Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ - Vistara News

ಹಾಸನ

Bear Attack : ರೈತನ ಮೇಲೆ ಡೆಡ್ಲಿ ಅಟ್ಯಾಕ್‌ ಮಾಡಿ ಕೊಂದು ಹಾಕಿದ ಕರಡಿ

Bear Attack : ಹಾಸನದಲ್ಲಿ ರೈತನ ಮೇಲೆ ಕರಡಿಯೊಂದು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಇತ್ತ ಚಿತ್ರದುರ್ಗದಲ್ಲಿ ಇನ್ನೊಂದು ಕರಡಿ ದೇವಸ್ಥಾನದಲ್ಲಿ (Wild animals attack) ಇಟ್ಟಿದ್ದ ದೀಪದ ಎಣ್ಣೆ ಕುಡಿದು ಹೋಗಿದೆ.

VISTARANEWS.COM


on

Bear attack
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಕರಡಿ ದಾಳಿಯಿಂದ (Bear Attack ) ಗಾಯಗೊಂಡಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಮಹಾಲಿಂಗಪ್ಪ (75) ಮೃತ ದುರ್ದೈವಿ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಜನ್ನಾವರ ಗ್ರಾಮದಲ್ಲಿ ಘಟನೆ ನಡೆದಿದೆ.

ಜು.25ರಂದು ಬೆಳಗ್ಗೆ ಮಹಾಲಿಂಗಪ್ಪ ಅವರು ತೋಟದ ಮನೆಯ ಬಳಿ ನಿಂತಿದ್ದರು. ಈ ವೇಳೆ ಹಿಂದಿನಿಂದ ಬಂದ ಕರಡಿ ಡೆಡ್ಲಿ ಅಟ್ಯಾಕ್ ಮಾಡಿತ್ತು. ವೃದ್ಧ ಮಹಾಲಿಂಗಪ್ಪ ಅವರ ತಲೆಯ ಚರ್ಮವನ್ನೇ ಕಿತ್ತು, ಮುಖವನ್ನು ಪರಚಿ ತೀವ್ರವಾಗಿ ಗಾಯಗೊಳಿಸಿತ್ತು.

ಗಂಭೀರ ಗಾಯಗೊಂಡಿದ್ದ ಅವರನ್ನು ಅರಸೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾವು ಬದುಕಿನ ಮಧ್ಯೆ ಹೋರಾಡಿದ ಮಹಾಲಿಂಗಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್‌ 11ರಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ದೀಪದ ಎಣ್ಣೆ ಕುಡಿದು ಹೋದ ಕರಡಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಲಿಂಗನಹಳ್ಳಿ ಆಂಜನೇಯ ದೇವಸ್ಥಾನದಲ್ಲಿ ಕರಡಿ ಪ್ರತ್ಯಕ್ಷಗೊಂಡಿದೆ. ಆಂಜನೇಯ ದೇವಸ್ಥಾನಕ್ಕೆ ಬಂದ ಕರಡಿಯೊಂದು ದೀಪದ ಎಣ್ಣೆ ಕುಡಿದು ಹೋಗಿದೆ. ರಾತ್ರಿ ಕಾಣಿಸಿಕೊಂಡ ಕರಡಿ ಓಡಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು.

ಕರಡಿಯಿಂದ ಜೀವ ಹಾನಿ ಆಗುವ ಭಯದಲ್ಲಿದ್ದು, ಹಲವು ಬಾರಿ ಕರಡಿ ಸೆರೆಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Police Firing: ಹಾಸನದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿ ಮೇಲೆ ಫೈರಿಂಗ್‌ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿ. ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ.

VISTARANEWS.COM


on

Police Firing
Koo

ಹಾಸನ: ಹಾಸನದಲ್ಲಿ ಮತ್ತೆ ಪೊಲೀಸರ ಪಿಸ್ತೂಲು ಸದ್ದು ಮಾಡಿದೆ. ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿ ಮೇಲೆ ಫೈರಿಂಗ್‌ ಮಾಡಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸತೀಶ್ ಕಾಲಿಗೆ ಗುಂಡೇಟು ತಗುಲಿ ಸೆರೆಸಿಕ್ಕ ಆರೋಪಿ (Police Firing).

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೂಕನಬೆಟ್ಟದ ಬಳಿ ಘಟನೆ ನಡೆದಿದೆ. ಭಾನುವಾರ ಮುಂಜಾನೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಂದ ಫೈರಿಂಗ್ ನಡೆದಿದೆ.

ಒಂದು ತಿಂಗಳ ಅಂತರದಲ್ಲಿ ಎರಡು ದರೋಡೆ ಪ್ರಕರಣದಲ್ಲಿ ಭಾಗಿಯಗಿರುವ ಸತೀಶ್‌ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ. ಖಚಿತ ಮಾಹಿತಿ ಮೇರೆಗೆ ತೆರಳಿದ್ದ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದ. ಡ್ರ್ಯಾಗನ್‌ನಿಂದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜ್ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಸ್ವಯಂ ರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.

ಚನ್ನರಾಯಪಟ್ಟಣ ಹಾಗೂ ಹಿರೀಸಾವೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಸದ್ಯ ಗಾಯಗೊಂಡ ಆರೋಪಿ ಸತೀಶ್‌ನನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ. ಆರೋಪಿಯಿಂದ ದಾಳಿಗೊಳಗಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ಸಟೇಬಲ್ ಪುಟ್ಟರಾಜು ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಸಕ್ಕರೆನಾಡು ಮಂಡ್ಯದಲ್ಲಿಯೂ ಫೈರಿಂಗ್‌

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು ತಗುಲಿದೆ. ಪೊಲೀಸರ ಮೇಲೆಯೇ ದಾಳಿ ನಡೆಸಲು ಮುಂದಾದ ಕೊಲೆ ಆರೋಪಿಯ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮರಕ್ಷಣೆಗಾಗಿ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್‌ ಶ್ರೀಧರ್ ಫೈರಿಂಗ್‌ ಮಾಡಿದ್ದು, ಗುಂಡೇಟು ತಗುಲಿದ ರೌಡಿಶೀಟರ್ ಮುತ್ತುರಾಜ ಅಲಿಯಾಸ್ ‌ಡಕ್ಕ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಧಾರವಾಡ: ಪ್ರೇಮಿಗಳಿಗೆ ಕಂಟಕವಾದ ಪಾಲಕರು

ಧಾರವಾಡ: ಪ್ರೇಮಿಗಳ ಪಾಲಿಗೆ ಅವರ ಪಾಲಕರೇ ಕಂಟಕವಾಗಿದ್ದು, ನವ ದಂಪತಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಧಾರವಾಡದ ಯುವಕ ಹಾವೇರಿ ಯುವತಿ ನಡುವಿನ ಲವ್‌ ಸ್ಟೋರಿ ಇದೀಗ ಪೊಲೀಸ್‌ ಸ್ಟೇಶನ್‌ವರೆಗೂ ಬಂದಿದೆ.

ಧಾರವಾಡದ ಶಂಭು ಹಾಗೂ ಹಾವೇರಿಯ ಶಾಲಿನಿ ಕಳೆದ 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದರೆ ಇವರ ಮದುವೆಗೆ ಮನೆಯವರು ಒಪ್ಪಿಕೊಂಡಿರಲಿಲ್ಲ. ಹೀಗಾಗಿ ಪೋಷಕರ ವಿರೋಧದ ನಡುವೆಯೇ ಮದುವೆ ಆಗಿದ್ದರು. ಮದುವೆಗೂ ಶಾಲಿನಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು.

ಬೇರೆ ಬೇರೆ ಜಾತಿ ಆಗಿದ್ದಕ್ಕೆ ಶಾಲಿನಿ ಮನೆಯವರು ಮದುವೆಯನ್ನು ವಿರೋಧಿಸಿದ್ದರು. ಆಕೆಗೆ ಬೇರೆ ಯುವಕನ ಜತೆಗೆ ಮದುವೆ ಮಾಡಲು ಮುಂದಾಗಿದ್ದರು. ಇದೀಗ ದಂಪತಿ ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ರಕ್ಷಣೆ ಕೊಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಶಾಲಿನಿಯ ಪೋಷಕರಿಂದ ನವ ಕೊಲೆ ಬೆದರಿಕೆ ಬಂದಿದೆ ಎಂದು ದೂರು ನೀಡಲಾಗಿದೆ.

ಇದನ್ನೂ ಓದಿ: Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿಂದು ಗುಡುಗು ಸಹಿತ ಸಾಧಾರಣ ಮಳೆ ಎಚ್ಚರಿಕೆ

karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ತಗ್ಗಿದ್ದರೂ ಕೆಲವು ಆಯ್ದ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಬಹುದು.

VISTARANEWS.COM


on

By

Karnataka weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್‌ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ (Karnataka weather Forecast) ಸಾಮಾನ್ಯವಾಗಿತ್ತು. ಆಗಸ್ಟ್‌ 11ರಂದು ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ (Rain News) ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಜತೆಗೆ ಥಂಡಿ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಇದನ್ನೂ ಓದಿ: KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

ಮಾನ್ಸೂನ್‌‌‌ಗೆ ಲಗ್ಗೆ ಇಟ್ಟಿದೆ ಚಿಣ್ಣರ ಕಲರ್‌ ಫುಲ್‌ ರೈನ್‌ ಕೋಟ್ಸ್

ಮಾನ್ಸೂನ್‌ ಫ್ಯಾಷನ್‌ನಲ್ಲಿ ಆಕರ್ಷಕವಾದ ಕಿಡ್ಸ್ ರೈನ್‌ಕೋಟ್‌ಗಳು (Kids Raincoats) ಲಗ್ಗೆ ಇಟ್ಟಿವೆ. ಹೌದು, ಮಾನ್ಸೂನ್‌ ಸೀಸನ್‌ನಲ್ಲಿ ಎಲ್ಲಾ ವಯಸ್ಸಿನ ಮಕ್ಕಳಿಗೆ ಇಷ್ಟವಾಗುವಂತಹ ಬಗೆಬಗೆಯ ಕಾರ್ಟೂನ್‌ ಚಿತ್ತಾರವಿರುವಂತಹ ನಾನಾ ಬಗೆಯ ಆಕರ್ಷಕ ಬಣ್ಣ ಬಣ್ಣದ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ.

Kids Raincoats

ಮಕ್ಕಳನ್ನು ಉಲ್ಲಾಸಿತಗೊಳಿಸುವ ರೈನ್‌ಕೋಟ್ಸ್

“ ಪ್ರತಿ ಬಾರಿಯೂ ಮಾನ್ಸೂನ್‌ನಲ್ಲಿ ಮಕ್ಕಳಿಗೆ ನಾನಾ ವೆರೈಟಿ ವಿನ್ಯಾಸದ ರೈನ್‌ಕೋಟ್‌ಗಳು ಬಿಡುಗಡೆಗೊಳ್ಳುತ್ತಿರುತ್ತವೆ. ಮಕ್ಕಳು ಇಷ್ಟಪಟ್ಟು ಧರಿಸುವಂತಹ ಕಲರ್‌ ಹಾಗೂ ಚಿತ್ತಾರಗಳಿರುವಂತವು ಹೆಚ್ಚಾಗಿ ಬಿಕರಿಯಾಗುತ್ತವೆ. ಇದಕ್ಕೆ ಪೂರಕ ಎಂಬಂತೆ, ಮಳೆಗಾಲದಲ್ಲಿ ಔಟಿಂಗ್‌ ಅಥವಾ ಹೊರಗಡೆ ಹೋದಾಗ ಆಕರ್ಷಕವಾಗಿ ಕಾಣಿಸುವಂತಹ ಕಲರ್‌ಫುಲ್‌ ಡಿಸೈನ್‌ನ ರೈನ್‌ಕೋಟ್‌ಗಳು ಲೆಕ್ಕವಿಲ್ಲದಷ್ಟು ಡಿಸೈನ್‌ನಲ್ಲಿ ಆಗಮಿಸಿವೆ. ಉತ್ತಮ ಗುಣ ಮಟ್ಟದ ಬ್ರಾಂಡ್‌ಗಳಿಂದಿಡಿದು, ರಸ್ತೆ ಬದಿ ಮಾರುವಂತಹ ಲೋಕಲ್‌ ಡಿಸೈನ್‌ನಲ್ಲೂ ದೊರೆಯುತ್ತಿವೆ. ಆದರೆ, ಇವನ್ನು ಕೊಳ್ಳುವಾಗ ಮೆಟಿರಿಯಲ್‌ ಪರಿಶೀಲಿಸಿ ಕೊಳ್ಳುವುದು ಮುಖ್ಯ “ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌‌ಗಳು.

Kids Raincoats

ಟ್ರೆಂಡ್‌ನಲ್ಲಿರುವ ಚಿಣ್ಣರ ರೈನ್‌ಕೋಟ್ಸ್

ವಾಟರ್‌ ಪ್ರೂಫ್‌ನ ಹೂಡಿ ರೈನ್‌ಕೋಟ್ಸ್, ಯೂನಿಸೆಕ್ಸ್ ರೈನ್‌ಕೋಟ್ಸ್, ಅನಿಮಲ್‌ ಪ್ರಿಂಟ್‌, ಕಾರ್ಟೂನ್‌ ಪ್ರಿಂಟ್, ಗ್ರಾಫಿಕ್ ಪ್ರಿಂಟ್‌, ಪಾಲಿಸ್ಟರ್‌, ತ್ರಿ ಡಿ ಕಲರ್‌, ಹೆಣ್ಣುಮಕ್ಕಳ ಬಾರ್ಬಿ ಪ್ರಿಂಟ್ಸ್, ಕೊರಿಯನ್‌ ಸ್ಟೈಲ್‌, ಕೇಪ್‌ ಸ್ಟೈಲ್‌, ಟ್ರೆಂಚ್‌ ಕೋಟ್‌ ಸ್ಟೈಲ್‌, ಬ್ಯಾಕ್‌ಪ್ಯಾಕ್‌ ಕವರ್‌ ರೈನ್‌ಕೋಟ್‌ಗಳು ಈ ಸೀಸನ್‌ನಲ್ಲಿ ಸಾಕಷ್ಟು ಟ್ರೆಂಡಿಯಾಗಿವೆ. ಎಲ್ಲರೂ ಅವರವರ ಮಕ್ಕಳಿಗೆ ಮ್ಯಾಚ್‌ ಆಗುವಂತಹ ರೈನ್‌ಕೋಟ್‌ಗಳನ್ನು ಪೋಷಕರು ಖರೀದಿಸುವುದು ಕೂಡ ಇಂದು ಹೆಚ್ಚಾಗಿದೆ ಎನ್ನುತ್ತಾರೆ ರೈನ್‌ಕೋಟ್‌ ವ್ಯಾಪಾರಿಗಳು.

Kids Raincoats
Kids Raincoats

ಆನ್‌ಲೈನ್‌ನಲ್ಲಿ ರೈನ್‌ಕೋಟ್‌ ಅಬ್ಬರ

ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆಂದೇ ಈಗಾಗಲೇ ಕಿಡ್ಸ್ ಕೆಟಗರಿಯಲ್ಲಿ ಲೆಕ್ಕವಿಲ್ಲದಷ್ಟು ಬಗೆಯ ರೈನ್‌ಕೋಟ್‌ಗಳು ಲಗ್ಗೆ ಇಟ್ಟಿವೆ. ಕೆಲವು ಆನ್‌ಲೈನ್‌ ಶಾಪ್‌ಗಳು ಮಾನ್ಸೂನ್‌ ಆಫರ್‌ನಲ್ಲಿ ಕಡಿಮೆ ಬೆಲೆ ನಿಗಧಿಪಡಿಸಿದ್ದರೇ, ಇನ್ನು ಕೆಲವು ನ್ಯೂ ಅರೈವಲ್‌ ಕೆಟಗರಿಯಲ್ಲಿ ದರ ಹೆಚ್ಚಿಸಿವೆ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌ಗಳು.

ಇದನ್ನೂ ಓದಿ: Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

ಹೀಗಿರಲಿ ಮಕ್ಕಳ ರೈನ್‌ಕೋಟ್‌ ಆಯ್ಕೆ

  • ವಾಟರ್‌ಪ್ರೂಫ್‌ ರೈನ್‌ಕೋಟ್‌ಗೆ ಆದ್ಯತೆ ನೀಡಿ.
  • ಆದಷ್ಟೂ ಮಂಡಿ ಕೆಳಗಿನ ತನಕ ಉದ್ದವಿರುವ ರೈನ್‌ಕೋಟ್‌ ಖರೀದಿಸಿ.
  • ಮನೆಯಲ್ಲಿ ಇಬ್ಬರಿಗಿಂತ ಮಕ್ಕಳು ಹೆಚ್ಚಿದ್ದಲ್ಲಿ ಯೂನಿಸೆಕ್ಸ್ ರೈನ್‌ಕೋಟ್‌ ಬಳಸಬಹುದು.
  • ಟ್ರೆಂಡ್‌ಗೆ ತಕ್ಕಂತೆ ಬಿಡುಗಡೆಗೊಂಡಿರುವ ರೈನ್‌ಕೋಟ್‌ ಕೊಳ್ಳಿ.
  • ಮಕ್ಕಳನ್ನು ಉಲ್ಲಾಸಿತಗೊಳಿಸುವಂತಹ ಪ್ರಿಂಟ್ಸ್ ಇರುವಂತಹ ಕಲರ್‌ಫುಲ್‌ ರೈನ್‌ಕೋಟ್‌ ಚೂಸ್‌ ಮಾಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

Karnataka weather Forecast : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಳೆಯು ಅಬ್ಬರಿಸಿದ್ದು, ಭಾನುವಾರಕ್ಕೂ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Koo

ಬೆಂಗಳೂರು: ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆಯಿಂದ (Rain News) ಶುರುವಾಗಿ ಸಂಜೆ ವೇಳೆಗೆ ಹಲವೆಡೆ ಸಾಧಾರಣ (Karnataka weather Forecast) ಮಳೆಯಾಗಿದೆ. ಮುಂಜಾವಿನ ಮಳೆಯಿಂದ ಜಾಗಿಂಗ್, ರನ್ನಿಂಗ್ ಹೋಗುವವರಿಗೆ ತೊಂದರೆ ಆಯಿತು.

ನಗರದ ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಶಿವಾಜಿನಗರ, ಮಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಶೇಷಾದ್ರಿಪುರಂ, ವಿಧಾನಸೌಧದಲ್ಲೂ ಮಳೆಯ ಸಿಂಚನವಾಗಿದೆ.

ಭಾರಿ ಮಳೆಗೆ ಕಾಳಿ ಸೇತುವೆ ಕುಸಿತದಿಂದಾಗಿ ಹೊಸ ಸೇತುವೆಯಲ್ಲಿ ಹೆಚ್ಚಾದ ವಾಹನ ದಟ್ಟಣೆ

ಉತ್ತರ ಕನ್ನಡದ ಕಾರವಾರದ ಕಾಳಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಹೊಸ ಸೇತುವೆಯು ಕಾರವಾರ-ಗೋವಾ ಸಂಪರ್ಕಿಸಲಿದೆ.

ಒಂದೇ ಸೇತುವೆ ಮೇಲೆ ದ್ವಿಮುಖ ಸಂಚಾರದಿಂದ ವಾಹನ ದಟ್ಟಣೆ ಎದುರಾಗಿದ್ದು, ಒಂದರ ಹಿಂದೆ ಒಂದರಂತೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ-ಮಂಗಳೂರು ನಡುವಿನ ಸರಕು ಸಾಗಾಟಕ್ಕೆ ತೊಡಕು ಉಂಟಾಗಿದೆ. ಹೊಸ ಸೇತುವೆಗೆ ಬೀದಿದೀಪ ಅಳವಡಿಸದೇ ಐಆರ್‌ಬಿ ನಿರ್ಲಕ್ಷ್ಯ ವಹಿಸಿದ್ದು, ರಾತ್ರಿ ವೇಳೆ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಹೊಸ ಸೇತುವೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸವಾರರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಸಾಧಾರಣ ಮಳೆ ಸಾಧ್ಯತೆ

ನಾಳೆ ಭಾನುವಾರ ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Shiradi Landslide: ಶಿರಾಡಿ ಘಾಟಿ ರೈಲ್ವೇ ಹಳಿ ಮೇಲೆ ಮತ್ತೆ ಭೂಕುಸಿತ, ರೈಲು ಸಂಚಾರ ರದ್ದು; ಏರ್‌ಫೋರ್ಸ್‌ ಪರೀಕ್ಷೆ ತಪ್ಪಿದ್ದಕ್ಕೆ ಅಭ್ಯರ್ಥಿ ಕಣ್ಣೀರು

Shiradi Landslide: ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಹಾಸನ- ಮಂಗಳೂರು ರೈಲು ಮಾರ್ಗದ ಮೇಲೆ ಮರಗಳ ಸಮೇತವಾಗಿ ಭಾರಿ ಪ್ರಮಾಣದ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಭೂಕುಸಿತವಾಗಿದ್ದು, ರೈಲುಗಳ ಸಂಚಾರ ಸ್ಥಗಿತವಾಗಿದೆ.

VISTARANEWS.COM


on

shiradi landslide trains cancelled
Koo

ಹಾಸನ: ಬೆಂಗಳೂರು- ಮಂಗಳೂರು (Bangalore- Mangalore) ಸಂಪರ್ಕಿಸುವ ರೈಲ್ವೇ ಹಳಿ (Railway Track) ಮೇಲೆ ಶಿರಾಡಿ ಘಾಟಿ (Shiradi Ghat) ಪ್ರದೇಶದಲ್ಲಿ ನಿನ್ನೆ ರಾತ್ರಿ ಮತ್ತೆ ಭಾರಿ ಪ್ರಮಾಣದಲ್ಲಿ (Shiradi Landslide) ಭೂಕುಸಿತವಾಗಿದೆ. ಇದರಿಂದಾಗಿ ರೈಲುಗಳ ಸಂಚಾರ (trains Cancelled) ಅಸ್ತವ್ಯಸ್ತವಾಗಿದೆ. ರೈಲುಗಳು ರದ್ದಾಗಿದ್ದರಿಂದ ಏರ್‌ಫೋರ್ಸ್ ಪರೀಕ್ಷೆ (Airforce Exam) ತಪ್ಪಿಸಿಕೊಂಡು ಅಭ್ಯರ್ಥಿಯೊಬ್ಬರು ಸೋಶಿಯಲ್‌ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದಾರೆ.

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಹಾಸನ- ಮಂಗಳೂರು ರೈಲು ಮಾರ್ಗದ ಮೇಲೆ ಮರಗಳ ಸಮೇತವಾಗಿ ಭಾರಿ ಪ್ರಮಾಣದ ಮಣ್ಣು ಕುಸಿತವಾಗಿದೆ. ಕಿಲೋಮೀಟರ್ ಸಂಖ್ಯೆ 42/43ರ ಮಧ್ಯೆ ಭೂಕುಸಿತವಾಗಿದ್ದು, ರೈಲುಗಳ ಸಂಚಾರ ಸ್ಥಗಿತವಾಗಿದೆ. ಕಳೆದ ವಾರವಷ್ಟೇ ಈ ಮಾರ್ಗದಲ್ಲಿ ದೊಡ್ಡ ಪರಮಾಣದ ಗುಡ್ಡ ಕುಸಿತವಾಗಿತ್ತು. ಸುಮಾರು 430 ಮಂದಿ ಕಾರ್ಮಿಕರು ಹಗಲು ಇರುಳು ಕೆಲಸ ಮಾಡಿ ಮಾರ್ಗ ತೆರವು ಮಾಡಿದ್ದರು.

ಮಣ್ಣು ಕುಸಿತದ್‌ ಪರಿಣಾಮ ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಕಲೇಶಪುರ, ಎಡಕುಮೇರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತುಹೋಗಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಟ ಅನುಭವಿಸಿದರು. ನಿನ್ನೆ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಪ್ರಯಾಣಿಕರಿಗೆ ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಲಾಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

ಪರೀಕ್ಷೆ ತಪ್ಪಿದ್ದಕ್ಕೆ ಬೇಸರ

ರೈಲು ವ್ಯತ್ಯಯದಿಂದ ಅಭ್ಯರ್ಥಿಯೊಬ್ಬರಿಗೆ ಏರ್‌ಫೋರ್ಸ್‌ ಪರೀಕ್ಷೆಗೆ ಹಾಜರಾಗುವುದು ತಪ್ಪಿಹೋಗಿದೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ವಿದ್ಯಾರ್ಥಿ ಬೇಸರ ತೋಡಿಕೊಂಡಿದ್ದಾರೆ. ಮಂಗಳೂರಿಗೆ ಏರ್‌ಫೋರ್ಸ್ ಪರೀಕ್ಷೆಗಾಗಿ ತೆರಳುತ್ತಿದ್ದ ರೋಹಿತ್ ಸಿಂಗ್ ರಾವತ್ ದಾರಿ ಮಧ್ಯೆ ಸಿಲುಕಿಕೊಂಡಿದ್ದಾರೆ.

ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಮಂಗಳೂರಿಗೆ ಟ್ರೈನ್‌ನಲ್ಲಿ ರಾವತ್‌ ಪ್ರಯಾಣಿಸುತ್ತಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಅಬ್ಬಕ್ಕ ಸರ್ಕಲ್ ಬಳಿಯ ಖಾಸಗಿ ಕಾಲೇಜಿನಲ್ಲಿ ಪರೀಕ್ಷೆ ನಡೆದಿದೆ. ಇದರಲ್ಲಿ ಭಾಗವಹಿಸಲು ರಾವತ್‌ಗೆ ಸಾಧ್ಯವಾಗಿಲ್ಲ. ʼಬೆಂಗಳೂರು- ಮಂಗಳೂರು ನಡುವಿನ ರೈಲು 4 ಗಂಟೆ ಕಾಲ ತಡವಾಗಿ ಚಲಿಸುತ್ತಿದೆ. ಈ ಕಾರಣದಿಂದಾಗಿ ನನ್ನ ಪರೀಕ್ಷಾ ಕೇಂದ್ರವನ್ನು ತಲುಪಲು ನನಗೆ ಸಾಧ್ಯವಾಗುವುದಿಲ್ಲ. ಇದರ ಹೊಣೆ ಹೊರುವವರು ಯಾರು?ʼ ಎಂದು ಪೋಸ್ಟ್ ಹಾಕಿ ಅಭ್ಯರ್ಥಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

Continue Reading
Advertisement
Kolkata Doctor Murder Case
ದೇಶ1 min ago

ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Duniya Vijay bheema collection 2nd day
ಸ್ಯಾಂಡಲ್ ವುಡ್1 min ago

Duniya Vijay: ಎರಡನೇ ದಿನವೂ ಅಬ್ಬರ ಮುಂದುವರಿಸಿದ ʻಭೀಮʼ: ಕಲೆಕ್ಷನ್‌ ಎಷ್ಟು?

Sarabjot Singh
ಕ್ರೀಡೆ19 mins ago

Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

Hindenburg
ದೇಶ48 mins ago

Hindenburg: ಹಿಂಡನ್‌ಬರ್ಗ್‌ ಸ್ಫೋಟಕ ವರದಿ: ಆರೋಪ ತಳ್ಳಿ ಹಾಕಿದ ಅದಾನಿ ಗ್ರೂಪ್‌

Money Guide
ಮನಿ-ಗೈಡ್49 mins ago

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Mohammed Siraj
ಕ್ರೀಡೆ50 mins ago

Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Tungabhadra Dam
ಕರ್ನಾಟಕ1 hour ago

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Viral Video
ವೈರಲ್ ನ್ಯೂಸ್2 hours ago

Viral Video: ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ಚುಂಬಿಸಿದ ವಿದ್ಯಾರ್ಥಿನಿ! ತರಗತಿಯಲ್ಲೇ ಪ್ರಣಯ! ವಿಡಿಯೊ ನೋಡಿ

building collpase
ದಾವಣಗೆರೆ2 hours ago

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Shakib Al Hasan
ಕ್ರೀಡೆ2 hours ago

Shakib Al Hasan: ಸೂಪರ್‌ ಓವರ್‌ ಆಡಲು ನಿರಾಕರಿಸಿದ ಶಕಿಬ್; ಟೂನಿಯಿಂದಲೇ ಹೊರಬಿದ್ದ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌