Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ - Vistara News

ವಿಜಯನಗರ

Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

Tungabhadra Dam: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

VISTARANEWS.COM


on

Tungabhadra Dam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಡ್ಯಾಮೇಜ್ ಆದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗುತ್ತಿದೆ. ಇದರಿಂದ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಭೇಟಿ ನೀಡಿ ಪರಿಶೀಲಿಸಿದ್ದು, ದುರಸ್ತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.

ಜಲಾಶಯ ವೀಕ್ಷಣೆ ವೇಳೆ ಡಿಸಿಎಂ ಡಿಕೆಶಿಗೆ ಬಳ್ಳಾರಿ, ವಿಜಯನಗರ, ಕೊಪ್ಪಳದ ಸಂಸದರು, ಶಾಸಕರು, ಟಿಬಿ ಬೋರ್ಡ್ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಜಲಾಶಯಕ್ಕೆ ಮಂಗಳವಾರ ಭೇಟಿ ನೀಡದ್ದಾರೆ ಸಿಎಂ

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು, ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Tungabhadra Dam
ತುಂಗಭದ್ರಾ ಜಲಾಶಯ

ಕೊಪ್ಪಳ / ವಿಜಯನಗರ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ ಪಾತ್ರದಕ್ಕೆ ಹರಿದು ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಧಾವಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಒಂದೇ ಗೇಟ್‌ನಿಂದ 35 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಹರಿಯುತ್ತಿದ್ದು, ನದಿ ಪಾತ್ರದಲ್ಲಿರುವ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗಿರುವುಸಿಂದ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಸಂಪೂರ್ಣ ಭರ್ತಿಯಾಗಿದ್ದ ಜಲಾಶಯ ಗೇಟ್‌ಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಹೀಗಾಗಿ ತನ್ನಿಂದ ತಾನೇ ಓಪನ್ ಆಗಿದೆ. ಜಲಾಶಯ ಇತಿಹಾಸದಲ್ಲೇ ಗೇಟ್ ಕಿತ್ತೋಗಿರುವುದು ಇದು ಮೊದಲ ಬಾರಿ.

ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು

ಶನಿವಾರ ರಾತ್ರಿ ಗೇಟ್‌ ಓಪನ್‌ ಆಗಿದ್ದು, ಕೂಡಲೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ವಿಜಯನಗರ ಜಿಲ್ಲಾ ಎಸ್‌ಪಿ ಶ್ರೀ ಹರಿಬಾಬು ಬಿ.ಎಲ್‌. ಆಗಮಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಮಾತ್ರವಲ್ಲ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳು, ಅದಿಕಾರಿಗಳು ಅಲರ್ಟ್‌ ಆಗಿದ್ದಾರೆ. ವಿಜಯನಗರ ಶಾಸಕ ಗವಿಯಪ್ಪ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಮಧ್ಯರಾತ್ರಿಯಿಂದಲೇ ಡ್ಯಾಂ ಗೇಟ್ ಬಳಿ ಪೊಲೀಸರು ಜಮಾಯಿಸಿದ್ದು, ಪ್ರವೇಶ ನಿರಾಕರಿಸಲಾಗಿದೆ.

ಜಲಾಶಯದ 20 ಗೇಟ್‌ಗಳಿಂದ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ತಿಳಿಸಿದರು. ʼʼಗೇಟ್ ಕಟ್ ಆಗಿರುವ ಕುರಿತು ಜಲ ಸಂಪನ್ಮೂಲ ಸಚಿವರಿಗೆ ಮಾಹಿತಿ ನೀಡಿಲಾಗಿದೆ. ಮುಖ್ಯಮಂತ್ರಿಗೂ ಮಾಹಿತಿ ನೀಡುವ ಪಯತ್ನ ನಡೆದಿದೆ. ಸುಮಾರು 60 ಟಿಎಂಸಿ ನೀರು ಜಲಾಶಯದಿಂದ ನದಿ ಮೂಲಕ ಹೊರ ಬಿಡಬೇಕಿದೆ. ಇಷ್ಟು ಪ್ರಮಾಣದ ನೀರು ಹೊರ ಹೋಗಲು ನಾಲ್ಕಕ್ಕೂ ಹೆಚ್ಚು ದಿನ ಬೇಕು. ಚೈನ್ ಲಿಂಕ್ ಕಟ್ ಆಗಿರುವ ಗೇಟ್ ಸರಿಪಡಿಸುವ ಬಗ್ಗೆ ವಿಶೇಷ ತಾಂತ್ರಿಕ ತಂಡ ಆಗಮಿಸಲಿದೆʼʼ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

ತುಂಗಭದ್ರಾ ಜಲಾಶಯದ 19ನೇ ಗೇಟ್ ಸಂಪೂರ್ಣ ಡ್ಯಾಮೇಜ್ ಆಗಿರುವ ಸುದ್ದಿ ತಿಳಿಯುತ್ತಲೇ ವಿಜಯನಗರ ಶಾಸಕ ಗವಿಯಪ್ಪ ಅವರು ಸ್ವತಃ ಕಾರು ಚಲಾಯಿಸಿಕೊಂಡು ಡ್ಯಾಂಗೆ ಬಳಿಗೆ ಮಧ್ಯರಾತ್ರಿಯೇ ಆಗಮಿಸಿದರು. ಸ್ಥಳಕ್ಕೆ ಭೇಟಿ ನೀಡಿದ ವಿಜಯನಗರ ಎಸ್.ಪಿ ಹರಿಬಾಬು ಅವರಿಂದ ಶಾಸಕ ಗವಿಯಪ್ಪ ಮಾಹಿತಿ ಪಡೆದುಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Tungabhadra Dam: ಟಿಬಿ ಡ್ಯಾಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಶೀಘ್ರ ಕ್ರಸ್ಟ್ ಗೇಟ್ ದುರಸ್ತಿಗೆ ವಿಜಯೇಂದ್ರ ಆಗ್ರಹ

Tungabhadra Dam: ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ ಮಾಡಿದ್ದಾರೆ.

VISTARANEWS.COM


on

Tungabhadra Dam
Koo

ಬೆಂಗಳೂರು: ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್‌ ಕಿತ್ತು ಹೋಗಿರುವ ವಿಚಾರಕ್ಕೆ ಅಧಿಕಾಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಮೊದಲೇ ನೊಂದಿರುವ ಜನಕ್ಕೆ
ಜಲಬಾಧೆ ಆವರಿಸದಿರಲಿ, ಇಂಥ ಬಹುದೊಡ್ಡ ಡ್ಯಾಂ (Tungabhadra Dam) ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಳ್ಳಾರಿ ಜಿಲ್ಲೆಯ ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ. ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ, ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ, ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆಯಾಗುವ ಆತಂಕ ಆರಂಭವಾಗಿದೆ. ಇಂಥ ಬಹುದೊಡ್ಡ ಡ್ಯಾಮ್ ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.

ನಾಳೆ ಮಧ್ಯಾಹ್ನ ಜಲಾಶಯಕ್ಕೆ ಬಿ.ವೈ. ವಿಜಯೇಂದ್ರ ಭೇಟಿ

ತುಂಗಭದ್ರಾ ಡ್ಯಾಂ ಗೇಟ್‌ ಹಾನಿ ಹಿನ್ನೆಲೆಯಲ್ಲಿ ನಾಳೆ ತುಂಗಭದ್ರಾ ಅಣೆಕಟ್ಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಭೇಟಿ ನೀಡಲಿದ್ದು, ಅಣೆಕಟ್ಟು ಪರಿಶೀಲನೆ ಮಾಡಿ ಮಾಹಿತಿ ಪಡೆಯಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಮೃತ ಪಿಎಸ್ಐ ಪರಶುರಾಮ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

ವಿಜಯನಗರ: ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಹೀಗಾಗಿ ಜಲಾಶಯಕ್ಕೆ (Tungabhadra Dam) ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿ, ಆದಷ್ಟು ಬೇಗ ಡ್ಯಾಂ ಗೇಟ್ ದುರಸ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಡಿ.ಕೆ. ಶಿವಕುಮಾರ್ ಮಾತನಾಡಿ, ಡ್ಯಾಂ ಬಗ್ಗೆ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಡ್ಯಾಂ ಮೇಲೆ ನಿಂತು ಸಂಪೂರ್ಣವಾಗಿ ವೀಕ್ಷಣೆ ಮಾಡಿದ್ದೇನೆ. ರಾತ್ರಿ ವೇಳೆ 10 ಗೇಟ್ ಕಾರ್ಯ ನಿರ್ವಹಣೆ ಮಾಡುತ್ತಿದ್ದವು. ಗೇಟ್ ನಂಬರ್ 19ರ ಚೈನ್ ಕಟ್ ಆಗಿ ಗೇಟ್ ಕಳಚಿ ಬಿದ್ದಿದೆ. ಹೀಗಾಗಿ ವಿಜಯನಗರ ಬಳ್ಳಾರಿಯ ಎಲ್ಲಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

ಮೊದಲು ರೈತರನ್ನು ಬದುಕಿಸಬೇಕು, ರೈತರನ್ನು ಉದ್ಧಾರ ಮಾಡೋದಕ್ಕೆ ಅನೇಕ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ತುಂಗಭದ್ರಾ ಜಲಾಶಯವು 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ನೀರು ಹೆಚ್ಚಿಗೆ ಇದ್ದಿದ್ದರಿಂದ ನೀರನ್ನು ನದಿಗೆ ಬಿಡಲಾಗಿದೆ. ಒಂದೇ ಗೇಟ್‌ನಲ್ಲಿ ಹೆಚ್ಚು ನೀರು ಹೋದಾಗ ಸಮಸ್ಯೆ ಆಗುತ್ತೆ, ಹೀಗಾಗಿ 98 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಒಂದೇ ಗೇಟ್‌ನಲ್ಲಿ 35 ಸಾವಿರ ಕ್ಯೂಸೆಕ್ ಹೋಗುತ್ತಿದೆ ಎಂದರು.

ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಅಕ್ಟೋಬರ್ ಅಷ್ಟೋತ್ತಿಗೆ ಮತ್ತೆ 60 ಟಿಎಂಸಿ ನೀರು ಜಲಾಶಯಕ್ಕೆ ಬರುವ ಸಾಧ್ಯತೆ ಇದೆ. 5 ಟಿಎಂಸಿಯಷ್ಟು ನೀರು ಈಗಾಗಲೇ ಹರಿದು ಹೋಗಿದೆ. ಟೆಕ್ನಿಕಲ್ ಟೀಂ, ನುರಿತ ತಂತ್ರಜ್ಞ ನಾರಾಯಣ ಸೇರಿ ಜೆಎಸ್‌ಡಬ್ಲ್ಯು ಮತ್ತಿತರರ ಸಹಾಯ ಕೇಳಿದ್ದೇವೆ. ಆದಷ್ಟು ಬೇಗ ಗೇಟ್ ದುರಸ್ತಿ ಮಾಡೋದಕ್ಕೆ ಹೇಳಲಾಗಿದೆ ಎಂದು ತಿಳಿಸಿದರು.

ಮೊದಲು ಯಾರು ಟಿಬಿ ಡ್ಯಾಂ ಗೇಟ್ ರೆಡಿ ಮಾಡಿದ್ದರೋ ಅವರಿಗೆ ಹೇಳಿದ್ದೇವೆ. ನಾವೆಲ್ಲರೂ ಶತಪ್ರಯತ್ನ ಮಾಡಿ ನೀರು ಉಳಿಸುವ ಕೆಲಸ ಮಾಡುತ್ತೇವೆ. ಯಾವುದೇ ರಾಜಕಾರಣ ಮಾಡದೇ ನೀರು ಉಳಿಸುವ ಕೆಲಸ ಮಾಡುತ್ತೇವೆ. ಎಲ್ಲೆಲ್ಲಿ ನೀರು ಉಳಿಸೋದಕ್ಕೆ ಸಾಧ್ಯ, ಅಲ್ಲಿ ಕೆಲಸ ಮಾಡುತ್ತೇವೆ. ಆಂಧ್ರ, ತೆಲಂಗಾಣ ರಾಜ್ಯದ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ರೈತರನ್ನ ಮೊದಲು ಉಳಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

8 ತಿಂಗಳಿನಿಂದ ಟಿಬಿ ಡ್ಯಾಂಗೆ ಮುಖ್ಯ ಎಂಜಿನಿಯರ್ ನೇಮಕ ಆಗಿಲ್ಲ ಅನ್ನೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಯಾರ ಮೇಲೂ ದೂರುವುದಿಲ್ಲ, ಮೊದಲು ಗೇಟ್ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಒಂದು ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Continue Reading

ಮಳೆ

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Karnataka Weather Forecast : ಮಲೆನಾಡು ಭಾಗದಲ್ಲಿ ಮಳೆಯು ಬಿಡುವು ಕೊಟ್ಟಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಸೋಬಾನೆ ಹಾಡುತ್ತಾ ಭತ್ತದ ನಾಟಿ ಮಾಡಿದ್ದಾರೆ. ಇತ್ತ ಹಾವೇರಿಯಲ್ಲಿ ನಿರಂತರ ಮಳಗೆ ಸರ್ಕಾರಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.

ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ

ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.

ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.

ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Tungabhadra Dam: ಮೊದಲು ಯಾರು ಟಿಬಿ ಡ್ಯಾಂ ಗೇಟ್ ರೆಡಿ ಮಾಡಿದ್ದರೋ ಅವರಿಗೆ ಹೇಳಿದ್ದೇವೆ. ನಾವೆಲ್ಲರೂ ಶತಪ್ರಯತ್ನ ಮಾಡಿ ನೀರು ಉಳಿಸುವ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Tungabhadra Dam
Koo

ವಿಜಯನಗರ: ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಹೀಗಾಗಿ ಜಲಾಶಯಕ್ಕೆ (Tungabhadra Dam) ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭಾನುವಾರ ಭೇಟಿ ನೀಡಿ ಪರಿಶೀಲಿಸಿ, ಆದಷ್ಟು ಬೇಗ ಡ್ಯಾಂ ಗೇಟ್ ದುರಸ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಡಿ.ಕೆ. ಶಿವಕುಮಾರ್ ಮಾತನಾಡಿ, ಡ್ಯಾಂ ಬಗ್ಗೆ ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಡ್ಯಾಂ ಮೇಲೆ ನಿಂತು ಸಂಪೂರ್ಣವಾಗಿ ವೀಕ್ಷಣೆ ಮಾಡಿದ್ದೇನೆ. ರಾತ್ರಿ ವೇಳೆ 10 ಗೇಟ್ ಕಾರ್ಯ ನಿರ್ವಹಣೆ ಮಾಡುತ್ತಿದ್ದವು. ಗೇಟ್ ನಂಬರ್ 19ರ ಚೈನ್ ಕಟ್ ಆಗಿ ಗೇಟ್ ಕಳಚಿ ಬಿದ್ದಿದೆ. ಹೀಗಾಗಿ ವಿಜಯನಗರ ಬಳ್ಳಾರಿಯ ಎಲ್ಲಾ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದು ತಿಳಿಸಿರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

ಮೊದಲು ರೈತರನ್ನು ಬದುಕಿಸಬೇಕು, ರೈತರನ್ನು ಉದ್ಧಾರ ಮಾಡೋದಕ್ಕೆ ಅನೇಕ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ತುಂಗಭದ್ರಾ ಜಲಾಶಯವು 105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ನೀರು ಹೆಚ್ಚಿಗೆ ಇದ್ದಿದ್ದರಿಂದ ನೀರನ್ನು ನದಿಗೆ ಬಿಡಲಾಗಿದೆ. ಒಂದೇ ಗೇಟ್‌ನಲ್ಲಿ ಹೆಚ್ಚು ನೀರು ಹೋದಾಗ ಸಮಸ್ಯೆ ಆಗುತ್ತೆ, ಹೀಗಾಗಿ 98 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಒಂದೇ ಗೇಟ್‌ನಲ್ಲಿ 35 ಸಾವಿರ ಕ್ಯೂಸೆಕ್ ಹೋಗುತ್ತಿದೆ ಎಂದರು.

ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆ ಆಗುವ ನಿರೀಕ್ಷೆ ಇದೆ. ಅಕ್ಟೋಬರ್ ಅಷ್ಟೋತ್ತಿಗೆ ಮತ್ತೆ 60 ಟಿಎಂಸಿ ನೀರು ಜಲಾಶಯಕ್ಕೆ ಬರುವ ಸಾಧ್ಯತೆ ಇದೆ. 5 ಟಿಎಂಸಿಯಷ್ಟು ನೀರು ಈಗಾಗಲೇ ಹರಿದು ಹೋಗಿದೆ. ಟೆಕ್ನಿಕಲ್ ಟೀಂ, ನುರಿತ ತಂತ್ರಜ್ಞ ನಾರಾಯಣ ಸೇರಿ ಜೆಎಸ್‌ಡಬ್ಲ್ಯು ಮತ್ತಿತರರ ಸಹಾಯ ಕೇಳಿದ್ದೇವೆ. ಆದಷ್ಟು ಬೇಗ ಗೇಟ್ ದುರಸ್ತಿ ಮಾಡೋದಕ್ಕೆ ಹೇಳಲಾಗಿದೆ ಎಂದು ತಿಳಿಸಿದರು.

ಮೊದಲು ಯಾರು ಟಿಬಿ ಡ್ಯಾಂ ಗೇಟ್ ರೆಡಿ ಮಾಡಿದ್ದರೋ ಅವರಿಗೆ ಹೇಳಿದ್ದೇವೆ. ನಾವೆಲ್ಲರೂ ಶತಪ್ರಯತ್ನ ಮಾಡಿ ನೀರು ಉಳಿಸುವ ಕೆಲಸ ಮಾಡುತ್ತೇವೆ. ಯಾವುದೇ ರಾಜಕಾರಣ ಮಾಡದೇ ನೀರು ಉಳಿಸುವ ಕೆಲಸ ಮಾಡುತ್ತೇವೆ. ಎಲ್ಲೆಲ್ಲಿ ನೀರು ಉಳಿಸೋದಕ್ಕೆ ಸಾಧ್ಯ, ಅಲ್ಲಿ ಕೆಲಸ ಮಾಡುತ್ತೇವೆ. ಆಂಧ್ರ, ತೆಲಂಗಾಣ ರಾಜ್ಯದ ಅಧಿಕಾರಿಗಳ ಜೊತೆ ಮಾತನಾಡಿದ್ದೇವೆ. ರೈತರನ್ನ ಮೊದಲು ಉಳಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

8 ತಿಂಗಳಿನಿಂದ ಟಿಬಿ ಡ್ಯಾಂಗೆ ಮುಖ್ಯ ಎಂಜಿನಿಯರ್ ನೇಮಕ ಆಗಿಲ್ಲ ಅನ್ನೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಯಾರ ಮೇಲೂ ದೂರುವುದಿಲ್ಲ, ಮೊದಲು ಗೇಟ್ ಸರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಒಂದು ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Continue Reading

ಬೆಂಗಳೂರು

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Tungabhadra Dam: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ” ಎಂದು ಹೇಳಿದ್ದಾರೆ.

VISTARANEWS.COM


on

Tungabhadra Dam
Koo

ಬೆಂಗಳೂರು: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ (Tungabhadra Dam)ದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ (Dr. G. Parameshwar) ಅವರು, ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ. ಕ್ರಸ್ಟ್ ಗೇಟ್ ರಿಪೇರಿ ಮಾಡಲು ಸಾಧ್ಯವಿದೆʼʼ ಎಂದು ಅಭಯ ನೀಡಿದ್ದಾರೆ.

ʼʼಪ್ರವಾಹ ಭೀತಿ ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳುತ್ತಿದ್ದಾರೆ. ತಾಂತ್ರಿಕ ತಂಡ ಹೋದ ನಂತರ ಎಲ್ಲ ಸರಿಯಾಗುವ ವಿಶ್ವಾಸ ಇದೆʼʼ ಎಂದು ತಿಳಿಸಿದ್ದಾರೆ.

ಸರ್ಕಾರ ‌ಎಲ್ಲಿ‌ದೆ? ಮಾಜಿ ಸಚಿವ ಹಾಲಪ್ಪ ಆಚಾರ್ ಆಕ್ರೋಶ

ಕೊಪ್ಪಳ: ತುಂಗಭದ್ರಾ ಜಲಾಶಯ ಪರಿಶೀಲಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ʼʼಜಲಾಶಯದ 19ನೇ ಗೇಟ್ ಅಡ್ರೆಸ್ ಇಲ್ಲದಂತೆ ನಾಪತ್ತೆಯಾಗಿದೆ. ಉಳಿದ ಗೇಟ್‌ಗಳಲ್ಲಿ ಕೂಡ ಬಿರುಕು ಕಂಡು ಬಂದಿದೆ. ಇಂತಹ ಘಟನೆ ನಡೆದಿದ್ದರೂ ಜವಾಬ್ದಾರಿ ಇರುವ ಸರ್ಕಾರ ‌ಎಲ್ಲಿ‌ದೆ?ʼʼ ಎಂದು ಪ್ರಶ್ನಿಸಿದ್ದಾರೆ.

ʼʼ4 ಜಿಲ್ಲೆಯ 10 ಲಕ್ಷ ಎಕರೆ ಪ್ರದೇಶದ ರೈತರು ಇದೇ ಡ್ಯಾಂ ನೀರನ್ನು ನೆಚ್ಚಿಕೊಂಡಿದ್ದಾರೆ. ನೀರು ಅಪಾರ ಪ್ರಮಾಣದಲ್ಲಿ ಹರಿ ಹೋಗುತ್ತಿರುವುದಿಂದ ಪ್ರವಾಹ ಭೀತಿ ಜತೆಗೆ ಮುಂದೆ ನೀರು ಖಾಲಿಯಾಗುವ ಆತಂಕವೂ ಇದೆ. ರೈತರ ತಲೆ ಮೇಲೆ ಸರ್ಕಾರ ಬಂಡೆ ಹಾಕಿದಂತಾಗಿದೆ. ಯಾವುದೇ ಯೋಜನೆಯಿರಲಿ ಅದನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು. ಆದರೆ ಇಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಕಾರಣ ನಿರ್ಲಕ್ಷ್ಯದಿಂದ ಈ ರೀತಿ ಪರಿಸ್ಥಿತಿ ಎದುರಾಗಿದೆʼʼ ಎಂದು ದೂರಿದ್ದಾರೆ.

ʼʼಇದು ಸರ್ಕಾರದ ತಪ್ಪು. ಜಲಾಶಯದ ಸ್ಥಿತಿಗೆ ಸರ್ಕಾರವೇ ನೇರ ಹೊಣೆ. ಜಲಾಶಯ ನಿರ್ವಹಣೆಗೆ ಅನುದಾನ ಇರುತ್ತದೆ. ಒಂದುವೇಳೆ ಇಲ್ಲದಿದ್ದರೆ ರಾಜ್ಯ ಸರ್ಕಾರ ‌ನೀಡಬೇಕು. ಕಾಂಗ್ರೆಸ್ ಸರ್ಕಾರದಿಂದ ಬೇಜವಬ್ದಾರಿತನದಿಂದ ಆಡಳಿತ ನಡೆಯುತ್ತಿದೆ. ಯುದ್ದೋಪಾದಿಯಲ್ಲಿ ಗೇಟ್ ರಿಪೇರಿ ಕೆಲಸವಾಗಬೇಕಿತ್ತು. ಆದರೆ ಇಲ್ಲಿವರಗೆ ರಿಪೇರಿ ‌ಕೆಲಸ‌ ಆರಂಭವಾಗಿಲ್ಲʼʼ ಎಂದು ಹೇಳಿದ್ದಾರೆ.

ನೀರು ಉಳಿಸಬೇಕು: ಸಂಸದ ತುಕಾರಾಂ

ವಿಜಯನಗರ: ʼʼತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿಯಲು ಏನು ಕಾರಣ ಎನ್ನುವುದು ಗೊತ್ತಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ‌ವೋ ತಾಂತ್ರಿಕ ತೊಂದರೆಯೋ ಎನ್ನುವುದು ತಿಳಿದು ಬಂದಿಲ್ಲ. ಮೊದಲು ಹರಿದು ಹೋಗುತ್ತಿರುವ ನೀರನ್ನು ಉಳಿಸಬೇಕಿದೆ. ಈ ಬಗ್ಗೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದೇನೆʼʼ ಎಂದ ಸಂಸದ ತುಕಾರಾಂ ತಿಳಿಸಿದ್ದಾರೆ.

ಜಲಾಶಯ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ʼʼಗೇಟ್ ದುರಸ್ತಿಗಾಗಿ ಪರಿಣಿತರನ್ನು ಕರೆಸುತ್ತಿದ್ದೇವೆ. ಈಗಾಗಲೇ ನೀರಾವರಿ ನಿಗಮದ ಎಂಡಿ ಬಂದಿದ್ದಾರೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಮತ್ತು ನಾನು ರೈತರ ಜತೆ ಇದ್ದೇ ಇರುತ್ತೇವೆʼʼ ಎಂದು ತಿಳಿಸಿದ್ದಾರೆ.

ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆ

ಸೋಮವಾರ (ಆಗಸ್ಟ್‌ 13) ನಿಗದಿಯಾಗಿದ್ದ ಹೇಮಾವತಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Continue Reading
Advertisement
Bomb threat
ಪ್ರಮುಖ ಸುದ್ದಿ10 mins ago

Bomb threat : ಏರ್​ಪೋರ್ಟ್​​ ಬ್ಯಾಗ್ ಚೆಕಿಂಗ್​ ವೇಳೆ ತಮಾಷೆಗೆ ‘ಬಾಂಬ್​ ಇದೆ’ ಅಂದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

theft Case
ಬೆಂಗಳೂರು30 mins ago

Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Tungabhadra Dam
ಪ್ರಮುಖ ಸುದ್ದಿ41 mins ago

Tungabhadra Dam: ಟಿಬಿ ಡ್ಯಾಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಶೀಘ್ರ ಕ್ರಸ್ಟ್ ಗೇಟ್ ದುರಸ್ತಿಗೆ ವಿಜಯೇಂದ್ರ ಆಗ್ರಹ

veg vs non veg
ಪ್ರಮುಖ ಸುದ್ದಿ1 hour ago

veg vs non veg : ಮಕ್ಕಳ ಬಾಕ್ಸ್​​ನಲ್ಲಿ ಮಾಂಸಾಹಾರ ಕಳುಹಿಸಬಾರದು; ವಿವಾದ ಸೃಷ್ಟಿಸಿದ ಶಾಲೆಯ ನೋಟಿಸ್​​

karnataka weather Forecast
ಮಳೆ1 hour ago

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Claudia Mancinelli
ಕ್ರೀಡೆ2 hours ago

Claudia Mancinelli : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಡ ಈ ಸುಂದರಿ ಜಿಮ್ನಾಸ್ಟಿಕ್​ ಕೋಚ್​​ ಈಗ ಇಂಟರ್ನೆಟ್​ ಸೆನ್ಷೇಷನ್​

Fatty Liver What Causes
ಆರೋಗ್ಯ2 hours ago

Fatty Liver: ಏನೆಲ್ಲ ಕಾರಣಗಳಿಗೆ ಫ್ಯಾಟಿ ಲಿವರ್‌ ಬರುತ್ತದೆ?

Urvashi Rautela
ಕ್ರಿಕೆಟ್2 hours ago

Urvashi Rautela: ರಿಷಭ್​ ಪಂತ್​ ಮೇಲೆ ಊರ್ವಶಿಗೆ ಮತ್ತೆ ಪ್ಯಾರ್‌ಗೆ ಆಗ್ಬಿಟ್ಟೈತೆ​; ಇನ್​ಸ್ಟಾಗ್ರಾಮ್​ ಸ್ಟೋರಿಯಿಂದ ಬಯಲು

ಕರ್ನಾಟಕ2 hours ago

Actor Darshan: ಹೋಮ-ಹವನ ಮಾಡ್ತಿರೋದು ದರ್ಶನ್‌ ಬಿಡುಗಡೆಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್

Kolkata Doctor Murder Case
ದೇಶ2 hours ago

ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌