಾನು ಸರ್ಕಾರ ತೆಗೆಯಲ್ಲ ನೀವೇ ತೆಗೆಯಬೇಕು ಅಂತ ಹೇಳಿದ್ದೆ ಎಂದು ತಿಳಿಸಿದರು.

ನಾನು ಏನು ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ಕೊಡಲಿ? ನನ್ನ ಮತ್ತು ಯಡಿಯೂರಪ್ಪ ವಿರುದ್ಧ ನಡೆದ ರಾಜಕೀಯ ಸಂಘರ್ಷದಲ್ಲಿ ಕೇಸ್ ಆಗಿವೆ. ನಾನು ಸಹಿ ಹಾಕಿಲ್ಲ, ಯಾವುದೋ ಅಧಿಕಾರಿ ಹಾಕಿದ್ದು. ಸಿದ್ದರಾಮಯ್ಯ ನಿಮ್ಮ ರಾಜಕೀಯ ಜೀವನ ತೆರೆದ ಪುಸ್ತಕ ಎಂದು ಹೇಳಿದ್ದೀರಿ, ರೀಡೂ ಕೇಸ್ ತೆಗೆಯಿರಿ, ಕೆಂಪಣ್ಣ ರಿಪೋರ್ಟ್ ಟೇಬಲ್ ಮಾಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ | CM Siddaramaiah: ನಮಗೆ ಮನೇಲಿ ತಂಗಳು ಇರ್ತಿತ್ತು, ಇಡ್ಲಿ-ದೋಸೆ ಇರ್ತಿಲಿಲ್ಲ ಎಂದ ಸಿಎಂ

ಈ ಸರ್ಕಾರ ತೆಗೆಯಲು ಎರಡು ಪಕ್ಷಗಳ ಕಾರ್ಯಕರ್ತರ ಸಹಕಾರ ಅಗತ್ಯ. ನಾವು ಒಗ್ಗಟ್ಟಾಗಿ ಹೋಗಬೇಕು. ಈ ಸರ್ಕಾರ ತೆಗೆಯುವವರೆಗೂ ನನ್ನ ಹೋರಾಟ ಮುಂದುವರೆಯುತ್ತೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

BJP-JDS Padayatra: ಪರಿಶಿಷ್ಟ, ಒಬಿಸಿಯವರಿಗೆ ಕಾಂಗ್ರೆಸ್‌ನಿಂದ ಸದಾ ಅಪಮಾನ; ಪ್ರಲ್ಹಾದ್‌ ಜೋಶಿ

BJP-JDS Padayatra: ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದಾರೆ. ಆದರೆ ಅವರ ಆಡಳಿತದಲ್ಲಿ ಒಂದಲ್ಲ ಬರೀ ಕಪ್ಪು ಚುಕ್ಕೆಗಳೇ ಕಾಣುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ 14 ಸೈಟ್‌ಗಳನ್ನು ವಾಪಸ್ ಕೊಡುವುದಾಗಿ ಹೇಳಿದ್ದಾರೆ. ಆದರೆ, ಕಳವು ಮಾಡಿದ ಮೇಲೆ ವಸ್ತುಗಳನ್ನು ಮರಳಿಸಿದರೆ ಶಿಕ್ಷೆ ನೀಡದೇ ಇರಲು ಸಾಧ್ಯವೇ? ಸಿಎಂಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು. ಭ್ರಷ್ಟ ಮುಖ್ಯಮಂತ್ರಿಯನ್ನು ಮನೆಗೆ ಕಳಿಸುವವರೆಗೂ ವಿಶ್ರಮಿಸುವುದಿಲ್ಲ ಎಂದು ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಮೈಸೂರು: ಹಿಂದುಳಿದ ವರ್ಗದವರು ಎಂಬ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿಲ್ಲ. ಅದೇನಿದ್ದರೂ ಕಾಂಗ್ರೆಸ್‌ನ ಡಿಎನ್ಎದಲ್ಲೇ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (BJP-JDS Padayatra) ತಿರುಗೇಟು ನೀಡಿದರು.

ಭ್ರಷ್ಟಾಚಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಡೆಸಿದ ಮೈಸೂರು ಚಲೋ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು “ತಾನು ಹಿಂದುಳಿದ ವರ್ಗದವನಾದ್ದರಿಂದ ಟಾರ್ಗೆಟ್ ಮಾಡುತ್ತಿದ್ದಾರೆ” ಎಂಬ ಸ್ಲೋಗನ್ ಹೇಳುತ್ತಿದ್ದಾರೆ. ಆದರೆ ತಮ್ಮ ಭ್ರಷ್ಟಾಚಾರದ ಆಡಳಿತವನ್ನು ಮುಚ್ಚಿ ಹಾಕಿಕೊಳ್ಳಲು ಇಂಥ ಒಂದು ಸಬೂಬು ಹೇಳುತ್ತಿದ್ದಾರೆ ಎಂದು ಖಂಡಿಸಿದರು.

ಸಿದ್ಧರಾಮಯ್ಯ ಅವರನ್ನು ಹಿಂದುಳಿದ ವರ್ಗದಿಂದ ಬಂದವರು ಎಂಬ ಕಾರಣಕ್ಕೆ ಯಾರೂ ಟಾರ್ಗೆಟ್ ಮಾಡುತ್ತಿಲ್ಲ. ಅದೇನಿದ್ದರೂ ಕಾಂಗ್ರೆಸ್ ಪಕ್ಷದ ಡಿಎನ್ಎದಲ್ಲಿಯೇ ಇದೆ ಎಂದು ಜೋಶಿ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

ಎಸ್ಸಿ, ಎಸ್ಟಿ ಮತ್ತು ಒಬಿಸಿಯವರನ್ನು ಅವಮಾನಿಸುವುದು, ಅಪಮಾನಿಸುವುದು ಕಾಂಗ್ರೆಸ್‌ನ ಡಿಎನ್ಎದಲ್ಲೇ ಬಂದಿದೆ. ಚರಣ ಸಿಂಗ್, ಬಾಬು ಜಗಜೀವನರಾಂ, ಸೀತಾರಾಮ್ ಕೇಸರಿ ಹೀಗೆ ಯಾರನ್ನು ಪ್ರಧಾನಿ ಹುದ್ದೆಯಲ್ಲಿ ದೀರ್ಘಾವಧಿ ಮುಂದುವರಿಯಲು ಬಿಡಲಿಲ್ಲ ಎಂದು ಜೋಶಿ ಆರೋಪಿಸಿದರು.

ಭ್ರಷ್ಟಾಚಾರ ಮಾತ್ರವಲ್ಲ, ಅಪಮಾನಿಸುವುದೂ ಕಾಂಗ್ರೆಸ್ ಚಾಳಿ. ಕಾಂಗ್ರೆಸ್ ಡಿಎನ್ಎದಲ್ಲಿ ಭ್ರಷ್ಟಾಚಾರ ಮಾತ್ರವಲ್ಲ, ಪರಿಶಿಷ್ಟರು, ಹಿಂದುಳಿದವರು, ಮುಂದುವರಿದವರಿಗೆ ಅನ್ಯಾಯ, ಅಪಮಾನ, ಅವಮಾನ ಮಾಡುವ ಚಾಳಿಯೂ ಇದೆ ಎಂದು ಹರಿಹಾಯ್ದರು.

ಇದನ್ನೂ ಓದಿ: TV Somanathan: ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ; ಯಾರಿವರು?

ಕಾಂಗ್ರೆಸ್ ಪಕ್ಷ ಯಾವ ಪರಿಶಿಷ್ಟ, ಒಬಿಸಿಯವರನ್ನೂ ಹತ್ತು ವರ್ಷ ಪ್ರಧಾನಿ ಮಾಡಲಿಲ್ಲ. ಆದರೆ, ಒಬಿಸಿ ವರ್ಗದ ನರೇಂದ್ರ ಮೋದಿ ಅವರನ್ನು ಬಿಜೆಪಿ 11ನೇ ವರ್ಷವೂ ಪ್ರಧಾನಿಯನ್ನಾಗಿಸಿದೆ ಎಂದು ಹೇಳಿದರು.

ಸಿಎಂ ಪಾಠ ನಮಗೆ ಬೇಕಿಲ್ಲ

ಸಿಎಂ ಸಿದ್ದರಾಮಯ್ಯ ಅವರು ನಮಗೆ ಎಸ್‌ಸಿ, ಎಸ್‌ಟಿ, ಒಬಿಸಿ ಪಾಠ ಮಾಡಲು ಬರುತ್ತಾರೆ. ಆದರೆ, ಮೊದಲು ತಮ್ಮ ಪಕ್ಷದಲ್ಲೇ ಈ ವರ್ಗದವರಿಗೆ ಮಾಡಿದ ಅನ್ಯಾಯವನ್ನು, ಇತಿಹಾಸವನ್ನು ಅರಿಯಲಿ ಎಂದು ಸಚಿವ ಪ್ರಲ್ಹಾದ್‌ ಜೋಶಿ ಕಿವಿಮಾತು ಹೇಳಿದರು.

ಮುಡಾ ಹಗರಣದಲ್ಲಿ ದೇಶಾದ್ಯಂತ ಮೈಸೂರು ಚರ್ಚೆಗೆ

ಮೈಸೂರು ರಾಜರ ಆಳ್ವಿಕೆ, ದಸರಾ ಮಹೋತ್ಸವದಿಂದ ಚರ್ಚೆಗೆ ಬರುತ್ತಿದ್ದ ಮೈಸೂರು ಇಂದು ಸಿಎಂ ಮುಡಾ ಹಗರಣದಿಂದಾಗಿ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು ದುರ್ದೈವ ಎಂದು ಜೋಶಿ ಹೇಳಿದರು.

ಸಿಎಂ ಆಡಳಿತದಲ್ಲಿ ಬರೀ ಕಪ್ಪು ಚುಕ್ಕಿಗಳೇ ಕಾಣುತ್ತಿವೆ

ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದಾರೆ. ಆದರೆ, ಅವರ ಆಡಳಿತದಲ್ಲಿ ಒಂದಲ್ಲ ಬರೀ ಕಪ್ಪು ಚುಕ್ಕೆಗಳೇ ಕಾಣುತ್ತಿವೆ ಎಂದು ಸಿಎಂ ವಿರುದ್ಧ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದರು.

14 ಸೈಟ್ ವಾಪಸ್ ಕೊಡುವುದಾಗಿ ಹೇಳಿದ್ದಾರೆ ಸಿಎಂ. ಆದರೆ, ಕಳವು ಮಾಡಿದ ಮೇಲೆ ವಸ್ತುಗಳನ್ನು ಮರಳಿಸಿದರೆ ಶಿಕ್ಷೆ ನೀಡದೇ ಇರಲು ಸಾಧ್ಯವೇ? ಎಂದು ಪ್ರಶ್ನಿಸಿದ ಜೋಶಿ, ಸಿಎಂಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು. ಭ್ರಷ್ಟ ಮುಖ್ಯಮಂತ್ರಿಯನ್ನು ಮನೆಗೆ ಕಳಿಸುವವರೆಗೂ ವಿಶ್ರಮಿಸುವುದಿಲ್ಲ. ಬಿಜೆಪಿ ಕಾನೂನು ಮತ್ತು ರಾಜಕೀಯವಾಗಿಯೂ ಹೋರಾಟ ನಡೆಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: KCET Mock Allotment 2024: ಎಂಜಿನಿಯರಿಂಗ್ ಅಣಕು ಸೀಟು ಹಂಚಿಕೆ ಪ್ರಕಟ

ಕಾಂಗ್ರೆಸ್ ಧನಾಂದೋಲನ

ಕಾಂಗ್ರೆಸ್ ಪಕ್ಷ ನಡೆಸುತ್ತಿರುವುದು ಜನಾಂದೋಲನ ಅಲ್ಲ. ಧನಾಂದೋಲನವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಹಣ ಕೊಡಲು ಮಾಡಿದ ಧನಾಂದೋಲನ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ಮಾಡಿದ್ದಾರೆ.

Continue Reading

ಕರ್ನಾಟಕ

BJP-JDS Padayatra: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ನಮ್ಮ ಹೋರಾಟ ಎಂದ ವಿಜಯೇಂದ್ರ

BJP-JDS Padayatra: ಕಳೆದ ಹದಿನೈದು ತಿಂಗಳ ಭ್ರಷ್ಟಾಚಾರವನ್ನು ವಿರೋಧಿಸಿ ನಾವು ಪಾದಯಾತ್ರೆ ಮಾಡಿದ್ದೇವೆ. ಈ ಹೋರಾಟ ನಿಮ್ಮ ವಿರುದ್ಧ ಅಲ್ಲ, ಭ್ರಷ್ಟಾಚಾರದ ವಿರುದ್ಧ ಎಂದು ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

VISTARANEWS.COM


on

BJP-JDS Padayatra
Koo

ಮೈಸೂರು: ಸದನದ ಒಳಗೆ ಮತ್ತು ಹೊರಗೆ ಮಾಡ್ತಿರುವ ಹೋರಾಟ ನಿಮ್ಮ ವಿರುದ್ಧ ಅಲ್ಲ, ಬದಲಾಗಿ ಭ್ರಷ್ಟಾಚಾರದ ವಿರುದ್ಧ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಈ ಹೋರಾಟ (BJP-JDS Padayatra) ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ನಗರದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ರಹಿತ ಅಧಿಕಾರ ಕೊಡುತ್ತೀವಿ, ಅಹಿಂದ ಸಮುದಾಯಗಳಿಗೆ ಸೌಕರ್ಯ ಒದಗಿಸುತ್ತೇವೆ ಎಂದು ಹೇಳಿದ್ದರು. ಕಳೆದ ಹದಿನೈದು ತಿಂಗಳ ಭ್ರಷ್ಟಾಚಾರವನ್ನು ವಿರೋಧಿಸಿ ನಾವು ಪಾದಯಾತ್ರೆ ಮಾಡಿದ್ದೇವೆ. ಈ ಹೋರಾಟ ನಿಮ್ಮ ವಿರುದ್ಧ ಅಲ್ಲ, ಭ್ರಷ್ಟಾಚಾರದ ವಿರುದ್ಧ ಎಂದು ಹೇಳಿದರು.

ರಾಜ್ಯದಲ್ಲಿ ಅಧಿಕಾರ ಹಿಡಿಯಲು ಹೋರಾಟ ಅಲ್ಲ, ರಾಜ್ಯದಲ್ಲಿ ಭೀಕರ ಬರ ಇದ್ದಾಗ ಇವರು ರೈತನ ಪರ ಕೆಲಸ ಮಾಡಲಿಲ್ಲ. ಬಡವರು ಮನೆ ಕಳೆದುಕೊಂಡರೆ ಐದು ಲಕ್ಷ ರೂಪಾಯಿ ಕೊಡುತ್ತಿದ್ದರು, ನೀವು ಅದನ್ನು ಒಂದು ಲಕ್ಷಕ್ಕೆ ಇಳಿಸಿದ್ದೀರಿ. ಅದನ್ನೂ ನೀವು ಕೊಡಲಿಲ್ಲ. ರಾಜ್ಯದಲ್ಲಿ ದಾರಿದ್ರ್ಯ ಸರ್ಕಾರ ಇದೆ. ಯಾವುದೇ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆ ಘೋಷಣೆ ಮಾಡಲಿಲ್ಲ. ನೀವು ಮುಖ್ಯಮಂತ್ರಿ ಆದ ಮೇಲೆ ಭೀಕರ ಬರಗಾಲ ಹಾಗೂ 1500 ರೈತರು ಆತ್ಮಹತ್ಯೆ ಮಾಡಿಕೊಂಡರು. ರಾಜ್ಯದಲ್ಲಿ ಸರ್ಕಾರ ಬದುಕಿದ್ದು ಸತ್ತಂತೆ ಎಂದು ಕಿಡಿಕಾರಿದರು.

ನಿಮ್ಮ ವಿರುದ್ಧ ಮಾತನಾಡಿದರೆ ಬೆದರಿಕೆ ಹಾಕುತ್ತೀರಿ, ನಿಮ್ಮ ಸರ್ಕಾರದಿಂದ ರೈತರು, ಕಾರ್ಮಿಕರು ನರಳುತ್ತಿದ್ದಾರೆ. ಹೀಗಾಗಿ ನಿಮ್ಮನ್ನು ತೊಳಗಿಸಬೇಕಿದೆ. ಮೈಸೂರಿಗೆ ಪಾದಯಾತ್ರೆ ಮೂಲಕ ಬಂದ್ರೆ ತಡೆಯುತ್ತೀರಿ, ವಿಧಾನ ಸಭೆ ಹಾಗೂ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಜುಲೈ 14ರಂದು ಒನ್ ಮ್ಯಾನ್ ಕಮಿಷನ್ ನೇಮಕ ಮಾಡುತ್ತಾರೆ. ರಾಜ್ಯದ ಸಿಎಂ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲಿಲ್ಲ. ನಮ್ಮ ಸವಾಲು ಸ್ವೀಕರಿಸಲು ಸಾಧ್ಯವಾಗದೇ ರಣಹೇಡಿ ರೀತಿಯಲ್ಲಿ ಓಡಿ ಹೋಗಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ | BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

ಮುಡಾದಲ್ಲಿ ಹಗರಣ ಆಗಿಲ್ಲವೆಂದರೆ ಯಾಕೆ ಓಡಿ ಹೋದ್ರಿ, ಉಪಮುಖ್ಯಮಂತ್ರಿಗಳು ಬಿಚ್ಚಿಡ್ತೀವಿ ಅಂತ ಬೆದರಿಕೆ ಹಾಕುತ್ತಾರೆ. ತಾಕತ್ತಿದ್ದರೆ ವಾಲ್ಮೀಕಿ ಹಗರಣದಲ್ಲಿ ಮುಚ್ಚಿಟ್ಟಿರುವ ದಾಖಲೆ ಬಿಚ್ಚಿಡಿ ಬನ್ನಿ ಎಂದು ಆಗ್ರಹಿಸಿದರು. ಯಡಿಯೂರಪ್ಪ ರಾಜಕೀಯ ನಿವೃತ್ತಿ ಆಗಬೇಕು ಅಂತೀರಾ? ಯಡಿಯೂರಪ್ಪ ಕಂಡರೆ ನಿಮಗೆ ಯಾಕೆ ಭಯ? 2014 ರಲ್ಲಿ 15 ಎಫ್ಐಆರ್ ದಾಖಲು ಮಾಡಿಸಿದ್ದೀರಿ, ರಾಜಕೀಯವಾಗಿ ಯಡಿಯೂರಪ್ಪ ಹೆದರಿಸಲು ಆಗದೇ ಕೇಸ್ ಹಾಕಿದ್ದೀರಿ. ಯಡಿಯೂರಪ್ಪ ಮೇಲೆ ಹಲ್ಲೆ ಆಗಿ ಬದುಕುಳಿದಾಗ ನನ್ನ ಕೊನೆಯ ಉಸಿರುವವರೆಗೂ ಜನರ ಪರ ಕೆಲಸ ಮಾಡುತ್ತೀನಿ ಎಂದು ನಮ್ಮ ತಾಯಿಗೆ ಹೇಳಿದ್ದರು. ಯಡಿಯೂರಪ್ಪ ಕೊನೆಯ ಉಸಿರು ಇರೋವರೆಗೂ ರಾಜಕೀಯ ಮಾಡುತ್ತಾರೆ ಎಂದು ಹೇಳಿದರು.

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

Karnataka weather Forecast : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಳೆಯು ಅಬ್ಬರಿಸಿದ್ದು, ಭಾನುವಾರಕ್ಕೂ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Koo

ಬೆಂಗಳೂರು: ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆಯಿಂದ (Rain News) ಶುರುವಾಗಿ ಸಂಜೆ ವೇಳೆಗೆ ಹಲವೆಡೆ ಸಾಧಾರಣ (Karnataka weather Forecast) ಮಳೆಯಾಗಿದೆ. ಮುಂಜಾವಿನ ಮಳೆಯಿಂದ ಜಾಗಿಂಗ್, ರನ್ನಿಂಗ್ ಹೋಗುವವರಿಗೆ ತೊಂದರೆ ಆಯಿತು.

ನಗರದ ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಶಿವಾಜಿನಗರ, ಮಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಶೇಷಾದ್ರಿಪುರಂ, ವಿಧಾನಸೌಧದಲ್ಲೂ ಮಳೆಯ ಸಿಂಚನವಾಗಿದೆ.

ಭಾರಿ ಮಳೆಗೆ ಕಾಳಿ ಸೇತುವೆ ಕುಸಿತದಿಂದಾಗಿ ಹೊಸ ಸೇತುವೆಯಲ್ಲಿ ಹೆಚ್ಚಾದ ವಾಹನ ದಟ್ಟಣೆ

ಉತ್ತರ ಕನ್ನಡದ ಕಾರವಾರದ ಕಾಳಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಹೊಸ ಸೇತುವೆಯು ಕಾರವಾರ-ಗೋವಾ ಸಂಪರ್ಕಿಸಲಿದೆ.

ಒಂದೇ ಸೇತುವೆ ಮೇಲೆ ದ್ವಿಮುಖ ಸಂಚಾರದಿಂದ ವಾಹನ ದಟ್ಟಣೆ ಎದುರಾಗಿದ್ದು, ಒಂದರ ಹಿಂದೆ ಒಂದರಂತೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ-ಮಂಗಳೂರು ನಡುವಿನ ಸರಕು ಸಾಗಾಟಕ್ಕೆ ತೊಡಕು ಉಂಟಾಗಿದೆ. ಹೊಸ ಸೇತುವೆಗೆ ಬೀದಿದೀಪ ಅಳವಡಿಸದೇ ಐಆರ್‌ಬಿ ನಿರ್ಲಕ್ಷ್ಯ ವಹಿಸಿದ್ದು, ರಾತ್ರಿ ವೇಳೆ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಹೊಸ ಸೇತುವೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸವಾರರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಸಾಧಾರಣ ಮಳೆ ಸಾಧ್ಯತೆ

ನಾಳೆ ಭಾನುವಾರ ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

BJP-JDS Padayatra: ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ನಿಲ್ಲಲ್ಲ: ಸಿಎಂ, ಡಿಸಿಎಂ ವಿರುದ್ಧ ಬಿಎಸ್‌ವೈ ಗುಡುಗು

BJP-JDS Padayatra: ಭ್ರಷ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಕ್ಷಮಿಸಲು ಸಾಧ್ಯವಿಲ್ಲ. ಐತಿಹಾಸಿಕ ಪಾದಯಾತ್ರೆ ನಡೆದಿದೆ, ನನಗೆ ಕೈಕಾಲು ಗಟ್ಟಿ ಇದೆ. ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ಮಾಡ್ತೀನಿ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಮೈಸೂರು ಚಲೋ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದಾರೆ.

VISTARANEWS.COM


on

Koo

ಮೈಸೂರು: ನನ್ನನ್ನು ರಾಜಕೀಯದಿಂದ ನಿವೃತ್ತಿ ಆಗಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ನಾನು ಬದುಕಿರುವವರೆಗೂ ಸಕ್ರಿಯವಾಗಿರುತ್ತೇನೆ. ನಿಮ್ಮ ಆಡಳಿತದಿಂದ ಜನ ಬೇಸರ ಗೊಂಡಿದ್ದಾರೆ. ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (BJP-JDS Padayatra) ಕಿಡಿಕಾರಿದರು.

ನಗರದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕಲ್ಲುಬಂಡೆ ಅಂತ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಏಯ್ ವಿಜಯೇಂದ್ರ ಅಂತ ಮಾತನಾಡುತ್ತೀರಾ? ಒಬ್ಬ ರಾಜ್ಯಾಧ್ಯಕ್ಷನಿಗೆ ಕೊಡುವ ಮರ್ಯಾದೆ ಇದೇನಾ? ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕೆಲಸ ತೋರಿಸಿ ಎಂದು ಸವಾಲು ಹಾಕಿದರು.

ಮುಡಾದಿಂದ 14 ನಿವೇಶನ ಹೇಗೆ ತೆಗೆದುಕೊಂಡಿದ್ದೀರಿ? ಪರಿಹಾರ ಕೊಟ್ಟರೆ ವಾಪಸು ಕೊಡುತ್ತೀನಿ ಎಂದು ಹೇಳುತ್ತಾರೆ. ಅದು ಹೇಗೆ ತಗೊಂಡಿದ್ದಿರಿ, ಯಾರಪ್ಪನ ದುಡ್ಡು ಪರಿಹಾರ ಕೊಡಕ್ಕೆ. ನಿಮ್ಮ ಮೈಯೆಲ್ಲಾ ಕಪ್ಪು ಚುಕ್ಕೆ ಇವೆ. ನಿಮ್ಮ ಪಾಪದ ಕೊಡ ತುಂಬಿದೆ, ತಾಕತ್ ಇದ್ದರೆ ವಿಧಾನ ಸಭೆ ವಿಸರ್ಜನೆ ಮಾಡಿ ಬನ್ನಿ. ಸೂರ್ಯಚಂದ್ರರಷ್ಟೇ ಸತ್ಯ ಮೈತ್ರಿ ಪಕ್ಷಗಳು 140-150 ಗೆಲ್ಲೋದು ನಿಶ್ಚಿತ ಎಂದು ಹೇಳಿದರು.

ಭ್ರಷ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಕ್ಷಮಿಸಲು ಸಾಧ್ಯವಿಲ್ಲ. ಐತಿಹಾಸಿಕ ಪಾದಯಾತ್ರೆ ನಡೆದಿದೆ, ನನಗೆ ಕೈಕಾಲು ಗಟ್ಟಿ ಇದೆ. ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ಮಾಡ್ತೀನಿ ಎಂದ ಅವರು, ನನಗೆ ಈಗ 82 ವರ್ಷ, ಆದರೂ ಚಿಂತೆ ಇಲ್ಲ. ಬಿಜೆಪಿ, ಜೆಡಿಎಸ್ ಒಂದಾಗಿ ನಿಮ್ಮನ್ನು ಮನೆಗೆ ಕಳುಹಿಸುವುದು ನಿಶ್ಚಿತ. ಮೋದಿ ಅವರನ್ನು ಪ್ರಪಂಚವೇ ಸ್ವೀಕರಿಸಿದೆ, ಅವರ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ. ನೀವು ಅವರನ್ನು ಟೀಕೆ ಮಾಡ್ತೀರಾ ಎಂದು ಪ್ರಶ್ನಿಸಿದರು.

ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡ್ತೀರಾ? ಕರ್ನಾಟಕ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

ಇದನ್ನೂ ಓದಿ | Bangladesh Unrest: ಬಾಂಗ್ಲಾದೇಶದ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಹಿಂದು ಕಾರ್ಯಕರ್ತರು ವಶಕ್ಕೆ

ಆರೋಪಗಳ ವಿರುದ್ಧ ರಾಜಕೀಯ, ಕಾನೂನು ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

CM Siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್‌ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳು ಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ನನಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.

ರಾಜಕೀಯವಾಗಿ ಮಣಿಸಲು ಬಿಜೆಪಿ ಜೆಡಿಎಸ್ ತಂತ್ರ

ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್‌ನವರ ಹಗರಣಗಳು ಬೇಕಾದಷ್ಟಿದ್ದು, ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ | Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

ಸುಳ್ಳು ಆರೋಪಗಳ ವಿರುದ್ಧ ಹೋರಾಟ

ಮುಖ್ಯಮಂತ್ರಿಗಳು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ-ಜೆಡಿಎಸ್‌ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ. ಸರ್ಕಾರ ಹಾಗೂ ನನ್ನ ಮೇಲೆ ಬಂದಿರುವ ಆರೋಪಗಳನ್ನು ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಡುತ್ತೇವೆ ಎಂದು ತಿಳಿಸಿದರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ52 mins ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧಿಗಳ ಹೋರಾಟ ಮುಕ್ತಾಯ; ಈ ಬಾರಿ ಆರು ಪದಕಗಳು ಮಾತ್ರ

Hindenburg
ವಾಣಿಜ್ಯ57 mins ago

Hindenburg: ಅದಾನಿ ವಿದೇಶಿ ಕಂಪನಿಯಲ್ಲಿ ಸೆಬಿ ಅಧ್ಯಕ್ಷೆಯದ್ದೂ ಪಾಲು; ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ

Narendra Modi Stadium
ಪ್ರಮುಖ ಸುದ್ದಿ1 hour ago

Narendra Modi Stadium : ಗುಜರಾತ್​ಗೆ ಸಡ್ಡು; ತಮಿಳುನಾಡಿನಲ್ಲಿ ನಿರ್ಮಾಣವಾಗಲಿದೆ ನರೇಂದ್ರ ಮೋದಿ ಸ್ಟೇಡಿಯಮ್​​ಗಿಂತ ದೊಡ್ಡ ಕ್ರಿಕೆಟ್​ ಸೌಲಭ್ಯ

Tharun Sudhir
ಸಿನಿಮಾ2 hours ago

Tharun Sudhir: ತರುಣ್‌-ಸೋನಲ್‌ಗೆ ಬಿಎಸ್‌ವೈ, ರಮೇಶ್‌ ಅರವಿಂದ್‌ ಸೇರಿ ಗಣ್ಯರಿಂದ ಶುಭಾಶಯ; Video, Photos ಇಲ್ಲಿವೆ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ವಿನೇಶ್ ಫೋಗಟ್​ ಬೆಳ್ಳಿ ಪದಕದ ಮನವಿ ತೀರ್ಪು ಭಾನುವಾರಕ್ಕೆ ಮುಂದೂಡಿಕೆ

BJP-JDS Padayatra
ಕರ್ನಾಟಕ2 hours ago

BJP-JDS Padayatra: ಪರಿಶಿಷ್ಟ, ಒಬಿಸಿಯವರಿಗೆ ಕಾಂಗ್ರೆಸ್‌ನಿಂದ ಸದಾ ಅಪಮಾನ; ಪ್ರಲ್ಹಾದ್‌ ಜೋಶಿ

Independence Day 2024
ದೇಶ2 hours ago

Independence day 2024: ಮೊದಲ ಸ್ವಾತಂತ್ರ್ಯೋತ್ಸವದಲ್ಲಿ ಗಾಂಧೀಜಿಯೇ ಭಾಗವಹಿಸಲಿಲ್ಲ! ಇಲ್ಲಿವೆ ಸ್ವಾತಂತ್ರ್ಯ ದಿನಾಚರಣೆಯ ಕುತೂಹಲಕರ ಸಂಗತಿಗಳು

Shira News
ತುಮಕೂರು3 hours ago

Shira News: ಶ್ರಾವಣದ ಮೊದಲ ಶನಿವಾರ; ಶಿರಾ ತಾಲೂಕಿನಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ

Jitesh Sharma
ಕ್ರೀಡೆ3 hours ago

Jitesh Sharma : ಟೆಕಿ ಜತೆ ಎಂಗೇಜ್ಮೆಂಟ್​ ಮಾಡಿಕೊಂಡ ಜಿತೇಶ್ ಶರ್ಮಾ

Trainee Doctor
ಪ್ರಮುಖ ಸುದ್ದಿ3 hours ago

Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್‌ ಹೆಡ್‌ಫೋನ್; ಹೇಗಂತೀರಾ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌