Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು - Vistara News

ಮನಿ-ಗೈಡ್

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Money Guide: ಭಾರತ ಕೃಷಿ ಪ್ರಧಾನ ದೇಶ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಎದುರಿಸುತ್ತಾರೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಹಾಗಾದರೆ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಗಮನಿಸಬೇಕಾದ ಅಂಶಗಳು ಯಾವೆಲ್ಲ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶ. ಕೃಷಿಯೇ ಇಲ್ಲಿನ ಜೀವನಾಡಿ. ಇದು ದೇಶದ ಜಿಡಿಪಿಗೆ ಗಣನೀಯ ಪ್ರಮಾಣದಲ್ಲಿ ಕೊಡುಗೆ ನೀಡುವುದಷ್ಟೇ ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಗೂ ಕಾರಣವಾಗುತ್ತದೆ. ಅದಾಗ್ಯೂ ಕೃಷಿಕರು ಅನೇಕ ಆರ್ಥಿಕ ಸಮಸ್ಯೆ ಎದುರಿಸುತ್ತಾರೆ. ಅನಿರೀಕ್ಷಿತ ಹವಾಮಾನ, ಗೊಬ್ಬರ, ಕೀಟ ನಾಶಕ ಮುಂತಾದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಕಡಿಮೆ ಬಂಡವಾಳ ಹೀಗೆ ನಾನಾ ರೀತಿಯ ಸವಾಲು ಅವರ ಮುಂದಿರುತ್ತದೆ. ಇದೇ ಕಾರಣಕ್ಕೆ ಕೃಷಿಕರಿಗೆ ನೆರವಾಗಲು ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಹಣಕಾಸು ಸಂಸ್ಥೆಗಳು (Agriculture Loan) ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಒದಗಿಸುತ್ತವೆ. ಕೃಷಿ ಸಾಲ ಪಡೆದುಕೊಳ್ಳುವುದು ಹೇಗೆ? ಎಷ್ಟು ಬಡ್ಡಿ ವಿಧಿಸಲಾಗುತ್ತದೆ? ಅರ್ಹತೆಗಳೇನು? ಯಾವೆಲ್ಲ ದಾಖಲೆಗಳು ಅಗತ್ಯ? ಮುಂತಾದ ಪ್ರಶ್ನೆಗಳಿಗೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಬಡ್ಡಿದರ

ದೇಶದಲ್ಲಿನ ವಿವಿಧ ಹಣಕಾಸು ಸಂಸ್ಥೆಗಳು, ಬ್ಯಾಂಕ್‌ಗಳಿಗೆ ಹೊಂದಿಕೊಂಡು ಕೃಷಿ ಸಾಲಕ್ಕೆ ವಿಧಿಸುವ ಬಡ್ಡಿ ದರದಲ್ಲಿ ವ್ಯತ್ಯಾಸ ಕಂಡು ಬರುತ್ತದೆ. ಮಾತ್ರವಲ್ಲ ಸಾಲ ಪಡೆದುಕೊಳ್ಳುವವರ ಪ್ರೊಫೈಲ್‌, ಅರ್ಹತೆ ಮತ್ತು ಉದ್ದೇಶಗಳು ಕೂಡ ಬಡ್ಡದರದ ಮೇಲೆ ಪರಿಣಾಮ ಬೀರುತ್ತದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (Reserve Bank of India) ಕೃಷಿ ಸಾಲಗಳ ಮೇಲೆ ವಿಧಿಸಬಹುದಾದ ಬಡ್ಡಿದರಗಳ ಬಗ್ಗೆ ಬ್ಯಾಂಕುಗಳಿಗೆ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ವಾಣಿಜ್ಯ ಸಾಲಗಳಿಗೆ ಹೋಲಿಸಿದರೆ ಈ ದರಗಳು ಸಾಮಾನ್ಯವಾಗಿ ಕಡಿಮೆಯಿರುತ್ತವೆ. ರೈತರಿಗೆ ಸುಲಭವಾಗಿ ಆರ್ಥಿಕ ಸಹಾಯ ಒದಗಿಸುವ ಗುರಿಯನ್ನು ಇದು ಹೊಂದಿದೆ. ಸಾಮಾನ್ಯವಾಗಿ ಮರುಪಾವತಿ ಅವಧಿಯನ್ನು ಅವಲಂಬಿಸಿ ವರ್ಷಕ್ಕೆ ಶೇ. 4ರಿಂದ ಶೇ. 14ರವರೆಗೆ ಬಡ್ಡಿ ವಿಧಿಸಲಾಗುತ್ತದೆ. ಕೆಲವೊಮ್ಮೆ ಸರ್ಕಾರ ಶೂನ್ಯ ಬಡ್ಡಿದರದಲ್ಲಿಯೂ ಕೃಷಿ ಸಾಲ ಒದಗಿಸುತ್ತದೆ.

ಅರ್ಹತೆ

ಕೃಷಿ ಸಾಲ ಹೊಂದಲು ಅಗತ್ಯವಾದ ಕೆಲವು ಸಾಮಾನ್ಯ ಅರ್ಹತೆಗಳು:

ಭೂ ಮಾಲೀಕತ್ವ: ಇದು ಮೊದಲ ಅರ್ಹತೆ. ರೈತರು ಕೃಷಿ ಭೂಮಿಯ ಸ್ಪಷ್ಟ ಮಾಲೀಕತ್ವವನ್ನು ಹೊಂದಿರಬೇಕು ಅಥವಾ ಸಾಲ ನೀಡುವ ಸಂಸ್ಥೆ ನಿರ್ದಿಷ್ಟಪಡಿಸಿದ ಕನಿಷ್ಠ ಅವಧಿಗೆ ಗುತ್ತಿಗೆ ಹಕ್ಕುಗಳನ್ನು ಹೊಂದಿರಬೇಕು. ಭೂಮಿಯನ್ನು ಹೆಚ್ಚಾಗಿ ಸಾಲದ ಆಧಾರವಾಗಿ ಬಳಸಲಾಗುತ್ತದೆ. ಭೂ ಮಾಲೀಕತ್ವ ಲಭ್ಯವಿಲ್ಲದ ಸಂದರ್ಭದಲ್ಲಿ, ಜಾಯಿಂಟ್‌ ಲಿಯಾಬಲಿಟಿ ಗ್ರೂಪ್‌ (Joint Liability Group) ಮತ್ತು ಸ್ವಸಹಾಯ ಗುಂಪುಗಳನ್ನು ರಚಿಸುವ ಮೂಲಕ ಗುಂಪು ಸಾಲ ನೀಡಲಾಗುತ್ತದೆ.
ವಯೋಮಿತಿ: ಸಾಮಾನ್ಯವಾಗಿ ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಸಾಲದ ಇತಿಹಾಸ: ಹಣಕಾಸು ಸಂಸ್ಥೆಗಳು ಸಾಮಾನ್ಯವಾಗಿ ಅರ್ಜಿದಾರರ ಕ್ರೆಡಿಟ್ ಇತಿಹಾಸ (Credit History)ವನ್ನು ಗಮನಿಸುತ್ತವೆ. ಉತ್ತಮ ಕ್ರೆಡಿಟ್ ಸ್ಕೋರ್ ಸಾಲ ಅನುಮೋದನೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ.
ಕೃಷಿಯಲ್ಲಿ ಅನುಭವ: ಕೆಲವೊಂದು ಬ್ಯಾಂಕ್‌ಗಳು ಸಾಲ ಅನುಮೋದನೆಗೆ ಕೃಷಿಯಲ್ಲಿ ಕನಿಷ್ಠ ವರ್ಷಗಳ ಅನುಭವವನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸುತ್ತವೆ. ಸಾಲದ ಪ್ರಕಾರ ಮತ್ತು ಸಂಸ್ಥೆಯನ್ನು ಅವಲಂಬಿಸಿ ಈ ಮಾನದಂಡವು ಬದಲಾಗುತ್ತದೆ.
ಮರುಪಾವತಿ ಸಾಮರ್ಥ್ಯ: ಉದ್ದೇಶಿತ ಕೃಷಿಯಿಂದ ಲಭಿಸಬಹುದಾದ ಆದಾಯ ಮತ್ತು ಸಾಲಗಾರನ ಇತರ ಆದಾಯದ ಮೂಲ ಲೆಕ್ಕ ಹಾಕಿ ಬ್ಯಾಂಕುಗಳು ಮರುಪಾವತಿ ಸಾಮರ್ಥ್ಯವನ್ನು ಪರಿಶೀಲಿಸುತ್ತವೆ.
ಆಧಾರ: ಸಾಮಾನ್ಯವಾಗಿ ಬ್ಯಾಂಕುಗಳು ನಿರ್ದಿಷ್ಟ ಮಿತಿ ಅಂದರೆ 1.6 ಲಕ್ಷ ರೂ.ವರೆಗಿನ ಸಾಲಗಳಿಗೆ ಭೂಮಿಯ ಆಧಾರ ಸಲ್ಲಿಸುವಂತೆ ಒತ್ತಾಯಿಸುವುದಿಲ್ಲ. ಆದಾಗ್ಯೂ, ಈ ಮೊತ್ತಕ್ಕಿಂತ ಹೆಚ್ಚಿನ ಸಾಲಗಳಿಗೆ ಕೃಷಿ ಭೂಮಿಯನ್ನು ಅಡಮಾನ ಇಡಲು ಕೇಳಲಾಗುತ್ತದೆ.
ದಾಖಲೆಗಳು: ಸಾಲದ ಅರ್ಜಿಯ ಜತೆಗೆ ಗುರುತಿನ ಪುರಾವೆ, ವಿಳಾಸ ಪುರಾವೆ, ಭೂ ಮಾಲೀಕತ್ವದ ದಾಖಲೆಗಳು, ಆದಾಯ ಪ್ರಮಾಣಪತ್ರಗಳು, ಬ್ಯಾಂಕ್ ಸ್ಟೇಟ್‌ಮೆಂಟ್‌ ಮತ್ತು ಉದ್ದೇಶಿತ ಕೃಷಿ ಚಟುವಟಿಕೆಗಳಂತಹ ಸಂಬಂಧಿತ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ನಿಮ್ಮ ಹಣಕಾಸಿನ ಆವಶ್ಯಕತೆಗಳನ್ನು ಗುರುತಿಸಿ: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮೊದಲು ನಿಮ್ಮ ಚಟುವಟಿಕೆಗಳಿಗೆ ಎಷ್ಟು ಹಣ ಬೇಕಾಗುತ್ತದೆ ಎನ್ನುವುದನ್ನು ಲೆಕ್ಕ ಹಾಕಿ. ಉಪಕರಣ, ಬಿತ್ತನೆ ಬೀಜ, ಗೊಬ್ಬರ, ಜಾನುವಾರುಗಳು ಅಥವಾ ಭೂಮಿಯನ್ನು ಖರೀದಿಸಲು ಅಗತ್ಯವಿರುವ ಮೊತ್ತವನ್ನು ಮತ್ತು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಇತರ ವೆಚ್ಚಗಳನ್ನು ನಿರ್ಣಯಿಸಿ. ನಿಮ್ಮ ಹಣಕಾಸಿನ ಅವಶ್ಯಕತೆಗಳ ಬಗ್ಗೆ ಸ್ಪಷ್ಟ ತಿಳುವಳಿಕೆಯನ್ನು ಹೊಂದಿರುವುದು ಸರಿಯಾದ ಸಾಲದ ಮೊತ್ತ ಆಯ್ಕೆ ಮಾಡಲು ನೆರವಾಗುತ್ತದೆ.

ವಿವಿಧ ಸಾಲ ಮತ್ತು ಸಂಸ್ಥೆಗಳ ಬಗ್ಗೆ ಮಾಹಿತಿ ಕಲೆ ಹಾಕಿ: ರೈತರಿಗೆ ಹಲವು ರೀತಿಯ ಸಾಲ ದೊರೆಯುತ್ತದೆ. ಪ್ರತಿಯೊಂದೂ ತನ್ನದೇ ಆದ ಅರ್ಹತಾ ಮಾನದಂಡಗಳು, ಬಡ್ಡಿದರಗಳು ಮತ್ತು ಪ್ರಯೋಜನಗಳನ್ನು ಹೊಂದಿದೆ. ಇವುಗಳ ಪೈಕಿ ನಿಮ್ಮ ಅಗತ್ಯಗಳಿಗೆ ಸೂಕ್ತವಾದ ಸಾಲದ ಯೋಜನೆಗಳನ್ನು ಆಯ್ಕೆ ಮಾಡಿ. ಭಾರತದ ಜನಪ್ರಿಯ ಸಾಲ ಯೋಜನೆಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ (KC), ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY), ಚಿನ್ನದ ಸಾಲ, ಸೌರ ಪಂಪ್ ಸಾಲಗಳು, ಡೈರಿ ಸಾಲಗಳು, ಎಸ್‌ಎಚ್‌ಜಿ ಸಾಲಗಳು ಮತ್ತು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೀಡುವ ವಿವಿಧ ಲೋನ್‌ಗಳು ಸೇರಿವೆ. ಹೆಚ್ಚುವರಿಯಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳನ್ನೂ ಸಾಲಕ್ಕಾಗಿ ಪರಿಗಣಿಸಿ.

ಬಡ್ಡದರ ಹೋಲಿಸಿ: ವಿವಿಧ ಬ್ಯಾಂಕು, ಹಣಕಾಸು ಸಂಸ್ಥೆಗಳಲ್ಲಿ ವಿಧಿಸಲಾಗುವ ಬಡ್ಡಿದರಗಳನ್ನು ಹೋಲಿಕೆ ಮಾಡಿ ನೋಡಿ. ಕಡಿಮೆ ಬಡ್ಡಿದರ ಇರುವ, ನಿಮ್ಮ ಅನುಕೂಲಕ್ಕೆ ತಕ್ಕಷ್ಟು ಕಾಲಾವಧಿ ನೀಡುವ ಸಾಲವನ್ನು ಆಯ್ಕೆ ಮಾಡಿ.

ಅಗತ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ: ಕೃಷಿಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಿ. ಇದರಿಂದ ಸಮಯ ವ್ಯರ್ಥವಾಗುವುದನ್ನು ತಡೆಯಬಹುದು. ಅಗತ್ಯ ದಾಖಲೆಗಳೆಂದರೆ ಮೊದಲೇ ಹೇಳಿದಂತೆ ಗುರುತಿನ ಚೀಟಿ (ಆಧಾರ್‌, ಪ್ಯಾನ್‌ ಕಾರ್ಡ್‌, ವೋಟರ್‌ ಐಡಿ ಇತ್ಯಾದಿ), ವಿಳಾಸದ ಪುರಾವೆ (ವಿದ್ಯುತ್‌ ಬಿಲ್‌, ರೇಷನ್‌ ಕಾರ್ಡ್‌, ಪಾಸ್‌ಪೋರ್ಟ್‌ ಇತ್ಯಾದಿ), ಭೂ ದಾಖಲೆಗಳು, ಆದಾಯದ ಪುರಾವೆ (ಬ್ಯಾಂಕ್‌ ಸ್ಟೇಟ್‌ಮೆಂಟ್‌, ಆದಾಯ ತೆರಿಗೆ ಸಲ್ಲಿಕ ಇತ್ಯಾದಿ), ಕೃಷಿ ಉತ್ಪನ್ನಗಳು, ಕೃಷಿ ಯೋಜನೆಗಳು ಇತ್ಯಾದಿ.

ಗಮನಿಸಿ; ನಿಮ್ಮ ಆದಾಯಕ್ಕೆ ಹೊಂದಿಕೆಯಾಗುವ ಸಾಲ ಮರುಪಾವತಿಯ ಅವಧಿಯನ್ನು ಆಯ್ಕೆ ಮಾಡಿಕೊಳ್ಳಿ. ನೀವು ಸಲ್ಲಿಸಿರುವ ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಬ್ಯಾಂಕುಗಳು ಸಾಲ ಮಂಜೂರು ಮಾಡುತ್ತವೆ.

ಇದನ್ನೂ ಓದಿ: Money Guide: ಕಾರು ಚಲಾಯಿಸಿದಷ್ಟೇ ವಿಮೆ ಪ್ರೀಮಿಯಂ ಪಾವತಿಸಿ; ಏನಿದು ಹೊಸ ಯೋಜನೆ? ಅನುಕೂಲಗಳೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

LIC New Plan For Youths: ಎಲ್‌ಐಸಿಯಿಂದ ಯುವ ಜನರಿಗಾಗಿ ಹೊಸ ವಿಮಾ ಯೋಜನೆ; ಏನಿದರ ವಿಶೇಷತೆ?

ಭಾರತೀಯ ಜೀವ ವಿಮಾ ನಿಗಮವು ಯುವಕರಿಗಾಗಿ ಎರಡು ಹೊಸ ಅವಧಿಯ ವಿಮಾ (LIC New Plan For Youths) ಉತ್ಪನ್ನಗಳನ್ನು ಪರಿಚಯಿಸಿದೆ. ಇದನ್ನು ಸಾಲ ಮರುಪಾವತಿಯ ಅಪಾಯಗಳ ವಿರುದ್ಧ ರಕ್ಷಣೆ ನೀಡಲು ವಿನ್ಯಾಸಗೊಳಿಸಲಾಗಿದೆ. ಸಾಕಷ್ಟು ಪ್ರಯೋಜನವನ್ನು ನೀಡುವ ಈ ಎರಡು ಯೋಜನೆಗಳ ವಿಶೇಷಗಳು ಏನೇನು? ಇದರ ಪ್ರಯೋಜನಗಳೇನು? ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

By

LIC New Plan For Youths
Koo

ಭಾರತೀಯ ಜೀವ ವಿಮಾ ನಿಗಮವು (Life Insurance Corporation of India) ಯುವಕರಿಗಾಗಿ (LIC New Plan For Youths) ಎರಡು ಹೊಸ ಅವಧಿಯ ವಿಮಾ ಉತ್ಪನ್ನಗಳನ್ನು (Insurance product) ಪರಿಚಯಿಸಿದೆ. ಇದರಲ್ಲಿ ಯುವ ಟರ್ಮ್‌ ಅಥವಾ ಡಿಜಿ ಟರ್ಮ್‌ ( LIC’s Yuva Term/Digi Term) ಮತ್ತು ಯುವ ಕ್ರೆಡಿಟ್ ಲೈಫ್ ಅಥವಾ ಡಿಜಿ ಕ್ರೆಡಿಟ್ ಲೈಫ್ (LIC’s Yuva Credit Life/Digi Credit Life) ಸೇರಿದೆ. ಇದು ಸಾಲ ಮರುಪಾವತಿಯ ಅಪಾಯಗಳ ವಿರುದ್ಧ ರಕ್ಷಣೆ ನೀಡಲು ಪರಿಚಯಿಸಲಾದ ವಿಮಾ ಯೋಜನೆಯಾಗಿದೆ.

ಯುವ ಟರ್ಮ್‌ ಅಥವಾ ಡಿಜಿ ಟರ್ಮ್‌

ಇದರಲ್ಲಿ ಪಾಲಿಸಿ ಅವಧಿಯಲ್ಲಿ ಪಾಲಿಸಿದಾರನ ಮರಣ ಸಂಭವಿಸಿದರೆ ಪಾಲಿಸಿದಾರನ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ನೀಡಲಾಗುತ್ತದೆ. ಸಾವಿನ ಬಳಿಕ ನೀಡುವ ಪ್ರಯೋಜನಗಳನ್ನು ಖಾತರಿಪಡಿಸುತ್ತದೆ. ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಇದನ್ನು ಪಡೆಯಬಹುದಾಗಿದೆ.

ಎಲ್‌ಐಸಿಯ ಯುವ ಟರ್ಮ್‌ ಏಜೆಂಟರ ಮೂಲಕ ಲಭ್ಯವಿದ್ದು, ಎಲ್ಐಸಿ ಡಿಜಿ ಟರ್ಮ್‌ ಎಲ್ಐಸಿಯ ವೆಬ್‌ಸೈಟ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಿದೆ.


ಇದು ನಿರ್ದಿಷ್ಟವಾಗಿ ಯುವ ವ್ಯಕ್ತಿಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಆಫ್‌ಲೈನ್ ಮತ್ತು ಆನ್‌ಲೈನ್ ಖರೀದಿ ಆಯ್ಕೆ ಮಾಡುವ ವೈಶಿಷ್ಟ್ಯವನ್ನು ಇದು ಒದಗಿಸುತ್ತದೆ.

18ರಿಂದ 45 ವರ್ಷಗಳ ಒಳಗಿನವರು ಇದನ್ನು ಪಡೆಯಬಹುದು. ಯೋಜನೆಯ ಮೆಚುರಿಟಿ ಅವಧಿ 33ರಿಂದ 75 ವರ್ಷಗಳು. ವಿಮಾ ಮೊತ್ತ 50 ಲಕ್ಷ ರೂ.ನಿಂದ 5 ಕೋಟಿ ರೂ.ವರೆಗಿದೆ.

ಆಕರ್ಷಕವಾದ ಹೆಚ್ಚಿನ ಮೊತ್ತದ ವಿಮಾ ರಿಯಾಯಿತಿ, ಮಹಿಳೆಯರಿಗೆ ಕಡಿಮೆ ಪ್ರೀಮಿಯಂ ದರಗಳು ಇದರಲ್ಲಿ ಲಭ್ಯವಿದೆ.

ಪ್ರಯೋಜನ ಏನು?

ವಾರ್ಷಿಕ ಪ್ರೀಮಿಯಂನ ಏಳು ಪಟ್ಟು ಅಥವಾ ಸಾವಿನ ದಿನಾಂಕದವರೆಗೆ ಪಾವತಿಸಿದ ಒಟ್ಟು ಪ್ರೀಮಿಯಂಗಳ ಶೇ. 1೦5ರಷ್ಟು ಸಂಪೂರ್ಣ ಮೊತ್ತದ ಭರವಸೆ ನೀಡುತ್ತದೆ. ಏಕ ಪ್ರೀಮಿಯಂನ ಶೇ. 125ರಷ್ಟು ಖಚಿತವಾದ ಸಂಪೂರ್ಣ ಮೊತ್ತದ ಭರವಸೆಯನ್ನು ನೀಡುತ್ತದೆ.

ಯುವ ಕ್ರೆಡಿಟ್ ಲೈಫ್ ಅಥವಾ ಡಿಜಿ ಕ್ರೆಡಿಟ್

ಯುವ ಕ್ರೆಡಿಟ್ ಲೈಫ್ ಅಥವಾ ಡಿಜಿ ಕ್ರೆಡಿಟ್ ಲೈಫ್ ಯೋಜನೆಗಳು ಸಾಲದ ಹೊಣೆಗಾರಿಕೆಗಳಿಗೆ ಕವರೇಜ್ ನೀಡುತ್ತವೆ. ವಸತಿ, ಶಿಕ್ಷಣ ಅಥವಾ ವಾಹನಗಳಂತಹ ಅಗತ್ಯಗಳಿಗಾಗಿ ಮರುಪಾವತಿಯ ವಿರುದ್ಧ ಸುರಕ್ಷತೆ ಒದಗಿಸುತ್ತವೆ.

ಯುವ ಅವಧಿಯ ಯೋಜನೆಗಳಂತೆಯೇ ಇವುಗಳು ಆಫ್‌ಲೈನ್ ಮತ್ತು ಆನ್‌ಲೈನ್ ಸ್ವರೂಪಗಳಲ್ಲಿ ಲಭ್ಯ ಇವೆ. 18ರಿಂದ 45 ವರ್ಷಗಳ ಒಳಗಿನವರು ಇದರ ಪ್ರಯೋಜನ ಪಡೆಯಬಹುದು. ಇದರ ಮೆಚ್ಯುರಿಟಿ ವಯಸ್ಸು 23ರಿಂದ 75 ವರ್ಷ.


ಪ್ರಯೋಜನ ಏನು?

ವಿಮಾ ಮೊತ್ತವು 50 ಲಕ್ಷ ರೂ.ನಿಂದ 5 ಕೋಟಿ ರೂ.ಗಳವರೆಗೆ ಇರುತ್ತದೆ. ಬಾಕಿ ಇರುವ ಸಾಲದ ಮೊತ್ತಕ್ಕೆ ಅನುಗುಣವಾಗಿ ಪಾಲಿಸಿ ಅವಧಿಯಲ್ಲಿ ಮರಣದ ಪ್ರಯೋಜನವು ಕಡಿಮೆಯಾಗುತ್ತದೆ.

ಎರಡೂ ಯೋಜನೆಯಲ್ಲಿ ಕನಿಷ್ಠ 18 ರಿಂದ ಗರಿಷ್ಠ 45 ವರ್ಷಗಳ ಒಳಗಿನವರು ಇದನ್ನು ಪಡೆಯಬಹುದು. ಮೆಚುರಿಟಿ ಅವಧಿ 33 ರಿಂದ 75 ವರ್ಷ ಮತ್ತು 33 ರಿಂದ 75 ವರ್ಷಗಳು.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ಕನಿಷ್ಠ ವಿಮಾ ಮೊತ್ತ 50 ಲಕ್ಷ ರೂ. ಮತ್ತು ಗರಿಷ್ಠ ವಿಮಾ ಮೊತ್ತ 5 ಕೋಟಿ ರೂ. ವರೆಗೆ ಆಯ್ಕೆ ಮಾಡಬಹುದು. ಮಹಿಳೆಯರಿಗೆ ವಿಶೇಷ ಕಡಿಮೆ ಪ್ರೀಮಿಯಂ ದರಗಳು ಲಭ್ಯವಿದೆ.

ಪಾಲಿಸಿಯ ಪ್ರಾರಂಭದಲ್ಲಿ ಪಾಲಿಸಿದಾರರಿಗೆ ಸೂಕ್ತ ಸಾಲದ ಬಡ್ಡಿ ದರದ ಆಯ್ಕೆ, ಪಾಲಿಸಿ ಅವಧಿಯಲ್ಲಿ ಪಾಲಿಸಿದಾರನ ಮರಣದ ಸಂದರ್ಭದಲ್ಲಿ ಪಾಲಿಸಿ ಜಾರಿಯಲ್ಲಿದ್ದರೆ ಮತ್ತು ಕ್ಲೈಮ್ ಸ್ವೀಕಾರಾರ್ಹವಾಗಿದ್ದರೆ ಸಾವಿನ ಮೇಲೆ ವಿಮಾ ಮೊತ್ತವನ್ನು ಪಾವತಿಸಲಾಗುತ್ತದೆ.

Continue Reading

ಮನಿ-ಗೈಡ್

EPF New Rule: ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ.ವರೆಗೆ ಇಪಿಎಫ್‌ನಿಂದ ಹಣ ಪಡೆಯಲು ಅವಕಾಶ

ಕಳೆದ ಏಪ್ರಿಲ್‌ನಿಂದ ಇಪಿಎಫ್ ಹಣ ಭಾಗಶಃ ಹಿಂಪಡೆಯುವಿಕೆ ಮಿತಿಯನ್ನು ಹೆಚ್ಚಿಸಲಾಗಿದೆ. ಈಗ ವೈದ್ಯಕೀಯ ಚಿಕಿತ್ಸೆಗಾಗಿ 1 ಲಕ್ಷ ರೂ.ವರೆಗೆ ಇಪಿಎಫ್ ನಿಂದ ಕ್ಲೈಮ್ ಮಾಡಲು ಅವಕಾಶವಿದೆ. ಇದಕ್ಕಾಗಿ ಅಪ್ಲಿಕೇಶನ್ ಸಾಫ್ಟ್ ವೇರ್, ಅರ್ಜಿ ನಮೂನೆಗಳಲ್ಲಿ ಹಲವು ಬದಲಾವಣೆಗಳನ್ನು(EPF New Rule) ಮಾಡಲಾಗಿದೆ. ಅದು ಯಾವುದು, ಹೇಗಿದೆ ಎನ್ನುವುದರ ಕುರಿತು ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

By

EPF New Rule
Koo

ವೈದ್ಯಕೀಯ ಚಿಕಿತ್ಸೆಗಾಗಿ (medical treatment) ಇನ್ನು ಮುಂದೆ ಉದ್ಯೋಗಿಗಳು ಪಿಂಚಣಿ ನಿಧಿಯಿಂದ (Pension Fund ) 1 ಲಕ್ಷ ರೂ.ವರೆಗೆ ಭಾಗಶಃ ಹಿಂಪಡೆಯಲು ಅವಕಾಶವಿದೆ. ಈ ಕುರಿತು ಏಪ್ರಿಲ್‌ನಿಂದಲೇ ಉದ್ಯೋಗಿಗಳ ಪಿಂಚಣಿ ನಿಧಿ ಸಂಸ್ಥೆಯ (EPF New Rule) ಅಪ್ಲಿಕೇಶನ್ ಸಾಫ್ಟ್‌ವೇರ್‌ನಲ್ಲಿ ಬದಲಾವಣೆಯನ್ನು ಮಾಡಲಾಗಿದ್ದು, ಇದಕ್ಕೆ ಕೇಂದ್ರ ಭವಿಷ್ಯ ನಿಧಿ ಆಯುಕ್ತರ ಒಪ್ಪಿಗೆಯೂ ದೊರೆತಿದೆ.

ಈಗಾಗಲೇ ಅಸ್ತಿತ್ವದಲ್ಲಿರುವ 68ಜೆ ಕ್ಲೈಮ್‌ಗಳ ಅರ್ಹತೆ ಮಿತಿಯನ್ನು 50,000 ರೂ. ನಿಂದ 1 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ. ಹಲವಾರು ಉದ್ದೇಶಗಳಿಗಾಗಿ ಇಪಿಎಫ್ ಭಾಗಶಃ ಹಿಂಪಡೆಯುವಿಕೆಗೆ ಫಾರ್ಮ್ 31ರ ಮೂಲಕ ಅನುಮತಿಸಲಾಗಿದೆ. ಮದುವೆ, ಸಾಲ ಮರುಪಾವತಿ, ಮನೆ ನಿರ್ಮಾಣ ಮತ್ತು ಫ್ಲಾಟ್ ಖರೀದಿಗಾಗಿ ಇಪಿಎಫ್ ನಿಂದ ಭಾಗಶಃ ಹಣ ಹಿಂಪಡೆಯಲು ಅವಕಾಶವಿದೆ.

ಪ್ಯಾರಾ 68ಜೆ ಅಡಿಯಲ್ಲಿ ಭಾಗಶಃ ಹಿಂಪಡೆಯುವಿಕೆಯ ಮಿತಿಯನ್ನು ಹೆಚ್ಚಿಸಲಾಗಿದೆ. ಪಿಂಚಣಿ ನಿಧಿ ಹೊಂದಿರುವವರು ಅಥವಾ ಅವರ ಕುಟುಂಬದ ಸದಸ್ಯರ ಅನಾರೋಗ್ಯದ ಚಿಕಿತ್ಸೆಗಾಗಿ ಉದ್ಯೋಗಿಗಳ ಭವಿಷ್ಯ ನಿಧಿ (EPF) ಖಾತೆಯಿಂದ ಮುಂಗಡವನ್ನು ಪಡೆಯಬಹುದು.

ಒಂದು ಲಕ್ಷ ರೂ.ವರೆಗೆ ಮುಂಗಡ ಪಡೆಯಲು ಅವಕಾಶವಿದ್ದು, ಪಿಂಚಣಿದಾರರ 6 ತಿಂಗಳ ಮೂಲ ವೇತನ ಮತ್ತು ಡಿಎ ಅಥವಾ ಬಡ್ಡಿಯೊಂದಿಗೆ ಉದ್ಯೋಗಿ ಪಾಲು ಯಾವುದು ಕಡಿಮೆಯೋ ಅದನ್ನು ಹಿಂಪಡೆಯಲು ಅವಕಾಶವಿದೆ.
ಇದಕ್ಕಾಗಿ ಪಿಂಚಣಿದಾರರು ಫಾರ್ಮ್ 31 ಜೊತೆಗೆ ಉದ್ಯೋಗಿ ಮತ್ತು ವೈದ್ಯರಿಂದ ಸಹಿ ಮಾಡಿದ ಪ್ರಮಾಣಪತ್ರವನ್ನು ಸಹ ಸಲ್ಲಿಸಬೇಕಾಗುತ್ತದೆ.


ಫಾರ್ಮ್ 31 ಎಂದರೇನು?

ಇಪಿಎಫ್ ಫಾರ್ಮ್ 31 ನೌಕರರ ಭವಿಷ್ಯ ನಿಧಿ ಖಾತೆಯಿಂದ ಹಣವನ್ನು ಭಾಗಶಃ ಹಿಂಪಡೆಯಲು ಬಳಸುವ ಅರ್ಜಿ ನಮೂನೆಯಾಗಿದೆ.

ನಮೂನೆ 31ರ ಮೂಲಕ ಪ್ಯಾರಾ 68ಬಿ ಅಡಿಯಲ್ಲಿ ನಿವೇಶನವನ್ನು ಸ್ವಾಧೀನಪಡಿಸಿಕೊಳ್ಳುವುದು ಸೇರಿದಂತೆ ಮನೆ, ಫ್ಲಾಟ್ ಖರೀದಿ, ಮನೆ ನಿರ್ಮಾಣಕ್ಕಾಗಿ ಪಿಂಚಣಿ ಹಣವನ್ನು ಹಿಂಪಡೆಯಲು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

ಪ್ಯಾರಾ 68ಬಿಬಿ ಅಡಿಯಲ್ಲಿ ವಿಶೇಷ ಸಂದರ್ಭಗಳಲ್ಲಿ ಸಾಲದ ಮರುಪಾವತಿಗಾಗಿ, ಪ್ಯಾರಾ 68ಹೆಚ್ ಅಡಿಯಲ್ಲಿ ವಿಶೇಷ ಪ್ರಕರಣಗಳಲ್ಲಿ ಮುಂಗಡಗಳ ಅನುದಾನ, ಪ್ಯಾರಾ 68ಜೆ ಅಡಿಯಲ್ಲಿ ಅನಾರೋಗ್ಯಕ್ಕಾಗಿ ಮುಂಗಡ, ಪ್ಯಾರಾ 68ಕೆ ಅಡಿಯಲ್ಲಿ ಮಕ್ಕಳ ಮದುವೆ ಅಥವಾ ಮೆಟ್ರಿಕ್ಯುಲೇಷನ್ ಅನಂತರದ ಶಿಕ್ಷಣಕ್ಕಾಗಿ ಮತ್ತು ಪ್ಯಾರಾ 68ಎನ್ ಅಡಿಯಲ್ಲಿ ದೈಹಿಕವಾಗಿ ಅಶಕ್ತರಾಗಿರುವ ಸದಸ್ಯರಿಗೆ ಮುಂಗಡ ಅನುದಾನ ಮತ್ತು ಪ್ಯಾರಾ 68ಎನ್ ಎನ್ ಅಡಿಯಲ್ಲಿ ನಿವೃತ್ತಿಯ ಮೊದಲು ಒಂದು ವರ್ಷದೊಳಗೆ ಹಿಂಪಡೆಯುವ ಅವಕಾಶ ಕಲ್ಪಿಸಲಾಗಿದೆ.

ಮಿತಿಯನ್ನು ಹೆಚ್ಚಿಸಿದ ಪ್ಯಾರಾ 68ಜೆ

ಪ್ಯಾರಾ 68ಜೆ ಪಿಂಚಣಿದಾರರು ಅಥವಾ ಕುಟುಂಬದ ಸದಸ್ಯರ ಅನಾರೋಗ್ಯದ ಚಿಕಿತ್ಸೆಗಾಗಿ ಇಪಿಎಫ್ ಖಾತೆಯಿಂದ ಭಾಗಶಃ ಹಿಂಪಡೆಯಲು ಅವಕಾಶ ನೀಡಲಾಗಿದೆ.

Continue Reading

ಮನಿ-ಗೈಡ್

Money Guide: ಕಾರು ಚಲಾಯಿಸಿದಷ್ಟೇ ವಿಮೆ ಪ್ರೀಮಿಯಂ ಪಾವತಿಸಿ; ಏನಿದು ಹೊಸ ಯೋಜನೆ? ಅನುಕೂಲಗಳೇನು?

Money Guide: ಈಗ ಕಾರು ʼಚಲಾಯಿಸಿದಷ್ಟೇ ಪಾವತಿʼ ವಿಮಾ ಮಾದರಿ ಜನಪ್ರಿಯವಾಗುತ್ತಿದೆ. ಅಂದರೆ ವಾರ್ಷಿಕ ಪ್ರೀಮಿಯಂ ಬದಲಾಗಿ ನೀವು ಕಾರನ್ನು ಎಷ್ಟು ದೂರ ಚಲಾಯಿಸಿದ್ದೀರೋ ಅದರ ಆಧಾರದಲ್ಲಿ ಪ್ರೀಮಿಯಂ ಅನ್ನು ಪಾವತಿಸಿದರೆ ಸಾಕು. ಅಂದರೆ ನೀವು ಕಾರನ್ನು ಕಡಿಮೆ ಬಳಸಿದರೆ ಕಡಿಮೆ ಪ್ರೀಮಿಯಂ ಪಾವತಿಸಿದರೆ ಸಾಕು. ಈ ಯೋಜನೆಯ ಅನುಕೂಲ, ಅನಾನುಕೂಲಗಳೇನು? ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತದಲ್ಲಿ ಪ್ರತಿಯೊಂದು ವಾಹನ ವಿಮೆಯನ್ನು (Vehicle insurance) ಹೊಂದಿರುವುದು ಕಡ್ಡಾಯ. ಇದು ವಾಹನಗಳಿಗೆ ಗರಿಷ್ಠ ಸುರಕ್ಷತೆ ಒದಗಿಸುತ್ತದೆ. ಒಂದು ವೇಳೆ ವಾಹನ ಕಳ್ಳತನವಾದರೆ ಅಥವಾ ಅಪಘಾತದಂತಹ ಅನಿರೀಕ್ಷಿತ ಸಮಸ್ಯೆ ಎದುರಾದರೆ ವಾಹನ ವಿಮಾ ಪಾಲಿಸಿ ಆರ್ಥಿಕವಾಗಿ ಸಹಾಯ ಮಾಡುತ್ತದೆ. ವಾಹನ ಮಾದರಿಗಳನ್ನು ಆಧರಿಸಿ ವಿಮೆಯ ಪ್ರೀಮಿಯಂ ಪಾವತಿ ನಿರ್ಧಾರವಾಗುತ್ತದೆ. ಇದರ ಜತೆಗೆ ಈಗ ಕಾರಿಗೆ ʼಚಲಾಯಿಸಿದಷ್ಟೇ ಪಾವತಿʼ (Pay as You Drive-PAYD) ವಿಧಾನ ಜನಪ್ರಿಯವಾಗುತ್ತಿದೆ. ಅಂದರೆ ವಾರ್ಷಿಕ ಪ್ರೀಮಿಯಂ ಬದಲಾಗಿ ನೀವು ಕಾರನ್ನು ಎಷ್ಟು ದೂರ ಚಲಾಯಿಸಿದ್ದೀರೋ ಅದರ ಆಧಾರದಲ್ಲಿ ಪ್ರೀಮಿಯಂ ಅನ್ನು ಪಾವತಿಸಿದರೆ ಸಾಕು. ಅಂದರೆ ನೀವು ಕಾರನ್ನು ಕಡಿಮೆ ಬಳಸಿದರೆ ಕಡಿಮೆ ಪ್ರೀಮಿಯಂ ಪಾವತಿಸಿದರೆ ಸಾಕು. ಈ ಯೋಜನೆಯ ಅನುಕೂಲ, ಅನಾನುಕೂಲಗಳೇನು? ಎನ್ನುವ ವಿವರ ಇಲ್ಲಿದೆ (Money Guide).

ವಾಹನ ವಿಮೆಯಲ್ಲಿನ ವಿಧಗಳು

ಸಾಮಾನ್ಯ ವಾಹನ ವಿಮೆಯಲ್ಲಿ 2 ವಿಧಗಳಿವೆ. ಮೊದಲನೆಯದ್ದು ಮೂರನೇ ವ್ಯಕ್ತಿಯಿಂದ ಪಡೆದುಕೊಳ್ಳುವಂತದ್ದು. ಇದು ಭಾರತದಲ್ಲಿ ಕಡ್ಡಾಯ. ಮತ್ತೊಂದು ಸಮಗ್ರ ವಿಮಾ ಪಾಲಿಸಿ. ಮೂರನೇ ವ್ಯಕ್ತಿಯ ವಿಮೆಯನ್ನು ಬಹುತೇಕ ಡೀಲರ್‌ಗಳೇ ಒದಗಿಸುತ್ತಾರೆ ಹಾಗೂ ಪ್ರೀಮಿಯಂ ವಾಹನದ ಬೆಲೆಯನ್ನು ಅವಲಂಬಿಸಿರುತ್ತದೆ. ಸಮಗ್ರ ವಿಮೆಯು ಮೂರನೇ ವ್ಯಕ್ತಿಯ ಹೊಣೆಗಾರಿಕೆಗಳು, ವೈಯಕ್ತಿಕ ಅಪಘಾತಗಳು ಮತ್ತು ಕಳ್ಳತನಗಳನ್ನು ಒಳಗೊಂಡಿರುತ್ತದೆ. ಆದಾಗ್ಯೂ ಸಮಗ್ರ ವಿಮೆಯು ಮೂರನೇ ವ್ಯಕ್ತಿಯ ವಿಮೆಗೆ ಹೋಲಿಸಿದರೆ ದುಬಾರಿ. ಇನ್ನು ಚಲಾಯಿಸಿದಷ್ಟೇ ಪಾವತಿ ವಿಧಾನದ ಬಗ್ಗೆ ತಿಳಿದುಕೊಳ್ಳೋಣ.

ಹೇಗೆ ಲೆಕ್ಕ ಹಾಕಲಾಗುತ್ತದೆ?

ಕಿ.ಮೀ. ಲೆಕ್ಕಾಚಾರ: ನೀವು ಕಾರು ಓಡಿಸಲು ನಿರೀಕ್ಷಿಸುವ ಒಟ್ಟು ಕಿಲೋ ಮೀಟರ್‌ಗಳನ್ನು ಪಾಲಿಸಿ ಅವಧಿಯಲ್ಲಿ ನೀವು ಅಂದಾಜು ಮಾಡಿ ಸೂಕ್ತವಾದ ಸ್ಲ್ಯಾಬ್ ಅನ್ನು ಆಯ್ಕೆ ಮಾಡಿ.

ಟೆಲಿಮ್ಯಾಟಿಕ್ಸ್‌ ಆಧಾರಿತ ವಾಹನ ವಿಮೆ: ಈ ಪಾಲಿಸಿಯಲ್ಲಿ ನಿಮ್ಮ ವಾಹನವನ್ನು ಚಲಾಯಿಸುವ ಕ್ರಮ, ಸಂಚಾರ ನಿಯಮಗಳನ್ನು ಪಾಲಿಸುವ ಶಿಸ್ತು ಮತ್ತು ಗುಣಮಟ್ಟವನ್ನು ಆಧರಿಸಿ ವಿಮೆಯ ಪ್ರೀಮಿಯಂ ದರ ನಿಗದಿಯಾಗುತ್ತದೆ. ವೇಗ, ದೂರ, ದಿನದ ಸಮಯ ಮತ್ತು ಚಾಲನಾ ಮಾದರಿಗಳು ಸೇರಿದಂತೆ ಚಾಲನೆಯ ವಿವಿಧ ಅಂಶಗಳ ಬಗ್ಗೆ ಡೇಟಾವನ್ನು ಸಂಗ್ರಹಿಸಿ ಪ್ರೀಮಿಯಂ ನಿರ್ಧರಿಸಲಾಗುತ್ತದೆ.

ಪ್ರೀಮಿಯಂ ಮೊತ್ತ ನಿರ್ಧಾರ: ನೀವು ಆಯ್ಕೆ ಮಾಡಿದ ಕಿ.ಮೀ. ಸ್ಲ್ಯಾಬ್‌ನ ಆಧಾರದ ಮೇಲೆ ಕಂಪನಿ ಪ್ರೀಮಿಯಂ ನಿರ್ಧರಿಸುತ್ತದೆ.

ಟ್ರ್ಯಾಕಿಂಗ್: ಟೆಲಿಮ್ಯಾಟಿಕ್ಸ್ ಉಪಕರಣವನ್ನು ಬಳಸಿಕೊಂಡು ಅಥವಾ ನಿಮ್ಮ ಸ್ಮಾರ್ಟ್‌ಫೋನ್‌ ಅಪ್ಲಿಕೇಶನ್ ಮೂಲಕ ವಾಹನದ ಮೈಲೇಜ್ ಅನ್ನು ಟ್ರ್ಯಾಕ್ ಮಾಡಲಾಗುತ್ತದೆ.

ಪ್ರೀಮಿಯಂ ಹೊಂದಾಣಿಕೆ: ಪಾಲಿಸಿ ಅವಧಿಯ ಕೊನೆಯಲ್ಲಿ ನಿಮ್ಮ ನಿಜವಾದ ಮೈಲೇಜ್ ಅನ್ನು ಘೋಷಿತ ಮೈಲೇಜ್‌ಗೆ ಹೋಲಿಸಲಾಗುತ್ತದೆ. ನೀವು ಕಡಿಮೆ ಚಾಲನೆ ಮಾಡಿದ್ದರೆ ನೀವು ಮರುಪಾವತಿ ಪಡೆಯುತ್ತೀರಿ. ನೀವು ಹೆಚ್ಚು ಚಾಲನೆ ಮಾಡಿದ್ದರೆ ನೀವು ಹೆಚ್ಚುವರಿ ಪ್ರೀಮಿಯಂ ಪಾವತಿಸಬೇಕಾಗುತ್ತದೆ.

ಅನುಕೂಲಗಳೇನು?

  • ವೆಚ್ಚ ಉಳಿತಾಯ: ನೀವು ಕಾರನ್ನು ಕಡಿಮೆ ಕಿ.ಮೀ. ಚಲಾಯಿಸಿದ್ದರೆ ಅಲ್ಪ ಮೊತ್ತದ ಪ್ರೀಮಿಯಂ ಪಾವತಿಸಿದರೆ ಸಾಕು.
  • ನ್ಯಾಯೋಚಿತ ಬೆಲೆ: ನೀವು ಬಳಸುವ ಕವರೇಜ್‌ಗೆ ಮಾತ್ರ ಪಾವತಿ.
  • ಸುರಕ್ಷಿತವಾಗಿ ವಾಹನ ಚಲಾಯಿಸಲು ಪ್ರೋತ್ಸಾಹ: ಕೆಲವು ವಿಮಾ ಕಂಪನಿಗಳು ಟೆಲಿಮ್ಯಾಟಿಕ್ಸ್ ಉಪಕರಣದ ಮೂಲಕ ಟ್ರ್ಯಾಕ್ ಮಾಡಿ ಸುರಕ್ಷಿತ ಚಾಲನೆಗೆ ರಿಯಾಯಿತಿಗಳನ್ನು ನೀಡುತ್ತವೆ.
  • ಬಳಕೆ ಆಧಾರಿತ ಪ್ರೀಮಿಯಂಗಳು: ವಾಹನವನ್ನು ಓಡಿಸುವ ದೂರವನ್ನು ಆಧರಿಸಿ ವಿಮಾ ಪ್ರೀಮಿಯಂ ಅನ್ನು ಲೆಕ್ಕ ಹಾಕಲಾಗುತ್ತದೆ. ಮೈಲೇಜ್ ಮತ್ತು ಚಾಲನಾ ನಡವಳಿಕೆಯನ್ನು ದಾಖಲಿಸುವ ಟೆಲಿಮ್ಯಾಟಿಕ್ಸ್ ಉಪಕರಣ ಅಥವಾ ಮೊಬೈಲ್ ಅಪ್ಲಿಕೇಶನ್ ಬಳಸಿಕೊಂಡು ಇದನ್ನು ಸಾಮಾನ್ಯವಾಗಿ ಟ್ರ್ಯಾಕ್ ಮಾಡಲಾಗುತ್ತದೆ.
  • ವೆಚ್ಚದ ದಕ್ಷತೆ: ಕಾರನ್ನು ವಿರಳವಾಗಿ ಬಳಸುವ ಅಥವಾ ಕಡಿಮೆ ದೂರ ಸಂಚರಿಸುವವರಿಗೆ ಪಿಇಡಿ ಹೆಚ್ಚು ಸೂಕ್ತ. ಪ್ರೀಮಿಯಂಗಳು ಬಳಕೆಯೊಂದಿಗೆ ನೇರ ಸಂಬಂಧ ಹೊಂದಿವೆ.
  • ಕಸ್ಟಮೈಸ್ ಮಾಡಬಹುದಾದ ಕವರೇಜ್: ಪಾಲಿಸಿದಾರರು ತಮ್ಮ ಚಾಲನಾ ಅಭ್ಯಾಸ ಮತ್ತು ಅಗತ್ಯಗಳ ಆಧಾರದ ಮೇಲೆ ವಿವಿಧ ಹಂತದ ಕವರೇಜ್ ಅನ್ನು ಆಯ್ಕೆ ಮಾಡಬಹುದು.
  • ಚಾಲನಾ ಅಭ್ಯಾಸವನ್ನು ಸುಧಾರಣೆ: ನಿಮ್ಮ ಚಾಲನಾ ಅಭ್ಯಾಸವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಅನಾನುಕೂಲ

  • ಗೌಪ್ಯತೆ ಬಗ್ಗೆ ಪ್ರಶ್ನೆ: ಚಾಲನಾ ಅಭ್ಯಾಸದ ನಿರಂತರ ಟ್ರ್ಯಾಕಿಂಗ್ ಗೌಪ್ಯತೆಗೆ ಧಕ್ಕೆ ತರುತ್ತದೆ.
  • ಆಗಾಗ್ಗೆ ಚಾಲನೆ ಮಾಡುವವರಿಗೆ ಅಧಿಕ ವೆಚ್ಚ: ಸಾಂಪ್ರದಾಯಿಕ ವಿಮಾ ಪಾಲಿಸಿಗೆ ಹೋಲಿಸಿದರೆ ಆಗಾಗ್ಗೆ ಚಾಲನೆ ಮಾಡುವವರು ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.
  • ಕ್ಲೈಮ್‌ಗಳಲ್ಲಿನ ಸಂಕೀರ್ಣತೆ: ಕ್ಲೈಮ್ ಸಂದರ್ಭದಲ್ಲಿ, ದೂರ ಚಾಲಿತ ಮತ್ತು ಇತರ ಟೆಲಿಮ್ಯಾಟಿಕ್ಸ್ ಡೇಟಾವನ್ನು ಪರಿಶೀಲಿಸಲು ತೊಡಕು ಎದುರಾಗುವ ಸಾಧ್ಯತೆ ಇದೆ.
  • ಟೆಲಿಮ್ಯಾಟಿಕ್ಸ್‌ನ ವಿಶ್ವಾಸಾರ್ಹತೆ: ಟೆಲಿಮ್ಯಾಟಿಕ್ಸ್ ಉಪಕರಣ ಅಥವಾ ಅಪ್ಲಿಕೇಶನ್‌ನಲ್ಲಿನ ಯಾವುದೇ ಅಸಮರ್ಪಕ ಕಾರ್ಯ ವಿಧಾನ ಪ್ರೀಮಿಯಂ ಲೆಕ್ಕಾಚಾರದ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Money Guide: ನೆರೆ, ಭೂಕುಸಿತದಿಂದ ನಿಮ್ಮ ಮನೆಯನ್ನು ರಕ್ಷಿಸಲು ಜಸ್ಟ್‌ ಹೀಗೆ ಮಾಡಿ ಸಾಕು

Continue Reading

ಮನಿ-ಗೈಡ್

Money Guide: ಆನ್‌ಲೈನ್‌ ಶಾಪಿಂಗ್‌ ವೇಳೆ ಮೋಸ ಹೋಗದಿರಲು ಈ ಟಿಪ್ಸ್‌ ಪಾಲೋ ಮಾಡಿ

Money Guide: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ ಶಾಪಿಂಗ್‌ ಜನಪ್ರಿಯವಾಗುತ್ತಿದೆ. ಆದರೆ ಕೆಲವೊಮ್ಮೆ ಈ ಹೆಸರಿನಲ್ಲಿ ವಂಚನೆಯೂ ನಡೆಯುತ್ತದೆ. ಆರ್ಡರ್‌ ಮಾಡಿದ ಬೆಲೆ ಬಾಳುವ ವಸ್ತುವಿನ ಬದಲು ಕಲ್ಲು, ಮರದ ತುಂಡು, ಸೋಪು ಅಷ್ಟೇ ಏಕೆ ಹಾವು ಕೂಡ ಪಾರ್ಸೆಲ್‌ ಮೂಲಕ ಬರುತ್ತದೆ! ಕೆಲವೊಂದು ಫೇಕ್‌ ವೆಬ್‌ಸೈಟ್‌ಗಳು ಆರ್ಡರ್‌ ಮಾಡಿದ ಬಳಿಕ ಉತ್ಪನ್ನಗಳನ್ನು ಕಳುಹಿಸದೆ ಮೋಸ ಎಸಗುತ್ತದೆ. ಹೀಗಾಗಿ ಆನ್‌ಲೈನ್‌ ಶಾಪಿಂಗ್‌ ಮಾಡುವ ಮುನ್ನ ಸಾಕಷ್ಟು ಮುನ್ನೆಚ್ಚರಿಕೆ ವಹಿಸದಿದ್ದರೆ ಯಾಮಾರುವುದು ಖಂಡಿತ. ಹೀಗಾಗಿ ಆನ್‌ಲೈನ್‌ ಶಾಪಿಂಗ್‌ ಮಾಡುವಾಗ ಯಾವೆಲ್ಲ ಅಂಶಗಳನ್ನು ಗಮನಿಸಬೇಕು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ ಶಾಪಿಂಗ್‌ (Online shopping) ಜನಪ್ರಿಯವಾಗುತ್ತಿದೆ. ಒಂದೇ ಕಡೆ ಹಲವು ಆಯ್ಕೆ, ಕಡಿಮೆ ಬೆಲೆ ಮತ್ತು ಸಮಯದ ಉಳಿತಾಯ ಹೀಗೆ ನಾನಾ ಕಾರಣಗಳಿಂದ ಇದು ಗ್ರಾಹಕರ ಮನ ಗೆದ್ದಿದೆ. ಇದಕ್ಕಾಗಿಯೇ ಇರುವ ನಾನಾ ಆ್ಯಪ್‌ಗಳು ವಿಶೇಷ ಸಂದರ್ಭಗಳಲ್ಲಿ ಕೊಡುಗೆ ಪ್ರಕಟಿಸಿ ಇನ್ನಷ್ಟು ಆಕರ್ಷಿಸುತ್ತದೆ. ಇದರ ಜತೆಗೆ ಕೆಲವೊಮ್ಮೆ ವಂಚನೆಯೂ ನಡೆಯುತ್ತದೆ. ಆರ್ಡರ್‌ ಮಾಡಿದ ಬೆಲೆ ಬಾಳುವ ವಸ್ತುವಿನ ಬದಲು ಕಲ್ಲು, ಮರದ ತುಂಡು, ಸೋಪು ಅಷ್ಟೇ ಏಕೆ ಹಾವು ಕೂಡ ಪಾರ್ಸೆಲ್‌ ಮೂಲಕ ಬರುತ್ತದೆ! ಕೆಲವೊಂದು ಫೇಕ್‌ ವೆಬ್‌ಸೈಟ್‌ಗಳು ಆರ್ಡರ್‌ ಮಾಡಿದ ಬಳಿಕ ಉತ್ಪನ್ನಗಳನ್ನು ಕಳುಹಿಸದೆ ಮೋಸ ಎಸಗುತ್ತವೆ. ಹೀಗಾಗಿ ಆನ್‌ಲೈನ್‌ ಶಾಪಿಂಗ್‌ ಮಾಡುವ ಮುನ್ನ ಸಾಕಷ್ಟು ಮುನ್ನೆಚ್ಚರಿಕೆ ವಹಿಸದಿದ್ದರೆ ಯಾಮಾರುವುದು ಖಂಡಿತ. ಇಂದಿನ ಮನಿಗೈಡ್‌ (Money Guide)ನಲ್ಲಿ ಆನ್‌ಲೈನ್‌ ಶಾಪಿಂಗ್‌ ಮಾಡುವಾಗ ಯಾವೆಲ್ಲ ಅಂಶಗಳನ್ನು ಗಮನಿಸಬೇಕು ಎನ್ನುವುದನ್ನು ನೋಡೋಣ.

ಮಾರಾಟಗಾರರ ಹಿನ್ನಲೆ

ಆನ್‌ಲೈನ್‌ನಲ್ಲಿ ಯಾವುದೇ ವಸ್ತು ಖರೀದಿಸುವ ಮುನ್ನ ಮಾರಾಟಗಾರರ ಹಿನ್ನಲೆ ಪರಿಶೀಲಿಸಿ. ಕೆಲವೊಮ್ಮೆ ಸೋಷಿಯಲ್‌ ಮೀಡಿಯಾಗಳಲ್ಲಿ ಆಕರ್ಷಕ ಕೊಡುಗೆ ಪ್ರಕಟಿಸಿ ಫೇಕ್‌ ವೆಬ್‌ಸೈಟ್‌ಗಳು ನಿಮ್ಮ ಗಮನ ಸೆಳೆಯುತ್ತವೆ. ಇವರು ಕ್ಯಾಷ್‌ ಆನ್‌ ಡೆಲಿವರಿ ಆಯ್ಕೆಯನ್ನು ಹೊಂದಿರುವುದಿಲ್ಲ. ನೀವು ಆರ್ಡರ್‌ ಮಾಡುವಾಗಲೇ ಹಣ ಪಾವತಿಸಬೇಕಾಗುತ್ತದೆ. ಒಮ್ಮೆ ನೀವು ಹಣ ಪಾವತಿಸಿದರೆ ಬಳಿಕ ಸಂಪರ್ಕಕ್ಕೇ ಸಿಗುವುದಿಲ್ಲ. ಜತೆಗೆ ನೀವು ಆರ್ಡರ್‌ ಮಾಡಿದ ಉತ್ಪನ್ನವೂ ನಿಮ್ಮನ್ನು ತಲುಪುವುದಿಲ್ಲ. ಇನ್ನು ಕೆಲವೊಮ್ಮೆ ಇಂತಹ ಅನಧಿಕೃತ ವೆಬ್‌ಸೈಟ್‌ಗಳು ಕಳಪೆ ಉತ್ಪನ್ನಗಳನ್ನು ಕಳುಹಿಸುತ್ತವೆ. ಆಕರ್ಷಕ ಫೋಟೊ ತೋರಿಸಿ ಹಾಳಾದ ಉತ್ಪನ್ನ ಅಥವಾ ಬೇರೆಯದೇ ಪ್ರಾಡಕ್ಟ್‌ ಕಳುಹಿಸುತ್ತವೆ. ಹೀಗಾಗಿ ವೆಬ್‌ಸೈಟ್‌ ಅಧಿಕೃತವೇ ಎನ್ನುವುದನ್ನು ಮೊದಲೇ ದೃಢಪಡಿಸಿಕೊಳ್ಳಿ. ವೆಬ್‌ಸೈಟ್‌ ಸುರಕ್ಷಿತ ಪಾವತಿ ವಿಧಾನ, ಸೂಕ್ತ ರಿಟರ್ನ್ ಪಾಲಿಸಿಗಳು ಹೊಂದಿವೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಜತೆಗೆ ಗ್ರಾಹಕ ರಿವ್ಯೂ ಕೂಡ ಗಮನಿಸಿ.

ಉತ್ಪನ್ನದ ರಿವ್ಯೂ ಗಮನಿಸಿ

ರಿಯಾಯಿತಿ ಇದೆ ಎನ್ನುವ ಕಾರಣಕ್ಕೆ ಕಣ್ಣು ಮುಚ್ಚಿ ಯಾವುದೇ ಉತ್ಪನ್ನಗಳನ್ನು ಕೊಂಡುಕೊಳ್ಳಬೇಡಿ. ಖರೀದಿಸುವ ಮುನ್ನ ಆ ಉತ್ಪನ್ನಕ್ಕೆ ಗ್ರಾಹಕರು ಕೊಟ್ಟಿರುವ ರಿವ್ಯೂ ಪರಿಶೀಲಿಸಿ. ಜಾಹೀರಾತು, ಮಾರಾಟಗಾರರ ಮಾತನ್ನು ಪೂರ್ಣವಾಗಿ ನಂಬಬೇಡಿ. ಗ್ರಾಹಕ ರಿವ್ಯೂ ಗಮನಿಸಿ ಅಲ್ಲಿ ಸಕಾರಾತ್ಮಕ ಪ್ರಕ್ರಿಯೆಗಿಂತ ನಕಾರಾತ್ಮಕ ಅಭಿಮತವೇ ಹೆಚ್ಚಿದ್ದರೆ ಖರೀದಿಸಬೇಡಿ.

ಶಿಪ್ಪಿಂಗ್‌ ಚಾರ್ಜ್‌ ಮತ್ತು ಸಮಯ

ನೀವು ಖರೀದಿಸಲು ಬಯಸುವ ಉತ್ಪನ್ನಕ್ಕೆ ವಿಧಿಸುವ ಶಿಪ್ಪಿಂಗ್‌ ಜಾರ್ಜ್‌ ಅನ್ನು ಗಮನಿಸಿ. ಜತೆಗೆ ಅದು ಯಾವಾಗ ತಲುಪುತ್ತದೆ ಎನ್ನುವುದನ್ನೂ ಪರಿಶೀಲಿಸಿ. ಕೆಲವೊಂದು ಆನ್‌ಲೈನ್‌ ಅಪ್ಲಿಕೇಷನ್‌ಗಳು ಶಿಪ್ಪಿಂಗ್‌ ಜಾರ್ಜ್‌ ಇಲ್ಲದೆ ಡೆಲಿವರಿ ಮಾಡುತ್ತವೆ. ಆದರೆ ಉತ್ಪನ್ನ ತಲುಪಲು ಹೆಚ್ಚಿನ ಸಮಯ ತಗಲುತ್ತದೆ. ಹೀಗಾಗಿ ಈ ಅಂಶದ ಬಗ್ಗೆ ಗಮನ ಹರಿಸಿ. ಜತೆಗೆ ಶಿಪ್ಪಿಂಗ್‌ ಜಾರ್ಜ್‌ ಮತ್ತು ಪ್ರಾಡಕ್ಟ್‌ ನಿಮ್ಮ ಕೈ ಸೇರಲಿರುವ ದಿನಗಳನ್ನು ಬೇರೆ ಆ್ಯಪ್‌ಗಳೊಂದಿಗೆ ಹೋಲಿಸಿ ನೋಡಿ. ವಿದೇಶಗಳಿಂದ ನೀವು ಉತ್ಪನ್ನ ಖರೀದಿಸುತ್ತಿದ್ದರೆ ಇದರ ಮೇಲೆ ವಿಧಿಸುವ ತೆರಿಗೆಯೂ ನಿಮ್ಮ ಗಮನದಲ್ಲಿರಲಿ.

ರಿಟರ್ನ್‌ ಪಾಲಿಸಿ ಅರ್ಥ ಮಾಡಿಕೊಳ್ಳಿ

ಆನ್‌ಲೈನ್‌ ಮೂಲಕ ಯಾವುದೇ ವಸ್ತುವನ್ನು ಖರೀದಿಸುವ ಮುನ್ನ ಮೊದಲು ಅರ್ಥ ಮಾಡಿಕೊಳ್ಳಬೇಕಾದುದು ಅದರ ರಿಟರ್ನ್‌ ಪಾಲಿಸಿಯನ್ನು. ಹೆಚ್ಚಿನ ಅಪ್ಲಿಕೇಷನ್‌ಗಳು ಉತ್ಪನ್ನಗಳನ್ನು ಹಿಂದಿರುಗಿಸಲು 20-30 ದಿನಗಳ ಕಾಲಾವಕಾಶ ನೀಡುತ್ತವೆ. ಕೆಲವೊಮ್ಮೆ ಉತ್ಪನ್ನ, ಮಾರಾಟಗಾರರನ್ನು ಹೊಂದಿಕೊಂಡು ಈ ನಿಯಮದಲ್ಲಿ ವ್ಯತ್ಯಾಸಗಳಿರುತ್ತವೆ. ಜತೆಗೆ ರಿಟರ್ನ್‌ ಮಾಡುವಾಗ ಶಿಪ್ಪಿಂಗ್‌ ಚಾರ್ಜ್‌ ಇದೆಯೇ ಎನ್ನುವುದನ್ನು ಪರಿಶೀಲಿಸುವುದನ್ನು ಮರೆಯಬೇಡಿ. ಸಮರ್ಪಕ ರಿಟರ್ನ್‌ ಪಾಲಿಸಿಯಿಂದ ನಿಮ್ಮ ಹಣ ವ್ಯರ್ಥವಾಗುವುದನ್ನು ತಡೆಯಬಹುದು.

ಬೆಲೆ ಹೋಲಿಕೆ ಮಾಡಿ

ನಾವು ಅಂಗಡಿಗೆ ತೆರಳಿ ಶಾಪಿಂಗ್‌ ಮಾಡುವಾಗ ವಿವಿಧ ಕಡೆಗಳ ಬೆಲೆ ಹೋಲಿಸಿ ನೋಡುವಂತೆ ವಿವಿಧ ಅಪ್ಲಿಕೇಷನ್‌, ವೆಬ್‌ಸೈಟ್‌ಗಳಲ್ಲಿನ ಬೆಲೆಯನ್ನು ಪರಿಶೀಲಿಸಿ. ಇದರಿಂದ ಸಾಕಷ್ಟು ಹಣವನ್ನು ಉಳಿಸಬಹುದು. ಜತೆಗೆ ಹಲವು ಆ್ಯಪ್‌ಗಳು ವಿಶೇಷ ಸಂದರ್ಭಗಳಲ್ಲಿ ಪ್ರಕಟಿಸುವ ವಿಶೇಷ ಕೊಡುಗೆ, ರಿಯಾಯಿತಿಗಳ ಪ್ರಯೋಜನ ಪಡೆದುಕೊಳ್ಳಿ. ಕೆಲವೊಮ್ಮೆ ಕೂಪನ್‌ಗಳೂ ಲಭ್ಯ. ಇದರ ಲಾಭ ಪಡೆಯಿರಿ.

ಪಾವತಿ ವಿಧಾನ ಚೆಕ್‌ ಮಾಡಿ

ಹಲವು ಆನ್‌ಲೈನ್‌ ಸ್ಟೋರ್‌ಗಳು ಪಾವತಿಗಾಗಿ ವಿವಿಧ ಆಯ್ಕೆಗಳನ್ನು ನೀಡುತ್ತವೆ. ಕೆಲವೊಮ್ಮೆ ಎಲ್ಲ ರೀತಿಯ ಪಾವತಿಗಳನ್ನು ಸ್ವೀಕರಿಸುವುದಿಲ್ಲ. ಹೀಗಾಗಿ ಆರ್ಡರ್‌ ಮಾಡುವ ಮುನ್ನ ನಿಮಗೆ ಅನುಕೂಲವಾಗುವ ಪಾವತಿ ವಿಧಾನ ಇದೆಯೇ ಎನ್ನುವುದನ್ನು ಚೆಕ್‌ ಮಾಡಿ. ನಿಮ್ಮ ಪಾವತಿಯ ಸುರಕ್ಷತೆಯನ್ನು ಗಮನಿಸಲು ಮರೆಯಬೇಡಿ. ಜತೆಗೆ ನಿಮ್ಮ ವೈಯಕ್ತಿಕ ಮಾಹಿತಿ ಎಲ್ಲಿಯೂ ಸೋರಿಕೆಯಾಗುತ್ತಿಲ್ಲ ಎನ್ನುವುದನ್ನೂ ಖಚಿತಪಡಿಸಿ.

ಬೆಲೆ ಬಾಳುವ ವಸ್ತುಗಳನ್ನು ಖರೀದಿಸುವ ಮುನ್ನ

ಲ್ಯಾಪ್‌ಟಾಪ್‌, ಟಿವಿ, ಮೊಬೈಲ್‌ ಫೋನ್‌ ಮೊದಲಾದ ಬೆಲೆಬಾಳುವ ವಸ್ತುಗಳನ್ನು ಖರೀದಿಸುವಾಗ ಆದಷ್ಟು ಕ್ಯಾಷ್‌ ಆನ್‌ ಡೆಲಿವರಿ (Cash on delivery)ಯನ್ನೇ ಆಯ್ಕೆ ಮಾಡಿ. ಜತೆಗೆ ಉತ್ಪನ್ನ ಬಂದಾಗ ಡೆಲಿವರಿ ಬಾಯ್‌ ಎದುರಿನಲ್ಲೇ ಓಪನ್‌ ಮಾಡಿ. ಒಂದು ವೇಳೆ ಇದೂ ಆಗಿಲ್ಲ ಎಂದಾದರೆ ಪಾರ್ಸೆಲ್‌ ತೆರೆಯುವ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೊ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: National Pension System: ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಎನ್‌ಪಿಎಸ್ ಯೋಜನೆ ಸೂಕ್ತ

Continue Reading
Advertisement
PR Sreejesh
ಕ್ರೀಡೆ14 mins ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ36 mins ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ38 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ1 hour ago

Paris Olympics 2024 : ನಮ್ಮ ರಾಜಕಾರಣಿಗಳು ಕ್ರೀಡಾಕ್ಷೇತ್ರದಲ್ಲೂ ರಾಜಕೀಯ ಮಾಡ್ತಾರೆ; ಉಕ್ರೇನ್​ ಸಂಸದ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದಾರೆ!

Yakshagana Dance
ಬೆಂಗಳೂರು2 hours ago

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Road Accident
ಕರ್ನಾಟಕ2 hours ago

Road Accident: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Bomb threat
ಪ್ರಮುಖ ಸುದ್ದಿ2 hours ago

Bomb threat : ಏರ್​ಪೋರ್ಟ್​​ ಬ್ಯಾಗ್ ಚೆಕಿಂಗ್​ ವೇಳೆ ತಮಾಷೆಗೆ ‘ಬಾಂಬ್​ ಇದೆ’ ಅಂದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

theft Case
ಬೆಂಗಳೂರು2 hours ago

Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Tungabhadra Dam
ಪ್ರಮುಖ ಸುದ್ದಿ3 hours ago

Tungabhadra Dam: ಟಿಬಿ ಡ್ಯಾಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಶೀಘ್ರ ಕ್ರಸ್ಟ್ ಗೇಟ್ ದುರಸ್ತಿಗೆ ವಿಜಯೇಂದ್ರ ಆಗ್ರಹ

veg vs non veg
ಪ್ರಮುಖ ಸುದ್ದಿ3 hours ago

veg vs non veg : ಮಕ್ಕಳ ಬಾಕ್ಸ್​​ನಲ್ಲಿ ಮಾಂಸಾಹಾರ ಕಳುಹಿಸಬಾರದು; ವಿವಾದ ಸೃಷ್ಟಿಸಿದ ಶಾಲೆಯ ನೋಟಿಸ್​​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌