Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು - Vistara News

ದಾವಣಗೆರೆ

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ ಮಾಡಿ ಪರಾರಿ ಆಗಿದ್ದಾರೆ. ಯಾಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬುದು ತಿಳಿದು ಬಂದಿಲ್ಲ.

VISTARANEWS.COM


on

building collpase
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ನಿರ್ಮಾಣ ಹಂತದ ಶಾಲಾ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ (Building Collapsed) ಮಾಡಿದ್ದಾರೆ. ಶಾಲಾಭಿವೃದ್ಧಿ ಮಂಡಳಿ ನಾನಾ ಕಡೆಗಳಲ್ಲಿ ಅಲೆದಾಡಿ ಅನುದಾನ ತಂದು ಕೊಠಡಿ ಕಟ್ಟಡ ಕೆಲಸವನ್ನು ಆರಂಭಿಸಿದ್ದರು.

ಪ್ಲೆಂಚ್‌ನಿಂದ ಒಂದು ಪಿಟ್ ಮೇಲೆ ಎದ್ದಿದ್ದ ಗೋಡೆ ಕೆಡವಿ ಕುಕೃತ್ಯ ಮೆರೆದಿದ್ದಾರೆ. ದಾವಣಣೆರೆಯ ಹರಿಹರ ನಗರದ ಹಳ್ಳದಕೆರೆ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಯನ್ನು ಕೆಡವಿದ್ದಾರೆ.

ನಿರ್ಮಾಣ ಹಂತದ ಕೊಠಡಿ ಸೇರಿದಂತೆ ಅಂತಿಮ ಹಂತಕ್ಕೆ ತಲುಪಿದ್ದ ಹೈಟೆಕ್ ಶೌಚಾಲಯ ಧ್ವಂಸ ಮಾಡಿದ್ದಾರೆ. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆ ಇದಾಗಿದ್ದು, ಸಮಿತಿ ಕಷ್ಟಪಟ್ಟು ಅನುದಾನ ತಂದು ಕಟ್ಟಡ ಕಾಮಗಾರಿ ಅರಂಭಿಸಿದ್ದರು. ಕಿಡಿಗೇಡಿಗಳ ಕೃತ್ಯದಿಂದ ಶಾಲಾಭಿವೃದ್ಧಿ ಸಮಿತಿ ಮತ್ತು ವಿದ್ಯಾರ್ಥಿಗಳು ಬೇಸರಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾಲಾ ಕಟ್ಟಡ ಕಾಮಗಾರಿ ಮುಂದುವರಿಸುವ ತೀರ್ಮಾನಕ್ಕೆ ಬಂದಿದ್ದಾರೆ. ಸರ್ಕಾರಿ ಶಾಲಾ ಕೊಠಡಿ ಶೌಚಾಲಯ ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು (Building Collapsed) ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪೀಣ್ಯದ ಎನ್‌ಟಿಎಸ್ ಸರ್ಕಲ್‌ನಲ್ಲಿ‌ ಘಟನೆ ನಡೆದಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮತೋರ್ವ ಗಾಯಾಳಾನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತದಿಂದಾಗಿ ಈ ಘಟನೆ ನಡೆದಿದೆ. ಕಾರ್ಮಿಕರು ಏಷಿಯನ್ ಪೈಂಟ್ಸ್ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಮೇಲ್ಭಾಗದಲ್ಲಿದ್ದ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂರನೆ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕದಳ ಸಿಬ್ಬಂದಿ ಸದ್ಯ ಕಾಂಕ್ರೀಕ್ ತೆರವು ಮಾಡುತ್ತಿದ್ದಾರೆ.

ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯೋಮಾ ಎಲೈಟ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡವಾಗಿದೆ. ಐದನೇ ಫ್ಲೋರ್‌ನಿಂದ ಬಿದ್ದು ಇಬ್ಬರು ಮೃತ ಪಟ್ಟಿದ್ದಾರೆ. ಐದಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಲಬುರಗಿ ಮೂಲದವರು ವೀರೇಶ್ ಹಾಗೂ ಯಾದಗಿರಿ ಮೂಲದ ಹಿಮಾಂಶು ಮೃತರು ಎಂದು ತಿಳಿದು ಬಂದಿದೆ. ಸೋಲದೇವಹಳ್ಳಿ ಬಳಿ ವಾಸವಿದ್ದರು. ಫ್ಲೋರಿಂಗ್ ಹಾಕುತ್ತಿದ್ದಾಗ ಈ ರೀತಿ ಅವಘಡ ಸಂಭವಿಸಿದೆ. ಮಾಲೀಕರು ಯಾರು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ. ದೂರು ಪಡೆದು ತನಿಖೆಯನ್ನು ನಡೆಸುತ್ತೇವೆ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Karnataka Weather Forecast : ಮಲೆನಾಡು ಭಾಗದಲ್ಲಿ ಮಳೆಯು ಬಿಡುವು ಕೊಟ್ಟಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಸೋಬಾನೆ ಹಾಡುತ್ತಾ ಭತ್ತದ ನಾಟಿ ಮಾಡಿದ್ದಾರೆ. ಇತ್ತ ಹಾವೇರಿಯಲ್ಲಿ ನಿರಂತರ ಮಳಗೆ ಸರ್ಕಾರಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.

ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ

ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.

ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.

ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿಂದು ಗುಡುಗು ಸಹಿತ ಸಾಧಾರಣ ಮಳೆ ಎಚ್ಚರಿಕೆ

karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ತಗ್ಗಿದ್ದರೂ ಕೆಲವು ಆಯ್ದ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಬಹುದು.

VISTARANEWS.COM


on

By

Karnataka weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್‌ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ (Karnataka weather Forecast) ಸಾಮಾನ್ಯವಾಗಿತ್ತು. ಆಗಸ್ಟ್‌ 11ರಂದು ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ (Rain News) ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಜತೆಗೆ ಥಂಡಿ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಇದನ್ನೂ ಓದಿ: KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

ಮಾನ್ಸೂನ್‌‌‌ಗೆ ಲಗ್ಗೆ ಇಟ್ಟಿದೆ ಚಿಣ್ಣರ ಕಲರ್‌ ಫುಲ್‌ ರೈನ್‌ ಕೋಟ್ಸ್

ಮಾನ್ಸೂನ್‌ ಫ್ಯಾಷನ್‌ನಲ್ಲಿ ಆಕರ್ಷಕವಾದ ಕಿಡ್ಸ್ ರೈನ್‌ಕೋಟ್‌ಗಳು (Kids Raincoats) ಲಗ್ಗೆ ಇಟ್ಟಿವೆ. ಹೌದು, ಮಾನ್ಸೂನ್‌ ಸೀಸನ್‌ನಲ್ಲಿ ಎಲ್ಲಾ ವಯಸ್ಸಿನ ಮಕ್ಕಳಿಗೆ ಇಷ್ಟವಾಗುವಂತಹ ಬಗೆಬಗೆಯ ಕಾರ್ಟೂನ್‌ ಚಿತ್ತಾರವಿರುವಂತಹ ನಾನಾ ಬಗೆಯ ಆಕರ್ಷಕ ಬಣ್ಣ ಬಣ್ಣದ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ.

Kids Raincoats

ಮಕ್ಕಳನ್ನು ಉಲ್ಲಾಸಿತಗೊಳಿಸುವ ರೈನ್‌ಕೋಟ್ಸ್

“ ಪ್ರತಿ ಬಾರಿಯೂ ಮಾನ್ಸೂನ್‌ನಲ್ಲಿ ಮಕ್ಕಳಿಗೆ ನಾನಾ ವೆರೈಟಿ ವಿನ್ಯಾಸದ ರೈನ್‌ಕೋಟ್‌ಗಳು ಬಿಡುಗಡೆಗೊಳ್ಳುತ್ತಿರುತ್ತವೆ. ಮಕ್ಕಳು ಇಷ್ಟಪಟ್ಟು ಧರಿಸುವಂತಹ ಕಲರ್‌ ಹಾಗೂ ಚಿತ್ತಾರಗಳಿರುವಂತವು ಹೆಚ್ಚಾಗಿ ಬಿಕರಿಯಾಗುತ್ತವೆ. ಇದಕ್ಕೆ ಪೂರಕ ಎಂಬಂತೆ, ಮಳೆಗಾಲದಲ್ಲಿ ಔಟಿಂಗ್‌ ಅಥವಾ ಹೊರಗಡೆ ಹೋದಾಗ ಆಕರ್ಷಕವಾಗಿ ಕಾಣಿಸುವಂತಹ ಕಲರ್‌ಫುಲ್‌ ಡಿಸೈನ್‌ನ ರೈನ್‌ಕೋಟ್‌ಗಳು ಲೆಕ್ಕವಿಲ್ಲದಷ್ಟು ಡಿಸೈನ್‌ನಲ್ಲಿ ಆಗಮಿಸಿವೆ. ಉತ್ತಮ ಗುಣ ಮಟ್ಟದ ಬ್ರಾಂಡ್‌ಗಳಿಂದಿಡಿದು, ರಸ್ತೆ ಬದಿ ಮಾರುವಂತಹ ಲೋಕಲ್‌ ಡಿಸೈನ್‌ನಲ್ಲೂ ದೊರೆಯುತ್ತಿವೆ. ಆದರೆ, ಇವನ್ನು ಕೊಳ್ಳುವಾಗ ಮೆಟಿರಿಯಲ್‌ ಪರಿಶೀಲಿಸಿ ಕೊಳ್ಳುವುದು ಮುಖ್ಯ “ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌‌ಗಳು.

Kids Raincoats

ಟ್ರೆಂಡ್‌ನಲ್ಲಿರುವ ಚಿಣ್ಣರ ರೈನ್‌ಕೋಟ್ಸ್

ವಾಟರ್‌ ಪ್ರೂಫ್‌ನ ಹೂಡಿ ರೈನ್‌ಕೋಟ್ಸ್, ಯೂನಿಸೆಕ್ಸ್ ರೈನ್‌ಕೋಟ್ಸ್, ಅನಿಮಲ್‌ ಪ್ರಿಂಟ್‌, ಕಾರ್ಟೂನ್‌ ಪ್ರಿಂಟ್, ಗ್ರಾಫಿಕ್ ಪ್ರಿಂಟ್‌, ಪಾಲಿಸ್ಟರ್‌, ತ್ರಿ ಡಿ ಕಲರ್‌, ಹೆಣ್ಣುಮಕ್ಕಳ ಬಾರ್ಬಿ ಪ್ರಿಂಟ್ಸ್, ಕೊರಿಯನ್‌ ಸ್ಟೈಲ್‌, ಕೇಪ್‌ ಸ್ಟೈಲ್‌, ಟ್ರೆಂಚ್‌ ಕೋಟ್‌ ಸ್ಟೈಲ್‌, ಬ್ಯಾಕ್‌ಪ್ಯಾಕ್‌ ಕವರ್‌ ರೈನ್‌ಕೋಟ್‌ಗಳು ಈ ಸೀಸನ್‌ನಲ್ಲಿ ಸಾಕಷ್ಟು ಟ್ರೆಂಡಿಯಾಗಿವೆ. ಎಲ್ಲರೂ ಅವರವರ ಮಕ್ಕಳಿಗೆ ಮ್ಯಾಚ್‌ ಆಗುವಂತಹ ರೈನ್‌ಕೋಟ್‌ಗಳನ್ನು ಪೋಷಕರು ಖರೀದಿಸುವುದು ಕೂಡ ಇಂದು ಹೆಚ್ಚಾಗಿದೆ ಎನ್ನುತ್ತಾರೆ ರೈನ್‌ಕೋಟ್‌ ವ್ಯಾಪಾರಿಗಳು.

Kids Raincoats
Kids Raincoats

ಆನ್‌ಲೈನ್‌ನಲ್ಲಿ ರೈನ್‌ಕೋಟ್‌ ಅಬ್ಬರ

ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆಂದೇ ಈಗಾಗಲೇ ಕಿಡ್ಸ್ ಕೆಟಗರಿಯಲ್ಲಿ ಲೆಕ್ಕವಿಲ್ಲದಷ್ಟು ಬಗೆಯ ರೈನ್‌ಕೋಟ್‌ಗಳು ಲಗ್ಗೆ ಇಟ್ಟಿವೆ. ಕೆಲವು ಆನ್‌ಲೈನ್‌ ಶಾಪ್‌ಗಳು ಮಾನ್ಸೂನ್‌ ಆಫರ್‌ನಲ್ಲಿ ಕಡಿಮೆ ಬೆಲೆ ನಿಗಧಿಪಡಿಸಿದ್ದರೇ, ಇನ್ನು ಕೆಲವು ನ್ಯೂ ಅರೈವಲ್‌ ಕೆಟಗರಿಯಲ್ಲಿ ದರ ಹೆಚ್ಚಿಸಿವೆ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌ಗಳು.

ಇದನ್ನೂ ಓದಿ: Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

ಹೀಗಿರಲಿ ಮಕ್ಕಳ ರೈನ್‌ಕೋಟ್‌ ಆಯ್ಕೆ

  • ವಾಟರ್‌ಪ್ರೂಫ್‌ ರೈನ್‌ಕೋಟ್‌ಗೆ ಆದ್ಯತೆ ನೀಡಿ.
  • ಆದಷ್ಟೂ ಮಂಡಿ ಕೆಳಗಿನ ತನಕ ಉದ್ದವಿರುವ ರೈನ್‌ಕೋಟ್‌ ಖರೀದಿಸಿ.
  • ಮನೆಯಲ್ಲಿ ಇಬ್ಬರಿಗಿಂತ ಮಕ್ಕಳು ಹೆಚ್ಚಿದ್ದಲ್ಲಿ ಯೂನಿಸೆಕ್ಸ್ ರೈನ್‌ಕೋಟ್‌ ಬಳಸಬಹುದು.
  • ಟ್ರೆಂಡ್‌ಗೆ ತಕ್ಕಂತೆ ಬಿಡುಗಡೆಗೊಂಡಿರುವ ರೈನ್‌ಕೋಟ್‌ ಕೊಳ್ಳಿ.
  • ಮಕ್ಕಳನ್ನು ಉಲ್ಲಾಸಿತಗೊಳಿಸುವಂತಹ ಪ್ರಿಂಟ್ಸ್ ಇರುವಂತಹ ಕಲರ್‌ಫುಲ್‌ ರೈನ್‌ಕೋಟ್‌ ಚೂಸ್‌ ಮಾಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

Karnataka weather Forecast : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಳೆಯು ಅಬ್ಬರಿಸಿದ್ದು, ಭಾನುವಾರಕ್ಕೂ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Koo

ಬೆಂಗಳೂರು: ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆಯಿಂದ (Rain News) ಶುರುವಾಗಿ ಸಂಜೆ ವೇಳೆಗೆ ಹಲವೆಡೆ ಸಾಧಾರಣ (Karnataka weather Forecast) ಮಳೆಯಾಗಿದೆ. ಮುಂಜಾವಿನ ಮಳೆಯಿಂದ ಜಾಗಿಂಗ್, ರನ್ನಿಂಗ್ ಹೋಗುವವರಿಗೆ ತೊಂದರೆ ಆಯಿತು.

ನಗರದ ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಶಿವಾಜಿನಗರ, ಮಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಶೇಷಾದ್ರಿಪುರಂ, ವಿಧಾನಸೌಧದಲ್ಲೂ ಮಳೆಯ ಸಿಂಚನವಾಗಿದೆ.

ಭಾರಿ ಮಳೆಗೆ ಕಾಳಿ ಸೇತುವೆ ಕುಸಿತದಿಂದಾಗಿ ಹೊಸ ಸೇತುವೆಯಲ್ಲಿ ಹೆಚ್ಚಾದ ವಾಹನ ದಟ್ಟಣೆ

ಉತ್ತರ ಕನ್ನಡದ ಕಾರವಾರದ ಕಾಳಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಹೊಸ ಸೇತುವೆಯು ಕಾರವಾರ-ಗೋವಾ ಸಂಪರ್ಕಿಸಲಿದೆ.

ಒಂದೇ ಸೇತುವೆ ಮೇಲೆ ದ್ವಿಮುಖ ಸಂಚಾರದಿಂದ ವಾಹನ ದಟ್ಟಣೆ ಎದುರಾಗಿದ್ದು, ಒಂದರ ಹಿಂದೆ ಒಂದರಂತೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ-ಮಂಗಳೂರು ನಡುವಿನ ಸರಕು ಸಾಗಾಟಕ್ಕೆ ತೊಡಕು ಉಂಟಾಗಿದೆ. ಹೊಸ ಸೇತುವೆಗೆ ಬೀದಿದೀಪ ಅಳವಡಿಸದೇ ಐಆರ್‌ಬಿ ನಿರ್ಲಕ್ಷ್ಯ ವಹಿಸಿದ್ದು, ರಾತ್ರಿ ವೇಳೆ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಹೊಸ ಸೇತುವೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸವಾರರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಸಾಧಾರಣ ಮಳೆ ಸಾಧ್ಯತೆ

ನಾಳೆ ಭಾನುವಾರ ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Davanagere Benne Dose: ದಾವಣಗೆರೆ ಬೆಣ್ಣೆ ದೋಸೆಗೆ ಜಿಐ ಟ್ಯಾಗ್‌ ಕೊಡಲ್ಲ ಎಂದ ಕೇಂದ್ರ; ಯಾಕೆಂದರೆ…

Davanagere Benne Dose: “ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ”ಎಂದು ಕೇಂದ್ರ ಸರಕಾರ ಹೇಳಿದೆ.

VISTARANEWS.COM


on

davanagere benne dose
Koo

ಬೆಂಗಳೂರು: ಬಿಸಿಯಾದ, ಗರಿಗರಿಯಾದ, ಪಕ್ಕದಲ್ಲಿ ಆಲೂ ಪಲ್ಯವನ್ನಿಟ್ಟುಕೊಂಡ, ಮೇಲೊಂದು ಕರಗುತ್ತಿರುವ ಬೆಣ್ಣೆಯ ಮುದ್ದೆ ಇಟ್ಟು ನೀಡುವ ದಾವಣಗೆರೆ ಬೆಣ್ಣೆ ದೋಸೆ (Davanagere Benne Dose) ಅದೆಷ್ಟೋ ವರ್ಷಗಳಿಂದ ಕರ್ನಾಟಕದಾದ್ಯಂತ (Karnataka) ಆಹಾರಪ್ರೇಮಿಗಳನ್ನು ತೃಪ್ತಿಪಡಿಸುತ್ತಿದೆ. ಆದರೆ ಈ ʼದಾವಣಗೆರೆ ಬೆಣ್ಣೆ ದೋಸೆʼ ಎಂಬ ಖಾದ್ಯಕ್ಕೆ ಜಿಐ ಟ್ಯಾಗ್‌ (GI tag) ಅರ್ಥಾತ್‌ ʼಭೌಗೋಳಿಕ ಗುರುತಿನʼ (Geographical Indication) ಟ್ಯಾಗ್‌ ನೀಡಲು ಸಾಧ್ಯವಿಲ್ಲವಂತೆ.

ಹೌದು, ಇದು ಕರ್ನಾಟಕದಾದ್ಯಂತ ಲಭ್ಯವಿದೆ ಎಂಬ ಅಂಶವೇ ಈ ಜನಪ್ರಿಯ ದೋಸೆಗೆ ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಪಡೆಯುವ ದಾರಿಯಲ್ಲಿ ಮುಳ್ಳಾಗಿದೆ. ʼದಾವಣಗೆರೆ ಬೆಣ್ಣೆ ದೋಸೆ ಯಾವುದೇ ಒಂದು ಸೀಮಿತ ಪ್ರದೇಶಕ್ಕೆ ನಿರ್ದಿಷ್ಟವಾಗಿಲ್ಲದ ಕಾರಣ GI ಟ್ಯಾಗ್‌ಗೆ ಅರ್ಹತೆ ಪಡೆಯುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ದಾವಣಗೆರೆಯ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ (davanagere MP Prabha Mallikarjun) ಅವರು ಸದನದಲ್ಲಿ ಕೋರಿದ ಪ್ರಶ್ನೆಗೆ ಕೇಂದ್ರ ಸರ್ಕಾರ ಉತ್ತರಿಸಿದ್ದು, ಈ ವಿಷಯ ತಿಳಿಸಿದೆ. ತಮ್ಮ ಜಿಲ್ಲೆಯ ಸುಪ್ರಸಿದ್ಧವಾದ ದೋಸೆಗೆ GI ಟ್ಯಾಗ್ ಒದಗಿಸಿಕೊಡುವ ಕುರಿತು ಪ್ರಭಾ ಪ್ರಶ್ನಿಸಿದ್ದರು.

“ದಾವಣಗೆರೆ ಹೊರತುಪಡಿಸಿಯೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇದನ್ನು ತಯಾರಿಸಿ ಮಾರಾಟ ಮಾಡುವುದರಿಂದ ಇದನ್ನು ಸಾಮಾನ್ಯ ವಸ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ, ಜಿಐ ಟ್ಯಾಗ್‌ ನೀಡಲಾಗುವುದಿಲ್ಲ. ಜಿಐ ಟ್ಯಾಗ್‌ ಪಡೆಯಲು ನಿರ್ದಿಷ್ಟ ಪ್ರದೇಶವು ವಿಶಿಷ್ಟತೆಯ ಅಂಶವಾಗಿ ಅಪೇಕ್ಷಿತವಾಗಿದೆ. ಇದು ಹಲವಾರು ಸ್ಥಳಗಳಲ್ಲಿ ಉತ್ಪಾದನೆಯಾಗುತ್ತಿರುವ ಕಾರಣ ನಿರ್ದಿಷ್ಟ ಪ್ರದೇಶಕ್ಕೆ ಹೆಚ್ಚು ವಿಶಿಷ್ಟವಾಗಿಲ್ಲ” ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಹಕಾರ ಸಚಿವ ಜಿತಿನ್ ಪ್ರಸಾದ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಉತ್ತರದ ನಂತರ, ಜಿಐ ಟ್ಯಾಗ್‌ಗೆ ನೋಂದಣಿಗೆ ಕನಿಷ್ಠ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾಧಿಕಾರಿಗೆ ಈಗಾಗಲೇ ನಿರ್ದೇಶನ ನೀಡಿದ್ದೇನೆ ಎಂದು ಪ್ರಭಾ ಅವರು ತಿಳಿಸಿದ್ದಾರೆ.

“ರಸಗುಲ್ಲಾ, ಲೋನಾವಳ ಚಿಕ್ಕಿ ಮತ್ತು ಇತರ ಉತ್ಪನ್ನಗಳಿಗೆ ಈಗಾಗಲೇ ಜಿಐ ಟ್ಯಾಗ್ ಇದೆ. ಇದನ್ನು ಭಾರತದಾದ್ಯಂತ ವ್ಯಾಪಕವಾಗಿ ಉತ್ಪಾದಿಸಲಾಗುತ್ತದೆ ಮತ್ತು ಮಾರಾಟ ಮಾಡಲಾಗುತ್ತದೆ. ಅದೇ ರೀತಿ ದಾವಣಗೆರೆ ಬೆಣ್ಣೆ ದೋಸೆ ಕೂಡ ರಾಜ್ಯಾದ್ಯಂತ ಮಾರಾಟವಾಗುತ್ತಿದೆ. ಈ ಕಾರಣಕ್ಕಾಗಿ ಈ ವಿಶಿಷ್ಟ ಉತ್ಪನ್ನಕ್ಕಾಗಿ ಜಿಐ ಟ್ಯಾಗ್ ಅನ್ನು ಪಡೆದುಕೊಳ್ಳುವುದು ತಪ್ಪಬಾರದು” ಎಂದು ಪ್ರಭಾ ಹೇಳಿದ್ದಾರೆ.

“ದಾವಣಗೆರೆಯ ಯಾವುದೇ ವ್ಯಕ್ತಿ ದೇಶದ ಯಾವುದೇ ಸ್ಥಳಕ್ಕೆ ಹೋದರೆ ಅಲ್ಲಿ ಆತನನ್ನು ಮೊದಲು ಬೆಣ್ಣೆ ದೋಸೆಯ ಬಗ್ಗೆ ಕೇಳಲಾಗುತ್ತದೆ. ಈ ಉತ್ಪನ್ನಕ್ಕೆ ಅಂತಹ ಕ್ರೇಜ್ ಇದೆ. ನಾನು ಸಂಸತ್ತಿಗೆ ಹೋದ ಮೊದಲ ದಿನ, ದೇಶದ ವಿವಿಧ ಭಾಗಗಳಿಂದ ಬಂದ ನನ್ನ ಎಲ್ಲಾ ಸಹೋದ್ಯೋಗಿಗಳು ದಾವಣಗೆರೆ ಬೆಣ್ಣೆ ದೋಸೆಯ ಬಗ್ಗೆ ನನ್ನನ್ನು ಕೇಳಿದರು. ಆಗ, ಜಿಐ ಟ್ಯಾಗ್ ಪಡೆಯುವುದು ಎಷ್ಟು ಮುಖ್ಯ ಎಂದು ನಾನು ಅರಿತುಕೊಂಡೆ” ಎಂದು ಅವರು ಹೇಳಿದರು.

ಬೆಣ್ಣೆ ದೋಸೆಯ ಮೂಲವನ್ನು ನಾಲ್ಕು ಸಹೋದರರಲ್ಲಿ ಕಾಣಲಾಗುತ್ತದೆ. ಕೋಠಿನ್ ಶಾಂತಪ್ಪ, ಮಹದೇವಪ್ಪ, ಶಂಕರಪ್ಪ ಮತ್ತು ಬಸವಂತಪ್ಪ. ಇವರು ಬೆಳಗಾವಿ ಜಿಲ್ಲೆಯ ರಾಮದುರ್ಗದ ಬೀಡ್ಕಿ ಗ್ರಾಮದಿಂದ 1928ರಲ್ಲಿ ದಾವಣಗೆರೆಗೆ ಉದ್ಯೋಗದ ಹುಡುಕಾಟದಲ್ಲಿ ವಲಸೆ ಬಂದವರು. ತಮ್ಮ ತಾಯಿ ಚೆನ್ನಮ್ಮ ಅವರಿಂದ ದೋಸೆ ತಯಾರಿಕೆಯ ಕಲೆಯನ್ನು ಕಲಿತರು. ಇವರ ಅಮ್ಮ ತಮ್ಮ ಮಕ್ಕಳಿಗೆ ರುಚಿಕರವಾದ ರಾಗಿ ದೋಸೆಯನ್ನು ತಯಾರಿಸುತ್ತಿದ್ದರಂತೆ. ಈ ಸೋದರರಿಂದ ಮಸಾಲೆ ಸಹಿತದ ಬೆಣ್ಣೆ ದೋಸೆ ಜನಪ್ರಿಯವಾಯಿತು. ಇವರ ಮೊದಲ ದೋಸೆ ಆರು ಪೈಸೆಗೆ ಮಾರಾಟವಾಯಿತು. ಈಗ ಈ ಅಂಗಡಿಗಳನ್ನು ನಡೆಸುತ್ತಿರುವ ಅವರ ಮಕ್ಕಳು, ಮೊಮ್ಮಕ್ಕಳು ತಯಾರಿಸುತ್ತಿರುವ ದೋಸೆಗೆ 55ರಿಂದ 65 ರೂ. ಬೆಲೆಯಿದೆ.

ಕರ್ನಾಟಕದಲ್ಲಿ ನಂಜನಗೂಡು ರಸಬಾಳೆ, ಚನ್ನಪಟ್ಟಣದ ಮರದ ಗೊಂಬೆಗಳು, ಮೈಸೂರು ಮಲ್ಲಿಗೆ, ಮೈಸೂರು ರೇಷ್ಮೆ, ಬೀದರ್‌ನ ಬಿದರಿ ಕಲೆ, ಇಳಕಲ್‌ ಹಾಗೂ ಮೊಳಕಾಲ್ಮುರು ಸೀರೆಗಳು, ಕೊಡಗಿನ ಕಿತ್ತಳೆ, ಅಪ್ಪೆಮಿಡಿ ಮಾವು, ಧಾರವಾಡ ಪೇಡಾ, ಬಾಬಾಬುಡನ್‌ಗಿರಿಯ ಅರೇಬಿಕಾ ಕಾಫಿ ಮುಂತಾದವು ಜಿಐ ಟ್ಯಾಗ್‌ ಪಡೆದಿವೆ.

ಇದನ್ನೂ ಓದಿ: PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

Continue Reading
Advertisement
PR Sreejesh
ಕ್ರೀಡೆ10 mins ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ33 mins ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ35 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ1 hour ago

Paris Olympics 2024 : ನಮ್ಮ ರಾಜಕಾರಣಿಗಳು ಕ್ರೀಡಾಕ್ಷೇತ್ರದಲ್ಲೂ ರಾಜಕೀಯ ಮಾಡ್ತಾರೆ; ಉಕ್ರೇನ್​ ಸಂಸದ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದಾರೆ!

Yakshagana Dance
ಬೆಂಗಳೂರು2 hours ago

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Road Accident
ಕರ್ನಾಟಕ2 hours ago

Road Accident: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Bomb threat
ಪ್ರಮುಖ ಸುದ್ದಿ2 hours ago

Bomb threat : ಏರ್​ಪೋರ್ಟ್​​ ಬ್ಯಾಗ್ ಚೆಕಿಂಗ್​ ವೇಳೆ ತಮಾಷೆಗೆ ‘ಬಾಂಬ್​ ಇದೆ’ ಅಂದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

theft Case
ಬೆಂಗಳೂರು2 hours ago

Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Tungabhadra Dam
ಪ್ರಮುಖ ಸುದ್ದಿ3 hours ago

Tungabhadra Dam: ಟಿಬಿ ಡ್ಯಾಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಶೀಘ್ರ ಕ್ರಸ್ಟ್ ಗೇಟ್ ದುರಸ್ತಿಗೆ ವಿಜಯೇಂದ್ರ ಆಗ್ರಹ

veg vs non veg
ಪ್ರಮುಖ ಸುದ್ದಿ3 hours ago

veg vs non veg : ಮಕ್ಕಳ ಬಾಕ್ಸ್​​ನಲ್ಲಿ ಮಾಂಸಾಹಾರ ಕಳುಹಿಸಬಾರದು; ವಿವಾದ ಸೃಷ್ಟಿಸಿದ ಶಾಲೆಯ ನೋಟಿಸ್​​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌