Viral Video: ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ಚುಂಬಿಸಿದ ವಿದ್ಯಾರ್ಥಿನಿ! ತರಗತಿಯಲ್ಲೇ ಪ್ರಣಯ! ವಿಡಿಯೊ ನೋಡಿ - Vistara News

ವೈರಲ್ ನ್ಯೂಸ್

Viral Video: ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ಚುಂಬಿಸಿದ ವಿದ್ಯಾರ್ಥಿನಿ! ತರಗತಿಯಲ್ಲೇ ಪ್ರಣಯ! ವಿಡಿಯೊ ನೋಡಿ

Viral Video: ಶಾಲೆಯ ಸಮವಸ್ತ್ರ ಧರಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರತಿಯ ಕೊನೆಬೆಂಚ್‌ನಲ್ಲಿ ಕುಳಿತು ಪರಸ್ಪರ ಕಿಸ್ ಮಾಡುತ್ತಿದ್ದರೆ, ಅವರ ಪಕ್ಕದಲ್ಲೇ ಇತರ ಮಕ್ಕಳು ಇದ್ದರೂ ಕೂಡ ಕ್ಯಾರೇ ಎನ್ನದೇ ಈ ವಿದ್ಯಾರ್ಥಿಗಳು ಕಿಸ್ಸಿಂಗ್‌ನಲ್ಲಿ ತೊಡಗಿದ್ದಾರೆ. ಇನ್ನು ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ವಿದ್ಯಾರ್ಥಿನಿ ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೋಯ್ಡಾ: ಮಕ್ಕಳು ಚೆನ್ನಾಗಿ ಓದ್ಬೇಕು, ಮುಂದೇನಾದ್ರೂ ಸಾಧನೆ ಮಾಡ್ಬೇಕು ಎಂಬ ಕನಸಿಟ್ಟುಕೊಟ್ಟು ತಂದೆ-ತಾಯಿಗಳು ಈ ವಿಡಿಯೋ ನೋಡಿದ್ರೆ ಶಾಕ್‌ ಆಗೋದು ಗ್ಯಾರಂಟಿ. ಕಷ್ಟಪಟ್ಟು ಪೋಷಕರು ಶಾಲೆಗೆ ಕಳುಹಿಸಿದರೆ ಮಕ್ಕಳು ಶಾಲೆಯಲ್ಲಿ ಕುಳಿತು ಅವರು ತಲೆ ತಗ್ಗಿಸುವಂತಹ ಕೆಲಸ ಮಾಡುತ್ತಿರುವ ಘಟನೆಗಗಳು ಆಗಾಗ ಬೆಳಕಿಗೆ ಬರುತ್ತಿರುತ್ತದೆ. ಇದೀಗ ಅಂತಹದ್ದೇ ಒಂದು ಶಾಕಿಂಗ್‌ ಘಟನೆ ನೋಯ್ಡಾ(Noida)ದಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌(Viral Video) ಆಗುತ್ತಿದೆ.

ಇಲ್ಲಿನ ಖಾಸಗಿ ಶಾಲೆಯೊಂದರ ತರಗತಿಯೊಂದರಲ್ಲಿ ವಿದ್ಯಾರ್ಥಿಗಳು ಪರಸ್ಪರ ಕಿಸ್ ಮಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಕ್ಕಳ ಈ ದಾರಿ ತಪ್ಪಿದ ವರ್ತನೆಗೆ ತೀವ್ರ ಆಕ್ರೋಶ ಕೇಳಿ ಬಂದಿದೆ. ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಶಾಲೆಯ ಸಮವಸ್ತ್ರ ಧರಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರತಿಯ ಕೊನೆಬೆಂಚ್‌ನಲ್ಲಿ ಕುಳಿತು ಪರಸ್ಪರ ಕಿಸ್ ಮಾಡುತ್ತಿದ್ದರೆ, ಅವರ ಪಕ್ಕದಲ್ಲೇ ಇತರ ಮಕ್ಕಳು ಇದ್ದರೂ ಕೂಡ ಕ್ಯಾರೇ ಎನ್ನದೇ ಈ ವಿದ್ಯಾರ್ಥಿಗಳು ಕಿಸ್ಸಿಂಗ್‌ನಲ್ಲಿ ತೊಡಗಿದ್ದಾರೆ. ಇನ್ನು ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ವಿದ್ಯಾರ್ಥಿನಿ ಚುಂಬಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅನೇಕರು ನಾನಾ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಹೇಳುವ ಪ್ರಕಾರ ಇದು ಹಳೆ ವೀಡಿಯೋ ಹಲವು ವರ್ಷಗಳ ಹಳೇ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೇ ಕಾರಣಕ್ಕೆ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸಿ ನಂಬಬೇಕು ಎಂದು ಒಬ್ಬರು ಈ ವೀಡಿಯೋಗೆ ಕಾಮೆಂಟ್ ಮಾಡಿದ್ದಾರೆ.

ಆನೇಕಲ್‌ ಪಟ್ಟಣದ ಖಾಸಗಿ ಕಾಲೇಜಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಕ್ಲಾಸ್‌ ರೂಮ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರಣಯದ ವಿಡಿಯೊ ಈಗ ವೈರಲ್‌ ಆಗಿತ್ತು. ವಿದ್ಯಾರ್ಥಿಗಳಿಬ್ಬರು ಕ್ಲಾಸ್‌ನಲ್ಲಿ ಪಾಠ ಕೇಳುವುದು ಬಿಟ್ಟು, ಕೈ ಕೈ ಹಿಡಿದುಕೊಂಡು ತುಟಿಗೆ ಮುತ್ತಿಟ್ಟು ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಇನ್ನೊಂದು ದೃಶ್ಯದಲ್ಲಿ ವಿದ್ಯಾರ್ಥಿನಿಗೆ ತರಗತಿಯಲ್ಲೇ ವಿದ್ಯಾರ್ಥಿ ಉಂಗುರ ತೊಡಿಸುವ ಸನ್ನಿವೇಶವಿದೆ. ಈ ವಿಷಯ ತಿಳಿಯುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ ಕೈಗೊಂಡಿದೆ. ಆ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿತ್ತು.

ಇದನ್ನೂ ಓದಿ: Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

PR Sreejesh : ಪಂದ್ಯಾವಳಿಯ ನಂತರ ಶ್ರೀಜೇಶ್ ಕ್ರೀಡೆಯಿಂದ ನಿವೃತ್ತರಾಗಿದ್ದಾರೆ. ಜೂನಿಯರ್ ಪುರುಷರ ಹಾಕಿ ತಂಡದ ಮುಖ್ಯ ತರಬೇತುದಾರರಾಗಿ ಜವಾಬ್ದಾರಿ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಪ್ಯಾರಿಸ್​​ನಲ್ಲಿ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಅವರು ಭಾರತದ ಜಂಟಿ ಧ್ವಜಧಾರಿಯಾಗಿ ನಡೆಯಲಿದ್ದಾರೆ. ಆದಾಗ್ಯೂ, ಅದಕ್ಕೂ ಮೊದಲು, ಅವರು ಸಾಂಪ್ರದಾಯಿಕ ಮುಂಡು ಧರಿಸಿ ಐಫೆಲ್ ಟವರ್ ಮುಂದೆ ಪೋಸ್ ನೀಡಿದರು. ಈ ವೇಳೆ ಸೂಪರ್​ಹಿಟ್ ಮಲಯಾಳಂ ಚಲನಚಿತ್ರ ಆವೇಶಮ್ ನ ಪ್ರಸಿದ್ಧ ಹೇಳಿಕೆ ‘ಎಡಾ ಮೋನೆ’ ಯನ್ನೂ ಹೇಳಿದರು.

VISTARANEWS.COM


on

PR Sreejesh
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ (Paris Olympics 2024) ಕಂಚಿನ ಪದಕ ವಿಜೇತ ಭಾರತ ಹಾಕಿ ತಂಡದ ಗೋಲ್​ಕೀಪರ್​​ ಪಿ.ಆರ್.ಶ್ರೀಜೇಶ್ (PR Sreejesh) ಅವರು ಆಗಸ್ಟ್ 11 ರಂದು ಕೇರಳದ ಸಾಂಪ್ರದಾಯಿಕ ದಿರಸು ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಪೋಟೋ ತೆಗಿಸಿಕೊಂಡಿದ್ದಾರೆ. 1972ರ ಬಳಿಕ ಇದೇ ಮೊದಲ ಬಾರಿಗೆ ಸತತ ಎರಡನೇ ಬಾರಿಗೆ ಒಲಿಂಪಿಕ್ ಪದಕ ಗೆದ್ದ ಭಾರತೀಯ ಪುರುಷರ ಹಾಕಿ ತಂಡದ ಪಾಲಿಗೆ ಗೋಲ್​ಕೀಪರ್​​ ಶ್ರೀಜೇಶ್ ಸ್ಟಾರ್ ಎನಿಸಿದ್ದರು. ಆಸ್ಟ್ರೇಲಿಯಾ, ಗ್ರೇಟ್ ಬ್ರಿಟನ್ ಮತ್ತು ಸ್ಪೇನ್ ವಿರುದ್ಧದ ನಿರ್ಣಾಯಕ ಪಂದ್ಯಗಳಲ್ಲಿ 36 ವರ್ಷದ ಆಟಗಾರ ಎದುರಾಳಿಗಳ ಹಲವಾರು ಗೋಲ್​ ಪ್ರಯತ್ನಗಳನ್ನು ತಡೆದಿದ್ದರು. ಹೀಗಾಗಿ ಭಾರತಕ್ಕೆ ದೊಡ್ಡ ಯಶಸ್ಸು ಸಿಕ್ಕಿತ್ತು.

ಪಂದ್ಯಾವಳಿಯ ನಂತರ ಶ್ರೀಜೇಶ್ ಕ್ರೀಡೆಯಿಂದ ನಿವೃತ್ತರಾಗಿದ್ದಾರೆ. ಜೂನಿಯರ್ ಪುರುಷರ ಹಾಕಿ ತಂಡದ ಮುಖ್ಯ ತರಬೇತುದಾರರಾಗಿ ಜವಾಬ್ದಾರಿ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಪ್ಯಾರಿಸ್​​ನಲ್ಲಿ ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಅವರು ಭಾರತದ ಜಂಟಿ ಧ್ವಜಧಾರಿಯಾಗಿ ನಡೆಯಲಿದ್ದಾರೆ. ಆದಾಗ್ಯೂ, ಅದಕ್ಕೂ ಮೊದಲು, ಅವರು ಸಾಂಪ್ರದಾಯಿಕ ಮುಂಡು ಧರಿಸಿ ಐಫೆಲ್ ಟವರ್ ಮುಂದೆ ಪೋಸ್ ನೀಡಿದರು. ಈ ವೇಳೆ ಸೂಪರ್​ಹಿಟ್ ಮಲಯಾಳಂ ಚಲನಚಿತ್ರ ಆವೇಶಮ್ ನ ಪ್ರಸಿದ್ಧ ಹೇಳಿಕೆ ‘ಎಡಾ ಮೋನೆ’ ಯನ್ನೂ ಹೇಳಿದರು.

ನಿವೃತ್ತಿಯ ಕುರಿತು ಶ್ರೀಜೇಶ್ ಹೇಳಿದ್ದೇನು?

ನಿವೃತ್ತಿಯ ಬಗ್ಗೆ ಮಾತನಾಡಿದ ಶ್ರೀಜೇಶ್, ಆಟದ ಅಗ್ರಸ್ಥಾನಕ್ಕೆ ಹೋಗಲು ಬಯಸುತ್ತೇನೆ ಮತ್ತು ನಾನು ಆಟವನ್ನು ಏಕೆ ತೊರೆಯುತ್ತಿದ್ದಾರೆ ಎಂದು ಜನರನ್ನು ಕೇಳುವಂತೆ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಗೆಲುವಿನ ನಂತರ, ನಾನು ನಿವೃತ್ತರಾಗಬೇಕೆಂದು ಯಾರೂ ಬಯಸಲಿಲ್ಲ ಎಂದು ನನಗೆ ತಿಳಿದಿದೆ. ಆದರೆ ನಾನು ಮೊದಲೇ ಹೇಳಿದಂತೆ ನನ್ನ ತರಬೇತುದಾರ ಹೇಳಿದಂತೆ ಮಾಡಿದ್ದೇನೆ. ನಾನು ಉತ್ತಮ ಫಾರ್ಮ್​ನಲ್ಲಿ ಇರುವಾಗಲೇ ನಿವೃತ್ತಿ ಪಡೆದರೆ ಯಾಕೆ ತೆಗೆದುಕೊಂಡೆ ಎಂದು ಜನರು ಕೇಳುತ್ತಾರೆ. ಇದು ಪರಿಪೂರ್ಣ ಮಾರ್ಗ ಎಂದು ನಾನು ಭಾವಿಸುತ್ತೇನೆ. ಆದರೆ, ನನ್ನ ತಂಡವು ನನಗೆ ಅತ್ಯುತ್ತಮ ವಿದಾಯವನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ” ಎಂದು ಕಂಚಿನ ಪದಕ ಗೆದ್ದ ನಂತರ ಪಿಆರ್ ಶ್ರೀಜೇಶ್ ಹೇಳಿದ್ದಾರೆ.

ಇದನ್ನೂ ಓದಿ: Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

ತಂಡದಲ್ಲಿ ಯಾರಾದರೂ ತಮ್ಮ ಸ್ಥಾನ ತುಂಬುತ್ತಾರೆ ಎಂಬ ವಿಶ್ವಾಸವನ್ನು ಶ್ರೀಜೇಶ್ ಹೊಂದಿದ್ದಾರೆ. “ನನ್ನ ಜಾಗವನ್ನು ಖಂಡಿತವಾಗಿಯೂ ತುಂಬುತ್ತಾರೆ. ಎಲ್ಲಾ ಕ್ರೀಡೆಗಳಲ್ಲಿಯೂ ಹಾಗೆಯೇ, ಹಿಂದೆ ಸಚಿನ್ ತೆಂಡೂಲ್ಕರ್ ಇದ್ದರು ಮತ್ತು ಈಗ ವಿರಾಟ್ ಕೊಹ್ಲಿ ಇದ್ದಾರೆ, ಆದರೆ ನಾಳೆ ಯಾರಾದರೂ ಅವರ ಸ್ಥಾನ ತುಂಬುತ್ತಾರೆ. ಆದ್ದರಿಂದ, ಶ್ರೀಜೇಶ್ ನಿನ್ನೆ ಅಲ್ಲಿದ್ದರು, ಆದರೆ ನಾಳೆ ಅವರ ಸ್ಥಾನವನ್ನು ಯಾರಾದರೂ ತೆಗೆದುಕೊಳ್ಳುತ್ತಾರೆ” ಎಂದು ಶ್ರೀಜೇಶ್ ಹೇಳಿದ್ದಾರೆ.

ಸ್ವದೇಶಕ್ಕೆ ಮರಳಿದ ನಂತರ ಶ್ರೀಜೇಶ್ ಕೋಚ್ ಆಗಿ ತಮ್ಮ ಹೊಸ ಪಾತ್ರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

veg vs non veg : ಮಕ್ಕಳ ಬಾಕ್ಸ್​​ನಲ್ಲಿ ಮಾಂಸಾಹಾರ ಕಳುಹಿಸಬಾರದು; ವಿವಾದ ಸೃಷ್ಟಿಸಿದ ಶಾಲೆಯ ನೋಟಿಸ್​​

veg vs non veg : ಘಟನೆ ನಡೆದಿರುವುದು ನೋಯ್ಡಾದ ಖಾಸಗಿ ಶಾಲೆಯೊಂದರಲ್ಲಿ, ಮಕ್ಕಳ ಟಿಫಿನ್​ ಬಾಕ್ಸ್​ಗಳಲ್ಲಿ ಮಾಂಸಾಹಾರಿ ಆಹಾರವನ್ನು ಪ್ಯಾಕ್ ಮಾಡಬೇಡಿ ಎಂದು ವಾಟ್ಸಾಪ್ ಮೂಲಕ ಪೋಷಕರಿಗೆ ಸುತ್ತೋಲೆ ಕಳುಹಿಸಲಾಗಿದೆ. ನೋಯ್ಡಾದ ಸೆಕ್ಟರ್ 132 ರಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯ (ಡಿಪಿಎಸ್) ಪ್ರಾಂಶುಪಾಲರು ಈ ಸುತ್ತೋಲೆ ಹೊರಡಿಸಿದ್ದಾರೆ. ಇದು ಬಿಸಿ ಚರ್ಚೆ ಕಾರಣವಾಗಿದ್ದು, ವಿವಾದ ಭುಗಿಲೆದ್ದ ನಂತರ ಇದು ಕೇವಲ “ವಿನಂತಿ” ಎಂದು ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

VISTARANEWS.COM


on

veg vs non veg
Koo

ಬೆಂಗಳೂರು : ಮಾಂಸಾಹಾರ ಶ್ರೇಷ್ಠವೇ, ಸಸ್ಯಾಹಾರ ಉತ್ತಮವೇ (veg vs non veg) ಎಂಬ ಚರ್ಚೆ ಭಾರತೀಯರಲ್ಲಿ ಮಾಮೂಲು. ಇದಕ್ಕೆ ಕಾರಣ ಇಲ್ಲಿನ ವೈವಿಧ್ಯಮಯ ಆಹಾರ ಶೈಲಿ. ಅಪ್ಪಟ ಸಸ್ಯಾಹಾರಿಗಳು ಇದ್ದಷ್ಟೇ. ನಾನ್​ವೆಜ್​ ಇಲ್ಲದೇ ಊಟ ಸೇರುವುದೇ ಇಲ್ಲ ಎಂದು ಹೇಳುವ ಮಂದಿಯೂ ಇದ್ದಾರೆ. ಇಲ್ಲಿ ಯಾವುದೇ ಉತ್ತಮ ಎಂಬ ಚರ್ಚೆಗೆ ತುದಿ, ಮೊದಲಿಲ್ಲ. ಹೀಗಾಗಿ ಈ ಕುರಿತ ಸಣ್ಣ ಹೇಳಿಕೆಯೂ ವಿವಾದಕ್ಕೆ ಕಾರಣವಾಗುತ್ತವೆ. ಎಲ್ಲವೂ ವಾದಕ್ಕೆ ಸೀಮಿತವಾಗುವುದೇ ಹೊರತು ಅದಕ್ಕೊಂದು ತಾರ್ಕಿಕ ಅಂತ್ಯ ತರಲು ಸಾಧ್ಯವೇ ಇಲ್ಲ. ಅಂತೆಯೇ ಖಾಸಗಿ ಶಾಲೆಯೊಂದರ ಮುಖ್ಯಸ್ಥರು ಮಕ್ಕಳ ಬುತ್ತಿಯಲ್ಲಿ ಮಾಂಸಾಹಾರದ ಅಡುಗೆಯನ್ನು ಕಳುಹಿಸಬಾರದು ಎಂದು ಪೋಷಕರಿಗೆ ಕಳುಹಿಸಿದ ಸಂದೇಶವೊಂದು ವಿವಾದಕ್ಕೆ ಕಾರಣವಾಗಿದೆ.

ಘಟನೆ ನಡೆದಿರುವುದು ನೋಯ್ಡಾದ ಖಾಸಗಿ ಶಾಲೆಯೊಂದರಲ್ಲಿ, ಮಕ್ಕಳ ಟಿಫಿನ್​ ಬಾಕ್ಸ್​ಗಳಲ್ಲಿ ಮಾಂಸಾಹಾರಿ ಆಹಾರವನ್ನು ಪ್ಯಾಕ್ ಮಾಡಬೇಡಿ ಎಂದು ವಾಟ್ಸಾಪ್ ಮೂಲಕ ಪೋಷಕರಿಗೆ ಸುತ್ತೋಲೆ ಕಳುಹಿಸಲಾಗಿದೆ. ನೋಯ್ಡಾದ ಸೆಕ್ಟರ್ 132 ರಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯ (ಡಿಪಿಎಸ್) ಪ್ರಾಂಶುಪಾಲರು ಈ ಸುತ್ತೋಲೆ ಹೊರಡಿಸಿದ್ದಾರೆ. ಇದು ಬಿಸಿ ಚರ್ಚೆ ಕಾರಣವಾಗಿದ್ದು, ವಿವಾದ ಭುಗಿಲೆದ್ದ ನಂತರ ಇದು ಕೇವಲ “ವಿನಂತಿ” ಎಂದು ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಸುತ್ತೋಲೆಯು ಬಗ್ಗೆ ಶಾಲೆಯ ಆಡಳಿತ ಮಂಡಳಿ ಎರಡು ಕಾರಣಗಳನ್ನು ಉಲ್ಲೇಖಿಸಿದೆ. ಆರೋಗ್ಯ ಮತ್ತು ಸುರಕ್ಷತೆ ಪ್ರಾಥಮಿಕ ಕಾಳಜಿ ಎಂದು ಹೇಳಿದೆ. ಮಧ್ಯಾಹ್ನದ ಊಟಕ್ಕಾಗಿ ಬೆಳಗ್ಗೆ ತಯಾರಿಸಿದ ಮಾಂಸಾಹಾರವನ್ನು ಕೊಟ್ಟರೆ ಅದು ಹಾಳಾಗಬಹುದು. ಅದು ಆರೋಗ್ಯಕ್ಕೆ ಅಪಾಯವಾಗಬಹುದು ಎಂದು ಹೇಳಿದೆ. ಅದೇ ರಿತಿ ಎಲ್ಲರನ್ನೂ ಒಳಗೊಳ್ಳುವಿಕೆ ಮತ್ತು ಗೌರವ”ದ ಮಹತ್ವ ಎಂದು ಹೇಳಿದೆ. ಪ್ರತಿಯೊಬ್ಬರೂ ಆರಾಮದಾಯಕ ವಾತಾವರಣವನ್ನು ಒದಗಿಸುವತ್ತ ಗಮನ ಹರಿಸಲಾಗಿದೆ. ಇದರಿಂದಾಗಿ ಎಲ್ಲಾ ವಿದ್ಯಾರ್ಥಿಗಳು ತಮ್ಮ ಆಹಾರ ಆದ್ಯತೆಗಳನ್ನು ಲೆಕ್ಕಿಸದೆ ಒಟ್ಟಿಗೆ ಕುಳಿತು ತಮ್ಮ ಊಟ ತಿನ್ನಲು ಸಾಧ್ಯ ಎಂದು ಹೇಳಲಾಗಿದೆ.

ಇದನ್ನೂ ಓದಿ: Claudia Mancinelli : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಡ ಈ ಸುಂದರಿ ಜಿಮ್ನಾಸ್ಟಿಕ್​ ಕೋಚ್​​ ಈಗ ಇಂಟರ್ನೆಟ್​ ಸೆನ್ಷೇಷನ್​

ಈ ಸುತ್ತೋಲೆಯು ಪೋಷಕರಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ವರದಿಗಳ ಪ್ರಕಾರ, ಕೆಲವರು ಸಾಂಸ್ಕೃತಿಕ ಮತ್ತು ಆರೋಗ್ಯ ಪರಿಗಣನೆಗಳನ್ನು ಉಲ್ಲೇಖಿಸಿ ಇದರ ಪರವಾಗಿದ್ದಾರೆ, ಇತರರು ಇದು ತಮ್ಮ ಸ್ವಾತಂತ್ರ್ಯವನ್ನು ಉಲ್ಲಂಘಿಸಲಾಗಿದೆ ಎಂದು ವಾದಿಸಿದ್ದಾರೆ.

Continue Reading

ಕ್ರೀಡೆ

Claudia Mancinelli : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಡ ಈ ಸುಂದರಿ ಜಿಮ್ನಾಸ್ಟಿಕ್​ ಕೋಚ್​​ ಈಗ ಇಂಟರ್ನೆಟ್​ ಸೆನ್ಷೇಷನ್​

Claudia Mancinelli : ಇಟಲಿಯಾ ಫ್ಯಾಬ್ರಿಯಾನೊದಲ್ಲಿ ಹುಟ್ಟಿ ಬೆಳೆದ ಕ್ಲೌಡಿಯಾ ಮನ್ಸಿನೆಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಜಿಮ್ನಾಸ್ಟಿಕ್​ನಲ್ಲಿ ತೊಡಗಿದ್ದರು. ಕ್ರಿಸ್ಟಿನಾ ಘಿಯುರೋವಾ ಮತ್ತು ಮಿರ್ನಾ ಬಾಲ್ಡೋನಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು. ಬಳಿಕ ಅವರು ಸ್ಥಳೀಯ ಕ್ಲಬ್ ಅನ್ನು ಸೆರಿದ್ದರು. ಇವೆಲ್ಲದರ ನಡುವೆ ಆಶ್ಚರ್ಯಕರ ರೀತಿಯಲ್ಲಿ ಅವರು ನಟನಾ ವೃತ್ತಿಜೀವನವನ್ನು ಮುಂದುವರಿಸಲು ಕ್ರೀಡೆಯನ್ನು ತೊರೆದರು.

VISTARANEWS.COM


on

Claudia Mancinelli
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಸ್ಪರ್ಧೆಯೊಂದರ ರೆಫರಿಗಳ ಮುಂದೆ ನಿರ್ಭೀತಿಯಿಂದ ನಿಂತಿರುವ ಮಹಿಳಾ ಕೋಚ್​ ಒಬ್ಬರ ವಿಡಿಯೊ ವೈರಲ್ ಆಗಿತ್ತು. ಅವರೇ ಮಾಜಿ ನಟಿ ಮತ್ತು ಇಟೆಲಿಯ ರಿಥಮಿಕ್ ಜಿಮ್ನಾಸ್ಟಿಕ್ಸ್ ತಂಡದ ಕೋಚ್​ ಕ್ಲಾಡಿಯಾ ಮನ್ಸಿನೆಲ್ಲಿ (Claudia Mancinelli, ಅವರೀಗ ಸಾಮಾಜಿಕ ಮಾಧ್ಯಮದ ಸೆನ್ಸೇಷನ್ ಆಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಜಿಮ್ನಾಸ್ಟಿಕ್ಸ್ ಸ್ಪರ್ಧೆಯ ಸಮಯದಲ್ಲಿ ಅವರ ಆತ್ಮವಿಶ್ವಾಸದ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. ಈ ಮೂಲಕ ಅವರು ಇಂಟರ್ನೆಟ್​​ ಪ್ರಪಂಚದ “ರಾಣಿ” ಎಂಬ ಬಿರುದು ಪಡೆದುಕೊಂಡಿದ್ದಾರೆ. ಆ ವಿಡಿಯೋವನ್ನು 3.4 ಕೋಟಿಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ಆಲ್ರೌಂಡ್ ವಿಭಾಗದ ಫೈನಲ್​​ನಲ್ಲಿ ತೀರ್ಪುಗಾರರ ಆರಂಭಿಕ ಸ್ಕೋರ್ ಇಟೆಲಿಯ ಜಿಮ್ನಾಸ್ಟ್ ಸೋಫಿಯಾ ರಾಫೆಲಿ ಅವರ ಗೆಲುವಿನ ಅವಕಾಶಗಳನ್ನು ಕಸಿಯವ ಅವಕಾಶ ಇತ್ತು. ಆದರೆ ಕೋಚ್​​ ಕ್ಲಾಡಿಯಾ ಮನ್ಸಿನೆಲ್ಲಿ, ಸ್ಕೋರ್​​ ಬಗ್ಗೆ ತಕರಾರು ಎತ್ತಿದರು. ರೆಫರಿಗಳ ಬಳಿಗೆ ಹೋಗಿ ಸ್ಕೋರ್ ಮರುಪರಿಶೀಲಿಸುವಂತೆ ಒತ್ತಾಯಿಸಿದರು. ಈ ವೇಳೆ ಅವರು ನಿರ್ಭೀತಿಯಿಂದ ಅವರು ಮಾತನಾಡಿದ ಶೈಲಿ ಕೋಪದಿಂದ ತಿರುಗಿ ನಡೆದದುಕೊಂಡು ಹೋಗುತ್ತಿರುವ ವಿಡಿಯೊ ವೈರಲ್ ಆಗಿದೆ. ಆ ವಿಡಿಯೊ ಅದು ಕಾಡ್ಗಿಚ್ಚಿನಂತೆ ಹರಡಿತ್ತು ಕೊನೆಗೂ ವೈಯಕ್ತಿಕ ಆಲ್ರೌಂಡ್ ಸ್ಪರ್ಧೆಯಲ್ಲಿ ಇಟೆಲಿಯ ರಾಫೆಲಿ ಕಂಚಿನ ಪದಕ ಗೆದ್ದರು.

ಫಲಿತಾಂಶಕ್ಕಿಂತ ಕೋಚ್​ ಕ್ಲಾಡಿಯಾ ಅವರ ವ್ಯಕ್ತಿತ್ವ ಮತ್ತು ಆತ್ಮವಿಶ್ವಾಸ ಅವರನ್ನು ಅಂತರ್ಜಾಲದ ಸೆನ್ಷೇಷನ್ ಆಗಿ ಮಾಡಿತು. ಹಲವಾರು ಜನರು ಅವರ ಚಿತ್ರಗಳು ಮತ್ತು ವೀಡಿಯೊಗಳನ್ನು ಆನ್ ಲೈನ್ ನಲ್ಲಿ ಹಂಚಿಕೊಂಡಿದ್ದಾರೆ. ಕ್ಲಾಡಿಯಾ ಅವರ ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಶ್ಲಾಘಿಸಿದ್ದಾರೆ.

ಕ್ಲೌಡಿಯಾ ಯಾರು?

ಇಟಲಿಯಾ ಫ್ಯಾಬ್ರಿಯಾನೊದಲ್ಲಿ ಹುಟ್ಟಿ ಬೆಳೆದ ಕ್ಲಾಡಿಯಾ ಮನ್ಸಿನೆಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಜಿಮ್ನಾಸ್ಟಿಕ್​ನಲ್ಲಿ ತೊಡಗಿದ್ದರು. ಕ್ರಿಸ್ಟಿನಾ ಘಿಯುರೋವಾ ಮತ್ತು ಮಿರ್ನಾ ಬಾಲ್ಡೋನಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು. ಬಳಿಕ ಅವರು ಸ್ಥಳೀಯ ಕ್ಲಬ್ ಅನ್ನು ಸೆರಿದ್ದರು. ಇವೆಲ್ಲದರ ನಡುವೆ ಆಶ್ಚರ್ಯಕರ ರೀತಿಯಲ್ಲಿ ಅವರು ನಟನಾ ವೃತ್ತಿಜೀವನವನ್ನು ಮುಂದುವರಿಸಲು ಕ್ರೀಡೆಯನ್ನು ತೊರೆದರು.

ಬೆಳ್ಳಿ ಪರದೆಗೆ ಪಾದಾರ್ಪಣೆ ಮಾಡಿದ ಅವರು ‘ ಯೂನಿಕ್ ಬ್ರದರ್ಸ್​’, ‘ದಿ ಟೂರಿಸ್ಟ್’ ಮತ್ತು ‘ನೈನ್’ ನಂತಹ ಗಮನಾರ್ಹ ಚಿತ್ರಗಳಲ್ಲಿ ಪಾತ್ರ ವಹಿಸಿದ್ದರು. ಈ ನಡುವೆ ಪ್ಯಾರಿಸ್ ಒಲಿಂಪಿಕ್ಸ್​ಗೆ ಕೇವಲ ಹತ್ತು ತಿಂಗಳು ಬಾಕಿ ಇರುವಾಗ ಖ್ಯಾತ ತರಬೇತುದಾರ ಜೂಲಿಯೆಟಾ ಕ್ಯಾಂಟಲುಪ್ಪಿ ರಾಜೀನಾಮೆ ನೀಡಿದರು. ಹೀಗಾಗಿ ರಿಧಮಿಕ್​ ಜಿಮ್ನಾಸ್ಟಿಕ್ಸ್ ತಂಡವನ್ನು ಒಲಿಂಪಿಕ್ಸ್​​ನಲ್ಲಿ ಮುನ್ನಡೆಸಲು ಮನ್ಸಿನೆಲ್ಲಿ ಅವರನ್ನು ಫೆಡರೇಶನ್ ಕೇಳಿಕೊಂಡಿತು.

ಇದನ್ನೂ ಓದಿ: Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

ಒಲಿಂಪಿಕ್ಸ್​ಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ, ಮನ್ಸಿನೆಲ್ಲಿ ಕಠಿಣ ಸವಾಲನ್ನು ಎದುರಿಸಿದರು. ಸೋಫಿಯಾ ರಾಫೆಲಿ ಮತ್ತು ಮಿಲೆನಾ ಬಾಲ್ಡಸ್ಸಾರಿ ಅವರನ್ನು ವಿಶ್ವದರ್ಜೆಯ ಸ್ಪರ್ಧಿಗಳಾಗಿ ಪರಿವರ್ತಿಸಿದಿರು. ನಂಬಿಕೆ, ಗೌರವ ಮತ್ತು ಸಮರ್ಪಣೆಯ ಮೂಲಕ ಮನ್ಸಿನೆಲ್ಲಿ ಅವರಲ್ಲಿನ ಅತ್ಯುತ್ತಮ ಪ್ರದರ್ಶನ ಹೊರತಂದರು. ಅವರ ಮಾರ್ಗದರ್ಶನದಲ್ಲಿ, ರಾಫೆಲಿ ಅಂತಿಮವಾಗಿ ವೈಯಕ್ತಿಕ ಆಲ್ರೌಂಡ್ ಸ್ಪರ್ಧೆಯಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ! ವಿಡಿಯೋ ಇದೆ

Viral Video: ಅಂಗಡಿಯವನಿಗೆ ತಿಲಕವನ್ನು ಹಚ್ಚಿ, ಪ್ರಸಾದವನ್ನು ಕೊಡುವ ಮೊದಲು 1,100 ರೂಪಾಯಿಗಳನ್ನು ಕೊಡುವಂತೆ ಮನವೊಲಿಸಿದರು. ಒಮ್ಮೆ ಅಂಗಡಿಯವನು ಪ್ರಜ್ಞಾಹೀನನಾಗಿ ಬಿದ್ದಾಗ, ಖದೀಮರು ಪರಾರಿಯಾಗುವ ಮೊದಲು ಅಂಗಡಿಯಲ್ಲಿದ್ದ ಮೂರು ಗೋಣಿ ಸಾಸಿವೆ ಮತ್ತು ಹಣವನ್ನು ಕದ್ದೊಯ್ದರು.

VISTARANEWS.COM


on

Viral Video
Koo

ಲಖನೌ: ಉತ್ತರ ಪ್ರದೇಶ(Uttar Pradesh)ದ ಲಕ್ನೋದಲ್ಲಿ ಸಾಧುಗಳಂತೆ ನಟಿಸಿ ಜನರ ಬೆಲೆಬಾಳುವ ವಸ್ತುಗಳು ಮತ್ತು ಹಣವನ್ನು ದೋಚುತ್ತಿದ್ದ ನಾಲ್ವರು ಯುವಕರನ್ನು ಗ್ರಾಮಸ್ಥರು ಅಮಾನುಷವಾಗಿ ಥಳಿಸಿದ್ದಾರೆ. ನಾಲ್ವರನ್ನು ದೈಹಿಕವಾಗಿ ಚಪ್ಪಲಿಯಿಂದ ಹಲ್ಲೆ ನಡೆಸಲಾಗಿದ್ದು, ಈ ಘಟನೆಯ ವಿಡಿಯೋದಲ್ಲಿ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ.

ವರದಿಗಳ ಪ್ರಕಾರ, ಶುಕ್ರವಾರ ಬೆಳಗ್ಗೆ ಸಾಧುಗಳ ವೇಷ ಧರಿಸಿದ ಪುರುಷರು ಮಹುರಕಲಾ ಗ್ರಾಮದ ಅಂಗಡಿಯೊಂದಕ್ಕೆ ಭೇಟಿ ನೀಡಿದಾಗ ಗಲಾಟೆ ಶುರುವಾಗಿತ್ತು. ಅಂಗಡಿಯವನಿಗೆ ತಿಲಕವನ್ನು ಹಚ್ಚಿ, ಪ್ರಸಾದವನ್ನು ಕೊಡುವ ಮೊದಲು 1,100 ರೂಪಾಯಿಗಳನ್ನು ಕೊಡುವಂತೆ ಮನವೊಲಿಸಿದರು. ಒಮ್ಮೆ ಅಂಗಡಿಯವನು ಪ್ರಜ್ಞಾಹೀನನಾಗಿ ಬಿದ್ದಾಗ, ಖದೀಮರು ಪರಾರಿಯಾಗುವ ಮೊದಲು ಅಂಗಡಿಯಲ್ಲಿದ್ದ ಮೂರು ಗೋಣಿ ಸಾಸಿವೆ ಮತ್ತು ಹಣವನ್ನು ಕದ್ದೊಯ್ದರು.

ಮರುದಿನ ಬೆಳಿಗ್ಗೆ, ಪುರುಷರು ಗಂಗಾಖೇಡಕ್ಕೆ ಬಂದರು, ಅಲ್ಲಿ ಸ್ಥಳೀಯರು ಅವರನ್ನು ಗುರುತಿಸಿದರು. ಅಂಗಡಿಯವರು ಅವರನ್ನು ಗುರುತಿಸಿದ್ದು, ಗ್ರಾಮಸ್ಥರಿಂದ ಸಾರ್ವಜನಿಕವಾಗಿ ಥಳಿಸಿದ್ದಾರೆ. ಅಂಗಡಿಯವರು ತಮ್ಮ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ. ಆದರೆ ಅದನ್ನು ಕೇಳದ ಸ್ಥಳೀಯರು ಅವರನ್ನು ಚೆನ್ನಾಗಿ ಧಳಿಸಿದ್ದಾರೆ.

ನಾಲ್ವರ ಬಂಧನ

ಪೊಲೀಸರು ನಾಲ್ವರನ್ನು ಬಂಧಿಸಿ ಕಳವು ಮಾಡಿದ ವಸ್ತುಗಳನ್ನೂ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಮೀರತ್‌ನ ಸಂಸಾಪುರ ಗ್ರಾಮದ ನಿವಾಸಿಗಳಾದ ಆಕಾಶ್, ಅಕ್ಷಯ್, ರಾಕೇಶ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ. ರುದ್ರಾಕ್ಷಿ ಅಥವಾ ಪ್ರಸಾದ ನೀಡಿ ಜನರನ್ನು ವಂಚಿಸುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: Serial Killer: 9 ಮಹಿಳೆಯರ ಕೊಂದ ಸರಣಿ ಹಂತಕ ಸೆರೆ; ಆತ ಹೇಗೆ ಕೊಲೆ ಮಾಡುತ್ತಿದ್ದ? ವಿಡಿಯೊ ಇಲ್ಲಿದೆ

ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ಮಕ್ಕಳ ಕಳ್ಳರೆಂದು ಭಾವಿಸಿ ಜನಸಮೂಹವೊಂದು ಹಿಂದೂ ಸಾಧುಗಳನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿತ್ತು. ಬಳಿಕ ಈ ಘಟನೆಯಿಂದಾಗಿ ರಾಜಕೀಯ ಗದ್ದಲ ಭುಗಿಲೆದ್ದಿತ್ತು. ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ವಿವಸ್ತ್ರಗೊಳಿಸಿ ಥಳಿಸಿತ್ತು.

Continue Reading
Advertisement
PR Sreejesh
ಕ್ರೀಡೆ9 mins ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ31 mins ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ34 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ1 hour ago

Paris Olympics 2024 : ನಮ್ಮ ರಾಜಕಾರಣಿಗಳು ಕ್ರೀಡಾಕ್ಷೇತ್ರದಲ್ಲೂ ರಾಜಕೀಯ ಮಾಡ್ತಾರೆ; ಉಕ್ರೇನ್​ ಸಂಸದ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದಾರೆ!

Yakshagana Dance
ಬೆಂಗಳೂರು2 hours ago

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Road Accident
ಕರ್ನಾಟಕ2 hours ago

Road Accident: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Bomb threat
ಪ್ರಮುಖ ಸುದ್ದಿ2 hours ago

Bomb threat : ಏರ್​ಪೋರ್ಟ್​​ ಬ್ಯಾಗ್ ಚೆಕಿಂಗ್​ ವೇಳೆ ತಮಾಷೆಗೆ ‘ಬಾಂಬ್​ ಇದೆ’ ಅಂದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು!

theft Case
ಬೆಂಗಳೂರು2 hours ago

Theft Case : ಲಡ್ಡು ಬಂದು ಬಾಯಿಗೆ ಬಿತ್ತು! ಕೀ ಸಮೇತ ಸ್ಕೂಟರ್‌ ಬಿಟ್ಟು ಹೋದ ಮಹಿಳೆ, ಕ್ಷಣಾರ್ಧದಲ್ಲೇ ಎಗರಿಸಿದ ಚಾಲಾಕಿ

Tungabhadra Dam
ಪ್ರಮುಖ ಸುದ್ದಿ2 hours ago

Tungabhadra Dam: ಟಿಬಿ ಡ್ಯಾಂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ; ಶೀಘ್ರ ಕ್ರಸ್ಟ್ ಗೇಟ್ ದುರಸ್ತಿಗೆ ವಿಜಯೇಂದ್ರ ಆಗ್ರಹ

veg vs non veg
ಪ್ರಮುಖ ಸುದ್ದಿ3 hours ago

veg vs non veg : ಮಕ್ಕಳ ಬಾಕ್ಸ್​​ನಲ್ಲಿ ಮಾಂಸಾಹಾರ ಕಳುಹಿಸಬಾರದು; ವಿವಾದ ಸೃಷ್ಟಿಸಿದ ಶಾಲೆಯ ನೋಟಿಸ್​​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌